IPL 2024 : ಐಪಿಎಲ್​ನಲ್ಲಿ ರೋಹಿತ್​ ಶರ್ಮಾ ಆಡುವುದಿಲ್ಲವೇ​? ಧರ್ಮಶಾಲಾದಿಂದ ಬಂದಿದೆ ಹೊಸ ಅಪ್ಡೇಟ್​​ - Vistara News

ಕ್ರೀಡೆ

IPL 2024 : ಐಪಿಎಲ್​ನಲ್ಲಿ ರೋಹಿತ್​ ಶರ್ಮಾ ಆಡುವುದಿಲ್ಲವೇ​? ಧರ್ಮಶಾಲಾದಿಂದ ಬಂದಿದೆ ಹೊಸ ಅಪ್ಡೇಟ್​​

IPL 2024 : ರೋಹಿತ್ ಶರ್ಮಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ ಎಂಬುದಾಗಿ ಬಿಸಿಸಿಐ ತಿಳಿಸಿದೆ. ಐಪಿಎಲ್​ ಆರಂಭಕ್ಕೆ ಇನ್ನು ಕೇವಲ 13 ದಿನಗಳ ಮಾತ್ರ ಬಾಕಿ ಉಳಿದಿದೆ.

VISTARANEWS.COM


on

Rohit Sharma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಇಂಗ್ಲೆಂಡ್ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್​ ವಿರುದ್ಧದ (Ind vs Eng) ಐದನೇ ಟೆಸ್ಟ್ ಪಂದ್ಯದ ಮೂರನೇ ದಿನವಾದ ಶನಿವಾರ (ಮಾರ್ಚ್ 9) ನಾಯಕ ರೋಹಿತ್ ಶರ್ಮಾ (Rohit Sharma) ಇಲ್ಲದೆ ಭಾರತ ತಂಡ ಮೈದಾನಕ್ಕಿಳಿದಿತ್ತು. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತದ ನಾಯಕ ಮೊದಲ ದಿನ ಫೀಲ್ಡಿಂಗ್ ಮತ್ತು ಮೊದಲ ಇನ್ನಿಂಗ್ಸ್​​ನಲ್ಲಿ ಬ್ಯಾಟಿಂಗ್ ಮಾಡಿದ್ದರು. ಆದರೆ, ಮೂರನೇ ದಿನದಂದು ಅವರು ಫೀಲ್ಡಿಂಗ್​​ಗೆ ಬರಲಿಲ್ಲ. ಈ ವಿಷಯ ಮುಂದಿನ ಐಪಿಎಲ್​ನಲ್ಲಿ (IPL 2024) ಅವರ ಭಾಗವಹಿಸುವಿಕೆಯ ಬಗ್ಗೆ ಅನುಮಾನಗಳನ್ನು ಸೃಷ್ಟಿಸಿದೆ.

ಬಿಸಿಸಿಐ ಆ ಬಳಿಕ ನಾಯಕನ ಅನುಪಸ್ಥಿತಿಯ ಹಿಂದಿನ ಕಾರಣವನ್ನು ಬಹಿರಂಗಪಡಿಸಿತು. ಬೆನ್ನುನೋವಿನಿಂದಾಗಿ ಅನುಭವಿ ಬ್ಯಾಟ್ಸ್ಮನ್ ಮೈದಾನಕ್ಕಿಳಿಯಲಿಲ್ಲ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. ಅವರ ಅನುಪಸ್ಥಿತಿಯಲ್ಲಿ, ನಿಯೋಜಿತ ಉಪನಾಯಕ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಿದರು ಹಾಗೂ ತಂಡವನ್ನು ಸುಲಭವಾಗಿ ಗೆಲ್ಲಿಸಿದರು. ಭಾರತವು ಇಂಗ್ಲೆಂಡ್ ಅನ್ನು ಕೇವಲ 195 ರನ್​ಗಳಿಗೆ ಆಲೌಟ್ ಮಾಡಿ ಇನ್ನಿಂಗ್ಸ್ ಮತ್ತು 64 ರನ್​ಗಳಿಂದ ಪಂದ್ಯವನ್ನು ಗೆದ್ದಿತು.

