Site icon Vistara News

IPL 2023 : ಆಡಿದ ಮೂರು ಎಸೆತಗಳಲ್ಲಿ ಐಪಿಎಲ್​ ಸಾಧನೆ ಮಾಡಿದ ಮಹೇಂದ್ರ ಸಿಂಗ್ ಧೋನಿ; ಏನದು ದಾಖಲೆ?

Watch Dhoni and learn; Uthappa, Raina spoke to the young players

#image_title

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್​ ನಾಯಕ ಮಹೇಂದ್ರ ಸಿಂಗ್​ ಧೋನಿ ಐಪಿಎಲ್​ 16ನೇ ಅವೃತ್ತಿಯ ಆರನೇ ಪಂದ್ಯದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ. ಪಂದ್ಯದಲ್ಲಿ ಕೇವಲ ಮೂರು ಎಸೆತಗಳಲ್ಲು ಎದುರಿಸಿ 12 ಬಾರಿಸಿದ ಅವರು ಈ ಸಾಧನೆಗೆ ಪಾತ್ರರಾದರು. ಮಹೇಂದ್ರ ಸಿಂಗ್​ ಧೋನಿ ಈ ಪಂದ್ಯದಲ್ಲಿ ಒಟ್ಟು ಮೂರು ಎಸೆತಗಳನ್ನು ಎದುರಿಸಿದ್ದರೂ ಅದರಲ್ಲಿ ಎರಡು ಭರ್ಜರಿ ಸಿಕ್ಸರ್​ಗಳನ್ನು ಭಾರಿಸಿದ್ದರು. ಈ ಮೂಲಕ ಚೆನ್ನೈನ ಚೆಪಾಕ್​ ಸ್ಟೇಡಿಯಮ್​ನಲ್ಲಿ ಸೇರಿದ್ದ ಕ್ರಿಕೆಟ್​ ಅಭಿಮಾನಿಗಳಿಗೆ ಪ್ರೇಕ್ಷಕರಿಗೆ ಖುಷಿ ನೀಡಿದ್ದರು.

ಮಹೇಂದ್ರ ಸಿಂಗ್ ಧೋನಿಗೆ ಸೋಮವಾರದ ಪಂದ್ಯ ಐಪಿಎಲ್​ನ 236ನೇ ಹಣಾಹಣಿಯಾಗಿದೆ. ಈ ಪಂದ್ಯದಲ್ಲಿ ಅವರು ಎಂಟು ರನ್​ ಬಾರಿಸಿದ ತಕ್ಷಣ ಐಪಿಎಲ್​ನಲ್ಲಿ 5000 ರನ್​ಗಳನ್ನು ಬಾರಿಸಿದ ದಾಖಲೆ ಮಾಡಿದರು. ಪಂದ್ಯದಲ್ಲಿ ಅವರು 12 ರನ್​ ಬಾರಿಸಿರುವ ಕಾರಣ ಅವರ ಒಟ್ಟು ಗಳಿಕೆ 5004ಕ್ಕೆ ಏರಿದೆ. ಅವರೀಗ ಈ ಮೈಲುಗಲ್ಲು ಸ್ಥಾಪಿಸಿದ ಏಳನೇ ಆಟಗಾರ ಎನಿಸಿಕೊಂಡಿದ್ದಾರೆ.

ಧೋನಿಗಿಂತ ಮೊದಲು ವಿರಾಟ್​ ಕೊಹ್ಲಿ, ಶಿಖರ್​ ಧವನ್​, ಡೇವಿಡ್​ ವಾರ್ನರ್, ರೋಹಿತ್ ಶರ್ಮಾ, ಸುರೇಶ್ ರೈನಾ ಹಾಗೂ ಎಬಿಡಿ ವಿಲಿಯರ್ಸ್​ ಐದು ಸಾವಿರ ರನ್​ಗಳ ದಾಖಲೆ ಮಾಡಿದ್ದರು. ಇದೀಗ ರೋಹಿತ್​ ಶರ್ಮಾ ಶೀ ದಾಖಲೆ ಮಾಡಿದ ಐದನೇ ಭಾರತೀಯ ಬ್ಯಾಟರ್​.

ಐಪಿಎಲ್​ನಲ್ಲಿ 5000 ರನ್​ಗಳ ಗಡಿ ದಾಟಿದವರ ಪಟ್ಟಿಯಲ್ಲಿ ವಿರಾಟ್​ ಕೊಹ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ. ಕೊಹ್ಲಿ 224 ಪಂದ್ಯಗಳಲ್ಲಿ ಆಡಿದ್ದು, 5 ಶತಕ ಹಾಗೂ 45 ಅರ್ಧ ಶತಕಗಳ ನೆರವಿನಿಂದ 6706 ರನ್​ ಬಾರಿಸಿದ್ದಾರೆ.

ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್​

ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಹಾಲಿ ಆವೃತ್ತಿಯಲ್ಲಿ ಮಹೇಂದ್ರ ಸಿಂಗ್ ಧೋನಿಯ ನೇತೃತ್ವದಲ್ಲಿಯೇ ಆಡುತ್ತಿದೆ. ಕಳೆದ ವರ್ಷ ಅರ್ಧ ಟೂರ್ನಿ ಜಡೇಜಾ ನೇತೃತ್ವದಲ್ಲಿ ಆಡಿದ್ದರೆ ಇನ್ನರ್ಧ ಧೋನಿಯ ನೇತೃತ್ವದಲ್ಲಿ ನಡೆದಿತ್ತು. ಮಹೇಂದ್ರ ಸಿಂಗ್​ ಧೋನಿ ಹಿಂದೆ ಅಗ್ರ ಕ್ರಮಾಂಕದಲ್ಲಿ ಬ್ಯಾಟ್​ ಮಾಡುತ್ತಿದ್ದರು. ಈ ವೇಳೆ ಅವರು ಉತ್ತಮ ಮೊತ್ತವನ್ನು ಪೇರಿಸುತ್ತಿದ್ದರು. ಆದರೆ, ಕಳೆದ ವರ್ಷದಿಂದ ಕೆಳಗಿನ ಕ್ರಮಾಂಕದಲ್ಲಿ ಬ್ಯಾಟ್​ ಮಾಡುತ್ತಿದ್ದಾರೆ. 6 ಮತ್ತು ಏಳನೇ ಕ್ರಮಾಂಕದಲ್ಲಿ ಬ್ಯಾಟ್​ಮಾಡಲು ಆರಂಭಿಸಿದ್ದಾರೆ.

ಜನಪ್ರಿಯ ಗಾಯಕ ಅರಿಜಿತ್ ಸಿಂಗ್ ಕೂಡ ಧೋನಿಯ ದೊಡ್ಡ ಫ್ಯಾನ್​

ಅಹಮದಾಬಾದ್: ಭಾರತ ಕ್ರಿಕೆಟ್​ ಕ್ಷೇತ್ರದ ದಿಗ್ಗಜ ಮಹೇಂದ್ರ ಸಿಂಗ್ ಧೋನಿಗೆ ಇದು ಕೊನೇ ಐಪಿಎಲ್​ ಎಂದು ಹೇಳಲಾಗುತ್ತಿದೆ. ಹೀಗಾಗಿ ಹಾಲಿ ಆವೃತ್ತಿಯಲ್ಲಿ ಅವರಿಗೆ ಸಿಕ್ಕಾಪಟ್ಟೆ ಮರ್ಯಾದೆ ಸಿಗುತ್ತಿದೆ. ಅದಕ್ಕಿಂತಲೂ ಹೆಚ್ಚಾಗಿ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳಿಗೆ ಧೋನಿ ನಿವೃತ್ತಿ ಹೊಂದುವುದೇ ದೊಡ್ಡ ಬೇಸರ ಎನಿಸಿದೆ. ಏತನ್ಮಧ್ಯೆ, ವಿಶ್ವ ಪ್ರಸಿದ್ಧ ಗಾಯಕ ಅರಿಜಿತ್​ ಸಿಂಗ್ ಕೂಡ ಮಹೇಂದ್ರ ಸಿಂಗ್​ ಧೋನಿಯ ಅಭಿಮಾನಿ ಎಂಬುದು ಸಾಬೀತಾಗಿದೆ. ಶುಕ್ರವಾರ ನಡೆದ ಐಪಿಎಲ್​ ಉದ್ಘಾಟನಾ ಕಾರ್ಯಕ್ರಮದ ವೇಳೆ ಅವರು ತಮ್ಮ ಸನಿಹವೇ ಸಿಕ್ಕಿದ ಮಹೇಂದ್ರ ಸಿಂಗ್ ಧೋನಿಯ ಕಾಲು ಹಿಡಿದು ನಮಸ್ಕರಿಸಿದ್ದಾರೆ.

ಐಪಿಎಲ್​ 16ನೇ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮದ ವೇಳೆ ಅರಿಜಿತ್​ ಸಿಂಗ್ ಅವರ ಗಾಯನ ಕಾರ್ಯಕ್ರಮವಿತ್ತು. ಬಳಿಕ ತಮನ್ನಾ ಭಾಟಿಯಾ ಹಾಗೂ ರಶ್ಮಿಕಾ ಮಂದಣ್ಣ ಅವರ ನೃತ್ಯ ಕಾರ್ಯಕ್ರಮವಿತ್ತು. ಅದಾದ ಬಳಿಕ ನಾಯಕರಾದ ಮಹೇಂದ್ರ ಸಿಂಗ್ ಧೋನಿ ಹಾಗೂ ಗುಜರಾತ್ ತಂಡದ ನಾಯಕ ಹಾರ್ದಿಕ್​ ಪಾಂಡ್ಯ ಅವರನ್ನು ತೆರೆದ ವಾಹನದಲ್ಲಿ ಮೈದಾನಕ್ಕೆ ಕರೆ ತರಲಾಯಿತು. ಈ ವೇಳೆ ತಮಗೆ ಎದುರಾದ ಮಹೇಂದ್ರ ಸಿಂಗ್ ಧೋನಿಯ ಕಾಲಿಗೆ ಬಿದ್ದು ನಮಸ್ಕರಿಸಿದರು.

Exit mobile version