ಕ್ರೀಡೆ
Khelo India Youth Games : ಐದನೇ ಆವೃತ್ತಿಯ ಖೇಲೋ ಇಂಡಿಯಾ ಯೂಥ್ ಗೇಮ್ಸ್ಗೆ ಚಾಲನೆ
ಮಧ್ಯಪ್ರದೇಶದ ಎಂಟು ನಗರಗಳಲ್ಲಿ 13 ದಿನಗಳ ಕಾಲ ಖೇಲೋ ಇಂಡಿಯಾ ಯೂತ್ ಗೇಮ್ಸ್ (Khelo India Youth Games) ನಡೆಯಲಿದೆ
ಭೋಪಾಲ್: ಐದನೇ ಅವೃತ್ತಿಯ ಖೇಲೋ ಇಂಡಿಯಾ ಯೂತ್ ಗೇಮ್ಸ್ಗೆ (Khelo India Youth Games) ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ (ಜನವರಿ 30ರಂದು) ಚಾಲನೆ ಕೊಟ್ಟರು. ಇಲ್ಲಿನ ತಾತ್ಯಾ ಟೋಪೆ ಸ್ಟೇಡಿಯಮ್ನಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಜಮಾಯಿಸಿದ್ದ ಸಾವಿರಾರು ಕ್ರೀಡಾಸಕ್ತರ ಸಮ್ಮುಖದಲ್ಲಿ ರಾಷ್ಟ್ರಮಟ್ಟದ ಬೃಹತ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು . 27 ರಾಜ್ಯಗಳ 6000 ಅಥ್ಲೀಟ್ಗಳು ಪಾಲ್ಗೊಳ್ಳಲಿರುವ ಈ ಕ್ರೀಡಾಕೂಟ ಫೆಬ್ರವರಿ 9ರವರೆಗೆ ನಡೆಯಲಿದೆ.
ಮಧ್ಯಪ್ರದೇಶದಲ್ಲಿ ಈ ಕ್ರೀಡಾಕೂಟ ಆಯೋಜನೆಗೊಳ್ಳುತ್ತಿರುವುದು ಐತಿಹಾಸಿಕ ಸಂದರ್ಭವಾಗಿದೆ ಎಂದು ಹೇಳಿದ ಸಿಎಂ ಚೌಹಾಣ್ ಅವರು, ವಿಶ್ವ ಕಪ್ ಗೆದ್ದ 19ರ ವಯೋಮಿತಿಯ ಮಹಿಳೆಯರ ತಂಡದ ಸಾಧನೆಯನ್ನು ಕೊಂಡಾಡಿದರು.
13 ದಿನಗಳ ಕಾಲ ನಡೆಯುವ ಕ್ರೀಡಾಕೂಟವು ಏಷ್ಯಾಡ್, ಕಾಮನ್ವೆಲ್ತ್ ಮತ್ತು ಒಲಿಂಪಿಕ್ ಕ್ರೀಡಾಕೂಟಗಳಂತಹ ಭವಿಷ್ಯದ ಅಂತಾರರಾಷ್ಟ್ರೀಯ ಸ್ಪರ್ಧೆಗಳಿಗೆ ಆಟಗಾರರನ್ನು ಸಜ್ಜುಗೊಳಿಸಲಿದೆ. ಕಳೆದ ಆವೃತ್ತಿಯ KIYG ನಲ್ಲಿ ಮಧ್ಯಪ್ರದೇಶವು 38 ಪದಕಗಳನ್ನು ಗೆದ್ದಿದೆ ಎಂದು ಶಿವರಾಜ್ ಚೌಹಾಣ್ ಅವರು ಹೇಳಿದರು.
ಅನುರಾಗ್ ಠಾಕೂರ್ ಭರವಸೆ
ಅದಕ್ಕಿಂತ ಮೊದಲು ಮಾತನಾಡಿದ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಖೇಲೋ ಇಂಡಿಯಾ ಯೋಜನೆಗಾಗಿ ಮುಂದಿನ ಐದು ವರ್ಷಗಳಿಗೆ 3,200 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ ಎಂದು ತಿಳಿಸಿದರು.
ಮಧ್ಯಪ್ರದೇಶ ಸರಕಾರ ಖೇಲೋ ಇಂಡಿಯಾ ಯೂತ್ ಗೇಮ್ಸ್ ಅನ್ನು ಯಶಸ್ವಿಯಾಗಿ ಆಯೋಜಿಸಲಿದೆ. ಮುಂದಿನ ದಿನಗಳಲ್ಲಿ ಇಲ್ಲಿಗೆ ನ್ಯಾಷನಲ್ ಗೇಮ್ಸ್ ಹಾಗೂ ಇನ್ನಿತರ ಪ್ರಮುಖ ಕ್ರೀಡಾಕೂಟಗಳಿಗೆ ಆತಿಥ್ಯ ದೊರೆಯಲಿದೆ ಎಂದು ಹೇಳಿದರು.
ಮಧ್ಯಪ್ರದೇಶದ ಕ್ರೀಡಾ ಸಚಿವ ಯಶೋಧರ ರಾಜೇ ಸಿಂಧ್ಯಾ ಸೇರಿದಂತೆ ಹಲವು ಗಣ್ಯರು ಕ್ರೀಡಾಕೂಟ ಉದ್ಘಾಟನೆ ವೇಳೆ ಹಾಜರಿದ್ದರು.
ಇದನ್ನೂ ಓದಿ : 2028 Olympics Cricket: 2028ರ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಸೇರ್ಪಡೆ?
