IPL 2023: ತಂದೆಯ ಕ್ರಿಕೆಟ್​ ಪ್ರದರ್ಶನವನ್ನು ಟಿವಿಯಲ್ಲಿ ಕಂಡು ಖುಷಿಪಟ್ಟ ಅಂಬೆಗಾಲಿನ ಮಗು; ವಿಡಿಯೊ ವೈರಲ್​ - Vistara News

ಕ್ರಿಕೆಟ್

IPL 2023: ತಂದೆಯ ಕ್ರಿಕೆಟ್​ ಪ್ರದರ್ಶನವನ್ನು ಟಿವಿಯಲ್ಲಿ ಕಂಡು ಖುಷಿಪಟ್ಟ ಅಂಬೆಗಾಲಿನ ಮಗು; ವಿಡಿಯೊ ವೈರಲ್​

ಚೆನ್ನೈಯ ಚೆಪಾಕ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್​ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಧೋನಿಗೆ ಯಾರ್ಕರ್​ ಎಸೆದು ಸಂದೀಪ್​ ಶರ್ಮ ರಾಜಸ್ಥಾನ್​ ರಾಯಲ್ಸ್​ಗೆ ವೀರೋಚಿತ 3 ರನ್​ ಗೆಲುವು ತಂದುಕೊಟ್ಟರು.

VISTARANEWS.COM


on

IPL 2023: Toddler excited to see dad's cricket performance on TV; The video is viral
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೊಹಾಲಿ: ರಾಜಸ್ಥಾನ್​ ರಾಯಲ್ಸ್​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಬುಧವಾರ ನಡೆದ ಪಂದ್ಯ ಕೊನೆಯ ಓವರ್​ನ ಕೊನೆಯ ಎಸೆತದವರೆಗೂ ಕ್ರಿಕೆಟ್‌ ಅಭಿಮಾನಿಗಳು ತುದಿಗಾಲಲ್ಲಿ ನಿಂತು ನೋಡುವಂತೆ ಮಾಡಿತ್ತು. ಒಂದೆಡೆ ಸಂದೀಪ್‌ ಶರ್ಮಾ ಎಸೆದ ಈ ಓವರ್​ನ ಅಂತಿಮ ಎಸೆತದಲ್ಲಿ ಧೋನಿ ಸಿಕ್ಸರ್​ ಬಾರಿಸಲಿ ಎಂದು ಧೋನಿ ಅಭಿಮಾನಿಗಳು ಕಾದು ಕುಳಿತ್ತಿದ್ದರೆ, ಇನ್ನೊಂದೆಡೆ ತನ್ನ ತಂದೆ ಈ ಎಸೆತದಲ್ಲಿ ಯಶಸ್ಸು ಕಾಣಲಿ ಎಂದು ಅಂಬೆಗಾಲಿಡುವ ಮಗಳು ಟೀವಿ ಮುಂದೆ ಅಮ್ಮನ ಮಡಿಲಲ್ಲಿ ಕೂತು ಪಂದ್ಯ ವೀಕ್ಷಿಸುತ್ತಿದ್ದಳು. ಅಂತಿಮವಾಗಿ ಮಗಳ ಬಯಕೆಯೆಂತೆ ತಂದೆ ಈ ಬೌಲ್​ನಲ್ಲಿ ಯಶಸ್ಸು ಕಂಡು ತಂಡಕ್ಕೆ ಜಯ ತಂದುಕೊಟ್ಟರು. ಈ ಸುಂದರ ಕ್ಷಣದ ಫೋಟೊ ಮತ್ತು ವಿಡಿಯೊವನ್ನು ಕ್ರಿಕ್​ಇನ್ಫೋ ಟ್ವೀಟ್​ ಮೂಲಕ ಪ್ರಕಟಿಸಿದೆ.

ಚೆನ್ನೈಯ ಚೆಪಾಕ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ರಾಜಸ್ಥಾನ್​ ನಿಗದಿತ 20 ಓವರ್​ಗಲ್ಲಿ 7 ವಿಕೆಟ್​ ನಷ್ಟಕ್ಕೆ 175 ರನ್​ ಗಳಿಸಿತು. ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ತನ್ನ ಪಾಲಿನ ಓವರ್​ನಲ್ಲಿ 6 ವಿಕೆಟ್​ ನಷ್ಟಕ್ಕೆ 172 ರನ್​ ಬಾರಿಸಿ ಕೇವಲ ಮೂರು ರನ್​ ಅಂತರದಿಂದ ಸೋಲು ಕಂಡಿತು.

ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಒಂದು ಹಂತದ ವರೆಗೆ ಉತ್ತಮ ಸ್ಥಿತಿಯಲ್ಲಿತ್ತು. ಆ ಬಳಿಕ ನಾಟಕೀಯ ಕುಸಿತ ಕಂಡಿತು. ಈ ವೇಳೆ ನಾಯಕ ಧೋನಿ ಮತ್ತು ಜಡೇಜಾ ಕಡೇಯ ಮೂರು ಓವರ್​ಗಳಲ್ಲಿ ಹೋರಾಟ ನಡೆಸಿ ತಂಡಕ್ಕೆ ಗೆಲುವು ತಂದು ಕೊಡುವ ಎಲ್ಲ ಪ್ರಯತ್ನಗಳನ್ನು ಮಾಡಿದರು. ಶಕ್ತಿ ಮೀರಿ ಬ್ಯಾಟಿಂಗ್​ ನಡೆಸಿದ ಧೋನಿ ಮತ್ತು ಜಡೇಜಾ ರಾಜಸ್ಥಾನ್​ ಬೌಲರ್​ಗಳಿಗೆ ಬೆಂಡೆತ್ತಿದರು. ಅಂತಿಮ 12 ಎಸೆತಗಳಲ್ಲಿ 40 ರನ್​ ಬಾರಿಸುವ ಸಾವಲನ್ನು ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಚೆನ್ನೈ ಮೀರಿ ನಿಲ್ಲುವ ಎಲ್ಲ ಸಾಧ್ಯತೆ ಇತ್ತು.

