IPL 2024: ಎಲ್ಲ ಅನುಮಾನಗಳಿಗೂ ತೆರೆ; ಆರ್​ಸಿಬಿ ಸೇರಿದ ಇಂಗ್ಲೆಂಡ್​ ಆಲ್​ರೌಂಡರ್​ - Vistara News

ಕ್ರೀಡೆ

IPL 2024: ಎಲ್ಲ ಅನುಮಾನಗಳಿಗೂ ತೆರೆ; ಆರ್​ಸಿಬಿ ಸೇರಿದ ಇಂಗ್ಲೆಂಡ್​ ಆಲ್​ರೌಂಡರ್​

ಮೊಣಕಾಲಿನ( Knee Injury) ಗಾಯಕ್ಕೆ ತುತ್ತಾಗಿದ್ದ ಟಾಮ್​ ಕರನ್(Tom Curran) ಸಂಪೂರ್ಣ ಚೇತರಿಕೆ ಕಂಡು ಐಪಿಎಲ್​ ಆಡಲು ಆರ್​ಸಿಬಿ ತಂಡ ಸೇರಿದ್ದಾರೆ.

VISTARANEWS.COM


on

Tom Curran
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್ ಬ್ಯಾಷ್ ಲೀಗ್​ನಲ್ಲಿ ಮೊಣಕಾಲಿನ( Knee Injury) ಗಾಯಕ್ಕೆ ತುತ್ತಾಗಿದ್ದ ಟಾಮ್​ ಕರನ್(Tom Curran) ಅವರು ಈ ಬಾರಿಯ ಐಪಿಎಲ್(IPL 2024) ಆಡುವುದು ಅನುಮಾನ ಎನ್ನಲಾಗಿತ್ತು. ಇದರಿಂದ ಆರ್​ಸಿಬಿ(RCB) ತಂಡಕ್ಕೆ ಆತಂಕವೊಂದು ಸೃಷ್ಟಿಯಾಗಿತ್ತು. ಆದರೆ. ಇದೀಗ ಈ ಆತಂಕ ದೂರ ಆಗಿದೆ. ಟಾಮ್​ ಕರನ್ ಅವರು ಫುಲ್​ ಫಿಟ್​ ಆ್ಯಂಡ್​ ಫೈನ್​ ಆಗಿ ತಂಡ ಸೇರಿದ್ದಾರೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ ದುಬೈನಲ್ಲಿ ನಡೆದಿದ್ದ ಆಟಗಾರರ ಮಿನಿ ಹರಾಜಿನಲ್ಲಿ ಆರ್​ಸಿಬಿ ಫ್ರಾಂಚೈಸಿ ಕರನ್ ಅವರನ್ನು 1.5 ಕೋಟಿ ರೂ. ನೀಡಿ ಖರೀದಿ ಮಾಡಿತ್ತು. ಬಿಗ್ ಬ್ಯಾಷ್ ಲೀಗ್​ನಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿ ಈ ಟೂರ್ನಿಯಿಂದ ಅವರು ಹೊರಬಿದ್ದಿದ್ದರು. ಈ ವೇಳೆ ಅವರು ಐಪಿಎಲ್​ನಿಂದಲೂ ಹೊರಬೀಳಲಿದ್ದಾರೆ ಎಂದು ವರದಿಯಾಗಿತ್ತು. ಅವರು ಆರ್​ಸಿಬಿ ತಂಡ ಸೇರುವ ಮೂಲಕ ಎಲ್ಲ ಅನುಮಾನಗಳಿಗೂ ತೆರೆ ಬಿದ್ದಿದೆ. ಸೋಮವಾರ ತಡರಾತ್ರಿ ಆರ್​ಸಿಬಿ ತಂಡ ಸೇರಿದ್ದಾರೆ. ಅವರನ್ನು ಫ್ರಾಂಚೈಸಿಯು ಕ್ಯಾಪ್​ ನೀಡಿ ಸ್ವಾಗತಿಸಿದ ಫೋಟೊ ವೈರಲ್​ ಆಗಿದೆ.

ಇದನ್ನೂ ಓದಿ Virat Kohli: ಧೋನಿಯ ಹೇರ್‌ಸ್ಟೈಲ್‌ ಕಾಪಿ ಮಾಡಿದ ವಿರಾಟ್​ ಕೊಹ್ಲಿ

ಹರಾಜಿನಲ್ಲಿ ಆರ್​ಸಿಬಿ ಖರೀದಿಸಿದ ಆಟಗಾರರು

ಅಲ್ಜಾರಿ ಜೋಸೆಫ್ (11.5 ಕೋಟಿ), ಯಶ್ ದಯಾಳ್ (5 ಕೋಟಿ), ಟಾಮ್ ಕರ್ರನ್ (1.5 ಕೋಟಿ), ಲಾಕಿ ಫರ್ಗುಸನ್ (2 ಕೋಟಿ), ಸ್ವಪ್ನಿಲ್ ಸಿಂಗ್ (0.2 ಕೋಟಿ), ಸೌರವ್ ಚೌಹಾಣ್ (0.2 ಕೋಟಿ).

ಆರ್​ಸಿಬಿ ತಂಡ


ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್​ವೆಲ್​, ವಿರಾಟ್ ಕೊಹ್ಲಿ, ಕ್ಯಾಮರಾನ್ ಗ್ರೀನ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಯಾಂಕ್ ದಾಗರ್, ಮಹಿಪಾಲ್ ಲೊಮ್ರೊರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ವೈಶಾಕ್ ವಿಜಯ್ ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟಾಪ್ಲೆ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್.