ಹೊಸ ಕ್ರೀಡೆಗಳ ಸೇರ್ಪಡೆ
ಈ ಬಾರಿಯ ಖೇಲೋ ಇಂಡಿಯಾ ಯೂತ್ ಗೇಮ್ಸ್ನ ಸ್ಪರ್ಧೆಯ ಪಟ್ಟಿಗೆ ಕಯಾಕಿಂಗ್, ಕೆನೊಯಿಂಗ್, ಕೆನೊ ಸ್ಲಾಲೋಮ್, ಫೇನ್ಸಿಂಗ್ ಸೇರಿಸಲಾಗಿದೆ. ಭೋಪಾಲ್, ಇಂದೋರ್, ಉಜ್ಜೈನಿ, ಗ್ವಾಲಿಯರ್, ಜಬಲ್ಪುರ್, ಮಂಡಲ್, ಬಾಲ್ಘಾಟ್, ಮಹೇಶ್ವರ್ ಸೇರಿ ಎಂಟು ನಗರಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಸೈಕ್ಲಿಂಗ್ ಸ್ಪರ್ಧೆಗಳು ದೆಹಲಿಯಲ್ಲಿ ನಡೆಯಲಿವೆ.
ಒಟ್ಟು 303 ಅಂತಾರಾಷ್ಟ್ರೀಯ ಅಧಿಕಾರಿಗಳು, 1089 ರಾಷ್ಟ್ರೀಯ ಅಧಿಕಾರಿಗಳು ಕ್ರೀಡಾಕೂಟವನ್ನು ಆಯೋಜಿಸಿಕೊಡಲಿದ್ದಾರೆ. ಅದೇ ರೀತಿ 2000 ಸ್ವಯಂ ಸೇವಕರು ಕೂಡ ಕಾರ್ಯನಿರ್ವಹಿಸುತ್ತಾರೆ.
ಕ್ರಿಕೆಟ್
Rohit Sharma : ರೋಹಿತ್ ಶರ್ಮಾ ಪಾಲಿನ ಭಯಾನಕ ಬೌಲರ್ ಯಾರು ಗೊತ್ತೇ? ಅವರೇ ಹೇಳಿದ್ದಾರೆ ಕೇಳಿ
ರಾಜ್ಕೋಟ್: ಸೆಪ್ಟೆಂಬರ್ 27ರಂದು ರಾಜ್ಕೋಟ್ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಆಡಲಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ಕುಲದೀಪ್ ಯಾದವ್ ಅವರಿಗೆ ಸರಣಿಯ ಮೊದಲ ಎರಡು ಏಕದಿನ ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿತ್ತು. ಅವರೀಗ ತಂಡ ಸೇರಿಕೊಳ್ಳಲಿದ್ದಾರೆ.
ಮುಂಬೈ ಮೂಲದ ರೋಹಿತ್ ಶರ್ಮಾ ಕ್ರಿಕೆಟ್ ಇತಿಹಾಸದ ಸಾರ್ವಕಾಲಿಕ ಅತ್ಯುತ್ತಮ ಬ್ಯಾಟರ್ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದಾರೆ, ವಿಶೇಷವಾಗಿ ವೈಟ್-ಬಾಲ್ ಕ್ರಿಕೆಟ್ಗಳಾದ ಏಕದಿನ ಮತ್ತು ಟಿ 20 ಪಂದ್ಯಗಳಲ್ಲಿ ಅವರು ಬಾರಿಸಿರುವ ರನ್ಗಳೇ ಅದಕ್ಕೆ ಸಾಕ್ಷಿ. 36 ವರ್ಷದ ಮುಂಬೈಕರ್ ಏಕದಿನ ಪಂದ್ಯಗಳಲ್ಲಿ ವೇಗವಾಗಿ 10,000 ರನ್ ಗಳಿಸಿದ ಎರಡನೇ ಬ್ಯಾಟರ್ ಮತ್ತು ಟಿ 20ಐನಲ್ಲಿ ಸಾರ್ವಕಾಲಿಕ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ.
ಏಕದಿನ ಪಂದ್ಯಗಳಲ್ಲಿ ಮೂರು ದ್ವಿಶತಕಗಳು ಮತ್ತು ಟಿ 20ಐನಲ್ಲಿ ನಾಲ್ಕು ಶತಕಗಳನ್ನು ಗಳಿಸಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಅವರು ತಮ್ಮ ವೃತ್ತಿಜೀವನದಲ್ಲಿ ಎದುರಿಸಿದ ಕಠಿಣ ಬೌಲರ್ ಬಗ್ಗೆ ವಿವರಣೆ ನೀಡಿದ್ದಾರೆ. ಟ್ರೆಂಟ್ ಬೌಲ್ಟ್, ಮೊಹಮ್ಮದ್ ಅಮೀರ್ ಮತ್ತು ಶಾಹೀನ್ ಅಫ್ರಿದಿ ಸೇರಿದಂತೆ ಎಡಗೈ ಬೌಲರ್ಗಳೆಂದರೆ ರೋಹಿತ್ಗೆ ಸ್ವಲ್ಪ ಭಯ. ಆದರೆ ಅವರನ್ನು ಹೆಚ್ಚು ಭಯಭೀತರನ್ನಾಗಿ ಮಾಡಿದ್ದು ಬಲಗೈ ಬೌಲರ್.
