IPL 2024 Final: ಐಪಿಎಲ್​ ವಿನ್ನರ್​ & ರನ್ನರ್​ಗೆ ಸಿಗುವ ಮೊತ್ತವೆಷ್ಟು? ಈ ಬಾರಿ ಆರೆಂಜ್​ ಕ್ಯಾಪ್​, ಪರ್ಪಲ್​ ಕ್ಯಾಪ್​ ಯಾರಿಗೆ ಸಿಗಲಿದೆ? - Vistara News

ಕ್ರೀಡೆ

IPL 2024 Final: ಐಪಿಎಲ್​ ವಿನ್ನರ್​ & ರನ್ನರ್​ಗೆ ಸಿಗುವ ಮೊತ್ತವೆಷ್ಟು? ಈ ಬಾರಿ ಆರೆಂಜ್​ ಕ್ಯಾಪ್​, ಪರ್ಪಲ್​ ಕ್ಯಾಪ್​ ಯಾರಿಗೆ ಸಿಗಲಿದೆ?

IPL 2024 Final: ಫೈನಲ್​ನಲ್ಲಿ ವಿಜೇತ ತಂಡಕ್ಕೆ ಬಹುಮಾನ ಮೊತ್ತವಾಗಿ 20 ಕೋಟಿ ರೂಪಾಯಿ ಸಿಗಲಿದೆ. ಹಾಗೆಯೇ, ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ರಾಜಸ್ಥಾನ್​ಗೆ 7 ಕೋಟಿ ಮತ್ತು 4ನೇ ಸ್ಥಾನಿ ಆರ್​ಸಿಬಿಗೆ 6.5 ಕೋಟಿ ರೂ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

VISTARANEWS.COM


on

IPL 2024 Final
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಇಂದು (ಭಾನುವಾರ) ನಡೆಯಲಿರುವ 17ನೇ ಆವೃತ್ತಿಯ ಐಪಿಎಲ್(IPL 2024 Final)​ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ಮತ್ತು ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ವಿಶ್ವದಲ್ಲೇ ಅತ್ಯಂತ ಶ್ರೀಮಂತ ಟಿ20 ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ವಿಜೇತರು(IPL 2024 Prize money) ಎಷ್ಟು ಹಣ ಪಡೆಯುತ್ತಾರೆ ಎನ್ನುವ ಕುತೂಲಕಾರಿ ಮಾಹಿತಿ ಇಂತಿದೆ.

ಕೆಕೆಆರ್​ ಮತ್ತು ಹೈದರಾಬಾದ್ ಐಪಿಎಲ್‌ ಫೈನಲ್‌ನಲ್ಲಿ ಪರಸ್ಪರ ಎದುರಾಗುತ್ತಿರುವುದು ಇದೇ ಮೊದಲು. ಫೈನಲ್​ನಲ್ಲಿ ವಿಜೇತ ತಂಡಕ್ಕೆ ಬಹುಮಾನ ಮೊತ್ತವಾಗಿ 20 ಕೋಟಿ ರೂಪಾಯಿ ಸಿಗಲಿದೆ. ಹಾಗೆಯೇ, ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ರಾಜಸ್ಥಾನ್​ಗೆ 7 ಕೋಟಿ ಮತ್ತು 4ನೇ ಸ್ಥಾನಿ ಆರ್​ಸಿಬಿಗೆ 6.5 ಕೋಟಿ ರೂ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

ಸ್ವಾರಸ್ಯವೆಂದರೆ ಐಪಿಎಲ್​ ವಿಜೇತರಿಗಿಂತ ಅಧಿಕ ಮೊತ್ತ ಈ ಬಾರಿ ಆಸ್ಟ್ರೇಲಿಯಾದ ಆಟಗಾರರಾದ ಪ್ಯಾಟ್‌ ಕಮಿನ್ಸ್‌ ಮತ್ತು ಮಿಚೆಲ್​ ಸ್ಟಾರ್ಕ್​ಗೆ ಸಿಕ್ಕಿದೆ. ಪ್ಯಾಟ್‌ ಕಮಿನ್ಸ್‌ ಅವರನ್ನು ಹೈದರಾಬಾದ್‌ 20.5 ಕೋಟಿ ರೂ.ಗೆ ಖರೀದಿಸಿತ್ತು. ಅತ್ತ ಕೆಕೆಆರ್​ ವಿಚೆಲ್​ ಸ್ಟಾರ್ಕ್‌ ಅವರನ್ನು ಬರೋಬ್ಬರಿ 24.75 ಕೋಟಿ ರೂ. ನೀಡಿ ತನ್ನ ತಂಡಕ್ಕೆ ಸೇರಿಸಿಕೊಂಡಿತು.

ಇದನ್ನೂ ಓದಿ KKR vs SRH IPL 2024: ಐಪಿಎಲ್​ ಫೈನಲ್​ ಸಮಾರಂಭದಲ್ಲಿ ಸಂಗೀತ ರಸದೌತಣ ನೀಡಲಿದ್ದಾರೆ ಕೊಹ್ಲಿಯ ಅಪ್ಪಟ ಅಭಿಮಾನಿ

ಕೊಹ್ಲಿಗೆ ಆರೆಂಜ್​ ಕ್ಯಾಪ್​


ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಗೆದ್ದ ಆಟಗಾರರಿಗೆ 15 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸದ್ಯ ಆರ್​ಸಿಬಿ ತಂಡದ ವಿರಾಟ್​ ಕೊಹ್ಲಿ ಈ ಬಾರಿಯ ಟೂರ್ನಿಯಲ್ಲಿ 741 ರನ್​ ಬಾರಿಸಿ ಆರೆಂಜ್ ಕ್ಯಾಪ್ ಹೋಲ್ಡರ್​ ಆಗಿದ್ದಾರೆ. ಇವರ ರನ್​ ಹಿಂದಿಕ್ಕಲು ಇನ್ನು ಯಾರಿಗೂ ಅವಕಾಶ ಇಲ್ಲದ ಕಾರಣ ಈ ಪ್ರಶಸ್ತಿ ಇವರಿಗೇ ಸಿಗಲಿದೆ.

