KL Rahul : ಶ್ರೀಲಂಕಾ ಪ್ರವಾಸದ ಏಕ ದಿನ ತಂಡಕ್ಕೆ ಕೆ. ಎಲ್ ರಾಹುಲ್ ನಾಯಕ? - Vistara News

ಕ್ರೀಡೆ

KL Rahul : ಶ್ರೀಲಂಕಾ ಪ್ರವಾಸದ ಏಕ ದಿನ ತಂಡಕ್ಕೆ ಕೆ. ಎಲ್ ರಾಹುಲ್ ನಾಯಕ?

KL Rahu : ಕೆಎಲ್ ರಾಹುಲ್ ಟಿ 20 ವಿಶ್ವಕಪ್​​ ಗೆ ಹೋಗಿದ್ದ ಭಾರತದ ತಂಡದಿಂದ ಹೊರಗುಳಿದಿದ್ದರು. ಆದರೆ ಈಗ ಶ್ರೀಲಂಕಾ ಪ್ರವಾಸದ ಏಕದಿನ ಹಂತದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ನಾಯಕತ್ವದ ಪಾತ್ರವನ್ನು ಸಹ ತೆಗೆದುಕೊಳ್ಳಲಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ 20 ಯಿಂದ ನಿವೃತ್ತರಾಗುವುದರೊಂದಿಗೆ ಆಲ್ರೌಂಡರ್ ಹಾರ್ದಿಕ್ ಚುಟುಕು ಸ್ವರೂಪದ ಕ್ರಿಕೆಟ್​​ನಲ ಲಿ ತಂಡದ ಜವಾಬ್ದಾರಿ ವಹಿಸುವ ನಿರೀಕ್ಷೆಯಿದೆ.

VISTARANEWS.COM


on

KL Rahul
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜಿಂಬಾಬ್ವೆ ಪ್ರವಾಸದ ಬಳಿಕ ಟೀಮ್ ಇಂಡಿಯಾ ತನ್ನ ಮುಂದಿನ ಕಾರ್ಯಯೋಜನೆಗೆ ಸಜ್ಜಾಗಬೇಕಾಗಿದೆ ವೈಟ್-ಬಾಲ್ ಸರಣಿಗಾಗಿ ಭಾರತ ಬಳಗ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಹೊಸ ಕೋಚ್​ ಗೌತಮ್ ಗಂಭೀರ್ ಅಡಿಯಲ್ಲಿ ಈ ತಂಡ ದ್ವೀಪ ರಾಷ್ಟ್ರಕ್ಕೆ ಹೋಗಲಿದೆ. ಈ ಸರಣಿಯಲ್ಲಿ ಯಾರೆಲ್ಲ ಇರುತ್ತಾರೆ ಎಂಬ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಆದರೆ, ವರದಿಗಳ ಪ್ರಕಾರ, ಸ್ಟಾರ್ ಬ್ಯಾಟರ್​ ಹಾಗೂ ಕನ್ನಡಿಗ ಕೆಎಲ್ ರಾಹುಲ್ (KL Rahul) ತಂಡಕ್ಕೆ ಮರಳಲಿದ್ದು ತಂಡವನ್ನು ಮುನ್ನಡೆಸುವ ನಿರೀಕ್ಷೆಯಿದೆ.

ಏಕದಿನ ಸರಣಿಯಿಂದ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡಲಾಗಿದೆ ಎಂದು ವರದಿಯಾಗಿದೆ. ಈ ಸರಣಿಯು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಅಡಿಯಲ್ಲಿ ತಂಡಕ್ಕೆ ಮೊದಲನೆಯದು ಶ್ರೀಲಂಕಾ ಸವಾಲು. ಹೀಗಾಗಿ ಈ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲು ಕೆಎಲ್ ರಾಹುಲ್ ಮುಂಚೂಣಿಯಲ್ಲಿ ಆಯ್ಕೆಯಾಗಿದ್ದಾರೆ.

ಕೆಎಲ್ ರಾಹುಲ್ ಟಿ 20 ವಿಶ್ವಕಪ್​​ ಗೆ ಹೋಗಿದ್ದ ಭಾರತದ ತಂಡದಿಂದ ಹೊರಗುಳಿದಿದ್ದರು. ಆದರೆ ಈಗ ಶ್ರೀಲಂಕಾ ಪ್ರವಾಸದ ಏಕದಿನ ಹಂತದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ನಾಯಕತ್ವದ ಪಾತ್ರವನ್ನು ಸಹ ತೆಗೆದುಕೊಳ್ಳಲಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ 20 ಯಿಂದ ನಿವೃತ್ತರಾಗುವುದರೊಂದಿಗೆ ಆಲ್ರೌಂಡರ್ ಹಾರ್ದಿಕ್ ಚುಟುಕು ಸ್ವರೂಪದ ಕ್ರಿಕೆಟ್​​ನಲ ಲಿ ತಂಡದ ಜವಾಬ್ದಾರಿ ವಹಿಸುವ ನಿರೀಕ್ಷೆಯಿದೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ, ಏಕೆಂದರೆ ಅವರು ದೀರ್ಘ ಸ್ವರೂಪದಲ್ಲಿ ರನ್ ಗಳಿಸುತ್ತಾರೆ ಎಂದು ಮಂಡಳಿಯು ನಂಬಿದೆ ಎಂದು ಪತ್ರಕರ್ತ ವಿಪುಲ್ ಕಶ್ಯಪ್ ಬರೆದುಕೊಂಡಿದ್ದಾರೆ.

ಮೂಲಗಳ ಪ್ರಕಾರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಅರ್ಹ ವಿರಾಮ ತೆಗೆದುಕೊಳ್ಳಲಿದ್ದಾರೆ ಮತ್ತು ಸದ್ಯಕ್ಕೆ ಟೆಸ್ಟ್ ಕ್ರಿಕೆಟ್​ ಕಡೆಗೆ ಮಾತ್ರ ಗಮನ ಹರಿಸಲಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಇಂಗ್ಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ಇವರಿಬ್ಬರಿಗೆ ಇದು ಸಾಕಷ್ಟು ಅಭ್ಯಾಸ ಸಿಗಲಿದೆ.

ಇದನ್ನೂ ಓದಿ: ICC T20 Rankings : ಟಿ20 ರ್ಯಾಂಕಿಂಗ್ ಪಟ್ಟಿಯಲ್ಲಿ ಭರ್ಜರಿ ಜಿಗಿತ ಕಂಡ ಋತುರಾಜ್​​

“ಏಕದಿನ ತಂಡದಲ್ಲಿ ಕೊಹ್ಲಿ ಮತ್ತು ರೋಹಿತ್​ಗೆ ಆಯ್ಕೆಗಳಿವೆ. ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ಇಂಗ್ಲೆಂಡ್ ವಿರುದ್ಧದ ಮೂರು 50 ಓವರ್​ಗಳ ಪಂದ್ಯಗಳು ಅವರಿಗೆ ಸಾಕಷ್ಟು ಅಭ್ಯಾಸ ನೀಡಲಿದೆ ಮುಂದಿನ ಕೆಲವು ತಿಂಗಳುಗಳವರೆಗೆ, ಇಬ್ಬರೂ ಟೆಸ್ಟ್​​ಗೆ ಆದ್ಯತೆ ನೀಡುತ್ತಾರೆ /ಭಾರತವು ಸೆಪ್ಟೆಂಬರ್​ನಿಂದ ಜನವರಿ ನಡುವೆ ಅವುಗಳಲ್ಲಿ 10 ಪಂದ್ಯಗಳನ್ನು ಆಡಲಿದೆ,” ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಆಗಸ್ಟ್ 2024 ರಲ್ಲಿ ಪ್ರಾರಂಭವಾಗಲಿದೆ. ನಾಯಕ ಯಾರೆಂಬುದನ್ನು ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಿದರೆ, ಹಾರ್ದಿಕ್ ಪಾಂಡ್ಯ ಅವರಿಗೂ ಅನುಕೂಲವಾಗಬಹುದು. ಇತ್ತೀಚಿನ ವರದಿಗಳು ಪಾಂಡ್ಯ ಶ್ರೀಲಂಕಾ ವಿರುದ್ಧ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ಸೂಚಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

India at the Olympics: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಸಾಧನೆಯ ಇಣುಕು ನೋಟ

India at the Olympics: ಒಲಿಂಪಿಕ್ಸ್​ ಇತಿಹಾಸದಲ್ಲಿ ಭಾರತ ಇದುವರೆಗೆ ಒಟ್ಟು 35 ಪದಕಗಳನ್ನು ಗೆದ್ದಿದೆ. ಇದರಲ್ಲಿ 10 ಚಿನ್ನ, 9 ಬೆಳ್ಳಿ ಮತ್ತು 16 ಕಂಚು ಒಳಗೊಂಡಿದೆ. ಈ ಬಾರಿ ಕನಿಷ್ಠ 20 ಪದಕ ಗೆಲ್ಲುವ ನಿರೀಕ್ಷೆ ಇದೆ. ನಿರೀಕ್ಷೆ ಮಾಡಿದಷ್ಟು ಪದಕ ಗೆದ್ದರೆ ಒಟ್ಟು ಪದಕಗಳ ಸಂಖ್ಯೆ 50ರ ಗಡಿ ದಾಟಲಿದೆ.

