ಕ್ರಿಕೆಟ್
IPL 2023: ಫಿಕ್ಸ್ ಆಗಿದೆಯಾ ಐಪಿಎಲ್ ಫೈನಲ್ ಪಂದ್ಯ; ಸಿಎಸ್ಕೆ ರನ್ನರ್ ಅಪ್?
ಫೈನಲ್ ಪಂದ್ಯವನ್ನು ಫಿಕ್ಸ್ ಮಾಡಲಾಗಿದ್ದು, ಗುಜರಾತ್ ತಂಡವೇ ಚಾಂಪಿಯನ್ ಆಗಿದೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಲಾಗಿದೆ.
ಅಹದಮಾಬಾದ್ : ಐಪಿಎಲ್ 2023ರ ಆವೃತ್ತಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಎರಡು ತಿಂಗಳ ಹಿಂದೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಸೆಣಸಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ನಡುವೆ ಪ್ರಶಸ್ತಿ ಸುತ್ತಿನ ಪಂದ್ಯ ನಡೆಯಲಿದೆ. ಫೈನಲ್ನ ಲ್ಲಿ 10ನೇ ಬಾರಿಗೆ ಕಣಕ್ಕಿಳಿದಿರುವ ಚೆನ್ನೈ ದಾಖಲೆಯ 5ನೇ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದ್ದರೆ, ಗುಜರಾತ್ ತಂಡ ಸಿಎಸ್ ಕೆ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಳ್ಳುವ ಪ್ರಯತ್ನ ಮಾಡಲಿದೆ.
ಫೈನಲ್ ಪಂದ್ಯ ಆರಂಭಕ್ಕೂ ಮುನ್ನ, ಐಪಿಎಲ್ 2023 ರ ಫೈನಲ್ ಫಿಕ್ಸಿಂಗ್ ನಡೆಯಲಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಪಂದ್ಯ ನಡೆಯುವ ನರೇಂದ್ರ ಮೋದಿ ಸ್ಟೇಡಿಯಮ್ನ ಚಿತ್ರವನ್ನು ಹಾಕಿ ಗುಜರಾತ್ ತಂಡ ಚಾಂಪಿಯನ್ ಹಾಗೂ ಸಿಎಸ್ಕೆ ರನ್ನರ್ ಅಪ್ ಎಂಬ ಸಂದೇಶವನ್ನು ಹರಡಲಾಗಿದೆ. ಈ ಮೂಲಕ ಪಂದ್ಯದಲ್ಲಿ ಫಿಕ್ಸಿಂಗ್ ನಡೆದಿದೆ ಎಂದು ಹೇಳಲಾಗುತ್ತಿದೆ.
Nijame antara masteruuu🥲🥲 https://t.co/H3ftfezbta
— T-Bag (@TheodRRRe) May 28, 2023
ಸ್ಟೇಡಿಯಮ್ನ ದೊಡ್ಡ ಪರದೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್ ಎಂದು ಬರೆದಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೀಗಾಗಿ ಸಿಎಸ್ಕೆ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದಾರೆ. ಆದರೆ, ಗುಜರಾತ್ ಅಭಿಮಾನಿಗಳು ಸಂತಸದಲ್ಲಿದ್ದಾರೆ.
ಸರಿ, ಇದು ಬಹುಶಃ ದೊಡ್ಡ ಫೈನಲ್ಗೆ ಮೊದಲು ಸ್ಕ್ರೀನ್ ಟೆಸ್ಟಿಂಗ್ ನಡೆಸಿರಬಹುದು ಎನ್ನಲಾಗಿದೆ. ಆದ್ದರಿಂದ ಬಹುಶಃ ಗುಜರಾತ್ ಟೈಟನ್ಸ್ ತಂಡಕ್ಕೂ ಇದೇ ರೀತಿಯ ಪರೀಕ್ಷೆಯನ್ನು ನಡೆಸಿರಬಹುದು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : IPL 2023 : ಫೈನಲ್ ಪಂದ್ಯಕ್ಕೆ ಮೊದಲೇ ನಿವೃತ್ತಿ ಘೋಷಿಸಿದ ಸಿಎಸ್ಕೆ ಬ್ಯಾಟರ್!
ಚೆನ್ನೈ ತಂಡ ಹಾಲಿ ಐಪಿಎಲ್ನಲ್ಲಿ ಗುಜರಾತ್ ವಿರುದ್ಧ ಸೆಣಸುತ್ತಿರುವುದು ಇದು ಮೂರನೇ ಬಾರಿ. ಅಹ್ಮದಾಬಾದ್ನ ಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ, ಗುಜರಾತ್ ತಂಡ ಗೆಲುವು ಕಂಡಿತ್ತು. ಆದರೆ, ಕ್ವಾಲಿಫೈಯರ್ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ಗುಜರಾತ್ ಸೋತಿತ್ತು. ಶುಕ್ರವಾರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆ ಮುಂಬಯಿ ಇಂಡಿಯನ್ಸ್ ವಿರುದ್ದ 62 ರನ್ಗಳ ಭರ್ಜರಿ ಗೆಲುವು ಸಾಧಿಸಿತ್ತು.
ಕಳೆದ ವರ್ಷ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದ ಚೆನ್ನೈ ತಂಡ 2023ರಲ್ಲಿ ಅದ್ಭುತ ಚೇತರಿಕೆ ಕಂಡಿದೆ. ಮೊದಲ ತಂಡವಾಗಿ ಫೈನಲ್ಗೇರುವ ಮೂಲಕ ಸಾಧನೆ ಮಾಡಿತ್ತು.
ಕ್ರಿಕೆಟ್
ICC World Cup 2023 : ಕ್ರಿಕೆಟ್ ದೇವರು ಸಚಿನ್ಗೆ ಕ್ರಿಕೆಟ್ ವಿಶ್ವಕಪ್ನ ವಿಶೇಷ ಗೌರವ
ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಕ್ಟೋಬರ್ 5 ರಂದು ನಡೆಯಲಿರುವ ಉದ್ಘಾಟನಾ ಪಂದ್ಯಕ್ಕೂ ಮೊದಲು ಸಚಿನ್ ಅವರು ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಟ್ರೋಫಿಯೊಂದಿಗೆ (ICC World Cup 2023) ಆಗಮಿಸಲಿದ್ದಾರೆ.
