Kevin O'Brien | ಐರ್ಲೆಂಡ್‌ ಹಿರಿಯ ಆಟಗಾರ ಕೆವಿನ್‌ ಒಬ್ರಿಯಾನ್‌ ವೃತ್ತಿ ಕ್ರಿಕೆಟ್‌ಗೆ ನಿವೃತ್ತಿ - Vistara News

ಕ್ರಿಕೆಟ್

Kevin O’Brien | ಐರ್ಲೆಂಡ್‌ ಹಿರಿಯ ಆಟಗಾರ ಕೆವಿನ್‌ ಒಬ್ರಿಯಾನ್‌ ವೃತ್ತಿ ಕ್ರಿಕೆಟ್‌ಗೆ ನಿವೃತ್ತಿ

2011ರ ಏಕ ದಿನ ವಿಶ್ವ ಕಪ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ವೇಗದ ಶತಕ ಬಾರಿಸಿದ್ದ ಐರ್ಲೆಂಡ್ ಬ್ಯಾಟರ್‌ ಕೆವಿನ್‌ ಒಬ್ರಿಯಾನ್‌ ವೃತ್ತಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

VISTARANEWS.COM


on

Kevin O’Brien
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಾರ್ಲ್‌ : 2011ರ ಏಕದಿನ ವಿಶ್ವಕಪ್‌ನಲ್ಲಿ ಅತಿ ವೇಗದ ಶತಕ ಬಾರಿಸಿ ವಿಶ್ವದ ಗಮನ ಸೆಳೆದಿದ್ದ ಐರ್ಲೆಂಡ್ ಬ್ಯಾಟಿಂಗ್‌ ಆಲ್​ರೌಂಡರ್ ಕೆವಿನ್ ಒಬ್ರಿಯಾನ್ (Kevin O’Brien) ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ವಿದಾಯ ಹೇಳಿದ್ದಾರೆ. 37 ವರ್ಷದ ಈ ಹಿರಿಯ ಆಟಗಾರ ಟ್ವಿಟರ್‌ ಮೂಲಕ ವಿದಾಯ ಪತ್ರವನ್ನು ಪ್ರಕಟಿಸಿದ್ದಾರೆ. ಮುಂದಿನ ಟಿ20 ವಿಶ್ವ ಕಪ್‌ ಆಡುವ ಭಾರತ ತಂಡದಿಂದ ಕೈಬಿಟ್ಟಿರುವ ಕಾರಣಕ್ಕೆ ಅವರು ವಿದಾಯ ಹೇಳಿದ್ದಾರೆ ಎನ್ನಲಾಗಿದೆ.

ಹಿರಿಯ ಕ್ರಿಕೆಟಿಗ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವ ಕಪ್‌ ಬಳಿಕ ನಿವೃತ್ತಿ ಘೋಷಿಸಲು ಬಯಸಿದ್ದೆ. ಆದರೆ ಕಳೆದ ವರ್ಷ ವಿಶ್ವ ಕಪ್ ನಂತರ ನಾನು ಐರ್ಲೆಂಡ್‌ನ ಟಿ20 ತಂಡಕ್ಕೆ ಆಯ್ಕೆಯಾಗಿಲ್ಲ. ಹೀಗಾಗಿ ನಿವೃತ್ತಿ ನೀಡಲು ಮುಂದಾಗಿದ್ದಾನೆ ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

2011 ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ ವಿರುದ್ಧದ ಏಕ ದಿನ ವಿಶ್ವ ಕಪ್‌ನ ಪಂದ್ಯದಲ್ಲಿ ಕೆವಿನ್‌ ಅವರು 50 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಅಲ್ಲದೆ, 63 ಎಸೆತಗಳಲ್ಲಿ 113 ರನ್‌ ಬಾರಿಸಿದ್ದರು. ಅವರ ಸ್ಫೋಟಕ ಇನಿಂಗ್ಸ್‌ ನೆರವಿನಿಂದ ಐರ್ಲೆಂಡ್‌ ತಂಡ ಇನ್ನೂ ಐದು ಎಸೆತಗಳ ಬಾಕಿ ಇರುವಂತೆಯೇ 328 ರನ್​ಗಳನ್ನು ಚೇಸ್‌ ಮಾಡಿ ಇಂಗ್ಲೆಂಡ್‌ ವಿರುದ್ಧ ಗೆಲುವು ಸಾಧಿಸಿತ್ತು. ಅವರ ಹೆಸರಲ್ಲಿ ಇರುವ ಏಕ ದಿನ ವಿಶ್ವ ಕಪ್‌ನ ವೇಗದ ಶತಕದ ದಾಖಲೆಯನ್ನು ಇನ್ನೂ ಯಾರು ಮುರಿದಿಲ್ಲ.

