IPL 2023: ಫೈನಲ್​ ಪಂದ್ಯಕ್ಕೆ ಮಳೆ ನಿಯಮ ಹೇಗಿದೆ? - Vistara News

ಕ್ರಿಕೆಟ್

IPL 2023: ಫೈನಲ್​ ಪಂದ್ಯಕ್ಕೆ ಮಳೆ ನಿಯಮ ಹೇಗಿದೆ?

ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಗುಜರಾತ್​ ಟೈಟನ್ಸ್​ ವಿರುದ್ಧದ ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಮೀಸಲು ದಿನಕ್ಕೆ ಈ ಪಂದ್ಯವನ್ನು ಮುಂದೂಡಲಾಗುತ್ತದೆ.

VISTARANEWS.COM


on

rain forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​: ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಗುಜರಾತ್​ ಟೈಟನ್ಸ್​ ವಿರುದ್ಧದ ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ಯಾವ ತಂಡಕ್ಕೆ ಲಾಭ, ಫಲಿತಾಂಶ ನಿರ್ಣಯ ಹೇಗೆ ಎಂಬ ಕ್ರಿಕೆಟ್​ ಅಭಿಮಾನಿಗಳ ಹಲವು ಕುತೂಹಲಕ್ಕೆ ಇಲ್ಲಿದೆ ಸಂಪೂರ್ಣ ಉತ್ತರ.

ಅಹಮದಾಬಾದ್​ನಲ್ಲಿ ನಡೆಯುವ ಈ ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇರಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ಕ್ವಾಲಿಫೈಯರ್​ ಪಂದ್ಯಕ್ಕೂ ಮಳೆ ಅಡ್ಡಿ ಪಡಿಸಿ ಪಂದ್ಯ ವಿಳಂಬಗೊಂಡಿತ್ತು. ಇದೀಗ ಫೈನಲ್​ ದಿನ ಮಳೆ ಬಂದರೆ ಏನಾಗಲಿದೆ ಎಂಬುದಕ್ಕೆ ಐಪಿಎಲ್ ಮಂಡಳಿ ಸಂಪೂರ್ಣ ಮಾಹಿತಿ ನೀಡಿದೆ. ಆರಂಭದಲ್ಲಿ ಮಳೆ ನಿಲ್ಲುವ ವರೆಗೆ ಕಾಯಲಾಗುತ್ತದೆ. ಮೊದಲ ಯೋಜನೆಯಂತೆ ಓವರ್​ ಕಡಿತಗೊಳಿಸಿ ಪಂದ್ಯವನ್ನು ಆಡಿಸಲು ನಿರ್ಧಾರಿಸಲಾಗುತ್ತದೆ. ಒಂದೊಮ್ಮೆ ಇದಕ್ಕೂ ಮಳೆ ಅನುವು ಮಾಡಿಕೊಡದಿದ್ದರೆ ಆಗ ರಾತ್ರಿ1.20 ವರೆಗೆ ಕಾದು ಸೂಪರ್​ ಓವರ್​ ಮೂಲಕ ಪಂದ್ಯದ ಫಲಿತಾಂಶಕ್ಕೆ ಮೊರೆಹೋಗಲಾಗುತ್ತದೆ. ಇದು ಕೂಡ ಸಾಧ್ಯವಾಗದಿದ್ದರೆ ಮೀಸಲು ದಿನವಾದ 29ನೇ ತಾರಿಕಿಗೆ ಪಂದ್ಯವನ್ನು ಮುಂದೂಡಲಾಗುತ್ತದೆ.

ಒಂದೊಮ್ಮೆ ಭಾನುವಾರ ಟಾಸ್​ ಗೆದ್ದು ಪಂದ್ಯ ನಡೆಯದೇ ಇದ್ದರೆ ಆಗ ಮೀಸಲು ದಿನ ಹೊಸ ಟಾಸ್​ ಪ್ರಕ್ರಿಕೆ ಮೂಲಕ ಪಂದ್ಯ ಆರಂಭಿಸಲಾಗುತ್ತದೆ. ಇನ್ನೊಂದು ನಿಯಮದ ಪ್ರಕಾರ ಭಾನುವಾರ ಒಂದು ತಂಡ ಬ್ಯಾಟಿಂಗ್​ ನಡೆಸುತ್ತಿದ್ದ ವೇಳೆ ಮಳೆ ಬಂದು ಅಂತಿಮ ನಿಗದಿತ ಸಮಯದಲ್ಲೂ ಪಂದ್ಯ ನಡೆಯದಿದ್ದರೆ, ಆಗ ಮೀಸಲು ದಿನದಂದು ಹಿಂದಿನ ದಿನ ಎಷ್ಟು ಓವರ್​ಗೆ ಪಂದ್ಯ ನಿಂತಿದೆಯೋ ಅಲ್ಲಿಂದ ಪಂದ್ಯ ಮರು ಆರಂಭವಾಗಲಿದೆ. ಉದಾಹರಣೆಗೆ ಭಾನುವಾರ ಒಂದು ತಂಡ 4 ಓವರ್​ ಬ್ಯಾಟಿಂಗ್​ ನಡೆಸಿ ಬಳಿಕ ಮಳೆಯಿಂದ ಪಂದ್ಯ ರದ್ದಾದರೆ ಮೀಸಲು ದಿನ ಉಳಿದ 16 ಓವರ್​ ಆಟವನ್ನು ಆಡಲಿದೆ.

ಇದನ್ನೂ ಓದಿ IPL 2023: ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ; ಚೆನ್ನೈ-ಗುಜರಾತ್​ ನಡುವೆ ಫೈನಲ್​ ಕಾದಾಟ

ಮೀಸಲು ದಿನವೂ ಮಳೆ ಬಂದರೆ ಏನು ಗತಿ

ಒಂದೊಮ್ಮೆ ಮೀಸಲು ದಿನವೂ ಮಳೆಯಿಂದ ಸಂಪೂರ್ಣವಾಗಿ ಪಂದ್ಯ ನಡೆಯದೇ ಇದ್ದರೆ. ಆಗ ಲೀಗ್​ ಹಂತದಲ್ಲಿ ಅಗ್ರಸ್ಥಾನ ಪಡೆದ ತಂಡವನ್ನು ವಿಜಯಿ ಎಂದು ಘೋಷಣೆ ಮಾಡಲಾಗುತ್ತದೆ. ಹೀಗಾದರೆ ಈ ಲಕ್​ ಗುಜರಾತ್​ ತಂಡಕ್ಕೆ ಒಲಿಯಲಿದೆ. ಕಾರಣ ಗುಜರಾತ್​ ಲೀಗ್​ನಲ್ಲಿ 10 ಪಂದ್ಯ ಗೆದ್ದು 20 ಅಂಕ ಸಂಪಾದಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!

