IPL 2024 Points Table: ಡೆಲ್ಲಿ ಕ್ಯಾಪಿಟಲ್ಸ್​ ಸೋಲಿನ ಬಳಿಕ ಹೀಗಿದೆ ಅಂಕಪಟ್ಟಿ - Vistara News

ಕ್ರೀಡೆ

IPL 2024 Points Table: ಡೆಲ್ಲಿ ಕ್ಯಾಪಿಟಲ್ಸ್​ ಸೋಲಿನ ಬಳಿಕ ಹೀಗಿದೆ ಅಂಕಪಟ್ಟಿ

IPL 2024 Points Table: ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್(LSG vs MI)​ ಮತ್ತು ಸತತವಾಗಿ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್​ ಸೆಣಸಾಟ ನಡೆಸಲಿದೆ. ಸದ್ಯ ಮುಂಬೈ ಅಂಕಪಟ್ಟಿಯಲ್ಲಿ 9ನೇ ಸ್ಥಾನಿಯಾಗಿರುವ ಮುಂಬೈಗೆ ಪ್ಲೇ ಆಫ್​ ಆಸೆ ಜೀವಂತವಿರಿಸಬೇಕಿದ್ದರೆ ಇದು ಮಸ್ಟ್​ ವಿನ್​ ಗೇಮ್​ ಆಗಿದೆ. ಲಕ್ನೋಗೂ ಕೂಡ ಮಹತ್ವದ ಪಂದ್ಯವಾಗಿದೆ.

VISTARANEWS.COM


on

IPL 2024 Points Table
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾ: ಸೋಮವಾರ ರಾತ್ರಿ ನಡೆದ ಐಪಿಎಲ್​(IPL 2024) ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡ ಡೆಲ್ಲಿ ಕ್ಯಾಪಿಟಲ್ಸ್​(Delhi Capitals) ವಿರುದ್ಧ ಭರ್ಜರಿ 7 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಡೆಲ್ಲಿ ಸೋಲಿನ ಹೊರತಾಗಿಯೂ ಅಂಕಪಟ್ಟಿಯಲ್ಲಿ(IPL 2024 Points Table) ಹಿಂದಿನಂತೆ 6ನೇ ಸ್ಥಾನದಲ್ಲೇ ಮುಂದುವರಿದಿದೆ. ಕೆಕೆಆರ್​ 2ನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ಸೋಲಿನಿಂದ ಪಂತ್​ ಪಡೆಯ ಪ್ಲೇ ಆಫ್​ ಪಯಣ ಕೂಡ ದುರ್ಗಮಗೊಂಡಿದೆ. ಇನ್ನುಳಿದ 3 ಪಂದ್ಯಗಳನ್ನು ಕೂಡ ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಡೆಲ್ಲಿ ಪ್ಲೇ ಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ. ಸದ್ಯ 12 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿರುವ ಕೆಕೆಆರ್​ಗೆ ಇನ್ನೂ 5 ಪಂದ್ಯಗಳು ಬಾಕಿ ಉಳಿದಿವೆ. ಈ ಪೈಕಿ ಕನಿಷ್ಠ 2 ಪಂದ್ಯ ಗೆದ್ದರೂ ಪ್ಲೇ ಆಫ್​ ಟಿಕೆಟ್​ ಖಚಿತಗೊಳ್ಳಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​96312 (+1.096)
ಚೆನ್ನೈ​​95410 (+0.810)
ಹೈದರಾಬಾದ್​95410 (+0.075)
ಲಕ್ನೋ95410 (+0.059)
ಡೆಲ್ಲಿ115610 (-0.442)
ಗುಜರಾತ್​10468 (-1.113)
ಪಂಜಾಬ್9368 (-0.187)
ಮುಂಬೈ9366 (-0.261)
ಆರ್​ಸಿಬಿ10376 (-0.415)

ಇಲ್ಲಿನ ಐತಿಹಾಸಿಕ ಕ್ರಿಕೆಟ್​ ಸ್ಟೇಡಿಯಂ ಈಡನ್​ ಗಾರ್ಡನ್ಸ್​ನಲ್ಲಿ ನಡೆದ ಸೋಮವಾರದ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಡೆಲ್ಲಿ​ ನಾಟಕೀಯ ಕುಸಿತ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 153 ರನ್​ ಬಾರಿಸಿತು. ಸಾಧಾರಣ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) 16.3​ ಓವರ್​ಗಳಲ್ಲಿ 3 ವಿಕೆಟ್​ ಕಳೆದುಕೊಂಡು 157 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ಇಂದಿನ ಪಂದ್ಯ


ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್(LSG vs MI)​ ಮತ್ತು ಸತತವಾಗಿ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್​ ಸೆಣಸಾಟ ನಡೆಸಲಿದೆ. ಸದ್ಯ ಮುಂಬೈ ಅಂಕಪಟ್ಟಿಯಲ್ಲಿ 9ನೇ ಸ್ಥಾನಿಯಾಗಿರುವ ಮುಂಬೈಗೆ ಪ್ಲೇ ಆಫ್​ ಆಸೆ ಜೀವಂತವಿರಿಸಬೇಕಿದ್ದರೆ ಇದು ಮಸ್ಟ್​ ವಿನ್​ ಗೇಮ್​ ಆಗಿದೆ. ಲಕ್ನೋಗೂ ಕೂಡ ಮಹತ್ವದ ಪಂದ್ಯವಾಗಿದೆ.