ಬೆಂಗಳೂರು: ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು 2023 ರ ಏಕದಿನ ಕ್ರಿಕೆಟ್ ವಿಶ್ವಕಪ್ನ (ICC World Cup 2023) ಜಾಗತಿಕ ರಾಯಭಾರಿಯಾಗಿ ಹೆಸರಿಸಲಾಗಿದೆ. ಭಾರತ ಆತಿಥ್ಯ ವಹಿಸಲಿರುವ ವಿಶ್ವಕಪ್ ಗೆ ಸಚಿನ್ ಅವರನ್ನು ಜಾಗತಿಕ ರಾಯಭಾರಿಯಾಗಿ ಹೆಸರಿಸಿರುವುದು ಸೂಕ್ತ ಗೌರವವಾಗಿದೆ. 12 ವರ್ಷಗಳ ಹಿಂದೆ 2011ರಲ್ಲಿ ತವರಿನಲ್ಲಿ ನಡೆದ ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್ ಕೊನೆಯ ಬಾರಿಗೆ ಟ್ರೋಫಿ ಎತ್ತಿ ಹಿಡಿದಿದ್ದರು.
ಸಚಿತ್ ತೆಂಡೂಲ್ಕರ್ ಅವರು ತಮ್ಮ ವೃತ್ತಿಜೀವನದಲ್ಲಿ ಆರು 50 ಓವರ್ಗಳ ಕ್ರಿಕೆಟ್ ವಿಶ್ವ ಕಪ್ನಲ್ಲಿ ಕಾಣಿಸಿಕೊಂಡು ಅಪೇಕ್ಷಣೀಯ ದಾಖಲೆಯನ್ನು ಹೊಂಡಿದ್ದಾರೆ. ಹೀಗಾಗಿ ಅವರನ್ನು ಅಂಬಾಸಿಡರ್ ಆಗಿ ಅಯ್ಕೆ ಮಾಡಲಾಗಿದೆ. ಮಾಸ್ಟರ್ ಬ್ಲಾಸ್ಟರ್, ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯಕ್ಕೆ ಮೊದಲು ಪುರುಷರ ಕ್ರಿಕೆಟ್ ವಿಶ್ವಕಪ್ ಟ್ರೋಫಿಯೊಂದಿಗೆ ನಡೆಯಲಿದ್ದಾರೆ.
1987 ರಲ್ಲಿ ಬಾಲ್ ಬಾಯ್ ಆಗಿ ಕ್ರಿಕೆಟ್ ಪ್ರೀತಿ ಬೆಳೆಸಿದ ದಿನದಿಂದಹಿಡಿದು ಆರು ಆವೃತ್ತಿಗಳಲ್ಲಿ ದೇಶವನ್ನು ಪ್ರತಿನಿಧಿಸುವವರೆಗೆ, ವಿಶ್ವಕಪ್ ಕ್ರಿಕೆಟ್ ಯಾವಾಗಲೂ ನನ್ನ ಹೃದಯದಲ್ಲಿ ವಿಶೇಷ ಸ್ಥಾನ ಹೊಂದಿದ್ದವು. 2011 ರಲ್ಲಿ ವಿಶ್ವಕಪ್ ಗೆದ್ದಿದ್ದು ನನ್ನ ಕ್ರಿಕೆಟ್ ಪ್ರಯಾಣದ ಹೆಮ್ಮೆಯ ಕ್ಷಣವಾಗಿದೆ ಎಂದು ಬ್ರಾಂಡ್ ಅಂಬಾಸಿಡರ್ ಆದ ಬಳಿಕ ಸಚಿನ್ ತೆಂಡೂಲ್ಕರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ನಡೆಯಲಿರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023ರಲ್ಲಿ ಅನೇಕ ತಂಡಗಳು ಮತ್ತು ಆಟಗಾರರು ಕಠಿಣ ಸ್ಪರ್ಧೆಗೆ ಸಜ್ಜಾಗಿದ್ದದಾರೆ. ಈ ಅದ್ಭುತ ಪಂದ್ಯಾವಳಿಯನ್ನು ಉತ್ಸುಕತೆಯಿಂದ ಎದುರು ನೋಡುತ್ತೇನೆ ಎಂದು ಹೇಳಿದ್ದಾರೆ.
ವಿಶ್ವಕಪ್ನಂಥ ಪ್ರಮುಖ ಟೂರ್ನಿಗಳು ಯುವ ಮನಸ್ಸುಗಳಲ್ಲಿ ಕನಸುಗಳನ್ನು ಮೂಡಿಸುತ್ತವೆ/ ಈ ಆವೃತ್ತಿಯು ಯುವ ಮನಸ್ಸುಗಳಿಗೆ ಕ್ರೀಡೆಗಳನ್ನು ತೊಡಗಿಸಿಕೊಳ್ಳಲು ಮತ್ತು ತಮ್ಮ ದೇಶಗಳನ್ನು ಉನ್ನತ ಮಟ್ಟದಲ್ಲಿ ಪ್ರತಿನಿಧಿಸಲು ಸ್ಫೂರ್ತಿ ನೀಡಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.
