Japan Open 2023: ಸೆಮಿಗೆ ಲಗ್ಗೆಯಿಟ್ಟ ಸೇನ್; ಸೋತು ಟೂರ್ನಿಯಿಂದ ಹೊರಬಿದ್ದ ಸಾತ್ವಿಕ್‌-ಚಿರಾಗ್​ ಜೋಡಿ - Vistara News

ಕ್ರೀಡೆ

Japan Open 2023: ಸೆಮಿಗೆ ಲಗ್ಗೆಯಿಟ್ಟ ಸೇನ್; ಸೋತು ಟೂರ್ನಿಯಿಂದ ಹೊರಬಿದ್ದ ಸಾತ್ವಿಕ್‌-ಚಿರಾಗ್​ ಜೋಡಿ

ಜಪಾನ್​ ಓಪನ್​ ಟೂರ್ನಿಯ(Japan Open 2023) ಪುರುಷರ ಸಿಂಗಲ್ಸ್​ ವಿಭಾಗದಲ್ಲಿ ಲಕ್ಷ್ಯ ಸೇನ್(Lakshya Sen)​ ಅವರು ಸೆಮಿಫೈನಲ್ ಪ್ರವೇಶಿಸಿದ್ದಾರೆ.

VISTARANEWS.COM


on

Lakshya Sen advances into Semis of Japan Open
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟೋಕಿಯೊ: ಕಳೆದ ವಾರವಷ್ಟೇ ಕೊರಿಯಾ ಓಪನ್​ ಗೆದ್ದು ಚಾಂಪಿಯನ್​ ಆಗಿದ್ದ ಭಾರತದ ಭರವಸೆಯ ಜೋಡಿ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ(Chirag Shetty) ಜಪಾನ್​ ಓಪನ್​ ಟೂರ್ನಿಯ(Japan Open 2023) ಪುರುಷರ ಡಬಲ್ಸ್​ನಲ್ಲಿ ಸೋಲು ಕಂಡು ನಿರಾಸೆ ಮೂಡಿಸಿದ್ದಾರೆ. ಆದರೆ ಲಕ್ಷ್ಯ ಸೇನ್(Lakshya Sen)​ ಅವರು ಗೆದ್ದು ಸೆಮಿಫೈನಲ್ ಪ್ರವೇಶ ಪಡೆದಿದ್ದಾರೆ.

ಶುಕ್ರವಾರ ನಡೆದ ಪುರುಷರ ಸಿಂಗಲ್ಸ್​ ವಿಭಾಗದ ಕ್ವಾರ್ಟರ್ ಫೈನಲ್​ ಪಂದ್ಯದಲ್ಲಿ ಲಕ್ಷ್ಯ ಸೇನ್​ ಅವರು ಸ್ಥಳೀಯ ಆಟಗಾರ ಕೋಕಿ ವಟನಾಬೆ ವಿರುದ್ಧ 21-15, 21-19 ನೇರ ಗೇಮ್​ಗಳಿಂದ ಗೆದ್ದು ಸೆಮಿಫೈನಲ್​ ಟಿಕೆಟ್​ ಪಡೆದರು. ಆರಂಭದಿಂದಲೇ ಬಿರುಸಿನ ಆಡವಾಡಿದ ಸೇನ್​ ಅಧಿಕಾರಯುತ ಗೆಲುವು ಸಾಧಿಸಿದರು.

ಕೆನಡಾ ಓಪನ್ ಸೂಪರ್ 500 ಪಂದ್ಯಾವಳಿಯನ್ನು ಗೆದ್ದು ವಿಶ್ರಾಂತಿಯಲ್ಲಿದ್ದ ಸೇನ್​ ಈ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಸದ್ಯ ಸೆಮಿ ಹರ್ಡಲ್ಸ್​ ದಾಟಿದರೆ ಪದಕವೊಂದನ್ನು ಖಾತ್ರಿಪಡಿಸಲಿದ್ದಾರೆ. ಸೆಮಿಫೈನಲ್​ನಲ್ಲಿ ಸೇನ್​ ಅವರು ಇಂಡೋನೇಶ್ಯದ ಬಲಿಷ್ಠ ಆಟಗಾರ ಜೊನಾಥನ್‌ ಕ್ರಿಸ್ಟಿ ಅವರ ಸವಾಲು ಎದುರಾಗಿದೆ.

ಇದನ್ನೂ ಓದಿ Korea Open 2023 Final: ಕೊರಿಯಾ ಓಪನ್‌ ಗೆದ್ದು ವರ್ಷದ 3ನೇ ಬಿಡಬ್ಲ್ಯುಎಫ್‌ ಪ್ರಶಸ್ತಿಗೆ ಮುತ್ತಿಕ್ಕಿದ ಸಾತ್ವಿಕ್‌-ಚಿರಾಗ್‌

ಸೋಲು ಕಂಡ ಚಿರಾಗ್​-ಸಾತ್ವಿಕ್​

ವರ್ಷದ ಮೂರು ಬಿಡಬ್ಲ್ಯುಎಫ್​ ಪ್ರಶಸ್ತಿ ಗೆದ್ದು ನಾಲ್ಕನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ಭಾರತದ ಸ್ಟಾರ್ ಪುರುಷ ಡಬಲ್ಸ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕ್ವಾರ್ಟರ್​ ಫೈನಲ್​ನಲ್ಲಿ ಒಲಿಂಪಿಕ್ ವಿಜೇತರಾದ ಚೈನೀಸ್ ತೈಪೆನ ಲೀ ಯಾಂಗ್ ಮತ್ತು ವಾಂಗ್ ಚಿ-ಲಾನ್ ವಿರುದ್ಧ 15-21, 25-23, 16-21 ಅಂತರದಿಂದ ಪರಾಭವಗೊಂಡರು. ದ್ವಿತೀಯ ಗೇಮ್​ನಲ್ಲಿ ಪ್ರಬಲ ಪೈಪೋಟಿ ನೀಡಿ ಗೆಲುವು ದಾಖಲಿಸಿದ ಭಾರತೀಯ ಜೋಡಿ ಅಂತಿಮ ಗೇಮ್​ನಲ್ಲಿ ನೀರಸ ಪ್ರದರ್ಶನ ತೋರುವ ಮೂಲಕ ಶರಣಾದರು. ಇದಕ್ಕೂ ಮುನ್ನ ನಡೆದ ಪಂದ್ಯದಲ್ಲಿ ಚಿರಾಗ್​-ಸಾತ್ವಿಕ್​ ಜೋಡಿ ನೆದರ್ಲೆಂಡ್ಸ್‌ನ ಲಾಸ್ಸೆ ಮೊಲೆಡೆ ಮತ್ತು ಜೆಪ್ಪೆ ಬೇ ಅವರನ್ನು 21-17, 21-11 ಗೇಮ್‌ಗಳಿಂದ ಸೋಲಿಸಿ ಕ್ವಾರ್ಟರ್‌ಫೈನಲ್‌ ತಲುಪಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

