IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ - Vistara News

ಕ್ರೀಡೆ

IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

IPL 2024: ವಿಶೇಷ ಎಂದರೆ ಎಲಿಮಿನೇಟರ್​​ನಲ್ಲಿ ಲಕ್ನೋವನ್ನು ಸೋಲಿಸಿದ ನಂತರ ಆರ್​ಸಿಬಿ ತಂಡವು 2022 ರ ಋತುವಿನಲ್ಲಿ ಕ್ವಾಲಿಫೈಯರ್ 2 ಹಂತದಲ್ಲಿ ರಾಲ್ಸ್​​ನಿಂದಲೇ ಹೊಡೆತ ತಿಂದು ಹೊರಕ್ಕೆ ಬಿದ್ದಿತ್ತು. 2020 ಮತ್ತು 2021ರಲ್ಲಿಯೂ ಆರ್​ಸಿಬಿ ಎಲಿಮಿನೇಟರ್​ನಲ್ಲಿ ಸೋಲು ಕಂಡಿತ್ತು. 2016ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​​ಸಿಬಿ ಕೊನೆಯ ಬಾರಿ ಫೈನಲ್ ತಲುಪಿತ್ತು.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಐಪಿಎಲ್ ಟ್ರೋಫಿಯನ್ನು ಗೆಲ್ಲುವ ಆರ್​ಸಿಬಿಯ (RCB) ಭರವಸೆಗಳು ಮೇ 22 ರ ಬುಧವಾರ ಕೊನೆಗೊಂಡವು. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ವಿರುದ್ಧ ಸೋತ ನಂತರ ಐಪಿಎಲ್ 2024 ರ (IPL 2024) ಎಲಿಮಿನೇಟರ್​ ಹಂತದಲ್ಲಿಯೇ ರೆಡ್​ಆರ್ಮಿ ಹೊರಕ್ಕೆ ಬಿತ್ತು. ಫಾಫ್ ಡು ಪ್ಲೆಸಿಸ್ ನೇತೃತ್ವದ ತಂಡವು ಪಂದ್ಯಾವಳಿಯ ನಾಕೌಟ್ ಹಂತದಲ್ಲಿ ತನ್ನ ಆವೇಗ ಉಳಿಸಿಕೊಳ್ಳಲಿಲ್ಲ. ಆರು ಪಂದ್ಯಗಳ ಗೆಲುವಿನ ನಂಬಲಾಗದ ಓಟವನ್ನು ಮುಂದುವರಿಸಲಿಲ್ಲ. ಮತ್ತದೇ ಹಳೆ ರಾಗವೆಂಬಂತೆ ಸೋಲಿನ ಸುಳಿಗೆ ಸಿಲುಕಿ ಕೋಟ್ಯಂತರ ಅಭಿಮಾನಿಗಳಿಗೆ ಬೇಸರ ಮೂಡಿಸಿದರು.

ನಾಕೌಟ್ ಹಂತದಲ್ಲಿ ಒತ್ತಡಕ್ಕೆ ಒಳಗಾಗುವ ಆರ್​​ಸಿಬಿ ಚಾಳಿ ಇಲ್ಲಿಯೂ ಮುಂದುವರಿಯಿತು. ಆರ್​ಆರ್​ ತಂಡದ ಹಿಂದೆ ಈ ಹಿಂದೆ ನಾಕೌಟ್​ ಹಂತದಲ್ಲಿ ಸೋತಂತೆ ಇಂದೂ ಸೋತಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಲಷ್ಟೇ ಶಕ್ತವಾಯಿತು. ಇದು ಇಬ್ಬನಿ ಪರಿಣಾಮ ಸೇರಿದಂತೆ ರನ್​ ಚೇಸ್ ಮಾಡುವ ತಂಡಕ್ಕೆ ಅನುಕೂಲವಾಗಿದ್ದ ಪರಿಸ್ಥಿತಿಯಲ್ಲಿ ಕಡಿಮೆ ಸ್ಕೋರ್ ಆಗಿತ್ತು. ಹೀಗಾಗಿ ಸೋಲು ಸಹಜವಾಗಿಯೇ ಬಂದಿದೆ. ಇದೇ 17 ಆವೃತ್ತಿಗಳು ಮುಗಿದರೂ ಆರ್​ಸಿಬಿಯ ಕಪ್​ ಬರ ನೀಗಲಿಲ್ಲ. ಕಪ್​ಗಾಗಿ ಕಾಯುವ ದಿನಗಳು ಮತ್ತಷ್ಟು ಮುಂದೂಡಿಕೆಯಾದವು.

ವಿಶೇಷ ಎಂದರೆ ಎಲಿಮಿನೇಟರ್​​ನಲ್ಲಿ ಲಕ್ನೋವನ್ನು ಸೋಲಿಸಿದ ನಂತರ ಆರ್​ಸಿಬಿ ತಂಡವು 2022 ರ ಋತುವಿನಲ್ಲಿ ಕ್ವಾಲಿಫೈಯರ್ 2 ಹಂತದಲ್ಲಿ ರಾಲ್ಸ್​​ನಿಂದಲೇ ಹೊಡೆತ ತಿಂದು ಹೊರಕ್ಕೆ ಬಿದ್ದಿತ್ತು. 2020 ಮತ್ತು 2021ರಲ್ಲಿಯೂ ಆರ್​ಸಿಬಿ ಎಲಿಮಿನೇಟರ್​ನಲ್ಲಿ ಸೋಲು ಕಂಡಿತ್ತು. 2016ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​​ಸಿಬಿ ಕೊನೆಯ ಬಾರಿ ಫೈನಲ್ ತಲುಪಿತ್ತು.

