Malaysia Masters: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಸಿಂಧು, ಶ್ರೀಕಾಂತ್‌, ಪ್ರಣಯ್​ Vistara News
Connect with us

ಕ್ರೀಡೆ

Malaysia Masters: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಸಿಂಧು, ಶ್ರೀಕಾಂತ್‌, ಪ್ರಣಯ್​

ಮಲೇಷ್ಯ ಮಾಸ್ಟರ್ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ಶಟ್ಲರ್​ಗಳಾದ .ವಿ. ಸಿಂಧು, ಶ್ರೀಕಾಂತ್‌ ಮತ್ತು ಎಚ್‌. ಎಸ್‌. ಪ್ರಣಯ್‌ ಅವರು ಕ್ವಾರ್ಟರ್​ ಫೈನಲ್ ಪ್ರವೇಶಿಸಿದ್ದಾರೆ.

VISTARANEWS.COM


on

Malaysia Masters
Koo

ಕೌಲಾಲಂಪುರ: ಅವಳಿ ಒಲಿಂಪಿಕ್​ ಪದಕ ವಿಜೇತೆ ಪಿ.ವಿ. ಸಿಂಧು, ಶ್ರೀಕಾಂತ್‌ ಮತ್ತು ಎಚ್‌. ಎಸ್‌. ಪ್ರಣಯ್‌ ಅವರು ಉತ್ತಮ ಪ್ರದರ್ಶನ ತೋರುವ ಮೂಲಕ ಮಲೇಷ್ಯ ಮಾಸ್ಟರ್ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ ಭಾರತಕ್ಕೆ ಪದಕ ಭರವಸೆ ಮೂಡಿಸಿದ್ದಾರೆ. ಆದರೆ ಯುವ ಆಟಗಾರ ಲಕ್ಷ್ಯ ಸೇನ್​ ಸೋತು ಟೂರ್ನಿಯಿಂದ ನಿರ್ಗಮಿಸಿದ್ದಾರೆ.

ಗುರುವಾರ ಇಲ್ಲಿ ನಡೆದ ಮಹಿಳಾ ಸಿಂಗಲ್ಸ್​ ವಿಭಾಗದ ಸ್ಪರ್ಧೆಯಲ್ಲಿ ಆರನೇ ಶ್ರೇಯಾಂಕದ ಸಿಂಧು ಅವರು ಜಪಾನಿನ ಆಯಾ ಒಹೋರಿ ವಿರುದ್ಧ 21-16, 21-11 ಗೇಮ್​ಗಳಿಂದ ಗೆದ್ದು ಬೀಗಿದರು. ಆರಂಭದಿಂದಲೇ ಆಕ್ರಮಣ ಆಟಕ್ಕೆ ಒತ್ತು ಕೊಟ್ಟ ಸಿಂಧು ಎದುರಾಳಿ ವಿರುದ್ಧ ಸುಲಭ ಗೆಲುವು ದಾಖಲಿಸಿದರು. ಕಳೆದ ಪಂದ್ಯದಲ್ಲಿ ಸಿಂಧು ಡೆನ್ಮಾರ್ಕ್‌ನ ಲಿನೆ ಕ್ರಿಸ್ಟೋಫ‌ರ್ಸನ್‌ ಅವರನ್ನು 21-13, 17-21, 21-18 ಗೇಮ್‌ಗಳಿಂದ ಸೋಲಿಸಿದ್ದರು.

