Kohli VS Babar | ಬಾಬರ್ ಅಜಮ್‌ಗಿಂತ ವಿರಾಟ್‌ ಹೇಗೆ ಶ್ರೇಷ್ಠ ಬ್ಯಾಟರ್‌? ಪಾಕ್‌ ಲೆಜೆಂಡ್‌ಗಳು ವಿವರಿಸಿದ್ದಾರೆ Vistara News

T20 ವಿಶ್ವಕಪ್

Kohli VS Babar | ಬಾಬರ್ ಅಜಮ್‌ಗಿಂತ ವಿರಾಟ್‌ ಹೇಗೆ ಶ್ರೇಷ್ಠ ಬ್ಯಾಟರ್‌? ಪಾಕ್‌ ಲೆಜೆಂಡ್‌ಗಳು ವಿವರಿಸಿದ್ದಾರೆ

ಪಾಕ್​ ನಾಯಕ ಬಾಬರ್​ ಅಜಂ ಮತ್ತು ವಿರಾಟ್​ ಕೊಹ್ಲಿಯ ಬ್ಯಾಟಿಂಗ್​ ವ್ಯತ್ಯಾಸವನ್ನು ಪಾಕ್ತಿಸ್ತಾನದ ಮಾಜಿ ಆಟಗಾರರು ಅವಲೋಕನ ಮಾಡಿದ್ದಾರೆ.

VISTARANEWS.COM


on

t20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಾಹೋರ್​: ವಿರಾಟ್ ಕೊಹ್ಲಿ ಮತ್ತು ಬಾಬರ್ ಅಜಂ(Kohli VS Babar) ನಡುವೆ ಉತ್ತಮ ಬ್ಯಾಟರ್ ಯಾರು ಎಂಬ ಚರ್ಚೆ ಮತ್ತೊಮ್ಮೆ ಉಲ್ಬಣಗೊಂಡಿದೆ, ಏಕೆಂದರೆ ಎರಡು ವರ್ಷಗಳಿಂದ ರನ್‌ಗಾಗಿ ಹೆಣಗಾಡುತ್ತಿದ್ದ ಭಾರತೀಯ ಬ್ಯಾಟರ್ ಮತ್ತೆ ಮೈದಾನವನ್ನು ಆಳಲು ಪ್ರಾರಂಭಿಸಿದ್ದಾರೆ.

ಪಾಕಿಸ್ತಾನದ ಮಾಜಿ ಆಟಗಾರರಾದ ಮಿಸ್ಬಾ ಉಲ್ ಹಕ್, ಶೋಯೆಬ್​ ಮಲಿಕ್​ ಮತ್ತು ವಕಾರ್​ ಯೂನಿಸ್​ ಮತ್ತು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅದರಂತೆ ವಿರಾಟ್​ ಕೊಹ್ಲಿ ಆರಂಭದಲ್ಲಿ ನಿಧಾನಗತಿಯ ಆಟಕ್ಕೆ ಮುಂದಾಗಿ ಬಳಿಕ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸುತ್ತಾರೆ. ಆದರೆ ಬಾಬರ್​ ಇದಕ್ಕೆ ತದ್ವಿರುದ್ಧ. ಆರಂಭದಲ್ಲಿ ಆಕ್ರಮಣಕಾರಿ ಆಟಕ್ಕೆ ಮುಂದಾಗಿ ಬಳಿಕ ಮಂಕಾಗುತ್ತಾರೆ. ಇದು ಪಂದ್ಯದ ಫಲಿತಾಂಶದ ಮೇಳೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ವಿರಾಟ್​ನಂತೆ ಬ್ಯಾಟ್​ ಬೀಸಿ ಬಾಬರ್​ಗೆ ಸಲಹೆ

ವಿರಾಟ್ ಕೊಹ್ಲಿ ಅವರು ಚೇಸಿಂಗ್​ ವೇಳೆ ಆರಂಭದಲ್ಲಿ ರನ್​ ಗಳಿಸಲು ಹೆಚ್ಚು ಎಸೆತಗಳನ್ನು ಎದುರಿಸಿ ಆಡುವುದರಿಂದ ಅವರ ಸ್ಟ್ರೈಕ್​ರೇಟ್ ಕಡಿಮೆ ಇರುತ್ತದೆ. ಆದರೆ ಒಮ್ಮೆ ಬ್ಯಾಟಿಂಗ್​ಗೆ ಹೊಂದಿಕೊಂಡ ಬಳಿಕ ಅವರ ಸ್ಟ್ರೇಕ್​ರೇಟ್​ ಹೆಚ್ಚಾಗುತ್ತಲೇ ಸಾಗುತ್ತದೆ. ಇದೇ ಕೆಲಸವನ್ನು ಬಾಬರ್ ಅಜಂ ಕೂಡ ಮಾಡಬೇಕಿದೆ. ಏಕೆಂದರೆ ಮೊದಲ ಆರು ಓವರ್‌ಗಳ ಬಳಿಕ ಬಾಬರ್‌ನ ಸ್ಟ್ರೈಕ್ ರೇಟ್ ಕಡಿಮೆಯಾಗುವುದನ್ನು ನಾವು ಹೆಚ್ಚಾಗಿ ನೋಡಿದ್ದೇವೆ. ಮ್ಯಾಚ್ ವಿನ್ನಿಂಗ್ ಇನಿಂಗ್ಸ್​ ವೇಳೆ ಇದು ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸುತ್ತದೆ. ಆದ್ದರಿಂದ ವಿರಾಟ್​ ಅವರಂತೆ ಬಾಬರ್​ ಕೂಡ ಬ್ಯಾಟ್​ ಬೀಸಬೇಕೆಂದು ಪಾಕ್​ ಮಾಜಿ ಆಟಗಾರರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ | T20 World Cup | ಟಿ20 ವಿಶ್ವ ಕಪ್​ಗೆ ಮಳೆ ಕಾಟ; ಶುಕ್ರವಾರದ ಎರಡೂ ಪಂದ್ಯಗಳು ರದ್ದು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