ಐರ್ಲೆಂಡ್‌ಗಾಗಿ ಆಡುವ ಪ್ರತಿ ನಿಮಿಷವೂ ಖುಷಿಯಲ್ಲಿದ್ದೆ. ಕ್ರಿಕೆಟ್‌ ಸ್ಟೇಡಿಯಮ್‌ನಲ್ಲಿ ಅನೇಕ ಗೆಳೆಯರನ್ನು ಭೇಟಿ ಮಾಡಿದ್ದೇನೆ. ರಾಷ್ಟ್ರೀಯ ತಂಡಕ್ಕಾಗಿ ಆಡಿದ್ದ ವೇಳೆ ನನಗೆ ಅನೇಕ ಸಂತೋಷದ ನೆನಪುಗಳು ಸಿಕ್ಕಿವೆ. ಇದು ನಿವೃತ್ತಿಗೆ ಸರಿಯಾದ ಸಮಯ ಎಂದು ಭಾವಿಸುತ್ತೇನೆ. ಇನ್ನು ಮುಂದೆ ಐರ್ಲೆಂಡ್‌ನಲ್ಲಿ ನನ್ನ ಸ್ವಂತ ಕೋಚಿಂಗ್ ಅಕಾಡೆಮಿಯನ್ನು ಸ್ಥಾಪಿಸಲು ಬಯಸಿದ್ದೇನೆ ಎಂದು ಅವರು ಒಬ್ರಿಯಾನ್‌ ನಿವೃತ್ತಿ ಪತ್ರದಲ್ಲಿ ಬರೆದುಕೊಂಡಿದ್ದಾರೆ.

ಕೆವಿನ್ ಒಬ್ರಿಯಾನ್‌ ಐರ್ಲೆಂಡ್ ಪರ 3 ಟೆಸ್ಟ್, 153 ಏಕದಿನ ಮತ್ತು 110 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಒಟ್ಟು 5850 ರನ್ ಹಾಗೂ 172 ವಿಕೆಟ್‌ಗಳನ್ನು ಪಡೆದಿದ್ದಾರೆ. ಏಕದಿನ ಮಾದರಿಯಲ್ಲಿ 3619 ರನ್‌ ಬಾರಿಸಿದ್ದು, 114 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅದೇ ರೀತಿ ಟೆಸ್ಟ್‌ನಲ್ಲಿ ಶತಕ ಬಾರಿಸಿದ ಐರ್ಲೆಂಡ್‌ನ ಏಕೈಕ ಬ್ಯಾಟ್ಸ್‌ಮನ್ ಆಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Team India Coach: ಅಭಿಮಾನಿಗಳು ಬಯಸಿದರೂ ಕೋಚ್​ ಹುದ್ದೆಗೆ ಧೋನಿ ಅನರ್ಹ; ಕಾರಣವೇನು?

Team India Coach: ಬಿಸಿಸಿಐ(BCCI) ನಿಯಮಗಳ ಪ್ರಕಾರ ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರಬೇಕು. ಧೋನಿ ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಅವರು ಅರ್ಜಿ ಸಲ್ಲಿಸಿದರೂ ಕೂಡ ಅದು ಅನರ್ಹಗೊಳ್ಳಲಿದೆ.

VISTARANEWS.COM


on

Team India Coach
Koo

ಮುಂಬಯಿ: ಗೌತಮ್ ಗಂಭೀರ್(Gautam Gambhir)​ ಅವರು ಟೀಮ್​ ಇಂಡಿಯಾದ ಮುಂದಿನ ಕೋಚ್(Team India Coach)​ ಆಗುವುದು ಬಹುತೇಖ ಖಚಿತ ಎನ್ನಲಾಗಿದೆ. ಅಧಿಕೃತ ಘೋಷಣೆಯೊಂದು ಮಾತ್ರ ಬಾಕಿ ಉಳಿದಿದೆ. ಈ ಮಧ್ಯೆ ಭಾರತಕ್ಕೆ 2 ವಿಶ್ವಕಪ್​ ಗೆದ್ದ ಮಹೇಂದ್ರ ಸಿಂಗ್​ ಧೋನಿ(MS Dhoni) ಕೋಚ್​ ಆದರೆ ಉತ್ತಮ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಧೋನಿ ಕೋಚ್ ಹುದ್ದೆಗೆ ಅನರ್ಹರು ಎಂದು ತಿಳಿದುಬಂದಿದೆ.

ಹೌದು, ಬಿಸಿಸಿಐ(BCCI) ನಿಯಮಗಳ ಪ್ರಕಾರ ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರಬೇಕು. ಧೋನಿ ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಅವರು ಅರ್ಜಿ ಸಲ್ಲಿಸಿದರೂ ಕೂಡ ಅದು ಅನರ್ಹಗೊಳ್ಳಲಿದೆ. ಧೋನಿ ಎಲ್ಲ ಕ್ರಿಕೆಟ್​ ವಿದಾಯ ಹೇಳಿದರೆ ಅವರು ಕೂಡ ಕೋಚ್​ ಹುದ್ದೆಗೆ ಅರ್ಹರಾಗಿತ್ತಾರೆ. 2021 ರಲ್ಲಿ ಭಾರತದ ಆತಿಥ್ಯದಲ್ಲಿ ಯುಎಇಯಲ್ಲಿ ನಡೆದಿದ್ದ ಟಿ 20 ವಿಶ್ವಕಪ್‌ನಲ್ಲಿ ಎಂಎಸ್ ಧೋನಿ ಭಾರತ ತಂಡಕ್ಕೆ ಮೆಂಟರ್ ಆಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ Team India Coach: ಟೀಮ್​ ಇಂಡಿಯಾದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಪ್ರಧಾನಿ ಮೋದಿ, ಅಮಿತ್ ಶಾ!

