IPL 2023: ಕ್ಲಾಸೆನ್​ 'ಕ್ಲಾಸ್'​ ಬ್ಯಾಟಿಂಗ್​ಗೆ ಬೃಹತ್​ ಮೊತ್ತ ದಾಖಲಿಸಿದ ಸನ್​ರೈಸರ್ಸ್​ - Vistara News

ಕ್ರಿಕೆಟ್

IPL 2023: ಕ್ಲಾಸೆನ್​ ‘ಕ್ಲಾಸ್’​ ಬ್ಯಾಟಿಂಗ್​ಗೆ ಬೃಹತ್​ ಮೊತ್ತ ದಾಖಲಿಸಿದ ಸನ್​ರೈಸರ್ಸ್​

ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಮೊದಲು ಬ್ಯಾಟಿಂಗ್​ ನಡೆಸಿದ ಸನ್​ರೈಸರ್ಸ್​ ಹೈದರಾಬಾದ್ ತಂಡ ಬೃಹತ್​ ಮೊತ್ತ ದಾಖಲಿಸಿ ಸವಾಲೊಡ್ಡಿದೆ.

VISTARANEWS.COM


on

Heinrich Klaasen
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್​: ಅಂತಿಮ ಹಂತದಲ್ಲಿ ಕ್ಲಾಸೆನ್(74) ಮತ್ತು ಸಮದ್(30*) ಅವರು​ ಬಿರುಸಿನ ಬ್ಯಾಟಿಂಗ್​ ನಡೆಸಿದ ಪರಿಣಾಮ ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ ತಂಡ ಬೃಹತ್​ ಮೊತ್ತ ಪೇರಿಸಿದೆ. ಹೈದರಾಬಾದ್​ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ನಡೆಸಿದ ಸನ್​ರೈಸರ್ಸ್​ ಹೈದರಾಬಾದ್​ ನಾಟಕೀಯ ಕುಸಿತದ ಹೊರತಾಗಿಯೂ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 182 ರನ್​ ಗಳಿಸಿದೆ. ಲಕ್ನೋ ಸೂಪರ್​ ಜೈಂಟ್ಸ್​ ಗೆಲುವಿಗೆ 183 ರನ್​ ಬಾರಿಸಬೇಕಿದೆ.

ಬ್ಯಾಟಿಂಗ್​ ಆಯ್ದುಕೊಂಡ ಹೈದರಾಬಾದ್​ ಆರಂಭದಲ್ಲೇ ಅಭಿಷೇಕ್​ ಶರ್ಮ(7) ರನ್​ಗೆ ವಿಕೆಟ್​ ಒಪ್ಪಿಸಿ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಈ ವಿಕೆಟ್​ ಯದುವೀರ್ ಸಿಂಗ್ ಚರಕ್ ಪಾಲಾಯಿತು. ಆ ಬಳಿಕ ಆಡಲಿಳಿದ ರಾಹುಲ್​ ತಿಪಾರಿ ಅವರು ಆವೇಶ್​ ಖಾನ್​ ಅವರ ಓವರ್​ನಲ್ಲಿ ಸತತ ಬೌಂಡರಿ ಬಾರಿಸಿದರು. ಆದರೆ ಅವರಿಗೆ ಈ ವೇಗವನ್ನು ಹೆಚ್ಚು ಹೊತ್ತು ಕಾಯ್ದುಕೊಳ್ಳುವಲ್ಲಿ ಸಾಧ್ಯವಾಗಲಿಲ್ಲ. ಅವರು 20 ರನ್​ ಗಳಿಸಿ ವಿಕೆಟ್ ಕೈಚೆಲ್ಲಿದರು. ಅವೇಶ್​ ಖಾನ್​ ಅವರ ಈ ಓವರ್​ನಲ್ಲಿ 17 ರನ್​ ಸೋರಿಕೆಯಾಯಿತು.