ಪಂದ್ಯದಲ್ಲಿ ಏನಾಯಿತು?

ಬೌಲರ್​ಗಳ ಸಂಘಟಿತ ಹೋರಾಟ ಹಾಗೂ ಯಶಸ್ವಿ ಜೈಸ್ವಾಲ್ (45 ರನ್​) ಹಾಗೂ ರಿಯಾನ್ ಪರಾಗ್​ (36 ರನ್​) ಬ್ಯಾಟಿಂಗ್ ಬಲದಿಂದ ಮಿಂಚಿದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್​ 2024ರ (IPL 2024) ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿದೆ. ಲೀಗ್ ಹಂತದಲ್ಲಿ ಸತತ ನಾಲ್ಕು ಸೋಲು ಹಾಗೂ ಮಳೆಯಿಂದಾಗಿ ಒಂದು ಪಂದ್ಯ ರದ್ದುಗೊಂಡ ಕಾರಣ ಬೇಸರಕ್ಕೆ ಒಳಗಾಗಿದ್ದ ರಾಜಸ್ಥಾನ್ ಬಳಗ ಈ ಗೆಲುವಿನೊಂದಿಗೆ ಖುಷಿ ಕಂಡು ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಪ್ರವೇಶ ಪಡೆಯಿತು. ಅಲ್ಲಿ ಸಂಜು ಬಳಗ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ಸನ್​ ರೈಸರ್ಸ್​ ಹೈದರಾಬಾದ್​ ತಂಡವನ್ನು ಎದುರಿಸಲಿದೆ.

ಇದನ್ನೂ ಓದಿ: IPL 2024 : ದಿನೇಶ್​ ಕಾರ್ತಿಕ್​ ಔಟಾ; ನಾಟೌಟಾ? ಮತ್ತೊಂದು ಅಂಪೈರಿಂಗ್ ವಿವಾದ

ಈ ಸೋಲಿನೊಂದಿಗೆ ಆರ್​ಸಿಬಿ ತಂಡದ 2024ರ ಐಪಿಎಲ್​ ಅಭಿಯಾನ ಮುಕ್ತಾಯಗೊಂಡಿತು. ಪ್ಲೇಆಫ್ ಹಂತಕ್ಕೆ ಪ್ರವೇಶ ಪಡೆದಿರುವುದೇ ರೆಡ್​ ಆರ್ಮಿಯ ದೊಡ್ಡ ಸಾಧನೆ ಎನಿಸಿಕೊಂಡಿತು. ಜತೆಗೆ ಆರ್​​ಸಿಬಿಯ ಅಪಾರ ಅಭಿಮಾನಿಗಳ ಹೃದಯ ಛಿದ್ರಗೊಂಡಿತು. ಈ ಬಾರಿಯಾದರೂ ಕಪ್​ ಗೆಲ್ಲಬೇಕೆಂಬ ಆಸೆ ಕಮರಿತು. ಕಷ್ಟದಲ್ಲಿ ಪ್ಲೇಆಫ್​ ಹಂತಕ್ಕೇರಿದ ಹೊರತಾಗಿಯೂ ಮುಂದಿನ ಹಂತಕ್ಕೆ ಹೋಗಲು ಸಾಧ್ಯವಾಗದ್ದಕ್ಕೆ ಬೇಸರ ವ್ಯಕ್ತಪಡಿಸಿದರು. ಚೆನ್ನೈ ವಿರುದ್ಧದ ಲೀಗ್ ಪಂದ್ಯದಲ್ಲಿ ಹೆಚ್ಚು ನಿಖರವಾಗಿ ಆಡಿದ್ದ ಆರ್​ಸಿಬಿ ಈ ಪಂದ್ಯದಲ್ಲಿ ನಿರ್ಲಕ್ಷ್ಯ ತೋರಿತು. ಬ್ಯಾಟಿಂಗ್​ನಲ್ಲಿ ಅನಗತ್ಯವಾಗಿ ವಿಕೆಟ್​ ಒಪ್ಪಿಸಿದರೆ ಬೌಲಿಂಗ್ ವೇಳೆಯೂ ಕ್ಯಾಚ್​ ಕೈಚೆಲ್ಲಿ, ಕಳಪೆ ಫೀಲ್ಡಿಂಗ್ ಮಾಡಿ, ರನ್​ಔಟ್​ ಚಾನ್ಸ್​ ಕಳೆದುಕೊಂಡಿತು. ಇದು ಸೋಲಿಗೆ ಕಾರಣವಾಯಿತು.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಆರ್​ಸಿಬಿ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 172 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ಇನ್ನೂ 6 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ 174 ರನ್ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

BCCI: ಬಾಂಗ್ಲಾದೇಶದ ವಿರುದ್ಧ ಎರಡು ಪಂದ್ಯಗಳ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯೊಂದಿಗೆ ಭಾರತದ ತವರಿನ ಕ್ರಿಕೆಟ್​ ಸರಣಿ ಪ್ರಾರಂಭವಾಗಲಿದೆ.

