#ರಾಹುಲ್​ ಏಕದಿನ ಪ್ರದರ್ಶನಕ್ಕೆ ಮೆಚ್ಚುಗೆ ಸೂಚಿಸಿ ಟೆಸ್ಟ್ ಪ್ರದರ್ಶನವನ್ನು ಟೀಕಿಸಿದ ಮಾಜಿ ವೇಗಿ - Vistara News

ಕ್ರಿಕೆಟ್

ರಾಹುಲ್​ ಏಕದಿನ ಪ್ರದರ್ಶನಕ್ಕೆ ಮೆಚ್ಚುಗೆ ಸೂಚಿಸಿ ಟೆಸ್ಟ್ ಪ್ರದರ್ಶನವನ್ನು ಟೀಕಿಸಿದ ಮಾಜಿ ವೇಗಿ

ಈ ಹಿಂದೆ ಹಲವು ಬಾರಿ ಬಹಿರಂಗವಾಗಿಯೇ ರಾಹುಲ್​ ವಿಚಾರದಲ್ಲಿ ಟೀಕೆ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದ ವೆಂಕಟೇಶ್‌ ಪ್ರಸಾದ್‌ ಇದೇ ಮೊದಲ ಬಾರಿಗೆ ರಾಹುಲ್​ ಪ್ರದರ್ಶನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

VISTARANEWS.COM


on

KL Rahul scored 97 runs against Australia.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ಕೆ.ಎಲ್​ ರಾಹುಲ್(KL Rahul)​ ಅವರ ವಿಶ್ವಕಪ್​ ಪ್ರದರ್ಶನವನ್ನು ಕಂಡು ಟೀಮ್​ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ವೆಂಕಟೇಶ್‌ ಪ್ರಸಾದ್‌(Venkatesh Prasad) ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಟೆಸ್ಟ್​ ಪ್ರದರ್ಶನವನ್ನು ಟೀಕಿಸಿದ್ದಾರೆ.

ಈ ಹಿಂದೆ ಹಲವು ಬಾರಿ ಬಹಿರಂಗವಾಗಿಯೇ ರಾಹುಲ್​ ವಿಚಾರದಲ್ಲಿ ಟೀಕೆ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದ ವೆಂಕಟೇಶ್‌ ಪ್ರಸಾದ್‌ ಇದೇ ಮೊದಲ ಬಾರಿಗೆ ರಾಹುಲ್​ ಪ್ರದರ್ಶನವನ್ನು ಕೊಂಡಾಡಿದ್ದಾರೆ. ಟ್ವಿಟರ್​ನಲ್ಲಿ ರಾಹುಲ್​ಗೆ ಮೆಚ್ಚುಗೆ ಸೂಚಿಸಿದ್ದು,” ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ರಾಹುಲ್​ ಉತ್ತಮ ಆಟವಾಡಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ ಪರಿ ಪಕ್ವತೆಯ ಆಟವಾಡಿ ಗಮನಸೆಳೆದಿದ್ದಾರೆ. ಹೀಗಾಗಿ ಅವರ ಏಕದಿನ ಪ್ರದರ್ಶನದ ಬಗ್ಗೆ ಟೀಕೆ ವ್ಯಕ್ತಪಡಿಸುವುದಿಲ್ಲ. ನಾನು ಅವರನ್ನು ಟೀಕಿಸುವುದು ಕೇವಲ ಟೆಸ್ಟ್​ ವಿಚಾರದಲ್ಲಿ” ಎಂದು ಹೇಳಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನಡೆದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ರಾಹುಲ್​ ಸಂಪೂರ್ಣ ಬ್ಯಾಟಿಂಗ್​ ವೈಫಲ್ಯ ಕಂಡಿದ್ದರು. ಈ ವೇಳೆ ವೆಂಕಿ ಬ್ಯಾಕ್ ಟು ಬ್ಯಾಕ್ ಟ್ವಿಟ್ ಮಾಡಿ ರಾಹುಲ್ ಅವರನ್ನು ಟೀಕಿಸಿದ್ದರು. ಇವರಿಗೆ ಅವಕಾಶ ನೀಡುದಕ್ಕಿಂತ ಬೇರೆ ಆಟಗಾರನಿಗೆ ಅವಕಾಶ ನೀಡಿದರೆ ಉತ್ತಮ. ಬಿಸಿಸಿಐ ಏಕೆ ಇಷ್ಟೋಂದು ಅವಕಾಶ ನೀಡುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ” ಎಂದಿದ್ದರು. ಆದರೆ ಈಗ ಉಲ್ಟಾ ಹೊಡೆದಿದ್ದಾರೆ.

“ನನಗೆ ರಾಹುಲ್ ಅವರ ಟೆಸ್ಟ್ ಪ್ರದರ್ಶನದ ಬಗ್ಗೆ ಬೇಸರವಿದೆಯೇ ಹೊರತು ಏಕದಿನ ಸ್ವರೂಪದಲ್ಲಿ ಅಲ್ಲ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 2 ರನ್​ಗೆ ಮೂರು ವಿಕೆಟ್​ ಬಿದ್ದಾಗ ಬ್ಯಾಟಿಂಗ್​ ನಡೆಸಲು ಬಂದ ರಾಹುಲ್​ ಯಾವುದೇ ಆತಂಕಕ್ಕೆ ಒಳಗಾಗದೆ ಕೊನೆಯ ತನಕ ನಿಂತು ಪಂದ್ಯವನ್ನು ಗೆಲ್ಲಿಸಿದ್ದು ನಿಜಕ್ಕೂ ಗ್ರೇಟ್​. ಆದರೆ ಟೆಸ್ಟ್ ವಿಚಾರಕ್ಕಾಗಿ ಅವರೊಂದಿಗೆ ಸಣ್ಣ ಮನಸ್ತಾಪ ಹೊಂದಿದ್ದೇನೆ” ಎಂದು ವಿಂಕಿ ಹೇಳಿದ್ದಾರೆ. ಆಸೀಸ್​ ವಿರುದ್ಧ ರಾಹುಲ್​ ಅಜೇಯ 97 ರನ್​ ಬಾರಿಸಿ ಮಿಂಚಿದ್ದರು.

