Ishan Kishan: ಬಿಸಿಸಿಐ ಎಚ್ಚರಿಕೆಗೂ ಡೋಂಟ್ ಕೇರ್; ರಣಜಿ ಟ್ರೋಫಿಗೆ ಇಶಾನ್​ ​ ಮತ್ತೆ ಚಕ್ಕರ್​! - Vistara News

ಕ್ರೀಡೆ

Ishan Kishan: ಬಿಸಿಸಿಐ ಎಚ್ಚರಿಕೆಗೂ ಡೋಂಟ್ ಕೇರ್; ರಣಜಿ ಟ್ರೋಫಿಗೆ ಇಶಾನ್​ ​ ಮತ್ತೆ ಚಕ್ಕರ್​!

ಬ್ಯಾಟಿಂಗ್​ ತಾಂತ್ರಿಕತೆಯ ದೋಷ ಸರಿಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವುದರಿಂದ ಕಿಶನ್ ಕಿಶನ್​ ಅವರು​ ರೆಡ್​ಬಾಲ್​ ಕ್ರಿಕೆಟ್​ನಿಂದ ದೂರ ಉಳಿದಿದ್ದಾರೆ ಎಂದು ಅವರ ಆಪ್ತಮೂಲಗಳು ಹೇಳಿವೆ.

VISTARANEWS.COM


on

ishan kishan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ರಾಷ್ಟ್ರೀಯ ತಂಡದ ಗುತ್ತಿಗೆ ಆಟಗಾರರು ದೇಶೀಯ ಕ್ರಿಕೆಟ್​ನಲ್ಲಿ ಆಡುವುದು ಕಡ್ಡಾಯವೆಂದು ಬಿಸಿಸಿಐ(BCCI) ಸೂಚನೆ ನೀಡಿದ ಹೊರತಾಗಿಯೂ ವಿಕೆಟ್​ ಕೀಪರ್​-ಬ್ಯಾಟರ್​ ಇಶಾನ್​ ಕಿಶನ್​(Ishan Kishan), ರಣಜಿ ಟ್ರೋಫಿಯಲ್ಲಿ(ranji trophy) ಜಾರ್ಖಂಡ್​ ತಂಡದ ಕೊನೇಯ ಲೀಗ್​ ಪಂದ್ಯದಿಂದಲೂ ಹೊರಗುಳಿದಿದ್ದಾರೆ.

ಬ್ಯಾಟಿಂಗ್​ ತಾಂತ್ರಿಕತೆಯ ದೋಷ ಸರಿಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವುದರಿಂದ ಕಿಶನ್ ಕಿಶನ್​ ಅವರು​ ರೆಡ್​ಬಾಲ್​ ಕ್ರಿಕೆಟ್​ನಿಂದ ದೂರ ಉಳಿದಿದ್ದಾರೆ ಎಂದು ಅವರ ಆಪ್ತಮೂಲಗಳು ಹೇಳಿವೆ. ಆದರೆ ಇಶಾನ್​ ಈ ಬಗ್ಗೆ ಯಾವುದೇ ಸಮಸ್ಯೆಯನ್ನು ಬಿಸಿಸಿಐ ಗಮನಕ್ಕೆ ತಂದಿಲ್ಲ. ಬದಲಾಲಿ ಬಿಸಿಸಿಐ ಮತ್ತು ಆಯ್ಕೆ ಸಮಿತಿಯ ಫೋನ್​ ಕರೆಯನ್ನು ಸ್ವೀಕರಿಸದೆ ದೊಡ್ಡ ತಪ್ಪು ಮಾಡುತ್ತಿದ್ದಾರೆ. ಇದರಿಂದ ಅವರ ವೃತ್ತೀಜಿವನ ಸಂಕಷ್ಟಕ್ಕೆ ಸಿಲುಕುವ ಭೀತಿ ಎದುರಾಗಿದೆ.

ಐಪಿಎಲ್​ ಅಭ್ಯಾಸಕ್ಕೆ ಹಾಜರ್​​


ದೇಶಿಯ ಮತ್ತು ರಾಷ್ಟ್ರೀಯ ತಂಡದ ಪರ ಆಡಲು ಆಲಸ್ಯ ತೋರುತ್ತಿರುವ ಇಶಾನ್​ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್​ ತಂಡದ ನಾಯಕ ಹಾರ್ದಿಕ್​ ಪಾಂಡ್ಯ ಜತೆ ಬರೋಡದಲ್ಲಿ ಸದ್ಯ ಅಭ್ಯಾಸ ನಡೆಸುತ್ತಿದ್ದಾರೆ. ಇದು ಬಿಸಿಸಿಐ ಕೆಂಗಣ್ಣಿಗೂ ಗುರಿಯಾಗಿತ್ತು. ಇದೇ ಕಾರಣಕ್ಕೆ ಬಿಸಿಸಿಐ ಎಲ್ಲ ಆಟಗಾರರು ದೇಶೀಯ ಕ್ರಿಕೆಟ್​ನಲ್ಲಿ ಆಡಿದರೆ ಮಾತ್ರ ಐಪಿಎಲ್​ನಲ್ಲಿ​ ಅವಕಾಶ ಎನ್ನುವ ನಿಯಮವನ್ನೂ ಜಾರಿಗೆ ತಂದಿದೆ.

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸದ ಸಮಯದಲ್ಲಿ ಇಶಾನ್ ತಮ್ಮ ಮಾನಸಿಕ ಯೋಗಕ್ಷೇಮಕ್ಕಾಗಿ ವಿರಾಮವನ್ನು ಬಯಸಿ, ಬಳಿಕ ಅವರು ರಾಷ್ಟ್ರೀಯ ತಂಡಕ್ಕೆ ಹಿಂತಿರುಗಲಿಲ್ಲ. ಅವರು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ನಾಯಕ ಹಾರ್ದಿಕ್ ಪಾಂಡ್ಯ ಅವರೊಂದಿಗೆ ತರಬೇತಿ ನಡೆಸುತ್ತಿದ್ದಾರೆ. ರಾಷ್ಟ್ರೀಯ ತಂಡದ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಅವರು ಇಶಾನ್ ಕಿಶನ್ ಕ್ರಿಕೆಟ್ ಆಡಿ ಬರಬೇಕು ಎಂಬ ಮಾತಿನ ಹೊರತಾಗಿಯೂ ಅವರು ರಣಜಿ ಟ್ರೋಫಿ ಪಂದ್ಯಗಳನ್ನು ಕಳೆದುಕೊಳ್ಳುವುದನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ R Ashwin: ಐತಿಹಾಸಿಕ ಸಾಧನೆ ಮಾಡಿದ ಅಶ್ವಿನ್​ಗೆ ಪ್ರಧಾನಿ ಮೋದಿಯಿಂದ ಮೆಚ್ಚುಗೆ