M S Dhoni: ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ (ಮೇ 1) ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಋತುವಿನಲ್ಲಿ ಪಂಜಾಟ್​​ನ ನಾಲ್ಕನೇ ಗೆಲುವಿನ ವೇಳೆ ಜಿತೇಶ್ ಶರ್ಮಾಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಆದಾಗ್ಯೂ, ಸಿಎಸ್​ಕೆ ಬ್ಯಾಟಿಂಗ್ ಸಮಯದಲ್ಲಿ ಧೋನಿಯನ್ನು ರನ್ ಔಟ್ ಮಾಡಿದ್ದರು. ಇದು ಧೋನಿಯ ಅಭಿಮಾನಿಗಳಿಗೆ ಕೋಪ ತರಿಸಿತ್ತು.

VISTARANEWS.COM


on

M S Dhoni
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದ ನಂತರ ಪಂಜಾಬ್ ಕಿಂಗ್ಸ್ (PBKS) ವಿಕೆಟ್ ಕೀಪರ್ ಬ್ಯಾಟರ್​​ ಜಿತೇಶ್ ಶರ್ಮಾ ಸೋಶಿಯಲ್ ಮೀಡಿಯಾಗಳ ಮೂಲಕ ಬೈಗುಳಗಳನ್ನು ಕೇಳಬೇಕಾಯಿತು. ಅದಕ್ಕೆ ಕಾರಣ ಅವರು ಮಹೇಂದ್ರ ಸಿಂಗ್ ಧೋನಿಯನ್ನು (MS Dhoni) ರನ್​ಔಟ್ ಮಾಡಿರುವುದು. ಜತೇಶ್​ ಅವರ ಇನ್​ಸ್ಟಾಗ್ರಾಮ್​ ಖಾತೆ ಮೂಲಕ ಹಲವಾರು ನಿಂದನಾತ್ಮಕ ಕಾಮೆಂಟ್​ಗಳನ್ನು ಪೋಸ್ಟ್ ಮಾಡಿದ್ದಾರೆ.

ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ (ಮೇ 1) ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಋತುವಿನಲ್ಲಿ ಪಂಜಾಟ್​​ನ ನಾಲ್ಕನೇ ಗೆಲುವಿನ ವೇಳೆ ಜಿತೇಶ್ ಶರ್ಮಾಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಆದಾಗ್ಯೂ, ಸಿಎಸ್​ಕೆ ಬ್ಯಾಟಿಂಗ್ ಸಮಯದಲ್ಲಿ ಧೋನಿಯನ್ನು ರನ್ ಔಟ್ ಮಾಡಿದ್ದರು. ಇದು ಧೋನಿಯ ಅಭಿಮಾನಿಗಳಿಗೆ ಕೋಪ ತರಿಸಿತ್ತು.

ಜಿತೇಶ್ ಶರ್ಮಾಗೆ ಧೋನಿ ಅಭಿಮಾನಿಗಳಿಂದ ಟಾರ್ಗೆಟ್

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಎಂಎಸ್ ಧೋನಿ ತಮ್ಮ ವಿಕೆಟ್ ಕಳೆದುಕೊಳ್ಳದ ಗಮನಾರ್ಹ ಸಾಧನೆಯನ್ನು ಪಂಜಾಬ್ ವಿರುದ್ಧ ಕಳೆದುಕೊಂಡರು. ಚೆಂಡು ಥರ್ಡ್​ ಮ್ಯಾನ್​​ ಕಡೆಗೆ ಹೋದ ನಂತರ ಧೋನಿ ಅಪಾಯಕಾರಿ ಎರಡನೇ ರನ್ ಗಳಿಸಲು ಪ್ರಯತ್ನಿಸಿದರು. ಹರ್ಷಲ್ ಪಟೇಲ್ ಆರಂಭದಲ್ಲಿ ತಪ್ಪಾಗಿ ಫೀಲ್ಡಿಂಗ್ ಮಾಡಿದರು. ಆದರೆ ಬೇಗನೆ ಚೇತರಿಸಿಕೊಂಡರು ಮತ್ತು ಚೆಂಡನ್ನು ಬ್ಯಾಟ್ಸ್ ಮನ್ ನ ತುದಿಗೆ ಎಸೆದರು. ಚೆನ್ನೈ ವಿಕೆಟ್ ಕೀಪರ್ ಧೋನಿ ಕ್ರೀಸ್​ ತಲುಪುವ ಮೊದಲೇ ಜಿತೇಶ್​ ಬೇಲ್ಸ್ ಎಗರಿಸಿದರು. ಸಿಎಸ್​ಕೆ ಮಾಜಿ ನಾಯಕ 11 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿದಂತೆ 14 ರನ್ ಗಳಿಸಿ ಔಟಾದರು. ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವು 20 ಓವರ್ ಗಳಲ್ಲಿ 162 ರನ್ ಗಳಿಸಲು ಮಾತ್ರ ಯಶಸ್ವಿಯಾಯಿತು.