ಇದನ್ನೂ ಓದಿ KL Rahul: ಅಂದು ಕಪಿಲ್​, ಇಂದು ರಾಹುಲ್​; ಇದು ಒಂದು ಬಾತ್​ರೂಮ್​ನ ರೋಚಕ ಕತೆ

ವಿಶ್ವಕಪ್​ ಆರಂಭಕ್ಕೂ ಮುನ್ನ ವೆಂಕಟೇಶ್‌ ಪ್ರಸಾದ್‌ ಅವರು ರಾಹುಲ್​ ಅವರ ಮಾವ ಸುನೀಲ್​ ಶೆಟ್ಟಿ ಜತೆಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್​ ಅವರು ಈ ಬಾರಿಯ ವಿಶ್ವಕಪ್​ನಲ್ಲಿ ಉತ್ತಮ ಪ್ರದರ್ಶನ ತೋರುವಂತೆ ತಾನು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಮಾಧ್ಯಮಗಳ ಮುಂದೆ ಹೇಳಿದ್ದರು.

31 ವರ್ಷದ ರಾಹುಲ್ ಮೇ 1ರಂದು ನಡೆದ ಆರ್​ಸಿಬಿ ವಿರುದ್ಧದ ಐಪಿಎಲ್​ ಪಂದ್ಯದ ವೇಳೆ ರಾಹುಲ್ ಅವರು ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿ ಮೈದಾನದಲ್ಲೇ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಟಗಾರರ ಸಹಾಯದಿಂದ ಮೈದಾನದಿಂದ ಹೊರಕ್ಕೆ ಕೊಂಡೊಯ್ಯಲಾಗಿತ್ತು. ಗಾಯದ ಪ್ರಮಾಣ ಗಂಭಿರವಾದ ಪರಿಣಾಮ ಅವರಿಗೆ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಹೀಗಾಗಿ ಅವರು ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಿಂದ ಹೊರಗುಳಿದಿದ್ದರು. ಸದ್ಯ ಪ್ರಚಂಡ ಬ್ಯಾಟಿಂಗ್​ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Chahal-Dhanashree: ನ್ಯೂಯಾರ್ಕ್​ನಲ್ಲಿ ಪತ್ನಿ ಜತೆ ಪ್ರವಾಸಿ ತಾಣ ಸುತ್ತಿ ಎಂಜಾಯ್​ ಮಾಡಿದ ಚಹಲ್​

Chahal-Dhanashree: ಚಹಲ್​ ಮತ್ತು ಧನಶ್ರೀ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಧನಶ್ರೀ ಗರ್ಭಿಣಿಯರು ಧರಿಸುವ ಉಡುಗೆ ತೊಟ್ಟು(Dhanashree Verma Maternity Dress) ತನ್ನ ಗಂಡ ಚಹಲ್ ಜತೆಗಿರುವ ಫೋಟೊವನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಹೀಗಾಗಿ ಚಹಲ್ ತಂದೆಯಾಗುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

VISTARANEWS.COM


on

Chahal-Dhanashree
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್​ ಟೂರ್ನಿಯನ್ನಾಡಲು ನ್ಯೂಯಾರ್ಕ್​ನಲ್ಲಿರುವ ಟೀಮ್​ ಇಂಡಿಯಾದ ಸ್ಪಿನ್ನರ್​ ಯಜುವೇಂದ್ರ ಚಹಲ್(Yuzvendra Chahal)​ ಅವರು ಬಿಡುವಿನ ವೇಳೆ ತಮ್ಮ ಪತ್ನಿ ಧನಶ್ರೀ ವರ್ಮಾ(Chahal-Dhanashree) ಜತೆ ನ್ಯೂಯಾರ್ಕ್​ ಸಿಟಿ ಸುತ್ತಿದ್ದಾರೆ. ಈ ಜೋಡಿ ಇಲ್ಲಿನ ಪ್ರಸಿದ್ಧ ತಾಣಗಳಿಗೆ ಭೇಟಿ ನೀಡಿ ಎಂಜಾಯ್​ ಮಾಡಿದ ಸುಂದರ ಫೋಟೊಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಮಧ್ಯೆ ಎಲ್ಲವೂ ಸರಿಯಿಲ್ಲ ಎನ್ನುತ್ತಿದ್ದ ನೆಟ್ಟಿಗರಿಗೆ ನಾವಿಬ್ಬರು ಚೆನ್ನಾಗಿಯೇ ಇದ್ದೇವೆ ಎನ್ನುವ ಪರೋಕ್ಷ ಸಂದೇಶವೊಂದನ್ನು ನೀಡಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಚಹಲ್ ಹಾಗೂ ಧನ ಶ್ರೀ(Dhanashree Verma) ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂಬುದಾಗಿ ಸುದ್ದಿ ಹರಡಿತ್ತು. ಧನಶ್ರಿ ತಮ್ಮ ಗೆಳೆಯರೊಂದಿಗೆ ಕಾಣಿಸಿಕೊಂಡಾಗಲೆಲ್ಲವೂ ಸಾಮಾಜಿ ಜಾಲತಾಣದಲ್ಲಿ ಈ ವಿಚಾರ ಆಗಾಗ ಮುನ್ನಲೆಗೆ ಬರುತ್ತಿತ್ತು. ಆದರೆ ಈ ಜೋಡಿ ಮಾತ್ರ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಒಳ್ಳೆಯ ರೀತಿಯಲ್ಲೇ ಸಂಸಾರ ನಡೆಸುತ್ತಿದ್ದಾರೆ. ಇದೀಗ ನ್ಯೂಯಾರ್ಕ್ ಸಿಟಿಯಲ್ಲಿ ಎಂಜಾಯ್​ ಮೂಡ್​ನಲ್ಲಿರುವ ಫೋಟೊಗಳನ್ನು ಹಂಚಿಕೊಂಡು ತಮ್ಮ ಸಂಸಾರದ ಮಧ್ಯೆ ಹುಳಿ ಹಿಂಡುತ್ತಿರುವವರಿಗೆ ತಕ್ಕ ಉತ್ತರ ನೀಡಿದ್ದಾರೆ.