ಇದನ್ನೂ ಓದಿ Malaysia Masters: ಪ್ರಧಾನ ಸುತ್ತು ಪ್ರವೇಶಿಸಿದ ಮಾಳವಿಕಾ, ಅಶ್ಮಿತಾ

ಪುರುಷರ ಸಿಂಗಲ್ಸ್​ ವಿಭಾಗದ ಹಣಾಹಣಿಯಲ್ಲಿ ಕಿದಂಬಿ ಶ್ರೀಕಾಂತ್‌ ಅವರು 21-19, 21-19 ಅಂತರದಿಂದ ಥಾಯ್ಲೆಂಡಿನ ಕುನ್ಲಾವುತ್​ ವಿಟಿಸರ್ನ್ ಅವರನ್ನು ಮಣಿಸುವಲ್ಲಿ ಯಶಸ್ವಿಯಾದರು. ಮೊದಲ ಸುತ್ತಿನ ಪಂದ್ಯದಲ್ಲಿ ಶ್ರೀಕಾಂತ್​ ಫ್ರಾನ್ಸ್‌ನ ಜೂನಿಯರ್‌ ಪೊಪೋವ್‌ ಅವರನ್ನು ಹಿಮ್ಮಟ್ಟಿಸಿದ್ದರು. ದಿನದ ಮತ್ತೊಂದು ಪುರುಷರ ಸಿಂಗಲ್ಸ್​ನಲ್ಲಿ ಎಚ್‌.ಎಸ್‌. ಪ್ರಣಯ್‌ ಚೀನಾದ ಶಿ ಫೆಂಗ್‌ ಲಿ ಎದುರು 13-21, 21-16, 21-11 ಪ್ರಯಾಸದ ಗೆಲುವು ಕಂಡರು. ಅತ್ಯಂತ ಜಿದ್ದಾಜಿದ್ದಿನಿಂದ ನಡೆದ ಈ ಹೋರಾಟದಲ್ಲಿ ಮೊದಲ ಗೇಮ್​ನಲ್ಲಿ ಪ್ರಣಯ್‌ ಹಿನ್ನಡೆ ಕಂಡರು. ಆದರೆ ಮುಂದಿನ ಎರಡು ನಿರ್ಣಾಯಕ ಗೇಮ್​ಗಳಲ್ಲಿ ತಿರುಗಿ ಬಿದ್ದು ಪಂದ್ಯವನ್ನು ತಮ್ಮ ಕೈವಶ ಮಾಡಿಕೊಂಡರು. ಆದರೆ ಭರವಸೆಯ ಆಟಗಾರನಾಗಿದ್ದ ಲಕ್ಷ್ಯ ಸೇನ್ ಅವರು ಅಗುಂಸ್​ ನಾ ಲಾಂಗ್​ ವಿರುದ್ಧ ​14-21, 19-21 ನೇರ ಗೇಮ್​ಗಳ ಅಂತರದಿಂದ ಸೋತು ನಿರಾಸೆ ಮೂಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರಿಕೆಟ್

WTC Final 2023: ಟ್ರೋಲ್​ಗಳಿಗೆ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ

ಆಹಾರ ಸೇವಿಸಿದ ವಿಚಾರಕ್ಕೆ ಟ್ರೋಲ್(troll)​ ಮಾಡಿದ ನೆಟ್ಟಿಗರಿಗೆ ಕಿಂಗ್​ ಕೊಹ್ಲಿ ತಕ್ಕ ಉತ್ತರ ನೀಡಿದ್ದಾರೆ.

VISTARANEWS.COM


on

Edited by

virat kohli angry pic
Koo

ಲಂಡನ್​: ಔಟಾದ ಬಳಿಕ ಆಹಾರ ಸೇವಿಸಿದ ವಿಚಾರಕ್ಕೆ ಅತ್ಯಂತ ಕೀಳು ಮಟ್ಟದಲ್ಲಿ ಟ್ರೋಲ್(troll)​ ಮಾಡಿದ ನೆಟ್ಟಿಗರಿಗೆ ವಿರಾಟ್​ ಕೊಹ್ಲಿ ಅವರು ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಈ ಮೂಲಕ ತಮ್ಮ ವಿರುದ್ಧ ಟೀಕೆ ಮಾಡುವವರ ಬಾಯಿ ಮುಚ್ಚಿಸಿದ್ದಾರೆ.

