Site icon Vistara News

KL Rahul : ಶ್ರೀಲಂಕಾ ಪ್ರವಾಸದ ಏಕ ದಿನ ತಂಡಕ್ಕೆ ಕೆ. ಎಲ್ ರಾಹುಲ್ ನಾಯಕ?

KL Rahul

ಬೆಂಗಳೂರು: ಜಿಂಬಾಬ್ವೆ ಪ್ರವಾಸದ ಬಳಿಕ ಟೀಮ್ ಇಂಡಿಯಾ ತನ್ನ ಮುಂದಿನ ಕಾರ್ಯಯೋಜನೆಗೆ ಸಜ್ಜಾಗಬೇಕಾಗಿದೆ ವೈಟ್-ಬಾಲ್ ಸರಣಿಗಾಗಿ ಭಾರತ ಬಳಗ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಹೊಸ ಕೋಚ್​ ಗೌತಮ್ ಗಂಭೀರ್ ಅಡಿಯಲ್ಲಿ ಈ ತಂಡ ದ್ವೀಪ ರಾಷ್ಟ್ರಕ್ಕೆ ಹೋಗಲಿದೆ. ಈ ಸರಣಿಯಲ್ಲಿ ಯಾರೆಲ್ಲ ಇರುತ್ತಾರೆ ಎಂಬ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಆದರೆ, ವರದಿಗಳ ಪ್ರಕಾರ, ಸ್ಟಾರ್ ಬ್ಯಾಟರ್​ ಹಾಗೂ ಕನ್ನಡಿಗ ಕೆಎಲ್ ರಾಹುಲ್ (KL Rahul) ತಂಡಕ್ಕೆ ಮರಳಲಿದ್ದು ತಂಡವನ್ನು ಮುನ್ನಡೆಸುವ ನಿರೀಕ್ಷೆಯಿದೆ.

ಏಕದಿನ ಸರಣಿಯಿಂದ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡಲಾಗಿದೆ ಎಂದು ವರದಿಯಾಗಿದೆ. ಈ ಸರಣಿಯು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಅಡಿಯಲ್ಲಿ ತಂಡಕ್ಕೆ ಮೊದಲನೆಯದು ಶ್ರೀಲಂಕಾ ಸವಾಲು. ಹೀಗಾಗಿ ಈ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲು ಕೆಎಲ್ ರಾಹುಲ್ ಮುಂಚೂಣಿಯಲ್ಲಿ ಆಯ್ಕೆಯಾಗಿದ್ದಾರೆ.

ಕೆಎಲ್ ರಾಹುಲ್ ಟಿ 20 ವಿಶ್ವಕಪ್​​ ಗೆ ಹೋಗಿದ್ದ ಭಾರತದ ತಂಡದಿಂದ ಹೊರಗುಳಿದಿದ್ದರು. ಆದರೆ ಈಗ ಶ್ರೀಲಂಕಾ ಪ್ರವಾಸದ ಏಕದಿನ ಹಂತದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ನಾಯಕತ್ವದ ಪಾತ್ರವನ್ನು ಸಹ ತೆಗೆದುಕೊಳ್ಳಲಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ 20 ಯಿಂದ ನಿವೃತ್ತರಾಗುವುದರೊಂದಿಗೆ ಆಲ್ರೌಂಡರ್ ಹಾರ್ದಿಕ್ ಚುಟುಕು ಸ್ವರೂಪದ ಕ್ರಿಕೆಟ್​​ನಲ ಲಿ ತಂಡದ ಜವಾಬ್ದಾರಿ ವಹಿಸುವ ನಿರೀಕ್ಷೆಯಿದೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ, ಏಕೆಂದರೆ ಅವರು ದೀರ್ಘ ಸ್ವರೂಪದಲ್ಲಿ ರನ್ ಗಳಿಸುತ್ತಾರೆ ಎಂದು ಮಂಡಳಿಯು ನಂಬಿದೆ ಎಂದು ಪತ್ರಕರ್ತ ವಿಪುಲ್ ಕಶ್ಯಪ್ ಬರೆದುಕೊಂಡಿದ್ದಾರೆ.

ಮೂಲಗಳ ಪ್ರಕಾರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಅರ್ಹ ವಿರಾಮ ತೆಗೆದುಕೊಳ್ಳಲಿದ್ದಾರೆ ಮತ್ತು ಸದ್ಯಕ್ಕೆ ಟೆಸ್ಟ್ ಕ್ರಿಕೆಟ್​ ಕಡೆಗೆ ಮಾತ್ರ ಗಮನ ಹರಿಸಲಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಇಂಗ್ಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ಇವರಿಬ್ಬರಿಗೆ ಇದು ಸಾಕಷ್ಟು ಅಭ್ಯಾಸ ಸಿಗಲಿದೆ.

ಇದನ್ನೂ ಓದಿ: ICC T20 Rankings : ಟಿ20 ರ್ಯಾಂಕಿಂಗ್ ಪಟ್ಟಿಯಲ್ಲಿ ಭರ್ಜರಿ ಜಿಗಿತ ಕಂಡ ಋತುರಾಜ್​​

“ಏಕದಿನ ತಂಡದಲ್ಲಿ ಕೊಹ್ಲಿ ಮತ್ತು ರೋಹಿತ್​ಗೆ ಆಯ್ಕೆಗಳಿವೆ. ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ಇಂಗ್ಲೆಂಡ್ ವಿರುದ್ಧದ ಮೂರು 50 ಓವರ್​ಗಳ ಪಂದ್ಯಗಳು ಅವರಿಗೆ ಸಾಕಷ್ಟು ಅಭ್ಯಾಸ ನೀಡಲಿದೆ ಮುಂದಿನ ಕೆಲವು ತಿಂಗಳುಗಳವರೆಗೆ, ಇಬ್ಬರೂ ಟೆಸ್ಟ್​​ಗೆ ಆದ್ಯತೆ ನೀಡುತ್ತಾರೆ /ಭಾರತವು ಸೆಪ್ಟೆಂಬರ್​ನಿಂದ ಜನವರಿ ನಡುವೆ ಅವುಗಳಲ್ಲಿ 10 ಪಂದ್ಯಗಳನ್ನು ಆಡಲಿದೆ,” ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಆಗಸ್ಟ್ 2024 ರಲ್ಲಿ ಪ್ರಾರಂಭವಾಗಲಿದೆ. ನಾಯಕ ಯಾರೆಂಬುದನ್ನು ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಿದರೆ, ಹಾರ್ದಿಕ್ ಪಾಂಡ್ಯ ಅವರಿಗೂ ಅನುಕೂಲವಾಗಬಹುದು. ಇತ್ತೀಚಿನ ವರದಿಗಳು ಪಾಂಡ್ಯ ಶ್ರೀಲಂಕಾ ವಿರುದ್ಧ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ಸೂಚಿಸಿವೆ.

Exit mobile version