T20 ವಿಶ್ವಕಪ್

Asian Games 2023: 41 ವರ್ಷಗಳ ಬಳಿಕ ಕುದುರೆ ಸವಾರಿಯಲ್ಲಿ ಚಿನ್ನ ಗೆದ್ದ ಭಾರತ

ಕುದುರೆ ಸವಾರಿ ಸ್ಪರ್ಧೆಯಲ್ಲಿ ಭಾರತ ಚಿನ್ನದ ಪದಕ ಜಯಿಸಿದೆ. ಈ ಸಾಧನೆಯೊಂದಿಗೆ 41 ವರ್ಷಗಳ ಬಳಿಕ ಭಾರತ ತಂಡ ಈ ಸ್ಪರ್ಧೆಯಲ್ಲಿ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ

VISTARANEWS.COM


on

India Win 1st Equestrian Gold
Koo

ಹ್ಯಾಂಗ್‌ಝೂ: ಏಷ್ಯನ್​ ಗೇಮ್ಸ್​ನ​(Asian Games 2023) ಕುದುರೆ ಸವಾರಿ(Equestrian) ಸ್ಪರ್ಧೆಯಲ್ಲಿ ಭಾರತ ಚಿನ್ನದ ಪದಕ ಜಯಿಸಿದೆ. ಈ ಸಾಧನೆಯೊಂದಿಗೆ 41 ವರ್ಷಗಳ ಬಳಿಕ ಭಾರತ ತಂಡ ಈ ಸ್ಪರ್ಧೆಯಲ್ಲಿ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ. 1982ರಿಂದ ಆರಂಭವಾದ ಈ ಕ್ರೀಡೆಯಲ್ಲಿ ಭಾರತ ಮೊದಲ ಚಿನ್ನದ ಪದಕದ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ.

ಟೀಮ್ ಡ್ರೆಸ್ಸೇಜ್ ಈವೆಂಟ್‌ನಲ್ಲಿ ಭಾರತ ತಂಡವು ಒಟ್ಟು 209.205 ಅಂಕದೊಂದಿಗೆ ಚಿನ್ನದ ಪದಕ ಜಯಿಸಿದರೆ, ಚೀನಾ 204.882 ರೊಂದಿಗೆ ಬೆಳ್ಳಿ, ಹಾಂಗ್​ಕಾಂಗ್ ಚೀನಾ 204.852.28 ಕಂಚಿನ ಪದಕ ಜಯಿಸಿತು. ಸುದೀಪ್ತಿ ಹಜೇಲಾ, ದಿವ್ಯಾಕೃತಿ ಸಿಂಗ್, ಹೃದಯ್ ಛೇಡಾ, ಅನುಷ್ ಅಗರ್ವಾಲ್​​ ಚಿನ್ನಕ್ಕೆ ಕೊರಳೊಡ್ಡಿದ ಭಾರತದ ಕ್ರೀಡಾಪಟುಗಳು. 1982ರಲ್ಲಿ ನವದೆಹಲಿಯಲ್ಲಿ ನಡೆದ ಏಷ್ಯನ್ ಗೇಮ್ಸ್ ವೇಳೆ ಭಾರತವು ಕಂಚಿನ ಪದಕ ಗೆದ್ದಿತ್ತು.

ಈ ಚಿನ್ನದ ಪದಕದೊಂದಿಗೆ ಭಾರತ ಸದ್ಯ ಟೂರ್ನಿಯಲ್ಲಿ ಮೂರು ಚಿನ್ನ ಗೆದ್ದಂತಾಗಿದೆ. ಇದಕ್ಕೂ ಮುನ್ನ ಮಹಿಳಾ ಕ್ರಿಕೆಟ್​ ಮತ್ತು 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಪುರುಷರ ತಂಡವು ಚಿನ್ನದ ಪದಕ ಜಯಿಸಿತ್ತು. ಸದ್ಯ ಭಾರತ 14 ಪದಕಗೆದ್ದಿದೆ.

ಪ್ರಧಾನಿ ಮೋದಿಯಿಂದ ಮೆಚ್ಚುಗೆ

ಐತಿಹಾಸಿಕ ಸಾಧನೆ ಮಾಡಿದ ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. “ಹಲವು ದಶಕಗಳ ಬಳಿಕ ನಮ್ಮ ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್ ತಂಡವು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದಿರುವುದು ಅತ್ಯಂತ ಹೆಮ್ಮೆಯ ವಿಷಯ. ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಮ್ಮ ರಾಷ್ಟ್ರಕ್ಕೆ ಗೌರವ ತಂದ ಸುದೀಪ್ತಿ ಹಜೇಲಾ, ದಿವ್ಯಾಕೃತಿ ಸಿಂಗ್, ಹೃದಯ್ ಛೇಡಾ, ಅನುಷ್ ಅಗರ್ವಾಲ್​ಗೆ ಅಭಿನಂದನೆಗಳು” ಎಂದು ಮೋದಿ ಟ್ವೀಟ್​ ಮಾಡಿದ್ದಾರೆ.