VISTARANEWS.COM


on

Koo

ಬೆಂಗಳೂರು: ಜಾಗತಿಕ ಕ್ರೀಡಾಕೂಟವಾದ ಒಲಿಂಪಿಕ್ಸ್​ನಲ್ಲಿ(India at the Olympics) ಭಾರತ ಇದುವರೆಗೂ ಹೆಚ್ಚಿನ ಪದಕ ಗೆಲ್ಲದಿದ್ದರೂ ಕೂಡ ವಿಶ್ವ ಮಟ್ಟದ ಸ್ಪರ್ಧೆಗಳಲ್ಲಿ ಭಾರತೀಯರು ಎಂದೂ ಹಿಂಜರಿಯಲಿಲ್ಲ. ಇತಿಹಾಸವನ್ನೊಮ್ಮೆ ಕೆದಕಿದರೆ ಪುರುಷರ ಹಾಕಿಯಲ್ಲಿ 8 ಬಾರಿ ಸ್ವರ್ಣ ಗೆದ್ದ ಏಕೈಕ ತಂಡವೆಂಬ ಹೆಗ್ಗಳಿಕೆ ಭಾರತ ಉಳಿಸಿಕೊಂಡಿದೆ. ಈ ಬಾರಿ ಪ್ಯಾರಿಸ್​ಗೆ ತೆರಳುವ ಕ್ರೀಡಾಪಟುಗಳಿಗೆ ಹಿಂದೆಂದಿಗಿಂತ್ತಲೂ ದೊರೆಯದ ಬೆಂಬಲ ಸಿಕ್ಕಿದೆ. ಹಿಂದಿನ ಒಲಿಂಪಿಕ್ಸ್‌ನಲ್ಲಿ ಭಾರತೀಯರ ಪದಕ ಸಾಧನೆ ಹೇಗಿತ್ತು ಎನ್ನುವ ಇಣುಕು ನೋಟ ಇಲ್ಲಿದೆ.

1928ರಲ್ಲಿ ಮೊದಲ ಚಿನ್ನ


ಭಾರತಕ್ಕೆ ಮೊದಲ ಚಿನ್ನದ ಪದಕ ಸಿಕ್ಕಿದ್ದು. 1928ರಲ್ಲಿ ನೆದರ್ಲೆಂಡ್‌ನ‌ ಆ್ಯಮ್‌ಸ್ಟರ್ಡಾಮ್‌ನಲ್ಲಿ ನಡೆದ ಒಲಿಂಪಿಕ್‌ನಲ್ಲಿ ಭಾರತ ಹಾಕಿ ತಂಡ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು. ಇಲ್ಲಿಂದ ಭಾರತ ಹಾಕಿ ತಂಡದ ಸುವರ್ಣ ಯುಗಾರಂಭವಾಯಿತು. ಹೆಚ್ಚು ಕಡಿಮೆ ಅರ್ಧಶತಮಾನದವರೆಗೆ ಒಲಿಂಪಿಕ್‌ನಲ್ಲಿ ಭಾರತ ಹಾಕಿಯಲ್ಲಿ ಪಾರುಪತ್ಯ ಸಾಧಿಸಿತು. 1956ರವರೆಗೆ ಸತತ 6 ಬಾರಿ ಸ್ವರ್ಣ ಜಯಿಸಿತು. ಧ್ಯಾನ್‌ಚಂದ್‌ ಎಂಬ ಮಹಾನ್‌ ಪ್ರತಿಭೆ ವಿಶ್ವಕ್ಕೆ ಪರಿಚಯವಾಗಿದ್ದೂ ಕೂಡ ಇಲ್ಲಿಯೇ.


ಸ್ವತಂತ್ರ ಭಾರತ ಗೆದ್ದ ಮೊದಲ ಪದಕ

1948ರಂದು ಇಂಗ್ಲೆಂಡ್‌ ರಾಜಧಾನಿ ಲಂಡನ್‌ನಲ್ಲಿ ನಡೆದ ಒಲಿಂಪಿಕ್ಸ್​ ಭಾರತದ ಪಾಲಿಗೆ ವಿಶೇಷವಾಗಿತ್ತು. ಏಕೆಂದರೆ ಸ್ವತಂತ್ರ ಭಾರತ ಆಡಿದ ಮೊದಲ ಒಲಿಂಪಿಕ್ಸ್​ ಕೂಟ ಇದಾಗಿತ್ತು. ಒಂದು ಕಾಲದಲ್ಲಿ ತನ್ನನ್ನು ಆಳಿದ್ದ ಇಂಗ್ಲೆಂಡ್​ ತಂಡವನ್ನೇ ಭಾರತ ಫೈನಲ್‌ನಲ್ಲಿ ಸೋಲಿಸಿ ಚಿನ್ನ ಗೆದ್ದಿತು!. ಗೆಲುವಿನ ಅಂತರ 4-0 ಗೋಲುಗಳು. ಬ್ರಿಟಿಷರ ವಸಾಹತುಶಾಹಿ ಅಹಂಕಾರಕ್ಕೆ ಭಾರತ ಕೊಟ್ಟ ಭಾರೀ ತಿರುಗೇಟಿನಂತಿತ್ತು ಈ ಗೆಲುವು.

ವೈಯಕ್ತಿಕ ವಿಭಾಗದಲ್ಲಿ ಮೊದಲ ಪದಕ


ಒಲಿಂಪಿಕ್ಸ್‌ ಇತಿಹಾಸದಲ್ಲಿ ಭಾರತದ ಕ್ರೀಡಾಪಟುವೊಬ್ಬರು ವೈಯಕ್ತಿಕ ವಿಭಾಗದಲ್ಲಿ ಪದಕ ಜಯಿಸಿದ್ದು 1952ರಲ್ಲಿ. ಮಹಾರಾಷ್ಟ್ರದ ಖಾಸಾಬಾ ದಾದಾ ಸಾಹೆಬ್‌ ಜಾಧವ್‌ ಕುಸ್ತಿಯ ಫ್ರೀಸ್ಟೈಲ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು. ಇದು ಒಲಿಂಪಿಕ್ಸ್‌ ಇತಿಹಾಸದಲ್ಲಿ ಭಾರತದ ಕ್ರೀಡಾಪಟುವೊಬ್ಬರು ವೈಯಕ್ತಿಕ ವಿಭಾಗದಲ್ಲಿ ಗೆದ್ದ ಮೊದಲ ಪದಕ ಇದಾಗಿತ್ತು.

ಇದನ್ನೂ ಓದಿ Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ


ಟೆನಿಸ್​ನಲ್ಲಿ ಮೊದಲ ಪದಕ


1996ರಲ್ಲಿ ಅಮೆರಿಕದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತ ಏಕೈಕ ಕಂಚಿನ ಪದಕ ಜಯಿಸಿತ್ತು. ಲಿಯಾಂಡರ್‌ ಪೇಸ್‌ ಟೆನಿಸ್‌ ಸಿಂಗಲ್ಸ್‌ ವಿಭಾಗದಲ್ಲಿ ಕಂಚು ಜಯಿಸಿದ್ದರು. ವೈಯಕ್ತಿಕ ವಿಭಾಗದಲ್ಲಿ 44 ವರ್ಷಗಳ ಬಳಿಕ ಭಾರತಕ್ಕೆ ಒಲಿದ ಪದಕ ಇದಾಗಿತ್ತು. ಇಲ್ಲಿ ಲಿಯಾಂಡರ್‌ ಪೇಸ್‌ ಬ್ರಝಿಲ್‌ನ ಫೆರ್ನಾಂಡೊ ಮೆಲಿಗಿನಿ ಅವರನ್ನು ಮಣಿಸಿ ಪದಕಕ್ಕೆ ಕೊರಳೊಡ್ಡಿದ್ದರು.