ತಂದೆಯಾಗಲಿದ್ದಾರಾ ಚಹಲ್​?


ಚಹಲ್​ ಮತ್ತು ಧನಶ್ರೀ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಧನಶ್ರೀ ಗರ್ಭಿಣಿಯರು ಧರಿಸುವ ಉಡುಗೆ ತೊಟ್ಟು(Dhanashree Verma Maternity Dress) ತನ್ನ ಗಂಡ ಚಹಲ್ ಜತೆಗಿರುವ ಫೋಟೊವನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಹೀಗಾಗಿ ಚಹಲ್ ತಂದೆಯಾಗುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಆದರೆ ಈ ಜೋಡಿ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಇದು ಕೇವಲ ನೆಟ್ಟಿಗರ ಕಲ್ಪನೆಯಾಗಿದೆ. ಧನಶ್ರೀ ಡ್ಯಾನ್ಸರ್​ ಮತ್ತು ಮಾಡೆಲ್​ ಆಗಿರುವ ಕಾರಣ ಟ್ರೆಂಡ್​ಗಾಗಿ ಈ ಉಡುಗೆಯನ್ನು ತೊಟ್ಟಿರುವ ಸಾಧ್ಯತೆಯೂ ಅಧಿಕವಾಗಿದೆ. 2020ರಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು.

ಇದನ್ನೂ ಓದಿ Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ನೀಡಲಾಗಿದೆ. ಚಹಲ್​ ಸದ್ಯ ಅಮೆರಿಕಕ್ಕೆ ತೆರಳಿದ್ದಾರೆ. ಇದುವರೆಗೆ ಭಾರತ ಪರ 72 ಏಕದಿನ ಪಂದ್ಯಗಳಿಂದ 121 ವಿಕೆಟ್​, 80 ಟಿ20 ಆಡಿ 96 ವಿಕೆಟ್​ ಕಡೆವಿದ್ದಾರೆ. ಇಂದು ನಡೆಯುವ ಕೆನಾಡ ವಿರುದ್ಧದ ಪಂದ್ಯದಲ್ಲಿ ಮತ್ತು ಸೂಪರ್​-8 ಹಂತದ ಪಂದ್ಯದಲ್ಲಿ ಚಹಲ್​ಗೆ ಆಡುವ ಅವಕಾಶ ಸಿಗುವ ಸಾಧ್ಯತೆ ಅಧಿಕವಾಗಿದೆ.

ಇತ್ತೀಚೆಗೆ 150ನೇ ಐಪಿಎಲ್​ ಪಂದ್ಯವನ್ನಾಡಿದ ಚಹಲ್​ಗೆ ಪತ್ನಿ ಭಾವುಕ ವಿಡಿಯೊ ಸಂದೇಶದ ಮೂಲಕ ಹಾರೈಸಿದ್ದರು. “ಹೇ ಯುಜಿ, ನಿಮ್ಮ 150ನೇ ಐಪಿಎಲ್ ಪಂದ್ಯಕ್ಕೆ ಅಭಿನಂದನೆಗಳು. ನಿವು ಈ ಹಿಂದೆ ಆಡಿದ ತಂಡಕ್ಕೆ ಮತ್ತು ಈಗ ಆಡುತ್ತಿರುವ ರಾಜಸ್ಥಾನ್ ರಾಯಲ್ಸ್‌ಗೆ ನೀವು ಅಪಾರ ಕೊಡುಗೆ ನೀಡಿದ್ದೀರಿ. ನಿಮ್ಮ ಬಗ್ಗೆ ನನಗೆ ಯಾವತ್ತೂ ಹೆಮ್ಮೆ ಇದೆ. ನೀವು ನಿಮ್ಮ ಆಟವನ್ನು ಹೇಗೆ ಆಡುತ್ತೀರಿ ಮತ್ತು ಪ್ರತಿ ಬಾರಿ ನೀವು ಕಮ್​ಬ್ಯಾಕ್​ ಮಾಡುವ ರೀತಿ ನಿಜಕ್ಕೂ ಮೆಚ್ಚಲೇ ಬೇಕು. ಯಾವುದೇ ಪಂದ್ಯ ಒತ್ತಡದಲ್ಲಿದ್ದಾಗಲೆಲ್ಲಾ ವಿಕೆಟ್​ ತೆಗೆಯಬಲ್ಲ ಬೌಲರ್​ ನೀವಾಗಿದ್ದೀರಿ. ನಾನು ನಿಮ್ಮ ದೊಡ್ಡ ಚೀರ್‌ಲೀಡರ್ ಮತ್ತು ನಾನು ಯಾವಾಗಲೂ 100 ಪ್ರತಿಶತದಷ್ಟು ನಿಮ್ಮನ್ನು ಬೆಂಬಲಿಸುತ್ತೇನೆ” ಎಂದು ಶುಭ ಹಾರೈಸಿದ್ದರು. ವಿಡಿಯೊವನ್ನು ರಾಜಸ್ಥಾನ್​ ರಾಯಲ್ಸ್(Rajasthan Royals)​ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡಿತ್ತು.

