IPL 2023: ರಾಯಲ್ಸ್​ ಬ್ಯಾಟಲ್ಸ್​ನಲ್ಲಿ ಯಾರಿಗೆ ಗೆಲುವು; ಆರ್​ಸಿಬಿ-ರಾಜಸ್ಥಾನ್​ ಮುಖಾಮುಖಿ - Vistara News

ಕ್ರಿಕೆಟ್

IPL 2023: ರಾಯಲ್ಸ್​ ಬ್ಯಾಟಲ್ಸ್​ನಲ್ಲಿ ಯಾರಿಗೆ ಗೆಲುವು; ಆರ್​ಸಿಬಿ-ರಾಜಸ್ಥಾನ್​ ಮುಖಾಮುಖಿ

ಭಾನುವಾರದ ಮೊದಲ ಐಪಿಎಲ್​ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್​ ಮತ್ತುರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಅದೃಷ್ಟ ಪರೀಕ್ಷೆಗೆ ಇಳಿಯಲಿವೆ.

VISTARANEWS.COM


on

Rajasthan Royals vs Royal Challengers Bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ಭಾನುವಾರ ನಡೆಯುವ ಐಪಿಎಲ್​ನ ಡಬಲ್​ ಹೆಡರ್​ನ ಮೊದಲ ಪಂದ್ಯವನ್ನು “ರಾಯಲ್ಸ್​ ಬ್ಯಾಟಲ್ಸ್​”​ ಎಂದೇ ಕರೆಯಲ್ಪಟ್ಟಿದೆ. ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯುವ ಈ ಮುಖಾಮುಖಿಯಲ್ಲಿ ರಾಜಸ್ಥಾನ್​ ರಾಯಲ್ಸ್​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ನಡುವೆ ಕಾದಾಟ ನಡೆಯಲಿದೆ. ಇಲ್ಲಿ ಗೆದ್ದರಷ್ಟೇ ಉಭಯ ತಂಡಗಳಿಗೂ ಪ್ಲೇ ಆಫ್​ ರೇಸ್​ನಲ್ಲಿ ಉಳಿಗಾಲ. ಹೀಗಾಗಿ ಈ ಪಂದ್ಯವನ್ನು ಹೈ ವೋಲ್ಟೆಜ್​ ಎಂದು ನಿರೀಕ್ಷೆ ಮಾಡಬಹುದು.

ಆರ್​ಸಿಬಿ ತಂಡದಲ್ಲಿ ಎಷ್ಟೇ ಕಳಪೆ ಪ್ರದರ್ಶನ ತೋರಿದರೂ ಆಡಿಸಿದವರನ್ನೇ ಆಡಿಸುವುದು, ಕೆಲವು ಪ್ರತಿಭಾನ್ವಿತರನ್ನು ಇನ್ನೂ ಬೆಂಚ್‌ ಮೇಲೆಯೇ ಕೂರಿಸುತ್ತಿರುವುದು ತಂಡದ ವೈಫ‌ಲ್ಯಕ್ಕೆ ಪ್ರಮುಖ ಕಾರಣ. ಹಿಮಾಂಶು ಶರ್ಮ, ಅವಿನಾಶ್‌ ಸಿಂಗ್‌, ಮನೋಜ್‌ ಭಾಂಡಗೆ, ಫಿನ್‌ ಅಲೆನ್‌, ಸಿದ್ಧಾರ್ಥ್ ಕೌಲ್‌ ಮೊದಲಾದ ಪ್ರತಿಭಾನ್ವಿತರಿಗೆ ಆರ್‌ಸಿಬಿ ಇನ್ನೂ ಆಡುವ ಅವಕಾಶ ನೀಡಿಲ್ಲ. ದಿನೇಶ್‌ ಕಾರ್ತಿಕ್‌, ಶಾಬಾಜ್‌ ಅಹ್ಮದ್‌, ಅನುಜ್‌ ರಾವತ್‌ ಎಲ್ಲ ಪಂದ್ಯಗಳಲ್ಲಿ ಆಡಿದರೂ ಅವರ ಸಾಧನೆ ಮಾತ್ರ ಶೂನ್ಯ. ಈ ಪಂದ್ಯದಲ್ಲಿಯೂ ಇವರಿಗೆ ಅವಕಾಶ ನೀಡಿದರೆ ತಂಡಕ್ಕೆ ಹಿನ್ನಡೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಆರಂಭಿಕ ಪಂದ್ಯದಲ್ಲಿ ಘಾತಕ ಬೌಲಿಂಗ್​ ದಾಳಿ ನಡೆಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದ ಮೊಹಮ್ಮದ್​ ಸಿರಾಜ್​ ಅವರು ಇತ್ತೀಚಿನ ಪಂದ್ಯಗಳಲ್ಲಿ ತೀರಾ ಕಳಪೆ ಮಟ್ಟದ ಬೌಲಿಂಗ್​ ಪ್ರದರ್ಶನ ತೋರುತ್ತಿದ್ದಾರೆ. ವಿಕೆಟ್​ ಕೀಳುವ ಬದಲು ಎದುರಾಳಿ ಬ್ಯಾಟರ್​ಗಳನ್ನು ಕೆಣಕುವುದರಲ್ಲಿ ಮಾತ್ರ ಸೈ ಎನಿಸಿಕೊಂಡಿದ್ದಾರೆ. ಸಿರಾಜ್​ ಬೌಲಿಂಗ್​ ಬಗ್ಗೆ ಸ್ವತಃ ತಂಡದ ನಾಯಕ ಫಾಪ್​ ಡು ಪ್ಲೆಸಿಸ್​​ ಅವರೇ ಕಳೆದ ಪಂದ್ಯದಲ್ಲಿ ಬಹಿರಂಗವಾಗಿ ಬೇಸರ ಹೊರಕಾಕಿದ್ದರು.