ಸಂದೀಪ್​ ಶರ್ಮ ಎಸೆದ ಕೊನೆಯ ಓವರ್​ನಲ್ಲಿ ಧೋನಿ ಸತತ ಸಿಕ್ಸರ್​ ಬಾರಿಸಿದಾಗ ಚೆನ್ನೈ ಪಾಳಯದಲ್ಲಿ ಗೆಲುವಿನ ವಿಶ್ವಾಸ ಮೂಡಿತು. ಅಂತಿಮ ಎಸೆತದಲ್ಲಿ ಗೆಲುವಿಗೆ 5 ರನ್​ ಅವಶ್ಯಕತೆ ಇತ್ತು. ಈ ವೇಳೆ ಧೋನಿ ಸ್ಟ್ರೈಕ್​ನಲ್ಲಿದ್ದರು. ಧೋನಿ ತಮ್ಮ ಎಂದಿನ ಶೈಲಿಯಂತೆ ಈ ಪಂದ್ಯವನ್ನು ಸಿಕ್ಸರ್​ ಮೂಲಕ ಫಿನಿಶ್ ಮಾಡುತ್ತಾರೆ ಎಂದು ಎಲ್ಲರು ತುದಿಗಾಲಲ್ಲಿ ನಿಂತಿದ್ದರು. ಆದರೆ ಸಂದೀಪ್ ಶರ್ಮ​ ಸ್ಲೋ ಯಾರ್ಕರ್​ ಎಸೆದು ರಾಜಸ್ಥಾನಕ್ಕೆ ರೋಚಕ ಗೆಲುವು ತಂದು ಕೊಟ್ಟರು. ಧೋನಿ ಸಿಕ್ಸರ್​ ಬಾರಿಸುವಲ್ಲಿ ವಿಫಲರಾದರು.​ ರಾಜಸ್ಥಾನ್​ ವೀರೋಚಿತ 3 ರನ್​ ಗೆಲುವು ಸಾಧಿಸಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್​, ಪಠಾಣ್​​

Virat kohli: ಅವರವರ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರವರು ಆಡುತ್ತಾರೆ. ಉತ್ತಮ ಬೌಲಿಂಗ್ ಮತ್ತು ಎಲ್ಲವೂ ಇದಕ್ಕೆ ಸೇರ್ಪಡೆಯಾಗುತ್ತದೆ. ಏನೇ ಹೇಳಿದರೂ ಪ್ರತಿಯೊಬ್ಬ ಕ್ರಿಕೆಟಿಗನನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಇರ್ಫಾನ್ ವೀಕ್ಷಕವಿವರಣೆಯ ಸಮಯದಲ್ಲಿ ಹೇಳಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಐಪಿಎಲ್​ 2024ರ (IPL 2024) ಪಂದ್ಯದಲ್ಲಿ ಸನ್​​ರೈಸರ್ಸ್​ ಹೈದರಾಬಾದ್ (SRH) ತಂಡದ ಆರಂಭಿಕ ಬ್ಯಾಟರ್​ ಟ್ರಾವಿಸ್ ಹೆಡ್ (Travis Head)) 44 ಎಸೆತಗಳಲ್ಲಿ 58 ರನ್ ಗಳಿಸಿದ್ದಾರೆ. ಸಾಮಾನ್ಯವಾಗಿ, ಆಸ್ಟ್ರೇಲಿಯಾದ ಅಂತಾರಾಷ್ಟ್ರೀಯ ಆಟಗಾರ ಆರಂಭದಿಂದಲೂ ಬೌಲರ್​ಗಳನ್ನು ದಂಡಿಸುತ್ತಾರೆ. ಪವರ್​ಪ್ಲೇನಲ್ಲಿ ಪ್ರಾಬಲ್ಯ ಸಾಧಿಸುತ್ತಾರೆ. ಆದಾಗ್ಯೂ, ಅವರು ತಮ್ಮ ಪಾಲುದಾರರಾದ ಅಭಿಷೇಕ್ ಶರ್ಮಾ ಮತ್ತು ಅನ್ಮೋಲ್​ಪ್ರೀತ್​ ಸಿಂಗ್ ಅವರನ್ನು ಬೇಗನೆ ಕಳೆದುಕೊಂಡಿದ್ದರಿಂದ ಹೆಡ್ ಇನ್ನಿಂಗ್ಸ್ ಕಟ್ಟಲು ನಿರ್ಧರಿಸಿದ್ದರು. ಹೀಗಾಗಿ ಅವರು ಸ್ಟ್ರೈಕ್​​ರೇಟ್ (Strike Rate)​ ಕುಸಿಯಿತು.

ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಮತ್ತು ಮೊಹಮ್ಮದ್ ಕೈಫ್ ಇದನ್ನೇ ಉದಾಹರಣೆಯಾಗಿ ಇಟ್ಟುಕೊಂಡು ಕೊಹ್ಲಿಯ ಸ್ಟ್ರೈಕ್​ರೇಟ್​ ಬಗ್ಗೆ ಮಾತನಾಡುವವರಿಗೆ ಪಾಠ ಹೇಳಿದ್ದಾರೆ. ಒಂದು ವೇಳೆ ವಿರಾಟ್ ಕೊಹ್ಲಿ ಅಂತಹ ಇನ್ನಿಂಗ್ಸ್ ಆಡಿದ್ದರೆ ಅವರ ಸ್ಟ್ರೈಕ್ ರೇಟ್ ಬಗ್ಗೆ ಅನೇಕ ಚರ್ಚೆಗಳು ನಡೆಯುತ್ತಿದ್ದವು ಎಂದು ಅಭಿಪ್ರಾಯಪಟ್ಟಿದ್ದಾರೆ. ಸಾಕಷ್ಟು ರನ್ ಗಳಿಸಿ, ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೂ ಐಪಿಎಲ್ 2024 ರಾದ್ಯಂತ ಕೊಹ್ಲಿ ಅವರ ಸ್ಟ್ರೈಕ್ ರೇಟ್​ ಕಾರಣಕ್ಕೆ ಟೀಕೆ ಎದುರಿಸಿದ್ದಾರೆ. ಹೆಡ್ ಅವರ ಇನ್ನಿಂಗ್ಸ್ ಅನ್ನು ನೋಡಿದ ಪಠಾಣ್ ಮತ್ತು ಕೈಫ್ ಕೊಹ್ಲಿಯ ರಕ್ಷಣೆಗೆ ಧಾವಿಸಿದ್ದಾರೆ. ಪ್ರತಿಯೊಬ್ಬ ಕ್ರಿಕೆಟಿಗನನ್ನು ಸಮಾನವಾಗಿ ಪರಿಗಣಿಸಬೇಕು ಎಂದು ವಾದ ಮಂಡಿಸಿದ್ದಾರೆ.

