IPL 2024: ಹೆಲಿಕಾಪ್ಟರ್ ಶಾಟ್ ಮೂಲಕ ಬೌಂಡರಿ ಬಾರಿಸಿದ ಪರಾಗ್; ವಿಡಿಯೊ ವೈರಲ್​ - Vistara News

ಕ್ರೀಡೆ

IPL 2024: ಹೆಲಿಕಾಪ್ಟರ್ ಶಾಟ್ ಮೂಲಕ ಬೌಂಡರಿ ಬಾರಿಸಿದ ಪರಾಗ್; ವಿಡಿಯೊ ವೈರಲ್​

IPL 2024: ರಶೀದ್​ ಖಾನ್​ ಅವರ ಓವರ್​ನಲ್ಲಿ ಕೀಪರ್​ ಮ್ಯಾಥ್ಯೂ ವೇಡ್​ ಕೈಚೆಲ್ಲಿದ ಕ್ಯಾಚ್​ನಿಂದ ಜೀವದಾನ ಪಡೆದ ಪರಾಗ್ ಈ ಅವಕಾಶವನ್ನು ಎರಡೂ ಕೈಗಳಿಂದ ಬಾಚಿದ ಅವರು 34 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ವಿಶ್ವ ಕ್ರಿಕೆಟ್ ನಲ್ಲಿ ಹೊಸ ಹೊಸ ಬ್ಯಾಟಿಂಗ್ ಶಾಟ್ ಗಳು ಪರಿಚಯ ಆಗುತ್ತಿವೆ. ಧೋನಿ(ms dhoni) ಪರಿಚಯಿಸಿದ ‘ಹೆಲಿಕಾಪ್ಟರ್ ಶಾಟ್’(Helicopter shot) ಅನ್ನು ಹೊಡೆಯಲು ಅನೇಕರು ಪ್ರಯತ್ನಿಸಿದರೂ ಸಫಲರಾಗಿದ್ದು ಮಾತ್ರ ಕೆಲವರಷ್ಟೇ. ಬುಧವಾರ ಗುಜರಾತ್​ ಟೈಟಾನ್ಸ್(Gujarat Titans)​ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್​ ತಂಡದ(Rajasthan Royals) ರಿಯಾನ್​ ಪರಾಗ್​(Riyan Parag) ಹೆಲಿಕಾಪ್ಟರ್ ಶಾಟ್ ಹೊಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಚ್ಚರಿ ಎಂದರೆ ಪರಾಗ್​ ಕೂಡ ಧೋನಿಯ ಅಪಟ್ಟ ಅಭಿಮಾನಿ.

ಜೈಪುರ ಸವಾಯಿ ಮಾನ್​ಸಿಂಗ್​ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದ ವೇಳೆ ಪರಾಗ್​ ಈ ಹೆಲಿಕಾಪ್ಟರ್ ಶಾಟ್ ಬಾರಿಸಿದರು. ಗುಜರಾತ್​ ಬೌಲಿಂಗ್​ ಇನಿಂಗ್ಸ್​ನ 17ನೇ ಓವರ್​ನ ದ್ವಿತೀಯ ಎಸೆತದಲ್ಲಿ ಬೌಂಡರಿ ಬಾರಿಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದರು. ಮೋಹಿತ್​ ಶರ್ಮ ಎಸೆತವನ್ನು ಹೆಲಿಕಾಪ್ಟರ್ ಶಾಟ್ ಮೂಲಕ ಬೌಂಡರಿ ಬಾರಿಸಿದರು. ಉಮೇಶ್​ ಯಾದವ್​ ಅವರು ಬೌಂಡರಿ ತಡೆಯುವ ಪ್ರಯತ್ನ ಮಾಡಿದರೂ ಕೂಡ ವಿಫಲರಾದರು.

ಹಿಂದೊಮ್ಮೆ 2021ರಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್​ ಶಮಿ ಅವರ ಎಸೆತಕ್ಕೆ ಪರಾಗ್​ ಹೆಲಿಕಾಪ್ಟರ್ ಶಾಟ್ ಹೊಡೆದರೂ ಕ್ಯಾಚ್​ ನೀಡಿ ನಿರಾಸೆ ಅನುಭವಿಸಿದ್ದರು. ಇದೀಗ 3 ವರ್ಷಗಳ ಬಳಿಕ ಹೆಲಿಕಾಪ್ಟರ್ ಶಾಟ್ ಬಾರಿಸುವಲ್ಲಿ ಯಶಸ್ಸು ಕಂಡಿದ್ದಾರೆ.