ಲಂಡನ್​ನ ಓವಲ್​ ಮೈದಾನದಲ್ಲಿ(WTC Final 2023) ದ್ವಿತೀಯ ದಿನದಾಟದ ವೇಳೆ ಭಾರತೀಯ ಆಟಗಾರರ ವಿಕೆಟ್​ ಒಂದೆಡೆ ಬೀಳುತ್ತಿದ್ದರೂ ಯಾವುದೇ ಚಿಂತೆ ಇಲ್ಲದಂತೆ ವಿರಾಟ್​ ಕೊಹ್ಲಿ ವಿಕೆಟ್​ ಒಪ್ಪಿಸಿ ಪೆವಿಲಿಯನ್‌ಗೆ ತೆರಳಿದ ತಕ್ಷಣ ಇಶಾನ್​ ಕಿಶನ್​ ಮತ್ತು ಗಿಲ್​ ಜತೆ ಹರಾಟೆ ಹೊಡೆಯುತ್ತಾ ಆಹಾರ ಸೇವಿಸಿದ್ದರು. ಇದರ ಫೋಟೊ ಮತ್ತು ವಿಡಿಯೊ ಎಲ್ಲಡೆ ವೈರಲ್​ ಆಗಿತ್ತು.

ಕೊಹ್ಲಿಯ ಈ ವರ್ತನೆ ಕಂಡ ಅನೇಕ ಟೀಮ್​ ಇಂಡಿಯಾದ ಅಭಿಮಾನಿಗಳು ಮತ್ತು ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದರು. ಐಪಿಎಲ್​ನಲ್ಲಿ ಪಂದ್ಯ ಸೋತಾಗ ಕಣ್ಣೀರು ಸುರಿಸುವ ನೀವು ಭಾರತ ತಂಡಕ್ಕೆ ಆಡುವಾಗ ಮಾತ್ರ ಈ ರೀತಿ ಮಾಡುತ್ತೀರಿ ಇದರ ಅರ್ಥ ನೀವು ಹಣಕ್ಕಾಗಿ ಆಡುತ್ತೀರಿ, ದೇಶಕಾಕ್ಕಾಗಿ ಅಲ್ಲ ಎಂದು ತೀಕ್ಷ್ಣ ಮಾತುಗಳಿಂದ ಕೊಹ್ಲಿಯನ್ನು ಟ್ರೋಲ್​ ಮಾಡಿದ್ದರು.

“ಎಷ್ಟ್ರೇ ಸಾಧನೆ ಮಾಡಿದ್ದರೂ ಹಣಕ್ಕೆ ಆಸೆಪಡುವ ವಿರಾಟ್​ ಕೊಹ್ಲಿಯನ್ನು ಸಚಿನ್​ ತೆಂಡೂಲ್ಕರ್​ ಜತೆ ಯಾವತ್ತೂ ಹೋಲಿಕೆ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಎಲ್ಲ ಟೀಕೆ ಮತ್ತು ಟ್ರೋಲ್​ಗಳಿಗೆ ವಿರಾಟ್​ ಕೊಹ್ಲಿ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿಯೊಂದನ್ನು ಹಾಕುವ ಮೂಲಕ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ WTC Final 2023: ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಆಡು; ಔಟಾದ ಬಳಿಕ ಊಟದ ಜತೆ ಬೈಗುಳ ತಿಂದ ಕೊಹ್ಲಿ

ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿರುವ ಕೊಹ್ಲಿ, ಅಮೆರಿಕದ ಖ್ಯಾತ ಲೇಖಕ ಮಾರ್ಕ್ ಮ್ಯಾನ್ಸನ್ ಅವರ, “ಇತರ ಜನರ ಅಭಿಪ್ರಾಯದ ಸೆರೆಮನೆಯಿಂದ ನಿಮ್ಮನ್ನು ಮುಕ್ತಗೊಳಿಸಲು ನೀವು ಇಷ್ಟಪಡದಿರುವ ಸಾಮರ್ಥ್ಯವನ್ನು ಉತ್ತಮವಾಗಿ ಬೆಳೆಸಿಕೊಳ್ಳಬೇಕು” ಎಂಬ ಹೇಳಿಕೆಯನ್ನು ಫೋಸ್ಟ್​ ಮಾಡುವ ಮೂಲಕ ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿರುವವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ. ಸದ್ಯ ಕೊಹ್ಲಿ ಈ ಪೋಸ್ಟ್​ ಎಲ್ಲಡೆ ವೈರಲ್​ ಆಗಿದೆ. ಕೊಹ್ಲಿ ಅವರು ಮೊದಲ ಇನಿಂಗ್ಸ್​ನಲ್ಲಿ 14 ರನ್​ ಗಳಿಸಿದ್ದರು.

