KCC 4: ಕೆಸಿಸಿ ಸೀಸನ್ 4ರ ಆಟಗಾರರ ಹರಾಜು ಬಹುತೇಕ ಮುಕ್ತಾಯ - Vistara News

ಕ್ರೀಡೆ

KCC 4: ಕೆಸಿಸಿ ಸೀಸನ್ 4ರ ಆಟಗಾರರ ಹರಾಜು ಬಹುತೇಕ ಮುಕ್ತಾಯ

ಸುದೀಪ್, ಶಿವಣ್ಣ, ಗಣೇಶ್, ಧನಂಜಯ್, ದುನಿಯಾ ವಿಜಯ್, ಉಪೇಂದ್ರ ಕೆಸಿಸಿ ಕಪ್‌ ಸೀಸನ್‌ 4ರ (KCC 4- Kannada Chalanachitra Cup) ಹರಾಜು ಆಕ್ಷನ್‌ನಲ್ಲಿ ಭಾಗಿಯಾಗಿದ್ದಾರೆ.

VISTARANEWS.COM


on

KCC Cup 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರರಂಗದ ಗಣ್ಯರ ಕ್ರಿಕೆಟ್‌ ಪಂದ್ಯಾಟ ಸರಣಿ ಕೆಸಿಸಿ ಕಪ್‌ ಸೀಸನ್‌ 4ರ (KCC 4- Kannada Chalanachitra Cup) ಹರಾಜು ಆರಂಭವಾಗಿದೆ. ಹೊಸಕೆರೆಹಳ್ಳಿಯ ನಂದಿಲಿಂಕ್ಸ್ ಗ್ರೌಂಡ್‌ನಲ್ಲಿ ಆಟಗಾರರ ಆಯ್ಕೆ ಪ್ರಕ್ರಿಯೆ ಇಂದು ನಡೆಯುತ್ತಿದೆ.

ಹರಾಜು ಪ್ರಕ್ರಿಯೆಯಲ್ಲಿ ಬಹುತೇಕ ಕಲಾವಿದರು ಭಾಗಿಯಾಗಿದ್ದರು. ಈ ಬಾರಿ ಆರು ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ. ಆರು ತಂಡಗಳಿಗೂ ಸ್ಟಾರ್ ನಟರು ಕ್ಯಾಪ್ಟನ್ ಆಗಿರುತ್ತಾರೆ. ಡಿಸೆಂಬರ್ 23,24, 25ರಂದು ಕೆಸಿಸಿ ಪಂದ್ಯಗಳು ನಡೆಯಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಸಿಸಿ ಸೀಸನ್ 4 ನಡೆಯಲಿದೆ.

ಸುದೀಪ್, ಶಿವಣ್ಣ, ಗಣೇಶ್, ಧನಂಜಯ್, ದುನಿಯಾ ವಿಜಯ್, ಉಪೇಂದ್ರ ಆಕ್ಷನ್‌ನಲ್ಲಿ ಭಾಗಿಯಾಗಿದ್ದಾರೆ. ಸದ್ಯ ದುನಿಯಾ ವಿಜಯ್, ಡಾಲಿ ಧನಂಜಯ್, ಲಹರಿ ವೇಲು, ಮನೋಹರ್ ನಾಯ್ಡು, ಶ್ರೀನಗರ ಕಿಟ್ಟಿ, ರವಿಶಂಕರ್, ಸುದೀಪ್ ಅಳಿಯ ಸಂಜಿತ್ ಸುದೀಪ್ ಸೇರಿದಂತೆ ಹಲವರ ಆಗಮನವಾಗಿದೆ. ಮೊದಲ ಬಾರಿಗೆ ಹಲವು ಕಿರುತೆರೆ ಕಲಾವಿದರು ಕೆಸಿಸಿಯಲ್ಲಿ ಭಾಗಿಯಾಗಲಿದ್ದಾರೆ.

ಈ ಬಾರಿಯ ಕೆಸಿಸಿಯಲ್ಲಿ ಕೆಲವು ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರೂ ಭಾಗಿಗಳಾಗಲಿದ್ದಾರೆ. ಎಸ್ ಭದ್ರಿನಾಥ್, ಸುರೇಶ್ ರೈನಾ, ದಿಲ್ಶಾನ್, ಮುರಳಿ ವಿಜಯ್, ರಾಬಿನ್ ಉತ್ತಪ್ಪ. ಗಿಫ್ಸ್ ಆಡಲಿದ್ದಾರೆ. ಮೊದಲ ಬಾರಿಗೆ ಹಲವು ಕಿರುತೆರೆ ಕಲಾವಿದರು ಕೆಸಿಸಿಯಲ್ಲಿ ಭಾಗಿಯಾಗಲಿದ್ದಾರೆ. ಮೊದಲ ಬಾರಿಗೆ ಕೆಸಿಸಿಯಲ್ಲಿ ತಮಿಳಿನ ವಿಕ್ರಾಂತ್ ಹಾಗೂ ತೆಲುಗಿನ ಪ್ರಿನ್ಸ್ ಭಾಗಿಯಾಗುತ್ತಿದ್ದಾರೆ.