ಈ ಬಾರಿಯ ಐಪಿಎಲ್​ ಬಳಿಕ ಧೋನಿ ನಿವೃತ್ತಿ ಹೊಂದುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಮೂಲಗಳ ಪ್ರಕಾರ ಧೋನಿ ಮುಂದಿನ ಆವೃತ್ತಿಯ ಐಪಿಎಲ್​ನಲ್ಲಿಯೂ ಆಡುತ್ತಾರೆ ಎನ್ನಲಾಗಿದ್ದು ಇದೇ ಕಾರಣಕ್ಕೆ ಅವರು ನಿವೃತ್ತಿ ಘೋಷಿಸಿಲ್ಲ ಎನ್ನಲಾಗಿದೆ.

2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಆರಂಭಿಕ ಹಂತದಲ್ಲಿ ಯೋಚಿಸಿತ್ತು. ಆದರೆ ಅನೇಕ ವಿದೇಶಿ ಆಟಗಾರರು ಕೋಚ್​ ಆಗಲಿ ಆಸಕ್ತಿ ಹೊಂದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಹೀಗಾಗಿ ಬಿಸಿಸಿಐ ದೇಶೀಯ ಆಟಗಾರರ ಮೊರೆ ಹೋದಂತಿದೆ.

ಮೂಲಗಳ ಪ್ರಕಾರ ಗೌತಮ್​ ಗಂಭೀರ್​ ಅವರು ಭಾರತ ತಂಡದ ಕೋಚ್ ಆಗುವ ಸಾಧ್ಯತೆ ಕಂಡುಬಂದಿದೆ. ಭಾನುವಾರ ಮುಕ್ತಾಯ ಕಂಡ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಕೆಕೆಆರ್​ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಗೌತಮ್​ ಗಂಭೀರ್​ ತಂಡದ ಮೆಂಟರ್​ ಆಗಿದ್ದರು. ಪಂದ್ಯದ ಮುಕ್ತಾಯದ ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಗಂಭೀರ್​ ಜತೆ ಅತ್ಯಂತ ಆತ್ಮೀಯವಾಗಿ ಸುರ್ದೀಘ ಚರ್ಚೆ ಕೂಡ ನಡೆಸಿದ್ದರು. ಇದನ್ನೆಲ್ಲ ನೋಡುವಾಗ ಗಂಭೀರ್​ ಕೋಚ್​ ಆಗುವುದು ಬಹುತೇಖ ಖಚಿತವಾದಂತಿದೆ. ಐಪಿಎಲ್‌ ಫ್ರಾಂಚೈಸಿಯೊಂದರ ಅತಿ ಪ್ರಭಾವಿ ಮಾಲಕರೊಬ್ಬರು ಗೌತಮ್‌ ಗಂಭೀರ್‌ ಕೋಚ್‌ ಆಗುವ ಒಪ್ಪಂದ ನಡೆದಾಗಿದೆ ಎಂದು ಹೇಳಿದ್ದಾರೆ. ಜತೆಗೆ ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎಂದಿದ್ದಾರೆ.

Continue Reading

ಕ್ರೀಡೆ

AUS vs NAM: ನಮೀಬಿಯಾ ವಿರುದ್ಧ ಅಭ್ಯಾಸ ಪಂದ್ಯವಾಡಿದ ಆಸೀಸ್​ ತಂಡದ ಕೋಚಿಂಗ್​ ಸಿಬ್ಬಂದಿ

AUS vs NAM: ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ನಮೀಬಿಯಾ ನಿಗದಿತ 20 ಓವರ್​ಳಲ್ಲಿ 9 ವಿಕೆಟ್​ಗೆ 119 ರನ್​ ಬಾರಿಸಿತು. ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 10 ಓವರ್​ಗೆ 3 ವಿಕೆಟ್​ ಕಳೆದುಕೊಂಡು 123 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು.

VISTARANEWS.COM


on

AUS vs NAM
Koo

ಟ್ರಿನಿಡಾಡ್: ಟಿ20 ವಿಶ್ವಕಪ್​ ಟೂರ್ನಿಯ(t20 world cup 2024) ಅಭ್ಯಾಸ ಪಂದ್ಯಗಳು(T20 WC Warm-Up Game) ಆರಂಭಗೊಂಡಿದೆ. ನಮೀಬಿಯಾ(AUS vs NAM) ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಪರ ಕೋಚ್ ಮತ್ತು ಆಯ್ಕೆಗಾರರ ಮಂಡಳಿ ಮುಖ್ಯಸ್ಥರು(Australian Coaching Staff) ಫೀಲ್ಡಿಂಗ್ ನಡೆಸಿದ ಪ್ರಸಂಗ ನಡೆದಿದೆ. ಈ ವಿಡಿಯೊ ವೈರಲ್​ ಆಗಿದೆ. ಪಂದ್ಯದಲ್ಲಿ ಆಸೀಸ್​ ತಂಡ 7 ವಿಕೆಟ್​ಗಳ ಗೆಲುವು ಸಾಧಿಸಿತು.

