Ind vs Eng : ನಾಲ್ಕನೇ ಟೆಸ್ಟ್​ಗೆ ಜಸ್​ಪ್ರಿತ್ ಬುಮ್ರಾ ಬಿಡುಗಡೆ ​, ರಾಹುಲ್ ಔಟ್​ - Vistara News

ಕ್ರೀಡೆ

Ind vs Eng : ನಾಲ್ಕನೇ ಟೆಸ್ಟ್​ಗೆ ಜಸ್​ಪ್ರಿತ್ ಬುಮ್ರಾ ಬಿಡುಗಡೆ ​, ರಾಹುಲ್ ಔಟ್​

Ind vs Eng : ಮುಂದಿನ ವಿಶ್ವ ಕಪ್​ನಲ್ಲಿ ಆಡಿಸುವ ಉದ್ದೇಶದಿಂದ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Jasprit Bumrah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಂಚಿ: ಇಲ್ಲಿ ನಡೆಯಲಿರುವ ಪ್ರವಾಸಿ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ (Ind vs Eng) ಮುಂಚಿತವಾಗಿ ಭಾರತ ತಂಡವು ಜಸ್ಪ್ರೀತ್ ಬುಮ್ರಾ (Jasprit Bumrah) ಅವರನ್ನು ತಂಡದಿಂದ ಬಿಡುಗಡೆ ಮಾಡಿದೆ. ಕಾರ್ಯದೊತ್ತಡ ನಿರ್ವಹಣೆಗೆ ಎಂದು ಉಲ್ಲೇಖಿಸಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಬೆಳವಣಿಗೆಯನ್ನು ದೃಢಪಡಿಸಿದೆ. ಈವರೆಗೆ ನಡೆದಿರುವ ಮೂರು ಟೆಸ್ಟ್ ಪಂದ್ಯಗಳಲ್ಲಿ 17 ವಿಕೆಟ್​ಗಳನ್ನು ಪಡೆದಿರುವ ಬುಮ್ರಾ 100 ಕ್ಕೂ ಹೆಚ್ಚು ಓವರ್​ಗಳನ್ನು ಎಸೆದಿದ್ದಾರೆ. ಹೀಗಾಗಿ ಮ್ಯಾನೇಜ್ಮೆಂಟ್ ಜೂನ್​ನಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ 2024 ಪರಿಗಣಿಸಿ ಬೌಲರ್​ಗೆ ವಿಶ್ರಾಂತಿ ನೀಡಲು ಬಯಸಿದೆ.

ಬೆನ್ನುನೋವು ಮತ್ತು ಶಸ್ತ್ರಚಿಕಿತ್ಸೆಯಿಂದಾಗಿ ಬುಮ್ರಾ ಒಂದು ವರ್ಷಕ್ಕೂ ಹೆಚ್ಚು ಕಾಲ ತಂಡದಿಂದ ಹೊರಗುಳಿದಿದ್ದರು. ಬಳಿಕ ಎಚ್ಚರಿಕೆಯಿಂದ ತಂಡಕ್ಕೆ ಮರಳಿದ್ದರು. ಅವರು ಐರ್ಲೆಂಡ್​ನಲ್ಲಿ ಮೂರು ಟಿ 20ಐ ಪಂದ್ಯಗಳನ್ನು ಆಡಿದ್ದರು. ಬಳಿಕ ಐಸಿಸಿ ವಿಶ್ವಕಪ್ 2023 ಗೆ ಆಯ್ಕೆಯಾದರು. ಅವರು ಪಂದ್ಯಾವಳಿಯಲ್ಲಿ ಪ್ರಮುಖ ವಿಕೆಟ್ ಪಡೆದವರಲ್ಲಿ ಒಬ್ಬರಾಗಿದ್ದಾರೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ವೈಟ್ ಬಾಲ್ ಪಂದ್ಯಗಳಿಂದ ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ದಕ್ಷಿಣ ಆಫ್ರಿಕಾದಲ್ಲಿ ದೀರ್ಘಕಾಲದ ನಂತರ ಅವರು ತಮ್ಮ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ್ದರು. ಎರಡು ಪಂದ್ಯಗಳಲ್ಲಿ 12 ವಿಕೆಟ್​ಗಳನ್ನು ಪಡೆದಿದ್ದರು.