ಚೆನ್ನೈ ಮೊದಲ ಎದುರಾಳಿ


ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2024) 17ನೇ ಆವೃತ್ತಿ ಆರಂಭವಾಗಲು ಇನ್ನು ಕೇವಲ 3 ದಿನ ಮಾತ್ರ ಬಾಕಿ ಉಳಿದಿದೆ. ಮಾರ್ಚ್ 22ರಂದು ಲೀಗ್​ನ ಸಾಂಪ್ರದಾಯಿಕ ಬದ್ದ ಎದುರಾಳಿಗಳಾದ ಆರ್‌ಸಿಬಿ(Royal Challengers Bangalore) ಮತ್ತು ಸಿಎಸ್‌ಕೆ(rcb vs csk) ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಚಾಲನೆ ಸಿಗಲಿದೆ. ಈ ಪಂದ್ಯಕ್ಕೆ ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂ ಅಣಿಯಾಗಿದೆ. ಪಂದ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ಉಭಯ ತಂಡಗಳ ಅಭಿಮಾನಿಗಳು ಕಾದು ಕುಳಿತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IPL 2024: ಸಿಎಸ್​​ಕೆ ಮಾಜಿ ಆಟಗಾರನಾಗಿದ್ದರೂ ಈ ಸಲ ಕೊಹ್ಲಿ ಗೆಲ್ಲಲಿ ಎಂದ ಸುರೇಶ್​ ರೈನಾ!

IPL 2024 : ಆರ್​ಸಿಬಿ ಮತ್ತು ಸಿಎಸ್ಕೆ ನಡುವಿನ ಮಾಡು ಇಲ್ಲವೇ ಮಡಿ ಐಪಿಎಲ್ 2024 ರ ಪ್ರಮುಖ ಪಂದ್ಯಕ್ಕೆ ಮುಂಚಿತವಾಗಿ ರೈನಾ ಕೊಹ್ಲಿಗೆ ಶುಭ ಹಾರೈಸಿದ್ದಾರೆ. ಎರಡೂ ತಂಡಗಳ ಅರ್ಹತಾ ಅವಕಾಶಗಳು ಅಪಾಯದಲ್ಲಿರುವುದರಿಂದ ಎರಡೂ ಫ್ರಾಂಚೈಸಿಗಳ ಅಭಿಮಾನಿಗಳು ಉಸಿರು ಬಿಗಿಹಿಡಿದು ಪಂದ್ಯವನ್ನು ವೀಕ್ಷಿಸಲಿದ್ದಾರೆ. ಫಲಿತಾಂಶವೂ ಅಷ್ಟೇ ರೋಮಾಂಚಕಾರಿಯಾಗಿರಲಿದೆ.

VISTARANEWS.COM


on

IPL 2024
Koo

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 18ರಂದು ನಡೆಯಲಿರುವ ಸಿಎಸ್​ಕೆ ಹಾಗೂ ಆರ್​ಸಿಬಿ ನಡುವಿನ ಐಪಿಎಲ್​ 17ನೇ ಆವೃತ್ತಿಯ (IPL 2024) ಪಂದ್ಯದಲ್ಲಿ ವಿರಾಟ್​ ಕೊಹ್ಲಿಗೆ (Virat kohli) ಜಯವಾಗಲಿದೆ ಎಂದು ಚೆನ್ನೈ ತಂಡ ಮಾಜಿ ಆಟಗಾರ ಸುರೇಶ್​ ರೈನಾ (Suresh Raina) ಶುಭ ಹಾರೈಸಿದ್ದಾರೆ. ಆರ್​ಸಿಬಿ ಮತ್ತು ಸಿಎಸ್ಕೆ ನಡುವಿನ ಮಾಡು ಇಲ್ಲವೇ ಮಡಿ ಐಪಿಎಲ್ 2024 ರ ಪ್ರಮುಖ ಪಂದ್ಯಕ್ಕೆ ಮುಂಚಿತವಾಗಿ ರೈನಾ ಕೊಹ್ಲಿಗೆ ಶುಭ ಹಾರೈಸಿದ್ದಾರೆ. ಎರಡೂ ತಂಡಗಳ ಅರ್ಹತಾ ಅವಕಾಶಗಳು ಅಪಾಯದಲ್ಲಿರುವುದರಿಂದ ಎರಡೂ ಫ್ರಾಂಚೈಸಿಗಳ ಅಭಿಮಾನಿಗಳು ಉಸಿರು ಬಿಗಿಹಿಡಿದು ಪಂದ್ಯವನ್ನು ವೀಕ್ಷಿಸಲಿದ್ದಾರೆ. ಫಲಿತಾಂಶವೂ ಅಷ್ಟೇ ರೋಮಾಂಚಕಾರಿಯಾಗಿರಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ತರಬೇತಿ ಮಾಡುತ್ತಿದ್ದ ಕೊಹ್ಲಿ ಅವರೊಂದಿಗಿನ ಚಿತ್ರವನ್ನು ರೈನಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಐಪಿಎಲ್ 2024 ರ ಪ್ರಸಾರ ಕರ್ತವ್ಯಗಳಿಗಾಗಿ ರೈನಾ ಕ್ರೀಡಾಂಗಣದಲ್ಲಿ ಹಾಜರಿದ್ದರು ಮತ್ತು ಫಾರ್ಮಲ್​ ಉಡುಪು ಧರಿಸಿದ್ದರು. ರೈನಾ ತಮ್ಮ ‘ಸಹೋದರ’ ಕೊಹ್ಲಿಯನ್ನು ಭೇಟಿಯಾದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

“ನಿನ್ನನ್ನು ನೋಡಿದ್ದಕ್ಕೆ ಸಂತೋಷವಾಗಿದೆ, @imVkohli ಸಹೋದರ. ಯಾವಾಗಲೂ ಶುಭ ಹಾರೈಕೆಗಳು!” ರೈನಾ ಅವರ ಶೀರ್ಷಿಕೆ ಹೀಗಿತ್ತು.