ಧೋನಿ ರನೌಟ್ ಅವರ ನಿಷ್ಠಾವಂತ ಅಭಿಮಾನಿಗಳಲ್ಲಿ ನಿರಾಶೆಯನ್ನು ಹುಟ್ಟುಹಾಕಿತು. ಕೆಲವರು ಹತಾಶೆಯನ್ನು ವ್ಯಕ್ತಪಡಿಸಿದರೆ, ಇತರರು ಜಿತೇಶ್ ಶರ್ಮಾ ಅವರ ಪಾತ್ರಕ್ಕಾಗಿ ಟ್ರೋಲ್ ಮಾಡಿದರು. ಪಂದ್ಯಾವಳಿಯಲ್ಲಿ ಮೊದಲ ಬಾರಿಗೆ ಧೋನಿಯನ್ನು ಔಟ್ ಮಾಡುವುದನ್ನು ನೋಡಿದ ಅಭಿಮಾನಿಗಳು ನಾನಾ ರೀತಿ ಪ್ರತಿಕ್ರಿಯಿಸಿದರು.

“ನೀವು ವಿಶ್ವಕಪ್​ಗೆ ಆಯ್ಕೆಯಾಗದಿರುವುದು ಒಳ್ಳೆಯದು, ನೀವು ತಲಾ ಅವರನ್ನು ರನ್ ಔಟ್ ಮಾಡಿದ್ದೀರಿ, ಒಂದು ರನ್ ಏನು ವ್ಯತ್ಯಾಸವನ್ನುಂಟು ಮಾಡುತ್ತದೆ?” ಎಂದು ಬಳಕೆದಾರರೊಬ್ಬರು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

“ಗೆಳೆಯ, ಜನರು ಅವನಿಗಾಗಿ ಪಂದ್ಯಗಳನ್ನು ನೋಡುತ್ತಾರೆ ಎಂದು ನೀವು ಅರ್ಥಮಾಡಿಕೊಳ್ಳಬೇಕು. ನಾವು ಎಷ್ಟು ಕೆಟ್ಟದಾಗಿ ಭಾವಿಸಬೇಕು, ನೀವು ಅವನನ್ನು ರನ್ ಔಟ್ ಮಾಡಿದ್ದೀರಿ. ಇದಲ್ಲದೆ, ಅವನ ಕಾಲಿಗೆ ಗಾಯವಾಗಿದೆ. ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ, ಗೆಳೆಯ” ಎಂದು ಮತ್ತೊಬ್ಬ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

163 ರನ್​ಗಳ ಗುರಿ ಬೆನ್ನತ್ತಿದ ಸ್ಯಾಮ್ ಕರ್ರನ್ ಪಡೆ 17.5 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಜಾನಿ ಬೈರ್​ಸ್ಟೋವ್​ 30 ಎಸೆತಗಳಲ್ಲಿ 46 ರನ್ ಗಳಿಸಿದರೆ, ರಿಲೀ ರೊಸ್ಸೌ 23 ಎಸೆತಗಳಲ್ಲಿ 43 ರನ್ ಗಳಿಸಿದರು. ಈ ಗೆಲುವಿನೊಂದಿಗೆ ಪಿಬಿಕೆಎಸ್ ಎಂಟು ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​​ನಲ್ಲಿ ಏಳನೇ ಸ್ಥಾನಕ್ಕೆ ಏರಿದರೆ, ಸಿಎಸ್ಕೆ 10 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ನಾವು ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಾಗಿದೆ: ಸ್ಯಾಮ್ ಕರ್ರನ್


ಪಿಬಿಕೆಎಸ್ ಸ್ಟ್ಯಾಂಡ್-ಇನ್ ನಾಯಕ ಸ್ಯಾಮ್ ಕರ್ರನ್ ಚೆನ್ನೈನ ಗೆಲುವಿನ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಐಪಿಎಲ್ 2024 ರಲ್ಲಿ ಪ್ಲೇಆಫ್ ಸ್ಥಾನ ಪಡೆಯಲು ತಂಡವು ಉಳಿದ ಎಲ್ಲಾ ಪಂದ್ಯಗಳಲ್ಲಿ ಗೆಲುವುಗಳನ್ನು ಪಡೆಯಲು ಬಯಸುತ್ತದೆ ಎಂದು ಅವರು ಒತ್ತಿ ಹೇಳಿದರು.

ತುಂಬಾ ಸಂತೋಷವಾಗಿದೆ. ಪ್ರತಿ ಬಾರಿ ನೀವು ಚೆನ್ನೈಗೆ ಬಂದು ಎರಡು ಗೆಲುವುಗಳನ್ನು ಪಡೆದಾಗ ಯಾವಾಗಲೂ ವಿಶೇಷ ಭಾವನೆ ಬರುತ್ತದೆ. ಕಳೆದ ವರ್ಷದಂತೆ, ನಾವು ನಮ್ಮ ತವರು ಪಂದ್ಯಗಳಲ್ಲಿ ಬಹಳಷ್ಟು ಸೋತಿದ್ದೇವೆ ಮತ್ತು ಆ ಮೇಲೆ ಗೆದ್ದಿದ್ದೇವೆ ಎಂದು ಹೇಳಿದ್ದಾರೆ.

Continue Reading

ಕ್ರೀಡೆ

Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

Virat kohli: ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ದೊಡ್ಡ ಮಟ್ಟದ ಸ್ಕೋರ್ ಮಾಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅವರ ಸ್ಟ್ರೈಕ್ ರೇಟ್​ ಕಾರಣಕ್ಕೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ ಆಯ್ಕೆದಾರರು ಈ ವರ್ಷದ ಆರಂಭದಲ್ಲಿ ಅವರನ್ನು ಟಿ20 ಐ ತಂಡಕ್ಕೆ ಮರಳಿ ಕರೆಸಿಕೊಳ್ಳುವ ಮೊದಲು ತಂಡದ ಬೇಡಿಕೆಗಳಿಗೆ ಅನುಗುಣವಾಗಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಹೇಳಲಾಗಿತ್ತು. ಅದೇ ಷರತ್ತಿನ ಮೇರೆಗೆ ಅವರಿಗೆ ಅವಕಾಶ ನೀಡಲಾಗಿದೆ.