ಇದನ್ನೂ ಓದಿ : Virat Kohli : ವಿರಾಟ್​ ಕೊಹ್ಲಿ, ಅನುಷ್ಕಾ ದಂಪತಿಗೆ ಗಂಡು ಮಗು; ಹೆಸರು ಅಕಾಯ್​​

ಬುಮ್ರಾ ಹೈದರಾಬಾದ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಆರಂಭಿಕ ಟೆಸ್ಟ್​ ಪಂದ್ಯದಲ್ಲಿ ಅವರು ಪ್ರಭಾವ ಬೀರಿದ್ದಾರೆ. ಆದಾಗ್ಯೂ ರೋಹಿತ್ ಶರ್ಮಾ ನೇತೃತ್ವದ ತಂಡವು 28 ರನ್​ಗಳಿಂದ ಸೋಲನುಭವಿಸಿತು. ವೈಜಾಗ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯದಲ್ಲಿ ವೇಗದ ಬೌಲರ್ 9 ವಿಕೆಟ್​​ ಪಡೆದರು. ಆತಿಥೇಯ ರಾಷ್ಟ್ರವು ಪಂದ್ಯವನ್ನು 106 ರನ್​ಳಿಂದ ಗೆದ್ದಿತು. ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮೂರನೇ ಪಂದ್ಯದಲ್ಲಿ ಅವರು ನಿರ್ಣಾಯಕ ವಿಕೆಟ್​ಗಳನ್ನು ಪಡೆದಿದದರು. ಭಾರತವು 434 ರನ್​ಗಳ ಗೆಲುವು ದಾಖಲಿಸಿತ್ತು.

ರಾಹುಲ್​ ಔಟ್​

4ನೇ ಟೆಸ್ಟ್ ಪಂದ್ಯದಿಂದ ಕೆಎಲ್ ರಾಹುಲ್ ಹೊರಗುಳಿದಿದ್ದಾರೆ. ಧರ್ಮಶಾಲಾದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅವರ ಭಾಗವಹಿಸುವಿಕೆ ಫಿಟ್ನೆಸ್​ಗೆ ಒಳಪಟ್ಟಿರುತ್ತದೆ. ಅವರು ಈಗಾಗಲೇ ಎರಡು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದಾರೆ. ಬಲಗೈ ಬ್ಯಾಟರ್​​ ಹೈದರಾಬಾದ್ ಟೆಸ್ಟ್​​​ನ ಪ್ಲೇಯಿಂಗ್ ಇಲೆವೆನ್​​ನ ಭಾಗವಾಗಿದ್ದರು. ಈ ವೇಳೆ ಗಾಯಗೊಂಡಿದ್ದರು. ರಣಜಿ ಟ್ರೋಫಿ 2024 ರಲ್ಲಿ ಬಂಗಾಳ ಪರ ಆಡಲು ಅನುವು ಮಾಡಿಕೊಡಲು ರಾಜ್ಕೋಟ್​ನಲ್ಲಿ ನಡೆದ ಮೂರನೇ ಟೆಸ್ಟ್​ ತಂಡದಿಂದ ಬಿಡುಗಡೆಯಾದ ಮುಖೇಶ್ ಕುಮಾರ್ ರಾಂಚಿಯಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ.

ಭಾರತ ತಂಡ ಈ ರೀತಿ ಇದೆ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

T20 World Cup 2024: ಟಿ20 ವಿಶ್ವಕಪ್​ ಟೂರ್ನಿ(T20 World Cup 2024)ಯಲ್ಲಿ ಪಾಲ್ಗೊಳ್ಳುವ 20 ದೇಶಗಳ ಪೈಕಿ ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ,ನಮೀಬಿಯಾ ಮತ್ತು ನೆದರ್ಲ್ಯಾಂಡ್ಸ್ ಇನ್ನಷ್ಟೇ ತಂಡ ಪ್ರಕಟಿಸಬೇಕಿದೆ. ಸಂಭಾವ್ಯ ತಂಡ ಪ್ರಕಟಕ್ಕೆ ಮೇ 1 ಅಂತಿಮ ದಿನವಾಗಿತ್ತಾದರೂ ಕೂಡ ಈ ದೇಶಗಳು ಇನ್ನೂ ತಂಡ ಪ್ರಕಟಿಸಲು ತಡವರಿಸಿದ್ದು ಯಾಕೆ ಎನ್ನುವುದು ಅಚ್ಚರಿಯ ಸಂಗತಿ.