ಅರ್ಧಶತಕ ಬಾರಿಸಿದ ಪರಾಗ್​


ಜಾಸ್​ ಬಟ್ಲರ್​ ಅವರ ವಿಕೆಟ್​ ಪತನದ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಆಡಲಿಳಿದ ಪರಾಗ್​ ಕೇಲವ 6 ರನ್​ ಗಳಿಸಿದ್ದ ವೇಳೆ ರಶೀದ್​ ಖಾನ್​ ಅವರ ಓವರ್​ನಲ್ಲಿ ಕೀಪರ್​ ಮ್ಯಾಥ್ಯೂ ವೇಡ್​ ಕೈಚೆಲ್ಲಿದ ಕ್ಯಾಚ್​ನಿಂದ ಜೀವದಾನ ಪಡೆದರು. ಈ ಅವಕಾಶವನ್ನು ಎರಡೂ ಕೈಗಳಿಂದ ಬಾಚಿದ ಅವರು 34 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು. ಪ್ರತಿ ಓವರ್​ಗೊಂದು ಸಿಕ್ಸರ್​ ಮತ್ತು ಬೌಂಡರಿ ಬಾರಿಸುತ್ತಲೇ ಮುನ್ನುಗ್ಗಿದ ಪರಾಗ್​ ಅಂತಿಮವಾಗಿ 48 ಎಸೆತಗಳಿಂದ 76 ರನ್​ ಗಳಿಸಿ ಬೌಂಡರಿ ಲೈನ್​ನಲ್ಲಿ ವಿಜಯ್​ ಶಂಕರ್​ ಹಿಡಿದ ಅಸಾಮಾನ್ಯ ಕಾಚ್​ನಿಂದ ಔಟಾದರು. ಅವರ ಈ ಸ್ಫೋಟಕ ಇನಿಂಗ್ಸ್​ನಲ್ಲಿ 5 ಸೊಗಸಾದ ಸಿಕ್ಸರ್​ ಮತ್ತು 3 ಬೌಂಡರಿ ದಾಖಲಾಯಿತು. 4ನೇ ವಿಕೆಟ್​ಗೆ ನಾಯಕ ಸಂಜು ಜತೆ ಸೇರಿ 130 ರನ್​ಗಳ ಜತೆಯಾಟ ಕೂಡ ನಿಭಾಯಿಸಿದರು.

ಇದನ್ನೂ ಓದಿ IPL 2024: ಸ್ಮರಣೀಯ ಪಂದ್ಯವನ್ನಾಡುತ್ತಿರುವ ಚಹಲ್​ಗೆ ಪತ್ನಿಯಿಂದ ಭಾವುಕ ಸಂದೇಶ

ಸಂಜು ಸ್ಯಾಮ್ಸನ್​ ಕೂಡ ಬಿರುಸಿನ ಬ್ಯಾಟಿಂಗ್​ ಮೂಲಕ 38 ಎಸೆತಗಳಿಂದ ಅಜೇಯ 68 ರನ್​ ಬಾರಿಸಿ ತಂಡದ ಬೃಹತ್​ ಮೊತ್ತಕ್ಕೆ ಕಾರಣರಾದರು. ಕಳೆದ ಆರ್​ಸಿಬಿ ವಿರುದ್ಧ ಅಜೇಯ ಶತಕ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದ ಜಾಸ್​ ಬಟ್ಲರ್​ ಈ ಪಂದ್ಯದಲ್ಲಿ ಕೇವಲ 8 ರನ್​ ಗಳಿಸಿ ನಿರಾಸೆ ಮೂಡಿಸಿದರು. ಇವರ ಜತೆಗಾರ ಯಶಸ್ವಿ ಜೈಸ್ವಾಲ್​ 24 ರನ್​ ಗಳಿಸಿದರು. ಗುಜರಾತ್​ ಪರ ಉಮೇಶ್​ ಯಾದವ್​, ರಶೀದ್​ ಖಾನ್​, ಮತ್ತು ಮೋಹಿತ್​ ಶರ್ಮ ತಲಾ ಒಂದೊಂದು ವಿಕೆಟ್​ ಪಡೆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Champions Trophy 2025: ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ಆತಿಥ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಯನ್ನು ಆಯ್ಕೆ ಮಾಡಿಕೊಂಡಿದೆ.

VISTARANEWS.COM


on

Champions Trophy 2025
Koo

ಕರಾಚಿ: ಮುಂದಿನ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ(Champions Trophy 2025) ಪಾಕಿಸ್ತಾನ ಕ್ರಿಕೆಟ್ ಮಂಡಳಿಯು(PCB) ಸ್ಥಳ ನಿಗದಿಪಡಿಸಿದೆ. ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಯನ್ನು ಆಯ್ಕೆ ಮಾಡಿಕೊಂಡಿದೆ. ಜತೆಗೆ ಭಾರತದ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ‘ಹೈಬ್ರಿಡ್ ಮಾದರಿ’ಯ ಊಹಾಪೋಹದ ಹೊರತಾಗಿಯೂ ಪಂದ್ಯಾವಳಿ ಸಂಪೂರ್ಣವಾಗಿ ಪಾಕ್​ನಲ್ಲಿಯೇ ನಡೆಯಲಿದೆ ಎಂಬ ವಿಶ್ವಾಸ ಕೂಡ ವ್ಯಕ್ತಪಡಿಸಿದೆ. 2017 ರಲ್ಲಿ ಇಂಗ್ಲೆಂಡ್‌ನಲ್ಲಿ ಕೊನೆಯ ಬಾರಿಗೆ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯುವ ನಿರೀಕ್ಷೆ ಇದೆ.

“ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ನಾವು ಪಾಕಿಸ್ತಾನದಲ್ಲಿ ಪಂದ್ಯಗಳ ವೇಳಾಪಟ್ಟಿಯನ್ನು ಐಸಿಸಿಗೆ ಕಳುಹಿಸಿದ್ದೇವೆ” ಎಂದು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಸೋಮವಾರ ಲಾಹೋರ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಐಸಿಸಿಯ ಭದ್ರತಾ ತಂಡವು ಪಾಕಿಸ್ತಾನಕ್ಕೆ ಬಂದು ನಮ್ಮ ಜತೆ ಸಭೆ ನಡೆಸಿದೆ. ಈ ಸಭೆ ಉತ್ತಮವಾಗಿತ್ತು.ಅವರಿಗೆ ಇಲ್ಲಿನ ವ್ಯವಸ್ಥೆಗಳನ್ನು ನೋಡಿ ತೃಪ್ತಿಯಾಗಿದೆ. ನಾವು ಪಾಕಿಸ್ತಾನದಲ್ಲಿ ಉತ್ತಮ ಪಂದ್ಯಾವಳಿಯನ್ನು ಆಯೋಜಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ನಖ್ವಿ ಇದೇ ವೇಳೆ ಮಾಹಿತಿ ನೀಡಿದರು.

ಕಳೆದ ವರ್ಷ ಏಷ್ಯಾಕಪ್‌ನಲ್ಲಿ ‘ಹೈಬ್ರಿಡ್ ಮಾಡೆಲ್’ ಹೋಸ್ಟಿಂಗ್ ಅನ್ನು ಬಳಸಲಾಗಿತ್ತು. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ನೇತೃತ್ವದ ಏಷ್ಯನ್ ಕ್ರಿಕೆಟ್ ಕೌನ್ಸಿಲ್, ಪಂದ್ಯಾವಳಿಯ ಅಧಿಕೃತ ಆತಿಥೇಯ ಪಾಕಿಸ್ತಾನವಾಗಿದ್ದರೂ ಸಹ ಶ್ರೀಲಂಕಾದಲ್ಲಿ ಭಾರತದ ಪಂದ್ಯಗಳನ್ನು ನಡೆಸಿತ್ತು. ಆದರೆ ಈ ಬಾರಿ ಇದು ಸಾಧ್ಯವಿಲ್ಲ ಎಂದು ನಖ್ವಿ ಹೇಳಿದ್ದಾರೆ.

ಇದನ್ನೂ ಓದಿ Champions Trophy 2025 : ಪಾಕಿಸ್ತಾನಕ್ಕೆ ನಾವು ಹೋಗುವುದಿಲ್ಲ; ಭಾರತದ ಸ್ಪಷ್ಟ ನುಡಿ

ಪಾಕಿಸ್ತಾನ ಕ್ರಿಕೆಟ್​ ಸ್ಟೇಡಿಯಂ ಕೆಲ ಸುಧಾರಣೆ ಕಾಣಬೇಕಿದೆ. ಕರಾಚಿಯ ಸ್ಟೇಡಿಯಂ ಕೆಟ್ಟ ಸ್ಥಿತಿಯಲ್ಲಿದೆ. ಆದ್ದರಿಂದ ಮೇ 7 ರಿಂದ ಇದರ ನವೀಕರಣ ಕೆಲಸ ಆರಂಭಗೊಳ್ಳಲಿದೆ. ವಿನ್ಯಾಸಕ್ಕೆ ಸಹಾಯ ಮಾಡುವ ಅಂತಾರಾಷ್ಟ್ರೀಯ ಕಂಪನಿಗಳಿಂದ ಬಿಡ್‌ಗಳನ್ನು ಅಂತಿಮಗೊಳಿಸುತ್ತೇವೆ ಎಂದರು.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮುರಿದುಹೋಗಿವೆ. ಪರಸ್ಪರ ಪಂದ್ಯಗಳನ್ನು ಆಡುತ್ತಿಲ್ಲ. ಈ ನಿರ್ಧಾರ ಎರಡೂ ಸರ್ಕಾರಗಳ ಅಡಿಯಲ್ಲಿ ನಡೆಯಿತು. ಆದಾಗ್ಯೂ, ಪಾಕಿಸ್ತಾನವು ಕಳೆದ ಏಕದಿನ ವಿಶ್ವಕಪ್ ಸೇರಿದಂತೆ ಅನೇಕ ಐಸಿಸಿ ಪಂದ್ಯಾವಳಿಗಳಿಗಾಗಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸಿತ್ತು.

ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್​, ಅಫಘಾನಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್​ ಮತ್ತು ಬಾಂಗ್ಲಾದೇಶ ಟೂರ್ನಿಗೆ ಅರ್ಹತೆ ಪಡೆದ ತಂಡಗಳಾಗಿವೆ.