ಅವರವರ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರವರು ಆಡುತ್ತಾರೆ. ಉತ್ತಮ ಬೌಲಿಂಗ್ ಮತ್ತು ಎಲ್ಲವೂ ಇದಕ್ಕೆ ಸೇರ್ಪಡೆಯಾಗುತ್ತದೆ. ಏನೇ ಹೇಳಿದರೂ ಪ್ರತಿಯೊಬ್ಬ ಕ್ರಿಕೆಟಿಗನನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಇರ್ಫಾನ್ ವೀಕ್ಷಕವಿವರಣೆಯ ಸಮಯದಲ್ಲಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೈಫ್​​ “ನೀವು ಹೇಳಿದ್ದು ಸರಿ. ಇದು ವಿರಾಟ್ ಕೊಹ್ಲಿ ಆಗಿದ್ದರೆ, ಜನರು 44 ಎಸೆತಗಳಲ್ಲಿ ಕೇವಲ 58 ರನ್ ಗಳಿಸುತ್ತಿದ್ದಾರೆ ಎಂದು ಟೀಕಿಸುತ್ತಿದ್ದರು. ಅದು ಕಡಿಮೆ ಎಂದು ಅವರು ಹೇಳುತ್ತಿದ್ದರು ಮತ್ತು ಅವರ ಸ್ಟ್ರೈಕ್ ರೇಟ್ ಬಗ್ಗೆ ಚರ್ಚೆಗಳು ನಡೆಯುತ್ತಿತ್ತು. ಇದು ಹೆಡ್ ಅವರ ಉತ್ತಮ ಇನ್ನಿಂಗ್ಸ್ ಎಂದು ನಾನು ನಂಬುತ್ತೇನೆ,” ಎಂದು ಕೈಫ್ ಹೇಳಿದರು.

ಇದನ್ನೂ ಓದಿ: IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

“ಆದರೆ ವಿರಾಟ್ ಕೊಹ್ಲಿ ಇದ್ದಿದ್ದರೆ, ಜನರು ಸ್ಟ್ರೈಕ್ ರೇಟ್​​ಗೆ ಅಂಟಿಕೊಳ್ಳುತ್ತಿದ್ದರು. ಆದರೆ ಇಲ್ಲಿ ನಾವು ತಂಡದ ಗೆಲುವಿನ ಜವಾಬ್ದಾರಿ ತೆಗೆದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೇವೆ. ಆದ್ದರಿಂದ ದಯವಿಟ್ಟು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿ” ಎಂದು ಇರ್ಫಾನ್ ಅಭಿಪ್ರಾಯ ಮಂಡಿಸಿದರು.

ಹೆಡ್ ಅವರ 58 ಮತ್ತು ನಿತೀಶ್ ರೆಡ್ಡಿ ಅವರ 76* ರನ್​ಗಳ ನೆರವಿನಿಂದ ಎಸ್​ಆರ್​ಎಚ್​ ರಾಜಸ್ಥಾನ್ ವಿರುದ್ಧ 201 ರನ್ ಗಳಿಸಲು ನೆರವಾಯಿತು. ಚೇಸಿಂಗ್ ವಿಷಯಕ್ಕೆ ಬಂದಾಗ, ಸಂಜು ಸ್ಯಾಮ್ಸನ್ ನೇತೃತ್ವದ ತಂಡವು ಹೆಚ್ಚಿನ ಸಮಯ ಗೆಲುವಿಗಾಗಿ ಹಂಬಲಿಸಿತು. ಆದರೆ ಕೊನೆಯಲ್ಲಿ ಕೇವಲ ಒಂದು ರನ್​ನಿಂದ ಸೋತಿತು. ಈ ಗೆಲುವಿನೊಂದಿಗೆ ಹೈದರಾಬಾದ್ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದರೆ, ರಾಜಸ್ಥಾನ ಅಗ್ರಸ್ಥಾನದಲ್ಲಿದೆ.

Continue Reading

ಕ್ರೀಡೆ

IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

IPL 2024: ಐಸಿಸಿ ವಿಶ್ವಕಪ್ 2023 ರ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತ ನಂತರ ಮೊಹಮ್ಮದ್ ಕೈಫ್ ಅವರ ಹೇಳಿಕೆಗಳು ಸಾಕಷ್ಟು ಟ್ರೋಲ್​​ಗೆ ಒಳಗಾಗಿದ್ದವು. ಪಂದ್ಯಾವಳಿಯಲ್ಲಿ ಸತತ 10 ಪಂದ್ಯಗಳನ್ನು ಗೆದ್ದರೂ ರೋಹಿತ್ ಶರ್ಮಾ ನೇತೃತ್ವದ ತಂಡವು ಫೈನಲ್ ಪಂದ್ಯದಲ್ಲಿ ಸೋತಿತ್ತು. ಆ ಸೋಲನ್ನು ಒಪ್ಪಿಕೊಳ್ಳವುದಕ್ಕೆ ಭಾರತದ ಮಾಜಿ ಕ್ರಿಕೆಟಿಗ ಸಿದ್ಧರಿರಲಿಲ್ಲ.

VISTARANEWS.COM


on

IPL 2024
Koo

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ(IPL 2024) ಗುರುವಾರ (ಮೇ 3) ಸನ್​ರೈಸರ್ಸ್​ ಹೈದರಾಬಾದ್ (SRH) ವಿರುದ್ಧ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡ ಸೋತ ನಂತರ ಭಾರತದ ಮಾಜಿ ಕ್ರಿಕೆಟಿಗ ವಾಸಿಮ್ ಜಾಫರ್ (Wasim Jafar) ಅವರು ಐಸಿಸಿ ವಿಶ್ವಕಪ್ 2023 ರ ಫೈನಲ್ ಕುರಿತ ಹೇಳಿಕೆಗಳನ್ನು ಮತ್ತೊಬ್ಬ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಅವರನ್ನು ಟ್ರೋಲ್ ಮಾಡಿದ್ದಾರೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವೆ ಪಂದ್ಯ ನಡೆದಿತ್ತು.