VISTARANEWS.COM


on

Virat kohli
Koo

ನವದೆಹಲಿ: ಮುಂಬರುವ ಐಸಿಸಿ ಟಿ20 ವಿಶ್ವಕಪ್ 2024ಗಾಗಿ (T20 World Cup) 15 ಸದಸ್ಯರ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ (Virat kohli) ಸೇರ್ಪಡೆಗೆ ಏನು ಕಾರಣ ಎಂಬುದನ್ನು ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ (Ajit Agarkar) ವಿವರಿಸಿದ್ದಾರೆ. ಯಾಕೆಂದರೆ ಕೊಹ್ಲಿಯ ಸ್ಟ್ರೈಕ್​ರೇಟ್​​ ಬಗ್ಗೆ ಜೋರು ಚರ್ಚೆ ನಡೆಯುತ್ತಿರುವ ಜತೆಗೆ ಅವರ ಆಯ್ಕೆಯನ್ನು ಹಲವರು ಪ್ರಶ್ನಿಸಿದ್ದಾರೆ. ಹೀಗಾಗಿ ಅಗರ್ಕರ್ ಉತ್ತರ ನೀಡಿದ್ದಾರೆ.

ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ದೊಡ್ಡ ಮಟ್ಟದ ಸ್ಕೋರ್ ಮಾಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅವರ ಸ್ಟ್ರೈಕ್ ರೇಟ್​ ಕಾರಣಕ್ಕೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ ಆಯ್ಕೆದಾರರು ಈ ವರ್ಷದ ಆರಂಭದಲ್ಲಿ ಅವರನ್ನು ಟಿ20 ಐ ತಂಡಕ್ಕೆ ಮರಳಿ ಕರೆಸಿಕೊಳ್ಳುವ ಮೊದಲು ತಂಡದ ಬೇಡಿಕೆಗಳಿಗೆ ಅನುಗುಣವಾಗಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಹೇಳಲಾಗಿತ್ತು. ಅದೇ ಷರತ್ತಿನ ಮೇರೆಗೆ ಅವರಿಗೆ ಅವಕಾಶ ನೀಡಲಾಗಿದೆ.

ಅಂದ ಹಾಗೆ ಈ ಪ್ರಶ್ನೆಯನ್ನು ರೋಹಿತ್​ ಶರ್ಮಾ ಅವರಿಗೂ ಕೇಳಲಾಗಿತ್ತು. ಆದರೆ, ಅವರು ಜೋರಾಗಿ ನಗುವ ಮೂಲಕ ಇದೊಂದು ಚರ್ಚೆಯ ವಿಷಯವೇ ಅಲ್ಲ ಎಂಬುದಾಗಿ ಹೇಳಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ, ಬಲಗೈ ಬ್ಯಾಟರ್​ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಆದರೆ ಸ್ಟ್ರೈಕ್ ರೇಟ್ ಟೀಕೆಗಳು ಅವರ ಬಗ್ಗೆ ಟೀಕೆ ಮಾಡಲು ಅವಕಾಶ ಕೊಟ್ಟಿದೆ. 10 ಪಂದ್ಯಗಳಲ್ಲಿ 1 ಶತಕ ಹಾಗೂ 4 ಅರ್ಧಶತಕಗಳ ನೆರವಿನಿಂದ 500 ರನ್ ಗಳಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸ್ಪರ್ಧೆಯಲ್ಲಿ ಋತುರಾಜ್ ಗಾಯಕ್ವಾಡ್ ಮಾತ್ರ ಅವರಿಗಿಂತ ಹೆಚ್ಚು ಸ್ಕೋರ್ ಮಾಡಿದವರು.

ಕೊಹ್ಲಿಯನ್ನು ಸಮರ್ಥಿಸಿಕೊಂಡ ಅಜಿತ್ ಅಗರ್ಕರ್

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ತಂಡದಲ್ಲಿದ್ದಾರೆ. ಉತ್ತಮ ಇನ್ನಿಂಗ್ಸ್ ನಿರ್ಮಿಸಲು ಬಯಸುವ ಮತ್ತು ಅನೇಕ ಆಧುನಿಕ ಟಿ 20 ಬ್ಯಾಟರ್​ಗಳಂತೆ ಆರಂಭದಿಂದಲೇ ವೇಗವಾಗಿ ಸ್ಕೋರ್ ಮಾಡಲು ಪ್ರಾರಂಭಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊಹ್ಲಿಯ ಅಗತ್ಯವಿಲ್ಲ ಎಂದು ಅನೇಕರ ವಾದ ಮಾಡಿದ್ದಾರೆ.

ವಿರಾಟ್ ಕೊಹ್ಲಿ ತಮ್ಮ ಸ್ಟ್ರೈಕ್ ರೇಟ್ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅಜಿತ್ ಅಗರ್ಕರ್, ಇದು ಆಯ್ಕೆದಾರರು ಮತ್ತು ತಂಡದ ಮ್ಯಾನೇಜ್ಮೆಂಟ್ ನಡುವೆ ಚರ್ಚೆಯ ವಿಷಯವೂ ಅಲ್ಲ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿ ಅವರ ಅನುಭವವು ತಂಡಕ್ಕೆ ದೊಡ್ಡ ಉತ್ತೇಜನ ನೀಡಲಿದೆ ಎಂದು ಭಾರತದ ಮಾಜಿ ವೇಗಿ ಗಮನಸೆಳೆದರು.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

“ನಾವು ಕೊಹ್ಲಿಯ ಸ್ಟ್ರೈಕ್ ರೇಟ್ ಬಗ್ಗೆ ಚರ್ಚಿಸುತ್ತಿಲ್ಲ. ಐಪಿಎಲ್ ಮತ್ತು ಅಂತಾರರಾಷ್ಟ್ರೀಯ ಕ್ರಿಕೆಟ್ ನಡುವೆ ವ್ಯತ್ಯಾಸವಿದೆ. ನಿಮಗೆ ಅನುಭವ ಬೇಕು. ನಾವು ತಂಡದಲ್ಲಿ ಸಾಕಷ್ಟು ಸಮತೋಲನ ಹೊಂದಿದ್ದೇವೆ. ಐಪಿಎಲ್​​ನಲ್ಲಿ ಏನಾಗುತ್ತಿದೆ ಎಂಬುದನ್ನು ನೀವು ನೋಡುತ್ತೀರಿ. ಸಕಾರಾತ್ಮಕತೆಯನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕಾಗುತ್ತದೆ. ವಿಶ್ವಕಪ್ ಪಂದ್ಯದ ಒತ್ತಡವೇ ಬೇರೆ. ಹೀಗಾಗಿ ವಿರಾಟ್ ಕೊಹ್ಲಿ ಅವರ ಸ್ಟ್ರೈಕ್ ರೇಟ್ ಬಗ್ಗೆ ನಡೆದ ಮಾತುಕತೆಗಳನ್ನು ಅಜಿತ್ ಅಗರ್ಕರ್ ತಳ್ಳಿಹಾಕಿದ್ದಾರೆ.