Continue Reading

ಕ್ರೀಡೆ

Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

Thomas Cup 2024: ಸೋಮವಾರ ನಡೆದ ‘ಸಿ’ ಗುಂಪಿನ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು 5-0 ಅಂತರದಿಂದ ಹಿಮ್ಮೆಟ್ಟಿಸಿ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಥಾಮಸ್‌ ಕಪ್‌(Thomas Cup 2024) ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಭಾರತ ಎಂಟರ ಘಟ್ಟಕ್ಕೆ ಮುನ್ನಡೆದಿದೆ.

VISTARANEWS.COM


on

Thomas Cup 2024
Koo

ಚೆಂಗ್ಡು (ಚೀನಾ): ಇಲ್ಲಿ ನಡೆಯುತ್ತಿರುವ ಥಾಮಸ್‌ ಕಪ್‌(Thomas Cup 2024) ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಭಾರತ(Indian men’s Badminton team) ತಂಡದ ಗೆಲುವಿನ ನಾಗಲೋಟ ಮುಂದುವರಿದಿದೆ. ಸೋಮವಾರ ನಡೆದ ‘ಸಿ’ ಗುಂಪಿನ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು 5-0 ಅಂತರದಿಂದ ಹಿಮ್ಮೆಟ್ಟಿಸಿ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಎಂಟರ ಘಟ್ಟಕ್ಕೆ ಮುನ್ನಡೆದಿದೆ. ಬುಧವಾರ ನಡೆಯುವ ಗುಂಪಿನ ಅಂತಿಮ ಲೀಗ್ ಪಂದ್ಯದಲ್ಲಿ 14 ಬಾರಿಯ ಚಾಂಪಿಯನ್ ಇಂಡೊನೇಷ್ಯಾ ವಿರುದ್ಧ ಕಣಕ್ಕಿಳಿಯಲಿದೆ.

ಎಚ್‌.ಎಸ್‌.ಪ್ರಣಯ್ 21-15, 21-15ರಲ್ಲಿ ನೇರ ಗೇಮ್‌ಗಳಿಂದ ಹ್ಯಾರಿ ಹುವಾಂಗ್ ಅವರನ್ನು ಸೋಲಿಸಿ ಭಾರತಕ್ಕೆ (1-0) ಆರಂಭಿಕ ಮುನ್ನಡೆ ಒದಗಿಸಿದರು. ಆ ಬಳಿಕ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಡಬಲ್ಸ್‌ ವಿಭಾಗದಲ್ಲಿ ಬೆನ್‌ ಲೇನ್ ಮತ್ತು ಸೀನ್‌ ವೆಂಡಿ ಅವರನ್ನು ಮೂರು ಗೇಮ್​ಗಳ ಹೋರಾಟದಲ್ಲಿ ಮಣಿಸಿ 2-0 ಮುನ್ನಡೆ ತಂದರು. ಗೆಲುವಿನ ಅಂತರ 21-17, 19-21, 21-15.

ಮೂರನೇ ಪಂದ್ಯದಲ್ಲಿ ಅನುಭವಿ ಕಿದಂಬಿ ಶ್ರೀಕಾಂತ್‌ 21-16, 21-11 ರಿಂದ ನದೀಮ್ ದಲ್ವಿ ಅವರನ್ನು ಸೋಲಿಸಿ ತಂಡಕ್ಕೆ 3-0 ಗೆಲುವಿನ ಮುನ್ನಡೆ ಒದಗಿಸಿದರು. ಭಾರತದ ಎರಡನೇ ಡಬಲ್ಸ್‌ ತಂಡವಾದ ಎಂ.ಆರ್‌.ಅರ್ಜುನ್‌- ಧ್ರುವ್ ಕಪಿಲಾ ಜೋಡಿ 21-7, 21-19 ರಿಂದ ರೋರಿ ಎಸ್ಟನ್‌- ಅಲೆಕ್ಸ್‌ ಗ್ರೀನ್ ಜೋಡಿಯನ್ನು ಸೋಲಿಸಿತು. ಸಂಪೂರ್ಣವಾಗಿ ಪಂದ್ಯದಲ್ಲಿ ಹಿಡಿತ ಸಾಧಿಸಿದ ಭಾತರ ಅಂತಿಮ ಸಿಂಗಲ್ಸ್‌ ವಿಭಾಗದ ಸ್ಪರ್ಧೆಯಲ್ಲಿಯೂ ಗೆಲುವಿನಿ ನಗೆ ಬೀರಿತು. 24 ವರ್ಷದ ಕಿರಣ್ ಜಾರ್ಜ್ 21-18, 21-12ರಲ್ಲಿ ನೇರ ಗೇಮ್‌ಗಳಿಂದ ಚೋಳನ್ ಕಾಯನ್ ಅವರನ್ನು ಸೋಲಿಸಿದರು.‌ ಮೊದಲ ಪಂದ್ಯದಲ್ಲಿ ಭಾರತ 4-1 ಅಂತರದಿಂದ ಥಾಯ್ಲೆಂಡ್ ತಂಡವನ್ನು ಸೋಲಿಸಿತ್ತು.