ಉತ್ತಮವಾಗಿ ಆಡುತ್ತಿದ್ದ ಅನ್ಮೋಲ್ಪ್ರೀತ್ ಸಿಂಗ್(30) ಕೂಡ ತ್ರಿಪಾಠಿ ವಿಕೆಟ್​ ಪತನದ ಬೆನ್ನಲ್ಲೇ ಪೆವಿಲಿಯನ್​ ಸೇರಿದರು. ಈ ವಿಕೆಟ್​ ಕಳೆದುಕೊಂಡ ಬಳಿಕ ಹೈದರಾಬಾದ್​ ರನ್​ ವೇಗ ಕುಸಿತ ಕಂಡಿತು. ತಂಡದ ಮೊತ್ತ 115 ಆಗುವ ವೇಳೆ ಪ್ರಮುಖ 5 ವಿಕೆಟ್​ಗಳು ಉರುಳಿ ಹೋಗಿತ್ತು. ಇನ್ನೇನು 130ರ ಒಳಗೆ ಗಂಟುಮೂಟೆ ಕಟ್ಟುತ್ತದೆ ಎನ್ನುವಷ್ಟರಲ್ಲಿ ಸಿಡಿದು ನಿಂತ ಹೆನ್ರಿಚ್​ ಕ್ಲಾಸೆನ್​ ಅವರು ಲಕ್ನೋ ಬೌಲರ್​ಗಳನ್ನು ಕಾಡಲಾರಂಭಿಸಿದರು.

ಉತ್ತಮ ಹಿಡಿತ ಸಾಧಿಸಿದ್ದ ಲಕ್ನೋ ಬೌಲರ್​ಗಳಿಗೆ ಕ್ಲಾಸೆನ್​ ಸರಿಯಾಗಿಯೇ ಕ್ಲಾಸ್​ ತೆಗೆದುಕೊಂಡರು. ಇವರಿಗೆ 7ನೇ ಕ್ರಮಾಂಕದಲ್ಲಿ ಆಡಲಿಳಿದ ಅಬ್ದುಲ್​ ಸಮದ್​ ಉತ್ತಮ ಸಾಥ್​ ನೀಡಿದರು. ಅವರು ಕೂಡ ಬಿರುಸಿನ ಬ್ಯಾಟಿಂಗ್​ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಉಭಯ ಆಟಗಾರರ ಈ ಜವಾಬ್ದಾರಿಯುತ ಬ್ಯಾಟಿಂಗ್​ ನೆರವಿನಿಂದ ತಂಡ ಬೃಹತ್​ ಮೊತ್ತ ಪೇರಿಸಿತು.

ಇದನ್ನೂ ಓದಿ IPL 2023: ಸ್ಟೇಡಿಯಂನಲ್ಲಿ ಮೊಬೈಲ್​ ಮೂಲಕ ಪಂದ್ಯ ವೀಕ್ಷಿಸಿದ ಭೂಪ; ವಿಡಿಯೊ ವೈರಲ್​

