ಈ ಬಾರಿ ಹೆಲ್ಮೆಟ್ ಸರಿ ಇದೆಯೇ? ಮ್ಯಾಥ್ಯೂಸ್​ಗೆ​ ಕಿಚಾಯಿಸಿದ ವಿಲಿಯಮ್ಸನ್​,ಬೌಲ್ಟ್​ - Vistara News

ಕ್ರಿಕೆಟ್

ಈ ಬಾರಿ ಹೆಲ್ಮೆಟ್ ಸರಿ ಇದೆಯೇ? ಮ್ಯಾಥ್ಯೂಸ್​ಗೆ​ ಕಿಚಾಯಿಸಿದ ವಿಲಿಯಮ್ಸನ್​,ಬೌಲ್ಟ್​

ಟೈಮ್ಡ್​ ಔಟ್(‘timed out’ controversy)​ ಆದ ಶ್ರೀಲಂಕಾದ ಆಟಗಾರ ಏಂಜಲೋ ಮ್ಯಾಥ್ಯೂಸ್(Angelo Mathews) ಅವರಲ್ಲಿ ಗುರುವಾರದ ಪಂದ್ಯದ ವೇಳೆ ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್​, ಈ ಬಾರಿ ಹೆಲ್ಮೆಟ್ ಸರಿ ಇದೆಯೇ ಎಂದು ಕೇಳಿ ಕಿಚಾಯಿಸಿದ್ದಾರೆ.

VISTARANEWS.COM


on

Kane Williamson asks Angelo Mathews to check his helmet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಳೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹೆಲ್ಮೆಟ್​ ಸಮಸ್ಯೆಯಿಂದಾಗಿ ಟೈಮ್ಡ್​ ಔಟ್(‘timed out’ controversy)​ ಆದ ಶ್ರೀಲಂಕಾದ ಆಟಗಾರ ಏಂಜಲೋ ಮ್ಯಾಥ್ಯೂಸ್(Angelo Mathews) ಅವರು ನ್ಯೂಜಿಲ್ಯಾಂಡ್​ ವಿರುದ್ಧ ಕಣಕ್ಕಿಳಿಯುವ ವೇಳೆ ಕೇನ್ ವಿಲಿಯಮ್ಸನ್(Kane Williamson) ಮತ್ತು ಟ್ರೆಂಟ್​ ಬೌಲ್ಟ್​ ಅವರು ಈ ಬಾರಿ ಹೆಲ್ಮೆಟ್ ಸರಿ ಇದೆಯೇ ಎಂದು ಕೇಳಿ ಕಿಚಾಯಿಸಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಗುರುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮ್ಯಾಥ್ಯೂಸ್​ ಅವರು ಬ್ಯಾಟಿಂಗ್​ಗೆ ಬಂದ ವೇಳೆ ಆರಮಭದಲ್ಲಿ ಬೌಲಿಂಗ್​ ನಡೆಸುತ್ತಿದ್ದ ಟ್ರೆಂಟ್​ ಬೌಲ್ಟ್​ ಅವರು ನಗುತ್ತಲೇ ಹೆಲ್ಮೆಟ್​ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಕಿವೀಸ್​ ನಾಯಕ ಕೇನ್​ ವಿಲಿಯಮ್ಸನ್​ ಓಡೋಡಿ ಬಂದು ಈ ಬಾರಿ ಹೆಲ್ಮೆಟ್​ ಸರಿಯಾಗಿದೆ ಅಲ್ಲವೇ ಎಂದು ಕೇಳಿದ್ದಾರೆ. ಮ್ಯಾಥ್ಯೂಸ್​ ನಗುತ್ತಲೇ ಬ್ಯಾಟಿಂಗ್​ ನಡೆಸಲು ಮುಂದಾದರು. ಅತ್ತ ಕಾಮೆಂಟ್ರಿ ಮಾಡುತ್ತಿದ್ದವರು ಕೂಡ ಈ ದೃಶ್ಯವನ್ನು ನಗುತ್ತಕಲೇ ಸುಂದರವಾಗಿ ವರ್ಣಿಸಿದ್ದಾರೆ.

ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಲಂಕಾ ಮತ್ತು ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಮ್ಯಾಥ್ಯೂಸ್ ಅವರು ಕ್ರೀಸ್‌ಗಿಳಿದ ವೇಳೆ ಹೆಲ್ಮೆಟ್‌ ಬದಲಿಸಲು ಸಮಯ ತೆಗೆದುಕೊಂಡಿದ್ದರು. ಇದೇ ವೇಳೆ ಬಾಂಗ್ಲಾದೇಶ ಆಟಗಾರರು ಅಂಪೈರ್​ ಬಳಿ ಐಸಿಸಿ ನಿಯಮದಂತೆ ಟೈಮ್ ಔಟ್ ಅಫೀಲ್​ ಮಾಡಿದರು. ಫೀಲ್ಡ್​ ಅಂಪೈರ್​ ಮರೈಸ್ ಎರಾಸ್ಮಸ್ ಬಾಂಗ್ಲಾ ಆಟಗಾರರ ಮನವಿಯನ್ನು ಮಾನ್ಯ ಮಾಡಿ ಮ್ಯಾಥ್ಯೂಸ್​ಗೆ ಕ್ರೀಸ್​ ಬಿಡುವಂತೆ ಹೇಳಿದರು. ಇದೇ ವೇಳೆ ಮ್ಯಾಥ್ಯೂಸ್‌ ಅವರು ತಮ್ಮ ಹೆಲ್ಮೆಟ್​ ತುಂಡಾಗಿರುವುದನ್ನು ತೋರಿಸಿ ಮನವಿ ಮಾಡಿದರು. ಅಲ್ಲದೆ ಬಾಂಗ್ಲಾ ನಾಯಕ ಶಕೀಬ್​ ಅವರ ಬಳಿಯೂ ನಡೆದ ಘಟನೆಯನ್ನು ವಿವರಿಸಿದರು. ಆದರೂ ಬಾಂಗ್ಲಾ ಆಟಗಾರರು ತಮ್ಮ ಮನವಿಯನ್ನು ಹಿಂಪಡೆಯಲಿಲ್ಲ. ಹೀಗಾಗಿ ಏಂಜೆಲೊ ಮ್ಯಾಥ್ಯೂಸ್‌ ಅವರು ಒಂದೂ ಎಸೆತ ಎದುರಿಸಿದೆ ಟೈಮ್ಡ್​ ಔಟ್ ಆಗಿದ್ದರು. ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಈ ರೀತಿ ಔಟ್​ ಆದ ಮೊದಲ ಆಟಗಾರ ಎಂಬ ಕೆಟ್ಟ ದಾಖಲೆ ಪಟ್ಟಿಗೆ ಸೇರ್ಪಡೆಯಾಗಿದ್ದರು.

