IPL 2023: ಆರೆಂಜ್-ಪರ್ಪಲ್ ಕ್ಯಾಪ್​ಗೆ ಯಾರ ಮಧ್ಯೆ ಪೈಪೋಟಿ; ಇಲ್ಲಿದೆ ಮಾಹಿತಿ Vistara News
Connect with us

ಕ್ರಿಕೆಟ್

IPL 2023: ಆರೆಂಜ್-ಪರ್ಪಲ್ ಕ್ಯಾಪ್​ಗೆ ಯಾರ ಮಧ್ಯೆ ಪೈಪೋಟಿ; ಇಲ್ಲಿದೆ ಮಾಹಿತಿ

ಈ ಬಾರಿಯ ಐಪಿಎಲ್​ನಲ್ಲಿ ಪರ್ಪಲ್​ ಕ್ಯಾಪ್​ಗಾಗಿ ಗುಜರಾತ್​ ಟೈಟನ್ಸ್​ ತಂಡದ ಮೊಹಮ್ಮದ್​ ಶಮಿ ಮತ್ತು ರಶೀದ್​ ಖಾನ್​ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ.

VISTARANEWS.COM


on

rashid khan and shami
Koo

ಚೆನ್ನೈ: ವಿಶ್ವದ ಕ್ಯಾಶ್​ ರಿಚ್​ ಕ್ರಿಕೆಟ್​ ಲೀಗ್​ 16ನೇ ಆವೃತ್ತಿಯ ಐಪಿಎಲ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನೆರಡು ಪಂದ್ಯಗಳು ಮುಗಿದರೆ ಈ ಆವೃತ್ತಿಗೆ ಅದ್ಧೂರಿ ತರೆ ಬೀಳಲಿದೆ. ಸದ್ಯ ಟೂರ್ನಿಯಲ್ಲಿ ಪರ್ಪಲ್​ ಕ್ಯಾಪ್​ ಮತ್ತು ಆರೆಂಜ್​ ಕ್ಯಾಪ್​ ರೇಸ್​ನಲ್ಲಿರುವ ಆಟಗಾರರು ಯಾರು ಅವರ ಸಾಧನೆ ಏನು ಎಂಬ ಮಾಹಿತಿ ಇಂತಿದೆ.

ಡು ಪ್ಲೆಸಿಸ್​ ಹಿಂದಿಕ್ಕುವರೇ ಗಿಲ್​?

ಸದ್ಯ ಆರ್​ಸಿಬಿ ತಂಡದ ಫಾಪ್​ ಡು ಪ್ಲೆಸಿಸ್​ ​ಅವರು ಅತಿ ಹೆಚ್ಚು ರನ್​ ಗಳಿಸಿ ಆರೆಂಜ್​ ಕ್ಯಾಪ್ ಪಡೆದಿದ್ದಾರೆ. ಅವರು 14 ಪಂದ್ಯಗಳನ್ನು ಆಡಿ 730 ರನ್​ ಬಾರಿಸಿದ್ದಾರೆ. ಇವರನ್ನು ಹಿಂದಿಕ್ಕುವ ಅವಕಾಶ ಗುಜರಾತ್​ ಟೈಟನ್ಸ್​ ತಂಡದ ಆಟಗಾರ ಶುಭಮನ್​ ಗಿಲ್​ಗೆ ಇದೆ. ಗಿಲ್​ ಅವರು 15 ಪಂದ್ಯಗಳಿಂದ 722 ರನ್​ ಗಳಿಸಿದ್ದಾರೆ. ಮುಂಬೈ ವಿರುದ್ಧದ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಗಿಲ್​ 8 ರನ್​ ಬಾರಿಸಿದರೆ ಅಗ್ರಸ್ಥಾನಕ್ಕೇರಲಿದ್ದಾರೆ. ಈಗಾಗಲೇ ಆರ್​ಸಿಬಿ ಸೋತು ಟೂರ್ನಿಯಿಂದ ಹೊರಬಿದ್ದ ಕಾರಣ ಡು ಪ್ಲೆಸಿಸ್​ಗೆ ಗಿಲ್​ ದಾಖಲೆ ಮುರಿಯುವ ಅವಕಾಶವಿಲ್ಲ. ಮೂರನೇ ಸ್ಥಾನದಲ್ಲಿರುವ ಕೊಹ್ಲಿಗೂ ಅಸಾಧ್ಯ. ಹೀಗಾಗಿ ಈ ಬಾರಿ ಗಿಲ್ ಅವರು ಆರೆಂಜ್​ ಕ್ಯಾಪ್​ ಮುಡಿಗೇರಿಸಿಕೊಳ್ಳುವ ಸಾಧ್ಯತೆ ಅಧಿಕ.