ಇದನ್ನೂ ಓದಿ Fighter Movie: ಪಿ.ವಿ.ಸಿಂಧು ಗಮನ ಸೆಳೆದ ‘ಫೈಟರ್‌’; ಚಿತ್ರದ ಬಗ್ಗೆ ಬ್ಯಾಡ್ಮಿಂಟನ್‌ ತಾರೆ ಹೇಳಿದ್ದೇನು?

ಮಹಿಳಾ ತಂಡ ಕೂಡ ಕ್ವಾರ್ಟರ್​ ಫೈನಲ್​ಗೆ


ಭಾರತದ ಮಹಿಳಾ ತಂಡ ಕೂಡ ಉಬರ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿದೆ. ಭಾನುವಾರ ನಡೆದಿದ್ದ ‘ಎ’ ಗುಂಪಿನ ಎರಡನೇ ಪಂದ್ಯದಲ್ಲಿ ಭಾರತವು ಸಿಂಗಾಪುರ ತಂಡವನ್ನು 4-1 ಗೋಲುಗಳಿಂದ ಮಣಿಸಿ ಈ ಸಾಧನೆ ಮಾಡಿತ್ತು. ಆರಂಭಿಕ ಪಂದ್ಯದಲ್ಲಿ ಅಶ್ಮಿತಾ ಚಾಲಿಹಾ ಅವರ ಸೋಲಿನಿಂದ ಚೇತರಿಸಿಕೊಂಡ ಭಾರತ, ಉಳಿದ ಪಂದ್ಯಗಳನ್ನು ಸುಲಭವಾಗಿ ಗೆದ್ದುಕೊಂಡಿತ್ತು.

Continue Reading

ಕ್ರೀಡೆ

IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

IPL 2024: ಶಾರುಖ್‌ ಖಾನ್‌ ಮತ್ತು ಅವರ ಪುತ್ರ ಅಬ್ರಾಮ್(AbRam ) ರಿಂಕು ಸಿಂಗ್​ ಜತೆ ಕ್ರಿಕೆಟ್​ ಆಡಿದ ವಿಡಿಯೊ ವೈರಲ್​ ಆಗಿದೆ. ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಇಂದು ಕೆಕೆಆರ್​ ತಂಡ ಈಡನ್​ ಗಾರ್ಡನ್ಸ್​ನಲ್ಲಿ ಪಂದ್ಯವನ್ನಾಡುತ್ತಿದೆ. ಈ ಪಂದ್ಯಕ್ಕೂ ಮುನ್ನ ಕೆಕೆಆರ್​ ಆಟಗಾರರು ಅಭ್ಯಾಸ ನಡೆಸಿದ ವೇಳೆ ಶಾರುಖ್‌ ಪುತ್ರ ಅಬ್ರಾಮ್ ರಿಂಕು ಸಿಂಗ್​ ಅವರಿಗೆ ಬೌಲಿಂಗ್​ ನಡೆಸಿದ್ದಾರೆ.

VISTARANEWS.COM


on

IPL 2024
Koo

ಕೋಲ್ಕತ್ತಾ: ಬಾಲಿವುಡ್‌ ನಟ, ಕೆಕೆಆರ್​ ತಂಡದ ಸಹ ಮಾಲಿಕ ಶಾರುಖ್‌ ಖಾನ್‌(Shah Rukh Khan) ಅವರು ತನ್ನ ತಂಡದ ಪ್ರತಿ ಪಂದ್ಯದ ವೇಳೆಯೂ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳುತ್ತಾರೆ. ತಂಡ ಸೋತರೂ ಗೆದ್ದರೂ ಆಟಗಾರರಿಗೆ ಸದಾ ಸ್ಫೂರ್ತಿ ತುಂಬುವ ಕೆಲ ಮಾಡುತ್ತಲೇ ಇರುತ್ತಾರೆ. ಈಗಾಗಲೇ ಇದರ ಹಲವು ವಿಡಿಯೊಗಳನ್ನು ಕೂಡ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಇದೀಗ ತಮ್ಮ ಕಿರಿಯ ಪುತ್ರ ಅಬ್ರಾಮ್(Shah Rukh Khan’s Son AbRam) ಮತ್ತು ಕೆಕೆಆರ್​ ಆಟಗಾರರ ಜತೆ ಕ್ರಿಕೆಟ್​ ಆಡಿ ಗಮನಸೆಳೆದಿದ್ದಾರೆ. ಶಾರುಖ್‌ ಖಾನ್‌ ಮತ್ತು ಅವರ ಪುತ್ರ ಅಬ್ರಾಮ್(AbRam ) ರಿಂಕು ಸಿಂಗ್​ ಜತೆ ಕ್ರಿಕೆಟ್​ ಆಡಿದ ವಿಡಿಯೊ ವೈರಲ್​ ಆಗಿದೆ.

ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಇಂದು ಕೆಕೆಆರ್​ ತಂಡ ಈಡನ್​ ಗಾರ್ಡನ್ಸ್​ನಲ್ಲಿ ಪಂದ್ಯವನ್ನಾಡುತ್ತಿದೆ. ಈ ಪಂದ್ಯಕ್ಕೂ ಮುನ್ನ ಕೆಕೆಆರ್​ ಆಟಗಾರರು ಅಭ್ಯಾಸ ನಡೆಸಿದ ವೇಳೆ ಶಾರುಖ್‌ ಪುತ್ರ ಅಬ್ರಾಮ್ ರಿಂಕು ಸಿಂಗ್​ ಅವರಿಗೆ ಬೌಲಿಂಗ್​ ನಡೆಸಿದ್ದಾರೆ. ಇದಾದ ಬಳಿಕ ತಂದೆಯ ಜತೆ ಕ್ಯಾಚ್​ ಹಿಡಿಯುವ ಅಭ್ಯಾಸ ನಡೆಸಿದ್ದಾರೆ. ಶಾರೂಕ್​ ಕೂಡ ಕೆಕೆಆರ್​ ಜೆರ್ಸಿಯಲ್ಲಿ ಕೆಲ ಕಾಲ ಟೆನಿಸ್​ ಬಾಲ್​ನಲ್ಲಿ ಬ್ಯಾಟಿಂಗ್​ ಅಭ್ಯಾಸ ನಡೆಸಿದ್ದಾರೆ. ಇದೆಲ್ಲದರ ವಿಡಿಯೊವನ್ನು ಶಾರುಖ್‌ ಮತ್ತು ಕೆಕೆಆರ್ ಅಭಿಮಾನಿಗಳು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್​ ಮಾಡಿದ್ದಾರೆ.​

ಏಪ್ರಿಲ್​ 16ರಂದು ರಾಜಸ್ಥಾನ್​ ರಾಯಲ್ಸ್(RR)​ ವಿರುದ್ಧ ಆಡಲಿಳಿದಿದ್ದ ಕೆಕೆಆರ್(KKR)​ ತಂಡ ಜಾಸ್​ ಬಟ್ಲರ್​ ಅವರ ಅಜೇಯ ಶತಕದ(IPL 2024) ಆಟದಿಂದ ಸೋಲು ಕಂಡಿತ್ತು. ತವರಿನಲ್ಲೇ ಸೋಲು ಕಂಡ ಬೇಸರದಲ್ಲಿ ತಂಡದ ಸಹ ಮಾಲೀಕ, ಬಾಲಿವುಡ್​ ನಟ ಶಾರೂಖ್ ಖಾನ್‌(Shah Rukh Khan) ಅವರು ಕಣ್ಣೀರು ಸುರಿಸಿದ್ದರು. ಈ ವಿಡಿಯೊ ವೈರಲ್​ ಆಗಿತ್ತು.

ಇದನ್ನೂ ಓದಿ IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಶಾರೂಖ್ ಖಾನ್‌ ತನ್ನ ತಂಡ ಸೋಲು ಕಂಡಾಗ ಭಾವುಕರಾದರು. ಆದರೂ ಕೂಡ ಪಂದ್ಯ ಮುಗಿದ ಬಳಿಕ ಮೈದಾನಕ್ಕೆ ಹತಾಶರಾಗಿ ಕುಳಿತಿದ್ದ ತನ್ನ ತಂಡದ ಆಟಗಾರರನ್ನು ಸಮಾಧಾನ ಪಡೆಸಿದರು. ಅಲ್ಲದೆ ಡ್ರೆಸ್ಸಿಂಗ್​ ರೂಮ್​ಗೂ ತೆರಳಿ ಆಟಗಾರರಿಗೆ ಮುಂದಿನ ಪಂದ್ಯದಲ್ಲಿ ಉತ್ತಮವಾಗಿ ಆಡುವಂತೆ ಧೈರ್ಯ ತುಂಬಿದರು. ಜತೆಗೆ ಗೆಲುವು ಸಾಧಿಸಿದ ಎದುರಾಳಿ ತಂಡದ ಆಟಗಾರರನ್ನು ಕೂಡ ತಬ್ಬಿಕೊಂಡು ಅಭಿನಂದಿಸಿದ್ದರು.

ಸದ್ಯ ಕೆಕೆಆರ್​ ತಂಡ 8 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು 10 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ಇಂದು ನಡೆಯುತ್ತಿರುವ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದರೆ 12 ಅಂಕದೊಂದಿಗೆ ಪ್ಲೇ ಆಫ್​ ಹಾದಿ ಮತ್ತಷ್ಟು ಸುಗಮಗೊಳಿಸಲಿದೆ.