ಸೈಲಿಂಗ್​ನಲ್ಲಿ ಎರಡು ಪದಕ

ಇದಕ್ಕೂ ಮುನ್ನ ಪುರುಷರ ವಿಂಡ್‌ಸರ್ಫರ್ ಆರ್‌ಎಸ್: ಎಕ್ಸ್ ಈವೆಂಟ್‌ನಲ್ಲಿ ಇಬಾದ್​ ಅಲಿ(Eabad Ali) ಕಂಚಿನ ಪದಕ ಜಯಿಸಿದರೆ, ಮಹಿಳೆಯರ ಸಿಂಗ್ಸಲ್ಸ್​ ವಿಭಾಗದ ಸೈಲಿಂಗ್(ದೋಣಿ ಸ್ಪರ್ಧೆ) ಸ್ಪರ್ಧೆಯ ILCA4 ರೇಸ್ 11ನಲ್ಲಿ ನೇಹಾ ಠಾಕೂರ್(Neha Thakur) ಬೆಳ್ಳಿ ಪದಕ ಜಯಿಸಿದ್ದರು. ಒಟ್ಟಾರೆ ಮಂಗಳವಾರ ಭಾರತ ಮೂರು ಪದಕ ಜಯಿಸಿದಂತಾಗಿದೆ.

ಇದನ್ನೂ ಓದಿ ​Asian Games 2023: ಸೈಲಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಕಂಚಿಗೆ ತೃಪ್ತಿಪಟ್ಟ ಇಬಾದ್​ ಅಲಿ

ಮಂಗಳವಾರ ನಡೆದ ಫೈನಲ್​ ಸುತ್ತಿನ ವಿಂಡ್‌ಸರ್ಫರ್ ಆರ್‌ಎಸ್: ಎಕ್ಸ್ ಈವೆಂಟ್‌ನಲ್ಲಿ ಇಬಾದ್​ ಅಲಿ 52 ಅಂಕದೊಂದಿಗೆ ಕಂಚಿನ ಪದಕ್ಕೆ ಕೊರಳೊಡ್ಡಿದರು. ಬಾಲಕಿಯರ ಡಿಂಗಿ ಐಎಲ್ ಸಿಎ4 ಸ್ಪರ್ಧೆಯಲ್ಲಿ ನೇಹಾ ಠಾಕೂರ್ 11 ರೇಸ್​ಗಳಲ್ಲಿ ಒಟ್ಟು 27 ಅಂಕಗಳಿಸಿ ಬೆಳ್ಳಿ ಗೆದ್ದು ಈ ಸ್ಪರ್ಧೆಯಲ್ಲಿ ಭಾರತಕ್ಕೆ ಐತಿಹಾಸಿಕ ಪದಕದ ಖಾತೆ ತೆರೆದಿದ್ದರು. ಥಾಯ್ಲೆಂಡ್‌ನ ನೊಪಸೋರ್ನ್ ಖುನ್ಬೂಂಜಾನ್ 16 ಅಂಕಗಳೊಂದಿಗೆ ಚಿನ್ನ ಪದಕ, ಸಿಂಗಾಪುರದ ಕೀರಾ ಮೇರಿ ಕಾರ್ಲೈಲ್ 28 ಅಂಕಗಳೊಂದಿಗೆ ಕಂಚಿನ ಪದಕಕ್ಕೆ ತೃಪ್ತಿಪಟ್ಟಿದ್ದರು.

ಹಾಕಿಯಲ್ಲಿ ಭರ್ಜರಿ ಗೆಲುವು

ಪುರುಷರ ಹಾಕಿ ತಂಡ ಭರ್ಜರಿ ಗೆಲುವು ಸಾಧಿಸಿದೆ. ಸಿಂಗಪುರ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ 16-1 ಗೋಲುಗಳ ಅಂತರದ ಅಧಿಕಾರಯುತ ಗೆಲುವು ಸಾಧಿಸಿದೆ. ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಮಂದೀಪ್ ಸಿಂಗ್ ಅವರ ಹ್ಯಾಟ್ರಿಕ್ ಗೋಲು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು. ಇದು ಭಾರತಕ್ಕೆ ಒಲಿದ ಸತತ ಎರಡನೇ ಗೆಲುವಾಗಿದೆ. ಭಾರತ ಮುಂದಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ಸವಾಲು ಎದುರಿಸಲಿದೆ. ಈ ಪಂದ್ಯ ಗುರುವಾರ ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತ ತಂಡ ಉಜ್ಬೇಕಿಸ್ತಾನ ವಿರುದ್ಧ 16-0 ಅಂತರದ ಜಯ ಸಾಧಿಸಿತ್ತು.

