IPL 2024: ಕಪ್​ ಗೆಲ್ಲುವ ತಂಡವನ್ನು ಹೆಸರಿಸಿದ ಎಬಿಡಿ; ಈ ಹಿಂದಿನ 2 ಭವಿಷ್ಯ ಕೂಡ ನಿಜವಾಗಿತ್ತು! - Vistara News

ಕ್ರೀಡೆ

IPL 2024: ಕಪ್​ ಗೆಲ್ಲುವ ತಂಡವನ್ನು ಹೆಸರಿಸಿದ ಎಬಿಡಿ; ಈ ಹಿಂದಿನ 2 ಭವಿಷ್ಯ ಕೂಡ ನಿಜವಾಗಿತ್ತು!

IPL 2024: ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಎಬಿಡಿ, ಯಾವುದೇ ಅನುಮಾನ ಬೇಡ ಈ ಬಾರಿ ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

VISTARANEWS.COM


on

AB De Villiers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್(IPL 2024) ಟೂರ್ನಿ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಉಳಿದಿದೆ. ಶುಕ್ರವಾರ ನಡೆಯುವ ಉದ್ಘಾಟನ ಪಂದ್ಯದಲ್ಲಿ ಆರ್​ಸಿಬಿ(RCB) ಮತ್ತು ಸಿಎಸ್​ಕೆ(CSK) ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಟೂರ್ನಿ ಆರಂಭಕ್ಕೂ ಮುನ್ನವೇ ಹಲವು ಕ್ರಿಕೆಟ್​ ಪಂಡಿತರು ಈ ಬಾರಿ ಯಾವ ತಂಡ ಟ್ರೋಫಿ(IPL 2024 Trophy) ಗೆಲ್ಲಲಿದೆ ಎಂದು ಭವಿಷ್ಯ ನುಡಿಯಲಾರಂಭಿಸಿದ್ದಾರೆ. ಈ ಸಾಲಿಗೆ ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿಡಿ ವಿಲಿಯರ್ಸ್(AB de Villiers)​ ಕೂಡ ಸೇರ್ಪಡೆಯಾಗಿದ್ದಾರೆ.

ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಎಬಿಡಿ, ಯಾವುದೇ ಅನುಮಾನ ಬೇಡ ಈ ಸಲ ಕಪ್ ನಮ್ದೇ… ಈ ಬಾರಿ ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಸ್ಮೃತಿ ಮಂಧಾನಾ ನೇತೃತ್ವದ ಮಹಿಳಾ ಆರ್​ಸಿಬಿ ಚೊಚ್ಚಲ ಪ್ರಶಸ್ತಿ ಗೆದ್ದಿದೆ. ಇದೇ ಹುರುಪಿನಲ್ಲಿರುವ ಪುರುಷರ ತಂಡವೂ ಕೂಡ ಕಪ್​ ಗೆಲ್ಲಲೇ ಬೇಕೆನ್ನುವ ಹಠಕ್ಕೆ ಬಿದ್ದಿದೆ ಎಂದರು.

ಎಬಿಡಿ ಭವಿಷ್ಯ ನಿಜವಾಗುವು ಖಚಿತ!


ಎಬಿಡಿ ವಿಲಿಯರ್ಸ್ ಭವಿಷ್ಯ ಕೇಳಿ ಆರ್​ಸಿಬಿ ಅಭಿಮಾನಿಗಳು ಫುಲ್​ ಖುಷಿಯಾಗಿದ್ದಾರೆ. ಏಕೆಂದರೆ ಎಬಿಡಿ ಈ ಹಿಂದೆ ಹೇಳಿದ ಹಲವು ಭವಿಷ್ಯಗಳು ನಿಜವಾಗಿದೆ. 2022ರಲ್ಲಿ ಹಾರ್ದಿಕ್​ ಪಾಂಡ್ಯ ಸಾರಥ್ಯದ ಗುಜರಾತ್​ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಲಿದೆ ಎಂದು ಎಬಿಡಿ ಹೇಳಿದ್ದರು. ಅದರಂತೆ ಪಾಂಡ್ಯ ಕಪ್​ ಗೆದ್ದಿದ್ದರು. ಕಳೆದ ವರ್ಷ ಕೂಡ ಗುಜರಾತ್ ಫೈನಲ್​ ತಲುಪಲಿದೆ ಎಂದು ಹೇಳಿದ್ದರು. ಇದು ಕೂಡ ನಿಜವಾಗಿತ್ತು. ಈ ಬಾರಿ ಆರ್​ಸಿಬಿ ಕಪ್​ ಗೆಲ್ಲಲಿದೆ ಎಂದಿದ್ದಾರೆ. ಅವರ ಭವಿಷ್ಯ ನಿಜವಾಗಲಿದೆಯಾ? ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IPL 2024 Squads: ಐಪಿಎಲ್ 10 ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ

