Site icon Vistara News

Ishan Kishan: ಬಿಸಿಸಿಐ ಎಚ್ಚರಿಕೆಗೂ ಡೋಂಟ್ ಕೇರ್; ರಣಜಿ ಟ್ರೋಫಿಗೆ ಇಶಾನ್​ ​ ಮತ್ತೆ ಚಕ್ಕರ್​!

ishan kishan

ಮುಂಬಯಿ: ರಾಷ್ಟ್ರೀಯ ತಂಡದ ಗುತ್ತಿಗೆ ಆಟಗಾರರು ದೇಶೀಯ ಕ್ರಿಕೆಟ್​ನಲ್ಲಿ ಆಡುವುದು ಕಡ್ಡಾಯವೆಂದು ಬಿಸಿಸಿಐ(BCCI) ಸೂಚನೆ ನೀಡಿದ ಹೊರತಾಗಿಯೂ ವಿಕೆಟ್​ ಕೀಪರ್​-ಬ್ಯಾಟರ್​ ಇಶಾನ್​ ಕಿಶನ್​(Ishan Kishan), ರಣಜಿ ಟ್ರೋಫಿಯಲ್ಲಿ(ranji trophy) ಜಾರ್ಖಂಡ್​ ತಂಡದ ಕೊನೇಯ ಲೀಗ್​ ಪಂದ್ಯದಿಂದಲೂ ಹೊರಗುಳಿದಿದ್ದಾರೆ.

ಬ್ಯಾಟಿಂಗ್​ ತಾಂತ್ರಿಕತೆಯ ದೋಷ ಸರಿಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವುದರಿಂದ ಕಿಶನ್ ಕಿಶನ್​ ಅವರು​ ರೆಡ್​ಬಾಲ್​ ಕ್ರಿಕೆಟ್​ನಿಂದ ದೂರ ಉಳಿದಿದ್ದಾರೆ ಎಂದು ಅವರ ಆಪ್ತಮೂಲಗಳು ಹೇಳಿವೆ. ಆದರೆ ಇಶಾನ್​ ಈ ಬಗ್ಗೆ ಯಾವುದೇ ಸಮಸ್ಯೆಯನ್ನು ಬಿಸಿಸಿಐ ಗಮನಕ್ಕೆ ತಂದಿಲ್ಲ. ಬದಲಾಲಿ ಬಿಸಿಸಿಐ ಮತ್ತು ಆಯ್ಕೆ ಸಮಿತಿಯ ಫೋನ್​ ಕರೆಯನ್ನು ಸ್ವೀಕರಿಸದೆ ದೊಡ್ಡ ತಪ್ಪು ಮಾಡುತ್ತಿದ್ದಾರೆ. ಇದರಿಂದ ಅವರ ವೃತ್ತೀಜಿವನ ಸಂಕಷ್ಟಕ್ಕೆ ಸಿಲುಕುವ ಭೀತಿ ಎದುರಾಗಿದೆ.

ಐಪಿಎಲ್​ ಅಭ್ಯಾಸಕ್ಕೆ ಹಾಜರ್​​


ದೇಶಿಯ ಮತ್ತು ರಾಷ್ಟ್ರೀಯ ತಂಡದ ಪರ ಆಡಲು ಆಲಸ್ಯ ತೋರುತ್ತಿರುವ ಇಶಾನ್​ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್​ ತಂಡದ ನಾಯಕ ಹಾರ್ದಿಕ್​ ಪಾಂಡ್ಯ ಜತೆ ಬರೋಡದಲ್ಲಿ ಸದ್ಯ ಅಭ್ಯಾಸ ನಡೆಸುತ್ತಿದ್ದಾರೆ. ಇದು ಬಿಸಿಸಿಐ ಕೆಂಗಣ್ಣಿಗೂ ಗುರಿಯಾಗಿತ್ತು. ಇದೇ ಕಾರಣಕ್ಕೆ ಬಿಸಿಸಿಐ ಎಲ್ಲ ಆಟಗಾರರು ದೇಶೀಯ ಕ್ರಿಕೆಟ್​ನಲ್ಲಿ ಆಡಿದರೆ ಮಾತ್ರ ಐಪಿಎಲ್​ನಲ್ಲಿ​ ಅವಕಾಶ ಎನ್ನುವ ನಿಯಮವನ್ನೂ ಜಾರಿಗೆ ತಂದಿದೆ.

