IPL 2023 : ಸತತವಾಗಿ ಸುರಿದ ಮಳೆ, ಐಪಿಎಲ್​ ಫೈನಲ್ ಮೀಸಲು ದಿನಕ್ಕೆ ಮುಂದೂಡಿಕೆ Vistara News
Connect with us

ಕ್ರೀಡೆ

IPL 2023 : ಸತತವಾಗಿ ಸುರಿದ ಮಳೆ, ಐಪಿಎಲ್​ ಫೈನಲ್ ಮೀಸಲು ದಿನಕ್ಕೆ ಮುಂದೂಡಿಕೆ

ಕಟ್​ಆಫ್​ ಸಮಯದ ತನಕವೂ ಮಳೆ ಸುರಿದ ಕಾರಣ ಫೀಲ್ಡ್​ ಅಂಪೈರ್​ಗಳು ಮ್ಯಾಚ್​ ರೆಫರಿ ಪಂದ್ಯವನ್ನು ಮುಂದೂಡಿಕೆ ಮಾಡಲು ನಿರ್ಧಾರ ಕೈಗೊಂಡರು.

VISTARANEWS.COM


on

IPL 2023 Final
Koo

ಅಹಮದಾಬಾದ್​: ಐಪಿಎಲ್​ 16ನೇ ಆವೃತ್ತಿಯ ಫೈನಲ್ ಪಂದ್ಯ ಮೀಸಲು ದಿನಕ್ಕೆ ಮುಂದೂಡಿಕೆಯಾಗಿದೆ. ಮೇ 29 ಸೋಮವಾರ ಮೀಸಲು ದಿನ. ಅಂದು ಪೂರ್ಣ 20 ಓವರ್​ಗಳ ಪಂದ್ಯ ನಡೆಯುವ ನಿರೀಕ್ಷೆಯಿದೆ. ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ ಹಾಗೂ ಗುಜರಾತ್​ ಟೈಟನ್ಸ್​ ತಂಡಗಳ ನಡುವೆ ಪ್ರಶಸ್ತಿ ಸುತ್ತಿನ ಪಂದ್ಯ ಆಯೋಜನೆಗೊಂಡಿತ್ತು. ಆದರೆ, ರಾತ್ರಿ 11 ಗಂಟೆಯವರೆಗೂ ಮಳೆ ನಿರಂತರವಾಗಿ ಗುಡುಗು ಸಹಿತ ಮಳೆ ಸುರಿದ ಕಾರಣ ಪಂದ್ಯವನ್ನು ಮುಂದೂಡಿಕೆ ಮಾಡಲು ರೆಫರಿ ಸೂಚಿಸಿದರು.

ಐಪಿಎಲ್​ನ 16 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಮೊದಲ ಬಾರಿಗೆ ಋತುವಿನ ಚಾಂಪಿಯನ್​ ತಂಡವನ್ನು ನಿರ್ಧರಿಸಲು ಮೀಸಲು ದಿನದ ಮೊರೆ ಹೋಗಲಾಯಿತು. ಸೋಮವಾರವೂ ಮಳೆ ಸುರಿಯುವ ಮುನ್ಸೂಚನೆಯಿದ್ದು , ಅದು ನಿಜವಾದರೆ ಚಾಂಪಿಯನ್​ಗಳ ನಿರ್ಧಾರ ಮತ್ತಷ್ಟು ಕ್ಲಿಷ್ಟವಾಗಬಹುದು.

ಭಾನುವಾರ ಸಂಜೆ ಸಂಜೆ 7 ರಿಂದ ರಾತ್ರಿ 11 ರವರೆಗೆ ಅಭಿಮಾನಿಗಳು, ಆಟಗಾರರು, ಕ್ರಿಕೆಟ್​​ ತಜ್ಞರು ಫಲಿತಾಂಶದ ನಿರೀಕ್ಷೆಯಲ್ಲಿದ್ದರು. ರಾತ್ರಿ 9 ಗಂಟೆಗೆ ಒಂದು ಬಾರಿ ಮಳೆ ನಿಂತಾಗಲೂ ಪಂದ್ಯ ನಡೆಯುವ ಸೂಚನೆ ದೊರೆಯಿತು. ಪಿಚ್​​ಗೆ ಹೊದಿಸಲಾಗಿದ್ದ ಟಾರ್ಪಾಲ್​ ಕವರ್​ಗಳನ್ನು ಹೊರಕ್ಕೆ ತೆಗೆಯಲಾಗಿತ್ತು. ಆಟಗಾರರೂ ವಾರ್ಮ್​ಅಪ್​ಗಾಗಿ ಮೈದಾನಕ್ಕೆ ಇಳಿದಿದ್ದರು. ಈ ಸಕಾರಾತ್ಮಕ ವಾತಾವರಣ ಹಚ್ಚು ಹೊತ್ತು ಇರಲಿಲ್ಲ. ತುಂತುರು ಮಳೆ ದೊಡ್ಡ ದೊಡ್ಡ ಹನಿಯಾಗಿ ಪರಿವರ್ತನೆಗೊಂಡಿತು. ನಾಲ್ಕು ಗಂಟೆಗಳ ದೀರ್ಘ ಕಾಯುವಿಕೆ ಬಳಿಕ ಮುಂದೂಡಿಕೆ ನಿರ್ಧಾರ ಕೈಗೊಳ್ಳಲಾಯಿತು.