ಐಸಿಸಿ ವಿಶ್ವಕಪ್ 2023 ರ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತ ನಂತರ ಮೊಹಮ್ಮದ್ ಕೈಫ್ ಅವರ ಹೇಳಿಕೆಗಳು ಸಾಕಷ್ಟು ಟ್ರೋಲ್​​ಗೆ ಒಳಗಾಗಿದ್ದವು. ಪಂದ್ಯಾವಳಿಯಲ್ಲಿ ಸತತ 10 ಪಂದ್ಯಗಳನ್ನು ಗೆದ್ದರೂ ರೋಹಿತ್ ಶರ್ಮಾ ನೇತೃತ್ವದ ತಂಡವು ಫೈನಲ್ ಪಂದ್ಯದಲ್ಲಿ ಸೋತಿತ್ತು. ಆ ಸೋಲನ್ನು ಒಪ್ಪಿಕೊಳ್ಳವುದಕ್ಕೆ ಭಾರತದ ಮಾಜಿ ಕ್ರಿಕೆಟಿಗ ಸಿದ್ಧರಿರಲಿಲ್ಲ. ಅತ್ಯುತ್ತಮ ತಂಡ ಭಾರತದ ಸೋಲನ್ನು ನಾನು ಒಪ್ಪಿಕೊಳ್ಳುವುದಿಲ್ಲ ಎಂದು ಮೊಹಮ್ಮದ್ ಕೈಫ್ ಹೇಳಿಕೊಂಡಿದ್ದರು.

ಕಪ್​ ಗೆದ್ದಿರುವ ಆಸ್ಟ್ರೇಲಿಯಾಕ್ಕೆ ಅಭಿನಂದನೆಗಳು. ಆದರೆ ಅತ್ಯುತ್ತಮ ತಂಡವು ವಿಶ್ವಕಪ್ ಗೆದ್ದಿದೆ ಎಂದು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ. ಈ ಭಾರತೀಯ ತಂಡವು ಅತ್ಯುತ್ತಮ ತಂಡವಾಗಿತ್ತು. ಅವರು ಇಂದು ಸೋತರು. ಇದು ಆ ಕೆಟ್ಟ ದಿನಗಳಲ್ಲಿ ಒಂದಾಗಿದೆ ಎಂದು ವಿಶ್ವ ಕಪ್​ ಬಳಿಕ ಕೈಫ್​ ಹೇಳಿಕೆ ನೀಡಿದ್ದರು.

ಇದೀಗ ಕೆಲವು ತಿಂಗಳುಗಳ ನಂತರ, ಮೊಹಮ್ಮದ್ ಕೈಫ್ ಅವರನ್ನು ಟ್ರೋಲ್ ಮಾಡಲು ವಾಸಿಮ್ ಜಾಫರ್ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡರು. ಸನ್ರೈಸರ್ಸ್​​ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 1 ರನ್ ಸೋತ ನಂತರ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಚಿತ್ರ ಪೋಸ್ಟ್ ಮಾಡಿದ್ದಾರೆ. “ಕಾಗದದ ಮೇಲಿನ ಬಲಿಷ್ಠ ತಂಡವು ಪಂದ್ಯ ಕಳೆದುಕೊಂಡಾಗ ಮೊಹಮ್ಮದ್ ಕೈಫ್” ಎಂಬ ಉಲ್ಲೇಖ ನೀಡಿ ಚಿತ್ರ ಪೋಸ್ಟ್ ಮಾಡಿದ್ದಾರೆ.

ಐಪಿಎಲ್ 2024 ರಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ನಿರಾಶಾದಾಯಕ ಸೋಲು ಅನುಭವಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕೊನೆಯ ಎಸೆತದಲ್ಲಿ ಫಲಿತಾಂಶವನ್ನು ನಿರ್ಧಾರಗೊಂಡಿತು. ಇದು ಪಂದ್ಯಾವಳಿಯ ಅತ್ಯಂತ ರೋಮಾಂಚಕಾರಿ ಆಟಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: IPL 2024 : ನನ್ನ ನಿದ್ದೆಗೆಡಿಸಿದ್ದ ರೋಹಿತ್​ ಶರ್ಮಾ; ಗಂಭೀರ್​ ಹೀಗೆ ಹೇಳಲು ಕಾರಣವೇನು?

202 ರನ್ಗಳ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಆರಂಭಿಕ ವಿಕೆಟ್​​ಗಳನ್ನು ಬೇ ಕಳೆದುಕೊಂಡಿತು. ಆದರೆ ಯಶಸ್ವಿ ಜೈಸ್ವಾಲ್ ಮತ್ತು ರಿಯಾನ್ ಪರಾಗ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಕೊನೆಯಲ್ಲಿ, ರೋವ್ಮನ್ ಪೊವೆಲ್ ಆಟವನ್ನು ಕೌತುಕಕ್ಕೆ ಕೊಂಡೊಯ್ದರು. ತ್ತು ಕೊನೆಯ ಎಸೆತದಲ್ಲಿ 2 ರನ್​ಗಳ ಅಗತ್ಯವಿದ್ದಾಗ ಅವರು ಔಟಾಗಿದ್ದರಿಂದ ಸನ್​ರೈಸರ್ಸ್​ ಹೈದರಾಬಾದ್ ಪಂದ್ಯವನ್ನು 1 ರನ್​ಗಳಿಂದ ಗೆದ್ದುಕೊಂಡಿತು.

