IPL 2024 : ಚೆನ್ನೈ ವಿರುದ್ಧ ಗುಜರಾತ್​ಗೆ 35 ರನ್ ವಿಜಯ, ಆರ್​​ಸಿಬಿ ಪ್ಲೇಆಫ್​ ಪ್ರವೇಶಕ್ಕೆ ಮತ್ತೊಂದು ಸವಾಲು - Vistara News

ಕ್ರೀಡೆ

IPL 2024 : ಚೆನ್ನೈ ವಿರುದ್ಧ ಗುಜರಾತ್​ಗೆ 35 ರನ್ ವಿಜಯ, ಆರ್​​ಸಿಬಿ ಪ್ಲೇಆಫ್​ ಪ್ರವೇಶಕ್ಕೆ ಮತ್ತೊಂದು ಸವಾಲು

IPL 2024: ಟಾಸ್ ಗೆದ್ದ ಚೆನ್ನೈ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಗುಜರಾತ್ ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 231 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​​ಗೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​: ಆರಂಭಿಕ ಜೋಡಿ ಸಾಯಿ ಸುದರ್ಶನ್​​ (103 ರನ್​, 5 ಫೋರ್​, 7 ಸಿಕ್ಸರ್​) ಶುಭ್​ಮನ್​ ಗಿಲ್​​ (104 ರನ್​, 9 ಪೋರ್​, 6 ಸಿಕ್ಸರ್​) ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಮಿಂಚಿದ ಗುಜರಾತ್ ಜೈಂಟ್ಸ್​ ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 59ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ 35 ರನ್​ಗಳ ಗೆಲುವು ಸಾಧಿಸಿದೆ. ಇದರೊಂದಿಗೆ ಆರ್​ಸಿಬಿಯ ಪ್ಲೇಆಫ್​ ಪ್ರವೇಶಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಗುಜರಾತ್​ ಜೈಂಟ್ಸ್ ಕೂಡ 10 ಅಂಕಗಳನ್ನು ಪಡೆದಿದ್ದು ಆರ್​ಸಿಬಿಯ ಸಮಾನವಾಗಿ ನಿಂತಿದೆ. ಹೀಗಾಗಿ ಪ್ಲೇಆಫ್​ಗೆ ಪೈಪೋಟಿ ಅಧಿಕವಾಗಿದೆ. ಈ ಗೆಲುವಿನೊಂದಿಗೆ ಗುಜರಾತ್ ತಂಡ ಎರಡು ಸ್ಥಾನ ಮೇಲಕ್ಕೇರಿ 8ನೇ ಸ್ಥಾನಕ್ಕೆ ಬಂದಿದೆ. ಮುಂಬಯಿ 9 ರಲ್ಲಿ ಇದ್ದರೆ ಪಂಜಾಬ್​ 10ರಲ್ಲಿದೆ. ಚೆನ್ನೈ ನಾಲ್ಕನೇ ಸ್ಥಾನದಲ್ಲಿಯೇ ಇದೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಗುಜರಾತ್ ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 231 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​​ಗೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡ ಅಬ್ಬರ ಪ್ರದರ್ಶನ ನೀಡಿತು. ಆರಂಭಿಕರಾದ ಸಾಯಿ ಸುದರ್ಶನ್​ ಹಾಗೂ ನಾಯಕ ಗಿಲ್ ಭರ್ಜರಿ ಪ್ರದರ್ಶ ನೀಡಿದರು. ಅವರಿಬ್ಬರೂ ಶತಕ ಬಾರಿಸುವ ಮೂಲಕ ಭರ್ಜರಿ ಪ್ರದರ್ಶನ ನೀಡಿದರು. ಗಿಲ್ ಹಾಗೂ ಸಾಯಿ ಸುದರ್ಶನ್​ ತಲಾ 50 ಎಸೆತಗಳಲ್ಲಿ ಶತಕ ಬಾರಿಸಿದರು. ಹೀಗಾಗಿ ಮೊದಲ ವಿಕೆಟ್​ಗೆ ಚೆನ್ನೈ ತಂಡ 210 ರನ್ ಬಾರಿಸಿತು. ಬಳಿಕ ಡೇವಿಲ್​ ಮಿಲ್ಲರ್ 16 ರನ್ ಬಾರಿಸಿದರೆ ಶಾರುಖ್ ಖಾನ್ 3 ರನ್ ಗಳಿಸಿದರು.