ಕರ್ಣ ಮಲ್ಲೇಶ್ವರಿ ಐತಿಹಾಸಿಕ ಸಾಧನೆ


2000ದಲ್ಲಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದಿದ್ದ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಆಂಧ್ರ ಪ್ರದೇಶ ಮೂಲದವರಾದ ಕರ್ಣ ಮಲ್ಲೇಶ್ವರಿ ವೇಟ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದರು. ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ ಭಾರತದ ಮೊಟ್ಟ ಮೊದಲ ಮಹಿಳಾ ಕ್ರೀಡಾಪಟು ಎನಿಸಿಕೊಂಡಿದ್ದರು. 69 ಕೆಜಿ ವಿಭಾಗದಲ್ಲಿ ಮಲ್ಲೇಶ್ವರಿ ಈ ಸಾಧನೆ ಮಾಡಿದ್ದರು.


2004ರಲ್ಲಿ ಗ್ರೀಸ್‌ನ ಅಥೆನ್ಸ್‌ನಲ್ಲಿ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಏಕೈಕ ಪದಕ ಮಾತ್ರ ಲಭಿಸಿತು. ರಾಜಸ್ಥಾನದ ಶೂಟರ್‌ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ಪುರುಷರ ಡಬಲ್‌ ಟ್ರಾಯಪ್‌ ವಿಭಾಗದಲ್ಲಿ ಬೆಳ್ಳಿ ಪದಕಕ್ಕೆ ಗುರಿ ಇರಿಸಿ ಈ ಪದಕ ತಂದುಕೊಟ್ಟಿದ್ದರು. ಈ ಸಾಧನೆಯೊಂದಿಗೆ ವೈಯಕ್ತಿಕ ವಿಭಾಗದಲ್ಲಿ ರಜತ ಗೆದ್ದ ಮೊದಲ ಭಾರತೀಯರೆನಿಸಿದರು.

ಇದನ್ನೂ ಓದಿ Paris Olympics 2024: ಮೊಟ್ಟಮೊದಲ ಒಲಿಂಪಿಕ್ಸ್ ಕ್ರೀಡಾಕೂಟದ 10 ಕುತೂಹಲಕರ ಸಂಗತಿಗಳಿವು

ಚಿನ್ನ ಗೆದ್ದ ಅಭಿನವ್‌ ಬಿಂದ್ರ


ಚೀನದ ಬೀಜಿಂಗ್‌ನಲ್ಲಿ ನಡೆದ ಒಲಿಂಪಿಕ್ಸ್‌ ಭಾರತದ ಕ್ರೀಡಾ ಇತಿಹಾಸದಲ್ಲೇ ಅತ್ಯಂತ ಅವಿಸ್ಮರಣೀಯ ಕೂಟವಾಗಿದೆ. ಸ್ವತಂತ್ರ ಭಾರತದಲ್ಲಿ ವೈಯಕ್ತಿಕ ವಿಭಾಗದಲ್ಲಿ ಮೊದಲ ಸ್ವರ್ಣ ಸಾಧನೆ ಮಾಡಿದ್ದು ಇದೇ ಕೂಟದಲ್ಲಿ ಅಲ್ಲದೆ ಮೊಟ್ಟ ಮೊದಲ ಬಾರಿಗೆ ಒಂದೇ ಕೂಟದಲ್ಲಿ 3 ಪದಕಗಳು ಭಾರತದ ಪಾಲಾಗಿದ್ದವು. ಅಭಿನವ್‌ ಬಿಂದ್ರ 10 ಮೀ. ಏರ್‌ ರೈಫ‌ಲ್‌ನಲ್ಲಿ ಸ್ವರ್ಣ ಗೆದ್ದು ಇತಿಹಾಸ ನಿರ್ಮಿಸಿದ್ದರು. ಇತ್ತೀಚೆಗೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಕುಸ್ತಿಪಟು ಸುಸೀಲ್‌ ಕುಮಾರ್‌ ಪುರುಷರ ಕುಸ್ತಿಯ 75 ಕೆಜಿ ವಿಭಾಗದಲ್ಲಿ ಕಂಚು ಗೆದ್ದರೆ ಬಾಕ್ಸಿಂಗ್‌ನಲ್ಲಿ ವಿಜೇಂದರ್‌ ಸಿಂಗ್‌ 66 ಕೆಜಿ ವಿಭಾಗದಲ್ಲಿ ಕಂಚು ಜಯಿಸಿದ್ದರು.


ಲಂಡನ್​ನಲ್ಲಿ ಕಮಾಲ್​…

2012ರಲ್ಲಿ ಲಂಡನ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭಾರತ ಅಮೋಘ ಸಧನೆಯೊಂದನ್ನು ಮಾಡಿತು. ಭಾರತಕ್ಕೆ ಅರ್ಧ ಡಜನ್‌ ಪದಕ ಒಲಿದು ಬಂದಿತ್ತು. ಭಾರತದ ಶೂಟಿಂಗ್‌, ಬಾಕ್ಸಿಂಗ್‌, ಬ್ಯಾಡ್ಮಿಂಟನ್‌, ಕ್ಷೇತ್ರಕ್ಕೆ ಹೊಸ ಆಯಾಮ ಸೃಷ್ಟಿಸಿದ ಕೂಟ ಇದಾಗಿತ್ತು. 2 ಬೆಳ್ಳಿ ಹಾಗೂ 4 ಕಂಚಿನ ಪದಕಗಳು ಭಾರತದ ಪಾಲಾದವು. ಶೂಟಿಂಗ್‌ನಲ್ಲಿ ವಿಜಯ್‌ ಕುಮಾರ್‌ 25 ಮೀ. ರ್ಯಾಪಿಟ್‌ ಫೈರ್‌ ಪಿಸ್ತೂಲ್‌ನಲ್ಲಿ ಬೆಳ್ಳಿ ಗೆದ್ದರೆ, ಸುಶೀಲ್‌ ಕುಮಾರ್‌ ಪುರುಷರ 66 ಕೆಜಿ ಫ್ರೀ ಸ್ಟೈಲ್‌ನಲ್ಲಿ ರಜತ ಸಾಧನೆಯೊಂದಿಗೆ ಸತತ 2ನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದರು. ಮತೋರ್ವ ಶೂಟರ್‌ ಗಗನ್‌ ನಾರಂಗ್‌ (10 ಮೀ ಏರ್‌ ರೈಫ‌ಲ್‌), ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌, ಬಾಕ್ಸರ್‌ ಮೇರಿ ಕೋಮ್‌ ಹಾಗೂ ಮತೋರ್ವ ಕುಸ್ತಿಪಟು ಯೋಗೇಶ್ವರ್‌ ದತ್‌ ಕಂಚಿನ ಪದಕ ಜಯಿಸಿದರು.

ಇದನ್ನೂ ಓದಿ Paris Olympics 2024 : ಒಲಿಂಪಿಕ್ಸ್​ ಕ್ರೀಡಾಕೂಟದ ಇತಿಹಾಸ ಏನು? ಇದನ್ನು ಆಯೋಜಿಸುವವರು ಯಾರು?


ರಿಯೋದಲ್ಲಿ ಕೇವಲ 2 ಪದಕ


ಲಂಡನ್‌ನಲ್ಲಿ ಅರ್ಧ ಡಜನ್‌ ಪದಕ ಗೆದ್ದಿದ್ದ ಭಾರತದ ಕ್ರೀಡಾಪಟುಗಳ ಮೇಲೆ ರಿಯೋ ಒಲಿಂಪಿಕ್ಸ್‌ನಲ್ಲಿ ಅಪಾರ ಪದಕ ನಿರೀಕ್ಷೆ ಮಾಡಲಾಗಿತ್ತು. ಆದರೆ, ಈ ಎಲ್ಲ ನಿರೀಕ್ಷೆ ಹುಸಿಗೊಂಡಿತು. ಭಾರತ ಕೇವಲ 2 ಪದಕಕ್ಕೆ ಮಾತ್ರ ಸೀಮಿತವಾಯಿತು. ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧು ಕೊನೆಯ ಹಂತದಲ್ಲಿ ಎಡವಿ ಚಿನ್ನದ ಪದಕದಿಂದ ವಂಚಿತರಾಗಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ಆದರೆ, ಸಿಂಧು ಬ್ಯಾಡ್ಮಿಂಟನ್‌ ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಶಟ್ಲರ್‌ ಎನಿಸಿಕೊಂಡರು. ಇತ್ತೀಚೆಗೆ ಬ್ರಿಜ್​ ಭೂಷಣ್​ ಸಿಂಗ್​ ವಿರುದ್ಧ ಲೈಂಗಿಕ ಆರೋಪ ಹೊರಿಸಿ ಪ್ರತಿಭಟನೆ ನಡೆಸಿ ಕುಸ್ತಿಗೆ ನಿವೃತ್ತಿ ಹೇಳಿದ್ದ ಸಾಕ್ಷಿ ಮಲಿಕ್‌ ಕೂಡ ಈ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಜಯಿಸಿದ್ದರು.