“ನನ್ನ ಹೃದಯವು ಆರ್​ಸಿಬಿಯೊಂದಿಗೆ ಇದೆ. ಅಲ್ಲಿ ಅನೇಕ ವರ್ಷ ಆಡಿದ್ದೇನೆ. ಬೆಂಗಳೂರಿನ ಅಭಿಮಾನಿಗಳೊಂದಿಗೆ ನನಗೆ ಉತ್ತಮ ಸಂಪರ್ಕವಿದೆ. ಅವರು ಅಪಾರ ಪ್ರೀತಿ ತೋರುತ್ತಾರೆ ಎಂದು ಎಬಿ ಡಿವಿಲಿಯರ್ಸ್ ಇಂಡಿಯಾ ಟುಡೇಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದರು. ಮಿಸ್ಟರ್ 360 ಡಿಗ್ರಿ ಖ್ಯಾತಿಯ ಬ್ಯಾಟರ್, ಎಬಿಡಿ ಅವರು 184 ಐಪಿಎಲ್ ಪಂದ್ಯಗಳನ್ನಾಡಿ 3 ಶತಕ ಹಾಗೂ 40 ಅರ್ಧಶತಕಗಳ ನೆರವಿನಿಂದ 151.69 ಸ್ಟ್ರೆಕ್ ರೇಟ್‌ನಲ್ಲಿ 5162 ರನ್ ಸಿಡಿಸಿದ್ದಾರೆ. 40 ವರ್ಷದ ಎಬಿಡಿ ಈ ಬಾರಿ ಕಾಮೆಂಟ್ರಿ ಮಾತ್ರವಲ್ಲದೆ, ಆರ್‌ಸಿಬಿ ಬ್ಯಾಟರ್‌ಗಳಿಗೆ ಮಾರ್ಗದರ್ಶನ ನೀಡುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೂಡ ಕೇಳಿ ಬಂದಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

CSK vs SRH: 40 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಐಡೆನ್​ ಮಾರ್ಕ್ರಮ್​ ಮತ್ತು ನಿತೀಶ್​ ರೆಡ್ಡಿ ಕೆಲ ಕಾಲ ಆಸರೆಯಾದರೂ ಕೂಡ ಇವರಿಂದ ದೊಡ್ಡ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ. ಕೇವಲ 4 ಬೌಂಡರಿ ನೆರವಿನಿಂದ ಮಾರ್ಕ್ರಮ್​ 32 ರನ್​ ಗಳಿಸಿ ಪತಿರಾಣ ಯಾರ್ಕರ್​ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ನಿತೀಶ್​ ರೆಡ್ಡಿ ಎಸೆತವೊಂದರಂತೆ 15 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು.

VISTARANEWS.COM


on

CSK vs SRH
Koo

ಚೆನ್ನೈ: ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಸತತ ಎರಡು ಸೋಲು ಕಂಡು ಮಂಕಾಗಿದ್ದ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ಭರ್ಜರಿ(CSK vs SRH) ಗೆಲುವಿನ ಮೂಲಕ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದೆ. ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ವಿರುದ್ಧ ತವರಿನಲ್ಲಿ ನಡೆದ ಭಾನುವಾರದ ಪಂದ್ಯದಲ್ಲಿ 78 ರನ್​ಗಳ ಗೆಲುವು ಸಾಧಿಸಿದೆ.

ಚೆನ್ನೈಯ ಚೆಪಾಕ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಐಪಿಎಲ್​(IPL 2024) ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಚೆನ್ನೈ(Chennai Super Kings) ತಂಡ ನಾಯಕ ಋತುರಾಜ್​ ಗಾಯಕ್ವಾಡ್​, ಡೇರಿಯಲ್​ ಮಿಚೆಲ್​ ಮತ್ತು ಶಿವಂ ದುಬೆ ಅವರ ಆಕ್ರಮಣಕಾರಿ ಬ್ಯಾಟಿಂಗ್​ ಸಾಹಸದಿಂದ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ ನಷ್ಟಕ್ಕೆ 212 ರನ್​ ಬಾರಿಸಿತು. ಈ ಹಿಂದಿನ ಪಂದ್ಯಗಳಲ್ಲಿ ಸಲೀಸಾಗಿ ಮೂರು ಬಾರಿ 250ರ ಗಡಿ ದಾಟಿದ್ದ ಸನ್​ರೈಸರ್ಸ್​ ತಂಡಕ್ಕೆ ಈ ಮೊತ್ತ ಎಲ್ಲಿಂದಲೂ ಸಾಲದು ಎಂದು ನಿರೀಕ್ಷೆ ಮಾಡಿದ್ದವರಿಗೆ ಚೆನ್ನೈ ತಂಡದ ಮಧ್ಯಮ ವೇಗಿ ತುಷಾರ್​ ದೇಶ್​ಪಾಂಡೆ ಘಾತಕ ಸ್ಫೆಲ್ ಮೂಲಕ ಕಟ್ಟಿಹಾಕಿದರು. ಅಂತಿಮವಾಗಿ ಹೈದರಾಬಾದ್​ 18.5 ಓವರ್​ಗಳಲ್ಲಿ 134 ರನ್​ಗೆ ಸರ್ವಪತನ ಕಂಡು ಹೀನಾಯವಾಗಿ ಸೋಲೊಪ್ಪಿಕೊಂಡಿತು.