ಪರ್ಪಲ್​ ಕ್ಯಾಪ್​ ಸದ್ಯ 24 ವಿಕೆಟ್​ ಪಡೆದಿರುವ ಪಂಜಾಬ್ ಕಿಂಗ್ಸ್​​ ತಂಡದ ಹರ್ಷಲ್​ ಪಟೇಲ್​ ಬಳಿ ಇದೆ. ಆದರೆ ಈ ಕ್ಯಾಪ್​ ಪಡೆಯಲು ಕೆಕೆಆರ್​ ತಂಡದ ಸ್ಪಿನ್ನರ್​ ವರಣ್​ ಚರ್ಕವರ್ತಿಗೆ ಉತ್ತಮ ಅವಕಾಶವಿದೆ. ವರುಣ್​ ಸದ್ಯ 20 ವಿಕೆಟ್​ ಕಿತ್ತಿದ್ದಾರೆ. ಫೈನಲ್​ ಪಂದ್ಯದಲ್ಲಿ 5 ವಿಕೆಟ್​ ಕಿತ್ತರೆ ಈ ಕ್ಯಾಪ್​ ಇವರ ಪಾಲಾಗಲಿದೆ.

ಇತರ ಬಹುಮಾನ


ಪಂದ್ಯಾವಳಿಯ ಉದಯೋನ್ಮುಖ ಆಟಗಾರನಿಗೆ 20 ಲಕ್ಷ ರೂಪಾಯಿ ನಗದು ಬಹುಮಾನವನ್ನು ಸಿಗಲಿದೆ. ಋತುವಿನ ಅತ್ಯಂತ ಮೌಲ್ಯಯುತ ಆಟಗಾರ 12 ಲಕ್ಷ ರೂಪಾಯಿ, ಇತರ ಪ್ರಶಸ್ತಿಗಳಾದ-ಪವರ್ ಪ್ಲೇಯರ್ ಆಫ್ ದಿ ಸೀಸನ್, ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಮತ್ತು ಗೇಮ್ ಚೇಂಜರ್ ಆಫ್ ದಿ ಸೀಸನ್ ಪಡೆದ ಆಟಗಾರ ಕ್ರಮವಾಗಿ ರೂ 15 ಲಕ್ಷ ಮತ್ತು ರೂ 12 ಲಕ್ಷ ನಗದು ಬಹುಮಾನ ಪಡೆಯಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Yusuf Pathan: ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜೈ ಹಿಂದ್‌ ಘೋಷಣೆ ಕೂಗಿದ ಯೂಸುಫ್ ಪಠಾಣ್

Yusuf Pathan: ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದರು.

VISTARANEWS.COM


on

Koo

ನವದೆಹಲಿ: ಪಶ್ಚಿಮ ಬಂಗಾಳದ ಬರ್ಹಾಂಪೋರ್‌ ಲೋಕಸಭಾ ಕ್ಷೇತ್ರದ ಟಿಎಂಸಿ ಸಂಸದ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್(Yusuf Pathan) ಅವರು ಬುಧವಾರ 18ನೇ ಲೋಕಸಭೆ(Loksabha)ಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಹಿಂದ್‌, ಜೈ​ ಗುಜರಾತ್​, ಜೈ ಬಂಗಾಳ​ ಎಂದು ಘೋಷಣೆ ಕೂಗಿದರು.

ಯೂಸುಫ್ ಪಠಾಣ್ ಮುಸ್ಲಿಂ ಸಮುದಾಯದವರಾಗಿದ್ದರೂ ಕೂಡ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಅಚ್ಚರಿಗೆ ಕಾರಣವಾಗಿದ್ದು, ಕೆಲ ಮುಸ್ಲಿಂ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದರು. ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದಿದ್ದರು. ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.

ಮೂಲತಃ ಗುಜರಾತ್‌ನವರಾದ ಯೂಸುಫ್ ಪಠಾಣ್ ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಪರ ಹಲವು ವರ್ಷಗಳ ಕಾಲ ಆಡಿದ್ದರು. ಅಲ್ಲದೆ ತಂಡದ ಪ್ರಧಾನ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಬಂಗಾಳದಾದ್ಯಂತ ಯೂಸುಫ್​ಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇದೇ ಕಾರಣದಿಂದ ಅವರಿಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ಟಿಕೆಟ್​ ನೀಡಲಾಗಿತ್ತು.

