Lionel Messi | ಒಂದು ಮೊಟ್ಟೆಯ ಕಥೆ ಮುಗೀತು; ವಿಶ್ವ ದಾಖಲೆ ಬರೆದ ಮೆಸ್ಸಿಯ ಪೋಸ್ಟ್​​! - Vistara News

ಕ್ರೀಡೆ

Lionel Messi | ಒಂದು ಮೊಟ್ಟೆಯ ಕಥೆ ಮುಗೀತು; ವಿಶ್ವ ದಾಖಲೆ ಬರೆದ ಮೆಸ್ಸಿಯ ಪೋಸ್ಟ್​​!

ಲಿಯೋನೆಲ್​ ಮೆಸ್ಸಿ ಇನ್​ಸ್ಟಾಗ್ರಾಮ್​ನಲ್ಲಿ ಮಾಡಿದ ಒಂದು ಪೋಸ್ಟ್​ ಇದೀಗ ವಿಶ್ವ ದಾಖಲೆಯ ಲೈಕ್ಸ್​ ಪಡೆದ ಸಾಧನೆ ಮಾಡಿದೆ.

VISTARANEWS.COM


on

fifa final match
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೋಹಾ: ಕತಾರ್​ ಫಿಫಾ ವಿಶ್ವ ಕಪ್​ ಫೈನಲ್​ ಪಂದ್ಯದಲ್ಲಿ ಅರ್ಜೆಂಟೀನಾ ತಂಡವು ಫ್ರಾನ್ಸ್ ವಿರುದ್ಧ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಬಹು ಕಾಲದ ಲಿಯೋನೆಲ್ ಮೆಸ್ಸಿಯ(Lionel Messi) ವಿಶ್ವ ಕಪ್ ಕೊರಗು ನೀಗಿತು. ಜತೆಗೆ ಮೆಸ್ಸಿ ಹಲವಾರು ದಾಖಲೆಗಳನ್ನು ಮುರಿದರು. ಇದೇ ವೇಳೆ ಸೋಶಿಯಲ್​ ಮೀಡಿಯಾದಲ್ಲಿ ವಿಶ್ವ ದಾಖಲೆ ಮಾಡಿದ್ದ ಒಂದು ಮೊಟ್ಟೆಯ ಕಥೆಯೂ ಮುಗಿಯಿತು.

ಕನಸಿನ ಫಿಫಾ ವಿಶ್ವಕಪ್ ಗೆಲುವಿನ ಬಳಿಕ ಲಿಯೊನೆಲ್ ಮೆಸ್ಸಿ ಅವರು ತಮ್ಮ ಇನ್‌ಸ್ಟಾಗ್ರಾಮ್​ನಲ್ಲಿ “ಚಾಂಪಿಯನ್ಸ್ ಆಫ್ ದಿ ವರ್ಲ್ಡ್” ಎಂಬ ಕ್ಯಾಪ್ಶನ್ ನಲ್ಲಿ ಫೋಟೊ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಇದೀಗ 57 ಮಿಲಿಯನ್ ಲೈಕ್ಸ್​ ಪಡೆದು ವಿಶ್ವದಲ್ಲೇ ಅತಿ ಹೆಚ್ಚು ಲೈಕ್ ಪಡೆದ ಪೋಸ್ಟ್ ಎಂಬ ನೂತನ ದಾಖಲೆ ಬರೆದಿದೆ.

ಮೆಸ್ಸಿ ಹಂಚಿಕೊಂಡ ಪೋಸ್ಟ್​ನಲ್ಲಿ, “ನಾನು ಅನೇಕ ಬಾರಿ ಅದರ ಬಗ್ಗೆ ಕನಸು ಕಂಡೆ. ಅದು ಈಗ ನನಸಾಗಿದೆ. ನನಗೆ ನಂಬಲಾಗಲಿಲ್ಲ. ನನ್ನ ಕುಟುಂಬ, ಬೆಂಬಲಿಗರು ಮತ್ತು ನಮ್ಮನ್ನು ನಂಬಿದ ಎಲ್ಲರಿಗೂ ಧನ್ಯವಾದಗಳು. ಅರ್ಜೆಂಟೀನಾದವರು ಒಟ್ಟಾಗಿ ಹೋರಾಡಿ ತಮ್ಮ ಗುರಿಗಳನ್ನು ತಲುಪಿದೆವು” ಎಂದು ಬರೆದುಕೊಂಡಿದ್ದಾರೆ.

ಮೆಸ್ಸಿಯ ಈ ಪೋಸ್ಟ್ ಇದೀಗ ಇನ್‌ಸ್ಟಾಗ್ರಾಮ್‌ನಲ್ಲಿ ಹೆಚ್ಚು ಇಷ್ಟಪಟ್ಟ ಪೋಸ್ಟ್ ಎಂಬ ದಾಖಲೆ ಬರೆದಿದೆ. ಇದರೊಂದಿಗೆ ಈ ಹಿಂದಿನ “ವರ್ಲ್ಡ್ ರೆಕಾರ್ಡ್ ಎಗ್” ನ ಪೋಸ್ಟ್ ದಾಖಲೆಯನ್ನು ಮುರಿದಿದೆ. ಇದುವರೆಗೆ ಮೊಟ್ಟೆಯ ಫೋಟೋ 55.8 ಮಿಲಿಯನ್ ಲೈಕ್‌ಗಳನ್ನು ಪಡೆದು ಮೊದಲ ಸ್ಥಾನದಲ್ಲಿತ್ತು.