ಬಲಿಷ್ಠ ರಾಜಸ್ಥಾನ್​

ರಾಜಸ್ಥಾನ್​ ತಂಡ ಆರ್​ಸಿಬಿಗೆ ಹೋಲಿಸಿದರೆ ಅತ್ಯಂತ ಬಲಿಷ್ಠವಾಗಿದೆ. ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಸಮರ್ಥವಾಗಿದೆ. ಅದರಲ್ಲೂ ಕಳೆದ ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶನ ತೋರಿದ ಯುವ ಬ್ಯಾಟರ್​ ಯಶಸ್ವಿ ಜೈಸ್ವಾಲ್​ ಅವರ ಬ್ಯಾಟಿಂಗ್​ ಮೇಲೆ ಈ ಪಂದ್ಯದಲ್ಲಿಯೂ ಹೆಚ್ಚಿನ ನಿರೀಕ್ಷೆ ಇರಿಸಲಾಗಿದೆ. ಉಳಿದಂತೆ ನಾಯಕ ಸಂಜು ಸ್ಯಾಮ್ಸನ್​, ಜಾಸ್​ ಬಟ್ಲರ್​ ಉತ್ತಮ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಬೌಲಿಂಗ್​ನಲ್ಲಿ ಟ್ರೆಂಟ್​ ಬೌಲ್ಟ್​​, ಯಜುವೇಂದ್ರ ಚಹಲ್​ ಕೂಡ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ.

ಇದನ್ನೂ ಓದಿ IPL 2023: ಸಿಕ್ಸರ್​ ಮೂಲಕ ಎಬಿಡಿ ದಾಖಲೆ ಮುರಿದ ರೋಹಿತ್​ ಶರ್ಮ

​ಸಂಭಾವ್ಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್​ ಡು ಪ್ಲೆಸಿಸ್​, ವಿರಾಟ್ ಕೊಹ್ಲಿ(ನಾಯಕ), ಸುಯಶ್ ಪ್ರಭುದೇಸಾಯಿ, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಾಬಾಜ್ ಅಹ್ಮದ್​, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್​ ಶರ್ಮಾ, ಮಹಿಪಾಲ್ ಲೊಮ್ರೊರ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಸಿದ್ಧಾರ್ಥ್ ಕೌಲ್, ಆಕಾಶದೀಪ್, ಹಿಮಾಂಶು ಶರ್ಮಾ, ಮಿಚೆಲ್ ಬ್ರೇಸ್‌ವೆಲ್, ವೈಶಾಖ್​ ವಿಜಯ್​ ಕುಮಾರ್​.

ರಾಜಸ್ಥಾನ್ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ಜೋ ರೂಟ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೈಯರ್, ರವಿಚಂದ್ರನ್ ಅಶ್ವಿನ್, ಮುರುಗನ್ ಅಶ್ವಿನ್, ಸಂದೀಪ್ ಶರ್ಮಾ, ಕುಲ್ದೀಪ್ ಯಾದವ್, ಯಜ್ವೇಂದ್ರ ಚಹಲ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup : ವಿಶ್ವ ಕಪ್​ ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ನೋ ಚಾನ್ಸ್​; ಆಯ್ಕೆದಾರರ ಇಂಗಿತ ಬಹಿರಂಗ

T20 World Cup: ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ ಆಲ್​ರೌಂಡರ್ ಐಸಿಸಿ ಟಿ 20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಉದ್ದೇಶದಿಂದ ಅವರು ನಿಯಮಿತವಾಗಿ ಬೌಲಿಂಗ್ ಮಾಡಿದರೂ ಪ್ರತಿಫಲ ಸಿಗುತ್ತಿಲ್ಲ. ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್​ನ ಹೊಸ ನಾಯಕ ಒಂದೆರಡು ಪಂದ್ಯಗಳಿಗೆ ಬೌಲಿಂಗ್ ಮಾಡಲಿಲ್ಲ. ಇದು ಪಂಡಿತರು ಅವರ ಫಿಟ್ನೆಸ್ ಅನ್ನು ಪ್ರಶ್ನಿಸುವಂತೆ ಮಾಡಿತ್ತು

