Site icon Vistara News

IPL 2024: ಮುಂಬೈ ಪಂದ್ಯದ ಟಾಸ್​ ಕಳ್ಳಾಟ ಬಿಚ್ಚಿಟ್ಟ ಆರ್​ಸಿಬಿ ನಾಯಕ; ವಿಡಿಯೊ ವೈರಲ್​

IPL 2024

ಬೆಂಗಳೂರು: ಕಳೆದ ಗುರುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಐಪಿಎಲ್(IPL 2024)​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು(MI vs RCB) ಹಾಗೂ ಮುಂಬೈ ಇಂಡಿಯನ್ಸ್​(Mumbai Indians) ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ಪಡೆ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಆದರೆ, ಪಂದ್ಯದ ಬಳಿಕ ಮುಂಬೈ ಗೆಲುವಿಗೆ ಕಾರಣ ಟಾಸ್​ ಫಿಕ್ಸಿಂಗ್​ ಎಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಇದಕ್ಕೆ ಸಂಬಂಧಪಟ್ಟ ಕೆಲ ವಿಡಿಯೊಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಇದೀಗ ಈ ಘಟನೆಯ ನೈಜ ಕಾರಣವನ್ನು ಆರ್​ಸಿಬಿ ತಂಡದ ನಾಯಕ ಫಾಫ್​ ಡು ಪ್ಲೆಸಿಸ್(Faf du Plessis) ಸನ್​ರೈಸರ್ಸ್​ ಹೈದರಾಬಾದ್(​Sunrisers Hyderabad) ಪಂದ್ಯದ ವಿರುದ್ಧದ ಟಾಸ್​ ವೇಳೆ​ ಪ್ಯಾಟ್​ ಕಮಿನ್ಸ್(Pat Cummins)​ ಜತೆ ಚರ್ಚಿಸಿದ್ದಾರೆ. ಇದರ ವಿಡಿಯೊ ವೈರಲ್ ಆಗಿದ್ದು, ಮತ್ತೆ ಟಾಸ್​ ಫಿಕ್ಸ್​ ಚರ್ಚೆ ಮುನ್ನಲೆಗೆ ಬಂದಿದೆ.

ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಚಿನ್ನಶ್ವಾಮಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿತ್ತು. ಉಭಯ ತಂಡದ ನಾಯಕರು ಟಾಸ್​ಗೆ ಆಗಮಿಸಿದ ಈ ವೇಳೆ ಪ್ಯಾಟ್​ ಕಮಿನ್ಸ್ ಅವರು ಡು ಪ್ಲೆಸ್​ ಬಳಿಕ​ ಮುಂಬೈ ವಿರುದ್ಧದ ಟಾಸ್​ ಘಟನೆಯ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಡು ಪ್ಲೆಸಿಸ್​ ಪಾಂಡ್ಯ ಹಿಮ್ಮುಖವಾಗಿ ದೂರಕ್ಕೆ ಟಾಸ್​ ಕಾಯಿನ್​ ಚಿಮ್ಮಿಸಿದರು. ಮ್ಯಾಚ್​ ರೆಫ್ರಿಯಾಗಿದ್ದ ಜಾವಗಲ್​ ಶ್ರೀನಾಥ್(Javagal Srinath)​ ಅವರು ಕಾಯಿನ್​ ತಿರುಗಿಸಿ ಹೆಕ್ಕಿ ಪಾಂಡ್ಯ ಬಳಿ ಏನೋ ಕೇಳಿ ಟಾಸ್​ ಗೆದ್ದಿರುವಂತೆ ಹೇಳಿ ತಕ್ಷಣ ಅಲ್ಲಿಂದ ತೆರಳಿದರು ಎಂದು ಅಂದಿನ ಘಟನೆಯನ್ನು ನಟನೆಯ ಮೂಲಕ ತೋರಿಸಿದರು. ಈ ವಿಡಿಯೊ ವೈರಲ್​ ಆಗಿದ್ದು ನಿಜವಾಗಿಯೂ ಟಾಸ್​ ಫಿಕ್ಸಿಂಗ್​ ನಡೆದಿದೆಯಾ? ಎಂಬ ಚರ್ಚೆ ಮತ್ತೆ ಶುರುವಾಗಿದೆ.

ಚೇಸಿಂಗ್​ಗೆ ಯೋಗ್ಯವಾದ ವಾಂಖೆಡೆ ಸ್ಟೇಡಿಯಂನಲ್ಲಿ ಅಂಪೈರ್​ ಟಾಸ್​ ಕಾಯಿನ್​ ಬದಲಿಸಿ ಮುಂಬೈ ತಂಡಕ್ಕೆ ಸಹಕರಿಸಿದ್ದಾರೆ. ಇಲ್ಲವಾದರೆ ಆರ್​ಸಿಬಿ ಗೆಲ್ಲುತ್ತಿತ್ತು ಎಂದು ಅನೇಕ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಅಂಬಾನಿ ಮತ್ತು ಐಪಿಎಲ್​ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

ಹೈದರಾಬಾದ್​ ವಿರುದ್ಧ 25 ರನ್​ ಸೋಲು


ಸೋಮವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ತಂಡ ಹೈದರಾಬಾದ್​ ವಿರುದ್ಧ 25 ರನ್​ಗಳ ಸೋಲು ಕಂಡಿತು. ಟಾಸ್​ ಗೆದ್ದ ಆತಿಥೇಯ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಎಸ್​ಆರ್​ಎಚ್​ ತಂಡ ವಿಶ್ವ ದಾಖಲೆಯ 287 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆರ್​ಸಿಬಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 262 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಪ್ಲೇ ಆಫ್ ಆಸೆ ಇನ್ನೂ ಜೀವಂತ

ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ತಂಡದ ಮೇಲಿದೆ. ಈಗಾಗಲೇ 7 ಪಂದ್ಯ ಆಡಿದ್ದು, 1 ಪಂದ್ಯ ಗೆದ್ದು, 6 ಪಂದ್ಯದಲ್ಲಿ ಸೋಲು ಕಂಡಿದೆ. 2 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 7 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇ ಆಫ್ ಅವಕಾಶ ಇದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಆರ್‌ಸಿಬಿ ಪ್ಲೇಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ.

Exit mobile version