ಭಾರತ ಪರ ಹರ್ಮನ್‌ಪ್ರೀತ್ (24, 39, 40, 42ನೇ ನಿಮಿಷ) ಮತ್ತು ಮಂದೀಪ್ (12, 30, 51ನೇ ನಿಮಿಷ), ಅಭಿಷೇಕ್ (51, 52ನೇ ನಿಮಿಷ), ವರುಣ್ ಕುಮಾರ್ (55, 55ನೇ ನಿಮಿಷ), ಲಲಿತ್ ಕುಮಾರ್ ಉಪಾಧ್ಯಾಯ (16ನೇ ನಿಮಿಷ), ಗುರ್ಜಂತ್ ಸಿಂಗ್ (22ನೇ ನಿಮಿಷ), ವಿವೇಕ್ ಸಾಗರ್ ಪ್ರಸಾದ್(23ನೇ ನಿಮಿಷ), ಮನ್ ಪ್ರೀತ್ ಸಿಂಗ್ (37ನೇ ನಿಮಿಷ), ಶಂಶೇರ್ ಸಿಂಗ್ (38ನೇ ನಿಮಿಷ) ಗೋಲು ಬಾರಿಸಿ ತಂಡಕ್ಕೆ ಗೆಲುವು ತಂದು ಕೊಟ್ಟರು.

Continue Reading

T20 ವಿಶ್ವಕಪ್

Rohit Sharma | ಬಾಂಗ್ಲಾ ಸರಣಿಗೆ ಸಜ್ಜಾಗುತ್ತಿರುವ ರೋಹಿತ್​ ಶರ್ಮ; ನೆಟ್ಸ್​ನಲ್ಲಿ ಭರ್ಜರಿ ತಾಲೀಮು

ಬಾಂಗ್ಲಾದೇಶ ವಿರುದ್ಧದ ಸರಣಿಗೆ ಮುನ್ನ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮಾ ನೆಟ್ಸ್​ನಲ್ಲಿ ಭರ್ಜರಿ ಅಭ್ಯಾಸ ನಡೆಸಿದ್ದಾರೆ.​

VISTARANEWS.COM


on

Rohit Sharma
Koo

ಮುಂಬಯಿ: ಮುಂದಿನ ತಿಂಗಳು ಭಾರತ ತಂಡ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು ಏಕದಿನ ಮತ್ತು ಟೆಸ್ಟ್​ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈ ಸರಣಿಯಲ್ಲಿ ಭರ್ಜರಿ ಪ್ರದರ್ಶನ ತೋರುವ ನಿಟ್ಟಿನಲ್ಲಿ ನಾಯಕ ರೋಹಿತ್​ ಶರ್ಮಾ ನೆಟ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್​ ಅಭ್ಯಾಸ ನಡೆಸಿದ್ದಾರೆ.

ನ್ಯೂಜಿಲ್ಯಾಂಡ್​ ಪ್ರವಾಸಕ್ಕೆ ವಿಶ್ರಾಂತಿ ಪಡೆದಿರುವ ರೋಹಿತ್​ ಇದೀಗ ನೆಟ್​ನಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ರೋಹಿತ್​ ಜತೆಗೆ ವಿರಾಟ್​ ಕೊಹ್ಲಿ, ಕೆಲ್​. ಎಲ್ ರಾಹುಲ್​ ಸೇರಿ ಪ್ರಮುಖ ಹಿರಿಯ ಆಟಗಾರರಿಗೆ ಕಿವೀಸ್​ ಸರಣಿಯಿಂದ ವಿಶ್ರಾಂತಿ ನೀಡಲಾಗಿತ್ತು. ಆದರೆ ಈ ಎಲ್ಲ ಆಟಗಾರರು ಬಾಂಗ್ಲಾ ವಿರುದ್ಧದ ಸರಣಿಗೆ ತಂಡ ಸೇರಿಕೊಳ್ಳಲಿದ್ದಾರೆ.

ವಿರಾಟ್ ಕೊಹ್ಲಿಯೂ ಬಾಂಗ್ಲಾ ಸರಣಿಗೆ ಮುನ್ನ ಜಿಮ್​ನಲ್ಲಿ ವರ್ಕ್​ಔಟ್​ ಮಾಡಿ ಫಿಟ್​ನೆಸ್​ ಕಾಯ್ದುಕೊಳ್ಳುತ್ತಿರುವ ವಿಡಿಯೊ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು. ಇದೀಗ ನಾಯಕ ರೋಹಿತ್ ಶರ್ಮಾ ಕೂಡ ಪ್ಯಾಡ್ ಕಟ್ಟಿ ಬ್ಯಾಟಿಂಗ್ ಅಭ್ಯಾಸ ಶುರು ಮಾಡಿದ್ದು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ನೆಟ್ ಒಳಗಡೆ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಸದ್ಯ ಫಾರ್ಮ್​ನಲ್ಲಿ ಇಲ್ಲದ ರೋಹಿತ್​ಗೆ ಬಾಂಗ್ಲಾ ಸರಣಿ ಪ್ರಮುಖವಾಗಿದೆ.