ತಂಡಗಳು ಹಾಗೂ ನಾಯಕರ ಹೆಸರು ಹೀಗಿವೆ:

1) ಒಡೆಯರ್ ಚಾರ್ಜರ್ಸ್. ಕ್ಯಾಪ್ಟನ್ ವಿಕ್ರಾಂತ್, ಸ್ಟಾರ್ ಉಪೇಂದ್ರ

2) ಕದಂಬ ಲಯನ್ಸ್: ಕ್ಯಾಪ್ಟನ್ ರಾಜೀವ್, ಸ್ಟಾರ್ ಡಾಲಿ ಧನಂಜಯ್.

3) ಗಂಗಾ ವಾರಿಯರ್ಸ್: ಕ್ಯಾಪ್ಟನ್ ಪ್ರಿನ್ಸ್. ಸ್ಟಾರ್ ಗಣೇಶ್.

4) ರಾಷ್ಟ್ರಕೂಟ ಪ್ಯಾಂತರ್ಸ್: ಕ್ಯಾಪ್ಟನ್ ಪ್ರದೀಪ್, ಸ್ಟಾರ್ ಶಿವಣ್ಣ.

5) ಹೊಯ್ಸಳ ಈಗಲ್ಸ್: ಕಿಚ್ಚ ಸುದೀಪ್ ಕ್ಯಾಪ್ಟನ್ ಆಂಡ್ ಸ್ಟಾರ್

ಕೆಸಿಸಿಯ ಹಿಂದಿನ ಟೂರ್ನಿಗಳಲ್ಲಿ ವೀರೇಂದ್ರ ಸೆಹ್ವಾಗ್, ಲ್ಯಾನ್ಸ್ ಕ್ಲೂಸೆನರ್, ಹರ್ಷಲ್ ಗಿಬ್ಸ್ , ತಿಲಕರತ್ನೆ ದಿಲ್ಶನ್‌, ಆಡಮ್ ಗಿಲ್‌ಕ್ರಿಸ್ಟ್, ಓವೈಸ್ ಶಾ, ಕ್ರಿಸ್ ಗೇಲ್ ಮುಂತಾದವರು ಆಡಿದ್ದಾರೆ. ಹಿಂದಿನ ಎರಡೂ ಸೀಸನ್‌ಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿವೆ. 

ಇದನ್ನೂ ಓದಿ: KCC Cup 2023: ಡಿಸೆಂಬರ್‌ನಲ್ಲಿ KCC ಕಪ್‌; ಟೂರ್ನಿಗೆ ಬರ್ತಾರಾ ಸಚಿನ್, ಧೋನಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Federation Cup 2024: ಫೆಡರೇಷನ್ ಕಪ್‌ನಲ್ಲಿ(Federation Cup)ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ, ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(Neeraj Chopra) ಕನ್ನಡಿಗ ಡಿಪಿ ಮನು ಅವರಿಂದ ತೀವ್ರ ಪೈಪೋಟಿ ಎದುರಿಸಿ ಕೊನೆಗೂ ಚಿನ್ನದ ಪದಕ ಗೆದ್ದರು

VISTARANEWS.COM


on

Federation Cup 2024
Koo

ಭುವನೇಶ್ವರ: ಮೂರು ವರ್ಷದ ಬಳಿಕ ತವರಿನಲ್ಲಿ ನಡೆದ ಫೆಡರೇಷನ್ ಕಪ್‌ನಲ್ಲಿ(Federation Cup) ಕಣಕ್ಕಿಳಿದ್ದ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ, ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(82.27 ಮೀ.), ಕನ್ನಡಿಗ ಡಿಪಿ ಮನು ಅವರಿಂದ ತೀವ್ರ ಪೈಪೋಟಿ ಎದುರಿಸಿ ಕೊನೆಗೂ ಚಿನ್ನದ ಪದಕ ಗೆದ್ದರು. ಮನು(82.06 ಮೀ) ಬೆಳ್ಳಿ ಪದಕ್ಕೆ ತೃಪ್ತಿಪಟ್ಟರು. ಮತೋರ್ವ ಪದಕ ಭರವಸೆಯ ಕಿಶೋರ್ ಜೆನಾ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಪದಕ ಗೆಲ್ಲುವಲ್ಲಿ ವಿಫಲರಾದರು. ಉತ್ತಮ್ ಪಾಟೀಲ್(78.39 ಮೀ) ಮೂರನೇ ಸ್ಥಾನ ಪಡೆದರು.

ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ (84.14 ಮೀ.) 6ನೇ ಸ್ಥಾನ ಪಡೆದಿದ್ದ ಮನು ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್​ಗೆ ತೀವ್ರ ಪೈಪೋಟಿ ನೀಡಿದರು. ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲಿ 82 ಮೀ. ದೂರ ಜಾವೆಲಿನ್​​ ಎಸೆದರೆ, ಡಿಪಿ ಮನು 82.06 ಮೀ ದೂರಕ್ಕೆ ಜಾವೆಲಿನ್ ಎಸೆದು ಮೊದಲ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡರು. ದ್ವಿತೀಯ ಸುತ್ತಿನಲ್ಲಿ ಮನು 77.23 ದೂರ ಎಸೆದರು. ಆದರೆ ಇವರ ಪ್ರತಿಸ್ಪರ್ಧಿ ನೀರಜ್​ ಈ ಎಸೆತವನ್ನು ಉದ್ದೇಶಪೂರ್ವಕವಾಗಿ ಫೌಲ್ ಮಾಡಿದರು. ಈ ಥ್ರೋ ಅಷ್ಟು ಉತ್ತಮವಾಗಿರದ ಕಾರಣ ನೀರಜ್​ ಈ ತಂತ್ರ ಬಳಸಿದರು.

ಮೂರನೇ ಎಸೆತದಲ್ಲಿ ಮನು 81.43 ಮೀ. ದೂರ ದಾಖಲಿಸಿದರೆ, ಮತ್ತೆ ಎಡವಿದ ನೀರಜ್​ 81.29 ಮೀ ದಾಖಲಿಸಿ ಹಿನ್ನಡೆಯಲ್ಲೇ ಉಳಿದರು. ಆದರೆ, ನಾಲ್ಕನೇ ಪ್ರಯತ್ನದಲ್ಲಿ ಪುಟಿದೆದ್ದ ನೀರಜ್​ 82.27 ಮೀ ದೂರ ಜಾವೆಲಿನ್​ ಎಸೆದು ಅಗ್ರಸ್ಥಾನವನ್ನು ವಶಪಡಿಸಿಕೊಂಡರು. ಮನು ಈ ಸುತ್ತಿನಲ್ಲಿ 81.47 ಮೀ. ಎಸೆದರು. 28 ವರ್ಷದ ಕಿಶೋರ್ ಜೆನಾ ತಾವೆಸೆದ 4 ಎಸೆತಗಳ ಪೈಲಿ ಮೂರರಲ್ಲಿ ಫೌಲ್ ಆಗಿ ಅತ್ಯಂತ ಕಳಪೆ ಪ್ರದರ್ಶನ ತೋರಿದರು. ಕನಿಷ್ಠ ಮೂರನೇ ಸ್ಥಾನ ಪಡೆಯುವಲ್ಲಿಯೂ ವಿಫಲರಾದರು.

ಉತ್ತಮವಾಗಿ ಆಡುತ್ತಿದ್ದ ಮನು 5ನೇ ಮತ್ತು ಅಂತಿಮ 6 ಸುತ್ತಿನ ಎಸೆತವನ್ನು ಫೌಲ್ ಮಾಡಿದರು. ಅಂತಿಮವಾಗಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದರು. ನೀರಜ್​ ಬಹಳ ಕಷ್ಟಪಟ್ಟು ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಚೋಪ್ರಾ ಅವರು ಈ ಟೂರ್ನಿಯಲ್ಲಿ ಕೊನೆಯ ಬಾರಿಗೆ ಸ್ಪರ್ಧಿಸಿದ್ದು ಮಾರ್ಚ್ 17, 2021 ರಲ್ಲಿ. ಈ ವೇಳೆ ಅವರು 87.80 ಮೀ ಎಸೆಯುವ ಮೂಲಕ ಚಿನ್ನ ಗೆದಿದ್ದರು. ಈ ಬಾರಿ 82.27 ಮೀ. ಎಸೆದರು. ಕಳೆದ ಕೆಲವು ಟೂರ್ನಿಗೆ ಹೋಲಿಸಿದರೆ ನೀರಜ್​ ಅವರ ಕಳಪೆ ಪ್ರದರ್ಶನ ಇದಾಗಿದೆ.

ಕಾಶಿನಾಥ ನಾಯ್ಕ್ ತರಬೇತಿ

2020ರಲ್ಲಿ ಡಿ.ಪಿ.ಮನು ಅವರಿಗೆ ಮಹತ್ವದ ತಿರುವು ಸಿಕ್ಕಿತು. ಅವರು ಪುಣೆಯಲ್ಲಿರುವ ಆರ್ಮಿ ಸ್ಪೋರ್ಟ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಹವಾಲ್ದಾರ್‌ ಕೆಲಸಕ್ಕೆ ಸೇರಿದರು. ಇದೇ ವೇಳೆ ಕಾಶಿನಾಥ ನಾಯ್ಕ್​ ಎಂಬ ಜಾವೆಲಿನ್‌ ತರಬೇತುದಾರರ ಪರಿಚಯವೂ ಆಯಿತು. ಕಾಶಿನಾಥ ಅವರ ಬಳಿ ಸತತ ತರಬೇತಿ ಪಡೆದ ಡಿ.ಪಿ. ಮನು, 65 ಮೀಟರ್‌ ದೂರ ಭರ್ಜಿ ಎಸೆತದಿಂದ 80 ಮೀಟರ್‌ ದಾಟುವಂತಾದರು.