ರಾಯಭಾರಿಗಳ ಪಟ್ಟಿಯಲ್ಲಿ ಇನ್ಯಾರಿದ್ದಾರೆ
ವೆಸ್ಟ್ ಇಂಡೀಸ್ನ ವಿವಿಯನ್ ರಿಚರ್ಡ್ಸ್, ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್, ಇಂಗ್ಲೆಂಡ್ ವಿಶ್ವಕಪ್ ವಿಜೇತ ನಾಯಕ ಇಯಾನ್ ಮಾರ್ಗನ್, ಆಸ್ಟ್ರೇಲಿಯಾದ ಆರೋನ್ ಫಿಂಚ್, ಶ್ರೀಲಂಕಾದ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್, ನ್ಯೂಜಿಲೆಂಡ್ನ ರಾಸ್ ಟೇಲರ್, ಭಾರತದ ಸುರೇಶ್ ರೈನಾ, ಮಿಥಾಲಿ ರಾಜ್ ಮತ್ತು ಪಾಕಿಸ್ತಾನದ ಆಲ್ರೌಂಡರ್ ಮೊಹಮ್ಮದ್ ಹಫೀಜ್ ಐಸಿಸಿ ರಾಯಭಾರಿಗಳ ಪಟ್ಟಿಯಲ್ಲಿದ್ದಾರೆ. ಇವರೆಲ್ಲರೂ ದೇಶಾದ್ಯಂತ ಆಯ್ದ ಪಂದ್ಯಗಳಿಗೆ ಹಾಜರಾಗಲಿದ್ದಾರೆ, ಇದು ಬಹುನಿರೀಕ್ಷಿತ ವಿಶ್ವಕಪ್ನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಲಿದೆ.
ಇದನ್ನೂ ಓದಿ : ICC World Cup 2023 : ಭಾರತ- ನೆದರ್ಲ್ಯಾಂಡ್ಸ್ ಅಭ್ಯಾಸ ಪಂದ್ಯವೂ ರದ್ದು
ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಅಕ್ಟೋಬರ್ 5ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ಪ್ರಾರಂಭವಾಗಲಿದೆ. ಒಟ್ಟು 48 ಪಂದ್ಯಗಳು 10 ಸ್ಥಳಗಳಲ್ಲಿ ನಡೆಯಲಿದೆ. ನವೆಂಬರ್ 19 ರಂದು ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.
ಕ್ರಿಕೆಟ್
ICC World Cup 2023 : ಭಾರತ- ನೆದರ್ಲ್ಯಾಂಡ್ಸ್ ಅಭ್ಯಾಸ ಪಂದ್ಯವೂ ರದ್ದು
ಎರಡೂ ಅಭ್ಯಾಸ ಪಂದ್ಯಗಳು ಮಳೆಯಿಂದ ರದ್ದಾಗಿರುವ ಕಾರಣ ವಿಶ್ವ ಕಪ್ನಲ್ಲಿ (ICC World Cup 2023) ಭಾರತ ತಂಡ ನೇರವಾಗಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.
ತಿರುವನಂತಪುರ : ನೆದರ್ಲ್ಯಾಂಡ್ಸ್ ವಿರುದ್ಧದ ಭಾರತ ತಂಡದ ವಿಶ್ವ ಕಪ್ (ICC World Cup 2023) ಅಭ್ಯಾಸ ಪಂದ್ಯವೂ ರದ್ದಾಗಿದೆ. ಗುವಾಹಟಿಯಲ್ಲಿ ನಿಗದಿಯಾಗಿದ್ದ ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯವೂ ಮಳೆಯ ಕಾರಣಕ್ಕೆ ರದ್ದಾಗಿತ್ತು. ಆ ಪಂದ್ಯ ಗುವಾಹಟಿಯಲ್ಲಿ ಆಯೋಜನೆಗೊಂಡಿತ್ತು. ಹೀಗಾಗಿ ಯಾವುದೇ ಅಭ್ಯಾಸ ಪಂದ್ಯಗಳು ಇಲ್ಲದೆ ಭಾರತ ತಂಡ ನೇರವಾಗಿ ವಿಶ್ವ ಕಪ್ ಆಡಲಿದೆ. ಬಲಿಷ್ಠ ಆಸ್ಟ್ರೇಲಿಯಾ ತಂಡದ ವಿರುದ್ಧ ತನ್ನ ವಿಶ್ವ ಕಪ್ ಅಭಿಯಾನ ಆರಂಭಿಸಲಿದೆ. ಅಕ್ಟೋಬರ್ 8ರಂದು ಚೆನ್ನೈನ ಚೆಪಾಕ್ ಸ್ಟೇಡಿಯಮ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಆಯೋಜನೆಗೊಂಡಿದೆ.
ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿರುವ ವಿಶ್ವಕಪ್ 2023 ಕ್ಕೆ ಮುಂಚಿತವಾಗಿ ಭಾರತ ಮತ್ತು ನೆದರ್ಲ್ಯಾಂಡ್ಸ್ ಇಂದು ತಮ್ಮ ಅಂತಿಮ ಅಭ್ಯಾಸ ಪಂದ್ಯದಲ್ಲಿ ಮುಖಾಮುಖಿಯಾಗಬೇಕಾಗಿತ್ತು.. ಇಂಗ್ಲೆಂಡ್ ವಿರುದ್ಧದ ಭಾರತದ ಹಿಂದಿನ ಅಭ್ಯಾಸ ಪಂದ್ಯಗಳು ಒಂದು ಎಸೆತವೂ ನಡೆಯದೇ ರದ್ದಾಗಿದ್ದವು. ಮತ್ತೊಂದೆಡೆ, ಆಸ್ಟ್ರೇಲಿಯಾ ವಿರುದ್ಧದ ನೆದರ್ಲ್ಯಾಂಡ್ಸ್ ಪಂದ್ಯವು ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿತ್ತು. ಆ ಪಂದ್ಯದಲ್ಲಿ ನೆದರ್ಲ್ಯಾಂಡ್ ಬೌಲರ್ಗಳು ಉತ್ತಮ ಪ್ರದರ್ಶನ ನೀಡಿ ಆಸ್ಟ್ರೇಲಿಯಾ ತಂಡವನ್ನು 23 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ಗಳಿಗೆ ನಿಯಂತ್ರಿಸಿತ್ತು,
UPDATE: The warm-up match between India & Netherlands is abandoned due to persistent rain. #TeamIndia | #CWC23 https://t.co/rbLo0WHrVJ pic.twitter.com/0y4Ey1Dvye
— BCCI (@BCCI) October 3, 2023
ಇದೀಗ ನೆದಲ್ಯಾಂಡ್ಸ್ ತಂಡದ ಮತ್ತೊಂದು ಪಂದ್ಯವೂ ಫಲಿತಾಂಶವೇ ಇಲ್ಲದೆ ರದ್ದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕನಿಷ್ಠ ಬೌಲಿಂಗ್ ಮಾಡುವ ಅವಕಾಶವಾದರೂ ಆ ತಂಡಕ್ಕೆ ಸಿಕ್ಕಿತ್ತು. ಆದರೆ, ಭಾರತ ವಿರುದ್ಧ ಒಂದೇ ಒಂದು ಎಸೆತ ಮಾಡಲು ಅವಕಾಶ ಸಿಗಲಿಲ್ಲ.