ಇದನ್ನೂ ಓದಿ IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

ಮುಂಬೈ ತಂಡದಲ್ಲಿ ನಾಯಕತ್ವ ಬದಲಾವಣೆ ಬಳಿಕ ಯಾರು ಕೂಡ ಸಂಘಟಿತ ಪ್ರದರ್ಶನ ತೋರುತಿಲ್ಲ. ಇಶಾನ್​ ಕಿಶನ್​, ಸೂರ್ಯಕುಮಾರ್​ ಯಾದವ್​, ರೋಹಿತ್​ ಶರ್ಮ, ಜಸ್​ಪ್ರೀತ್​ ಬುಮ್ರಾ ಅವರಂತಹ ಘಟಾನುಘಟಿ ಆಟಗಾರರಿದ್ದರೂ ಕೂಡ ತಂಡಕ್ಕಾಗಿ ಆಡುತ್ತಿಲ್ಲ. ಸೋತರೂ ಗೆದ್ದರೂ ಕೂಡ ಜೋಶ್​ ಕಾಣುತ್ತಿಲ್ಲ. ನೂತನ ನಾಯಕ ಹಾರ್ದಿಕ್​ ಪಾಂಡ್ಯ ಕೂಡ ಗಂಭೀರವಾಗಿ ಆಡುತ್ತಿಲ್ಲ. ಅವರ ವರ್ತನೆಗಳೇ ವಿಚಿತ್ರವಾಗಿ ಗೋಚರಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

Dubbing Premier League: ಕಳೆದ ಎರಡು ಆವೃತ್ತಿಯ ಯಶಸ್ಸಿನ ಹಿನ್ನೆಲೆಯಲ್ಲಿ ಕಲಾವಿದರೇ ಜತೆಯಾಗಿ ಸೇರಿಕೊಂಡು ಈ ಟೂರ್ನಿಯನ್ನು ಅಯೋಜಿಸಿದ್ದಾರೆ. ಕರ್ನಾಟಕದ ಜನಪ್ರಿಯ ಸುದ್ದಿವಾಹಿನಿ ‘ವಿಸ್ತಾರ ನ್ಯೂಸ್​’ ಈ ಟೂರ್ನಿಗೆ ಮಾಧ್ಯಮ ಸಹಯೋಗ ನೀಡಿದೆ. ಅದೇ ರೀತಿ ಎಮ್​ ಸ್ಪೋರ್ಟ್​​ ಯೂಟ್ಯೂಬ್ ಚಾನೆಲ್​ನಲ್ಲಿ ಪಂದ್ಯದ ಕ್ಷಣಗಳು ನೇರ ಪ್ರಸಾರವಾಗಲಿದ್ದು https://cricheroes.com/ ನಲ್ಲಿ ಲೈವ್ ಸ್ಕೋರ್ ಅಪ್​ಡೇಟ್​ ಸಿಗಲಿದೆ.

VISTARANEWS.COM


on

Dubbing Premier League
Koo

ಬೆಂಗಳೂರು: ಕನ್ನಡ ಸಿನಿಮಾ ಹಾಗೂ ಕಿರುತೆರೆ ಕ್ಷೇತ್ರದಲ್ಲಿ ದುಡಿಯುತ್ತಿರುವ ಅಸಂಖ್ಯಾತ ಡಬ್ಬಿಂಗ್ ಕಲಾವಿದರು ಹಾಗೂ ಕಲಾವಿದರ ಸಮಾಗಮದೊಂದಿಗೆ ಆಯೋಜಿಸಲಾಗುತ್ತಿರುವ ಡಬ್ಬಿಂಗ್​ ಪ್ರೀಮಿಯರ್ ಲೀಗ್ (Dubbing Premier League)​ ಕ್ರಿಕೆಟ್​ ಟೂರ್ನಿಯ ಮೂರನೇ ಆವೃತ್ತಿ ಶನಿವಾರ (ಮೇ 18) ಹಾಗೂ ಭಾನುವಾರ (ಮೇ 19)ರಂದು ನಡೆಯಲಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಗ್ಲೋಬಲ್​ ಅಕಾಡೆಮಿ ಆಫ್​ ಟೆಕ್ನಾಲಜಿಯ ಮೈದಾನದಲ್ಲಿ ಈ ಟೂರ್ನಿಯು ಪಂದ್ಯಗಳು ಅಯೋಜನೆಗೊಂಡಿದೆ. ಈ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಸಿನಿ ಹಾಗೂ ಕಿರುತೆರೆ ಕ್ಷೇತ್ರದ ಹೆಸರಾಂತ ಕಲಾವಿದರು ಹಾಗೂ ಸೆಲೆಬ್ರಿಟಿಗಳು ಪಾಲ್ಗೊಳ್ಳಲಿದ್ದಾರೆ. ಅವರೆಲ್ಲರೂ ಒಂದೆಡೆ ಸೇರಿ “ಜಂಟಲ್​ಮ್ಯಾನ್ಸ್​ ಸ್ಪೋರ್ಟ್”​​ ಎಂದೇ ಕರೆಯವ ಕ್ರಿಕೆಟ್​ ಆಡಿ ಸಂಭ್ರಮಿಸಲಿದ್ದಾರೆ.

ಕಳೆದ ಎರಡು ಆವೃತ್ತಿಯ ಯಶಸ್ಸಿನ ಹಿನ್ನೆಲೆಯಲ್ಲಿ ಕಲಾವಿದರೇ ಜತೆಯಾಗಿ ಸೇರಿಕೊಂಡು ಈ ಟೂರ್ನಿಯನ್ನು ಅಯೋಜಿಸಿದ್ದಾರೆ. ಕರ್ನಾಟಕದ ಜನಪ್ರಿಯ ಸುದ್ದಿವಾಹಿನಿ ‘ವಿಸ್ತಾರ ನ್ಯೂಸ್​’ ಈ ಟೂರ್ನಿಗೆ ಮಾಧ್ಯಮ ಸಹಯೋಗ ನೀಡಿದೆ. ಅದೇ ರೀತಿ ಎಮ್​ ಸ್ಪೋರ್ಟ್​​ ಯೂಟ್ಯೂಬ್ ಚಾನೆಲ್​ನಲ್ಲಿ ಪಂದ್ಯದ ಕ್ಷಣಗಳು ನೇರ ಪ್ರಸಾರವಾಗಲಿದ್ದು https://cricheroes.com/ ನಲ್ಲಿ ಲೈವ್ ಸ್ಕೋರ್ ಅಪ್​ಡೇಟ್​ ಸಿಗಲಿದೆ.