ಇತ್ತೀಚೆಗೆ ಬಿಸಿಸಿಐ(BCCI) ಕಾರ್ಯದರ್ಶಿ ಜಯ್​ ಶಾ(Jay Shah) ಖಡಕ್​ ಎಚ್ಚರಿಕೆ ನೀಡಿದ್ದರು. “ಆಯ್ಕೆ ಸಮಿತಿ ಅಧ್ಯಕ್ಷರು, ಕೋಚ್ ಮತ್ತು ನಾಯಕ ಒಬ್ಬ ಆಟಗಾರ ರೆಡ್ ಬಾಲ್ ಕ್ರಿಕೆಟ್ ಆಡಲು ಬಯಸಿದರೆ ನೀವು ಆಡಲೇಬೇಕು. ಇಲ್ಲಿ ಯಾವುದೇ ತಂತ್ರಗಳಿಗೆ ಅವಕಾಶವಿಲ್ಲ(‘ನಖ್ರೆ ನಹಿ ಚಲೇಂಗೆ’). ಮತ್ತು ಇಶಾನ್ ಕಿಶನ್ ಅವರಿಗೆ ಸಂಬಂಧಿಸಿದಂತೆ, ಅವರು ಕಿರಿಯರಾಗಿದ್ದಾರೆ, ನಾನು ಅವರ ಬಗ್ಗೆ ನಿರ್ದಿಷ್ಟವಾಗಿ ಹೇಳುತ್ತಿಲ್ಲ ಏಕೆಂದರೆ ಇದು ಎಲ್ಲ ಆಟಗಾರರಿಗೆ ಏಕರೂಪವಾಗಿ ಅನ್ವಯಿಸುತ್ತದೆ” ಎಂದು ಜಯ್​ ಶಾ ಹೇಳಿದ್ದರು

ಇಶಾನ್ ಅವರ 1 ಕೋಟಿ ರೂ.ಗಳ ಗ್ರೇಡ್ ಸಿ ಕೇಂದ್ರ ಒಪ್ಪಂದದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿದುಬಂದಿದೆ. “ಕೇಂದ್ರ ಒಪ್ಪಂದಗಳ ಬಗ್ಗೆ ಇಲ್ಲಿಯವರೆಗೆ ಯಾವುದೇ ಚರ್ಚೆಗಳು ನಡೆದಿಲ್ಲ” ಎಂದು ಬಿಸಿಸಿಐ ಅಧಿಕಾರಿ ಹೇಳಿದ್ದಾರೆ.

.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

Virat kohli: ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ದೊಡ್ಡ ಮಟ್ಟದ ಸ್ಕೋರ್ ಮಾಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅವರ ಸ್ಟ್ರೈಕ್ ರೇಟ್​ ಕಾರಣಕ್ಕೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ ಆಯ್ಕೆದಾರರು ಈ ವರ್ಷದ ಆರಂಭದಲ್ಲಿ ಅವರನ್ನು ಟಿ20 ಐ ತಂಡಕ್ಕೆ ಮರಳಿ ಕರೆಸಿಕೊಳ್ಳುವ ಮೊದಲು ತಂಡದ ಬೇಡಿಕೆಗಳಿಗೆ ಅನುಗುಣವಾಗಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಹೇಳಲಾಗಿತ್ತು. ಅದೇ ಷರತ್ತಿನ ಮೇರೆಗೆ ಅವರಿಗೆ ಅವಕಾಶ ನೀಡಲಾಗಿದೆ.

VISTARANEWS.COM


on

Virat kohli
Koo

ನವದೆಹಲಿ: ಮುಂಬರುವ ಐಸಿಸಿ ಟಿ20 ವಿಶ್ವಕಪ್ 2024ಗಾಗಿ (T20 World Cup) 15 ಸದಸ್ಯರ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ (Virat kohli) ಸೇರ್ಪಡೆಗೆ ಏನು ಕಾರಣ ಎಂಬುದನ್ನು ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ (Ajit Agarkar) ವಿವರಿಸಿದ್ದಾರೆ. ಯಾಕೆಂದರೆ ಕೊಹ್ಲಿಯ ಸ್ಟ್ರೈಕ್​ರೇಟ್​​ ಬಗ್ಗೆ ಜೋರು ಚರ್ಚೆ ನಡೆಯುತ್ತಿರುವ ಜತೆಗೆ ಅವರ ಆಯ್ಕೆಯನ್ನು ಹಲವರು ಪ್ರಶ್ನಿಸಿದ್ದಾರೆ. ಹೀಗಾಗಿ ಅಗರ್ಕರ್ ಉತ್ತರ ನೀಡಿದ್ದಾರೆ.

ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ದೊಡ್ಡ ಮಟ್ಟದ ಸ್ಕೋರ್ ಮಾಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅವರ ಸ್ಟ್ರೈಕ್ ರೇಟ್​ ಕಾರಣಕ್ಕೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ ಆಯ್ಕೆದಾರರು ಈ ವರ್ಷದ ಆರಂಭದಲ್ಲಿ ಅವರನ್ನು ಟಿ20 ಐ ತಂಡಕ್ಕೆ ಮರಳಿ ಕರೆಸಿಕೊಳ್ಳುವ ಮೊದಲು ತಂಡದ ಬೇಡಿಕೆಗಳಿಗೆ ಅನುಗುಣವಾಗಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಹೇಳಲಾಗಿತ್ತು. ಅದೇ ಷರತ್ತಿನ ಮೇರೆಗೆ ಅವರಿಗೆ ಅವಕಾಶ ನೀಡಲಾಗಿದೆ.

ಅಂದ ಹಾಗೆ ಈ ಪ್ರಶ್ನೆಯನ್ನು ರೋಹಿತ್​ ಶರ್ಮಾ ಅವರಿಗೂ ಕೇಳಲಾಗಿತ್ತು. ಆದರೆ, ಅವರು ಜೋರಾಗಿ ನಗುವ ಮೂಲಕ ಇದೊಂದು ಚರ್ಚೆಯ ವಿಷಯವೇ ಅಲ್ಲ ಎಂಬುದಾಗಿ ಹೇಳಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ, ಬಲಗೈ ಬ್ಯಾಟರ್​ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಆದರೆ ಸ್ಟ್ರೈಕ್ ರೇಟ್ ಟೀಕೆಗಳು ಅವರ ಬಗ್ಗೆ ಟೀಕೆ ಮಾಡಲು ಅವಕಾಶ ಕೊಟ್ಟಿದೆ. 10 ಪಂದ್ಯಗಳಲ್ಲಿ 1 ಶತಕ ಹಾಗೂ 4 ಅರ್ಧಶತಕಗಳ ನೆರವಿನಿಂದ 500 ರನ್ ಗಳಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸ್ಪರ್ಧೆಯಲ್ಲಿ ಋತುರಾಜ್ ಗಾಯಕ್ವಾಡ್ ಮಾತ್ರ ಅವರಿಗಿಂತ ಹೆಚ್ಚು ಸ್ಕೋರ್ ಮಾಡಿದವರು.