ಇದನ್ನೂ ಓದಿ: Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

ಬ್ಯಾಟಿಂಗ್ ವೈಫಲ್ಯ

ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಚೆನ್ನೈ ತಂಡ ಆರಂಭದಲ್ಲೇ ಸತತವಾಗಿ ವಿಕೆಟ್​ಗಳನ್ನು ಕಳೆದುಕೊಂಡಿತು. ಅಜಿಂಕ್ಯ ರಹಾನೆ 1 ರನ್​ಗೆ ಔಟಾದರೆ, ರಚಿನ್ ರವೀಂದ್ರ ಕೂಡ ಅದೇ ಮೊತ್ತಕ್ಕೆ ಔಟಾದರು. ಅವರು ಡೇವಿಡ್​ ಮಿಲ್ಲರ್ ಮಾಡಿರುವ ಅಮೋಘ ರನ್​ಔಟ್​ಗೆ ಬಲಿಯಾದರು. ನಾಯ್ಕ ಋತುರಾಜ್ ಕೊಡುಗೆ ಕೂಡ ಶೂನ್ಯ. ಆದರೆ, ಮಧ್ಯಮ ಕ್ರಮಾಂಕದಲ್ಲಿ ಡ್ಯಾರಿಲ್​ ಮಿಚೆಲ್ (34 ಎಸೆತಕ್ಕೆ 63 ರನ್ ) ಅರ್ಧ ಶತಕ ಬಾರಿಸಿದರೆ ಮೊಯಿಲ್ ಅಲಿ ಕೂಡ 56 ರನ್ ಬಾರಿಸಿದರು. ಇವರಿಬ್ಬರೂ ನಾಲ್ಕನೇ ವಿಕೆಟ್​ಗೆ 109 ರನ್ ಬಾರಿಸಿದರು. ಆದರೆ ಇವರ ಜತೆಯಾಟ ಮುರಿದ ಬಳಿಕ ಒಂದೊಂದೆ ವಿಕೆಟ್​ಗಳು ಉರುಳಿದವು. ಶಿವಂ ದುಬೆ 21 ರನ್ ಹೊಡೆದರೆ, ರವೀಂದ್ರ ಜಡೇಜಾ 18 ರನ್​ಗೆ ಸೀಮಿತಗೊಂಡರು. ಕೊನೆಯಲ್ಲಿ ಧೋನಿ 11 ಎಸೆತಕ್ಕೆ 26 ರನ್ ಬಾರಿಸಿದರೂ ತಂಡಕ್ಕೆ ಅದರಿಂದ ಗೆಲವು ಪಡೆಯಲು ಸಾಧ್ಯವಾಗಲಿಲ್ಲ.

ಮೋಹಿತ್ ಶರ್ಮಾ 31 ರನ್​ ಗೆ 3 ವಿಕೆಟ್ ಪಡೆದರೆ ರಶೀದ್ ಖಾನ್​ 3 ರನ್ ನೀಡಿ 2 ವಿಕೆಟ್ ಪಡೆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

WTC 2025: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪ್ರವೇಶಿಸಬೇಕಿದ್ದರೆ ಭಾರತಕ್ಕೆ ಇನೆಷ್ಟು ಗೆಲುವು ಬೇಕು?

WTC 2025: ಭಾರತ ಮುಂದಿನ ತಿಂಗಳು ಬಾಂಗ್ಲಾದೇಶ ವಿರುದ್ಧ 2 ಟೆಸ್ಟ್​ ಪಂದ್ಯವನ್ನಾಡುವ ಮೂಲಕ ಟೆಸ್ಟ್​ ಸರಣಿ ಆರಂಭಿಸಲಿದೆ. ಇದಾದ ಬಳಿಕ ನ್ಯೂಜಿಲ್ಯಾಂಡ್​ ಮತ್ತು ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನಾಡಲಿದೆ.

VISTARANEWS.COM


on

Koo

ಮುಂಬಯಿ: ಮುಂದಿನ ವರ್ಷ ನಡೆಯುವ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್(WTC 2025)​ ಟೂರ್ನಿಯ ಫೈನಲ್​ ಪ್ರವೇಶಿಸಲು ಎಲ್ಲ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈಗಾಗಲೇ ಎರಡು ಬಾರಿ ಟೆಸ್ಟ್​ ವಿಶ್ವಕಪ್​ ಫೈನಲ್‌ ತಲುಪಿರುವ ಭಾರತ ತಂಡ(Team India) ಈ ಬಾರಿ ಫೈನಲ್​ ಪ್ರವೇಶಿಸಬೇಕಿದ್ದರೆ ಎಷ್ಟು ಗೆಲುವು ಅಗತ್ಯ ಎನ್ನುವ ಮಾಹಿತಿ ಇಲ್ಲಿದೆ.

10 ಪಂದ್ಯ ಆಡಲಿದೆ ಭಾರತ


ಪೂರ್ವ ವೇಳಾಪಟ್ಟಿಯ ಪ್ರಕಾರ ಭಾರತ ಇನ್ನು 10 ಟೆಸ್ಟ್‌ ಪಂದ್ಯಗಳನ್ನು ಆಡಲಿದೆ. ಇದರಲ್ಲಿ ತವರಿನಲ್ಲಿ ಬಾಂಗ್ಲಾ ವಿರುದ್ಧ 2, ನ್ಯೂಜಿಲ್ಯಾಂಡ್ ವಿರುದ್ಧ 3, ಆಸ್ಟ್ರೇಲಿಯಾ ಪ್ರವಾಸದಲ್ಲಿ 5 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಈ 10 ಟೆಸ್ಟ್​ ಪಂದ್ಯಗಳ ಪೈಕಿ ಭಾರತ ಕನಿಷ್ಠ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ನೇರವಾಗಿ ಫೈನಲ್​ ಪ್ರವೇಶಿಸಲಿದೆ. ಓ ಮೂಲಕ ಸತತ ಮೂರನೇ ಬಾರಿಗೆ ಫೈನಲ್‌ಗೆ ಅರ್ಹತೆ ಪಡೆದ ಸಾಧನೆ ಮಾಡಲಿದೆ.