VISTARANEWS.COM


on

T20 World Cup 2024
Koo

ದುಬೈ: ಮುಂಬರುವ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಐರ್ಲೆಂಡ್(Ireland T20 World Cup squad) ಮತ್ತು ಪಪುವಾ ನ್ಯೂಗಿನಿಯಾ(Papua New Guinea T20 World Cup squad) 15 ಸದಸ್ಯರ ಸಂಭಾವ್ಯ ತಂಡಗಳನ್ನು ಪ್ರಕಟಿಸಿದೆ. ಅನುಭವಿ ಆರಂಭಿಕ ಆಟಗಾರ ಪಾಲ್‌ ಸ್ಟರ್ಲಿಂಗ್ ಐರ್ಲೆಂಡ್ ತಂಡವನ್ನು ಮುನ್ನಡೆಸಿದರೆ, ಪಪುವಾ ನ್ಯೂಗಿನಿಯಾ ತಂಡವನ್ನು ಅಸ್ಸಾದ್ ವಾಲಾ ಮುನ್ನಡೆಸಲಿದ್ದಾರೆ. ಐರ್ಲೆಂಡ್ ಜೂನ್ 5 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ‘ಎ’ ಗುಂಪಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಪ್ರಾರಂಭಿಸಲಿದೆ. ಭಾರತಕ್ಕೂ ಇದು ಮೊದಲ ಪಂದ್ಯವಾಗಿದೆ.

ಐರ್ಲೆಂಡ್ ತಂಡ

ಪಾಲ್ ಸ್ಟರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಆಂಡ್ರ್ಯೂ ಬಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಲಾರ್ಕನ್ ಟಕರ್ (ವಿಕೆಟ್ ಕೀಪರ್), ಬೆನ್ ವೈಟ್ ಮತ್ತು ಕ್ರೇಗ್ ಯಂಗ್.

ಇದನ್ನೂ ಓದಿ T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

ಪಪುವಾ ನ್ಯೂಗಿನಿಯಾ ತಂಡ


ಅಸ್ಸಾದ್ ವಾಲಾ(ನಾಯಕ),ಸಿಜೆ ಅಮಿನಿ(ಉಪನಾಯಕ),ಅಲೆಯ್ ನಾವೊ, ಚಾಡ್ ಸೋಪರ್, ಹಿಲಾ ವರೇ, ಹಿರಿ ಹಿರಿ, ಜ್ಯಾಕ್ ಗಾರ್ಡ್ನರ್, ಜಾನ್ ಕರಿಕೊ, ಕಬುವಾ ವಾಗಿ ಮೋರಿಯಾ, ಕಿಪ್ಲಿಂಗ್ ಡೊರಿಗಾ, ಲೆಗಾ ಸಿಯಾಕಾ, ನಾರ್ಮನ್ ವನುವಾ, ಸೆಮಾ ಕಾಮಿಯಾ, ಸೆಸೆ ಬೌ, ಟೋನಿ ಉರಾ.

ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ,ನಮೀಬಿಯಾ ಮತ್ತು ನೆದರ್ಲ್ಯಾಂಡ್ಸ್ ಇನ್ನಷ್ಟೇ ತಂಡ ಪ್ರಕಟಿಸಬೇಕಿರುವ ದೇಶಗಳು. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ

ಮೊದಲ ಸುತ್ತಿನ ಇತರ ಪಂದ್ಯಗಳು

ದಿನಾಂಕಪಂದ್ಯಸ್ಥಳ
ಜೂನ್ 3ಶ್ರೀಲಂಕಾ-ದಕ್ಷಿಣ ಆಫ್ರಿಕಾನ್ಯೂಯಾರ್ಕ್
ಜೂನ್​ 7ನ್ಯೂಜಿಲ್ಯಾಂಡ್​-ಅಫಘಾನಿಸ್ತಾನಗಯಾನ
ಜೂನ್​ 7 ಶ್ರೀಲಂಕಾ-ಬಾಂಗ್ಲಾದೇಶಡಲ್ಲಾಸ್
ಜೂನ್​ 8ಆಸ್ಟ್ರೇಲಿಯಾ-ಇಂಗ್ಲೆಂಡ್ಬಾರ್ಬಡೋಸ್​
ಜೂನ್​ 10ದಕ್ಷಿಣ ಆಫ್ರಿಕಾ-ಬಾಂಗ್ಲಾದೇಶನ್ಯೂಯಾರ್ಕ್
ಜೂನ್​ 12ವೆಸ್ಟ್​ ಇಂಡೀಸ್​-ನ್ಯೂಜಿಲ್ಯಾಂಡ್ನ್ಯೂಯಾರ್ಕ್
ಜೂನ್​ 15ಆಸ್ಟ್ರೇಲಿಯಾ-ಸ್ಕಾಟ್ಲೆಂಡ್ಸೇಂಟ್​ ಲೂಸಿಯಾ
ಜೂನ್​ 17ವೆಸ್ಟ್​ ಇಂಡೀಸ್​-ಅಫಘಾನಿಸ್ತಾನಸೇಂಟ್​ ಲೂಸಿಯಾ


ನಾಕೌಟ್​ ಪಂದ್ಯಗಳ ವೇಳಾಪಟ್ಟಿ

ದಿನಾಂಕಪಂದ್ಯಸ್ಥಳ
ಜೂನ್​ 26 ಮೊದಲ ಸೆಮಿಫೈನಲ್ಗಯಾನ
ಜೂನ್​ 27ದ್ವಿತೀಯ ಸೆಮಿಫೈನಲ್ಟ್ರಿನಿಡಾಡ್
ಜೂನ್​ 29ಫೈನಲ್ಬಾರ್ಬಡೋಸ್
Continue Reading

ಕ್ರೀಡೆ

Andre Russell: ಸ್ಟಾರ್​​ ನಟಿಯೊಂದಿಗೆ ಕೇಸರಿ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ಆಂಡ್ರೆ ರಸೆಲ್

Andre Russell: ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚಿದ್ದಾರೆ ಮತ್ತು ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಈ ಜೋಡಿಯ ಡ್ಯಾನ್ಸ್ ಕಂಡ ಅಭಿಮಾನಿಗಳು ಫಿದಾ ಆಗಿದ್ದಾರೆ.

VISTARANEWS.COM


on

Andre Russell
Koo

ಮುಂಬಯಿ: ವೆಸ್ಟ್​ ಇಂಡೀಸ್​ ತಂಡ ಸ್ಫೋಟಕ ಬ್ಯಾಟರ್​, ಕೆಕೆಆರ್(KKR)​ ತಂಡದ ಆಂಡ್ರೆ ರಸೆಲ್(Andre Russell) ಬಾಲಿವುಡ್​ ನಟಿ ಅವಿಕಾ ಗೋರ್(Avika Gor) ಜತೆ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ್ದಾರೆ. ​’ಲಡ್ಕಿ ತು ಕಮಲ್ ಕಿ’ ಎನ್ನುವ ಹಾಡಿಗೆ ರೆಸೆಲ್ ಅವಿಕಾ ಸೇರಿ ಹೆಜ್ಜೆ ಹಾಕಿರುವ ಈ ಹಾಡು ಯೂಟ್ಯೂಬ್​ನಲ್ಲಿ ಇಂದು(ಮೇ 9 ಗುರುವಾರ) ಬಿಡುಗಡೆಯಾಗಿದ್ದು, ಎಲ್ಲಡೆ ಸಂಚಲನ ಮೂಡಿಸಿದೆ.

ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚಿದ್ದಾರೆ ಮತ್ತು ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಈ ಜೋಡಿಯ ಡ್ಯಾನ್ಸ್ ಕಂಡು ಅಭಿಮಾನಿಗಳು ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಅವಿಕಾ ಗೋರ್ ಭಾರತೀಯ ನಟಿಯಾಗಿದ್ದು, ಅವರು ಮುಖ್ಯವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸುತ್ತಾರೆ.

