IPL 2022| ಹೇಗಿದೆ ಹೊಸ ಕ್ಯಾಪ್ಟನ್‌ಗಳ ಆಟ? - Vistara News

ಐಪಿಎಲ್ 2024

IPL 2022| ಹೇಗಿದೆ ಹೊಸ ಕ್ಯಾಪ್ಟನ್‌ಗಳ ಆಟ?

ಹೊಸ ಕ್ಯಾಪ್ಟನ್ಸ್ ತಂಡದ ನೇತೃತ್ವವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಎಲ್ಲಿವರೆಗೆ ಯಶಸ್ವಿಯಾಗಿದ್ದಾರೆ ಎಂಬುದು ಚರ್ಚೆಯ ವಿಷಯ. ಅದಕ್ಕೆ ಉತ್ತರ ಇಲ್ಲಿದೆ ನೋಡಿ.

VISTARANEWS.COM


on

ಹೇಗಿದೆ ಹೊಸ ಕ್ಯಾಪ್ಟನ್‌ಗಳ ಆಟ?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

IPL2022: ಈ ಬಾರಿಯ ಐಪಿಎಲ್‌ನಲ್ಲಿ ಎರಡು ಹೊಸ ತಂಡಗಳು ಸೇರ್ಪಡೆಯಾಗಿ ನಾಲ್ಕು ಹೊಸ ಕ್ಯಾಪ್ಟನ್‌ಗಳು ತಂಡದ ಜವಾಬ್ಧಾರಿ ಹೊರಲು ಸಿದ್ಧರಾಗಿದ್ದರು. ಆದರೆ ಅವರು ಈವರೆಗೆ ತಂಡದ ನೇತೃತ್ವವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಎಲ್ಲಿವರೆಗೆ ಯಶಸ್ವಿಯಾಗಿದ್ದಾರೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಪಂದ್ಯಗಳ ಅಂಕಪಟ್ಟಿ ಇಲ್ಲಿದೆ.

ಹಾರ್ದಿಕ್‌ ಪಾಂಡ್ಯ- Gujrat Titans

ತಂಡದ ಸ್ಥಾನ: 1/10
ಪಂದ್ಯ: 7
ಗೆಲುವು: 6

ಗುಜರಾತ್‌ ಟೈಟಾನ್ಸ್‌ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ತಂಡ. ಈವರೆಗೆ ಆಡಿರುವ ಒಟ್ಟು 7 ಪಂದ್ಯಗಳಲ್ಲಿ 6 ರಲ್ಲಿ ಗೆಲವು ಸಾಧಿಸಿ ಮುನ್ನುಗ್ಗುತ್ತಿರುವ ತಂಡ. ಇದು ಗುಜರಾತ್‌ ತಂಡದ ನೇತೃತ್ವ ವಹಿಸಿರುವ ಹಾರ್ದಿಕ್‌ ಪಾಂಡ್ಯ ಅವರ ಯಶಸ್ಸು ಎಂದು ಹೇಳಬಹುದು. ಹಾರ್ದಿಕ್‌ ಹಿರಿಯ ಆಟಗಾರರೊಂದಿಗೆ ಆಡಿದ ಅನುಭವವನ್ನು ಹೊಂದಿದ್ದು ಒಂದು ತಂಡದ ಮುಂದಾಳತ್ವದ ಜವಾಬ್ದಾರಿ ಇದೇ ಮೊದಲ ಬಾರಿಗೆ ವಹಿಸಿದ್ದು. ಅಲ್ಲದೆ, ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಕೂಡ ಶೈನ್‌ ಆಗಿದ್ದಾರೆ. ಈವರೆಗೆ ಒಟ್ಟು 6 ಇನ್ನಿಂಗ್ಸ್‌ನಲ್ಲಿ 295 ರನ್‌ಗಳಿಸಿದ್ದಾರೆ ಹಾಗೂ 73.75 ಆವರೇಜ್‌ ಹೊಂದಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುತ್ತಿದ್ದ ಹಾರ್ದಿಕ್‌ ಈಗ ಮೂರನೇ ಸ್ಥಾನದಲ್ಲಿ ಬ್ಯಾಟ್‌ ಮಾಡುತ್ತಿದಾರೆ.

‌ಅವರ ಹೊಸ ಪ್ರಯೋಗಗಳು ತಂಡದ ಯಶಸ್ಸಿಗೆ ಕಾರಣ ಆಗಿರಬಹುದು. ಡೇವಿಡ್‌ ಮಿಲ್ಲರ್‌ನಂತಹ ಹಿರಿಯ ಆಟಗಾರರ ಸಹಕಾರರದಿಂದ ತಂಡವನ್ನು ಸಮರ್ಪಕವಾಗಿ ಮುನ್ನೆಡೆಸುತ್ತಿದ್ದಾರೆ