ಸದ್ಯ ಭಾರತ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಇದುವರೆಗೆ ಆಡಿದ 9 ಪಂದ್ಯಗಲ್ಲಿ 6 ಜಯ, 2 ಸೋಲು, 1 ಡ್ರಾ ಸಾಧಿಸಿ 68.51 ಗೆಲುವಿನ ಸರಾಸರಿಯೊಂದಿಗೆ ಮೊದಲ ಸ್ಥಾನದಲ್ಲಿದೆ. ಹಾಲಿ ಚಾಂಪಿಯನ್​ ಆಸ್ಟ್ರೇಲಿಯಾ 12 ಪಂದ್ಯಗಳಲ್ಲಿ 8 ಜಯ ದಾಖಲಿಸಿ, 62.5 ಗೆಲುವಿನ ಸರಾಸರಿಯನ್ನು ಹೊಂದಿದ್ದು, ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಉಳಿದ ಏಳು ಪಂದ್ಯಗಳಲ್ಲಿ 4 ಪಂದ್ಯ ಗೆದ್ದರೂ ಫೈನಲ್‌ ಪ್ರವೇಶಿಸಲಿದೆ. ಸದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಫೈನಲ್​ ಪ್ರವೇಶದ ತೀವ್ರ ಪೈಪೋಟಿ ಏರ್ಪಟ್ಟಿದೆ.

ಮೂರನೇ ಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್​ 6 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 36 ಅಂಕ ಗಳಿಸಿದೆ. ಶ್ರೀಲಂಕಾ 4, ದಕ್ಷಿಣ ಆಫ್ರಿಕಾ ಐದನೇ ಸ್ಥಾನದಲ್ಲಿದೆ. ಈ ತಂಡಗಳಿಗೆ ಫೈನಲ್​ ಪ್ರವೇಶಿಸಬೇಕಿದ್ದರೆ, ಕಿವೀಸ್​ 8 ರಲ್ಲಿ 6, ಪಾಕಿಸ್ತಾನ 9 ರಲ್ಲಿ 7, ಶ್ರೀಲಂಕಾ 9 ರಲ್ಲಿ 6, ಬಾಂಗ್ಲಾದೇಶ 9 ರಲ್ಲಿ 7, ದಕ್ಷಿಣ ಆಫ್ರಿಕಾ 8 ರಲ್ಲಿ 7 ಪಂದ್ಯಗಳನ್ನು ಗೆಲ್ಲಲೇ ಬೇಕು. ಆಗ ಮಾತ್ರ ಫೈನಲ್​ ಪ್ರವೇಶಿಸುವ ಅವಕಾಶ ಲಭಿಸಲಿದೆ.

ಇದನ್ನೂ ಓದಿ Team India: ಆಸೀಸ್​ ಪ್ರವಾಸದಲ್ಲಿ 2 ದಿನಗಳ ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಆಡಲಿದೆ ಭಾರತ ತಂಡ

ಭಾರತ ಟೆಸ್ಟ್​ ಸರಣಿ ವೇಳಾಪಟ್ಟಿ


ಭಾರತ ಮುಂದಿನ ತಿಂಗಳು ಬಾಂಗ್ಲಾದೇಶ ವಿರುದ್ಧ 2 ಟೆಸ್ಟ್​ ಪಂದ್ಯವನ್ನಾಡುವ ಮೂಲಕ ಟೆಸ್ಟ್​ ಸರಣಿ ಆರಂಭಿಸಲಿದೆ. ಇದಾದ ಬಳಿಕ ನ್ಯೂಜಿಲ್ಯಾಂಡ್​ ಮತ್ತು ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನಾಡಲಿದೆ.


ಬಾಂಗ್ಲಾದೇಶ ವಿರುದ್ಧ


ಸೆಪ್ಟೆಂಬರ್​-19 ಮೊದಲ ಟೆಸ್ಟ್​ ಪಂದ್ಯ. ತಾಣ: ಚೆನ್ನೈ

ಸೆಪ್ಟೆಂಬರ್​​-27 ದ್ವಿತೀಯ ಟೆಸ್ಟ್​. ತಾಣ; ಕಾನ್ಪುರ

ನ್ಯೂಜಿಲ್ಯಾಂಡ್​ ವಿರುದ್ಧ


ಅಕ್ಟೋಬರ್​-16 ಮೊದಲ ಟಿ20. ತಾಣ: ಬೆಂಗಳೂರು

ಅಕ್ಟೋಬರ್-24 ದ್ವಿತೀಯ ಟಿ20. ತಾಣ: ಪುಣೆ

ನವೆಂಬರ್​-1 ಮೂರನೇ ಟಿ20. ತಾಣ: ಮುಂಬಯಿ

ಆಸ್ಟ್ರೇಲಿಯಾ ವಿರುದ್ಧ


ಮೊದಲ ಟೆಸ್ಟ್: ನವೆಂಬರ್ 22-26, ಪರ್ತ್

ಎರಡನೇ ಟೆಸ್ಟ್: ಡಿಸೆಂಬರ್ 6-10, ಅಡಿಲೇಡ್ (ಪಿಂಕ್​ ಬಾಲ್​ ಟೆಸ್ಟ್​)

ಮೂರನೇ ಟೆಸ್ಟ್: ಡಿಸೆಂಬರ್ 14-18, ಬ್ರಿಸ್ಬೇನ್

ನಾಲ್ಕನೇ ಟೆಸ್ಟ್: ಡಿಸೆಂಬರ್ 26-30, ಮೆಲ್ಬೋರ್ನ್

ಐದನೇ ಟೆಸ್ಟ್: ಜನವರಿ 3-7, ಸಿಡ್ನಿ

Continue Reading

ಕ್ರೀಡೆ

Youth Olympic 2030: ಯೂತ್​ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಸೇರ್ಪಡೆಗೆ ಐಸಿಸಿ ಪ್ರಯತ್ನ; ಆತಿಥ್ಯಕ್ಕೆ ಭಾರತ ಸಿದ್ಧತೆ