ನೀರಜ್​ ಮತ್ತು ಕಿಶೋರ್​ ಈಗಾಗಲೇ ಪ್ಯಾರಿಸ್​ ಒಲಿಂಪಿಕ್ಸ್​ ಟಿಕೆಟ್​ ಪಡೆದಿದ್ದರು. ಮನು ಭಾರತದ ಮೂರನೇ ಸ್ಫರ್ಧಿಯಾಗಿ ಒಲಿಂಪಿಕ್ಸ್​ ಅರ್ಹತೆ ಪಡೆಲು ಅವರಿಗೆ ಈ ಟೂರ್ನಿಯಲ್ಲಿ 85.50 ಮೀ. ಎಸೆತದ ಮಾನದಂಡ ನೀಡಲಾಗಿತ್ತು. ಆದರೆ ಈ ಗುರಿಯನ್ನು ತಲುಪಲು ಅವರಿಂದ ಸಾಧ್ಯವಾಗಲಿಲ್ಲ.

ಮನು ಮಾಡಿದ ಸಾಧನೆಗಳು

  1. 2022ರ ಜೂನ್‌ನಲ್ಲಿ ನಡೆದ ರಾಷ್ಟ್ರೀಯ ಅಂತಾರಾಜ್ಯ ಹಿರಿಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಚಿನ್ನದ ಪದಕ
  2. 2023ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಚಿನ್ನ
  3. 2022ರ ಏಪ್ರಿಲ್‌ನಲ್ಲಿ ಕೇರಳದ ತಿರುವನಂಪುರಂನಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಬಂಗಾರದ ಪದಕ
  4. 2022ರ ಆಗಸ್ಟ್‌ನಲ್ಲಿ ನಡೆದ ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಐದನೇ ಸ್ಥಾನಕ್ಕೆ ತೃಪ್ತಿ
  5. 2023ರ ಜುಲೈನಲ್ಲಿ ಬ್ಯಾಂಕಾಕ್‌ನಲ್ಲಿ ನಡೆದ ಏಷ್ಯನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಬೆಳ್ಳಿ
  6. 2022ರ ಅಕ್ಟೋಬರ್‌ನಲ್ಲಿ ಗುಜರಾತ್‌ನಲ್ಲಿ ನಡೆದ ಇಂಡಿಯನ್‌ ನ್ಯಾಷನಲ್‌ ಗೇಮ್ಸ್‌ನಲ್ಲಿ ಚಿನ್ನ

Continue Reading

ಕ್ರೀಡೆ

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

IPL 2024: ಆರೋಗ್ಯ ಹದಗೆಡಲು ಸ್ಟೇಡಿಯಂನ ಕ್ಯಾಂಟಿನ್​ನಲ್ಲಿ ನೀಡಿದ ಆಹಾರವೇ ಕಾರಣ ಎಂದು ಚೈತನ್ಯ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ

VISTARANEWS.COM


on

IPL 2024
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​ನಲ್ಲಿ(IPL 2024) ಡೆಲ್ಲಿ ಮತ್ತು ಆರ್​ಸಿಬಿ(DC vs RCB) ನಡುವೆ ಮೇ 12ರಂದು ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(M.Chinnaswamy Stadium) ನಡೆದಿದ್ದ ಪಂದ್ಯದ ವೇಳೆ ಪ್ರೇಕ್ಷಕರಿಗೆ ಕಳಪೆ ಆಹಾರ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ(Karnataka State Cricket Association) ಆಡಳಿತ ಮಂಡಳಿ (KSCA) ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೇ 12ರಂದು ಐಪಿಎಲ್ ವೀಕ್ಷಣೆ ಬಂದಿದ್ದ 23 ವರ್ಷದ ಚೈತನ್ಯ ಕತಾರ್ ಏರ್ ವೇಸ್ ಫ್ಯಾನ್ಸ್ ಟರೇಸ್ ಸ್ಟ್ಯಾಂಡಿನ ಕ್ಯಾಂಟಿನ್ ನಿಂದ ಊಟ ಸೇವಿಸಿದ್ದ ನಂತರ ಕೆಲವೇ ನಿಮಿಷಗಳಲ್ಲಿ ಆತನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತಾನು ಕುಳಿತುಕೊಂಡಿದ್ದ ಜಾಗದಲ್ಲಿಯೇ ಚೈತನ್ಯ ಕುಸಿದುಬಿದ್ದಿದ್ದಾನೆ. ತಕ್ಷಣ ಸ್ಟೇಡಿಯಂ ಸಿಬ್ಬಂದಿ ನೆರವಿನಿಂದ ಆತನಿಗೆ ಆ್ಯಂಬುಲೆನ್ಸ್ ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು‌. ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದಾಗ ಚೈತನ್ಯರನ್ನು ಪರೀಕ್ಷಿಸಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