Continue Reading

ಕ್ರಿಕೆಟ್

ICC World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ

ಐಸಿಸಿ ಏಕದಿನ ವಿಶ್ವ ಕಪ್​ ಟೂರ್ನಿಯ ವೇಳಾಪಟ್ಟಿ ಜೂನ್​ 10, ಶನಿವಾರ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

VISTARANEWS.COM


on

Edited by

World Cup schedule
Koo

ಲಂಡನ್​: ಭಾರತದ ಆತಿಥ್ಯದಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವ ಕಪ್​ ಟೂರ್ನಿಯ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಐಸಿಸಿ ಮೂಲಗಳ ಪ್ರಕಾರ ಜೂನ್​ 10 ಶನಿವಾರ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ವರದಿಯಾಗಿದೆ.

ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯ ಲಂಡನ್​ನಲ್ಲಿ ನಡೆಯುತ್ತಿದ್ದರು. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸುತ್ತಿದೆ. ಈ ಪಂದ್ಯ ವೀಕ್ಷಣೆಗೆ ಬಿಸಿಸಿಐ ಅಧಿಕಾರಿಗಳು ಮತ್ತು ಐಸಿಸಿ ಅಧಿಕಾರಿಗಳು ಲಂಡನ್​ನಲ್ಲಿ ಸೇರಿದ್ದಾರೆ. ಇದೇ ವೇಳೆ ಸಭೆ ನಡೆಸಿ ಏಕದಿನ ಟೂರ್ನಿಯ ವೇಳಾಪಟ್ಟಿ ಮತ್ತು ತಾಣಗಳನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಶನಿವಾರ ಇದು ಅಧಿಕೃತ ಪ್ರಕಟನೆ ಮೂಲಕ ಹೊರಬೀಳಲಿದೆ ಎನ್ನಲಾಗಿದೆ. ಅಕ್ಟೋಬರ್​ 5ರಿಂದ ನವೆಂಬರ್‌ 19ರ ವರೆಗೆ ಈ ಕ್ರೀಡಾಕೂಟ ನಡೆಯುವ ಸಾಧ್ಯತೆ ಇದೆ.

ಟೂರ್ನಿಗಾಗಿ ಕನಿಷ್ಠ 10ಕ್ಕೂ ಹೆಚ್ಚು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕೊತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈ ಈ ಪಟ್ಟಿಯಲ್ಲಿ ಸೇರಿವೆ ಎನ್ನಲಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಚೆನ್ನೈನಲ್ಲಿ ನಡೆಯುವ ಸಾಧ್ಯತೆಯಿದೆ. ಪಾಕಿಸ್ತಾನದ ಹೆಚ್ಚಿನ ಪಂದ್ಯಗಳು ಬೆಂಗಳೂರು ಮತ್ತು ಚೆನ್ನೈನಲ್ಲಿ ನಡೆಯಲಿದೆ. ಬಾಂಗ್ಲಾದೇಶದ ಪಂದ್ಯಗಳು ಕೋಲ್ಕತ್ತಾ ಮತ್ತು ಗುವಾಹಟಿಯಲ್ಲಿ ನಡೆಯುವ ಸಾಧ್ಯತೆ ಇದೆ. ಭಾರತ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಪಾಕಿಸ್ತಾನ ತಂಡ ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಪಂದ್ಯ ಆಡುವುದಿಲ್ಲ ಎಂದು ಹೇಳಿದೆ. ಅಂತಿಮ ಪಟ್ಟಿ ಹೇಗೆ ಇರಲಿದೆ ಎಂದು ಶನಿವಾರ ಉತ್ತರ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ World Cup 2023: ಈ ಸ್ಟೇಡಿಯಂನಲ್ಲಿ ಪಾಕ್​ ತಂಡ ಭಾರತ ವಿರುದ್ಧ ವಿಶ್ವ ಕಪ್​ ಆಡಲ್ಲವಂತೆ!