Continue Reading

ಕ್ರಿಕೆಟ್

Viral Video: ಪಾಕ್​ ಕ್ರಿಕೆಟಿಗ ವಾಸಿಂ ಅಕ್ರಮ್ ಜತೆ​ ಬ್ರೇಕ್​ ಡ್ಯಾನ್ಸ್​ ಮಾಡಿದ ಸುನಿಲ್ ಗಾವಸ್ಕರ್

Viral Video: ಗವಾಸ್ಕರ್​ ಮತ್ತು ಅಕ್ರಮ್​ ಉತ್ತಮ ಸ್ನೇಹಿತರಾಗಿದ್ದಾರೆ. ಕಾಮೆಂಟ್ರಿ ವೇಳೆಯೂ ಆಗಾಗ ಪರಸ್ಪರ ಕಾಲೆಳೆಯುತ್ತಿರುತ್ತಾರೆ. ಅದರಲ್ಲೂ ಭಾರತ ಮತ್ತು ಪಾಕ್​ ಪಂದ್ಯ ಇರುವ ಸಂದರ್ಭದಲ್ಲಿ ಇದು ಹೆಚ್ಚಾಗಿ ಕಂಡು ಬರುತ್ತದೆ.

VISTARANEWS.COM


on

Viral Video
Koo

ನ್ಯೂಯಾರ್ಕ್​: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್(T20 World Cup)​ ಟೂರ್ನಿಯಲ್ಲಿ ಕಾಮೆಂಟ್ರಿ ಮಾಡುತ್ತಿರುವ ಮಾಜಿ ಆಟಗಾರರಾದ ಪಾಕಿಸ್ತಾನ ವಾಸಿಂ ಅಕ್ರಮ್​(Wasim Akram) ಮತ್ತು ಭಾರತದ ಸುನಿಲ್​ ಗವಾಸ್ಕರ್​(Sunil Gavaskar) ಅವರು ಜತೆಯಾಗಿ ಡ್ಯಾನ್ಸ್​ ಮಾಡಿದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ. ಈ ವಿಡಿಯೊಗೆ ನೆಟ್ಟಿಗರು ಹಲವು ಹಾಡುಗಳನ್ನು ಎಡಿಟ್​ ಮಾಡಿ ಶೇರ್​ ಮಾಡಿದ್ದಾರೆ.

ಗವಾಸ್ಕರ್​ ಮತ್ತು ಅಕ್ರಮ್​ ಉತ್ತಮ ಸ್ನೇಹಿತರಾಗಿದ್ದಾರೆ. ಕಾಮೆಂಟ್ರಿ ವೇಳೆಯೂ ಆಗಾಗ ಪರಸ್ಪರ ಕಾಲೆಳೆಯುತ್ತಿರುತ್ತಾರೆ. ಅದರಲ್ಲೂ ಭಾರತ ಮತ್ತು ಪಾಕ್​ ಪಂದ್ಯ ಇರುವ ಸಂದರ್ಭದಲ್ಲಿ ಇದು ಹೆಚ್ಚಾಗಿ ಕಂಡು ಬರುತ್ತದೆ.

ಇದನ್ನೂ ಓದಿ RSA vs NEP: ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ; ಗೆಲುವಿನ ಖಾತೆ ತೆರೆದ ಕಿವೀಸ್​

ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನವು ಅಮೆರಿಕ ಹಾಗೂ ಭಾರತದ ವಿರುದ್ಧ ಹೀನಾಯವಾಗಿ ಸೋಲನುಭವಿಸಿದೆ. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿದೆ. ಇನ್ನು, ನಾಲ್ಕು ಪಾಯಿಂಟ್ ಹೊಂದಿದ್ದ ಅಮೆರಿಕ ತಂಡವು ಐರ್ಲೆಂಡ್‌ ವಿರುದ್ಧ ಸೋತು, ಜೂನ್‌ 16ರಂದು ಐರ್ಲೆಂಡ್‌ ವಿರುದ್ಧ ನಡೆಯುವ ಪಂದ್ಯದಲ್ಲಿ ಬಾಬರ್‌ ಅಜಂ ಬಳಗ ಗೆದ್ದರೆ ಮಾತ್ರ ಸೂಪರ್‌ 8ಕ್ಕೆ ಅರ್ಹತೆ ಪಡೆಯುತ್ತಿತ್ತು. ಆದರೆ, ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅಮೆರಿಕದ ಅಂಕಗಳು 5ಕ್ಕೆ ಏರಿಕೆಯಾದವು. ಇದರಿಂದಾಗಿ ಐರ್ಲೆಂಡ್‌ ವಿರುದ್ಧ ಪಾಕ್‌ ಗೆದ್ದರೂ ಯಾವುದೇ ಉಪಯೋಗವಿಲ್ಲದಂತಾಗಿದೆ.