ಫಾಫ್‌ ಡು ಪ್ಲೆಸಿಸ್- Royal Challengers Bangalore

ತಂಡದ ಸ್ಥಾನ: 5/10
ಆಡಿದ ಒಟ್ಟು ಪಂದ್ಯ: 8
ಗೆಲುವು: 5

ಫಾಫ್‌ ಡು ಪ್ಲೆಸಿಸ್‌ ಐಪಿಎಲ್‌ನಲ್ಲಿ ಮೊದಲ ಬಾರಿಗೆ ಕ್ಯಾಪ್ಟನ್‌ಶಿಪ್‌ ಮಾಡುತ್ತಿದಾರೆ ಆದರೆ ಅವರಿಗೆ ನಾಯಕತ್ವದ ಅನುಭವವಿದೆ. ದಕ್ಷಿಣ ಆಫ್ರಿಕಾ ತಂಡದ ನಾಯಕರಾಗಿ ತಂಡದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿದ್ದರು. ಐಪಿಎಲ್‌ನಲ್ಲಿ ಅವರು ಹೇಗೆ ನೀಭಾಯಿಸಬಹುದು ಎಂಬ ಪ್ರಶ್ನೆಯಿತ್ತು. ಈ ಹಿಂದೆ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಲ್ಲಿದ್ದು ಹಿರಿಯ ಆಟಗಾರ ಕ್ಯಾಪ್ಟನ್‌ ಕೂಲ್‌ ಮುಂದಾಳತ್ವದಲ್ಲಿ ಪಳಗಿದವರು. ಈವರೆಗೂ ಕಪ್‌ ಗೆಲ್ಲದ ಆರ್‌ಸಿಬಿ ತಂಡವನ್ನು ಈಬಾರಿ ಐಪಿಎಲ್‌ನಲ್ಲಿ ಗೆಲುವಿನತ್ತ ಕೊಂಡೊಯ್ಯುವಲ್ಲಿ ಫಾಫ್‌ ಯಶಸ್ವಿ ಆಗುತ್ತಾರೆಯೇ ಎಂಬ ಕುತೂಹಲವಿತ್ತು. ತಂಡದ ಇತರ ಆಟಗಾರರು ಸಮರ್ಪಕ ಆಟ ಪ್ರದರ್ಶಿಸದಿದ್ದಾಗ ತಂಡಕ್ಕೆ ನೆರವಾಗಿದ್ದರು. ಆರ್‌ಸಿಬಿ ತಂಡದಲ್ಲಿ ದಿನೇಶ್‌ ಕಾರ್ತಿಕ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ ಹಾಗೂ ಶಹ್‌ಭಾಜ್‌ ಅಹ್ಮದ್‌ ಫಾಫ್‌ ಡು ಪ್ಲೆಸಿಸ್‌ಗೆ ಬ್ಯಾಟಿಂಗ್‌ನಲ್ಲಿ ಉತ್ತಮ ಸಾಥ್‌ ನೀಡಿದ್ದಾರೆ. ತಂಡದ ಬೌಲರ್ಸ್‌ ಕೂಡ ಈವರೆಗೆ ಉತ್ತಮ ಆಟವಾಡಿದ್ದಾರೆ.

ಫಾಫ್ ಡು ಪ್ಲೆಸಿಸ್‌ 8 ಪಂದ್ಯಗಳಲ್ಲಿ 255 ರನ್‌ಗಳಿಸಿ 31.25 ಸರಾಸರಿ ಹೊಂದಿದ್ದಾರೆ. ಲಖನೌ ತಂಡದ ವಿರುದ್ಧ 96 ರನ್‌ ಬಾರಿಸಿ ಅದ್ಭುತ ಆಟವಾಡಿದ್ದರು. ಆದರೆ ಹೈದ್ರಾಬಾದ್‌ ವಿರುದ್ಧದ ಪಂದ್ಯದಲ್ಲಿ ಅತಿ ಕಡಿಮೆ ರನ್‌ಗೆ ತಂಡ ಆಲ್‌ ಔಟ್‌ ಆಗಿತ್ತು. ಈವರೆಗೆ ತಂಡವು ಸಮಾಧಾನಕರ ಆಟವನ್ನು ಪ್ರದರ್ಶಿಸುತ್ತಿದೆ.

ಫಾಫ್‌ ಡು ಪ್ಲೆಸಿಸ್‌ಗೆ ಅನುಭವೀ ಕ್ಯಾಪ್ಟನ್‌ ವಿರಾಟ್‌ ಹಾಗೂ ದಿನೇಶ್‌ ಕಾರ್ತಿಕ್‌ ಬೆನ್ನೆಲುಬಾಗಿ ನಿಂತು ಸಪೋರ್ಟ್‌ ಮಾಡುತಿದ್ದಾರೆ.

ಮಯಾಂಕ್‌ ಅಗರ್‌ವಾಲ್‌ – Punjab Kings

ತಂಡದ ಸ್ಥಾನ: 8/10
ಪಂದ್ಯ: 7
ಗೆಲುವು: 3

ಪಂಜಾಬ್‌ ತಂಡದಲ್ಲಿ ಅನೇಕ ಅನುಭವೀ ಆಟಗಾರರಿದ್ದಾರೆ. ತಂಡಕ್ಕೆ ಅನೀಲ್‌ ಕುಂಬ್ಳೆ ಕೋಚ್‌ ಆಗಿದ್ದು ತಂಡದ ಬಲ ಹೆಚ್ಚಿಸಿದೆ. ಶಿಖರ್‌ ಧವನ್‌, ಜಾನಿ ಬೇರ್‌ಸ್ಟೋ ಒಡಿಯನ್‌ ಸ್ಮಿತ್‌ ಹೀಗೆ ಹಲವು ದಿಗ್ಗಜರು ಪಂಜಾಬ್‌ ತಂಡಕ್ಕೆ ನೆರವಾಗಿದ್ದಾರೆ. ಆದರೆ ಪಂದ್ಯಗಳಲ್ಲಿ ಗೆಲುವು ಸಾಧಿಸಲು ಪಂಜಾಬ್‌ ತಂಡ ವಿಫಲವಾಗುತ್ತಿದೆ. ತಂಡದ ನಾಯಕ ಮಯಾಂಕ್‌ ಅಗರ್‌ವಾಲ್‌ ಒಳ್ಳೆಯ ಸಾಮರ್ಥ್ಯ ಹೊಂದಿರುವ ಆಟಗಾರ ಆದರೆ ಈ ಬಾರಿ ಐಪಿಎಲ್‌ನಲ್ಲಿ ಈವರೆಗೆ ಆಡಿದ 6 ಪಂದ್ಯಗಳಲ್ಲಿ 118 ರನ್‌ ಮಾತ್ರ ಗಳಿಸಿದ್ದಾರೆ. ಪಂಜಾಬ್‌ ತಂಡ ಪ್ಲೇ ಆಫ್‌ ತಲುಪಬಹುದೇ? ಎಂದು ಕಾದುನೊಡಬೇಕಿದೆ.

ರವೀಂದ್ರ ಜಡೇಜಾ – Chennai Super Kings

ಸ್ಥಾನ: 9/10
ಪಂದ್ಯ- 7
ಗೆಲುವು: 2

ಈ ಬಾರಿಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕತ್ವದಿಂದ ಮಹೇಂದ್ರ ಸಿಂಗ್‌ ಧೋನಿ ಕೆಳಗಿಳಿದ ಮೇಲೆ ಅವರ ಸ್ಥಾನವನ್ನು ರವೀಂದ್ರ ಜಡೇಜಾ ತುಂಬಿದ್ದಾರೆ. ರವೀಂದ್ರ ಜಡೇಜಾ ಭಾರತ ತಂಡದ ಭರವಸೆಯ ಆಟಗಾರ. ಬ್ಯಾಟಿಂಗ್‌, ಬೌಲಿಂಗ್‌ ಹಾಗೂ ಫೀಲ್ಡಿಂಗ್‌ನಲ್ಲಿ ಜಡೇಜಾ ಅವರಿಗೆ ಅವರೇ ಸಾಟಿ ಎನ್ನುವಂತೆ ಆಡುವ ಆಟಗಾರ. ಹಾಗಾಗಿ ಅವರೇ ನಾಯಕತ್ವ ಸ್ಥಾನಕ್ಕೆ ಸೂಕ್ತ ಎಂದು ಆಯ್ಕೆ ಮಾಡಲಾಯಿತು. ಆದರೆ, ಜಡೇಜಾ ಈ ದೊಡ್ಡ ಜವಾಬ್ಧಾರಿಯನ್ನು ಹೊರುವಲ್ಲಿ ಸಿದ್ಧರಿರಲ್ಲವೇ ಎಂಬ ಅನುಮಾನ ಕಾಡುತ್ತದೆ.