ಕಳೆದ ಆವೃತ್ತಿಯ ಟಿ20 ವಿಶ್ವಕಪ್​​ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅವರು 6 ಪಂದ್ಯಗಳಲ್ಲಿ ನಾಲ್ಕು ಅರ್ಧಶತಕಗಳ ಸಹಾಯದಿಂದ 296 ರನ್ ಗಳಿಸಿದ್ದರು. ಸುಮಾರು 100 ರ ಅದ್ಭುತ ಸರಾಸರಿ ಹೊಂದಿದ್ದರು. ಮುಂಬರುವ ವಿಶ್ವಕಪ್​​ನಲ್ಲಿಯೂ ಸ್ಟಾರ್ ಬ್ಯಾಟರ್​​ ತಮ್ಮ ಪ್ರದರ್ಶನವನ್ನು ಪುನರಾವರ್ತಿಸುತ್ತಾರೆ ಎಂದು ಭಾರತ ತಂಡ ಆಶಿಸುತ್ತಿದೆ.

Continue Reading

ಕ್ರೀಡೆ

KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

KL Rahul: ಇತ್ತೀಚೆಗೆ ಭಾರತವು ನಾಲ್ಕು ಮೀಸಲು ಆಟಗಾರರು ಸೇರಿದಂತೆ 19 ಸದಸ್ಯರ ಬಲವಾದ ತಂಡವನ್ನು ಆಯ್ಕೆಗಾರರು ಪ್ರಕಟಿಸಿದ್ದರು. ಆದಾಗ್ಯೂ, ಕರ್ನಾಟಕದ ಸ್ಟೈಲಿಶ್ ಬ್ಯಾಟ್ಸ್ಮನ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲಗೊಂಡಿದ್ದರು. ಆಯ್ಕೆದಾರರು ಸಂಜು ಸ್ಯಾಮ್ಸನ್ ಮತ್ತು ರಿಷಭ್ ಪಂತ್ ಅವರನ್ನು ಎರಡು ವಿಕೆಟ್ ಕೀಪಿಂಗ್ ಸ್ಥಾನಗಳಿಗೆ ಆದ್ಯತೆ ನೀಡಿದರು.

VISTARANEWS.COM


on

KL Rahul
Koo

ನವದೆಹಲಿ: ಅಮರಿಕೆ ಮತ್ತು ವೆಸ್ಟ್​ ಇಂಡೀಸ್​ನಲ್ಲಿ ಆಯೋಜನೆಗೊಂಡಿರುವ ಮುಂಬರುವ ಟಿ 20 ಐ (T20 World Cup) ವಿಶ್ವಕಪ್​​ ತಂಡವನ್ನು ಪ್ರಕಟಿಸುವಾಗ ಬಿಸಿಸಿಐ ಆಯ್ಕೆ ಮಂಡಳಿ ಅನುಭವಿ ಬ್ಯಾಟರ್​ ಕೆಎಲ್ ರಾಹುಲ್ (KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​ (Ajit Agarkar) ಅವರನ್ನು ಕೈ ಬಿಟ್ಟಿರುವುದು ಚರ್ಚೆಗೆ ಕಾರಣವಾಗಿತ್ತು. ವಿದೇಶಿ ನೆಲದಲ್ಲಿ ಅವರ ಸಾಮರ್ಥ್ಯದ ಹೊರತಾಗಿಯೂ ತಂಡಕ್ಕೆ ಆಯ್ಕೆಯಾಗದಿರುವುದು ಸರಿಯಲ್ಲ ಎಂಬ ದೂಷಣೆಗಳನ್ನು ಆಯ್ಕೆ ಮಂಡಳಿ ಎದುರಿಸಿತ್ತು. ಗುರುವಾರ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅಗರ್ಕರ್ ಕನ್ನಡಿಗ ಕ್ರಿಕೆಟಿಗನನ್ನು ಯಾಕೆ ಸೇರಿಸಿಲ್ಲ ಎಂಬುದಕ್ಕೆ ಕಾರಣ ನೀಡಿದ್ದಾರೆ. ಇದೇ ವೇಳೆ ಹಲವಾರು ಮಾಹಿತಿಗಳನ್ನೂ ನೀಡಿದ್ದಾರೆ.

ಇತ್ತೀಚೆಗೆ ಭಾರತವು ನಾಲ್ಕು ಮೀಸಲು ಆಟಗಾರರು ಸೇರಿದಂತೆ 19 ಸದಸ್ಯರ ಬಲವಾದ ತಂಡವನ್ನು ಆಯ್ಕೆಗಾರರು ಪ್ರಕಟಿಸಿದ್ದರು. ಆದಾಗ್ಯೂ, ಕರ್ನಾಟಕದ ಸ್ಟೈಲಿಶ್ ಬ್ಯಾಟ್ಸ್ಮನ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲಗೊಂಡಿದ್ದರು. ಆಯ್ಕೆದಾರರು ಸಂಜು ಸ್ಯಾಮ್ಸನ್ ಮತ್ತು ರಿಷಭ್ ಪಂತ್ ಅವರನ್ನು ಎರಡು ವಿಕೆಟ್ ಕೀಪಿಂಗ್ ಸ್ಥಾನಗಳಿಗೆ ಆದ್ಯತೆ ನೀಡಿದರು.