ಇದನ್ನೂ ಓದಿ Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

18ನೇ ಲೋಕಸಭೆಯ ಮೊದಲ ಅಧಿವೇಶನ(Parliament Sessions)ದ ಮೂರನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಇಂದು ಸ್ಪೀಕರ್‌ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಓಂ ಬಿರ್ಲಾ(Om Birla) ಅವರು ಎರಡನೇ ಬಾರಿ ಲೋಕಸಭೆಯ ಸ್ಪೀಕರ್‌ ಆಗಿ ಚುನಾಯಿತ(Lok Sabha Speaker)ರಾಗಿದ್ದಾರೆ. ಚುನಾಯಿತರಾದ ಬಳಿಕ ಮೊದಲ ಬಾರಿಗೆ ಸಂಸತ್‌ನಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಸಂದರ್ಭವನ್ನು ಪ್ರಸ್ತಾಪಿಸಿದರು.

ಸ್ಪೀಕರ್‌ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಓಂ ಬಿರ್ಲಾ, ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದರು. ಆ ಸಂದರ್ಭದಲ್ಲಿ ಜನರಿಗಾದ ಕಷ್ಟ ಕಾರ್ಪಣ್ಯಗಳ ಬಗ್ಗೆ ಮಾತನಾಡಿದರು. ಅಲ್ಲದೇ ತುರ್ತು ಪರಿಸ್ಥಿತಿಯ 50ನೇ ವರ್ಷಾಚರಣೆ ಹಿನ್ನೆಲೆ ಎರಡು ದಿನ ಮೌನಾಚರಣೆಗೆ ಕರೆ ನೀಡಿದರು. ಇದರ ಬೆನ್ನಲ್ಲೇ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪರಿಣಾಮವಾಗಿ ಕಲಾಪನ್ನು ಮುಂದೂಡಲಾಯಿತು. ಸರ್ವಾಧಿಕಾರವನ್ನು ನಿಲ್ಲಿಸಿ.. ದೇಶವನ್ನೇ ಜೈಲಾಗಿ ಪರಿವರ್ತಿಸಿದ್ದಾರೆ ಎಂದು ಘೋಷಣೆ ಕೂಗಿದರು.

ಇದಾದ ಬಳಿಕ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ ಓಂ ಬಿರ್ಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಗೌರವಾನ್ವಿತ ಸಭಾಧ್ಯಕ್ಷರು ತುರ್ತು ಪರಿಸ್ಥಿತಿಯನ್ನು ಬಲವಾಗಿ ಖಂಡಿಸಿದ್ದು, ಆ ಸಮಯದಲ್ಲಿ ಮಾಡಿದ ಅತಿರೇಕ ವರ್ತನೆ ಮತ್ತು ಪ್ರಜಾಪ್ರಭುತ್ವವನ್ನು ಕತ್ತು ಹಿಸುಕಿದ ರೀತಿಯನ್ನು ಪ್ರಸ್ತಾಪಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಆ ದಿನಗಳಲ್ಲಿ ನಡೆದ ಹಿಂಸಾಚಾರ ಖಂಡಿಸಿ ನಡೆಸಲಾದ ಮೌನಾಚರಣೆಯನ್ನು ನಾವು ಪ್ರಶಂಸಿಸುತ್ತೇವೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Continue Reading

ಕ್ರೀಡೆ

IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

IND vs ENG Semi Final: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇತ್ತಂಡಗಳು 4 ಪಂದ್ಯಗಳನ್ನು ಆಡಿ ತಲಾ 2 ಪಂದ್ಯಗಳಲ್ಲಿ ಗೆಲುವು ಮತ್ತು ಸೋಲು ಕಂಡಿವೆ. ಭಾರತ ಕೊನೆಯ ಬಾರಿಗೆ ಇಂಗ್ಲೆಂಡ್​ ವಿರುದ್ಧ ಟಿ20 ಗೆಲುವು ಕಂಡಿದ್ದು 2012ರಲ್ಲಿ. ಆ ಪಂದ್ಯದಲ್ಲಿ ಧೋನಿ ಪಡೆ 90 ರನ್​ ಗೆಲುವು ಸಾಧಿಸಿತ್ತು.

VISTARANEWS.COM


on

IND vs ENG Semi Final
Koo

ಪ್ರೊವಿಡೆನ್ಸ್‌: ಕ್ರಿಕೆಟ್​ ಅಭಿಮಾನಿಗಳು ಭಾರೀ ನಿರೀಕ್ಷೆಯೊಂದಿಗೆ ಕಾದು ಕುಳಿತಿರುವ ಭಾರತ ಮತ್ತು ಇಂಗ್ಲೆಂಡ್​ ನಡುವಣ ಹೈವೋಲ್ಟೇಜ್ ಸೆಮಿಫೈನಲ್(IND vs ENG Semi Final)​​ ಪಂದ್ಯ ನಾಳೆ (ಗುರುವಾರ) ಗಯಾನದ (Guyana) ಪ್ರೊವಿಡೆನ್ಸ್‌(Providence Stadium) ಸ್ಟೇಡಿಯಂನಲ್ಲಿ ನಡೆಯಲಿದೆ. ಇತ್ತಂಡಗಳ ಇದುವರೆಗಿನ ಟಿ20 ಮುಖಾಮುಖಿ, ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಮಾಹಿತಿ ಹೀಗಿದೆ.