ಟೂರ್ನಿಯಿಂದ ಹೊರಬಿದ್ದಿರುವ ಪಾಕ್​ ತಂಡದ ಪ್ರದರ್ಶನದ ಬಗ್ಗೆ ವಾಸಿಂ ಅಕ್ರಮ್ ಸೇರಿ ಅನೇಕ ಮಾಜಿ ಆಟಗಾರರು ಆಕ್ರೋಶ ಹೊರಹಾಕಿದ್ದಾರೆ. ಕ್ರಿಕೆಟ್​ ಅಭ್ಯಾಸ ಮಾಡುವುದನ್ನು ಬಿಟ್ಟು ಶೋಕಿಗಾಗಿ ಸೇನೆಯಲ್ಲಿ ಫಿಟ್​ನೆಸ್​ ತರಬೇತಿ ಪಡೆದು ಸಮಯ ವ್ಯರ್ಥ ಮಾಡಿದ್ದು ಈ ಸೋಲಿಗೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಟೂರ್ನಿಯಿಂದ ಹೊರಬಿದ್ದ ಪಾಕ್​ ತಂಡವನ್ನು(Pakistan Team Troll) ಸ್ವತಃ ತವರಿನ ಅಭಿಮಾನಿಗಳು ಸೇರಿ ಭಾರತೀಯ(India fans troll Pakistan cricket team) ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ. ಹಲವು ಮಿಮ್ಸ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮತ್ತೆ ಬಾಬರ್​ ತಲೆದಂಡ?

ಕಳೆದ ವರ್ಷ(2023) ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಬಾಬರ್​ ಸಾರಥ್ಯದಲ್ಲಿ ಪಾಕಿಸ್ತಾನ ತಂಡ ನೀರಸ ಪ್ರದರ್ಶನ ತೋರಿತ್ತು. ಆಡಿದ 9 ಪಂದ್ಯಗಳ ಪೈಕಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ ಲೀಗ್​ ಹಂತದಲ್ಲೇ ಹೊರಬಿದ್ದಿತ್ತು. ಹೀಗಾಗಿ ಬಾಬರ್​ ವಿರುದ್ಧ ಪಾಕ್​ ತಂಡದ ಮಾಜಿ ಆಟಗಾರರು ಸೇರಿ ಅಂದಿನ ಪಿಬಿ ಅಧ್ಯಕ್ಷ ಭಾರೀ ಟೀಕೆ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಬಾಬರ್ ಎಲ್ಲಾ ಮೂರು ಸ್ವರೂಪಗಳ ನಾಯಕತ್ವದಿಂದ ಕೆಳಗಿಳಿದಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲಿ ಪಾಕ್​ ತಂಡ ಅತ್ಯಂತ ಕಳಪೆ ಪ್ರದರ್ಶನ ತೋರಿದ್ದಕ್ಕಾಗಿ ಮತ್ತೆ ಬಾಬರ್​ ಅವರ ತಲೆದಂಡವಾಗುವ ಸಾಧ್ಯತೆ ಅಧಿಕವಾಗಿದೆ ಎನ್ನಲಾಗಿದೆ.

Continue Reading

ಕ್ರಿಕೆಟ್

T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

T20 World Cup 2024 Super 8: ಭಾರತ, ಆಸ್ಟ್ರೇಲಿಯಾ, ಅಫಘಾನಿಸ್ತಾನ, ಅಮೆರಿಕ, ದಕ್ಷಿಣ ಆಫ್ರಿಕಾ, ವೆಸ್ಟ್​ ಇಂಡೀಸ್​ ಸೂಪರ್​-8ಗೆ ಪ್ರವೇಶ ಪಡೆದ ತಂಡಗಳು. ಇನ್ನುಳಿದ 2 ಸ್ಥಾನಕ್ಕೆ ಸ್ಕಾಟ್ಲೆಂಡ್​, ಇಂಗ್ಲೆಂಡ್​, ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್​ ವಿರುದ್ಧ ತೀವ್ರ ಪೈಪೋಟಿ ಏರ್ಪಟ್ಟಿದೆ.

VISTARANEWS.COM


on

T20 World Cup 2024 Super 8
Koo

ನ್ಯೂಯಾರ್ಕ್​: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಸಾಗುತ್ತಿರುವ ಟಿ20 ವಿಶ್ವಕಪ್(T20 World Cup 2024) ಟೂರ್ನಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಹಲವು ತಂಡಗಳು ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದೆ. ಸದ್ಯ 6 ತಂಡಗಳು ಸೂಪರ್​ 8 ಹಂತಕ್ಕೆ ಪ್ರವೇಶ ಪಡೆದಿವೆ. ಇನ್ನುಳಿದ 4 ಸ್ಥಾನಗಳಿಗೆ ಮೂರು ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಕ್ಕೂ ಮುನ್ನವೇ ಐಸಿಸಿ ಸೂಪರ್​-8 ಹಂತದ ವೇಳಾಪಟ್ಟಿಯನ್ನು(T20 World Cup 2024 Super 8) ಪ್ರಕಟಿಸಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಅಫಘಾನಿಸ್ತಾನ ವಿರುದ್ಧ ಆಡಲಿದೆ.