ವಿಂಡೀಸ್​ ಆಟಗಾರರು ಕ್ರಿಕೆಟ್​ ಜತೆ ನಟನೆ, ಸಂಗೀತ, ಡ್ಯಾನ್ಸ್​ನಲ್ಲಿ ಅಪಾರ ಕ್ರೇಜ್​ ಹೊಂದಿರುತ್ತಾರೆ. ಈಗಾಗಲೇ ಯೂನಿವರ್ಸಲ್​ ಬಾಸ್ ಖ್ಯಾತಿಯ​ ಕ್ರಿಸ್ ಗೇಲ್ ಮತ್ತು ಡ್ವೇನ್ ಬ್ರಾವೋ ಹಲವು ಆಲ್ಬಮ್​ ಸಾಂಗ್​ ಮಾಡಿ ಖ್ಯಾತಿಗಳಿಸಿದ್ದಾರೆ. ಇದೀಗ ಈ ಸಾಲಿಗೆ ರಸೆಲ್​ ಕೂಡ ಸೇರಿದ್ದಾರೆ.


ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

ಈ ಬಾರಿಯ ಐಪಿಎಲ್‌ನಲ್ಲಿ ರಸೆಲ್​ ಕೆಕೆಆರ್​ ಪರ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುವ ಮೂಲಕ ಗಮನಸೆಳೆಯುತ್ತಿದ್ದಾರೆ. 11 ಪಂದ್ಯಗಳಲ್ಲಿ 198 ರನ್ ಗಳಿಸಿರುವ ರಸೆಲ್, ಬೌಲಿಂಗ್‌ನಲ್ಲೂ ಮಿಂಚಿ 13 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಸದ್ಯ ಕೆಕೆಆರ್​ 16 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಇನ್ನೊಂದು ಪಂದ್ಯ ಗೆದ್ದರೆ ಪ್ಲೇ ಆಫ್​ ಟಿಕೆಟ್​ ಅಧಿಕೃತಗೊಳ್ಳಲಿದೆ.

ಇದನ್ನೂ ಓದಿ PBKS vs RCB: ಮಳೆಯ ಕೈಯಲ್ಲಿದೆ ಆರ್​ಸಿಬಿ-ಪಂಜಾಬ್​ ಪ್ಲೇ ಆಫ್​ ಭವಿಷ್ಯ

ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ


ಬುಧವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ ವಿರುದ್ಧ 10 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಪ್ಲೇ ಆಫ್​ ಸನಿಹಕ್ಕೆ ಬಂದು ನಿಂತಿದೆ. ಜತೆಗೆ ಅಂಕಪಟ್ಟಿಯಲ್ಲಿಯೂ(IPL 2024 Points Table) ಪ್ರಗತಿ ಸಾಧಿಸಿ ಮೂರನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ಈ ಹಿಂದೆ ಮೂರನೇ ಸ್ಥಾನಿಯಾಗಿದ್ದ ಹಾಲಿ ಚಾಂಪಿಯನ್​ ಚೆನ್ನೈ ತಂಡ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

ಸದ್ಯ ಚೆನ್ನೈ, ಲಕ್ನೋ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು 12 ಅಂಕಗಳಿಸಿವೆ. ಹೀಗಾಗಿ ಈ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಬಹುತೇಕ ಪ್ಲೇ ಆಫ್​ ಪ್ರವೇಶಿಸುವುದು ಖಚಿತ. ಹೈದರಾಬಾದ್​ಗೆ ಇನ್ನೊಂದು ಪಂದ್ಯ ಗೆದ್ದರೂ ಸಾಕು. ಇಂದು ನಡೆಯುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ ಮುಖಾಮುಖಿಯಾಗಲಿವೆ. ಪ್ಲೇ ಆಫ್​ ಕ್ಷೀಣ ಅವಕಾಶ ಹೊಂದಿರುವ ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಹೀಗಾಗಿ ಈ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆಯಿದೆ.