ಪ್ರಯಾಣದ ಸುಸ್ತು
ಸ್ಥಳೀಯ ಅನುಕೂಲಗಳನ್ನು ಬಳಸಿಕೊಂಡು ಭಾರತ ತಂಡ ವಿಶ್ವ ಕಪ್ ಗೆಲ್ಲುತ್ತದೆ ಎಂದು ವಿಶ್ಲೇಷಣೆ ಮಾಡಲಾಗಿದೆ. ಅದಕ್ಕೆ ಪೂರವಕಾಗಿ ಭಾರತ ತಂಡವೂ ಅತ್ಯಂತ ಉಮೇದಿನಲ್ಲಿದೆ. ಹೀಗಾಗಿ ವಿಶ್ವ ಕಪ್ಗೆ ಮೊದಲು ಅಭ್ಯಾಸ ಪಂದ್ಯದಲ್ಲಿ ಆಡುವುದು ಈ ತಂಡಕ್ಕೆ ಅನಿವಾರ್ಯವಾಗಿತ್ತು. ಆದರೆ, ತಂಡಕ್ಕೆ ಎರಡೂ ಅಭ್ಯಾಸ ಪಂದ್ಯಗಳು ದೊರಕಿಲ್ಲ.
ಭಾರತ ತಂಡದ ಪಂದ್ಯಗಳು ಭಾರತದ 10 ಪ್ರದೇಶಗಳಲ್ಲಿ ನಡೆಯಲಿದೆ. ಹೀಗಾಗಿ ತಂಡವು ಒಂದೂವರೆ ತಿಂಗಳ ಅವಧಿಯಲ್ಲಿ ಸುಮಾರು ಸಾವಿರಾರು ಕಿಲೋ ಮೀಟರ್ ಪ್ರಯಾಣ ಮಾಡಬೇಕಾಗಿದೆ. ಹೀಗಾಗಿ ಅಭ್ಯಾಸ ಪಂದ್ಯದ ಪ್ರಯಾಣ ತಂಡಕ್ಕೆ ಹೊರೆಯೆನಿಸಬಹುದು. ಮೂರು ದಿನಗಳ ಹಿಂದೆ 15 ಆಟಗಾರರು ನೇರವಾಗಿ ಗುವಾಹಟಿಗೆ ಹೋಗಿತ್ತು. ಆದರೆ ಆ ಪ್ರಯಾಣದಿಂದ ತಂಡಕ್ಕೆ ಏನೂ ಲಾಭವಾಗಿರಲಿಲ್ಲ. ಮಳೆಯಿಂದಾಗಿ ಆಟ ರದ್ದಾಗಿತ್ತು. ಅಲ್ಲಿಂದ 2604 ಕಿಲೋ ಮೀಟರ್ ಪ್ರಯಾಣಿಸಿ ತಿರುವನಂತಪುರಕ್ಕೆ ಬಂದಿದ್ದ ಭಾರತ ತಂಡ ಇಲ್ಲಿಯೂ ನೆಟ್ ಪ್ರಾಕ್ಟೀಸ್ ಮಾಡಿದ್ದಷ್ಟೇ ಬಂತು. ಪಂದ್ಯ ನಡೆಯದ ಕಾರಣ ಹೆಚ್ಚಿನ ಪ್ರಯೋಜನ ದೊರಕಿಲ್ಲ.
ತಂಡಗಳು
ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ (ವಿಕೆ), ಸೂರ್ಯಕುಮಾರ್ ಯಾದವ್.
ನೆದರ್ಲ್ಯಾಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ಸಿ & ವಿಕೆ), ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೀಡ್, ವಿಕ್ರಮ್ಜಿತ್ ಸಿಂಗ್, ತೇಜಾ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಆಕರ್ಮ್ಯಾನ್, ರೋಲೊಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಿಯಾನ್ ಕ್ಲೈನ್, ವೆಸ್ಲಿ ಬಾರೆಸಿ, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್, ಸಿಬ್ರಾಂಡ್ ಎಂಗೆಲ್ಬ್ರೆಕ್ಟ್.
ಕ್ರಿಕೆಟ್
ICC World Cup 2023: ವಿಶ್ವಕಪ್ ಫೈಟ್ಗೆ ಪಾಕ್ ಸಜ್ಜು; ತಂಡದ ಬಲ-ದೌರ್ಬಲ್ಯಗಳೇನು? ಇಲ್ಲಿದೆ ವಿವರಣೆ
ICC World Cup 2023: ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡವು ಭಾರತಕ್ಕೆ ಬಂದಿಳಿದಿದ್ದು, ಭರ್ಜರಿ ಸ್ವಾಗತ ದೊರೆತಿದೆ. ವಿಶ್ವಕಪ್ಗೆ ಪಾಕ್ ತಂಡ ಹೇಗೆ ಸಿದ್ಧವಾಗಿದೆ? ತಂಡದ ಪ್ಲಸ್ ಹಾಗೂ ಮೈನಸ್ ಏನು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಬೆಂಗಳೂರು: 2019ರ ಏಕದಿನ ವಿಶ್ವಕಪ್ನಲ್ಲಿ ಸೆಮಿಫೈನಲ್ ತಲುಪುವಲ್ಲಿಯೂ ವಿಫಲ. 2021 ಹಾಗೂ 2022ರಲ್ಲಿ ನಡೆದ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಹಿನ್ನಡೆ. 2022ರ ಏಷ್ಯಾಕಪ್ ಫೈನಲ್ನಲ್ಲಿ ಸೋಲು. 2023ರ ಏಷ್ಯಾಕಪ್ನಲ್ಲೂ ಫೈನಲ್ ತಲುಪುವಲ್ಲಿ ವಿಫಲ. ಅತ್ಯುತ್ತಮ ತಂಡವನ್ನೇ ಹೊಂದಿದ್ದರೂ ಪಾಕಿಸ್ತಾನ ಕ್ರಿಕೆಟ್ ತಂಡವು ಹೀಗೆ ಸಾಲು ಸಾಲು ವಿಶ್ವ ಕ್ರಿಕೆಟ್ ಟೂರ್ನಿಗಳಲ್ಲಿ ಸೋಲನುಭವಿಸಿದೆ. ಆದರೆ, ಈ ಸೋಲನ್ನು ಮರೆತು, ಗೆಲುವಿನ ಸಂಭ್ರಮ ಆಚರಿಸುವ ಮನೋಭಾವದೊಂದಿಗೆ ಪಾಕ್ ಕ್ರಿಕೆಟ್ ತಂಡವು ಭಾರತಕ್ಕೆ ಆಗಮಿಸಿದೆ. ಹಾಗಾದರೆ, 2023ರ ವಿಶ್ವಕಪ್ಗೆ ಪಾಕ್ ಕ್ರಿಕೆಟ್ ತಂಡ ಹೇಗೆ ಸಿದ್ಧವಾಗಿದೆ? ಅದರ ಬಲಾಬಲವೇನು ಎಂಬುದರ ಇಣುಕು ನೋಟ ಇಲ್ಲಿದೆ.