ಇದನ್ನೂ ಓದಿ IPL 2023: ಗುಜರಾತ್​-ಮುಂಬೈ ನಡುವೆ ಕ್ವಾಲಿಫೈಯರ್ ಪಂದ್ಯ; ಯಾರಿಗೆ ಒಲಿಯಲಿದೆ ಫೈನಲ್​ ಲಕ್​

ಪರ್ಪಲ್​ ಕ್ಯಾಪ್​ಗೆ ಶಮಿ-ರಶೀದ್​ ಮಧ್ಯೆ ಪೈಪೋಟಿ

ಈ ಬಾರಿಯ ಐಪಿಎಲ್​ನಲ್ಲಿ ಪರ್ಪಲ್​ ಕ್ಯಾಪ್​ಗಾಗಿ ಗುಜರಾತ್​ ಟೈಟನ್ಸ್​ ತಂಡದ ಮೊಹಮ್ಮದ್​ ಶಮಿ ಮತ್ತು ರಶೀದ್​ ಖಾನ್​ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯ ಉಭಯ ಆಟಗಾರರು 15 ಪಂದ್ಯಗಳನ್ನಾಡಿ ಕ್ರಮವಾಗಿ 26 ಮತ್ತು 25 ವಿಕೆಟ್​ ಕಬಳಿಸಿದ್ದಾರೆ. ಮುಂದಿನ ಪಂದ್ಯಗಳಲ್ಲಿ ಯಾರು ಅತಿ ಹೆಚ್ಚು ವಿಕೆಟ್​ ಪಡೆಯಲಿದ್ದಾರೆ ಎಂಬ ಕುತೂಹಲವಿದೆ. ಸದ್ಯ ಇವರಿಬ್ಬರಿಗೆ ಇರುವ ಪ್ರತಿಸ್ಪರ್ಧಿ ಎಂದರೆ ಮುಂಬೈ ಇಂಡಿಯನ್ಸ್​ ತಂಡದ ಪಿಯೂಷ್​ ಚಾವ್ಲಾ. ಅವರು 21 ವಿಕೆಟ್​ ಪಡೆದಿದ್ದಾರೆ. ಮುಂಬೈ ತಂಡ ಇನ್ನೂ ಕೂಡ ರೇಸ್​ನಲ್ಲಿರುವ ಕಾರಣ ಇವರಿಗೆ ಅಗ್ರಸ್ಥಾನಕ್ಕೇರುವ ಅವಕಾಶವಿದೆ.

ಮುಂಬೈvs ಗುಜರಾತ್​ ಕ್ವಾಲಿಫೈಯರ್ ಕಾದಾಟ

ಲಕ್ನೋ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಆತ್ಮ ವಿಶ್ವಾಸ ಹೆಚ್ಚಿಸಿಕೊಂಡಿರುವ ಮುಂಬೈ ಇಂಡಿಯನ್ಸ್​ ತಂಡ ಮಹತ್ವದ ಕ್ವಾಲಿಫೈಯರ್​ ಪಂದ್ಯವನ್ನಾಡಲು ಸಜ್ಜಾಗಿದೆ. ಶುಕ್ರವಾರ ಅಹಮದಾಬಾದ್​ನಲ್ಲಿ ನಡೆಯುವ ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಗುಜರಾತ್​ ತಂಡದ ಸವಾಲು ಎದುರಿಸಲಿದೆ. ಮೇಲ್ನೋಟಕ್ಕೆ ಮುಂಬೈ ಮತ್ತು ಗುಜರಾತ್‌ ಸಮಬಲದ ತಂಡಗಳಾಗಿ ಗೋಚರಿಸುತ್ತಿವೆ. ಎರಡೂ ತಂಡಗಳ ನಾಯಕತ್ವ ಬಲಿಷ್ಠವಾಗಿದೆ. ಆಯ್ಕೆ ಪ್ರಕ್ರಿಯೆ ಸಮತೋಲನದಿಂದ ಕೂಡಿದೆ. ಕೊನೆಯ ನಿಮಿಷದ ತನಕ ಹೋರಾಡುವ ಕೆಚ್ಚು ಎರಡೂ ತಂಡಗಳ ವೈಶಿಷ್ಟ. ಹೀಗಾಗಿ ಸ್ಪರ್ಧೆ ಅತ್ಯಂತ ರೋಚಕವಾಗಿ ಸಾಗುವ ನಿರೀಕ್ಷೆಯಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರಿಕೆಟ್