ಇದನ್ನೂ ಓದಿ | Virat Kohli | ವಿಶ್ರಾಂತಿಯ ಅವಧಿಯನ್ನು ಚಾರಿಟಿ ಕೆಲಸಕ್ಕೆ ಮೀಸಲಿಟ್ಟ ವಿರಾಟ್​ ಕೊಹ್ಲಿ

Continue Reading

Latest

Fifa World Cup | ಫುಟ್ಬಾಲ್‌ ವಿಶ್ವ ಕಪ್‌ ಪಂದ್ಯಗಳು ನಡೆಯುವ ಸ್ಟೇಡಿಯಮ್‌ಗಳು ಯಾವುದೆಲ್ಲ ಗೊತ್ತೇ?

ಕತಾರ್​ನಲ್ಲಿ ನಡೆಯಲಿರುವ ಫಿಫಾ ವಿಶ್ವ ಕಪ್​ ಫುಟ್ಬಾಲ್​ ಪಂದ್ಯಗಳ 8 ವರ್ಣರಂಜಿತ ಕ್ರೀಡಾಂಗಣಗಳ ಸಂಪೂರ್ಣ ಮಾಹಿತಿ ಈ ಕೆಳಗೆ ತಿಳಿಸಲಾಗಿದೆ.

VISTARANEWS.COM


on

fifa world cup 2022 8 stadiums
Koo

ದೋಹಾ: ಕತಾರ್​ನಲ್ಲಿ ನಡೆಯಲಿರುವ ಫಿಫಾ ವಿಶ್ವ ಕಪ್(Fifa World Cup)​ ಕಾಲ್ಚೆಂಡಿನ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ ಈ ಫುಟ್ಬಾಲ್ ಹಬ್ಬ ಆರಂಭವಾಗಲಿದೆ. ಇದೀಗ ಈ ಕಾಲ್ಚೆಂಡಿನ ವಿಶ್ವ ಸಮರಕ್ಕೆ ಆತಿಥ್ಯ ವಹಿಸಿದ ವರ್ಣರಂಜಿತ 8 ಸ್ಟೇಡಿಯಂಗಳ ಪರಿಚಯ ಇಲ್ಲಿದೆ.

ಲುಸೈಲ್​ ಕ್ರೀಡಾಂಗಣ

ಕತಾರ್​ ಫಿಫಾ ವಿಶ್ವ ಕಪ್​ನ 8 ಕ್ರೀಡಾಂಗಣದಲ್ಲಿ ಲುಸೈಲ್​ ಅತಿದೊಡ್ಡದು ಎಂಬ ಹೆಗ್ಗಳಿಕೆ ಗಳಿಸಿದೆ. 80,000 ಆಸನ ಸಾಮರ್ಥ್ಯ ಹೊಂದಿದ್ದು, ಫೈನಲ್​ ಪಂದ್ಯವೂ ಇದೇ ಮೈದಾನದಲ್ಲಿ ನಡೆಯಲಿದೆ. ಈ ಸ್ಟೇಡಿಯಮ್‌ ಅರಬ್​ ದೇಶದಲ್ಲಿ ಜಯಪ್ರೀಯವಾಗಿರುವ ಬಟ್ಟಲಿನ ಆಕಾರ ಹೊಂದಿದೆ. ಪಂದ್ಯದ ವೇಳೆ ಬಿಸಿ ಗಾಳಿಯನ್ನು ತೆಡೆಯಲು ಪಾಲಿಟ್ರೆಟಾ ಫ್ಲೋರೊಎಥಲಿನ್​ ಎಂಬ ರಾಸಾಯನಿಕವನ್ನು ಬಳಸಿ ಆಟಗಾರಿಗೆ ಬಿಸಿ ತಟ್ಟದಂತೆ ಮಾಡಲಾಗಿದೆ. ಈ ಮೈದಾನದಲ್ಲಿ ಒಟ್ಟು ಹತ್ತು ಪಂದ್ಯಗಳು ನಡೆಯಲಿವೆ.

ಅಹಮದ್​ ಬಿನ್​ ಅಲಿ ಸ್ಟೇಡಿಯಮ್‌, ಅಲ್​ ವಕ್ರಾ

ಕತಾರ್‌​ನ ನೂತನ ಸ್ಟೇಡಿಯಮ್‌ ಇದಾಗಿದ್ದು. 2015ರಲ್ಲಿ ನಿರ್ಮಾಣವಾಗಿದ್ದ ಕ್ರೀಡಾಂಗಣ ನೆಲಸಮ ಮಾಡಿ ಹೊಸ ಕ್ರೀಡಾಂಗಣವನ್ನು ಕಟ್ಟಲಾಗಿದೆ. ಇದು ಓಪನ್​ ಕ್ರೀಡಾಂಗಣವಾಗಿದ್ದು ಹವಾ ನಿಯಂತ್ರಿತ ವ್ಯವಸ್ಥೆಯನ್ನೂ ಒಳಗೊಂಡಿದೆ. ಅದರಂತೆ ಪಂದ್ಯಗಳ ವೇಳೆ 26 ಡಿಗ್ರಿ ತಾಪಮಾನ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಮರುಭೂಮಿಯ ತುತ್ತ ತುದಿಯಲ್ಲಿರುವ ಈ ಮೈದಾನದಲ್ಲಿ ಒಟ್ಟು ಏಳು ಪಂದ್ಯಗಳು ನಡೆಯಲಿದ್ದು, 44,740 ಆಸನ ಸಾಮರ್ಥ್ಯ ಹೊಂದಿದೆ.