Continue Reading

ಕ್ರೀಡೆ

IPL 2024: 17ನೇ ಆವೃತ್ತಿಯ ಐಪಿಎಲ್​ನಿಂದ ಅಧಿಕೃತವಾಗಿ ಹೊರಬಿದ್ದ 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್​

IPL 2024: 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್(Mumbai Indians)​ ಈ ಬಾರಿಯ ಐಪಿಎಲ್(IPL 2024)​ ಟೂರ್ನಿಯಿಂದ ಮೊದಲ ತಂಡವಾಗಿ ಹೊರಬಿದ್ದಿದೆ. 12 ಪಂದ್ಯ ಆಡಿ ಕೇವಲ 8 ಅಂಕ ಪಡೆದಿರುವ ಮುಂಬೈಗೆ ಇನ್ನೆರಡು ಪಂದ್ಯ ಬಾಕಿ ಉಳಿದಿದೆ. ಆದರೆ ಈ ಪಂದ್ಯಗಳನ್ನು ಗೆದ್ದರೂ ಹಾರ್ದಿಕ್​ ಪಡೆಗೆ ಪ್ಲೇ ಆಫ್​ ಅವಕಾಶವಿಲ್ಲ.

VISTARANEWS.COM


on

IPL 2024
Koo

ಬೆಂಗಳೂರು: ಲಕ್ನೋ ಸೂಪರ್​ ಜೈಂಟ್ಸ್(Lucknow Super Giants​)​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad) ತಂಡ ಗೆಲುವು ಸಾಧಿಸಿದ ಪರಿಣಾಮ 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್(Mumbai Indians)​ ಈ ಬಾರಿಯ ಐಪಿಎಲ್(IPL 2024)​ ಟೂರ್ನಿಯಿಂದ ಮೊದಲ ತಂಡವಾಗಿ ಹೊರಬಿದ್ದಿದೆ. 12 ಪಂದ್ಯ ಆಡಿ ಕೇವಲ 8 ಅಂಕ ಪಡೆದಿರುವ ಮುಂಬೈಗೆ ಇನ್ನೆರಡು ಪಂದ್ಯ ಬಾಕಿ ಉಳಿದಿದೆ. ಆದರೆ ಈ ಪಂದ್ಯಗಳನ್ನು ಗೆದ್ದರೂ ಹಾರ್ದಿಕ್​ ಪಡೆಗೆ ಪ್ಲೇ ಆಫ್​ ಅವಕಾಶವಿಲ್ಲ. ಹೀಗಾಗಿ ಮುಂಬೈಗೆ ಮುಂದಿನ ಪಂದ್ಯಗಳು ಕೇವಲ ಔಪಚಾರಿಕ ಪಂದ್ಯಗಳಾಗಿವೆ. ಮುಂಬೈ ಮುಂದಿನ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಮತ್ತು ಕೆಕೆಆರ್​ ವಿರುದ್ಧ ಆಡಲಿದೆ.

ರೋಹಿತ್​ ಶರ್ಮ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್​ 5 ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಆದರೂ ಕೂಡ ಅವರನ್ನು ಈ ಬಾರಿ ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​ ಪಾಂಡ್ಯಗೆ ನಾಯಕತ್ವದ ಪಟ್ಟ ನೀಡಲಾಗಿತ್ತು. ಈ ವೇಳೆ ಮುಂಬೈ ಅಭಿಮಾನಿಗಳು ಫ್ರಾಂಚೈಸಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದೀಗ ಟೂರ್ನಿಯಿಂದ ಮೊದಲ ತಂಡವಾಗಿ ಹೊರಬಿದ್ದಿರುವ ಕಾರಣ ತಂಡದ ಈ ಸ್ಥಿತಿಗೆ ಪಾಂಡ್ಯ ನೇರ ಕಾರಣ ಎಂದು ಕಿಡಿ ಕಾರಿದ್ದಾರೆ. ರೋಹಿತ್​ ನಾಯಕನಾಗುತ್ತಿದ್ದರೆ ತಂಡಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ IPL 2024 Points Table: ಸನ್​ರೈಸರ್ಸ್​ಗೆ 10 ವಿಕೆಟ್​ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ

ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ತೋರಿದೆ. ಯಾರೂ ಕೂಡ ತಂಡಕ್ಕಾಗಿ ಹಾಗೂ ಉತ್ಸಾಹ ಭರಿತವಾಗಿ ಆಡಲಿಲ್ಲ. ಕಳೆದ 16 ಆವೃತ್ತಿಯ ಐಪಿಎಲ್​ ಟೂರ್ನಿಯನ್ನು ನೋಡುವುದಾದರೆ ಮುಂಬೈ ಈ ಸ್ಥಿತಿ ತಲುಪಿದ್ದು ಇದೇ ಮೊದಲು. ಯಾರು ಕೂಡ ಸಂಘಟಿತ ಪ್ರದರ್ಶನ ತೋರದೇ ಹೋದದ್ದು ತಂಡದ ಈ ಸ್ಥಿತಿಗೆ ಪ್ರಮುಖ ಕಾರಣ.