Sachin Tendulkar: ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರಿಕೆಟಿಗರಲ್ಲಿ ಒಬ್ಬರಾದ ತೆಂಡೂಲ್ಕರ್ ಒಟ್ಟು ಆಸ್ತಿ 1,354 ಕೋಟಿ ರೂಪಾಯಿ ಇದೆ. ಜಾಗತಿಕ ಶ್ರೀಮಂತ ಕ್ರಿಕೆಟಿರ್​ಗಳಲ್ಲಿ ಒಬ್ಬರು.ಸಚಿನ್‌ ನಿವೃತ್ತಿ ಪಡೆದು ಹತ್ತು ವರ್ಷಗಳು ಕಳೆದರೂ ಇಂದಿಗೂ ಮಾರುಕಟ್ಟೆಯಲ್ಲಿ ಇರುವ ಬಹು ಬೇಡಿಕೆಯ ವ್ಯಕ್ತಿ. ಜಾಹೀರಾತು ಕ್ಷೇತ್ರಗಳಲ್ಲಿಯೂ ಸಚಿನ್‌ಗೆ ಇಂದಿಗೂ ಭಾರಿ ಬೇಡಿಕೆ ಇದೆ. ಸಚಿನ್ ತೆಂಡೂಲ್ಕರ್ ಅವರ ಅತ್ಯಂತ ದುಬಾರಿ ಆಸ್ತಿಗಳ ವಿವರ ಇಲ್ಲಿದೆ!

VISTARANEWS.COM


on

Sachin Tendulkar Net Worth Assets Owned
Koo

ಬೆಂಗಳೂರು: ಕ್ರಿಕೆಟ್ ಜಗತ್ತಿನ ದಂತಕತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರಿಗೆ ಇಂದು (ಏ.24) ಜನುಮದಿನದ (Sachin Birthday) ಸಂಭ್ರಮ. ಸಚಿನ್ ತೆಂಡೂಲ್ಕರ್ (Sachin Tendulkar’s Net Worth) ಇಂದು 51ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಚಿನ್‌ ಶ್ರೇಷ್ಠ ಬ್ಯಾಟರ್‌ ಮಾತ್ರವಲ್ಲದೇ ದೇಶದ ಶ್ರೀಮಂತ ಕ್ರೀಡಾಪಟುಗಳಲ್ಲಿ ಒಬ್ಬರಾಗಿದ್ದಾರೆ. ಸಚಿನ್‌ ನಿವೃತ್ತಿ ಪಡೆದು ಹತ್ತು ವರ್ಷಗಳು ಕಳೆದರೂ ಇಂದಿಗೂ ಮಾರುಕಟ್ಟೆಯಲ್ಲಿ ಇರುವ ಬಹು ಬೇಡಿಕೆಯ ವ್ಯಕ್ತಿ. ಜಾಹೀರಾತು ಕ್ಷೇತ್ರಗಳಲ್ಲಿಯೂ ಸಚಿನ್‌ಗೆ ಇಂದಿಗೂ ಭಾರಿ ಬೇಡಿಕೆ ಇದೆ.

ಕ್ರೀಡೆಯಿಂದ ನಿವೃತ್ತರಾದ ನಂತರ, ಸಚಿನ್ ತೆಂಡೂಲ್ಕರ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್‌ನ (MI) ಮಾರ್ಗದರ್ಶಕರು ಆಗಿದ್ದರು. ತೆಂಡೂಲ್ಕರ್ ಅನೇಕ ಸ್ಟಾರ್ಟ್‌ಅಪ್‌ಗಳಲ್ಲಿ ಹೂಡಿಕೆ ಮಾಡಿದ್ದಾರೆ. ಅವುಗಳಲ್ಲಿ ಸ್ಮಾರ್ಟ್‌ಟ್ರೋನ್‌ಇಂಡಿಯಾ (SmartronIndia) ಸ್ಮ್ಯಾಷ್‌ ಎಂಟರ್‌ಟೈನ್‌ಮೆಂಟ್‌ (Smaaash Entertainment ), ಸ್ಪಿನ್ನಿ, ಇಂಟರ್ನ್ಯಾಷನಲ್ ಟೆನ್ನಿಸ್ ಪ್ರೀಮಿಯರ್ ಲೀಗ್ ಸೇರಿದಂತೆ ಅನೇಕ ವಿವಿಧ ಉದ್ಯಮಗಳಿಗೆ ಹೂಡಿಕೆ ಮಾಡಿದ್ದಾರೆ.

ಬರೋಬ್ಬರಿ 1354 ಕೋಟಿ ರೂ. ಒಡೆಯ ಸಚಿನ್‌ ತೆಂಡೂಲ್ಕರ್. ಭಾರತವಲ್ಲದೆ ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. ತೆಂಡೂಲ್ಕರ್ ಅವರು ಮುಂಬೈನಲ್ಲಿ ಐಷಾರಾಮಿ ಬಂಗಲೆಯನ್ನು ಹೊಂದಿದ್ದಾರೆ. ಅಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ. ಸಚಿನ್‌ ಇನ್ನಿತರ ದುಬಾರಿ ಆಸ್ತಿಗಳನ್ನು ಹೊಂದಿದ್ದಾರೆ. ಅವುಗಳು ಯಾವುವು ಎಂಬುದು ನೋಡೋಣ.

ಇದನ್ನೂ ಓದಿ: Sachin Tendulkar : ಸೋಲಿನ ಹತಾಶೆಯಲ್ಲಿದ್ದ ಕೊಹ್ಲಿಯನ್ನು ತಬ್ಬಿ ಸಂತೈಸಿದ ಸಚಿನ್; ಇಲ್ಲಿದೆ ವಿಡಿಯೊ