ICC World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ

ಐಸಿಸಿ ಏಕದಿನ ವಿಶ್ವ ಕಪ್​ ಟೂರ್ನಿಯ ವೇಳಾಪಟ್ಟಿ ಜೂನ್​ 10, ಶನಿವಾರ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

VISTARANEWS.COM


on

Edited by

World Cup schedule
Koo

ಲಂಡನ್​: ಭಾರತದ ಆತಿಥ್ಯದಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವ ಕಪ್​ ಟೂರ್ನಿಯ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಐಸಿಸಿ ಮೂಲಗಳ ಪ್ರಕಾರ ಜೂನ್​ 10 ಶನಿವಾರ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ವರದಿಯಾಗಿದೆ.

ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯ ಲಂಡನ್​ನಲ್ಲಿ ನಡೆಯುತ್ತಿದ್ದರು. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸುತ್ತಿದೆ. ಈ ಪಂದ್ಯ ವೀಕ್ಷಣೆಗೆ ಬಿಸಿಸಿಐ ಅಧಿಕಾರಿಗಳು ಮತ್ತು ಐಸಿಸಿ ಅಧಿಕಾರಿಗಳು ಲಂಡನ್​ನಲ್ಲಿ ಸೇರಿದ್ದಾರೆ. ಇದೇ ವೇಳೆ ಸಭೆ ನಡೆಸಿ ಏಕದಿನ ಟೂರ್ನಿಯ ವೇಳಾಪಟ್ಟಿ ಮತ್ತು ತಾಣಗಳನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಶನಿವಾರ ಇದು ಅಧಿಕೃತ ಪ್ರಕಟನೆ ಮೂಲಕ ಹೊರಬೀಳಲಿದೆ ಎನ್ನಲಾಗಿದೆ. ಅಕ್ಟೋಬರ್​ 5ರಿಂದ ನವೆಂಬರ್‌ 19ರ ವರೆಗೆ ಈ ಕ್ರೀಡಾಕೂಟ ನಡೆಯುವ ಸಾಧ್ಯತೆ ಇದೆ.

ಟೂರ್ನಿಗಾಗಿ ಕನಿಷ್ಠ 10ಕ್ಕೂ ಹೆಚ್ಚು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕೊತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈ ಈ ಪಟ್ಟಿಯಲ್ಲಿ ಸೇರಿವೆ ಎನ್ನಲಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಚೆನ್ನೈನಲ್ಲಿ ನಡೆಯುವ ಸಾಧ್ಯತೆಯಿದೆ. ಪಾಕಿಸ್ತಾನದ ಹೆಚ್ಚಿನ ಪಂದ್ಯಗಳು ಬೆಂಗಳೂರು ಮತ್ತು ಚೆನ್ನೈನಲ್ಲಿ ನಡೆಯಲಿದೆ. ಬಾಂಗ್ಲಾದೇಶದ ಪಂದ್ಯಗಳು ಕೋಲ್ಕತ್ತಾ ಮತ್ತು ಗುವಾಹಟಿಯಲ್ಲಿ ನಡೆಯುವ ಸಾಧ್ಯತೆ ಇದೆ. ಭಾರತ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಪಾಕಿಸ್ತಾನ ತಂಡ ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಪಂದ್ಯ ಆಡುವುದಿಲ್ಲ ಎಂದು ಹೇಳಿದೆ. ಅಂತಿಮ ಪಟ್ಟಿ ಹೇಗೆ ಇರಲಿದೆ ಎಂದು ಶನಿವಾರ ಉತ್ತರ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ World Cup 2023: ಈ ಸ್ಟೇಡಿಯಂನಲ್ಲಿ ಪಾಕ್​ ತಂಡ ಭಾರತ ವಿರುದ್ಧ ವಿಶ್ವ ಕಪ್​ ಆಡಲ್ಲವಂತೆ!