ಇದನ್ನೂ ಓದಿ : IPL 2023 : ಎರಡನೇ ಮಗಳು ಹುಟ್ಟಿದ ಸಂತಸ ಹಂಚಿಕೊಂಡ ಅಂಬಾಟಿ ರಾಯುಡು

ರಾತ್ರಿ 10:30 ರ ಸುಮಾರಿಗೆ ಮೀಸಲು ದಿನದ ಸಾಧ್ಯತೆಯ ಚರ್ಚೆ ಆರಂಭಗೊಂಡಿತ್ತು. ಫೀಲ್ಡ್​ ಅಂಪೈರ್​​ಗಳಾದ ನಿತಿನ್ ಮೆನನ್ ಮತ್ತು ರಾಡ್ ಟಕರ್ ಅವರು ಪರಿಸ್ಥಿತಿಗಳನ್ನು ಉದ್ದೇಶಿಸಿ ಮಾತನಾಡಿ, ಇಷ್ಟೊಂದು ಮಳೆಯಾದರೆ ಆಟವಾಡಿಸಲು ಮೈದಾನ ಅನುಕೂಲಕರವಾಗಿರುವುದಿಲ್ಲ ಎಂದು ಹೇಳಿದರು. ಈ ವೇಳೆಯೇ ಮುಂದೂಡಿಕೆ ನಿರ್ಧಾರವಾಯಿತು.

ರಾತ್ರಿ 9 ಗಂಟೆ ಸುಮಾರಿಗೆ ಮಳೆ ಕಡಿಮೆಯಾದಾಗ, ಪರಿಷ್ಕೃತ ಆಟದ ಪರಿಸ್ಥಿತಿಗಳನ್ನು ವಿವರಿಸಲಾಯಿತು. ಒಂದು ವೇಳೆ ರಾತ್ರಿ 9.35ಕ್ಕೆ ಮುಂಚಿತವಾಗಿ ಫೈನಲ್ ಪಂದ್ಯ ಆರಂಭವಾಗಿದ್ದರೆ 20 ಓವರ್​ಗಳ ಪೂರ್ಣ ಪಂದ್ಯ ನಡೆಯುತ್ತಿತ್ತು. ರಾತ್ರಿ 9:45 ಕ್ಕೆ ಪ್ರಾರಂಭವಾಗಿದ್ದರೆ ತಲಾ 19 ಓವರ್​ಗಳ ಪಂದ್ಯ ನಡೆಯುತ್ತಿತ್ತು. ರಾತ್ರಿ 10 ಗಂಟೆಗಾಧರೆ 17 ಓವರ್​ಗಳ ಪಂದ್ಯ ಮತ್ತು ರಾತ್ರಿ 10:15 ಮತ್ತು 10:30 ರವರೆ ಪ್ರತಿ ತಂಡಕ್ಕೆ 15 ಓವರ್​ಗಳ ಪಂದ್ಯ ನಡೆಸುವ ತೀರ್ಮಾನ ಕೈಗೊಳ್ಳಲಾಗಿತ್ತು. 12:06ಕ್ಕೆ ಆರಂಭಗೊಂಡಿದ್ದರೆ ಐದು ಓವರ್​ಗಳ ಶೂಟೌಟ್ ಮೂಲಕ ವಿಜೇತರ ನಿರ್ಧಾರವಾಗುತ್ತಿತ್ತು. ಅಚ್ಚರಿ ಎಂಬಂತೆ ರಾತ್ರಿ 10:50ಕ್ಕೆ ಮಳೆ ನಿಂತಿತು. ಆದರೆ, ಅಧಿಕಾರಿಗಳ ಆಸಕ್ತಿ ಮೀಸಲು ದಿನಕ್ಕೆ ಪಂದ್ಯವನ್ನು ಮುಂದೂಡುವುದಾಗಿತ್ತು.

ಮೀಸಲು ದಿನ (ಅಂದರೆ ಮೇ 29) ರದ್ದಾದರೆ, ಗುಜರಾತ್ ಟೈಟಾನ್ಸ್ ಐಪಿಎಲ್ 2023 ರ ಚಾಂಪಿಯನ್ ಆಗಲಿದೆ, ಏಕೆಂದರೆ ಗುಂಪು ಹಂತದ ನಂತರ ಚೆನ್ನೈ ಸೂಪರ್ ಕಿಂಗ್ಸ್ (2) ಗಿಂತ ಹೆಚ್ಚಿನ (1) ಸ್ಥಾನವನ್ನು ಗಳಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Asian Games 2023 : ಏಷ್ಯನ್ ಗೇಮ್ಸ್​ನಲ್ಲಿ ನೇಪಾಳ ತಂಡ ಸೃಷ್ಟಿಸಿದ ಮಾಡಿದ ದಾಖಲೆಗಳ ವಿವರ ಇಲ್ಲಿದೆ

ಏಷ್ಯನ್ ಗೇಮ್ಸ್​ನಲ್ಲಿ (Asian Games 2023) ತನ್ನ ಮೊದಲ ಪಂದ್ಯದಲ್ಲಿಯೇ ನೇಪಾಳ ತಂಡ ಹಲವಾರು ದಾಖಲೆಗಳನ್ನು ಸೃಷ್ಟಿಸಿದೆ.