ಕಾಡಿದ ತುಷಾರ್​ ದೇಶ್​ಪಾಂಡೆ


ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ಗೆ ಮೊದಲ ಎಸೆತದಲ್ಲೇ ಟ್ರಾವಿಸ್​ ಹೆಡ್​ ಬೌಂಡರಿ ಮೂಲಕ ರನ್​ ಖಾತೆ ತೆರೆದರು. ಮುಂದಿನ ಓವರ್​ನಲ್ಲಿ ತುಷಾರ್​ ದೇಶ್​ಪಾಂಡೆಗೆ ಸಿಕ್ಸರ್​ ರುಚಿ ತೋರಿಸಿದರು. ಅಭಿಷೇಕ್​ ಶರ್ಮ ಕೂಡ ಒಂದು ಸಿಕ್ಸರ್​ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದರು. ಈ ವೇಳೆ ಧೋನಿ ನೀಡಿದ ಸಲಹೆಯನ್ನಾಧರಿಸಿ ಇದೇ ಓವರ್​ನಲ್ಲಿ ತುಷಾರ್​ ದೊಡ್ಡ ಬೇಟೆಯಾಡುವಲ್ಲಿ ಯಶಸ್ವಿಯಾದರು. ಟ್ರಾವಿಸ್​ ಹೆಡ್(13)​ ಮತ್ತು ಅನ್ಮೋಲ್ಪ್ರೀತ್ ಸಿಂಗ್​(0) ಖಾತೆ ತರೆಯುವ ಮುನ್ನವೇ ವಿಕೆಟ್​ ಕಿತ್ತು ಪೆವಿಲಿಯನ್​ ಕಡೆಗೆ ದಾರಿ ತೋರಿದರು. 21 ರನ್​ಗೆ 2 ವಿಕೆಟ್​ ಕಳೆದುಕೊಂಡ ಹೈದರಾಬಾದ್​ ಈ ಆಘಾತವನ್ನು ಅರಗಿಸಿಕೊಳ್ಳುವ ಮುನ್ನವೇ ಅಭಿಷೇಕ್​ ಶರ್ಮ(15) ವಿಕೆಟ್​ ಕೂಡ ಪತನಗೊಂಡಿತು. ಈ ವಿಕೆಟ್​ ಕೂಡ ತುಷಾರ್ ಪಾಲಾಯಿತು. ಅಲ್ಲಿಗೆ ಅಗ್ರ ಕ್ರಮಾಂಕದ ಮೂರು ವಿಕೆಟ್​ ಕೂಡ ತುಷಾರ್​ ಕಿತ್ತರು.

40 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಐಡೆನ್​ ಮಾರ್ಕ್ರಮ್​ ಮತ್ತು ನಿತೀಶ್​ ರೆಡ್ಡಿ ಕೆಲ ಕಾಲ ಆಸರೆಯಾದರೂ ಕೂಡ ಇವರಿಂದ ದೊಡ್ಡ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ. ಕೇವಲ 4 ಬೌಂಡರಿ ನೆರವಿನಿಂದ ಮಾರ್ಕ್ರಮ್​ 32 ರನ್​ ಗಳಿಸಿ ಪತಿರಾಣ ಯಾರ್ಕರ್​ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ನಿತೀಶ್​ ರೆಡ್ಡಿ ಎಸೆತವೊಂದರಂತೆ 15 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು.

ಆಕ್ರಮಣಕಾರಿ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಹೆನ್ರಿಚ್​ ಕ್ಲಾಸೆನ್​ ಮತ್ತು ಅಬ್ದುಲ್​ ಸಮದ್​ ಕೂಡ ಈ ಪಂದ್ಯದಲ್ಲಿ ರನ್​ ಗಳಿಸಲು ಪರದಾಡಿದರು. ಕ್ಲಾಸೆನ್​ 21 ಎಸೆತ ಎದುರಿಸಿ 20 ರನ್​ ಗಳಿಸಿದರು. ಸಿಡಿದದ್ದು 1 ಸಿಕ್ಸರ್​ ಮಾತ್ರ. ಅಬ್ದುಲ್​ ಸಮದ್ 18 ಎಸೆತಗಳಿಂದ 19 ರನ್​ ಕಲೆಹಾಕಿದರು. ಡೇರಿಯಲ್​ ಮಿಚೆಲ್​ ಈ ಪಂದ್ಯದಲ್ಲಿ 5 ಕ್ಯಾಚ್​ ಹಿಡಿದು ಮಿಂಚಿದರು.

ಗಾಯಕ್ವಾಡ್​ ಸೂಪರ್​ ಅರ್ಧಶತಕ


ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಆರಂಭದಲ್ಲೇ ಅಜಿಂಕ್ಯಾ ರಹಾನೆ ವಿಕೆಟ್​ ಕಳೆದುಕೊಂಡರೂ ಕೂಡ ಇದರಿಂದ ವಿಚಲಿತರಾಗಲಿಲ್ಲ. ನಾಯಕ ಋತುರಾಜ್​ ಗಾಯಕ್ವಾಡ್​ ಮತ್ತು ಡೇರಿಯಲ್​ ಮಿಚೆಲ್​ ಸೇರಿಕೊಂಡು ಹೈದರಾಬಾದ್​ ಬೌಲರ್​ಗಳ ಮೇಲೆ ಸವಾರಿ ನಡೆಸಿ ಅರ್ಧಶತಕ ಬಾರಿಸಿದರು. ಗಾಯಕ್ವಾಡ್​ ಕೇವಲ 27 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದರು. ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಕೊನೆಗೂ ಜಯ್​ದೇವ್​ ಉನಾದ್ಕತ್​ ಬೇರ್ಪಡಿಸುವಲ್ಲಿ ಯಶಸ್ಸು ಕಂಡರು. ಗಾಯಕ್ವಾಡ್ ಮತ್ತು ಮಿಚೆಲ್​ ದ್ವಿತೀಯ ವಿಕೆಟ್​ಗೆ 107 ರನ್​ಗಳ ಅಮೋಘ ಜತೆಯಾಟ ನಡೆಸಿತು. ಮಿಚೆಲ್​ ಅವರು ​ಉನಾದ್ಕತ್ ಎಸೆತ ಲೋ ಫುಲ್​ಟಾಸ್ ಎಸೆತಕ್ಕೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. 7 ಬೌಂಡರಿ ಮತ್ತು 1 ಸಿಕ್ಸರ್​ ಬಾರಿಸಿದ ಮಿಚೆಲ್​ 52 ರನ್​ ಗಳಿಸಿದರು.