ಟಿ20 ಮುಖಾಮುಖಿ


ಭಾರತ ಮತ್ತು ಇಂಗ್ಲೆಂಡ್​ ಇದುವರೆಗೆ ಟಿ20 ಕ್ರಿಕೆಟ್​ನಲ್ಲಿ 23 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 12 ಪಂದ್ಯ ಗೆದ್ದಿದ್ದರೆ, ಇಂಗ್ಲೆಂಡ್​ 11 ಪಂದ್ಯಗಳನ್ನು ಗೆದ್ದಿದೆ. ಕಳೆದ 2 ವರ್ಷಗಳಿಂದ ಇಂಗ್ಲೆಂಡ್​ ವಿರುದ್ಧ ಭಾರತ ಗೆಲುವು ಕಂಡಿಲ್ಲ. 2022ರ ಟಿ20 ವಿಶ್ವಕಪ್(T20 World Cup 2024)​ ಸೆಮಿಫೈನಲ್​ ಪಂದ್ಯದ ಬಳಿಕ ಉಭಯ ತಂಡಗಳು ಇದುವರೆಗೂ ಟಿ20ಯಲ್ಲಿ ಮುಖಾಮುಖಿಯಾಗಿಲ್ಲ. ಆ ಪಂದ್ಯದಲ್ಲಿ ಭಾರತ 10 ವಿಕೆಟ್​ ಸೋಲು ಕಂಡಿತ್ತು. ಅಂದಿನ ಸೋಲಿಗೆ ಈ ಬಾರಿಯ ಸೆಮಿ ಕಾದಾಟದಲ್ಲಿ ಭಾರತ ಸೇಡು ತೀರಿಸಿಕೊಂಡೀತೇ ಎಂದು ಕಾದು ನೋಡಬೇಕಿದೆ.

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇತ್ತಂಡಗಳು 4 ಪಂದ್ಯಗಳನ್ನು ಆಡಿ ತಲಾ 2 ಪಂದ್ಯಗಳಲ್ಲಿ ಗೆಲುವು ಮತ್ತು ಸೋಲು ಕಂಡಿವೆ. ಭಾರತ ಕೊನೆಯ ಬಾರಿಗೆ ಇಂಗ್ಲೆಂಡ್​ ವಿರುದ್ಧ ಟಿ20 ಗೆಲುವು ಕಂಡಿದ್ದು 2012ರಲ್ಲಿ. ಆ ಪಂದ್ಯದಲ್ಲಿ ಧೋನಿ ಪಡೆ 90 ರನ್​ ಗೆಲುವು ಸಾಧಿಸಿತ್ತು.

ಇದನ್ನೂ ಓದಿ IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

ಪಿಚ್​ ರಿಪೋರ್ಟ್​


ಪ್ರಾವಿಡೆನ್ಸ್ ಸ್ಟೇಡಿಯಂನ ಪಿಚ್​ ಬೌಲಿಂಗ್​ಗೆ ಹೆಚ್ಚಿನ ನೆರವು ನೀಡುತ್ತದೆ. ಪಂದ್ಯ ಸಾಗಿದಂತೆ ಇಲ್ಲಿ ಹೆಚ್ಚಾಗಿ ಸ್ಪಿನ್ನರ್‌ಗಳು ಪ್ರಾಬಲ್ಯ ಸಾಧಿಸಲಿದ್ದಾರೆ. ದೊಡ್ಡ ಮೊತ್ತ ಬಾರಿಸುವುದು ಇಲ್ಲಿ ಅಷ್ಟು ಸುಲಭವಲ್ಲ. 2010ರಲ್ಲಿ 191 ರನ್ ದಾಖಲಾದದ್ದೆ ಇಲ್ಲಿನ ಗರಿಷ್ಠ ಸ್ಕೋರ್​. ಹೀಗಾಗಿ ನಾಳಿನ ಪಂದ್ಯ ಕೂಡ ಲೋ ಸ್ಕೋರ್​ ಆಗುವ ಸಾಧ್ಯತೆ ಅಧಿಕವಾಗಿದೆ.

ಹವಾಮಾನ ವರದಿ


ಈಗಾಗಲೇ ಹವಾಮಾನ ಇಲಾಖೆ ಈ ಪಂದ್ಯಕ್ಕೆ ಭಾರೀ ಮಳೆ ಎಚ್ಚರಿಕೆ ನೋಡಿದ್ದು, ಪಂದ್ಯದ ಸಮಯದಲ್ಲಿ ಮಳೆ ಸುರಿಯುವ ಸಾಧ್ಯತೆ ಶೇ. 88ರಷ್ಟಿದೆ ಎಂದು ತಿಳಿಸಿದೆ. ಪಂದ್ಯ ರದ್ದಾದರೂ ಅಚ್ಚರಿ ಇಲ್ಲ ಎಂದು ಹೇಳಿದೆ. ಅಚ್ಚರಿ ಎಂದರೆ ಈ ಪಂದ್ಯಕ್ಕೆ ಮೀಸಲು ದಿನ ಕೂಡ ಇಲ್ಲ. ಆದರೆ, ಪಂದ್ಯ ಮುಗಿಸಲು 250 ನಿಮಿಷಗಳ ಹೆಚ್ಚುವರಿ ಸಮಯವನ್ನು ಐಸಿಸಿ ನೀಡಿದೆ. ಒಂದು ವೇಳೆ ಪಂದ್ಯ ರದ್ದುಗೊಂಡರೆ ಭಾರತ ತಂಡ ಫೈನಲ್​ಗೇರಲಿದೆ. ಏಕೆಂದರೆ ಸೂಪರ್​-8 ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನ ಸಂಪಾದಿಸಿದೆ. ಇಂಗ್ಲೆಂಡ್​ ಸೂಪರ್​-8 ಅಂಕಪಟ್ಟಿಯಲ್ಲಿ 2ನೇ ಸ್ಥಾನ ಗಳಿಸಿತ್ತು. ಹೀಗಾಗಿ ಈ ಲಾಭ ಭಾರತಕ್ಕೆ ಲಭಿಸಲಿದೆ.