48 ಪಂದ್ಯಗಳು

ಒಟ್ಟು ಹತ್ತು ತಂಡಗಳನ್ನು ಎರಡು ಗುಂಪುಗಳಾಗಿ ಆಡಿಸಲಾಗುತ್ತದೆ. ಹೀಗಾಗಿ 46 ದಿನಗಳಲ್ಲಿ 48 ಪಂದ್ಯಗಳು ನಡೆಯಲಿವೆ. ಅಕ್ಟೋಬರ್-ನವೆಂಬರ್​ನಲ್ಲಿ ಕೆಲ ಪ್ರದೇಶಗಳಲ್ಲಿ ಹಿಂಗಾರು ಮಳೆ ಸಾಧ್ಯತೆ ಇರುವುದರಿಂದ ಅಭ್ಯಾಸ ನಡೆಸುವ ತಾಣಗಳನ್ನು ಬಿಸಿಸಿಐ ಶಿಘ್ರದಲ್ಲೇ ಪ್ರಕಟಿಸಲಿದೆ ಎಂದು ವರದಿ ಮಾಡಿದೆ.

Continue Reading

ಕ್ರಿಕೆಟ್

WTC Final 2023: ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಆಡು; ಔಟಾದ ಬಳಿಕ ಊಟದ ಜತೆ ಬೈಗುಳ ತಿಂದ ಕೊಹ್ಲಿ

ವಿರಾಟ್​ ಕೊಹ್ಲಿ ಅವರು ವಿಶ್ವ ಟೆಸ್ಟ್​​ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಔಟಾದ ತಕ್ಷಣ ಡಗೌಟ್​ನಲ್ಲಿ ಆಹಾರ ಸೇವಿಸಿದ ಕಾರಣಕ್ಕೆ ಟ್ರೋಲ್​ ಆಗಿದ್ದಾರೆ.

VISTARANEWS.COM


on

Edited by

Virat Kohli troll
Koo

ಲಂಡನ್​: ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅವರು ನಿರೀಕ್ಷಿತ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರುವಲ್ಲಿ ಎಡವಿದ್ದಾರೆ. ಆದರೆ ಅವರು ಔಟ್​​ ಆಗಿರುವ ವಿಚಾರವನ್ನು ಹೊರತುಪಡಿಸಿ ಬೇರೆಯೇ ಕಾರಣಕ್ಕೆ ಇದೀಗ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಲಂಡನ್​ನ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ದಿನದಾಟದ ವೇಳೆ ವಿರಾಟ್​ ಅವರು 14 ರನ್​ ಗಳಿಸಿ ವಿಕೆಟ್​ ಕೈಚೆಲ್ಲಿದರು. ಪೆವಿಲಿಯನ್‌ಗೆ ತೆರಳಿದ ವಿರಾಟ್‌ ಕೊಹ್ಲಿ ಯಾವುದೇ ಚಿಂತೆ ಇಲ್ಲದವರಂತೆ ಇಶಾನ್​ ಕಿಶನ್​ ಮತ್ತು ಗಿಲ್​ ಜತೆ ಹರಾಟೆ ಹೊಡೆಯುತ್ತಾ ಆಹಾರ ಸೇವಿಸಿದ್ದಾರೆ. ಇದರ ಫೋಟೊ ಮತ್ತು ವಿಡಿಯೊ ಎಲ್ಲಡೆ ವೈರಲ್​ ಆಗಿದೆ.

ಕೊಹ್ಲಿಯ ಈ ವರ್ತನೆ ಕಂಡ ಅನೇಕ ಟೀಮ್​ ಇಂಡಿಯಾದ ಅಭಿಮಾನಿಗಳು ಮತ್ತು ಕೆಲವು ಕ್ರಿಕೆಟ್​ ಪಂಡಿತರು ಟೀಕೆ ವ್ಯಕ್ತಪಡಿಸಿದ್ದಾರೆ. ಜತೆಗೆ ಅವರನ್ನು ತೀಕ್ಷ್ಣ ಮಾತುಗಳಿಂದ ಟ್ರೋಲ್​ ಮಾಡಿದ್ದಾರೆ. ಐಪಿಎಲ್​ನಲ್ಲಿ ಪಂದ್ಯ ಸೋತಾಗ ಕಣ್ಣೀರು ಸುರಿಸುವ ನೀವು ಭಾರತ ತಂಡಕ್ಕೆ ಆಡುವಾಗ ಮಾತ್ರ ಈ ರೀತಿ ಮಾಡುತ್ತೀರಿ ಇದರ ಅರ್ಥ ನೀವು ಹಣಕ್ಕಾಗಿ ಆಡುತ್ತೀರಿ, ದೇಶಕಾಕ್ಕಾಗಿ ಅಲ್ಲ ಎಂದು ನೆಟ್ಟಿಗರೊಬ್ಬರು ಟ್ರೋಲ್​ ಮಾಡಿದ್ದಾರೆ.