VISTARANEWS.COM


on

BCCI
Koo

ಮುಂಬಯಿ: ಟೀಮ್​ ಇಂಡಿಯಾದ(Team India) 2024-25ನೇ ಸಾಲಿನ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ. ಅಂತಾರಾಷ್ಟ್ರೀಯ ಹೋಮ್(India’s International Home Season) ಸೀಸನ್ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಎರಡು ಪಂದ್ಯಗಳ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯೊಂದಿಗೆ ಪ್ರಾರಂಭವಾಗಲಿದೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಮತ್ತು ಮೂರು ಪಂದ್ಯಗಳ ಟಿ20 ಸರಣಿಯ ಬಳಿಕ ನ್ಯೂಜಿಲ್ಯಾಂಡ್​ ವಿರುದ್ಧ ಮೂರು ಟೆಸ್ಟ್​ ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ 2025ರಲ್ಲಿ ಇಂಗ್ಲೆಂಡ್​ ವಿರುದ್ಧ 5 ಟಿ20 ಪಂದ್ಯ ಮತ್ತು 3 ಏಕದಿನ ಸರಣಿಯನ್ನಾಡಲಿದೆ.

ಬಾಂಗ್ಲಾ ಸರಣಿಯ ವೇಳಾಪಟ್ಟಿ


ಸೆಪ್ಟೆಂಬರ್​-19 ಮೊದಲ ಟೆಸ್ಟ್​ ಪಂದ್ಯ. ತಾಣ: ಚೆನ್ನೈ

ಸೆಪ್ಟೆಂಬರ್​​-27 ದ್ವಿತೀಯ ಟೆಸ್ಟ್​. ತಾಣ; ಕಾನ್ಪುರ

ಅಕ್ಟೋಬರ್​-6 ಮೊದಲ ಟಿ20. ತಾಣ: ಧರ್ಮಶಾಲಾ

ಅಕ್ಟೋಬರ್​-9 ದ್ವಿತೀಯ ಟಿ20. ತಾಣ: ದೆಹಲಿ

ಅಕ್ಟೋಬರ್​-12 ಮೂರನೇ ಟಿ20. ತಾಣ: ಹೈದರಾಬಾದ್​

ನ್ಯೂಜಿಲ್ಯಾಂಡ್​ ಸರಣಿಯ ವೇಳಾಪಟ್ಟಿ


ಅಕ್ಟೋಬರ್​-16 ಮೊದಲ ಟಿ20. ತಾಣ: ಬೆಂಗಳೂರು

ಅಕ್ಟೋಬರ್-24 ದ್ವಿತೀಯ ಟಿ20. ತಾಣ: ಪುಣೆ

ನವೆಂಬರ್​-1 ಮೂರನೇ ಟಿ20. ತಾಣ: ಮುಂಬಯಿ

ಇದನ್ನೂ ಓದಿ Team India Coach: ಇಂದು ಟೀಮ್​ ಇಂಡಿಯಾದ ನೂತನ ಕೋಚ್‌ ಹೆಸರು ಘೋಷಣೆ!