ಶನಿವಾರ ಬೆಳಗ್ಗೆ 7.30ಕ್ಕೆ ಮೊದಲ ಪಂದ್ಯ ನಡೆಯಲಿದೆ. ಅದಕ್ಕಿಂತ ಮೊದಲು ಟೂರ್ನಿಯ ಉದ್ಘಾಟನಾ ಕಾರ್ಯಕ್ರಮ ಅಯೋಜನೆಗೊಂಡಿದೆ. ಟೂರ್ನಿಯಲ್ಲಿ 9 ತಂಡಗಳು ಪ್ರಶಸ್ತಿಗಾಗಿ ಹೋರಾಡಲಿವೆ. ನಿರಂಜನ್ ಸ್ಟುಡಿಯೋಸ್, ಧ್ವನಿ ಸಂಗಮ ಸ್ಟುಡಿಯೋಸ್, ಆರ್​ಸಿಬಿ, ಹರಿವು ಹುಡುಗರು, ಸೌಂಡ್ ಮ್ಯಾಪ್ ರಾಯಲ್ಸ್ ರಾಯಲ್ ಎಡಿಟರ್ಸ್, ಲಗಾನಾ ಬಾಯ್ಸ್, ಕನ್ನಡ ಕಂಠಗಳು, ಭಜರಂಗಿ ಬಾಯ್ಸ್ ಕ್ರಿಕೆಟರ್ಸ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ತಂಡಗಳಾಗಿವೆ. ಎರಡು ದಿನಗಳ ಅವಧಿಯಲ್ಲಿ 10 ಲೀಗ್ ಪಂದ್ಯಗಳು ಹಾಗೂ ಎರಡು ಸೆಮಿ ಫೈನಲ್ ಹಾಗೂ ಫೈನಲ್ ಸೇರಿ ಒಟ್ಟು 13 ಪಂದ್ಯಗಳು ನಡೆಯಲಿವೆ.

ವಸತಿ ಸಚಿವರ ಆಗಮನ ನಿರೀಕ್ಷೆ

ಕರ್ನಾಟಕ ಸರ್ಕಾರದ ವಸತಿ ಸಚಿವರಾದ ಬಿ. ಝಡ್​ ಜಮೀರ್​ ಅಹಮದ್ ಅವರು ಆಗಮಿಸಿ ಪಂದ್ಯವನ್ನು ವೀಕ್ಷಿಸುವುದಾಗಿ ಹೇಳಿದ್ದಾರೆ ಎಂಬುದಾಗಿ ಆಯೋಜಕರು ತಿಳಿಸಿದ್ದಾರೆ. ಅದೇ ರೀತಿ ಕಲಾವಿದರ ಈ ಸಂಗಮಕ್ಕೆ ಸಿನಿಮಾ ಹಾಗೂ ಕಿರುತೆರೆ ಕ್ಷೇತ್ರದ ಹಲವಾರು ಕಲಾವಿದರು ಆಗಮಿಸುವ ನಿರೀಕ್ಷೆಯಿದೆ. ಚಲನಚಿತ್ರ ಕಲಾವಿದ ಮತ್ತು ನಿರ್ದೇಶಕ, ನಾಗೇಂದ್ರ ಅರಸ್, ಸಿನಿಮಾ ಕಲಾವಿದ ರಮೇಶ್ ಪಂಡಿತ್, ಜೀ ಟಿವಿ ಮಹಾನಟಿ ಸೀರಿಯಲ್​ ನ ಆಶಿಕಾ ಶರ್ಮಾ, ಟಿವಿ ಕಲಾವಿದರಾದ ಪುನೀತ್ ಬಾಬು, ಧನಂಜಯ. ಸುಹಾಸ್ ಆತ್ರೇಯಸ್, ಕಾರ್ತಿಕ್ ವೈಭವ್,ಆಯುಷ್ ಜೆ ಶೆಟ್ಟಿ, ವಲ್ಲಭ ಸೂರಿ, ಮಧುಸೂದನ್, ಸಿನಿ ಕಲಾವಿದರಾದ ಹರ್ಷಿಲ್ ಕೌಶಿಕ್, ಶಕ್ತಿ ರಾಜ್, ವಿಕಾಸ್ ವಸಿಷ್ಠ, ರಿಚಾ ಶಾಸ್ತ್ರಿ, ಸಿಲ್ಲಿ ಲಲ್ಲಿ ಆನಂದ್, ಚೇತನ್ ಗಂಧರ್ವ, ಯಶವಂತ್ ಬಿಜೂರ್, ನರೇಶ್ ಗಾಂಧಿ, ಗೀತರಚನೆಕಾರ ಪ್ರಮೋದ್ ಮರವಂತೆ, ಟಿವಿ ಕಲಾವಿದೆ ಪುಷ್ಪಾ ಅನಿಲ್, ಗಾಯಕರಾದ ಕರಿಬಸವ ಅವರು ಟೂರ್ನಿಯಲ್ಲಿ ಪಾಲ್ಗಳ್ಳಲಿದ್ದಾರೆ.