ದಕ್ಷಿಣ ಆಫ್ರಿಕಾದ ವೇಗಿ
ದಕ್ಷಿಣ ಆಫ್ರಿಕಾದ ಮಾಜಿ ವೇಗದ ಬೌಲರ್ ಡೇಲ್ ಸ್ಟೇನ್ ಅವರನ್ನು ರೋಹಿತ್ ಶರ್ಮಾ ಅವರು ಎದುರಿಸಿದ ಕಠಿಣ ಬೌಲರ್ ಎಂದು ಕರೆದಿದ್ದಾರೆ. ಸ್ಟೇನ್ ಅವರ ಶಿಸ್ತು, ಕೆಲಸದ ನೀತಿ ಮತ್ತು ಹೊಸ ಚೆಂಡಿನೊಂದಿಗಿನ ಅವರ ಸಾಮರ್ಥ್ಯವನ್ನು ಎದುರಿಸುವುದು ಸವಾಲಿನ ಕೆಲಸ ಎಂದು ರೋಹಿತ್ ಬಣ್ಣಿಸಿದ್ದಾರೆ. ಆದರೂ ಅವರ ವಿರುದ್ಧ ಆಡಲು ಅವರು ಯಾವಾಗಲೂ ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
“ಡೇಲ್ ಸ್ಟೇನ್ ನನ್ನ ಪಾಲಿಗೆ ಎದುರಿಸಲು ಅತ್ಯಂತ ಕಠಣ ಬೌಲರ್. ಅವರ ಕೆಲಸದ ನೀತಿ, ಶಿಸ್ತು ಮತ್ತು ಹೊಸ ಚೆಂಡಿನೊಂದಿಗಿನ ಅವರ ಸಾಮರ್ಥ್ಯವು ಯಾವಾಗಲೂ ಸವಾಲುಗಳಾಗಿದ್ದವು, ಮತ್ತು ನಾನು ಅವರ ವಿರುದ್ಧ ಆಡಲು ಇಷ್ಟಪಡುತ್ತೇನೆ”ಎಂದು ರೋಹಿತ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಇದನ್ನೂ ಓದಿ ವ: Rohit Sharma : ಏರ್ಪೋರ್ಟ್ಗೆ ಹೊರಡುವಾಗ ಪಾಸ್ಪೋರ್ಟ್ ಮರೆತು ಬಂದ ರೋಹಿತ್! ಎಲ್ಲರಿಗೂ ಪೀಕಲಾಟ
ರೋಹಿತ್ ಶರ್ಮಾ ವಿಶ್ವಕಪ್ 2023 ರಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ, ಭಾರತದಲ್ಲಿ ತಮ್ಮ ನೆಚ್ಚಿನ ಮೈದಾನವನ್ನು ಆಯ್ಕೆ ಮಾಡಲು ಕೇಳಿದಾಗ ತಮ್ಮ ತವರು ಮೈದಾನ ವಾಂಖೆಡೆ ಅಲ್ಲ ಎಂದು ಹೇಳಿದರು. ಬದಲಾಗಿ ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಅತ್ಯುತ್ತಮ ಕ್ರಿಕೆಟ್ ಸ್ಟೇಡಿಯಮ್ ಎಂದು ಹೇಳಿದರು.
ನಾನು ಈಡನ್ ಗಾರ್ಡನ್ಸ್ನಲ್ಲಿ (ಟೆಸ್ಟ್ ಕ್ರಿಕೆಟ್ಗೆ) ಭಾರತಕ್ಕೆ ಪಾದಾರ್ಪಣೆ ಮಾಡಿದೆ. ವೆಸ್ಟ್ ಇಂಡೀಸ್ ವಿರುದ್ಧ 177 ರನ್ ಗಳಿಸಿದೆ, ನಂತರ ಅತಿ ಹೆಚ್ಚು ಏಕದಿನ ಸ್ಕೋರ್ 264. ಅದೂ ಕೋಲ್ಕೊತಾದಲ್ಲಿ. ನನ್ನ ಐಪಿಎಲ್ ಶತಕವೂ ಅಲ್ಲಿತ್ತು. ನಾನು ಅಲ್ಲಿ ರಣಜಿ ಟ್ರೋಫಿ 200ರನ್ ಗಳಿಸಿದ್ದೇನೆ. ಸ್ಕೋರ್ಗಳನ್ನು ಮೀರಿ, ಐಪಿಎಲ್ ನಾಯಕನಾಗಿ ನನ್ನ ಮೊದಲ ಟ್ರೋಫಿ ಅಲ್ಲಿಯೇ ಬಂದಿತು. ಮತ್ತೊಂದು ಪ್ರಶಸ್ತಿಯೂ ಅಲ್ಲಿಯೂ ಬಂದಿತು. ಹೀಗಾಗಿ ಆ ಕ್ರೀಡಾಂಗಣವನ್ನು ಪ್ರೀತಿಸುತ್ತೇನೆ ಎಂದು ಅವರು ಹೇಳಿದರು.