ಆಯ್ಕೆಯ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಗರ್ಕರ್, ರಾಹುಲ್ ವಿಶ್ವಕಪ್​ನಿಂದ ವಂಚಿತರಾಗಿರುವುದು ದುರದೃಷ್ಟಕರ ಎಂದು ಬಹಿರಂಗಪಡಿಸಿದ್ದಾರೆ. ಏಕೆಂದರೆ ಭಾರತೀಯ ಥಿಂಕ್ ಟ್ಯಾಂಕ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಲ್ಲ ಕೀಪರ್​ಗಳನ್ನು ಬಯಸಿತ್ತು. ಅದಕ್ಕಾಗಿ ಭಾರತದ ಮಾಜಿ ವೇಗದ ಬೌಲರ್ ಬಹಿರಂಗಪಡಿಸಿದಂತೆ ಸ್ಯಾಮ್ಸನ್ ಮತ್ತು ಪಂತ್ ಮಧ್ಯಮ ಕ್ರಮಾಂಕದ ಬ್ಯಾಟರ್​​ಗಳಾಗಿ ಆಡಿದ್ದಾರೆ.

“ಕೆಎಲ್ ಅದ್ಭುತ ಆಟಗಾರ. ನಾವು ನೋಡುತ್ತಿದ್ದ ವಿಷಯವೆಂದರೆ ಮಧ್ಯದಲ್ಲಿ ಬ್ಯಾಟಿಂಗ್ ಮಾಡಬಲ್ಲ ಆಟಗಾರ. ಡಿಸಿ ಪರ ರಿಷಭ್ ಪಂತ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಈ ಇಬ್ಬರು (ಸ್ಯಾಮ್ಸನ್ ಮತ್ತು ಪಂತ್) ಉತ್ತಮ ಎಂದು ನಾವು ಭಾವಿಸಿದ್ದೇವೆ. ಕೆ.ಎಲ್. ರಾಹುಲ್ ಉತ್ತಮವೋ ಅಥವಾ ರಿಷಭ್ ಪಂತ್ ಉತ್ತಮವೋ ಅಥವಾ ಸಂಜು ಸ್ಯಾಮ್ಸನ್ ಉತ್ತಮವೋ ಎಂಬುದು ಮುಖ್ಯವಲ್ಲ. ಇದು ಬ್ಯಾಟಿಂಗ್ ಸ್ಲಾಟ್​​ಗಳ ಬಗ್ಗೆ (ಆದ್ದರಿಂದ ಪಂತ್ ಮತ್ತು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲಾಯಿತು), “ಎಂದು ಅಗರ್ಕರ್ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ರಾಹುಲ್ ಈ ಐಪಿಎಲ್​ನಲ್ಲಿ 40.60 ಸರಾಸರಿಯಲ್ಲಿ 406 ರನ್ ಗಳಿಸಿದ್ದಾರೆ. 142.96 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಆದಾಗ್ಯೂ, ಅವರ ಎಲ್ಲಾ ರನ್​​ಗಳ ಅಗ್ರ ಕ್ರಮಾಂಕದ ಬ್ಯಾಟರ್​​ಗಳಾಗಿ ಆಗಿ ಬಂದಿರುವುದರಿಂದ ಡೈನಾಮಿಕ್ ಬ್ಯಾಟರ್​​ ಅಂತಿಮ ಹದಿನೈದರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ.

2024ರ ಟಿ20 ವಿಶ್ವಕಪ್​​ಗೆ ಭಾರತ ತಂಡ ಹೀಗಿದೆ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅರ್ಶ್​​ದೀಪ್​ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.

ಮೀಸಲು ಆಟಗಾರರು: ರಿಂಕು ಸಿಂಗ್, ಶುಭ್ಮನ್ ಗಿಲ್, ಖಲೀಲ್ ಅಹ್ಮದ್, ಅವೇಶ್ ಖಾನ್

ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

ನವದೆಹಲಿ: ಜೂನ್ 1 ರಿಂದ ಅಮೆರಿಕ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಟಿ20 ವಿಶ್ವಕಪ್ 2024ಕ್ಕೆ (T20 World Cup) ಭಾರತವು ಪ್ರಬಲ ಸ್ಪರ್ಧಿ ಎಂದು ಶ್ರೀಲಂಕಾದ ಮಾಜಿ ನಾಯಕ ಮತ್ತು ರಾಜಸ್ಥಾನ್ ರಾಯಲ್ಸ್ (Rajasthan Royals​ ) ಕ್ರಿಕೆಟ್ ನಿರ್ದೇಶಕ ಕುಮಾರ್ ಸಂಗಕ್ಕಾರ ಹೇಳಿದ್ದಾರೆ. 2024 ರ ಟಿ 20 ವಿಶ್ವಕಪ್ ಭಾರತದ ತಂಡವನ್ನು ಶ್ಲಾಘಿಸಿದ ಸಂಗಕ್ಕಾರ, ಇದು ಅಸಾಧಾರಣವಾಗಿ ಬಲಿಷ್ಠ ಮತ್ತು ಸಮತೋಲಿತವಾಗಿದೆ ಎಂದು ಬಣ್ಣಿಸಿದರು. ಶ್ರೀಲಂಕಾದ ದಂತಕಥೆ ಟೀಮ್ ಇಂಡಿಯಾದ ಅಸಾಧಾರಣ ಬ್ಯಾಟಿಂಗ್ ಮತ್ತು ಬಹುಮುಖ ಆಲ್​ರೌಂಡರ್​ಗಳ ಶಕ್ತಿಯನ್ನು ಎತ್ತಿ ತೋರಿಸಿದರು. ಜೊತೆಗೆ ಅವರ ಉತ್ತಮ ಗುಣಮಟ್ಟದ ಸ್ಪಿನ್ ಆಯ್ಕೆಗಳಿವೆ. ಇದು ಮೆಗಾ ಈವೆಂಟ್​​ನ ಸಂದರ್ಭಗಳನ್ನು ಅವಲಂಬಿಸಿ ತಂತ್ರಗಾರಿಕೆಯ ಹೊಂದಾಣಿಕೆ ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ.

ವಿವಿಧ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ತಂಡದ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಂಗಕ್ಕಾರ, ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ಕಾರ್ಯತಂತ್ರದ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಟಿ 20 ವಿಶ್ವಕಪ್ ತಂಡದಲ್ಲಿನ ಹೊಸತವನ್ನು ಲೆಜೆಂಡರಿ ಬ್ಯಾಟ್ಸ್ಮನ್ ಎತ್ತಿ ತೋರಿಸಿದರು. ಇದು ಅಪೇಕ್ಷಿತ ಬ್ಯಾಟಿಂಗ್ ಅಥವಾ ಬೌಲಿಂಗ್ ಶಕ್ತಿ ಅವಲಂಬಿಸಿ ವಿಭಿನ್ನ ಸಂಯೋಜನೆಗಳೊಂದಿಗೆ ಆಡಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.