ಪಾಕಿಸ್ತಾನದ 15 ಸದಸ್ಯರ ತಂಡ
ಬಾಬರ್ ಅಜಂ (ನಾಯಕ), ಶದಾಬ್ ಖಾನ್ (ಉಪ ನಾಯಕ), ಫಖರ್ ಜಮಾನ್, ಇಮಾಮ್ ಉಲ್ ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಇಫ್ತಿಕಾರ್ ಅಹ್ಮದ್, ಅಘಾ ಸಲ್ಮಾನ್, ಸೌದ್ ಶಕೀಲ್, ಮೊಹಮ್ಮದ್ ನವಾಜ್, ಶಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ, ಉಸಾಮ ಮಿರ್, ಮೊಹಮ್ಮದ್ ವಸೀಂ.
ಬಾಬರ್ ಅಜಂ ಬಳಗದ ಸಾಮರ್ಥ್ಯವೇನು?
- ಬಲಿಷ್ಠ ಬ್ಯಾಟಿಂಗ್ ಲೈನ್ಅಪ್ ಹೊಂದಿರುವುದು ಪಾಕ್ ತಂಡದ ಸಾಮರ್ಥ್ಯ. ಬಾಬರ್ ಅಜಂ, ಫಖರ್ ಜಮಾನ್, ಇಮಾಮ್ ಉಲ್ ಹಕ್, ಮೊಹಮ್ಮದ್ ರಿಜ್ವಾನ್, ಇಫ್ತಿಕಾರ್ ಅಹ್ಮದ್ ಅವರು ವಿಶ್ವ ದರ್ಜೆಯ ಬ್ಯಾಟ್ಸ್ಮನ್ಗಳಾಗಿದ್ದಾರೆ. ಇವರು ಯಾವುದೇ ಪಂದ್ಯದ ಗತಿ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.
- ಪಾಕಿಸ್ತಾನದ ವೇಗದ ಬೌಲಿಂಗ್ ಅಟ್ಯಾಕ್ಗೆ ಜಗತ್ತಿನ ಶ್ರೇಷ್ಠ ಬ್ಯಾಟ್ಸ್ಮನ್ಗಳೇ ಒಂದು ಕ್ಷಣ ಯೋಚಿಸುತ್ತಾರೆ. ಶಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಮೊಹಮ್ಮದ್ ವಸೀಂ ಪ್ರಮುಖ ಪೇಸರ್ಗಳಾಗಿದ್ದಾರೆ.
- ಬ್ಯಾಟಿಂಗ್ ಹಾಗೂ ಬೌಲಿಂಗ್ ಜತೆಗೆ ಫೀಲ್ಡಿಂಗ್ನಲ್ಲೂ ಪಾಕಿಸ್ತಾನ ತಂಡವು ಬಲಿಷ್ಠವಾಗಿದೆ. ಜಗತ್ತಿನಲ್ಲೇ ಉತ್ತಮ ಫೀಲ್ಡರ್ಗಳಿರುವ ರಾಷ್ಟ್ರದಲ್ಲಿ ಪಾಕ್ 2ನೇ ಸ್ಥಾನದಲ್ಲಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಹಾಗಾಗಿ, ಪ್ರತಿ ಪಂದ್ಯದಲ್ಲಿ ಪಾಕ್ ತಂಡವು 20-30 ರನ್ ಉಳಿಸುವುದರಲ್ಲಿ ಎರಡು ಮಾತಿಲ್ಲ.
- ಬಾಬರ್ ಅಜಂ ಉತ್ತಮ ನಾಯಕತ್ವ ಹಾಗೂ ಅವರ ಅತ್ಯದ್ಭುತ ಬ್ಯಾಟಿಂಗ್ ಕೂಡ ಪಾಕ್ಗೆ ಸಕಾರಾತ್ಮಕವಾಗಿದೆ. ಮಹತ್ವದ ಟೂರ್ನಿಗಳಲ್ಲಿ ಇದು ಸಾಬೀತಾಗಿದೆ.
ಪಾಕ್ ತಂಡದ ದೌರ್ಬಲ್ಯಗಳೇನು?
- ಸ್ಪಿನ್ ವಿಭಾಗವೇ ಪಾಕ್ ಕ್ರಿಕೆಟ್ ತಂಡದ ದೊಡ್ಡ ತಲೆನೋವಾಗಿದೆ. ಉಪ ನಾಯಕ ಶದಾಬ್ ಖಾನ್ ಅವರು ಅಲ್ರೌಂಡರ್ ಆಗದ್ದರೂ ಏಷ್ಯಾ ಕಪ್ ಟೂರ್ನಿಯಲ್ಲ ಅವರ ಆಟ ನಡೆದಿರಲಿಲ್ಲ. ಸ್ಪಿನ್ನರ್ಗಳಿಗೆ ಭಾರತದ ಪಿಚ್ಗಳು ಹೇಳಿ ಮಾಡಿಸಿದಂತಿರುವ ಕಾರಣ ಸ್ಪಿನ್ ವಿಭಾಗವು ಪಾಕ್ಗೆ ತಲೆನೋವಾಗಿದೆ.
- ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ನಡೆದ ಪಂದ್ಯದ ವೇಳೆ ಗಾಯಗೊಂಡಿರುವ ನಸೀಮ್ ಶಾ ಅನುಪಸ್ಥಿತಿಯೂ ಪಾಕ್ಗೆ ಕಾಡಲಿದೆ. ಇವರ ಜಾಗಕ್ಕೆ ಅಷ್ಟೇನೂ ಫಾರ್ಮ್ನಲ್ಲಿರುವ ಹಸನ್ ಅಲಿಗೆ ಪಾಕ್ ಮಣೆ ಹಾಕಿದೆ. ಆದರೂ, ವೇಗಿ ನಸೀಮ್ ಶಾ ಅಲಭ್ಯತೆಯು ಪಾಕಿಸ್ತಾನಕ್ಕೆ ಕಾಡಲಿದೆ.
- ಇತ್ತೀಚಿನ ಸರಣಿಗಳಲ್ಲಿ ಮೊಹಮ್ಮದ್ ರಿಜ್ವಾನ್ ಹಾಗೂ ಸಲ್ಮಾನ್ ಅಲಿ ಅಘಾ ಅವರಿಂದ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಕಾಣದಿರುವುದು ಬಾಬರ್ ಅಜಂ ಅವರಿಗೆ ನುಂಗಲಾರದ ತುತ್ತಾಗಿದೆ. ಪ್ರಮುಖ ಪಂದ್ಯಗಳಲ್ಲಿಯೇ ಇವರು ಕೈಕೊಡುವುದು ಕೂಡ ಹೆಚ್ಚು ರೂಢಿಯಾಗಿದೆ.
- ಅಗ್ರ ಕ್ರಮಾಂಕದ ಸದೃಢ ಬ್ಯಾಟಿಂಗ್ ಪಾಕಿಸ್ತಾನದ ಬಲವಾದರೆ, ಇದೇ ದೌರ್ಬಲ್ಯವೂ ಆಗಿದೆ. ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ಔಟಾದರೆ ಸಾಕು, ಪಾಕ್ ಇನಿಂಗ್ಸ್ ಮುಗಿದಂತೆಯೇ ಎಂಬಂತಾಗಿದೆ. ಅದರಲ್ಲೂ, ದೀರ್ಘ ಸಮಯದ ನಂತರ ಭಾರತದ ಪಿಚ್ಗಳಲ್ಲಿ ಆಡುತ್ತಿದ್ದು, ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಇದನ್ನೂ ಓದಿ: ICC World Cup 2023 : ವಿಶ್ವ ಕಪ್ಗೆ ಆಡುವ ಭಾರತ ತಂಡದ ಬಲಾಬಲವೇನು? ಗೆಲುವಿನ ಅವಕಾಶ ಎಷ್ಟಿದೆ?
ಪಾಕ್ಗೆ ಇರುವ ಒಳ್ಳೆಯ ಅವಕಾಶಗಳೇನು?
ಪಾಕಿಸ್ತಾನ ತಂಡವು ಕಳೆದ 12 ತಿಂಗಳಿಂದ ಸತತವಾಗಿ ಉತ್ತಮ ಪ್ರದರ್ಶನ ತೋರಿದೆ. ವಿಶ್ವ ಏಕದಿನ ರ್ಯಾಂಕಿಂಗ್ನಲ್ಲಿ ಎರಡನೇ ಸ್ಥಾನದಲ್ಲಿರುವ ಪಾಕ್ ತಂಡವು ಏಕದಿನ ಕ್ರಿಕೆಟ್ನ ಅತ್ಯುತ್ತಮ ತಂಡ ಎನಿಸಿದೆ. ಬಾಬರ್ ಅಜಂ ನಾಯಕತ್ವವೂ ಉತ್ತಮವಾಗಿದೆ. ಕಳೆದ 27 ವರ್ಷಗಳಿಂದ ಪಾಕಿಸ್ತಾನ ಏಕದಿನ ವಿಶ್ವಕಪ್ ಗೆದ್ದಿಲ್ಲ. ಬಲಿಷ್ಠ ತಂಡ, ಉತ್ತಮ ನಾಯಕತ್ವ, ಏಷ್ಯಾದಲ್ಲಿಯೇ ಪಂದ್ಯ ಆಯೋಜನೆಗೊಂಡಿರುವ ಕಾರಣ ವಿಶ್ವಕಪ್ ಗೆಲ್ಲಲು ಪಾಕ್ಗೆ ಒಳ್ಳೆಯ ಅವಕಾಶಗಳಿವೆ.
ಹೀಗಿದೆ ಪಾಕ್ ತಂಡದ ವೇಳಾಪಟ್ಟಿ
ಅಕ್ಟೋಬರ್ 5ರಿಂದ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಪಾಕಿಸ್ತಾನವು ಮೊದಲ ಪಂದ್ಯವನ್ನು ಅಕ್ಟೋಬರ್ 6ರಂದು ನೆದರ್ಲೆಂಡ್ಸ್ ವಿರುದ್ಧ ಆಡಲಿದೆ. ಅ.10ರಂದು ಶ್ರೀಲಂಕಾ, ಅ.14ರಂದು ಭಾರತ, ಅ.20 ಆಸ್ಟ್ರೇಲಿಯಾ, ಅ.23 ಅಫಘಾನಿಸ್ತಾನ, ಅ.26 ದಕ್ಷಿಣ ಆಫ್ರಿಕಾ, ಅ.31 ಬಾಂಗ್ಲಾದೇಶ, ನವೆಂಬರ್ 4 ನ್ಯೂಜಿಲ್ಯಾಂಡ್ ಹಾಗೂ ನವೆಂಬರ್ 11ರಂದು ಇಂಗ್ಲೆಂಡ್ ವಿರುದ್ಧ ಆಡಲಿದೆ. ಅದರಲ್ಲೂ, ಅಹ್ಮದಾಬಾದ್ನಲ್ಲಿ ನಡೆಯುವ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವು ತೀವ್ರ ಕುತೂಹಲ ಕೆರಳಿಸಿದೆ.