ಐಪಿಎಲ್​ ಆಡಿ ಬಂದಿದ್ದ ತಂಡದ ಪ್ರಧಾನ ಆಟಗಾರರಾದ ಗ್ಲೆನ್ ಮ್ಯಾಕ್ಸ್‌ವೆಲ್, ಟ್ರಾವಿಸ್ ಹೆಡ್, ಮಿಚೆಲ್ ಸ್ಟಾರ್ಕ್ ಮತ್ತು ಪ್ಯಾಟ್ ಕಮಿನ್ಸ್ ವಿಶ್ರಾಂತಿ ಸಮಯ ಬಯಸಿದ ಕಾರಣ ಆಸ್ಟ್ರೇಲಿಯಾ ತಂಡದಲ್ಲಿ ಆಟಗಾರರ ಕೊರತೆ ಎದುರಾಯಿತು. ಹೀಗಾಗಿ ಕೋಚ್ ಮತ್ತು ಆಯ್ಕೆಗಾರರ ಮಂಡಳಿ ಮುಖ್ಯಸ್ಥರು ಫೀಲ್ಡಿಂಗ್ ನಡೆಸಿದರು.

ಆಸೀಸ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ- ಮಾಜಿ ನಾಯಕ ಜಾರ್ಜ್ ಬೈಲಿ, ಮುಖ್ಯ ಕೋಚ್ ಆ್ಯಂಡ್ರ್ಯೂ ಮೆಕ್ ಡೊನಾಲ್ಡ್, ಫೀಲ್ಡಿಂಗ್ ಕೋಚ್ ಆಂಡ್ರೆ ಬೊರೊವೆಕ್ ಮತ್ತು ಬ್ಯಾಟಿಂಗ್ ಕೋಚ್ ಬ್ರಾಡ್ ಹಾಡ್ಜ್ ಸಂಪೂರ್ಣ 20 ಓವರ್​ಗಳ ಕಾಲ ಫೀಲ್ಡಿಂಗ್ ಮಾಡಿದ್ದಾರೆ. ಅಭ್ಯಾಸ ಪಂದ್ಯಕ್ಕೆ ಯಾವುದೇ ನಿಯಮ ಇಲ್ಲದ ಕಾರಣ ಇವರೆಲ್ಲ ಫೀಲ್ಡಿಂಗ್​ ಮಾಡಿದ್ದಾರೆ.

ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ನಮೀಬಿಯಾ ನಿಗದಿತ 20 ಓವರ್​ಳಲ್ಲಿ 9 ವಿಕೆಟ್​ಗೆ 119 ರನ್​ ಬಾರಿಸಿತು. ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 10 ಓವರ್​ಗೆ 3 ವಿಕೆಟ್​ ಕಳೆದುಕೊಂಡು 123 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು. ಡೇವಿಡ್​ ವಾರ್ನರ್​ ಅಜೇಯ 54ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ನಾಯಕ ಮಿಚೆಲ್​ ಮಾರ್ಷ್​ 18 ರನ್​ ಗಳಿಸಿ ವಿಫಲರಾದರು. ಆಸೀಸ್​ ಬೌಲಿಂಗ್​ನಲ್ಲಿ ಸ್ಪಿನ್ನರ್​ ಆ್ಯಡಂ ಜಂಪಾ ಮೂರು ವಿಕೆಟ್​ ಕಿತ್ತರೆ, ಹ್ಯಾಝಲ್​ವುಡ್ 2 ವಿಕೆಟ್​ ಪಡೆದರು.​

ವಿಶ್ವಕಪ್​ ಲೀಗ್​ ಪಂದ್ಯಗಳು ಜೂನ್​ 1ರಿಂದ ಆರಂಭಗೊಳ್ಳಲಿದೆ. ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ಕೆನಾಡ ಮುಖಾಮುಖಿಯಾಗಲಿವೆ.  ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. 

ಇದನ್ನೂ ಓದಿ T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಟೆಸ್ಟ್​ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್, ಟಿಮ್‌ ಡೇವಿಡ್ ಅವರನ್ನು ಬ್ಯಾಟಿಂಗ್​ ವಿಭಾಗದಲ್ಲಿ ಆಯ್ಕೆ ಮಾಡಲಾಗಿದೆ. ಗ್ಲೆನ್​ ಮ್ಯಾಕ್ಸ್‌ವೆಲ್‌, ಮಾರ್ಕಸ್ ಸ್ಟೊಯಿನಿಸ್, ಕ್ಯಾಮರೂನ್ ಗ್ರೀನ್ ತಂಡದ ಸ್ಟಾರ್​ ಆಲ್​ರೌಂಡರ್​ಗಳಾಗಿದ್ದಾರೆ. ಸ್ಪಿನ್ಸ್‌ ಬೌಲರ್​ಗಳಾಗಿ ಆ್ಯಡಂ ಝಂಪಾ ಮತ್ತು ಆ್ಯಶ್ಟನ್​ ಅಗರ್ ಸ್ಥಾನ ಪಡೆದಿದ್ದಾರೆ. ವೇಗಿಗಳಾಗಿ ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆ್ಯಶ್ಟನ್​ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ. ಪ್ರಯಾಣದ ಮೀಸಲು ಆಟಗಾರರು: ಮ್ಯಾಟ್ ಶಾರ್ಟ್, ಜೇಕ್ ಫ್ರೇಸರ್-ಮೆಕ್‌ಗುರ್ಕ್