47 ರನ್​ಗಳಿಸಿದ್ದ ವೇಳೆ ಕ್ಲಾಸೆನ್​ ಅವರು ವಿಕೆಟ್​ ಕೈ ಚೆಲ್ಲಿದರು. 29 ಎಸೆತ ಎದುರಿಸಿದ ಅವರು ತಲಾ ಮೂರು ಸಿಕ್ಸರ್​ ಮತ್ತು ಬೌಂಡರಿ ಸಿಡಿಸಿ 47 ರನ್​ ಗಳಿಸಿದರು. ಕ್ಲಾಸೆನ್​ ಮತ್ತು ಸಮದ್​ ಅವರು 7ನೇ ವಿಕೆಟ್​ಗೆ 58 ರನ್​ ಜತೆಯಾಟ ನಡೆಸಿದರು. ಉತ್ತಮವಾಗಿ ಬ್ಯಾಟಿಂಗ್​ ನಡೆಸುತ್ತಿದ್ದ ಕ್ಲಾಸೆನ್​ಗೆ ಲಕ್ನೋ ಅಭಿಮಾನಿಗಳಿಂದ ಕಿರಿಕಿರಿಯಾದ ಕಾರಣ ಕೊಂಚ ಕಾಲ ಆಟ ಸ್ಥಗಿತಗೊಂಡಿತು. ಲಕ್ನೋ ಪರ ನಾಯಕ ಕೃಣಾಲ್​ ಪಾಂಡ್ಯ 2 ವಿಕೆಟ್​ ಕಿತ್ತು ಮಿಂಚಿದರು. ಸಮದ್​ ಅವರು 37 ರನ್​ ಸಿಡಿಸಿ ಅಜೇಯರಾಗಿ ಉಳಿದರು. ಅವರು ನಾಲ್ಕು ಸಿಕ್ಸರ್​ ಬಾರಿಸಿದರು. ಅವೇಶ್​ ಖಾನ್​ ಅವರು 2 ಓವರನಲ್ಲಿ 30 ರನ್​ ಬಿಟ್ಟು ದುಬಾರಿಯಾಗಿ ಪರಿಣಮಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kavya Maran : ಎಸ್​ಆರ್​ಎಚ್​​​ ತಂಡದ ಫೀಲ್ಡಿಂಗ್ ನೋಡಿ ಮಗುವಿನಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

Kavya Maran : 19ನೇ ಓವರ್​ನ ನಾಲ್ಕನೇ ಎಸೆತದಲ್ಲಿ ಇದು ನಡೆದಿದೆ. ಗಾಯಕ್ವಾಡ್ ಕಟ್ ಶಾಟ್ ಆಡಿದರು, ಅಲ್ಲಿ ಪ್ಯಾಟ್ ಕಮಿನ್ಸ್ ಚೆಂಡನ್ನು ಫೀಲ್ಡ್ ಮಾಡಿ ಬೌಲರ್​ ಇರುವ ತುದಿಗೆ ಎಸೆದರು. ಆ ಥ್ರೋ ಸರಿಯಾಗಿ ವಿಕೆಟ್​ಗೆ ಬಡಿಯಲಿಲ್ಲ ಮತ್ತು ಗಾಯಕ್ವಾಡ್ ತನ್ನ ಸಿಂಗಲ್ ಅನ್ನು ಪೂರ್ಣಗೊಳಿಸಿದರು ಹಾಗೂ ಅವರ ವಿಕೆಟ್​ ಉಳಿಯಿತು.

VISTARANEWS.COM


on

Kavya Maran
Koo

ಹೈದರಾಬಾದ್​​: ಸನ್ರೈಸರ್ಸ್ ಹೈದರಾಬಾದ್ ತಂಡದ ಮಾಲೀಕರಾದ ಕಾವ್ಯಾ ಮಾರನ್ (Kavya Maran) ಅವರು ಐಪಿಎಲ್​ 2024 (IPL 2024) ಪಂದ್ಯದ ವೇಳೆ ತಮ್ಮ ತಂಡದ ಆಟಗಾರರು ತಪ್ಪು ಮಾಡಿದಾಗ ಮಾಡುವ ವಿಭಿನ್ನ ಹಾವಭಾವಗಳು ಹೆಚ್ಚು ವೈರಲ್​ ಆಗುತ್ತವೆ. ಅವುಗಳಿಂದ ಭಿನ್ನವಾದ ಮೀಮ್ಸ್​ಗಳನ್ನು ರಚಿಸಿ ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಡುತ್ತಾರೆ. ಅಂತೆಯೇ 31 ವರ್ಷದ ಉದ್ಯಮಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ 2024 ರ 46 ನೇ ಪಂದ್ಯದಲ್ಲಿ ಮಗು ಅಳುವಂತೆ ಮುಖ ಮಾಡಿ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ. ಋತುರಾಜ್ ಗಾಯಕ್ವಾಡ್ ಅವರ ರನ್ ಔಟ್ ಚಾನ್ಸ್​ ಎಸ್ಆರ್​ಎಚ್​​​ ಕಳೆದುಕೊಂಡಾಗ ಕಾವ್ಯಾ ಮತ್ತೊಮ್ಮೆ ಗಮನ ಸೆಳೆದರು.