ವಿಶ್ವಕಪ್ ಕುರಿತ ಇನ್ನಷ್ಟು ಆಸಕ್ತಿದಾಯಕ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಕ್ರಿಕೆಟ್
ಫೈನಲ್ ಪ್ರವೇಶಿಸಿ ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಲವ್ಲಿನಾ ಬೋರ್ಗಹೈನ್
ಬಾಕ್ಸರ್ ಲವ್ಲಿನಾ ಬೋರ್ಗಹೈನ್(Lovlina Borgohain) ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್(Asian Games 2023) ಕ್ರೀಡಾಕೂಟದಲ್ಲಿ ಫೈನಲ್ ಪ್ರವೇಶಿಸುವ ಮೂಲಕ ಚಿನ್ನದ ಪದಕ ಬರವಸೆ ಮೂಡಿಸಿದ್ದಾರೆ.
ಹ್ಯಾಂಗ್ಝೌ: ಟೋಕಿಯೊ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೋರ್ಗಹೈನ್(Lovlina Borgohain) ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್(Asian Games 2023) ಕ್ರೀಡಾಕೂಟದಲ್ಲಿ ಫೈನಲ್ ಪ್ರವೇಶಿಸುವ ಮೂಲಕ ಚಿನ್ನದ ಪದಕ ಬರವಸೆ ಮೂಡಿಸಿದ್ದಾರೆ. ಜತೆಗೆ ಮುಂದಿನ ವರ್ಷ ಪ್ಯಾರಿಸ್ನಲ್ಲಿ ನಡೆಯುವ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದಿದ್ದಾರೆ.
ಮಂಗಳವಾರ ಹ್ಯಾಂಗ್ಝೌನಲ್ಲಿ ನಡೆದ 75 ಕೆಜಿ ವಿಭಾಗದ ಮಹಿಳಾ ಬಾಕ್ಸಿಂಗ್ ಸೆಮಿಫೈನಲ್ನಲ್ಲಿ ಲವ್ಲಿನಾ ಅವರು ಥಾಯ್ಲೆಂಡ್ನ ಬೈಸನ್ ಮನೀಕಾನ್ ವಿರುದ್ಧ ಕಮಾಂಡಿಂಗ್ ಗೆಲುವು ಸಾಧಿಸಿ ಫೈನಲ್ಗೆ ಪ್ರವೇಶಿಸಿದರು. ಲವ್ಲಿನಾ 5-0 ಅಂಕಗಳಿಂದ ಗೆದ್ದು ಮರೆದಾಡಿದರು. ಈ ಮೂಲಕ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕವನ್ನು ಖಚಿತಪಡಿಸಿದರು. ಭಾರತ ಸದ್ಯ 13 ಚಿನ್ನ, 24 ಬೆಳ್ಳಿ ಮತ್ತು 25 ಕಂಚಿನ ಪದಕ ಸೇರಿದಂತೆ ಒಟ್ಟು 62 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಇದೇ ವರ್ಷ ಮಾರ್ಚ್ನಲ್ಲಿ ನಡೆದಿದ್ದ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ(Women’s Boxing Championship) ಲವ್ಲಿನಾ ಅವರು ಚಿನ್ನದ ಪದಕ ಜಯಿಸಿದ್ದರು. ನೂತನ ತೂಕ ವಿಭಾಗದಲ್ಲಿ ಸ್ಪರ್ಧೆಗೆ ಇಳಿದಿದ್ದರು. 69 ಕೆಜಿ ವೆಲ್ಟರ್ವೆಟ್ನಿಂದ 75 ಕೆಜಿ ಮಿಡ್ಲ್ ವೇಟ್ಗೆ ಸ್ಪರ್ಧೆಯನ್ನು ಬದಲಿಸಿಕೊಂಡು ಸ್ಪರ್ಧಿಸಿದ್ದರು. ಕಳೆದ ಟೋಕಿಯೊ ಒಲಿಂಪಿಕ್ಸ್ನಲ್ಲಿ ಲವ್ಲಿನಾ 69 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದರು.
After her successful semi-final match, @LovlinaBorgohai reflects on the mindset and stress that surrounded her during the match and how she managed a comeback, ultimately bagging the #Paris2024 Quota.💥🥊
— SAI Media (@Media_SAI) October 3, 2023
Listen In🔉
All the best for the Finals, champ👍🏻#Cheer4India#Hallabol… pic.twitter.com/rwBW0L1Vig
ಕಂಚಿಗೆ ಪಂಚ್ ನೀಡಿದ ಪ್ರೀತಿ
ಇಂದು(ಮಂಗಳವಾರ) ನಡೆದ 54 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಭಾರತದ ಮಹಿಳಾ ಬಾಕ್ಸರ್ ಪ್ರೀತಿ ಪವಾರ್(Preeti Pawar) ಕಂಚಿನ ಪದಕ್ಕೆ ಪಂಚ್ ನೀಡಿದ್ದಾರೆ. ಪ್ರೀತಿ ಸೆಮಿಫೈನಲ್ನಲ್ಲಿ ಸೋಲು ಕಂಡು ಕಂಚಿಗೆ ತೃಪ್ತಿಪಟ್ಟರು. ಚೀನಾದ ಯುವಾನ್ ಚಾಂಗ್ ವಿರುದ್ಧ ಮೊದಲ ಸುತ್ತಿನಲ್ಲಿ 4-1 ಅಂತರದಿಂದ ಸೋಲು ಕಂಡರು. ಆದರೆ ದ್ವಿತೀಯ ಸುತ್ತಿನಲ್ಲಿ ತಮ್ಮ ಪವರ್ ಪಂಚ್ಗಳ ಮೂಲಕ ಗೆದ್ದು ಪಂದ್ಯದಲ್ಲಿ ಹಿಡಿತ ಸಾಧಿಸಿದರು. ಆ ಬಳಿಕದ ಸುತ್ತಿನಲ್ಲಿ ಇದೇ ಲಯವನ್ನು ಮುಂದುವರಿಸಲು ಸಾಧ್ಯವಾಗದೆ ಅಂತಿಮವಾಗಿ ವಿರುದ್ಧ 5-0 ಅಂಕದಿಂದ ಸೋಲು ಕಂಡರು.