ಇದನ್ನೂ ಓದಿ: IPL 2024 : ಆರ್​ಸಿಬಿ ವಿರುದ್ಧ ವೇಗದ ಬೌಲರ್​ ಕಣಕ್ಕೆ; ಚೆನ್ನೈ ತಂಡದಲ್ಲಿ ಸಂಭ್ರಮ

ಎರಡು ಆವೃತ್ತಿಗಳ ಯಶಸ್ಸು

ಸಿನಿಮಾ ಹಾಗೂ ಕಿರುತೆರೆಯಲ್ಲಿ ಹಲವಾರು ಡಬ್ಬಿಂಗ್ ಕಲಾವಿದರು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿ ಬದುಕಿನ ಜಂಜಾಟ ಹಾಗೂ ಇನ್ನೂ ಅನೇಕ ಕಾರಣಗಳಿಂದಾಗಿ ಅವರೆಲ್ಲರೂ ಪರಸ್ಪರ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎರಡು ವರ್ಷಗಳ ಹಿಂದೆ ಡಬ್ಬಿಂಗ್​ ಆರ್ಟಿಸ್ಟ್​​ಗಳು ಹಾಗೂ ಇನ್ನಿತರ ಕಲಾವಿರ ಸಮಾಗಮದಲ್ಲಿ ಕ್ರಿಕೆಟ್ ಟೂರ್ನಿಯನ್ನು ಆರಂಭಿಸಲಾಗಿತ್ತು. ಕಳೆದ ಎರಡು ವರ್ಷದ ಟೂರ್ನಿ ಅತ್ಯಂತ ಯಶಸ್ಸು ಕಂಡಿತ್ತು. ಕಲಾವಿದರು ಎರಡು ದಿನಗಳ ಕಾಲ ಜತೆಯಾಗಿ ಸೇರಿಕೊಂಡು ಕ್ರಿಕೆಟ್ ಆಡಿ ಸಂಭ್ರಮಿಸಿದ್ದರು. ಟ್ರೋಫಿ ಗೆದ್ದಿದ್ದರು. ಈ ಯಶಸ್ಸಿನ ಹಿನ್ನೆಲೆಯಲ್ಲಿ ಮೂರನೇ ಆವೃತ್ತಿಯನ್ನು ಆಯೋಜಿಸಲಾಗಿದೆ. ಶನಿವಾರ ಹಾಗೂ ಭಾನುವಾರ ಕ್ರಿಕೆಟ್​ ಪ್ರೇಮಿ ಕಲಾವಿದರು ಈ ಟೂರ್ನಿಯಲ್ಲಿ ಆಡಿ ಸಂಭ್ರಮಿಸಲಿದ್ದಾರೆ ಎಂಬುದಾಗಿ ಅಯೋಜಕರು ಮಾಹಿತಿ ನೀಡಿದ್ದಾರೆ.

Continue Reading

ಪ್ರಮುಖ ಸುದ್ದಿ

IPL 2024 : ಆರ್​ಸಿಬಿ ವಿರುದ್ಧ ವೇಗದ ಬೌಲರ್​ ಕಣಕ್ಕೆ; ಚೆನ್ನೈ ತಂಡದಲ್ಲಿ ಸಂಭ್ರಮ

IPL 2024: ದೀಪಕ್ ಚಾಹರ್ ಸದಾ ಗಾಯದಿಂದ ಬಳಲುತ್ತಿರುವ ಬೌಲರ್ ಎನಿಸಿಕೊಂಡಿದ್ದಾರೆ. ತಮ್ಮ ಕ್ರಿಕೆಟ್ ವೃತ್ತಿಜೀವನದಲ್ಲಿ ಇಲ್ಲಿಯವರೆಗೆ ಹಲವಾರು ಗಾಯಗಳನ್ನು ಅನುಭವಿಸಿದ್ದಾರೆ. ಗಾಯದಿಂದ ಚೇತರಿಸಿಕೊಂಡ ನಂತರ ಅವರು ಐಪಿಎಲ್ 2024 ಗೆ ಬಂದಿದ್ದರು ಆದರೆ ಸಿಎಸ್​ಕೆ ಪರ 8 ಪಂದ್ಯಗಳನ್ನು ಆಡಿದ ನಂತರ ಅವರು ಹೊಸ ಹೊಡೆತವನ್ನು ತಿಂದರು. ಅವರ ಅನುಪಸ್ಥಿತಿಯು ತಂಡದಲ್ಲಿ ದೊಡ್ಡ ಸಮಸ್ಯೆ ಉಂಟುಮಾಡಿತ್ತು.

VISTARANEWS.COM


on

IPL 2024
Koo

ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್ ದೀಪಕ್ ಚಾಹರ್ ಗಾಯದ ಸಮಸ್ಯೆಯಿಂದ ಹೊರಬಂದಿದ್ದು, ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಆಡುವ ನಿರೀಕ್ಷೆಯಿದೆ. ಐಪಿಎಲ್ 2024 ರ (IPL 2024) ಕೊನೆಯ ಲೀಗ್ ಪಂದ್ಯದಲ್ಲಿ ಸಿಎಸ್​ಕೆ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಚೆನ್ನೈನಲ್ಲಿ ನಡೆದ ಋತುವಿನ ಆರಂಭಿಕ ಪಂದ್ಯದಲ್ಲಿ ಕೊನೆಯ ಬಾರಿಗೆ ಭೇಟಿಯಾದ ಎರಡು ದಕ್ಷಿಣ ಭಾರತದ ಫ್ರಾಂಚೈಸಿಗಳ ನಡುವಿನ ರಿವರ್ಸ್ ಪಂದ್ಯ ಇದಾಗಿದೆ. ಹಿಂದಿನ ಪಂದ್ಯದಲ್ಲಿ ದೀಪಕ್ ಚಾಹರ್ 37 ರನ್ ನೀಡಿ ಗ್ಲೆನ್ ಮ್ಯಾಕ್ಸ್​ವೆಲ್​ ವಿಕೆಟ್ ಪಡೆದಿದ್ದರು.