ಕ್ರೀಡೆ
VISTARA TOP 10 NEWS : ಕಾವೇರಿ ಹೋರಾಟಕ್ಕೆ ಸ್ವಯಂಪ್ರೇರಿತ ಬೆಂಬಲ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ ಮತ್ತಿತರ ದಿನದ ಪ್ರಮುಖ ಸುದ್ದಿಗಳು
VISTARA TOP 10 NEWS: ದೇಶ, ವಿದೇಶಗಳ ಸುದ್ದಿಗಳು, ದಿನವಿಡೀ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತುನೋಟವೇ Vistara Top10 News
1. ಬೆಂಗಳೂರು ಬಂದ್ ಸಕ್ಸಸ್; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ತಮಿಳುನಾಡಿಗೆ ನೀರು ಬಿಡುಗಡೆ (Cauvery Water Dispute) ಮಾಡಲೇಬೇಕು ಎಂದು ಆದೇಶ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management authority) ಮತ್ತು ಅದು ಹೇಳಿದಂತೆ ನೀರು ಬಿಡುಗಡ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮಗಳನ್ನು ಖಂಡಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala samrakshana samiti) ಕರೆ ನೀಡಿದ್ದ ಮಂಗಳವಾರದ (ಸೆ. 26) ಬೆಂಗಳೂರು ಬಂದ್ (Bangalore bandh) ಯಶಸ್ವಿಯಾಗಿದೆ. ಯಾವುದೇ ಗೊಂದಲ, ಗಲಾಟೆ, ಹಿಂಸಾತ್ಮಕ ಘಟನೆಗಳಿಲ್ಲದೆ ಅದು ಸಫಲತೆಯನ್ನು ಕಂಡಿದೆ. ಆದರೆ, ಇದು ಸರ್ಕಾರದ ನಿರ್ಧಾರಗಳ ಮೇಲೆ ಪರಿಣಾಮ ಬೀರುತ್ತದೆಯೇ ಕಾದು ನೋಡಬೇಕು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ :ಕೇಳಿದ್ದಕ್ಕಿಂತಲೂ ಹೆಚ್ಚು ನೀರು ಕೊಡುತ್ತಿದೆ ಕರ್ನಾಟಕ! ಈಗ ಹರಿಯುತ್ತಿರುವುದು 6300 ಕ್ಯೂಸೆಕ್!
2. CWRCಯಿಂದ ಮತ್ತೆ ಹೊಡೆತ, ಇನ್ನೂ 18 ದಿನ 3000 ಕ್ಯೂಸೆಕ್ ನೀರು ಬಿಡಲು ಆದೇಶ
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ.ಈವರೆಗೆ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದ ಸಮಿತಿ ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : ಕಾವೇರಿ ನೀರು ಬಿಡದಂತೆ ಸುಗ್ರೀವಾಜ್ಞೆ; ಸರ್ಕಾರಕ್ಕೆ ಹೋರಾಟಗಾರರಿಂದ ಮೂರು ದಿನ ಗಡುವು
3. ಬೆಂಗಳೂರು ಬಂದ್ ಹತ್ತಿಕ್ಕಲು ಪೊಲೀಸ್ ಬಲ ಪ್ರಯೋಗ ನಡೆಯಿತೇ? ಕಮಿಷನರ್ ಹೇಳಿದ್ದೇನು?
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ (Cauvery water Dispute) ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala Samrakshana Samiti) ಕರೆ ನೀಡಿದ್ದ ಒಂದು ದಿನದ ಬೆಂಗಳೂರು ಬಂದ್ (Bangalore Bandh) ಸಾಂಗವಾಗಿ ಮುಕ್ತಾಯಗೊಂಡಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ನಡೆದ ಪ್ರತಿಭಟನೆಯ ವೇಳೆ ಗಮನೀಯ ಅನಾಹುತಕಾರಿ ಘಟನೆಗಳು ಇಲ್ಲದೆ ಬಂದ್ ಬಹುತೇಕ ಶಾಂತಿಯುತವಾಗಿ ನಡೆಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. ಜಡ್ಜ್ ನೇಮಕಾತಿ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ! 10 ತಿಂಗಳಾದ್ರೂ ಶಿಫಾರಸು ಕ್ಲಿಯರ್ ಮಾಡಿಲ್ಲ ಸರ್ಕಾರ
ಜಡ್ಜ್ಗಳ ನೇಮಕಾತಿ ವಿಷಯಕ್ಕೆ (Appointment of Judges) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಹಾಗೂ ಕೇಂದ್ರ ಸರ್ಕಾರ (Central Government) ನಡುವೆ ಮತ್ತೊದು ಸುತ್ತಿನ ಜಟಾಪಟಿ ಶುರುವಾಗುವ ಸಾಧ್ಯತೆಗಳಿವೆ. ಹೈಕೋರ್ಟ್ ಶಿಫಾರಸಗಳನ್ನು (High court Recommendations) ಕೊಲಿಜಿಯಂಗೆ (Collegium) ಏಕೆ ಕಳುಹಿಸಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೈಕೋರ್ಟ್ ನ್ಯಾಯಮೂರ್ತಿಗಳ ಹೆಸರು ಅಂತಿಮಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ವಿಳಂ ಧೋರಣೆಯನ್ನು ಅನುಸರಿಸುತ್ತಿದೆ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರಿದ್ದ ಪೀಠವು ಹೇಳಿದೆ. ಅಲ್ಲದೇ ಈ ವಿಷಯವನ್ನು ಸುಪ್ರೀಂ ಕೋರ್ಟ್ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. ಮೈತಿ ವಿದ್ಯಾರ್ಥಿಗಳಿಬ್ಬರ ಶವಗಳ ಫೋಟೊ ವೈರಲ್; ಮಣಿಪುರ ಮತ್ತೆ ಉದ್ವಿಗ್ನ?
ಜುಲೈನಲ್ಲಿ ನಾಪತ್ತೆಯಾಗಿದ್ದ ಮೈತಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳ ಶವಗಳ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಮಣಿಪುರದಲ್ಲಿ ಮತ್ತೆ ಜನಾಕ್ರೋಶ ಭುಗಿಲೇಳುವ ಸಂಭವ ಕಂಡುಬರುತ್ತಿದೆ. ಬಂದೂಕು ಹಿಡಿದಿರುವ ಇಬ್ಬರು ದುಷ್ಕರ್ಮಿಗಳು ಕೂಡ ಈ ಫೋಟೋದಲ್ಲಿದ್ದಾರೆ. ಇವರು ಕುಕಿ ಸಮುದಾಯದವರು ಎಂದು ಹೇಳಲಾಗಿದೆ.
