ಕ್ರೀಡೆ
Heart Attack: ಬ್ಯಾಡ್ಮಿಂಟನ್ ಆಡುತ್ತಿದ್ದವನ ಬಾಳಲ್ಲಿ ಆಟವಾಡಿದ ವಿಧಿ; ಹೃದಯಾಘಾತದಿಂದ ಸಾವು
Heart Attack: ನೊಯ್ಡಾ 11ನೇ ಸೆಕ್ಟರ್ ನಿವಾಸಿ ಮಹೇಂದ್ರ ಶರ್ಮಾ ಅವರು ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸುತ್ತಿದ್ದರು. ಕಳೆದ ಐದು ವರ್ಷದಿಂದ ಅವರು ನಿತ್ಯ ಬ್ಯಾಡ್ಮಿಂಟನ್ ಆಡುತ್ತಿದ್ದರು. ಆದರೆ, ಅವರಿಗೆ ಶನಿವಾರ ಬೆಳಗ್ಗೆ ಹೃದಯಾಘಾತವಾಗಿದೆ. ಇದಾದ ಕೆಲವೇ ನಿಮಿಷದಲ್ಲಿ ಅವರು ಮೃತಪಟ್ಟಿದ್ದಾರೆ.
ನೊಯ್ಡಾ: ಇತ್ತೀಚೆಗೆ ಹೃದಯಾಘಾತಕ್ಕೀಡಾಗಿ, ಮೃತಪಡುತ್ತಿರುವವರ ಸಂಖ್ಯೆ ಜಾಸ್ತಿಯಾದ ಕಾರಣ ಜನರ ಬದುಕು ಮತ್ತಷ್ಟು ಅನಿಶ್ಚಿತತೆಯಿಂದ ಕೂಡಿದೆ. ನಮ್ಮೆದುರು ಚೆನ್ನಾಗಿ ಇರುವವರು ಕೆಲವೇ ಗಂಟೆಯಲ್ಲಿ ಹೃದಯಾಘಾತದಿಂದ ಸಾವಿಗೀಡಾಗುತ್ತಿರುವುದು ಭೀತಿ ಹುಟ್ಟಿಸಿದೆ. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ ನೊಯ್ಡಾದಲ್ಲಿ ಬ್ಯಾಡ್ಮಿಂಟನ್ ಆಡುತ್ತಿರುವಾಗಲೇ ಹೃದಯಾಘಾತದಿಂದ (Heart Attack) ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಸೆಕ್ಟರ್ 21 ಎನಲ್ಲಿರುವ ನೊಯ್ಡಾ ಸ್ಟೇಡಿಯಂನಲ್ಲಿ 52 ವರ್ಷದ ಮಹೇಂದ್ರ ಶರ್ಮಾ ಅವರು ಬ್ಯಾಡ್ಮಿಂಟನ್ ಆಡುತ್ತಿದ್ದರು. ಬ್ಯಾಡ್ಮಿಂಟನ್ ಆಡುತ್ತಿರುವಾಗಲೇ ಅವರು ಕುಸಿದುಬಿದ್ದಿದ್ದಾರೆ. ಅವರು ಕುಸಿದು ಬೀಳುತ್ತಲೇ ಸ್ಟೇಡಿಯಂನಲ್ಲಿದ್ದ ತುರ್ತು ವೈದ್ಯಕೀಯ ತಂಡ ಆಗಮಿಸಿ ತಪಾಸಣೆ ಮಾಡಿದೆ. ವೈದ್ಯರು ಮಹೇಂದ್ರ ಶರ್ಮಾ ಅವರ ಎದೆ ಒತ್ತಿ, ತಿಕ್ಕಿದ್ದಾರೆ. ಆದರೂ, ಮಹೇಂದ್ರ ಶರ್ಮಾ ಅವರು ಸುಧಾರಿಸಿಕೊಳ್ಳದ ಕಾರಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹೇಂದ್ರ ಶರ್ಮಾ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. “ಶನಿವಾರ ಬೆಳಗ್ಗೆ 7.30ರ ಸುಮಾರಿಗೆ ಮಹೇಂದ್ರ ಶರ್ಮಾ ಅವರು ಬ್ಯಾಡ್ಮಿಂಟನ್ ಆಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಆಂಬ್ಯುಲೆನ್ಸ್ನಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Heart attack: 16,000 ಹೃದ್ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯ ಹೃದಯಾಘಾತಕ್ಕೆ ಬಲಿ
ಸೆಕ್ಟರ್ 11ನೇ ನಿವಾಸಿಯಾಗಿರುವ ಮಹೇಂದ್ರ ಶರ್ಮಾ ಅವರು ಕಳೆದ ಐದು ವರ್ಷದಿಂದ ಬ್ಯಾಡ್ಮಿಂಟನ್ ಆಡುತ್ತಿದ್ದರು. ಅಷ್ಟರಮಟ್ಟಿಗೆ ಅವರು ಆರೋಗ್ಯದ ಕಡೆ ಗಮನ ಹರಿಸುತ್ತಿದ್ದರು. ಆದರೆ, ಏಕಾಏಕಿ ಹಾರ್ಟ್ ಅಟಾಕ್ ಆಗಿ ಅವರು ಮೃತಪಟ್ಟಿರುವುದು ದುಃಖದ ವಿಚಾರ ಎಂದು ಮಹೇಂದ್ರ ಶರ್ಮಾ ಗೆಳೆಯರು ವಿಷಾದ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಇತ್ತೀಚೆಗೆ ಹೃದಯಾಘಾತದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ, ಕಡಿಮೆ ವಯಸ್ಸಿನವರು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕ ಮೂಡಿಸಿದೆ.