ಇದನ್ನೂ ಓದಿ WTC Final 2023: ಇನಿಂಗ್ಸ್​ ಹಿನ್ನಡೆ ಭಯದಲ್ಲಿ ಟೀಮ್​ ಇಂಡಿಯಾ

ತಂಡ ಸಂಕಷ್ಟದಲ್ಲಿದ್ದರೂ ನೀವು ಈ ರೀತಿ ಆನಂದದಲ್ಲಿರುವುದನ್ನು ಕಾಣುವಾಗ ಭಾರತ ತಂಡಕ್ಕಿಂತ ನಿಮಗೆ ಐಪಿಎಲ್​ ಟೂರ್ನಿಯೇ ಹೆಚ್ಚಾದಂತೆ ಕಾಣುತ್ತಿದೆ ಎಂದು ಮತ್ತೊಬ್ಬ ನೆಟ್ಟಿಗ ಟ್ರೋಲ್​ ಮಾಡಿದ್ದಾರೆ. ಇನ್ನಿ ಕೆಲವರು ಅರೇ ನೀವು ತಿನ್ನುತ್ತಿರುವ ಆಹಾರ ಯಾವುದು? ಎಂದು ಪ್ರಶ್ನೆ ಮಾಡುವ ಮೂಲಕ ಕೊಹ್ಲಿಯ ಕಾಲೆಳೆದಿದ್ದಾರೆ.

ಎಷ್ಟ್ರೇ ಸಾಧನೆ ಮಾಡಿದ್ದರೂ ಹಣಕ್ಕೆ ಆಸೆಪಡುವ ವಿರಾಟ್​ ಕೊಹ್ಲಿಯನ್ನು ಸಚಿನ್​ ತೆಂಡೂಲ್ಕರ್​ ಜತೆ ಯಾವತ್ತೂ ಹೋಲಿ ಮಾಡಬೇಡಿ ಎಂದು ನೆಟ್ಟಿಗೊರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಕೊಹ್ಲಿಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹಲವು ಕಾರಣಕ್ಕೆ ಟ್ರೋಲ್​ ಆಗುತ್ತಿದೆ.

Continue Reading

Live News

WTC Final 2023: ಭಾರತ-ಆಸೀಸ್​ ಮೂರನೇ ದಿನದಾಟದ ಹೈಲೆಟ್ಸ್​

ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದ ಮೂರನೇ ದಿನದಾಟದ ಹೈಲೆಟ್ಸ್​ ಇಲ್ಲಿದೆ.

VISTARANEWS.COM


on

Edited by

ICC World Test Championship Final 2023
Koo

ಲಂಡನ್​: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದ ಮೂರನೇ ದಿನದಾಟದ ಹೈಲೆಟ್ಸ್​ ಇಲ್ಲಿದೆ.

Continue Reading

ಕ್ರಿಕೆಟ್

Wrestlers Protest: ಬ್ರಿಜ್ ಭೂಷಣ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಮಹತ್ವದ ತಿರುವು

ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್ ವಿರುದ್ಧ ಸುಳ್ಳು ಕೇಸು ದಾಖಲಿಸಿರುವುದಾಗಿ ಕೇಸು ನೀಡಿದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಯೂ ಟರ್ನ್​ ಹೊಡೆದಿದ್ದಾರೆ.

VISTARANEWS.COM


on

Edited by

Brij Bhushan Sharan Singh
Koo

ನವದೆಹಲಿ: ಡಬ್ಲ್ಯುಎಫ್ಐ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪ ಪ್ರಕರಣಕ್ಕೆ ಮಹತ್ವದ ತಿರುವೊಂದು ಲಭಿಸಿದೆ. ಬ್ರಿಜ್‌ ಭೂಷಣ್‌ ಅವರನ್ನು ಬಂಧಿಸುವಂತೆ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಜೂನ್​ 15ರ ತನಕ ತಮ್ಮ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ ಬೆನ್ನಲ್ಲೇ ದೂರು ನೀಡಿದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಯೂ-ಟರ್ನ್​ ಹೊಡೆದಿದ್ದಾರೆ.