ಸಂಭಾವ್ಯ ತಂಡಗಳು


ಭಾರತ:
ರೋಹಿತ್​ ಶರ್ಮ(ನಾಯಕ), ವಿರಾಟ್ ಕೊಹ್ಲಿ, ರಿಷಭ್​ ಪಂತ್​(ವಿಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್​ ಬುಮ್ರಾ.

ಇಂಗ್ಲೆಂಡ್​: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ರೀಸ್ ಟೋಪ್ಲಿ.

Continue Reading

ಕ್ರೀಡೆ

AFG vs SA Semi Final: ಚೊಚ್ಚಲ ಫೈನಲ್​ ನಿರೀಕ್ಷೆಯಲ್ಲಿ ಆಫ್ಘನ್​-ದಕ್ಷಿಣ ಆಫ್ರಿಕಾ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್?​

AFG vs SA Semi Final: ವೇಳಾಪಟ್ಟಿಯಂತೆ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ನಡುವಣ ಪಂದ್ಯ ಜೂನ್​ 26(ಇಂದು) ನಡೆಯುವ ಸ್ಪರ್ಧೆಯಾಗಿದೆ. ವಿಂಡೀಸ್​ನಲ್ಲಿ ಇದು ರಾತ್ರಿ ಪಂದ್ಯವಾದರೆ ಭಾರತೀಯ ಕಾಲಮಾನದಂತೆ ಗುರುವಾರ ಬೆಳಗ್ಗೆ ಪ್ರಸಾರಗೊಳ್ಳಲಿದೆ.

VISTARANEWS.COM


on

AFG vs SA Semi Final
Koo

ಟ್ರಿನಿಡಾಡ್: ಟಿ20 ವಿಶ್ಕಪ್​ ಟೂರ್ನಿಯ ಸೆಮಿಫೈನಲ್​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಭಾರತೀಯ ಕಾಲಮಾನದಂತೆ ನಾಳೆ ಟರೂಬದಲ್ಲಿ ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ-ಅಫಘಾನಿಸ್ಥಾನ(AFG vs SA Semi Final) ಮುಖಾಮುಖೀ ಆಗಲಿವೆ. ಇದೇ ದಿನ ರಾತ್ರಿ ಗಯಾನಾದ ಪ್ರೊವಿಡೆನ್ಸ್‌ನಲ್ಲಿ ನಡೆಯುವ ಮೊತ್ತೊಂದು ಸೆಮಿ ಪಂದ್ಯದಲ್ಲಿ ಭಾರತ ಮತ್ತು ಹಾಲಿ ಚಾಂಪಿಯನ್‌ ಇಂಗ್ಲೆಂಡ್​ ತಂಡದ ಸವಾಲನ್ನು ಎದುರಿಸಲಿದೆ.

ವೇಳಾಪಟ್ಟಿಯಂತೆ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ನಡುವಣ ಪಂದ್ಯ ಜೂನ್​ 26(ಇಂದು) ನಡೆಯುವ ಸ್ಪರ್ಧೆಯಾಗಿದೆ. ವಿಂಡೀಸ್​ನಲ್ಲಿ ಇದು ರಾತ್ರಿ ಪಂದ್ಯವಾದರೆ ಭಾರತೀಯ ಕಾಲಮಾನದಂತೆ ಗುರುವಾರ ಬೆಳಗ್ಗೆ ಪ್ರಸಾರಗೊಳ್ಳಲಿದೆ. ಈ ಪಂದ್ಯಕ್ಕೆ ಮಳೆ ಬಂದರೂ ಕೂಡ ಮೀಸಲು ದಿನವಿದೆ.

ಹಾಲಿ ಟಿ20 ವಿಶ್ವಕಪ್‌(T20 World Cup 2024) ಕ್ರಿಕೆಟ್‌ ಪಂದ್ಯಾವಳಿಯಲ್ಲಿ ನ್ಯೂಜಿಲ್ಯಾಂಡ್​, ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳಿಗೆ ಸೊಕ್ಕಡಗಿಸಿ ಕನಸಿನ ಓಟ ಬೆಳೆಸಿರುವ ಅಫಘಾನಿಸ್ತಾನ(AFG vs SA) ಸೆಮಿಫೈನಲ್​ನಲ್ಲಿಯೂ ಗೆಲುವು ಸಾಧಿಸುವ ಇರಾದೆಯಲ್ಲಿದೆ. ಅತ್ತ ಕೂಟದ ಅಜೇಯ ತಂಡವಾದ ದಕ್ಷಿಣ ಆಫ್ರಿಕಾದ (South Africa vs Afghanistan Semi Final 1) ಮೊದಲ ಬಾರಿಗೆ ಫೈನಲ್​ ಪ್ರವೇಶಿಸಿ ಚಾಂಪಿಯನ್​ ಪಟ್ಟ ಅಲಂಕರಸಿ ಚೋಕರ್ಸ್​ ಹಣೆಪಟ್ಟಿಯನ್ನು ಅಳಿಸಿ ಹಾಕುವ ಪಣತೊಟ್ಟಿದೆ. ಹೀಗಾಗಿ ಈ ಪಂದ್ಯವನ್ನು ಜಿದ್ದಾಜಿದ್ದಿನ ಪಂದ್ಯ ಎಂದಉ ನಿರೀಕ್ಷೆ ಮಾಡಬಹುದು.