ಕೊಹ್ಲಿಯನ್ನು ಸಮರ್ಥಿಸಿಕೊಂಡ ಅಜಿತ್ ಅಗರ್ಕರ್

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ತಂಡದಲ್ಲಿದ್ದಾರೆ. ಉತ್ತಮ ಇನ್ನಿಂಗ್ಸ್ ನಿರ್ಮಿಸಲು ಬಯಸುವ ಮತ್ತು ಅನೇಕ ಆಧುನಿಕ ಟಿ 20 ಬ್ಯಾಟರ್​ಗಳಂತೆ ಆರಂಭದಿಂದಲೇ ವೇಗವಾಗಿ ಸ್ಕೋರ್ ಮಾಡಲು ಪ್ರಾರಂಭಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊಹ್ಲಿಯ ಅಗತ್ಯವಿಲ್ಲ ಎಂದು ಅನೇಕರ ವಾದ ಮಾಡಿದ್ದಾರೆ.

ವಿರಾಟ್ ಕೊಹ್ಲಿ ತಮ್ಮ ಸ್ಟ್ರೈಕ್ ರೇಟ್ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅಜಿತ್ ಅಗರ್ಕರ್, ಇದು ಆಯ್ಕೆದಾರರು ಮತ್ತು ತಂಡದ ಮ್ಯಾನೇಜ್ಮೆಂಟ್ ನಡುವೆ ಚರ್ಚೆಯ ವಿಷಯವೂ ಅಲ್ಲ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿ ಅವರ ಅನುಭವವು ತಂಡಕ್ಕೆ ದೊಡ್ಡ ಉತ್ತೇಜನ ನೀಡಲಿದೆ ಎಂದು ಭಾರತದ ಮಾಜಿ ವೇಗಿ ಗಮನಸೆಳೆದರು.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

“ನಾವು ಕೊಹ್ಲಿಯ ಸ್ಟ್ರೈಕ್ ರೇಟ್ ಬಗ್ಗೆ ಚರ್ಚಿಸುತ್ತಿಲ್ಲ. ಐಪಿಎಲ್ ಮತ್ತು ಅಂತಾರರಾಷ್ಟ್ರೀಯ ಕ್ರಿಕೆಟ್ ನಡುವೆ ವ್ಯತ್ಯಾಸವಿದೆ. ನಿಮಗೆ ಅನುಭವ ಬೇಕು. ನಾವು ತಂಡದಲ್ಲಿ ಸಾಕಷ್ಟು ಸಮತೋಲನ ಹೊಂದಿದ್ದೇವೆ. ಐಪಿಎಲ್​​ನಲ್ಲಿ ಏನಾಗುತ್ತಿದೆ ಎಂಬುದನ್ನು ನೀವು ನೋಡುತ್ತೀರಿ. ಸಕಾರಾತ್ಮಕತೆಯನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕಾಗುತ್ತದೆ. ವಿಶ್ವಕಪ್ ಪಂದ್ಯದ ಒತ್ತಡವೇ ಬೇರೆ. ಹೀಗಾಗಿ ವಿರಾಟ್ ಕೊಹ್ಲಿ ಅವರ ಸ್ಟ್ರೈಕ್ ರೇಟ್ ಬಗ್ಗೆ ನಡೆದ ಮಾತುಕತೆಗಳನ್ನು ಅಜಿತ್ ಅಗರ್ಕರ್ ತಳ್ಳಿಹಾಕಿದ್ದಾರೆ.

ಕಳೆದ ಆವೃತ್ತಿಯ ಟಿ20 ವಿಶ್ವಕಪ್​​ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅವರು 6 ಪಂದ್ಯಗಳಲ್ಲಿ ನಾಲ್ಕು ಅರ್ಧಶತಕಗಳ ಸಹಾಯದಿಂದ 296 ರನ್ ಗಳಿಸಿದ್ದರು. ಸುಮಾರು 100 ರ ಅದ್ಭುತ ಸರಾಸರಿ ಹೊಂದಿದ್ದರು. ಮುಂಬರುವ ವಿಶ್ವಕಪ್​​ನಲ್ಲಿಯೂ ಸ್ಟಾರ್ ಬ್ಯಾಟರ್​​ ತಮ್ಮ ಪ್ರದರ್ಶನವನ್ನು ಪುನರಾವರ್ತಿಸುತ್ತಾರೆ ಎಂದು ಭಾರತ ತಂಡ ಆಶಿಸುತ್ತಿದೆ.

Continue Reading

ಕ್ರೀಡೆ

KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

KL Rahul: ಇತ್ತೀಚೆಗೆ ಭಾರತವು ನಾಲ್ಕು ಮೀಸಲು ಆಟಗಾರರು ಸೇರಿದಂತೆ 19 ಸದಸ್ಯರ ಬಲವಾದ ತಂಡವನ್ನು ಆಯ್ಕೆಗಾರರು ಪ್ರಕಟಿಸಿದ್ದರು. ಆದಾಗ್ಯೂ, ಕರ್ನಾಟಕದ ಸ್ಟೈಲಿಶ್ ಬ್ಯಾಟ್ಸ್ಮನ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲಗೊಂಡಿದ್ದರು. ಆಯ್ಕೆದಾರರು ಸಂಜು ಸ್ಯಾಮ್ಸನ್ ಮತ್ತು ರಿಷಭ್ ಪಂತ್ ಅವರನ್ನು ಎರಡು ವಿಕೆಟ್ ಕೀಪಿಂಗ್ ಸ್ಥಾನಗಳಿಗೆ ಆದ್ಯತೆ ನೀಡಿದರು.

VISTARANEWS.COM


on

KL Rahul
Koo

ನವದೆಹಲಿ: ಅಮರಿಕೆ ಮತ್ತು ವೆಸ್ಟ್​ ಇಂಡೀಸ್​ನಲ್ಲಿ ಆಯೋಜನೆಗೊಂಡಿರುವ ಮುಂಬರುವ ಟಿ 20 ಐ (T20 World Cup) ವಿಶ್ವಕಪ್​​ ತಂಡವನ್ನು ಪ್ರಕಟಿಸುವಾಗ ಬಿಸಿಸಿಐ ಆಯ್ಕೆ ಮಂಡಳಿ ಅನುಭವಿ ಬ್ಯಾಟರ್​ ಕೆಎಲ್ ರಾಹುಲ್ (KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​ (Ajit Agarkar) ಅವರನ್ನು ಕೈ ಬಿಟ್ಟಿರುವುದು ಚರ್ಚೆಗೆ ಕಾರಣವಾಗಿತ್ತು. ವಿದೇಶಿ ನೆಲದಲ್ಲಿ ಅವರ ಸಾಮರ್ಥ್ಯದ ಹೊರತಾಗಿಯೂ ತಂಡಕ್ಕೆ ಆಯ್ಕೆಯಾಗದಿರುವುದು ಸರಿಯಲ್ಲ ಎಂಬ ದೂಷಣೆಗಳನ್ನು ಆಯ್ಕೆ ಮಂಡಳಿ ಎದುರಿಸಿತ್ತು. ಗುರುವಾರ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅಗರ್ಕರ್ ಕನ್ನಡಿಗ ಕ್ರಿಕೆಟಿಗನನ್ನು ಯಾಕೆ ಸೇರಿಸಿಲ್ಲ ಎಂಬುದಕ್ಕೆ ಕಾರಣ ನೀಡಿದ್ದಾರೆ. ಇದೇ ವೇಳೆ ಹಲವಾರು ಮಾಹಿತಿಗಳನ್ನೂ ನೀಡಿದ್ದಾರೆ.