ಅಲ್​ ಜನೌಬ್​​ ಸ್ಟೇಡಿಯಮ್‌, ಅಲ್ ವಕ್ರಾ

ಸಾಂಪ್ರದಾಯಿಕ ಧೌ ದೋಣಿಗಳನ್ನು ಹೋಲುವ ಈ ಕ್ರೀಡಾಂಗಣದಲ್ಲಿ ಏಳು ಪಂದ್ಯಗಳು ನಡೆಯಲಿವೆ. ಏಕಕಾಲಕ್ಕೆ 40,000 ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಸಾಧ್ಯವಿದೆ. ಇನ್ನು ಈ ಮೈದಾನದಲ್ಲಿಯೂ ಹವಾನಿಯಂತ್ರಿತ ವ್ಯವಸ್ಥೆ ಇರಲಿದೆ. ಇಲ್ಲಿ ವಿಶ್ವ ಕಪ್​ ಪಂದ್ಯ ಮುಕ್ತಾಯದ ಬಳಿಕ ಆಸನಗಳ ಸಾಮರ್ಥ್ಯವನ್ನು 20,000ಕ್ಕೆ ಇಳಿಕೆ ಮಾಡಲಾಗುವುದು ಎಂದು ಫಿಫಾ ಹೇಳಿದೆ.

ಎಜುಕೇಶನ್​ ಸಿಟಿ ಕ್ರೀಡಾಂಗಣ, ಅಲ್​ ರಯ್ಯನ್​

ಕ್ರೀಡಾಂಗಣದ ಸುತ್ತ ಮುತ್ತ ವಿಶ್ವವಿದ್ಯಾಲಯಗಳು ಇರುವ ಕಾರಣದಿಂದ ಈ ಸ್ಟೇಡಿಯಂಗೆ ಎಜುಕೇಶನ್​ ಸಿಟಿ ಸ್ಟೇಡಿಯಮ್‌ ಎಂದು ಹೆಸರಿಡಲಾಗಿದೆ. ತ್ರಿಕೋನಾಕೃತಿ ಈ ಕ್ರೀಡಾಂಗಣ ವಜ್ರದ ರೀತಿ ಕಾಣುತ್ತದೆ. ಜಾಗತಿಕ ಸುಸ್ಥಿರತೆಯ ಮೌಲ್ಯಮಾಪನ ವ್ಯವಸ್ಥೆಯಲ್ಲಿ ಫೈವ್​ಸ್ಟಾರ್​ ರೇಟಿಂಗ್​ ಹೊಂದಿದೆ. ಒಟ್ಟು 8 ಪಂದ್ಯಗಳು ನಡೆಯಲಿದ್ದು, 40,000 ಆಸನ ಸಾಮರ್ಥ್ಯ ಹೊಂದಿದೆ.

ಖಲಿಫಾ ಮೈದಾನ

ಕತಾರ್​ನ ಅತ್ಯಂತ ಹಳೆಯ ಮತ್ತು ಐತಿಹಾಸಿಕ ಹಿನ್ನೆಲೆ ಹೊಂದಿರುವ ಕ್ರೀಡಾಂಗಣ ಇದಾಗಿದ್ದು ಈ ಬಾರಿ 8 ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಅದರಂತೆ ಇಲ್ಲಿ ಏಕಕಾಲಕ್ಕೆ 45,416 ಮಂದಿಗೆ ಪಂದ್ಯ ವೀಕ್ಷಿಸಬಹುದಾಗಿದೆ. 2006ರ ಏಷ್ಯನ್​ ಗೇಮ್ಸ್​ ಸೇರಿ ಹಲವು ಐತಿಹಾಸಿಕ ಕ್ರೀಡಾಕೂಟಗಳಿಗೆ ಈ ಸ್ಟೇಡಿಯಮ್‌ ಸಾಕ್ಷಿಯಾಗಿದೆ.

ಅಲ್​ ಥುಮಾಮ ಮೈದಾನ, ದೋಹಾ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಈ ಕ್ರೀಡಾಂಗಣವನ್ನು ಫಿಫಾ ವಿಶ್ವ ಕಪ್​ ಟೂರ್ನಿಗೋಸ್ಕರವೇ ನಿರ್ಮಾಣ ಮಾಡಲಾಗಿದೆ. ವಿಶ್ವ ಕಪ್​ ಬಳಿಕ ಇಲ್ಲಿನ ಆಸನ ಸಾಮರ್ಥ್ಯವನ್ನು 40,000ರಿಂದ 20,000ಕ್ಕೆ ಇಳಿಸಿ ಹೆಚ್ಚುವರಿ ಆಸನಗಳನ್ನು ಬಡ ರಾಷ್ಟ್ರಗಳಿಗೆ ಉಡುಗೊರೆಯಾಗಿ ನೀಡಲಾಗುತ್ತದೆ. ಖಾಲಿಯಾಗುವ ಜಾಗದಲ್ಲಿ ಐಷಾರಾಮಿ ಹೋಟೆಲ್​ ನಿರ್ಮಾಣ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ. ಅರಬ್​ ಪ್ರಾಂತ್ಯದಲ್ಲಿ ಬಳಸುವ ಸಾಂಪ್ರದಾಯಿಯ “ಗಹ್ಫಿಯಾ” ಟೋಪಿಯ ಆಕಾರದಲ್ಲಿರುವ ಈ ಮೈದಾನದಲ್ಲಿ ಒಟ್ಟು 8 ಪಂದ್ಯಗಳು ನಡೆಯಲಿವೆ.