ಈವರೆಗೆ ಆಡಿದ 7 ಪಂದ್ಯಗಳಲ್ಲಿ ಜಡೇಜಾ 91 ರನ್‌ ಮಾತ್ರ ಗಳಿಸಿದ್ದಾರೆ ಹಾಗೂ 18.20 ಸರಾಸರಿ ಹೊಂದಿದ್ದಾರೆ. ಬೌಲಿಂಗ್‌ನಲ್ಲಿ ಕೂಡ ಇನ್ನೂ ಉತ್ತಮ ಆಟ ಪ್ರದರ್ಶಿಸುವ ಸಾಮರ್ಥ್ಯ ಹೊಂದಿರುವವರು ಈವರೆಗೆ 24 ಓವರ್‌ ಮಾಡಿ 5 ವಿಕೆಟ್‌ ಪಡೆದಿದ್ದಾರೆ. ಜಡೆಜಾ ಅವರಿಂದ ಇನ್ನೂ ಹೆಚ್ಚಿನ ನಿರೀಕ್ಷೆಯನ್ನು ಅವರ ಅಭಿಮಾನಿಗಳು ಹಾಗೂ ತಂಡದವರು ಹೊಂದಿದ್ದಾರೆ. ನಾಯಕತ್ವಕ್ಕೆ ಹೊಸಬರಾದ ಜಡೇಜಾ ಅವರಿಗೆ ಧೋನಿ ಸಂಪೂರ್ಣ ಮಾರ್ಗದರ್ಶನ ಮಾಡುತ್ತಿರುವಂತೆ ಕಾಣುತ್ತದೆ. ಆದರೆ ಈ ಹಿಂದೆ ಜಡೆಜಾ ಅವರೇ ಹೇಳಿದಂತೆ ಅವರು ಇನ್ನೂ ಕ್ಯಾಪ್ಟನ್ಸಿ ಕಲಿಯುತ್ತದ್ದಾರೆಯೇ? ಧೋನಿ ಇನ್ನೊಂದು ವರ್ಷ ತಂಡದ ನಾಯಕರಾಗಿ ಮುಂದುವರಿಯಬೇಕಿತ್ತಾ? ಎಂಬ ಗೊಂದಲ ಅಭಿಮಾನಿಗಳಿಗೆ ಉಂಟಾಗಿದೆ.

ಇದನ್ನೂ ಓದಿ: IPL 2022 | ದುಬಾರಿ ದುಡ್ಡಿಗೆ ಮಾರಾಟವಾದವರು ಹೇಗೆ ಆಡಿದರು ನೋಡಿ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Ruturaj Gaikwad: ಅಬ್ಬರದ ಫಿಫ್ಟಿ ಜತೆಗೆ ಕನ್ನಡಿಗನ ದಾಖಲೆ ಮುರಿದ ಋತುರಾಜ್‌ ಗಾಯಕ್ವಾಡ್!

Ruturaj Gaikwad: ಟಾಸ್‌ ಸೋತು ಮೊದಲು ಬ್ಯಾಟಿಂಗ್​ ಮಾಡಲು ಆಹ್ವಾನ ಪಡೆದ ಚೆನ್ನೈ ತಂಡದ ಅತ್ಯುತ್ತಮವಾಗಿ ಬ್ಯಾಟ್ ಮಾಡಿತು. ಋತುರಾಜ್‌ ಗಾಯಕ್ವಾಡ್‌, ಶಿವಂ ದುಬೆ ಹಾಗೂ ಧೋನಿ ಬ್ಯಾಟಿಂಗ್‌ ನೆರವಿನಿಂದ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟ ಮಾಡಿಕೊಂಡು 206 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಳ್ಳುವಾಗ 6 ವಿಕೆಟ್​ ನಷ್ಟಕ್ಕೆ 186 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

Ruturaj Gaikwad
Koo

ಮುಂಬೈ: ಮಹಾರಾಷ್ಟ್ರದ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ (ಏಪ್ರಿಲ್‌ 14) ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡವು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಆಡಿದ 6 ಪಂದ್ಯಗಳಲ್ಲಿ 4 ಪಂದ್ಯ ಗೆಲ್ಲುವ ಮೂಲಕ ಋತುರಾಜ್‌ ಗಾಯಕ್ವಾಡ್‌ (Ruturaj Gaikwad) ನೇತೃತ್ವದಲ್ಲಿ ಸಿಎಸ್‌ಕೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಭದ್ರವಾಗಿದೆ. ಇನ್ನು, ಮುಂಬೈ ವಿರುದ್ಧದ ಪಂದ್ಯದಲ್ಲಿ ಅಮೋಘ 69 ರನ್‌ ಬಾರಿಸಿದ ಋತುರಾಜ್‌ ಗಾಯಕ್ವಾಡ್‌, ಐಪಿಎಲ್‌ನಲ್ಲಿ ಅತಿ ಕಡಿಮೆ ಪಂದ್ಯಗಳಲ್ಲಿ 2 ಸಾವಿರ ರನ್‌ ಗಳಿಸಿದ ಭಾರತದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾದರು.