  1. – ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ (Bandra-Kurla complex) ಸಚಿನ್ ಅಲ್ಟ್ರಾ ಐಷಾರಾಮಿ ಫ್ಲ್ಯಾಟ್ ಹೊಂದಿದ್ದಾರೆ. 2018ರಲ್ಲಿ ಈ ಫ್ಲ್ಯಾಟ್ ಖರೀದಿಸಿದರು. ವರದಿಗಳ ಪ್ರಕಾರ, ಈ ಫ್ಲ್ಯಾಟ್ ಮೌಲ್ಯ 7.15 ಕೋಟಿ ರೂ.
  2. – ಸಚಿನ್ ಅವರು ಪಲಾಟಿಯಲ್ ಬಾಂದ್ರಾದಲ್ಲಿನ (Palatial Bandra) ಬಂಗಲೆಯ ಮಾಲೀಕರಾಗಿದ್ದಾರೆ. ಈ ಬಂಗಲೆಯ ಈಗಿನ ಮೌಲ್ಯ 39 ಕೋಟಿ ರೂಪಾಯಿ. ವರದಿಯ ಪ್ರಕಾರ, ತೆಂಡೂಲ್ಕರ್ ಅದನ್ನು ಖರೀದಿಸಿದಾಗ ಆ ಬಂಗಲೆ ಶಿಥಿಲಗೊಂಡಿತ್ತು. ಅದಾದ ಬಳಿಕ 45 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಳಿಸಿದರು.
  3. – ಸಚಿನ್‌ 2021ರಲ್ಲಿ ಮಾರಾಟ ಮಾಡಿದ ಐಷಾರಾಮಿ BMW X5 M50d ಕಾರಿನ ಬೆಲೆ 1.78 ಕೋಟಿ ರೂ.
  4. – ಸಚಿನ್ 2.62 ಕೋಟಿ ರೂಪಾಯಿಗೆ ಬಿಎಂಡಬ್ಲ್ಯು ಐ8 ಕಾರನ್ನು ಖರೀದಿಸಿದ್ದರು.
  5. – BMW M5”30 Jahre MS” Limited Edition ದುಬಾರಿ ಕಾರನ್ನು ಸಚಿನ್‌ ಸಹ ಹೊಂದಿದ್ದಾರೆ. ಇದರ ಬೆಲೆ 1.50 ಕೋಟಿ ರೂ.
  6. – ಸಚಿನ್ 2015ರಲ್ಲಿ 1.73 ಕೋಟಿ ರೂ. ಮೌಲ್ಯದ BMW 750 Li M ದುಬಾರಿ ಸ್ಪೋರ್ಟ್ಸ್‌ ಕಾರು ಖರೀದಿಸಿದ್ದರು.
  7. – ಸಚಿನ್ ಅವರಿಗೆ ವಾಚ್‌ಗಳೆಂದರೆ ತುಂಬ ಪ್ರೀತಿ. ಸಚಿನ್‌ ಬಳಿ ಅದೆಷ್ಟೋ ದುಬಾರಿ ವಾಚ್‌ ಕಲೆಕ್ಷನ್‌ಗಳು ಇವೆ. ಆಡೆಮಾರ್ಸ್ ಪಿಕ್ವೆಟ್ (Audemars Piquet) ತಯಾರಿಸಿದ ರಾಯಲ್ ಓಕ್ ಪರ್ಪೆಚುಯಲ್ ಕ್ಯಾಲೆಂಡರ್ (Royal Oak Perpetual Calendar) ವಾಚ್‌ ಬ್ರ್ಯಾಂಡ್‌ ಮಾಲೀಕರಾಗಿದ್ದಾರೆ.
  8. – BMW M6 ಗ್ರ್ಯಾನ್ ಕಪಲ್ ಐಷಾರಾಮಿ ಕಾರು ಕೂಡ ತೆಂಡೂಲ್ಕರ್ ಬಳಿ ಇದೆ. ಈ ಕಾರನ್ನು 2020ರಲ್ಲಿ ಖರೀದಿಸಿದರು ಮತ್ತು ಅದರ ಮೌಲ್ಯ 1.8 ಕೋಟಿ ರೂ. ಈ ಕಾರು ಭಾರತದಲ್ಲಿ ಸಚಿನ್ ಬಳಿ ಮಾತ್ರ ಇದೆ ಎಂಬುದೇ ವಿಶೇಷ.
  9. – ಸಚಿನ್ ಪೋರ್ಷೆ ಕಯೆನ್ನೆ (Porsche Cayenne) ಕಾರು ಹೊಂದಿದ್ದಾರೆ. ಇದರ ಬೆಲೆ 1.93 ಕೋಟಿ ರೂ.
  10. – ಫೆರಾರಿ 360: ಫೆರಾರಿ ( Ferrari 360: Ferrar) ಕಾರ್‌ ಕೂಡ ಸಚಿನ್‌ ಬಳಿ ಇದೆ. 29ನೇ ಟೆಸ್ಟ್ ಶತಕ ಬಾರಿಸಿ ಸರ್ ಡಾನ್ ಬ್ರಾಡ್ಮನ್ ಅವರ ದಾಖಲೆಯನ್ನು (Sir Don Bradman’s) ಸರಿಗಟ್ಟಿದ್ದರು. ಹೀಗಾಗಿ ಫೆರಾರಿ 360: ಫೆರಾರಿ ಕಾರು ಸಚಿನ್‌ ಅವರಿಗೆ ಉಡುಗೊರೆಯಾಗಿ ಬಂದಿತ್ತು. ಆಗ ಫೆರಾರಿ 360: ಫೆರಾರಿ ಕಾರಿನ ಬೆಲೆ 75 ಲಕ್ಷ ರೂಪಾಯಿ. ಬಳಿಕ ಈ ಕಾರನ್ನು 11 ಕೋಟಿ ರೂ. ಗೆ ಸಚಿನ್ ಮಾರಾಟ ಮಾಡಿದರು.

ಇದನ್ನೂ ಓದಿ: Sachin Tendulkar: ಮಹಿಳಾ ದಿನಾಚರಣೆಯಂದು ಭಾವುಕ ಕ್ಷಣದ ಫೋಟೊ ಹಂಚಿಕೊಂಡ ಸಚಿನ್‌

  • – ಸೋಷಿಯಲ್​ ಮೀಡಿಯಾದಲ್ಲೂ ಹಣ ಸಂಪಾದಿಸುತ್ತಿರುವ ಸಚಿನ್​, ಹಲವಾರು ಕಂಪನಿಗಳ ರಾಯಭಾರಿಯೂ ಆಗಿದ್ದಾರೆ. ಅಲ್ಲದೆ, ಆಹಾರ ಉದ್ಯಮದಲ್ಲೂ ಸಚಿನ್​ ಕಾಲಿಟ್ಟಿದ್ದಾರೆ. ಮುಂಬೈ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ರೆಸ್ಟೋರೆಂಟ್‌ಗಳನ್ನು ಹೊಂದಿದ್ದಾರೆ. ಮನರಂಜನೆ, ತಂತ್ರಜ್ಞಾನ ಕಂಪನಿಗಳಲ್ಲೂ ಹೂಡಿಕೆ ಮಾಡಿದ್ದಾರೆ. ಇಂಗ್ಲೆಂಡ್‌ನ ಲಂಡನ್‌ನಲ್ಲೂ ಸಚಿನ್ ಅವರಿಗೆ ಸ್ವಂತ ಮನೆಯಿದೆ. ಲೆಕ್ಕವಿಲ್ಲದಷ್ಟು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ.
Continue Reading

ಪ್ರಮುಖ ಸುದ್ದಿ

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

IPL 2024 : ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 210 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಲಕ್ನೊ ತಂಡ ಇನ್ನೂ 3 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು 213 ರನ್ ಬಾರಿಸಿ ಭರ್ಜರಿ ಗೆಲುವು ದಾಖಲಿಸಿತು.