ಕ್ರೀಡೆ
Asian Games : ಪಾಕಿಸ್ತಾನದ ಸ್ಪರ್ಧಿ ನದೀಮ್ ಔಟ್; ನೀರಜ್ಗೆ ಪದಕ ಬಹುತೇಕ ಖಾತರಿ
ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಅರ್ಷದ್ ನದೀಮ್ ಏಷ್ಯನ್ ಗೇಮ್ಸ್ ನಿಂದ (Asian Games) ಹೊರಗುಳಿಯಲು ನಿರ್ಧರಿಸಿದ್ದಾರೆ. ನೀರಜ್ ಚೋಪ್ರಾ ಈಗ ಚಿನ್ನದ ಪದಕದ ಫೇವರಿಟ್ ಆಗಿದ್ದಾರೆ.
ಹ್ಯಾಂಗ್ಜೌ: ಪಾಕಿಸ್ತಾನದ ಜಾವೆಲಿನ್ ಎಸೆತಗಾರ ಅರ್ಷದ್ ನದೀಮ್ ಏಷ್ಯನ್ ಗೇಮ್ಸ್ (Asian Games) 2023 ರಿಂದ ಹಿಂದೆ ಸರಿದಿದ್ದಾರೆ. 26 ವರ್ಷದ ಅಥ್ಲೀಟ್ ಮೊಣಕಾಲು ಗಾಯದಿಂದ ಬಳಲುತ್ತಿದ್ದು, ಪ್ರಸ್ತುತ ನಡೆಯುತ್ತಿರುವ ಕಾಂಟಿನೆಂಟಲ್ ಈವೆಂಟ್ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಪಂದ್ಯಾವಳಿಯಲ್ಲಿ ಅವರು ಭಾರತದ ನೀರಜ್ ಚೋಪ್ರಾ ಅವರ ಅತಿದೊಡ್ಡ ಪ್ರತಿಸ್ಪರ್ಧಿಗಳಲ್ಲಿ ಒಬ್ಬರಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಅವರ ನಿರ್ಗಮನದಿಂದಾಗಿ ಏಷ್ಯನ್ ಕ್ರೀಡಾಕೂಟದ ಪುರುಷರ ಜಾವೆಲಿನ್ ಥ್ರೋನಲ್ಲಿ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ ಇರುವುದಿಲ್ಲ. ನೀರಜ್ ಚೋಪ್ರಾ ಮತ್ತು ಅರ್ಷದ್ ಕಳೆದ ಕೆಲವು ವರ್ಷಗಳಿಂದ ಜಾವೆಲಿನ್ ಥ್ರೋನಲ್ಲಿ ತೀವ್ರ ಪೈಪೋಟಿಯನ್ನು ಒಡ್ಡುತ್ತಿದ್ದಾರೆ. ಈ ಕಾರಣದಿಂದ ಭಾರತಕ್ಕೆ ಚಿನ್ನದ ಪದಕ ಬಹುತೇಕ ಖಚಿತಗೊಂಡಿದೆ.
ವರದಿಗಳ ಪ್ರಕಾರ, ಅರ್ಷದ್ ನದೀಮ್ ಏಷ್ಯಾಡ್ಗಾಗಿ ತರಬೇತಿ ಪಡೆಯುತ್ತಿದ್ದರು ಹಾಗೂ ಈವೆಂಟ್ನಲ್ಲಿ ಭಾಗವಹಿಸಲು ಸಜ್ಜಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಗಾಯಗೊಂಡ ಅವರನ್ನು ಎಂಆರ್ಐ ಸ್ಕ್ಯಾನ್ಗೆ ಒಳಪಡಿಸಿದಾಗ ಗಾಯವನ್ನು ಬಹಿರಂಗಪಡಿಸಿದೆ. ಹೀಗಾಗಿ ಅವರು ಪಂದ್ಯಾವಳಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.
ಪಾಕಿಸ್ತಾನದ ಚೆಫ್ ಡಿ ಮಿಷನ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಹ್ಯಾಂಗ್ಝೌನಲ್ಲಿ ನಡೆದ ಮೊದಲ ತರಬೇತಿಯ ನಂತರ ಅರ್ಷದ್ ಅವರ ಬಲ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಂತರ ಕ್ರೀಡಾಪಟುವನ್ನು ಎಂಆರ್ಐ ಸ್ಕ್ಯಾನ್ಗೆ ಕರೆದೊಯ್ಯಲಾಯಿತು, ನಂತರ ಏಷ್ಯಾಡ್ನಿಂದ ಹೊರಗುಳಿಯುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ತಿಳಿಸಲಾಗಿದೆ.
ಇತ್ತೀಚೆಗೆ ಅರ್ಷದ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಅವರು ಅಲ್ಲಿ 87.82 ಮೀಟರ್ ಎಸೆದಿದ್ದರು. ಈ ಕೂಟದಲ್ಲಿ 88.17 ಮೀಟರ್ ಎಸೆತದೊಂದಿಗೆ ತಮ್ಮ ಮೊದಲ ವಿಶ್ವ ಚಾಂಪಿಯನ್ಷಿಪ್ ಚಿನ್ನದ ಪದಕವನ್ನು ನೀರಜ್ ಚೋಪ್ರಾ ಗೆದಿದ್ದರು.