ರೋಹಿತ್ ಶರ್ಮಾಗೆ ದೊಡ್ಡ ಅವಕಾಶ

ಮೊಹಮ್ಮದ್ ಕೈಫ್ ಇತ್ತೀಚೆಗೆ 2024 ರ ಟಿ 20 ವಿಶ್ವಕಪ್​​ ನಲ್ಲಿ ಭಾರತದ ಅವಕಾಶಗಳ ಬಗ್ಗೆ ಮಾತನಾಡಿದ್ದಾರೆ. ಮುಂಬರುವ ಪಂದ್ಯಾವಳಿಯು ನಾಯಕನಾಗಿ ರೋಹಿತ್ ಶರ್ಮಾಗೆ ಉತ್ತಮ ಅವಕಾಶವಾಗಿದೆ ಎಂದು ಅವರು ನುಡಿದಿದ್ದಾರೆ. ಐಸಿಸಿ ವಿಶ್ವಕಪ್ 2023 ರಲ್ಲಿ ಭಾರತವು ಅನುಭವಿಸಿದಂತಹ ಬೇಸರವನ್ನು ಎದುರಿಸುವುದಿಲ್ಲ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

“ರೋಹಿತ್ ಶರ್ಮಾ ಅವರು ಮುಂದಿನ 2 ರಿಂದ 3 ವರ್ಷಗಳವರೆಗೆ ಹೆಚ್ಚು ಕಾಲ ಆಡುವುದಿಲ್ಲ ಎಂದು ತಿಳಿದಿದೆ. ವಿರಾಟ್ ಕೊಹ್ಲಿ ಕೂಡ ಅದೇ ಹಾದಿಯಲ್ಲಿದ್ದಾರೆ. ನಾಯಕನಾಗಿ ರೋಹಿತ್​ಗೆ ಇದು ದೊಡ್ಡ ಅವಕಾಶ. ಪಂದ್ಯವು ಭಾರತದ ಕೈಯಲ್ಲಿದ್ದ ನಂತರ ಅವರು ಏಕದಿನ ವಿಶ್ವಕಪ್ ಫೈನಲ್​ನಲ್ಲಿ ಸೋತಿದ್ದಾರೆ. 10 ಪಂದ್ಯಗಳನ್ನು ಗೆದ್ದರೂ 1 ಪಂದ್ಯವನ್ನು ಸೋತಿತು.. ಟಿ 20 ವಿಶ್ವಕಪ್​​ನಲ್ಲಿ ಪರಿಸ್ಥಿತಿ ಒಂದೇ ರೀತಿ ಇರುವುದಿಲ್ಲ ಎಂದು ನಾನು ಭಾವಿಸುತ್ತೇನೆ, “ಎಂದು ಅವರು ಹೇಳಿದರು.

Continue Reading

Latest

IPL 2024 : ನನ್ನ ನಿದ್ದೆಗೆಡಿಸಿದ್ದ ರೋಹಿತ್​ ಶರ್ಮಾ; ಗಂಭೀರ್​ ಹೀಗೆ ಹೇಳಲು ಕಾರಣವೇನು?

IPL 2024: ಗಂಭೀರ್, ರೋಹಿತ್ ತಾವು ಹೆಚ್ಚು ಹೆದರುವ ಬ್ಯಾ ಟರ್​ ಎಂದು ಹೇಳಿದರು. ರೋಹಿತ್ ಒಂದು ಹೆಜ್ಜೆ ಮುಂದೆ ಇಟ್ಟರೆ ಅವರನ್ನು ತಡೆಯಲು ಸಾಧ್ಯವಿಲ್ಲ ಎಂದು ಗಂಭೀರ್ ಹೇಳಿದರು. ಆದ್ದರಿಂದ ಅವರ ದಾಳಿ ತಡೆಯಲು ತಂಡವು ಅನೇಕ ಬ್ಯಾಕಪ್ ಯೋಜನೆಗಳನ್ನು ತರುತ್ತಿದ್ದೆವು . ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ಅನೇಕ ಸ್ಫೋಟಕ ಬ್ಯಾಟರ್​ಗಳ ಹೊರತಾಗಿಯೂ ಗಂಭೀರ್ ನೆಮ್ಮದಿ ಕೆಡಿಸಿದ್ದ ರೋಹಿತ್​ ಎಂಬುದು ವಿಶೇಷ.

VISTARANEWS.COM


on

IPL 2024
Koo

ಮುಂಬಯಿ: ಗೌತಮ್ ಗಂಭೀರ್ (Gautam Gambhir) ಐಪಿಎಲ್​ನಲ್ಲಿ ಕೋಲ್ಕೊತಾ ನೈಟ್​​ ರೈಡರ್ಸ್​​ ತಂಡ ನಾಯಕರಾಗಿದ್ದ ಸಮಯವನ್ನು ಇತ್ತೀಚೆಗೆ ಸ್ಮರಿಸಿಕೊಂಡಿದ್ದಾರೆ. ಈ ವೇಳೆ ಅವರು ರೋಹಿತ್ ಶರ್ಮಾ (Rohit Sharma) ತಮ್ಮ ನಿದ್ದೆಗೆಡಿಸಿದ್ದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ಶುಕ್ರವಾರ ಐಪಿಎಲ್​17ನೇ ಆವೃತ್ತಿಯ (IPL 2024) ಮುಂಬೈ ಇಂಡಿಯನ್ಸ್ ವಿರುದ್ಧದ ಕೆಕೆಆರ್ ಪಂದ್ಯಕ್ಕೆ ಮುಂಚಿತವಾಗಿ ಮಾತನಾಡಿದ ಗಂಭೀರ್​ ಬೌಲರ್​ಗಳ ಮೇಲೆ ಪ್ರಾಬಲ್ಯ ಸಾಧಿಸಿರುವ ಸ್ಫೋಟಕ ಆರಂಭಿಕ ಆಟಗಾರ ರೋಹಿತ್​ ಶರ್ಮಾ ಅವರನ್ನು ಶ್ಲಾಘಿಸಿದರು.

ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ನಲ್ಲಿ ಮಾತನಾಡಿದ ಗಂಭೀರ್, ರೋಹಿತ್ ತಾವು ಹೆಚ್ಚು ಹೆದರುವ ಬ್ಯಾ ಟರ್​ ಎಂದು ಹೇಳಿದರು. ರೋಹಿತ್ ಒಂದು ಹೆಜ್ಜೆ ಮುಂದೆ ಇಟ್ಟರೆ ಅವರನ್ನು ತಡೆಯಲು ಸಾಧ್ಯವಿಲ್ಲ ಎಂದು ಗಂಭೀರ್ ಹೇಳಿದರು. ಆದ್ದರಿಂದ ಅವರ ದಾಳಿ ತಡೆಯಲು ತಂಡವು ಅನೇಕ ಬ್ಯಾಕಪ್ ಯೋಜನೆಗಳನ್ನು ತರುತ್ತಿದ್ದೆವು . ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ಅನೇಕ ಸ್ಫೋಟಕ ಬ್ಯಾಟರ್​ಗಳ ಹೊರತಾಗಿಯೂ ಗಂಭೀರ್ ನೆಮ್ಮದಿ ಕೆಡಿಸಿದ್ದ ರೋಹಿತ್​ ಎಂಬುದು ವಿಶೇಷ.