ಋತುರಾಜ್‌ ಗಾಯಕ್ವಾಡ್‌ ಅವರು 57 ಇನ್ನಿಂಗ್ಸ್‌ಗಳಲ್ಲಿಯೇ 2 ಸಾವಿರ ರನ್‌ ಪೂರೈಸಿದ್ದು, ಭಾರತದಲ್ಲಿಯೇ ವೇಗವಾಗಿ ಇಷ್ಟು ರನ್‌ ಗಳಿಸಿದ ಮೊದಲ ಆಟಗಾರ ಎನಿಸಿದ್ದಾರೆ. ಇದುವರೆಗೆ ಕಡಿಮೆ ಪಂದ್ಯಗಳಲ್ಲಿ 2 ಸಾವಿರ ರನ್‌ ಗಳಿಸಿದ ದಾಖಲೆಯು ಕನ್ನಡಿಗ, ಲಕ್ನೋ ಸೂಪರ್‌ ಜೈಂಟ್ಸ್‌ ಕ್ಯಾಪ್ಟನ್‌ ಕೆ.ಎಲ್.ರಾಹುಲ್‌ ಹೆಸರಲ್ಲಿತ್ತು. ರಾಹುಲ್‌ ಅವರು 60 ಇನ್ನಿಂಗ್ಸ್‌ಗಳಲ್ಲಿ 2 ಸಾವಿರ ರನ್‌ ಗಳಿಸಿದ ಸಾಧನೆ ಮಾಡಿದ್ದರು.

ಮುಂಬೈ ವಿರುದ್ಧ ಋತುರಾಜ್‌ ಗಾಯಕ್ವಾಡ್‌ 40 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಐದು ಸಿಕ್ಸರ್‌ ಸಮೇತ 69 ರನ್‌ ಗಳಿಸಿದರು. ಶಿವಂ ದುಬೆ ಕೂಡ 38 ಎಸೆತಗಳಲ್ಲಿ 66 ರನ್‌ ಗಳಿಸಿದ್ದು ಸಿಎಸ್‌ಕೆ 206 ರನ್‌ಗಳ ಬೃಹತ್‌ ಮೊತ್ತ ದಾಖಲಿಸಲು ಸಾಧ್ಯವಾಯಿತು. ಈ ಮೊತ್ತ ಬೆನ್ನತ್ತಿದ ಮುಂಬೈ 20 ಓವರ್‌ಗಳಲ್ಲಿ 186 ರನ್‌ ಅಷ್ಟೇ ಕಲೆಹಾಕಲು ಸಾಧ್ಯವಾಯಿತು.

Ruturaj Gaikwad becomes fastest Indian to 2000 IPL runs during 69-run knock vs MI

ರೋಹಿತ್‌ ಶರ್ಮಾ ರೆಕಾರ್ಡ್

ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿಯೇ ಮುಂಬೈ ಇಂಡಿಯನ್ಸ್‌ ತಂಡದ ರೋಹಿತ್‌ ಶರ್ಮಾ ಕೂಡ ಮತ್ತೊಂದು ದಾಖಲೆ ಬರೆದರು. ಟಿ20 ಕ್ರಿಕೆಟ್​​ನಲ್ಲಿ 500 ಸಿಕ್ಸರ್​ಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಇನಿಂಗ್ಸ್​ನಲ್ಲಿ ಐದು ಸಿಕ್ಸರ್ ಬಾರಿಸುವ ಮೂಲಕ ಈ ಗಡಿಯನ್ನು ದಾಟಿದ್ದಾರೆ. ರವೀಂದ್ರ ಜಡೇಜಾ ಅವರ ಬೌಲಿಂಗ್​ನಲ್ಲಿ ಬಂದ ಮೂರನೇ ಸಿಕ್ಸರ್​ಗಳೊಂದಿಗೆ ರೋಹಿತ್ 500 ಟಿ 20 ಸಿಕ್ಸರ್​​ ಪೂರೈಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.‌

ಅತಿ ಹೆಚ್ಚು ಪಂದ್ಯ; ಧೋನಿ 2ನೇ ಆಟಗಾರ ಎಂಬ ಹೆಗ್ಗಳಿಕೆ

ಆರ್‌ಸಿಬಿ ಪರವಾಗಿ 250 ಪಂದ್ಯಗಳನ್ನು ಆಡುವ ಮೂಲಕ ಐಪಿಎಲ್‌ ಇತಿಹಾಸದಲ್ಲಿಯೇ ಒಂದೇ ಫ್ರಾಂಚೈಸ್‌ ಪರ ಇಷ್ಟು ಪಂದ್ಯಗಳನ್ನು ಆಡಿದ ಏಕೈಕ ಬ್ಯಾಟ್ಸ್‌ಮನ್‌ ಎನಿಸಿದ್ದರು. ಈಗ ಧೋನಿ ಅವರು ಕೂಡ 250 ಪಂದ್ಯಗಳನ್ನು ಆಡುವಾಗ ಮೂಲಕ ಅತಿ ಹೆಚ್ಚು ಪಂದ್ಯವಾಡಿದ ಎರಡನೇ ಆಟಗಾರ ಎನಿಸಿದ್ದಾರೆ. 2008ರಲ್ಲಿ ಸಿಎಸ್‌ಕೆ ಪರವಾಗಿ ಧೋನಿ ಆಡಲು ಆರಂಭಿಸಿದರು. ಎರಡು ವರ್ಷ ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ ಪರವಾಗಿ ಹೊರತುಪಡಿಸಿದರೆ ಧೋನಿ ಅವರು ಸಿಎಸ್‌ಕೆ ಪರವಾಗಿಯೇ ಆಡಿದ್ದಾರೆ.

ಇದನ್ನೂ ಓದಿ: MS Dhoni: ಕೊಹ್ಲಿ ನಂತರ ಈ ದಾಖಲೆ ಬರೆದ ಎರಡನೇ ಆಟಗಾರ ಎನಿಸಿದ ಧೋನಿ; ಏನದು?

Continue Reading

ಐಪಿಎಲ್ 2024

MS Dhoni: ಕೊಹ್ಲಿ ನಂತರ ಈ ದಾಖಲೆ ಬರೆದ ಎರಡನೇ ಆಟಗಾರ ಎನಿಸಿದ ಧೋನಿ; ಏನದು?

MS Dhoni: IPL 2024 : ಮೊದಲು ಬ್ಯಾಟಿಂಗ್​ ಮಾಡಲು ಆಹ್ವಾನ ಪಡೆದ ಚೆನ್ನೈ ತಂಡದ ಅತ್ಯುತ್ತಮವಾಗಿ ಬ್ಯಾಟ್ ಮಾಡಿತು. ಅಂತೆಯೇ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟ ಮಾಡಿಕೊಂಡು 206 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಳ್ಳುವಾಗ 6 ವಿಕೆಟ್​ ನಷ್ಟಕ್ಕೆ 186 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಇನ್ನು, ಸಿಎಸ್‌ಕೆ ಕೊನೆಯ ಓವರ್‌ನಲ್ಲಿ ಮೂರು ಸಿಕ್ಸ್‌ ಬಾರಿಸಿದ ಮಹೇಂದ್ರ ಸಿಂಗ್‌ ಧೋನಿ ಅವರು ವಿಶೇಷ ದಾಖಲೆಯನ್ನೂ ಬರೆದರು.