Continue Reading

ಕ್ರೀಡೆ

Dinesh Karthik: ಪ್ಯಾರಿಸ್​ನಲ್ಲಿ ನೀರಜ್​ಗೆ ತೀವ್ರ ಪೈಪೋಟಿ ನೀಡಲು ಮುಂದಾದರೇ ದಿನೇಶ್​ ಕಾರ್ತಿಕ್​?; ಜಾವೆಲಿನ್​ ಅಭ್ಯಾಸದ ವಿಡಿಯೊ ವೈರಲ್​

Dinesh Karthik: ಟೋಕಿಯೊ ಒಲಿಂಪಿಕ್ಸ್​​ ಚಿನ್ನದ ವಿಜೇತ ನೀರಜ್​ ಚೋಪ್ರಾ(Neeraj Chopra) ಜತೆ ದಿನೇಶ್​ ಕಾರ್ತಿಕ್(Dinesh Karthik)​ ಅವರು ಜಾವೆಲಿನ್​ ಅಭ್ಯಾಸ ನಡೆಸುತ್ತಿರುವ ವಿಡಿಯೊವೊಂದು ವೈರಲ್​(viral video) ಆಗಿದೆ.

VISTARANEWS.COM


on

Dinesh Karthik
Koo

ಮುಂಬಯಿ: ಇತ್ತೀಚೆಗೆ ಕ್ರಿಕೆಟ್​ಗೆ​ ವಿದಾಯ ಹೇಳಿದ ದಿನೇಶ್​ ಕಾರ್ತಿಕ್(Dinesh Karthik)​ ಅವರು ಇದೀಗ ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024)​ ಕ್ರಿಡಾಕೂಟಕ್ಕೆ ಸಜ್ಜಾಗುತ್ತಿದ್ದಂತೆ ಕಂಡುಬಂದಿದೆ. ಟೋಕಿಯೊ ಒಲಿಂಪಿಕ್ಸ್​​ ಚಿನ್ನದ ವಿಜೇತ ನೀರಜ್​ ಚೋಪ್ರಾ(Neeraj Chopra) ಜತೆ ಜಾವೆಲಿನ್​ ಅಭ್ಯಾಸ ನಡೆಸುತ್ತಿರುವ ವಿಡಿಯೊವೊಂದು ವೈರಲ್​(viral video) ಆಗಿದೆ.

ಪ್ಯಾರಿಸ್​ ಒಲಿಂಪಿಕ್ಸ್​ಗೆ ಸಿದ್ಧತೆಯಲ್ಲಿರುವ ನೀರಜ್​ ಚೋಪ್ರಾ ಜತೆ ದಿನೇಶ್​​ ಕಾರ್ತಿಕ್​ ಕೂಡ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಬಹು ದೂರ ಜಾವೆಲಿನ್ ಎಸೆದು ಗಮನಸೆಳೆದಿದ್ದಾರೆ. ಇದನ್ನು ಕಂಡ ನೆಟ್ಟಿಗರು ಡಿಕೆ ಅವರು ಈ ಬಾರಿ ಪ್ಯಾರಿಸ್​ನಲ್ಲಿ ನೀರಜ್​ ಚೋಪ್ರಾಗೆ ತೀವ್ರ ಪೈಪೋಟಿ ನೀಡುವ ಸಾಧ್ಯತೆ ಇದೆ ಎಂದು ಕಮೆಂಟ್​ ಮಾಡಿದ್ದಾರೆ. ಅಸಲಿಗೆ ಉಭಯ ಕ್ರೀಡಾಪಟುಗಳು ಜಾಹಿರಾತಿನ ಭಾಗವಾಗಿ ಜತೆಯಾಗಿ ಕಾಣಸಿಕೊಂಡದ್ದು.

ಕಳೆವು ವಾರಗಳ ಹಿಂದೆ ನಡೆದಿದ್ದ ಫೆಡರೇಷನ್ ಕಪ್‌ನಲ್ಲಿ(Federation Cup) ಕಣಕ್ಕಿಳಿದ್ದ ನೀರಜ್ ಚೋಪ್ರಾ(82.27 ಮೀ.), ಕನ್ನಡಿಗ ಡಿಪಿ ಮನು ಅವರಿಂದ ತೀವ್ರ ಪೈಪೋಟಿ ಎದುರಿಸಿ ಚಿನ್ನದ ಪದಕ ಗೆದ್ದಿದ್ದರು. ಈ ಟೂರ್ನಿ ಬಳಿಕ ನೀರಜ್​ ಗಾಯಗೊಂಡಿದ್ದು ಸದ್ಯ ವಿಶ್ರಾಂತಿಯಲ್ಲಿದ್ದಾರೆ.

ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು. ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ.