6. ಮನ ಕಲಕುವ ವಿಡಿಯೊ; ಜಿಮ್ನಾಸ್ಟಿಕ್ಸ್ನಲ್ಲಿ ಗೆದ್ದ ಬಾಲಕಿಗೆ ಕಪ್ಪು ಬಣ್ಣದವಳೆಂದು ಪದಕ ನೀಡದ ಆಯೋಜಕರು!
7. ಚಾಟ್ಜಿಪಿಟಿ ಜತೆ ನೀವಿನ್ನು ಮಾತನಾಡಬಹುದು! ಹೊಸ ಫೀಚರ್ ಪರಿಚಯಿಸಿದ ಓಪನ್ಎಐ
8. ಹೌದು, ನಾನು ಈಗಲೂ ರಶ್ಮಿಕಾ ಜತೆ ಸಂಪರ್ಕದಲ್ಲಿದ್ದೇನೆ! ರಕ್ಷಿತ್ ಶೆಟ್ಟಿ ಹೇಳಿಕೆ
9. Dadasaheb Phalke Award: ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
10. ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ಕ್ರಿಕೆಟ್
World Cup 2023 : ವಿಶ್ವ ಕಪ್ಗೆ 15 ಸದಸ್ಯರ ಬಾಂಗ್ಲಾದೇಶ ತಂಡ ಪ್ರಕಟ, ಸ್ಟಾರ್ ಆಟಗಾರನೇ ಇಲ್ಲ
ವಿಶ್ವ ಕಪ್ಗೆ (World Cup 2023) ಆಯ್ಕೆಯಾಗಿರುವ ಬಾಂಗ್ಲಾದೇಶ ತಂಡದನ್ನು ಆಲ್ರೌಂಡರ್ ಶಕೀಬ್ ಅಲ್ ಹಸನ್ ತಂಡವನ್ನು ಮುನ್ನಡೆಸಲಿದ್ದು, ಲಿಟನ್ ದಾಸ್ ಉಪನಾಯಕನ ಪಾತ್ರವನ್ನು ನಿರ್ವಹಿಸಲಿದ್ದಾರೆ.
ನವದೆಹಲಿ: ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಗಾಗಿ ಬಾಂಗ್ಲಾದೇಶ ಮಂಗಳವಾರ (ಸೆಪ್ಟೆಂಬರ್ 26) ತನ್ನ 15 ಸದಸ್ಯರ ತಂಡವನ್ನು ಅನಾವರಣಗೊಳಿಸಿದೆ. ಆಲ್ರೌಂಡರ್ ಶಕೀಬ್ ಅಲ್ ಹಸನ್ ತಂಡವನ್ನು ಮುನ್ನಡೆಸಲಿದ್ದು, ಲಿಟನ್ ದಾಸ್ ಉಪನಾಯಕನ ಪಾತ್ರವನ್ನು ನಿರ್ವಹಿಸಲಿದ್ದಾರೆ.
ಜುಲೈನಲ್ಲಿ ನಿವೃತ್ತಿ ನಿರ್ಧಾರವನ್ನು ಬದಲಾಯಿಸುವ ಮೂಲಕ ಕ್ರಿಕೆಟ್ ಕ್ಷೇತ್ರಕ್ಕೆ ಆಘಾತ ನೀಡಿದ್ದ ಅನುಭವಿ ತಮೀಮ್ ಇಕ್ಬಾಲ್ ಅವರನ್ನು ವಿಶ್ವಕಪ್ ತಂಡದಲ್ಲಿ ಸೇರಿಸಿಕೊಳ್ಳಲಾಗಿಲ್ಲ. ಬೆನ್ನುನೋವಿನಿಂದಾಗಿ ಏಷ್ಯಾ ಕಪ್ 2023 ರಲ್ಲಿ ಕಾಣಿಸಿಕೊಳ್ಳದಿದ್ದರೂ, ಅವರು ಫಿಟ್ನೆಸ್ ಅನ್ನು ಮರಳಿ ಪಡೆದುಕೊಂಡಿದ್ದರು. ಅವರು ಇತ್ತೀಚೆಗೆ ತವರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗವಹಿಸಿದ್ದರು. ಆದ್ದರಿಂದ, ವಿಶ್ವ ಕಪ್ ತಂಡದಿಂದ ಅವರ ಅನುಪಸ್ಥಿತಿಯು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ಇದನ್ನೂ ಓದಿ : World Cup 2023 : ಮುಂಬರುವ ವಿಶ್ವ ಕಪ್ ಮಿಸ್ ಮಾಡಿಕೊಳ್ಳಲಿರುವ ಸ್ಟಾರ್ ಪ್ಲೇಯರ್ಗಳ ಲಿಸ್ಟ್ ಇಲ್ಲಿದೆ
ಜುಲೈನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಬಲಗೈ ವೇಗಿ ಎಬಾದತ್ ಹುಸೇನ್ ಮೊಣಕಾಲು ಗಾಯದಿಂದ ಅವಕಾಶ ಪಡೆಯಲು ವಿಫಲರಾಗಿದ್ದರು. ಅವರೂ ವಿಶ್ವ ಕಪ್ ತಂಡದಲ್ಲಿ ಸ್ಥಾನ ಪಡೆದಿಲ್ಲ.