19th Asian Games Hangzhou 🙏🇮🇳 pic.twitter.com/TQAEun1mGj
— Neeraj Chopra (@Neeraj_chopra1) September 29, 2023
ವಿಶ್ವ ಚಾಂಪಿಯನ್ಷಿಪ್ನಲ್ಇ ಇಬ್ಬರೂ ಕ್ರೀಡಾಪಟುಗಳ ಪ್ರದರ್ಶನವು ಏಷ್ಯಾಡ್ನಲ್ಲಿ ದೊಡ್ಡ ಪೈಪೋಟಿ ಎದುರಾಗುವ ನಿರೀಕ್ಷೆಗಳನ್ನು ಹುಟ್ಟಿಸಿತ್ತು. ನೀರಜ್ಗೆ ಹೋಲಿಸಿದರೆ ಅರ್ಷದ್ ಉತ್ತಮ ವೈಯಕ್ತಿಕ ಸಾಮರ್ಥ್ಯವನ್ನು ಹೊಂದಿದ್ದಾರೆ. ಕಳೆದ ವರ್ಷ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ 90.18 ಮೀಟರ್ ಎಸೆಯುವ ಮೂಲಕ ನೀರಜ್ ಚೋಪ್ರಾ ಅನುಪಸ್ಥಿತಿಯಲ್ಲಿ ತಮ್ಮ ದೇಶಕ್ಕೆ ಚಿನ್ನ ತಂದುಕೊಟ್ಟಿದ್ದರು.
ಏಷ್ಯನ್ ಗೇಮ್ಸ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಈ ಋತುವಿನಲ್ಲಿ ನೀರಜ್ ಚೋಪ್ರಾ 88.77 ಮೀಟರ್ ಎಸೆದು ಋತುವಿನ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅರ್ಷದ್ 87.82 ಮೀ ದೂರ ಎಸೆದು ಅವರ ಹತ್ತಿರದ ಪ್ರತಿಸ್ಪರ್ಧಿಯಾಗಿದ್ದಾರೆ. ಅರ್ಷದ್ ಅನುಪಸ್ಥಿತಿಯು ಈಗ ನೀರಜ್ ಅವರನ್ನು ಚಿನ್ನದ ಪದಕಕ್ಕೆ ಅತ್ಯಂತ ನೆಚ್ಚಿನ ಸ್ಪರ್ಧಿಯನ್ನಾಗಿ ಮಾಡಿದೆ. ನೀರಜ್ ಹಾಲಿ ಏಷ್ಯನ್ ಗೇಮ್ಸ್ ಚಾಂಪಿಯನ್ ಆಗಿದ್ದಾರೆ. ಅವರು ಜಕಾರ್ತಾದಲ್ಲಿ ಚಿನ್ನ ಗೆದಿದ್ದರು. ಅರ್ಷದ್ ಅಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.
ಕ್ರೀಡೆ
Asian Games : ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ಅನ್ನುರಾಣಿ
ಅನ್ನು ರಾಣಿಯ ಚಿನ್ನದ ಪದಕದೊಂದಿಗೆ ಭಾರತದ ಒಟ್ಟಾರೆ ಚಿನ್ನದ ಪದಕದ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.ಬೆಳ್ಳಿ, ಕಂಚು ಸೇರಿ 69 ಪದಕಗಳೊಂದಿಗೆ (Asian Games ) ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ.
ಹ್ಯಾಂಗ್ಜೌ: ಭಾರತದ ಜಾವೆಲಿನ್ ಎಸೆತಗಾರ್ತಿ ಅನ್ನುರಾಣಿ ಏಷ್ಯನ್ ಗೇಮ್ಸ್ನಲ್ಲಿ (Asian Games) ಹೊಸ ದಾಖಲೆ ಬರೆದ್ದಾರೆ. ಅವರು ಖಂಡಾಂತರ ಕ್ರೀಡಾಕೂಟದ ಮಹಿಳೆಯರ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ಮೊಟ್ಟ ಮೊದಲ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಮಂಗಳವಾರ ಸಂಜೆ ನಡೆಸ ಸ್ಪರ್ಧೆಯಲ್ಲಿ ಅತ್ಯುತ್ತಮ 62.92 ಮೀಟರ್ ದೂರಕ್ಕೆ ಜಾವೆಲಿನ್ ಎಸೆತ ಅನ್ನು ರಾಣಿ ಬಂಗಾರದ ಪದಕಕ್ಕೆ ಕೊರಳೊಡ್ಡಿದರು. ಅಂದ ಹಾಗೆ ಅನ್ನು ರಾಣಿ 2014ರಲ್ಲಿ ನಡೆದಿದ್ದ ಏಷ್ಯನ ಗೇಮ್ಸ್ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದರು ಇದೀಗ ಅವರು ಪ್ರದರ್ಶನದಲ್ಲಿ ಸುಧಾರಣೆ ಮಾಡಿಕೊಂಡು ಸ್ವರ್ಣ ಪದಕ ತಮ್ಮದಾಗಿಸಿಕೊಂಡಿದ್ದರು.
