IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್ - Vistara News

ಕ್ರೀಡೆ

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

IPL 2024: ಆರೋಗ್ಯ ಹದಗೆಡಲು ಸ್ಟೇಡಿಯಂನ ಕ್ಯಾಂಟಿನ್​ನಲ್ಲಿ ನೀಡಿದ ಆಹಾರವೇ ಕಾರಣ ಎಂದು ಚೈತನ್ಯ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​ನಲ್ಲಿ(IPL 2024) ಡೆಲ್ಲಿ ಮತ್ತು ಆರ್​ಸಿಬಿ(DC vs RCB) ನಡುವೆ ಮೇ 12ರಂದು ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(M.Chinnaswamy Stadium) ನಡೆದಿದ್ದ ಪಂದ್ಯದ ವೇಳೆ ಪ್ರೇಕ್ಷಕರಿಗೆ ಕಳಪೆ ಆಹಾರ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ(Karnataka State Cricket Association) ಆಡಳಿತ ಮಂಡಳಿ (KSCA) ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೇ 12ರಂದು ಐಪಿಎಲ್ ವೀಕ್ಷಣೆ ಬಂದಿದ್ದ 23 ವರ್ಷದ ಚೈತನ್ಯ ಕತಾರ್ ಏರ್ ವೇಸ್ ಫ್ಯಾನ್ಸ್ ಟರೇಸ್ ಸ್ಟ್ಯಾಂಡಿನ ಕ್ಯಾಂಟಿನ್ ನಿಂದ ಊಟ ಸೇವಿಸಿದ್ದ ನಂತರ ಕೆಲವೇ ನಿಮಿಷಗಳಲ್ಲಿ ಆತನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತಾನು ಕುಳಿತುಕೊಂಡಿದ್ದ ಜಾಗದಲ್ಲಿಯೇ ಚೈತನ್ಯ ಕುಸಿದುಬಿದ್ದಿದ್ದಾನೆ. ತಕ್ಷಣ ಸ್ಟೇಡಿಯಂ ಸಿಬ್ಬಂದಿ ನೆರವಿನಿಂದ ಆತನಿಗೆ ಆ್ಯಂಬುಲೆನ್ಸ್ ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು‌. ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದಾಗ ಚೈತನ್ಯರನ್ನು ಪರೀಕ್ಷಿಸಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

ಈ ಸಂಬಂಧ ತಮ್ಮ ಆರೋಗ್ಯ ಹದಗೆಡಲು ಕ್ಯಾಂಟಿನ್​ನಲ್ಲಿ ನೀಡಿದ ಆಹಾರವೇ ಕಾರಣ ಎಂದು ಚೈತನ್ಯ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದ ವೇಳೆ ಕಳಪೆ ಆಹಾರ ನೀಡುತ್ತಿರುವ ಆರೋಪ ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ. ಹಲವು ಬಾರಿ ಇಲ್ಲಿ ಪಂದ್ಯ ವೀಕ್ಷಣೆಗೆ ಬಂದಿದ್ದ ಪ್ರೇಕ್ಷಕರು ಇಲ್ಲಿನ ಆಹಾರ ವಿತರಣೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಗಂಭೀರ ಆರೋಪ ಮಾಡಿದ್ದರು. ಇನ್ನಾದರೂ ಕೆಎಸ್​ಸಿಎ ಈ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಆಹಾರ ನೀಡುವ ಕೆಲಸವನ್ನು ಮಾಡಬೇಕಿದೆ. ಡೆಲ್ಲಿ ವಿರುದ್ಧದ ಈ ಪಂದ್ಯವನ್ನು ಆರ್​ಸಿಬಿ 47 ರನ್​ ಅಂತರದಿಂದ ಗೆದ್ದು ಬೀಗಿತ್ತು.

ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!


ಬೆಂಗಳೂರಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದ ವೇಳೆಯೂ(bangalore water crisis) ಚಿನ್ನಸ್ವಾಮಿ(m chinnaswamy) ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) 17ನೇ ಆವೃತ್ತಿಯ ಐಪಿಎಲ್(IPL 2024) ಟೂರ್ನಿಯ​ ಪಂದ್ಯಾವಳಿಗಳನ್ನು ನಡೆಸಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. 3 ವಾರಗಳ ಹಿಂದೆ ನೀರಿನ ಬಳಕೆ ಕುರಿತು ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ವರದಿ ಕೇಳಿತ್ತು. ಪಂದ್ಯಗಳಿಗೆ ಬಳಸಿರುವ ನೀರಿನ ಮೂಲ ಹಾಗೂ ಕ್ರೀಡಾಂಗಣದಲ್ಲಿರುವ 400 ಅಡಿ ಆಳದ ನಾಲ್ಕು ಕೊಳವೆ ಬಾವಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಎನ್‌ಜಿಟಿ ಮುಖ್ಯಸ್ಥ ನ್ಯಾ. ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು, ಕ್ರೀಡಾಂಗಣದಲ್ಲಿ ಬಳಕೆಯಾಗುತ್ತಿರುವ ನೀರಿನ ಎಲ್ಲಾ ಮೂಲ, ಕ್ರೀಡಾಂಗಣದಲ್ಲಿರುವ ಬೋರ್‌ವೆಲ್‌, ಒಳಚರಂಡಿ ಸಂಸ್ಕರಣಾ ಘಟಕದ ಬಳಕೆ ಬಗ್ಗೆ 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್​ 13ಕ್ಕೆ ನಿಗದಿಪಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Hardik Pandya: ಬಹುಮಾನ ಮೊತ್ತವನ್ನು ತಾಯಿಯ ಖಾತೆಗೆ ಹಾಕುವಂತೆ ಬಿಸಿಸಿಐಗೆ ಮನವಿ ಮಾಡಿದ ಹಾರ್ದಿಕ್​ ಪಾಂಡ್ಯ; ಕಾರಣವೇನು?

Hardik Pandya: ಭಾರತ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಕೊಡುಗೆ ಅತ್ಯಂತ ಮಹತ್ವದ್ದಾಗಿತ್ತು. ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ಬೌಲಿಂಗ್​ ಮೂಲಕ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದರು.

VISTARANEWS.COM


on

Hardik Pandya
Koo

ಮುಂಬಯಿ: ಹಾರ್ದಿಕ್ ಪಾಂಡ್ಯ(Hardik Pandya) ಹಾಗೂ ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಡಿವೋರ್ಸ್ ಸುದ್ದಿಗಳ ಬೆನ್ನಲ್ಲೇ ಇದೀಗ ಮತ್ತೆ ಹಾರ್ದಿಕ್ ಪಾಂಡ್ಯ ಮೀಮ್ಸ್ ಹರಿದಾಡುತ್ತಿದೆ. ಬಿಸಿಸಿಐ ಘೋಷಿಸಿರುವ ಬಹುಮಾನ ಮೊತ್ತವನ್ನೂ ತಾಯಿ ಖಾತೆಗೆ ಹಾಕಿಬಿಡಿ ಅನ್ನೋ ಮೀಮ್ಸ್ ಭಾರಿ ವೈರಲ್ ಆಗುತ್ತಿದೆ.

ಹೌದು, ಹಾರ್ದಿಕ್​ ಪಾಂಡ್ಯ ಬಗ್ಗೆ ಮೀಮ್ಸ್​ಗಳು ವೈರಲ್​ ಆಗಲು ಕೂಡ ಒಂದು ಕಾರಣವಿದೆ. ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ ಅವರು ಪತ್ನಿ ನತಾಶಾಗೆ ವಿಚ್ಛೇದನ ನೀಡಿದರೆ(Hardik Pandya and Natasa Stankovic divorce) ಪತ್ನಿಗೆ ಜೀವನಾಂಶವಾಗಿ ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನೀಡಬೇಕಾಗಬಹುದು ಎಂದು ಹೇಳಲಾಗಿತ್ತು. ಈ ವೇಳೆ ಪಾಂಡ್ಯ ತಾವು ತಮ್ಮ ಆಸ್ತಿಗಳನ್ನೆಲ್ಲ ತಾಯಿಯ ಹೆಸರಿನಲ್ಲಿ ಮಾಡಿಟ್ಟಿರುವುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದ ವಿಡಿಯೊ ವೈರಲ್​ ಆಗಿತ್ತು.