VISTARANEWS.COM


on

Nepal Team
Koo

ನವದೆಹಲಿ: ಏಷ್ಯನ್ ಗೇಮ್ಸ್ 2023 ರ (Asian Games 2023) ಪುರುಷರ ಟಿ 20 ಐ ಕ್ರಿಕೆಟ್ ಪಂದ್ಯಾವಳಿಯ ಮೊದಲ ಮುಖಾಮುಖಿ ನೇಪಾಳ ಮತ್ತು ಮಂಗೋಲಿಯಾ ನಡುವೆ ಬುಧವಾರ ಚೀನಾದ ಹ್ಯಾಂಗ್ಝೌನಲ್ಲಿ ಏರ್ಪಟ್ಟಿತು. ಈ ಪಂದ್ಯ ಸಂಪೂರ್ಣವಾಗಿ ಏಕಮುಖವಾಗಿ ನಡೆಯಿತು. ನೇಪಾಳ ತಂಡ ದುರ್ಬಲವಾಗಿದ್ದರೂ ಮಂಗೋಲಿಯಾ ಕ್ರಿಕೆಟ್ ಶಿಶು. ಹೀಗಾಗಿ ನೇಪಾಳ ತಂಡ ಮಂಗೋಲಿಯಾವನ್ನು ಬಹುತೇಕ ಜರ್ಜರಿತಗೊಳಿಸಿತು. ಬೌಲಿಂಗ್ ಹಾಗೂ ಬ್ಯಾಟಿಂಗ್ ಮೂಲಕ ಮಿಂಚಿ ಹಲವಾರು ನೂತನ ದಾಖಲೆಗಳನ್ನು ಸೃಷ್ಟಿಸಿತು. ನೇಪಾಳ ತಂಡಕ್ಕೆ 273 ರನ್​​ಗಳ ದಾಖಲೆಯ ಜಯವೂ ದೊರೆಯಿತು.

ಪಿಂಗ್ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ನಂತರ ಮಂಗೋಲಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಚೊಚ್ಚಲ ಏಷ್ಯಾಕಪ್ ಅಭಿಯಾನದಲ್ಲಿ ಹೊಸದಾಗಿ ಕಣಕ್ಕಿಳಿದ ನೇಪಾಳ, ಮೊದಲ ಐದು ಓವರ್ ಗಳಲ್ಲಿ ಆರಂಭಿಕ ಆಟಗಾರರು 42 ರನ್ ಸೇರಿಸುವ ಮೂಲಕ ಉತ್ತಮ ಆರಂಭ ಪಡೆಯಿತು. ಬಳಿಕ ಕುಶಾಲ್ ಮಲ್ಲಾ ಹಾಗೂ ನಾಯಕ ರೋಹಿತ್ ಪೌಡೆಲ್ ಕೇವಲ 65 ಎಸೆತಗಳಲ್ಲಿ 193 ರನ್​ಗಳ ಜೊತೆಯಾಟವಾಡಿದರು.

