Site icon Vistara News

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Kuldeep Yadav: UP CM Yogi Adityanath Felicitates Kuldeep Yadav As Spinner Plays Vital Role In Team India's T20 WC 2024 Victory

ಕಾನ್ಪುರ: ಟಿ29 ವಿಶ್ವಕಪ್​ ತಂಡದ ಭಾಗವಾಗಿದ್ದ ಭಾರತದ ಸ್ಪಿನ್ನರ್ ಕುಲ್​ದೀಪ್ ಯಾದವ್(Kuldeep Yadav) ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ(Chief Minister of Uttar Pradesh) ಯೋಗಿ ಆದಿತ್ಯನಾಥ್(Yogi Adityanath) ಅವರು ಅಭಿನಂದಿಸಿದ್ದಾರೆ. ಜತೆಗೆ ಸ್ಮರಣಿಯನ್ನು ನೀಡಿ ಗೌರವಿಸಿದ್ದಾರೆ. ಈ ಫೋಟೊ ವೈರಲ್​ ಆಗಿದೆ.

ಕುಲ್​ದೀಪ್​ ಯಾದವ್​ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 10 ವಿಕೆಟ್​ ಕಿತ್ತು ಮಿಂಚಿದ್ದರು. ಉತ್ತಮ ಎಕಾನಮಿಯಲ್ಲಿ ಬೌಲಿಂಗ್​ ನಡೆಸಿ ಗಮನಸೆಳೆದಿದ್ದರು.

ಟಿ20 ವಿಶ್ವಕಪ್(T20 World Cup) ಗೆಲುವಿನ ಬಳಿಕ ಟ್ರೋಫಿ ಎತ್ತಿ ಹಿಡಿಯುವಾಗ ನಾಯಕ ರೋಹಿತ್ ಶರ್ಮ ವಿಶೇಷ ರೀತಿಯಲ್ಲಿ ಹೆಜ್ಜೆ ಹಾಕಿ ಸಂಭ್ರಮಿಸಿದ್ದರು. ಈ ಬಗ್ಗೆ ಪ್ರಧಾನಿ ಮೋದಿ(Narendra Modi) ಪ್ರಶ್ನೆ ಕೇಳಿದಾಗ ಕುಲ್​ದೀಪ್​(Kuldeep Yadav) ನೀಡಿರುವ ಉತ್ತರ ಕೇಳಿ ಮೋದಿ ಸೇರಿ ಟೀಮ್​ ಇಂಡಿಯಾ ಆಟಗರರು ನಗೆಗಡಲಲ್ಲಿ ತೇಲಿದ್ದರು.

ರೋಹಿತ್​ ಬಳಿ ಮೋದಿ ಅವರು ಈ ರೀತಿ ಸಂಭ್ರಮಿಸಲು ಚಾಹಲ್ ಸಲಹೆ ನೀಡಿದರೇ? ಎಂದು ಕೇಳಿದರು. ಈ ವೇಳೆ ನಗುಮುಖದಿಂದಲೇ ರೋಹಿತ್, ‘ಹೌದು ಚಾಹಲ್ ಹಾಗೂ ಕುಲದೀಪ್ ಅವರು ಸಲಹೆ ನೀಡಿದ್ದರು’ ಎಂದು ತಿಳಿಸಿದರು. ಈ ವೇಳೆ ಕುಲದೀಪ್ ಅವರಲ್ಲಿ ನಿಮ್ಮ ನಾಯಕನನ್ನು ನೃತ್ಯ ಮಾಡುವಂತೆ ಹೇಳಲು ಹೇಗೆ ಧೈರ್ಯ ಬಂತು ಎಂದು ಪ್ರಧಾನಿ ಕೇಳಿದರು. ಇದಕ್ಕೆ ಉತ್ತರಿಸಿದ ಕುಲ್​ದೀಪ್​, ನಾನು ಹೇಳಿಕೊಟ್ಟಂತೆ ರೋಹಿತ್ ಅನುಕರಿಸಲಿಲ್ಲ ಎಂದು ಹೇಳಿದರು. ಈ ಮಾತು ಕೇಳಿ ಮೋದಿ ಜೋರಾಗಿ ನಕ್ಕರು.

ಇದನ್ನೂ ಓದಿ Kuldeep Yadav : ತಮ್ಮ ನೆಚ್ಚಿನ ಸ್ವಾಮೀಜಿಯ ಆಶೀರ್ವಾದ ಪಡೆದ ಕುಲ್ದೀಪ್​ ಯಾದವ್​​

ಆಟಗಾರರೆಲ್ಲ ಪದಕ ಸ್ವೀಕರಿಸುತ್ತಿದ್ದ ವೇಳೆ ಕುಲ್​ದೀಪ್​ ಅವರು ರೋಹಿತ್​ ಅವರಿಗೆ ಯಾವ ರೀತಿಯಲ್ಲಿ ಬಂದು ಕಪ್​ ಎತ್ತಬೇಕು ಎಂದು ನಟನೆ ಮಾಡಿ ತೋರಿಸಿದ್ದರು. ಈ ವೇಳೆ ರೋಹಿತ್​ ಓಕೆ ಓಕೆ.. ಎಂದು ಹೇಳಿದ್ದರು. ಬಳಿಕ ವಿಶ್ವಕಪ್ ಟ್ರೋಫಿಯೊಂದಿಗೆ ಫೋಟೊಗೆ ಫೋಸ್​ ನೀಡಲು ಬರುವ ವೇಳೆ ಕುಲ್​ದೀಪ್​ ಹೇಳಿಕೊಟ್ಟಂತೆ ರೋಹಿತ್ ಅವರು ಅಂದು​ ಮೆಸ್ಸಿ ನಡೆದು ಬಂದು ಟ್ರೋಫಿಯನ್ನು ಎತ್ತಿ ಹಿಡಿದ ರೀತಿಯಲ್ಲೇ ವಿಶ್ವಕಪ್​ ಟ್ರೋಫಿಯನ್ನು ಎತ್ತಿ ಸಂಭ್ರಮಿಸಿದ್ದರು. ಟೀಮ್​ ಇಂಡಿಯಾ ಆಟಗಾರರು ಕೂಡ ಅರ್ಜೆಂಟೀನಾ ಫುಟ್ಬಾಲ್​ ತಂಡದ ಆಟಗಾರರಂತೆ ಸಂಭ್ರಮಿಸಿದ್ದರು.

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29ರಂದು ನಡೆದಿದ್ದ ಟಿ20 ವಿಶ್ವಕಪ್​ ಫೈನಲ್(​T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ರನ್​ಗಳ ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತ್ತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Exit mobile version