ಇತ್ತಂಡಗಳಿಗೂ ಇದೆ ಅದೃಷ್ಟದ ಬಲ


ಈ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳಿಗೂ ಕೂಡ ಅದೃಷ್ಟ ಕೈ ಹಿಡಿದಿದೆ. ಲೀಗ್​ ಹಂತದಲ್ಲಿ ಸೋಲುವ ಪಂದ್ಯಗಳನ್ನು ಗೆದ್ದು ಸೂಪರ್​-8 ಹಂತಕ್ಕೇರಿತ್ತು. ಪ್ರತಿ ಐಸಿಸಿ ಟೂರ್ನಿಯಲ್ಲಿ ಗೆಲ್ಲುವ ಪಂದ್ಯಗಳನ್ನು ಸೋಲುವ ಮತ್ತು ಮಳೆಯಿಂದ ಹೊನ್ನಡೆ ಅನುಭವಿಸಿ ಚೋಕರ್ಸ್​ ಎನಿಸಿಕೊಳ್ಳುತ್ತಿದ್ದ ದಕ್ಷಿಣ ಆಫ್ರಿಕಾದ ನಸೀಬು ಈ ಬಾರಿ ಬದಲಾದಂತಿದೆ. ಲೀಗ್​ ಹಂತದಲ್ಲಿ ಬಾಂಗ್ಲಾ ವಿರುದ್ಧ 1 ರನ್​ ಅಂತರದಿಂದ ಗೆದ್ದದ್ದು, ಸೂಪರ್​-8 ಪಂದ್ಯದಲ್ಲಿ ವಿಂಡೀಸ್​ ಎದುರು ಮಳೆ ಪೀಡಿತ ಪಂದ್ಯವನ್ನು ಜಯಿಸಿದ್ದು ನೋಡುವಾಗ ಹರಿಣ ಪಡೆ ಈ ಬಾರಿ ಚೋಕರ್ಸ್​ ಹಣೆಪಟ್ಟಿಯನ್ನು ಕಳಚಿಕೊಳ್ಳುವ ಸಾಧ್ಯತೆಯೊಂದು ಕಂಡಿಬಂದಿದೆ.

ಇದನ್ನೂ ಓದಿ IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

ಸಿಡಿಯಬೇಕಿದೆ ಮಾರ್ಕ್ರಮ್​, ಕ್ಲಾಸೆನ್​, ಮಿಲ್ಲರ್​

ದಕ್ಷಿಣ ಆಫ್ರಿಕಾ ಪರ ಡಿ ಕಾಕ್​ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟರ್​ ಇದುವರೆಗೂ ನಿರೀಕ್ಷತ ಬ್ಯಾಟಿಂಗ್​ ಪ್ರದರ್ಶನ ತೋರದಿದ್ದರು. ಕೂಡ ಬೌಲಿಂಗ್​ ಮತ್ತು ಫೀಲ್ಡಿಂಗ್​ನಲ್ಲಿ ಉತ್ಕೃಷ್ಟ ಮಟ್ಟದ ಪ್ರದರ್ಶನ ತೋರುವ ಮೂಲಕ ಪಂದ್ಯವನ್ನು ಗೆದ್ದಿದ್ದಾರೆ. ಆದರೆ, ಸೆಮಿಫೈನಲ್​ನಲ್ಲಿಯೂ ಇದೇ ರೀತಿಯಲ್ಲಿ ಪಂದ್ಯವನ್ನು ಗೆಲ್ಲಬಹುದೆಂದು ಯೋಚಿಸಿ ಕುಳಿತರೆ ಸೋಲು ಎದುರಾಗುವುದು ಖಚಿತ ಎನ್ನಲಡ್ಡಿಯಿಲ್ಲ. ಏಕೆಂದರೆ, ಅಫಘಾನಿಸ್ತಾನ 100 ರನ್​ ಬಾರಿಸಿದರೂ ಕೂಡ ಇದನ್ನು ಹಿಡಿದು ನಿಲ್ಲಿಸುವ ತಾಕತ್ತು ಈ ತಂಡದ ಬೌಲರ್​ಗಳಿಗಿದೆ. ಸ್ಪಿನ್​, ಸ್ಪೀಡ್​ ಎರಡೂ ವಿಭಾಗದಲ್ಲಿಯೂ ವೈವಿಧ್ಯಮಯವಾಗಿದೆ. ಬ್ಯಾಟಿಂಗ್​ನಲ್ಲಿ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಪ್ರತಿ ಪಂದ್ಯದಲ್ಲಿಯೂ ಶ್ರೇಷ್ಠ ಬ್ಯಾಟಿಂಗ್​ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಮಧ್ಯಮ ವೇಗಿ ನವೀನ್​ ಉಲ್​ ಹಕ್​ ಕೂಡ ಘಾತಕ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

ಬಲಾಬಲ

ಅಫಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೂ ಟಿ20 ಕ್ರಿಕೆಟ್​ನಲ್ಲಿ 2 ಬಾರಿ ಮುಖಾಮುಖಿಯಾಗಿವೆ. ಈ ಎರಡೂ ಪಂದ್ಯಗಳನ್ನು ಕೂಡ ದಕ್ಷಿಣ ಆಫ್ರಿಕಾವೇ ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹರಿಣ ಪಡೆಯೇ ಬಲಿಷ್ಠವಾಗಿ ಗೋಚರಿಸಿದೆ. ಆದರೂ ಕೂಡ ಅಪಾಯಕಾರಿ ಆಫ್ಘನ್​ ಸವಾಲನ್ನು ಹಗುರವಾಗಿ ಕಾಣಬಾರದು. ಏಕೆಂದರೆ ಹೊಡಿ ಬಡಿ ಆಟವಾದ ಟಿ20 ಕ್ರಿಕೆಟ್​ನಲ್ಲಿ ಕೊನೆಯ ಎಸೆತದಲ್ಲಿಯೂ ಪಂದ್ಯದ ಫಲಿತಾಂಶ ಬದಲಾದ ನಿದರ್ಶನವಿದೆ.