ಈ ಪಂದ್ಯದಲ್ಲಿ ಸೃಷ್ಟಿಯಾದ ದಾಖಲೆಗಳು ಇಂತಿವೆ

  • ಕುಶಾಲ್​ ಮಲ್ಲಾ ಕೇವಲ 34 ಎಸೆತಗಳಲ್ಲಿ ಟಿ 20 ಐ ಕ್ರಿಕೆಟ್​ನಲ್ಲಿ ವೇಗವಾಗಿ ಶತಕ ಬಾರಿಸಿದರು. ಈ ಹಿಂದೆ ರೋಹಿತ್ ಶರ್ಮಾ ಮತ್ತು ಡೇವಿಡ್ ಮಿಲ್ಲರ್ ತಲಾ 35 ಎಸೆತಗಳಲ್ಲಿ ಶತಕ ಬಾರಿಸಿದ್ದರು. 19ರ ಹರೆಯದ ಮಲ್ಲಾ 50 ಎಸೆತಗಳಲ್ಲಿ 8 ಬೌಂಡರಿ ಹಾಗೂ 12 ಸಿಕ್ಸರ್ ಬಾರಿಸಿ ಅಜೇಯ 137 ರನ್ ಬಾರಿಸಿದ್ದರು.
  • ಈ ಪಂದ್ಯದಲ್ಲಿ ನೇಪಾಳ ಮುರಿದ ಅನೇಕ ದಾಖಲೆಗಳಲ್ಲಿ ಇದು ಒಂದಾಗಿದೆ. ನಾಯಕ ರೋಹಿತ್​ ಪೌಡೆಲ್ 27 ಎಸೆತಗಳಲ್ಲಿ 61 ರನ್ ಗಳಿಸಿ ಔಟಾದ ನಂತರ ಆಲ್ ರೌಂಡರ್ ದೀಪೇಂದ್ರ ಸಿಂಗ್ ಐರಿ ಬಂದರು. 23ರ ಹರೆಯದ ಆಲ್​​ರೌಂಡರ್​ ಟಿ20 ಕ್ರಿಕೆಟ್​​ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸುವ ಮೂಲಕ ಕ್ರಿಕೆಟ್ ಇತಿಹಾದಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ದೀಪೇಂದ್ರ ತಮ್ಮ ಅರ್ಧ ಶತಕವನ್ನು ತಲುಪಲು ಕೇವಲ ಒಂಬತ್ತು ಎಸೆತಗಳನ್ನು ತೆಗೆದುಕೊಂಡರು. 2007ರ ಟಿ20 ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಯುವರಾಜ್ ಸಿಂಗ್ ಅವರ 16 ವರ್ಷಗಳ ದಾಖಲೆಯನ್ನು ಮುರಿದರು. ಯುವ ಆಟಗಾರ 10 ಎಸೆತಗಳಲ್ಲಿ 52 ರನ್ ಗಳಿಸಿ ಅಜೇಯರಾಗಿ ಉಳಿದರು, ಮಲ್ಲಾ ಅವರೊಂದಿಗೆ 11 ಎಸೆತಗಳಲ್ಲಿ 55 ರನ್​ಗಳ ಜೊತೆಯಾಟವನ್ನು ಆಡಿದರು.
  • ಅಂತಿಮವಾಗಿ ನೇಪಾಳ 20 ಓವರ್​ಗೆ 3 ವಿಕೆಟ್ ನಷ್ಟಕ್ಕೆ 314 ರನ್ ಕಲೆಹಾಕಿತು. ಈ ಮೂಲಕ ಟಿ20 ಕ್ರಿಕೆಟ್​​ನಲ್ಲಿ 300ಕ್ಕೂ ಅಧಿಕ ರನ್ ಬಾರಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. 2019ರಲ್ಲಿ ಐರ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ 3 ವಿಕೆಟ್ ನಷ್ಟಕ್ಕೆ 278 ರನ್ ಗಳಿಸಿತ್ತು. ರೋಹಿತ್​ ಪೌಡೆ್​ ಬಳಗ ತಮ್ಮ ಇನ್ನಿಂಗ್ಸ್ ನಲ್ಲಿ 26 ಸಿಕ್ಸರ್ ಗಳನ್ನು ಬಾರಿಸಿದರು. ಇದು ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ ಬಾರಿಸಿದ 22 ಸಿಕ್ಸರ್​ಗಳ ದಾಖಲೆಯನ್ನು ಹಿಮ್ಮೆಟ್ಟಿಸಿತು. ಟಿ20 ಐ ಇನ್ನಿಂಗ್ಸ್​​​ನಲ್ಲಿ ದಾಖಲಾದ ಅತಿ ಹೆಚ್ಚು ಸಿಕ್ಸರ್​ಗಳ ದಾಖಲೆ ಎನಿಸಿಕೊಂಡಿತು.
  • ಗುರಿ ಬೆನ್ನಟ್ಟಿದ ಮಂಗೋಲಿಯಾ 13.1 ಓವರ್ ಗಳಲ್ಲಿ ಕೇವಲ 41 ರನ್ ಗಳಿಗೆ ಆಲೌಟ್ ಆಯಿತು. 273 ರನ್ ಗಳ ಭರ್ಜರಿ ಜಯ ಸಾಧಿಸಿತು. ಇದು ಟಿ20ಐ ಕ್ರಿಕೆಟ್​​ನಲ್ಲಿ ರನ್​ಗಳ ವಿಷಯದಲ್ಲಿ ಅತಿ ದೊಡ್ಡ ಅಂತರದ ಗೆಲುವು.

Continue Reading

Live News

ind vs Aus : ಆಸ್ಟ್ರೇಲಿಯಾ ತಂಡದ ಮೊದಲ ವಿಕೆಟ್​ ಪತನ, ಡೇವಿಡ್ ವಾರ್ನರ್​ 56 ರನ್​ಗೆ ಔಟ್​​

ಭಾರತ ತಂಡ ಮೊದಲೆರಡು ಪಂದ್ಯಗಳನ್ನು ಗೆದ್ದಿದ್ದು ಸರಣಿಯನ್ನು ಕೈವಶ ಮಾಡಿಕೊಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ಭಾರತಕ್ಕೆ ಕ್ಲೀನ್​ ಸ್ವೀಪ್​ ಸಾಧನೆ ಮಾಡುವ ಅವಕಾಶವಿದೆ.

VISTARANEWS.COM


on

ODI AUS
Koo

ರಾಜ್​ಕೋಟ್​: ಇಲ್ಲಿನ ಎಸ್​​ಸಿ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಭಾರತ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ (ind vs Aus) ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಎರಡೂ ತಂಡಗಳು ತಲಾ ಐದು ಬದಲಾವಣೆಗಳನ್ನು ಮಾಡಿವೆ.

ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್​ ಪುನರಾಗಮನ ಮಾಡಿದರೆ, ತನ್ವೀರ್ ಸಂಗಾ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ರೋಹಿತ್ ಶರ್ಮಾ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಉಲ್ಲೇಖಿಸಿದಂತೆ ಭಾರತದಲ್ಲೂ ಬದಲಾವಣೆಗಳು ಸಾಕಷ್ಟಾಗಿವೆ. ನಾಯಕ ಮತ್ತು ವಿರಾಟ್ ಕೊಹ್ಲಿ ಮರಳಿದ್ದಾರೆ ಆದರೆ ಶುಭ್ಮನ್ ಗಿಲ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ ಆಡಲಿದೆ. ಭಾರತವು ವಾಷಿಂಗ್ಟನ್​ ಸುಂದರ್ ಅವರಿಗಾಗಿ ರವಿಚಂದ್ರನ್ ಅಶ್ವಿನ್ ಅವರನ್ನು ಕೈಬಿಟ್ಟಿದೆ. ರಾಜ್ಯದ ನಾಲ್ವರು ಸ್ಥಳೀಯ ಆಟಗಾರರಾದ ಧರ್ಮೇಂದ್ರ ಜಡೇಜಾ, ಪ್ರೇರಕ್ ಮಂಕಡ್, ವಿಶ್ವರಾಜ್ ಜಡೇಜಾ ಮತ್ತು ಹರ್ವಿಕ್ ದೇಸಾಯಿ ಪಂದ್ಯದುದ್ದಕ್ಕೂ ಡ್ರಿಂಕ್ಸ್ ಮತ್ತು ಫೀಲ್ಡಿಂಗ್​ಗಾಗಿ ತಂಡದ ಜತೆಗೆ ಇರಲಿದ್ದಾರೆ.