ಚಿನ್ನ ಗೆದ್ದ ನೀರಜ್​ ಚೋಪ್ರಾ

ಕೊರೊನಾ ಮಹಾಮಾರಿ ಸಾಂಕ್ರಾಮಿಕ ರೋಗದಿಂದ ಹಲವು ಕಟ್ಟುಪಾಡುಗಳ ನಡುವೆ ಜಪಾನ್​ನ ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಸ್ಟಾರ್​ ಜಾವೆಲಿನ್​ ಎಸೆತಗಾರ ನೀರಜ್ ಚೋಪ್ರ ಚಿನ್ನದ ಪದಕ ಗೆದ್ದು ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪಿವಿ ಸಿಂಧು ಕಂಚಿನ ಪದಕ ಜಯಿಸಿ ಸತತವಾಗಿ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಸಾಧನೆ ಮಾಡಿದರು. ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದು 1980ರ ಬಳಿಕ ಮೊದಲ ಬಾರಿಗೆ ಒಲಿಂಪಿಕ್ ಹಾಕಿಯಲ್ಲಿ ಪದಕ ಗೆದ್ದು ಸಂಭ್ರಮಿಸಿತ್ತು. ಬಾಕ್ಸರ್​ ಲವ್ಲೀನಾ ಬೋರ್ಗೊಹೈನ್ ಕಂಚು ಗೆದ್ದರೆ, ಮೀರಾಬಾಯಿ ಚಾನು ಬೆಳ್ಳಿಯೊಂದಿಗೆ ಮಿನುಗಿದರು. ಕುಸ್ತಿಪಟು ರವಿ ದಹಿಯಾ ಬೆಳ್ಳಿ, ಬಜರಂಗ್ ಪೂನಿಯಾ ಕಂಚು ಗೆದ್ದರು.​

35 ಪದಕ


ಒಲಿಂಪಿಕ್ಸ್​ ಇತಿಹಾಸದಲ್ಲಿ ಭಾರತ ಇದುವರೆಗೆ ಒಟ್ಟು 35 ಪದಕಗಳನ್ನು ಗೆದ್ದಿದೆ. ಇದರಲ್ಲಿ 10 ಚಿನ್ನ, 9 ಬೆಳ್ಳಿ ಮತ್ತು 16 ಕಂಚು ಒಳಗೊಂಡಿದೆ. ಈ ಬಾರಿ ಕನಿಷ್ಠ 20 ಪದಕ ಗೆಲ್ಲುವ ನಿರೀಕ್ಷೆ ಇದೆ. ನಿರೀಕ್ಷೆ ಮಾಡಿದಷ್ಟು ಪದಕ ಗೆದ್ದರೆ ಒಟ್ಟು ಪದಕಗಳ ಸಂಖ್ಯೆ 50ರ ಗಡಿ ದಾಟಲಿದೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

Paris Olympics 2024 : ಭಾರತದಲ್ಲಿ ಕೆಲವೇ ಕೆಲವು ಕೆಲವರು ಪದಕ ಗೆಲ್ಲುವಷ್ಟು ಸ್ಪರ್ಧಾತ್ಮಕರಾಗಿದ್ದಾರೆ. ಭಾರತೀಯರು ಸ್ವಾಭಾವಿಕವಾಗಿ ಉತ್ತಮ ಪ್ರದರ್ಶನ ನೀಡಬಲ್ಲ ಕ್ರಿಕೆಟ್, ಕಬಡ್ಡಿಯಂತಹ ಕ್ರೀಡೆಗಳು ಒಲಿಂಪಿಕ್ಸ್​​ನ ಭಾಗವಲ್ಲ. ಭಾರತೀಯರು ಅಥ್ಲೆಟಿಕ್ಸ್, ಈಜು, ಜಿಮ್ನಾಸ್ಟಿಕ್ಸ್, ಜೂಡೋ, ರೋಯಿಂಗ್​ನಲ್ಲಿ ಇನ್ನೂ ಗರಿಷ್ಠ ಸಾಧನೆ ಮಾಡಿಲ್ಲ. ಇವು ಸ್ಪರ್ಧೆಗಳು ಮತ್ತು ಪದಕಗಳಲ್ಲಿ ಹೆಚ್ಚಿನ ಭಾಗವನ್ನು ಹೊಂದಿವೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​ ಜುಲೈ 26ರಂದು ಆರಂಭಗೊಂಡು ಆಗಸ್ಟ್​ 11ರವರೆಗೆ ನಡೆಯಲಿದ್ದು ಅದಕ್ಕಾಗಿನ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಎಲ್ಲ ದೇಶಗಳು ಕ್ರೀಡಾಪಟುಗಳು ಫ್ರಾನ್ಸ್​ನಲ್ಲಿ ಜಮಾಯಿಸಿದ್ದು ಅಲ್ಲಿನ ಪರಿಸರಕ್ಕೆ ಹೊಂದಿಕೊಂಡಂತೆ ಅಭ್ಯಾಸ ಆರಂಭಿಸಿದ್ದಾರೆ. ಜುಲೈ 26ರಂದು ಐಫೆಲ್ ಟವರ್ ಬಳಿಯ ಸೀನ್ ನದಿಯಲ್ಲಿ ಉದ್ಘಾಟನಾ ಮೆರವಣಿಗೆ ನಡೆಯಲಿದ್ದು ಒಲಿಂಪಿಕ್ಸ್ ಇತಿಹಾಸದಲ್ಲಿಯೇ ವಿಶೇಷ ಎನಿಸಲಿದೆ. ಭಾರತದ ಕ್ರೀಡಾಳುಗಳು ನಿಯೋಗವೂ ಫ್ರಾನ್ಸ್ ತಲುಪಿದ್ದು ಪದಕ ಗೆಲ್ಲುವುದಕ್ಕಾಗಿ ಅಲ್ಲಿ ಅಭ್ಯಾಸ ಶುರು ಮಾಡಿಕೊಂಡಿದ್ದಾರೆ.

ಒಲಿಂಪಿಕ್ಸ್ ಶುರುವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದ ಪದಕಗಳ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಪ್ರಮುಖವಾಗಿ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಯಾಕೆ ಕಡಿಮೆ ಪದಕಗಳು ಬರುತ್ತಿವೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಅದಕ್ಕೆ ಈ ಕೆಳಗೆ ಉತ್ತರ ನೀಡಲಾಗಿದೆ. ಹಿಂದಿಯಲ್ಲಿ ಒಲಿಂಪಿಕ್ಸ್​​ “ಖೇಲೋ ಕಾ ಮಹಾಕುಂಭ” ಎಂದು ಕರೆಯಲಾಗುತ್ತದೆ. ಯಾಕೆಂದರೆ ಇದು ಜಾಗತಿಕವಾಗಿ ನಡೆಯುವ ಅತಿ ದೊಡ್ಡ ಕ್ರೀಡಾ ಉತ್ಸವ. ಹೀಗಾಗಿ ಸ್ಪರ್ಧೆಗಳ ಮಟ್ಟವು ಗರಿಷ್ಠ ಪ್ರಮಾಣದಲ್ಲಿರುತ್ತವೆ. ಹೀಗಾಗಿ ಇಲ್ಲಿ ಪದಕ ಗೆಲ್ಲುವುದು ಸುಲಭವಲ್ಲ. ಅದಕ್ಕಾಗಿ ಜೀವನಪೂರ್ತಿ ಕಾಯಬೇಕಾಗುತ್ತದೆ. ಅನೇಕ ಕ್ರೀಡಾಪಟುಗಳು ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲಲು ತಮ್ಮ ಇಡೀ ಜೀವನ ಸವೆಸುತ್ತಾರೆ. ಹೀಗಾಗಿ ಇಲ್ಲಿ ಕ್ರೀಡೆಗೆ ಹೆಚ್ಚು ಪ್ರಾಧಾನ್ಯತೆ ಇಲ್ಲದ ಭಾರತಕ್ಕೆ ಹೆಚ್ಚು ಪದಕಗಳನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ.