ಇಂಗ್ಲೆಂಡ್​ ವಿರುದ್ಧದ ಸರಣಿಯ ವೇಳಾಪಟ್ಟಿ


ಜನವರಿ-22 ಮೊದಲ ಟಿ20. ತಾಣ:ಚೆನ್ನೈ

ಜನವರಿ-25 ದ್ವಿತೀಯ ಟಿ20. ತಾಣ: ಕೋಲ್ಕತ್ತಾ

ಜನವರಿ-28 ಮೂರನೇ ಟಿ20. ತಾಣ: ರಾಜ್​ಕೋಟ್​

ಜನವರಿ-31 ನಾಲ್ಕನೇ ಟಿ20. ತಾಣ:ಪುಣೆ

ಫೆಬ್ರವರಿ-2 ಐದನೇ ಟಿ20. ತಾಣ: ಮುಂಬಯಿ

ಫೆಬ್ರವರಿ-6 ಮೊದಲ ಏಕದಿನ. ತಾಣ:ನಾಗ್ಪುರ

ಫೆಬ್ರವರಿ-9 ದ್ವಿತೀಯ ಏಕದಿನ. ತಾಣ: ಕಟಕ್​

ಫೆಬ್ರವರಿ-12 ಮೂರನೇ ಏಕದಿನ. ತಾಣ: ಅಹಮದಾಬಾದ್​

Continue Reading

ಪ್ರಮುಖ ಸುದ್ದಿ

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Citroen C3 Aircross: ಸಿ3 ಏರ್ ಕ್ರಾಸ್ ಧೋನಿ ಆವೃತ್ತಿಯ ಹೊರಭಾಗದಲ್ಲಿ ಧೋನಿಯ ಹೆಸರು ಮತ್ತು ಅವರ ಜೆರ್ಸಿ ಸಂಖ್ಯೆ 7 ನೊಂದಿಗೆ ಹೊಸ ಡೆಕಾಲ್ ನೀಡಲಾಗಿದೆ. ಒಳಭಾಗದಲ್ಲಿ ಲಿಮಿಟೆಡ್ ರನ್​ ಮಾಡೆಲ್ ಆಗಿದ್ದು. ಹೊಸ ಬಣ್ಣ-ಸಂಯೋಜಿತ ಸೀಟ್ ಕವರ್ ಗಳು ಮತ್ತು ಕುಶನ್ ಪಿಲ್ಲೊ, ಸೀಟ್ ಬೆಲ್ಟ್ ಕುಶನ್ ಗಳು, ಹೆಚ್ಚು ಪ್ರಕಾಶಮಾನವಾಗಿರವು ಡೋರ್ ಸಿಲ್ ಪ್ಲೇಟ್ ಗಳು ಮತ್ತು ಮುಂಭಾಗದ ಡ್ಯಾಶ್ ಕ್ಯಾಮ್ ನೀಡಲಾಗಿದೆ.

VISTARANEWS.COM


on

Citroen C3 Aircross
Koo

ಬೆಂಗಳೂರು: ಸಿಟ್ರೋಯನ್​ ತನ್ನ ಮಧ್ಯಮ ಗಾತ್ರದ ಎಸ್​ಯುವಿ ಕಾರಾಗಿರುವ ಸಿ3 ಏರ್ ಕ್ರಾಸ್ (Citroen C3 Aircross) ಧೋನಿ ಎಡಿಷನ್ ಹೊಸ ವಿಶೇಷ ಆವೃತ್ತಿ ಹೊರತಂದಿದೆ. 11.82 ಲಕ್ಷ ರೂ.ಗಳ ಬೆಲೆ ಹೊಂದಿರುವ ಧೋನಿ ಎಡಿಷನ್ ಅನೇಕ ರೂಪಾಂತರಗಳು 5 ಮತ್ತು 7 ಸೀಟರ್​ ಕಾನ್ಫಿಗರೇಶನ್ ಗಳಲ್ಲಿ ಲಭ್ಯವಿದೆ. ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಬರುತ್ತದೆ. ಈ ವಿಶೇಷ ಆವೃತ್ತಿಯ ಮಾದರಿಯು 100 ಯುನಿಟ್ ಗಳಿಗೆ ಸೀಮಿತವಾಗಿದೆ ಎಂಬುದೇ ವಿಶೇಷ. ಈ ಎಡಿಷನ್​ನಲ್ಲಿ ಸಿ3 ಏರ್ ಕ್ರಾಸ್ ಗಿಂತ ಸಣ್ಣ ಪ್ರಮಾಣದ ಇಂಟೀರಿಯರ್​ ಬದಲಾವಣೆ ಮಾಡಲಾಗಿದೆ.

ಸಿ3 ಏರ್ ಕ್ರಾಸ್ ಧೋನಿ ಆವೃತ್ತಿಯ ಹೊರಭಾಗದಲ್ಲಿ ಧೋನಿಯ ಹೆಸರು ಮತ್ತು ಅವರ ಜೆರ್ಸಿ ಸಂಖ್ಯೆ 7 ನೊಂದಿಗೆ ಹೊಸ ಡೆಕಾಲ್ ನೀಡಲಾಗಿದೆ. ಒಳಭಾಗದಲ್ಲಿ ಲಿಮಿಟೆಡ್ ರನ್​ ಮಾಡೆಲ್ ಆಗಿದ್ದು. ಹೊಸ ಬಣ್ಣ-ಸಂಯೋಜಿತ ಸೀಟ್ ಕವರ್ ಗಳು ಮತ್ತು ಕುಶನ್ ಪಿಲ್ಲೊ, ಸೀಟ್ ಬೆಲ್ಟ್ ಕುಶನ್ ಗಳು, ಹೆಚ್ಚು ಪ್ರಕಾಶಮಾನವಾಗಿರವು ಡೋರ್ ಸಿಲ್ ಪ್ಲೇಟ್ ಗಳು ಮತ್ತು ಮುಂಭಾಗದ ಡ್ಯಾಶ್ ಕ್ಯಾಮ್ ನೀಡಲಾಗಿದೆ.

ಪ್ರತಿ ಧೋನಿ ಎಡಿಷನ್​ ಕಾರಿನ ಗ್ಲೋವ್ ಬಾಕ್ಸ್​ನಲ್ಲಿ ವಿಶೇಷ ‘ಧೋನಿ ಗೂಡಿ’ ಒಳಗೊಂಡಿರುತ್ತದೆ ಎಂದು ಸಿಟ್ರನ್ ಹೇಳುತ್ತಾರೆ. ಅಂದರೆ ಅದೃಷ್ಟಶಾಲಿ ವಿಜೇತರು ಸ್ವತಃ ಧೋನಿಯಿಂದ ಸಹಿ ಮಾಡಿದ ಗ್ಲವ್ಸ್​​ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Bajaj CNG Bike: ವಿಶ್ವದ ಮೊದಲ ಸಿಎನ್‌ಜಿ ಬೈಕ್‌; ಬಜಾಜ್‌ನಿಂದ ಜುಲೈ 5ರಂದು ಬಿಡುಗಡೆ

ಉಳಿದಂತೆ ಧೋನಿ ಆವೃತ್ತಿಯು ಸ್ಟ್ಯಾಂಡರ್ಡ್ ಸಿ 3 ಏರ್ ಕ್ರಾಸ್ ನಂತೆಯೇ ಇದೆ. ಇದು 110 ಬಿಹೆಚ್ ಪಿ, 1.2-ಲೀಟರ್ ಮೂರು ಸಿಲಿಂಡರ್ ಟರ್ಬೊ-ಪೆಟ್ರೋಲ್ ಎಂಜಿನ್ ಹೊಂದಿದೆ. ಇದು 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಬರುತ್ತದೆ.