Continue Reading

ಕ್ರಿಕೆಟ್

World Cup 2023 : ಭಾರತ ವಿರುದ್ಧ ಗೆದ್ದವರು ವಿಶ್ವ ಕಪ್​ ಗೆಲ್ತಾರೆ; ಪಾಕ್​ ತಂಡ ಮಾಜಿ ಆಟಗಾರನ ಭವಿಷ್ಯ

ಹಾಲಿ ವಿಶ್ವ ಕಪ್​ನಲ್ಲಿ (World Cup 2023) ಆಡುವ ತಂಡಗಳಲ್ಲಿ ಭಾರತ ತಂಡ ಅತ್ಯಂತ ಬಲಿಷ್ಠವಾಗಿದೆ ಎಂಬುದಾಗಿ ಪಾಕಿಸ್ತಾನದ ಮಾಜಿ ಆರಂಭಿಕ ಬ್ಯಾಟರ್​ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

Team India
Koo

ನವ ದೆಹಲಿ: ಏಕದಿನ ವಿಶ್ವ ಕಪ್​ 2023 ರ (World Cup 2023) ಆವೃತ್ತಿಯು ಎರಡು ವಾರಗಳಿಗಿಂತ ಕಡಿಮೆ ದೂರದಲ್ಲಿದೆ. ಕ್ರಿಕೆಟ್​​ ಅಭಿಮಾನಿಗಳ ಉತ್ಸಾಹದ ಮಟ್ಟವು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ. ತಜ್ಞರು ಅವಿಸ್ಮರಣಿಯ ಈವೆಂಟ್​ನ ಫಲಿತಾಂಶವನ್ನು ಊಹಿಸುವಲ್ಲಿ ನಿರತರಾಗಿದ್ದರೆ, ಕೆಲವರು ತಮ್ಮ ನೆಚ್ಚಿನ ತಂಡಗಳನ್ನು ಹೆಸರಿಸುವಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಕೆಲವು ಕ್ರಿಕೆಟ್​ ಪಂಡಿತರ ಎಲ್ಲ ತಂಡಗಳ ಬಲ ಮತ್ತು ದುರ್ಬಲ ಅಂಶಗಳನ್ನು ವಿಶ್ಲೇಷಿಸುವಲ್ಲಿ ನಿರತರಾಗಿದ್ದಾರೆ.

ಇಂಗ್ಲೆಂಡ್​​ ಮಾಜಿ ನಾಯಕ ಮೈಕಲ್ ವಾನ್ ಇತ್ತೀಚೆಗೆ ಟ್ವೀಟ್​​ನಲ್ಲಿ ಆತಿಥೇಯ ಭಾರತವು ಪಂದ್ಯಾವಳಿಯಲ್ಲಿ ಗೆಲ್ಲುವ ತಂಡ ಎಂದು ಹೇಳಿದ್ದರು. ಅದನ್ನು ಹೊರತುಪಡಿಸಿದರೆ ‘ಮೆನ್ ಇನ್ ಬ್ಲೂ’ ಅನ್ನು ಸೋಲಿಸುವ ತಂಡವು ಪ್ರಶಸ್ತಿಯನ್ನು ಗೆಲ್ಲಬಹುದು ಎಂದು ಹೇಳಿದ್ದರು. ಈಗ, ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಬಟ್ ವಾನ್ ಅವರ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಭಾರತವು ತಪ್ಪುಗಳನ್ನು ಮಾಡದಿದ್ದರೆ ಇತರ ತಂಡಗಳಿಗೆ ಅವರನ್ನು ಸೋಲಿಸುವುದು ತುಂಬಾ ಕಷ್ಟ ಎಂದು ಹೇಳಿದ್ದಾರೆ.