ಸೆಮಿ ಸನಿಹಕ್ಕೆ ಕಿವೀಸ್​

ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ನ್ಯೂಜಿಲ್ಯಾಂಡ್​ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಲಂಕಾ ತಂಡ 46.4 ಓವರ್​ಗಳಲ್ಲಿ 171 ರನ್​ಗಳಿಗೆ ಆಲ್​ಔಟ್ ಆಯಿತು. ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ಇನ್ನೂ 160 ಬಾಕಿ ಇರುವಂತೆಯೇ 5 ವಿಕೆಟ್​ ಕಳೆದುಕೊಂಡು 172 ರನ್ ಬಾರಿಸಿ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಕಿವೀಸ್​ ಸೆಮಿಫೈನಲ್​ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಡಿದೆ. ಆದರೆ, ಶನಿವಾರ ನಡೆಯಲಿರುವ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದ ಫಲಿತಾಂಶದ ಬಳಿಕ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ. 

ಸಾಧಾರಣ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ತಂಡ 25 ಓವರ್​ಗಳ ಒಳಗೆ ಆಟ ಮುಗಿಸಿ ಗರಿಷ್ಠ ರನ್​ರೇಟ್​ನೊಂದಿಗೆ ಆಡಿತು. ಪೂರಕವಾಗಿ ಮೊದಲ ವಿಕೆಟ್​ಗೆ 86 ರನ್ ಬಾರಿಸಿತು. ಆರಂಭಿಕ ಬ್ಯಾಟರ್​ಗಳಾದ ಡೆವೋನ್​ ಕಾನ್ವೆ (45) ಹಾಗೂ ರಚಿನ್ ರವೀಂದ್ರ (42) ಉತ್ತಮ ಆರಂಭ ತಂದುಕೊಟ್ಟರು. ಆದರೆ, ಈ ಇಬ್ಬರು ಬ್ಯಾಟಿಂಗ್​ನಲ್ಲಿ ಇನ್ನಷ್ಟು ಬಿರುಸು ತರಲು ಹೋಗಿ ಔಟಾದರು. ಬಳಿಕ ಕೇನ್ ವಿಲಿಮ್ಸನ್​ 14 ರನ್​ ಕೊಡುಗೆ ಕೊಟ್ಟರು. ಡ್ಯಾರಿಲ್ ಮಿಚೆಲ್ ಗುರಿಯನ್ನು ಬೇಗ ಮುಟ್ಟುವ ಉದ್ದೇಶದಿಂದ 31 ಎಸೆತಕ್ಕೆ 43 ರನ್ ಬಾರಿಸಿದರು. ಮಾರ್ಕ್​ ಚಾಪ್ಮನ್ ಅನಗತ್ಯ ರನ್​ಔಟ್​ಗೆ ಬಲಿಯಾದರು. ಕೊನೆಯಲ್ಲಿ ಗ್ಲೆನ್​ ಫಿಲಿಪ್ಸ್​ 17 ರನ್ ಬಾರಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

India’s open-bus parade : ಭಾರತ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಭದ್ರತಾ ವೈಫಲ್ಯ; ಬಸ್​​ನಲ್ಲಿದ್ದ ಆಟಗಾರರು ಜಸ್ಟ್​ ಮಿಸ್​​

India’s open-bus parade: ಭಾರತೀಯ ಆಟಗಾರರು ಅಭಿಮಾನಿಗಳೊಂದಿಗೆ ಗೆಲುವು ಆಚರಿಸಿದರು. ಆಟಗಾರರನ್ನು ಹೊತ್ತ ಓಪನ್-ಟಾಪ್ ಬಸ್ ಅಭಿಮಾನಿಗಳ ಸಮುದ್ರದ ಮೂಲಕ ಹಾದುಹೋಗುತ್ತಿದ್ದಂತೆ ಮರೀನ್ ಡ್ರೈವ್​ನಲ್ಲಿ ಮೆರವಣಿಗೆ ಪ್ರಾರಂಭವಾಯಿತು. ಮೆರವಣಿಗೆಯ ಸಮಯದಲ್ಲಿ, ಅನಿರೀಕ್ಷಿತ ಘಟನೆ ನಡೆಯಿತು.

VISTARANEWS.COM


on

India's open-bus parade
Koo

ಬೆಂಗಳೂರು: ಮಳೆಯಿಂದ ಆದ ಅಡಚಣೆ ಬಳಿಕ ಆರಂಭಗೊಂಡ ಟೀಮ್ ಇಂಡಿಯಾದ ವಿಶ್ವ ಕಪ್ ​ ವಿಜಯೋತ್ಸವ ಮುಂಬೈನ ವಾಖೆಂಡೆ ಕ್ರಿಕೆಟ್​ ಸ್ಟೇಡಿಯಮ್ ತಲುಪಿತು. ಮೆರವಣಿಗೆಯು (India’s open-bus parade) ಸಂಜೆ ಮರೀನ್ ಡ್ರೈವ್​ನಿಂದ ಆರಂಭಗೊಂಡು ರಸ್ತೆಯುದ್ದಕ್ಕೂ ನೆರೆದಿದ್ದ ಅಭಿಮಾನಿಗಳ ಸಮ್ಮುಖದಲ್ಲಿ ಸಾಗಿತು. ಮೆರವಣಿಗೆಯನ್ನು ಸಂಜೆ 5 ಗಂಟೆಯಿಂದ ಪ್ರಾರಂಭಿಸಲು ಯೋಜಿಸಲಾಗಿದ್ದರೂ, ಎರಡು ಗಂಟೆಗಳಿಗಿಂತ ಹೆಚ್ಚು ವಿಳಂಬದ ನಂತರ ಬಸ್​ ಹೊರಟಿತು.

ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಐತಿಹಾಸಿಕ ವಿಜಯವನ್ನು ಆಚರಿಸಲು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದರು. ಆದಾಗ್ಯೂ ದೀರ್ಘ ವಿಳಂಬ ಅವರನ್ನು ನಿರಾಶೆಗೊಳಿಸಲಿಲ್ಲ. ಟೀಮ್ ಇಂಡಿಯಾ ಮುಂಬೈಗೆ ಆಗಮಿಸುವ ಮೊದಲೇ ಸಾವಿರಾರು ಅಭಿಮಾನಿಗಳು ಮರೀನ್ ಡ್ರೈವ್​ಗೆ ಆಗಮಿಸಿದ್ದರು. ವಿಶ್ವಕಪ್ ವಿಜೇತರಿಗಾಗಿ ಅಭಿಮಾನಿಗಳು ತೀವ್ರವಾಗಿ ಕಾಯುತ್ತಿದ್ದರಿಂದ ವಾಂಖೆಡೆ ಕ್ರೀಡಾಂಗಣವೂ ಜನರಿಂದ ತುಂಬಿತ್ತು.

ಸಂಜೆ 7:30 ರ ಸುಮಾರಿಗೆ ವಿಜಯೋತ್ಸವ ಮೆರವಣಿಗೆ ಪ್ರಾರಂಭವಾಯಿತು. ಭಾರತೀಯ ಆಟಗಾರರು ಅಭಿಮಾನಿಗಳೊಂದಿಗೆ ಗೆಲುವು ಆಚರಿಸಿದರು. ಆಟಗಾರರನ್ನು ಹೊತ್ತ ಓಪನ್-ಟಾಪ್ ಬಸ್ ಅಭಿಮಾನಿಗಳ ಸಮುದ್ರದ ಮೂಲಕ ಹಾದುಹೋಗುತ್ತಿದ್ದಂತೆ ಮರೀನ್ ಡ್ರೈವ್​ನಲ್ಲಿ ಮೆರವಣಿಗೆ ಪ್ರಾರಂಭವಾಯಿತು. ಮೆರವಣಿಗೆಯ ಸಮಯದಲ್ಲಿ, ಅನಿರೀಕ್ಷಿತ ಘಟನೆ ನಡೆಯಿತು.

ಅಪಾರ ಸಂಖ್ಯೆಯ ಅಭಿಮಾನಿಗಳು ತಮ್ಮ ಹೀರೋಗಳ ನೋಡಲು ತೀವ್ರವಾಗಿ ಪ್ರಯತ್ನಿಸುತ್ತಿರುವಾಗ, ಅಭಿಮಾನಿಯೊಬ್ಬರು ಮರ ಏರಿ ಆಟಗಾರರ ಹತ್ತಿರಕ್ಕೆ ಬರಲು ಯತ್ನಿಸಿದರು. ಇದು ನಿಜವಾಗಿಯೂ ಭದ್ರತೆಯ ವೈಫಲ್ಯವಾಗಿದೆ. ಆಟಗಾರರಿಗೆ ಏನಾದರೂ ಸಮಸ್ಯೆ ಆಗಿದ್ದರೆ ಮೆರವಣಿಗೆಯ ಖುಷಿ ಹಾಳಾಗುತ್ತಿತ್ತು.

ಹಲವು ಕಡೆ ಮರ ಹತ್ತಿದ ಅಭಿಮಾನಿಗಳು

ಬಸ್ ಮೆರವಣಿಗೆ ಮಾರ್ಗದ ಮೂಲಕ ಹಾದುಹೋಗುತ್ತಿದ್ದಂತೆ, ಅಭಿಮಾನಿಯೊಬ್ಬ ಕೊಂಬೆಯ ಮೇಲೆ ಮಲಗಿ ತನ್ನ ಫೋನ್​ನಿಂದ ಫೋಟೋಗಳನ್ನು ಕ್ಲಿಕ್ಕಿಸುತ್ತಿರುವುದನ್ನು ಕಂಡು ಬಂದಿದೆ. ಇದು ದೊಡ್ಡ ಭದ್ರತಾ ಲೋಪವಾಗಿತ್ತು ಆದರೆ ಅದೃಷ್ಟವಶಾತ್, ಅದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ.

ಏತನ್ಮಧ್ಯೆ, ಮೆರವಣಿಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಕೊನೆಗೊಂಡಿತು. ಅಲ್ಲಿ ಬಿಸಿಸಿಐ ಅಭಿಮಾನಿಗಳನ್ನು ಸನ್ಮಾನಿಸಿತು. ಈ ಸಂದರ್ಭದಲ್ಲಿ ಬಿಸಿಸಿಐ 125 ಕೋಟಿ ರೂ.ಗಳ ಬಹುಮಾನ ಮೊತ್ತವನ್ನು ಭಾರತ ತಂಡಕ್ಕೆ ಹಸ್ತಾಂತರಿಸಲಿದೆ. ಇದಕ್ಕೂ ಮುನ್ನ ಭಾರತ ತಂಡ ನವದೆಹಲಿಗೆ ಬಂದಿಳಿದಿದ್ದು, ಅಭಿಮಾನಿಗಳಿಂದ ಭವ್ಯ ಸ್ವಾಗತ ಪಡೆಯಿತು.

ಇದನ್ನೂ ಓದಿ: Team India : ಅಪರೂಪದಲ್ಲಿ ಅಪರೂಪ; ಮುಂಬೈ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾದ ವಿಮಾನಕ್ಕೆ ಸೆಲ್ಯೂಟ್

ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಮುಂಬೈಗೆ ತೆರಳುವ ಮೊದಲು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುವ ಈ ಆಚರಣೆಯು ಭಾರತೀಯ ತಂಡಕ್ಕೆ ಸ್ಮರಣೀಯವಾಗಲಿದೆ.