ಇದನ್ನೂ ಓದಿ IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

​ಮಿಚೆಲ್​ ವಿಕೆಟ್​ ಬಿದ್ದರೂ ಕೂಡ ಚೆನ್ನೈ ತಂಡದ ರನ್​ ಗಳಿಕೆಗೆ ಯಾವುದೇ ಹಿನ್ನಡೆಯಾಗಲಿಲ್ಲ. ಶಿವಂ ದುಬೆ ತಮ್ಮ ಎಂದಿನ ಆಕ್ರಮಣಕಾರಿ ಶೈಲಿಯ ಬ್ಯಾಟಿಂಗ್ ನಡೆಸಿ ತಮ್ಮ ಹಾಗೂ ತಂಡದ ಮೊತ್ತವನ್ನು ಹಿಗ್ಗಿಸಿದರು. 19.2 ಓವರ್​ ತನಕ ಬ್ಯಾಟಿಂಗ್​ ಕಾಯ್ದುಕೊಂಡಿದ್ದ ಗಾಯಕ್ವಾಡ್​ 98 ರನ್​ ಗಳಿಸಿ ವಿಕೆಟ್​ ಕಳೆದುಕೊಂಡು ಕೇವಲ 2 ರನ್​ ಅಂತರದಿಂದ ಶತಕ ವಂಚಿತರಾದರು. ಕಳೆದ ಲಕ್ನೋ ವಿರುದ್ಧದ ಪಂದ್ಯದಲ್ಲಿ ಇದೇ ಮೈದಾನದಲ್ಲಿ ಶತಕ ಸಿಡಿಸಿದ್ದರು. ಸತತವಾಗಿ 2ನೇ ಶತಕ ಬಾರಿಸುವ ಅವಕಾಶ ಕೈ ಚೆಲ್ಲಿದರು. ಒಟ್ಟು 54 ಎಸೆತ ಎದುರಿಸಿದ ಗಾಯಕ್ವಾಡ್​ 10 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 98 ರನ್​ ಗಳಿಸಿದರು.

ಶಿವಂ ದುಬೆ 4 ಬಿಗ್​ ಹಿಟ್ಟಿಂಗ್​ ಸಿಕ್ಸರ್​ ಮತ್ತು 1 ಬೌಂಡರಿ ಬಾರಿಸಿ ಅಜೇಯ 39 ರನ್​ ಗಳಿಸಿದರು. ಧೋನಿ ಕೂಡ 5 ರನ್ ಬಾರಿಸಿ ಅಜೇಯರಾಗಿ ಉಳಿದರು. ಹೈದರಾಬಾದ್​ ಪರ ಭುವನೇಶ್ವರ್ ಕುಮಾರ್​, ಟಿ. ನಟರಾಜನ್​ ಮತ್ತು ಉನಾದ್ಕತ್​ ತಲಾ ಒಂದು ವಿಕೆಟ್​ ಕಿತ್ತರು.​​

Continue Reading

ಕ್ರೀಡೆ

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Paris Olympics: ಇದೇ ಮೊದಲ ಬಾರಿಗೆ ಐಎಸ್‌ಎಸ್‌ಎಫ್ ಫೈನಲ್‌ನಲ್ಲಿ ಸ್ಪರ್ಧಿಸಿದ್ದ ಮಹೇಶ್ವರಿ, ಭಾನುವಾರ ನಡೆದ ಚಿನ್ನದ ಪದಕದ ಹೋರಾಟದಲ್ಲಿ ಚಿಲಿಯ ಫ್ರಾನ್ಸಿಸ್ಕಾ ಕ್ರೊವೆಟ್ಟೊ ಚಾಡಿಡ್ ವಿರುದ್ಧ 3-4 ಸಣ್ಣ ಅಂತರದಲ್ಲಿ ಸೋತು ಬೆಳ್ಳಿಗೆ ತೃಪ್ತಿಪಟ್ಟರು.

VISTARANEWS.COM


on

Paris Olympics
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದು ಹಲವು ಭಾರತೀಯ ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳ ವಿಭಾಗದಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಒಲಿಂಪಿಕ್ಸ್​ ಅರ್ಹತೆ(Paris 2024 Olympic quota) ಪಡೆಯುತ್ತಿದ್ದಾರೆ. ಇದೀಗ ಭಾರತದ ಮಹೇಶ್ವರಿ ಚೌಹಾಣ್(Maheshwari Chauhan) ದೋಹಾದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ಫೈನಲ್ ಒಲಿಂಪಿಕ್ ಅರ್ಹತಾ ಚಾಂಪಿಯನ್‌ಷಿಪ್‌ನ ಮಹಿಳಾ ಸ್ಕೀಟ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್​ ಟಿಕೆಟ್​ ಗಿಟ್ಟಿಸಿಕೊಂಡಿದ್ದಾರೆ. ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ 21 ನೇ ಕೋಟಾ ಭರ್ತಿಯಾಗಿದೆ.