ಇತ್ತೀಚೆಗೆ ಭಾರತವು ನಾಲ್ಕು ಮೀಸಲು ಆಟಗಾರರು ಸೇರಿದಂತೆ 19 ಸದಸ್ಯರ ಬಲವಾದ ತಂಡವನ್ನು ಆಯ್ಕೆಗಾರರು ಪ್ರಕಟಿಸಿದ್ದರು. ಆದಾಗ್ಯೂ, ಕರ್ನಾಟಕದ ಸ್ಟೈಲಿಶ್ ಬ್ಯಾಟ್ಸ್ಮನ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲಗೊಂಡಿದ್ದರು. ಆಯ್ಕೆದಾರರು ಸಂಜು ಸ್ಯಾಮ್ಸನ್ ಮತ್ತು ರಿಷಭ್ ಪಂತ್ ಅವರನ್ನು ಎರಡು ವಿಕೆಟ್ ಕೀಪಿಂಗ್ ಸ್ಥಾನಗಳಿಗೆ ಆದ್ಯತೆ ನೀಡಿದರು.

ಆಯ್ಕೆಯ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಗರ್ಕರ್, ರಾಹುಲ್ ವಿಶ್ವಕಪ್​ನಿಂದ ವಂಚಿತರಾಗಿರುವುದು ದುರದೃಷ್ಟಕರ ಎಂದು ಬಹಿರಂಗಪಡಿಸಿದ್ದಾರೆ. ಏಕೆಂದರೆ ಭಾರತೀಯ ಥಿಂಕ್ ಟ್ಯಾಂಕ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಲ್ಲ ಕೀಪರ್​ಗಳನ್ನು ಬಯಸಿತ್ತು. ಅದಕ್ಕಾಗಿ ಭಾರತದ ಮಾಜಿ ವೇಗದ ಬೌಲರ್ ಬಹಿರಂಗಪಡಿಸಿದಂತೆ ಸ್ಯಾಮ್ಸನ್ ಮತ್ತು ಪಂತ್ ಮಧ್ಯಮ ಕ್ರಮಾಂಕದ ಬ್ಯಾಟರ್​​ಗಳಾಗಿ ಆಡಿದ್ದಾರೆ.

“ಕೆಎಲ್ ಅದ್ಭುತ ಆಟಗಾರ. ನಾವು ನೋಡುತ್ತಿದ್ದ ವಿಷಯವೆಂದರೆ ಮಧ್ಯದಲ್ಲಿ ಬ್ಯಾಟಿಂಗ್ ಮಾಡಬಲ್ಲ ಆಟಗಾರ. ಡಿಸಿ ಪರ ರಿಷಭ್ ಪಂತ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಈ ಇಬ್ಬರು (ಸ್ಯಾಮ್ಸನ್ ಮತ್ತು ಪಂತ್) ಉತ್ತಮ ಎಂದು ನಾವು ಭಾವಿಸಿದ್ದೇವೆ. ಕೆ.ಎಲ್. ರಾಹುಲ್ ಉತ್ತಮವೋ ಅಥವಾ ರಿಷಭ್ ಪಂತ್ ಉತ್ತಮವೋ ಅಥವಾ ಸಂಜು ಸ್ಯಾಮ್ಸನ್ ಉತ್ತಮವೋ ಎಂಬುದು ಮುಖ್ಯವಲ್ಲ. ಇದು ಬ್ಯಾಟಿಂಗ್ ಸ್ಲಾಟ್​​ಗಳ ಬಗ್ಗೆ (ಆದ್ದರಿಂದ ಪಂತ್ ಮತ್ತು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲಾಯಿತು), “ಎಂದು ಅಗರ್ಕರ್ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ರಾಹುಲ್ ಈ ಐಪಿಎಲ್​ನಲ್ಲಿ 40.60 ಸರಾಸರಿಯಲ್ಲಿ 406 ರನ್ ಗಳಿಸಿದ್ದಾರೆ. 142.96 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಆದಾಗ್ಯೂ, ಅವರ ಎಲ್ಲಾ ರನ್​​ಗಳ ಅಗ್ರ ಕ್ರಮಾಂಕದ ಬ್ಯಾಟರ್​​ಗಳಾಗಿ ಆಗಿ ಬಂದಿರುವುದರಿಂದ ಡೈನಾಮಿಕ್ ಬ್ಯಾಟರ್​​ ಅಂತಿಮ ಹದಿನೈದರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ.

2024ರ ಟಿ20 ವಿಶ್ವಕಪ್​​ಗೆ ಭಾರತ ತಂಡ ಹೀಗಿದೆ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅರ್ಶ್​​ದೀಪ್​ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.