Introducing the men in Green and Red for the World Cup. 🇧🇩🏏#BCB | #Cricket | #CWC23 pic.twitter.com/dVy9s4FijA
— Bangladesh Cricket (@BCBtigers) September 26, 2023
ಅನುಭವಿಗಳ ಸೇರ್ಪಡೆ
ತಮೀಮ್ ಅನುಪಸ್ಥಿತಿಯ ಹೊರತಾಗಿಯೂ, ಬಾಂಗ್ಲಾದೇಶದ ಬ್ಯಾಟಿಂಗ್ ಸಾಲಿನಲ್ಲಿ ಮುಷ್ಫಿಕರ್ ರಹೀಮ್, ನಜ್ಮುಲ್ ಹುಸೇನ್ ಶಾಂಟೊ, ಲಿಟನ್ ದಾಸ್ ಮತ್ತು ಶಕೀಬ್ ಅವರಂತಹ ಅನುಭವಿ ಪ್ರಚಾರಕರು ಇದ್ದಾರೆ. ಶಕೀಬ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್ ಮತ್ತು ಮಹೆದಿ ಹಸನ್ ಅವರ ಉಪಸ್ಥಿತಿಯೊಂದಿಗೆ ಬಾಂಗ್ಲಾದೇಶದ ಸ್ಪಿನ್ ವಿಭಾಗವು ಸಾಕಷ್ಟು ಪ್ರಬಲವಾಗಿದೆ.
ಟಸ್ಕಿನ್ ಅಹ್ಮದ್ ಮತ್ತು ಮುಸ್ತಾಫಿಜುರ್ ರೆಹಮಾನ್ ವೇಗದ ದಾಳಿಯನ್ನು ಮುನ್ನಡೆಸಲಿದ್ದು, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್ ಮತ್ತು ತಂಝಿಮ್ ಹಸನ್ ಕೂಡ ಅವಕಾಶ ಪಡೆದಿದ್ದಾರೆ. ಬಾಂಗ್ಲಾದೇಶ ತನ್ನ ವಿಶ್ವಕಪ್ ಅಭಿಯಾನವನ್ನು ಅಕ್ಟೋಬರ್ 7 ರಂದು ಧರ್ಮಶಾಲಾದಲ್ಲಿ ಅಫ್ಘಾನಿಸ್ತಾನ ವಿರುದ್ಧ ಪ್ರಾರಂಭಿಸಲಿದೆ.
ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಮುಷ್ಫಿಕರ್ ರಹೀಮ್, ಲಿಟನ್ ದಾಸ್ (ಉಪನಾಯಕ), ನಜ್ಮುಲ್ ಹುಸೇನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ತೌಹಿದ್ ಹೃದೋಯ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರಹಮಾನ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್, ನಸೂಮ್ ಅಹ್ಮದ್, ಮಹೆದಿ ಹಸನ್, ತಂಝೀಮ್ ಹಸನ್ ಸಾಕಿಬ್, ತಂಜಿದ್ ಹಸನ್ ತಮೀಮ್, ಮಹಮುದುಲ್ಲಾ ರಿಯಾದ್.
ಶ್ರೀಲಂಕಾ ತಂಡವೂ ಪ್ರಕಟ
ಶ್ರೀಲಂಕಾದ ಸ್ಟಾರ್ ಆಲ್ರೌಂಡರ್ ವನಿಂದು ಹಸರಂಗ ಗಾಯದ ಸಮಸ್ಯೆಯಿಂದಾಗಿ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವುದರಿಂದ ಮುಂಬರುವ ಏಕ ದಿನ ವಿಶ್ವಕಪ್ಗೆ (World Cup 2023) ಶ್ರೀಲಂಕಾ ಮಂಗಳವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಮೂರನೇ ಹಂತದ ಸ್ನಾಯು ಸೆಳೆತದಿಂದಾಗಿ ಹಸರಂಗ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಲಂಕಾ ತಂಡವು ಪ್ರಮುಖ ಬೌಲರ್ಗಳು ಇಲ್ಲದೇ ಆಡುವಂತಾಗಿದೆ. ತಮ್ಮ ಕೆಲವು ಪ್ರಮುಖ ಆಟಗಾರರನ್ನು ಕಾಡುತ್ತಿರುವ ಗಾಯವು ಅಲ್ಲಿನ ಆಯ್ಕೆದಾದರರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಇದೀಗ ಪ್ರಮುಖ ಸ್ಪಿನ್ನರ್ಗಳು ಇಲ್ಲದೇ ತಂಡವನ್ನು ಪ್ರಕಟಿಸಲಾಗಿದೆ.
ಊಹಾಪೋಹಗಳು ಮತ್ತು ಅನುಮಾನಗಳನ್ನು ನಿವಾರಿಸಿದ ದಸುನ್ ಶನಕಾ ಅವರು ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ವನಿಂದು ಹಸರಂಗ, ಮಹೇಶ್ ತೀಕ್ಷಣಾ ಮತ್ತು ದಿಲ್ಶಾನ್ ಮಧುಶಂಕಾ ಅವರ ಫಿಟ್ನೆಸ್ ಬಗ್ಗೆ ದೀರ್ಘಕಾಲದ ಕಳವಳ ವ್ಯಕ್ತತೊಂಡಿವೆ. ಶ್ರೀಲಂಕಾದ ಮ್ಯಾನೇಜ್ಮೆಂಟ್ ಈ ವಿಷಯದ ಮೇಲೆ ಬೆಳಕು ಚೆಲ್ಲಿದೆ, ಅವರ ಭಾಗವಹಿಸುವಿಕೆಯು ಅವರ ದೈಹಿಕ ಸ್ಥಿತಿಯ ಮೇಲೆ ಅವಲಂಬಿತವಾಗಿದೆ ಎಂದು ಒತ್ತಿಹೇಳಿದೆ.