ಭಾರತೀಯ ಕುಸ್ತಿ ಒಕ್ಕೂಟದ ನಿರ್ಗಮಿತ ಅಧ್ಯಕ್ಷ ಬ್ರಿಜ್​ಭೂಷಣ್​​ ವಿರುದ್ಧ ಲೈಂಗಿಕ ಕಿರುಕುಳದ ಸುಳ್ಳು ದೂರು ದಾಖಲಿಸಿರುವುದಾಗಿ ಅಪ್ರಾಪ್ತ ಬಾಲಕಿಯ ತಂದೆ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಜತೆಗೆ ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳುವುದಾಗಿ ಬಾಲಕಿಯ ತಂದೆ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಅವರ ಈ ಹೇಳಿಕೆಯಿಂದಾಗಿ ಇಷ್ಟು ದಿನ ಎಲ್ಲ ಮಹತ್ವದ ಟೂರ್ನಿಯನ್ನು ಬಹಿಷ್ಕರಿಸಿ ದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದ ಬಜರಂಗ್​ ಪೂನಿಯಾ, ಸಾಕ್ಷಿ ಮಲಿಕ್​, ವಿನೇಶ್​ ಫೋಗಾಟ್​ ಸೇರಿ ಹಲವು ಕುಸ್ತಿಪಟುಗಳ ಹೋರಾಟ ಇದೀಗ ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಪ್ರಕರಣ ದಾಖಲಿಸಲು ಕಾರಣವೇನು?

ಬ್ರಿಜ್​ ಭೂಷಣ್​ ವಿರುದ್ಧ ಈ ಸುಳ್ಳು ಪ್ರಕರಣ ದಾಖಲಿಸಲು ಪ್ರಮುಖ ಕಾರಣ ಏನೆಂಬುದನ್ನು ಕೂಡ ಬಾಲಕಿಯ ತಂದೆ ಹೇಳಿದ್ದಾರೆ. 2022ರಲ್ಲಿ ಲಕ್ನೋದಲ್ಲಿ ನಡೆದಿದ್ದ ಏಷ್ಯನ್ ಅಂಡರ್-17 ಚಾಂಪಿಯನ್‌ಶಿಪ್‌ ಟ್ರಯಲ್ಸ್​ನ ಫೈನಲ್‌ನಲ್ಲಿ ಸೋತ ಬಳಿಕ ತನ್ನ ಮಗಳಿಗೆ ಭಾರತೀಯ ತಂಡಕ್ಕೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ರೆಫ್ರಿಯ ತಪ್ಪು ನಿರ್ಧಾರಗಳಿಂದಾಗಿ ಮಗಳು ಫೈನಲ್​ನಲ್ಲಿ ಸೋಲು ಕಾಣಬೇಕಾಯಿತು. ಇದಕ್ಕೆ ಬ್ರಿಜ್ ಭೂಷಣ್ ಅವರೇ ಕಾರಣ. ಮಗಳ ಒಂದು ವರ್ಷದ ಪರಿಶ್ರಮ ನೀರುಪಾಲಾಯಿತು ಎಂಬ ಕಾರಣಕ್ಕೆ ನಾನು ಬ್ರಿಜ್​ ಭೂಷಣ್​ ವಿರುದ್ಧ ಸೇಡು ತೀರಿಸಿಕೊಳ್ಳಲು ಈ ನಿರ್ಧಾರ ಕೈಗೊಂಡೆ ಎಂದು ಬಾಲಕಿಯ ತಂದೆ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ Wrestlers Protest: ಜೂನ್​ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

ರೆಫ್ರಿ ತಪ್ಪಿಗೆ ಬ್ರಿಜ್​ಭೂಷಣ್​ ಮೇಲೇಕೆ ಕೋಪ?