ರೋಹಿತ್ ಶರ್ಮಾ ಅವರಿಗೆ ಬೆನ್ನುನೋವು ಕಾಣಿಸಿಕೊಂಡ ಕಾರಣ ಅವರು ಮೈದಾನಕ್ಕೆ ಇಳಿದಿರಲಿಲ್ಲ. ಅನುಭವಿ ಬ್ಯಾಟರ್​ ಪಂದ್ಯ ಮುಗಿದ ನಂತರ ಮೈದಾನಕ್ಕೆ ಇಳಿದಿದ್ದರು. ಎದುರಾಳಿ ತಂಡದ ಆಟಗಾರರಿಗೆ ಹ್ಯಾಂಡ್​ಶೇಕ್ ಮಾಡಿದರು. ನಡೆಯುವಾಗ ಸಂಪೂರ್ಣವಾಗಿ ಆರಾಮದಾಯಕವಾಗಿ ಕಾಣುತ್ತಿದ್ದರು. ಆದಾಗ್ಯೂ ಮೈದಾನಕ್ಕೆ ಬರದಿರುವುದು ಮುನ್ನೆಚ್ಚರಿಕೆಯ ಕ್ರಮವಾಗಿರಬಹುದು ಎಂದು ಹೇಳಲಾಗಿದೆ. ಹೀಗಾಗಿ ಅವರು ಮುಂದಿನ ಐಪಿಎಲ್​ನಲ್ಲಿ ಆಡುವುದಿಲ್ಲ ಎಂದು ಹೇಳಲಾಗುತ್ತಿದೆ. ಯಾಕೆಂದರೆ ಮೊದಲ ಹಂತದ ಐಪಿಎಲ್ ಆರಂಭಕ್ಕೆ ಇನ್ನೂ ಕೇವಲ 13 ದಿನಗಳು ಬಾಕಿ ಉಳಿದಿವೆ. ಅಷ್ಟು ದಿನದಲ್ಲಿ ಅವರು ಸಿದ್ಧಗೊಳ್ಳುವರೇ ಎಂಬ ಪ್ರಶ್ನೆ ಎದುರಾಗಿದೆ.

ತಂಡದ ಆಟಗಾರರನ್ನು ಶ್ಲಾಘಿಸಿದ ರೋಹಿತ್ ಶರ್ಮಾ

ಭಾರತವು ಸರಣಿಯನ್ನು 4-1 ರಿಂದ ಗೆದ್ದ ನಂತರ ಮಾತನಾಡಿದ ರೋಹಿತ್ ಶರ್ಮಾ ತಂಡದ ಆಟಗಾರರ ಪ್ರದರ್ಶನವನ್ನು ಶ್ಲಾಘಿಸಿದರು. ಮೊದಲ ಟೆಸ್ಟ್​ನಲ್ಲಿ ಸೋತ ನಂತರ ಭಾರತವು ಹಿನ್ನಡೆಗೆ ಒಳಗಾಯಿತು. ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಶಮಿ ಅವರಂತಹ ಕೆಲವು ದೊಡ್ಡ ಆಟಗಾರರ ಅನುಪಸ್ಥಿತಿಯು ಅವರ ಮೇಲೆ ಹೆಚ್ಚಿನ ಒತ್ತಡ ಹೆಚ್ಚಿಸಿತು. ಆದಾಗ್ಯೂ, ಆತಿಥೇಯರು ಪುಟಿದೆದ್ದು ಸರಣಿ ಗೆದ್ದರು.

ಇದನ್ನೂ ಓದಿ : R Ashwin: ಶತಕದ ಟೆಸ್ಟ್​ನಲ್ಲಿ ಹಲವು ದಾಖಲೆ ಬರೆದ ಅಶ್ವಿನ್​; ಕುಂಬ್ಳೆ ದಾಖಲೆಯೂ ಪತನ

“ದೊಡ್ಡ ಸರಣಿಯಲ್ಲಿ ಆಟಗಾರರ ಲಭ್ಯತೆ ಹಾಗೂ ಆಗಮನ ಪದೇ ಪದೇ ಸಂಭವಿಸುತ್ತದೆ. ನಮ್ಮ ಆಟಗಾರರಿಗೆ ಅನುಭವದ ಕೊರತೆ ಇದೆ. ಆದಾಗ್ಯೂ ಅವರು ಸಾಕಷ್ಟು ಕ್ರಿಕೆಟ್ ಆಡಿದ್ದಾರೆ. ಎಲ್ಲರೂ ಒತ್ತಡದಲ್ಲಿ ಆಡಿದ್ದಾರೆ. ಸರಣಿ ಗೆಲುವಿನ ಶ್ರೇಯಸ್ಸು ಶ್ರೇಯಸ್ಸು ಇಡೀ ತಂಡಕ್ಕೆ ಸಲ್ಲುತ್ತದೆ”ಎಂದು ರೋಹಿತ್ ಶರ್ಮಾ ಹೇಳಿದರು.