ಆ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದ ಪಾಂಡ್ಯ “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು. ಇದೇ ಕಾರಣದಿಂದ ಇದೀಗ ನೆಟ್ಟಿಗರು ವಿಶ್ವಕಪ್​ ಗೆದ್ದ ಬಹುಮಾನ ಮೊತ್ತ ಮತ್ತು ಬಿಸಿಸಿಐ ನೀಡಿದ ಮೊತ್ತವನ್ನು ಪಾಂಡ್ಯ ಅವರು ದಯಮಾಡಿ ಇದನ್ನು ನನ್ನ ತಾಯಿಯ ಖಾತೆಗೆ ಹಾಲಿ ಎಂದು ಹೇಳುವ ರೀತಿಯಲ್ಲಿ ಮೀಮ್ಸ್​ಗಳನ್ನು ಮಾಡಿ ಹರಿಬಿಟ್ಟಿದ್ದಾರೆ.

ಭಾರತ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಕೊಡುಗೆ ಅತ್ಯಂತ ಮಹತ್ವದ್ದಾಗಿತ್ತು. ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ಬೌಲಿಂಗ್​ ಮೂಲಕ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದರು. ಅದರಲ್ಲೂ ಫೈನಲ್​ನಲ್ಲಿ ಸೋಲುವ ಭೀತಿಯಲ್ಲಿದ್ದ ಭಾರತ ತಂಡವನ್ನು ಕಾಪಾಡಿದ್ದೇ ಪಾಂಡ್ಯ. ಅಪಾಯಕಾರಿ ಹೆನ್ರಿಚ್​ ಕ್ಲಾಸೆನ್​ ವಿಕೆಟ್​ ಕೀಳದೇ ಹೋಗಿದ್ದರೆ ಭಾರತದ ಕಪ್​ ಆಸೆ ಮತ್ತೆ ನಿರಾಸೆಯಾಗುತ್ತಿತ್ತು.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರನ್ನು ಪಾಂಡ್ಯ ಗರ್ಭಿಣಿ ಮಾಡಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

Continue Reading

ಕ್ರೀಡೆ

Virat- Anushka: ಬೆರಿಲ್ ಚಂಡಮಾರುತದ ದೃಶ್ಯವನ್ನು ವಿಡಿಯೊ ಕಾಲ್​ ಮೂಲಕ ಪತ್ನಿ ಅನುಷ್ಕಾಗೆ ತೋರಿಸಿದ ಕೊಹ್ಲಿ; ವಿಡಿಯೊ ವೈರಲ್​ 

Virat- Anushka: ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Virat- Anushka
Koo

ಬಾರ್ಬಡೋಸ್​: ದ್ವೀಪ ರಾಷ್ಟ್ರ ಬಾರ್ಬಡೋಸ್‌ನಲ್ಲಿ ಅಬ್ಬರಿಸುತ್ತಿರುವ ಅಪಾಯಕಾರಿ ಬೆರಿಲ್ ಚಂಡಮಾರುತದ(Hurricane Beryl) ಪ್ರಭಾವದಿಂದ ಬಾರ್ಬಡೋಸ್​ನಲ್ಲಿಯೇ ತಂಗಿರುವ ಟಿ20 ವಿಶ್ವ ಚಾಂಪಿಯನ್​ ಟೀಮ್​ ಇಂಡಿಯಾ ಆಟಗಾರರು ಗುರುವಾರ ಭಾರತಕ್ಕೆ ವಿಮಾನ ಏರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿದೆ.​

ಸದ್ಯ ಟೀಮ್​ ಇಂಡಿಯಾದ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿದೆ. ಚಂಡಮಾರುತದ ಕಾರಣ, ಭಾರತೀಯ ಆಟಗಾರರಿರುವ ಹೊಟೇಲ್‌ ಸೇವೆಯಲ್ಲೂ ವ್ಯತ್ಯಯವಾಗಿದೆ ಎಂದು ವರದಿಯಾಗಿದೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು.