ಬ್ಲಾಕ್​ಬಸ್ಟರರ್​ ರಿವರ್ಸ್ ಪಂದ್ಯದಲ್ಲಿ ಕೊಹ್ಲಿ ರೈನಾ ಅವರ ಮಾಜಿ ಫ್ರಾಂಚೈಸಿ ಸಿಎಸ್​ಕೆ ವಿರುದ್ಧ ಸೆಣಸಲಿದ್ದಾರೆ. ಇದೆಲ್ಲವೂ ಎಲ್ಲಿಂದ ಪ್ರಾರಂಭವಾಯಿತು ಎಂಬುದು ಕುತೂಹಲಕರ. ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸಿಎಸ್​ಕೆ ಭರ್ಜರಿ ಗೆಲುವು ಸಾಧಿಸಿದ ನಂತರ, ಎರಡು ತಂಡಗಳು ಪ್ಲೇಆಫ್ ಸ್ಥಾನಕ್ಕಾಗಿ ಹೋರಾಡಲಿವೆ.

ಇದನ್ನೂ ಓದಿ: Nitish Reddy : ಐಪಿಎಲ್​ನಲ್ಲಿ ಮಿಂಚಿದ ಈ ಆಟಗಾರನಿಗೆ ಎಪಿಎಲ್​ನಲ್ಲಿ ಸಿಕ್ಕಿತು ಭರ್ಜರಿ ದುಡ್ಡು

ಸಿಎಸ್ಕೆ ಸೋತರೆ ಇದು ಎಂಎಸ್ ಧೋನಿಯ ಕೊನೆಯ ಪಂದ್ಯವಾಗಬಹುದು. ಆದಾಗ್ಯೂ, ಸೂಪರ್ ಕಿಂಗ್ಸ್ ತಮ್ಮ ಪ್ರಭಾವಶಾಲಿ ಹೆಡ್-ಟು-ಹೆಡ್ ದಾಖಲೆಯಿಂದಾಗಿ ಸಾಕಷ್ಟು ಆತ್ಮವಿಶ್ವಾಸದೊಂದಿಗೆ ಪಂದ್ಯಕ್ಕೆ ಇಳಿಯಲಿದೆ. ರೆಡ್ ಆರ್ಮಿ ವಿರುದ್ಧ ಧೋನಿ 35 ಪಂದ್ಯಗಳಲ್ಲಿ 140.77 ಸ್ಟ್ರೈಕ್ ರೇಟ್ನಲ್ಲಿ 839 ರನ್ ಗಳಿಸಿದ್ದಾರೆ. ಸಿಎಸ್ಕೆ ವಿರುದ್ಧ 32 ಪಂದ್ಯಗಳನ್ನಾಡಿರುವ ಕೊಹ್ಲಿ 1006 ರನ್ ಗಳಿಸಿದ್ದಾರೆ.

ಮಳೆ ಆಟವನ್ನು ಹಾಳುಮಾಡುತ್ತದೆಯೇ?

ಬದಲಾದ ಹವಾಮಾನವು ಆರ್​ಸಿಬಿ ಅಭಿಮಾನಿಗಳ ಭರವಸೆ ಹಾಳುಮಾಡುವ ಸಾಧ್ಯತೆಗಳಿವೆ. ನಗರದಲ್ಲಿ ದಿನವಿಡೀ ಭಾರಿ ಮಳೆಯಾಗುವ ನಿರೀಕ್ಷೆಯಿದೆ. weather.com ಪ್ರಕಾರ, ಮೇ 18 ರಂದು ಹಗಲಿನಲ್ಲಿ 73% ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ, ಇದು ಸಂಜೆ 6 ರ ಸುಮಾರಿಗೆ 80% ಕ್ಕೆ ಏರುವ ನಿರೀಕ್ಷೆಯಿದೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದು ಪಂದ್ಯ ಪೂರ್ಣಗೊಳ್ಳುವ ಸಾಧ್ಯತೆಗಳಿಗೆ ಮತ್ತಷ್ಟು ಅಡ್ಡಿಯಾಗಿದೆ. ಹವಾಮಾನ ಪರಿಸ್ಥಿತಿಗಳು ಆರ್​ಸಿಬಿಗೆ ಅನುಕೂಲಕರವಾಗಿಲ್ಲದಿದ್ದರೂ, ಮೈದಾನದ ಒಳಚರಂಡಿ ವ್ಯವಸ್ಥೆಯು ಮಳೆ ನಿಂತ 20 ನಿಮಿಷದಲ್ಲಿ ಪಂದ್ಯ ಆರಂಭಕ್ಕೆ ಅನುವು ಮಾಡಿಕೊಡುತ್ತದೆ.