VISTARANEWS.COM


on

MS Dhoni
Koo

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಪಂದ್ಯವು ಗೆಲುವು (IPL 2024) ಸಾಧಿಸಿದೆ. ಅದರಲ್ಲೂ, ಇನ್ನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಮಹೇಂದ್ರ ಸಿಂಗ್‌ ಧೋನಿ (MS Dhoni) ಅವರು ಬಾರಿಸಿದ ಮೂರು ಸಿಕ್ಸರ್‌ಗಳು ತಂಡದ ಗೆಲುವಿಗೆ ಕಾರಣವಾಗುವ ಜತೆಗೆ ಅಭಿಮಾನಿಗಳ ಮನವನ್ನೂ ತಣಿಸಿವೆ. ಧೋನಿ ಅವರು ಮೂರು ಸಿಕ್ಸರ್‌ ಮೂಲಕ ಗಮನ ಸೆಳೆದಿದ್ದಲ್ಲದೆ, ವಿರಾಟ್‌ ಕೊಹ್ಲಿ (Virat Kohli) ನಂತರ ಐಪಿಎಲ್‌ನಲ್ಲಿ ಒಂದೇ ಫ್ರಾಂಚೈಸ್‌ ಪರವಾಗಿ 250 ಪಂದ್ಯಗಳನ್ನು ಆಡಿದ ಎರಡನೇ ಆಟಗಾರ ಎನಿಸಿದ್ದಾರೆ.

ಆರ್‌ಸಿಬಿ ಪರವಾಗಿ 250 ಪಂದ್ಯಗಳನ್ನು ಆಡುವ ಮೂಲಕ ಐಪಿಎಲ್‌ ಇತಿಹಾಸದಲ್ಲಿಯೇ ಒಂದೇ ಫ್ರಾಂಚೈಸ್‌ ಪರ ಇಷ್ಟು ಪಂದ್ಯಗಳನ್ನು ಆಡಿದ ಏಕೈಕ ಬ್ಯಾಟ್ಸ್‌ಮನ್‌ ಎನಿಸಿದ್ದರು. ಈಗ ಧೋನಿ ಅವರು ಕೂಡ 250 ಪಂದ್ಯಗಳನ್ನು ಆಡುವಾಗ ಮೂಲಕ ಅತಿ ಹೆಚ್ಚು ಪಂದ್ಯವಾಡಿದ ಎರಡನೇ ಆಟಗಾರ ಎನಿಸಿದ್ದಾರೆ. 2008ರಲ್ಲಿ ಸಿಎಸ್‌ಕೆ ಪರವಾಗಿ ಧೋನಿ ಆಡಲು ಆರಂಭಿಸಿದರು. ಎರಡು ವರ್ಷ ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ ಪರವಾಗಿ ಹೊರತುಪಡಿಸಿದರೆ ಧೋನಿ ಅವರು ಸಿಎಸ್‌ಕೆ ಪರವಾಗಿಯೇ ಆಡಿದ್ದಾರೆ.

ಸಿಎಸ್‌ಕೆ ಪರವಾಗಿ 250 ಪಂದ್ಯಗಳನ್ನು ಆಡುವುದಷ್ಟೇ ಕ್ಯಾಪ್ಟನ್‌ ಆಗಿಯೂ 200 ಪಂದ್ಯಗಳಲ್ಲಿ ಧೋನಿ ನಾಯಕರಾಗಿ ಮುನ್ನಡೆಸಿದ್ದಾರೆ. ಧೋನಿ ನಾಯಕತ್ವದಲ್ಲಿ ಸಿಎಸ್‌ಕೆಯು 2010, 2011, 2018, 2021 ಹಾಗೂ 2023ರಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈಗ ಋತುರಾಜ್‌ ಗಾಯಕ್ವಾಡ್‌ ಅವರು ಸಿಎಸ್‌ಕೆಯನ್ನು ಮುನ್ನಡೆಸುತ್ತಿದ್ದು, ಧೋನಿ ಮಾರ್ಗದರ್ಶನವು ಮುಂದುವರಿದಿದೆ.

ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಗೆಲುವು

ಮತೀಶ್​ ಪತಿರಾಣಾ (4 ವಿಕೆಟ್​, 28 ರನ್​​) ಅವರ ಮಾರಕ ಬೌಲಿಂಗ್ ಹಾಗೂ ಋತುರಾಜ್ ಗಾಯಕ್ವಾಡ್​ (69 ರನ್​, 40 ಎಸೆತ, 5 ಫೋರ್, 5 ಸಿಕ್ಸರ್​) , ಶಿವಂ ದುಬೆ (66 ರನ್​, 38 ರನ್​,10 ಫೋರ್​, 2 ಸಿಕ್ಸರ್​ ) ಅವರ ಅರ್ಧ ಶತಕಗಳ ನೆರವಿನಿಂದ ಮಿಂಚಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 29ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 20 ರನ್​ಗಳ ಅಂತರದಿಂದ ಗೆಲುವು ಸಾಧಿಸಿತು. ಅಂದ ಹಾಗೆ ಚೆನ್ನೈ ಪರ ಕೊನೇ ನಾಲ್ಕು ಎಸೆತಗಳನ್ನು ಎದುರಿಸಿದ್ದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ​ 20 ರನ್​ಗಳನ್ನು ಬಾರಿಸಿದ್ದರು. ಅದರಲ್ಲಿ 3 ಸಿಕ್ಸರ್​ಗಳಿದ್ದವು. ಅದೇ ರನ್​ಗಳ ಅಂತರದಿಂದ ಚೆನ್ನೈ ಗೆದ್ದು ಬೀಗಿದ್ದು ವಿಶೇಷ. ಆದರೆ, ಮುಂಬೈ ಪರ ಏಕಾಂಗಿ ಹೋರಾಟ ನಡೆಸಿ ಅಮೋಘ 105 ರನ್ ಬಾರಿಸಿದ ರೋಹಿತ್ ಶರ್ಮಾ ಅವರ ಶತಕದ ಹೋರಾಟ ವ್ಯರ್ಥಗೊಂಡಿತು.