ಅಲ್​ ಬೇತ್​ ಸ್ಟೇಡಿಯಂ, ಅಲ್​ ಖೋರ್​

ದೋಹಾದ ರಾಜಧಾನಿಯಿಂದ 35 ಕಿ.ಮೀ ದೂರದಲ್ಲಿರುವ ಈ ಕ್ರೀಡಾಂಗಣದಲ್ಲಿ ವಿಶ್ವ ಕಪ್​ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಕ್ರೀಡಾಂಗಣ ಕತಾರ್​ನಲ್ಲಿ ವಾಸಿಸುವ ಅಲೆಮಾರಿ ಜನರು ಬಳಸುವ ಟೆಂಟ್​ಗಳ ಆಕಾರದಲ್ಲಿದೆ. ಒಟ್ಟು 9 ಪಂದ್ಯಗಳು ಇಲ್ಲಿ ನಡೆಯಲಿದ್ದು, 60,000 ಆಸನ ಸಾಮರ್ಥ್ಯ ಹೊಂದಿದೆ.

ಸ್ಟೇಡಿಯಂ 974

ವಿಶ್ವ ಕಪ್​ ಪಂದ್ಯಗಳ ಆತಿಥ್ಯಕ್ಕೆ ಕತಾರ್​ ಹೊಸದಾಗಿ ಕ್ರೀಡಾಂಗಣಗಳ ನಿರ್ಮಾಣಕ್ಕೆ ಮುಂದಾದಾಗ
ಸಾಮಗ್ರಿಗಳನ್ನು ಹೊತ್ತು ತಂಡ ಹಡಗುಗಳ ಕಂಟೈನರ್​ಗಳನ್ನೇ ಬಳಸಿ ಸ್ಟೇಡಿಯಮ್‌ ಒಂದನ್ನು ಕಟ್ಟುವ ಯೋಜನೆಯನ್ನು ಆಯೋಜನಾ ಸಮಿತಿ ರೂಪಿಸಿತ್ತು. ಅದರಂತೆ 974 ಕಂಟೈನರ್​ಗಳಿಂದ ನಿರ್ಮಾಣವಾದ ಇದಕ್ಕೆ ಸ್ಟೇಡಿಯಂ 947 ಎಂದು ಹೆಸರಿಡಲಾಗಿದೆ. ಇನ್ನೊಂದು ವಿಶೇಷವೆಂದರೆ 947 ಎನ್ನುವ ಸಂಖ್ಯೆ ಕತಾರ್​ ದೇಶದ ಅಂತಾರಾಷ್ಟ್ರೀಯ ಡಯಲಿಂಗ್​ ಕೋಡ್​ ಕೂಡ ಆಗಿದೆ. ಇಲ್ಲಿ ಒಟ್ಟು 7 ಪಂದ್ಯಗಳು ನಡೆಯಲಿದ್ದು, 40,000 ಆಸನ ಸಾಮರ್ಥ್ಯ ಹೊಂದಿದೆ.

ಇದನ್ನೂ ಓದಿ | Fifa World Cup 2022 | ಗೋಲ್ಡನ್ ಬೂಟ್ ಪ್ರಶಸ್ತಿ ವಿಜೇತ ಟಾಪ್​ 5 ಆಟಗಾರರು

Continue Reading

Latest

BCCI: ಚೇತನ್‌ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ ಆಯ್ಕೆ ಸಮಿತಿಗೆ ಗೇಟ್​ಪಾಸ್​ ನೀಡಿದ ಬಿಸಿಸಿಐ!

ಟಿ20 ವಿಶ್ವ ಕಪ್​ನಲ್ಲಿ ಭಾರತ ತಂಡ ವೈಫಲ್ಯ ಅನುಭವಿಸಿದ ಕಾರಣದಿಂದ ಚೇತನ್​ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ಶುಕ್ರವಾರ ಬಿಸಿಸಿಐ ವಜಾಗೊಳಿಸಿದೆ.

VISTARANEWS.COM


on

BCCI Scraps Selection Committee Led By Chetan Sharma
Koo

ನವದೆಹಲಿ: ದುಬೈ ಮತ್ತು ಆಸ್ಟ್ರೇಲಿಯಾದಲ್ಲಿ ನಡೆದ ಎರಡು ಐಸಿಸಿ ಟಿ20 ವಿಶ್ವ ಕಪ್‌ ಕ್ರಿಕೆಟ್​ ಟೂರ್ನಿಗಳಲ್ಲಿ ಭಾರತ ತಂಡ ಟ್ರೋಫಿ ಗೆಲ್ಲಲು ವಿಫಲವಾದ ಬೆನ್ನಲ್ಲೇ ಕಠಿಣ ನಿರ್ಧಾರ ತೆಗೆದುಕೊಂಡಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಮಾಜಿ ವೇಗಿ ಚೇತನ್‌ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ ಆಯ್ಕೆ ಸಮಿತಿಯನ್ನು ವಜಾಗೊಳಿಸಿದೆ. ಅದರಂತೆ ಬಿಸಿಸಿಐ ಈಗಾಗಗಲೇ ಹೊಸ ಆಯ್ಕೆ ಸಮಿತಿ ರಚಿಸುವ ಸಲುವಾಗಿ ಖಾಲಿ ಇರುವ 5 ಹುದ್ದೆಗಳಿಗೆ ಅರ್ಜಿ ಕೂಡ ಆಹ್ವಾನಿಸಿದೆ.