ದೀಪಕ್ ಚಾಹರ್ ಸದಾ ಗಾಯದಿಂದ ಬಳಲುತ್ತಿರುವ ಬೌಲರ್ ಎನಿಸಿಕೊಂಡಿದ್ದಾರೆ. ತಮ್ಮ ಕ್ರಿಕೆಟ್ ವೃತ್ತಿಜೀವನದಲ್ಲಿ ಇಲ್ಲಿಯವರೆಗೆ ಹಲವಾರು ಗಾಯಗಳನ್ನು ಅನುಭವಿಸಿದ್ದಾರೆ. ಗಾಯದಿಂದ ಚೇತರಿಸಿಕೊಂಡ ನಂತರ ಅವರು ಐಪಿಎಲ್ 2024 ಗೆ ಬಂದಿದ್ದರು ಆದರೆ ಸಿಎಸ್​ಕೆ ಪರ 8 ಪಂದ್ಯಗಳನ್ನು ಆಡಿದ ನಂತರ ಅವರು ಹೊಸ ಹೊಡೆತವನ್ನು ತಿಂದರು. ಅವರ ಅನುಪಸ್ಥಿತಿಯು ತಂಡದಲ್ಲಿ ದೊಡ್ಡ ಸಮಸ್ಯೆ ಉಂಟುಮಾಡಿತ್ತು.

ಮೇ 1 ರಂದು ಐಪಿಎಲ್ 2024 ರ 49 ನೇ ಪಂದ್ಯಕ್ಕಾಗಿ ಚೆಪಾಕ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೂಪರ್ ಕಿಂಗ್ಸ್ ತಂಡ ಆತಿಥ್ಯ ನೀಡಿದಾಗ ದೀಪಕ್ ಚಾಹರ್​​ ಪೂರ್ತಿ ಸ್ಪೆಲ್​ ಎಸೆಯಲು ವಿಫಲಗೊಂಡಿದ್ದರು. ಅವರು ಗಾಯದಿಂದಾಗಿ ಪೆವಿಲಿಯನ್​ಗೆ ಮರಳಿದ್ದರು.

163 ರನ್​ಗಳ ಗುರಿ ಬೆನ್ನಟ್ಟಿ ಚೆನ್ನೈ ತಂಡಕ್ಕೆ ಸ್ಯಾಮ್ ಕರ್ರನ್ ಪಡೆ 162 ರನ್ಗಳ ಗುರಿ ನೀಡಿತ್ತು. ಗುರಿ ಕಡಿಮೆ ಇತ್ತು. ಹೀಗಾಗಿ ಬೌಲರ್​ಗಳ ನೆರವು ಅಗತ್ಯವಾಗಿತ್ತು. ಆದಾಗ್ಯೂ, ಪಂದ್ಯದ ಮೊದಲ ಓವರ್​ನಲ್ಲಿ ದೀಪಕ್ ಚಹರ್ ಕೇವಲ 2 ಎಸೆತಗಳನ್ನು ಎಸೆದ ನಂತರ ನೋವಿನಿಂದ ಮೈದಾನದಿಂದ ಹೊರನಡೆದಾಗ ಆತಿಥೇಯರಿಗೆ ದೊಡ್ಡ ಹೊಡೆತ ಸಿಕ್ಕಂತಾಯಿತು.

ಇದನ್ನೂ ಓದಿ: IPL 2024 : ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಪಂದ್ಯದ ವಿಜೇತರು ಯಾರು ಎಂದು ತಿಳಿಸಿದ ಬ್ರಿಯಾನ್ ಲಾರಾ

ದೀಪಕ್ ಚಹರ್ ಮೈದಾನದಿಂದ ನಿರ್ಗಮಿಸಿದ ನಂತರ, ಪಂಜಾಬ್ ಕಿಂಗ್ಸ್ ಅಗ್ರ ಕ್ರಮಾಂಕವು 113 ರನ್ ಗಳಿಸಿದ ನಂತರ ಕ್ರೀಸ್ ನಿಂದ ನಿರ್ಗಮಿಸಿತು. 4 ಮತ್ತು 5ನೇ ಕ್ರಮಾಂಕದ ಬ್ಯಾಟರ್​ಗಳಾದ ಶಶಾಂಕ್ ಸಿಂಗ್ ಮತ್ತು ಸ್ಯಾಮ್ ಕರ್ರನ್ ತಮ್ಮ ಜೊತೆಯಾಟದ ಮೂಲಕ ಪಂಜಾಬ್ ತಂಡವನ್ನು ಗೆಲುವು ಕಂಡಿತು.

ಗಾಯದ ಆತಂಕ

ಪಂದ್ಯದ ನಂತರ, ಸಿಎಸ್ಕೆ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಚಾಹರ್ ಅವರ ಗಾಯದ ಬಗ್ಗೆ ಹೀಗೆ ಹೇಳಿದ್ದರು, ದೀಪಕ್ ಚಹರ್ ಉತ್ತಮವಾಗಿ ಕಾಣುತ್ತಿಲ್ಲ. ಆದ್ದರಿಂದ, ಫಿಸಿಯೋ ಮತ್ತು ವೈದ್ಯರು ನೋಡಿದಾಗ ಹೆಚ್ಚು ಸಕಾರಾತ್ಮಕ ವರದಿಯನ್ನು ನಾನು ಆಶಿಸುತ್ತೇನೆ ಎಂದು ಹೇಳಿದ್ದರು.