ಬ್ಯಾಟಿಂಗ್ನಲ್ಲಿ ರೋಹಿತ್ ಅವರ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಅವರು ಸರಣಿಯಲ್ಲಿ ಭಾರತದ ಪರ ಮೂರನೇ ಅತಿ ಹೆಚ್ಚು ರನ್ ಸ್ಕೋರರ್ ಎನಿಸಿಕೊಂಡರು. ಸರಣಿಯ ನಿಧಾನಗತಿಯ ಆರಂಭದ ನಂತರ, ಅವರು ಕೊನೆಯ ಮೂರು ಟೆಸ್ಟ್ ಗಳಲ್ಲಿ ಎರಡು ಶತಕಗಳನ್ನು ಗಳಿಸಿದರು. ಸರಣಿಯನ್ನು 400 ರನ್ ಗಳೊಂದಿಗೆ ಮುಗಿಸಿದರು. ಬೆನ್ನುನೋವು ಗಂಭೀರವಾಗಿಲ್ಲದ ಕಾರಣ, ಈ ತಿಂಗಳ ಕೊನೆಯಲ್ಲಿ ಐಪಿಎಲ್ 2024 ಪ್ರಾರಂಭವಾಗುವಾಗ ಅವರು ಆಡುವ ನಿರೀಕ್ಷೆಯಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Crazy MS Dhoni fan: 2100 ಕಿ.ಮೀ ದೂರ ಸೈಕಲ್​ ತುಳಿದು ದಿಲ್ಲಿಯಿಂದ ಚೆನ್ನೈಗೆ ಬಂದ ಧೋನಿ ಅಭಿಮಾನಿ; 23 ದಿನಗಳಲ್ಲಿ ಮಿಷನ್​ ಕಂಪ್ಲೀಟ್​

Crazy MS Dhoni fan: ಬಿಹಾರ ಮೂಲದ ಧೋನಿ ಅಭಿಮಾನಿಯೊಬ್ಬ (Crazy MS Dhoni fan) ತನ್ನ ನೆಚ್ಚಿನ ಆಟಗಾರನ ಆಟ ನೋಡಲೆಂದೇ ದಿಲ್ಲಿಯಿಂದ ಬರೋಬ್ಬರಿ 2100 ಕಿ.ಮೀ ದೂರ ಸೈಕಲ್​ ತುಳಿದು ಚೆನ್ನೈಗೆ ಬಂದು ತನ್ನ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.

VISTARANEWS.COM


on

Crazy MS Dhoni fan
Koo

ಚೆನ್ನೈ: ಕೆಲವು ದಿನಗಳ ಹಿಂದಷ್ಟೇ ಶತಾಯುಷಿ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಧೋನಿಯನ್ನು(MS Dhoni) ನೋಡಲು ಚೆನ್ನೈಯಿಂದ ದೆಹಲಿಯವರೆಗೂ ನಡೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದರು. ಇದೀಗ ಧೋನಿಯ ಕ್ರೇಜಿ ಅಭಿಮಾನಿಯೊಬ್ಬ(Crazy MS Dhoni fan) ತನ್ನ ನೆಚ್ಚಿನ ಆಟಗಾರನ ಆಟ ನೋಡಲೆಂದೇ ಬರೋಬ್ಬರಿ 2100 ಕಿ.ಮೀ ದೂರ ಸೈಕಲ್​ ತುಳಿದು ಬಂದು ತನ್ನ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.

ಹೌದು, ಬಿಹಾರ ಮೂಲದ ಧೋನಿ ಅಭಿಮಾನಿಯಾಗಿರುವ ಈತ ಡೆಲ್ಲಿಯಲ್ಲಿ ನೆಲೆಸಿದ್ದಾನೆ. ಈ ಬಾರಿ ಧೋನಿ ಐಪಿಎಲ್​ಗೆ ವಿದಾಯ ಹೇಳಲಿದ್ದಾರೆ. ಹೀಗಾಗಿ ತಮ್ಮ ನೆಚ್ಚಿನ ಆಟಗಾರನ ಕೊನೆಯ ಆಟವನ್ನು ಕಣ್ತುಂಬಿಕೊಳ್ಳಲು ಪ್ರತಿ ಪಂದ್ಯದಲ್ಲಿಯೂ ಕಾದು ಕುಳಿತಿರುತ್ತಾರೆ.

ಬಿಹಾರ ಮೂಲದ ಧೋನಿ ಅಭಿಮಾನಿ ಕೂಡ ಹೇಗಾದರೂ ಮಾಡಿ ಧೋನಿಯ ಆಟವನ್ನು ನೋಡಲೇಬೇಕೆಂದು ಆಸೆ ಪಟ್ಟಿದ್ದರು. ಆದರೆ, ಆರ್ಥಿಕ ಸಮಸ್ಯೆಯೂ ದೊಡ್ಡ ಸವಾಲಾಗಿ ಪರಿಣಮಿಸಿತು. ಇದೇ ವೇಳೆ ಸೈಕಲ್ ಆಯ್ಕೆ ಮಾಡಿಕೊಂಡು ದಿಲ್ಲಿಯಿಂದ 23 ದಿನಗಳಲ್ಲಿ ಚೆನ್ನೈಗೆ ತಲುಪಿದರು. ಈ ಪಯಣದ ವೇಳೆ ಅವರು ಬರೋಬ್ಬರಿ 2100 ಕಿ.ಮೀ ​ಸೈಕಲ್​ ತುಳಿದಿದ್ದಾರೆ. ಕೊನೆಗೂ ಅವರು ಚೆನ್ನೈ ಪಂದ್ಯವನ್ನು ವೀಕ್ಷಿಸಿದ್ದಾರೆ. ಈ ರೋಚಕ ಜರ್ನಿಯ ಕಥೆಯನ್ನು ಈ ಅಭಿಮಾನಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್​ ಕಿಂಗ್ಸ್​ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. ಇತ್ತೀಚೆಗೆ ಅಭಿಮಾನಿಯೊಬ್ಬ ತನ್ನ ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಮಾಡಿಕೊಂಡಿದ್ದ.