ಅನ್ನು ರಾಣಿ ಅವರ ಚಿನ್ನದ ಪದಕದ ಸಾಧನೆಯೊಂದಿಗೆ ಭಾರತದ ಬಂಗಾರದ ಗಳಿಕೆ 15ಕ್ಕೆ ಏರಿಕೆಯಾಗಿದೆ. 26 ಬೆಳ್ಳಿ ಹಾಗೂ 28 ಕಂಚಿನ ಪದಕದ ಸಾಧನೆಯೊಂದಿಗೆ ಒಟ್ಟಾರೆ 69 ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿಸಿದೆ.
ಮಂಗಳವಾರ ಸಂಜೆ ಪಾರುಲ್ ಚೌಧರಿ, ಮಹಿಳೆಯರ 5000 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಓಟದ ಅಂತಿಮ ಕ್ಷಣದಲ್ಲಿ ವೇಗ ಹೆಚ್ಚಿಸಿದ ಅವರು ಅವರು 15:14.75 ಸೆಕೆಂಡುಗಳಲ್ಲಿ ಗುರಿ ತಲುಪಿ ಜಪಾನ್ ನ ರಿರಿಕಾ ಹಿರೊನಾಕಾ ಅವರನ್ನು ಹಿಂದಿಕ್ಕಿದರು.
ಮಹಿಳೆಯರ 400 ಮೀಟರ್ ಓಟದ ಫೈನಲ್ನಲ್ಲಿ ವಿಥ್ಯಾ ರಾಮರಾಜ್ ಕಂಚಿನ ಪದಕ ಗೆದ್ದರು. ಇದಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ ಅವರ ಅದ್ಭುತ ಶತಕ (100), ರಿಂಕು ಸಿಂಗ್ ಅವರ ಅದ್ಭುತ ಶತಕ (37*) ಮತ್ತು ಬೌಲರ್ಗಳ ಅಬ್ಬರದಿಂದಾಗಿ ಭಾರತ ಕ್ರಿಕೆಟ್ ತಂಡವು ತಂಡವು ನೇಪಾಳ ವಿರುದ್ಧ 23 ರನ್ಗಳ ವಿಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಭಾರತ ಪುರುಷರ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದೆ.
ಭಾರತ ಪುರುಷರ ಕಬಡ್ಡಿ ತಂಡವು ಪಂದ್ಯಾವಳಿಯಲ್ಲಿ 55-18 ಅಂಕಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದರೆ, ಮಹಿಳಾ ಹಾಕಿ ತಂಡವು ಹಾಂಗ್ ಕಾಂಗ್ ವಿರುದ್ಧ 13-0 ಅಂತರದಿಂದ ಗೆಲುವು ಸಾಧಿಸಿತು. ಅರ್ಚರಿಯಲ್ಲಿ ಭಾರತೀಯರು ಪ್ರಾಬಲ್ಯ ಮೆರೆದಿದ್ದು, ಪುರುಷರ ವಿಭಾಗದಲ್ಲಿ ಓಜಾಸ್ ಪ್ರವೀಣ್ ಡಿಯೋಟಾಲೆ ಮತ್ತು ಅಭಿಷೇಕ್ ಶರ್ಮಾ ಅಖಿಲ ಭಾರತ ಫೈನಲ್ ತಲುಪಿದರೆ, ಜ್ಯೋತಿ ಸುರೇಖಾ ವೆನ್ನಮ್ ಕೂಡ ಮಹಿಳೆಯರ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ.
ಇದನ್ನೂ ಓದಿ : Asian Games : ಭಾರತಕ್ಕೆ ಮತ್ತೊಂದು ಚಿನ್ನದ ಪದಕ, 5000 ಮೀಟರ್ ಓಟದಲ್ಲಿ ಮೊದಲ ಸ್ಥಾನ ಪಡೆದ ಪಾರುಲ್
ಬ್ಯಾಡ್ಮಿಂಟರ್ನಲ್ಲಿ ಭಾರತದ ಎಚ್.ಎಸ್.ಪ್ರಣಯ್, ಪಿ.ವಿ.ಸಿಂಧು ಮತ್ತು ಕಿಡಂಬಿ ಶ್ರೀಕಾಂತ್ 16ನೇ ಸುತ್ತಿಗೆ ತಲುಪಿದ್ದಾರೆ. ಮಹಿಳೆಯರ 800 ಮೀಟರ್ ಓಟದಲ್ಲಿ ಕುಮಾರಿ ಚಂದಾ ಮತ್ತು ಹರ್ಮಿಲನ್ ಬೈನ್ಸ್ ಅಂತಿಮ ಸ್ಥಾನಗಳನ್ನು ಗಳಿಸಿದರೆ. ಭಾರತವು 4×400 ಮೀಟರ್ ತಂಡ ಪುರುಷರ ಸ್ಪರ್ಧೆಯಲ್ಲಿ ಫೈನಲ್ಗೆ ಅರ್ಹತೆ ಪಡೆಯಿತು.