ಬೆಂಗಳೂರಿನಲ್ಲಿ ಸಿಎಸ್​ಕೆ ತಂಡದ ಅಭ್ಯಾಸದ ಸಮಯದಲ್ಲಿ, ದೀಪಕ್ ಚಹರ್ ಪೂರ್ಣ ತೀವ್ರತೆಯಲ್ಲಿ ಬೌಲಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದು ವೇಗಿ ಆರ್​ಸಿಬಿ ವಿರುದ್ಧ ಆಡಲು ಫಿಟ್ ಆಗಿದ್ದಾರೆ ಎಂದು ಸೂಚಿಸುತ್ತದೆ. ಅವರು ನೇರವಾಗಿ ಪ್ಲೇಯಿಂಗ್ ಇಲೆವೆನ್​ಗೆ ಬರುತ್ತಾರೆಯೇ ಅಥವಾ ಇಂಪ್ಯಾಕ್ಟ್​ ಪ್ಲೇಯರ್​ ಆಗಿರುತ್ತಾರೆಯೇ ನೋಡಬೇಕಾಗಿದೆ.

Continue Reading

ಕ್ರೀಡೆ

SubAir facility: ಸಬ್‌ ಏರ್‌ ಸಿಸ್ಟಮ್‌ ಹೇಗೆ ಕಾರ್ಯನಿರ್ವಹಿಸುತ್ತದೆ?; ಮಳೆ ನಿಂತು ಎಷ್ಟು ಗಂಟೆಯಲ್ಲಿ ಪಂದ್ಯ ಆರಂಭ?

SubAir facility: ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ.

VISTARANEWS.COM


on

SubAir facility
Koo

ಬೆಂಗಳೂರು: ನಾಳೆ ನಡೆಯುವ ಆರ್​ಸಿಬಿ(RCB) ಮತ್ತು ಚೆನ್ನೈ(CSK) ನಡುವಣ ಪಂದ್ಯಕ್ಕೆ ಮಳೆ ಭೀತಿ ಇದ್ದರೂ ಅಭಿಮಾನಿಗಳು ಯಾವುದೇ ಚಿಂತೆ ಪಡುವ ಅಗತ್ಯವಿಲ್ಲ. ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy) ಈ ಮೈದಾನದಲ್ಲಿದೆ. ಹೀಗಾಗಿ ಮಳೆ ಬಂದರೂ ಪಂದ್ಯ ನಡೆಯುವುದು ಖಚಿತ.

ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಅಮೆರಿಕ, ಲಂಡನ್ ಮತ್ತು ಆಸ್ಟ್ರೇಲಿಯಾದ ಗಾಲ್ಫ್ ಸ್ಟೇಡಿಯಂಗಳಲ್ಲಿ ಮಾತ್ರ ಇಂತಹ ಅತ್ಯಾಧುನಿಕ ವ್ಯವಸ್ಥೆ ಇದೆ.

2017ರಲ್ಲಿ ಚೆನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ತಂತ್ರಜ್ಞಾನದ ಪರೀಕ್ಷಾರ್ಥ ಪ್ರದರ್ಶನದ ವೇಳೆ ಸುಮಾರು 5 ಸಾವಿರ ಲೀಟರ್‌ ನೀರನ್ನು ಮೈದಾನಕ್ಕೆ ಹಾಯಿಸಲಾಗಿತ್ತು. ಕೆಲವೇ ಸೆಕೆಂಡ್‌(32 ಸೆ.)ಗಳಲ್ಲಿ ಸಬ್‌ ಏರ್‌ ಸಿಸ್ಟಮ್‌ನ ಯಂತ್ರ ನೀರನ್ನು ಹೀರಿಕೊಂಡಿತ್ತು. ಹುಲ್ಲುಹಾಸಿನ ತಳಮಟ್ಟದಲ್ಲೂ ನೀರಿನ ಅಂಶ ಉಳಿಯದಂತೆ ಹೀರಿಕೊಂಡಿತ್ತು. ಆ ಮೂಲಕ ಎಷ್ಟೇ ಮಳೆ ಬಂದರೂ, ಮಳೆ ನಿಂತ ನಂತರ ಅತಿ ಶೀಘ್ರದಲ್ಲಿ ಮೈದಾನವನ್ನು ಪಂದ್ಯಕ್ಕೆ ಅಣಿಗೊಳಿಸಲು ತಾನು ಸಿದ್ಧ ಎಂಬುದನ್ನು ಸಬ್‌ ಏರ್‌ ಸಿಸ್ಟಮ್‌ ವ್ಯವಸ್ಥೆ ನಿರೂಪಿಸಿತ್ತು. ಅಂದಿನ ಪರೀಕ್ಷಾರ್ಥ ಪ್ರದರ್ಶನದ ವಿಡಿಯೊ ಈಗ ವೈರಲ್​ ಆಗುತ್ತಿದೆ.