ಇದನ್ನೂ ಓದಿ MS Dhoni : ಧೋನಿಗೆ ದೇವಸ್ಥಾನ; ಸಿಎಸ್​​ಕೆ ತಂಡದ ಮಾಜಿ ಆಟಗಾರ ಅಭಿಮಾನದ ನುಡಿ

ಎಂ.ಎಸ್.ಧೋನಿ(MS Dhoni), ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಸಿಎಸ್‌ಕೆಗಾಗಿ ಧೋನಿ ಆಡುತ್ತಿದ್ದಾರೆ. ಅವರ ಈ ಪ್ರದರ್ಶನವನ್ನು ಪರಿಗಣಿಸಿ, ಚೆನ್ನೈಯಲ್ಲಿ ಧೋನಿಯ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ. ಧೋನಿ ಚೆನ್ನೈನ ದೇವರು ಎಂದ ರಾಯುಡು, ಮುಂಬರುವ ವರ್ಷದಲ್ಲಿ ಚೆನ್ನೈನಲ್ಲಿ ಎಂಎಸ್ ಧೋನಿಯ ಮಂದಿರ ನಿರ್ಮಾಣವಾಗುವುದು ಖಚಿತ ಎಂದು ಹೇಳಿದ್ದಾರೆ.

ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಮೇ 18ರಂದು ನಡೆಯುವ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇ ಬೇಕು. ಒಂದೊಮ್ಮೆ ಚೆನ್ನೈ ಸೋತರೆ ಇದುವೇ ಧೋನಿಗೆ ವಿದಾಯ ಪಂದ್ಯವಾಗಲಿದೆ.

Continue Reading

ಕ್ರೀಡೆ

Rishabh Pant: ಬಿಸಿಸಿಐ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಭ್​ ಪಂತ್​

Rishabh Pant: ಲಕ್ನೋ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಪಂತ್​, ‘ಆರ್​ಸಿಬಿ ವಿರುದ್ಧ ನಾನು ಮೈದಾನದಲ್ಲಿದ್ದರೆ ನಿರ್ಣಾಯಕ ಪಂದ್ಯವನ್ನು ಗೆಲ್ಲುವ ಉತ್ತಮ ಅವಕಾಶವನ್ನು ಹೊಂದಿದ್ದೆವು ಎಂದು ಹೇಳಿದರು. ಲಕ್ನೋ ವಿರುದ್ಧ ಡೆಲ್ಲಿ ಗೆದ್ದರೂ ಕೂಡ ಪ್ಲೇ ಆಫ್​ ಗೇರಲು ಸಾಧ್ಯವಾಗಿಲ್ಲ. ಕಳೆದ ಆವೃತ್ತಿಗೆ ಹೋಲಿಸಿದರೆ ಈ ಬಾರಿ ಡೆಲ್ಲಿ(Delhi Capitals) ಪ್ರದರ್ಶನ ಉತ್ತಮವಾಗಿತ್ತು.

VISTARANEWS.COM


on

Rishabh Pant
Koo

ನವದೆಹಲಿ: ಮೂರನೇ ಬಾರಿಗೆ ನಿಧಾನಗತಿಯ ಓವರ್​ ಕಾಯ್ದುಕೊಂಡ ತಪ್ಪಿಗೆ ಒಂದು ಪಂದ್ಯದ ನಿಷೇಧ ಶಿಕ್ಷೆಗೆ ಗುರಿಯಾಗಿದ್ದ ರಿಷಭ್​ ಪಂತ್(Rishabh Pant)​ ಬಿಸಿಸಿಐ(BCCI) ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಆರ್​ಸಿಬಿ(RCB) ವಿರುದ್ಧ ನಾನು ಆಡುತ್ತಿದ್ದರೆ ಇಂದು ಪ್ಲೇ ಆಫ್​ ಟಿಕೆಟ್​ ಪಡೆಯುವ ಎಲ್ಲ ಸಾಧ್ಯತೆಯೂ ಇತ್ತು ಎಂದು ಹೇಳಿದ್ದಾರೆ.