ಭಾರತ, ಆಸ್ಟ್ರೇಲಿಯಾ, ಅಫಘಾನಿಸ್ತಾನ, ಅಮೆರಿಕ, ದಕ್ಷಿಣ ಆಫ್ರಿಕಾ, ವೆಸ್ಟ್​ ಇಂಡೀಸ್​ ಸೂಪರ್​-8ಗೆ ಪ್ರವೇಶ ಪಡೆದ ತಂಡಗಳು. ಇನ್ನುಳಿದ 2 ಸ್ಥಾನಕ್ಕೆ ಸ್ಕಾಟ್ಲೆಂಡ್​, ಇಂಗ್ಲೆಂಡ್​, ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್​ ವಿರುದ್ಧ ತೀವ್ರ ಪೈಪೋಟಿ ಏರ್ಪಟ್ಟಿದೆ.

ಸೂಪರ್​-8ನಲ್ಲಿ ಭಾರತ, ಆಸ್ಟ್ರೇಲಿಯಾ, ಅಫಘಾನಿಸ್ತಾನ ಮತ್ತು ‘ಡಿ’ ಗುಂಪಿನಲ್ಲಿ 2ನೇ ಸ್ಥಾನಿಯಾಗುವ ತಂಡ ಕಾದಾಟ ನಡೆಸಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಹೈವೋಲ್ಟೇಜ್​ ಪಂದ್ಯ ಜೂನ್​ 24 ಭಾನುವಾರದಂದು ನಡೆಯಲಿದೆ. ಸೂಪರ್​-8 ಪಂದ್ಯಗಳು ಜೂನ್​ 19ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿವೆ. ಟೀಮ್​ ಇಂಡಿಯಾದ ಎಲ್ಲ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಸಾರಗೊಳ್ಳಲಿದೆ.

ಭಾರತದ ಸೂಪರ್​-8 ಪಂದ್ಯದ ವೇಳಾಪಟ್ಟಿ

ಎದುರಾಳಿದಿನಾಂಕತಾಣಪ್ರಸಾರ
ಭಾರತ-ಅಫಘಾನಿಸ್ತಾನಜೂನ್​ 20ಬಾರ್ಬಡೋಸ್ರಾತ್ರಿ 8ಕ್ಕೆ
ಭಾರತ-ಡಿ 2(ಡಿ ಗುಂಪಿನ 2ನೇ ಸ್ಥಾನಿ)ಜೂನ್​ 22ಆಂಟಿಗುವಾರಾತ್ರಿ 8ಕ್ಕೆ
ಭಾರತ-ಆಸ್ಟ್ರೇಲಿಯಾಜೂನ್​ 24ಸೇಂಟ್ ಲೂಸಿಯಾರಾತ್ರಿ 8ಕ್ಕೆ

ಭಾರತಕ್ಕೆ ಇಂದು ಕೊನೆಯ ಲೀಗ್​ ಪಂದ್ಯ


ಟೀಮ್​ ಇಂಡಿಯಾ(IND vs CAN) ತನ್ನ ಅಂತಿಮ ಲೀಗ್ ಪಂದ್ಯವನ್ನಾಡಲು ಸಜ್ಜಾಗಿದೆ. ಇಂದು(ಶನಿವಾರ) ನಡೆಯುವ ಪಂದ್ಯದಲ್ಲಿ ಕೆನಾಡ ವಿರುದ್ಧ ಕಣಕ್ಕಿಳಿಯಲಿದೆ. ಈಗಾಗಲೇ ಸೂಪರ್​-8ಗೆ ಪ್ರವೇಶ ಪಡೆದಿರುವ ಕಾರಣ ರೋಹಿತ್​ ಪಡೆಗೆ ಇದೊಂದು ​ಔಪಚಾರಿಕ ಪಂದ್ಯ ಎಂದರೂ ತಪ್ಪಾಗಲಾರದು. ಆದರೆ ಈ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗಿದೆ.

ಇದೇ ಮೈದಾನದಲ್ಲಿ ಶುಕ್ರವಾರ ನಡೆಯಬೇಕಿದ್ದ 2 ಪಂದ್ಯಗಳು ಕೂಡ ಒಂದು ಎಸೆತ ಕಾಣದೆ ರದ್ದಾಗಿತ್ತು. ಇಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು. ಇಂದು ಕೂಡ ಭಾರೀ ಮಳೆ(IND vs CAN weather report) ಬೀಳುವ ಸಾಧ್ಯತೆ ಇದೆ. 2 ದಿನಗಳ ಹಿಂದೆಯೇ ಹವಾಮಾನ ಇಲಾಖೆ ಈ ಕುರಿತು ಎಚ್ಚರಿಕೆ ನೀಡಿತ್ತು. ಒಂದೊಮ್ಮೆ ಪಂದ್ಯ ನಡೆದರೂ ಕೂಡ ಭಾರತ ಈ ಪಂದ್ಯಕ್ಕೆ ತನ್ನ ಆಡುವ ಬಳಗದಲ್ಲಿ ಹಲವು ಮಹತ್ವದ ಬದಲಾವಣೆ ಮಾಡುವುದು ನಿಶ್ಚಿತ.

