Site icon Vistara News

Kantara Movie | ಎಬಿಡಿ ವಿಲಿಯರ್ಸ್‌ ಭೇಟಿ ಮಾಡಿದ ಕಾಂತಾರದ ಹೀರೊ ರಿಷಬ್‌ ಶೆಟ್ಟಿ

ಬೆಂಗಳೂರು : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ಆಟಗಾರ ಹಾಗೂ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಮಿಸ್ಟರ್‌ ೩೬೦ ಖ್ಯಾತಿಯ ಎಬಿ ಡಿವಿಲಿಯರ್ಸ್‌ ಅವರು ಐಪಿಎಲ್‌ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬಂದಿದ್ದಾರೆ. ಅವರನ್ನು ಸ್ಯಾಂಡಲ್‌ವುಡ್‌ ಬ್ಲಾಕ್‌ಬಸ್ಟರ್‌ ಸಿನಿಮಾ ಕಾಂತಾರದ ಹೀರೊ ರಿಷಬ್‌ ಶೆಟ್ಟಿ ಗುರುವಾರ ಭೇಟಿಯಾಗಿದ್ದಾರೆ. ಸಿನಿಮಾದ ಹೀರೊ ಹಾಗೂ ಕ್ರಿಕೆಟ್ ಹೀರೊ ಜತೆಯಾಗಿರುವ ವಿಡಿಯೊವನ್ನು ಹೊಂಬಾಳೆ ಫಿಲ್ಸ್ಮ್‌ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಎಬಿಡಿ ವಿಲಿಯರ್ಸ್ ಅವರು ಐಪಿಎಲ್‌ ೧೬ನೇ ಆವೃತ್ತಿಯ ಐಪಿಎಲ್‌ ವಿಚಾರವಾಗಿ ಮಾತನಾಡಲು ಬೆಂಗಳೂರಿಗೆ ಬಂದಿದ್ದಾರೆ. ಅವರು ಬೆಂಗಳೂರಿಗೆ ಬಂದಿರುವುದು ಆರ್‌ಸಿಬಿ ಅಭಿಮಾನಿಗಳಿಗೆ ಖುಷಿಯ ವಿಚಾರವಾಗಿದೆ. ಎಬಿಡಿಯ ಆಗಮನವನ್ನು ಸಂಭ್ರಮಿಸುತ್ತಿರುವ ನಡುವೆಯೇ ರಿಷಭ್‌ ಶೆಟ್ಟಿ ಅವರನ್ನು ಭೇಟಿಯಾಗಿರುವುದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ರಿಷಭ್‌ ಶೆಟ್ಟಿ ಹಾಗೂ ಎಬಿಡಿ ವಿಲಿಯರ್ಸ್ ಪರಸ್ಪರ ಹೆಗಲ ಮೇಲೆ ಕೈಹಾಕಿಕೊಂಡು ಕಾಂತಾರ ಎಂದ ಹೇಳುವ ದೃಶ್ಯಗಳನ್ನು ಟ್ವಿಟರ್‌ನಲ್ಲಿ ಪ್ರಕಟಿಸಲಾಗಿದೆ.

“ಬೆಂಗಳೂರಿಗೆ ಮತ್ತೆ ಬಂದಿರುವುದಕ್ಕೆ ಬಹಳ ಸಂತಸವಾಗುತ್ತಿದೆ. ಹಲವು ವರ್ಷಗಳ ಬಳಿಕ ಇಲ್ಲಿನ ಐಟಿಸಿ ಗಾರ್ಡೇನಿಯಾ ಹೋಟೆಲ್‌ಗೆ ಬಂದು ಉಳಿದುಕೊಂಡಿದ್ದೇನೆ. ಇಲ್ಲಿ ಹಲವು ಅದ್ಭುತ ನೆನಪುಗಳಿವೆ” ಎಂದು ಟ್ವಿಟರ್​ನಲ್ಲಿ ವಿಡಿಯೊ ಮೂಲಕ ಎಬಿಡಿ ತಿಳಿಸಿದ್ದಾರೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ಕೂಡ ಎಬಿಡಿ ಬೆಂಗಳೂರಿಗೆ ಬಂದಿರುವ ಸುದ್ದಿಯನ್ನು ತನ್ನ ಸಾಮಾಜಿಕ ಜಾಲತಾಣವಾದ ಟ್ವಿಟರ್​, ಇನ್​ಸ್ಟಾಗ್ರಾಂ ಮೂಲಕ ಹಂಚಿಕೊಂಡಿದೆ. ಅದರಂತೆ ಎಬಿ ಡಿ ವಿಲಿಯರ್ಸ್‌ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಬಂದು ಮಾತನಾಡಿರುವ ವಿಡಿಯೊವನ್ನು ಟ್ವಿಟರ್​ ಮೂಲಕ ಹಂಚಿಕೊಂಡಿದೆ.ರ

Exit mobile version