48 ಪಂದ್ಯಗಳು

ಒಟ್ಟು ಹತ್ತು ತಂಡಗಳನ್ನು ಎರಡು ಗುಂಪುಗಳಾಗಿ ಆಡಿಸಲಾಗುತ್ತದೆ. ಹೀಗಾಗಿ 46 ದಿನಗಳಲ್ಲಿ 48 ಪಂದ್ಯಗಳು ನಡೆಯಲಿವೆ. ಅಕ್ಟೋಬರ್-ನವೆಂಬರ್​ನಲ್ಲಿ ಕೆಲ ಪ್ರದೇಶಗಳಲ್ಲಿ ಹಿಂಗಾರು ಮಳೆ ಸಾಧ್ಯತೆ ಇರುವುದರಿಂದ ಅಭ್ಯಾಸ ನಡೆಸುವ ತಾಣಗಳನ್ನು ಬಿಸಿಸಿಐ ಶಿಘ್ರದಲ್ಲೇ ಪ್ರಕಟಿಸಲಿದೆ ಎಂದು ವರದಿ ಮಾಡಿದೆ.

Continue Reading

ಕ್ರಿಕೆಟ್

WTC Final 2023: ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಆಡು; ಔಟಾದ ಬಳಿಕ ಊಟದ ಜತೆ ಬೈಗುಳ ತಿಂದ ಕೊಹ್ಲಿ

ವಿರಾಟ್​ ಕೊಹ್ಲಿ ಅವರು ವಿಶ್ವ ಟೆಸ್ಟ್​​ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಔಟಾದ ತಕ್ಷಣ ಡಗೌಟ್​ನಲ್ಲಿ ಆಹಾರ ಸೇವಿಸಿದ ಕಾರಣಕ್ಕೆ ಟ್ರೋಲ್​ ಆಗಿದ್ದಾರೆ.

VISTARANEWS.COM


on

Edited by

Virat Kohli troll
Koo

ಲಂಡನ್​: ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅವರು ನಿರೀಕ್ಷಿತ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರುವಲ್ಲಿ ಎಡವಿದ್ದಾರೆ. ಆದರೆ ಅವರು ಔಟ್​​ ಆಗಿರುವ ವಿಚಾರವನ್ನು ಹೊರತುಪಡಿಸಿ ಬೇರೆಯೇ ಕಾರಣಕ್ಕೆ ಇದೀಗ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಲಂಡನ್​ನ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ದಿನದಾಟದ ವೇಳೆ ವಿರಾಟ್​ ಅವರು 14 ರನ್​ ಗಳಿಸಿ ವಿಕೆಟ್​ ಕೈಚೆಲ್ಲಿದರು. ಪೆವಿಲಿಯನ್‌ಗೆ ತೆರಳಿದ ವಿರಾಟ್‌ ಕೊಹ್ಲಿ ಯಾವುದೇ ಚಿಂತೆ ಇಲ್ಲದವರಂತೆ ಇಶಾನ್​ ಕಿಶನ್​ ಮತ್ತು ಗಿಲ್​ ಜತೆ ಹರಾಟೆ ಹೊಡೆಯುತ್ತಾ ಆಹಾರ ಸೇವಿಸಿದ್ದಾರೆ. ಇದರ ಫೋಟೊ ಮತ್ತು ವಿಡಿಯೊ ಎಲ್ಲಡೆ ವೈರಲ್​ ಆಗಿದೆ.