ನಿನ್ನೆ(ಮಂಗಳವಾರ) ಲಕ್ನೋ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಪಂತ್​, ‘ಆರ್​ಸಿಬಿ ವಿರುದ್ಧ ನಾನು ಮೈದಾನದಲ್ಲಿದ್ದರೆ ನಿರ್ಣಾಯಕ ಪಂದ್ಯವನ್ನು ಗೆಲ್ಲುವ ಉತ್ತಮ ಅವಕಾಶವನ್ನು ಹೊಂದಿದ್ದೆವು ಎಂದು ಹೇಳಿದರು. ಲಕ್ನೋ ವಿರುದ್ಧ ಡೆಲ್ಲಿ ಗೆದ್ದರೂ ಕೂಡ ಪ್ಲೇ ಆಫ್​ ಗೇರಲು ಸಾಧ್ಯವಾಗಿಲ್ಲ. ಕಳೆದ ಆವೃತ್ತಿಗೆ ಹೋಲಿಸಿದರೆ ಈ ಬಾರಿ ಡೆಲ್ಲಿ(Delhi Capitals) ಪ್ರದರ್ಶನ ಉತ್ತಮವಾಗಿತ್ತು.

ಮೇ 07, 2024 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ತಂಡ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿತ್ತು. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದ ಐಪಿಎಲ್​​ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಡೆಲ್ಲಿ ತಂಡದ 3ನೇ ಅಪರಾಧವಾಗಿತ್ತು. ಹೀಗಾಗಿ ತಂಡದ ನಾಯಕ ಪಂತ್​ಗೆ 30 ಲಕ್ಷ ರೂ.ಗಳ ದಂಡ ಮತ್ತು ಒಂದು ಪಂದ್ಯದ ನಿಷೇಧ ಹೇರಲಾಗಿತ್ತು. ಜತೆಗೆ ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಪ್ಲೇಯಿಂಗ್ ಇಲೆವೆನ್ ನ ಉಳಿದ ಸದಸ್ಯರಿಗೆ ತಲಾ 12 ಲಕ್ಷ ರೂಪಾಯಿ ಅಥವಾ ಆಯಾ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ದಂಡ ವಿಧಿಸಲಾಗಿತ್ತು.

ಇದನ್ನೂ ಓದಿ IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

ಲಕ್ನೋ ವಿರುದ್ಧ ಗೆಲುವು

ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 204 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಲಕ್ನೊ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಡೆಲ್ಲಿಯ ಪಿಚ್​ನಲ್ಲಿ ಲಕ್ನೊ ತಂಡಕ್ಕೆ ಇದು ದೊಡ್ಡ ಮೊತ್ತವಾಗಿರಲಿಲ್ಲ. ಆದರೆ, ಆ ತಂಡದ ಬ್ಯಾಟರ್​​ಗಳು ಗೆಲುವಿಗಾಗಿ ಹೆಚ್ಚಿನ ಉತ್ಸಾಹ ತೋರಲಿಲ್ಲ. ಇಶಾಂತ್ ಶರ್ಮಾ (34 ರನ್​ಗೆ 3 ವಿಕೆಟ್​​) ಮತ್ತು ಡೆಲ್ಲಿಯ ಬೌಲರ್​ಗಳ ಘಾತಕ ದಾಳಿಗೆ ಲಕ್ನೋ ಬ್ಯಾಟರ್​ಗಳು ಒಬ್ಬೊಬ್ಬರಾಗಿಯೇ ಪೆವಿಲಿಯನ್ ಹಾದಿ ಹಿಡಿದರು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ನಿಕೋಲಸ್​​ ಪೂರನ್​ (27 ಎಸೆತಕ್ಕೆ 61 ರನ್​) ಹಾಗೂ ಅರ್ಶದ್​ ಖಾನ್​ (33 ಎಸೆತಕ್ಕೆ 58 ರನ್​) ಅವರ ಹೋರಾಟದಿಂದಾಗಿ ಗುರಿಯ ಸನಿಹಕ್ಕೆ ಬಂದು ಮರ್ಯಾದೆ ಉಳಿಸಿಕೊಂಡಿತು. ಕ್ವಿಂಟನ್ ಡಿ ಕಾಕ್​ (12), ಕೆ. ಎಲ್​ ರಾಹುಲ್​ (05), ಮಾರ್ಕಸ್​ ಸ್ಟೊಯಿನಿಸ್​​ (05), ದೀಪಕ್ ಹೂಡ (0) ಆಯುಷ್​ ಬದೋನಿ (06), ಅವರ ಅಸಮರ್ಥತೆ ತಂಡವನ್ನು ಸೋಲಿನ ಸುಳಿಗೆ ತಳ್ಳಿತು.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಕೆಕೆಆರ್​139319 (+1.428)
ರಾಜಸ್ಥಾನ್​ ರಾಯಲ್ಸ್​​​128416 (+0.349)
ಚೆನ್ನೈ​​137614 (+0.528)
ಹೈದರಾಬಾದ್​127514 (+0.406)
ಡೆಲ್ಲಿ147714 (-0.377)
ಆರ್​ಸಿಬಿ136712 (+0.387)
ಲಕ್ನೋ136712 (-0.787)
ಗುಜರಾತ್​135711 (-1.063)
ಮುಂಬೈ13498 (-0.271)
ಪಂಜಾಬ್​​12488 (-0.423)
Continue Reading