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸದ ಸಮಯದಲ್ಲಿ ಇಶಾನ್ ತಮ್ಮ ಮಾನಸಿಕ ಯೋಗಕ್ಷೇಮಕ್ಕಾಗಿ ವಿರಾಮವನ್ನು ಬಯಸಿ, ಬಳಿಕ ಅವರು ರಾಷ್ಟ್ರೀಯ ತಂಡಕ್ಕೆ ಹಿಂತಿರುಗಲಿಲ್ಲ. ಅವರು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ನಾಯಕ ಹಾರ್ದಿಕ್ ಪಾಂಡ್ಯ ಅವರೊಂದಿಗೆ ತರಬೇತಿ ನಡೆಸುತ್ತಿದ್ದಾರೆ. ರಾಷ್ಟ್ರೀಯ ತಂಡದ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಅವರು ಇಶಾನ್ ಕಿಶನ್ ಕ್ರಿಕೆಟ್ ಆಡಿ ಬರಬೇಕು ಎಂಬ ಮಾತಿನ ಹೊರತಾಗಿಯೂ ಅವರು ರಣಜಿ ಟ್ರೋಫಿ ಪಂದ್ಯಗಳನ್ನು ಕಳೆದುಕೊಳ್ಳುವುದನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ R Ashwin: ಐತಿಹಾಸಿಕ ಸಾಧನೆ ಮಾಡಿದ ಅಶ್ವಿನ್​ಗೆ ಪ್ರಧಾನಿ ಮೋದಿಯಿಂದ ಮೆಚ್ಚುಗೆ

ಇತ್ತೀಚೆಗೆ ಬಿಸಿಸಿಐ(BCCI) ಕಾರ್ಯದರ್ಶಿ ಜಯ್​ ಶಾ(Jay Shah) ಖಡಕ್​ ಎಚ್ಚರಿಕೆ ನೀಡಿದ್ದರು. “ಆಯ್ಕೆ ಸಮಿತಿ ಅಧ್ಯಕ್ಷರು, ಕೋಚ್ ಮತ್ತು ನಾಯಕ ಒಬ್ಬ ಆಟಗಾರ ರೆಡ್ ಬಾಲ್ ಕ್ರಿಕೆಟ್ ಆಡಲು ಬಯಸಿದರೆ ನೀವು ಆಡಲೇಬೇಕು. ಇಲ್ಲಿ ಯಾವುದೇ ತಂತ್ರಗಳಿಗೆ ಅವಕಾಶವಿಲ್ಲ(‘ನಖ್ರೆ ನಹಿ ಚಲೇಂಗೆ’). ಮತ್ತು ಇಶಾನ್ ಕಿಶನ್ ಅವರಿಗೆ ಸಂಬಂಧಿಸಿದಂತೆ, ಅವರು ಕಿರಿಯರಾಗಿದ್ದಾರೆ, ನಾನು ಅವರ ಬಗ್ಗೆ ನಿರ್ದಿಷ್ಟವಾಗಿ ಹೇಳುತ್ತಿಲ್ಲ ಏಕೆಂದರೆ ಇದು ಎಲ್ಲ ಆಟಗಾರರಿಗೆ ಏಕರೂಪವಾಗಿ ಅನ್ವಯಿಸುತ್ತದೆ” ಎಂದು ಜಯ್​ ಶಾ ಹೇಳಿದ್ದರು

ಇಶಾನ್ ಅವರ 1 ಕೋಟಿ ರೂ.ಗಳ ಗ್ರೇಡ್ ಸಿ ಕೇಂದ್ರ ಒಪ್ಪಂದದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿದುಬಂದಿದೆ. “ಕೇಂದ್ರ ಒಪ್ಪಂದಗಳ ಬಗ್ಗೆ ಇಲ್ಲಿಯವರೆಗೆ ಯಾವುದೇ ಚರ್ಚೆಗಳು ನಡೆದಿಲ್ಲ” ಎಂದು ಬಿಸಿಸಿಐ ಅಧಿಕಾರಿ ಹೇಳಿದ್ದಾರೆ.

.

Exit mobile version