VISTARANEWS.COM


on

IPL 2024
Koo

ಚೆನ್ನೈ: ಐಪಿಎಲ್​ 2024ನೇ (IPL 2024) 39ನೇ ಪಂದ್ಯದಲ್ಲಿ ತವರು ಅಭಿಮಾನಿಗಳ ಮುಂದೆಯೇ ಚೆನ್ನೈ ತಂಡವನ್ನು ಲಕ್ನೊ ಸೂಪರ್ ಜೈಂಟ್ಸ್ ತಂಡ 6 ವಿಕೆಟ್​ಗಳಿಂದ ಸೋಲಿಸಿದೆ. ಲಕ್ನೊ ತಂಡದ ಬ್ಯಾಟರ್​​ ಮಾರ್ಕಸ್​ ಸ್ಟೊಯ್ನಿಸ್​ 63 ಎಸೆತಕ್ಕೆ ಅಜೇಯ 124 ರನ್ (ಶತಕ) ಬಾರಿಸುವ ಮೂಲಕ ಗೆಲುವಿನ ರೂವಾರಿ ಎನಿಸಿಕೊಂಡರು. ಸಂಕಷ್ಟದಲ್ಲಿದ್ದ ಸಮಯದಲ್ಲಿ ತಂಡಕ್ಕೆ ಏಕಾಂಗಿಯಾಗಿ ಹೋರಾಟ ನಡೆಸಿದ ಸ್ಟೊಯ್ನಿಸ್ ಗೆಲುವು ತಂದುಕೊಟ್ಟರು. ಈ ಮೂಲಕ ಚೆನ್ನೈ ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಅವರ (ಅಜೇಯ 108 ರನ್​) ಶತಕದ ಹೋರಾಟ ವ್ಯರ್ಥಗೊಂಡಿತು. ಇದು ಚೆನ್ನೈ ತಂಡಕ್ಕೆ ಆಡಿರುವ ಎಂಟು ಪಂದ್ಯಗಳಲ್ಲಿ ಐದನೇ ಸೋಲಾಗಿದ್ದು ಅಂಕಪಟ್ಟಿಯಲ್ಲಿ ಒಂದು ಸ್ಥಾನ ಕಳೆದುಕೊಂಡು 5ನೇ ಸ್ಥಾನಕ್ಕೆ ಜಾರಿದೆ. ಅತ್ತ ಲಕ್ನೊ ಸೂಪರ್ ಜೈಂಟ್ಸ್​ ತಂಡ 4ನೇ ಸ್ಥಾನಕ್ಕೇರಿದೆ. ಈ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಆಡಿರುವ 8 ಪಂದ್ಯಗಳಲ್ಲಿ 5 ನೇ ಗೆಲುವಾಗಿದೆ. ಹೀಗಾಗಿ 10 ಅಂಕಗಳನ್ನು ಪಡೆದುಕೊಂಡಿದೆ.

ಇಲ್ಲಿನ ಎಂಎ ಚಿದಂಬರಂ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 210 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಲಕ್ನೊ ತಂಡ ಇನ್ನೂ 3 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು 213 ರನ್ ಬಾರಿಸಿ ಭರ್ಜರಿ ಗೆಲುವು ದಾಖಲಿಸಿತು.

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಲಕ್ನೊ ತಂಡ ಕ್ವಿಂಟನ್ ಡಿ ಕಾಕ್ ಶೂನ್ಯಕ್ಕೆ ಔಟಾಗುವ ಮೂಲಕ ಆರಂಭಿಕ ಆಘಾತ ಎದುರಿಸಿತು. ನಾಯಕ ಕೆ. ಎಲ್ ರಾಹುಲ್ ಕೂಡ 16 ರನ್​ಗೆ ಸೀಮಿತಗೊಂಡರು. ಈ ವೇಳೆ ಆಡಲು ಇಳಿದ ಡಿ ಕಾಕ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಆದರೆ, ನಾಲ್ಕನೇ ಕ್ರಮಾಂಕದಲ್ಲಿ ಅವಕಾಶ ಪಡೆದ ದೇವದತ್​ ಪಡಿಕ್ಕಲ್​ ಪೇಚಾರಿ 19 ಎಸೆತಕ್ಕೆ 13 ರನ್ ಮಾಡಿ ಔಟಾದರು. ಇದು ಲಕ್ನೊ ತಂಡಕ್ಕೆ ಹಿನ್ನಡೆ ಉಂಟು ಮಾಡಿತು.

ನಿಕೋಲಸ್​- ಸ್ಟೊಯ್ನಿಸ್​ ಜತೆಯಾಟ

88 ರನ್​ಗೆ 3 ವಿಕೆಟ್​ ಕಳೆದುಕೊಂಡ ಲಕ್ನೊ ತಂಡ ಅಪಾಯಕ್ಕೆ ಸಿಲುಕಿತು. ಆದರೆ ಈ ವೇಳೆ ಆಡಲು ಬಂದ ನಿಕೋಲಸ್ ಪೂರನ್ ಹಾಗೂ ಸ್ಪೊಯ್ನಿಸ್​ 70 ರನ್​ಗಳ ಜತೆಯಾಟ ಆಡಿದರು. ಆದರೆ, 15 ಎಸೆತಕ್ಕೆ 34 ರನ್ ಬಾರಿಸಿದ ಪೂರನ್​ ಔಟಾದ ಬಳಿಕ ಮತ್ತೆ ತೊಂದರೆ ಎದುರಾಯಿತು. ಆದರೆ ಯಾವುದಕ್ಕೂ ಕ್ಯಾರೆ ಎನ್ನದ ಸ್ಟೊಯ್ನಿಸ್​ 56 ಎಸೆತಕ್ಕೆ ಶತಕ ಪೂರೈಸಿದರು. ಕೊನೇ ತನಕ ನಿಂತು ಆಡಿ ಗೆಲ್ಲಿಸಿದರು. ಕೊನೆಯಲ್ಲಿ ದೀಪಕ್ ಹೂಡಾ 6 ಎಸೆತಕ್ಕೆ 17 ರನ್ ಬಾರಿಸಿದರು.

ಇದನ್ನೂ ಓದಿ: Virat kohli : ಅಂಪೈರ್​ಗಳ ಕೈ ಕುಲುಕಲೂ ನಿರಾಕರಿಸಿದ್ದ ವಿರಾಟ್​ ಕೊಹ್ಲಿ; ವಿಡಿಯೊ ಇದೆ

ಋತುರಾಜ್ ಶತಕದ ಆಟ

ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡವೂ ಉತ್ತಮವಾಗಿ ಆಡಲಿಲ್ಲ. ಅಜಿಂಕ್ಯ ರಹಾನೆ1 ರನ್​ ಗೆ ನಿರ್ಗಮಿಸಿದರು. ಆದರೆ ಮತ್ತೊಂದು ತುದಿಯಲ್ಲಿ ಋತುರಾಜ್ ಗಾಯಕ್ವಾಡ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಬಳಿಕ ಡ್ಯಾರಿಲ್ ಮಿಚೆಲ್​ 11 ಹಾಗೂ ಜಡೇಜಾ 16 ರನ್​ ಬಾರಿಸಿ ಔಟಾದರು. ಆದರೆ, 27 ಎಸೆತಕ್ಕೆ 66 ರನ್ ಬಾರಿಸಿದ ಶಿವಂ ದುಬೆ ದೊಡ್ಡ ಮೊತ್ತ ಪೇರಿಸಲು ನೆರವಾದರು.