ಪುರುಷರ ಡೆಕಾಥ್ಲಾನ್ನಲ್ಲಿ ಅಗ್ರ ಸ್ಥಾನವನ್ನು ಗಳಿಸುವ ಗುರಿಯನ್ನು ತೇಜಸ್ವಿನ್ ಶಂಕರ್ ಹೊಂದಿದ್ದಾರೆ. 2014ರ ಏಷ್ಯನ್ ಗೇಮ್ಸ್ ನಲ್ಲಿ ಕಂಚು ಗೆದ್ದಿದ್ದ ಮಹಿಳಾ ಜಾವೆಲಿನ್ ಸ್ಪರ್ಧಿ ಅನ್ನು ರಾಣಿ ಇನ್ನೊಂದು ಪದಕದ ಮೇಲೆ ಗುರಿಯಿಟ್ಟಿದ್ದಾರೆ.
ಕ್ರೀಡೆ
Asian Games : ಭಾರತಕ್ಕೆ ಮತ್ತೊಂದು ಚಿನ್ನದ ಪದಕ, 5000 ಮೀಟರ್ ಓಟದಲ್ಲಿ ಮೊದಲ ಸ್ಥಾನ ಪಡೆದ ಪಾರುಲ್
ಪಾರುಲ್ ಅವರ ಚಿನ್ದದ ಪದಕದೊಂದಿಗೆ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಚಿನ್ನದ ಪದಕಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಹ್ಯಾಂಗ್ಜೌ: ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ (Asian Games) ಸೋಮವಾರ ಮಹಿಳೆಯರ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಪಾರುಲ್ ಚೌಧರಿ, ಮಂಗಳವಾರ ನಡೆದ ಮಹಿಳೆಯರ 5000 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಓಟದ ಅಂತಿಮ ಕ್ಷಣದಲ್ಲಿ ವೇಗ ಹೆಚ್ಚಿಸಿದ ಅವರು ಅವರು 15:14.75 ಸೆಕೆಂಡುಗಳಲ್ಲಿ ಗುರಿ ತಲುಪಿ ಜಪಾನ್ ನ ರಿರಿಕಾ ಹಿರೊನಾಕಾ ಅವರನ್ನು ಹಿಂದಿಕ್ಕಿದರು. ಈ ಮೂಲಕ ಭಾರತದ ಒಟ್ಟು ಚಿನ್ನದ ಪದಕಗಳ ಸಂಕೆಯ 14ಕ್ಕೆ ಏರಿಕೆಯಾಗಿದೆ ಹಾಗೂ ಒಟ್ಟಾರೆಯಾಗಿ 65 ಪದಕಗಳನ್ನು ಗೆದ್ದುಕೊಂಡಿದೆ.
Powerhouse Parul grabs a #GloriousGold🥇in Women's 5000m 🥳
— SAI Media (@Media_SAI) October 3, 2023
Second time around, she proves that charm and determination pay off, securing her remarkable second medal at #AsianGames2022.
Clocking 15:14.75, Parul's performance is absolutely 🔥!
Heartiest congratulations champ!… pic.twitter.com/NRfxSBJXwH
ಮಹಿಳೆಯರ 400 ಮೀಟರ್ ಓಟದ ಫೈನಲ್ನಲ್ಲಿ ವಿಥ್ಯಾ ರಾಮರಾಜ್ ಕಂಚಿನ ಪದಕ ಗೆದ್ದರು. ಇದಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ ಅವರ ಅದ್ಭುತ ಶತಕ (100), ರಿಂಕು ಸಿಂಗ್ ಅವರ ಅದ್ಭುತ ಶತಕ (37*) ಮತ್ತು ಬೌಲರ್ಗಳ ಅಬ್ಬರದಿಂದಾಗಿ ಭಾರತ ಕ್ರಿಕೆಟ್ ತಂಡವು ತಂಡವು ನೇಪಾಳ ವಿರುದ್ಧ 23 ರನ್ಗಳ ವಿಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಭಾರತ ಪುರುಷರ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದೆ.
ಭಾರತ ಪುರುಷರ ಕಬಡ್ಡಿ ತಂಡವು ಪಂದ್ಯಾವಳಿಯಲ್ಲಿ 55-18 ಅಂಕಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದರೆ, ಮಹಿಳಾ ಹಾಕಿ ತಂಡವು ಹಾಂಗ್ ಕಾಂಗ್ ವಿರುದ್ಧ 13-0 ಅಂತರದಿಂದ ಗೆಲುವು ಸಾಧಿಸಿತು. ಅರ್ಚರಿಯಲ್ಲಿ ಭಾರತೀಯರು ಪ್ರಾಬಲ್ಯ ಮೆರೆದಿದ್ದು, ಪುರುಷರ ವಿಭಾಗದಲ್ಲಿ ಓಜಾಸ್ ಪ್ರವೀಣ್ ಡಿಯೋಟಾಲೆ ಮತ್ತು ಅಭಿಷೇಕ್ ಶರ್ಮಾ ಅಖಿಲ ಭಾರತ ಫೈನಲ್ ತಲುಪಿದರೆ, ಜ್ಯೋತಿ ಸುರೇಖಾ ವೆನ್ನಮ್ ಕೂಡ ಮಹಿಳೆಯರ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ.