ಕೇವಲ ಒಂದು ತಿಂಗಳ ಹಿಂದೆ, ಭಾರತವು ಟಿ 20 ವಿಶ್ವಕಪ್​​ನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಿತು. ಜೂನ್ 5 ರಂದು, ಅವರು ತಮ್ಮ ಮೊದಲ ಪಂದ್ಯದಲ್ಲಿ ಐರ್ಲೆಂಡ್ ಅನ್ನು ಸೋಲಿಸಿದ್ದರು ಫೈನಲ್​​ನಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸಿತು, ಭಾರತವು ಎರಡು ಬಾರಿ ಟಿ 20 ವಿಶ್ವಕಪ್ ಗೆದ್ದ ಏಷ್ಯಾದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಒಟ್ಟಾರೆಯಾಗಿ, ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಂತರ ಪಂದ್ಯಾವಳಿಯನ್ನು ಒಂದಕ್ಕಿಂತ ಹೆಚ್ಚು ಬಾರಿ ಗೆದ್ದ ಮೂರನೇ ತಂಡವಾಯಿತು.

Continue Reading

ಪ್ರಮುಖ ಸುದ್ದಿ

Team India : ಅಪರೂಪದಲ್ಲಿ ಅಪರೂಪ; ಮುಂಬೈ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾದ ವಿಮಾನಕ್ಕೆ ಸೆಲ್ಯೂಟ್

Team India: ತಂಡವು ವಿಮಾನ ನಿಲ್ದಾಣಕ್ಕೆ ಬಂದಾಗ ವಿಶ್ವಕಪ್ ವಿಜೇತರನ್ನು ಸ್ವಾಗತಿಸಲು ನೂರಾರು ಅಭಿಮಾನಿಗಳು ಮಳೆಯನ್ನು ಲೆಕ್ಕಿಸದೆ ವಿಮಾನ ನಿಲ್ದಾಣದ ಹೊರಗೆ ಸಾಲುಗಟ್ಟಿ ನಿಂತಿದ್ದರು. ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಲು ಮುಂಬೈಗೆ ತೆರಳುವ ಮೊದಲು ಭಾರತ ತಂಡವು ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯ ನಿವಾಸದಲ್ಲಿ ಸಮಯ ಕಳೆಯಿತು.

VISTARANEWS.COM


on

Team India
Koo

ಮುಂಬಯಿ: ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ (T20 World Cup) ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾದ (Team India) ವಿಜಯೋತ್ಸವ ಮುಗಿಲು ಮುಟ್ಟುತ್ತಿದೆ. ಗುರುವಾರ ಬೆಳಗ್ಗೆ ಡೆಲ್ಲಿಗೆ ಬಂದ ಅವರು ಪ್ರಧಾನಿ ಮೋದಿಯವರ ಆತಿಥ್ಯ ಸ್ವೀಕರಿಸಿದ್ದಾರೆ. ಬಳಿಕ ಆಟಗಾರರು ಮುಂಬಯಿಗೆ ಬಂದರು. ವಿಶೇಷ ವಿಮಾನದಲ್ಲಿ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದ ಅವರಿಗೆ ಇನ್ನಷ್ಟು ದೊಡ್ಡ ಗೌರವ ದೊರಕಿತು. ವಿಮಾನ ನಿಲ್ದಾಣದಲ್ಲಿ ಅವರ ವಿಮಾನಕ್ಕೆ ವಾಟರ್​ಜೆಟ್​ ಸೆಲ್ಯೂಟ್ ಹೊಡೆಯಲಾಯಿತು. ಅದೇ ರೀತಿ ಅವರ ವಿಮಾನವನ್ನು ಭಾರತದ ಧ್ವಜವನ್ನು ಹೊಂದಿರುವ ಜೀಪ್​ಗಳ ಮೂಲಕ ಪಾರ್ಕಿಂಗ್​ ಬೇ ತನಕ ಕರೆದುಕೊಂಡು ಬರಲಾಯಿತು. ಇಂಥ ಗೌರವಗಳು ಸಿಗುವುದು ಅಪರೂಪಕ್ಕೆ ಅಪರೂಪ ಎಂಬುದು ವಿಶೇಷ. ಇಂಥ ವಿಶೇಷ ಗೌರವವನ್ನು ಅವರು ಪಡೆದುಕೊಂಡರು.

ತಂಡವು ವಿಮಾನ ನಿಲ್ದಾಣಕ್ಕೆ ಬಂದಾಗ ವಿಶ್ವಕಪ್ ವಿಜೇತರನ್ನು ಸ್ವಾಗತಿಸಲು ನೂರಾರು ಅಭಿಮಾನಿಗಳು ಮಳೆಯನ್ನು ಲೆಕ್ಕಿಸದೆ ವಿಮಾನ ನಿಲ್ದಾಣದ ಹೊರಗೆ ಸಾಲುಗಟ್ಟಿ ನಿಂತಿದ್ದರು. ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಲು ಮುಂಬೈಗೆ ತೆರಳುವ ಮೊದಲು ಭಾರತ ತಂಡವು ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯ ನಿವಾಸದಲ್ಲಿ ಸಮಯ ಕಳೆಯಿತು.

ಬಳಿಕ ವಿಸ್ತಾರಾ ಏರ್​ಲೈನ್ಸ್​ ವಿಮಾನ ಯಾನ ಸಂಸ್ಥೆಯು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಗೌರವ ಸಲ್ಲಿಸಿದೆ. ಭಾರತೀಯ ತಂಡಕ್ಕೆ ನಿಯೋಜಿಸಲಾದ ವಿಮಾನವು ‘ಯುಕೆ 1845’ ಕೋಡ್​ ಹೊಂದಿತ್ತು. ಕೋಡ್ ರೋಹಿತ್ ಮತ್ತು ಕೊಹ್ಲಿಯ ಜೆರ್ಸಿ ಸಂಖ್ಯೆಗಳನ್ನು ಪ್ರತಿನಿಧಿಸುತ್ತದೆ. ವಿಶ್ವಕಪ್ ಫೈನಲ್ ಪಂದ್ಯದ ನಂತರ ರೋಹಿತ್ ಮತ್ತು ಕೊಹ್ಲಿ ಇಬ್ಬರೂ ಟಿ 20 ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದರು.