Continue Reading

ಪ್ರಮುಖ ಸುದ್ದಿ

Virat kohli : ಅಂಪೈರ್​ಗಳ ಕೈ ಕುಲುಕಲೂ ನಿರಾಕರಿಸಿದ್ದ ವಿರಾಟ್​ ಕೊಹ್ಲಿ; ವಿಡಿಯೊ ಇದೆ

Virat kohli: ಕೆಕೆಆರ್​ನ ಹರ್ಷಿತ್ ರಾಣಾ ಅವರ ಹೈಫುಲ್​ಟಾಸ್​ಗೆ ಕೊಹ್ಲಿ ಔಟ್ ಆಗಿದ್ದರು. ಡಿಆರ್​ಎಸ್​​ ಕೋರಿದ ಹಿನ್ನೆಲೆಯಲ್ಲಿ ನಿರ್ಧಾರವನ್ನು ಮೂರನೇ ಅಂಪೈರ್​ಗೆ ಶಿಫಾರಸು ಮಾಡಲಾಯಿತು. ರಿಪ್ಲೇಗಳು ಅಪೂರ್ಣವಾಗಿದ್ದರೂ, ಮೈದಾನದಲ್ಲಿನ ನಿರ್ಧಾರಕ್ಕೆ ಅಂಪೈರ್​ ಬೆಂಬಲ ಕೊಟ್ಟರು. ಇದರ ಪರಿಣಾಮವಾಗಿ ಕೊಹ್ಲಿ ಏಳು ಎಸೆತಗಳಲ್ಲಿ 18 ರನ್ ಗಳಿಸಿದ ನಂತರ ಕ್ರೀಸ್​ನಿಂದ ನಿರ್ಗಮಿಸಬೇಕಾಯಿತು.

VISTARANEWS.COM


on

Virat Kohli
Koo

ಕೋಲ್ಕತಾ: ಇಲ್ಲಿನ ಈಡನ್ ಗಾರ್ಡನ್ಸ್ ನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ (virat kohli))ವಿವಾದಕ್ಕೆ ಸಿಲುಕಿದ್ದಾರೆ. ಎರಡನೇ ಇನ್ನಿಂಗ್ಸ್​ನ ಮೂರನೇ ಓವರ್​ನಲ್ಲಿ ಸ್ಟಾರ್ ಬ್ಯಾಟ್ಸ್ಮನ್ ಔಟಾಗಿರುವ ರೀತಿ ಅಂಪೈರಿಂಗ್ ನಿರ್ಧಾರದ ಬಗ್ಗೆ ಬಿಸಿ ಚರ್ಚೆಯನ್ನು ಹುಟ್ಟುಹಾಕಿತು.

ಕೆಕೆಆರ್​ನ ಹರ್ಷಿತ್ ರಾಣಾ ಅವರ ಹೈಫುಲ್​ಟಾಸ್​ಗೆ ಕೊಹ್ಲಿ ಔಟ್ ಆಗಿದ್ದರು. ಡಿಆರ್​ಎಸ್​​ ಕೋರಿದ ಹಿನ್ನೆಲೆಯಲ್ಲಿ ನಿರ್ಧಾರವನ್ನು ಮೂರನೇ ಅಂಪೈರ್​ಗೆ ಶಿಫಾರಸು ಮಾಡಲಾಯಿತು. ರಿಪ್ಲೇಗಳು ಅಪೂರ್ಣವಾಗಿದ್ದರೂ, ಮೈದಾನದಲ್ಲಿನ ನಿರ್ಧಾರಕ್ಕೆ ಅಂಪೈರ್​ ಬೆಂಬಲ ಕೊಟ್ಟರು. ಇದರ ಪರಿಣಾಮವಾಗಿ ಕೊಹ್ಲಿ ಏಳು ಎಸೆತಗಳಲ್ಲಿ 18 ರನ್ ಗಳಿಸಿದ ನಂತರ ಕ್ರೀಸ್​ನಿಂದ ನಿರ್ಗಮಿಸಬೇಕಾಯಿತು.

ಈ ನಿರ್ಧಾರದಿಂದ ಅಸಮಾಧಾನಗೊಂಡ ಕೊಹ್ಲಿ ಆನ್ ಫೀಲ್ಡ್ ಅಂಪೈರ್ ಗಳೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದರು. ಅದೇ ಕೋಪವನ್ನು ಅವರು ಕೊನೇ ತನಕ ಇಟ್ಟುಕೊಂಡಿದ್ದರು. ಪಂದ್ಯ ಮುಗಿದ ಬಳಿಕ ಕೈಕುಲುಕಲು ನಿರಾಕರಿಸಿದ್ದರಯ. ಈ ಕ್ಷಣವನ್ನು ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಯಿತು.

ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ವಿರಾಟ್ ಕೊಹ್ಲಿಗೆ ಪಂದ್ಯದ ಶುಲ್ಕದ ಶೇಕಡಾ 50ರಷ್ಟು ದಂಡ ವಿಧಿಸಿದ ಐಪಿಎಲ್ ಅಧಿಕಾರಿಗಳು ಈ ಘಟನೆಯನ್ನು ಗಮನಿಸದೆ ಹೋಗಲಿಲ್ಲ.  ಐಪಿಎಲ್ ಹೇಳಿಕೆಯ ಪ್ರಕಾರ, ಕೊಹ್ಲಿಯ ಕ್ರಮಗಳು ನೀತಿ ಸಂಹಿತೆಯ ಆರ್ಟಿಕಲ್ 2.8 ರ ಅಡಿಯಲ್ಲಿ ಲೆವೆಲ್ 1 ಅಪರಾಧವಾಗಿದೆ. ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: Fantasy Gaming : 8ನೇ ಕ್ಲಾಸ್​ ಫೇಲ್​, ಕ್ರಿಕೆಟ್​ ಗೊತ್ತಿಲ್ಲ; ಆದ್ರೂ ಒಲಿಯಿತು ಕ್ರಿಕೆಟ್​ ಫ್ಯಾಂಟಸಿ ಗೇಮ್​ನಲ್ಲಿ 1.5 ಕೋಟಿ ರೂ!

ಕ್ರಿಕೆಟ್ ಜಗತ್ತಿನಲ್ಲಿ ವಿವಾದಗಳು ಅಸಾಮಾನ್ಯವಲ್ಲವಾದರೂ, ಕೊಹ್ಲಿಯ ಪ್ರತಿಕ್ರಿಯೆಯು ಸ್ಪರ್ಧಾತ್ಮಕ ಪಂದ್ಯಗಳಲ್ಲಿ ಆಟಗಾರರು ಅನುಭವಿಸುವ ತೀವ್ರ ಭಾವನೆಗಳನ್ನು ಒತ್ತಿಹೇಳುತ್ತದೆ.