ಹಳೆಯ ವಿಡಿಯೊ ಈಗ ವೈರಲ್​ ಆಗಲು ಕೂಡ ಒಂದು ಕಾರಣವಿದೆ. ಏಕೆಂದರೆ ನಾಳೆ ನಡೆಯುವ ಆರ್​ಸಿಬಿ ಮತ್ತು ಚೆನ್ನೈ ವಿರುದ್ಧದ ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಪ್ಲೇ ಆಫ್​ ಪ್ರವೇಶಕ್ಕೆ ಆರ್​ಸಿಬಿಗೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಹೀಗಾಗಿ ಪಂದ್ಯ ನಡೆಯಲಿದೆಯಾ ಎನ್ನುವ ಅನುಮಾನ ಮತ್ತು ಗೊಂದಲ ಆರ್​ಸಿಬಿ ಅಭಿಮಾನಿಗಳಲ್ಲಿ ಮೂಡಿದೆ. ಈ ಕಾರಣದಿಂದ ಯಾರು ಚಿಂತಿಸುವ ಅಗತ್ಯವಿಲ್ಲ ಎಂದು ಹೇಳುವ ಸಲುವಾಗಿ ಆ ವಿಡಿಯೊ ಈಗ ವೈರಲ್​ ಆಗುತ್ತಿದೆ. ವಿಡಿಯೊ ಕಂಡ ಬಳಿಕ ಅಭಿಮಾನಿಗಳು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.

7 ನಿಮಿಷಗಳಲ್ಲಿ ಪಂದ್ಯಕ್ಕೆ ಸಜ್ಜು


4.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಬ್‌ ಏರ್‌ ಸಿಸ್ಟಮ್‌ ವ್ಯವಸ್ಥೆಯಿಂದಾಗಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಚಿನ್ನಸ್ವಾಮಿಯಲ್ಲಿ ಪಂದ್ಯಗಳು ಆರಂಭಗೊಳ್ಳಲಿವೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ.

ಇದನ್ನೂ ಓದಿ RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಸಬ್‌ ಏರ್‌ ಸಿಸ್ಟಮ್‌ ಯಂತ್ರವನ್ನು ನಿಭಾಯಿಸಲು ಕೆಎಸ್‌ಸಿಎ ಕ್ಯುರೇಟರ್‌ಗಳಿಗೂ ವಿಶೇಷ ತರಬೇತಿ ನೀಡಲಾಗಿದೆ. ಮೈದಾನದ ಕೆಲವೆಡೆ ರಿಮೋಟ್‌ ಸೆನ್ಸರ್‌ಗಳನ್ನು ಕೂಡ ಅಳವಡಿಸಲಾಗಿದ್ದು, ಒಂದು ವೇಳೆ ಕ್ರೀಡಾಂಗಣದಲ್ಲಿ ಸಿಬ್ಬಂದಿ ಇಲ್ಲದಿರುವಾಗ ಅಥವಾ ಮಧ್ಯರಾತ್ರಿ ಮಳೆ ಸುರಿದರೆ ಮನೆಯಲ್ಲೇ ಕುಳಿತು ಯಂತ್ರಕ್ಕೆ ಚಾಲನೆಯನ್ನೂ ನೀಡಬಹುದಾಗಿದೆ.

ಸಬ್‌ ಏರ್‌ ಸಿಸ್ಟಮ್‌ ವಿಶೇಷತೆ

1. ಮಳೆ ಆರಂಭವಾದ ಕ್ಷಣದಿಂದ ಪ್ರತಿ ನಿಮಿಷಕ್ಕೆ 10 ಸಾವಿರ ಲೀಟರ್‌ ವೇಗದಲ್ಲಿ ಈ ಯಂತ್ರ ಮೈದಾನದಿಂದ ನೀರನ್ನು ಹೀರಿಕೊಳ್ಳುತ್ತದೆ.

2. ಈ ಹಿಂದಿನ ಚರಂಡಿ ವ್ಯವಸ್ಥೆಗಿಂತ 36 ಪಟ್ಟು ವೇಗದಲ್ಲಿ ನೀರನ್ನು ಮೈದಾನದಿಂದ ಖಾಲಿ ಮಾಡುತ್ತದೆ.

3. ಎಷ್ಟೇ ಮಳೆಯಾದರೂ ಮಳೆ ನಿಂತ ಕೆಲವೇ ನಿಮಿಷಗಳಲ್ಲಿ ಮೈದಾನ ಪಂದ್ಯಕ್ಕೆ ಸಜ್ಜು

Continue Reading

ಕ್ರಿಕೆಟ್

RCB vs CSK: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ತಂಡಗಳ ಐಪಿಎಲ್​ ದಾಖಲೆ ಹೇಗಿದೆ?

RCB vs CSK: ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿಯೂ ಚೆನ್ನೈ ಗೆಲುವಿನ ಫೇವರಿಟ್​ ಆಗಿದೆ.

VISTARANEWS.COM


on

RCB vs CSK
Koo

ಬೆಂಗಳೂರು: ನಾಳೆ ನಡೆಯುವ ಆರ್​ಸಿಬಿ(RCB vs CSK) ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ನಡುವಣ ಹೈವೋಲ್ಟೇಜ್ ಮಿನಿ ಸಮರಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನ(M. Chinnaswamy Stadium) ಸಜ್ಜಾಗಿ ನಿಂತಿದೆ. ಪಂದ್ಯಕ್ಕೆ ಮಳೆ ಭೀತಿ(rcb vs csk weather report) ಇದ್ದರೂ ಕೂಡ ಅಭಿಮಾನಿಗಳು ಪಂದ್ಯ ನಡೆಯುವಂತೆ ಪ್ರಾರ್ಥಿಸ ತೊಡಗಿದ್ದಾರೆ. ಇತ್ತಂಡಗಳ ಐಪಿಎಲ್(Chinnaswamy Stadium IPL Records)​ ದಾಖಲೆ ಕುರಿಯ ಸಾರಸ್ಯಕರ ಸಂಗತಿ ಇಂತಿದೆ.

ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ದಾಖಲೆ


ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ. ಇಲ್ಲಿ ನಡೆದ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆಲುವು ಸಾಧಿಸಿದೆ. ಈ ಆವೃತ್ತಿಯ 6 ಪಂದ್ಯಗಳ ಪೈಕಿ ಸಮಾನಾಗಿ 3 ಬಾರಿ ಚೇಸಿಂಗ್​ ಮತ್ತು ಮೊದಲು ಬ್ಯಾಟಿಂಗ್​ ನಡೆಸಿದ ತಂಡಗಳು ಜಯಿಸಿದೆ.

ಇತ್ತಂಡಗಳ ಒಟ್ಟು ಐಪಿಎಲ್​ ಮುಖಾಮುಖಿ


ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿಯೂ ಚೆನ್ನೈ ಗೆಲುವಿನ ಫೇವರಿಟ್​ ಆಗಿದೆ. ಈ ಬಾರಿಯ ಉದ್ಘಾಟನ ಪಂದ್ಯದಲ್ಲಿಯೂ ಚೆನ್ನೈ ಆರ್​ಸಿಬಿಗೆ ಸೋಲುಣಿಸಿತ್ತು.

ಇದನ್ನೂ ಓದಿ IPL 2024 : ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಪಂದ್ಯದ ವಿಜೇತರು ಯಾರು ಎಂದು ತಿಳಿಸಿದ ಬ್ರಿಯಾನ್ ಲಾರಾ

ಪಿಚ್​ ರಿಪೋರ್ಟ್​


ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್ ಸ್ನೇಹಿ ಸ್ಥಳವಾಗಿದೆ. ಇದುವರೆಗೆ ಇಲ್ಲಿ ನಡೆದ ಬಹುತೇಕ ಪಂದ್ಯಗಳು ಕೂಡ ಚೇಸಿಂಗ್​ ನಡೆಸಿದ ತಂಡವೇ ಹೆಚ್ಚು ಬಾರಿ ಗೆದ್ದಿದೆ. 50ಕ್ಕೂ ಅಧಿಕ ಬಾರಿ ಚೇಸಿಂಗ್​ ನಡೆಸಿದ ತಂಡವೇ ಜಯಶಾಲಿಯಾಗಿದೆ. 40 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ.

ವಿರಾಟ್​ ಕೊಹ್ಲಿ ಈ ಮೈದಾನದಲ್ಲಿ ಇದುವರೆಗೆ 2993 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಈ ಬಾರಿ ಕೊಹ್ಲಿ 13 ಪಂದ್ಯ ಆಡಿ 661 ರನ್​ ಗಳಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ.

ಹವಾಮಾನ ವರದಿ


ಪಂದ್ಯ ನಡೆಯುವ ಮೇ 18 ಶನಿವಾರದಂದು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ(Rain likely to interrupt RCB Vs CSK match) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶೇ.70ರಷ್ಟು ಮಳೆ ಬೀಳಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಈಗಾಗಲೇ ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಸತತವಾಗಿ ಮಳೆಯಾಗುತ್ತಿದೆ. ಅಲ್ಲದೆ ಶುಕ್ರವಾರ ಕೂಡ ಬೆಂಗಳೂರಿನಲ್ಲಿ ಮಳೆಯಾಗಿದೆ.

ಒಂದೊಮ್ಮೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಚೆನ್ನೈ ತಂಡ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಈಗಾಗಲೇ ಚೆನ್ನೈ 14 ಅಂಕಗಳನ್ನು ಹೊಂದಿದ್ದು ಪಂದ್ಯ ರದ್ದಾದ ಕಾರಣ ಸಿಗುವ ಒಂದು ಅಂಕದಿಂದ ಒಟ್ಟು ಅಂಕ 15ಕ್ಕೇ ಏರಿಕೆಯಾಗುತ್ತದೆ. ಇನ್ನುಳಿದ ಯಾವುದೇ ತಂಡಕ್ಕೂ ಈ ಮೊತ್ತವನ್ನು ಮೀರಲು ಸಾಧ್ಯವಾಗುವುದಿಲ್ಲ. ಹೀಗಾಗಿ ಚೆನ್ನೈಗೆ ಮಳೆ ವರದಾನವಾಗಲಿದೆ. ಆರ್​ಸಿಬಿ 13 ಅಂಕಗಳೊಂದಿಗೆ ಐಪಿಎಲ್​ನಿಂದ ಹೊರಬೀಳಲಿದೆ.

Continue Reading
Advertisement
Dubbing Premier League
ಕ್ರಿಕೆಟ್1 min ago

Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

Uttar Pradesh
ದೇಶ4 mins ago

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಅಂಶಗಳು ಇಲ್ಲಿವೆ

Prajwal Revanna Case
ಕರ್ನಾಟಕ20 mins ago

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿಗೆ

theft Case
ಕ್ರೈಂ42 mins ago

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

7 books release programme on May 19 in Bengaluru
ಬೆಂಗಳೂರು51 mins ago

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Pension and NAREGA money credited to farmers loans CM Siddaramaiah slams bank
ರಾಜಕೀಯ55 mins ago

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

Canne Film Festival 2024
ಪ್ರಮುಖ ಸುದ್ದಿ59 mins ago

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

Konkani Book Release
ಕಲೆ/ಸಾಹಿತ್ಯ1 hour ago

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

MLC Meeting
ರಾಜಕೀಯ1 hour ago

MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ

Arvind Kejriwal
ದೇಶ1 hour ago

Arvind Kejriwal: ಅಬಕಾರಿ ಕೇಸ್‌: ಕೇಜ್ರಿವಾಲ್‌ಗೆ ಬಿಗ್ ಶಾಕ್; ಇ.ಡಿ ಚಾರ್ಜ್‌ಶೀಟ್‌ನಲ್ಲಿ ಇವರೇ ಆರೋಪಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