Continue Reading

Latest

Nitish Reddy : ಐಪಿಎಲ್​ನಲ್ಲಿ ಮಿಂಚಿದ ಈ ಆಟಗಾರನಿಗೆ ಎಪಿಎಲ್​ನಲ್ಲಿ ಸಿಕ್ಕಿತು ಭರ್ಜರಿ ದುಡ್ಡು

Nitish Reddy : ಯುವ ಆಟಗಾರನ ಪ್ರತಿಕ್ರಿಯೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ನಿತೀಶ್ ಕುಮಾರ್ ರೆಡ್ಡಿ ಅವರನ್ನು ಎಸ್​ಆರ್​ಎಚ್​ 20 ಲಕ್ಷ ರೂ.ಗೆ ಖರೀದಿಸಿತ್ತು. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಆರು ತಂಡಗಳ ಪಂದ್ಯಾವಳಿಯಾದ ಆಂಧ್ರ ಪ್ರೀಮಿಯರ್ ಲೀಗ್​​ನಲ್ಲಿ ದಾಖಲೆಯ ಬಿಡ್​ನೊಂದಿಗೆ ಅವರು ಹೆಚ್ಚುಕಡಿಮೆ ಅಷ್ಟೇ ಮೊತ್ತ ಗಳಿಸಿದ್ದಾರೆ.

VISTARANEWS.COM


on

Nitish Kumar Reddy
Koo

ನವದೆಹಲಿ: ಆಂಧ್ರ ಪ್ರೀಮಿಯರ್ ಲೀಗ್ (APL) ನಲ್ಲಿ ಸನ್​ರೈಸರ್ಸ್​ ಹೈದರಬಾದ್​ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ನಿತೀಶ್ ಕುಮಾರ್ ರೆಡ್ಡಿ (Nitish Reddy) ಭರ್ಜರಿ ಮೊತ್ತವನ್ನು ಪಡೆದಿದ್ದಾರೆ. ಈ ಬಗ್ಗೆ ಅವರು ಖುಷಿ ವ್ಯಕ್ತಪಡಿಸಿದ್ದಾರೆ. ಯಾಕೆಂದರೆ ನಿತೀಶ್​ ಈಗ ಈ ಟಿ20 ಲೀಗ್​ನ ಹರಾಜಿನ ಮೂರು ಆವೃತ್ತಿಗಳ ಅತ್ಯಂತ ದುಬಾರಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಂದ ಹಾಗೆ 20 ವರ್ಷದ ಆಟಗಾರನನ್ನು ಗೋದಾವರಿ ಟೈಟಾನ್ಸ್ ತಂಡ 15.6 ಲಕ್ಷ ರೂ.ಗೆ ಖರೀದಿಸಿದೆ. ಹೈದರಾಬಾದ್​​ನ ಹೋಟೆಲ್ ಕೊಠಡಿಯಿಂದ ಎಪಿಎಲ್ 2024 ಹರಾಜನ್ನು ವೀಕ್ಷಿಸುತ್ತಿದ್ದ ನಿತೀಶ್​​ ತನ್ನ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. ಐಪಿಎಲ್​ನಲ್ಲಿ (IPL 2024) ಅವರು ಎಸ್​ಆರ್​ಎಚ್ ತಂಡದ ಆಟಗಾರ.

ನಿತೀಶ್ ಕುಮಾರ್ ರೆಡ್ಡಿ ಅವರು ಹೋಟೆಲ್ ಕೋಣೆಯಲ್ಲಿ ಸಂಭ್ರಮಿಸುತ್ತಿರುವುದನ್ನು ಅವರ ಸಹ ಆಟಗಾರರೊಬ್ಬರು ಚಿತ್ರೀಕರಿಸಿದ್ದಾರೆ. ಯುವ ಆಟಗಾರನ ಪ್ರತಿಕ್ರಿಯೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ನಿತೀಶ್ ಕುಮಾರ್ ರೆಡ್ಡಿ ಅವರನ್ನು ಎಸ್​ಆರ್​ಎಚ್​ 20 ಲಕ್ಷ ರೂ.ಗೆ ಖರೀದಿಸಿತ್ತು. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಆರು ತಂಡಗಳ ಪಂದ್ಯಾವಳಿಯಾದ ಆಂಧ್ರ ಪ್ರೀಮಿಯರ್ ಲೀಗ್​​ನಲ್ಲಿ ದಾಖಲೆಯ ಬಿಡ್​ನೊಂದಿಗೆ ಅವರು ಹೆಚ್ಚುಕಡಿಮೆ ಅಷ್ಟೇ ಮೊತ್ತ ಗಳಿಸಿದ್ದಾರೆ.

ಐಪಿಎಲ್ 2024 ರಲ್ಲಿ ಸನ್​ರೈಸರ್ಸ್​ ಜೊತೆಗಿನ ನಿತೀಶ್ ಅವರ ಯಶಸ್ಸು ಗುರುವಾರ ನಡೆದ ಆಂಧ್ರ ಟಿ 20 ಲೀಗ್ ಹರಾಜಿನಲ್ಲಿ ಪ್ರತಿಫಲನಗೊಂಡಿತು. ಗೋದಾವರಿ ಟೈಟಾನ್ಸ್ ತಂಡದ ಖಜಾನೆ ಒಡೆದ ಅವರು ಗರಿಷ್ಠ ಮೊತ್ತವನ್ನು ಪಡೆದರು.

ಸನ್ರೈಸರ್ಸ್​ ಪರ ಅದ್ಭುತ ಪ್ರದರ್ಶನ ನೀಡುತ್ತಿರುವ ನಿತೀಶ್ 239 ರನ್ ಗಳಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಅವರರನ್ನು ತಂಡ ಆಧಾರಸ್ತಂಭವೆಂದು ಹೇಳಲಾಗಿದೆ. ಮಯಾಂಕ್ ಅಗರ್ವಾಲ್ ಗಾಯದ ನಂತರ ಅವಕಾಶ ಪಡೆದ ನಿತೀಶ್, 150 ಕ್ಕೂ ಹೆಚ್ಚು ರನ್ ಗಳಿಸುವ ಜತೆಗೆ 3 ವಿಕೆಟ್ ಪಡೆದು ಮಿಂಚಿದರು.