ಒಲಿಂಪಿಕ್ಸ್ ಅರ್ಹತೆ

ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆಯುವುದೇ ದೊಡ್ಡ ಸಾಹಸ. ಅರ್ಹತಾ ಕೂಟಗಳ ಸ್ಪರ್ಧೆಯ ಮಟ್ಟವು ಉತ್ತಮವಾಗಿರುತ್ತದೆ. ಹೀಗಾಗಿ ಅನೇಕ ಭಾರತೀಯ ಕ್ರೀಡಾಪಟುಗಳು ಅರ್ಹತೆ ಪಡೆಯಲು ವಿಫಲರಾಗುತ್ತಾರೆ. ಭಾರತೀಯರು ಜಮೈಕಾದ ಸ್ಪರ್ಧಿಗಳಂತೆ ಉತ್ತಮ ಓಟಗಾರರು ಅಥವಾ ಆಸ್ಟ್ರೇಲಿಯಾ ಅಥವಾ ಅಮೆರಿಕದ ಜನರಂತೆ ಉತ್ತಮ ಈಜುಗಾರರಲ್ಲ. ಅಥ್ಲೆಟಿಕ್ಸ್​ನಲ್ಲಿ ಹೆಚ್ಚು ಬಹುಮಾನ ಗೆಲ್ಲುವ ದೇಶಗಳು ಒಲಿಂಪಿಕ್ಸ್​ನಲ್ಲಿ ಪಾರಮ್ಯ ಮೆರೆಯುತ್ತವೆ. ಇದಕ್ಕೆ ಒಬ್ಬೊಬ್ಬರು ಉತ್ತಮವಾಗಿದ್ದರೆ ಸಾಲದು. ಇಡೀ ತಂಡವೇ ಉತ್ತಮವಾಗಿರಬೇಕು. ಭಾರತದಲ್ಲಿ ಇಂಥ ಸ್ಪರ್ಧಿಗಳ ಸಂಖ್ಯೆ ಕಡಿಮೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನ ಸ್ಪರ್ಧಾ ಪಟ್ಟಿಯಲ್ಲಿರುವ ಕ್ರೀಡೆಗಳು ಯಾವುವು? ಇವುಗಳಲ್ಲಿ ಅತ್ಯಂತ ಪ್ರಾಚೀನ ಕ್ರೀಡೆಗಳು ಯಾವುದೆಲ್ಲ?

ಭಾರತದಲ್ಲಿ ಕೆಲವೇ ಕೆಲವು ಕೆಲವರು ಪದಕ ಗೆಲ್ಲುವಷ್ಟು ಸ್ಪರ್ಧಾತ್ಮಕರಾಗಿದ್ದಾರೆ. ಭಾರತೀಯರು ಸ್ವಾಭಾವಿಕವಾಗಿ ಉತ್ತಮ ಪ್ರದರ್ಶನ ನೀಡಬಲ್ಲ ಕ್ರಿಕೆಟ್, ಕಬಡ್ಡಿಯಂತಹ ಕ್ರೀಡೆಗಳು ಒಲಿಂಪಿಕ್ಸ್​​ನ ಭಾಗವಲ್ಲ. ಭಾರತೀಯರು ಅಥ್ಲೆಟಿಕ್ಸ್, ಈಜು, ಜಿಮ್ನಾಸ್ಟಿಕ್ಸ್, ಜೂಡೋ, ರೋಯಿಂಗ್​ನಲ್ಲಿ ಇನ್ನೂ ಗರಿಷ್ಠ ಸಾಧನೆ ಮಾಡಿಲ್ಲ. ಇವು ಸ್ಪರ್ಧೆಗಳು ಮತ್ತು ಪದಕಗಳಲ್ಲಿ ಹೆಚ್ಚಿನ ಭಾಗವನ್ನು ಹೊಂದಿವೆ.

ಕಾಮನ್ವೆಲ್ತ್​ನಲ್ಲಿ ಯಾಕೆ ಗೆಲ್ಲುತ್ತದೆ?

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದಲ್ಲಿ ಹೆಚ್ಚು ಪದಕಗಳನ್ನು ಯಾಕೆ ಗೆಲ್ಲುತ್ತದೆ ಎಂಬ ಪ್ರಶ್ನೆಯೂ ಇದೆ. ಯಾಕೆಂದೆರ ಈ ಕೂಟವು ಕಡಿಮೆ ಸ್ಪರ್ಧಾತ್ಮಕವಾಗಿದೆ. ಕೇವಲ ವಸಾಹತುಶಾಹಿ ದೇಶಗಳು ಮಾತ್ರ ಇದರಲ್ಲಿ ಭಾಗವಹಿಸುತ್ತವೆ. ಇನ್ನು ಕ್ರೀಡೆಯಲ್ಲಿ ಸೂಪರ್ ಪವರ್ ಆಗಿರುವ ಚೀನಾ, ಅಮೆರಿಕ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸುವುದಿಲ್ಲ. ಆದ್ದರಿಂದ ಭಾರತಕ್ಕೆ ಹೆಚ್ಚು ಪದಕ ಸಿಗುತ್ತದೆ.

ಕ್ರೀಡಾ ಸಂಸ್ಕೃತಿಯ ಕೊರತೆ

ಭಾರತದಲ್ಲಿ ಕ್ರೀಡಾ ಸಂಸ್ಕೃತಿ ಉತ್ತಮವಾಗಿಲ್ಲ. ಭ್ರಷ್ಟಾಚಾರ ಮತ್ತು ರಾಜಕೀಯ ಪ್ರಮುಖ ಪಾತ್ರ ವಹಿಸುತ್ತವೆ. ಕ್ರೀಡೆಯನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಮಕ್ಕಳನ್ನು ಹೆಚ್ಚು ಪ್ರೋತ್ಸಾಹಿಸಲಾಗುವುದಿಲ್ಲ. ಅಲ್ಲದೆ ಮೂಲಸೌಕರ್ಯಗಳು ವಿಶ್ವ ದರ್ಜೆಯದ್ದಲ್ಲದೆ. ಕ್ರೀಡಾ ಸೌಕರ್ಯ ಎಲ್ಲರಿಗೂ ಲಭ್ಯವಿಲ್ಲ. ಸಂತಸದ ಸಂಗತಿ ಎಂದರೆ ಇತ್ತೀಚಿನ ದಿನಗಳಲ್ಲಿ ಇದರ ಪ್ರಮಾಣ ಹೆಚ್ಚುತ್ತಿದೆ. ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಹತೆ ಪಡೆಯುತ್ತಾರೆ ಮತ್ತು ಒಲಿಂಪಿಕ್ಸ್ ನಲ್ಲಿ ಸಾಧನೆ ಮಾಡುವ ಹಾದಿಯಲ್ಲಿ ಸಾಗುತ್ತಿದ್ದಾರೆ.

ಕ್ರೀಡಾಪಟುಗಳ ಸಂಖ್ಯೆ ಕಡಿಮೆಯೇನಿಲ್ಲ

ವಾಸ್ತವವಾಗಿ ಭಾರತವು ಒಲಿಂಪಿಕ್ಸ್ ಗೆ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಕಳುಹಿಸುವ ದೇಶಗಳಲ್ಲಿ ಒಂದಾಗಿದೆ. 2016ರಲ್ಲಿ ಭಾರತವು 117 ಅಥ್ಲೀಟ್​ಗಳನ್ನು (63 ಪುರುಷರು ಮತ್ತು 54 ಮಹಿಳೆಯರು) ಒಲಿಂಪಿಕ್ಸ್​ಗೆ ಕಳುಹಿಸಿತ್ತು. ಆದರೂ ಕೇವಲ 2 ಪದಕಗಳನ್ನು ಪಡೆಯಿತು. 2012ರಲ್ಲಿ ಭಾರತ 83 ಅಥ್ಲೀಟ್ಸ್​ಗಳನ್ನು ಕಳುಹಿಸಿತ್ತು. ಆದರೆ 6 ಪದಕಗಳನ್ನು ಭಾರತ ತನ್ನದಾಗಿಸಿಕೊಂಡಿತು. ಇಲ್ಲಿ ಚಿನ್ನ ಇರಲಿಲ್ಲ. 2 ಬೆಳ್ಳಿ ಹಾಗೂ 4 ಕಂಚಿನ ಪದಕವಿತ್ತು.