ಇದನ್ನೂ ಓದಿ Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ.

ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.

“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ” ಎಂದು ಕೊಹ್ಲಿ ಪತ್ನಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು.

Continue Reading

ಕ್ರೀಡೆ

India T20I schedule: 2026ರ ಟಿ20 ವಿಶ್ವಕಪ್​ಗೂ ಮುನ್ನ ಭಾರತ ಆಡಲಿದೆ 34 ಟಿ20 ಪಂದ್ಯ

India T20I schedule: ಮುಂದಿನ ಟಿ20 ವಿಶ್ವಕಪ್​ಗೂ ಮುನ್ನ ಮುಂದಿನ 2 ವರ್ಷಗಳ ಭಾರತದ ಟಿ20 ಸರಣಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ. 2026ರಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿ ಭಾರತ ಮತ್ತು ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲಿದೆ.

VISTARANEWS.COM


on

India T20I schedule
Koo

ಮುಂಬಯಿ: 2026ರಲ್ಲಿ ನಡೆಯುವ ಟಿ20 ವಿಶ್ವಕಪ್(t20 world cup 2026)​ ಟೂರ್ನಿಗೂ ಮುನ್ನ ಹಾಲಿ ಚಾಂಪಿಯನ್​ ಭಾರತ ತಂಡ(Team India) ಬರೋಬ್ಬರಿ 34 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು(team india upcoming t20 series) ಆಡಲಿದೆ. ಇದರಲ್ಲಿ ಒಟ್ಟು 8 ಸರಣಿಗಳು(India T20I schedule) ಸೇರಿವೆ. ತಲಾ ನಾಲ್ಕು ಸರಣಿಗಳು ವಿದೇಶದಲ್ಲಿ ಮತ್ತು ತವರಿನಲ್ಲಿ ಆಡಲಿದೆ.

ಕಳೆದ ಶನಿವಾರ ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ ಅಂತರದಿಂದ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಫೈನಲ್​ ನಡೆದು ಒಂದು ವಾರ ಆಗುವ ಮುನ್ನವೇ ಮುಂದಿನ ಟಿ20 ವಿಶ್ವಕಪ್​ಗೂ ಮುನ್ನ ಮುಂದಿನ 2 ವರ್ಷಗಳ ಭಾರತದ ಟಿ20 ಸರಣಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ. 2026ರಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿ ಭಾರತ ಮತ್ತು ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲಿದೆ.

ಜುಲೈ 6ರಿಂದ ಆರಂಭಗೊಳ್ಳಲಿರುವ ಜಿಂಬಾಬ್ವೆ ವಿರುದ್ಧದ ಸರಣಿಯ ಮೂಲಕ ಭಾರತದ ನೂತನ ಟಿ20 ಋತು ಪ್ರಾರಂಭಗೊಳ್ಳಲಿದೆ. ಇದು 5 ಪಂದ್ಯಗಳ ಸರಣಿಯಾಗಿದ್ದು, ಈ ತಂಡ ಯುವ ಆಟಗಾರರನ್ನೇ ನೆಚ್ಚಿಕೊಂಡಿದೆ. ರೋಹಿತ್​, ಜಡೇಜಾ ಮತ್ತು ವಿರಾಟ್​ ಕೊಹ್ಲಿ ಟಿ20ಗೆ ವಿದಾಯ ಹೇಳಿರುವ ಕಾರಣ ಈ ಸ್ಥಾನಕ್ಕೆ ಯುವ ಆಟಗಾರರನ್ನು ಸಿದ್ಧಪಡಿಸುವ ಜವಾಬ್ದಾರಿ ನೂತನ ಕೋಚ್​ ಆಗಲಿರುವವರ ಹೆಗಲೇರಲಿದೆ.