“ನಾಯಕನಾಗಿ ನನ್ನ ಇಡೀ ಐಪಿಎಲ್ ವೃತ್ತಿಜೀವನದಲ್ಲಿ, ನನಗೆ ನಿದ್ರೆಯಿಲ್ಲದ ರಾತ್ರಿಗಳನ್ನು ನೀಡಿದ ಏಕೈಕ ಆಟಗಾರ ಇದ್ದರೆ ಅದು ರೋಹಿತ್ ಶರ್ಮಾ. ಐಪಿಎಲ್​ನಲ್ಲಿ ನಾನು ಹೆದರಿದ ಏಕೈಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ, ನನಗೆ ನಿದ್ರೆಯಿಲ್ಲದ ರಾತ್ರಿಗಳನ್ನು ಕೊಟ್ಟ ಏಕೈಕ ಆಟಗಾರ ಅವರು. ಕ್ರಿಸ್ ಗೇಲ್ ಅಲ್ಲ, ಎಬಿ ಡಿವಿಲಿಯರ್ಸ್ ಅಲ್ಲ , ಮತ್ಯಾರೂ ಇಲ್ಲ , ರೋಹಿತ್ ಶರ್ಮಾ ಮಾತ್ರ. ಏಕೆಂದರೆ ಅವರಿಗಾಗಿ ನಾನು ಪ್ಲಾನ್ ಎ ಅಥವಾ ಪ್ಲಾನ್ ಬಿ ಹೊಂದಿರಬೇಕಿತ್ತು, ಬಹುಶಃ ಪ್ಲಾನ್ ಸಿ ಕೂಡ. ಏಕೆಂದರೆ ರೋಹಿತ್ ಅವರನ್ನು ನಿಯಂತ್ರಿಸುವುದು ಕಷ್ಟ, “ಎಂದು ಗಂಭೀರ್ ಹೇಳಿದರು.

ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೆಕೆಆರ್ 12 ವರ್ಷಗಳ ಸುದೀರ್ಘ ದಾಖಲೆಯನ್ನು ಮುರಿಯಲು ಎದುರು ನೋಡುತ್ತಿದೆ. ಕೆಕೆಆರ್ ಕೇವಲ 9 ಪಂದ್ಯಗಳನ್ನು ಗೆದ್ದಿದ್ದರೆ, ಮುಂಬೈ ಇಂಡಿಯನ್ಸ್ 23 ಪಂದ್ಯಗಳನ್ನು ಗೆದ್ದಿದೆ.

ಇದನ್ನೂ ಓದಿ: IPL 2024 : ಐಪಿಎಲ್​ಗೆ ಅರ್ಧದಲ್ಲೇ ವಿದಾಯ ಹೇಳಿದ ಮುಸ್ತಾಫಿಜುರ್​ಗೆ ಸಹಿ ಹಾಕಿದ ಜೆರ್ಸಿ ನೀಡಿದ ಧೋನಿ

ರೋಹಿತ್ ಗಾಗಿ ಸಾಕಷ್ಟು ಯೋಜನೆಗಳು ನಡೆಯುತ್ತಿದ್ದವು ಎಂದು ಗಂಭೀರ್ ಬಹಿರಂಗಪಡಿಸಿದರು. ರೋಹಿತ್ ಒಂದು ಓವರ್​​ನಲ್ಲಿ 30 ಕ್ಕೂ ಹೆಚ್ಚು ರನ್ ಗಳಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು.

ಅವರಿಗಾಗಿ ಯೋಜನೆ ರೂಪಿಸಬೇಕಿತ್ತು

“ಐಪಿಎಲ್​​ನಲ್ಲಿ ರೋಹಿತ್ ಶರ್ಮಾ ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್​ಗಾಗಿ ಹೆಚ್ಚ ಯೋಜನೆ ಹಾಕಿಕೊಂಡಿಲ್ಲ. ಪಂದ್ಯದಕ್ಕೆ ಮೊದಲ ದಿನ ರಾತ್ರಿ ನಾನು ಅವರು ಆಡುವ ದೃಶ್ಯಗಳನ್ನು ನೋಡುತ್ತಿದ್ದೆ. ಪ್ಲಾನ್ ಎ ಉತ್ತಮವಾರಿ ಸಿದ್ದಪಡಿಸುತ್ತಿದ್ದೆ. ಅದು ಕೆಲಸ ಮಾಡದಿದ್ದರೆ, ನಾನು ಮತ್ತೊಂದು ಯೋಜನೆ ಮಾಡಬೇಕಿತ್ತು. ಸುನಿಲ್ ನರೈನ್​ ತನ್ನ ನಾಲ್ಕು ಓವರ್​ಗಳನ್ನು ಎಸೆದರೆ, ಮುಂದಿನ 16 ಓವರ್​ಗಳನ್ನು ಯಾರು ಎಸೆಯುತ್ತಾರೆ? ನಾನು ಸುನಿಲ್ ಸ್ಪೆಲ್​ ಬೇಗ ಮುಗಿಸಿದರೆ ಮತ್ತು ರೋಹಿತ್ ಇದ್ದರೆ, ಅವರು ಒಂದೇ ಓವರ್​ನಲ್ಲಿ 30 ರನ್ ಗಳಿಸಬಹುದು. ಬಹುಶಃ ನಾಯಕನಾಗಿ ನಾನು ಹೆದರುತ್ತಿದ್ದ ಏಕೈಕ ಬ್ಯಾಟ್ಸ್ಮನ್,” ಎಂದು ಗಂಭೀರ್ ಹೇಳಿದರು.