ಸದ್ಯ ಚೆನ್ನೈ, ಲಕ್ನೋ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು 12 ಅಂಕಗಳಿಸಿವೆ. ಹೀಗಾಗಿ ಈ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಬಹುತೇಕ ಪ್ಲೇ ಆಫ್​ ಪ್ರವೇಶಿಸುವುದು ಖಚಿತ. ಹೈದರಾಬಾದ್​ಗೆ ಇನ್ನೊಂದು ಪಂದ್ಯ ಗೆದ್ದರೂ ಸಾಕು. ಇಂದು ನಡೆಯುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ ಮುಖಾಮುಖಿಯಾಗಲಿವೆ. ಪ್ಲೇ ಆಫ್​ ಕ್ಷೀಣ ಅವಕಾಶ ಹೊಂದಿರುವ ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಸೋತ ತಂಡ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

Continue Reading

ಕ್ರೀಡೆ

Viral News: ಐಪಿಎಲ್ ಪಂದ್ಯದ ವೇಳೆ ಕೇಜ್ರಿವಾಲ್ ಪರ ಘೋಷಣೆ; 6 ಮಂದಿ ಬಂಧನ

Viral News: ಆಮ್ ಆದ್ಮಿ ಪಕ್ಷದ ವಿದ್ಯಾರ್ಥಿ ಘಟಕ ಛಾತ್ರ ಯುವ ಸಂಘರ್ಷ(AAP workers) ಸಮಿತಿಯ ಸದಸ್ಯರು ಕೇಜ್ರಿವಾಲ್ ಬಂಧನವನ್ನು ಪ್ರತಿಭಟಿಸಿ ‘ಜೈಲ್ ಕಾ ಜವಾಬ್ ವೋಟ್ ಸೆ’ (ಬಂಧನಕ್ಕೆ ಉತ್ತರವನ್ನು ಮತದಿಂದ ನೀಡಿ) ಎಂಬ ಘೋಷಣೆಯ ಟೀ ಶರ್ಟ್‌ಗಳನ್ನು ಧರಿಸಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಇದು ಮಾತ್ರವಲ್ಲದೆ ಪಂದ್ಯದ ಸಂದರ್ಭ ಕೇಜ್ರಿವಾಲ್ ಬಂಧನ ಖಂಡಿಸಿ ಘೋಷಣೆಗಳನ್ನು ಕೂಗಿದ್ದರು.

VISTARANEWS.COM


on

Viral News
Koo

ನವದೆಹಲಿ: ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಮಂಗಳವಾರ ನಡೆದಿದ್ದ(IPL 2024) ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ರಾಜಸ್ಥಾನ್ ರಾಯಲ್ಸ್​ ನಡುವಣ ಪಂದ್ಯದಲ್ಲಿ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಪರ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆಪ್ ಕಾರ್ಯಕರ್ತರನ್ನು ದಿಲ್ಲಿ ಪೊಲೀಸರು ಬಂಧಿಸಿರುವ ಘಟನೆ ತಡವಾಗಿ(Viral News) ಬೆಳಕಿಗೆ ಬಂದಿದೆ.