Youth Olympic 2030: 2030ರ ಯೂತ್​ ಒಲಿಂಪಿಕ್​ ಗೇಮ್ಸ್​ ಆತಿಥ್ಯಕ್ಕೆ ಭಾರತ ಬಿಡ್​ ಸಲ್ಲಿಸಲು ಮುಂದಾಗಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಯೂತ್​ ಒಲಿಂಪಿಕ್ಸ್​ಅನ್ನು ಮುಂಬೈನಲ್ಲಿ ನಡೆಸಲು ಯೋಜನೆ ರೂಪಿಸಿಕೊಂಡಿದೆ ಎನ್ನಲಾಗಿದೆ.

VISTARANEWS.COM


on

Koo

ಮುಂಬಯಿ: 2028ರಲ್ಲಿ ಲಾಸ್​ ಏಂಜಲಿಸ್​ನಲ್ಲಿ(los angeles 2028 olympics) ನಡೆಯುವ​ ಒಲಿಂಪಿಕ್ಸ್​ಗೆ(olympics) ಕ್ರಿಕೆಟ್​ ಸೇರ್ಪಡೆಯಾಗಿರುವುದು ಈಗಾಗಲೇ ತಿಳಿದ ವಿಚಾರ. ಇದೀಗ 2030ರ ಯೂತ್​ ಒಲಿಂಪಿಕ್ಸ್​ಗೂ(Youth Olympic 2030) ಕ್ರಿಕೆಟ್​ ಸೇರ್ಪಡೆಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಮುಂಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸಭೆಯಲ್ಲಿ ಕ್ರಿಕೆಟ್​ ಆಟವನ್ನು ಮತ್ತೆ ಒಲಿಂಪಿಕ್ಸ್​ಗೆ ಸೇರ್ಪಡೆಗೊಳಿಸಲಾಗಿತ್ತು. ಇದೀಗ ಯೂತ್​ ಒಲಿಂಪಿಕ್ಸ್​ ಕ್ರಿಕೆಟ್(olympics cricket)​ ಸೇರ್ಪಡೆಯ ಸಂಬಂಧ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿ (ಐಒಸಿ) ಜತೆಗೆ ಚರ್ಚಿಸಲಾಗುವುದು ಎಂದು ಐಸಿಸಿ(ICC) ಹೇಳಿದೆ.

2030ರ ಯೂತ್​ ಒಲಿಂಪಿಕ್​ ಗೇಮ್ಸ್​ ಆತಿಥ್ಯಕ್ಕೆ ಭಾರತ ಬಿಡ್​ ಸಲ್ಲಿಸಲು ಮುಂದಾಗಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಯೂತ್​ ಒಲಿಂಪಿಕ್ಸ್​ಅನ್ನು ಮುಂಬೈನಲ್ಲಿ ನಡೆಸಲು ಯೋಜನೆ ರೂಪಿಸಿಕೊಂಡಿದೆ ಎನ್ನಲಾಗಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯ ಸದಸ್ಯೆಯಾಗಿರುವ ನೀತಾ ಅಂಬಾನಿ ಅವರು ಈಗಾಗಲೇ ಒಲಿಂಪಿಕ್ಸ್​ ವಿಚಾರದಲ್ಲಿ ಹಲವು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಹೀಗಾಗಿ ಯೂತ್​ ಒಲಿಂಪಿಕ್ಸ್​ಗೆ ಭಾರತ ಆತಿಥ್ಯ ವಹಿಸಿಕೊಳ್ಳುವಲ್ಲಿ ಮಹತ್ವದ ಪಾತ್ರವಹಿಸುವ ಸಾಧ್ಯತೆ ಇದೆ.

ಒಂದು ವೇಳೆ ಭಾರತಕ್ಕೆ ಯೂತ್​ ಒಲಿಂಪಿಕ್ಸ್​ ಆತಿಥ್ಯ ಲಭಿಸಿದರೆ, ಬಿಸಿಸಿಐ ಮಧ್ಯವಸ್ಥಿಕೆಯಿಂದ ಕ್ರಿಕೆಟ್​ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತ. ಯೂತ್​ ಒಲಿಂಪಿಕ್ಸ್​ಗೆ ಕ್ರಿಕೆಟ್​ ಸೇರ್ಪಡೆಗೊಂಡರೆ, ಜಾಗತಿಕವಾಗಿ ತಳಮಟ್ಟದಿಂದ ಕ್ರಿಕೆಟ್​ ಅಭಿವೃದ್ಧಿಗೂ ನೆರವಾಗಲಿದೆ. ಯೂತ್​ ಒಲಿಂಪಿಕ್ಸ್​ 15ರಿಂದ 18 ವಯೋಮಿತಿ ಕ್ರೀಡಾಪಟುಗಳಿಗೆ ಸೀಮಿತವಾಗಿದೆ. ಇದಕ್ಕೆ ಕ್ರಿಕೆಟ್​ ಸೇರ್ಪಡೆಯಾದರೆ, ಯುವ ಕ್ರಿಕೆಟಿಗರಿಗೆ ಜಾಗತಿಕ ಮಟ್ಟದ ವೇದಿಕೆ ಲಭಿಸಿದಂತಾಗುತ್ತದೆ.