ಕೆಕೆಆರ್​​ 26 ಪಂದ್ಯಗಳನ್ನಾಡಿರುವ ರೋಹಿತ್ 130.32ರ ಸ್ಟ್ರೈಕ್ ರೇಟ್​ನಲ್ಲಿ ಅಜೇಯ ಶತಕ ಸೇರಿದಂತೆ 924 ರನ್ ಗಳಿಸಿದ್ದಾರೆ.

Continue Reading

ಕ್ರೀಡೆ

IPL 2024 : ಐಪಿಎಲ್​ಗೆ ಅರ್ಧದಲ್ಲೇ ವಿದಾಯ ಹೇಳಿದ ಮುಸ್ತಾಫಿಜುರ್​ಗೆ ಸಹಿ ಹಾಕಿದ ಜೆರ್ಸಿ ನೀಡಿದ ಧೋನಿ

IPL 2024: ಮುಸ್ತಾಫಿಜುರ್ ತಮ್ಮ ಸಹಿ ಮಾಡಿದ ಜೆರ್ಸಿಯನ್ನು ಹಿಡಿದುಕೊಂಡಿರುವ ಚಿತ್ರವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಒಂದೇ ಡ್ರೆಸ್ಸಿಂಗ್ ಕೊಠಡಿಯನ್ನು ಹಂಚಿಕೊಂಡಿದ್ದಕ್ಕಾಗಿ ಮತ್ತು ಎಲ್ಲಾ ಕಲಿಕೆಗಾಗಿ ಬಾಂಗ್ಲಾದೇಶದ ವೇಗಿ ಧೋನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಧೋನಿಯನ್ನು ಭೇಟಿಯಾಗಿ ಅವರೊಂದಿಗೆ ಮತ್ತೆ ಆಡುವ ಬಯಕೆ ಅವರು ವ್ಯಕ್ತಪಡಿಸಿದ್ದಾರೆ.

VISTARANEWS.COM


on

IPL 2024
Koo

ಚೆನ್ನೈ: ರಾಷ್ಟ್ರೀಯ ಬದ್ಧತೆಯ ಕಾರಣಕ್ಕೆ ಬಾಂಗ್ಲಾದೇಶದ ಬೌಲರ್​ ಮುಸ್ತಾಫಿಜುರ್ ರೆಹಮಾನ್ ಐಪಿಎಲ್ ತೊರೆದಿದ್ದಾರೆ. ಅವರು ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡದ ಶಿಬಿರ ಬಿಟ್ಟಿದ್ದಾರೆ. ಹೀಗೆ ಐಪಿಎಲ್ 2024 ಗೆ (IPL 2024 ) ವಿದಾಯ ಹೇಳುವ ಮೊದಲು ಮುಸ್ತಾಫಿಜುರ್ ರೆಹಮಾನ್ (Mustafizur Rahman) ಲೆಜೆಂಡ್​ ಕ್ರಿಕೆಟಿಗ ಎಂಎಸ್ ಧೋನಿಯಿಂದ ಸಹಿ ಮಾಡಿದ ಜೆರ್ಸಿ ಸ್ವೀಕರಿಸಿದರು. ಬಾಂಗ್ಲಾದೇಶ (Bangladesh Cricket Team) ಮತ್ತು ಜಿಂಬಾಬ್ವೆ ನಡುವಿನ 5 ಪಂದ್ಯಗಳ ಟಿ 20 ಐ ಸರಣಿಯಲ್ಲಿ ಕಾಣಿಸಿಕೊಳ್ಳಬೇಕಾಗಿರುವ ಕಾರಣ ವೇಗಿ ಮೇ 1, 2024 ರ ನಂತರ ಸಿಎಸ್ಕೆಗೆ ಲಭ್ಯವಿರುವುದಿಲ್ಲ ಎಂದು ಈ ಹಿಂದೆ ತಿಳಿಸಲಾಗಿತ್ತು.

ಮುಸ್ತಾಫಿಜುರ್ ತಮ್ಮ ಸಹಿ ಮಾಡಿದ ಜೆರ್ಸಿಯನ್ನು ಹಿಡಿದುಕೊಂಡಿರುವ ಚಿತ್ರವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಒಂದೇ ಡ್ರೆಸ್ಸಿಂಗ್ ಕೊಠಡಿಯನ್ನು ಹಂಚಿಕೊಂಡಿದ್ದಕ್ಕಾಗಿ ಮತ್ತು ಎಲ್ಲಾ ಕಲಿಕೆಗಾಗಿ ಬಾಂಗ್ಲಾದೇಶದ ವೇಗಿ ಧೋನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಧೋನಿಯನ್ನು ಭೇಟಿಯಾಗಿ ಅವರೊಂದಿಗೆ ಮತ್ತೆ ಆಡುವ ಬಯಕೆ ಅವರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Rohit Sharma : ರೋಹಿತ್ ಶರ್ಮಾ ದೌರ್ಬಲ್ಯವನ್ನು ಬೊಟ್ಟು ಮಾಡಿ ತೋರಿಸಿದ ವಾಸಿಮ್​ ಜಾಫರ್​

“ಎಲ್ಲದಕ್ಕೂ ಧನ್ಯವಾದಗಳು ಮಹಿ ಭಾಯ್. ನಿಮ್ಮಂತಹ ದಂತಕಥೆಯೊಂದಿಗೆ ಡ್ರೆಸ್ಸಿಂಗ್ ಕೋಣೆ ಹಂಚಿಕೊಳ್ಳುವುದು ವಿಶೇಷ ಭಾವನೆ. ಪ್ರತಿ ಬಾರಿಯೂ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಅಮೂಲ್ಯ ಸಲಹೆಗಳನ್ನು ಸ್ಮರಿಸುತ್ತೇನೆ. ನಾನು ಹೇಳಿದ ವಿಷಯಗಳನ್ನು ನೆನಪಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ನಿಮ್ಮನ್ನು ಮತ್ತೆ ಭೇಟಿಯಾಗಲು ಮತ್ತು ಆಡಲು ಎದುರು ನೋಡುತ್ತಿದ್ದೇನೆ, “ಎಂದು ಮುಸ್ತಾಫಿಜುರ್ ಬರೆದುಕೊಂಡಿದ್ದಾರೆ.