ಫೈನಲ್‌ನಲ್ಲಿ ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಗೋಲುಗಳಿಂದ ಫ್ರಾನ್ಸ್ ತಂಡವನ್ನು ಸೋಲಿಸಿ ಮೂರನೇ ಬಾರಿ ವಿಶ್ವ ಕಪ್ ಗೆದ್ದ ಸಾಧನೆ ಮಾಡಿತು. ಈ ಗೆಲುವಿನ ಸಂಭ್ರಮದ ಬಳಿಕ ಮೆಸ್ಸಿ ತಾವು ವಿಶ್ವ ಕಪ್ ಟ್ರೋಫಿಯನ್ನು ಎತ್ತಿದ ಫೋಟೊವನ್ನು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ | Fifa World Cup | ಭಾರತದಲ್ಲಿ ದಾಖಲೆ ಬರೆದ ಫಿಫಾ ವಿಶ್ವ ಕಪ್​ ಫೈನಲ್​ ಪಂದ್ಯ! ಡಿಜಿಟಲ್ ವೀಕ್ಷಣೆ ಎಷ್ಟು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 Points Table: ಚೆನ್ನೈಗೆ ಹೀನಾಯವಾಗಿ ಸೋಲುಣಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಲಕ್ನೋ

IPL 2024 Points Table: ಇಂದು ನಡೆಯುವ ಗುಜರಾತ್​ ಮತ್ತು ಡೆಲ್ಲಿ ನಡುವಣ ಪಂದ್ಯದಲ್ಲಿ ಶುಭಮನ್​ ಗಿಲ್​ ಸಾರಥ್ಯದ ಗುಜರಾತ್​ ತಂಡ ಗೆದ್ದರೆ 10 ಅಂಕದೊಂದಿಗೆ 5ನೇ ಸ್ಥಾನಕ್ಕೇರುತ್ತದೆ. ಚೆನ್ನೈ ಮತ್ತೆ ಒಂದು ಸ್ಥಾನ ಕುಸಿದು 6ನೇ ಸ್ಥಾನ ಪಡೆಯಲಿದೆ. ಡೆಲ್ಲಿ ಗೆದ್ದರೆ 6ನೇ ಸ್ಥಾನಕ್ಕೇರಲಿದೆ.

VISTARANEWS.COM


on

IPL 2024 Points Table
Koo

ಚೆನ್ನೈ: ಬೃಹತ್​ ಮೊತ್ತದ, ಅತ್ಯಂತ ರೋಚಕವಾಗಿ ನಡೆದ ಮಂಗಳವಾರದ ಐಪಿಎಲ್​(IPL 2024) ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ತವರಿನಲ್ಲಿಯೇ ಸೋಲಿನ ಮುಖಭಂಗ ಎದುರಿಸಿದೆ. ಕನ್ನಡಿಗ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ ತಂಡ 6 ವಿಕೆಟ್​ಗಳಿಂದ ಗೆದ್ದು ಚೆನ್ನೈ ತಂಡದ ಸೊಕ್ಕಡಗಿಸಿದೆ. ಜತೆಗೆ ಈ ಗೆಲುವಿನೊಂದಿಗೆ ಚೆನ್ನೈ ಹಿಂದಿಕ್ಕಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ. ಸೋಲು ಕಂಡ ಚೆನ್ನೈ 5ನೇ ಸ್ಥಾನಕ್ಕೆ ಕುಸಿದಿದೆ.

ಇಂದು ನಡೆಯುವ ಗುಜರಾತ್​ ಮತ್ತು ಡೆಲ್ಲಿ ನಡುವಣ ಪಂದ್ಯದಲ್ಲಿ ಶುಭಮನ್​ ಗಿಲ್​ ಸಾರಥ್ಯದ ಗುಜರಾತ್​ ತಂಡ ಗೆದ್ದರೆ 10 ಅಂಕದೊಂದಿಗೆ 5ನೇ ಸ್ಥಾನಕ್ಕೇರುತ್ತದೆ. ಚೆನ್ನೈ ಮತ್ತೆ ಒಂದು ಸ್ಥಾನ ಕುಸಿದು 6ನೇ ಸ್ಥಾನ ಪಡೆಯಲಿದೆ. ಡೆಲ್ಲಿ ಗೆದ್ದರೆ 6ನೇ ಸ್ಥಾನಕ್ಕೇರಲಿದೆ. ಪ್ಲೇ ಆಫ್​ ಪ್ರವೇಶಕ್ಕೆ 8 ತಂಡಗಳ ಮಧ್ಯೆ ಭಾರೀ ಪೈಪೋಟಿ ಏರ್ಪಟ್ಟಿದ್ದು, ಪಂದ್ಯಗಳು ರೋಚಕವಾಗಿ ಸಾಗುತ್ತಿದೆ.

ಇದನ್ನೂ ಓದಿ IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​87114 (+0.698)
ಕೆಕೆಆರ್​​75210 (+1.206)
ಹೈದರಾಬಾದ್​​75210 (+0.914)
ಲಕ್ನೋ85310 (+0.148)
ಚೆನ್ನೈ8448 (+0.415)
ಗುಜರಾತ್8448 (-1.055)
ಮುಂಬೈ8356 (-0.227)
ಡೆಲ್ಲಿ8356 (-0.477)
ಪಂಜಾಬ್​8264 (-0.292)
ಆರ್​ಸಿಬಿ8172 (-1.046)

ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇತ್ತಂಡಗಳ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 210 ರನ್‌ ಗಳಿಸಿತು. ಇದನ್ನು ಬೆನ್ನತ್ತಿದ ಲಕ್ನೋ 19.3 ಓವರ್‌ ಗಳಲ್ಲಿ 4 ವಿಕೆಟ್‌ಗೆ 213 ರನ್‌ ಗಳಿಸಿ, 6 ವಿಕೆಟ್‌ ಗಳಿಂದ ಜಯಭೇರಿ ಬಾರಿಸಿತು.

ಚೇಸಿಂಗ್​ ವೇಳೆ ಸ್ಫೋಟಕ ಬ್ಯಾಟಿಂಗ್​ ನಡೆಸಿದ ಮಾರ್ಕಸ್‌ ಸ್ಟಾಯಿನಿಸ್‌ 63 ಎಸೆತಗಳಲ್ಲಿ 13 ಬೌಂಡರಿ, 6 ಸಿಕ್ಸರ್‌ಗಳ ಸಮೇತ ಅಜೇಯ 124 ರನ್‌ ಚಚ್ಚಿ ತಂಡಕ್ಕೆ ಸ್ಮರಣೀಯ ಗೆಲುವು ತಂದು ಕೊಟ್ಟರು. ಅಂತಿಮ ಓವರ್​ ತನಕ ಪಂದ್ಯ ಚೆನ್ನೈ ತಂಡದ ಕೈಯಲ್ಲಿತ್ತು. ಮುಸ್ತಫಿಜುರ್‌ ಎಸೆದ ಈ ಓವರ್​ನಲ್ಲಿ 20 ರನ್‌ ಹರಿದು ಬಂತು. ಇದು ಚೆನ್ನೈ ಸೋಲಿಗೆ ಪ್ರಮುಖ ಕಾರಣ. ಋತುರಾಜ್‌ 60 ಎಸೆತ ಎದುರಿಸಿ, 12 ಬೌಂಡರಿ , 3 ಸಿಕ್ಸರ್‌ಗಳೊಂದಿಗೆ 108 ರನ್‌ ಚಚ್ಚಿ ಶತಕ ಬಾರಿಸಿದರು. ಆದರೆ ಸೋಲಿನಿಂದ ಅವರ ಶತಕ ವ್ಯರ್ಥಗೊಂಡಿತು.