ಇದನ್ನೂ ಓದಿ: Sunil Chhetri: ಭಾರತದ ಫುಟ್ಬಾಲ್‌ ಮಾಂತ್ರಿಕ ಸುನೀಲ್ ಚೆಟ್ರಿ ಕುರಿತ 8 ಕುತೂಹಲಕರ ಸಂಗತಿಗಳಿವು!

19 ವರ್ಷದೊಳಗಿನವರ ಮಟ್ಟದಲ್ಲಿ ಭಾರತ ಬಿ ಪರ ಆಡಿದ ನಿತೀಶ್ ಕುಮಾರ್ ರೆಡ್ಡಿ 17 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 566 ರನ್ ಮತ್ತು 22 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದು, 36.63 ಸರಾಸರಿಯಲ್ಲಿ 403 ರನ್ ಗಳಿಸಿದ್ದಾರೆ.

ರಣಜಿ ಟ್ರೋಫಿಯಲ್ಲಿ ಅವರ ಪ್ರದರ್ಶನವು ನಿತೀಶ್ ಅವರ ಅತ್ಯಂತ ಗಮನಾರ್ಹ ಸಾಧನೆಗಳಲ್ಲಿ ಒಂದಾಗಿದೆ. ಅಲ್ಲಿ ಅವರು ಪ್ರಾಥಮಿಕವಾಗಿ ಬೌಲಿಂಗ್ ಆಲ್ರೌಂಡರ್ ಆಗಿ ಆಡಿದರು ಮತ್ತು ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಗಮನಾರ್ಹ ಕೊಡುಗೆ ನೀಡಿದರು. 2023 ರ ಋತುವಿನಲ್ಲಿ, ನಿತೀಶ್ 18.76 ಸರಾಸರಿಯಲ್ಲಿ 25 ವಿಕೆಟ್​​ಗಳನ್ನು ಪಡೆದರು ಮತ್ತು 36.60 ಸರಾಸರಿಯಲ್ಲಿ 366 ರನ್ ಗಳಿಸಿದ್ದಾರೆ.

Continue Reading

ಕ್ರೀಡೆ

Sunil Chhetri: ಭಾರತದ ಫುಟ್ಬಾಲ್‌ ಮಾಂತ್ರಿಕ ಸುನೀಲ್ ಚೆಟ್ರಿ ಕುರಿತ 8 ಕುತೂಹಲಕರ ಸಂಗತಿಗಳಿವು!

Sunil Chhetri: ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಚೆಟ್ರಿ 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ

VISTARANEWS.COM


on

Sunil Chhetri
Koo

ಬೆಂಗಳೂರು: ಭಾರತದಲ್ಲಿ ಆಳವಾಗಿ ಬೇರೂರಿರುವ ಕ್ರಿಕೆಟ್, ಕ್ರಿಕೆಟಿಗರೆಂದರೆ ದೇವರು ಎಂದು ಪೂಜಿಸಲ್ಪಡುವ ಜಾಯಮಾನದಲ್ಲಿ ಒಬ್ಬ ಫುಟ್ಬಾಲ್ ಆಟಗಾರ (Indian Football player) 20 ವರ್ಷಗಳಿಂದ ದೇಶಕ್ಕಾಗಿ ಆಡುತ್ತಾನೆ ಅಂದರೆ ನಂಬಲು ಕಷ್ಟ ಆಗಬಹುದು. ಫುಟ್ಬಾಲಿಗೆ ಕೆಲವು ಶ್ರೀಮಂತ ಕ್ಲಬ್ ಬಿಟ್ಟರೆ ಬೇರೆ ಯಾವ ಸಪೋರ್ಟ್ ಕೂಡ ಇಲ್ಲದ ಸನ್ನಿವೇಶದಲ್ಲಿ ಕೂಡ ಈ ದೈತ್ಯ ಪ್ರತಿಭೆಯ ಆಟಗಾರ ದಾಖಲೆಗಳ ಮೇಲೆ ದಾಖಲೆಗಳನ್ನು ಮಾಡುತ್ತಾನೆ ಅಂದರೆ ಅದು ನಿಜವಾಗಿಯೂ ಅದ್ಭುತ! ಭಾರತೀಯ ಫುಟ್ಬಾಲ್ ತಂಡದ (Indian Football team) ಕ್ಯಾಪ್ಟನ್ ಆಗಿ ಭಾರತದಲ್ಲಿ ಫುಟ್ಬಾಲ್ ಕ್ರೇಜನ್ನು ಜೀವಂತವಾಗಿ ಉಳಿಸಿದ ಲೆಜೆಂಡ್ ಮಿಂಚು ಹರಿಸುವ ಫಾರ್ವರ್ಡ್ ಆಟಗಾರ ಸುನೀಲ್ ಚೆಟ್ರಿ (Sunil Chhetri) ಕೊನೆಗೂ ತನ್ನ ನೆಚ್ಚಿನ ಫುಟ್ಬಾಲ್​ ಆಟಕ್ಕೆ ವಿದಾಯ(Sunil Chhetri Announces Retirement) ಹೇಳಲು ನಿರ್ಧರಿಸಿದ್ದಾರೆ.


ಜೂನ್​ 6 ರಂದು ಕುವೈತ್​(Kuwait) ವಿರುದ್ಧದ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯ ಅವರಿಗೆ ಕೊನೆಯ ಪಂದ್ಯವಾಗಿರಲಿದೆ. ಅವರ ನಿವೃತ್ತಿಯ ನಿರ್ಧಾರ ಕೇಳಿ ಅನೇಕರು ಬೇಸರಗೊಂಡರೂ ಕೂಡ ಅವರ ಸಾಧನೆಗೆ ಸಲಾಂ ಎಂದಿದ್ದಾರೆ. ಚೆಟ್ರಿ ಕುರಿತ ಸಾರಸ್ಯರ ಸಂಗತಿ ಇಂತಿದೆ.