ಸಚಿನ್​ ಹೆಸರಿನ ಫಿಯೆಟ್​ ಕಾರು ಬಂದಿತ್ತು

ಖ್ಯಾತ ಕ್ರಿಕೆಟಿಗರೊಬ್ಬರು ಕಾರು ತಯಾರಕರೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿರುವುದು ಇದೇ ಮೊದಲಲ್ಲ. 2002 ರಲ್ಲಿ ಫಿಯೆಟ್ ತಂಡವು ಸಚಿನ್ ತೆಂಡೂಲ್ಕರ್ ಅವರೊಂದಿಗೆ ಕೈಜೋಡಿಸಿ ಪಾಲಿಯೋ ಎಸ್ 10 ಅನ್ನು ಹೊರತಂದಿತ್ತು. ಈ ಸೀಮಿತ ರನ್ ಮಾದರಿಯನ್ನು (ಕೇವಲ 500 ಮಾತ್ರ ಉತ್ಪಾದಿಸಲಾಗಿತ್ತು. ಪ್ರತಿಯೊಂದೂ ಅದರ ಸರಣಿ ಸಂಖ್ಯೆಯನ್ನು ಸೂಚಿಸುವ ಅಲ್ಯೂಮಿನಿಯಂ ಫಲಕವನ್ನು ಪಡೆದುಕೊಂಡಿತ್ತು ) ಹೊರಗೆ ಹಲವಾರು ಕಾಸ್ಮೆಟಿಕ್ ನವೀಕರಣಗಳೊಂದಿಗೆ ಬಂದಿತ್ತಯ. ವಿಶೇಷ ಬಣ್ಣ ಮತ್ತು ಸಚಿನ್ ಅವರ ಆಟೋಗ್ರಾಫ್ ನಿಂದ ಹಿಡಿದು ಹಿಂಭಾಗದ ಸ್ಪಾಯ್ಲರ್ ಮತ್ತು ಹೊಸ ಅಲಾಯ್ ಚಕ್ರಗಳವರೆಗೆ ವಿಶೇಷತೆ ಇತ್ತು.

Continue Reading

ಕ್ರೀಡೆ

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Manish Pandey: 2019ರಲ್ಲಿ ಕ್ರಿಕೆಟಿಗ ಮನೀಶ್ ಪಾಂಡೆ ಚಿತ್ರನಟಿ ಆಶ್ರಿತಾ ಶೆಟ್ಟಿ(Ashrita Shetty) ಅವರ ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಆಶ್ರಿತಾ ಶೆಟ್ಟಿ ಅವರು ಅರ್ಜುನ್ ಕಾಪಿಕಾಡ್ ಅಭಿನಯದ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು

VISTARANEWS.COM


on

Manish Pandey
Koo

ಬೆಂಗಳೂರು: ಟೀಮ್​ ಇಂಡಿಯಾದ, ಕರ್ನಾಟಕ ಮೂಲದ ಕ್ರಿಕೆಟಿಗ ಮನೀಷ್​ ಪಾಂಡೆ(Manish Pandey) ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಚರ್ಚೆಗೆ ಕಾರಣವಾಗಿರುವುದು ದಂಪತಿಗಳ ಇನ್​ಸ್ಟಾಗ್ರಾಮ್​ ಖಾತೆಯ ಪೋಸ್ಟ್​.

2019ರಲ್ಲಿ ಕ್ರಿಕೆಟಿಗ ಮನೀಶ್ ಪಾಂಡೆ ಚಿತ್ರನಟಿ ಆಶ್ರಿತಾ ಶೆಟ್ಟಿ(Ashrita Shetty) ಅವರ ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಆಶ್ರಿತಾ ಶೆಟ್ಟಿ ಅವರು ಅರ್ಜುನ್ ಕಾಪಿಕಾಡ್ ಅಭಿನಯದ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು. ಇದೀಗ ಈ ಜೋಡಿ ಸದ್ಯದಲ್ಲೇ ದೂರವಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬಂದಿವೆ.