19ನೇ ಓವರ್​ನ ನಾಲ್ಕನೇ ಎಸೆತದಲ್ಲಿ ಇದು ನಡೆದಿದೆ. ಗಾಯಕ್ವಾಡ್ ಕಟ್ ಶಾಟ್ ಆಡಿದರು, ಅಲ್ಲಿ ಪ್ಯಾಟ್ ಕಮಿನ್ಸ್ ಚೆಂಡನ್ನು ಫೀಲ್ಡ್ ಮಾಡಿ ಬೌಲರ್​ ಇರುವ ತುದಿಗೆ ಎಸೆದರು. ಆ ಥ್ರೋ ಸರಿಯಾಗಿ ವಿಕೆಟ್​ಗೆ ಬಡಿಯಲಿಲ್ಲ ಮತ್ತು ಗಾಯಕ್ವಾಡ್ ತನ್ನ ಸಿಂಗಲ್ ಅನ್ನು ಪೂರ್ಣಗೊಳಿಸಿದರು ಹಾಗೂ ಅವರ ವಿಕೆಟ್​ ಉಳಿಯಿತು.

ನಂತರ ಚೆಂಡು ಲೆಗ್ ಸೈಡ್ ಕಡೆಗೆ ಹೋಯಿತು ಮತ್ತು ಸ್ಟ್ಯಾಂಡ್ ನಿಂದ ಪಂದ್ಯ ವೀಕ್ಷಿಸುತ್ತಿದ್ದ ಕಾವ್ಯಾ ಮಾರನ್ ಈ ವೇಳೆ ಅಳುವಂತೆ ಮುಖ ಮಾಡಿದರು. ಈ ರನ್​ ಔಟ್​ ಮಿಸ್​ನಿಂದಾಗಿ ಚೆನ್ನೈ ಇನ್ನೊಂದು ರನ್​ ಹೆಚ್ಚುವರಿಯಾಗಿ ಓಡಿತು.

ಗಾಯಕ್ವಾಡ್ ಅಂತಿಮವಾಗಿ ಅಂತಿಮ ಓವರ್​​ನಲ್ಲಿ ಔಟಾಗಿ ಕೇವಲ ಎರಡು ರನ್​ಗಳ ಕೊರತೆಯಿಂದ ಶತಕ ಕಳೆದುಕೊಂಡರು. ಅವರ ರನ್​ಗಳಿಂದ ಸಿಎಸ್ಕೆ 212 ರನ್ಗಳ ದೊಡ್ಡ ಸ್ಕೋರ್ ಬಾರಿಸಿತು. ಗಾಯಕ್ವಾಡ್ ಅವರೊಂದಿಗೆ ಡ್ಯಾರಿಲ್ ಮಿಚೆಲ್ ಮತ್ತು ಶಿವಂ ದುಬೆ ಕೂಡ ಕ್ರಮವಾಗಿ 52 ಮತ್ತು 39 ರನ್ ಗಳಿಸಿದರು. ಆರ್​ಸಿಬಿ ವಿರುದ್ಧದ ಈ ಹಿಂದಿನ ಪಂದ್ಯದಲ್ಲಿ ಸೋತ ಎಸ್​ಎಚ್​​ಆರ್​ ಮತ್ತೊಂದು ಪರಾಜಯಕ್ಕೆ ಒಳಗಾಯಿತು.