2021 ರಲ್ಲಿ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಸುನೀಲ್​ ಚೆಟ್ರಿ ಅವರಿಗೆ ಭಾರತದ ಅತ್ಯುನ್ನತ ಕ್ರೀಡಾ ಗೌರವ – ಖೇಲ್ ರತ್ನ ಪ್ರಶಸ್ತಿಯನ್ನು ನೀಡಿತು. ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೊದಲ ಮತ್ತು ಏಕೈಕ ಫುಟ್ಬಾಲ್ ಆಟಗಾರ. ನೀರಜ್ ಚೋಪ್ರಾ ಮತ್ತು ಮಿಥಾಲಿ ರಾಜ್ ಸೇರಿದಂತೆ ಇತರ ಪ್ರಸಿದ್ಧ ಕ್ರೀಡಾಪಟುಗಳೊಂದಿಗೆ ಅವರು ಈ ಗೌರವವನ್ನು ಸ್ವೀಕರಿಸಿದ್ದರು.

ಇದನ್ನೂ ಓದಿ Sunil Chhetri: ಕ್ಲಬ್​ ತೊರೆದು ದೇಶದ ಪರ ಆಡಲು ನಿರ್ಧರಿಸಿದ ಸುನೀಲ್​ ಚೆಟ್ರಿಗೆ ಮೆಚ್ಚುಗೆ

sunil chhetri khel ratna award


2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

sunil chhetri 2005


ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ Sunil Chhetri: ಮೈ ಬ್ರದರ್, ನಿಮ್ಮ ಬಗ್ಗೆ ಹೆಮ್ಮೆಯಿದೆ ಎಂದು ಚೆಟ್ರಿಗೆ ಶುಭ ಹಾರೈಸಿದ ಗೆಳೆಯ ವಿರಾಟ್​ ಕೊಹ್ಲಿ


ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಅವರು 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ. ಸುನೀಲ್ ಕಾರಣಕ್ಕೆ ಭಾರತದಲ್ಲಿ ಫುಟ್ಬಾಲ್ ಆಕರ್ಷಣೆ ಹೆಚ್ಚಿತು ಮತ್ತು ಹೆಚ್ಚು ಯುವಜನತೆ ಫುಟ್ಬಾಲ್ ಆಡಲು ಶುರು ಮಾಡಿದರು ಅನ್ನುವ ಮಾತಿನಲ್ಲಿ ಉತ್ಪ್ರೇಕ್ಷೆ ಇಲ್ಲ!


18ನೆಯ ವರ್ಷದಲ್ಲಿ ವೃತ್ತಿಪರ ಫುಟ್ಬಾಲ್ ಆಟಗಾರನಾಗಿ ಆಡಲು ಆರಂಭ ಮಾಡಿದ್ದ ಸುನೀಲ್ ಹೆಚ್ಚು ಕಡಿಮೆ ಭಾರತದ ಎಲ್ಲ ಕ್ಲಬ್​ಗಳ ಪರವಾಗಿ ಆಡಿದ್ದಾರೆ. ಮೋಹನ್ ಬಗಾನ್, ಜೆಸಿಟಿ, ಬಂಗಾಳ ತಂಡಗಳ ಆಟಗಾರನಾಗಿ ಮಿಂಚು ಹರಿಸಿದ್ದಾರೆ. 2015ರಿಂದ ಇಂದಿನವರೆಗೆ ಬೆಂಗಳೂರು ತಂಡದ ಪರವಾಗಿ ಆಡುತ್ತ ಬಂದಿದ್ದಾರೆ.

ಇದನ್ನೂ ಓದಿ Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ


ಭಾರತದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ಫುಟ್ಬಾಲ್ ಆಟಗಾರ ಎಂದರೆ ಅದು ಸುನೀಲ್ ಅನ್ನೋದು ನಿಜಕ್ಕೂ ಗ್ರೇಟ್. ಭಾರತ ಸರಕಾರ ಕೊಡಮಾಡುವ ಪದ್ಮಶ್ರೀ, 2011ರ ಅರ್ಜುನ ಪ್ರಶಸ್ತಿ ಅವರಿಗೆ ಈಗಾಗಲೇ ದೊರೆತಿವೆ.


1984 ಆಗಸ್ಟ್ 3ರಂದು ಸಿಕಂದರಾಬಾದನಲ್ಲಿ ಹುಟ್ಟಿದ ಸುನೀಲ್ ತಂದೆ ಒಬ್ಬ ಸೈನಿಕ ಆಗಿದ್ದರು ಮತ್ತು ಭಾರತದ ಆರ್ಮಿ ಫುಟ್ಬಾಲ್ ಟೀಮ್‌ನಲ್ಲಿ ಆಡಿದ್ದರು. ಅದರಿಂದಾಗಿ ಫುಟ್ಬಾಲ್ ಆಸಕ್ತಿ ಈ ಹುಡುಗನಿಗೆ ರಕ್ತದಲ್ಲಿಯೇ ಬಂದಿತ್ತು ಎನ್ನಬಹುದು.