ಇದೇ ಮೊದಲ ಬಾರಿಗೆ ಐಎಸ್‌ಎಸ್‌ಎಫ್ ಫೈನಲ್‌ನಲ್ಲಿ ಸ್ಪರ್ಧಿಸಿದ್ದ ಮಹೇಶ್ವರಿ, ಭಾನುವಾರ ನಡೆದ ಚಿನ್ನದ ಪದಕದ ಹೋರಾಟದಲ್ಲಿ ಚಿಲಿಯ ಫ್ರಾನ್ಸಿಸ್ಕಾ ಕ್ರೊವೆಟ್ಟೊ ಚಾಡಿಡ್ ವಿರುದ್ಧ 3-4 ಸಣ್ಣ ಅಂತರದಲ್ಲಿ ಸೋತು ಬೆಳ್ಳಿಗೆ ತೃಪ್ತಿಪಟ್ಟರು. ಈ ಸಾಧನೆ ಬಳಿಕ ಮಾತನಾಡಿದ ಮಹೇಶ್ವರಿ, ‘ಇಲ್ಲಿಗೆ ಬರಲು ಬಹಳಷ್ಟು ಕಠಿಣ ಪರಿಶ್ರಮಪಟ್ಟಿದ್ದೇನೆ. ಒಟ್ಟಾರೆಯಾಗಿ ನನ್ನ ಈ ಪ್ರದರ್ಶನ ತೃಪ್ತಿಕರವಾಗಿದೆ’ ಎಂದು ಹೇಳಿದರು.

ಕುಸ್ತಿಯಲ್ಲಿ ವಿನೇಶ್, ಅಂಶು ಮಲಿಕ್​ಗೆ ಒಲಿಂಪಿಕ್ಸ್​ ಟಿಕೆಟ್​


ಕಳೆದ ವಾರ ನಡೆದಿದ್ದ ಕುಸ್ತಿ ಸ್ಪರ್ಧೆಯಲ್ಲಿ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಾಂಪಿಯನ್ ವಿನೇಶ್ ಫೋಗಟ್(Vinesh Phogat) ಅವರು ಏಷ್ಯನ್ ಒಲಿಂಪಿಕ್ ಅರ್ಹತಾ ಸುತ್ತಿನ ಮಹಿಳೆಯರ 50 ಕೆಜಿ ಸ್ಪರ್ಧೆಯಲ್ಲಿ ಸೆಮಿಫೈನಲ್‌ನಲ್ಲಿ ಕಜಕಿಸ್ತಾನ್‌ನ ಲಾರಾ ಗ್ಯಾನಿಕಿಜಿ ಅವರನ್ನು 10-0 ಅಂತರದಿಂದ ಸೋಲಿಸುವ ಮೂಲಕ ಪ್ಯಾರಿಸ್​ ಒಲಿಂಪಿಕ್ಸ್​ಗೆ(Paris Olympics) ಅರ್ಹತೆ ಪಡೆದಿದ್ದಾರೆ. ಅತ್ಯಂತ ಶ್ರೇಷ್ಠ ಪ್ರದರ್ಶನ ತೋರಿದ ವಿನೇಶ್ ಎದುರಾಳಿಯನ್ನು ಕೇವಲ 4:18 ನಿಮಿಷದಲ್ಲಿ ಮಣಿಸಿದರು. 57 ಕೆಜಿ ವಿಭಾಗದಲ್ಲಿ ಅಂಶು ಮಲಿಕ್‌ ಕೂಡ ಒಲಿಂಪಿಕ್ಸ್​ಗೆ(Paris Olympics) ಅರ್ಹತೆ ಪಡೆದರು. ಇವರು ಉಜ್ಬೆಕ್ ಗ್ರಾಪ್ಲರ್ ಅವರನ್ನು 10-0 ಅಂತರದಿಂದ ಸೋಲಿಸಿ ಈ ಸಾಧನೆ ಮಾಡಿದರು.

ಇದನ್ನೂ ಓದಿ IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

ಜುಲೈ 26ಕ್ಕೆ ಒಲಿಂಪಿಕ್ಸ್​ ಆರಂಭ

ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್‌ನ(Paris Olympics 2024) ಉದ್ಘಾಟನಾ ಸಮಾರಂಭಕ್ಕೆ(paris olympics 2024 opening ceremony) ದಿನಾಂಕ ನಿಗದಿಯಾಗಿದೆ. ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ.

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಕ್ರೀಡೆ

IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

IPL 2024: ಆರ್​ಸಿಬಿ ತಂಡ ಗುಜರಾತ್​ ವಿರುದ್ಧ ಗೆಲುವು ಸಾಧಿಸುವ ಮೂಲಕ ಐಪಿಎಲ್​ನ ಇದುವರೆಗಿನ ಇತಿಹಾಸದಲ್ಲಿ ಅತಿ ಕಡಿಮೆ ಎಸೆತಗಳನ್ನು ಎದುರಿಸಿ 200 ರನ್​ ಚೇಸಿಂಗ್​ ಮಾಡಿದ ಮೊದಲ ತಂಡ ಎಂಬ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿತು. ಇದಕ್ಕೂ ಮುನ್ನ ಈ ದಾಖಲೆ ಮುಂಬೈ ಇಂಡಿಯನ್ಸ್​ ತಂಡದ ಪರ ಇತ್ತು. 2023ರಲ್ಲಿ ಆರ್​ಸಿಬಿ ವಿರುದ್ಧವೇ ಮುಂಬೈ ಈ ದಾಖಲೆ ಬರೆದಿತ್ತು.