Continue Reading

ಪ್ರಮುಖ ಸುದ್ದಿ

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

IPL 2024: ವಿರಾಟ್ ಕೊಹ್ಲಿ ಪ್ರಸ್ತುತ ‘ಆರೆಂಜ್ ಕ್ಯಾಪ್’ ಪಡೆದಿದ್ದು, ಎರಡನೇ ಸ್ಥಾನದಲ್ಲಿರುವ ಸಾಯಿ ಸುದರ್ಶನ್ ಅವರಿಗಿಂತ 82 ರನ್​ ಮುಂದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ರನ್ ಚೇಸ್ ಮಾಸ್ಟರ್ ಕ್ಲಾಸ್ ಮೂಲಕ ಕೊಹ್ಲಿ ಈ ಐಪಿಎಲ್ 2024 ಋತುವಿನಲ್ಲಿ 500 ರನ್ ಪೂರೈಸಿದ್ದಾರೆ. ಪ್ರಸ್ತುತ, ಅವರ ಪ್ರಸ್ತುತ ಐಪಿಎಲ್ 2024 ರ ಸಂಖ್ಯೆ 10 ಇನಿಂಗ್ಸ್​​ಗಳಲ್ಲಿ 71.42 ರ ಅದ್ಭುತ ಸರಾಸರಿಯಲ್ಲಿ ಈ ರನ್ ಮಾಡಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್ 2024 ರ (IPL 2024) 45ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ವಿರಾಟ್ ಕೊಹ್ಲಿ 70* ರನ್ ಗಳಿಸಿದ್ದಾರೆ. ಆರ್​ಸಿಬಿಯ ಲೆಜೆಂಡರಿ ಓಪನರ್ ತಮ್ಮ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್​​ನಲ್ಲಿ ಆರು ಬೌಂಡರಿಗಳು ಮತ್ತು ಮೂರು ಸಿಕ್ಸರ್​ ಬಾರಿಸಿದ್ದಾರೆ. ಐಪಿಎಲ್ 2024 ರ ತಮ್ಮ ಒಟ್ಟು ರನ್​ಗಳನ್ನು 500 ರ ಗಡಿ ದಾಟಿಸಿದ್ದಾರೆ. ಈ ಮೂಲಕ ಅವರು ಐಪಿಎಲ್​ನಲ್ಲಿ ಬೃಹತ್ ಬ್ಯಾಟಿಂಗ್ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ಇದೇ ವೇಳೆ ಅವರು ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಬ್ಯಾಟರ್​ ಡೇವಿಡ್​ ವಾರ್ನರ್ ಅವರ ಸಾಧನೆಯನ್ನು ಸರಿಗಟ್ಟಿದ್ದಾರೆ.

ಏನಿದು ದಾಖಲೆ?

ವಿರಾಟ್ ಕೊಹ್ಲಿ ಪ್ರಸ್ತುತ ‘ಆರೆಂಜ್ ಕ್ಯಾಪ್’ ಪಡೆದಿದ್ದು, ಎರಡನೇ ಸ್ಥಾನದಲ್ಲಿರುವ ಸಾಯಿ ಸುದರ್ಶನ್ ಅವರಿಗಿಂತ 82 ರನ್​ ಮುಂದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ರನ್ ಚೇಸ್ ಮಾಸ್ಟರ್ ಕ್ಲಾಸ್ ಮೂಲಕ ಕೊಹ್ಲಿ ಈ ಐಪಿಎಲ್ 2024 ಋತುವಿನಲ್ಲಿ 500 ರನ್ ಪೂರೈಸಿದ್ದಾರೆ. ಪ್ರಸ್ತುತ, ಅವರ ಪ್ರಸ್ತುತ ಐಪಿಎಲ್ 2024 ರ ಸಂಖ್ಯೆ 10 ಇನಿಂಗ್ಸ್​​ಗಳಲ್ಲಿ 71.42 ರ ಅದ್ಭುತ ಸರಾಸರಿಯಲ್ಲಿ ಈ ರನ್ ಮಾಡಿದ್ದಾರೆ.