202ರ ಟೋಕಿಯೊ ಒಲಿಂಪಿಕ್ಸ್​ಗೆ ಇದುವರೆಗಿನ ಗರಿಷ್ಠ 124 ಅಥ್ಲೀಟ್​ಗಳು ಹೋಗಿದ್ದರು. ಅಲ್ಲದೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಗರಿಷ್ಠ (1 ಚಿನ್ನ, 2 ಬೆಳ್ಳಿ ಹಾಗೂ 4 ಕಂಚಿನ ಪದಕಗಳು) ಸಾಧನೆ ಮಾಡಿದ್ದರು. ಭಾರತದಲ್ಲಿ ಹೆಚ್ಚಿನ ಜನರು ಕ್ರೀಡೆಯನ್ನು ವೃತ್ತಿಯಾಗಿ ಪರಿಗಣಿಸಲು ಆರಂಭಿಸಿದ ಬಳಿಕ ಸಂಖ್ಯೆ ಜಾಸ್ತಿಯಾಗುತ್ತಿದೆ. ಆದರೆ ಜಾಗತಿಕ ಮಟ್ಟದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಕ್ರೀಡೆಯಲ್ಲಿ ಭಾರತಕ್ಕೆ ಇನ್ನೂ ಹಿಡಿತ ಸಿಕ್ಕಿಲ್ಲ. ಹೀಗಾಗಿ ಪದಕಗಳನ್ನು ಗೆಲ್ಲುವುದು ಸುಲಭವಲ್ಲ.

ಈ ವರ್ಷದ ಪ್ಯಾರಿಸ್ ಒಲಿಂಪಿಕ್ಸ್​​ಗೆ 16 ಕ್ರೀಡಾ ವಿಭಾಗಗಳಲ್ಲಿ 48 ಮಹಿಳಾ ಕ್ರೀಡಾಪಟುಗಳು ಸೇರಿದಂತೆ ಒಟ್ಟು 118 ಭಾರತದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಪ್ಯಾರಿಸ್​​ಗೆ ತೆರಳುವ ಒಟ್ಟು 118 ಕ್ರೀಡಾಪಟುಗಳಲ್ಲಿ 26 ಖೇಲೋ ಇಂಡಿಯಾ ಕ್ರೀಡಾಪಟುಗಳು ಮತ್ತು 72 ಕ್ರೀಡಾಪಟುಗಳು ಮೊದಲ ಬಾರಿಗೆ ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದವರಾಗಿದ್ದಾರೆ.

ಮಕ್ಕಳ ಹಂತದಲ್ಲಿಯೇ ತರಬೇತಿ ಅಗತ್ಯ

ಭಾರತವು ಕ್ರೀಡೆಯನ್ನು ಬಾಲ್ಯದಲ್ಲಿಯೇ ಕಲಿಸಲು ವಿಫಲವಾಗಿದೆ. ಏಕೆಂದರೆ ಯುಎಸ್ಎ, ಚೀನಾ ಮತ್ತು ರಷ್ಯಾಗಳಂತೆ ಮಕ್ಕಳಿಗೆ ಬಾಲ್ಯದಿಂದಲೂ ಕ್ರೀಡೆಯನ್ನು ಕಲಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಒಲಿಂಪಿಕ್ಸ್​ನಲ್ಲಿ ಫಲಿತಾಂಶ ಸಿಗುವುದಿಲ್ಲ.

ಭಾರತವು ಪ್ರಸ್ತುತ ಕ್ರಿಕೆಟ್​ನಲ್ಲಿ ಅತ್ಯುತ್ತಮ ದೇಶ. (ಬಹುಶಃ ಅಗತ್ಯಕ್ಕಿಂತ ಹೆಚ್ಚಿನ ಪ್ರಾಮುಖ್ಯತೆ ಪಡೆಯುವ ಏಕೈಕ ಕ್ರೀಡೆ) ಇದು ದೀರ್ಘ ಆಟವಾಗಿರುವುದರಿಂದ ಮತ್ತು ಜಾಗತಿಕ ಕ್ರೀಡಾ ನಿಯಮಗಳಡಿ ಸೇರಲು ಬಿಸಿಸಿಐ ಹಿಂಜರಿಯುತ್ತಿರುವುದರಿಂದ ಜಾಗತಿಕ ಮಾನ್ಯತೆ ಸಿಗುತ್ತಿಲ್ಲ.

Continue Reading

ಕ್ರಿಕೆಟ್

Rishabh Pant: ಸಹ ಆಟಗಾರ ಖಲೀಲ್​ ಅಹ್ಮದ್​ರನ್ನು ಸ್ವಿಮ್ಮಿಂಗ್ ಪೂಲ್‌​ಗೆ ತಳ್ಳಿ ಹಾಕಿದ ಪಂತ್​; ವಿಡಿಯೊ ವೈರಲ್​

Rishabh Pant: ಪಂತ್​, ಅಕ್ಷರ್ ಪಟೇಲ್​​ ಮತ್ತು ಖಲೀಲ್​ ಉತ್ತಮ ಸ್ನೇಹಿತರಾಗಿದ್ದಾರೆ. ಜತೆಗೆ ಐಪಿಎಲ್​ನಲ್ಲಿಯೂ ಈ ಮೂರು ಆಟಗಾರರು ಡೆಲ್ಲಿ ಕ್ಯಾಪಿಟಲ್ಸ್​ ಪರ ಆಡುತ್ತಿದ್ದಾರೆ.

VISTARANEWS.COM


on

Rishabh Pant
Koo

ಮುಂಬಯಿ: ಟಿ20 ವಿಶ್ವಕಪ್​ ಗೆದ್ದ ಬಳಿಕ ಟೀಮ್​ ಇಂಡಿಯಾದ ಆಟಗಾರರು ತಮ್ಮ ಗೆಳೆಯರ, ಕುಟುಂಬದ ಜತೆ ದೇಶ-ವಿದೇಶಕ್ಕೆ ಪ್ರವಾಸ ಕೈಗೊಳ್ಳುತ್ತಾ ಎಂಜಾಯ್​ ಮಾಡುತ್ತಿದ್ದಾರೆ. ವಿಶ್ವಕಪ್​ ತಂಡದ ಭಾಗವಾಗಿದ್ದ, ಆತ್ಮೀಯ ಗೆಳೆಯರು ಆಗಿರುವ ರಿಷಭ್​ ಪಂತ್(Rishabh Pant)​, ಅಕ್ಷರ್​ ಪಟೇಲ್​ ಮತ್ತು ಖಲೀಲ್​ ಅಹ್ಮದ್​(Khaleel Ahmed) ಕೂಡ ಪ್ರವಾಸ ಹೋಗಿದ್ದಾರೆ. ಈ ವೇಳೆ ಪಂತ್​ ಖಲೀಲ್ ಅವರನ್ನು ಸ್ವಿಮ್ಮಿಂಗ್ ಪೂಲ್‌​ಗೆ(Khaleel Ahmed in a swimming pool) ತಳ್ಳಿ ಹಾಕಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಮೂರು ಆಟಗಾರರು ವಿದೇಶ ಪ್ರವಾಸದಲ್ಲಿ ಎಂಜಾಯ್​ ಮಾಡುತ್ತಿದ್ದು, ಹೊಟೇಲ್​ನಿಂದ ಬೀಚ್​ಗೆ ನಡೆದುಕೊಂಡು ಹೋಗುವಾಗ ಪಂತ್​ ಅವರು ಖಲೀಲ್​ ಅವರನ್ನು ಮಾತನಾಡಿಸುವಂತೆ ಹತ್ತಿರಕ್ಕೆ ಬಂದು ಸ್ವಿಮ್ಮಿಂಗ್ ಪೂಲ್‌​ಗೆ ದೂಡಿ ಹಾಕಿದ್ದಾರೆ. ನೀರಿಗೆ ಬೀಳುವ ಮುನ್ನವೇ ಖಲೀಲ್​ ತಮ್ಮ ಕೈಯಲ್ಲಿದ್ದ ಮೊಬೈಲ್​ ಮೇಲಕ್ಕೆ ಎಸೆದು ಮೊಬೈಲ್​ ನೀರಿಗೆ ಬೀಳದಂತೆ ನೋಡಿಕೊಂಡಿದ್ದಾರೆ. ನೀರಿಗೆ ಬಿದ್ದ ಖಲೀಲ್​ ಕಂಡು ಪಂತ್​ ಮತ್ತು ಇಲ್ಲಿ ನೆರೆದಿದ್ದ ಇತರ ಪ್ರವಾಸಿಗರು ಜೋರಾಗಿ ನಕ್ಕಿದ್ದಾರೆ. ಸ್ವಿಮ್ಮಿಂಗ್ ಪೂಲ್‌ನಿಂದ ಮೇಲೆದ್ದು ಬಂದ ಬಳಿಕ ಪಂತ್​ ಖಲೀಲ್​ ಅವರನ್ನು ತಬ್ಬಿಕೊಂಡಿದ್ದಾರೆ.