ಹೌದು, ಮನೀಶ್ ಪಾಂಡೆ ಮತ್ತು ಆಶ್ರಿತಾ ಶೆಟ್ಟಿ ತಮ್ಮ ತಮ್ಮ ಇನ್ ಸ್ಟಾಗ್ರಾಂ ಖಾತೆಗಳಲ್ಲಿ ಅಪ್ಲೋಡ್ ಮಾಡಿದ್ದ ಮದುವೆ(Manish Pandey-Ashrita Shetty Wedding Pics) ಮತ್ತು ಅವರಿಬ್ಬರ ಫೋಟೋಗಳನ್ನು ಇಬ್ಬರೂ ಡಿಲೀಟ್ ಮಾಡಿದ್ದಾರೆ. ಹೀಗಾಗಿ ಇವರ ದಾಂಪತ್ಯದಲ್ಲಿ ಏರುಪೇರಾಗಿದ್ದು, ಇಬ್ಬರೂ ಪರಸ್ಪರ ಬೇರೆಯಾಗುತ್ತಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಮನೀಶ್ ಪಾಂಡೆ ಅವರು ಐಪಿಎಲ್ 2024ರ ಟೂರ್ನಿಯಲ್ಲಿ ತಾವು ಪ್ರತಿನಿಧಿಸಿದ್ದ ಕೆಕೆಆರ್ ತಂಡದ ಮತ್ತು ಟ್ರೋಫಿ ಜೊತೆಗಿರುವ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಅವರ ಫೋಟೋಗಳ ಲಿಸ್ಟ್ ನಲ್ಲಿ ಪತ್ನಿ ಆಶ್ರಿತಾ ಜತೆಗಿರುವ ಫೋಟೋ ಮಾಯವಾಗಿದೆ. ಇದು ಅಭಿಮಾನಿಗಳ ಶಂಕೆಗೆ ಕಾರಣವಾಗಿದ್ದು ಇಬ್ಬರೂ ಪರಸ್ಪರ ಬೇರೆ ಬೇರೆಯಾಗುತ್ತಿದ್ದಾರೆಯೇ ಎಂಬ ಮಾತುಗಳು ಕೇಳಿ ಬಂದಿವೆ. ಆದರೆ ಈ ಬಗ್ಗೆ ಈ ಜೋಡಿ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

2009ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಮನೀಷ್‌ ಪಾಂಡೆ, ಚೊಚ್ಚಲ ಶತಕ ಸಿಡಿಸಿದ ಮೊದಲ ಆನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು. ಇದುವರೆಗೂ 171 ಐಪಿಎಲ್​ ಪಂದ್ಯಗಳನ್ನಾಡಿದ ಅವರು ಒಂದು ಶತಕ ಹಾಗೂ 22 ಅರ್ಧಶತಕ ಬಾರಿಸಿದ್ದಾರೆ. ಒಟ್ಟು 3850 ರನ್ ಗಳಿಸಿದ್ದಾರೆ. ಇದರಲ್ಲಿ ಅಜೇಯ 114 ರನ್‌ ಗರಿಷ್ಠ ಮೊತ್ತವಾಗಿದೆ. ಈ ಬಾರಿ ಕೆಕೆಆರ್​ ಪರ ಕೇವಲ 1 ಪಂದ್ಯ ಆಡಿ 42 ರನ್​ ಬಾರಿಸಿದ್ದರು.

ಇದನ್ನೂ ಓದಿ Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

2015ರಲ್ಲಿ ಜಿಂಬಾಬ್ವೆ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯನ್ನಾಡುವ ಮೂಲಕ ಟೀಮ್​ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ ಮನೀಷ್‌, ಇದುವರೆಗೂ 29 ಏಕದಿನ ಮತ್ತು 39 ಟಿ20 ಕ್ರಿಕೆಟ್​ ಪಂದ್ಯಗಳನ್ನಾಡಿದ್ದಾರೆ. ಏಕದಿನದಲ್ಲಿ 566 ರನ್​ ಮತ್ತು ಟಿ20ಯಲ್ಲಿ 709 ರನ್​ ಬಾರಿಸಿದ್ದಾರೆ. ಏಕದಿನದಲ್ಲಿ ಒಂದು ಶತಕ ಮತ್ತು 2 ಅರ್ಧಶತಕ ಒಳಗೊಂಡಿದೆ. 2021ರಲ್ಲಿ ಶ್ರೀಲಂಕಾ ವಿರುದ್ಧ ಕೊಪನೆಯ ಬಾರಿ ಏಕದಿನ ಪಂದ್ಯವನ್ನಾಡಿದ್ದರು. ಇದಾದ ಬಳಿಕ ಫಾರ್ಮ್​ ಕಳೆದುಕೊಂಡು ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್​ ಜತೆಗೆ ಚುರುಕಿನ ಫೀಲ್ಡಿಂಗ್​ಗೆ ಇವರು ಹೆಸರುವಾಸಿ.

Continue Reading

ಕ್ರೀಡೆ

David Johnson: ಮೃತ ಡೇವಿಡ್ ಜಾನ್ಸನ್ ಯಾರು? ಇವರ ಕ್ರಿಕೆಟ್​ ಸಾಧನೆ ಏನು?