ರೆಫ್ರಿ ಮಾಡಿದ ತಪ್ಪಿಗೆ ಬ್ರಿಜ್​ ಭೂಷಣ್​ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾಣವೇನು ಎಂದು ಕೇಳಿದ ಪ್ರಶ್ನೆ ಉತ್ತರಿಸಿದ ಬಾಲಕಿಯ ತಂದೆ, ರೆಫರಿಯನ್ನು ನಿಯೋಜಿಸಿದವರು ಯಾರು? ಅದು ಫೆಡರೇಶನ್, ಫೆಡರೇಶನ್ ಮುಖ್ಯಸ್ಥರು ಯಾರು? ಬ್ರಿಜ್​ ಭೂಷಣ್​. ಹೀಗಾಗಿ ಅವರ ಮೇಲೆ ನಾನು ದ್ವೇಷ ಸಾಧಿಸಲು ಮುಂದಾದೆ ಎಂದರು. ಇದೇ ವೇಳೆ ಪಿಟಿಐ ಸಂದರ್ಶಕ, ನೀವು ನೀಡಿದ ದೂರಿನ ಮೇರೆಗೆ ಬ್ರಿಜ್​ ಭೂಷಣ್​ ವಿರುದ್ಧ ಪೋಕ್ಸೋ ಕಾಯ್ದೆಯಡಿ ತನಿಖೆ ನಡೆಯುತ್ತಿದೆ. ಈಗ ಏಕೆ ನೀವು ನಿಮ್ಮ ನಿರ್ಧಾರ ಬದಲಾಯಿದ್ದೀರ ಎಂಬ ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರ ನೀಡಿದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಕೋರ್ಟ್‌ನಲ್ಲಿ ಸತ್ಯ ಹೇಗಾದರೂ ಹೊರಬರುತ್ತದೆ ಎಂದು ನನಗೆ ತಿಳಿದಿದೆ. ಆದರೆ ಇದೀಗ ಅಲ್ಲಿಗೆ ಹೋಗುವಾ ಮೊದಲೇ ಸತ್ಯ ಬಹಿರಂಗಗೊಂಡರೆ ಉತ್ತಮ ಎಂದು ನನಗೆ ಅನಿಸಿತು ಇದೇ ಕಾರಣಕ್ಕೆ ನಾನು ನನ್ನ ತಪ್ಪನ್ನು ಒಪ್ಪಿಕೊಂಡೆ ಎಂದರು.

ಒಂದು ಸೋಲಿಗೆ ಈ ನಿರ್ಧಾರ ಏಕೆ?

ಕೇವಲ ಒಂದು ಪಂದ್ಯದ ಸೋಲಿಗಾಗಿ ನೀವು ಇಷ್ಟು ಕೀಳು ಮಟ್ಟದ ಆರೋಪ ಹೊರಿಸಲು ಕಾರಣವೇನು ಎಂದು ಕೇಳಿದ ಪ್ರಶ್ನೆ ಉತ್ತರಿಸಿದ ಕುಸ್ತಿಪಟುವಿನ ತಂದೆ, ಇದು ನಿಮಗೆ ಕೇವಲ ಒಂದು ಸೋಲಾಗಿ ಕಾಣಬಹುದು. ಆದರೆ ಇದು ಒಂದು ವರ್ಷದ ಕಠಿಣ ಪರಿಶ್ರಮ. ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಕಷ್ಟಪಟ್ಟು ಪುನರಾಗಮನ ಮಾಡುತ್ತಿರುವ ಮಗುವಿನ ನೋವು ಒಬ್ಬ ತಂದೆಗೆ ಮಾತ್ರ ಗೊತ್ತು. ನನ್ನ ಮಗಳ ನೋವನ್ನು ನಾನು ಕಣ್ಣಾರೆ ಕಂಡಿದ್ದೇನೆ. ಆ ಒಂದು ಪಂದ್ಯದ ಸೋಲಿನಿಂದ 4 ಅಂತಾರಾಷ್ಟ್ರೀಯ ಟೂರ್ನಿ ಕೈತಪ್ಪಿತು. ಇದೆಲ್ಲವನ್ನು ಕಂಡ ನಾನು ಅಂತಿಮವಾಗಿ ಈ ನಿರ್ಧಾರವನ್ನು ಕೈಗೊಂಡೆ ಎಂದು ಹೇಳಿದರು.

ದೂರು ಹಿಂಪಡೆಯಲು ಕಾರಣವೇನು?