Continue Reading

ಕ್ರೀಡೆ

India Coach: ಕೋಚ್​ ಆಗುವ ಮುನ್ನವೇ ಗಂಭೀರ್​ಗೆ ಕಿವಿಮಾತು ಹೇಳಿದ ಅನಿಲ್ ಕುಂಬ್ಳೆ

India Coach: ಕುಂಬ್ಳೆ ಭಾರತ ತಂಡದ ಕೋಚ್​ ಆದ ಸಂದರ್ಭದಲ್ಲಿ ಆಟಗಾರರ ಎಲ್ಲ ಪಾರ್ಟಿಗಳಿಗೆ ಕಡಿವಾಣ ಹಾಕಿದ್ದರು. ಹೀಗಾಗಿ ಆಟಗಾರರಿಗೆ ಕುಂಬ್ಳೆ ಜತೆ ಮನಸ್ತಾಪ ಉಂಟಾಗಿತ್ತು. ಬಳಿಕ ಕುಂಬ್ಳೆ ಅವರು ಅರ್ಧದಿಂದಲೇ ತಮ್ಮ ಕೋಚ್​ ಹುದ್ದೆಯನ್ನು ತೊರೆದಿದ್ದರು.

VISTARANEWS.COM


on

India Coach
Koo

ಮುಂಬಯಿ: ರಾಹುಲ್​ ದ್ರಾವಿಡ್(Rahul Dravid)​ ಅವರು ಟಿ20 ವಿಶ್ವಕಪ್​ ಬಳಿಕ ಟೀಮ್​ ಇಂಡಿಯಾದ ಕೋಚ್(India Coach)​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ನೂತನ ಕೋಚ್​ ಆಗಿ ಗೌತಮ್​ ಗಂಭೀರ್​(Gautam Gambhir) ಅವರು ಆಯ್ಕೆಯಾಗುತ್ತಾರೆ ಎಂಬ ಮಾತುಗಳು ಈಗಾಗಲೇ ಕೇಳಿ ಬಂದಿವೆ. ಗಂಭೀರ್ ಅವರ ಮಾರ್ಗದರ್ಶನದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಈ ಬಾರಿಯ ಐಪಿಎಲ್​ (IPL 2024) ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಇದೀಗ ಟೀಮ್​ ಇಂಡಿಯಾದ ಮಾಜಿ ಆಟಗಾರ ಹಾಗೂ ಕೋಚ್​ ಅನಿಲ್ ಕುಂಬ್ಳೆ(Anil Kumble) ಅವರು ರಾಷ್ಟ್ರೀಯ ತಂಡಕ್ಕೆ ತರಬೇತಿ ನೀಡುವುದು ಸಂಪೂರ್ಣವಾಗಿ ವಿಭಿನ್ನ ಸವಾಲು ಎಂದು ಹೇಳಿದ್ದಾರೆ.

ಕ್ರಿಕ್​ಇನ್ಫೊ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ ಕುಂಬ್ಳೆ, ಗಂಭೀರ್​ ಮಾರ್ಗದರ್ಶನದಲ್ಲಿ ಕೆಕೆಆರ್​ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿದರೂ ಕೂಡ ರಾಷ್ಟ್ರೀಯ ತಂಡದ ಮಾರ್ಗದರ್ಶನ, ತರಬೇತಿ ಅತ್ಯಂತ ವಿಭಿನ್ನವಾಗಿದೆ. ಈ ಸವಾಲು ಅಷ್ಟು ಸುಲಭವಲ್ಲ ಎಂದು ಹೇಳಿದ್ದಾರೆ. ಕುಂಬ್ಳೆ ಅವರು ಈ ಮಾತನ್ನು ಹೇಳಲು ಕೂಡ ಒಂದು ಕಾಣವಿದೆ.

ಕುಂಬ್ಳೆ ಭಾರತ ತಂಡದ ಕೋಚ್​ ಆದ ಸಂದರ್ಭದಲ್ಲಿ ಆಟಗಾರರ ಎಲ್ಲ ಪಾರ್ಟಿಗಳಿಗೆ ಕಡಿವಾಣ ಹಾಕಿದ್ದರು. ಹೀಗಾಗಿ ಆಟಗಾರರಿಗೆ ಕುಂಬ್ಳೆ ಜತೆ ಮನಸ್ತಾಪ ಉಂಟಾಗಿತ್ತು. ಬಳಿಕ ಕುಂಬ್ಳೆ ಅವರು ಅರ್ಧದಿಂದಲೇ ತಮ್ಮ ಕೋಚ್​ ಹುದ್ದೆಯನ್ನು ತೊರೆದಿದ್ದರು. ಗಂಭೀರ್​ ಕೂಡ ನೇರ ನುಡಿ ಮತ್ತು ತಂಡದ ಯಶಸ್ಸಿಗಾಗಿ ಕೆಲ ಕಠಿಣ ನಿರ್ಧಾರ ಕೈಗೊಳ್ಳುವ ವ್ಯಕ್ತಿಯಾಗಿದ್ದಾರೆ. ಹೀಗಾಗಿ ಕುಂಬ್ಳೆ ಅವರು ಗಂಭೀರ್​ಗೆ ಕೋಚ್​ ಆಗುವ ಮುನ್ನವೇ ಸಲಹೆಯೊಂದನ್ನು ನೀಡಿದಂತಿದೆ.