ಚೇತನ್‌ ಶರ್ಮಾ ಸಾರಥ್ಯದ ಆಯ್ಕೆ ಸಮಿತಿಯಲ್ಲಿ ಸುನಿಲ್‌ ಜೋಶಿ, ಹವಿಂದರ್‌ ಸಿಂಗ್‌ ಮತ್ತು ದೇಬಾಶಿಶ್‌ ಮೊಹಾಂತಿ ಅವರಂತಹ ಮಾಜಿ ಆಟಗಾರರು ಇದ್ದರು. ಇದೀಗ ಹೊಸ ಆಯ್ಕೆ ಸಮಿತಿಗೆ ಸೇರಬಯಸುವ ಆಸಕ್ತರು ನವೆಂಬರ್‌ 28ರ ಒಳಗೆ ಅರ್ಜಿ ಸಲ್ಲಿಸಬೇಕಾಗಿದೆ.

ಚೇತನ್​ ಶರ್ಮಾ ಆಯ್ಕೆ ಸಮಿತಿಯ ಅವಧಿಯಲ್ಲಿ ಆಡಲಾದ 2021ರ ಐಸಿಸಿ ಟಿ20 ಕ್ರಿಕೆಟ್‌ ವಿಶ್ವ ಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೂಪರ್‌-12 ಹಂತದಲ್ಲೇ ಮುಗ್ಗರಿಸಿತ್ತು. ಇತ್ತೀಚೆಗೆ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದ 2022ರ ಸಾಲಿನ ಟಿ20 ವಿಶ್ವ ಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿಯೂ ಹೀನಾಯವಾಗಿ ಸೋತು ನಿರಾಸೆ ಮೂಡಿಸಿತ್ತು. ಜತೆಗೆ ಇವರ ಆಯ್ಕೆ ಸಮಿತಿಯಲ್ಲಿ ಭಾರತ ತಂಡ ಒಂದೂ ಐಸಿಸಿ ಟ್ರೋಫಿಯನ್ನು ಗೆಲ್ಲವಲ್ಲಿ ಯಶಸ್ವಿಯಾಗಿರಲಿಲ್ಲ. ಇದರಿಂದ ಬಿಸಿಸಿಐ ಈ ಆಯ್ಕೆ ಸಮಿತಿಗೆ ಗೇಟ್​ಪಾಸ್​ ನೀಡಿದೆ.

ಚೇತನ್​ ಶರ್ಮಾ ಭಾರತ ಪರ ಒಟ್ಟು 23 ಟೆಸ್ಟ್​ ಮತ್ತು 65 ಏಕದಿನ ಪಂದ್ಯಗಳನ್ನಾಡಿದ್ದಾರೆ. ಟೆಸ್ಟ್​ನಲ್ಲಿ (61), ಏಕದಿನದಲ್ಲಿ(67) ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ | IND VS NZ | ಕಿವೀಸ್​​ ವಿರುದ್ಧದ ಮೊದಲ ಟಿ20 ಮಳೆಯಿಂದ ರದ್ದು; ಭಾರತದ ಯುವ ಆಟಗಾರರಿಗೆ ನಿರಾಸೆ

Continue Reading
Advertisement
Khalistani Terrorist Pannun
ದೇಶ7 mins ago

ಸಂಸತ್ತಿನ ಮೇಲೆ ಡಿ.13ರಂದು ಉಗ್ರ ದಾಳಿ: ಬೆದರಿಕೆ ವಿಡಿಯೋ ಹರಿಬಿಟ್ಟ ಖಲಿಸ್ತಾನಿ ಉಗ್ರ ಪನ್ನುನ್‌

lidkar ambassador dolly dhananjay Officially
South Cinema22 mins ago

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Government Job Vistara Exclusive and CM Siddaramaiah
ಉದ್ಯೋಗ26 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ43 mins ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ56 mins ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್57 mins ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

murder case in Bengaluru
ಕರ್ನಾಟಕ1 hour ago

Murder Case : ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ವ್ಯಕ್ತಿ!

Government Job Vistara Exclusive
ಉದ್ಯೋಗ2 hours ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

danish
ಕ್ರಿಕೆಟ್2 hours ago

Danish Kaneria: ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ; ಕಾರಣವೇನು?

Snehith Gowda Became Villain In Bigg Boss Kannada in rakshasa task
ಬಿಗ್ ಬಾಸ್2 hours ago

BBK SEASON 10: ನ್ಯಾಯವಾಗಿ ಆಡೋಕ್‌ ಬಂದಿಲ್ಲ ಅಂದ್ರೆ ಹೋಗ್ತಿರ್ಬೇಕು; ಸ್ನೇಹಿತ್‌ ವಿರುದ್ಧ ರಕ್ಕಸರು ಉರಿ ಉರಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Government Job Vistara Exclusive and CM Siddaramaiah
ಉದ್ಯೋಗ26 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ2 hours ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ8 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ17 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ17 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ17 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

ಟ್ರೆಂಡಿಂಗ್‌