Site icon Vistara News

IPL 2025: ಕೆಕೆಆರ್​ ತಂಡದ ಮೆಂಟರ್​ ಆಗಲಿದ್ದಾರಾ ರಾಹುಲ್ ದ್ರಾವಿಡ್?

IPL 2025

IPL 2025: KKR Approaches Rahul Dravid For Mentor's Post As Gambhir Leaves For India Stint

ಕೋಲ್ಕತ್ತಾ: ಟೀಮ್​ ಇಂಡಿಯಾ ಕೋಚ್​ ಹುದ್ದೆಯಿಂದ ನಿವೃತ್ತಿಯಾಗಿರುವ ರಾಹುಲ್ ದ್ರಾವಿಡ್(Rahul Dravid) ಇನ್ನು ಮುಂದೆ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ನಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ. ಕೋಲ್ಕತ್ತಾ ನೈಟ್​ ರೇಡರ್ಸ್(KKR) ಫ್ರಾಂಚೈಸಿಯು ದ್ರಾವಿಡ್​ ಅವರನ್ನು ಮೆಂಟರ್​ ಆಗಿ ನೇಮಕ ಮಾಡಲು ಈಗಾಗಲೇ ಮಾತುಕತೆ ನಡೆಸಿದೆ ಎಂದು ನ್ಯೂಸ್​18 ಬೆಂಗಾಲ್​ ವರದಿ ಮಾಡಿದೆ.

“ರಾಹುಲ್​ ದ್ರಾವಿಡ್​ ಅವರು ಎರಡು ವರ್ಷಗಳ ಒಪ್ಪಂದಕ್ಕಾಗಿ ಐಪಿಎಲ್ ತಂಡದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಒಂದು ಸುತ್ತಿನ ಮಾತುಕತೆ ಕೂಡ ನಡೆದಿದೆ” ಎಂದುನ್ಯೂಸ್​18 ಬೆಂಗಾಲ್​ ವರದಿ ಮಾಡಿದೆ. ರಾಹುಲ್ ದ್ರಾವಿಡ್ ಅವರು ಈ ಹಿಂದೆ ಐಪಿಎಲ್​ನಲ್ಲಿ ರಾಜಸ್ಥಾನ ರಾಯಲ್ಸ್​ ತಂಡದ ಕೋಚ್​ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಗೌತಮ್​ ಗಂಭೀರ್​ ಅವರು ಟೀಮ್​ ಇಂಡಿಯಾದ ಕೋಚ್​ ಆಗುವುದು ಖಚಿತವಾಗಿದೆ. ಈಗಾಗಲೇ ಅವರು ಕೆಕೆಆರ್​ ತಂಡದ ಮೆಂಟರ್​ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಗಂಭೀರ್​ ಅವರಿಂದ ತೆರೆವಾದ ಸ್ಥಾನಕ್ಕೆ ಇದೀಗ ದ್ರಾವಿಡ್​ ಅವರನ್ನು ಮೆಂಟರ್​ ಮಾಡಲು ಕೆಕೆಆರ್​ ಮುಂದಾಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ Rahul Dravid: ದ್ರಾವಿಡ್​ಗೆ ಗಾರ್ಡ್‌ ಆಫ್‌ ಹಾನರ್‌ ಸಲ್ಲಿಸಿದ ವಿದ್ಯಾರ್ಥಿಗಳು; ವಿಡಿಯೊ ವೈರಲ್​

ಭಾರತಕ್ಕೆ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆಲ್ಲಿಸಿದ ಕೋಚ್​ ದ್ರಾವಿಡ್​ ಅವರನ್ನು ಕೆಕೆಆರ್​ ಮಾತ್ರವಲ್ಲದೆ ಇದುವರೆಗೂ ಕಪ್​ ಗೆಲ್ಲದ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಕೂಡ ಕೋಚ್​ ಮಾಡಲು ರೇಸ್​ನಲ್ಲಿವೆ ಎಂದು ಹೇಳಲಾಗಿದೆ. ಡೆಲ್ಲಿ ತಂಡದ ಮೆಂಟರ್​ ಆಗಿರುವ ಸೌರವ್​ ಗಂಗೂಲಿ ಅವರು ದ್ರಾವಿಡ್​ ಮನವೊಲಿಸಿ ಕೋಚ್​ ಆಗುವಂತೆ ಒಪ್ಪಿಸುವ ಸಾಧ್ಯತೆಯೂ ಇದೆ. ಏಕೆಂದರೆ ದ್ರಾವಿಡ್​ ಅವರನ್ನು ಟೀಮ್​ ಇಂಡಿಯಾದ ಕೋಚ್​ ಆಗಿ ಮಾಡಿದ್ದು ಕೂಡ ಗಂಗೂಲಿ. ಬಿಸಿಸಿಐ ಅಧ್ಯಕ್ಷರಾಗಿದ್ದ ವೇಳೆ ಗಂಗೂಲಿ ಒತ್ತಾಯ ಪೂರ್ವಕವಾಗಿ ದ್ರಾವಿಡ್​ ಅವರನ್ನು ಕೋಚ್​ ಆಗುವಂತೆ ಒಪ್ಪಿಸಿದ್ದರು. ಕುಟುಂಬಕ್ಕೆ ಹೆಚ್ಚಿನ ಒತ್ತು ನೀಡಲು ಸಾಧ್ಯವಾಗುತ್ತಿಲ್ಲ ಎನ್ನುವ ಕಾರಣಕ್ಕೆ ಕೋಚಿಂಗ್​ ಹುದ್ದೆಯಲ್ಲಿ ಮುಂದುವರಿಯಲು ಹಿಂದೇಟು ಹಾಕಿರುವ ದ್ರಾವಿಡ್​ ಐಪಿಎಲ್​ ಕೋಚಿಂಗ್​ ನಡೆಸಲಿದ್ದಾರಾ ಎಂದು ಕಾದು ನೋಡಬೇಕಿದೆ.