ತಮ್ಮ ತಪ್ಪನ್ನು ಮತ್ತು ದೂರು ಹಿಂಪಡೆಯುವ ಕುರಿತು ಸ್ಪಷ್ಟನೆ ನೀಡಿರುವ ಕುಸ್ತಿಪಟುವಿನ ತಂದೆ, ತನ್ನ ಮಗಳ ಸೋಲಿನ ಬಗ್ಗೆ ನ್ಯಾಯಯುತ ತನಿಖೆಗೆ ಸರ್ಕಾರ ಭರವಸೆ ನೀಡಿದೆ. ಹಾಗಾಗಿ ನಾನು ನನ್ನ ನಿರ್ಧಾರವನ್ನು ಬದಲಾಯಿಸಿದ್ದೇನೆ ಎಂದು ಹೇಳಿದರು.

Continue Reading
Advertisement
Liquor Consumption of poor man
ಕರ್ನಾಟಕ9 mins ago

Liquor Consumption: ಬಡವನ ಕುಡಿತದ ವಾರ್ಷಿಕ ಲೆಕ್ಕಾಚಾರ ಇಲ್ಲಿದೆ! ದಿನಕ್ಕೆ ಆತನ ಸರಾಸರಿ ಖರ್ಚೆಷ್ಟು?

Anganawadi worker
ಕರ್ನಾಟಕ9 mins ago

Anganawadi worker: ತಂಗಿಗೆ ನನ್ನ ಕೆಲಸ ಕೊಡಿ ಎಂದು ತನ್ನ ಬದುಕಿಗೆ ದುರಂತ ಅಂತ್ಯ ಹಾಡಿದ ಅಂಗನವಾಡಿ ಕಾರ್ಯಕರ್ತೆ!

Apsara Murder In Hyderabad
ಕ್ರೈಂ12 mins ago

Apsara Murder: ಪತ್ನಿ ಇದ್ದರೂ ಅರ್ಚಕನಿಗೆ ಬೇಕು ಲವ್ವರ್;‌ ಆಕೆ ಮದುವೆಯಾಗು ಎಂದಿದ್ದಕ್ಕೆ ಆದ ಕಿಲ್ಲರ್

Siddaramaiah as a conductor imaginary photo
ಕರ್ನಾಟಕ20 mins ago

Congress Guarantee: ಪಾರ್ಟ್‌ ಟೈಂ ಬಸ್ ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!

Actress Nayanthara
South Cinema32 mins ago

Actress Nayanthara: ಅವಳಿ ಮಕ್ಕಳ ಜತೆ ಕ್ಯೂಟ್‌ ಆಗಿ ಫೋಟೊಶೂಟ್‌ ಮಾಡಿಸಿಕೊಂಡ ನಯನತಾರಾ!

rajeev sen and Charu Asopa divorce
ಕಿರುತೆರೆ33 mins ago

Celebrity Divorce: ಸಂಸಾರದಲ್ಲಿ ಬಿರುಕು, ಪತಿಯಿಂದ ದೂರವಾದ ಕಿರುತೆರೆ ನಟಿ

World Cup schedule
ಕ್ರಿಕೆಟ್38 mins ago

ICC World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ

bhola shankar movie set
South Cinema40 mins ago

Chiranjeevi: ಅದ್ಧೂರಿಯಾಗಿದೆ ಭೋಲಾ ಶಂಕರ್‌ ಸೆಟ್‌; ಮತ್ತೊಮ್ಮೆ ಕ್ಯಾಬ್‌ ಡ್ರೈವರ್ ಪಾತ್ರದಲ್ಲಿ ಚಿರು

Darbar Movie Review
South Cinema44 mins ago

Darbar Movie Review: ಇದು ರಾಜಕಾರಣದ ʻದರ್ಬಾರ್‌ʼ, ಮತದಾರರ ಕಾರುಬಾರು!

western ghats in rain
ಪ್ರಮುಖ ಸುದ್ದಿ57 mins ago

Monsoon Travel: ಮಲೆನಾಡಿನ ಮಳೆಹಾಡಿನ ಹೊಸತನ! ರಾಜ್ಯದ ಈ ಟಾಪ್‌ 5 ತಾಣಗಳಿಗೆ ಮಳೆಯಲ್ಲೊಮ್ಮೆ ಭೇಟಿ ಕೊಡಿ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ13 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Cancellation of tenders for 108 ambulances and Dinesh Gundu rao
ಆರೋಗ್ಯ5 hours ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ5 hours ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ6 hours ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ7 hours ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ22 hours ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ23 hours ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ1 day ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ2 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ2 days ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ3 days ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

ಟ್ರೆಂಡಿಂಗ್‌

error: Content is protected !!