ಬ್ಯಾಡ್ಮಿಂಟರ್ನಲ್ಲಿ ಭಾರತದ ಎಚ್.ಎಸ್.ಪ್ರಣಯ್, ಪಿ.ವಿ.ಸಿಂಧು ಮತ್ತು ಕಿಡಂಬಿ ಶ್ರೀಕಾಂತ್ 16ನೇ ಸುತ್ತಿಗೆ ತಲುಪಿದ್ದಾರೆ. ಮಹಿಳೆಯರ 800 ಮೀಟರ್ ಓಟದಲ್ಲಿ ಕುಮಾರಿ ಚಂದಾ ಮತ್ತು ಹರ್ಮಿಲನ್ ಬೈನ್ಸ್ ಅಂತಿಮ ಸ್ಥಾನಗಳನ್ನು ಗಳಿಸಿದರೆ. ಭಾರತವು 4×400 ಮೀಟರ್ ತಂಡ ಪುರುಷರ ಸ್ಪರ್ಧೆಯಲ್ಲಿ ಫೈನಲ್ಗೆ ಅರ್ಹತೆ ಪಡೆಯಿತು.
ಪುರುಷರ ಡೆಕಾಥ್ಲಾನ್ನಲ್ಲಿ ಅಗ್ರ ಸ್ಥಾನವನ್ನು ಗಳಿಸುವ ಗುರಿಯನ್ನು ತೇಜಸ್ವಿನ್ ಶಂಕರ್ ಹೊಂದಿದ್ದಾರೆ. 2014ರ ಏಷ್ಯನ್ ಗೇಮ್ಸ್ ನಲ್ಲಿ ಕಂಚು ಗೆದ್ದಿದ್ದ ಮಹಿಳಾ ಜಾವೆಲಿನ್ ಸ್ಪರ್ಧಿ ಅನ್ನು ರಾಣಿ ಇನ್ನೊಂದು ಪದಕದ ಮೇಲೆ ಗುರಿಯಿಟ್ಟಿದ್ದಾರೆ.
ಭಾರತದ ಪದಕಗಳ ಪಟ್ಟಿ-
- ಚಿನ್ನ: 14
- ಬೆಳ್ಳಿ: 24
- ಕಂಚು: 26
10ನೇ ದಿನದಲ್ಲಿ ಭಾರತದ ಫಲಿತಾಂಶಗಳು
ಮಹಿಳೆಯರ 5000 ಮೀಟರ್ ಓಟದಲ್ಲಿ ಪಾರುಲ್ ಚೌಧರಿ ಚಿನ್ನದ ಪದಕ ಗೆದ್ದಿದ್ದಾರೆ.
ಮಹಿಳೆಯರ 400 ಮೀಟರ್ ಹರ್ಡಲ್ಸ್ನಲ್ಲಿ ವಿಥ್ಯಾ ರಾಮ್ರಾಜ್ ಕಂಚಿನ ಪದಕ ಗೆದ್ದಿದ್ದಾರೆ.
ಮಹಿಳೆಯರ 54 ಕೆಜಿ ಬಾಕ್ಸಿಂಗ್ನಲ್ಲಿ ಪ್ರೀತಿ ಪವಾರ್ ಕಂಚಿನ ಪದಕ ಗೆದ್ದಿದ್ದಾರೆ.
ಪುರುಷರ ಕ್ಯಾನೋ ಡಬಲ್ 1000 ಮೀಟರ್ನಲ್ಲಿ ಅರ್ಜುನ್ ಸಿಂಗ್ ಮತ್ತು ಸುನಿಲ್ ಸಿಂಗ್ ಕಂಚಿನ ಪದಕ ಗೆದ್ದಿದ್ದಾರೆ.
ಪುರುಷರ ಕ್ರಿಕೆಟ್: ನೇಪಾಳವನ್ನು 23 ರನ್ ಗಳಿಂದ ಮಣಿಸಿದ ಭಾರತ ಸೆಮಿಫೈನಲ್ ಗೆ
ಕಬಡ್ಡಿ: ಭಾರತ ಪುರುಷರ ತಂಡ ಬಾಂಗ್ಲಾದೇಶ ವಿರುದ್ಧ 55-18, ಮಹಿಳಾ ತಂಡ ದಕ್ಷಿಣ ಕೊರಿಯಾ ವಿರುದ್ಧ 56-23 ಅಂತರದಲ್ಲಿ ಜಯ ಸಾಧಿಸಿತು.
ಇದನ್ನೂ ಓದಿ : Asian Games 2023: ಸೆಮಿಯಲ್ಲಿ ಸೋತು ಕಂಚಿಗೆ ತೃಪ್ತಿಪಟ್ಟ ಪ್ರೀತಿ ಪವಾರ್
ಮಹಿಳಾ ಹಾಕಿ: ಹಾಂಕಾಂಗ್ ವಿರುದ್ಧ ಭಾರತಕ್ಕೆ 13-0 ಅಂತರದ ಗೆಲುವು
ಆರ್ಚರಿ (ಕಾಂಪೌಂಡ್): ಓಜಾಸ್ ಪ್ರವೀಣ್ ಡಿಯೋಟಾಲೆ ಮತ್ತು ಅಭಿಷೇಕ್ ಅಖಿಲ ಭಾರತ ಅಂತಿಮ ವೈಯಕ್ತಿಕ ಪುರುಷರ ಸ್ಪರ್ಧೆಯನ್ನು (ಅಕ್ಟೋಬರ್ 7 ರಂದು ಫೈನಲ್) ಸ್ಥಾಪಿಸಿದರು; ಮಹಿಳಾ ಫೈನಲ್ನಲ್ಲಿ ಜ್ಯೋತಿ ಸುರೇಖಾ ವೆನ್ನಮ್, ಕಂಚಿನ ಪದಕಕ್ಕಾಗಿ ಅದಿತಿ ಸೆಣಸಲಿದ್ದಾರೆ (ಇಬ್ಬರೂ ಅಕ್ಟೋಬರ್ 7 ರಂದು)
ಆರ್ಚರಿ (ರಿಕರ್ವ್): ಅತನು ದಾಸ್ ಮತ್ತು ಧೀರಜ್ ಬೊಮ್ಮದೇವರ ಕ್ವಾರ್ಟರ್ ಫೈನಲ್ನಲ್ಲಿ ನಿರ್ಗಮನ.