ಇದನ್ನೂ ಓದಿ Virat Kohli: ಕೊಹ್ಲಿಯ ಮೊದಲ ಅಂತಾರಾಷ್ಟ್ರೀಯ ಪಂದ್ಯಕ್ಕೆ ತುಂಬಿತು 16 ವರ್ಷ

ಕಳೆದ ವರ್ಷ ಚೀನದ ಹ್ಯಾಂಗ್‌ಝೂನಲ್ಲಿ ನಡೆದಿದ್ದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಮತ್ತು ಪುರುಷರ ಕ್ರಿಕೆಟ್​ ಟೂರ್ನಿ ನಡೆಸಿ ಯುಶಸ್ಸು ಕಂಡಿತ್ತು. ಟಿ20 ಮಾದರಲ್ಲಿ ಪಂದ್ಯಾವಳಿ ನಡೆದಿತ್ತು. ಲಾಸ್​ ಏಂಜಲಿಸ್ ಒಲಿಂಪಿಕ್ಸ್​ನಲ್ಲಿಯೂ ಟಿ20 ಮಾದರಿಯಲ್ಲೇ ಟೂರ್ನಿ ನಡೆಯಲಿದೆ.

ಒಲಿಂಪಿಕ್ಸ್‌ನಲ್ಲಿ ಒಂದು ಬಾರಿ ನಡೆದಿತ್ತು ಕ್ರಿಕೆಟ್​

ಒಲಿಂಪಿಕ್ಸ್‌ನಲ್ಲಿ ಇಷ್ಟರವರೆಗೆ ಒಮ್ಮೆ ಮಾತ್ರ ಕ್ರಿಕೆಟ್‌ ಸ್ಪರ್ಧೆ ನಡೆದಿದೆ. 1896ರ ಉದ್ಘಾಟನ ಏಥೆನ್ಸ್‌ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸ್ಪರ್ಧೆಯನ್ನು ಸೇರ್ಪಡೆಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಭಾಗವಹಿಸುವ ತಂಡಗಳ ಕೊರತೆಯಿಂದ ರದ್ದು ಮಾಡಲಾಗಿತ್ತು. ಆದರೆ ನಾಲ್ಕು ವರ್ಷಗಳ ಬಳಿಕ 1900ರ ಪ್ಯಾರಿಸ್‌ ಒಲಿಪಿಕ್ಸ್‌ನಲ್ಲಿ ಕ್ರಿಕೆಟ್‌ ಸ್ಪರ್ಧೆ ಮೊದಲ ಬಾರಿ ಜರಗಿದೆ. ಗ್ರೇಟ್‌ ಬ್ರಿಟನ್‌ ಮತ್ತು ಆತಿಥೇಯ ಫ್ರಾನ್ಸ್‌ ಮಾತ್ರ ಸ್ಪರ್ಧಿಸಿದ್ದು, ಬ್ರಿಟನ್‌ ಚಿನ್ನ ಜಯಿಸಿತ್ತು.ಸೈಂಟ್‌ ಲೂಯಿಸ್‌ನಲ್ಲಿ 1904ರಲ್ಲಿ ನಡೆದ ಒಲಿಂಪಿಕ್ಸನಲ್ಲಿ ಕ್ರಿಕೆಟ್‌ ಸ್ಪರ್ಧೆಗೆ ಸಿದ್ಧಥೆ ನಡೆಸಲಾಗಿದ್ದರೂ ಅಂತಿಮವಾಗಿ ರದ್ದುಗೊಂಡಿತ್ತು. ಆ ಬಳಿಕ ಯಾವುದೇ ಒಲಿಂಪಿಕ್ಸ್‌ನಲ್ಲೂ ಕ್ರಿಕೆಟ್‌ ಸ್ಪರ್ಧೆ ನಡೆದಿಲ್ಲ.

Continue Reading

ಕ್ರೀಡೆ

Neeraj Chopra: ಲಾಸಾನ್ನೆ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಸ್ಪರ್ಧೆ; ಆಗಸ್ಟ್​ 22ಕ್ಕೆ ಟೂರ್ನಿ

Neeraj Chopra: ಹಲವು ವರ್ಷಗಳಿಂದ 90 ಮೀಟರ್‌ ದೂರಕ್ಕೆ ಜಾವೆಲಿನ್‌ ಎಸೆಯುವುದಕ್ಕೆ ಸತತ ಪ್ರಯತ್ನ ನಡೆಸುತ್ತಿರುವ ನೀರಜ್​ ಇನ್ನು ಮುಂದೆ 90 ಮೀ. ಗುರಿಯನ್ನು ದೇವರಿಗೆ ಬಿಡುತ್ತೇನೆ ಎಂದು ಹೇಳಿದ್ದಾರೆ.

VISTARANEWS.COM


on

Neeraj Chopra
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ ಬೆಳ್ಳಿ ಪದಕ ವಿಜೇತ, ಭಾರತದ ಸ್ಟಾರ್​ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ(Neeraj Chopra) ಅವರು ಇದೇ ತಿಂಗಳು 22ರಿಂದ ಆರಂಭಗೊಳ್ಳಲಿರುವ ಲಾಸಾನ್ನೆ ಡೈಮಂಡ್‌ ಲೀಗ್‌ನಲ್ಲಿ(Lausanne Diamond League) ಪಾಲ್ಗೊಳ್ಳಲಿದ್ದಾರೆ. ಈ ವಿಚಾರವನ್ನು ಸ್ವತಃ ನೀರಜ್‌ ಖಚಿತಪಡಿಸಿದ್ದಾರೆ.