ಇದನ್ನೂ ಓದಿ: Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

ಮುಂಬೈನಲ್ಲಿ ವಿಸ್ತಾರಾ ವಿಮಾನದಿಂದ ಭಾರತೀಯ ತಂಡವು ಹೊರಬರುವ ಮೊದಲೇ, ವಿಮಾನಯಾನ ಸಂಸ್ಥೆ ಮತ್ತೊಂದು ವಿಶೇಷತೆ ತೋರಿತು/ ವಿಮಾನವು ವಿಮಾನ ನಿಲ್ದಾಣದಲ್ಲಿ ಇಳಿದ ಕೂಡಲೇ, ಭಾರತೀಯ ತಂಡಕ್ಕೆ ಅದ್ಭುತ ವಾಟರ್ ಸೆಲ್ಯೂಟ್ ನೀಡಲಾಯಿತು. ಈ ವಿಶೇಷ ಕ್ಷಣದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಟೀಮ್ ಇಂಡಿಯಾ ಮರೀನ್ ಡ್ರೈವ್​ನಿಂದ ವಾಂಖೆಡೆ ಕ್ರೀಡಾಂಗಣಕ್ಕೆ ಓಪನ್-ಟಾಪ್ ಬಸ್​ನಲ್ಲಿ ವಿಜಯದ ಮೆರವಣಿಗೆ ನಡೆಸಿತು. ಭಾರತ ತಂಡದ ಆಗಮನಕ್ಕೂ ಮೊದಲೇ ಸಾವಿರಾರು ಅಭಿಮಾನಿಗಳು ಬೀದಿಗಿಳಿದಿದ್ದರು. ವಾಂಖೆಡೆ ಸ್ಟೇಡಿಯಂ ಕೂಡ ಸಂಪೂರ್ಣ ಭರ್ತಿಯಾಗಿದೆ. ಮೆರವಣಿಗೆಯ ನಂತರ, ಬಿಸಿಸಿಐ ಕ್ರೀಡಾಂಗಣದಲ್ಲಿ ಭಾರತೀಯ ತಂಡವನ್ನು ಸನ್ಮಾನಿಸಲಿದೆ.

ಟಿ20 ವಿಶ್ವಕಪ್​​ನಲ್ಲಿ ಭಾರತ ತಂಡದ ಕನಸಿನ ಓಟ

2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಅವರು ಸ್ಪರ್ಧೆಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲಲಿಲ್ಲ. ಗುಂಪು ಹಂತದಲ್ಲಿ ಭಾರತವು ಐರ್ಲೆಂಡ್, ಪಾಕಿಸ್ತಾನ ಮತ್ತು ಯುಎಸ್ಎಗಳನ್ನು ಸೋಲಿಸಿದರೆ, ಕೆನಡಾ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.

ಸೂಪರ್ 8ರರಲ್ಲಿ ಭಾರತ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಆಸ್ಟ್ರೇಲಿಯಾವನ್ನು ಸೋಲಿಸಿತು. ಬಾರ್ಬಡೋಸ್​​ನ ಲ್ಲಿ ನಡೆದ ಸೆಮಿ ಫೈನಲ್​ನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ 68 ರನ್​ಗಳ ಜಯ ಸಾಧಿಸಿದರೆ, ಬಾರ್ಬಡೋಸ್​ನಲ್ಲಿ ನಡೆದ ಫೈನಲ್​​ನಲ್ಲಿ ಮೆನ್ ಇನ್ ಬ್ಲೂ ದಕ್ಷಿಣ ಆಫ್ರಿಕಾವನ್ನು 7 ರನ್ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಐಸಿಸಿ ಟ್ರೋಫಿ ಮತ್ತು ಟಿ 20 ವಿಶ್ವಕಪ್​ಗೆ ಮರಳಿತು.

Continue Reading

ಪ್ರಮುಖ ಸುದ್ದಿ

Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

Hardik Pandya : ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​​ನಿಂd ಟೀಮ್ ಇಂಡಿಯಾ ಗುರುವಾರ ಬೆಳಿಗ್ಗೆ ನವದೆಹಲಿಗೆ ಬಂದಿಳಿದಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ನಂತರ, ಭಾರತೀಯ ತಂಡವು ನಾರಿಮನ್ ಪಾಯಿಂಟ್​ನಿಂದ ತೆರೆದ ಬಸ್​​ನಲ್ಲಿ ಮೆರವಣಿಗೆ ಮಾಡುವ ಮೂಲಕ ವಾಂಖೆಡೆ ಕ್ರೀಡಾಂಗಣಕ್ಕೆ ತೆರಳಿತು. ಈ ವೇಳೆ ಅಭಿಮಾನಿಗಳು ಭಾರತದ ಪ್ರಸಿದ್ಧ 2007 ಟಿ 20 ವಿಶ್ವಕಪ್ ಗೆಲುವಿನ ನೆನಪುಗಳನ್ನು ಮರುಸೃಷ್ಟಿಸಿದರು.

VISTARANEWS.COM


on

Hardik Pandya
Koo

ಮುಂಬಯಿ: ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ ನಡೆದ ವಿಶ್ವ ಕಪ್ ವಿಜೇತ ಭಾರತ ತಂಡಕ್ಕೆ ವಿಶೇಷ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಭಾರತ ತಂಡದ ಆಟಗಾರರಿಗೆ ಅಭಿಮಾನಿಗಳು ಜೈಕಾರ ಕೂಗಿದರು. ಈ ವೇಳೆ ವಿಶೇಷ ಅನಿಸಿದ್ದು ಹಾರ್ದಿಕ್ ಪಾಂಡ್ಯ. (Hardik Pandya) ಯಾಕೆಂದರೆ ಇದೇ ಸ್ಟೇಡಿಯಮ್​ನಲ್ಲಿ ಅವರು ಐಪಿಎಲ್​ ವೇಳೆ ಪ್ರೇಕ್ಷಕರಿಂದ ಲೇವಡಿಗೆ ಒಳಗಾಗಿದ್ದರು. ಅಲ್ಲೇ ಅವಮಾನದಿಂದ ಕುಸಿದಿದ್ದರು. ಅವರಿಂದಲೇ ಈಗ ಹಾರ್ದಿಕ್ ಜೈಕಾರ ಹಾಕಿಸಿಕೊಂಡು ಸಮಾಧಾನ ಮಾಡಿಕೊಂಡಿದ್ದಾರೆ.

ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​​ನಿಂd ಟೀಮ್ ಇಂಡಿಯಾ ಗುರುವಾರ ಬೆಳಿಗ್ಗೆ ನವದೆಹಲಿಗೆ ಬಂದಿಳಿದಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ನಂತರ, ಭಾರತೀಯ ತಂಡವು ನಾರಿಮನ್ ಪಾಯಿಂಟ್​ನಿಂದ ತೆರೆದ ಬಸ್​​ನಲ್ಲಿ ಮೆರವಣಿಗೆ ಮಾಡುವ ಮೂಲಕ ವಾಂಖೆಡೆ ಕ್ರೀಡಾಂಗಣಕ್ಕೆ ತೆರಳಿತು. ಈ ವೇಳೆ ಅಭಿಮಾನಿಗಳು ಭಾರತದ ಪ್ರಸಿದ್ಧ 2007 ಟಿ 20 ವಿಶ್ವಕಪ್ ಗೆಲುವಿನ ನೆನಪುಗಳನ್ನು ಮರುಸೃಷ್ಟಿಸಿದರು.

ಟಿ 20 ವಿಶ್ವಕಪ್​ನಲ್ಲಿ ಐರ್ಲೆಂಡ್ ವಿರುದ್ಧ ಭಾರತದ ಮೊದಲ ಪಂದ್ಯದೊಂದಿಗೆ ಪ್ರಾರಂಭವಾದ ಅಭಿಯಾನ ಮುಂಬೈನಲ್ಲಿ ತೆರೆದ ಬಸ್​ನಲ್ಲಿ ನಡೆದ ಮೆರವಣಿಗೆಯೊಂದಿಗೆ ಕೊನೆಗೊಂಡಿತು. ಆಟಗಾರರು ವಾಂಖೆಡೆ ಕ್ರೀಡಾಂಗಣ ತಲುಪುವ ಮೊದಲು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ತಮ್ಮ ಹೀರೋಗಳನ್ನು ಸ್ವಾಗತಿಸಿದರು.

ಈ ಮಧ್ಯೆ ವಾಂಖೆಡೆ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳು ಹಾರ್ದಿಕ್ ಪಾಂಡ್ಯ ಹೆಸರನ್ನು ಕೂಗಿದರು. ಪಾಂಡ್ಯ ತಮ್ಮ ಅಂತಿಮ ಓವರ್​​ನಲ್ಲಿ 16 ರನ್ ಗಳನ್ನು ಕಾಪಾಡಿಕೊಂಡು ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು. ಅವರು ಡೇವಿಡ್ ಮಿಲ್ಲರ್ ಅವರ ಪ್ರಮುಖ ವಿಕೆಟ್ ಪಡೆದಿದ್ದರು.

ಇದನ್ನೂ ಓದಿ: Narendra Modi : ಭಾರತ ತಂಡಕ್ಕೆ ಆತಿಥ್ಯ ನೀಡಿದ ಬಳಿಕ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ನರೇಂದ್ರ ಮೋದಿ

ಕೇವಲ ಎರಡು ತಿಂಗಳ ಹಿಂದೆ ಮುಂಬೈ ಇಂಡಿಯನ್ಸ್ ಪರ ಪಾಂಡ್ಯ ಅವರ ನೀರಸ ನಾಯಕತ್ವ ಮತ್ತು ಒಟ್ಟಾರೆ ಪ್ರದರ್ಶನಕ್ಕಾಗಿ ದೂಷಣೆಗೆ ಒಳಗಾಗಿದ್ದರು. ಹೀಗಾಗಿ ಭಾರತದ ಟಿ 20 ವಿಶ್ವಕಪ್ ಗೆಲುವಿನ ನಂತರ ಪಾಂಡ್ಯ ಅವರ ಜೀವನವು ಅನೇಕ ರೀತಿಯಲ್ಲಿ ಬದಲಾವಣೆ ಕಂಡಿತು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಈಗಾಗಲೇ ಟಿ 20 ವಿಶ್ವಕಪ್ ಗೆಲುವಿನ ನಂತರ ಟಿ 20 ಐ ನಿವೃತ್ತಿಯನ್ನು ಘೋಷಿಸಿದ್ದಾರೆ. ಅವರು ಟೆಸ್ಟ್ ಮತ್ತು ಏಕದಿನ ಪಂದ್ಯಗಳನ್ನು ಆಡುವುದನ್ನು ಮುಂದುವರಿಸಲಿದ್ದಾರೆ. ಕೊಹ್ಲಿ ತಮ್ಮ ಕೊನೆಯ ಟಿ 20 ಐ ಇನ್ನಿಂಗ್ಸ್ ನಲ್ಲಿ 76 ರನ್ ಗಳಿಸಿದ್ದರು.

ಕಠಿಣ ದಿನಗಳನ್ನು ನೆನಪಿಸಿಕೊಂಡ ಹಾರ್ದಿಕ್ ಪಾಂಡ್ಯ

ಸ್ಮರಣೀಯ ಗೆಲುವಿನ ನಂತರ ಎಲ್ಲಾ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಕಣ್ಣೀರು ಹಾಕಿದರು. 11 ವರ್ಷಗಳ ಬಳಿಕ ಐಸಿಸಿ ಟ್ರೋಫಿಯ ಬರ ನೀಗಿಸಿದರು. 2011 ರ ಏಕದಿನ ವಿಶ್ವಕಪ್ ಗೆಲುವಿನ ನಂತರ ಭಾರತದ ಮೊದಲ ಪ್ರಮುಖ ಐಸಿಸಿ ಪ್ರಶಸ್ತಿಯಾಗಿದೆ.