ವಿಶ್ವ ಕ್ರಿಕೆಟ್​​ನಲ್ಲಿ ಎಲ್ಲ ರೀತಿಯಲ್ಲಿ ಸಮತೋಲನ ಹೊಂದಿರುವ ಏಕೈಕ ತಂಡ ಭಾರತ. ಮುಂಬರುವ ವಿಶ್ವಕಪ್​​ನಲ್ಲಿ ಗಮನಿಸಬೇಕಾದ ನಾಲ್ಕು ತಂಡಗಳ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಆದಾಗ್ಯೂ, ಭಾರತವನ್ನು ಸೋಲಿಸುವ ತಂಡವು ವಿಶ್ವಕಪ್ ಗೆಲ್ಲುತ್ತದೆ ಎಂದು ನಾನು ನಂಬುತ್ತೇನೆ. ಭಾರತ ಅತ್ಯುತ್ತಮ ತಂಡ. ಅವರ ಬ್ಯಾಟಿಂಗ್ ಪರಿಪೂರ್ಣವಾಗಿದೆ ಅವರ ಬೌಲಿಂಗ್ ಅಲ್ಲಿನ ಪರಿಸ್ಥಿತಿಗಳಿಗೆ ಹೆಚ್ಚು ಸೂಕ್ತವಾಗಿದೆ. ಅವರು ಸ್ವಯಂ ತಪ್ಪುಗಳನ್ನು ಮಾಡದ ಹೊರತು, ಯಾವುದೇ ತಂಡವು ಅವರ ಹತ್ತಿರವೂ ಹೋಗುವುದು ಅಸಂಭವ ಎಂದು ಬಟ್ ತಮ್ಮ ಯೂಟ್ಯೂಬ್ ಚಾನೆಲ್​​ನಲ್ಲಿ ಹೇಳಿದ್ದಾರೆ.

ಉನ್ನತ ದರ್ಜೆಯ ಕ್ರಿಕೆಟ್​​

ಕಳೆದ ಕೆಲವು ವರ್ಷಗಳಲ್ಲಿ ಭಾರತದಲ್ಲಿ ಕ್ರಿಕೆಟ್ ವಾತಾವರಣವು ಗಣನೀಯವಾಗಿ ಸುಧಾರಿಸಿದೆ. ಆಟಗಾರರು ಫಿಟ್ನೆಸ್​​ಗೆ ಹೆಚ್ಚಿನ ಒತ್ತು ನೀಡುತ್ತಾರೆ. ಫೀಲ್ಡಿಂಗ್ ಗುಣಮಟ್ಟವನ್ನು ಹೆಚ್ಚಿಸುತ್ತಾರೆ ಎಂದು ಬಟ್ ಹೇಳಿದ್ದಾರೆ. ಭಾರತದ ಮೂಲಸೌಕರ್ಯ ಮತ್ತಿತರ ವ್ಯವಸ್ಥೆಗಳನ್ನು ಬಟ್​ ಶ್ಲಾಘಿಸಿದರು.

ಇದನ್ನೂ ಓದಿ : Asian Games 2023 : ಶೂಟಿಂಗ್ ಸ್ಕೀಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ತಂಡ

“ಕಳೆದ ಕೆಲವು ವರ್ಷಗಳಲ್ಲಿ ಭಾರತವು ಗಮನಾರ್ಹವಾಗಿ ಸುಧಾರಿಸಿದೆ. ಈ ಆಟಗಾರರ ಫಿಟ್ನೆಸ್ ಮಟ್ಟವು ನಾವು 15 ವರ್ಷಗಳ ಹಿಂದೆ ಹೇಳಿದ್ದಕ್ಕಿಂತ ಉತ್ತಮವಾಗಿದೆ. ಅಂತೆಯೇ, ಫೀಲ್ಡಿಂಗ್ ಗುಣಮಟ್ಟವೂ ಸುಧಾರಿಸಿದೆ. ಮೂಲಸೌಕರ್ಯದಿಂದ ಹಿಡಿದು ವೀಕ್ಷಕವಿವರಣೆಗಾರರು, ತಜ್ಞರು ಸೇರಿದಂತೆ ಭಾರತದಲ್ಲಿ ಕ್ರಿಕೆಟ್​ಗೆ ಸಂಬಂಧಿಸಿದ ಎಲ್ಲವೂ ಉನ್ನತ ದರ್ಜೆಯದ್ದಾಗಿದೆ, “ಎಂದು ಪಾಕಿಸ್ತಾನದ ಮಾಜಿ ನಾಯಕ ಹೇಳಿದರು.

ರೋಹಿತ್ ಶರ್ಮಾ ಮತ್ತು ತಂಡವು ಏಕದಿನ ವಿಶ್ವಕಪ್​​ನ ಎಲ್ಲಾ ಮೂರು ಸ್ವರೂಪಗಳಲ್ಲಿ ನಂ.1 ತಂಡವಾಗಿ ಪ್ರವೇಶಿಸಲಿದೆ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದೊಂದಿಗೆ 10 ತಂಡಗಳ ಟೂರ್ನಿಯಲ್ಲಿ ಅವರ ಅಭಿಯಾನ ಪ್ರಾರಂಭವಾಗುತ್ತದೆ.

Continue Reading

ಕ್ರೀಡೆ

Asian Games 2023 : ಶೂಟಿಂಗ್ ಸ್ಕೀಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ತಂಡ

ಈ ಪದಕದೊಂದಿಗೆ ಏಷ್ಯನ್​ ಗೇಮ್ಸ್​ನಲ್ಲಿ (Asian Games 2023) ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿಕೆಯಾಯಿತು.

VISTARANEWS.COM


on

Bronze Medal
Koo

ಹ್ಯಾಂಗ್ಝ್​: ಭಾರತದ ಶೂಟರ್​ಗಳು ಏಷ್ಯನ್ ಗೇಮ್ಸ್​ನಲ್ಲಿ (Asian Games 2023) ಪರಾಕ್ರಮ ಮೆರೆದಿದ್ದಾರೆ. ಮಹಿಳೆಯರು ಎರಡು ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಗೆದ್ದ ಬೆನ್ನಲ್ಲೇ ಪುರುಷರ ತಂಡ ಕಂಚಿನ ಪದಕಕ್ಕೆ ಕೊರಳೊಡ್ಡಿದೆ. ಸ್ಕೀಟ್-50 ತಂಡ ಪುರುಷರ ವಿಭಾಗದಲ್ಲಿ ಭಾರತ 355 ಅಂಕಗಳೊಂದಿಗೆ ಕಂಚಿನ ಪದಕ ಗೆದ್ದುಕೊಂಡಿತು. ಈ ತಂಡದಲ್ಲಿ ಅನಂತ್ ಜೀತ್ ಸಿಂಗ್, ಗುರ್ಜೋತ್ ಸಿಂಗ್ ಮತ್ತು ಅಂಗದದದ ವೀರ್ ಸಿಂಗ್ ಬಜ್ವಾ ಇದ್ದರು. ಅನಂತ್ 121 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದಿದ್ದು. ಫೈನಲ್​ನಲ್ಲಿ ಅವಕಾಶ ಪಡೆಯಲಿದ್ದಾರೆ. ಉಳಿದಿಬ್ಬರು ಫೈನಲ್ ಅವಕಾಶ ನಷ್ಟ ಮಾಡಿಕೊಂಡಿದ್ದಾರೆ.

ಇದರೊಂದಿಗೆ ಭಾರತಕ್ಕೆ ಏಷ್ಯಾ ಕಪ್​ನ ನಾಲ್ಕನೇ ದಿನ ಸ್ಪರ್ಧೆಯಲ್ಲಿ 4 ಪದಕಗಳು ಲಭಿಸಿವೆ. ಇದೇ ವೇಳೆ ಹಾಲಿ ಆವೃತ್ತಿಯಲ್ಲಿ 19ನೇ ಪದಕ ಲಭಿಸಿದಂತಾಗಿದೆ.

ಭಾರತದ ಪದಕಗಳ ಪಟ್ಟಿ

  • ಚಿನ್ನ: 5
  • ಬೆಳ್ಳಿ: 5
  • ಕಂಚು: 9

4ನೇ ದಿನದಾಟದಲ್ಲಿ ಭಾರತದ ಫಲಿತಾಂಶ ಪ್ರಕಟ

ವುಶು: ಪುರುಷರ ದಾವೋಶು ಫೈನಲ್​​ನಲ್ಲಿ ರೋಹಿತ್ ಜಾಧವ್ 8ನೇ ಸ್ಥಾನ

ಈಜು: ಮಹಿಳೆಯರ 100 ಮೀಟರ್ ಬಟರ್ ಫ್ಲೈ ಹೀಟ್ಸ್ ನಲ್ಲಿ ನೀನಾ ವೆಂಕಟೇಶ್ 1:03:89 ಸಮಯದೊಂದಿಗೆ ಫೈನಲ್ ಗೆ ಅರ್ಹತೆ ಪಡೆಯಲು ವಿಫಲರಾದರು

ಮಹಿಳೆಯರ 100 ಮೀಟರ್ ಬ್ಯಾಕ್​ಸ್ಟ್ರೋಕ್​ ಹೀಟ್ಸ್​​ನಲ್ಲಿ ಮಾನಾ ಪಟೇಲ್ 13ನೇ ಸ್ಥಾನ ಪಡೆದರು.

ಶೂಟಿಂಗ್: ಭಾರತದ ಆಶಿ ಚೌಕ್ಸೆ, ಮನಿನಿ ಕೌಶಿಕ್ ಮತ್ತು ಸಿಫ್ಟ್ ಕೌರ್ ಸಮ್ರಾ 50 ಮೀಟರ್ ರೈಫಲ್ 3 ಸ್ಥಾನಗಳ ಮಹಿಳಾ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದರು.

ಮಹಿಳೆಯರ 50 ಮೀಟರ್ ರೈಫಲ್ 3 ಸ್ಥಾನಗಳ ವೈಯಕ್ತಿಕ ಸ್ಪರ್ಧೆಯಲ್ಲಿ ಸಿಫ್ಟ್ ಕೌರ್ ಸಮ್ರಾ ಚಿನ್ನ ಗೆದ್ದು ವಿಶ್ವ ದಾಖಲೆ, ಏಷ್ಯನ್ ಗೇಮ್ಸ್ ದಾಖಲೆಯನ್ನು ಮುರಿದರು

ಮಹಿಳೆಯರ 50 ಮೀಟರ್ ರೈಫಲ್ 3 ಸ್ಥಾನಗಳ ವೈಯಕ್ತಿಕ ಸ್ಪರ್ಧೆಯಲ್ಲಿ ಆಶಿ ಚೌಕ್ಸೆ ಕಂಚಿನ ಪದಕ ಗೆದ್ದರು

ಇದನ್ನೂ ಓದಿ : Asian Games 2023 : ವಿಶ್ವ ದಾಖಲೆಯೊಂದಿಗೆ ಶೂಟಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಸಿಫ್ಟ್​ ಕೌರ್​

ಮಹಿಳೆಯರ 25 ಮೀಟರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಭಾರತ (ಮನು ಭಾಕರ್, ಇಶಾ ಸಿಂಗ್, ರಿದಮ್ ಸಾಂಗ್ವಾನ್) ಚಿನ್ನ ಗೆದ್ದರು