ಕ್ರೀಡೆ

IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

IPL 2024:ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್​(Lucknow Super Giants) ಸೋಲು ಕಂಡ ಪರಿಣಾಮ ರಾಜಸ್ಥಾನ್ ರಾಯಲ್ಸ್​(Rajasthan Royals) ಇನ್ನೆರಡು ಪಂದ್ಯಗಳು ಬಾಕಿ ಇರುವಂತೆಯೇ ಪ್ಲೇ ಆಫ್​ಗೆ ಅಧಿಕೃತ ಪ್ರವೇಶ ಪಡೆದಿದೆ. ಒಂದೊಮ್ಮೆ ಲಕ್ನೋ ಗೆಲುವು ಸಾಧಿಸುತ್ತಿದ್ದರೆ, ರಾಜಸ್ಥಾನ್​ ಇನ್ನೊಂದು ಗೆಲುವು ಸಾಧಿಸಬೇಕಿತ್ತು.

VISTARANEWS.COM


on

IPL 2024
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​(IPL 2024) ಟೂರ್ನಿಯಲ್ಲಿ ಈಗಾಗಲೇ ಪಂಜಾಬ್​ ಕಿಂಗ್ಸ್​, ಮುಂಬೈ ಇಂಡಿಯನ್ಸ್​ ಮತ್ತು ಗುಜರಾತ್​ ಟೈಟಾನ್ಸ್​ ತಂಡಗಳು ಎಲಿಮಿನೇಟ್ ಆಗಿವೆ. ನಿನ್ನೆ (ಮಂಗಳವಾರ) ನಡೆದ ​ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್​(Lucknow Super Giants) ಸೋಲು ಕಂಡ ಪರಿಣಾಮ ರಾಜಸ್ಥಾನ್ ರಾಯಲ್ಸ್​(Rajasthan Royals) ಇನ್ನೆರಡು ಪಂದ್ಯಗಳು ಬಾಕಿ ಇರುವಂತೆಯೇ ಪ್ಲೇ ಆಫ್​ಗೆ ಅಧಿಕೃತ ಪ್ರವೇಶ ಪಡೆದಿದೆ. ಒಂದೊಮ್ಮೆ ಲಕ್ನೋ ಗೆಲುವು ಸಾಧಿಸುತ್ತಿದ್ದರೆ, ರಾಜಸ್ಥಾನ್​ ಇನ್ನೊಂದು ಗೆಲುವು ಸಾಧಿಸಬೇಕಿತ್ತು.

ರಾಜಸ್ಥಾನ್​ ಮತ್ತು ಕೆಕೆಆರ್​ ಪ್ಲೇ ಆಫ್​ ಟಿಕೆಟ್​ ಗಿಟ್ಟಿಸಿಕೊಂಡ ಕಾರಣ ಉಳಿದ 2 ಸ್ಥಾನಗಳಿಗೆ 5 ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಅಚ್ಚರಿ ಎಂದರೆ 7 ಪಂದ್ಯಗಳನ್ನು ಸೋತು ಕೊನೆಯ ಸ್ಥಾನಿಯಾಗಿದ್ದ ಆರ್​ಸಿಬಿ ಇನ್ನೇನು ಟೂರ್ನಿಯಿಂದ ಹೊರಬೀಳುತ್ತದೆ ಎನ್ನುವ ಸ್ಥಿತಿಯಿಂದ ಸತತ ಗೆಲುವಿನೊಂದಿಗೆ ಕಮ್​ಬ್ಯಾಕ್​ ಮಾಡಿ ಇದೀಗ 6ನೇ ಸ್ಥಾನಿಯಾಗಿದೆ. ಚೆನ್ನೈ ವಿರುದ್ಧ ಗೆದ್ದರೆ 4ನೇ ತಂಡವಾಗಿ ಪ್ಲೇ ಆಫ್ ಪ್ರವೇಶ ಪಡೆಯಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಕೆಕೆಆರ್​139319 (+1.428)
ರಾಜಸ್ಥಾನ್​ ರಾಯಲ್ಸ್​​​128416 (+0.349)
ಚೆನ್ನೈ​​137614 (+0.528)
ಹೈದರಾಬಾದ್​127514 (+0.406)
ಡೆಲ್ಲಿ147714 (-0.377)
ಆರ್​ಸಿಬಿ136712 (+0.387)
ಲಕ್ನೋ136712 (-0.787)
ಗುಜರಾತ್​135711 (-1.063)
ಮುಂಬೈ13498 (-0.271)
ಪಂಜಾಬ್​​12488 (-0.423)

ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 204 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಲಕ್ನೊ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