VISTARANEWS.COM


on

IPL 2024
Koo

ಅಹಮದಾಬಾದ್​: ಸತತ ಸೋಲಿನಿಂದ ಕಂಗೆಟ್ಟಿದ್ದ ಆರ್​ಸಿಬಿ ಇದೀಗ ಗೆಲುವಿನ ಹಳಿಗೆ ಮರಳಿದೆ. ಇಂದಿನ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್(Gujarat Titans)​ ವಿರುದ್ಧ ಗೆಲ್ಲುವು ಮೂಲಕ ಸತತ 2ನೇ ಹಾಗೂ ಒಟ್ಟಾರೆ ಮೂರನೇ ಗೆಲುವು ದಾಖಲಿಸಿದೆ. ಗುಜರಾತ್​ ವಿರುದ್ಧ 9 ವಿಕೆಟ್​ ಅಂತರದ ಗೆಲುವು ಸಾಧಿಸುವ ಮೂಲಕ ಆರ್​ಸಿಬಿ(Royal Challengers Bengaluru) ಐಪಿಎಲ್​ನಲ್ಲಿ(IPL 2024) ನೂತನ ದಾಖಲೆಯೊಂದನ್ನು ನಿರ್ಮಿಸಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಗುಜರಾತ್​ ಟೈಟಾನ್ಸ್​, ಸಾಯಿ ಸುದರ್ಶನ್​(84*) ಮತ್ತು ಶಾರೂಖ್​ ಖಾನ್​(58) ಅವರ ಅರ್ಧಶತಕದ ಉಪಯುಕ್ತ ಬ್ಯಾಟಿಂಗ್​ ನೆರವಿನಿಂದ 20 ಓವರ್​ಗೆ 3 ವಿಕೆಟ್​ ಕಳೆದುಕೊಂಡು ಭರ್ತಿ 200 ರನ್​ ಪೇರಿಸಿತು. ಜವಾಬಿತ್ತ ಆರ್​ಸಿಬಿ ಫುಲ್​ ಬ್ಯಾಟಿಂಗ್​ ಜೋಶ್​ನೊಂದಿಗೆ ಕೇವಲ 16 ಓವರ್​ಗಳಲ್ಲಿ 1 ವಿಕೆಟ್​ನಷ್ಟಕ್ಕೆ ಇನ್ನೂ 24 ಎಸೆತಗಳು ಬಾಕಿ ಇರುವಂತೆಯೇ 206 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.

ಈ ಗೆಲುವಿನ ಮೂಲಕ ಐಪಿಎಲ್​ನ ಇದುವರೆಗಿನ ಇತಿಹಾಸದಲ್ಲಿ ಅತಿ ಕಡಿಮೆ ಎಸೆತಗಳನ್ನು ಎದುರಿಸಿ 200 ರನ್​ ಚೇಸಿಂಗ್​ ಮಾಡಿದ ಮೊದಲ ತಂಡ ಎಂಬ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿತು. ಇದಕ್ಕೂ ಮುನ್ನ ಈ ದಾಖಲೆ ಮುಂಬೈ ಇಂಡಿಯನ್ಸ್​ ತಂಡದ ಪರ ಇತ್ತು. 2023ರಲ್ಲಿ ಆರ್​ಸಿಬಿ ವಿರುದ್ಧವೇ ಮುಂಬೈ ಈ ದಾಖಲೆ ಬರೆದಿತ್ತು.

ಅತಿ ಹೆಚ್ಚು ಬಾಲ್​ ಉಳಿಸಿ 200 ರನ್​ ಚೇಸಿಂಗ್​ ನಡೆಸಿದ ತಂಡಗಳು


ಆರ್​ಸಿಬಿ-24 ಎಸೆತ ಬಾಕಿ ಇರುವಂತೆ ಗೆಲುವು

ಮುಂಬೈ ಇಂಡಿಯನ್ಸ್​- 21 ಎಸೆತ ಬಾಕಿ ಇರುವಂತೆ ಗೆಲುವು

ಡೆಲ್ಲಿ ಕ್ಯಾಪಿಟಲ್ಸ್​-15 ಎಸೆತ ಬಾಕಿ ಇರುವಂತೆ ಗೆಲುವು

ಮುಂಬೈ ಇಂಡಿಯನ್ಸ್​-12 ಎಸೆತ ಬಾಕಿ ಇರುವಂತೆ ಗೆಲುವು

ಇದನ್ನೂ ಓದಿ RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

ಈ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ವಿಲ್​ ಜಾಕ್ಸ್​ 41 ಎಸೆತಗಳಿಂದ ಬರೋಬ್ಬರಿ 10 ಸಿಕ್ಸರ್​ ಮತ್ತು 5 ಬೌಂಡರಿ ಬಾರಿಸಿ ಭರ್ತಿ 100 ರನ್​ ಪೇರಿಸಿದರು. ಈ ಮೂಲಕ ಐಪಿಎಲ್​ನಲ್ಲಿ ಚೊಚ್ಚಲ ಶತಕ ಪೂರ್ತಿಗೊಳಿಸಿದರು. ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್​ ನೀಡಿದ ವಿರಾಟ್​ ಕೊಹ್ಲಿ ಕೇವಲ 32 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿ ಒಟ್ಟು 44 ಎಸೆತಗಳಿಂದ ಅಜೇಯ 70 ರನ್​ ಬಾರಿಸಿ ಮಿಂಚಿದರು.