Continue Reading

ಕ್ರಿಕೆಟ್

Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!

Sachin Tendulkar: ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರಿಕೆಟಿಗರಲ್ಲಿ ಒಬ್ಬರಾದ ತೆಂಡೂಲ್ಕರ್ ಒಟ್ಟು ಆಸ್ತಿ 1,354 ಕೋಟಿ ರೂಪಾಯಿ ಇದೆ. ಜಾಗತಿಕ ಶ್ರೀಮಂತ ಕ್ರಿಕೆಟಿರ್​ಗಳಲ್ಲಿ ಒಬ್ಬರು.ಸಚಿನ್‌ ನಿವೃತ್ತಿ ಪಡೆದು ಹತ್ತು ವರ್ಷಗಳು ಕಳೆದರೂ ಇಂದಿಗೂ ಮಾರುಕಟ್ಟೆಯಲ್ಲಿ ಇರುವ ಬಹು ಬೇಡಿಕೆಯ ವ್ಯಕ್ತಿ. ಜಾಹೀರಾತು ಕ್ಷೇತ್ರಗಳಲ್ಲಿಯೂ ಸಚಿನ್‌ಗೆ ಇಂದಿಗೂ ಭಾರಿ ಬೇಡಿಕೆ ಇದೆ. ಸಚಿನ್ ತೆಂಡೂಲ್ಕರ್ ಅವರ ಅತ್ಯಂತ ದುಬಾರಿ ಆಸ್ತಿಗಳ ವಿವರ ಇಲ್ಲಿದೆ!

VISTARANEWS.COM


on

Sachin Tendulkar Net Worth Assets Owned
Koo

ಬೆಂಗಳೂರು: ಕ್ರಿಕೆಟ್ ಜಗತ್ತಿನ ದಂತಕತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರಿಗೆ ಇಂದು (ಏ.24) ಜನುಮದಿನದ (Sachin Birthday) ಸಂಭ್ರಮ. ಸಚಿನ್ ತೆಂಡೂಲ್ಕರ್ (Sachin Tendulkar’s Net Worth) ಇಂದು 51ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಚಿನ್‌ ಶ್ರೇಷ್ಠ ಬ್ಯಾಟರ್‌ ಮಾತ್ರವಲ್ಲದೇ ದೇಶದ ಶ್ರೀಮಂತ ಕ್ರೀಡಾಪಟುಗಳಲ್ಲಿ ಒಬ್ಬರಾಗಿದ್ದಾರೆ. ಸಚಿನ್‌ ನಿವೃತ್ತಿ ಪಡೆದು ಹತ್ತು ವರ್ಷಗಳು ಕಳೆದರೂ ಇಂದಿಗೂ ಮಾರುಕಟ್ಟೆಯಲ್ಲಿ ಇರುವ ಬಹು ಬೇಡಿಕೆಯ ವ್ಯಕ್ತಿ. ಜಾಹೀರಾತು ಕ್ಷೇತ್ರಗಳಲ್ಲಿಯೂ ಸಚಿನ್‌ಗೆ ಇಂದಿಗೂ ಭಾರಿ ಬೇಡಿಕೆ ಇದೆ.

ಕ್ರೀಡೆಯಿಂದ ನಿವೃತ್ತರಾದ ನಂತರ, ಸಚಿನ್ ತೆಂಡೂಲ್ಕರ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್‌ನ (MI) ಮಾರ್ಗದರ್ಶಕರು ಆಗಿದ್ದರು. ತೆಂಡೂಲ್ಕರ್ ಅನೇಕ ಸ್ಟಾರ್ಟ್‌ಅಪ್‌ಗಳಲ್ಲಿ ಹೂಡಿಕೆ ಮಾಡಿದ್ದಾರೆ. ಅವುಗಳಲ್ಲಿ ಸ್ಮಾರ್ಟ್‌ಟ್ರೋನ್‌ಇಂಡಿಯಾ (SmartronIndia) ಸ್ಮ್ಯಾಷ್‌ ಎಂಟರ್‌ಟೈನ್‌ಮೆಂಟ್‌ (Smaaash Entertainment ), ಸ್ಪಿನ್ನಿ, ಇಂಟರ್ನ್ಯಾಷನಲ್ ಟೆನ್ನಿಸ್ ಪ್ರೀಮಿಯರ್ ಲೀಗ್ ಸೇರಿದಂತೆ ಅನೇಕ ವಿವಿಧ ಉದ್ಯಮಗಳಿಗೆ ಹೂಡಿಕೆ ಮಾಡಿದ್ದಾರೆ.

ಬರೋಬ್ಬರಿ 1354 ಕೋಟಿ ರೂ. ಒಡೆಯ ಸಚಿನ್‌ ತೆಂಡೂಲ್ಕರ್. ಭಾರತವಲ್ಲದೆ ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. ತೆಂಡೂಲ್ಕರ್ ಅವರು ಮುಂಬೈನಲ್ಲಿ ಐಷಾರಾಮಿ ಬಂಗಲೆಯನ್ನು ಹೊಂದಿದ್ದಾರೆ. ಅಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ. ಸಚಿನ್‌ ಇನ್ನಿತರ ದುಬಾರಿ ಆಸ್ತಿಗಳನ್ನು ಹೊಂದಿದ್ದಾರೆ. ಅವುಗಳು ಯಾವುವು ಎಂಬುದು ನೋಡೋಣ.