ಆಮ್ ಆದ್ಮಿ ಪಕ್ಷದ ವಿದ್ಯಾರ್ಥಿ ಘಟಕ ಛಾತ್ರ ಯುವ ಸಂಘರ್ಷ(AAP workers) ಸಮಿತಿಯ ಸದಸ್ಯರು ಕೇಜ್ರಿವಾಲ್ ಬಂಧನವನ್ನು ಪ್ರತಿಭಟಿಸಿ ‘ಜೈಲ್ ಕಾ ಜವಾಬ್ ವೋಟ್ ಸೆ’ (ಬಂಧನಕ್ಕೆ ಉತ್ತರವನ್ನು ಮತದಿಂದ ನೀಡಿ) ಎಂಬ ಘೋಷಣೆಯ ಟೀ ಶರ್ಟ್‌ಗಳನ್ನು ಧರಿಸಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಇದು ಮಾತ್ರವಲ್ಲದೆ ಪಂದ್ಯದ ಸಂದರ್ಭ ಕೇಜ್ರಿವಾಲ್ ಬಂಧನ ಖಂಡಿಸಿ ಘೋಷಣೆಗಳನ್ನು ಕೂಗಿದ್ದರು. ಇದೀಗ ಇವರ ವಿರುದ್ಧ ಸಾರ್ವಜನಿಕವಾಗಿ ಗದ್ದಲವನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿಸಲಾಗಿದೆ. ಸೂಕ್ತ ಕಾನೂನಾತ್ಮಕ ವಿಧಿವಿಧಾನಗಳು ಪೂರ್ಣಗೊಂಡ ಬಳಿಕವಷ್ಟೇ ಬಂಧಿತರನ್ನು ಬಿಡುಗಡೆಗೊಳಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಜಾರಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದ್ದು, ತಿಹಾರ ಜೈಲಿನಲ್ಲಿದ್ದಾರೆ. ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ IPL 2024 Points Table: ಸನ್​ರೈಸರ್ಸ್​ಗೆ 10 ವಿಕೆಟ್​ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ

ಅಷ್ಟೇ ಅಲ್ಲ, ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜಾರಿ ನಿರ್ದೇಶನಾಲಯವು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್‌ ಪಡೆದಿದ್ದರು. ಆದರೆ, ಈಗ ಬಂಧನದಿಂದ ರಕ್ಷಣೆಗೆ ನೀಡದ ಕಾರಣ ಅವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ನ್ಯಾಯಾಂಗ ಬಂಧನವನ್ನು (Judicial custody) ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದ್ದು, ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಆದೇಶವನ್ನೂ ಕಾಯ್ದಿರಿಸಿದೆ.

Continue Reading
Advertisement
Navneet Rana
Lok Sabha Election 202418 mins ago

Navneet Rana: 15 ಸೆಕೆಂಡು ಕೊಟ್ಟರೆ ಸಾಕು, ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆ; ಓವೈಸಿ ಸಹೋದರರ ವಿರುದ್ಧ ಬಿಜೆಪಿ ನಾಯಕಿ ಗುಡುಗು

SSLC Result 2024 SSLC 2nd and 3rd exam aspirants to have special classes
ಕರ್ನಾಟಕ54 mins ago

SSLC Result 2024: ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

SSLc Exam 2 time table
ಶಿಕ್ಷಣ59 mins ago

SSLC 2 Exam Time Table : ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಡೇಟ್‌ ಫಿಕ್ಸ್‌; ವೇಳಾಪಟ್ಟಿ ಹೀಗಿದೆ

Mahender Pratap Singh
ದೇಶ1 hour ago

Mahender Pratap Singh: ಪುಲ್ವಾಮಾ ದಾಳಿ ಪಾಕ್‌ ಕುಕೃತ್ಯ ಅಲ್ವಂತೆ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಅಭ್ಯರ್ಥಿ

No one has failed in SSLC says Education Department
ಕರ್ನಾಟಕ1 hour ago

SSLC Result 2024: ಈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ! ಶಿಕ್ಷಣ ಇಲಾಖೆ ಹೀಗೆ ಹೇಳಿದ್ದು ಯಾಕೆ?

SSLC Result 2024 what is the reason for most of the students fail in SSLC
ಕರ್ನಾಟಕ2 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Aavesham Releases On OTT Fahadh Faasil Hit Malayalam Film
ಮಾಲಿವುಡ್2 hours ago

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Sslc exam Result 2024
ಶಿಕ್ಷಣ2 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

T20 World Cup 2024
ಕ್ರೀಡೆ2 hours ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

Sunita Williams
ವಿದೇಶ2 hours ago

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ2 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ2 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು3 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ3 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು4 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