VISTARANEWS.COM


on

t20 World Cup
Koo

ಮುಂಬಯಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ (T20 World Cup) ಟೀಂ ಇಂಡಿಯಾ ಭರ್ಜರಿ ತಯಾರಿ ಆರಂಭಿಸಿದೆ. ಇದರ ಪರಿಣಾಮವಾಗಿ ರೋಹಿತ್ ಶರ್ಮಾ ಅವರು ರಾಹುಲ್ ದ್ರಾವಿಡ್ ಮತ್ತು ಬಿಸಿಸಿಐ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಅವರನ್ನು ಭೇಟಿಯಾಗಿ ಐಸಿಸಿ ಪಂದ್ಯಾವಳಿಗೆ ತಂಡದ ಆಯ್ಕೆಯ ಬಗ್ಗೆ ಚರ್ಚಿಸಿದ್ದಾರೆ. ಸಭೆಯಲ್ಲಿ ಹಾರ್ದಿಕ್ ಪಾಂಡ್ಯ ಅವರ ಆಯ್ಕೆ ಪ್ರಮುಖ ಕಾರ್ಯಸೂಚಿಗಳಲ್ಲಿ ಒಂದಾಗಿತ್ತು. ಆದರೆ, ಫಾರ್ಮ್ ಕಳೆದುಕೊಂಡಿರುವ ಹಾಗೂ ಗಾಯದ ಆತಂಕ ಎದುರಿಸುತ್ತಿರುವ ಅವರು ತಂಡದಲ್ಲಿ ಚಾನ್ಸ್ ಪಡೆಯುವುದು ಬಹುತೇಕ ಕಷ್ಟ ಎನ್ನಲಾಗಿದೆ.

ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ ಆಲ್​ರೌಂಡರ್ ಐಸಿಸಿ ಟಿ 20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಉದ್ದೇಶದಿಂದ ಅವರು ನಿಯಮಿತವಾಗಿ ಬೌಲಿಂಗ್ ಮಾಡಿದರೂ ಪ್ರತಿಫಲ ಸಿಗುತ್ತಿಲ್ಲ. ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್​ನ ಹೊಸ ನಾಯಕ ಒಂದೆರಡು ಪಂದ್ಯಗಳಿಗೆ ಬೌಲಿಂಗ್ ಮಾಡಲಿಲ್ಲ. ಇದು ಪಂಡಿತರು ಅವರ ಫಿಟ್ನೆಸ್ ಅನ್ನು ಪ್ರಶ್ನಿಸುವಂತೆ ಮಾಡಿತ್ತು. ಕೆಲವು ಕ್ರಿಕೆಟ್​ ಪಂಡಿತರು ಪಾಂಡ್ಯ ಗಾಯಗೊಂಡಿದ್ದಾರೆ ಎಂದು ಕಾಮೆಂಟ್ ಮಾಡಿದ್ದರು.

ಐಪಿಎಲ್ 2024 ರಲ್ಲಿ, ಹಾರ್ದಿಕ್ ಪಾಂಡ್ಯ ಇಲ್ಲಿಯವರೆಗೆ 6 ಪಂದ್ಯಗಳಲ್ಲಿ 4ರಲ್ಲಿ ಬೌಲಿಂಗ್ ಮಾಡಿದ್ದಾರೆ. ಅವರ ಇತ್ತೀಚಿನ ಬೌಲಿಂಗ್ ಪ್ರದರ್ಶನವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬಂದಿತು. ಅವರು ಪಂದ್ಯಾವಳಿಯಲ್ಲಿ ಇಲ್ಲಿಯವರೆಗೆ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿಲ್ಲ. ಸಿಎಸ್ಕೆ ವಿರುದ್ಧ ಅವರು ಕೇವಲ 3 ಓವರ್​ಗಲನ್ನು ಎಸೆಯುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೆ 43 ರನ್​ಗಳನ್ನು ಬಿಟ್ಟುಕೊಟ್ಟಿದ್ದರು. ಆದರೆ, 2 ವಿಕೆಟ್​ಗಳನ್ನು ಪಡೆದಿದ್ದರು.

ತಲೆ ನೋವಾಗಿರುವ ಪಾಂಡ್ಯ ಪತನ

ಅವರು ತಮ್ಮ ಮೊದಲ ಓವರ್​ನಲ್ಲಿ 15 ರನ್ ಬಿಟ್ಟುಕೊಟ್ಟಿದ್ದರು. ಆದರೆ ಎಂಎಸ್ ಧೋನಿ ಪಂದ್ಯದ ಕೊನೆಯ ಓವರ್​ನಲ್ಲಿ ಸತತ 3 ಸಿಕ್ಸರ್ಗಳನ್ನು ಬಾರಿಸಿದಾಗ ಅವರ ಬೌಲಿಂಗ್​​ ಚರ್ಚೆಯ ವಿಷಯವಾಯಿತು ಪಾಂಡ್ಯ 12 ಎಕಾನಮಿ ಹೊಂದಿದ್ದು, ಟೂರ್ನಿಯಲ್ಲಿ ಈವರೆಗೆ ಕೇವಲ 3 ವಿಕೆಟ್ ಮಾತ್ರ ಕಬಳಿಸಿದ್ದಾರೆ.