ಮೀಸಲು ಆಟಗಾರರು: ರಿಂಕು ಸಿಂಗ್, ಶುಭ್ಮನ್ ಗಿಲ್, ಖಲೀಲ್ ಅಹ್ಮದ್, ಅವೇಶ್ ಖಾನ್

ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

ನವದೆಹಲಿ: ಜೂನ್ 1 ರಿಂದ ಅಮೆರಿಕ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಟಿ20 ವಿಶ್ವಕಪ್ 2024ಕ್ಕೆ (T20 World Cup) ಭಾರತವು ಪ್ರಬಲ ಸ್ಪರ್ಧಿ ಎಂದು ಶ್ರೀಲಂಕಾದ ಮಾಜಿ ನಾಯಕ ಮತ್ತು ರಾಜಸ್ಥಾನ್ ರಾಯಲ್ಸ್ (Rajasthan Royals​ ) ಕ್ರಿಕೆಟ್ ನಿರ್ದೇಶಕ ಕುಮಾರ್ ಸಂಗಕ್ಕಾರ ಹೇಳಿದ್ದಾರೆ. 2024 ರ ಟಿ 20 ವಿಶ್ವಕಪ್ ಭಾರತದ ತಂಡವನ್ನು ಶ್ಲಾಘಿಸಿದ ಸಂಗಕ್ಕಾರ, ಇದು ಅಸಾಧಾರಣವಾಗಿ ಬಲಿಷ್ಠ ಮತ್ತು ಸಮತೋಲಿತವಾಗಿದೆ ಎಂದು ಬಣ್ಣಿಸಿದರು. ಶ್ರೀಲಂಕಾದ ದಂತಕಥೆ ಟೀಮ್ ಇಂಡಿಯಾದ ಅಸಾಧಾರಣ ಬ್ಯಾಟಿಂಗ್ ಮತ್ತು ಬಹುಮುಖ ಆಲ್​ರೌಂಡರ್​ಗಳ ಶಕ್ತಿಯನ್ನು ಎತ್ತಿ ತೋರಿಸಿದರು. ಜೊತೆಗೆ ಅವರ ಉತ್ತಮ ಗುಣಮಟ್ಟದ ಸ್ಪಿನ್ ಆಯ್ಕೆಗಳಿವೆ. ಇದು ಮೆಗಾ ಈವೆಂಟ್​​ನ ಸಂದರ್ಭಗಳನ್ನು ಅವಲಂಬಿಸಿ ತಂತ್ರಗಾರಿಕೆಯ ಹೊಂದಾಣಿಕೆ ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ.

ವಿವಿಧ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ತಂಡದ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಂಗಕ್ಕಾರ, ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ಕಾರ್ಯತಂತ್ರದ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಟಿ 20 ವಿಶ್ವಕಪ್ ತಂಡದಲ್ಲಿನ ಹೊಸತವನ್ನು ಲೆಜೆಂಡರಿ ಬ್ಯಾಟ್ಸ್ಮನ್ ಎತ್ತಿ ತೋರಿಸಿದರು. ಇದು ಅಪೇಕ್ಷಿತ ಬ್ಯಾಟಿಂಗ್ ಅಥವಾ ಬೌಲಿಂಗ್ ಶಕ್ತಿ ಅವಲಂಬಿಸಿ ವಿಭಿನ್ನ ಸಂಯೋಜನೆಗಳೊಂದಿಗೆ ಆಡಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.

ಇದು ಬಲಿಷ್ಠ ತಂಡ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಸಂಗಕ್ಕಾರ, “ಇದು ಅತ್ಯಂತ ಬಲಿಷ್ಠ ತಂಡ. ಅವರು ತಮ್ಮ ಬ್ಯಾಟಿಂಗ್ ಬಲ ಹೊಂದಿದ್ದಾರೆ. ಅತ್ಯುತ್ತಮ ಆಲ್​ರೌಂಡರ್​ಗಳನ್ನು ಹೊಂದಿದ್ದಾರೆ. ಅವರು ಉತ್ತಮ ಗುಣಮಟ್ಟದ ಸ್ಪಿನ್ ಹೊಂದಿದ್ದಾರೆ ಮತ್ತು ಅವರು ಆಡಬಹುದಾದ ಉತ್ತಮ ಸಂಯೋಜನೆಗಳನ್ನು ಹೊಂದಿದ್ದಾರೆ. ಅಲ್ಲಿನ ಪರಿಸ್ಥಿತಿಗಳನ್ನು ತಿಳಿದಿರುವ ರಾಹುಲ್ ಮತ್ತು ರೋಹಿತ್, ವಿಶ್ವಕಪ್​ನಲ್ಲಿ ಅವರು ಬಯಸುವ ಕ್ರಿಕೆಟ್ ಆಡಲು ತಂಡ ಹೇಗಿರಬೇಕು ಎಂಬುದರ ಬಗ್ಗೆ ಉತ್ತಮ ಕಲ್ಪನೆಯನ್ನು ಹೊಂದಿದ್ದಾರೆ ಎಂದು ನನಗೆ ಖಾತ್ರಿಯಿದೆ.

Continue Reading

ಕ್ರೀಡೆ

T20 World Cup : ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

T20 World Cup: ವಿವಿಧ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ತಂಡದ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಂಗಕ್ಕಾರ, ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ಕಾರ್ಯತಂತ್ರದ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಟಿ 20 ವಿಶ್ವಕಪ್ ತಂಡದಲ್ಲಿನ ಹೊಸತವನ್ನು ಲೆಜೆಂಡರಿ ಬ್ಯಾಟ್ಸ್ಮನ್ ಎತ್ತಿ ತೋರಿಸಿದರು

VISTARANEWS.COM


on

T20 World Cup
Koo

ನವದೆಹಲಿ: ಜೂನ್ 1 ರಿಂದ ಅಮೆರಿಕ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಟಿ20 ವಿಶ್ವಕಪ್ 2024ಕ್ಕೆ (T20 World Cup) ಭಾರತವು ಪ್ರಬಲ ಸ್ಪರ್ಧಿ ಎಂದು ಶ್ರೀಲಂಕಾದ ಮಾಜಿ ನಾಯಕ ಮತ್ತು ರಾಜಸ್ಥಾನ್ ರಾಯಲ್ಸ್ (Rajasthan Royals​ ) ಕ್ರಿಕೆಟ್ ನಿರ್ದೇಶಕ ಕುಮಾರ್ ಸಂಗಕ್ಕಾರ ಹೇಳಿದ್ದಾರೆ. 2024 ರ ಟಿ 20 ವಿಶ್ವಕಪ್ ಭಾರತದ ತಂಡವನ್ನು ಶ್ಲಾಘಿಸಿದ ಸಂಗಕ್ಕಾರ, ಇದು ಅಸಾಧಾರಣವಾಗಿ ಬಲಿಷ್ಠ ಮತ್ತು ಸಮತೋಲಿತವಾಗಿದೆ ಎಂದು ಬಣ್ಣಿಸಿದರು. ಶ್ರೀಲಂಕಾದ ದಂತಕಥೆ ಟೀಮ್ ಇಂಡಿಯಾದ ಅಸಾಧಾರಣ ಬ್ಯಾಟಿಂಗ್ ಮತ್ತು ಬಹುಮುಖ ಆಲ್​ರೌಂಡರ್​ಗಳ ಶಕ್ತಿಯನ್ನು ಎತ್ತಿ ತೋರಿಸಿದರು. ಜೊತೆಗೆ ಅವರ ಉತ್ತಮ ಗುಣಮಟ್ಟದ ಸ್ಪಿನ್ ಆಯ್ಕೆಗಳಿವೆ. ಇದು ಮೆಗಾ ಈವೆಂಟ್​​ನ ಸಂದರ್ಭಗಳನ್ನು ಅವಲಂಬಿಸಿ ತಂತ್ರಗಾರಿಕೆಯ ಹೊಂದಾಣಿಕೆ ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ.