Continue Reading

ಕ್ರೀಡೆ

LSG vs MI: ಲಕ್ನೋ ಸವಾಲಿಗೆ ಮುಂಬೈ ಸಜ್ಜು; ಸೋತರೆ ಪಾಂಡ್ಯ ಪಡೆಯ ಪ್ಲೇ ಆಫ್​ ಹಾದಿ ಕಠಿಣ

LSG vs MI: ನಿಕೋಲಸ್​ ಪೂರನ್​ ಆರಂಭಿಕ ಕೆಲ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್​ ನಡೆಸಿ ತಂಡಕ್ಕೆ ಆಸರೆಯಾಗುತ್ತಿದ್ದರು. ಆದರೆ, ಈಗ ಅವರ ಬ್ಯಾಟಿಂಗ್​ ಆರ್ಭಟ ಕೊಂಚ ಕಡಿಮೆಯಾದಂತೆ ತೋರುತ್ತಿದೆ. ದೀಪಕ್​ ಹೂಡಾ ಮತ್ತೆ ಬ್ಯಾಟಿಂಗ್​ ಫಾರ್ಮ್​ಗೆ ಮರಳಿರುವುದು ತಂಡಕ್ಕೆ ಬಲ ನೀಡಿದೆ.

VISTARANEWS.COM


on

LSG vs MI
Koo

ಲಕ್ನೋ: ಕಳೆದ ಪಂದ್ಯದಲ್ಲಿ ತವರಿನಲ್ಲೇ ಸೋಲು ಕಂಡ ಲಕ್ನೋ ಸೂಪರ್​ ಜೈಂಟ್ಸ್(LSG vs MI)​ ಮತ್ತೊಂದು ಪಂದ್ಯವನ್ನಾಡಲು ಸಜ್ಜಾಗಿದೆ. ಎದುರಾಳಿ ಸತತವಾಗಿ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್​. ಸದ್ಯ ಮುಂಬೈ ಅಂಕಪಟ್ಟಿಯಲ್ಲಿ 9ನೇ ಸ್ಥಾನಿಯಾಗಿದ್ದರೆ, ಲಕ್ನೋ(lucknow super giants) 5ನೇ ಸ್ಥಾನದಲ್ಲಿದೆ. ಪ್ಲೇ ಆಫ್​ ಆಸೆ ಜೀವಂತವಿರಿಸಬೇಕಿದ್ದರೆ ಮುಂಬೈಗೆ ಇದು ಮಸ್ಟ್​ ವಿನ್​ ಗೇಮ್​ ಆಗಿದೆ. ಲಕ್ನೋಗೂ ಕೂಡ ಮಹತ್ವದ ಪಂದ್ಯವಾಗಿದೆ.

ಲಕ್ನೋ ಬ್ಯಾಟಿಂಗ್‌ ಅಗ್ರ ಕ್ರಮಾಂಕವನ್ನು ಹೆಚ್ಚು ಅವಲಂಬಿಸಿದೆ. ರಾಹುಲ್‌- ಡಿ ಕಾಕ್‌ ಕ್ರೀಸ್‌ ಆಕ್ರಮಿಸಿಕೊಂಡರೆ ಮಾತ್ರ ತಂಡಕ್ಕೆ ಗೆಲುವು ಖಚಿತ ಎನ್ನಬಹುದು. ಪವರ್​ ಪ್ಲೇ ತನಕ ಉಭಯ ಆಟಗಾರರು ನಿಲ್ಲದೆ ಹೋದರೆ ತಂಡದ ಬೃಹತ್​ ಮೊತ್ತಕ್ಕೆ ದೊಡ್ಡ ಹೊಡೆತ ಬೀಳಲಿದೆ. ಮಾರ್ಕಸ್​ ಸ್ಟೋಯಿನಿಸ್​ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿ ತಂಡವನ್ನು ಗೆಲ್ಲಿಸಿದ್ದರೂ ಕೂಡ ಇವರ ಬ್ಯಾಟಿಂಗ್​ ಮೇಲೆ ಹೆಚ್ಚು ನಂಬಿಕೆ ಇಡುವಂತಿಲ್ಲ. ನಿಂತು ಆಡುವ ಕಲೆ ಇವರಿಗೆ ಅಷ್ಟಾಗಿ ತಿಳಿದಿಲ್ಲ. ತಾವೆದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್​ ಬಾರಿಸುವ ಯೋಚನೆಯಲ್ಲಿರುತ್ತಾರೆ.

ನಿಕೋಲಸ್​ ಪೂರನ್​ ಆರಂಭಿಕ ಕೆಲ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್​ ನಡೆಸಿ ತಂಡಕ್ಕೆ ಆಸರೆಯಾಗುತ್ತಿದ್ದರು. ಆದರೆ, ಈಗ ಅವರ ಬ್ಯಾಟಿಂಗ್​ ಆರ್ಭಟ ಕೊಂಚ ಕಡಿಮೆಯಾದಂತೆ ತೋರುತ್ತಿದೆ. ದೀಪಕ್​ ಹೂಡಾ ಮತ್ತೆ ಬ್ಯಾಟಿಂಗ್​ ಫಾರ್ಮ್​ಗೆ ಮರಳಿರುವುದು ತಂಡಕ್ಕೆ ಬಲ ನೀಡಿದೆ. ಶರವೇಗದ ಎಸೆತಗಾರ ಮಾಯಾಂಕ್‌ ಯಾದವ್‌ ಅವರ ಗೈರು ಕಾಡಿದೆ. ಈ ಪಂದ್ಯದಲ್ಲೂ ಅವರು ಆಡುವುದು ಅನುಮಾನ ಎನ್ನಲಾಗಿದೆ. ಮೊಹ್ಸಿನ್​ ಖಾನ್​, ಕೃಣಾಲ್​ ಪಾಂಡ್ಯ ಪ್ರತಿ ಪಂದ್ಯದಲ್ಲಿಯೂ ದುಬಾರಿಯಾಗುತ್ತಿದ್ದಾರೆ. ಇವರಲ್ಲೊಬ್ಬರನ್ನು ಕೈ ಬಿಟ್ಟು ಯುವ ಆಲ್​ರೌಂಡರ್​ ಅರ್ಶಿನ್ ಕುಲಕರ್ಣಿಗೆ ಈ ಪಂದ್ಯದಲ್ಲಿ ಆಡಿಸಿದರೆ ಉತ್ತಮ. ಅಂಡರ್​-19 ವಿಶ್ವಕಪ್​ ಟೂರ್ನಿಯಲ್ಲಿ ಇವರು ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರಿದ್ದರು.