ಇದನ್ನೂ ಓದಿ: Sachin Tendulkar : ಸೋಲಿನ ಹತಾಶೆಯಲ್ಲಿದ್ದ ಕೊಹ್ಲಿಯನ್ನು ತಬ್ಬಿ ಸಂತೈಸಿದ ಸಚಿನ್; ಇಲ್ಲಿದೆ ವಿಡಿಯೊ

  1. – ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ (Bandra-Kurla complex) ಸಚಿನ್ ಅಲ್ಟ್ರಾ ಐಷಾರಾಮಿ ಫ್ಲ್ಯಾಟ್ ಹೊಂದಿದ್ದಾರೆ. 2018ರಲ್ಲಿ ಈ ಫ್ಲ್ಯಾಟ್ ಖರೀದಿಸಿದರು. ವರದಿಗಳ ಪ್ರಕಾರ, ಈ ಫ್ಲ್ಯಾಟ್ ಮೌಲ್ಯ 7.15 ಕೋಟಿ ರೂ.
  2. – ಸಚಿನ್ ಅವರು ಪಲಾಟಿಯಲ್ ಬಾಂದ್ರಾದಲ್ಲಿನ (Palatial Bandra) ಬಂಗಲೆಯ ಮಾಲೀಕರಾಗಿದ್ದಾರೆ. ಈ ಬಂಗಲೆಯ ಈಗಿನ ಮೌಲ್ಯ 39 ಕೋಟಿ ರೂಪಾಯಿ. ವರದಿಯ ಪ್ರಕಾರ, ತೆಂಡೂಲ್ಕರ್ ಅದನ್ನು ಖರೀದಿಸಿದಾಗ ಆ ಬಂಗಲೆ ಶಿಥಿಲಗೊಂಡಿತ್ತು. ಅದಾದ ಬಳಿಕ 45 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಳಿಸಿದರು.
  3. – ಸಚಿನ್‌ 2021ರಲ್ಲಿ ಮಾರಾಟ ಮಾಡಿದ ಐಷಾರಾಮಿ BMW X5 M50d ಕಾರಿನ ಬೆಲೆ 1.78 ಕೋಟಿ ರೂ.
  4. – ಸಚಿನ್ 2.62 ಕೋಟಿ ರೂಪಾಯಿಗೆ ಬಿಎಂಡಬ್ಲ್ಯು ಐ8 ಕಾರನ್ನು ಖರೀದಿಸಿದ್ದರು.
  5. – BMW M5”30 Jahre MS” Limited Edition ದುಬಾರಿ ಕಾರನ್ನು ಸಚಿನ್‌ ಸಹ ಹೊಂದಿದ್ದಾರೆ. ಇದರ ಬೆಲೆ 1.50 ಕೋಟಿ ರೂ.
  6. – ಸಚಿನ್ 2015ರಲ್ಲಿ 1.73 ಕೋಟಿ ರೂ. ಮೌಲ್ಯದ BMW 750 Li M ದುಬಾರಿ ಸ್ಪೋರ್ಟ್ಸ್‌ ಕಾರು ಖರೀದಿಸಿದ್ದರು.
  7. – ಸಚಿನ್ ಅವರಿಗೆ ವಾಚ್‌ಗಳೆಂದರೆ ತುಂಬ ಪ್ರೀತಿ. ಸಚಿನ್‌ ಬಳಿ ಅದೆಷ್ಟೋ ದುಬಾರಿ ವಾಚ್‌ ಕಲೆಕ್ಷನ್‌ಗಳು ಇವೆ. ಆಡೆಮಾರ್ಸ್ ಪಿಕ್ವೆಟ್ (Audemars Piquet) ತಯಾರಿಸಿದ ರಾಯಲ್ ಓಕ್ ಪರ್ಪೆಚುಯಲ್ ಕ್ಯಾಲೆಂಡರ್ (Royal Oak Perpetual Calendar) ವಾಚ್‌ ಬ್ರ್ಯಾಂಡ್‌ ಮಾಲೀಕರಾಗಿದ್ದಾರೆ.
  8. – BMW M6 ಗ್ರ್ಯಾನ್ ಕಪಲ್ ಐಷಾರಾಮಿ ಕಾರು ಕೂಡ ತೆಂಡೂಲ್ಕರ್ ಬಳಿ ಇದೆ. ಈ ಕಾರನ್ನು 2020ರಲ್ಲಿ ಖರೀದಿಸಿದರು ಮತ್ತು ಅದರ ಮೌಲ್ಯ 1.8 ಕೋಟಿ ರೂ. ಈ ಕಾರು ಭಾರತದಲ್ಲಿ ಸಚಿನ್ ಬಳಿ ಮಾತ್ರ ಇದೆ ಎಂಬುದೇ ವಿಶೇಷ.
  9. – ಸಚಿನ್ ಪೋರ್ಷೆ ಕಯೆನ್ನೆ (Porsche Cayenne) ಕಾರು ಹೊಂದಿದ್ದಾರೆ. ಇದರ ಬೆಲೆ 1.93 ಕೋಟಿ ರೂ.
  10. – ಫೆರಾರಿ 360: ಫೆರಾರಿ ( Ferrari 360: Ferrar) ಕಾರ್‌ ಕೂಡ ಸಚಿನ್‌ ಬಳಿ ಇದೆ. 29ನೇ ಟೆಸ್ಟ್ ಶತಕ ಬಾರಿಸಿ ಸರ್ ಡಾನ್ ಬ್ರಾಡ್ಮನ್ ಅವರ ದಾಖಲೆಯನ್ನು (Sir Don Bradman’s) ಸರಿಗಟ್ಟಿದ್ದರು. ಹೀಗಾಗಿ ಫೆರಾರಿ 360: ಫೆರಾರಿ ಕಾರು ಸಚಿನ್‌ ಅವರಿಗೆ ಉಡುಗೊರೆಯಾಗಿ ಬಂದಿತ್ತು. ಆಗ ಫೆರಾರಿ 360: ಫೆರಾರಿ ಕಾರಿನ ಬೆಲೆ 75 ಲಕ್ಷ ರೂಪಾಯಿ. ಬಳಿಕ ಈ ಕಾರನ್ನು 11 ಕೋಟಿ ರೂ. ಗೆ ಸಚಿನ್ ಮಾರಾಟ ಮಾಡಿದರು.