ವಿವಿಧ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ತಂಡದ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಂಗಕ್ಕಾರ, ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ಕಾರ್ಯತಂತ್ರದ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಟಿ 20 ವಿಶ್ವಕಪ್ ತಂಡದಲ್ಲಿನ ಹೊಸತವನ್ನು ಲೆಜೆಂಡರಿ ಬ್ಯಾಟ್ಸ್ಮನ್ ಎತ್ತಿ ತೋರಿಸಿದರು. ಇದು ಅಪೇಕ್ಷಿತ ಬ್ಯಾಟಿಂಗ್ ಅಥವಾ ಬೌಲಿಂಗ್ ಶಕ್ತಿ ಅವಲಂಬಿಸಿ ವಿಭಿನ್ನ ಸಂಯೋಜನೆಗಳೊಂದಿಗೆ ಆಡಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.

ಇದು ಬಲಿಷ್ಠ ತಂಡ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಸಂಗಕ್ಕಾರ, “ಇದು ಅತ್ಯಂತ ಬಲಿಷ್ಠ ತಂಡ. ಅವರು ತಮ್ಮ ಬ್ಯಾಟಿಂಗ್ ಬಲ ಹೊಂದಿದ್ದಾರೆ. ಅತ್ಯುತ್ತಮ ಆಲ್​ರೌಂಡರ್​ಗಳನ್ನು ಹೊಂದಿದ್ದಾರೆ. ಅವರು ಉತ್ತಮ ಗುಣಮಟ್ಟದ ಸ್ಪಿನ್ ಹೊಂದಿದ್ದಾರೆ ಮತ್ತು ಅವರು ಆಡಬಹುದಾದ ಉತ್ತಮ ಸಂಯೋಜನೆಗಳನ್ನು ಹೊಂದಿದ್ದಾರೆ. ಅಲ್ಲಿನ ಪರಿಸ್ಥಿತಿಗಳನ್ನು ತಿಳಿದಿರುವ ರಾಹುಲ್ ಮತ್ತು ರೋಹಿತ್, ವಿಶ್ವಕಪ್​ನಲ್ಲಿ ಅವರು ಬಯಸುವ ಕ್ರಿಕೆಟ್ ಆಡಲು ತಂಡ ಹೇಗಿರಬೇಕು ಎಂಬುದರ ಬಗ್ಗೆ ಉತ್ತಮ ಕಲ್ಪನೆಯನ್ನು ಹೊಂದಿದ್ದಾರೆ ಎಂದು ನನಗೆ ಖಾತ್ರಿಯಿದೆ.

ಅವರು ತಮ್ಮ ಬೌಲಿಂಗ್​ನಲ್ಲಿ ಆಳವಾದ ಬ್ಯಾಟಿಂಗ್ ಲೈನ್ಅಪ್ ಅಥವಾ ಹೆಚ್ಚಿನ ಶಕ್ತಿ ಬಯಸುತ್ತಾರೆಯೇ ಎಂಬುದರ ಮೇಲೆ ಅವಲಂಬಿತವಾಗಿ ಎರಡು ಅಥವಾ ಮೂರು ವಿಭಿನ್ನ ಸಂಯೋಜನೆಗಳನ್ನು ಹೊಂದಿದ್ದಾರೆ. ಆದರೆ ಇದು ನಿಜವಾಗಿಯೂ ಸಮತೋಲಿತ ತಂಡ. ಬಲವಾದ ತಂಡ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾರತ ಯಾವಾಗಲೂ ತುಂಬಾ ಪ್ರಬಲವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಭಾರತದ ಟಿ 20 ವಿಶ್ವಕಪ್ 2024 ತಂಡದಲ್ಲಿ ರಾಜಸ್ಥಾನ್ ರಾಯಲ್ಸ್ ನ ನಾಲ್ವರು ಆಟಗಾರರಿದ್ದಾರೆ: ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಯುಜ್ವೇಂದ್ರ ಚಹಲ್ ಅವರು ಪ್ರಾಥಮಿಕ ತಂಡದಲ್ಲಿದ್ದಾರೆ. ಭಾರತದ ತಂಡಕ್ಕೆ ಆಯ್ಕೆಯಾದ ತಮ್ಮ ಆಟಗಾರರ ಬಗ್ಗೆ ಅವರು ನಿಜವಾಗಿಯೂ ಹೆಮ್ಮೆಪಟ್ಟಿದ್ದಾರೆ.

2024ರ ಐಸಿಸಿ ಟಿ20 ವಿಶ್ವಕಪ್​​ಗೆ ಭಾರತ ತಂಡ ಹೀಗಿದೆ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು ಆಟಗಾರರು: ಶುಬ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

ಉತ್ತಮ ಫಾರ್ಮ್​ನಲ್ಲಿ ರಾಜಸ್ಥಾನ್​

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ (ರಾಜಸ್ಥಾನ್​ ರಾಯಲ್ಸ್​ ) ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಸಂಜು ಸ್ಯಾಮ್ಸನ್ ನೇತೃತ್ವದ ಫ್ರಾಂಚೈಸಿ ಈ ಋತುವಿನಲ್ಲಿ ಅತ್ಯುತ್ತಮ ಫಾರ್ಮ್​​ನಲ್ಲಿದೆ. ಐಪಿಎಲ್ 2024 ರಲ್ಲಿ ರಾಯಲ್ಸ್ ಇದುವರೆಗೆ ಆಡಿದ ಒಂಬತ್ತು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಸೋತಿದೆ ಮತ್ತು ಅವರು 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಐಪಿಎಲ್ 2024 ರ ಪ್ಲೇಆಫ್ನಲ್ಲಿ ಆರ್ಆರ್ ಬಹುತೇಕ ತಮ್ಮ ಸ್ಥಾನ ಕಾಯ್ದಿರಿಸಿದೆ ಮತ್ತು ಮೇ 2 ರಂದು ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಋತುವಿನ 50ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ವಿರುದ್ಧ ಸೆಣಸಲಿದೆ.

Continue Reading

ಕ್ರೀಡೆ

IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

IPL 2024: ಕೆಕೆಆರ್ ಇದುವರೆಗೆ ಆರಂಭಿಕ ಫಿಲ್ ಸಾಲ್ಡ್​​ಗೆ ಆದ್ಯತೆ ನೀಡಿದೆ. ಅವರು 9 ಇನ್ನಿಂಗ್ಸ್​ಗಳಲ್ಲಿ 392 ರನ್​​ಗಳೊಂದಿಗೆ ಅಗ್ರ ಕ್ರಮಾಂಕದಲ್ಲಿ ಅದ್ಭುತವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು 180.65 ಸ್ಟ್ರೈಕ್ ರೇಟ್​ನಲ್ಲಿ ತಮ್ಮ ರನ್​​ಗಳನ್ನು ಗಳಿಸಿದ್ದಾರೆ. ಗುರ್ಬಾಜ್ ಇಲೆವೆನ್​​ಗೆ ಪ್ರವೇಶಿಸುವ ಏಕೈಕ ಮಾರ್ಗವೆಂದರೆ ಸಾಲ್ಟ್ ಅವರನ್ನು ಬದಲಾಯಿಸುವುದು. ಇದು ಗುಂಪು ಹಂತದ ಮುಕ್ತಾಯದವರೆಗೆ ಸಾಧ್ಯತೆಯಿಲ್ಲ.