ಪ್ಯಾರಿಸ್‌ ಒಲಿಂಪಿಕ್ಸ್‌ ಬಳಿಕ ನೀರಜ್​ ಅವರು ಜರ್ಮನಿಯಲ್ಲಿ ತೊಡೆಸಂಧು ನೋವಿಗೆ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿತ್ತು. ಇದೀಗ ಅವರಿಗೆ ವೈದ್ಯರು ಸದ್ಯಕ್ಕೆ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ನೀರಜ್​ ಡೈಮಂಡ್‌ ಲೀಗ್‌ನಲ್ಲಿ ಪಾಲ್ಗೊಳ್ಳಲು ಮುಂದಾಗಿದ್ದಾರೆ. ಮುಂದಿನ ತಿಂಗಳು ಸೆಪ್ಟೆಂಬರ್ 13 ಮತ್ತು 14ರಂದು ಬ್ರಸೆಲ್ಸ್‌ನಲ್ಲಿ ಕೊನೆಯ ಡೈಮಂಡ್‌ ಲೀಗ್‌ ನಡೆಯಲಿದೆ. ಇದಾದ ಮೇಲೆ ನೀರಜ್​ ಮತ್ತೆ ವೈದ್ಯರನ್ನು ಸಂಪರ್ಕಿಸಿ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಹಲವು ವರ್ಷಗಳಿಂದ 90 ಮೀಟರ್‌ ದೂರಕ್ಕೆ ಜಾವೆಲಿನ್‌ ಎಸೆಯುವುದಕ್ಕೆ ಸತತ ಪ್ರಯತ್ನ ನಡೆಸುತ್ತಿರುವ ನೀರಜ್​ ಇನ್ನು ಮುಂದೆ 90 ಮೀ. ಗುರಿಯನ್ನು ದೇವರಿಗೆ ಬಿಡುತ್ತೇನೆ ಎಂದು ಹೇಳಿದ್ದಾರೆ. ನೀರಜ್​ರ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. 

ನೋವಿನ ಮಧ್ಯೆಯೂ ನೀರಜ್​ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ 89.45 ಮೀಟರ್‌ ದೂರಕ್ಕೆ ಜಾವೆಲಿನ್‌ ಎಸೆದು ಬೆಳ್ಳಿ ಗೆದ್ದಿದ್ದರು. ಪಾಕಿಸ್ತಾನದ ಅರ್ಷದ್​ ನದೀಮ್​ ಒಲಿಂಪಿಕ್ಸ್​ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿದ್ದರು. ಇದೀಗ ಮತ್ತೆ ಲಾಸಾನ್ನೆ ಡೈಮಂಡ್‌ ಲೀಗ್‌ನಲ್ಲಿ ಇಂಡೋ-ಪಾಕ್​ ಅಥ್ಲೀಟ್​ಗಳು ಕಾಣಿಸಿಕೊಳ್ಳಲಿದ್ದಾರೆ. ಜರ್ಮನಿಯ ಜೂಲಿಯನ್ ವೆಬ್ಬರ್, ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ಅವರಿಂದ ನೀರಜ್​ಗೆ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ. ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು.

ಇದನ್ನೂ ಓದಿ Neeraj Chopra: ಫೈನಲ್​ ವೇಳೆ ನೀರಜ್​ ಚೋಪ್ರಾ ಧರಿಸಿದ್ದ ವಾಚ್​ ಕಂಪನಿ ಯಾವುದು?, ಇದರ ಬೆಲೆ ಎಷ್ಟು?

ಪ್ಯಾರಿಸ್​ ಒಲಿಂಪಿಕ್ಸ್ ಮುಕ್ತಾಯದ ಬೆನ್ನಲ್ಲೇ​ ನೀರಜ್ ಚೋಪ್ರಾ(Manu Bhaker-Neeraj Chopra) ಹಾಗೂ ಶೂಟಿಂಗ್​ನಲ್ಲಿ ಅವಳಿ ಕಂಚಿನ ಪದಕ ಗೆದ್ದ ಮನು ಭಾಕರ್ ಮಧ್ಯೆ ಪ್ರೇಮಾಂಕುರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಾಗಿತ್ತು. ಇವರಿಬ್ಬರು ಆತ್ಮೀಯವಾಗಿ ಮಾತನಾಡುತ್ತಿರುವ ವಿಡಿಯೊ ಭಾರೀ ಚರ್ಚೆಗೆ ಗ್ರಾಸವಾಗಿತ್ತು,. ಅಲ್ಲದೆ ಮನು(Manu Bhaker) ತಾಯಿ ಕೂಡ ನೀರಜ್​ ಜತೆ ಕಾಣಿಸಿಕೊಂಡಿದ್ದ ಕಾರಣ ನೀರಜ್​-ಮನು ಮಧ್ಯೆ ಪ್ರೀತಿ ಇರುವುದು ಖಚಿತ ಎನ್ನಲಾಗಿತ್ತು. ಬಳಿಕ ಮನು ಭಾಕರ್​ ತಂದೆ(Manu Bhaker Father) ರಾಮ್ ಕಿಶನ್(Ram Kishan) ಸ್ಪಷ್ಟನೆ ನೀಡುವ ಮೂಲಕ ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದರು.