ಇದನ್ನೂ ಓದಿ: Sachin Tendulkar: ಮಹಿಳಾ ದಿನಾಚರಣೆಯಂದು ಭಾವುಕ ಕ್ಷಣದ ಫೋಟೊ ಹಂಚಿಕೊಂಡ ಸಚಿನ್‌

  • – ಸೋಷಿಯಲ್​ ಮೀಡಿಯಾದಲ್ಲೂ ಹಣ ಸಂಪಾದಿಸುತ್ತಿರುವ ಸಚಿನ್​, ಹಲವಾರು ಕಂಪನಿಗಳ ರಾಯಭಾರಿಯೂ ಆಗಿದ್ದಾರೆ. ಅಲ್ಲದೆ, ಆಹಾರ ಉದ್ಯಮದಲ್ಲೂ ಸಚಿನ್​ ಕಾಲಿಟ್ಟಿದ್ದಾರೆ. ಮುಂಬೈ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ರೆಸ್ಟೋರೆಂಟ್‌ಗಳನ್ನು ಹೊಂದಿದ್ದಾರೆ. ಮನರಂಜನೆ, ತಂತ್ರಜ್ಞಾನ ಕಂಪನಿಗಳಲ್ಲೂ ಹೂಡಿಕೆ ಮಾಡಿದ್ದಾರೆ. ಇಂಗ್ಲೆಂಡ್‌ನ ಲಂಡನ್‌ನಲ್ಲೂ ಸಚಿನ್ ಅವರಿಗೆ ಸ್ವಂತ ಮನೆಯಿದೆ. ಲೆಕ್ಕವಿಲ್ಲದಷ್ಟು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ.
Continue Reading

ಅಂಕಣ

ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

ರಾಜಮಾರ್ಗ ಅಂಕಣ: ಕ್ಯಾಂಡಿಡೇಟ್ಸ್ ಟೂರ್ನಿ ಗೆದ್ದು ನಿಂತು ಆತ ಇಡೀ ಜಗತ್ತಿನ ಕಣ್ಮಣಿಯಾಗಿ ಮೂಡಿ ಬಂದಿದ್ದಾನೆ. ವಿಶ್ವನಾಥನ್ ಆನಂದ್ ನಂತರ ಆ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯನಾಗಿ ಆತ ಇತಿಹಾಸಕ್ಕೆ ಸೇರಿ ಹೋಗಿದ್ದಾನೆ. ಆ ಹುಡುಗನ ಹೆಸರು ಡಿ.ಗುಕೇಶ್.

VISTARANEWS.COM


on

gukesh dommaraju rajamarga column
Koo

17ರ ಹರೆಯದ ಈ ಹುಡುಗನ ಸಾಧನೆಗೆ ವಿಶ್ವವೇ ತಲೆದೂಗುತ್ತಿದೆ!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಚೆನ್ನೈ ಮೂಲದ ಗುಕೇಶ್ (Gukesh Dommaraju) ವಿಶ್ವ ಚಾಂಪಿಯನ್ (World Champion) ಆಗಲು ಇನ್ನೊಂದೇ ಮೆಟ್ಟಿಲು ಬಾಕಿ ಇದೆ! ಈತನ ವಯಸ್ಸು ಇನ್ನೂ 17 ವರ್ಷ. ಮೌನದ ಮೂಲಕ ಜಗತ್ತನ್ನು ಗೆಲ್ಲಲು ಹೊರಟ ಆತನ ತೀಕ್ಷ್ಣ ಕಣ್ಣುಗಳು ಈಗಲೇ ವಿಶ್ವ ವಿಜಯಿಯಾಗುವ ಕನಸಿನಿಂದ ತುಂಬಿವೆ. ಹಿಂದೊಮ್ಮೆ ವಿಶ್ವ ಚಾಂಪಿಯನ್ ಚೆಸ್ ಆಟಗಾರ (Chess) ಮ್ಯಾಗ್ನಸ್ ಕಾರ್ಲಸನ್ (Magnus Carlson) ಅವರನ್ನು ಇದೇ ಹುಡುಗ ಸೋಲಿಸಿದಾಗ ಇಡೀ ಜಗತ್ತು ನಿಬ್ಬೆರಗಾಗಿ ಆತನನ್ನು ಗಮನಿಸಿತ್ತು.

ಈಗ ಕ್ಯಾಂಡಿಡೇಟ್ಸ್ ಟೂರ್ನಿ ಗೆದ್ದು ನಿಂತಾಗ ಆತ ಇಡೀ ಜಗತ್ತಿನ ಕಣ್ಮಣಿಯಾಗಿ ಮೂಡಿ ಬಂದಿದ್ದಾನೆ. ವಿಶ್ವನಾಥನ್ ಆನಂದ್ ನಂತರ ಆ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯನಾಗಿ ಆತ ಇತಿಹಾಸಕ್ಕೆ ಸೇರಿ ಹೋಗಿದ್ದಾನೆ.

ಆ ಹುಡುಗನ ಹೆಸರು ಡಿ.ಗುಕೇಶ್

ಆತ ಚೆನ್ನೈಯ ಪ್ರತಿಭೆ. ವಿಶ್ವನಾಥನ್ ಆನಂದ್ ಐದು ಬಾರಿ ವಿಶ್ವ ಚಾಂಪಿಯನ್ ಆದ ನಂತರ ನಿವೃತ್ತಿ ಪಡೆದು ಚೆನ್ನೈಯಲ್ಲಿ ವಿಶ್ವನಾಥನ್ ಆನಂದ ಚೆಸ್ ಆಕಾಡೆಮಿ (WACA)ಯನ್ನು ಸ್ಥಾಪನೆ ಮಾಡಿದ್ದರು. ಅದರಿಂದ ಸ್ಫೂರ್ತಿ ಪಡೆದು ಚೆನ್ನೈಯಲ್ಲಿ ಈಗ 60ಕ್ಕಿಂತ ಅಧಿಕ ಚೆಸ್ ಅಕಾಡೆಮಿಗಳು ಇವೆ. ಅದರ ಪರಿಣಾಮವಾಗಿ ಇದೀಗ ಚೆನ್ನೈ ನಗರವು ಭಾರತದ ಚೆಸ್ ರಾಜಧಾನಿ ಆಗಿ ಬೆಳೆದಿದೆ. ಅತೀ ಸಣ್ಣ ವಯಸ್ಸಿನಲ್ಲಿ ಗ್ರಾನ್ ಮಾಸ್ಟರ್ ಆದ ಆರ್ ಪ್ರಜ್ಞಾನಂದ, ಆರ್ ವೈಶಾಲಿ, ಸುಬ್ಬರಾಮನ್ ವಿಜಯಲಕ್ಷ್ಮಿ ಇವರೆಲ್ಲರೂ ಚೆನ್ನೈಯವರು. ಈ ಪಟ್ಟಿಗೆ ಈಗ ಹೊಳೆಯುವ ಪ್ರತಿಭೆ ಸೇರ್ಪಡೆ ಆಗಿದೆ. ಆತ ಡಿ ಗುಕೇಶ್. ಭಾರತದ ಒಟ್ಟು ಚೆಸ್ ಗ್ರಾನ್ ಮಾಸ್ಟರಗಳಲ್ಲಿ 35% ಆಟಗಾರರು ಚೆನ್ನೈಗೆ ಸೇರಿದವರು ಅನ್ನುವಾಗ ಆ ನಗರದ ಬಗ್ಗೆ ಹೆಮ್ಮೆ ಮೂಡುತ್ತದೆ.