David Johnson: 90ರ ಕಾಲಘಟ್ಟದಲ್ಲಿ ಅತಿವೇಗದ ಬೌಲಿಂಗ್ ಮಾಡುತ್ತಿದ್ದ ಜಾನ್ಸನ್, 1995-96ರಲ್ಲಿ ಕೇರಳದ ವಿರುದ್ಧದ ಪಂದ್ಯದಲ್ಲಿ ಹತ್ತು ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಮೊದಲ ಇನಿಂಗ್ಸ್​ನಲ್ಲಿ 63ಕ್ಕೆ 6 ವಿಕೆಟ್​ ಮತ್ತು ದ್ವಿತೀಯ ಇನಿಂಗ್ಸ್​ನಲ್ಲಿ 89ಕ್ಕೆ 4 ಕೆಡವಿದ್ದರು

VISTARANEWS.COM


on

David Johnson
Koo

ಬೆಂಗಳೂರು: ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡ ಕರ್ನಾಟಕ ಮೂಲದ, ಟೀಮ್​ ಇಂಡಿಯಾ ಮಾಜಿ ಆಟಗಾರ ಡೇವಿಡ್ ಜಾನ್ಸನ್(David Johnson) ಭಾರತ ಪರ ಕೇವಲ 2 ಟೆಸ್ಟ್​ ಪಂದ್ಯವನ್ನಾಡಿದ್ದರೂ ಕೂಡ ಅವರು ನಿರ್ಮಿಸಿದ ದಾಖಲೆಯೊಂದನ್ನು ಈಗಲೂ ಟೀಮ್​ ಇಂಡಿಯಾ ಬೌಲರ್​ಗಳಿಂದ ಮುರಿಯಲು ಸಾಧ್ಯವಾಗಿಲ್ಲ. ಈ ದಾಖಲೆ ಯಾವುದು?, ಅವರ ಕ್ರಿಕೆಟ್​ ಸಾಧನೆ ಏನು? ಎಂಬ ಮಾಹಿತಿ ಇಂತಿದೆ.

1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಜಾನ್ಸನ್, ಆರಂಭಿಕ ದಿನಗಳಲ್ಲಿ ಟೆನ್ನಿಸ್​ ಬಾಲ್​ ಕ್ರಿಕೆಟ್​ನಲ್ಲಿ ಸ್ಥಳೀಯ ಕ್ರಿಕೆಟ್​ ಟೂರ್ನಿಗಳಲ್ಲಿ ವೇಗದ ಬೌಲಿಂಗ್​ ನಡೆಸಿ ವಿಕೆಟ್​ ಕೀಳುತ್ತಿದ್ದರು. ಪಂದ್ಯವೊಂದರಲ್ಲಿ ಅವರು 8 ವಿಕೆಟ್​ ಕಿತ್ತು ಮಿಂಚಿದ್ದರು. ಇದೇ ವೇಳೆ ಈ ಪಂದ್ಯವನ್ನು ನೋಡುತ್ತಿದ್ದ ಅವರ ಗೆಳೆಯನೊಬ್ಬ ಜಾನ್ಸನ್ ಅವರನ್ನು ಸ್ವಸ್ತಿಕ್​ ಕ್ರಿಕೆಟ್​ ಕ್ಲಬ್​ಗೆ ಸೇರಿಸಿದ್ದರು. ಆಗ ಜಾನ್ಸನ್​ಗೆ ಕೇವಲ 17 ವರ್ಷವಾಗಿತ್ತು. ಈ ಕ್ರಿಕೆಟ್​ ಕ್ಲಬ್​ನಲ್ಲಿ ಸ್ಟಿಚ್​ ಬೌಲಿಂಗ್​ ಅಭ್ಯಾಸ ನಡೆಸಿ ಹಂತ ಹಂತವಾಗಿ ಬೆಳೆದ ಅವರು ಬಳಿಕ ಕರ್ನಾಟಕ ಪರ ಅಂಡರ್​-19 ಪಂದ್ಯವನ್ನಾಡಿ ಕೇವಲ ಎರಡು ಪಂದ್ಯಗಳಿಂದ 13 ವಿಕೆಟ್​ ಕಿತ್ತು ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದ್ದರು.


10 ವಿಕೆಟ್​ ಸರದಾರ


90ರ ಕಾಲಘಟ್ಟದಲ್ಲಿ ಅತಿವೇಗದ ಬೌಲಿಂಗ್ ಮಾಡುತ್ತಿದ್ದ ಜಾನ್ಸನ್, 1995-96ರಲ್ಲಿ ಕೇರಳದ ವಿರುದ್ಧದ ಪಂದ್ಯದಲ್ಲಿ ಹತ್ತು ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಮೊದಲ ಇನಿಂಗ್ಸ್​ನಲ್ಲಿ 63ಕ್ಕೆ 6 ವಿಕೆಟ್​ ಮತ್ತು ದ್ವಿತೀಯ ಇನಿಂಗ್ಸ್​ನಲ್ಲಿ 89ಕ್ಕೆ 4 ಕೆಡವಿದ್ದರು. ಇದಾದ ಬಳಿಕ ಬಂಗಾಳದ ವಿರುದ್ಧ 49 ಕ್ಕೆ 4 ಮತ್ತು ಬರೋಡಾ ವಿರುದ್ಧ 91 ಕ್ಕೆ 5 ವಿಕೆಟ್​ ಕಬಳಿಸಿದ್ದರು. ಅವರ ಈ ಬೌಲಿಂಗ್​ ಪ್ರದರ್ಶನ ಕಂಡು ಆಸ್ಟ್ರೇಲಿಯಾ ವಿರುದ್ಧದ ತವರಿನ ಸರಣಿಗೆ ಟೀಮ್​ ಇಂಡಿಯಾಕ್ಕೆ ಆಯ್ಕೆ ಮಾಡಲಾಗಿತ್ತು.