Continue Reading

ಕ್ರಿಕೆಟ್

Viral Video: ವಿಚ್ಛೇದನ ಕೇಸ್​ ಹೆಚ್ಚಳಕ್ಕೆ ಇದುವೇ ಪ್ರಮುಖ ಕಾರಣ ಎಂದ ಪಾಕ್​ ಕ್ರಿಕೆಟ್​ ತಂಡದ ಮಾಜಿ ನಾಯಕ

Viral Video: ಕಳೆದ ಮೂರು ವರ್ಷಗಳಲ್ಲಿ ಪಾಕಿಸ್ತಾನದಲ್ಲಿ ವಿಚ್ಛೇದನ ಪ್ರಮಾಣ ಸುಮಾರು 30 ಪ್ರತಿಶತದಷ್ಟು ಹೆಚ್ಚಳವಾಗಿದೆ. ಮಹಿಳೆಯರು ಕೆಲಸ ಮಾಡಲು ಆರಂಭಿಸಿದ್ದೇ ಇದಕ್ಕೆ ಪ್ರಮುಖ ಕಾರಣ ಎಂದು ಪಾಕಿಸ್ತಾನ ಮಾಜಿ ನಾಯಕ ಸಯೀದ್ ಅನ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

VISTARANEWS.COM


on

viral video
Koo

ಕರಾಚಿ: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಕೇಸ್​ ಹೆಚ್ಚಳವಾಗಲು(Rising divorce rate) ಪ್ರಮುಖ ಕಾರಣ ಏನೆಂಬುದನ್ನು ಪಾಕಿಸ್ತಾನ ಮಾಜಿ ಆಟಗಾರ ಮತ್ತು ನಾಯಕ ಸಯೀದ್ ಅನ್ವರ್(Saeed Anwar) ವಿವರಿಸಿದ್ದಾರೆ. ಮಹಿಳೆಯರು ಕೆಲಸ ಮಾಡಲು ಆರಂಭಿಸಿದ್ದೇ ವಿಚ್ಛೇದನ ಹೆಚ್ಚಳಕ್ಕೆ ಕಾರಣ ಎಂದು ಹೇಳಿದ್ದಾರೆ. ಅವರು ನೀಡಿರುವ ಈ ಹೇಳಿಕೆ ಇದೀಗ ಭಾರೀ ವಿವಾದ ಮತ್ತು ವೈರಲ್(Viral Video) ಆಗಿದೆ.

ಕಳೆದ ಮೂರು ವರ್ಷಗಳಲ್ಲಿ ಪಾಕಿಸ್ತಾನದಲ್ಲಿ ವಿಚ್ಛೇದನ ಪ್ರಮಾಣ ಸುಮಾರು 30 ಪ್ರತಿಶತದಷ್ಟು ಹೆಚ್ಚಳವಾಗಿದೆ. ಮಹಿಳೆಯರ ದುಡಿಯಲು ಆರಂಭಿಸಿದ ಕಾರಣ ಅವರು ಕೂಡ ಆರ್ಥಿಕವಾಗಿ ಸಧೃಡವಾಗಿದ್ದಾರೆ. ಹೀಗಾಗಿ ಅವರು ಮನೆಯ ಮೇಲೆ ನಿಯಂತ್ರಣವನ್ನು ಸಾಧಿಸುತ್ತಾರೆ. ಬೈಗುಳ ಕೇಳಿ ನರಕದಲ್ಲಿ ಜೀವನ ಮಾಡುವುದಕ್ಕಿಂತ, ನಾನೇ ಸಂಪಾದಿಸಬಲ್ಲೆ. ನಾನು ಸ್ವಂತವಾಗಿ ಸಂಸಾರ ನಡೆಸಬಲ್ಲೆ ಎಂಬ ಬಲವಾದ ನಂಬಿಕೆ ಬರುತ್ತದೆ. ಇದೇ ಕಾರಣದಿಂದ ವಿಚ್ಛೇದನ ಪ್ರಮಾಣ ಹೆಚ್ಚಾಗಿದೆ ಎಂದು ಅನ್ವರ್ ಹೇಳಿದರು.

“1.05 ನಿಮಿಷಗಳ ವಿಡಿಯೊದಲ್ಲಿ ಮಾತನಾಡಿದ ಅನ್ವರ್, ನಾನು ಜಗತ್ತಿನ ಹಲವು ರಾಷ್ಟ್ರಗಳಿಗೆ ಪ್ರಯಾಣಿಸಿದ್ದೇನೆ. ನಾನು ಈಗಷ್ಟೇ ಆಸ್ಟ್ರೇಲಿಯಾ, ಯುರೋಪ್‍ನಿಂದ ಹಿಂತಿರುಗುತ್ತಿದ್ದೇನೆ. ಅಲ್ಲಿ ಯುವಕರು ನರಳುತ್ತಿದ್ದಾರೆ. ಕುಟುಂಬಗಳು ಕೆಟ್ಟ ಸ್ಥಿತಿಯಲ್ಲಿವೆ. ದಂಪತಿಗಳು ಜಗಳವಾಡುತ್ತಿದ್ದಾರೆ. ವ್ಯವಹಾರದ ಸ್ಥಿತಿ ತುಂಬಾ ಕೆಟ್ಟದಾಗಿದೆ. ನ್ಯೂಜಿಲ್ಯಾಂಡ್​ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಆಸ್ಟ್ರೇಲಿಯಾದ ಮಾಜಿ ಆಟಗಾರ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಅನ್ವರ್ ಹೇಳಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಅನ್ವರ್ ಹೇಳಿಕೆಗೆ ಅನೇಕರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಮೂಲಭೂತವಾಗಿ ನೀವು ಮಹಿಳೆಯರನ್ನು ಗುಲಾಮರನ್ನಾಗಿ ಮಾಡಬೇಕೆಂದು ಹೇಳುತ್ತಿದ್ದೀರಿ. ಮಹಿಳೆಯರಿಗೂ ರೆಕ್ಕೆಗಳನ್ನು ಬಿಚ್ಚಿ ಹಾರಾಡುವ ಅಕಾಶ ನೀಡಬೇಕು. ಆದರೆ ನೀವು ಅವರನ್ನು ಸಾಕುಪ್ರಾಣಿಗಳಂತೆ ಪುರುಷರಿಗೆ ಸೇವೆ ಸಲ್ಲಿಸಬೇಕೆಂಬ ಮನಸ್ಥಿತಿ ಹೊಂದಿದ್ದೀರಿ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ Viral Video: ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌.. ಜೊಮ್ಯಾಟೊದಿಂದ ಮತ್ತೊಂದು ಎಡವಟ್ಟು