“ನನ್ನ ಮಗಳು ಇನ್ನೂ ಚಿಕ್ಕ ವಯಸ್ಸಿನವಳು. ಈಗ ವಿವಾಹವಾಗುವ ವಯಸ್ಸು ಕೂಡ ಅವಳದ್ದಲ್ಲ. ಸದ್ಯ ಮದುವೆ ಬಗ್ಗೆ ಯಾವ ಯೋಚನೆಯೂ ಇಲ್ಲ. ಮನು ತಾಯಿ ನೀರಜ್​ರನ್ನು ತನ್ನ ಸ್ವಂತ ಮಗನಂತೆ ಕಾಣುತ್ತಾರೆ. ಹೀಗಾಗಿ ನೀರಜ್​ ಜತೆ ತುಂಬಾ ಆತ್ಮೀಯವಾಗಿ ಕಾಣಿಸಿಕೊಂಡರು” ಎಂದು ಹೇಳಿದ್ದರು.

Continue Reading

ಕ್ರೀಡೆ

Virat Kohli: ಕೊಹ್ಲಿಯ ಮೊದಲ ಅಂತಾರಾಷ್ಟ್ರೀಯ ಪಂದ್ಯಕ್ಕೆ ತುಂಬಿತು 16 ವರ್ಷ

Virat Kohli: ವಿರಾಟ್​ ಕೊಹ್ಲಿ ಅವರು ಆಗಸ್ಟ್​ 18, 2008ರಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತ ತಂಡದ ಪರ ಪದಾರ್ಪಣೆ ಮಾಡಿದರು. ಆಗ ತಾನೆ ಅಂಡರ್​-19 ವಿಶ್ವಕಪ್​ ಗೆದ್ದಿದ್ದ ಅವರಿಗೆ ಸಚಿನ್​ ತೆಂಡೂಲ್ಕರ್​ ಮತ್ತು ವೀರೇಂದ್ರ ಸೆಹವಾಗ್​ ಅವರ ಅನುಪಸ್ಥಿತಿಯಲ್ಲಿ ಆರಂಭಿಕಾಗಿ ಆಡುವ ಅವಕಾಶ ನೀಡಲಾಗಿತ್ತು.

VISTARANEWS.COM


on

virat kohli
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ, ದಾಖಲೆಗಳ ಸರದಾರ, ಕಿಂಗ್​ ಖ್ಯಾತಿಯ(king kohli) ವಿರಾಟ್​ ಕೊಹ್ಲಿ(Virat Kohli) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿರಿಸಿ ಇಂದಿಗೆ 16 ವರ್ಷ ತುಂಬಿದೆ. ಅವರ ಈ ಕ್ರಿಕೆಟ್​ ವೃತ್ತಿ ಬದುಕಿನಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದಾರೆ.

ಲಂಕಾ ವಿರುದ್ಧ ಪದಾರ್ಪಣೆ


ವಿರಾಟ್​ ಕೊಹ್ಲಿ ಅವರು ಆಗಸ್ಟ್​ 18, 2008ರಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತ ತಂಡದ ಪರ ಪದಾರ್ಪಣೆ ಮಾಡಿದರು. ಆಗ ತಾನೆ ಅಂಡರ್​-19 ವಿಶ್ವಕಪ್​ ಗೆದ್ದಿದ್ದ ಅವರಿಗೆ ಸಚಿನ್​ ತೆಂಡೂಲ್ಕರ್​ ಮತ್ತು ವೀರೇಂದ್ರ ಸೆಹವಾಗ್​ ಅವರ ಅನುಪಸ್ಥಿತಿಯಲ್ಲಿ ಆರಂಭಿಕಾಗಿ ಆಡುವ ಅವಕಾಶ ನೀಡಲಾಗಿತ್ತು. ತಮ್ಮ ಚೊಚ್ಚಲ ಪಂದ್ಯದಲ್ಲಿ ಅವರು 12 ರನ್​ ಗಳಿಸಿ ನುವಾನ್ ಕುಲಶೇಖರ ಅವರಿಗೆ ವಿಕೆಟ್​ ಒಪ್ಪಿಸಿದ್ದರು. ಆದರೆ ನಾಲ್ಕನೇ ಪಂದ್ಯದಲ್ಲಿ 54 ರನ್​ ಗಳಿಸಿ ತಮ್ಮ ಚೊಚ್ಚಲ ಅರ್ಧಶತಕವನ್ನು ಬಾರಿಸಿದ್ದರು. ಅವರು ಭಾರತ ತಂಡಕ್ಕೆ ಪದಾರ್ಪಣೆ ಮಾಡುವ ವೇಳೆ ಕೊಹ್ಲಿಗೆ 19 ವರ್ಷ. ಕೇವಲ 8 ಲಿಸ್ಟ್​ ಎ ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದರು.

ಡಿಸೆಂಬರ್ 24, 2009ರಲ್ಲಿ ಶ್ರೀಲಂಕಾ ವಿರುದ್ಧ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅವರು 111 ಎಸೆತಗಳಲ್ಲಿ 1 ಸಿಕ್ಸರ್​ ಹಾಗೂ 14 ಫೋರ್​ಗಳೊಂದಿಗೆ 107 ರನ್ ಬಾರಿಸಿ ಔಟಾದರು. ಇದು ಅವರ ಚೊಚ್ಚಲ ಅಂತಾರಾಷ್ಟ್ರೀಯ ಶತಕವಾಗಿತ್ತು.