ಇದನ್ನೂ ಓದಿ: IPL 2024 : ನಾವು ಪುಟಿದೆದ್ದು ತಿರುಗೇಟು ನೀಡ್ತೇವೆ; ಆರ್​ಸಿಬಿ ಕೋಚ್​ ಭರವಸೆಯ ನುಡಿ

ಮೊಹಮ್ಮದ್ ಶಮಿ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ತಂಡದಲ್ಲಿ ಏಕೈಕ ಹಿರಿಯ ವೇಗಿಯಾಗಿದ್ದಾರೆ. ಮೊಹಮ್ಮದ್ ಸಿರಾಜ್ ಟಿ 20 ಪಂದ್ಯಗಳಲ್ಲಿ ಕಳಪೆ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ವಿಶ್ವಕಪ್​​ಗಾಗಿ ಟೀ ಮ್ ಇಂಡಿಯಾ ತಂಡದಲ್ಲಿ ಅವಕಾಶ ಪಡೆಯಲು ಹಾರ್ದಿಕ್ ನಿಯಮಿತವಾಗಿ ಬೌಲಿಂಗ್ ಮಾಡಬೇಕು. ನಿಯಮಿತವಾಗಿ ವಿಕೆಟ್​ಗಳನ್ನು ಪಡೆಯಬೇಕು ಎಂಬುದು ಅತ್ಯಂತ ಮಹತ್ವದ್ದಾಗಿದೆ.

Continue Reading

ಕ್ರೀಡೆ

IPL 2024: ಮುಂಬೈ ಪಂದ್ಯದ ಟಾಸ್​ ಕಳ್ಳಾಟ ಬಿಚ್ಚಿಟ್ಟ ಆರ್​ಸಿಬಿ ನಾಯಕ; ವಿಡಿಯೊ ವೈರಲ್​

IPL 2024: ಆರ್​ಸಿಬಿ ತಂಡದ ನಾಯಕ ಫಾಫ್​ ಡು ಪ್ಲೆಸಿಸ್(Faf du Plessis) ಸನ್​ರೈಸರ್ಸ್​ ಹೈದರಾಬಾದ್(​Sunrisers Hyderabad) ಪಂದ್ಯದ ವಿರುದ್ಧದ ಟಾಸ್​ ವೇಳೆ​ ಪ್ಯಾಟ್​ ಕಮಿನ್ಸ್(Pat Cummins)​ ಜತೆ ಮುಂಬೈ ಎದುರಿನ ಪಂದ್ಯದ ಟಾಸ್​ ಕಳ್ಳಾಟದ ಘಟನೆಯನ್ನು ತೆರೆದಿಟ್ಟಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಕಳೆದ ಗುರುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಐಪಿಎಲ್(IPL 2024)​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು(MI vs RCB) ಹಾಗೂ ಮುಂಬೈ ಇಂಡಿಯನ್ಸ್​(Mumbai Indians) ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ಪಡೆ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಆದರೆ, ಪಂದ್ಯದ ಬಳಿಕ ಮುಂಬೈ ಗೆಲುವಿಗೆ ಕಾರಣ ಟಾಸ್​ ಫಿಕ್ಸಿಂಗ್​ ಎಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಇದಕ್ಕೆ ಸಂಬಂಧಪಟ್ಟ ಕೆಲ ವಿಡಿಯೊಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಇದೀಗ ಈ ಘಟನೆಯ ನೈಜ ಕಾರಣವನ್ನು ಆರ್​ಸಿಬಿ ತಂಡದ ನಾಯಕ ಫಾಫ್​ ಡು ಪ್ಲೆಸಿಸ್(Faf du Plessis) ಸನ್​ರೈಸರ್ಸ್​ ಹೈದರಾಬಾದ್(​Sunrisers Hyderabad) ಪಂದ್ಯದ ವಿರುದ್ಧದ ಟಾಸ್​ ವೇಳೆ​ ಪ್ಯಾಟ್​ ಕಮಿನ್ಸ್(Pat Cummins)​ ಜತೆ ಚರ್ಚಿಸಿದ್ದಾರೆ. ಇದರ ವಿಡಿಯೊ ವೈರಲ್ ಆಗಿದ್ದು, ಮತ್ತೆ ಟಾಸ್​ ಫಿಕ್ಸ್​ ಚರ್ಚೆ ಮುನ್ನಲೆಗೆ ಬಂದಿದೆ.

ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಚಿನ್ನಶ್ವಾಮಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿತ್ತು. ಉಭಯ ತಂಡದ ನಾಯಕರು ಟಾಸ್​ಗೆ ಆಗಮಿಸಿದ ಈ ವೇಳೆ ಪ್ಯಾಟ್​ ಕಮಿನ್ಸ್ ಅವರು ಡು ಪ್ಲೆಸ್​ ಬಳಿಕ​ ಮುಂಬೈ ವಿರುದ್ಧದ ಟಾಸ್​ ಘಟನೆಯ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಡು ಪ್ಲೆಸಿಸ್​ ಪಾಂಡ್ಯ ಹಿಮ್ಮುಖವಾಗಿ ದೂರಕ್ಕೆ ಟಾಸ್​ ಕಾಯಿನ್​ ಚಿಮ್ಮಿಸಿದರು. ಮ್ಯಾಚ್​ ರೆಫ್ರಿಯಾಗಿದ್ದ ಜಾವಗಲ್​ ಶ್ರೀನಾಥ್(Javagal Srinath)​ ಅವರು ಕಾಯಿನ್​ ತಿರುಗಿಸಿ ಹೆಕ್ಕಿ ಪಾಂಡ್ಯ ಬಳಿ ಏನೋ ಕೇಳಿ ಟಾಸ್​ ಗೆದ್ದಿರುವಂತೆ ಹೇಳಿ ತಕ್ಷಣ ಅಲ್ಲಿಂದ ತೆರಳಿದರು ಎಂದು ಅಂದಿನ ಘಟನೆಯನ್ನು ನಟನೆಯ ಮೂಲಕ ತೋರಿಸಿದರು. ಈ ವಿಡಿಯೊ ವೈರಲ್​ ಆಗಿದ್ದು ನಿಜವಾಗಿಯೂ ಟಾಸ್​ ಫಿಕ್ಸಿಂಗ್​ ನಡೆದಿದೆಯಾ? ಎಂಬ ಚರ್ಚೆ ಮತ್ತೆ ಶುರುವಾಗಿದೆ.

ಚೇಸಿಂಗ್​ಗೆ ಯೋಗ್ಯವಾದ ವಾಂಖೆಡೆ ಸ್ಟೇಡಿಯಂನಲ್ಲಿ ಅಂಪೈರ್​ ಟಾಸ್​ ಕಾಯಿನ್​ ಬದಲಿಸಿ ಮುಂಬೈ ತಂಡಕ್ಕೆ ಸಹಕರಿಸಿದ್ದಾರೆ. ಇಲ್ಲವಾದರೆ ಆರ್​ಸಿಬಿ ಗೆಲ್ಲುತ್ತಿತ್ತು ಎಂದು ಅನೇಕ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಅಂಬಾನಿ ಮತ್ತು ಐಪಿಎಲ್​ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

ಹೈದರಾಬಾದ್​ ವಿರುದ್ಧ 25 ರನ್​ ಸೋಲು


ಸೋಮವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ತಂಡ ಹೈದರಾಬಾದ್​ ವಿರುದ್ಧ 25 ರನ್​ಗಳ ಸೋಲು ಕಂಡಿತು. ಟಾಸ್​ ಗೆದ್ದ ಆತಿಥೇಯ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಎಸ್​ಆರ್​ಎಚ್​ ತಂಡ ವಿಶ್ವ ದಾಖಲೆಯ 287 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆರ್​ಸಿಬಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 262 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಪ್ಲೇ ಆಫ್ ಆಸೆ ಇನ್ನೂ ಜೀವಂತ

ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ತಂಡದ ಮೇಲಿದೆ. ಈಗಾಗಲೇ 7 ಪಂದ್ಯ ಆಡಿದ್ದು, 1 ಪಂದ್ಯ ಗೆದ್ದು, 6 ಪಂದ್ಯದಲ್ಲಿ ಸೋಲು ಕಂಡಿದೆ. 2 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 7 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇ ಆಫ್ ಅವಕಾಶ ಇದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಆರ್‌ಸಿಬಿ ಪ್ಲೇಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ.