ಟಿ 20 ಐ ಸರಣಿಗಾಗಿ ಮುಸ್ತಾಫಿಜುರ್ ತಮ್ಮ ದೇಶಕ್ಕೆ ಮರಳಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಏಪ್ರಿಲ್ 30 ರ ಗಡುವು ನಿಗದಿಪಡಿಸಿತ್ತು. ಆದರೆ, ಮೇ 1 ರಂದು ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಪಿಬಿಕೆಎಸ್ ವಿರುದ್ಧ ಸಿಎಸ್ಕೆ ಪಂದ್ಯದ ಕಾರಣ ಗಡುವನ್ನು ವಿಸ್ತರಿಸಲಾಯಿತು. ಚೆನ್ನೈ ತಂಡ ಮತ್ತು ಬಿಸಿಸಿಐನಿಂದ ವಿನಂತಿಯನ್ನು ಸ್ವೀಕರಿಸಿದ ನಂತರ ಮಂಡಳಿಯು ಗಡುವನ್ನು ವಿಸ್ತರಿಸಿತು.

“ನಾವು ಮುಸ್ತಾಫಿಜುರ್​ಗೆ ಏಪ್ರಿಲ್ 30 ರವರೆಗೆ ಐಪಿಎಲ್​ನಲ್ಲಿ ಆಡಲು ರಜೆ ನೀಡಿದ್ದೆವು, ಆದರೆ ಮೇ 1 ರಂದು ಚೆನ್ನೈನಲ್ಲಿ ಪಂದ್ಯ ಇರುವುದರಿಂದ, ಚೆನ್ನೈ ಮತ್ತು ಬಿಸಿಸಿಐನಿಂದ ವಿನಂತಿಯನ್ನು ಸ್ವೀಕರಿಸಿದ ನಂತರ ನಾವು ಅವರ ರಜೆಯನ್ನು ಒಂದು ದಿನ ವಿಸ್ತರಿಸಿದ್ದೇವೆ” ಎಂದು ಬಾಂಗ್ಲಾದೇಶ ಕ್ರಿಕೆಟ್​ ಸಂಸ್ಥೇಯ ಕ್ರಿಕೆಟ್ ಕಾರ್ಯಾಚರಣೆಗಳ ಉಪ ವ್ಯವಸ್ಥಾಪಕ ಶಹರಿಯಾರ್ ನಫೀಸ್ ಇಎಸ್ಪಿಎನ್ ಕ್ರಿಕ್ಇನ್ಫೋಗೆ ತಿಳಿಸಿದ್ದಾರೆ.

ಪರ್ಪಲ್ ಕ್ಯಾಪ್ ಗೆಲ್ಲುವ ಸ್ಪರ್ಧೆಯಲ್ಲಿದ್ದ ಮುಸ್ತಾಫಿಜುರ್ ಐಪಿಎಲ್ 2024 ರಲ್ಲಿ ಅದ್ಭುತ ಫಾರ್ಮ್​ನಲ್ಲಿದ್ದರು. ಪಂದ್ಯಾವಳಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಅವರು ಮೂರನೇ ಸ್ಥಾನ ಪಡೆದರು. 9 ಪಂದ್ಯಗಳನ್ನಾಡಿರುವ ವೇಗಿ 9.26ರ ಸರಾಸರಿಯಲ್ಲಿ 14 ವಿಕೆಟ್ ಕಬಳಿಸಿದ್ದಾರೆ.

ಪಿಬಿಕೆಎಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ 7 ವಿಕೆಟ್​ಗಳಿಂದ ಸೋತಿದ್ದ ಸಿಎಸ್ಕೆಗೆ ರೆಹಮಾನ್ ಅಲಭ್ಯತೆ ಕಾಡಲಿದೆ. ಯಾಕೆಂದರೆ ಸ್ಟ್ರೈಕ್ ಬೌಲರ್​ , ದೀಪಕ್ ಚಹರ್ ಗಾಯಗೊಂಡ ನಂತರ ಮೈದಾನ ತೊರೆದಿದ್ದರು.

Continue Reading
Advertisement
Rahul Gandhi
ಪ್ರಮುಖ ಸುದ್ದಿ2 mins ago

Rahul Gandhi : ರಾಹುಲ್​ ಮಹಾತ್ಮ, ಗಾಂಧೀಜಿ ಕುತಂತ್ರಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Prajwal Revanna Case Kidnapping case filed against Revanna Anticipatory bail plea postponed
ಕ್ರೈಂ5 mins ago

Prajwal Revanna Case: ರೇವಣ್ಣ ಮೇಲೆ ಕಿಡ್ನ್ಯಾಪ್‌ ಕೇಸ್;‌ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ, ನಾಳೆ SIT ಮುಂದೆ ಹಾಜರ್‌?

Prajwal Revanna Case HD Revanna ready to leave the country SIT issues lookout notice
ಕ್ರೈಂ32 mins ago

Prajwal Revanna Case: ದೇಶ ಬಿಟ್ಟು ಹೋಗಲು ಸಜ್ಜಾದರೇ ಎಚ್.ಡಿ. ರೇವಣ್ಣ? ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ SIT!

IPL 2024
Latest37 mins ago

IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್​, ಪಠಾಣ್​​

Faisal Raza Abidi
ದೇಶ42 mins ago

2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

Wonderla Bengaluru
ಕರ್ನಾಟಕ50 mins ago

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

training for election duty staff in Karwar
ಉತ್ತರ ಕನ್ನಡ53 mins ago

Lok Sabha Election 2024: ಗೊಂದಲಕ್ಕೆ ಅವಕಾಶವಿಲ್ಲದೆ ಚುನಾವಣೆ ನಡೆಸಲು ಉ.ಕ ಡಿಸಿ ಸೂಚನೆ

IPL 2024
ಕ್ರೀಡೆ1 hour ago

IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

Rohith Vemula
ದೇಶ1 hour ago

Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

IPL 2024
Latest2 hours ago

IPL 2024 : ನನ್ನ ನಿದ್ದೆಗೆಡಿಸಿದ್ದ ರೋಹಿತ್​ ಶರ್ಮಾ; ಗಂಭೀರ್​ ಹೀಗೆ ಹೇಳಲು ಕಾರಣವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ5 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ16 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