ನೀರಜ್​ರ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಅಭ್ಯಾಸದ ವೇಳೆ ಈಗಾಗಲೆ ನೀರಜ್​ ಹಲವು ಬಾರಿ 90 ಮೀ. ಗಡಿ ದಾಟಿದ್ದಾರೆ. ಆದರೆ, ಸ್ಪರ್ಧೆಗಳಲ್ಲಿ ಇದು ಸಾಧ್ಯವಾಗಿರಲಿಲ್ಲ. ಈ ಬಾರಿ ಸ್ಪರ್ಧೆಯಲ್ಲಿಯೂ ಇದನ್ನು ಸಾಧಿಸಲಿದ್ದೇನೆ ಎಂದು ನೀರಜ್​ ಹೇಳಿದ್ದಾರೆ.

ಇದನ್ನೂ ಓದಿ Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

ದಿನೇಶ್​ ಕಾರ್ತಿಕ್​ ಅವರಿಗೆ ರಾಜಸ್ಥಾನ್​ ರಾಯಲ್ಸ್​ ವಿರುದ್ಧದ ಎಲಿಮಿನೇಟರ್​ ಪಂದ್ಯವೇ ವಿದಾಯ(dinesh karthik retirement) ಪಂದ್ಯ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಪಂದ್ಯ ಮುಕ್ತಾಯದ ಬಳಿಕ ಸಹ ಆಟಗಾರರು ಭಾವುಕರಾಗಿ ಕಾರ್ತಿಕ್​ಗೆ ಮೈದಾನದಲ್ಲಿಯೇ ತಬ್ಬಿಕೊಂಡು ವಿದಾಯ ಹೇಳಿದಂತಿತ್ತು. ಅದರಲ್ಲೂ ವಿರಾಟ್ ಕೊಹ್ಲಿಯೊಂದಿಗೆ(virat kohli) ಭಾವುಕ ಆಲಿಂಗನವನ್ನು ಹಂಚಿಕೊಂಡಿದ್ದರು.

ಐಪಿಎಲ್​ನಲ್ಲಿ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಆರ್​ಸಿಬಿಗೆ​ ಟ್ರೋಫಿ ಗೆದ್ದು ವಿದಾಯ ಹೇಳುವ ನಿರೀಕ್ಷೆಯಲ್ಲಿದ್ದ ಡಿಕೆ ಕನಸಿಗೆ ರಾಜಸ್ಥಾನ್​ ರಾಯಲ್ಸ್​ ಅಡ್ಡಗಾಲಿಕ್ಕಿತು. ದಿನೇಶ್ ಕಾರ್ತಿಕ್ 257 ಪಂದ್ಯಗಳಲ್ಲಿ 22 ಅರ್ಧಶತಕಗಳನ್ನು ಬಾರಿಸಿ 4,842 ರನ್‌ ಬಾರಿಸಿದ್ದಾರೆ. ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ 15 ಪಂದ್ಯಗಳಲ್ಲಿ 326 ರನ್​ ಬಾರಿಸಿದ್ದಾರೆ.

Continue Reading

ವೈರಲ್ ನ್ಯೂಸ್

Babar Azam: ಫೋಟೋ ತೆಗೆಯಲು ಬಂದ ಅಭಿಮಾನಿಗಳಿಗೆ ಬೈದು ಓಡಿಸಿದ ಬಾಬರ್ ಅಜಂ; ವಿಡಿಯೊ ವೈರಲ್​

Babar Azam: ಪಾಕಿಸ್ತಾನ ತಂಡ ಇಂಗ್ಲೆಂಡ್​ ವಿರುದ್ಧ 4 ಪಂದ್ಯಗಳ ಟಿ20 ಸರಣಿಯನ್ನಾಡಲು ಲಂಡನ್​ನಲ್ಲಿದೆ. ಈಗಾಗಲೇ ಸರಣಿಯಲ್ಲಿ 2 ಪಂದ್ಯಗಳು ಮಳೆಯಿಂದ ರದ್ದುಗೊಂಡರೆ, ಒಂದು ಪಂದ್ಯವನ್ನು ಇಂಗ್ಲೆಂಡ್​ ಗೆದ್ದಿದೆ. ಅಂತಿಮ ಪಂದ್ಯ ನಾಳೆ(ಮೇ 30) ನಡೆಯಲಿದೆ.