Virat Kohli : ವಿರಾಟ್ ಕೊಹ್ಲಿಯ 50ನೇ ಏಕದಿನ ಕ್ರಿಕೆಟ್​ ಶತಕಕ್ಕೆ ಅಂತಾರಾಷ್ಟ್ರೀಯ ಗೌರವ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಸೆಮಿಫೈನಲ್​ನಲ್ಲಿ ಪಂದ್ಯದಲ್ಲಿ ಭಾರತೀಯ ಬ್ಯಾಟರ್​ ವಿರಾಟ್ ಕೊಹ್ಲಿ (Virat Kohli) ತಮ್ಮ 50 ನೇ ಏಕದಿನ ಶತಕವನ್ನು ಗಳಿಸಿದ್ದರು. ಈ ಮೂಲಕ ಅವರು ಸಚಿನ್ ತೆಂಡೂಲ್ಕರ್​ ಅವರ 49 ಏಕ ದಿನ ಶತಕಗಳ ಸಾಧನೆಯನ್ನು ಮುರಿದಿದ್ದರು. ಹೀಗಾಗಿ ಅದು ಕ್ರೀಡಾ ಇತಿಹಾಸದಲ್ಲಿ ಚಾರಿತ್ರಿಕ ಘಟನೆಯಾಗಿದೆ. ಅವರು ಶತಕ ಬಾರಿಸಿದ ಬಳಿಕ ದೇಶ ವಿದೇಶಗಳ ಅಥ್ಲೀಟ್​ಗಳಿಂದ ಭಾರೀ ಮೆಚ್ಚುಗೆ ಗಳಿಸಿದ್ದಾರೆ. ಇದೀಗ ಅವರ ಆ ಅವಿಸ್ಮರಣೀಯ ಶತಕಕ್ಕೆ ಅಂತಾರಾಷ್ಟ್ರೀಯ ಗೌರವವೊಂದು ದೊರಕಿದೆ ಎಂಬುದಾಗಿ ವರದಿಯಾಗಿದೆ. ಕೊಹ್ಲಿಯ ಅಭಿಮಾನಿ ಎಂಬ ಹೆಸರಲ್ಲಿ ಸೃಷ್ಟಿ ಮಾಡಿರುವ ಎಕ್ಸ್​ ಖಾತೆಯಲ್ಲಿ ಈ ಮಾಹಿತಿಹಂಚಿಕೊಳ್ಳಲಾಗಿದೆ.

ಸ್ಪೇನ್ ನ ಮ್ಯಾಡ್ರಿಡ್ ನ ಪಲಾಸಿಯೊ ಡಿ ಸಿಬೆಲೆಸ್ ನಲ್ಲಿ ಸೋಮವಾರ (ಏಪ್ರಿಲ್ 22) ನಡೆದ ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ ನಲ್ಲಿ ಕೊಹ್ಲಿಯ ಈ ಅಸಾಧಾರಣ ಸಾಧನೆಯನ್ನು ಉನ್ನತ ಕ್ರೀಡಾ ಕ್ಷಣಗಳಲ್ಲಿ ಒಂದಾಗಿ ಗೌರವಿಸಲಾಗಿದೆ ಎಂದು ಎಕ್ಸ್​ನಲ್ಲಿ ಬರೆಯಲಾಗಿದೆ.

ಈ ಮನ್ನಣೆ ನಿಸ್ಸಂದೇಹವಾಗಿ ಅರ್ಹವಾಗಿದೆ. ಏಕೆಂದರೆ ಮುಂಬೈನ ಕ್ರಿಕೆಟ್​ ಪ್ರೇಕ್ಷಕರು ಕೊಹ್ಲಿ ಇತಿಹಾಸವನ್ನು ನಿರ್ಮಿಸುವುದಕ್ಕೆ ಸಾಕ್ಷಿಯಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ದಾಖಲೆಯ ಶತಕ ಬಾರಿಸುವ ಮೂಲಕ ತಮ್ಮ 35 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕೊಹ್ಲಿ, ವಿಶ್ವಕಪ್​ನ ಮೊದಲ ಸೆಮಿಫೈನಲ್​​ನಲ್ಲಿ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದರು.

ಎರಡು ದಶಕಗಳ ಕಾಲ ರಾಷ್ಟ್ರದ ಭರವಸೆಗಳನ್ನು ಹೊತ್ತ ಬ್ಯಾಟಿಂಗ್ ದಂತಕಥೆ ಸಚಿನ್ ಅವರ ಹೆಜ್ಜೆಗಳನ್ನು ಅನುಸರಿಸಿ, ಸಚಿನ್ ತೆಂಡೂಲ್ಕರ್ ಅವರ ಸ್ಮರಣೀಯ ವಿಶ್ವಕಪ್ ವಿದಾಯದ 12 ವರ್ಷಗಳ ನಂತರ, ಕೊಹ್ಲಿ 50 ನೇ ಏಕದಿನ ಶತಕವನ್ನು ತಲುಪಿದರು.

Continue Reading

ಕ್ರೀಡೆ

Fantasy Gaming : 8ನೇ ಕ್ಲಾಸ್​ ಫೇಲ್​, ಕ್ರಿಕೆಟ್​ ಗೊತ್ತಿಲ್ಲ; ಆದ್ರೂ ಒಲಿಯಿತು ಕ್ರಿಕೆಟ್​ ಫ್ಯಾಂಟಸಿ ಗೇಮ್​ನಲ್ಲಿ 1.5 ಕೋಟಿ ರೂ!

Fantasy Gaming: ನನಗೆ ತುಂಬಾ ಸಂತೋಷವಾಯಿತು. ನಂಬಲಾಗಲಿಲ್ಲ. ಆರಂಭದಲ್ಲಿ ಇದು ವಂಚನೆ ಎಂದು ಭಾವಿಸಿದೆ. ಅಪ್ಲಿಕೇಶನ್ ಗಳಲ್ಲಿ ಎಂದಿಗೂ ಹಣ ಬರುವುದಿಲ್ಲ ಎಂದು ನಂಬಿದ್ದೆ .ನಾನು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತೇನೆ. ನಡುವೆ ನಾನು ಕಳೆದ ಆರು ತಿಂಗಳಿನಿಂದ ಫ್ಯಾಂಟಸಿ ಗೇಮಿಂಗ್ ಆಡುತ್ತಿದ್ದೇನೆ. ಭಾನುವಾರ, ನನಗೆ ಯಾವುದೇ ಕೆಲಸವಿರಲಿಲ್ಲ ಎಂದು ಓಜಾ ಹೇಳಿದ್ದಾನೆ.