Continue Reading

ಕ್ರೀಡೆ

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

IND vs ENG Semi Final: ಇಂಗ್ಲೆಂಡ್​ ನಾಯಕ ಜಾಸ್​ ಬಟ್ಲರ್‌, ಫಿಲ್​ ಸಾಲ್ಟ್​, ಜಾನಿ ಬೇರ್‌ಸ್ಟೊ, ಹ್ಯಾರಿ ಬ್ರೂಕ್​, ಸ್ಯಾಮ್​ ಕರನ್​, ಮೊಯಿನ್​ ಅಲಿ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ಟಿ20ಗೆ ಹೇಳಿ ಮಾಡಿಸಿದಂತಿದೆ. ಇವರನ್ನು ನಿಯಂತ್ರಿಸುವುದರಲ್ಲಿ ಭಾರತದ ಯಶಸ್ಸು ಅಡಗಿದೆ.

VISTARANEWS.COM


on

Koo

ಟರೂಬ/ಪ್ರೊವಿಡೆನ್ಸ್‌: ಚುಟುಕು ಕ್ರಿಕೆಟ್‌ನಲ್ಲಿ ತನ್ನದೇ ಹೆಗ್ಗುರುತು ಸ್ಥಾಪಿಸಿರುವ ಟೀಮ್‌ ಇಂಡಿಯಾ ನಾಳೆ (ಗುರುವಾರ) ನಡೆಯುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯ ಸೆಮಿಫೈನಲ್​(IND vs ENG Semi Final) ಪಂದ್ಯದಲ್ಲಿ ಇಂಗ್ಲೆಂಡ್(IND vs ENG)​ ವಿರುದ್ಧ ಅದೃಷ್ಠ ಪರೀಕ್ಷೆಗೆ ಇಳಿಯಲಿದೆ. ಸೀಮಿತ ಓವರ್‌ಗಳ ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ಕಳೆದ ಕೆಲವು ವರ್ಷಗಳಿಂದ ಸ್ಥಿರತೆಯನ್ನು ಕಾಪಾಡಿಕೊಂಡು ಬಂದಿದೆ. ಅತ್ತ ಹಾಲಿ ಚಾಂಪಿಯನ್​ ಆಗಿರುವ ಇಂಗ್ಲೆಂಡ್​ ಸಹ ಇತ್ತೀಚೆಗೆ ಟಿ20ಗಳಲ್ಲಿ ಬಲಾಡ್ಯ ತಂಡವಾಗಿ ಹೊರಹೊಮ್ಮಿದೆ. ಹೀಗಾಗಿ ಇತ್ತಂಡಗಳ ನಡುವಿನ ಕ್ರಿಕೆಟ್‌ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಭಾರತಕ್ಕೆ ಕೊಹ್ಲಿಯದ್ದೇ ಚಿಂತೆ


ಪ್ರತಿ ಐಸಿಸಿ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ತೋರುವ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿಯ ಬ್ಯಾಟ್​ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಸದ್ದು ಮಾಡುತ್ತಿಲ್ಲ. ಇದು ಭಾರತ ತಂಡಕ್ಕೆ ದೊಡ್ಡ ಚಿಂತೆ ಉಂಟು ಮಾಡಿದೆ. ಆಡಿದ 7 ಪಂದ್ಯಗಳಲ್ಲಿ 2 ಶೂನ್ಯ ಸುತ್ತಿದ್ದಾರೆ. ಒಂದು ಪಂದ್ಯದಲ್ಲಿ ಮಾತ್ರ ಎರಡಂಕಿ ದಾಟಿದ್ದಾರೆ. ಹೀಗಾಗಿ ಕೊಹ್ಲಿ ಇಂಗ್ಲೆಂಡ್‌ ವಿರುದ್ಧ ಸಿಡಿದು ನಿಲ್ಲಬೇಕಾದುದ ಅನಿವಾರ್ಯತೆ ಇದೆ. ಕೊಹ್ಲಿ ಜತೆಗೆ ಶಿವಂ ದುಬೆ ಕೂಡ ಸಿಡಿದು ನಿಲ್ಲಬೇಕಿದೆ. ಐಪಿಎಲ್​ನಲ್ಲಿ ತೋರಿದ ಬ್ಯಾಟಿಂಗ್​ ಆರ್ಭಟವನ್ನು ದುಬೆ ಈ ಟೂರ್ನಿಯಲ್ಲಿ ಇದುವರೆಗೆ ತೋರಿಸಿಲ್ಲ. ಎಲ್ಲ ಪಂದ್ಯಗಳಲ್ಲಿಯೂ ಆಮೆ ಗತಿಯ ಬ್ಯಾಟಿಂಗ್​ ನಡೆಸಿ ತಂಡದ ಬೃಹತ್​ ಮೊತ್ತಕ್ಕೆ ಹಿನ್ನಡೆ ಉಂಟುಮಾಡುತ್ತಿದ್ದಾರೆ.