ದಾಖಲೆ ಬರೆದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಈ ಆವೃತ್ತಿಯಲ್ಲಿ 500 ರನ್​ಗಳ ಗಡಿ ದಾಟುವ ಮೂಲಕ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 500 ರನ್ ಗಡಿ ದಾಡಿದ ಆಸ್ಟ್ರೇಲಿಯಾದ ಡೇವಿಡ್​ ವಾರ್ನರ್​ ಅವರ ದಾಖಲೆಯನ್ನು ಸರಿಗಟ್ಟಿದರು. ಉಭಯ ಆಟಗಾರರು ಕೂಡ 7 ಬಾರಿ ಈ ಸಾಧನೆ ಮಾಡಿದ್ದಾರೆ. ಗುಜರಾತ್​ ವಿರುದ್ಧ ಕೊಹ್ಲಿ ಬಾರಿಸಿದ ಮೂರನೇ ಅರ್ಧಶತಕ ಇದಾಗಿದೆ. ಒಂದು ಶತಕ ಕೂಡ ಒಳಗೊಂಡಿದೆ.

Continue Reading

ಕ್ರೀಡೆ

YAJAMANA PREMIER LEAGUE SEASON-3: ಈ ಬಾರಿ ಟಿ10 ಮಾದರಿಯಲ್ಲಿ ನಡೆಯಲಿದೆ ಯಜಮಾನ ಪ್ರೀಮಿಯರ್ ಲೀಗ್​

YAJAMANA PREMIER LEAGUE SEASON-3: ಈ ಬಾರಿ ISPL ಮಾದರಿಯಲ್ಲಿ ಯಜಮಾನ ಪ್ರೀಮಿಯರ್ ಲೀಗ್ T10 ಟಚ್ ಕೊಡಲಾಗಿದೆ. ಪ್ರತಿ ತಂಡಗಳಿಗೂ ಮೆಂಟರ್ಸ್ ಗಳಿದ್ದು, ಶ್ರೇಯಸ್ ಮಂಜು, ಸಿಂಪಲ್ ಸುನಿ, ರೋಷನ್ ಬಚ್ಚನ್, ಜಯರಾಮ್ ಕಾರ್ತಿಕ್ ಸೇರಿದಂತೆ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಾಥ್ ಕೊಟ್ಟಿದ್ದಾರೆ.

VISTARANEWS.COM


on

YAJAMANA PREMIER LEAGUE SEASON-3 (2)
Koo

ಬೆಂಗಳೂರು: ಮೂರನೇ ಆವೃತ್ತಿಯ ಯಜಮಾನ ಪ್ರೀಮಿಯರ್ ಲೀಗ್(ವೈಪಿಎಲ್-3)ನ(YAJAMANA PREMIER LEAGUE SEASON-3) ದಿನಾಂಕ ಪ್ರಕಟಗೊಂಡಿದೆ. ಮೇ 4 ಮತ್ತು 5 ರಂದು ಎರಡು ದಿನಗಳ ಕಾಲ‌ ಟೂರ್ನಿ ನಡೆಯಲಿದೆ. ಶನಿವಾರ ತಂಡದ ಜರ್ಸಿ ಕೂಡ ಬಿಡುಗಡೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಟ ಜಯರಾಮ್ ಕಾರ್ತಿಕ್ ವಿಶೇಷ ಅತಿಥಿಯಾಗಿ ಕಾಣಿಸಿಕೊಂಡಿದ್ದರು.

ಜೆರ್ಸಿ ಬಿಡುಗಡೆಗೊಳಿಸಿದ ಬಳಿಕ ಮಾತನಾಡಿದ ನಟ ಜಯರಾಮ್ ಕಾರ್ತಿಕ್, ಒಂದು ಕ್ರಿಕೆಟ್ ಪಂದ್ಯಾವಳಿ ನಡೆಸುವುದು ಎಷ್ಟು ಕಷ್ಟ ಎನ್ನುವುದನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಯಜಮಾನ ಪ್ರೀಮಿಯರ್ ಲೀಗ್​ ಮೂರನೇ ವರ್ಷಕ್ಕೆ ಕಾಲಿಟ್ಟಿದೆ. ಇದು ಸಂತಸದ ವಿಚಾರ. ಈ ಲೀಗ್​ 100 ಆವೃತ್ತಿಯನ್ನು ಕಾಣಲಿ ಎಂದು ಹಾರೈಸುತ್ತೇನೆ. ವಿಷ್ಣು ಸರ್​ ಎಲ್ಲರಿಗೂ ಅಚ್ಚುಮೆಚ್ಚು. ಅವರ ಹೆಸರಿಗೆ ತಕ್ಕಂತೆ ಲೀಗ್​ಗೆ ಯಜಮಾನ ಲೀಗ್​ ಎಂದು ಹೆಸರಿಟ್ಟಿದ್ದು ಚೆನ್ನಾಗಿದೆ. ಇದು ನಮ್ಮ ಹೃದಯಕ್ಕೆ ಹತ್ತಿರವಾಗಿದೆ. ವಿಷ್ಣು ಸರ್ ನಮಗೆ ಸ್ಫೂರ್ತಿ. ಈ ಲೀಗ್​ನಲ್ಲಿ ಪಾಲ್ಗೊಳ್ಳುವ ಎಲ್ಲ ತಂಡಗಳಿಗೂ ಆಲ್ ದಿ ಬೆಸ್ಟ್ ಎಂದರು.