VISTARANEWS.COM


on

Babar Azam
Koo

ಲಂಡನ್​: ಪಾಕಿಸ್ತಾನ ತಂಡದ ನಾಯಕ ಬಾಬರ್​ ಅಜಂ(Babar Azam) ಅವರು ಇಂಗ್ಲೆಂಡ್​ ವಿರುದ್ಧದ ನಾಲ್ಕನೇ ಹಾಗೂ ಅಂತಿಮ ಟಿ20 ಪಂದ್ಯವನ್ನಾಡಲು(England vs Pakistan) ಹೋಟೆಲ್​ನಿಂದ ತೆರಳುವ ವೇಳೆ ಅಭಿಮಾನಿಗಳು ಫೋಟೊ ತೆಗೆಸಿಕೊಳ್ಳಲು ಮುಗಿಬಿದ್ದ ವೇಳೆ ತಾಳ್ಮೆ ಕಳೆದುಕೊಂಡು ಭದ್ರತಾ ಸಿಬ್ಬಂದಿಗಳಿಗೆ ಎಲ್ಲರನ್ನೂ ದೂರ ಕಳುಹಿಸುವಂತೆ ಹೇಳಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಪಾಕಿಸ್ತಾನ ತಂಡ ಇಂಗ್ಲೆಂಡ್​ ವಿರುದ್ಧ 4 ಪಂದ್ಯಗಳ ಟಿ20 ಸರಣಿಯನ್ನಾಡಲು ಲಂಡನ್​ನಲ್ಲಿದೆ. ಈಗಾಗಲೇ ಸರಣಿಯಲ್ಲಿ 2 ಪಂದ್ಯಗಳು ಮಳೆಯಿಂದ ರದ್ದುಗೊಂಡರೆ, ಒಂದು ಪಂದ್ಯವನ್ನು ಇಂಗ್ಲೆಂಡ್​ ಗೆದ್ದಿದೆ. ಅಂತಿಮ ಪಂದ್ಯ ನಾಳೆ(ಮೇ 30) ನಡೆಯಲಿದೆ. ಸರಣಿಯನ್ನು 1-1 ಸಮಬಲಗೊಳಿಸಬೇಕಿದ್ದರೆ ಪಾಕಿಸ್ತಾನಕ್ಕೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಇದೇ ಪಂದ್ಯವನ್ನಾಡಲು ತೆರಳುವ ವೇಳೆ ಬಾಬರ್​ ಅವರೊಂದಿಗೆ ಅಭಿಮಾನಿಗಳು ಫೋಟೊ ಮತ್ತು ಆಟೋಗ್ರಾಫ್ ಪಡೆಯಲು ಮುಂದಾಗಿದ್ದಾರೆ. ಇದರಿಂದ ಬಾಬರ್​ಗೆ ಕಿರಿಕಿರಿ ಉಂಟಾಗಿದೆ.

ಅಭಿಮಾನಿಗಳ ದಂಡೇ ಹಿಂಬಾಲಿಸಿ ಬಂದಿದ್ದರಿಂದ ಕೋಪಗೊಂಡ ಬಾಬರ್ ಸ್ವಲ್ಪ ಹೊತ್ತು ನನ್ನನ್ನು ಪ್ರಶಾಂತವಾಗಿರಲು ಬಿಡಿ ಎಂದು ಕೋಪದಿಂದ ನಿಂದಿಸಿದ್ದಾರೆ. ಬಳಿಕ ಪಕ್ಕದಲ್ಲಿದ್ದ ಭದ್ರತಾ ಸಿಬ್ಬಂದಿಗಳಿಗೆ ಎಲ್ಲರನ್ನೂ ದೂರ ಕಳುಹಿಸುವಂತೆ ಹೇಳಿದ್ದಾರೆ. ಒಂದು ಕ್ಷಣ ಕೋಪಗೊಂಡರೂ ಕೂಡ ಕೊನೆಗೆ ಅಭಿಮಾನಿಗಳೊಂದಿಗೆ ಫೋಟೊ ಕ್ಲಿಕ್ಕಿಸಿದ್ದಾರೆ.

ಇದನ್ನೂ ಓದಿ Babar Azam : ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಪಾಕ್​ ನಾಯಕ ಅಜಮ್​

ಕಳೆದ ವರ್ಷ(2023) ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಬಾಬರ್​ ಸಾರಥ್ಯದಲ್ಲಿ ಪಾಕಿಸ್ತಾನ ತಂಡ ನೀರಸ ಪ್ರದರ್ಶನ ತೋರಿತ್ತು. ಆಡಿದ 9 ಪಂದ್ಯಗಳ ಪೈಕಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ ಲೀಗ್​ ಹಂತದಲ್ಲೇ ಹೊರಬಿದ್ದಿತ್ತು. ಹೀಗಾಗಿ ಬಾಬರ್​ ವಿರುದ್ಧ ಪಾಕ್​ ತಂಡದ ಮಾಜಿ ಆಟಗಾರರು ಸೇರಿ ಅಂದಿನ ಪಿಬಿ ಅಧ್ಯಕ್ಷ ಭಾರೀ ಟೀಕೆ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಬಾಬರ್ ಎಲ್ಲಾ ಮೂರು ಸ್ವರೂಪಗಳ ನಾಯಕತ್ವದಿಂದ ಕೆಳಗಿಳಿದಿದ್ದರು. ಬಾಬರ್ ಕೆಳಗಿಳಿದ ಬಳಿಕ ಶಾನ್ ಮಸೂದ್ ಅವರನ್ನು ಟೆಸ್ಟ್ ನಾಯಕರನ್ನಾಗಿ ನೇಮಿಸಿದರೆ, ಶಾಹೀನ್ ಅಫ್ರಿದಿಗೆ ಟಿ20 ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಯಿತು. ಆದರೆ ಇವರ ನಾಯಕತ್ವದಲ್ಲಿ ಪಾಕಿಸ್ತಾನ ಹಿಂದೆಂದು ಕಾಣದ ವೈಫಲ್ಯ ಕಂಡಿತ್ತು. ಆಡಿದ ಹಲವು ಸರಣಿಗಳಲ್ಲಿ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಮತ್ತೆ ಬಾಬರ್​ ಅಜಂ ಅವರನ್ನು ತಂಡದ ನಾಯಕನನ್ನಾಗಿ ಮರು ನೇಮಕ ಮಾಡಲಾಯಿತು.