ಉಪನಾಯಕ ಹಾರ್ದಿಕ್​ ಪಾಂಡ್ಯ ಅವರು ಈ ಬಾರಿಯ ಐಪಿಎಲ್​ನಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಘೋರ ವೈಫಲ್ಯ ಕಂಡಿದ್ದರು. ಅವರನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಿದಾಗ ಭಾರೀ ಟೀಕೆಗಳು ವ್ಯಕ್ತವಾಗಿತ್ತು. ಆದರೆ, ಪಾಂಡ್ಯ ಪ್ರತಿ ಪಂದ್ಯದಲ್ಲಿಯೂ ತಂಡಕ್ಕೆ ನೆರವಾಗುವ ಮೂಲಕ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಂದು ಪಾಂಡ್ಯ ಬೇಡ ಎಂದವರು ಇಂದು ಪಾಂಡ್ಯ ಇಲ್ಲದೇ ಇದ್ದರೆ ಗೆಲುವು ಕಷ್ಟ ಎನ್ನುತ್ತಿದ್ದಾರೆ. ಕಳೆದ ಆಸೀಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ನಡೆಸಿದ ನಾಯಕ ರೋಹಿತ್​ ಶರ್ಮ ಅವರ ಬ್ಯಾಟಿಂಗ್​ ಮೇಲೆ ಈ ಪಂದ್ಯದಲ್ಲಿಯೂ ತಂಡ ನಂಬಿಕೆ ಇರಿಸಿದೆ.

ಇದನ್ನೂ ಓದಿ IND vs ENG: ಇಂಗ್ಲೆಂಡ್‌ ಎದುರು ಭಾರತಕ್ಕೆ ಸೇಡಿನ ಪಂದ್ಯ; ನಾಳೆ ದ್ವಿತೀಯ ಸೆಮಿಫೈನಲ್​

ಇಂಗ್ಲೆಂಡ್​ ಕೂಡ ಬಲಿಷ್ಠ

ಇಂಗ್ಲೆಂಡ್​ ನಾಯಕ ಜಾಸ್​ ಬಟ್ಲರ್‌, ಫಿಲ್​ ಸಾಲ್ಟ್​, ಜಾನಿ ಬೇರ್‌ಸ್ಟೊ, ​ಲಿವಿಂಗ್​​ಸ್ಟೋನ್​, ಹ್ಯಾರಿ ಬ್ರೂಕ್​, ಸ್ಯಾಮ್​ ಕರನ್​, ಮೊಯಿನ್​ ಅಲಿ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ಟಿ20ಗೆ ಹೇಳಿ ಮಾಡಿಸಿದಂತಿದೆ. ಇವರನ್ನು ನಿಯಂತ್ರಿಸುವುದರಲ್ಲಿ ಭಾರತದ ಯಶಸ್ಸು ಅಡಗಿದೆ. ಕಳೆದ ಕೆಲವು ವರ್ಷಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದ ಘಾತಕ ವೇಗಿ ಜೋಫ್ರಾ ಆರ್ಚರ್​ ಕೂಡ ತಂಡಕ್ಕೆ ಮರಳಿದ್ದು ಇಂಗ್ಲೆಂಡ್​ ಬೌಲಿಂಗ್​ ಬಲವನ್ನು ಹೆಚ್ಚಿಸಿದೆ.

ಸೇಡಿನ ಪಂದ್ಯ

2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಇಂಗ್ಲೆಂಡ್​ ತಂಡ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ. ಇದರಲ್ಲಿ ರೋಹಿತ್​ ಬಳಗ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದೊಂದು ಕುತೂಹಲ.

Continue Reading
Advertisement
Prajwal revanna Case
ಕರ್ನಾಟಕ47 seconds ago

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Actress Akshita entry to kollywood cinema
ಕಾಲಿವುಡ್6 mins ago

Actress Akshita: ಕನ್ನಡತಿ ಅಕ್ಷಿತಾ ಈಗ ತಮಿಳು ಚಿತ್ರದ ನಾಯಕಿ!

ಕ್ರೀಡೆ8 mins ago

Yusuf Pathan: ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜೈ ಹಿಂದ್‌ ಘೋಷಣೆ ಕೂಗಿದ ಯೂಸುಫ್ ಪಠಾಣ್

ಕಿರುತೆರೆ33 mins ago

Shri Devi Mahathme: ಬರ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ”; ವೀಕ್ಷಣೆ ಎಲ್ಲಿ?

Renuka Swamy Murder
ಕರ್ನಾಟಕ41 mins ago

Renuka Swamy Murder: ರೇಣುಕಾಸ್ವಾಮಿ ಕೊಲೆ ಕೇಸ್‌; ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ ನಾಲ್ವರು ಆರೋಪಿಗಳು

IND vs ENG Semi Final
ಕ್ರೀಡೆ41 mins ago

IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

Lok Sabha Speaker
ದೇಶ44 mins ago

Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

actor producer and Cow lover Mahendra Munnoth donated 51 lakh rupees to cow shelter
ಬೆಂಗಳೂರು45 mins ago

Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

Bhaavaramayana Ramavatarana book release programme on June 29 in Bengaluru
ಕರ್ನಾಟಕ47 mins ago

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Varthur Santhosh Animal Transport Rules Violation Allegation
ಕ್ರೈಂ51 mins ago

Varthur Santhosh: ಹಳ್ಳಿಕಾರ್ ರೇಸ್ ನಡೆಸಲು ಸಜ್ಜಾಗುತ್ತಿದ್ದ ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