ಇದು ಬಲಿಷ್ಠ ತಂಡ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಸಂಗಕ್ಕಾರ, “ಇದು ಅತ್ಯಂತ ಬಲಿಷ್ಠ ತಂಡ. ಅವರು ತಮ್ಮ ಬ್ಯಾಟಿಂಗ್ ಬಲ ಹೊಂದಿದ್ದಾರೆ. ಅತ್ಯುತ್ತಮ ಆಲ್​ರೌಂಡರ್​ಗಳನ್ನು ಹೊಂದಿದ್ದಾರೆ. ಅವರು ಉತ್ತಮ ಗುಣಮಟ್ಟದ ಸ್ಪಿನ್ ಹೊಂದಿದ್ದಾರೆ ಮತ್ತು ಅವರು ಆಡಬಹುದಾದ ಉತ್ತಮ ಸಂಯೋಜನೆಗಳನ್ನು ಹೊಂದಿದ್ದಾರೆ. ಅಲ್ಲಿನ ಪರಿಸ್ಥಿತಿಗಳನ್ನು ತಿಳಿದಿರುವ ರಾಹುಲ್ ಮತ್ತು ರೋಹಿತ್, ವಿಶ್ವಕಪ್​ನಲ್ಲಿ ಅವರು ಬಯಸುವ ಕ್ರಿಕೆಟ್ ಆಡಲು ತಂಡ ಹೇಗಿರಬೇಕು ಎಂಬುದರ ಬಗ್ಗೆ ಉತ್ತಮ ಕಲ್ಪನೆಯನ್ನು ಹೊಂದಿದ್ದಾರೆ ಎಂದು ನನಗೆ ಖಾತ್ರಿಯಿದೆ.

Continue Reading

ಕ್ರೀಡೆ

T20 World Cup : ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

T20 World Cup: ವಿವಿಧ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ತಂಡದ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಂಗಕ್ಕಾರ, ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ಕಾರ್ಯತಂತ್ರದ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಟಿ 20 ವಿಶ್ವಕಪ್ ತಂಡದಲ್ಲಿನ ಹೊಸತವನ್ನು ಲೆಜೆಂಡರಿ ಬ್ಯಾಟ್ಸ್ಮನ್ ಎತ್ತಿ ತೋರಿಸಿದರು

VISTARANEWS.COM


on

T20 World Cup
Koo

ನವದೆಹಲಿ: ಜೂನ್ 1 ರಿಂದ ಅಮೆರಿಕ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಟಿ20 ವಿಶ್ವಕಪ್ 2024ಕ್ಕೆ (T20 World Cup) ಭಾರತವು ಪ್ರಬಲ ಸ್ಪರ್ಧಿ ಎಂದು ಶ್ರೀಲಂಕಾದ ಮಾಜಿ ನಾಯಕ ಮತ್ತು ರಾಜಸ್ಥಾನ್ ರಾಯಲ್ಸ್ (Rajasthan Royals​ ) ಕ್ರಿಕೆಟ್ ನಿರ್ದೇಶಕ ಕುಮಾರ್ ಸಂಗಕ್ಕಾರ ಹೇಳಿದ್ದಾರೆ. 2024 ರ ಟಿ 20 ವಿಶ್ವಕಪ್ ಭಾರತದ ತಂಡವನ್ನು ಶ್ಲಾಘಿಸಿದ ಸಂಗಕ್ಕಾರ, ಇದು ಅಸಾಧಾರಣವಾಗಿ ಬಲಿಷ್ಠ ಮತ್ತು ಸಮತೋಲಿತವಾಗಿದೆ ಎಂದು ಬಣ್ಣಿಸಿದರು. ಶ್ರೀಲಂಕಾದ ದಂತಕಥೆ ಟೀಮ್ ಇಂಡಿಯಾದ ಅಸಾಧಾರಣ ಬ್ಯಾಟಿಂಗ್ ಮತ್ತು ಬಹುಮುಖ ಆಲ್​ರೌಂಡರ್​ಗಳ ಶಕ್ತಿಯನ್ನು ಎತ್ತಿ ತೋರಿಸಿದರು. ಜೊತೆಗೆ ಅವರ ಉತ್ತಮ ಗುಣಮಟ್ಟದ ಸ್ಪಿನ್ ಆಯ್ಕೆಗಳಿವೆ. ಇದು ಮೆಗಾ ಈವೆಂಟ್​​ನ ಸಂದರ್ಭಗಳನ್ನು ಅವಲಂಬಿಸಿ ತಂತ್ರಗಾರಿಕೆಯ ಹೊಂದಾಣಿಕೆ ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ.

ವಿವಿಧ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ತಂಡದ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಂಗಕ್ಕಾರ, ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ಕಾರ್ಯತಂತ್ರದ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಟಿ 20 ವಿಶ್ವಕಪ್ ತಂಡದಲ್ಲಿನ ಹೊಸತವನ್ನು ಲೆಜೆಂಡರಿ ಬ್ಯಾಟ್ಸ್ಮನ್ ಎತ್ತಿ ತೋರಿಸಿದರು. ಇದು ಅಪೇಕ್ಷಿತ ಬ್ಯಾಟಿಂಗ್ ಅಥವಾ ಬೌಲಿಂಗ್ ಶಕ್ತಿ ಅವಲಂಬಿಸಿ ವಿಭಿನ್ನ ಸಂಯೋಜನೆಗಳೊಂದಿಗೆ ಆಡಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.