ಬಾಲ್ಯದಿಂದಲೇ ಚೆಸ್ ಆಟಕ್ಕೆ ಸಮರ್ಪಣೆ ಆಗಿ ಬೆಳೆದ ಹುಡುಗ ಆತ .ಅದಕ್ಕಾಗಿ ತನ್ನ ಬಾಲ್ಯದ ಆಟ, ಶಾಲೆ, ತುಂಟಾಟ ಎಲ್ಲವನ್ನೂ ಬದಿಗೆ ಇಟ್ಟು ಹೋರಾಟಕ್ಕೆ ಇಳಿದವನು.

ಮಗನಿಗಾಗಿ ಅಪ್ಪ, ಅಮ್ಮ ಮಾಡಿದ ತ್ಯಾಗ

ಅವನ ತಂದೆ ಡಾ.ರಜಿನಿಕಾಂತ್ ನಗರದ ಪ್ರಸಿದ್ಧ ENT ಸರ್ಜನ್. ತಾಯಿ ಡಾ. ಪದ್ಮಕುಮಾರಿ ಕೂಡ ಮೈಕ್ರೋಬಯೊಲಜಿ ತಜ್ಞರು. ಇಬ್ಬರೂ ತಮ್ಮ ಮಗನಿಗಾಗಿ ತಮ್ಮ ಪ್ರಾಕ್ಟೀಸ್ ಮರೆತು ಜಗತ್ತಿನಾದ್ಯಂತ ಓಡಾಡಿದ್ದಾರೆ. ತರಬೇತಿಗಾಗಿ ತುಂಬಾ ದುಡ್ಡು ಖರ್ಚು ಮಾಡಿದ್ದಾರೆ. ತುಂಬಾ ಸಮಯ ಕೊಟ್ಟಿದ್ದಾರೆ. ಮಗನ ಚೆಸ್ ಭವಿಷ್ಯಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದರಾಗಿ ನಿಂತಿದ್ದಾರೆ.

ಹುಡುಗನೂ ನಾಲ್ಕನೇ ತರಗತಿಯಿಂದ ಶಾಲೆಗೇ ಹೋಗದೇ ಚೆಸ್ ಆಟದಲ್ಲಿ ಮೈ ಮರೆತಿದ್ದಾನೆ. ಶಾಲಾ ಶಿಕ್ಷಣಕ್ಕೆ ಸಮಯ ದೊರೆಯದ ಬಗ್ಗೆ ಹೆತ್ತವರಿಗೆ ಬೇಸರ ಇದೆ. ಆದರೆ ಆತನು 12ನೆಯ ವಯಸ್ಸಿಗೇ ಚೆಸ್ ಗ್ರಾನ್ ಮಾಸ್ಟರ್ ಹುದ್ದೆಗೆ ಏರಿದಾಗ ಅವರು ಆನಂದ ಭಾಷ್ಪ ಸುರಿಸಿದ್ದಾರೆ. ಮುಂದೆ ಚೆಸ್ ವಿಶ್ವ ಚಾಂಪಿಯನ್ ಮ್ಯಾಗ್ನೆಸ್ ಕಾರ್ಲಸನ್ ಅವರನ್ನು ಆತನು ಸೋಲಿಸಿದಾಗ ತುಂಬಾ ಖುಷಿ ಪಟ್ಟಿದ್ದಾರೆ. ಮ್ಯಾಗ್ನೆಸನನ್ನು ಸೋಲಿಸಿದ ವಿಶ್ವದ ಅತ್ಯಂತ ಕಿರಿಯ ಆಟಗಾರ ಗುಕೇಶ್ ಅನ್ನುವುದು ಸದ್ಯಕ್ಕೆ ಅಳಿಸಲಾಗದ ದಾಖಲೆ!

ಸಾಂಪ್ರದಾಯಕ ಚೆಸ್ ಕಲಿಕೆ, ಅಹಂಕಾರದಿಂದ ದೂರ!

ಸಾಮಾನ್ಯವಾಗಿ ಇತ್ತೀಚಿನ ಚೆಸ್ ಕಲಿಯುವ ಮಕ್ಕಳು ಕಂಪ್ಯೂಟರ್ ಜೊತೆ ಕೂತು ಚೆಸ್ ಆಡುತ್ತಾರೆ. ಆದರೆ ಗುಕೇಶ್ ಚೆಸ್ ಕಲಿತದ್ದು ಸಾಂಪ್ರದಾಯಿಕ ವಿಧಾನದಲ್ಲಿ. ಗುರುಗಳು ಹೇಳಿದ್ದನ್ನು ನೂರಕ್ಕೆ ನೂರರಷ್ಟು ಪಾಲಿಸುವ ಅವನ ಶ್ರದ್ಧೆ, ಏಕಾಗ್ರತೆ, ಬದ್ಧತೆ ಅವನನ್ನು ಪ್ರತೀ ಹೆಜ್ಜೆಯಲ್ಲಿಯೂ ಗೆಲ್ಲಿಸುತ್ತಿವೆ. ಯಾರಾದರೂ ಸನ್ಮಾನಕ್ಕೆ, ಸಂವಾದಕ್ಕೆ ಕರೆದರೆ ಆತನು ನಯವಾಗಿ ನೋ ಅನ್ನುವುದನ್ನು ಕಲಿತಿದ್ದಾನೆ. ಪ್ರಚಾರದಿಂದ ಆತ ಗಾವುದ ದೂರ ಓಡುತ್ತಾನೆ. ತಾನಾಯಿತು, ತನ್ನ ಅಭ್ಯಾಸವಾಯಿತು ಎಂದು ಚೆಸ್ ಆಟದಲ್ಲಿ ಮುಳುಗಿ ಬಿಡುವ ನಾಚಿಕೆಯ ಹುಡುಗ ಗುಕೇಶ್.