ಇದನ್ನು ಓದಿ David Johnson: ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಸಾವು; ಖಿನ್ನತೆಯಿಂದ ಆತ್ಮಹತ್ಯೆ?

ಗಂಟೆಗೆ 157.8 ಕಿ. ಮೀಟರ್ ವೇಗದಲ್ಲಿ ಬೌಲಿಂಗ್​…


1996ರಲ್ಲಿ ದೆಹಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಜಾವಗಲ್​ ಶ್ರೀನಾಥ್​ ಅವರು ಗಾಯಗೊಂಡ ಕಾರಣ ಅವರ ಸ್ಥಾನದಲ್ಲಿ ಜಾನ್ಸನ್ ಆಡುವ ಅವಕಾಶ ಪಡೆದರು. ಅದು ಅವರ ಚೊಚ್ಚಲ ಪಂದ್ಯವಾಗಿತ್ತು. ಮೊದಲ ಇನಿಂಗ್ಸ್​ನಲ್ಲಿ ಅವರಿಗೆ ವಿಕೆಟ್​ ಕೀಳಲು ಸಾಧ್ಯವಾಗಲಿಲ್ಲ. ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೆಂಡೆಸೆದು ​ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರ ವಿಕೆಟ್​ ಉರುಳಿಸಿದರು. ಇದೇ ವೇಳೆ ಭಾರತ ಪರ ಅತಿ ವೇಗದಲ್ಲಿ ಬೌಲಿಂಗ್​ ನಡೆಸಿದ ದಾಖಲೆಯನ್ನು ನಿರ್ಮಿಸಿದರು. ಸದ್ಯ ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇದು ದಾಖಲೆಯಾಗಿಯೇ ಉಳಿದಿದೆ. ದೇಶೀಯ ಕ್ರಿಕೆಟ್​ನಲ್ಲಿ ಅತಿ ವೇಗದ ಬೌಲಿಂಗ್​ ನಡೆಸಿದ ದಾಖಲೆ ಮಯಾಂಕ್​ ಯಾದವ್ ಹೆಸರಿನಲ್ಲಿದೆ. ಇದೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಲಕ್ನೋ ತಂಡದ ಮಯಾಂಕ್​ ಯಾದವ್​ 156.7 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್​ ನಡೆಸಿದ್ದರು.


ಅವಕಾಶವೇ ನೀಡಲಿಲ್ಲ…


ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 39 ಪಂದ್ಯಗಳಿಂದ 437 ರನ್​, 125 ವಿಕೆಟ್​, ಲಿಸ್ಟ್​ 2 ಕ್ರಿಕೆಟ್​ನಲ್ಲಿ 33 ಪಂದ್ಯಗಳನ್ನಾಡಿ 118 ರನ್, 41 ವಿಕೆಟ್​​ ಕಲೆಹಾಕಿದ್ದಾರೆ. ಭಾರತ ಪರ 2 ಟೆಸ್ಟ್​ ಪಂದ್ಯಗಳನ್ನಾಡಿ 8 ರನ್​ ಸಹಿತ 3 ವಿಕೆಟ್​ ಕಿತ್ತಿದ್ದಾರೆ. ವಿಪರ್ಯಾಸವೆಂದರೆ ಉತ್ತಮ ಬೌಲಿಂಗ್​ ಸಾಧನೆ ತೋರಿದ್ದರೂ ಕೂಡ ಅವರನ್ನು ಕೇವಲ 2 ಪಂದ್ಯಗಳಿಗೆ ಸೀಮಿತರನ್ನಾಗಿ ಮಾಡಿ ಆ ಬಳಿಕ ತಂಡದಿಂದ ಕೈಬಿಡಲಾಗಿತ್ತು. ಕೊನೆಯ ಪಂದ್ಯವಾಡಿದ ದಕ್ಷಿಣ ಆಫ್ರಿಕಾ ವಿರುದ್ಧ 2 ವಿಕೆಟ್​ ಕಿತ್ತಿದ್ದರು.


ವಿಪರೀತ ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ ಖಿನ್ನತೆಗೆ ಜಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ನಿಧನಕ್ಕೆ ಟೀಮ್​ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿ ಹಲವು ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.

Continue Reading
Advertisement
Amithab Bacchan
Latest59 seconds ago

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

BCCI
ಕ್ರೀಡೆ2 mins ago

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

Amitabh Bachchan touched Aswini Dutt feet
ಬಾಲಿವುಡ್5 mins ago

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Citroen C3 Aircross
ಪ್ರಮುಖ ಸುದ್ದಿ10 mins ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು12 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ18 mins ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest30 mins ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Manish Pandey
ಕ್ರೀಡೆ38 mins ago

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Genitals Removed Case
Latest41 mins ago

Genitals Removed Case: ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ! ಬಲವಂತದಿಂದ ಲಿಂಗ ಪರಿವರ್ತನೆ

UGC-NET
ದೇಶ42 mins ago

UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