ಇದನ್ನೂ ಓದಿ Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

ದ್ರಾವಿಡ್​ ಕೋಚಿಂಗ್​ ಬಗ್ಗೆ ಮಾತನಾಡಿದ ಕುಂಬ್ಳೆ, “ದ್ರಾವಿಡ್​ ತಮ್ಮ ಕೋಚಿಂಗ್​ ಅವಧಿಯಲ್ಲಿ ಅದ್ಭುತ ಕೆಲಸ ಮಾಡಿದ್ದಾರೆ. ವಿಶ್ವಕಪ್​ ಗೆಲ್ಲದಿದ್ದರೂ ಕೂಡ ತಂಡದ ಪ್ರದರ್ಶನ ಮಾತ್ರ ಅದ್ಭುತವಾಗಿತ್ತು. ಫೈನಲ್​ ತನಕ ಬಂದ ರೀತಿಯನ್ನು ಮರೆಯಲು ಸಾಧ್ಯವಿಲ್ಲ. ಬ್ಯಾಟಿಂಗ್​, ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ದ್ರಾವಿಡ್​ ಉತ್ತಮ ಆಟಗಾರರನ್ನು ಸಂಘಟಿಸಿ ಗುಣಮಟ್ಟದ ಕ್ರಿಕೆಟ್​ ಆಡುವಂತೆ ಮಾಡಿದ್ದಾರೆ” ಎಂದು ದ್ರಾವಿಡ್​ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗಂಗೂಲಿ ಕೂಡ ಸಾಥ್​

ಭಾರತ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ(Sourav Ganguly) ಕೂಡ ಗೌತಮ್​ ಗಂಭೀರ್​ ಟೀಮ್​ ಇಂಡಿಯಾದ ಕೋಚ್​ ಆದರೆ ಉತ್ತಮ ಎಂದಿದ್ದಾರೆ. ‘ಗಂಭೀರ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದರೆ, ನನ್ನ ಬೆಂಬಲವಿದೆ. ಅವರು ಈ ಹುದ್ದಗೆ ಸೂಕ್ತ ಅಭ್ಯರ್ಥಿ’ ಎಂದು ಹೇಳುವ ಮೂಲಕ ಗಂಭೀರ್​ಗೆ ಬೆಂಬಲ ಸೂಚಿಸಿದ್ದಾರೆ.

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

Continue Reading
Advertisement
Renuka Swamy Murder
ಕರ್ನಾಟಕ4 mins ago

Renuka Swamy Murder: ರೇಣುಕಾಸ್ವಾಮಿ ಶವ ಸಾಗಿಸಲು ಆರೋಪಿಗಳಿಗೆ ನೆರವು; ಪಿಎಸ್‌ಐ ಬಂಧನ ಸಾಧ್ಯತೆ

Road Accident
ದೇಶ14 mins ago

Road Accident: ಟೆಂಪೋ ಟ್ರಾವೆಲರ್‌ ಆಳವಾದ ಕಮರಿಗೆ ಉರುಳಿ ಕನಿಷ್ಠ 8 ಮಂದಿ ಸಾವು

Chahal-Dhanashree
ಕ್ರಿಕೆಟ್18 mins ago

Chahal-Dhanashree: ನ್ಯೂಯಾರ್ಕ್​ನಲ್ಲಿ ಪತ್ನಿ ಜತೆ ಪ್ರವಾಸಿ ತಾಣ ಸುತ್ತಿ ಎಂಜಾಯ್​ ಮಾಡಿದ ಚಹಲ್​

Self Harming
ಕ್ರೈಂ39 mins ago

Self Harming: ಅತ್ತೆ ಮಗಳು ಪ್ರೀತಿ ‌ನಿರಾಕರಿಸಿದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

Fathers Day 2024
ಪ್ರಮುಖ ಸುದ್ದಿ53 mins ago

Fathers Day 2024: ʼಅಪ್ಪʼನೆಂದರೆ ಆಕಾಶ… ಎನ್ನುವವರು ಈ ಭಾನುವಾರ ತಪ್ಪದೇ ವಿಶ್‌ ಮಾಡಿ!

Drown in Quarry
ಕರ್ನಾಟಕ1 hour ago

Drown in Quarry: ಕ್ವಾರಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು‌

Kannada New Movie hiranys song out
ಸ್ಯಾಂಡಲ್ ವುಡ್1 hour ago

Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

Actor Darshan
ಯಾದಗಿರಿ2 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Narendra Modi
ವೈರಲ್ ನ್ಯೂಸ್2 hours ago

Narendra Modi: ನಗು ನಗುತ್ತಾ ಸೆಲ್ಫಿಗೆ ಪೋಸ್‌ ಕೊಟ್ಟ ಮೋದಿ, ಮೆಲೋನಿ; ಸೋಷಿಯಲ್‌ ಮೀಡಿಯಾದಲ್ಲಿ ʼಮೆಲೋಡಿʼಯದ್ದೇ ಸದ್ದು

Viral Video
ಕ್ರಿಕೆಟ್2 hours ago

Viral Video: ಪಾಕ್​ ಕ್ರಿಕೆಟಿಗ ವಾಸಿಂ ಅಕ್ರಮ್ ಜತೆ​ ಬ್ರೇಕ್​ ಡ್ಯಾನ್ಸ್​ ಮಾಡಿದ ಸುನಿಲ್ ಗಾವಸ್ಕರ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ2 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ21 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು22 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು23 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ24 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