VISTARANEWS.COM


on

IPL 2024
Koo

ಬೆಂಗಳೂರು: ಗೌತಮ್​ ಗಂಭೀರ್​ ಮಾರ್ಗದರ್ಶನದ ಹಾಗೂ ಶ್ರೇಯಸ್ ಅಯ್ಯರ್​ ನಾಯತಕತ್ವದ ಕೋಲ್ಕತಾ ನೈಟ್​ ರೈಡರ್ಸ್​ (KKR) ತಂಡ ಹಾಲಿ ಐಪಿಎಲ್​ನಲ್ಲಿ (IPL 2024) ಅತ್ಯುತ್ತಮ ಪ್ರದರ್ಶ ನೀಡುತ್ತಿದೆ. ಆದಾಗ್ಯೂ ಕೆಲವೊಂದು ಏರುಪೇರುಗಳನ್ನು ಕಾಣುತ್ತಿದೆ. ಇದೇ ವೇಳೆ ಅಫ್ಘಾನಿಸ್ತಾನದ ಸ್ಟಾರ್ ಆರಂಭಿಕ ಆಟಗಾರ ಮತ್ತು ಐಪಿಎಲ್ 2024 ರಲ್ಲಿ ಕೆಕೆಆರ್ ಸೆಟಪ್​​ನ ಭಾಗವಾಗಿರುವ ರಹಮಾನುಲ್ಲಾ ಗುರ್ಬಾಜ್ (Rahmanullah Gurbaz) ಅವರು ಮುಂಬೈ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ಶ್ರೇಯಸ್ ಅಯ್ಯರ್ ನೇತೃತ್ವದ ತಂಡವನ್ನು ತೊರೆದಿದ್ದಾರೆ ಅವರು ತಮ್ಮ ದೇಶದ ಅಫಘಾನಿಸ್ತಾನದ ರಾಜಥಾನಿ ಕಾಬೂಲ್​ನಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯೊಂದಿಗೆ ಇರಲು ಹೋಗಿದ್ದಾರೆ. ಅವರು ಮುಂದಿನ ವಾರದಲ್ಲಿ ಕೆಕೆಆರ್ ಶಿಬಿರಕ್ಕೆ ಮರಳುವ ನಿರೀಕ್ಷೆಯಿದೆ. ಗುರ್ಬಾಜ್ ಈ ಋತುವಿನಲ್ಲಿ ಇಲ್ಲಿಯವರೆಗೆ ಒಂದೇ ಒಂದು ಪಂದ್ಯವನ್ನು ಆಡದ ಕಾರಣ ಕೋಲ್ಕತಾ ನೈಟ್ ರೈಡರ್ಸ್​ಗೆ ಇದು ದೊಡ್ಡ ಚಿಂತೆಯಲ್ಲ.

ಕೆಕೆಆರ್ ಇದುವರೆಗೆ ಆರಂಭಿಕ ಫಿಲ್ ಸಾಲ್ಡ್​​ಗೆ ಆದ್ಯತೆ ನೀಡಿದೆ. ಅವರು 9 ಇನ್ನಿಂಗ್ಸ್​ಗಳಲ್ಲಿ 392 ರನ್​​ಗಳೊಂದಿಗೆ ಅಗ್ರ ಕ್ರಮಾಂಕದಲ್ಲಿ ಅದ್ಭುತವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು 180.65 ಸ್ಟ್ರೈಕ್ ರೇಟ್​ನಲ್ಲಿ ತಮ್ಮ ರನ್​​ಗಳನ್ನು ಗಳಿಸಿದ್ದಾರೆ. ಗುರ್ಬಾಜ್ ಇಲೆವೆನ್​​ಗೆ ಪ್ರವೇಶಿಸುವ ಏಕೈಕ ಮಾರ್ಗವೆಂದರೆ ಸಾಲ್ಟ್ ಅವರನ್ನು ಬದಲಾಯಿಸುವುದು. ಇದು ಗುಂಪು ಹಂತದ ಮುಕ್ತಾಯದವರೆಗೆ ಸಾಧ್ಯತೆಯಿಲ್ಲ.

ಟಿ 20 ವಿಶ್ವಕಪ್ ಸಿದ್ಧತೆಗಾಗಿ ಅವರು ಪ್ಲೇಆಪ್​​ಗೆ ಮುಂಚಿತವಾಗಿ ಕೆಕೆಆರ್ ಶಿಬಿರ ತೊರೆಯಲಿದ್ದಾರೆ. ಈ ವೇಳೆ ಗುರ್ಬಾಜ್ ಹೆಜ್ಜೆ ಇಡಬೇಕಾಗುತ್ತದೆ. ಆದ್ದರಿಂದ, ಎಲ್ಲಾ ಕ್ರಿಕೆಟ್ ಅಭಿಮಾನಿಗಳು ಮತ್ತು ವಿಶೇಷವಾಗಿ ಕೆಕೆಆರ್ ಅಭಿಮಾನಿಗಳು ಅಫ್ಘಾನ್ ವಿಕೆಟ್ ಕೀಪರ್ ತಾಯಿ ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಮತ್ತು ಅವರು ಆದಷ್ಟು ಬೇಗ ಕೆಕೆಆರ್ ಶಿಬಿರಕ್ಕೆ ಸೇರುತ್ತಾರೆ ಎಂದು ಆಶಿಸುತ್ತಿದ್ದಾರೆ.

ಕೋಲ್ಕತಾ ನೈಟ್ ರೈಡರ್ಸ್ ಇದುವರೆಗೆ ಒಂಬತ್ತು ಪಂದ್ಯಗಳನ್ನು ಆಡಿದೆ. ಅದರಲ್ಲಿ ಆರು ಪಂದ್ಯಗಳನ್ನು ಗೆದ್ದಿದೆ ಮತ್ತು ಪ್ರಸ್ತುತ ಪ್ಲೇಆಫ್ ರೇಸ್​​​ನಲ್ಲಿ ಆರಾಮದಾಯಕ ಸ್ಥಾನದಲ್ಲಿದೆ. ಇನ್ನೂ ಕೆಲವು ಗೆಲುವುಗಳನ್ನು ಗಳಿಸಲು ಮತ್ತು ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರ -2 ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.