Continue Reading

ಪ್ರಮುಖ ಸುದ್ದಿ

IPL 2024 : ನಾವು ಪುಟಿದೆದ್ದು ತಿರುಗೇಟು ನೀಡ್ತೇವೆ; ಆರ್​ಸಿಬಿ ಕೋಚ್​ ಭರವಸೆಯ ನುಡಿ

IPL 2024: ಬ್ಯಾಟ್​ನೊಂದಿಗೆ ಅಂತಹ ಅದ್ಭುತ ಪ್ರದರ್ಶನದ ನಂತರ ತಂಡವು ಪಂದ್ಯದಿಂದ ಸಾಕಷ್ಟು ವಿಶ್ವಾಸ ಪಡೆದುಕೊಂಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ರಸಕ್ತ ಋತುವಿನ ಪ್ಲೇಆಫ್​ಗೆ ಅರ್ಹತೆ ಪಡೆಯುವ ಸಲುವಾಗಿ ಪ್ರತಿ ಪಂದ್ಯವೂ ಈಗ ತಂಡಕ್ಕೆ ನಾಕೌಟ್ ಪಂದ್ಯವಾಗಲಿದೆ ಎಂದು ಮುಖ್ಯ ಕೋಚ್ ಹೇಳಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore ) ತಂಡವು ಎಸ್​ಆರ್​ಎಚ್ ವಿರುದ್ಧದ ಪಂದ್ಯದಲ್ಲಿ ಅದ್ಭುದ ಸಾಧನೆ ಮಾಡಿದೆ. ಆದಾಗ್ಯೂ ಇದುವರೆಗೆ ಆಡಿರುವ 7 ಪಂದ್ಯಗಳಲ್ಲಿ 6 ಸೋಲುಗಳನ್ನು ಅನುಭವಿಸಿರುವ ಫಾಫ್​ ಡು ಪ್ಲೆಸಿಸ್​ ತಂಡ ಪ್ಲೇಆಫ್​ ಹಂತದಿಂದ ಬಹುತೇಕ ಹೊರಕ್ಕೆ ಬಿದ್ದಿದೆ. ಆದರೆ ಕೋಚ್ ಆ್ಯಂ ಡಿ ಫ್ಲವರ್ ಮಾತ್ರ ಪುಟಿದೇಳುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂದಿನ ಪಂದ್ಯದಿಂದ ಸಕಾರಾತ್ಮಕ ಅಂಶಗಳನ್ನು ತೋರಿಸುತ್ತೇವೆ ಹಾಗೂ ಬಲವಾಗಿ ಮರಳುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

288 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಮೊದಲ ವಿಕೆಟ್​ಗೆ 80 ರನ್​ಗಲ ಜೊತೆಯಾಟ ನೀಡಿದ್ದರು. ಮಧ್ಯಮ ಕ್ರಮಾಂಕದಲ್ಲಿ ಇನ್ನಷ್ಟು ಉತ್ತಮವಾಗಿ ಆಡಿತ್ತು. “ನಾವು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್​ನೊಂದಿಗೆ ಉತ್ತಮ ಹೋರಾಟ ಸಂಘಟಿಸಿದ್ದೆವು. ಆ ಬಗ್ಗೆ ನನಗೆ ನಿಜವಾಗಿಯೂ ಹೆಮ್ಮೆ ಇದೆ. ನಾವು ಪಂದ್ಯವನ್ನು ಕಳೆದುಕೊಂಡಿದ್ದೇವೆ. ಆದರೆ ನಾವು ಹೋರಾಡಿದ ರೀತಿ ಬಗ್ಗೆ ನನಗೆ ನಿಜವಾಗಿಯೂ ಹೆಮ್ಮೆ ಇದೆ “ಎಂದು ಆ್ಯಂಡಿ ಫ್ಲವರ್ ಹೇಳಿದರು.

ಬ್ಯಾಟ್​ನೊಂದಿಗೆ ಅಂತಹ ಅದ್ಭುತ ಪ್ರದರ್ಶನದ ನಂತರ ತಂಡವು ಪಂದ್ಯದಿಂದ ಸಾಕಷ್ಟು ವಿಶ್ವಾಸ ಪಡೆದುಕೊಂಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ರಸಕ್ತ ಋತುವಿನ ಪ್ಲೇಆಫ್​ಗೆ ಅರ್ಹತೆ ಪಡೆಯುವ ಸಲುವಾಗಿ ಪ್ರತಿ ಪಂದ್ಯವೂ ಈಗ ತಂಡಕ್ಕೆ ನಾಕೌಟ್ ಪಂದ್ಯವಾಗಲಿದೆ ಎಂದು ಮುಖ್ಯ ಕೋಚ್ ಹೇಳಿದ್ದಾರೆ.

ಕಠಿಣ ರಾತ್ರಿ

ಇದು ಮೈದಾನದಲ್ಲಿ ನಿಜವಾಗಿಯೂ ಕಠಿಣ ರಾತ್ರಿಯಾಗಿತ್ತು, ಏಕೆಂದರೆ ಆ ತಂಡ ಸಾಕಷ್ಟು ಪ್ರಬಲವಾಗಿ ಆಡಿತು. ಹೀಗಾಗಿ ನಮ್ಮ ಅವಕಾಶಗಳು ಕ್ಷೀಣಿಸಿದವು. ನಾವು ಯೋಚಿಸುತ್ತೇವೆ ಮತ್ತು ನಾವು ಬಲವಾಗಿ ಹಿಂತಿರುಗುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: IND vs BNG: ಬಾಂಗ್ಲಾ ಟಿ20 ಸರಣಿಗೆ ಆಯ್ಕೆಯಾದ ಕನ್ನಡತಿ ಶ್ರೇಯಾಂಕಾ ಪಾಟೀಲ್