ಈ ಗೆಲುವು ಚೆನ್ನೈ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ನಾಲ್ಕನೆಯದ್ದು. ಅದೇ ರೀತಿ ಮುಂಬೈ ಇಂಡಿಯನ್ಸ್​ ತಂಡಕ್ಕೆ ನಾಲ್ಕನೇ ಸೋಲು. ಹಾರ್ದಿಕ್ ಪಾಂಡ್ಯ ಬಳಗ ತವರಿನಲ್ಲಿ ನಡೆದ ಈ ಹಿಂದಿನ ಎರಡು ಪಂದ್ಯಗಳನ್ನು ಗೆದಿದ್ದರೆ ಮೂರನೇ ಪಂದ್ಯದಲ್ಲಿ ಸೋಲು ಕಂಡಿತು. ಅಲ್ಲದೆ ಪ್ಲೇ ಆಫ್ ಹಾದಿಯನ್ನು ಕಠಿಣಗೊಳಿಸಿತು. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡದ ಚೆನ್ನೈ ಸೂಪರ್ ಕಿಂಗ್ಸ್ ಮೇಲಿನ ಗೆಲುವಿನ ಪಾರಮ್ಯದ ಅಂತರ ಕಡಿಮೆಯಾಯಿತು ಒಟ್ಟು 36 ಪಂದ್ಯಗಳಲ್ಲಿ ಮುಂಬೈ 20 ರಲ್ಲಿ ಗೆದ್ದಿದ್ದರೆ, ಚೆನ್ನೈ 17 ಪಂದ್ಯಗಳಲ್ಲಿ ಗೆದ್ದಂತಾಯಿತು.

ಇದನ್ನೂ ಓದಿ: IPL 2024: ಅಬ್ಬರದ ಫೀಲ್ಡಿಂಗ್‌ ವೇಳೆ ಕಳಚಿದ ರೋಹಿತ್‌ ಶರ್ಮಾ ಪ್ಯಾಂಟ್;‌ ವಿಡಿಯೊ ವೈರಲ್!

Continue Reading

ಐಪಿಎಲ್ 2024

IPL 2024: ಅಬ್ಬರದ ಫೀಲ್ಡಿಂಗ್‌ ವೇಳೆ ಕಳಚಿದ ರೋಹಿತ್‌ ಶರ್ಮಾ ಪ್ಯಾಂಟ್;‌ ವಿಡಿಯೊ ವೈರಲ್!

IPL 2024 : ಮೊದಲು ಬ್ಯಾಟಿಂಗ್​ ಮಾಡಲು ಆಹ್ವಾನ ಪಡೆದ ಚೆನ್ನೈ ತಂಡದ ಅತ್ಯುತ್ತಮವಾಗಿ ಬ್ಯಾಟ್ ಮಾಡಿತು. ಅಂತೆಯೇ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟ ಮಾಡಿಕೊಂಡು 206 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಳ್ಳುವಾಗ 6 ವಿಕೆಟ್​ ನಷ್ಟಕ್ಕೆ 186 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಇದರ ಮಧ್ಯೆಯೇ, ಫೀಲ್ಡಿಂಗ್‌ ಮಾಡುವಾಗ ರೋಹಿತ್‌ ಶರ್ಮಾ ಅವರ ಪ್ಯಾಂಟ್‌ ಕಳಚಿಬಿದ್ದ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

IPL 2024
Koo

ಮುಂಬೈ: ಭಾರತ ಕ್ರಿಕೆಟ್‌ ತಂಡದ ನಾಯಕ, ಮುಂಬೈ ಇಂಡಿಯನ್ಸ್‌ (Mumbai Indians) ತಂಡದ ಸ್ಟಾರ್‌ ಆಟಗಾರ ರೋಹಿತ್‌ ಶರ್ಮಾ (Rohit Sharma) ಇರುವುದೇ ಹಾಗೆ. ಅವರು ಮೈದಾನದಲ್ಲಿದ್ದಾಗ ಸಹ ಆಟಗಾರರ ಜತೆ ತಮಾಷೆ ಮಾಡುತ್ತಾರೆ, ಕೆಲವೊಮ್ಮೆ ಬೈಯುತ್ತಾರೆ, ಅಂಪೈರ್‌ಗಳನ್ನೂ ಛೇಡಿಸುತ್ತಾರೆ. ಆ ಮೂಲಕ ಅವರು ಎಲ್ಲರನ್ನೂ ನಗಿಸುತ್ತಾರೆ. ಆದರೆ, ಸಿಎಸ್‌ಕೆ ವಿರುದ್ಧ ಭಾನುವಾರ (ಏಪ್ರಿಲ್‌ 14) ನಡೆದ ಪಂದ್ಯದಲ್ಲಿ (CSK vs MI) ರೋಹಿತ್‌ ಶರ್ಮಾ ಅವರೇ ನಗೆಪಾಟಲಿಗೀಡಾಗಿದ್ದಾರೆ. ರೋಹಿತ್‌ ಶರ್ಮಾ ಅವರು ಫೀಲ್ಡಿಂಗ್‌ (IPL 2024) ಮಾಡುವಾಗ ಪ್ಯಾಂಟ್‌ ಕಳಚಿದ್ದೇ ಇದಕ್ಕೆ ಕಾರಣವಾಗಿದೆ. ಈ ವಿಡಿಯೊ ಕೂಡ ವೈರಲ್‌ (Viral Video) ಆಗಿದೆ.

ಟಾಸ್‌ ಸೋತ ಮುಂಬೈ ಇಂಡಿಯನ್ಸ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಚೆನ್ನೈ ಸೂಪರ್‌ ಕಿಂಗ್ಸ್‌ ಉತ್ತಮವಾಗಿ ಬ್ಯಾಟಿಂಗ್‌ ಮಾಡಿತು. ಅದರಲ್ಲೂ, ಋತುರಾಜ್‌ ಗಾಯಕ್ವಾಡ್‌ ಮಿಂಚಿದರು. ಋತುರಾಜ್‌ ಗಾಯಕ್ವಾಡ್‌ ಹೊಡೆದ ಚೆಂಡು ಹಿಡಿಯಲು ರೋಹಿತ್‌ ಶರ್ಮಾ ಮುಂದಾದಾಗ ಅವರ ಪ್ಯಾಂಟ್‌ ಕಳಚಿತು. ಡೈವ್‌ ಹೊಡೆದು ಕ್ಯಾಚ್‌ ಹಿಡಿಯಲು ಯತ್ನಿಸಿದರೂ ಅದರಲ್ಲಿ ರೋಹಿತ್‌ ಶರ್ಮಾ ಸಫಲರಾಗಲಿಲ್ಲ. ಇದೇ ವೇಳೆ ಪ್ಯಾಂಟ್‌ ಕೂಡ ಕಳಚಿದ ಕಾರಣ ಆಟಗಾರರು, ಪ್ರೇಕ್ಷಕರು ನಕ್ಕರು. ರೋಹಿತ್‌ ಶರ್ಮಾ ಕೂಡ ನಕ್ಕರು.

ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಗೆಲುವು

ಮತೀಶ್​ ಪತಿರಾಣಾ (4 ವಿಕೆಟ್​, 28 ರನ್​​) ಅವರ ಮಾರಕ ಬೌಲಿಂಗ್ ಹಾಗೂ ಋತುರಾಜ್ ಗಾಯಕ್ವಾಡ್​ (69 ರನ್​, 40 ಎಸೆತ, 5 ಫೋರ್, 5 ಸಿಕ್ಸರ್​) , ಶಿವಂ ದುಬೆ (66 ರನ್​, 38 ರನ್​,10 ಫೋರ್​, 2 ಸಿಕ್ಸರ್​ ) ಅವರ ಅರ್ಧ ಶತಕಗಳ ನೆರವಿನಿಂದ ಮಿಂಚಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 29ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 20 ರನ್​ಗಳ ಅಂತರದಿಂದ ಗೆಲುವು ಸಾಧಿಸಿತು. ಅಂದ ಹಾಗೆ ಚೆನ್ನೈ ಪರ ಕೊನೇ ನಾಲ್ಕು ಎಸೆತಗಳನ್ನು ಎದುರಿಸಿದ್ದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ​ 20 ರನ್​ಗಳನ್ನು ಬಾರಿಸಿದ್ದರು. ಅದರಲ್ಲಿ 3 ಸಿಕ್ಸರ್​ಗಳಿದ್ದವು. ಅದೇ ರನ್​ಗಳ ಅಂತರದಿಂದ ಚೆನ್ನೈ ಗೆದ್ದು ಬೀಗಿದ್ದು ವಿಶೇಷ. ಆದರೆ, ಮುಂಬೈ ಪರ ಏಕಾಂಗಿ ಹೋರಾಟ ನಡೆಸಿ ಅಮೋಘ 105 ರನ್ ಬಾರಿಸಿದ ರೋಹಿತ್ ಶರ್ಮಾ ಅವರ ಶತಕದ ಹೋರಾಟ ವ್ಯರ್ಥಗೊಂಡಿತು.

ಈ ಗೆಲುವು ಚೆನ್ನೈ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ನಾಲ್ಕನೆಯದ್ದು. ಅದೇ ರೀತಿ ಮುಂಬೈ ಇಂಡಿಯನ್ಸ್​ ತಂಡಕ್ಕೆ ನಾಲ್ಕನೇ ಸೋಲು. ಹಾರ್ದಿಕ್ ಪಾಂಡ್ಯ ಬಳಗ ತವರಿನಲ್ಲಿ ನಡೆದ ಈ ಹಿಂದಿನ ಎರಡು ಪಂದ್ಯಗಳನ್ನು ಗೆದಿದ್ದರೆ ಮೂರನೇ ಪಂದ್ಯದಲ್ಲಿ ಸೋಲು ಕಂಡಿತು. ಅಲ್ಲದೆ ಪ್ಲೇ ಆಫ್ ಹಾದಿಯನ್ನು ಕಠಿಣಗೊಳಿಸಿತು. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡದ ಚೆನ್ನೈ ಸೂಪರ್ ಕಿಂಗ್ಸ್ ಮೇಲಿನ ಗೆಲುವಿನ ಪಾರಮ್ಯದ ಅಂತರ ಕಡಿಮೆಯಾಯಿತು ಒಟ್ಟು 36 ಪಂದ್ಯಗಳಲ್ಲಿ ಮುಂಬೈ 20 ರಲ್ಲಿ ಗೆದ್ದಿದ್ದರೆ, ಚೆನ್ನೈ 17 ಪಂದ್ಯಗಳಲ್ಲಿ ಗೆದ್ದಂತಾಯಿತು.

ಇದನ್ನೂ ಓದಿ: Rohit Sharma : ನಾ ಡ್ರೈವರ… ಟೀಮ್​ ಬಸ್​ ಓಡಿಸಿದ ರೋಹಿತ್​ ಶರ್ಮಾ

Continue Reading

ಬೆಂಗಳೂರು

IPL 2024: ಐಪಿಎಲ್‌ ಪಂದ್ಯಕ್ಕೆ ಬೆಂಗಳೂರಿನಲ್ಲಿ ಬಿಎಂಟಿಸಿ ವಿಶೇಷ ಕಾರ್ಯಾಚರಣೆ; ಮೆಟ್ರೋ ರೈಲು ಓಡಾಟ ವಿಸ್ತರಣೆ

IPL 2024: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್‌ (IPL-2024) ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆಗೆ ಬಂದು- ಹೋಗುವ ಪ್ರಯಾಣಿಕರಿಗಾಗಿ ಬಿಎಂಟಿಸಿ (BMTC) ಹಾಗೂ ನಮ್ಮ ಮೆಟ್ರೋ (Namma Metro) ವಿಶೇಷ ವ್ಯವಸ್ಥೆ ಮಾಡಿದೆ.

VISTARANEWS.COM


on

By

IPL 2024 BMTC And Namma Metro
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಾವಳಿಗಳಿಗಾಗಿ (IPL 2024) ಬಿಎಂಟಿಸಿ ವಿಶೇಷ ಬಸ್‌ (BMTC) ವ್ಯವಸ್ಥೆ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್‌ 15 ಹಾಗೂ ಮೇ 4, 12 ಹಾಗೂ 18ರಂದು ಐಪಿಎಲ್‌ ಕ್ರಿಕೆಟ್‌ ನಡೆಯಲಿದೆ. ಹೀಗಾಗಿ ಕ್ರಿಕೆಟ್ ಪಂದ್ಯಾವಳಿಗೆ ಬಂದು-ಹೋಗುವ ವೀಕ್ಷಕರಿಗೆ ಬೇಡಿಕೆಗನುಗುಣವಾಗಿ ಬಿಎಂಟಿಸಿ ವಿಶೇಷ ವ್ಯವಸ್ಥೆ ಮಾಡಿದೆ.

