Site icon Vistara News

KL Rahul | ಮೈಸೂರು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಟೀಮ್​ ಇಂಡಿಯಾ ಕ್ರಿಕೆಟಿಗ ಕೆ.ಎಲ್​. ರಾಹುಲ್​

KL Rahul

ಬೆಂಗಳೂರು: ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ಬಯಸಿರುವ ಟೀಮ್​ ಇಂಡಿಯಾದ ಆಟಗಾರ ಕೆ.ಎಲ್ ರಾಹುಲ್ (KL Rahul) ಮೈಸೂರಿಗೆ ಆಗಮಿಸಿ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ. ಇದೇ ತಿಂಗಳು ರಾಹುಲ್​ ತಮ್ಮ ಬಹುಕಾಲದ ಗೆಳತಿ ಅಥಿಯಾ ಶೆಟ್ಟಿ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಅವರು​ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.

ಸದ್ಯ ಈ ತಿಂಗಳಾಂತ್ಯದಲ್ಲಿ ರಾಹುಲ್ ಮತ್ತು ಅಥಿಯಾ ಶೆಟ್ಟಿ ಜೋಡಿ ಸಪ್ತಪದಿ ತುಳಿಯಲಿದೆ ಎಂದು ಆಪ್ತ ಮೂಲಗಳಿಂದ ಮಾತುಗಳು ಕೇಳಿ ಬರುತ್ತಿದೆ. ಹಾಗಾಗಿ ರಾಹುಲ್ ಕರ್ನಾಟಕದ ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.

ರಾಹುಲ್​ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು. ಪ್ರಾರ್ಥನೆ ಸಲ್ಲಿಸಿದ ಬಳಿಕ ಅವರು ದೇಗುಲದಲ್ಲಿ ಪ್ರಸಾದ ಸ್ವೀಕರಿಸಿದರು. ಇದೇ ವೇಳೆ ದೇವಸ್ಥಾನದ ವತಿಯಿಂದ ರಾಹುಲ್​ ಅವರನ್ನು ಗೌರವಿಸಲಾಯಿತು.

ಲಂಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿರುವ ರಾಹುಲ್, ಏಕ ದಿನ ಸರಣಿಗೆ ಮತ್ತೆ ತಂಡ ಸೇರಿಕೊಳ್ಳಲಿದ್ದಾರೆ. ಜ.10, 12 ಮತ್ತು 15 ರಂದು ಏಕ ದಿನ ಪಂದ್ಯ ನಡೆಯಲಿದೆ. ಈ ಸರಣಿ ಬಳಿಕ ರಾಹುಲ್​ ಮದುವೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ | KL Rahul | ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಟೀಮ್​ ಇಂಡಿಯಾ ಕ್ರಿಕೆಟಿಗ ಕೆ.ಎಲ್. ರಾಹುಲ್

Exit mobile version