ಇದನ್ನೂ ಓದಿ IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

ಮುಂಬೈ ತಂಡದಲ್ಲಿ ನಾಯಕತ್ವ ಬದಲಾವಣೆ ಬಳಿಕ ಯಾರು ಕೂಡ ಸಂಘಟಿತ ಪ್ರದರ್ಶನ ತೋರುತಿಲ್ಲ. ಇಶಾನ್​ ಕಿಶನ್​, ಸೂರ್ಯಕುಮಾರ್​ ಯಾದವ್​, ರೋಹಿತ್​ ಶರ್ಮ, ಜಸ್​ಪ್ರೀತ್​ ಬುಮ್ರಾ ಅವರಂತಹ ಘಟಾನುಘಟಿ ಆಟಗಾರರಿದ್ದರೂ ಕೂಡ ತಂಡಕ್ಕಾಗಿ ಆಡುತ್ತಿಲ್ಲ. ಸೋತರೂ ಗೆದ್ದರೂ ಕೂಡ ಜೋಶ್​ ಕಾಣುತ್ತಿಲ್ಲ. ನೂತನ ನಾಯಕ ಹಾರ್ದಿಕ್​ ಪಾಂಡ್ಯ ಕೂಡ ಗಂಭೀರವಾಗಿ ಆಡುತ್ತಿಲ್ಲ. ಅವರ ವರ್ತನೆಗಳೇ ವಿಚಿತ್ರವಾಗಿ ಗೋಚರಿಸಿದೆ.

ಪಿಚ್​ ರಿಪೋರ್ಟ್


ಲಕ್ನೋದ ಏಕಾನ ಸ್ಟೇಡಿಯಂನ ಪಿಚ್​ ಇದುವರೆಗೆ ನಿಧಾನಗತಿಯಿಂದ ಕೂಡಿತ್ತು. ಬೌಲರ್‌ಗಳು ಪರಿಣಾಮಕಾರಿಯಾಗಿ ದಾಳಿ ನಡೆಸುವ ಪಿಚ್​ ಇದಾಗಿತ್ತು. ಆದರೆ ಈಗ ಈ ಪಿಚ್​ ಈ ಹಿಂದಿನಂತೆ ವರ್ತಿಸುತ್ತಿಲ್ಲ. ಇಲ್ಲಿ ದೊಡ್ಡ ಮೊತ್ತವನ್ನು ಪೇರಿಸಿದರೂ ಕೂಡ ಚೇಸಿಂಗ್​ ನಡೆಸಬಹುದು. ಇದಕ್ಕೆ ಕಳೆದ 2 ಪಂದ್ಯಗಳ ಫಲಿತಾಂಶವೇ ಉತ್ತಮ ನಿದರ್ಶನ. ಈ ಮೊದಲು ಇಲ್ಲಿ ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಳ್ಳುತ್ತಿತ್ತು. ಈಗ ಇಲ್ಲಿ ಮಂಚಿನ ಕಾಟ ಶುರುವಾಗಿದ್ದು ಚೇಸಿಂಗ್​ ನಡೆಸಿದ ತಂಡಗಳೇ ಗೆಲ್ಲುತ್ತಿವೆ. ಹೀಗಾಗಿ ಟಾಸ್‌ ಗೆದ್ದವರು ಮೊದಲು ಬ್ಯಾಟಿಂಗ್‌ ಬೌಲಿಂಗ್​ ಆಯ್ಕೆ ಮಾಡಿಕೊಳ್ಳುವ ನಿರೀಕ್ಷೆಯಿದೆ.

Continue Reading
Advertisement
CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ12 mins ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ13 mins ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ23 mins ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ40 mins ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Champions Trophy 2025
ಕ್ರೀಡೆ57 mins ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Karnataka Weather
ಕರ್ನಾಟಕ2 hours ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ2 hours ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Thomas Cup 2024
ಕ್ರೀಡೆ2 hours ago

Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

Rameshwaram Cafe blast
ಕರ್ನಾಟಕ2 hours ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

IPL 2024
ಕ್ರೀಡೆ3 hours ago

IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202410 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202411 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