ಇದನ್ನೂ ಓದಿ Team India stuck in Barbados: ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ

2025ರಲ್ಲಿ ಭಾರತ 4 ಸರಣಿಗಳನ್ನು ಆಡಲಿದೆ. ಪ್ರವಾಸಿ ಇಂಗ್ಲೆಂಡ್‌ ವಿರುದ್ಧ 5 ಪಂದ್ಯಗಳ ಸರಣಿ, ಬಾಂಗ್ಲಾದೇಶ ಮತ್ತು ಆಸ್ಟ್ರೇಲಿಯದಲ್ಲಿ ಕ್ರಮವಾಗಿ 3 ಮತ್ತು 5 ಪಂದ್ಯಗಳ ಸರಣಿ, ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ತವರಲ್ಲಿ 5 ಪಂದ್ಯಗಳ ಸರಣಿಯನ್ನಾಡಲಿದೆ. 2026ರಲ್ಲಿ ಕಿವೀಸ್​ ವಿರುದ್ಧ ತವರಿನಲ್ಲಿ 5 ಪಂದ್ಯಗಳ ಸರಣಿ ಆಡಲಿದೆ. ಈ ಸರಣಿ ಬಳಿಕ ಟಿ20 ವಿಶ್ವಕಪ್​ ಟೂರ್ನಿಯನ್ನು ಆಡಲಿದೆ.

2024-25ನೇ ಸಾಲಿನ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿಯ ಮಾಹಿತಿ ಇಂತಿದೆ.

ಬಾಂಗ್ಲಾ ಸರಣಿಯ ವೇಳಾಪಟ್ಟಿ

ಸೆಪ್ಟೆಂಬರ್​-19 ಮೊದಲ ಟೆಸ್ಟ್​ ಪಂದ್ಯ. ತಾಣ: ಚೆನ್ನೈ

ಸೆಪ್ಟೆಂಬರ್​​-27 ದ್ವಿತೀಯ ಟೆಸ್ಟ್​. ತಾಣ; ಕಾನ್ಪುರಅಕ್ಟೋಬರ್​-6 ಮೊದಲ ಟಿ20. ತಾಣ: ಧರ್ಮಶಾಲಾ