ಈ ಸಂಬಂಧ ತಮ್ಮ ಆರೋಗ್ಯ ಹದಗೆಡಲು ಕ್ಯಾಂಟಿನ್​ನಲ್ಲಿ ನೀಡಿದ ಆಹಾರವೇ ಕಾರಣ ಎಂದು ಚೈತನ್ಯ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದ ವೇಳೆ ಕಳಪೆ ಆಹಾರ ನೀಡುತ್ತಿರುವ ಆರೋಪ ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ. ಹಲವು ಬಾರಿ ಇಲ್ಲಿ ಪಂದ್ಯ ವೀಕ್ಷಣೆಗೆ ಬಂದಿದ್ದ ಪ್ರೇಕ್ಷಕರು ಇಲ್ಲಿನ ಆಹಾರ ವಿತರಣೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಗಂಭೀರ ಆರೋಪ ಮಾಡಿದ್ದರು. ಇನ್ನಾದರೂ ಕೆಎಸ್​ಸಿಎ ಈ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಆಹಾರ ನೀಡುವ ಕೆಲಸವನ್ನು ಮಾಡಬೇಕಿದೆ. ಡೆಲ್ಲಿ ವಿರುದ್ಧದ ಈ ಪಂದ್ಯವನ್ನು ಆರ್​ಸಿಬಿ 47 ರನ್​ ಅಂತರದಿಂದ ಗೆದ್ದು ಬೀಗಿತ್ತು.

ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!


ಬೆಂಗಳೂರಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದ ವೇಳೆಯೂ(bangalore water crisis) ಚಿನ್ನಸ್ವಾಮಿ(m chinnaswamy) ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) 17ನೇ ಆವೃತ್ತಿಯ ಐಪಿಎಲ್(IPL 2024) ಟೂರ್ನಿಯ​ ಪಂದ್ಯಾವಳಿಗಳನ್ನು ನಡೆಸಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. 3 ವಾರಗಳ ಹಿಂದೆ ನೀರಿನ ಬಳಕೆ ಕುರಿತು ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ವರದಿ ಕೇಳಿತ್ತು. ಪಂದ್ಯಗಳಿಗೆ ಬಳಸಿರುವ ನೀರಿನ ಮೂಲ ಹಾಗೂ ಕ್ರೀಡಾಂಗಣದಲ್ಲಿರುವ 400 ಅಡಿ ಆಳದ ನಾಲ್ಕು ಕೊಳವೆ ಬಾವಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಎನ್‌ಜಿಟಿ ಮುಖ್ಯಸ್ಥ ನ್ಯಾ. ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು, ಕ್ರೀಡಾಂಗಣದಲ್ಲಿ ಬಳಕೆಯಾಗುತ್ತಿರುವ ನೀರಿನ ಎಲ್ಲಾ ಮೂಲ, ಕ್ರೀಡಾಂಗಣದಲ್ಲಿರುವ ಬೋರ್‌ವೆಲ್‌, ಒಳಚರಂಡಿ ಸಂಸ್ಕರಣಾ ಘಟಕದ ಬಳಕೆ ಬಗ್ಗೆ 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್​ 13ಕ್ಕೆ ನಿಗದಿಪಡಿಸಿದೆ.

Continue Reading

ಕ್ರೀಡೆ

IND vs AUS Test: ಈ ಬಾರಿಯ ಬಾರ್ಡರ್– ಗಾವಸ್ಕರ್ ಟೆಸ್ಟ್​ ಸರಣಿಯಲ್ಲಿ ಭಾರತೀಯರಿಗೆ ಸಿಗಲಿದೆ ವಿಶೇಷ ಆಸನ ವ್ಯವಸ್ಥೆ

IND vs AUS Test: ಮೆಲ್ಬರ್ನ್, ಸಿಡ್ನಿ ಸೇರಿದಂತೆ 5 ಮೈದಾನಗಳಲ್ಲಿ ನಡೆಯುವ ಇತ್ತಂಡಗಳ ಪಂದ್ಯದ ವೇಳೆ ಭಾರತೀಯ ಕ್ರಿಕೆಟ್​ ಅಭಿಮಾನಿಗಳಿಗಾಗಿಯೇ “ಇಂಡಿಯನ್‌ ಫ್ಯಾನ್‌ ಪಾರ್ಕ್‌’ ಎಂಬ ವಿಶೇಷ ಆಸನ ವ್ಯವಸ್ಥೆಯನ್ನು ಕ್ರಿಕೆಟ್​ ಆಸ್ಟ್ರೇಲಿಯಾ ಮಾಡಿದೆ. ಭಾರತ ತಂಡದ ಅಭಿಮಾನಿಗಳು ಮಾತ್ರ ಇಲ್ಲಿ ತಮ್ಮ ಆಸನವನ್ನು ಕಾದಿರಿಸಬಹುದಾಗಿದೆ.