ಶ್ರೀಲಂಕಾ ತಂಡ: ದಸುನ್ ಶನಕಾ (ನಾಯಕ), ಕುಸಾಲ್ ಮೆಂಡಿಸ್ (ಉಪನಾಯಕ), ಕುಸಾಲ್ ಪೆರೆರಾ, ಪಥುಮ್ ನಿಸ್ಸಾಂಕಾ, ದಿಮುತ್ ಕರುಣರತ್ನೆ, ಸದೀರಾ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದುಶಾನ್ ಹೇಮಂತ, ಮಹೇಶ್ ತೀಕ್ಷಾ, ದುನಿತ್ ವೆಲ್ಲಾಗೆ, ಕಸುನ್ ರಜಿತಾ, ಮಥೀಶಾ ಪತಿರಾನಾ, ಲಹಿರು ಕುಮಾರ, ದಿಲ್ಶಾನ್ ಮಧುಶಂಕಾ.
ಕ್ರಿಕೆಟ್
World Cup 2023 : ಮುಂಬರುವ ವಿಶ್ವ ಕಪ್ ಮಿಸ್ ಮಾಡಿಕೊಳ್ಳಲಿರುವ ಸ್ಟಾರ್ ಪ್ಲೇಯರ್ಗಳ ಲಿಸ್ಟ್ ಇಲ್ಲಿದೆ
ಅಕ್ಟೋಬರ್ 5ರಿಂದ ಭಾರತದ ಆತಿಥ್ಯದಲ್ಲಿ ಏಕದಿನ ವಿಶ್ವ ಕಪ್ ವಿಶ್ವ ಕಪ್ ನಡೆಯಲಿದೆ. ಬಹುತೇಕ ತಂಡಗಳು ಈಗಾಗಲೇ ಭಾರತಕ್ಕೆ ಬಂದು ಬೀಡುಬಿಟ್ಟಿವೆ.
ನವ ದೆಹಲಿ: ಅಕ್ಟೋಬರ್ 5 ರಿಂದ ಭಾರತದಲ್ಲಿ ಪ್ರಾರಂಭವಾಗಲಿರುವ ಏಕದಿನ ವಿಶ್ವಕಪ್ಗೆ ಮುಂಚಿತವಾಗಿ ಎಲ್ಲ ತಂಡಗಳಲ್ಲಿ ಗಾಯದ ಆತಂಕ ಎದುರಾಗಿವೆ. ಕಳೆದ ಆವೃತ್ತಿಯ ಟಿ 20 ಏಷ್ಯಾ ಕಪ್ನ ಪಂದ್ಯಾವಳಿಯ ಆಟಗಾರ ಪ್ರಶಸ್ತಿ ಪಡೆದ ಶ್ರೀಲಂಕಾದ ಸ್ಟಾರ್ ಆಲ್ರೌಂಡರ್ ವನಿಂದು ಹಸರಂಗ ಅವರು ಮೆಗಾ ಟೂರ್ನಮೆಂಟ್ನಿಂದ ಹೊರಗುಳಿಯುವ ಕ್ರಿಕೆಟಿಗರ ಪಟ್ಟಿಗೆ ಸೇರಿಕೊಂಡಿದ್ದಾರೆ.
ಹಸರಂಗ ಹೊರತುಪಡಿಸಿ, ಶ್ರೀಲಂಕಾ ಕೂಡ ವಿಶ್ವಕಪ್ನಲ್ಲಿ ದುಷ್ಮಂತ ಚಮೀರಾ ಅವರ ಸೇವೆಯನ್ನು ಕಳೆದುಕೊಳ್ಳಲಿದೆ. ಹೀಗಾಗಿ ಯುವ ಆಟಗಾರರಾದ ಮಹೀಶ್ ತೀಕ್ಷಣ, ಮತೀಶಾ ಪತಿರಾನಾ ಮತ್ತು ದಿಲ್ಶಾನ್ ಮಧುಶಂಕಾ ಅವರನ್ನು ತಂಡ ಅಲಂಭಿಸಿದೆ.
ಇದೇ ರೀತಿ ಟೂರ್ನಿಯಲ್ಲಿ ಆಡಲಿರುವ ಹಲವು ತಂಡಗಳಲ್ಲಿ ಆಟಗಾರರು ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದಾರೆ. ದಕ್ಷಿಣ ಆಫ್ರಿಕಾದ ವೇಗಿ ಅನ್ರಿಚ್ ನೋರ್ಜೆ , ಇಂಗ್ಲೆಂಡ್ ವೇಗದ ಬೌಲರ್ ಜೋಫ್ರಾ ಆರ್ಚರ್ ಮತ್ತು ಪಾಕಿಸ್ತಾನದ ಯುವ ವೇಗದ ಬೌಲರ್ ನಸೀಮ್ ಶಾ ಕೂಡ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ. ಇದೇ ವೇಲೆ ಇಂಗ್ಲೆಂಡ್ ಸ್ಟಾರ್ ಬ್ಯಾಟರ್ ಜೇಸನ್ ರಾಯ್ ಅವರನ್ನು ಕೊನೆಯ ಕ್ಷಣದಲ್ಲಿ ತಂಡದಿಂದ ಕೈಬಿಡಲಾಗಿದೆ. ಹ್ಯಾರಿ ಬ್ರೂಕ್ ಅವರನ್ನು ಅವರ ಬದಲಿ ಆಟಗಾರನಾಗಿ ಘೋಷಿಸಲಾಗಿದೆ. ದಕ್ಷಿಣ ಆಫ್ರಿಕಾದ ಆಂಡಿಲೆ ಫೆಹ್ಲುಕ್ವಾಯೊ ಮತ್ತು ಲಿಜಾದ್ ವಿಲಿಯಮ್ಸ್ ಅವರನ್ನು ಬದಲಿ ಆಟಗಾರರಾಗಿ ದಕ್ಷಿಣ ಆಫ್ರಿಕಾ ಹೆಸರಿಸಿದೆ. ಆಫ್ರಿಕಾ ತಂಡದ ಸಿಸಾಂಡಾ ಮಗಲಾ ಅವರೂ ತಂಡದಲ್ಲಿ ಇಲ್ಲ.