ಡೆಲ್ಲಿಯ ಪಿಚ್​ನಲ್ಲಿ ಲಕ್ನೊ ತಂಡಕ್ಕೆ ಇದು ದೊಡ್ಡ ಮೊತ್ತವಾಗಿರಲಿಲ್ಲ. ಆದರೆ, ಆ ತಂಡದ ಬ್ಯಾಟರ್​​ಗಳು ಗೆಲುವಿಗಾಗಿ ಹೆಚ್ಚಿನ ಉತ್ಸಾಹ ತೋರಲಿಲ್ಲ. ಇಶಾಂತ್ ಶರ್ಮಾ (34 ರನ್​ಗೆ 3 ವಿಕೆಟ್​​) ಡೆಲ್ಲಿಯ ಬೌಲರ್​ಗಳ ಅಬ್ಬರಕ್ಕೆ ಒಬ್ಬೊಬ್ಬರಾಗಿಯೇ ಪೆವಿಲಿಯನ್ ಹಾದಿ ಹಿಡಿದರು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ನಿಕೋಲಸ್​​ ಪೂರನ್​ (27 ಎಸೆತಕ್ಕೆ 61 ರನ್​) ಹಾಗೂ ಅರ್ಶದ್​ ಖಾನ್​ (33 ಎಸೆತಕ್ಕೆ 58 ರನ್​) ಅವರ ಹೋರಾಟದಿಂದಾಗಿ ಗುರಿಯ ಸನಿಹಕ್ಕೆ ಬಂದು ಮರ್ಯಾದೆ ಉಳಿಸಿಕೊಂಡಿತು. ಕ್ವಿಂಟನ್ ಡಿ ಕಾಕ್​ (12), ಕೆ. ಎಲ್​ ರಾಹುಲ್​ (05), ಮಾರ್ಕಸ್​ ಸ್ಟೊಯಿನಿಸ್​​ (05), ದೀಪಕ್ ಹೂಡ (0) ಆಯುಷ್​ ಬದೋನಿ (06), ಅವರ ಅಸಮರ್ಥತೆ ತಂಡವನ್ನು ಸೋಲಿನ ಸುಳಿಗೆ ತಳ್ಳಿತು.

Continue Reading

ಕ್ರಿಕೆಟ್

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

IPL 2024: ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 204 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಲಕ್ನೊ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ನವ ದೆಹಲಿ: ಸಂಘಟಿತ ಹೋರಾಟದ ಬಲದಿಂದ ಮಿಂಚಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ 17ನೇ (IPL 2024) ಅವೃತ್ತಿಯ ಐಪಿಎಲ್​ನ 64ನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ (Lucknow Super Giants) ವಿರುದ್ಧ 19 ರನ್​ಗಳ ಅಧೀಕಾರಯುತ ಗೆಲುವು ಸಾಧಿಸಿತು. ಇದು ಡೆಲ್ಲಿ ತಂಡಕ್ಕೆ ಹಾಲಿ ಆವೃತ್ತಿಯ ಲೀಗ್​ನ ಕೊನೇ ಪಂದ್ಯ. ಅದೇ ರೀತಿ ಐಪಿಎಲ್​​ನ ಕೊನೇ ಅಭಿಯಾನ ಕೂಡ. 14ರಲ್ಲಿ ಏಳು ಗೆಲುವು ಸಾಧಿಸಿರುವ ಡೆಲ್ಲಿ 14 ಅಂಕಗಳನ್ನು ಸಂಪಾದಿಸಿದೆ. ಆದರೆ, ಇನ್ನೂ ಐದನೇ ಸ್ಥಾನದಲ್ಲಿದೆ. ಈ ತಂಡ ನಾಲ್ಕರೊಳಗೆ ಪ್ರವೇಶ ಪಡೆಯುವ ಯಾವುದೇ ಸಾಧ್ಯತೆಗಳು ಇಲ್ಲದ ಕಾರಣ ಅವರ ಅಭಿಯಾನ ಕೊನೆಗೊಂಡಿದೆ. ಇದೇ ವೇಳೆ ಸತತ ಮೂರು ಸೋಲುಗಳಿಗೆ ಒಳಗಾದ ಲಕ್ನೊ ತಂಡ ನಿರಾಶಾದಾಯಕ ಅಭಿಯಾನ ಮುಂದುವರಿಸಿತು.

ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 204 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಲಕ್ನೊ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ: Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