ಪಂತ್​, ಅಕ್ಷರ್​ ಮತ್ತು ಖಲೀಲ್​ ಉತ್ತಮ ಸ್ನೇಹಿತರಾಗಿದ್ದಾರೆ. ಐಪಿಎಲ್​ನಲ್ಲಿಯೂ ಈ ಮೂರು ಆಟಗಾರರು ಡೆಲ್ಲಿ ಕ್ಯಾಪಿಟಲ್ಸ್​ ಪರ ಆಡುತ್ತಾರೆ. ಪಂತ್​ ತಮಾಷೆಗೆಂದೇ ಖಲೀಲ್​ ಅವರನ್ನು ಸ್ವಿಮ್ಮಿಂಗ್ ಪೂಲ್‌ಗೆ ತಳ್ಳಿದ್ದು. ಸದ್ಯ ಗೆಳೆಯರ ಈ ಚೇಷ್ಟೆಯ ವಿಡಿಯೊ ವೈರಲ್​ ಆಗಿದ್ದು ನೆಟ್ಟಿಗರು ಈ ವಿಡಿಯೊಗೆ ದೇಕೊ ಪಂತ್​ನೇ ಏ ಕ್ಯಾ ಕಿಯಾ(ನೋಡಿ ಪಂತ್​ ಏನು ಮಾಡಿದ್ದಾರೆ) ಎಂದು ಕಮೆಂಟ್ ಮಾಡಿದ್ದಾರೆ.​

ಮುಂದಿನ ವರ್ಷ ಪಂತ್​ ಅವರು ಡೆಲ್ಲಿ ತಂಡ ತೊರೆದು ಬೇರೆ ಫ್ರಾಂಷೈಸಿ ಪರ ಆಡಲಿದ್ದಾರೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ ಪಂತ್​ ಚೆನ್ನೈ ಸೂಪರ್​ ಕಿಂಗ್ಸ್​ ಪರ ಆಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಮಹೇಂದ್ರ ಸಿಂಗ್​ ಧೋನಿ ಮುಂದಿನ ವರ್ಷ ಐಪಿಎಲ್​ ಆಡುವುದು ಖಚಿತತೆ ಇಲ್ಲ. ಇಂಪ್ಯಾಕ್ಟ್​ ನಿಯಮ ಇದ್ದರೆ ಆಡುವುದಾಗಿ ಫ್ರಾಂಚೈಸಿ ಮೂಲಗಳು ಈಗಾಗಲೇ ಮಾಹಿತಿ ನೀಡಿದೆ. ಈ ಬಾರಿಯೇ ಧೋನಿ ನಿವೃತ್ತಿಯಾಗಬೇಕಿತ್ತು. ಆದರೆ ಅವರು ಇನ್ನೂ ನಿವೃತ್ತಿ ಪ್ರಕಟಿಸಿಲ್ಲ. ತಂಡದಲ್ಲಿ ಸೂಕ್ತ ವಿಕೆಟ್​ ಕೀಪರ್​ ಇಲ್ಲದ ಕಾರಣ ಧೋನಿ ತಮ್ಮ ಕಾಲು ನೋವಿನ ಮಧ್ಯೆಯೂ ಸಂಪೂರ್ಣವಾಗಿ ಕೀಪಿಂಗ್​ ನಡೆಸಿದ್ದರು. ಧೋನಿ ಸ್ಥಾನಕ್ಕೆ ಪಂತ್​ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯೊಂದು ಕಂಡುಬಂದಿದೆ.

ಇದನ್ನೂ ಓದಿ Rishabh Pant: ಡೆಲ್ಲಿ ತೊರೆದು ಮುಂದಿನ ಐಪಿಎಲ್​ನಲ್ಲಿ ಈ ಫ್ರಾಂಚೈಸಿ ಪರ ಆಡಲಿದ್ದಾರೆ ರಿಷಭ್​ ಪಂತ್​

ಧೋನಿ ಮನೆಯ ಯಾವುದೇ ವಿಶೇಷ ಕಾರ್ಯಕ್ರಮದಲ್ಲೂ, ರಿಷಭ್​ ಪಂತ್​ ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಅಣ್ಣನ ಸ್ಥಾನದಲ್ಲಿ ನಿಂತು ಧೋನಿ ಅವರು ಪಂತ್​ಗೆ ಸಲಹೆ ನೀಡುತ್ತಾರೆ. ಪಂತ್​ ಕೂಡ ಧೋನಿ ಪರಿವಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಧೋನಿಯೇ ಪಂತ್​ ಅವರನ್ನು ಸಿಎಸ್​ಕೆ ತಂಡಕ್ಕೆ ಆಹ್ವಾನಿಸಬಹುದು. ಪಂತ್​ ಚೆನ್ನೈ ಸೇರಿದರೆ ಕೀಪಿಂಗ್​ ನಡೆಸಬಹುದು. ಧೋನಿ ಇಂಪ್ಯಾಕ್ಟ್​ ಆಟಗಾರನಾಗಿ ಬ್ಯಾಟಿಂಗ್​ ಮಾತ್ರ ನಡೆಸುವ ಸಾಧ್ಯತೆ ಇದೆ.

Continue Reading

ಕ್ರೀಡೆ

RCB: ಆರ್​ಸಿಬಿ ಕಪ್​ ಗೆಲ್ಲದಿರಲು ನೈಜ ಕಾರಣ ತಿಳಿಸಿದ ತಂಡದ ಮಾಜಿ ಆಟಗಾರ

RCB: ಆರ್​ಸಿಬಿ ತಂಡದಲ್ಲಿ ಸಂಸ್ಕೃತಿ ಎಂಬುದೇ ಇಲ್ಲ. ತಂಡದ ಪ್ರದರ್ಶನದ ಗಮನಿಸಿದರೆ ಎಲ್ಲವೂ ತಿಳಿಯುತ್ತದೆ. ಒಂದು ತಂಡವಾಗಿ ಆಡಲು ಬೇಕಾದ ಸಂಸ್ಕೃತಿ ಇಲ್ಲದೇ ಇರುವುದಕ್ಕೇ ಆರ್‌ಸಿಬಿ ಈವರೆಗೆ ಟ್ರೋಫಿ ಗೆದ್ದಿಲ್ಲ. ತಂಡದ ಎಲ್ಲ ಆಟಗಾರರನ್ನು ಒಂದೇ ರೀತಿಯಲ್ಲಿ ಕಂಡರೆ ಖಂಡಿತಾ ಕಪ್​ ಗೆಲ್ಲುವುದು ಖಚಿತ ಎಂದು ಪಾರ್ಥಿವ್‌ ಪಟೇಲ್‌ ಹೇಳಿದ್ದಾರೆ.