ಇದನ್ನೂ ಓದಿ : Asia Cup 2023 : ಏಕ ದಿನ ಕ್ರಿಕೆಟ್ ಇತಿಹಾಸದಲ್ಲಿಯೇ ಕಳಪೆ ಸಾಧನೆ ಮಾಡಿದ ಶ್ರೀಲಂಕಾ ತಂಡ
ನ್ಯೂಜಿಲೆಂಡ್ ವಿಚಾರಕ್ಕೆಬಂದಾಗ ನಾಯಕ ಕೇನ್ ವಿಲಿಯಮ್ಸನ್ 2023 ರ ಐಪಿಎಲ್ ಸಮಯದಲ್ಲಿ ಗಾಯಕ್ಕೆ ಒಳಗಾಗಿದ್ದರು. ಅಲ್ಲಿಂದ ಇನ್ನೂ ಸ್ಪರ್ಧಾತ್ಮಕ ಪಂದ್ಯವನ್ನು ಆಡಿಲ್ಲ. ಅವರನ್ನು ನ್ಯೂಜಿಲೆಂಡ್ನ ವಿಶ್ವಕಪ್ ತಂಡದಲ್ಲಿ ಸೇರಿಸಲಾಗಿದೆ ಆದರೆ ಅವರ ಫಿಟ್ನೆಸ್ ಅನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಇದಲ್ಲದೆ, ವೇಗಿ ಟಿಮ್ ಸೌಥಿ ಇತ್ತೀಚೆಗೆ ಹೆಬ್ಬೆರಳಿನ ಗಾಯದಿಂದ ಬಳಲುತ್ತಿದ್ದಾರೆ, ಇದು ಅವರನ್ನು ಸ್ಪರ್ಧೆಯಿಂದ ಹೊರಗುಳಿಯುವಂತೆ ಮಾಡುತ್ತದೆ. ಮೈಕೆಲ್ ಬ್ರೇಸ್ವೆಲ್ ಅವರೂ ಗಾಯದ ಕಾರಣಕ್ಕೆ ತಂಡಿಂದ ಹೊರಗುಳಿದಿದ್ದಾರೆ.
ಭಾರತದಲ್ಲಿ ಯಾರಿಲ್ಲ?
ಭಾರತದಿಂದ ರಿಷಭ್ ಪಂತ್ ಅವಕಾಶ ಕಳೆದುಕೊಂಡ ಪ್ರಮುಖ ಆಟಗಾರ. ಕಳೆದ ವರ್ಷ ಕಾರು ಅಪಘಾತದಲ್ಲಿ ಅನುಭವಿಸಿದ ಅನೇಕ ಗಾಯಗಳಿಂದ ಚೇತರಿಸಿಕೊಳ್ಳುತ್ತಿರುವುದರಿಂದ ಟೂರ್ನಿಇಂದ ಹೊರಗುಳಿಯಲಿದ್ದಾರೆ. ಪ್ರಮುಖ ಲೆಗ್ ಸ್ಪಿನ್ನರ್ ಯಜುವೇಂದ್ರ ಚಾಹಲ್ ಕರೆ ಪಡೆಯಲು ವಿಫಲರಾಗಿದ್ದಾರೆ. ಪ್ರಸ್ತುತ, ಅಕ್ಷರ್ ಪಟೇಲ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ವಿಶ್ವಕಪ್ಗೆ ಫಿಟ್ ಆಗುವ ನಿರೀಕ್ಷೆಯಿದೆ.
ಆಸ್ಟ್ರೇಲಿಯಾ ತಂಡದ ಪರ ಟ್ರಾವಿಸ್ ಹೆಡ್ ಪ್ರಸ್ತುತ ಕೈ ಗಾಯದಿಂದ ಬಳಲುತ್ತಿರುವುದರಿಂದ ಅವರ ವಿಶ್ವ ಕಪ್ ಭವಿಷ್ಯವೂ ಗೊಂದಲದಲ್ಲಿದೆ. ಅವರು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಇಡೀ ಪಂದ್ಯಾವಳಿಯಲ್ಲದಿದ್ದರೂ ವಿಶ್ವಕಪ್ನ ಕೆಲವು ಪಂದ್ಯಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ. ಪ್ರಸ್ತುತ ವಿಶ್ವಕಪ್ ತಂಡದ ಭಾಗವಲ್ಲದ ಮರ್ನಸ್ ಲಾಬುಶೇನ್ ತಂಡಕ್ಕೆ ಸೇರ್ಪಡೆಗೊಳ್ಳುವ ಅವಕಾಶಗಳಿವೆ.
-
Live News22 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ12 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ5 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
South Cinema15 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಕರ್ನಾಟಕ15 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ಆಟೋಮೊಬೈಲ್12 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ12 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್16 hours ago
ರಾಜ್ಕೋಟ್ನಲ್ಲಿ ಈಡೇರಲಿ ಭಾರತದ ಕ್ಲೀನ್ ಸ್ವೀಪ್ ಯೋಜನೆ; ನಾಳೆ ಅಂತಿಮ ಏಕದಿನ