ಅಮೋಘ ಸಾಧನೆ

35 ವರ್ಷದ ವಿರಾಟ್ ಕೊಹ್ಲಿ ಅವರು ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್​​ ಅವರ ಏಕದಿನ ಕ್ರಿಕೆಟ್​ನ ಸಾರ್ವಕಾಲಿಕ 49 ಶತಕದ ದಾಖಲೆಯನ್ನು ಮುರಿದಿದ್ದರು. ಈ ಮೂಲಕ ಏಕದಿನ ಕ್ರಿಕೆಟ್​ನೂತನ ಸಾಮ್ರಾಟನಾಗಿ ಹೊರಹೊಮ್ಮಿದ್ದರು. ಇದುವರೆಗೆ ಕೊಹ್ಲಿ ಒಟ್ಟು 295 ಏಕದಿನ ಪಂದ್ಯಗಳನ್ನು ಆಡಿದ್ದು 58.18 ರ ಸರಾಸರಿಯಲ್ಲಿ ಬ್ಯಾಟ್​ ಬೀಸಿ 13906 ರನ್ ಗಳಿಸಿದ್ದಾರೆ. ಇದರಲ್ಲಿ 50 ಶತಕ ಮತ್ತು 72 ಅರ್ಧಶತಕ ಒಳಗೊಂಡಿದೆ. ಬೌಲಿಂಗ್​ನಲ್ಲೂ 5 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ Virat Kohli: ಲಂಡನ್​ನ ಸಿಗ್ನಲ್​ನಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ನಿಂತ ಕೊಹ್ಲಿ; ವಿಡಿಯೊ ವೈರಲ್

ಟೆಸ್ಟ್​ನಲ್ಲಿ 113 ಪಂದ್ಯಗಳಲ್ಲಿ 8848 ರನ್ ಗಳಿಸಿದ್ದು, 29 ಶತಕ, 7 ದ್ವಿಶತಕ ಮತ್ತು 30 ಅರ್ಧಶತಕ ಸಿಡಿಸಿದ್ದಾರೆ. 254 ಅವರ ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ. 125 ಟಿ20 ಪಂದ್ಯವಾಡಿ 4188 ರನ್ ಬಾರಿಸಿದ್ದಾರೆ. ಇದರಲ್ಲಿ 38 ಅರ್ಧಶತಕ ಮತ್ತು 1 ಶತಕ ದಾಖಲಾಗಿದೆ. ಇತ್ತೀಚೆಗೆ ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್​ ಫೈನಲ್​ ಪಂದ್ಯವನ್ನಾಡುವ ಮೂಲಕ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಈಗ ಟೆಸ್ಟ್​ ಮತ್ತು ಏಕದಿನ ಮಾತ್ರ ಆಡುತ್ತಿದ್ದಾರೆ.

Continue Reading
Advertisement
Physical abuse
ಬೆಂಗಳೂರು7 mins ago

Physical Abuse : ಕೋರಮಂಗಲದ ಪಬ್‌ನಿಂದ ಮನೆಗೆ ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

P Susheela hospitalized Legendary playback singer
ಸ್ಯಾಂಡಲ್ ವುಡ್7 mins ago

P Susheela: ಖ್ಯಾತ ಗಾಯಕಿ ಪಿ. ಸುಶೀಲಾ ಆಸ್ಪತ್ರೆಗೆ ದಾಖಲು

Gold Rate Today
ಚಿನ್ನದ ದರ24 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Bigg boss Hindi list of contestants
ಬಿಗ್ ಬಾಸ್31 mins ago

Bigg boss Hindi: ಬಿಗ್ ಬಾಸ್ 18ರ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಲ್ಲಿದೆ; ಯಾವಾಗಿಂದ ಶುರು? 

karnataka weather Forecast
ಮಳೆ41 mins ago

Karnataka Weather : ಭಾರಿ ಮಳೆ ಹಿನ್ನೆಲೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

TNIT Media Awards
ಕರ್ನಾಟಕ43 mins ago

TNIT Media Award : ವಿಸ್ತಾರ ನ್ಯೂಸ್​​ಗೆ ಟಿಎನ್​ಐಟಿ ಸೌತ್ ಇಂಡಿಯಾ ಮೀಡಿಯಾ ಅವಾರ್ಡ್ಸ್​​ನ 3 ಪ್ರಶಸ್ತಿಗಳ ಗರಿ

ಕ್ರೀಡೆ51 mins ago

WTC 2025: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪ್ರವೇಶಿಸಬೇಕಿದ್ದರೆ ಭಾರತಕ್ಕೆ ಇನೆಷ್ಟು ಗೆಲುವು ಬೇಕು?

Doctors Strike
ದೇಶ55 mins ago

Doctors Strike: ನಾವು ಮುಂದಿನ ಸಂತ್ರಸ್ತರಾಗಲು ಬಯಸುವುದಿಲ್ಲ; ಪ್ರತಿಭಟನಾನಿರತ ವೈದ್ಯರ ಕಿಡಿನುಡಿ

Dina Bhavishya
ಭವಿಷ್ಯ1 hour ago

Dina Bhavishya: ಈ ರಾಶಿಯವರಿಗೆ ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರ

Murder case
ಪ್ರಮುಖ ಸುದ್ದಿ2 hours ago

Murder Case : ದಲಿತನಿಗೆ ಕ್ಷೌರ ಮಾಡಲು ನಿರಾಕರಣೆ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