ಪ್ರಶಸ್ತಿ ಗೆದ್ದಾಗ ನಿನಗೆ ಹೇಗನ್ನಿಸಿತು ಹುಡುಗ? ಎಂದು ಕೇಳಿದಾಗ “ನನ್ನ ಗೆಲುವಿಗಿಂತ ದೇಶವನ್ನು ರೆಪ್ರೆಸೆಂಟ್ ಮಾಡುವ ಅವಕಾಶ ದೊರೆತದ್ದು ನನಗೆ ಹೆಚ್ಚು ಖುಷಿ ಕೊಟ್ಟಿದೆ” ಅನ್ನುತ್ತಾನೆ.

ನಿನ್ನ ಭವಿಷ್ಯದ ಗುರಿ ಏನು ಎಂದು ಯಾರೋ ಕೇಳಿದಾಗ “ನನಗೆ ವಿಶಿ ಸರ್ (ವಿಶ್ವನಾಥನ್ ಆನಂದ್) ಅವರು ಏನು ಹೇಳುತ್ತಾರೆಯೋ ಆ ಪ್ರಕಾರ ಮಾಡುತ್ತೇನೆ. ನನಗೆ ಏನು ಬೇಕು ಎಂದು ಅವರಿಗೆ ಚೆನ್ನಾಗಿ ಗೊತ್ತಿದೆ” ಅನ್ನುತ್ತಾನೆ.

ಐದು ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ತನಗೆ ಈಗ ಒಳ್ಳೆಯ ಶಿಷ್ಯ ದೊರೆತ ಖುಷಿಯಲ್ಲಿ ಇದ್ದಾರೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಶೇಕ್ಸ್‌ಪಿಯರ್‌ ನೆನಪಿನಲ್ಲಿ ಓದುವ ಸುಖ ನೆನಪಿಸಿಕೊಳ್ಳುವ ಹೊತ್ತು

Continue Reading

ಪ್ರಮುಖ ಸುದ್ದಿ

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

IPL 2024 : ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 210 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಲಕ್ನೊ ತಂಡ ಇನ್ನೂ 3 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು 213 ರನ್ ಬಾರಿಸಿ ಭರ್ಜರಿ ಗೆಲುವು ದಾಖಲಿಸಿತು.

VISTARANEWS.COM


on

IPL 2024
Koo

ಚೆನ್ನೈ: ಐಪಿಎಲ್​ 2024ನೇ (IPL 2024) 39ನೇ ಪಂದ್ಯದಲ್ಲಿ ತವರು ಅಭಿಮಾನಿಗಳ ಮುಂದೆಯೇ ಚೆನ್ನೈ ತಂಡವನ್ನು ಲಕ್ನೊ ಸೂಪರ್ ಜೈಂಟ್ಸ್ ತಂಡ 6 ವಿಕೆಟ್​ಗಳಿಂದ ಸೋಲಿಸಿದೆ. ಲಕ್ನೊ ತಂಡದ ಬ್ಯಾಟರ್​​ ಮಾರ್ಕಸ್​ ಸ್ಟೊಯ್ನಿಸ್​ 63 ಎಸೆತಕ್ಕೆ ಅಜೇಯ 124 ರನ್ (ಶತಕ) ಬಾರಿಸುವ ಮೂಲಕ ಗೆಲುವಿನ ರೂವಾರಿ ಎನಿಸಿಕೊಂಡರು. ಸಂಕಷ್ಟದಲ್ಲಿದ್ದ ಸಮಯದಲ್ಲಿ ತಂಡಕ್ಕೆ ಏಕಾಂಗಿಯಾಗಿ ಹೋರಾಟ ನಡೆಸಿದ ಸ್ಟೊಯ್ನಿಸ್ ಗೆಲುವು ತಂದುಕೊಟ್ಟರು. ಈ ಮೂಲಕ ಚೆನ್ನೈ ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಅವರ (ಅಜೇಯ 108 ರನ್​) ಶತಕದ ಹೋರಾಟ ವ್ಯರ್ಥಗೊಂಡಿತು. ಇದು ಚೆನ್ನೈ ತಂಡಕ್ಕೆ ಆಡಿರುವ ಎಂಟು ಪಂದ್ಯಗಳಲ್ಲಿ ಐದನೇ ಸೋಲಾಗಿದ್ದು ಅಂಕಪಟ್ಟಿಯಲ್ಲಿ ಒಂದು ಸ್ಥಾನ ಕಳೆದುಕೊಂಡು 5ನೇ ಸ್ಥಾನಕ್ಕೆ ಜಾರಿದೆ. ಅತ್ತ ಲಕ್ನೊ ಸೂಪರ್ ಜೈಂಟ್ಸ್​ ತಂಡ 4ನೇ ಸ್ಥಾನಕ್ಕೇರಿದೆ. ಈ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಆಡಿರುವ 8 ಪಂದ್ಯಗಳಲ್ಲಿ 5 ನೇ ಗೆಲುವಾಗಿದೆ. ಹೀಗಾಗಿ 10 ಅಂಕಗಳನ್ನು ಪಡೆದುಕೊಂಡಿದೆ.

ಇಲ್ಲಿನ ಎಂಎ ಚಿದಂಬರಂ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 210 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಲಕ್ನೊ ತಂಡ ಇನ್ನೂ 3 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು 213 ರನ್ ಬಾರಿಸಿ ಭರ್ಜರಿ ಗೆಲುವು ದಾಖಲಿಸಿತು.

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಲಕ್ನೊ ತಂಡ ಕ್ವಿಂಟನ್ ಡಿ ಕಾಕ್ ಶೂನ್ಯಕ್ಕೆ ಔಟಾಗುವ ಮೂಲಕ ಆರಂಭಿಕ ಆಘಾತ ಎದುರಿಸಿತು. ನಾಯಕ ಕೆ. ಎಲ್ ರಾಹುಲ್ ಕೂಡ 16 ರನ್​ಗೆ ಸೀಮಿತಗೊಂಡರು. ಈ ವೇಳೆ ಆಡಲು ಇಳಿದ ಡಿ ಕಾಕ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಆದರೆ, ನಾಲ್ಕನೇ ಕ್ರಮಾಂಕದಲ್ಲಿ ಅವಕಾಶ ಪಡೆದ ದೇವದತ್​ ಪಡಿಕ್ಕಲ್​ ಪೇಚಾರಿ 19 ಎಸೆತಕ್ಕೆ 13 ರನ್ ಮಾಡಿ ಔಟಾದರು. ಇದು ಲಕ್ನೊ ತಂಡಕ್ಕೆ ಹಿನ್ನಡೆ ಉಂಟು ಮಾಡಿತು.