ಅಕ್ಟೋಬರ್​-9 ದ್ವಿತೀಯ ಟಿ20. ತಾಣ: ದೆಹಲಿಅಕ್ಟೋಬರ್​-12 ಮೂರನೇ ಟಿ20. ತಾಣ: ಹೈದರಾಬಾದ್​

ನ್ಯೂಜಿಲ್ಯಾಂಡ್​ ಸರಣಿಯ ವೇಳಾಪಟ್ಟಿ


ಅಕ್ಟೋಬರ್​-16 ಮೊದಲ ಟಿ20. ತಾಣ: ಬೆಂಗಳೂರು

ಅಕ್ಟೋಬರ್-24 ದ್ವಿತೀಯ ಟಿ20. ತಾಣ: ಪುಣೆ

ನವೆಂಬರ್​-1 ಮೂರನೇ ಟಿ20. ತಾಣ: ಮುಂಬಯಿ

ಇಂಗ್ಲೆಂಡ್​ ವಿರುದ್ಧದ ಸರಣಿಯ ವೇಳಾಪಟ್ಟಿ


ಜನವರಿ-22 ಮೊದಲ ಟಿ20. ತಾಣ:ಚೆನ್ನೈ

ಜನವರಿ-25 ದ್ವಿತೀಯ ಟಿ20. ತಾಣ: ಕೋಲ್ಕತ್ತಾ

ಜನವರಿ-28 ಮೂರನೇ ಟಿ20. ತಾಣ: ರಾಜ್​ಕೋಟ್​

ಜನವರಿ-31 ನಾಲ್ಕನೇ ಟಿ20. ತಾಣ:ಪುಣೆ

ಫೆಬ್ರವರಿ-2 ಐದನೇ ಟಿ20. ತಾಣ: ಮುಂಬಯಿ

ಫೆಬ್ರವರಿ-6 ಮೊದಲ ಏಕದಿನ. ತಾಣ:ನಾಗ್ಪುರ

ಫೆಬ್ರವರಿ-9 ದ್ವಿತೀಯ ಏಕದಿನ. ತಾಣ: ಕಟಕ್​

ಫೆಬ್ರವರಿ-12 ಮೂರನೇ ಏಕದಿನ. ತಾಣ: ಅಹಮದಾಬಾದ್​

Continue Reading

ಪ್ರಮುಖ ಸುದ್ದಿ

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

David Miller : ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಭರವಸೆ ಭಗ್ನಗೊಂಡಿತ್ತು. ದಕ್ಷಿಣ ಆಫ್ರಿಕಾ ಫೈನಲ್​​ನಲ್ಲಿ ಭಾರತದ ವಿರುದ್ಧ 7 ರನ್​ಗಳ ಸೋಲು ಅನುಭವಿಸಿತ್ತು. ಪಂದ್ಯದ ಅಂತಿಮ ಕ್ಷಣಗಳಲ್ಲಿ ದಕ್ಷಿಣ ಆಫ್ರಿಕಾ ಕೈಚೆಲ್ಲಿತ್ತು. ಅದರಲ್ಲೂ ಡೇವಿಡ್ ಮಿಲ್ಲರ್​​ ಕೊನೇ ಓವರ್​​ನ ಮೊದಲ ಎಸೆತಕ್ಕೆ ಔಟಾಗಿದ್ದರು. ಇದು ಅವರಿಗೆ ಬೇಸರ ಮೂಡಿಸಿತ್ತು.

VISTARANEWS.COM


on

David Miller :
Koo

ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಟಿ 20 ವಿಶ್ವಕಪ್ 2024 ರ ಫೈನಲ್​​ನಲ್ಲಿ ಆಘಾತಕಾರಿ ಸೋಲಿನ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಡೇವಿಡ್ ಮಿಲ್ಲರ್ ಟಿ 20ಯಿಂದ ನಿವೃತ್ತರಾಗುವ ವದಂತಿಗಳು ಬಂದಿದ್ದವು. ಅದಕ್ಕವರು ಪ್ರತಿಕ್ರಿಯೆ ನೀಡಿದ್ದಾರೆ.

ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಭರವಸೆ ಭಗ್ನಗೊಂಡಿತ್ತು. ದಕ್ಷಿಣ ಆಫ್ರಿಕಾ ಫೈನಲ್​​ನಲ್ಲಿ ಭಾರತದ ವಿರುದ್ಧ 7 ರನ್​ಗಳ ಸೋಲು ಅನುಭವಿಸಿತ್ತು. ಪಂದ್ಯದ ಅಂತಿಮ ಕ್ಷಣಗಳಲ್ಲಿ ದಕ್ಷಿಣ ಆಫ್ರಿಕಾ ಕೈಚೆಲ್ಲಿತ್ತು. ಅದರಲ್ಲೂ ಡೇವಿಡ್ ಮಿಲ್ಲರ್​​ ಕೊನೇ ಓವರ್​​ನ ಮೊದಲ ಎಸೆತಕ್ಕೆ ಔಟಾಗಿದ್ದರು. ಇದು ಅವರಿಗೆ ಬೇಸರ ಮೂಡಿಸಿತ್ತು.

15ನೇ ಓವರ್​ನಲ್ಲಿ ಅಕ್ಷರ್ ಪಟೇಲ್ ಓವರ್​ಗೆ ಎರಡು ಸಿಕ್ಸರ್ ಹಾಗೂ ನಾಲ್ಕು ಬೌಂಡರಿ ಬಾರಿಸುವ ಮೂಲಕ ಹೆನ್ರಿಚ್​ ಕ್ಲಾಸೆನ್​ ದಕ್ಷಿಣ ಆಫ್ರಿಕಾ ತಂಡಕ್ಕೆ ಗೆಲುವಿನ ಅವಕಾಶ ತಂದುಕೊಟ್ಟಿದ್ದರು. 16ನೇ ಓವರ್ ಮುಗಿದಾಗ ದಕ್ಷಿಣ ಆಫ್ರಿಕಾಕ್ಕೆ ಅಂತಿಮ ನಾಲ್ಕು ಓವರ್​ಗಳಲ್ಲಿ ಕೇವಲ 26 ರನ್​ಗಳನ್ನು ಬಾರಿಸಬೇಕಿತ್ತು.