ವಿಶೇಷವೆಂದರೆ, ಕೊಹ್ಲಿ ತನ್ನ ವೃತ್ತಿಜೀವನದಲ್ಲಿ ಒಂದೇ ಐಪಿಎಲ್ ಋತುವಿನಲ್ಲಿ ಏಳು ಬಾರಿ ಕನಿಷ್ಠ 500 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್​​ನ ಸಕ್ರಿಯ ಆರಂಭಿಕ ಬ್ಯಾಟರ್​ ಡೇವಿಡ್ ವಾರ್ನರ್ ಅವರೊಂದಿಗೆ ಅವರು ಸಮಬಲ ಸಾಧಿಸಿದ್ದಾರೆ. ಅವರು ತಮ್ಮ ಐಪಿಎಲ್ ಪ್ರಯಾಣದಲ್ಲಿ ಏಳು ಬಾರಿ ಈ ಸಾಧನೆ ಮಾಡಿದ್ದಾರೆ.

ಕಳೆದ ವರ್ಷ 53ರ ಸರಾಸರಿಯಲ್ಲಿ 639 ರನ್ ಗಳಿಸಿದ್ದ ಕೊಹ್ಲಿ ಸತತ ಎರಡನೇ ಬಾರಿಗೆ ಈ ಋತುವಿನಲ್ಲಿ 500 ರನ್ ಪೂರೈಸಿದ್ದರು. ಅವರ ಇತ್ತೀಚಿನ ಬ್ಯಾಟಿಂಗ್ ಸಾಧನೆಯ ಜೊತೆಗೆ, ಆರ್​ಸಿಬಿ ತಂಡವು ಹಲವಾರು ಬೃಹತ್ ಐಪಿಎಲ್ ಬ್ಯಾಟಿಂಗ್ ಮೈಲಿಗಲ್ಲುಗಳನ್ನು ಹೊಂದಿದೆ. ಇದರಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ (2016 ರಲ್ಲಿ 973 ರನ್) ಮತ್ತು ಪಂದ್ಯಾವಳಿಯ ಇತಿಹಾಸದಲ್ಲಿ ಒಟ್ಟಾರೆಯಾಗಿ ಅತಿ ದೊಡ್ಡ ಸ್ಕೋರ್ ಆಗಿದೆ.

ವಾರ್ನರ್ 2014 ರಿಂದ 2020 ರವರೆಗೆ ಸತತ ಆರು ಐಪಿಎಲ್ ಪಂದ್ಯಗಳಲ್ಲಿ ಒಂದು ಋತುವಿನಲ್ಲಿ 500 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಕಳೆದ ವರ್ಷ ಅವರು ಕ್ಯಾಪಿಟಲ್ಸ್ ಪರ ಸುಮಾರು 37 ಸರಾಸರಿಯಲ್ಲಿ 516 ರನ್ ಗಳಿಸಿದ್ದರು.

Continue Reading

ಕ್ರೀಡೆ

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

Kane Williamson: ನ್ಯೂಜಿಲ್ಯಾಂಡ್​​ನ ಆಯ್ಕೆದಾರ ಸ್ಯಾಮ್ ವೆಲ್ಸ್ ಬಹಿರಂಗಪಡಿಸಿದ ಅಧಿಕೃತ ತಂಡದ ಪ್ರಕಟಣೆಯಲ್ಲಿ, ಕೇನ್ ವಿಲಿಯಮ್ಸನ್ ನಾಯಕನಾಗಿ ತಮ್ಮ ನಾಲ್ಕನೇ ಟಿ 20 ವಿಶ್ವಕಪ್​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಅವರ ಒಟ್ಟು ಆರು ಬಾರಿ ಆಡಿದ್ದಾರೆ. ಅವರ ನಾಯಕತ್ವದ ಗುಣಗಳು ಮತ್ತು ಅನುಭವವು ನ್ಯೂಜಿಲ್ಯಾಂಡ್​ಗೆ ಅಮೂಲ್ಯ ಆಸ್ತಿ ಎಂದು ಹೇಳಿದ್ದಾರೆ.