VISTARANEWS.COM


on

Fantasy Gaming
Koo

ಬೆಂಗಳೂರು: ಅದೃಷ್ಟ ಯಾವಾಗ ಬಾಗಿಲು ಬಡಿದು ಮನೆಯೊಳಗೆ ನುಗ್ಗುತ್ತದೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ. ಯಾಕೆಂದರೆ ಅದು ಅನಿರೀಕ್ಷಿತ, ಅಚ್ಚರಿ ಮತ್ತು ಅಪರೂಪ. ಇಂಥದ್ದೇ ಒಬ್ಬ ಅದೃಷ್ಟ ಶಾಲಿಯ ಪರಿಚಯವನ್ನು ನಿಮಗೆ ಮಾಡಿಸಬೇಕಾಗಿದೆ. ಅವರೇ ಬಿಹಾರದ ದೀಪು ಓಜಾ. ಭಾನುವಾರ ನಡೆದ ಕೆಕೆಆರ್ ಮತ್ತು ಆರ್​ಸಿಬಿ ನಡುವಿನ ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಗೇಮಿಂಗ್ ಅಪ್ಲಿಕೇಶನ್​ನಲ್ಲಿ (Fantasy Gaming) ಐಪಿಎಲ್ ಫ್ಯಾಂಟಸಿ ಗೇಮಿಂಗ್ (Fantasy Gaming) ಆಡುವ ಮೂಲಕ ಬಿಹಾರದ ಅರ್ರಾ ಜಿಲ್ಲೆಯ ಕೊಹ್ಡಾ ಗ್ರಾಮದ ಈತ 1.5 ಕೋಟಿ ರೂಪಾಯಿ ಬಹುಮಾನ ಗೆದ್ದಿದ್ದಾನೆ. ಅವರು ಪಂದ್ಯದಲ್ಲಿ ಆಂಡ್ರೆ ರಸೆಲ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿ ಅದೃಷ್ಟಶಾಲಿ ಎನಿಸಿಕೊಂಡಿದ್ದಾರೆ. ಅಂದ ಹಾಗೆ ಓಜಾ 8 ನೇ ತರಗತಿಯಲ್ಲಿ ಫೇಲ್​, ಹಾಗೂ ಕಾರ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಾನೆ. ಕ್ರಿಕೆಟ್​ನ ಗಂಧ ಗಾಳಿ ಗೊತ್ತಿಲ್ಲ.

ಕ್ರಿಕೆಟ್ ಬಗ್ಗೆ ನನಗೆ ಏನೂ ತಿಳಿದಿಲ್ಲ ಎಂಬುದಾಗಿ ಓಜಾ ಹೇಳಿದ್ದಾನೆ. ನನಗೆ ಬೇರೆ ಕೆಲಸವಿಲ್ಲದ ಕಾರಣ ಆಕಸ್ಮಿಕವಾಗಿ ತಂಡವನ್ನು ಆಯ್ಕೆ ಮಾಡಿದೆ ಎಂದಿದ್ದಾನೆ. “ನನಗೆ ತುಂಬಾ ಸಂತೋಷವಾಯಿತು. ನಂಬಲಾಗಲಿಲ್ಲ. ಆರಂಭದಲ್ಲಿ ಇದು ವಂಚನೆ ಎಂದು ಭಾವಿಸಿದೆ. ಅಪ್ಲಿಕೇಶನ್ ಗಳಲ್ಲಿ ಎಂದಿಗೂ ಹಣ ಬರುವುದಿಲ್ಲ ಎಂದು ನಂಬಿದ್ದೆ .ನಾನು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತೇನೆ. ನಡುವೆ ನಾನು ಕಳೆದ ಆರು ತಿಂಗಳಿನಿಂದ ಫ್ಯಾಂಟಸಿ ಗೇಮಿಂಗ್ ಆಡುತ್ತಿದ್ದೇನೆ. ಭಾನುವಾರ, ನನಗೆ ಯಾವುದೇ ಕೆಲಸವಿರಲಿಲ್ಲ. ಹೀಗಾಗಿ ತಂಡವನ್ನು ರಚಿಸಿದೆ. ಇದು ಕೆಕೆಆರ್ ಮತ್ತು ಆರ್​​ಸಿಬಿ ನಡುವಿನ ಪಂದ್ಯ ಎಂದು ಎಂದು ಓಜಾ ಹೇಳಿದ್ದಾನೆ.

ಇದನ್ನೂ ಓದಿ: Mohammad Rizwan : ಪಾಕ್​ ಬ್ಯಾಟರ್​ನನ್ನು ಬ್ರಾಡ್ಮನ್ ಎಂದು ಹೊಗಳಿದ ನಾಯಕ; ಗೊಳ್ಳೆಂದು ನಗುತ್ತಿರುವ ನೆಟ್ಟಿಗರು!

ಸಿಕ್ಕಿರುವ ದುಡ್ಡನ್ನು ಏನು ಮಾಡಬೇಕೆಂದು ಆತ ಇನ್ನೂ ನಿರ್ಧರಿಸಿಲ್ಲವಂತೆ. ಅಂದ ಹಾಗೆ ಫ್ಯಾಂಟಿಸಿ ಗೇಮ್​ಗಳು ಲೀಗ್​ ಕ್ರಿಕೆಟ್​ ಬೆಳವಣಿಗೆ ಬಳಿಕ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕ್ರಿಕೆಟ್​ ನೋಡುವ ಜತೆಗೆ ಆಟ ಆರಂಭಕ್ಕೆ ಮೊದಲು ತಂಡಗಳನ್ನು ರಚಿಸಿ ಬಹುಮಾನಗಳನ್ನು ಗೆಲ್ಲುತ್ತಿದ್ದಾರೆ. ಫ್ಯಾಂಟಸಿ ಗೇಮ್​ಗಳು ಒಂದರ್ಥದಲ್ಲಿ ಬದಲಾದ ಜಗತ್ತಿನಲ್ಲಿ ಹೊಸ ಸ್ಪರ್ಧಾ ವೇದಿಕೆಯಾಗಿದೆ. ಆದರೆ, ಅಪಾಯಕಾರಿಯೂ ಹೌದು. ಆ್ಯಪ್​​ಗಳಲ್ಲಿ ಆಡುವಾಗ ಅದಕ್ಕಾಗಿ ನಿರ್ದಿಷ್ಟ ಮೊತ್ತವನ್ನು ಕಷ್ಟಬೇಕಾಗುತ್ತದೆ. ಒಂದರ್ಥದಲ್ಲಿ ಕಾನೂನುಬದ್ಧ ಜೂಜು. ಹಣದಾಸೆಗೆ ಬೀಳುವ ಕೆಲವರು ಇದೇ ವೇದಿಕೆಗಳ ಮೂಲಕ ಲಕ್ಷಾಂತರ ರೂಪಾಯಿ ನಷ್ಟ ಮಾಡಿಕೊಂಡಿದ್ದಾರೆ ಎಂಬ ವರದಿಗಳು ಆಗಿವೆ. ಮದ್ಯಪಾನದ ರೀತಿಯಲ್ಲಿಯೇ ಫ್ಯಾಂಟಸಿ ಗೇಮ್​ಗಳ ಜಾಹೀರಾತು ನೀಡುವಾಗ ಮುಂದಾಗುವ ಅಪಾಯಗಳ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ.