ಮಹಿಳೆಯರ 25 ಮೀಟರ್ ಪಿಸ್ತೂಲ್ ಅರ್ಹತಾ ಸುತ್ತಿನಲ್ಲಿ ಮನು ಭಾಕರ್ ಅಗ್ರಸ್ಥಾನ ಪಡೆದರೆ, ಇಶಾ ಐದನೇ ಸ್ಥಾನ ಮತ್ತು ರಿದಮ್ ಏಳನೇ ಸ್ಥಾನ ಪಡೆದರು

ಸ್ಕೀಟ್-50 ತಂಡ ಪುರುಷರ ವಿಭಾಗದಲ್ಲಿ ಭಾರತದ ಅನಂತ್ ಜೀತ್ ಸಿಂಗ್, ಗುರ್ಜೋತ್ ಸಿಂಗ್ ಮತ್ತು ಅಂಗದ್​ ವೀರ್ ಸಿಂಗ್ ಬಜ್ವಾ ಕಂಚಿನ ಪದಕ ಗೆದ್ದಿದ್ದಾರೆ.

ಫೆನ್ಸಿಂಗ್: 16ನೇ ಸುತ್ತಿನಲ್ಲಿ ಸಿಂಗಾಪುರ ವಿರುದ್ಧ 30-45 ಅಂತರದಲ್ಲಿ ಸೋತ ಭಾರತ ಪುರುಷರ ತಂಡ

ಸೈಕ್ಲಿಂಗ್: ರೊನಾಲ್ಡೊ ಸಿಂಗ್ 16ನೇ ಸುತ್ತಿನಲ್ಲಿ ಜಪಾನ್​​ನ ಶಿಂಜಿ ನಕಾನೊ ವಿರುದ್ಧ ಸೋತರು

ಸ್ಕ್ವಾಷ್: ಕುವೈತ್ ವಿರುದ್ಧ ಭಾರತಕ್ಕೆ 3-0 ಅಂತರದ ಗೆಲುವು

ಮಹಿಳಾ ಪೂಲ್ ಬಿ: ನೇಪಾಳವನ್ನು 3-0 ಅಂತರದಿಂದ ಮಣಿಸಿದ ಭಾರತ

Continue Reading
Advertisement
Kolara MP Muniswamy complaint to governor of Karnataka
ಕರ್ನಾಟಕ13 mins ago

MP Muniswamy : ಸಚಿವ ಬೈರತಿ, ಶಾಸಕ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಸಂಸದ ಮುನಿಸ್ವಾಮಿ

Nepal Team
ಕ್ರಿಕೆಟ್24 mins ago

Asian Games 2023 : ಏಷ್ಯನ್ ಗೇಮ್ಸ್​ನಲ್ಲಿ ನೇಪಾಳ ತಂಡ ಸೃಷ್ಟಿಸಿದ ಮಾಡಿದ ದಾಖಲೆಗಳ ವಿವರ ಇಲ್ಲಿದೆ

Malayalam Film 2018
South Cinema29 mins ago

Oscars 2024: ‘ಆಸ್ಕರ್‌’ಗೆ ಪ್ರವೇಶ ಪಡೆದ ಮಲಯಾಳಂ ಸಿನಿಮಾ; ನೀವೂ ಇದನ್ನು ನೋಡಿರುತ್ತೀರಿ!

Mulayam Singh Yadav Statue
ದೇಶ35 mins ago

Mulayam Singh Yadav: ಮುಲಾಯಂ ಸಿಂಗ್‌ ಮೂರ್ತಿ ತೆರವು; ಯೋಗಿ ನಾಡಲ್ಲಿ ರೂಲ್ಸ್‌ ಎಂದರೆ ರೂಲ್ಸ್!

Parineeti Chopra with Raghav
ಬಾಲಿವುಡ್37 mins ago

Parineeti Chopra: ‘ಓ ಪ್ರಿಯಾ’; ಪತಿಗಾಗಿ ವಿಶೇಷ ಹಾಡು ರೆಕಾರ್ಡ್‌ ಮಾಡಿದ ಪರಿಣಿತಿ ಚೋಪ್ರಾ!

demat account
ಮನಿ ಗೈಡ್38 mins ago

Demat Account: ಡಿಮ್ಯಾಟ್ ಖಾತೆದಾರರಿಗೆ ಗುಡ್‌ ನ್ಯೂಸ್:‌ ನಾಮಿನಿ ಘೋಷಣೆಗೆ ಸಮಯ ವಿಸ್ತರಣೆ

HD Kumaraswamy Press meet vs congress government
ಕರ್ನಾಟಕ44 mins ago

BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

ODI AUS
Live News1 hour ago

ind vs Aus : ಆಸ್ಟ್ರೇಲಿಯಾ ತಂಡದ ಮೊದಲ ವಿಕೆಟ್​ ಪತನ, ಡೇವಿಡ್ ವಾರ್ನರ್​ 56 ರನ್​ಗೆ ಔಟ್​​

Madhya Pradesh Rape News
ಕ್ರೈಂ1 hour ago

ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!

CM siddaramaiah at Chamarajanagar
ಕರ್ನಾಟಕ1 hour ago

CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

bangalore bandh
ಕರ್ನಾಟಕ1 day ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

dina bhavishya
ಪ್ರಮುಖ ಸುದ್ದಿ9 hours ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ2 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