VISTARANEWS.COM


on

IND vs AUS Test
Koo

ಸಿಡ್ನಿ: ಇದೇ ವರ್ಷಾಂತ್ಯದಲ್ಲಿ ನಡೆಯುವ ಬಹು ನಿರೀಕ್ಷಿತ ಭಾರತ ಮತ್ತು ಆಸ್ಟ್ರೇಲಿಯಾ(IND vs AUS Test) ನಡುವಿನ ಟೆಸ್ಟ್ ಸರಣಿಯ(IND vs AUS Test series 2024-25) ವೇಳಾಪಟ್ಟಿ(IND vs AUS Test series schedule) ಈಗಾಗಲೇ ಬಿಡುಗಡೆಯಾಗಿದೆ. ಈ ಬಾರಿ ಬಾರ್ಡರ್– ಗಾವಸ್ಕರ್ ಟೆಸ್ಟ್(border gavaskar trophy) ಸರಣಿಯಲ್ಲಿ ಐದು ಪಂದ್ಯಗಳು ನಡೆಯಲಿದೆ. 32 ವರ್ಷಗಳ ಬಳಿಕ ಇತ್ತಂಡಗಳ ನಡುವೆ ನಡೆಯುವ 5 ಪಂದ್ಯಗಳ ಟೆಸ್ಟ್​ ಸರಣಿ ಇದಾಗಿದೆ. ಇದೀಗ ಟೆಸ್ಟ್‌ ಸರಣಿ ವೇಳೆ, ಭಾರತೀಯ ಅಭಿಮಾನಿಗಳಿಗಾಗಿ ವಿಶೇಷ ಆಸನ ವ್ಯವಸ್ಥೆ ಮಾಡುವುದಾಗಿ ಆಸ್ಟ್ರೇಲಿಯಾ ಕ್ರಿಕೆಟ್‌ ಮಂಡಳಿ ಹೇಳಿದೆ.

ಮೆಲ್ಬರ್ನ್, ಸಿಡ್ನಿ ಸೇರಿದಂತೆ 5 ಮೈದಾನಗಳಲ್ಲಿ ನಡೆಯುವ ಇತ್ತಂಡಗಳ ಪಂದ್ಯದ ವೇಳೆ ಭಾರತೀಯ ಕ್ರಿಕೆಟ್​ ಅಭಿಮಾನಿಗಳಿಗಾಗಿಯೇ “ಇಂಡಿಯನ್‌ ಫ್ಯಾನ್‌ ಪಾರ್ಕ್‌’ ಎಂಬ ವಿಶೇಷ ಆಸನ ವ್ಯವಸ್ಥೆಯನ್ನು ಕ್ರಿಕೆಟ್​ ಆಸ್ಟ್ರೇಲಿಯಾ ಮಾಡಿದೆ. ಭಾರತ ತಂಡದ ಅಭಿಮಾನಿಗಳು ಮಾತ್ರ ಇಲ್ಲಿ ತಮ್ಮ ಆಸನವನ್ನು ಕಾದಿರಿಸಬಹುದಾಗಿದೆ. ಇದು ಮಾತ್ರವಲ್ಲದೆ ಇತರ ಜಾಗದಲ್ಲೂ ಭಾರತೀಯರಿಗೆ ಟಿಕೆಟ್‌ ಖರೀದಿಸಲು ಅವಕಾಶವಿದೆ. ಆದರೆ, ಇಂಡಿಯನ್‌ ಫ್ಯಾನ್‌ ಪಾರ್ಕ್‌ ಕೇವಲ ಭಾರತೀಯರಿಗೆ ಮಾತ್ರ ಸೀಮಿತವಾಗಿದೆ.

1991-92ರ ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ 5 ಪಂದ್ಯಗಳ ಟೆಸ್ಟ್‌ ಸರಣಿಯನ್ನಾಡಿತ್ತು. ಅಂದು ಆಸ್ಟ್ರೇಲಿಯಾ 4-0 ಅಂತರದ ಗೆಲುವು ಸಾಧಿಸಿತ್ತು. ಇದೀಗ 32 ವರ್ಷಗಳ ಬಳಿಕ ಮತ್ತೆ 5 ಪಂದ್ಯಗಳ ಸರಣಿಯನ್ನಾಡಲಿದೆ. ಈ ಮೂಲಕ ಟೆಸ್ಟ್​ ಕ್ರಿಕೆಟ್​ನ ಮಹತ್ವವನ್ನು ಸಾರುವ ಕೆಲಸ ಉಭಯ ಕ್ರಿಕೆಟ್​ ಮಂಡಳಿ ಮಾಡಲಿದೆ.

ಇದನ್ನೂ ಓದಿ IND vs AUS: ಈ ಬಾರಿಯ ಭಾರತ- ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವಿಶೇಷತೆ ಏನು?

5 ಪಂದ್ಯಗಳ ಈ ಟೆಸ್ಟ್​ ಸರಣಿ ನವೆಂಬರ್ 22ರಿಂದ ಜನವರಿ(2025) 7ರವರೆಗೆ ನಡೆಯಲಿದೆ. ಪರ್ತ್, ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ಈ ಪಂದ್ಯಗಳು ನಡೆಯಲಿದೆ. ಅಡಿಲೇಡ್ ಪಂದ್ಯ ಪಿಂಕ್ ಬಾಲ್ ಟೆಸ್ಟ್ ಆಗಿದೆ.