ಇದನ್ನೂ ಓದಿ: IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

ಕ್ಲಾಸೆನ್ 17 ನೇ ಓವರ್​ನ ಮೊದಲ ಎಸೆತದಲ್ಲೇ ಔಟಾದರು. ಈ ವೇಳೆ ತಂಡವನ್ನು ಗುರಿ ಮುಟ್ಟಿಸುವ ಕೆಲಸ ಡೇವಿಡ್ ಮಿಲ್ಲರ್ ಅವರ ಹೆಗಲ ಮೇಲಿತ್ತು. ಅಂತಿಮವಾಗಿ ಅಂತಿಮ ಓವರ್​ನಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಎದುರಿಸಿದ ಅನುಭವಿ ಬ್ಯಾಟರ್​​ 16 ರನ್​​ಗಳಿಗೆ ಔಟಾದರು. 20ನೇ ಓವರ್​ನ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಪಾಂಡ್ಯ ಅವರ ಲೋ ಫುಲ್ ಟಾಸ್ ಅನ್ನು ನೇರವಾಗಿ ಹೊಡೆದರು. ಸೂರ್ಯಕುಮಾರ್ ಯಾದವ್ ರೋಚಕ ಕ್ಯಾಚ್ ಅನ್ನು ಹಿಡಿದು ಮಿಲ್ಲರ್ ಅವರನ್ನು ಹಿಂದಕ್ಕೆ ಕಳುಹಿಸಿದರು. ಭಾರತವು ಪಂದ್ಯವನ್ನು 7 ರನ್​ಗಳಿಂದ ಗೆದ್ದಿತು. ಒಂದು ಹಂತದಲ್ಲಿ ಗೆಲುವು ದಕ್ಷಿಣ ಆಫ್ರಿಕಾಗೆ ಎಂದು ತೋರುತ್ತಿತ್ತು. ಅಂತಿಮವಾಗಿ ಭಾರತದ ಪರವಾಯಿತು.

ನಿವೃತ್ತಿ ವದಂತಿಗಳ ಬಗ್ಗೆ ಡೇವಿಡ್ ಮಿಲ್ಲರ್ ಹೇಳಿಕೆಯೇನು?

ದಕ್ಷಿಣ ಆಫ್ರಿಕಾ ಸೋಲಿನ ಬಳಿಕ ಡೇವಿಡ್ ಮಿಲ್ಲರ್ ಟಿ20 ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎಂಬ ವದಂತಿಗಳು ಹರಿದಾಡಿದವು. 35 ವರ್ಷದ ಆಟಗಾರ ಕ್ರಿಕೆಟ್​​ನ ಕಿರು ಸ್ವರೂಪದಿಂದ ನಿವೃತ್ತರಾಗಿದ್ದಾರೆ ಎಂದು ವದಂತಿಗಳು ತಿಳಿಸಿವೆ. ಆದಾಗ್ಯೂ, ಡೇವಿಡ್ ಮಿಲ್ಲರ್ ಮಂಗಳವಾರ (ಜುಲೈ 2) ಆ ವದಂತಿಗಳನ್ನು ತಳ್ಳಿಹಾಕಿದರು ಮತ್ತು ತಮ್ಮ ರಾಷ್ಟ್ರೀಯ ತಂಡಕ್ಕಾಗಿ ಟಿ 20 ಪಂದ್ಯಗಳನ್ನು ಆಡಲು ಲಭ್ಯವಿರುವುದಾಗಿ ಹೇಳಿದರು.

ಕೆಲವು ವರದಿಗಳ ಹಿನ್ನೆಲೆಯಲ್ಲಿ ಹೇಳುತ್ತಿದ್ದೇನೆ. ನಾನು ಟಿ 20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿಲ್ಲ. ನಾನು ದಕ್ಷಿಣ ಆಫ್ರಿಕಾ ಪರ ಆಡಲು ಲಭ್ಯವಿದ್ದೇನೆ. ಅತ್ಯುತ್ತಮ ಫಲಿತಾಂಶ ಇನ್ನೂ ಬರಬೇಕಿದೆ ಎಂದು ಡೇವಿಡ್ ಮಿಲ್ಲರ್ ಹೇಳಿದ್ದಾರೆ.