ಕೇವಲ 35 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಏಳು ಸಿಕ್ಸರ್​ಗಳ ಸಹಾಯದಿಂದ 83 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದ ಕಾರ್ತಿಕ್ ಅವರಿಗೆ ದೊಡ್ಡ ಮಟ್ಟದ ಪ್ರಶಂಸೆಯನ್ನು ಫ್ಲವರ್​ ವ್ಯಕ್ತಪಡಿಸಿದರು. “ದಿನೇಶ್ ಕಾರ್ತಿಕ್ ನಿಜವಾಗಿಯೂ ವಿಶ್ವಕಪ್ ತಂಡಕ್ಕೆ ಸೇರುವಷ್ಟು ಮಟ್ಟಿಗೆ ಉತ್ತೇಜನ ಪಡೆಯುತ್ತಿದ್ದಾರೆ. ಮೈದಾನದಲ್ಲಿ ಇನ್ನಷ್ಟು ಉತ್ತಮಗೊಳ್ಳುತ್ತಿದ್ದಾರೆ” ಎಂದು ಮುಖ್ಯ ಕೋಚ್ ಹೇಳಿದರು.

Continue Reading

ಕ್ರೀಡೆ

IND vs BNG: ಬಾಂಗ್ಲಾ ಟಿ20 ಸರಣಿಗೆ ಆಯ್ಕೆಯಾದ ಕನ್ನಡತಿ ಶ್ರೇಯಾಂಕಾ ಪಾಟೀಲ್

IND vs BNG: ಬೆನ್ನು ನೋವಿನ ಕಾರಣದಿಂದಾಗಿ ಜೆಮೀಮಾ ರೋಡ್ರಿಗಸ್​(Jemimah Rodrigues) ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಇತ್ತೀಚೆಗೆ ಭಾರತ ಆಡಿದ ಎಲ್ಲ ಸರಣಿಯಲ್ಲೂ ಜೆಮೀಮಾ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು.

VISTARANEWS.COM


on

IND vs BNG
Koo

ನವದೆಹಲಿ: ಇದೇ ತಿಂಗಳು ಭಾರತ ಮಹಿಳಾ ಕ್ರಿಕೆಟ್(IND vs BNG)​ ತಂಡ 5 ಪಂದ್ಯಗಳ ಟಿ20 ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಗಾಗಿ ಪ್ರಕಟಗೊಂಡ ತಂಡದಲ್ಲಿ ಕನ್ನಡತಿ ಶ್ರೇಯಾಂಕಾ ಪಾಟೀಲ್(Shreyanka Patil)​ ಕೂಡ ಸ್ಥಾನ ಪಡೆದುಕೊಂಡಿದ್ದಾರೆ. ಮೊದಲ ಪಂದ್ಯ ಏಪ್ರಿಲ್​ 28ರಂದು ನಡೆಯಲಿದೆ.

ತಂಡವನ್ನು ಹರ್ಮನ್​ಪ್ರೀತ್​ ಕೌರ್​ ಮುನ್ನಡೆಸಲಿದ್ದಾರೆ. ಸ್ಮೃತಿ ಮಂಧನಾ ಉಪನಾಯಕಿಯಾಗಿದ್ದಾರೆ. ಇತ್ತೀಚೆಗೆ ಮುಕ್ತಾಯ ಕಂಡಿದ್ದ 2ನೇ ಆವೃತ್ತಿಯ ಡಬ್ಲ್ಯುಪಿಎಲ್​ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿದ ಆಶಾ ಸೋಭನಾ(Asha Sobhana), ಸಜನಾ ಸಜೀವನ್‌(Sajana Sajeevan) ಸೀನಿಯರ್​ ತಂಡದಲ್ಲಿ ಮೊದಲ ಕರೆ ಪಡೆದಿದ್ದಾರೆ. ಬೆನ್ನು ನೋವಿನ ಕಾರಣದಿಂದಾಗಿ ಜೆಮೀಮಾ ರೋಡ್ರಿಗಸ್​(Jemimah Rodrigues) ಸರಣಿಯಿಂದ ಹೊರಬಿದ್ದಿದ್ದಾರೆ. ಇತ್ತೀಚೆಗೆ ಭಾರತ ಆಡಿದ ಎಲ್ಲ ಸರಣಿಯಲ್ಲೂ ಜೆಮೀಮಾ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು.

ಭಾರತ ತಂಡ


ಹರ್ಮನ್‌ಪ್ರೀತ್‌ ಕೌರ್‌ (ನಾಯಕಿ), ಸ್ಮೃತಿ ಮಂಧನಾ, ಶಫಾಲಿ ವರ್ಮ, ಡಿ. ಹೇಮಲತಾ, ಸಜನಾ ಸಜೀವನ್‌, ರಿಚಾ ಘೋಷ್‌, ಯಾಸ್ತಿಕಾ ಭಾಟಿಯಾ, ರಾಧಾ ಯಾದವ್‌, ದೀಪ್ತಿ ಶರ್ಮ, ಪೂಜಾ ವಸ್ತ್ರಾಕರ್‌, ಅಮನ್‌ಜೋತ್‌ ಕೌರ್‌, ಶ್ರೇಯಾಂಕಾ ಪಾಟೀಲ್‌, ಸೈಕಾ ಇಶಾಖ್‌, ಆಶಾ ಸೋಭನಾ, ರೇಣುಕಾ ಸಿಂಗ್‌ ಠಾಕೂರ್‌, ಟಿತಾಸ್‌ ಸಾಧು.