ಭಾರತವು ಇತ್ತೀಚಿನ ಕೆಲ ವರ್ಷಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ ಟೆಸ್ಟ್‌ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಲೇ ಬಂದಿದೆ. ಕಳೆದ 4 ಸರಣಿಗಳಲ್ಲಿ ಭಾರತವೇ ಗೆದ್ದು ಬಂದಿದೆ. 2016-17ರಲ್ಲಿ 2-1 (ತವರಿನ ಸರಣಿ), 2018-19ರಲ್ಲಿ 2-1 (ಆಸ್ಟ್ರೇಲಿಯದಲ್ಲಿ), 2020- 21ರಲ್ಲಿ 2-1 (ಆಸ್ಟ್ರೇಲಿಯದಲ್ಲಿ) ಹಾಗೂ 2022-23ರಲ್ಲಿ 2-1 (ತವರಿನ ಸರಣಿ) ಅಂತರದಿಂದ ಭಾರತ ಜಯ ಸಾಧಿಸಿತ್ತು. ಆದಾಗ್ಯೂ, 2023ರಲ್ಲಿ ಲಂಡನ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಪ್ಯಾಟ್ ಕಮಿನ್ಸ್ ತಂಡವು ಭಾರತವನ್ನು ಸೋಲಿಸಿತ್ತು.

5 ಟೆಸ್ಟ್​ ಪಂದ್ಯ ವೇಳಾಪಟ್ಟಿ

ಮೊದಲ ಟೆಸ್ಟ್: ನವೆಂಬರ್ 22-26, ಪರ್ತ್

ಎರಡನೇ ಟೆಸ್ಟ್: ಡಿಸೆಂಬರ್ 6-10, ಅಡಿಲೇಡ್ (ಪಿಂಕ್​ ಬಾಲ್​ ಟೆಸ್ಟ್​)

ಮೂರನೇ ಟೆಸ್ಟ್: ಡಿಸೆಂಬರ್ 14-18, ಬ್ರಿಸ್ಬೇನ್

ನಾಲ್ಕನೇ ಟೆಸ್ಟ್: ಡಿಸೆಂಬರ್ 26-30, ಮೆಲ್ಬೋರ್ನ್

ಐದನೇ ಟೆಸ್ಟ್: ಜನವರಿ 3-7, ಸಿಡ್ನಿ

Continue Reading

ಕ್ರೀಡೆ

T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

T20 World Cup 2024: ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ ಎಂದು ಕ್ರಿಕ್​ಬಜ್ ತಿಳಿಸಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಜೂನ್​ 1ರಿಂದ 29ರ ತನಕ ನಡೆಯಲಿರುವ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಭಾರತ ತಂಡ(Team India) ಕೇವಲ 1 ಅಭ್ಯಾಸ ಪಂದ್ಯವನ್ನಾಡಲು ನಿರ್ಧರಿಸಿದೆ ಎಂದು ವರದಿಯಾಗಿದೆ. ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ. ಆದರೆ ಭಾರತಕ್ಕೆ ಇದು ಸಾಧ್ಯವಾಗುದಿಲ್ಲ ಎನ್ನಲಾಗಿದೆ.

ಕ್ರಿಕ್​ಬಜ್​ ವರದಿಯ ಪ್ರಕಾರ, ಭಾರತ ಕೇವಲ ಒಂದು ಅಭ್ಯಾಸ ಪಂದ್ಯವನ್ನಾಡಲಿ ಎಂದು ತಿಳಿಸಿದೆ. ಹೌದು, ವೇಳಾಪಟ್ಟಿ ಪ್ರಕಾರ ಭಾರತ ತಂಡವು ಮೇ 21 ರಂದು ನ್ಯೂಯಾರ್ಕ್‌ಗೆ ತೆರಳ ಬೇಕಿತ್ತು. ಆದರೆ, ಐಪಿಎಲ್​ ಟೂರ್ನಿ ಮೇ 26ಕ್ಕೆ ಮುಕ್ತಾಯ ಕಾಣಲಿದೆ. ಹೀಗಾಗಿ ಆಟಗಾರರಿಗೆ ಮುಂಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಜತೆಗೆ ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ ಎಂದು ಕ್ರಿಕ್​ಬಜ್ ತಿಳಿಸಿದೆ.