ಇದನ್ನೂ ಓದಿ Asian Games 2023: ಸೆಮಿಯಲ್ಲಿ ಸೋತು ಕಂಚಿಗೆ ತೃಪ್ತಿಪಟ್ಟ ಪ್ರೀತಿ ಪವಾರ್
ಪುರುಷರ ಕ್ಯಾನೋ ತಂಡಕ್ಕೆ ಕಂಚು
ಬೆಳಗ್ಗೆ ನಡೆದ ಪುರುಷರ ಕ್ಯಾನೋ ಡಬಲ್ 1000 ಮೀ ಫೈನಲ್ನಲ್ಲಿ ಭಾರತದ ಅರ್ಜುನ್ ಸಿಂಗ್(Arjun Singh) ಮತ್ತು ಸುನಿಲ್ ಸಿಂಗ್(Sunil Singh) ಅವರು ಕಂಚಿನ ಪದಕ ಗೆದ್ದಿದ್ದರು. ಭಾರತದ ಜೋಡಿಯು 3:53.329 ಸೆಕೆಂಡ್ಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತು. ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಈ ಸ್ಪರ್ಧೆಯಲ್ಲಿ ಭಾರತಕ್ಕೆ ಇಲಿದ 2ನೇ ಪದಕವಾಗಿದೆ. ಇದಕ್ಕೂ ಮುನ್ನ 1994 ರಲ್ಲಿ ಹಿರೋಷಿಮಾದಲ್ಲಿ ನಡೆದಿದ್ದ ಕೂಟದಲ್ಲಿ ಭಾರತದ ಜಾನಿ ರೋಮೆಲ್ ಮತ್ತು ಸಿಜಿ ಕುಮಾರ್ ಸದಾನಂದನ್ ಕಂಚು ಗೆದ್ದಿದ್ದರು. ಉಜ್ಬೇಕಿಸ್ತಾನದ ಖೋಲ್ಮುರಾಡೋವ್ ಮತ್ತು ನುರಿಸ್ಲೋಮ್ ತುಖ್ತಾಸಿನ್ ಉಗ್ಲಿ (3:43.796 ಸೆಕೆಂಡು) ಚಿನ್ನ ಗೆದ್ದರೆ, ಕಜಕಿಸ್ತಾನದ ಟಿಮೊಫಿ ಯೆಮೆಲಿಯಾನೊವ್ ಮತ್ತು ಸೆರ್ಗೆ ಯೆಮೆಲಿಯಾನೊವ್ (3:49.991 ಸೆಕೆಂಡ್) ಬೆಳ್ಳಿ ಗೆದ್ದರು.
ನಿಖತ್ ಜರೀನ್ ವಿಫಲ
ಭಾರತದ ಬಾಕ್ಸಿಂಗ್ ತಾರೆ, 2 ಬಾರಿ ವಿಶ್ವ ಚಾಂಪಿಯನ್, 2022ರ ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ನಿಖತ್ ಜರೀನ್ ಅವರು ಸೋವಮಾರ ನಡೆದಿದ್ದ 50 ಕೆ.ಜಿ. ವಿಭಾಗದ ಸೆಮಿಫೈನಲ್ನಲ್ಲಿ ಸೋತು ಕಂಚಿಗೆ ತೃಪ್ತಿಪಟ್ಟಿದ್ದರು. ಅವರ ಮೇಲೆ ಚಿನ್ನದ ನಿರೀಕ್ಷೆ ಮಾಡಲಾಗಿತ್ತು. ಆದರೆ ಅವರು ನಿರಾಸೆ ಮೂಡಿಸಿದ್ದರು. ಪ್ಯಾರಿಸ್ನಲ್ಲಿ ನಡೆಯುವ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದಿದ್ದಾರೆ. ಕಳೆದ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದರು.
-
ದೇಶ21 hours ago
Viral Video: ಫ್ರಿಡ್ಜ್ ಡೋರ್ ತೆಗೆಯಲು ಹೋದ 4 ವರ್ಷದ ಬಾಲಕಿಗೆ ಕರೆಂಟ್ ಶಾಕ್, ಸ್ಥಳದಲ್ಲೇ ಸಾವು
-
ಪ್ರಮುಖ ಸುದ್ದಿ16 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ಟಾಪ್ 10 ನ್ಯೂಸ್23 hours ago
VISTARA TOP 10 NEWS : ನಮಗೆ ರಕ್ಷಣೆ ಇಲ್ಲವೇ ಎಂದ ಹಿಂದೂಗಳು, ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಶಾಮನೂರು ಇತರ ದಿನದ ಪ್ರಮುಖ ಸುದ್ದಿಗಳು
-
ದೇಶ22 hours ago
K Annamalai: ಲೇಡಿ ರಿಪೋರ್ಟರ್ ಜತೆ ಅಣ್ಣಾಮಲೈ ಕಿರಿಕ್! ಆಕೆ ಕೇಳಿದ ಪ್ರಶ್ನೆಗೆ ರೇಗಿದ ಬಿಜೆಪಿ ನಾಯಕ
-
ಕ್ರಿಕೆಟ್24 hours ago
ICC World Cup 2023 : ಭಾರತದ ಮಾಜಿ ಆಟಗಾರ ಅಫಘಾನಿಸ್ತಾನ ತಂಡದ ಮೆಂಟರ್
-
ದೇಶ11 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
ಕಿರುತೆರೆ6 hours ago
BBK Season 10 : ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?
-
ಕ್ರೈಂ12 hours ago
4 ವರ್ಷದಿಂದ ಇಬ್ಬರು ಪುತ್ರಿಯರ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿಯ ಬಂಧನ; ಇವನೆಂಥಾ ತಂದೆ?