VISTARANEWS.COM


on

Kane Williamson
Koo

ನವದೆಹಲಿ: ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ (Kane Williamson) ಜೂನ್​ನಲ್ಲಿ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ 20 ವಿಶ್ವಕಪ್​​ನಲ್ಲಿ ಅನುಭವ ಹೊಂದಿರುವ ನ್ಯೂಜಿಲ್ಯಾಂಡ್​ ತಂಡವನ್ನು ನಾಲ್ಕನೇ ಟಿ20 ವಿಶ್ವ ಕಪ್​ನಲ್ಲಿ ಮುನ್ನಡೆಸಲಿದ್ದಾರೆ.

ನ್ಯೂಜಿಲ್ಯಾಂಡ್​​ನ ಆಯ್ಕೆದಾರ ಸ್ಯಾಮ್ ವೆಲ್ಸ್ ಬಹಿರಂಗಪಡಿಸಿದ ಅಧಿಕೃತ ತಂಡದ ಪ್ರಕಟಣೆಯಲ್ಲಿ, ಕೇನ್ ವಿಲಿಯಮ್ಸನ್ ನಾಯಕನಾಗಿ ತಮ್ಮ ನಾಲ್ಕನೇ ಟಿ 20 ವಿಶ್ವಕಪ್​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಅವರ ಒಟ್ಟು ಆರು ಬಾರಿ ಆಡಿದ್ದಾರೆ. ಅವರ ನಾಯಕತ್ವದ ಗುಣಗಳು ಮತ್ತು ಅನುಭವವು ನ್ಯೂಜಿಲ್ಯಾಂಡ್​ಗೆ ಅಮೂಲ್ಯ ಆಸ್ತಿ ಎಂದು ಹೇಳಿದ್ದಾರೆ.

ಟಿ 20 ವಿಶ್ವಕಪ್ ತಂಡದ ಅನುಭವಿಗಳ ಸಾಲಿನಲ್ಲಿ ವಿಲಿಯಮ್ಸನ್ ಒಬ್ಬರೇ ಅಲ್ಲ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಿಮ್ ಸೌಥಿ ಆಡಲಿದ್ದಾರೆ ಅವರು ಜಾಗತಿಕ ಟೂರ್ನಿಗೆ ಏಳನೇ ಬಾರಿಗೆ ಆಯ್ಕೆಯಾಗಿದ್ದಾರೆ. ಟ್ರೆಂಟ್ ಬೌಲ್ಟ್ ಐದು ಟಿ20 ವಿಶ್ವಕಪ್ ಪಂದ್ಯಗಳನ್ನು ಆಡಿದ್ದಾರೆ. ಅನುಭವಿ ಎಡಗೈ ಬೌಲರ್ ಸೇರಿದಂಥೆ ಮೂವರು ನ್ಯೂಜಿಲೆಂಡ್ ತಂಡದ ಪ್ರಬಲ ಶಕ್ತಿಯಾಗಿದ್ದಾರೆ.

ಟಿ 20 ವಿಶ್ವ ಕಪ್​ನಲ್ಲಿ ಹೊಂದಾಣಿಕೆ ಕೀಲಿ

ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿನ ವೈವಿಧ್ಯಮಯ ಆಟದ ಪರಿಸ್ಥಿತಿಗಳನ್ನು ಗುರುತಿಸಿ, ಆಯ್ಕೆದಾರರು ಹೊಂದಾಣಿಕೆಗೆ ಆದ್ಯತೆ ನೀಡಿದ್ದಾರೆ. ಆಯ್ಕೆಯಾದ ಹದಿನೈದು ಆಟಗಾರರಲ್ಲಿ ಹದಿಮೂರು ಮಂದಿ 2022 ರಲ್ಲಿ ತಂಡದ ಇತ್ತೀಚಿನ ವೆಸ್ಟ್ ಇಂಡೀಸ್ ಪ್ರವಾಸದ ಭಾಗವಾಗಿದ್ದರು, ಇದು ಅವರಿಗೆ ನೆರವಾಗಲಿದೆ.