VISTARANEWS.COM


on

RCB
Koo

ಮುಂಬಯಿ: ಐಪಿಎಲ್​ನ ನತದೃಷ್ಠ ತಂಡಗಳಲ್ಲಿ ಒಂದಾಗಿರುವ ಆರ್​ಸಿಬಿ(RCB) ತಂಡ ಇದುವರೆಗೂ ಕಪ್​ ಗೆಲ್ಲಲು ಸಾಧ್ಯವಾಗಲಿಲ್ಲ ಏಕೆ ಎಂಬ ಸತ್ಯವನ್ನು ತಂಡದ ಮಾಚಿ ಆಟಗಾರ ಪಾರ್ಥಿವ್‌ ಪಟೇಲ್‌(Parthiv Patel) ರಿವೀಲ್​ ಮಾಡಿದ್ದಾರೆ. ತಂಡದಲ್ಲಿ ಉತ್ತಮ ಸಂಸ್ಕೃತಿ ಇಲ್ಲದೇ ಇರುವುದೇ ಕಪ್​ ಗೆಲ್ಲದಿರಲು ಪ್ರಮುಖ ಕಾರಣ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ಆರ್‌ಸಿಬಿ(Royal Challengers Bengaluru) ತಂಡದಲ್ಲಿ ಆಡುತ್ತಿದ್ದ ದಿನಗಳನ್ನು ಸ್ಮರಿಸಿರುವ ಪಾರ್ಥಿವ್‌ ಪಟೇಲ್‌, “ನಾನೂ ಆರ್‌ಸಿಬಿ ತಂಡದಲ್ಲಿ ಹಲವು ವರ್ಷಗಳ ಕಾಲ ಆಡಿದ್ದೇನೆ. ಆ ತಂಡಕ್ಕೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವಿದೆ. ಆದರೆ, ಆ ತಂಡದಲ್ಲಿ ಎಲ್ಲವೂ ವ್ಯಕ್ತಿ ಪೂಜೆಯ ಮೇಲೆ ನಿಂತಿದೆ. ಕೆಲವೇ ಕೆಲ ಸ್ಟಾರ್‌ ಆಟಗಾರರಿಗೆ ಮಾತ್ರ ವಿಶೇಷ ಸತ್ಕಾರ ನೀಡಲಾಗುತ್ತದೆ. ಈ ಆಟಗಾರರ ಸೇವೆಯ ಬಳಿಕವಷ್ಟೇ ತಂಡದ ಉಳಿದ ಆಟಗಾರರನ್ನು ಲೆಕ್ಕಕ್ಕೆ ತೆಗೆದುಕೊಳ್ಳಲಾಗುವುದು. ಇದನ್ನೂ ನಾನು ಕಣ್ಣಾರೆ ಕಂಡಿದ್ದೇನೆ” ಎಂದು ಹೇಳಿದ್ದಾರೆ.

“ಆರ್​ಸಿಬಿ ತಂಡದಲ್ಲಿ ಸಂಸ್ಕೃತಿ ಎಂಬುದೇ ಇಲ್ಲ. ತಂಡದ ಪ್ರದರ್ಶನದ ಗಮನಿಸಿದರೆ ಎಲ್ಲವೂ ತಿಳಿಯುತ್ತದೆ. ಒಂದು ತಂಡವಾಗಿ ಆಡಲು ಬೇಕಾದ ಸಂಸ್ಕೃತಿ ಇಲ್ಲದೇ ಇರುವುದಕ್ಕೇ ಆರ್‌ಸಿಬಿ ಈವರೆಗೆ ಟ್ರೋಫಿ ಗೆದ್ದಿಲ್ಲ. ತಂಡದ ಎಲ್ಲ ಆಟಗಾರರನ್ನು ಒಂದೇ ರೀತಿಯಲ್ಲಿ ಕಂಡರೆ ಖಂಡಿತಾ ಕಪ್​ ಗೆಲ್ಲುವುದು ಖಚಿತ” ಎಂದು ಪಾರ್ಥಿವ್‌ ಪಟೇಲ್‌ ಹೇಳಿದ್ದಾರೆ.

ಪಾರ್ಥಿವ್‌ ಅವರ ಈ ಹೇಳಿಕೆಗೆ ನೆಟ್ಟಿಗರರು ಕಮೆಂಟ್​ ಮಾಡಿದ್ದು, ದೊಡ್ಡ ಚಿಂತಕ, ಕ್ರಿಕೆಟ್‌ ವಿಮರ್ಶಕ, ದೇಶಿಯ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಆಟಗಾರ, ಯುವಕ, ಐಪಿಎಲ್‌ ಅನುಭವ ಹಾಗೂ ಆಟಗಾರರ ಸಾಮರ್ಥ್ಯದ ಅರಿವು ಹೊಂದಿರುವ ನೀವು ಏಕೆ ಆರ್​ಸಿಬಿ ಮ್ಯಾನೆಜ್​ಮೆಂಟ್​ ಸೇರಿ ಉತ್ತಮ ಸಂಸ್ಕೃತಿಯ ವಾತಾವರಣ ನಿರ್ಮಾಣ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ.

ಮುಂದಿನ ವರ್ಷ ಮೆಗಾ ಹರಾಜು ಕೂಡ ನಡೆಯಲಿದೆ. (IPL 2025)​ 18ನೇ ಆವೃತ್ತಿಯಲ್ಲಿ ಬೆಂಗಳೂರು ತಂಡದಲ್ಲಿ ಕೂಡ ದೊಡ್ಡ ಬದಲಾವಣೆಯೊಂದು ಸಂಭವಿಸುವ ಮುನ್ಸೂಚನೆಯೊಂದು ಲಭಿಸಿದೆ. ಈ ಹಿಂದೆ ತಂಡದ ನಾಯಕನಾಗಿದ್ದ ದಕ್ಷಿಣ ಆಫ್ರಿಕಾದ ಡುಪ್ಲೆಸಿಸ್​ ಅವರನ್ನು ಕೈ ಬಿಟ್ಟು ಮಾಜಿ ನಾಯಕ ವಿರಾಟ್​ ಕೊಹ್ಲಿ(Virat Kohli)ಗೆ ಮತ್ತೆ ನಾಯಕತ್ವ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ IPL 2025: ಕೆಕೆಆರ್​ ತಂಡದ ಮೆಂಟರ್​ ಆಗಲಿದ್ದಾರಾ ರಾಹುಲ್ ದ್ರಾವಿಡ್?

ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಸೂಕ್ತ ನಾಯಕನ ಸ್ಥಾನಕ್ಕೆ ಚೆನ್ನೈ ತಂಡದಲ್ಲಿದ್ದ ಫಾಫ್​ ಡುಪ್ಲೆಸಿಸ್​ ಅವರನ್ನು ಖರೀದಿ ಮಾಡಿ ಅವರಿಗೆ ನಾಯಕತ್ವ ನೀಡಲಾಗಿತ್ತು.

ಕಳೆದ ಮೂರು ಸೀಸನ್​ನಲ್ಲಿ ಡುಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಕಳೆದ ಬಾರಿಯಂತೂ ಲೀಗ್​ನಿಂದಲೇ ಹೊರಬಿದ್ದಿತ್ತು. ಇದೀಗ ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ. ಈ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ಮೂಲಕ 700ಕ್ಕೂ ಅಧಿಕ ರನ್​ ಕಲೆ ಹಾಕಿ ಟೂರ್ನಿಯ ಅತ್ಯಧಿಕ ಸ್ಕೋರ್​ ಎನಿಸಿಕೊಂಡಿದ್ದರು.

Continue Reading
Advertisement
Pennar River Dispute
ಪ್ರಮುಖ ಸುದ್ದಿ6 mins ago

Pennar River Dispute: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; 8 ವಾರದಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Rape Case
Latest16 mins ago

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಕ್ರೀಡೆ18 mins ago

India at the Olympics: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಸಾಧನೆಯ ಇಣುಕು ನೋಟ

Ambani Video
ಪ್ರಮುಖ ಸುದ್ದಿ30 mins ago

Ambani Video: 3 ವರ್ಷದ ಅಂಬಾನಿ ಮೊಮ್ಮಗ ವೇದಿಕೆ ಮೇಲೆ ಜಾರಿ ಬಿದ್ದ, ಆದರೆ ಜನರ ಹೃದಯ ಗೆದ್ದ!

Money Guide
ಮನಿ-ಗೈಡ್30 mins ago

Money Guide: ಹಿರಿಯರಿಗೆ ಆರೋಗ್ಯ ವಿಮೆ: ಯಾಕಾಗಿ? ಏನಿದರ ಉಪಯೋಗ?

Muharram 2024 Man dies in fire during
ರಾಯಚೂರು40 mins ago

Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

hit and run case
ದೇಶ42 mins ago

Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Assembly Session
ಕರ್ನಾಟಕ48 mins ago

Assembly Session: ವಾಲ್ಮೀಕಿ ನಿಗಮ ಅಕ್ರಮ ದಲಿತರಿಗೆ ಮಾಡಿರೋ ಅನ್ಯಾಯ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

BMTC staff commits suicide at headquarters
ಬೆಂಗಳೂರು1 hour ago

BMTC staff : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ24 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