ಇದು ಬಲಿಷ್ಠ ತಂಡ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಸಂಗಕ್ಕಾರ, “ಇದು ಅತ್ಯಂತ ಬಲಿಷ್ಠ ತಂಡ. ಅವರು ತಮ್ಮ ಬ್ಯಾಟಿಂಗ್ ಬಲ ಹೊಂದಿದ್ದಾರೆ. ಅತ್ಯುತ್ತಮ ಆಲ್​ರೌಂಡರ್​ಗಳನ್ನು ಹೊಂದಿದ್ದಾರೆ. ಅವರು ಉತ್ತಮ ಗುಣಮಟ್ಟದ ಸ್ಪಿನ್ ಹೊಂದಿದ್ದಾರೆ ಮತ್ತು ಅವರು ಆಡಬಹುದಾದ ಉತ್ತಮ ಸಂಯೋಜನೆಗಳನ್ನು ಹೊಂದಿದ್ದಾರೆ. ಅಲ್ಲಿನ ಪರಿಸ್ಥಿತಿಗಳನ್ನು ತಿಳಿದಿರುವ ರಾಹುಲ್ ಮತ್ತು ರೋಹಿತ್, ವಿಶ್ವಕಪ್​ನಲ್ಲಿ ಅವರು ಬಯಸುವ ಕ್ರಿಕೆಟ್ ಆಡಲು ತಂಡ ಹೇಗಿರಬೇಕು ಎಂಬುದರ ಬಗ್ಗೆ ಉತ್ತಮ ಕಲ್ಪನೆಯನ್ನು ಹೊಂದಿದ್ದಾರೆ ಎಂದು ನನಗೆ ಖಾತ್ರಿಯಿದೆ.

ಅವರು ತಮ್ಮ ಬೌಲಿಂಗ್​ನಲ್ಲಿ ಆಳವಾದ ಬ್ಯಾಟಿಂಗ್ ಲೈನ್ಅಪ್ ಅಥವಾ ಹೆಚ್ಚಿನ ಶಕ್ತಿ ಬಯಸುತ್ತಾರೆಯೇ ಎಂಬುದರ ಮೇಲೆ ಅವಲಂಬಿತವಾಗಿ ಎರಡು ಅಥವಾ ಮೂರು ವಿಭಿನ್ನ ಸಂಯೋಜನೆಗಳನ್ನು ಹೊಂದಿದ್ದಾರೆ. ಆದರೆ ಇದು ನಿಜವಾಗಿಯೂ ಸಮತೋಲಿತ ತಂಡ. ಬಲವಾದ ತಂಡ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾರತ ಯಾವಾಗಲೂ ತುಂಬಾ ಪ್ರಬಲವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಭಾರತದ ಟಿ 20 ವಿಶ್ವಕಪ್ 2024 ತಂಡದಲ್ಲಿ ರಾಜಸ್ಥಾನ್ ರಾಯಲ್ಸ್ ನ ನಾಲ್ವರು ಆಟಗಾರರಿದ್ದಾರೆ: ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಯುಜ್ವೇಂದ್ರ ಚಹಲ್ ಅವರು ಪ್ರಾಥಮಿಕ ತಂಡದಲ್ಲಿದ್ದಾರೆ. ಭಾರತದ ತಂಡಕ್ಕೆ ಆಯ್ಕೆಯಾದ ತಮ್ಮ ಆಟಗಾರರ ಬಗ್ಗೆ ಅವರು ನಿಜವಾಗಿಯೂ ಹೆಮ್ಮೆಪಟ್ಟಿದ್ದಾರೆ.

2024ರ ಐಸಿಸಿ ಟಿ20 ವಿಶ್ವಕಪ್​​ಗೆ ಭಾರತ ತಂಡ ಹೀಗಿದೆ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು ಆಟಗಾರರು: ಶುಬ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

ಉತ್ತಮ ಫಾರ್ಮ್​ನಲ್ಲಿ ರಾಜಸ್ಥಾನ್​

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ (ರಾಜಸ್ಥಾನ್​ ರಾಯಲ್ಸ್​ ) ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಸಂಜು ಸ್ಯಾಮ್ಸನ್ ನೇತೃತ್ವದ ಫ್ರಾಂಚೈಸಿ ಈ ಋತುವಿನಲ್ಲಿ ಅತ್ಯುತ್ತಮ ಫಾರ್ಮ್​​ನಲ್ಲಿದೆ. ಐಪಿಎಲ್ 2024 ರಲ್ಲಿ ರಾಯಲ್ಸ್ ಇದುವರೆಗೆ ಆಡಿದ ಒಂಬತ್ತು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಸೋತಿದೆ ಮತ್ತು ಅವರು 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಐಪಿಎಲ್ 2024 ರ ಪ್ಲೇಆಫ್ನಲ್ಲಿ ಆರ್ಆರ್ ಬಹುತೇಕ ತಮ್ಮ ಸ್ಥಾನ ಕಾಯ್ದಿರಿಸಿದೆ ಮತ್ತು ಮೇ 2 ರಂದು ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಋತುವಿನ 50ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ವಿರುದ್ಧ ಸೆಣಸಲಿದೆ.

Continue Reading
Advertisement
K. Annamalai
ಪ್ರಮುಖ ಸುದ್ದಿ13 mins ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ18 mins ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

AC Blast
ಪ್ರಮುಖ ಸುದ್ದಿ1 hour ago

AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

Tax Returns
ಪ್ರಮುಖ ಸುದ್ದಿ1 hour ago

Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

Dr Vinayaka Prasanna passed away
ಬಳ್ಳಾರಿ2 hours ago

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Sri Siddhivinayaka Swami SrimanMaharathotsava in Ripponpet
ಶಿವಮೊಗ್ಗ2 hours ago

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Minister Santosh Lad latest statement in Dharwad
ಕರ್ನಾಟಕ2 hours ago

Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

Voting Awareness for Passengers at Hosapete Railway Station
ವಿಜಯನಗರ2 hours ago

Lok Sabha Election 2024: ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತದಾನ ಜಾಗೃತಿ

BJP workers meeting in Banavasi
ರಾಜಕೀಯ2 hours ago

Lok Sabha Election 2024: ಕೇಂದ್ರದ ಸಾಧನೆಗಳನ್ನು ಮನೆ ಮನೆಗೂ ಪರಿಚಯಿಸಿ: ವಿ. ಸುನೀಲ್ ಕುಮಾರ್

Yakshagana performance for voting awareness in Uttara Kannada district on May 4
ಉತ್ತರ ಕನ್ನಡ2 hours ago

Lok Sabha Election 2024: ಉ.ಕ. ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ಮೇ 4 ರಂದು ಯಕ್ಷಗಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ18 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