ಡೆಲ್ಲಿಯ ಪಿಚ್​ನಲ್ಲಿ ಲಕ್ನೊ ತಂಡಕ್ಕೆ ಇದು ದೊಡ್ಡ ಮೊತ್ತವಾಗಿರಲಿಲ್ಲ. ಆದರೆ, ಆ ತಂಡದ ಬ್ಯಾಟರ್​​ಗಳು ಗೆಲುವಿಗಾಗಿ ಹೆಚ್ಚಿನ ಉತ್ಸಾಹ ತೋರಲಿಲ್ಲ. ಇಶಾಂತ್ ಶರ್ಮಾ (34 ರನ್​ಗೆ 3 ವಿಕೆಟ್​​) ಡೆಲ್ಲಿಯ ಬೌಲರ್​ಗಳ ಅಬ್ಬರಕ್ಕೆ ಒಬ್ಬೊಬ್ಬರಾಗಿಯೇ ಪೆವಿಲಿಯನ್ ಹಾದಿ ಹಿಡಿದರು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ನಿಕೋಸಲ್​ ಪೂರನ್​ (27 ಎಸೆತಕ್ಕೆ 61 ರನ್​) ಹಾಗೂ ಅರ್ಶದ್​ ಖಾನ್​ (33 ಎಸೆತಕ್ಕೆ 58 ರನ್​) ಅವರ ಹೋರಾಟದಿಂದಾಗಿ ಗುರಿಯ ಸನಿಹಕ್ಕೆ ಬಂದು ಮರ್ಯಾದೆ ಉಳಿಸಿಕೊಂಡಿತು. ಕ್ವಿಂಟನ್ ಡಿ ಕಾಕ್​ (12), ಕೆ. ಎಲ್​ ರಾಹುಲ್​ (05), ಮಾರ್ಕ್ ಸ್ಟೊಯ್ನಿಸ್​ (05), ದೀಪಕ್ ಹೂಡ (0) ಆಯುಷ್​ ಬದೋನಿ (06), ಅವರ ಅಸಮರ್ಥತೆ ತಂಡವನ್ನು ಸೋಲಿನ ಸುಳಿಗೆ ತಳ್ಳಿತು.

ಡೆಲ್ಲಿಯ ಭರ್ಜರಿ ಬ್ಯಾಟಿಂಗ್​

ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಫೇಸರ್ ಮೆಗ್​ ಕುರ್ಕ್ ಅವರ ಶೂನ್ಯ ಸಂಪಾದನೆ ಮೂಲಕ ಆಘಾತಕ್ಕೆ ಒಳಗಾಯಿತು. ಆದರೆ ಅಭಿಷೇಕ್ ಪೊರೆಲ್​ 58 ರನ್ ಬಾರಿಸಿ ತಂಡಕ್ಕೆ ನೆರವಾದರು. ಬಳಿಕ ಶಾಯ್​ ಹೋಪ್​ 38 ರನ್ ಬಾರಿಸಿದರೆ ರಿಷಭ್ ಪಂತ್​ 33 ರನ್ ಕೊಡುಗೆ ಕೊಟ್ಟರು. ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್​ 25 ಎಸೆತಕ್ಕೆ 57 ರನ್ ಬಾರಿಸಿ ದೊಡ್ಡ ಮೊತ್ತ ಪೇರಿಸಲು ನೆರವಾದರು. ಲಕ್ನೊ ಪರ ನವಿನ್ ಉಲ್ ಹಕ್ 5 ವಿಕೆಟ್​ ಪಡೆದರೂ 52 ರನ್ ಬಿಟ್ಟುಕೊಟ್ಟು ದುಬಾರಿ ಎನಿಸಿದರು.

Continue Reading
Advertisement
CAA
ದೇಶ3 mins ago

CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್‌ ಕೂಡ ಹಸ್ತಾಂತರ!

Kannada New Movie swapna mantapa shooting compleated
ಸ್ಯಾಂಡಲ್ ವುಡ್25 mins ago

Kannada New Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’ ಚಿತ್ರೀಕರಣ ಮುಕ್ತಾಯ

ಫ್ಯಾಷನ್26 mins ago

Star saree fashion: ಯುವತಿಯರನ್ನು ಸೆಳೆಯುತ್ತಿದೆ ನಟಿ ಭಾವನಾ ರಾವ್‌ ಸ್ಯಾಟೀನ್‌ ಸಿಲ್ಕ್‌ ಸೀರೆ

Google
ವಿದೇಶ39 mins ago

Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Crazy MS Dhoni fan
ಕ್ರಿಕೆಟ್39 mins ago

Crazy MS Dhoni fan: 2100 ಕಿ.ಮೀ ದೂರ ಸೈಕಲ್​ ತುಳಿದು ದಿಲ್ಲಿಯಿಂದ ಚೆನ್ನೈಗೆ ಬಂದ ಧೋನಿ ಅಭಿಮಾನಿ; 23 ದಿನಗಳಲ್ಲಿ ಮಿಷನ್​ ಕಂಪ್ಲೀಟ್​

Money Guide
ಮನಿ-ಗೈಡ್41 mins ago

Money Guide: ಪ್ಯಾನ್‌ ಕಾರ್ಡ್‌ ಕಳೆದುಹೋದರೆ ಚಿಂತೆ ಬೇಡ; ಮನೆಯಲ್ಲೇ ಕೂತು ಡುಬ್ಲಿಕೇಟ್‌ ಪಡೆಯುವ ವಿಧಾನ ಇಲ್ಲಿದೆ

Prajwal Revanna Case Prajwal never boarded a flight from Germany
ಕ್ರೈಂ44 mins ago

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

B C Mylarappa
ಕರ್ನಾಟಕ47 mins ago

B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

Job Alert
ಉದ್ಯೋಗ48 mins ago

Job Alert: ಐಐಎಂಬಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

House of the Dragon season 2 new trailer hints at a bloody
ಸಿನಿಮಾ1 hour ago

House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ12 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ22 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