Continue Reading
Advertisement
Encounter in UP
ದೇಶ4 mins ago

Encounter in UP: ಯೋಗಿನಾಡಲ್ಲಿ ಮತ್ತೋರ್ವ ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ನ ಎನ್‌ಕೌಂಟರ್‌

Hardik Pandya
ಕ್ರೀಡೆ23 mins ago

Hardik Pandya: ಬಹುಮಾನ ಮೊತ್ತವನ್ನು ತಾಯಿಯ ಖಾತೆಗೆ ಹಾಕುವಂತೆ ಬಿಸಿಸಿಐಗೆ ಮನವಿ ಮಾಡಿದ ಹಾರ್ದಿಕ್​ ಪಾಂಡ್ಯ; ಕಾರಣವೇನು?

Hathras Stampede
ದೇಶ34 mins ago

Hathras Stampede: ಹತ್ರಾಸ್‌ ಕಾಲ್ತುಳಿತ: ಹೆಣಗಳ ರಾಶಿ ನೋಡಿ ಪೊಲೀಸ್‌ಗೆ ಹೃದಯಾಘಾತ; ಸ್ಥಳದಲ್ಲೇ ಸಾವು

Parliament Session
ದೇಶ36 mins ago

Parliament Session: ರಾಜ್ಯಸಭೆಯಲ್ಲಿ ಇಂದು ಮೋದಿ ಭಾಷಣ; Live ಇಲ್ಲಿ ವೀಕ್ಷಿಸಿ

Munjya Movie Box Office Collection Rs 100 Cr
ಬಾಲಿವುಡ್40 mins ago

Munjya Movie: ಸ್ಟಾರ್​ ಕಲಾವಿದರೇ ಇಲ್ಲದೇ ಬರೋಬ್ಬರಿ 100 ಕೋಟಿ ರೂ. ಗಳಿಕೆ ಕಂಡ ʻಮುಂಜ್ಯʼ!

Actor Darshan his brother-in-law homeless
ಕ್ರೈಂ43 mins ago

Actor Darshan: ಒಂದೇ ಸೆಲ್‌ನಲ್ಲಿದ್ದರೂ ಶಿಷ್ಯನ ಮಾತನಾಡಿಸದ ದರ್ಶನ್‌, ʼಸಾಕು ನಿಮ್ಮ ಸಹವಾಸʼ ಎಂದ ಡಿ ಬಾಸ್

Virat- Anushka
ಕ್ರೀಡೆ56 mins ago

Virat- Anushka: ಬೆರಿಲ್ ಚಂಡಮಾರುತದ ದೃಶ್ಯವನ್ನು ವಿಡಿಯೊ ಕಾಲ್​ ಮೂಲಕ ಪತ್ನಿ ಅನುಷ್ಕಾಗೆ ತೋರಿಸಿದ ಕೊಹ್ಲಿ; ವಿಡಿಯೊ ವೈರಲ್​ 

Parliament Sessions
ದೇಶ1 hour ago

Parliament Sessions: ತಮ್ಮ ವಿರುದ್ಧ ಧರಣಿ ನಡೆಸುತ್ತಿದ್ದ ಪ್ರತಿಪಕ್ಷ ಸಂಸದರಿಗೆ‌ ಕುಡಿಯಲು ನೀರು ಕೊಟ್ಟ ಪ್ರಧಾನಿ ಮೋದಿ- ವಿಡಿಯೋ ಇದೆ

Nanna Devaru Serial Mayuri And NarasimhaRaju Grand Son Acting
ಕಿರುತೆರೆ1 hour ago

Nanna Devaru Serial: ಕಿರುತೆರೆಗೆ ಕಮ್‌ಬ್ಯಾಕ್‌ ಮಾಡಿದ ಮಯೂರಿ;  ‘ನನ್ನ ದೇವ್ರು’ ಧಾರಾವಾಹಿಗೆ ನರಸಿಂಹರಾಜು ಮೊಮ್ಮಗ ಹೀರೊ!

Safe Drive Tips
ಆಟೋಮೊಬೈಲ್1 hour ago

Safe Drive Tips: ಮಳೆಯಲ್ಲಿ ಬೈಕ್ ಓಡಿಸುವಾಗ ಈ ಸಂಗತಿಗಳು ಗಮನದಲ್ಲಿರಲಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ15 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