ಬಾಬರ್​ ನಾಯಕತ್ವದ ಸಾಧನೆ


ಬಾಬರ್ ಅಜಮ್ ಪಾಕಿಸ್ತಾನದ ನಾಯಕನಾಗಿ 133 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 78 ಪಂದ್ಯಗಳು ಗೆದ್ದರೆ, 43 ಪಂದ್ಯಗಳಲ್ಲಿ ಸೋತಿದ್ದಾರೆ. ಒಂದು ಟೈ ಮತ್ತು ನಾಲ್ಕು ಪಂದ್ಯ ಡ್ರಾಗೊಂಡಿದೆ. ಏಕದಿನ ವಿಶ್ವಕಪ್​ ಟೂರ್ನಿ ಹೊರತುಪಡಿಸಿ ಉಳಿದ ಎಲ್ಲ ಸರಣಿಯಲ್ಲೂ ಬಾಬರ್​ ಸಾರಥ್ಯದಲ್ಲಿ ತಂಡ ಉತ್ತಮ ಪ್ರದರ್ಶನ ತೋರಿತ್ತು.

ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ತನ್ನ ಮೊದಲ ಲೀಗ್​ ಪಂದ್ಯದಲ್ಲಿ ಅಮೆರಿಕ ವಿರುದ್ಧ ಜೂನ್​ 6ರಂದು ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿ ಭಾರತ ವಿರುದ್ಧ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ಸೆಣಸಾಡಲಿದೆ. ಈ ಪಂದ್ಯಕ್ಕಾಗಿ ಉಭಯ ದೇಶದ ಕ್ರಿಕೆಟ್​ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ.

Continue Reading
Advertisement
PM Kisan Samman
ಕೃಷಿ16 mins ago

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

Nita Ambani
ವಾಣಿಜ್ಯ22 mins ago

Nita Ambani: ನೀತಾ ಅಂಬಾನಿ ಕುಡಿಯುವ ನೀರಿನ ಬಾಟಲಿಯ ಬೆಲೆ 49 ಲಕ್ಷ ರೂಪಾಯಿ!

Team India Coach
ಕ್ರೀಡೆ29 mins ago

Team India Coach: ಅಭಿಮಾನಿಗಳು ಬಯಸಿದರೂ ಕೋಚ್​ ಹುದ್ದೆಗೆ ಧೋನಿ ಅನರ್ಹ; ಕಾರಣವೇನು?

Sudha Murty
ಕರ್ನಾಟಕ33 mins ago

Sudha Murty: ಡಾ.ಮಂಜುನಾಥ್‌ ಗೆಲುವಿಗಾಗಿ ರಾಯರಿಗೆ ವಿಶೇಷ ಹರಕೆ ಹೊತ್ತ ಸುಧಾಮೂರ್ತಿ; ಏನದು?

Headless Chicken
ವಿಜ್ಞಾನ45 mins ago

Headless Chicken: ತಲೆ ಕತ್ತರಿಸಿದರೂ ಈ ಕೋಳಿ 18 ತಿಂಗಳು ಬದುಕಿತ್ತು! ಸಾಯುವ ಮೊದಲು ಮಾಲೀಕನನ್ನು ಶ್ರೀಮಂತಗೊಳಿಸಿತು!

Monsoon 2024
ದೇಶ1 hour ago

Monsoon 2024: ಮುಂದಿನ 24 ಗಂಟೆಗಳಲ್ಲೇ ಮುಂಗಾರು ಪ್ರವೇಶ; ಕರ್ನಾಟಕ ಸೇರಿ ಎಲ್ಲೆಲ್ಲಿ ಮಳೆ?

Belagavi Tour
ಪ್ರವಾಸ2 hours ago

Belagavi Tour: ಬೆಳಗಾವಿಗೆ ಭೇಟಿ ನೀಡಿದಾಗ ಈ ಸ್ಥಳಗಳನ್ನು ನೋಡಲು ಮರೆಯಬೇಡಿ

AUS vs NAM
ಕ್ರೀಡೆ2 hours ago

AUS vs NAM: ನಮೀಬಿಯಾ ವಿರುದ್ಧ ಅಭ್ಯಾಸ ಪಂದ್ಯವಾಡಿದ ಆಸೀಸ್​ ತಂಡದ ಕೋಚಿಂಗ್​ ಸಿಬ್ಬಂದಿ

Dream Of Retired Couple
ಪ್ರವಾಸ2 hours ago

Dream Of Retired Couple: ನಿರಂತರ ಮೂರೂವರೆ ವರ್ಷಗಳ ನೌಕಾಯಾನಕ್ಕಾಗಿ ತಮ್ಮದೆಲ್ಲವನ್ನೂ ಮಾರಿದ ದಂಪತಿ!

KSET Results 2024
ಕರ್ನಾಟಕ2 hours ago

KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