“ಮಹಿಳೆಯರು ಕೆಲಸ ಮಾಡಲು ಮತ್ತು ಅವರ ಸಾಮರ್ಥ್ಯವನ್ನು ಅರಿತುಕೊಳ್ಳಲು ಸುರಕ್ಷಿತ ವಾತಾವರಣವನ್ನು ಕೇಳುವ ಬದಲು, ಅವರು ಮಹಿಳೆಯರನ್ನು ಮನೆಯಲ್ಲಿಯೇ ಇರಲು ಕೇಳುತ್ತಿದ್ದಾರೆ. ಸಿದ್ಧಾಂತದಲ್ಲಿ ಏನೋ ತಪ್ಪಾಗಿದೆ” ಎಂದು ಮತ್ತೊಬ್ಬ ಮಹಿಳೆ ಕಮೆಂಟ್​ ಮಾಡಿದ್ದಾರೆ. “ ಜಗತ್ತು ಮತಾಂತರಗೊಳ್ಳಬೇಕೆಂದು ಬಯಸುವ ನಿಮ್ಮಿಂದ ಇನ್ನೇನು ನಿರೀಕ್ಷಿಸಬಹುದು. “ಇದು ಮಹಿಳೆಯರಿಗೆ ತುಂಬಾ ಅವಮಾನಕರವಾಗಿದೆ” ಹೀಗೆ ಹಲವು ಮಹಿಳೇಯರು ಅನ್ವರ್​ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Continue Reading
Advertisement
ASI who was injured in a road accident died in kunigal
ಕರ್ನಾಟಕ6 mins ago

Road Accident: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಎಎಸ್‌ಐ ಚಿಕಿತ್ಸೆ ಫಲಿಸದೆ ಸಾವು

IPL 2024
ಕ್ರಿಕೆಟ್16 mins ago

IPL 2024: ಸಿಎಸ್​​ಕೆ ಮಾಜಿ ಆಟಗಾರನಾಗಿದ್ದರೂ ಈ ಸಲ ಕೊಹ್ಲಿ ಗೆಲ್ಲಲಿ ಎಂದ ಸುರೇಶ್​ ರೈನಾ!

Prajwal Revanna Case KR Nagar victim kidnapping case Satish sent to judicial custody
ಕ್ರೈಂ18 mins ago

Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

Pay attention to childrens safety during holidays Minister Lakshmi Hebbalkar appeals to parents
ಬೆಳಗಾವಿ24 mins ago

Lakshmi Hebbalkar: ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ; ಪಾಲಕರಿಗೆ ಹೆಬ್ಬಾಳ್ಕರ್ ಮನವಿ

Four Digit PIN
ತಂತ್ರಜ್ಞಾನ36 mins ago

Four Digit PIN: ಇಂಥ ಪಿನ್ ನಂಬರ್ ಕೊಡ್ತಾ ಇದ್ದೀರಾ? ನಿಮ್ಮ ದುಡ್ಡಿಗೆ ಕಾದಿದೆ ಅಪಾಯ!

Nitish Kumar Reddy
Latest39 mins ago

Nitish Reddy : ಐಪಿಎಲ್​ನಲ್ಲಿ ಮಿಂಚಿದ ಈ ಆಟಗಾರನಿಗೆ ಎಪಿಎಲ್​ನಲ್ಲಿ ಸಿಕ್ಕಿತು ಭರ್ಜರಿ ದುಡ್ಡು

Medicine Price
ದೇಶ47 mins ago

Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

Belagavi News Masked man stabs TC and four others for asking them to show tickets on train
ಕ್ರೈಂ50 mins ago

Belagavi News: ರೈಲಲ್ಲಿ ಟಿಕೆಟ್‌ ತೋರಿಸು ಎಂದಿದ್ದಕ್ಕೆ ಟಿಸಿ ಸೇರಿ ನಾಲ್ವರಿಗೆ ಚಾಕು ಇರಿದ ಮುಸುಕುಧಾರಿ; ಒಬ್ಬ ಸಾವು, ನಾಲ್ವರು ಗಂಭೀರ

Skin Care Tips in Kannada
ಆರೋಗ್ಯ1 hour ago

Skin Care Tips in Kannada: ಈ ಕಾರಣಕ್ಕಾಗಿ ನೀವು ಸನ್‌ಸ್ಕ್ರೀನ್‌ ಹಚ್ಚಿಕೊಳ್ಳಲೇಬೇಕು!

Car Care tips
ಪ್ರಮುಖ ಸುದ್ದಿ1 hour ago

Car Care Tips : ನಿಮ್ಮ ಕಾರಿನ ಈ ಬಿಡಿಭಾಗಗಳಿಗೂ ಇವೆ ಎಕ್ಸ್​ಪೈರಿ ಡೇಟ್​​; ಅವುಗಳು ಯಾವವು ಎಂಬುದು ತಿಳಿದಿರಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ4 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ6 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು10 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