ಭಾರತದ ಅಭ್ಯಾಸ ಪಂದ್ಯಗಳು ಫ್ಲೋರಿಡಾದಲ್ಲಿ ಮತ್ತು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ. ಆದರೆ, ಭಾರತ ನ್ಯೂಯಾರ್ಕ್‌ನಲ್ಲಿ ನಡೆಯುವ ಅಭ್ಯಾಸ ಪಂದ್ಯದಲ್ಲಿ ಮಾತ್ರ ಆಡಲಿದೆ ಎನ್ನಲಾಗಿದೆ. ನ್ಯೂಯಾರ್ಕ್​ನಿಂದ ಫ್ಲೋರಿಡಾಕ್ಕೆ(ಹೋಗಲು ಮತ್ತು ಬರಲು) ಒಟ್ಟು 34 ಗಂಟೆಗಳ ಪ್ರಯಾಣದ ಅವಧಿ ತಗುಲುತ್ತದೆ. ಭಾರತದ ಎಲ್ಲ ಲೀಗ್​ ಪಂದ್ಯಗಳು ಕೂಡ ನ್ಯೂಯಾರ್ಕ್​ನಲ್ಲಿ ನಡೆಯಲಿದೆ. ಕೇವಲ ಒಂದು ಅಭ್ಯಾಸ ಪಂದ್ಯಕ್ಕಾಗಿ ಫ್ಲೋರಿಡಾಕ್ಕೆ ಹೋಗಿ ಬಂದರೆ ಆಟಗಾರರು ಮತ್ತಷ್ಟು ದಣಿಯುತ್ತಾರೆ. ಇದನ್ನು ತಪ್ಪಿಸುವ ಸಲುವಾಗಿ ಒಂದು ಪಂದ್ಯ ಮಾತ್ರ ಆಡಲು ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ T20 World Cup 2024: 20 ತಂಡಗಳ ಪೈಕಿ 19 ತಂಡ ಪ್ರಕಟ; ಪಾಕಿಸ್ತಾನ ಮಾತ್ರ ಬಾಕಿ

ಟೂರ್ನಿಯ ಸಂಘಟಕರು ಭಾರತದ ಈ ನಿಲುವಿಗೆ ಒಪ್ಪಿಕೊಳ್ಳುತ್ತಾರೆಯೇ ಎನ್ನುವುದು ಕೂಡ ಇಲ್ಲಿ ಮುಖ್ಯವಾಗಿದೆ. ಏಕೆಂದರೆ ಭಾರತದ ಪಂದ್ಯ ಎಂದರೆ ವಾಣಿಜ್ಯ ಮೌಲ್ಯವನ್ನು ಹೊಂದಿದಿದ್ದು, ಸಾಕಷ್ಟು ಹಣಗಳಿಕೆಯ ಅವಕಾಶಗಳ ಕಾರಣದಿಂದಾಗಿ ಯಾವಾಗಲೂ ದೂರದರ್ಶನದಲ್ಲಿ ಪ್ರಸಾರವಾಗುತ್ತದೆ. ಜಾಹಿರಾತುದಾರರು ಕೂಡ ಕೋಟಿ ಮೊತ್ತದ ಬಂಡವಾಳ ಹಾಕಿರುತ್ತಾರೆ. ಹೀಗಾಗಿ ಸಂಘಟಕರ ಸಮ್ಮತಿಯೂ ಕೂಡ ಇಲ್ಲಿ ಪ್ರಧಾನ ಪಾತ್ರವಹಿಸುತ್ತದೆ.

ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಉಚಿತ ಪ್ರಸಾರ


ಟಿ20 ವಿಶ್ವಕಪ್​ ಟೂರ್ನಿ ಆರಂಭಕ್ಕೂ ಮುನ್ನವೇ ​ಡಿಸ್ನಿ + ಹಾಟ್‌ಸ್ಟಾರ್(Disney+ Hotstar) ಕ್ರಿಕೆಟ್​ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು ಈ ವರ್ಷದ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಅನ್ನು OTT ಪ್ಲಾಟ್‌ಫಾರ್ಮ್‌ನಲ್ಲಿ ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಡಿಸ್ನಿ + ಹಾಟ್‌ಸ್ಟಾರ್ ಈಗಾಗಲೇ ಘೋಷಿಸಿದೆ. ಕಳೆದ ವರ್ಷ ಏಕದಿನ ವಿಶ್ವಕಪ್ ಮತ್ತು ಏಷ್ಯಾ ಕಪ್‌ ಟೂರ್ನಿಯನ್ನು ಕೂಡ ಡಿಸ್ನಿ + ಹಾಟ್‌ಸ್ಟಾರ್, ಮೊಬೈಲ್​ ಬಳಕೆ ದಾರರಿಗೆ ಉಚಿತ ವೀಕ್ಷಣೆಯನ್ನು ನೀಡಿತ್ತು. ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಇದೇ ನಿಲುವನ್ನು ಮುಂದುವರಿಸಿದೆ.

Continue Reading
Advertisement
Davanagere News
ಕರ್ನಾಟಕ24 mins ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Robert Fico
ವಿದೇಶ32 mins ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Federation Cup 2024
ಕ್ರೀಡೆ48 mins ago

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Tips For Healthy Skin
ಆರೋಗ್ಯ1 hour ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Driving Tips
ಕ್ರೈಂ1 hour ago

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

Online scams
Latest1 hour ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Alamgir Alam
ದೇಶ1 hour ago

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

IPL 2024
ಕ್ರೀಡೆ2 hours ago

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

Prajwal Revanna Case Prajwal Revanna loses X recognition in Obscene Video case
ರಾಜಕೀಯ2 hours ago

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

SBI Rates
ವಾಣಿಜ್ಯ2 hours ago

SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ14 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ16 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