“ಇದು ತುಂಬಾ ಭಾವನಾತ್ಮಕ, ನಾವು ತುಂಬಾ ಕಷ್ಟಪಟ್ಟು ಕೆಲಸ ಮಾಡುತ್ತಿದ್ದೇವೆ. ಆದರೆ ಏನೂ ಕೆಲಸ ಮಾಡುತ್ತಿರಲಿಲ್ಲ. ಇಂದು ಇಡೀ ರಾಷ್ಟ್ರವು ಬಯಸಿದ್ದನ್ನು ನಾವು ಪೂರೈಸಿದ ದಿನ. ನನಗೆ ಹೆಚ್ಚು ವಿಶೇಷವಾಗಿದೆ, ನನ್ನ ಕೊನೆಯ 6 ತಿಂಗಳುಗಳು ಕಷ್ಟಕರವಾಗಿದ್ದವು. ನನಗೆ ತುಂಬಾ ಅನ್ಯಾಯವಾಗಿದೆ. ನಾನು ಕಷ್ಟಪಟ್ಟು ಕೆಲಸ ಮಾಡಿ ಸಾಧಿಸಿದೆ ಎಂದು ಹೇಳಿಕೊಂಡಿದ್ದಾರೆ.

Continue Reading

ಪ್ರಮುಖ ಸುದ್ದಿ

Narendra Modi : ಭಾರತ ತಂಡಕ್ಕೆ ಆತಿಥ್ಯ ನೀಡಿದ ಬಳಿಕ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ನರೇಂದ್ರ ಮೋದಿ

Narendra Modi: ಜೂನ್ 29 ರಂದು ಬಾರ್ಬಡೋಸ್​​ನಲ್ಲಿ ನಡೆದ ಟಿ 20 ವಿಶ್ವಕಪ್​ನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಮೆನ್ ಇನ್ ಬ್ಲೂ ತಮ್ಮ 11 ವರ್ಷಗಳ ಟ್ರೋಫಿ ಬರವನ್ನು ಕೊನೆಗೊಳಿಸಿತು. ರೋಚಕ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್ ಗಳ ಗೆಲುವು ಸಾಧಿಸಿತು.

VISTARANEWS.COM


on

Narendra modi
Koo

ಬೆಂಗಳೂರು ; ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸಕ್ಕೆ ಕರೆಸಿ ಆತಿಥ್ಯ ನೀಡಿದ್ದಾರೆ. ಭಾರತಕ್ಕೆ ಗುರುವಾರ ಬೆಳಗ್ಗೆ ಮರಳಿದ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಕ್ರಿಕೆಟ್​ ಗಣ್ಯರಿಗೆ ಆತಿಥ್ಯ ನೀಡಿದ ನಂತರ ನರೇಂದ್ರ ಮೋದಿ ತಮ್ಮ ಅಧಿಕೃತ ಹ್ಯಾಂಡಲ್​​ನಲ್ಲಿ ಈ ಬಗ್ಗೆ ಅಧಿಕೃತ ಪ್ರಕಟಣೆಗಳನ್ನು ಹ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಜೂನ್ 29 ರಂದು ಬಾರ್ಬಡೋಸ್​​ನಲ್ಲಿ ನಡೆದ ಟಿ 20 ವಿಶ್ವಕಪ್​ನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಮೆನ್ ಇನ್ ಬ್ಲೂ ತಮ್ಮ 11 ವರ್ಷಗಳ ವಿಶ್ವಕಪ್​ ಟ್ರೋಫಿ ಬರ ಕೊನೆಗೊಳಿಸಿತು. ರೋಚಕ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್ ಗಳ ಗೆಲುವು ಸಾಧಿಸಿತು. ಇದು ಭಾರತ ತಂಡದ ಎರಡನೇ ಟಿ 20 ವಿಶ್ವಕಪ್ ಟ್ರೋಫಿಯನ್ನು ಗುರುತಿಸಿತು.

ನರೇಂದ್ರ ಮೋದಿ ಬಣ್ಣನೆ

ಭಾರತ ತಂಡವು ಗುರುವಾರ ಸ್ವದೇಶಕ್ಕೆ ಮರಳಿತು ಮತ್ತು ಜುಲೈ 4 ರ ಗುರುವಾರ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ಮೋದಿ ನಿವಾಸಕ್ಕೆ ಭೇಟಿ ನೀಡಿತು. ನಾಯಕ ರೋಹಿತ್ ಶರ್ಮಾ, ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ ಮತ್ತು ತಂಡದ ಇತರ ಸದಸ್ಯರೊಂದಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಉಪಾಹಾರ ಮಾಡಿ ಮೋದಿ ಸಂವಾದ ನಡೆಸಿದರು.

ತಂಡಕ್ಕೆ ನರೇಂದ್ರ ಮೋದಿ ಒಂದು ಗಂಟೆ ಕಾಲ ಆತಿಥ್ಯ ನೀಡಿದರು. ನಂತರ, ಮೋದಿ ಫೋಟೋಗಳನ್ನು ಎಕ್ಸ್​ನಲ್ಲಿ ಪೋಟೋಗಳನ್ನು ಹಂಚಿಕೊಂಡರು. ನಮ್ಮ ಚಾಂಪಿಯನ್ ಗಳೊಂದಿಗೆ ಅತ್ಯುತ್ತಮ ಭೇಡಿ. ವಿಶ್ವಕಪ್ ವಿಜೇತ ತಂಡಕ್ಕೆ ಆತಿಥ್ಯ ವಹಿಸಿದ್ದೇನೆ ಮತ್ತು ಪಂದ್ಯಾವಳಿಯಾದ್ಯಂತ ಅವರ ಅನುಭವಗಳ ಬಗ್ಗೆ ಸಂಭಾಷಣೆ ನಡೆಸಿದ್ದೇನೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ZIM vs IND : ಭಾರತ ವಿರುದ್ಧ ಸರಣಿಗೂ ಮುನ್ನ ಜಿಂಬಾಬ್ವೆ ಬೌಲಿಂಗ್ ಕೋಚ್ ಆಗಿ ಚಾರ್ಲ್ ಲ್ಯಾಂಗೆವೆಲ್ಟ್ ನೇಮಕ