ಸ್ಥಾನ ಪಡೆದ ಶ್ರೇಯಾಂಕ


21 ವರ್ಷದ ಶ್ರೇಯಾಂಕಾ ಪಾಟೀಲ್ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಆರ್‌ಸಿಬಿ ಮಹಿಳಾ ತಂಡಕ್ಕೆ ಆಯ್ಕೆಯಾದರು. ಇಲ್ಲಿ ತೋರಿದ ಪ್ರದರ್ಶನದಿಂದ ಅವರು ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿಯೂ ಆಡುವಂತೆ ಮಾಡಿತ್ತು. ಹಂತ ಹಂತವಾಗಿ ಬೆಳೆದ ಇವರು 2023ರಲ್ಲಿ 21 ವಷದೊಳಗಿನ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅವಕಾಶ ಪಡೆದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ಡಿಸೆಂಬರ್ 6ರಂದು ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆಡುವ ಮೂಲಕ ಭಾರತ ಹಿರಿಯರ ಮಹಿಳಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಇದೀಗ ಬಾಂಗ್ಲಾ ಸರಣಿಗೂ ಆಯ್ಕೆಯಾಗಿದ್ದಾರೆ. ಇದುವರೆಗೆ ಭಾರತ ಪರ 2 ಏಕದಿನ ಮತ್ತು 6 ಟಿ20 ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ. 2 ಮಾದರಿಯ ಕ್ರಿಕೆಟ್​ನಲ್ಲಿ ಒಟ್ಟು 12 ವಿಕೆಟ್​ ಕಿತ್ತಿದ್ದಾರೆ.

ಇದನ್ನೂ ಓದಿ IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

ಸರಣಿಯ ವೇಳಾಪಟ್ಟಿ


ಮೊದಲ ಟಿ20 ಪಂದ್ಯ-ಏಪ್ರಿಲ್​ 28
.

ದ್ವಿತೀಯ ಟಿ20 ಪಂದ್ಯ-ಏಪ್ರಿಲ್​ 30.

ಮೂರನೇ ಟಿ20 ಪಂದ್ಯ-ಮೇ 2.

ನಾಲ್ಕನೇ ಟಿ20 ಪಂದ್ಯ- ಮೇ 6.

ಐದನೇ ಟಿ20 ಪಂದ್ಯ- ಮೇ 9.

Continue Reading
Advertisement
Lok Sabha Election
ದೇಶ52 seconds ago

Lok Sabah Election : ಹೇಮಮಾಲಿನಿಗೆ ಅವಹೇಳನ; ಕಾಂಗ್ರೆಸ್​ ನಾಯಕ ಸುರ್ಜೇವಾಲಾಗೆ 48 ಗಂಟೆ ನಿಷೇಧ

Kanker Encounter
ದೇಶ6 mins ago

Kanker Encounter: ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ; 18 ಮಾವೋವಾದಿಗಳ ಸಾವು

Karnataka weather Forecast
ಮಳೆ38 mins ago

Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

Oil Pulling
ಆರೋಗ್ಯ40 mins ago

Oil Pulling: ಆಯಿಲ್‌ ಪುಲ್ಲಿಂಗ್‌; ನಿಮ್ಮ ಬಾಯಿಯೊಳಗಿನ ಎಲ್ಲ ಸಮಸ್ಯೆಗಳಿಗೂ ಉತ್ತರ ಇಲ್ಲಿದೆ!

UPSC Results 2023
ಪ್ರಮುಖ ಸುದ್ದಿ44 mins ago

UPSC Results 2023: ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್‌ ಆದ ಪೊಲೀಸ್‌ ಅಧಿಕಾರಿ!

Take action to close failed borewell says Vijayanagara DC MS Diwakar
ವಿಜಯನಗರ52 mins ago

Vijayanagara News: ವಿಫಲ ಕೊಳವೆಬಾವಿ ಮುಚ್ಚಲು ಕ್ರಮವಹಿಸಿ: ಡಿಸಿ ಎಂ.ಎಸ್. ದಿವಾಕರ್‌

Job Alert
ಉದ್ಯೋಗ53 mins ago

Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

Kalaburagi MP Dr. Umesh Jadav spoke in booth level workers meeting Chittapur assembly constituency
ಕಲಬುರಗಿ55 mins ago

Lok Sabha Election 2024: ಕೋಲಿ ಸಮುದಾಯದ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಡಾ. ಉಮೇಶ್ ಜಾಧವ್ ಕಿಡಿ

Maddur MLA Uday election campaign in various places of Maddur taluk
ಮಂಡ್ಯ59 mins ago

Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

Lok Sabha Election 2024 HD DeveGowda Congress cries out at HD DeveGowda Complaint to Election Commission
Lok Sabha Election 20241 hour ago

Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ14 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