ನಿಕೋಲಸ್​- ಸ್ಟೊಯ್ನಿಸ್​ ಜತೆಯಾಟ

88 ರನ್​ಗೆ 3 ವಿಕೆಟ್​ ಕಳೆದುಕೊಂಡ ಲಕ್ನೊ ತಂಡ ಅಪಾಯಕ್ಕೆ ಸಿಲುಕಿತು. ಆದರೆ ಈ ವೇಳೆ ಆಡಲು ಬಂದ ನಿಕೋಲಸ್ ಪೂರನ್ ಹಾಗೂ ಸ್ಪೊಯ್ನಿಸ್​ 70 ರನ್​ಗಳ ಜತೆಯಾಟ ಆಡಿದರು. ಆದರೆ, 15 ಎಸೆತಕ್ಕೆ 34 ರನ್ ಬಾರಿಸಿದ ಪೂರನ್​ ಔಟಾದ ಬಳಿಕ ಮತ್ತೆ ತೊಂದರೆ ಎದುರಾಯಿತು. ಆದರೆ ಯಾವುದಕ್ಕೂ ಕ್ಯಾರೆ ಎನ್ನದ ಸ್ಟೊಯ್ನಿಸ್​ 56 ಎಸೆತಕ್ಕೆ ಶತಕ ಪೂರೈಸಿದರು. ಕೊನೇ ತನಕ ನಿಂತು ಆಡಿ ಗೆಲ್ಲಿಸಿದರು. ಕೊನೆಯಲ್ಲಿ ದೀಪಕ್ ಹೂಡಾ 6 ಎಸೆತಕ್ಕೆ 17 ರನ್ ಬಾರಿಸಿದರು.

ಇದನ್ನೂ ಓದಿ: Virat kohli : ಅಂಪೈರ್​ಗಳ ಕೈ ಕುಲುಕಲೂ ನಿರಾಕರಿಸಿದ್ದ ವಿರಾಟ್​ ಕೊಹ್ಲಿ; ವಿಡಿಯೊ ಇದೆ

ಋತುರಾಜ್ ಶತಕದ ಆಟ

ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡವೂ ಉತ್ತಮವಾಗಿ ಆಡಲಿಲ್ಲ. ಅಜಿಂಕ್ಯ ರಹಾನೆ1 ರನ್​ ಗೆ ನಿರ್ಗಮಿಸಿದರು. ಆದರೆ ಮತ್ತೊಂದು ತುದಿಯಲ್ಲಿ ಋತುರಾಜ್ ಗಾಯಕ್ವಾಡ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಬಳಿಕ ಡ್ಯಾರಿಲ್ ಮಿಚೆಲ್​ 11 ಹಾಗೂ ಜಡೇಜಾ 16 ರನ್​ ಬಾರಿಸಿ ಔಟಾದರು. ಆದರೆ, 27 ಎಸೆತಕ್ಕೆ 66 ರನ್ ಬಾರಿಸಿದ ಶಿವಂ ದುಬೆ ದೊಡ್ಡ ಮೊತ್ತ ಪೇರಿಸಲು ನೆರವಾದರು.

Continue Reading
Advertisement
pm narendra modi jp morgan jamie dimon
ಪ್ರಮುಖ ಸುದ್ದಿ15 mins ago

PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

IPL 2024 Points Table
ಕ್ರೀಡೆ29 mins ago

IPL 2024 Points Table: ಚೆನ್ನೈಗೆ ಹೀನಾಯವಾಗಿ ಸೋಲುಣಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಲಕ್ನೋ

Noida Scrap Mafia
ವಿದೇಶ45 mins ago

Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

ಬೆಂಗಳೂರು ಗ್ರಾಮಾಂತರ48 mins ago

Lok Sabha Election 2024: ಬೆಂಗಳೂರು ಗ್ರಾಮಾಂತರಕ್ಕೆ ಡಬಲ್ ಸೆಕ್ಯೂರಿಟಿ; 28 ಲೋಕಸಭಾ ಕ್ಷೇತ್ರದ ಮತದಾರರು ಎಷ್ಟು?

shree Saibaba jatra mahotsav and Mass marriage programme
ಯಾದಗಿರಿ50 mins ago

Yadgiri News: ಸಾಮಾಜಿಕ ಕಾರ್ಯಗಳಿಂದ ಆತ್ಮತೃಪ್ತಿ: ಶಾಂತವೀರ ಸ್ವಾಮೀಜಿ

Vijayanagara News Sri Kolashanteswara Swamy Rathotsava in arasikere
ವಿಜಯನಗರ52 mins ago

Vijayanagara News: ವಿಜೃಂಭಣೆಯಿಂದ ಜರುಗಿದ ಶ್ರೀ ಕೋಲಶಾಂತೇಶ್ವರ ಸ್ವಾಮಿ ರಥೋತ್ಸವ

Harshika Poonacha bhuvan ponnanna met pralhad joshi
ಸಿನಿಮಾ53 mins ago

Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

IED Blast
Lok Sabha Election 20242 hours ago

IED Blast: ಎರಡನೇ ಹಂತದ ಮತದಾನಕ್ಕೆ ದಿನಗಣನೆ; ಮಣಿಪುರದ ಸೇತುವೆ ಮೇಲೆ ಐಇಡಿ ಸ್ಫೋಟ

Modi in Karnataka from April 28 and 29 BJP plan for second phase ready
Lok Sabha Election 20242 hours ago

Modi in Karnataka: ಏಪ್ರಿಲ್‌ 28 – 29ಕ್ಕೆ ಕರ್ನಾಟಕಕ್ಕೆ ಮೋದಿ; 2ನೇ ಹಂತಕ್ಕೆ ಬಿಜೆಪಿ ಪ್ಲ್ಯಾನ್‌ ರೆಡಿ!

female doctors
ಪ್ರಮುಖ ಸುದ್ದಿ2 hours ago

Female Doctors: ವೈದ್ಯೆಯರಿಂದ ಚಿಕಿತ್ಸೆ ಪಡೆದ ರೋಗಿಗಳು ಬದುಕುಳಿಯುವ ಸಾಧ್ಯತೆ ಹೆಚ್ಚಂತೆ! ಅಧ್ಯಯನ ವರದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