ಬೆಂಗಳೂರು ನಗರದ ವಿವಿಧ ಭಾಗಗಳಿಂದ ಚಿನ್ನಸ್ವಾಮಿ ಕ್ರೀಡಾಂಗಣ ನಡುವೆ ಬಿಎಂಟಿಸಿ ಕಾರ್ಯಾಚರಿಸಲಾಗುತ್ತದೆ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ ಬಸ್ ನಿಲ್ದಾಣ (ಹೆಚ್.ಎ.ಎಲ್ ರಸ್ತೆ), ಜನಪ್ರಿಯ ಟೌನ್ಷಿಪ್ (ಮಾಗಡಿ ರಸ್ತೆ) ಹಾಗೂ ಕಾಡುಗೋಡಿ ಬಸ್ ನಿಲ್ದಾಣ (ಹೂಡಿ ರಸ್ತೆ), ನೆಲಮಂಗಲ, ಸರ್ಜಾಪುರ ಸೇರಿದಂತೆ ಯಲಹಂಕ 5ನೇ ಹಂತ, ಎಲೆಕ್ಟ್ರಾನಿಕ್ ಸಿಟಿ (ಹೊಸೂರು ರಸ್ತೆ), ಆರ್.ಕೆ. ಹೆಗಡೆ ನಗರ, ಬನ್ನೇರುಘಟ್ಟ ಮೃಗಾಲಯ ಮತ್ತು ಬಾಗಲೂರು (ಹೆಣ್ಣೂರು ರಸ್ತೆ), ಕೆಂಗೇರಿ ಕೆ.ಹೆಚ್.ಬಿ. ಕ್ವಾರ್ಟರ್ಸ್ (ಎಂ.ಸಿ.ಟಿ.ಸಿ-ನಾಯಂಡಹಳ್ಳಿ), ಹೊಸಕೋಟೆಯಿಂದಲೂ ಬಸ್‌ ಕಾರ್ಯಾಚರಣೆ ಇರಲಿದೆ.

ಇದನ್ನೂ ಓದಿ: Lok Sabha Election 2024 : ಮಾವಿನ ಹಣ್ಣಿನ ಬ್ಯಾಗ್‌ ಬಿಡ್ರೀ ಎಂದವರ ಬಳಿ ಗರಿ ಗರಿ ನೋಟು; ಜಯನಗರದಲ್ಲಿ 4 ಕೋಟಿ ರೂ. ಸೀಜ್‌

ಐಪಿಎಲ್‌ ಪಂದ್ಯದಂದು ಕೊನೆ ಮೆಟ್ರೋ ರೈಲು ರಾತ್ರಿ 11.30ಕ್ಕೆ ವಿಸ್ತರಣೆ

ಟಾಟಾ ಐಪಿಎಲ್‌ ಟಿ-20 (TATA IPL T-20) ಕ್ರಿಕೆಟ್ ಪಂದ್ಯ ಹಿನ್ನೆಲೆಯಲ್ಲಿ ನಾಲ್ಕು ದಿನದಂದು ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಈ ಪಂದ್ಯದ ದಿನಗಳಂದು ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ. ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Lok Sabha Election 2024 Farmer farm set on fire in support of CN Manjunath
Lok Sabha Election 202410 mins ago

Lok Sabha Election 2024: ಡಾ. ಮಂಜುನಾಥ್‌ ಬೆಂಬಲಿಸಿದ ರೈತನ ಜಮೀನಿಗೆ ಬೆಂಕಿ; ಇದು ಕೈ ಕಾರ್ಯಕರ್ತರ ಕೃತ್ಯ ಎಂದ ಬಿಜೆಪಿ!

Actor Dwarakish
ಸಿನಿಮಾ15 mins ago

‌Actor Dwarakish: ಚಿತ್ರರಂಗ ಮಾತ್ರವಲ್ಲ, ರಾಜಕೀಯಕ್ಕೂ ಎಂಟ್ರಿ ಕೊಟ್ಟಿದ್ದ ದ್ವಾರಕೀಶ್!

Uttarakaanda Movie
ಸ್ಯಾಂಡಲ್ ವುಡ್21 mins ago

Uttarakaanda Movie: ಶಿವಣ್ಣ- ಧನಂಜಯ್‌ ಅಭಿನಯದ ʼಉತ್ತರಕಾಂಡʼ ಚಿತ್ರಕ್ಕೆ ಚೈತ್ರಾ ಆಚಾರ್‌ ಎಂಟ್ರಿ

IND vs BNG
ಕ್ರೀಡೆ43 mins ago

IND vs BNG: ಬಾಂಗ್ಲಾ ಟಿ20 ಸರಣಿಗೆ ಆಯ್ಕೆಯಾದ ಕನ್ನಡತಿ ಶ್ರೇಯಾಂಕಾ ಪಾಟೀಲ್

Aditya Srivastava
ಪ್ರಮುಖ ಸುದ್ದಿ52 mins ago

UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

Robbery Case In Bengaluru
ಬೆಂಗಳೂರು1 hour ago

Robbery case : ಎಎಸ್‌ಐ ಬೈಕ್‌ ಎಗರಿಸಿ ಹೆದ್ದಾರಿಯಲ್ಲಿ ರಾಬರಿ; ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌

Arun Yogiraj
ಕಿರುತೆರೆ1 hour ago

Arun Yogiraj: ಕಿರುತೆರೆಗೆ ಕಾಲಿಟ್ಟ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್‌; ಯಾವ ಕಾರ್ಯಕ್ರಮ?

UPSC Result 2024:
ಪ್ರಮುಖ ಸುದ್ದಿ1 hour ago

UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

mohammed shami
ಕ್ರೀಡೆ2 hours ago

Mohammed Shami: ‘ಕ್ರಿಕೆಟ್​ಗೆ ಮರಳುವ ಹಸಿವು ಹೆಚ್ಚಾಗಿದೆ’; ಚೇತರಿಕೆಯ ಅಪ್‌ಡೇಟ್‌ ನೀಡಿದ ಶಮಿ

lok sabha Election 2024 digital QR code voter slip
Lok Sabha Election 20242 hours ago

Lok Sabha Election 2024: ಬೆಂಗಳೂರಿನಲ್ಲಿ ದೊರೆಯಲಿದೆ ಕ್ಯುಆರ್‌ ಕೋಡ್ ಸಹಿತ ವೋಟರ್‌ ಸ್ಲಿಪ್‌:‌ ಏನಿದರ ಉಪಯೋಗ?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ11 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