ಇದನ್ನೂ ಓದಿ:

ಕೆರಿಬಿಯನ್ ಪ್ರೀಮಿಯರ್ ಲೀಗ್ ಟಿ 20 ಯಲ್ಲಿ ಆರು ಆಟಗಾರರು ಸ್ಪರ್ಧಿಸಿದ್ದಾರೆ. ಇದು ಕೆರಿಬಿಯನ್ ಪಿಚ್​ಗಳ ಬಗ್ಗೆ ಅವರ ಜ್ಞಾನ ಮತ್ತಷ್ಟು ಹೆಚ್ಚಿಸಿದೆ.

ಅನುಭವವು ಪ್ರಮುಖ ಅಂಶವಾಗಿದ್ದರೂ, ತಂಡವು ಹೊಸ ಮುಖಗಳನ್ನು ಸ್ವಾಗತಿಸಲಿದೆ. ಭರವಸೆಯ ಬೌಲರ್ ಮ್ಯಾಟ್ ಹೆನ್ರಿ ಮತ್ತು ಬ್ಯಾಟಿಂಗ್ ಆಲ್ರೌಂಡರ್ ರಚಿನ್ ರವೀಂದ್ರ ಮಾತ್ರ ಟಿ20 ವಿಶ್ವಕಪ್ ತಂಡದಲ್ಲಿದ್ದಾರೆ. ಅವರ ಸೇರ್ಪಡೆಯು ಯುವ ಪ್ರತಿಭೆಗಳನ್ನು ಪೋಷಿಸುವ ಬ್ಲ್ಯಾಕ್ ಕ್ಯಾಪ್ಸ್ ನ ಬದ್ಧತೆಯಾಗಿದೆ.

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading
Advertisement
Kavya Maran
ಪ್ರಮುಖ ಸುದ್ದಿ6 mins ago

Kavya Maran : ಎಸ್​ಆರ್​ಎಚ್​​​ ತಂಡದ ಫೀಲ್ಡಿಂಗ್ ನೋಡಿ ಮಗುವಿನಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

ವೈರಲ್ ನ್ಯೂಸ್8 mins ago

Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

viral video tn rao
ಪ್ರಮುಖ ಸುದ್ದಿ12 mins ago

Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

Ramana Avatara trailer out
ಸಿನಿಮಾ13 mins ago

Ramana Avatara Trailer: ರಿಷಿ ಅಭಿನಯದ ʻರಾಮನ ಅವತಾರʼ ಟ್ರೈಲರ್‌ ರಿಲೀಸ್

PM Narendra modi in Bagalakote for Election Campaign and here is Live telecast
Lok Sabha Election 202414 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Amith Shah
ಪ್ರಮುಖ ಸುದ್ದಿ29 mins ago

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Mahanati Show complaint against Gagana Contestant and Ramesh
ಕಿರುತೆರೆ39 mins ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Physical Abuse
ಪ್ರಮುಖ ಸುದ್ದಿ54 mins ago

Physical Abuse : ಮದುವೆ ಪ್ರಸ್ತಾಪ ತಿರಸ್ಕರಿಸಿದ ಬಾಲಕಿ ಮೇಲೆ ಅತ್ಯಾಚಾರ, ಮುಖಕ್ಕೆ ಕಬ್ಬಿಣದಿಂದ ಬರೆ

ದೇಶ1 hour ago

Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

srinivasa prasad sutturu sri
ಕರ್ನಾಟಕ2 hours ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote for Election Campaign and here is Live telecast
Lok Sabha Election 202414 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202419 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202422 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202423 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202424 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

ಟ್ರೆಂಡಿಂಗ್‌