ಬ್ರಾವೊ ರೀತಿಯಲ್ಲೇ ಬಾಲಿವುಡ್​ಗೆ ಎಂಟ್ರಿ ಪಡೆದ ಆ್ಯಂಡ್ರೆ ರಸೆಲ್​

ಬೆಂಗಳೂರು: ವೆಸ್ಟ್ ಇಂಡೀಸ್ ಆಟಗಾರರು ನಿಸ್ಸಂದೇಹವಾಗಿ ಐಪಿಎಲ್​ನಲ್ಲಿ ಯಾವುದೇ ತಂಡದ ದೊಡ್ಡ ಆಸ್ತಿ. ತಮ್ಮ 100% ಬದ್ಧತೆ ಮತ್ತು ಪವರ್-ಹಿಟ್ಟಿಂಗ್ ಸಾಮರ್ಥ್ಯಗಳಿಗೆ ಹೆಸರುವಾಸಿಯಾದ ಅವರು ಮೈದಾನದಲ್ಲಿ ಮರೆಯಲಾಗ ಛಾಪು ಮೂಡಿಸುತ್ತಾರೆ. ಇದಲ್ಲದೆ ಅವರು ಆಗಾಗ್ಗೆ ಡ್ರೆಸ್ಸಿಂಗ್ ಕೋಣೆಯಲ್ಲಿ ಖುಷಿಯ ಮೂಲವಾಗಿ ಕಾರ್ಯನಿರ್ವಹಿಸುತ್ತಾರೆ. ತಂಡಕ್ಕೆ ಮನರಂಜನೆ ಮತ್ತು ಶಕ್ತಿಯ ಅಂಶಗಳನ್ನು ಸೇರಿಸುತ್ತಾರೆ. ಅಂತೆಯೇ ಕೆಕೆಆರ್​ ತಂಡದ ಆ್ಯಂಡ್ರೆ ರಸೆಲ್​ (Andre Russell) ಬಾಲಿವುಡ್​ಗೆ ಪ್ರವೇಶ ಮಾಡುವ ಸೂಚನೆ ನೀಡಿದ್ದು ಈ ತಂಡದ ಪಾಲಿಗೆ ವಿಶೇಷ ಸುದ್ದಿ ಎನಿಸಿದೆ.

ಈ ಸುದ್ದಿಯನ್ನೂ ಓದಿ: Virat Kohli : ಅಂಕಿ, ಅಂಶ ಪಂಡಿತರೇ ಬಾಯ್ಮುಚ್ಚಿ; ಕೊಹ್ಲಿಯನ್ನು ಟೀಕಿಸಿದವರ ಬೆಂಡೆತ್ತಿದ ಡಿ’ವಿಲಿಯರ್ಸ್​​

ಕ್ರಿಸ್ ಗೇಲ್, ಡಿಜೆ ಬ್ರಾವೋ, ಕೀರನ್ ಪೊಲಾರ್ಡ್, ಡ್ಯಾರೆನ್ ಸಾಮಿ ಮತ್ತು ಪ್ರಸ್ತುತ ಕೆಕೆಆರ್ ಸೆನ್ಸೇಷನ್ ಆ್ಯಂಡ್ರೆ ರಸೆಲ್ ಸೇರಿದಂತೆ ಹಲವಾರು ವೆಸ್ಟ್ ಇಂಡೀಸ್ ಕ್ರಿಕೆಟಿಗರು ಐಪಿಎಲ್​​ನಲ್ಲಿ ತಮ್ಮ ಉಪಸ್ಥಿತಿ ಮತ್ತು ಪ್ರದರ್ಶನದಿಂದ ಮಿಂಚಿದ್ದಾರೆ.

ಬಾಲಿವುಡ್ ಗೆ ಕಾಲಿಟ್ಟ ರಸೆಲ್

ಡಿಜೆ ಬ್ರಾವೋ ಅವರ ಹೆಜ್ಜೆಗಳನ್ನು ಅನುಸರಿಸಿರುವ ಆ್ಯಂಡ್ರೆ ರಸೆಲ್ ಈಗ ಸಂಗೀತ ಜಗತ್ತಿಗೆ ಕಾಲಿಡುತ್ತಿದ್ದಾರೆ. ಇದು ಬಾಲಿವುಡ್​ನಲ್ಲಿ ಅವರು ಗಾಯನ ವೃತ್ತಿಜೀವನ ಆರಂಭಿಸಿದ್ದಾರೆ. ಪಲಾಶ್ ಮುಚಲ್ ಸಂಯೋಜಿಸಿದ ಹಾಡಿಗೆ ರಸೆಲ್ ಧ್ವನಿ ನೀಡಲಿದ್ದಾರೆ ಎಂದು ಖಚಿತಪಡಿಸಲಾಗಿದೆ. ಹೆಚ್ಚುವರಿಯಾಗಿ ಅವರು ಮ್ಯೂಸಿಕ್ ವೀಡಿಯೊದಲ್ಲಿ ನಟಿ ಅವಿಕಾ ಗೋರ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.

“ಲಡ್ಕಿ ತೋ ಕಮಾಲ್ ಕಿ” ಎಂಬ ಶೀರ್ಷಿಕೆಯ ಈ ಹಾಡು ಮೇ9 ರಂದು ವೊಯಿಲಾ ಡಿಗ್ ಬ್ಯಾನರ್ ಅಡಿಯಲ್ಲಿ ಬಿಡುಗಡೆಯಾಗಲಿದೆ.

Continue Reading
Advertisement
Virat kohli
ಕ್ರೀಡೆ20 mins ago

Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

Religious Freedom
ದೇಶ24 mins ago

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಕಳವಳ; ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

Lok Sabha Election 2024 Raju Kage calls those chanting Jai Shri Ram are beggars
Lok Sabha Election 202425 mins ago

Lok Sabha Election 2024: ಜೈ ಶ್ರೀರಾಮ್ ಘೋಷಣೆ ಕೂಗುವವರು ಭಿಕಾರಿಗಳು ಎಂದ ರಾಜು ಕಾಗೆ; ಚುನಾವಣಾ ಆಯೋಗದಿಂದ ನೋಟಿಸ್‌!

Prajwal Revanna Case Revanna denied anticipatory bail today Court allows SIT to file objections
ಕ್ರೈಂ1 hour ago

Prajwal Revanna Case: ರೇವಣ್ಣಗೆ ಇಂದು ಸಿಗಲಿಲ್ಲ ನಿರೀಕ್ಷಣಾ ಜಾಮೀನು; ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚಿಸಿದ ಕೋರ್ಟ್!

Covaxin
ದೇಶ1 hour ago

Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 hour ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

KL Rahul
ಕ್ರೀಡೆ2 hours ago

KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

T20 World Cup
ಕ್ರೀಡೆ2 hours ago

T20 World Cup : ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

Shine Shetty Summer Fashion
ಫ್ಯಾಷನ್2 hours ago

Summer Fashion: ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

IPL 2024
ಕ್ರೀಡೆ2 hours ago

IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 hour ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ15 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