Rohit Sharma : ಇಶಾನ್​ ಕಿಶನ್ ಜತೆ ಮಗುವಿನಂತೆ ಕ್ರಿಕೆಟ್​ ಆಡಿದ ರೋಹಿತ್​ ಶರ್ಮಾ

ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ (Rajastan Royals ) ಮತ್ತು ಮುಂಬೈ ಇಂಡಿಯನ್ಸ್ (Mumbai Indians ) ನಡುವಿನ ಬಹುನಿರೀಕ್ಷಿತ ಐಪಿಎಲ್​ 2024ರ (IPL 2024) ಮುಖಾಮುಖಿಗೆ ಸಿದ್ಧತೆ ನಡೆಸುವ ವೇಳೆ ರೋಹಿತ್ ಶರ್ಮಾ (Rohit Sharma) ಅವರ ಬ್ಯಾಟಿಂಗ್​ ನೆಟ್ಟಿಗರ ಗಮನ ಸೆಳೆದಿದೆ. ಅವರ ಇಶಾನ್ ಕಿಶನ್​ಗೆ ವಿಕೆಟ್​ಕೀಪಿಂಗ್​ ಅಭ್ಯಾಸ ಮಾಡಲು ಮಕ್ಕಳಂತೆ ಬ್ಯಾಟ್ ಹಿಡಿದು ಬೀಸಿದ ಪ್ರಸಂಗ ನಡೆಯಿತು. ಏಪ್ರಿಲ್ 22 ರ ಸೋಮವಾರ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಮುಖಾಮುಖಿಗೆ ಮುಂಚಿತವಾಗಿ ಇವರಿಬ್ಬರು ಕ್ಯಾಚಿಂಗ್ ಅಭ್ಯಾಸದಲ್ಲಿ ತೊಡಗಿದ್ದರು. ಅದು ಸಣ್ಣ ಮಕ್ಕಳು ಆಡುವಂತೆ ಕಂಡು ಬಂತು.

ಮುಂಬೈ ಇಂಡಿಯನ್ಸ್ ಟ್ವಿಟರ್ ಹ್ಯಾಂಡಲ್ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ರೋಹಿತ್ ಶರ್ಮಾ ಇಶಾನ್ ಕಿಶನ್ ಅವರ ವಿಕೆಟ್ ಕೀಪಿಂಗ್ ಕೌಶಲವನ್ನು ಹೆಚ್ಚಿಸಲು ಬ್ಯಾಟ್​ನಿಂದ ಸಣ್ಣ ಸಣ್ಣ ಹೊಡೆತಗಳನ್ನು ಹೊಡೆಯುತ್ತಿದ್ದರು. ಅದನ್ನು ಇಶಾನ್​ ಹಿಡಿಯುತ್ತಿದ್ದರು. ಈ ಅಭ್ಯಾಸದಿಂದ ಇಬ್ಬರಿಗೂ ಸಾಕಷ್ಟು ಲಾಭವಾಗುತ್ತದೆ.

ಇಶಾನ್ ರೋಹಿತ್ ಕಡೆಗೆ ಚೆಂಡುಗಳನ್ನು ಎಸೆದಾಗ ಇಬ್ಬರು ಆಟಗಾರರ ನಡುವಿನ ಸ್ನೇಹವು ಸ್ಪಷ್ಟವಾಯಿತು. ರೋಹಿತ್ ಶರ್ಮಾ ಕಿಶನ್​​ಗೆ ಕಡಿಮೆ ಅಂತರ ಕ್ಯಾಚ್​ಗಳನ್ನು ನೀಡುವಲ್ಲಿ ಅತಿ ಹೆಚ್ಚು ಉತ್ಸಾ ಹ ತೋರಿದ್ದರು. ಹಿರಿಯ ಆಟಗಾರರು ಯುವ ಪ್ರತಿಭೆಗಳಿಗೆ ಮಾರ್ಗದರ್ಶನ ನೀಡುವ ಇಂತಹ ನಿದರ್ಶನಗಳು ಮುಂಬೈ ಇಂಡಿಯನ್ಸ್ ನಂಥ ತಂಡಗಳಲ್ಲಿ ಮಾತ್ರ ಕಾಣಿಸುತ್ತದೆ. ಉಳಿದಂತೆ ತರಬೇತುದಾರರು ಹಾಗೂ ಸಹಾಯಕ ಸಿಬ್ಬಂದಿ ಇಂಥದ್ದಕ್ಕೆಲ್ಲ ನೆರವಾಗುತ್ತಾರೆ.

Continue Reading
Advertisement
Patanjali Case
ದೇಶ19 mins ago

Patanjali Case: ಪತಂಜಲಿ ಕೇಸ್‌; ಜಾಹೀರಾತು ಮೂಲಕ ಕ್ಷಮೆ ಕೋರಿದ ಬಾಬಾ ರಾಮ್‌ದೇವ್‌

Road accident in Ankola The biker was burnt to death
ಕ್ರೈಂ19 mins ago

Road Accident: ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Sachin Tendulkar Net Worth Assets Owned
ಕ್ರಿಕೆಟ್40 mins ago

Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!

gold model
ಚಿನ್ನದ ದರ41 mins ago

Gold Rate Today: ಚಿನ್ನದ ಬೆಲೆ ಇಂದು ತುಸು ಏರಿಕೆ; 22K, 24K ಬಂಗಾರದ ಬೆಲೆಗಳನ್ನು ಇಲ್ಲಿ ಖಚಿತಪಡಿಸಿಕೊಳ್ಳಿ

Lok Sabha Election 2024 ID raid in Bengaluru South Lok Sabha constituency 21.15 crore Gold ornaments seized in 2 days
ಕರ್ನಾಟಕ55 mins ago

Lok Sabha Election 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಐಡಿ ರೇಡ್;‌ 2 ದಿನದಲ್ಲಿ 21.15 ಕೋಟಿ ರೂ. ಚಿನ್ನಾಭರಣ ವಶ!

Train Ticket Cancellation
ದೇಶ1 hour ago

Train Ticket Cancellation: ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಆರ್‌ಎಸಿ ಟಿಕೆಟ್‌ ರದ್ದು ಪಡಿಸಿದರೆ ಇನ್ನು ಮುಂದೆ ಕೇವಲ 60 ರೂ. ಕಡಿತ

sam pitroda narendra modi
ಪ್ರಮುಖ ಸುದ್ದಿ1 hour ago

Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

Rajkumar Birth Anniversary Dodmane family visited Rajkumar Samadhi
ಸಿನಿಮಾ2 hours ago

Rajkumar Birth Anniversary: ರಾಜ್ ಕುಮಾರ್ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ

Zero Shadow Day
ವಿಜ್ಞಾನ2 hours ago

Zero Shadow Day: ಇಂದು ಬೆಂಗಳೂರಿನಲ್ಲಿ ನೆರಳೇ ಮೂಡುವುದಿಲ್ಲ; ಅದ್ಯಾಕೆ? ಏನಿದು ʼಶೂನ್ಯ ನೆರಳಿನ ದಿನʼ ?

Karan Johar receives Director of the Year award from Vice President of India
ಬಾಲಿವುಡ್2 hours ago

Karan Johar: ಉಪ ರಾಷ್ಟ್ರಪತಿಯಿಂದ ಪ್ರಶಸ್ತಿ ಸ್ವೀಕರಿಸಿದ ಕರಣ್ ಜೋಹರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