ರಾಹುಲ್​ ದ್ರಾವಿಡ್(Rahul Dravid)​ ಅವರಿಗೆ ಬೆಂಗಳೂರಿನ(Bengaluru) ಕ್ರಿಕೆಟ್​ ಅಕಾಡೆಮಿಯಲ್ಲಿ ಕ್ರಿಕೆಟ್​ ವಿದ್ಯಾರ್ಥಿಗಳು ಗಾರ್ಡ್‌ ಆಫ್‌ ಹಾನರ್‌ (ಗೌರವ ವಂದನೆ) ಮೂಲಕ(guard of honour) ಅಭಿನಂದಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ರಾಹುಲ್​ ದ್ರಾವಿಡ್​ ಅವರು ಎನ್​ಸಿಎ ಕ್ರಿಕೆಟ್​ ಅಕಾಡೆಮಿಗೆ(cricket academy in Bengaluru) ಆಗಮಿಸುತ್ತಿದ್ದಂತೆ ಅಧಿಕಾರಿಗಳು ಮತ್ತು ಇಲ್ಲಿ ಕ್ರಿಕೆಟ್​ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳು ಬ್ಯಾಟ್​ ಎತ್ತಿ ಗಾರ್ಡ್‌ ಆಫ್‌ ಹಾನರ್‌ ಮೂಲಕ ಗೌರವ ಸಲ್ಲಿಸಿದರು. ದ್ರಾವಿಡ್​ ಕೂಡ ಸಂತಸದಿಂದಲೇ ಎಲ್ಲರ ಕೈ ಕುಲುಕಿ ಧನ್ಯವಾದ ತಿಳಿಸಿದರು. ಭಾರತ ಟಿ20 ವಿಶ್ವಕಪ್​ ಗೆಲ್ಲುವಲ್ಲಿ ದ್ರಾವಿಡ್​ ಅವರ ಮಾರ್ಗದರ್ಶನ ಅಮೋಘವಾಗಿತ್ತು.

ಪ್ರಧಾನ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರಿಗೆ “ಭಾರತ ರತ್ನ” ಪ್ರಶಸ್ತಿಯಿಂದ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುನೀಲ್ ಗವಾಸ್ಕರ್ ಒತ್ತಾಯಿಸಿದ್ದಾರೆ. “ಭಾರತ ಸರಕಾರವು ದ್ರಾವಿಡ್​ಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದರೆ ಅದು ಅವರಿಗೆ ಸಲ್ಲುವ ಸೂಕ್ತ ಗೌರವವಾಗುತ್ತದೆ. ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ದ್ರಾವಿಡ್​ ಆಟಗಾರರಾಗಿ ಮತ್ತು ತಂಡದ ನಾಯಕರಾಗಿ ವಿದೇಶಗಳಲ್ಲಿ ಭಾರತಕ್ಕೆ ಗೆಲುವು ತಂದು ಕೊಟ್ಟಿದ್ದಾರೆ. ವೆಸ್ಟ್ ಇಂಡೀಸ್​ನಲ್ಲಿ ಗೆಲ್ಲುವುದು ಅಸಾಧ್ಯ ಎಂಬ ಕಾಲದಲ್ಲಿ ಅವರು ಭಾರತಕ್ಕೆ ಸರಣಿ ಗೆಲುವನ್ನು ತಂದಿದ್ದಾರೆ. ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿಗಳನ್ನು ಗೆದ್ದಿರುವ ಕೇವಲ ಮೂರು ಭಾರತೀಯ ನಾಯಕರ ಪೈಕಿ ಅವರು ಕೂಡ ಒಬ್ಬರಾಗಿದ್ದಾರೆ. ಈ ಹಿಂದೆ, ಅವರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಅತ್ಯುತ್ತಮ ಕ್ರಿಕೆಟ್ ಪ್ರತಿಭೆಗಳನ್ನು ಹೊರತಂದಿದ್ದಾರೆ. ಬಳಿಕ ಭಾರತೀಯ ಹಿರಿಯರ ಕ್ರಿಕೆಟ್ ತಂಡದ ಕೋಚ್ ಆಗಿ ಉತ್ತಮ ನಿರ್ವಹಣೆ ನೀಡಿದ್ದಾರೆ ಎಂದು ಗವಾಸ್ಕರ್​ ಬರೆದುಕೊಂಡಿದ್ದಾರೆ.

Exit mobile version