ಇದನ್ನೂ ಓದಿ RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

ಯದುನಂದನ್ ಗೌಡ ಮಾತನಾಡಿ, ಯಜಮಾನ ಪ್ರೀಮಿಯರ್ ಲೀಗ್ ನ ಮೂರು ವರ್ಷಗಳ ಹಿಂದೆ ಸಣ್ಣ ಪ್ರಮಾಣದಲ್ಲಿ ಶುರು ಮಾಡಿದ್ದೇವು.‌ ಪ್ರೀಮಿಯರ್, ಐಪಿಎಲ್ ಅಂತಾ ಕ್ರಿಕೆಟ್ ಪಂದ್ಯಾವಳಿ ಮಾಡುತ್ತಾರೆ. ನಾವು ಯಾಕೆ ವಿಷ್ಣು ಸರ್(Dr.Vishnu Sena Samiti) ಹೆಸರಿನಲ್ಲಿ ಮಾಡಬಾರದು ಎಂದು ಅವರ ಹೆಸರಲ್ಲಿ ಶುರು ಮಾಡಿದೆವು. ಕನ್ನಡ ಇಂಡಸ್ಟ್ರೀಗೆ ಕ್ರಿಕೆಟ್ ಪರಿಚಯಿಸಿದ್ದು,ನಮ್ಮ ಯಜಮಾನರು. ವಿಷ್ಣು ಸರ್ ಕನಸುಗಳಿಗೆ ಬಣ್ಣ ಹಚ್ಚುವ ಕೆಲಸ ನಡೆಯುತ್ತಿಲ್ಲ. ಹೀಗಾಗಿ ಅಭಿಮಾನಿಗಳೇ ಸೇರಿಕೊಂಡು ಯಜಮಾನ ಪ್ರೀಮಿಯರ್ ಲೀಗ್ ಪ್ರಾರಂಭಿಸಿದೆವು. ಸ್ಟಾರ್​ ವಾರ್​ ಬಿಟ್ಟು ಕನ್ನಡ ಚಿತ್ರರಂಗದ ಅಭಿಮಾನಿಗಳನ್ನು ಒಂದೇ ವೇದಿಕೆಯಲ್ಲಿ ತರುವ ಕೆಲಸವನ್ನು ಯಜಮಾನ ಪ್ರೀಮಿಯರ್ ಲೀಗ್ ಮೂಲಕ ಮಾಡಲಾಗಿದೆ. ನಿಮ್ಮ ಸಹಕಾರ ಇದ್ದರೆ ಈ ಪಂದ್ಯಾವಳಿಯನ್ನು ಮುಂದುವರೆಸಿಕೊಂಡು ಹೋಗುತ್ತೇವೆ ಎಂದರು.

ಟಿ10 ಮಾದರಿಯಲ್ಲಿ ಟೂರ್ನಿ


ಬೆಂಗಳೂರಿನ ಅಶೋಕ್ ರೈಸಿಂಗ್ ಕ್ರಿಕೆಟ್ ಗ್ರೌಂಡ್ ನಲ್ಲಿ ಪಂದ್ಯಾವಳಿ ನಡೆಯಲಿದೆ. ಈ ಬಾರಿ ISPL ಮಾದರಿಯಲ್ಲಿ ಯಜಮಾನ ಪ್ರೀಮಿಯರ್ ಲೀಗ್ T10 ಟಚ್ ಕೊಡಲಾಗಿದೆ. ಪ್ರತಿ ತಂಡಗಳಿಗೂ ಮೆಂಟರ್ಸ್ ಗಳಿದ್ದು, ಶ್ರೇಯಸ್ ಮಂಜು, ಸಿಂಪಲ್ ಸುನಿ, ರೋಷನ್ ಬಚ್ಚನ್, ಜಯರಾಮ್ ಕಾರ್ತಿಕ್ ಸೇರಿದಂತೆ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಾಥ್ ಕೊಟ್ಟಿದ್ದಾರೆ. ವೈಪಿಎಲ್ ಅನ್ನು ವಿಷ್ಣು ಸೇನಾ ಸಮಿತಿಯ ಬೆಂಗಳೂರಿನ ಜಿಲ್ಲಾಧ್ಯಕ್ಷ ಯದುನಂದನ್ ಗೌಡ ನಡೆಸುತ್ತಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿಸಿ ಮಲ್ಲಿಕಾರ್ಜುನ್ ಅವರಿಗೆ ಸಾಥ್ ಕೊಡುತ್ತಿದ್ದಾರೆ.


ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ ಪಂದ್ಯ ಶುರು ಮಾಡಿದ ಕೀರ್ತಿ ಡಾ.ವಿಷ್ಣುವರ್ಧನ್ ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ವಿಷ್ಣುವರ್ಧನ್​ ಸದಾ ಕ್ರಿಕೆಟ್ ಆಡುತ್ತಿದ್ದರು. ವೃತ್ತಿಪರ ಕ್ರಿಕೆಟ್ ಆಟಗಾರರ ಜತೆಯೂ ಅವರು ಪಂದ್ಯಾವಳಿಗಳನ್ನು ಆಡಿದ್ದರು. ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಅವರ ಅಭಿಮಾನಿಗಳು ಕೂಡ ‘ಯಜಮಾನ ಪ್ರೀಮಿಯರ್ ಲೀಗ್’ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುತ್ತಾ ಬಂದಿದ್ದಾರೆ.

Continue Reading
Advertisement
love jihad
ಕರ್ನಾಟಕ3 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ4 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು4 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ4 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ4 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20244 hours ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ5 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ5 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ5 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ5 hours ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202411 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202413 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202415 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202416 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ18 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ23 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ3 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