ಕೊಹ್ಲಿಯ ಈ ವರ್ತನೆ ಕಂಡ ಅನೇಕ ಟೀಮ್​ ಇಂಡಿಯಾದ ಅಭಿಮಾನಿಗಳು ಮತ್ತು ಕೆಲವು ಕ್ರಿಕೆಟ್​ ಪಂಡಿತರು ಟೀಕೆ ವ್ಯಕ್ತಪಡಿಸಿದ್ದಾರೆ. ಜತೆಗೆ ಅವರನ್ನು ತೀಕ್ಷ್ಣ ಮಾತುಗಳಿಂದ ಟ್ರೋಲ್​ ಮಾಡಿದ್ದಾರೆ. ಐಪಿಎಲ್​ನಲ್ಲಿ ಪಂದ್ಯ ಸೋತಾಗ ಕಣ್ಣೀರು ಸುರಿಸುವ ನೀವು ಭಾರತ ತಂಡಕ್ಕೆ ಆಡುವಾಗ ಮಾತ್ರ ಈ ರೀತಿ ಮಾಡುತ್ತೀರಿ ಇದರ ಅರ್ಥ ನೀವು ಹಣಕ್ಕಾಗಿ ಆಡುತ್ತೀರಿ, ದೇಶಕಾಕ್ಕಾಗಿ ಅಲ್ಲ ಎಂದು ನೆಟ್ಟಿಗರೊಬ್ಬರು ಟ್ರೋಲ್​ ಮಾಡಿದ್ದಾರೆ.

ಇದನ್ನೂ ಓದಿ WTC Final 2023: ಇನಿಂಗ್ಸ್​ ಹಿನ್ನಡೆ ಭಯದಲ್ಲಿ ಟೀಮ್​ ಇಂಡಿಯಾ

ತಂಡ ಸಂಕಷ್ಟದಲ್ಲಿದ್ದರೂ ನೀವು ಈ ರೀತಿ ಆನಂದದಲ್ಲಿರುವುದನ್ನು ಕಾಣುವಾಗ ಭಾರತ ತಂಡಕ್ಕಿಂತ ನಿಮಗೆ ಐಪಿಎಲ್​ ಟೂರ್ನಿಯೇ ಹೆಚ್ಚಾದಂತೆ ಕಾಣುತ್ತಿದೆ ಎಂದು ಮತ್ತೊಬ್ಬ ನೆಟ್ಟಿಗ ಟ್ರೋಲ್​ ಮಾಡಿದ್ದಾರೆ. ಇನ್ನಿ ಕೆಲವರು ಅರೇ ನೀವು ತಿನ್ನುತ್ತಿರುವ ಆಹಾರ ಯಾವುದು? ಎಂದು ಪ್ರಶ್ನೆ ಮಾಡುವ ಮೂಲಕ ಕೊಹ್ಲಿಯ ಕಾಲೆಳೆದಿದ್ದಾರೆ.

ಎಷ್ಟ್ರೇ ಸಾಧನೆ ಮಾಡಿದ್ದರೂ ಹಣಕ್ಕೆ ಆಸೆಪಡುವ ವಿರಾಟ್​ ಕೊಹ್ಲಿಯನ್ನು ಸಚಿನ್​ ತೆಂಡೂಲ್ಕರ್​ ಜತೆ ಯಾವತ್ತೂ ಹೋಲಿಕೆ ಮಾಡಬೇಡಿ ಎಂದು ನೆಟ್ಟಿಗೊರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಕೊಹ್ಲಿಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹಲವು ಕಾರಣಕ್ಕೆ ಟ್ರೋಲ್​ ಆಗುತ್ತಿದೆ.

Continue Reading

Live News

WTC Final 2023: ಭಾರತ-ಆಸೀಸ್​ ಮೂರನೇ ದಿನದಾಟದ ಹೈಲೆಟ್ಸ್​

ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದ ಮೂರನೇ ದಿನದಾಟದ ಹೈಲೆಟ್ಸ್​ ಇಲ್ಲಿದೆ.