ಪ್ರಧಾನಿ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದ ನಂತರ, ಭಾರತೀಯ ಆಟಗಾರರು ಮುಂಬೈಗೆ ತೆರಳಿದರು. ಅಲ್ಲಿ ಬಿಸಿಸಿಐ ಮರೀನ್ ಡ್ರೈವ್​​ನಿಂದ ವಾಂಖೆಡೆ ಕ್ರೀಡಾಂಗಣ ತನಕ ತೆರೆದ ಬಸ್​ನಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಂದ ಭಾರತ ತಂಡ 125 ಕೋಟಿ ರೂ.ಗಳ ಬಹುಮಾನ ಸ್ವೀಕರಿಸಲಿದೆ.

ಹೃತ್ಪೂರ್ವಕ ಕೃತಜ್ಞತೆ: ಬಿಸಿಸಿಐ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ಆತಿಥ್ಯ ನೀಡಿದ್ದಕ್ಕೆ ಬಿಸಿಸಿಐ ಕೃತಜ್ಞತೆ ಸಲ್ಲಿಸಿದೆ. ಅವರ ಸ್ಪೂರ್ತಿದಾಯಕ ಮಾತುಗಳು ಮತ್ತು ಅಚಲ ಬೆಂಬಲಕ್ಕಾಗಿ ಧನ್ಯವಾದ ಎಂದು ಹೇಳಿದ್ದಾರೆ. ಸಭೆಯ ನಂತರ ಆಟಗಾರರು ಪ್ರಧಾನಿಗೆ ಜರ್ಸಿಯನ್ನು ಉಡುಗೊರೆಯಾಗಿ ನೀಡಿದರು.

ವಿಜಯಶಾಲಿ ಭಾರತೀಯ ಕ್ರಿಕೆಟ್ ತಂಡವು ಇಂದು ಆಗಮಿಸಿದ ಭಾರತದ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿತು. ಬೆರಿಲ್ ಚಂಡಮಾರುತದಿಂದಾಗಿ ಭಾರತೀಯ ಕ್ರಿಕೆಟ್ ತಂಡವು ಸಹಾಯಕ ಸಿಬ್ಬಂದಿ, ಕುಟುಂಬಗಳು ಮತ್ತು ಮಾಧ್ಯಮ ಸಿಬ್ಬಂದಿಯೊಂದಿಗೆ ಬಾರ್ಬಡೋಸ್​​ನಲ್ಲಿ ಕಠಿಣ ಪರಿಸ್ಥಿತಿ ಎದುರಿಸಿತು. ಚಂಡಮಾರುತದಿಂದಾಗಿ ಬ್ರಿಡ್ಜ್ ಟೌನ್ ನಲ್ಲಿರುವ ಗ್ರಾಂಟ್ಲಿ ಆಡಮ್ಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೂರು ದಿನಗಳ ಕಾಲ ಮುಚ್ಚಲಾಗಿತ್ತು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿ ಜಯ್ ಶಾ ಅವರು ಬಾರ್ಬಡೋಸ್​​ನಿಂದ ಭಾರತಕ್ಕೆ ವಿಮಾನದಲ್ಲಿ ಪ್ರಯಾಣಿಸಲು ವ್ಯವಸ್ಥೆ ಮಾಡಿದರು. ತಂಡವು ಐಟಿಸಿ ಮೌರ್ಯ ಹೋಟೆಲ್​ಗೆ ತೆರಳಿತು. ಅಲ್ಲಿ ಅವರು ನರೇಂದ್ರ ಮೋದಿಯವರನ್ನು ಭೇಟಿಯಾಗುವ ಮೊದಲು ತಂಗಿದ್ದರು. ಹೋಟೆಲ್​ನಲ್ಲಿ ಅವರು ಟಿ 20 ವಿಶ್ವಕಪ್ ಟ್ರೋಫಿಯನ್ನು ಒಳಗೊಂಡ ವಿಶೇಷ ಕೇಕ್​ನೊಂದಿಗೆ ತಮ್ಮ ವಿಜಯೋತ್ಸವ ಆಚರಿಸಿದರು.

Continue Reading
Advertisement
Mukesh Ambani
ದೇಶ6 mins ago

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

India's open-bus parade
ಪ್ರಮುಖ ಸುದ್ದಿ10 mins ago

India’s open-bus parade : ಭಾರತ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಭದ್ರತಾ ವೈಫಲ್ಯ; ಬಸ್​​ನಲ್ಲಿದ್ದ ಆಟಗಾರರು ಜಸ್ಟ್​ ಮಿಸ್​​

Team India
ಪ್ರಮುಖ ಸುದ್ದಿ56 mins ago

Team India : ಅಪರೂಪದಲ್ಲಿ ಅಪರೂಪ; ಮುಂಬೈ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾದ ವಿಮಾನಕ್ಕೆ ಸೆಲ್ಯೂಟ್

BS Yediyurappa
ಕರ್ನಾಟಕ58 mins ago

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

Hatras Stampede
ದೇಶ59 mins ago

Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

PF Interest
ದೇಶ1 hour ago

PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

Hardik Pandya
ಪ್ರಮುಖ ಸುದ್ದಿ1 hour ago

Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

Heavy rain in Uttara Kannada district district NDRF team for rescue says DC Gangubai Manakar
ಉತ್ತರ ಕನ್ನಡ1 hour ago

Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

Central Govt approves quadrilateral road in Shira at a cost of Rs 1000 rs crore says TB Jayachandra
ತುಮಕೂರು2 hours ago

Shira News: ಶಿರಾದಲ್ಲಿ 1,000 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಗೆ ಕೇಂದ್ರದಿಂದ ಅನುಮೋದನೆ: ಟಿ.ಬಿ ಜಯಚಂದ್ರ

Viral Video
Latest2 hours ago

Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ4 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ5 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ6 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ8 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ8 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ10 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ11 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