VISTARANEWS.COM


on

Edited by

ICC World Test Championship Final 2023
Koo

ಲಂಡನ್​: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದ ಮೂರನೇ ದಿನದಾಟದ ಹೈಲೆಟ್ಸ್​ ಇಲ್ಲಿದೆ.

Continue Reading
Advertisement
B C Nagesh
ಕರ್ನಾಟಕ2 mins ago

BC Nagesh: ಸೋತ ನಂತರ ಬಿ.ಸಿ. ನಾಗೇಶ್‌ಗೆ ಜವಾಬ್ದಾರಿ ನೆನಪಾಯಿತೇ? ಮಾಜಿ ಸಚಿವರ ಮೇಲೆ ಕ್ಯಾಮ್ಸ್‌ ಕಿಡಿ

Monsoon Health Tips
ಆರೋಗ್ಯ4 mins ago

Health Tips For Monsoon: ಮಳೆಗಾಲದಲ್ಲಿ ಕಾಡುವ ಶೀತ-ಜ್ವರವನ್ನು ದೂರ ಇರಿಸುವುದು ಹೇಗೆ?

virat kohli angry pic
ಕ್ರಿಕೆಟ್4 mins ago

WTC Final 2023: ಟ್ರೋಲ್​ಗಳಿಗೆ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ

Liquor Consumption of poor man
ಕರ್ನಾಟಕ18 mins ago

Liquor Consumption: ಬಡವನ ಕುಡಿತದ ವಾರ್ಷಿಕ ಲೆಕ್ಕಾಚಾರ ಇಲ್ಲಿದೆ! ದಿನಕ್ಕೆ ಆತನ ಸರಾಸರಿ ಖರ್ಚೆಷ್ಟು?

Anganawadi worker
ಕರ್ನಾಟಕ18 mins ago

Anganawadi worker: ತಂಗಿಗೆ ನನ್ನ ಕೆಲಸ ಕೊಡಿ ಎಂದು ತನ್ನ ಬದುಕಿಗೆ ದುರಂತ ಅಂತ್ಯ ಹಾಡಿದ ಅಂಗನವಾಡಿ ಕಾರ್ಯಕರ್ತೆ!

Apsara Murder In Hyderabad
ಕ್ರೈಂ21 mins ago

Apsara Murder: ಪತ್ನಿ ಇದ್ದರೂ ಅರ್ಚಕನಿಗೆ ಬೇಕು ಲವ್ವರ್;‌ ಆಕೆ ಮದುವೆಯಾಗು ಎಂದಿದ್ದಕ್ಕೆ ಆದ ಕಿಲ್ಲರ್

Siddaramaiah as a conductor imaginary photo
ಕರ್ನಾಟಕ30 mins ago

Congress Guarantee: ಪಾರ್ಟ್‌ ಟೈಂ ಬಸ್ ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!

Actress Nayanthara
South Cinema41 mins ago

Actress Nayanthara: ಅವಳಿ ಮಕ್ಕಳ ಜತೆ ಕ್ಯೂಟ್‌ ಆಗಿ ಫೋಟೊಶೂಟ್‌ ಮಾಡಿಸಿಕೊಂಡ ನಯನತಾರಾ!

rajeev sen and Charu Asopa divorce
ಕಿರುತೆರೆ43 mins ago

Celebrity Divorce: ಸಂಸಾರದಲ್ಲಿ ಬಿರುಕು, ಪತಿಯಿಂದ ದೂರವಾದ ಕಿರುತೆರೆ ನಟಿ

World Cup schedule
ಕ್ರಿಕೆಟ್47 mins ago

ICC World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ13 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Cancellation of tenders for 108 ambulances and Dinesh Gundu rao
ಆರೋಗ್ಯ6 hours ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ6 hours ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ6 hours ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ7 hours ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ22 hours ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ24 hours ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ1 day ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ2 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ2 days ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ3 days ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

ಟ್ರೆಂಡಿಂಗ್‌

error: Content is protected !!