ಬ್ಯಾಡ್ಮಿಂಟನ್: ಪಿ.ವಿ.ಸಿಂಧು, ಎಚ್.ಎಸ್.ಪ್ರಣಯ್, ಕಿಡಂಬಿ ಶ್ರೀಕಾಂತ್ ಕ್ರಮವಾಗಿ ಮಹಿಳಾ ಮತ್ತು ಪುರುಷರ ಸಿಂಗಲ್ಸ್ನಲ್ಲಿ 16ನೇ ಸುತ್ತಿಗೆ ಪ್ರವೇಶಿಸಿದ್ದಾರೆ.
ಮಹಿಳೆಯರ 800 ಮೀಟರ್ ಓಟ: ಫೈನಲ್ಗೆ ಅರ್ಹತೆ ಪಡೆದ ಕುಮಾರಿ ಚಂದಾ ಮತ್ತು ಹರ್ಮಿಲನ್ ಬೈನ್ಸ್
ಪುರುಷರ 4*400 ಮೀಟರ್: ಫೈನಲ್ಸ್ ಅರ್ಹತೆ ಪಡೆದ ಭಾರತ
ಸ್ಕ್ವಾಷ್: ಪುರುಷರ ಸಿಂಗಲ್ಸ್ನಲ್ಲಿ ಸೌರವ್ ಘೋಷಾಲ್, ಮಿಶ್ರ ಡಬಲ್ಸ್ನಲ್ಲಿ ಅಭಯ್-ಅನಾಹತ್ ಮತ್ತು ದೀಪಿಕಾ-ಹರಿಂದರ್ಪಾಲ್ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಕ್ರಿಕೆಟ್
ICC World Cup 2023 : ಭಾರತ- ನೆದರ್ಲ್ಯಾಂಡ್ಸ್ ಅಭ್ಯಾಸ ಪಂದ್ಯವೂ ರದ್ದು
ಎರಡೂ ಅಭ್ಯಾಸ ಪಂದ್ಯಗಳು ಮಳೆಯಿಂದ ರದ್ದಾಗಿರುವ ಕಾರಣ ವಿಶ್ವ ಕಪ್ನಲ್ಲಿ (ICC World Cup 2023) ಭಾರತ ತಂಡ ನೇರವಾಗಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.
ತಿರುವನಂತಪುರ : ನೆದರ್ಲ್ಯಾಂಡ್ಸ್ ವಿರುದ್ಧದ ಭಾರತ ತಂಡದ ವಿಶ್ವ ಕಪ್ (ICC World Cup 2023) ಅಭ್ಯಾಸ ಪಂದ್ಯವೂ ರದ್ದಾಗಿದೆ. ಗುವಾಹಟಿಯಲ್ಲಿ ನಿಗದಿಯಾಗಿದ್ದ ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯವೂ ಮಳೆಯ ಕಾರಣಕ್ಕೆ ರದ್ದಾಗಿತ್ತು. ಆ ಪಂದ್ಯ ಗುವಾಹಟಿಯಲ್ಲಿ ಆಯೋಜನೆಗೊಂಡಿತ್ತು. ಹೀಗಾಗಿ ಯಾವುದೇ ಅಭ್ಯಾಸ ಪಂದ್ಯಗಳು ಇಲ್ಲದೆ ಭಾರತ ತಂಡ ನೇರವಾಗಿ ವಿಶ್ವ ಕಪ್ ಆಡಲಿದೆ. ಬಲಿಷ್ಠ ಆಸ್ಟ್ರೇಲಿಯಾ ತಂಡದ ವಿರುದ್ಧ ತನ್ನ ವಿಶ್ವ ಕಪ್ ಅಭಿಯಾನ ಆರಂಭಿಸಲಿದೆ. ಅಕ್ಟೋಬರ್ 8ರಂದು ಚೆನ್ನೈನ ಚೆಪಾಕ್ ಸ್ಟೇಡಿಯಮ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಆಯೋಜನೆಗೊಂಡಿದೆ.
ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿರುವ ವಿಶ್ವಕಪ್ 2023 ಕ್ಕೆ ಮುಂಚಿತವಾಗಿ ಭಾರತ ಮತ್ತು ನೆದರ್ಲ್ಯಾಂಡ್ಸ್ ಇಂದು ತಮ್ಮ ಅಂತಿಮ ಅಭ್ಯಾಸ ಪಂದ್ಯದಲ್ಲಿ ಮುಖಾಮುಖಿಯಾಗಬೇಕಾಗಿತ್ತು.. ಇಂಗ್ಲೆಂಡ್ ವಿರುದ್ಧದ ಭಾರತದ ಹಿಂದಿನ ಅಭ್ಯಾಸ ಪಂದ್ಯಗಳು ಒಂದು ಎಸೆತವೂ ನಡೆಯದೇ ರದ್ದಾಗಿದ್ದವು. ಮತ್ತೊಂದೆಡೆ, ಆಸ್ಟ್ರೇಲಿಯಾ ವಿರುದ್ಧದ ನೆದರ್ಲ್ಯಾಂಡ್ಸ್ ಪಂದ್ಯವು ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿತ್ತು. ಆ ಪಂದ್ಯದಲ್ಲಿ ನೆದರ್ಲ್ಯಾಂಡ್ ಬೌಲರ್ಗಳು ಉತ್ತಮ ಪ್ರದರ್ಶನ ನೀಡಿ ಆಸ್ಟ್ರೇಲಿಯಾ ತಂಡವನ್ನು 23 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ಗಳಿಗೆ ನಿಯಂತ್ರಿಸಿತ್ತು,
UPDATE: The warm-up match between India & Netherlands is abandoned due to persistent rain. #TeamIndia | #CWC23 https://t.co/rbLo0WHrVJ pic.twitter.com/0y4Ey1Dvye
— BCCI (@BCCI) October 3, 2023
ಇದೀಗ ನೆದಲ್ಯಾಂಡ್ಸ್ ತಂಡದ ಮತ್ತೊಂದು ಪಂದ್ಯವೂ ಫಲಿತಾಂಶವೇ ಇಲ್ಲದೆ ರದ್ದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕನಿಷ್ಠ ಬೌಲಿಂಗ್ ಮಾಡುವ ಅವಕಾಶವಾದರೂ ಆ ತಂಡಕ್ಕೆ ಸಿಕ್ಕಿತ್ತು. ಆದರೆ, ಭಾರತ ವಿರುದ್ಧ ಒಂದೇ ಒಂದು ಎಸೆತ ಮಾಡಲು ಅವಕಾಶ ಸಿಗಲಿಲ್ಲ.
ಪ್ರಯಾಣದ ಸುಸ್ತು
ಸ್ಥಳೀಯ ಅನುಕೂಲಗಳನ್ನು ಬಳಸಿಕೊಂಡು ಭಾರತ ತಂಡ ವಿಶ್ವ ಕಪ್ ಗೆಲ್ಲುತ್ತದೆ ಎಂದು ವಿಶ್ಲೇಷಣೆ ಮಾಡಲಾಗಿದೆ. ಅದಕ್ಕೆ ಪೂರವಕಾಗಿ ಭಾರತ ತಂಡವೂ ಅತ್ಯಂತ ಉಮೇದಿನಲ್ಲಿದೆ. ಹೀಗಾಗಿ ವಿಶ್ವ ಕಪ್ಗೆ ಮೊದಲು ಅಭ್ಯಾಸ ಪಂದ್ಯದಲ್ಲಿ ಆಡುವುದು ಈ ತಂಡಕ್ಕೆ ಅನಿವಾರ್ಯವಾಗಿತ್ತು. ಆದರೆ, ತಂಡಕ್ಕೆ ಎರಡೂ ಅಭ್ಯಾಸ ಪಂದ್ಯಗಳು ದೊರಕಿಲ್ಲ.
ಭಾರತ ತಂಡದ ಪಂದ್ಯಗಳು ಭಾರತದ 10 ಪ್ರದೇಶಗಳಲ್ಲಿ ನಡೆಯಲಿದೆ. ಹೀಗಾಗಿ ತಂಡವು ಒಂದೂವರೆ ತಿಂಗಳ ಅವಧಿಯಲ್ಲಿ ಸುಮಾರು ಸಾವಿರಾರು ಕಿಲೋ ಮೀಟರ್ ಪ್ರಯಾಣ ಮಾಡಬೇಕಾಗಿದೆ. ಹೀಗಾಗಿ ಅಭ್ಯಾಸ ಪಂದ್ಯದ ಪ್ರಯಾಣ ತಂಡಕ್ಕೆ ಹೊರೆಯೆನಿಸಬಹುದು. ಮೂರು ದಿನಗಳ ಹಿಂದೆ 15 ಆಟಗಾರರು ನೇರವಾಗಿ ಗುವಾಹಟಿಗೆ ಹೋಗಿತ್ತು. ಆದರೆ ಆ ಪ್ರಯಾಣದಿಂದ ತಂಡಕ್ಕೆ ಏನೂ ಲಾಭವಾಗಿರಲಿಲ್ಲ. ಮಳೆಯಿಂದಾಗಿ ಆಟ ರದ್ದಾಗಿತ್ತು. ಅಲ್ಲಿಂದ 2604 ಕಿಲೋ ಮೀಟರ್ ಪ್ರಯಾಣಿಸಿ ತಿರುವನಂತಪುರಕ್ಕೆ ಬಂದಿದ್ದ ಭಾರತ ತಂಡ ಇಲ್ಲಿಯೂ ನೆಟ್ ಪ್ರಾಕ್ಟೀಸ್ ಮಾಡಿದ್ದಷ್ಟೇ ಬಂತು. ಪಂದ್ಯ ನಡೆಯದ ಕಾರಣ ಹೆಚ್ಚಿನ ಪ್ರಯೋಜನ ದೊರಕಿಲ್ಲ.
ತಂಡಗಳು
ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ (ವಿಕೆ), ಸೂರ್ಯಕುಮಾರ್ ಯಾದವ್.
ನೆದರ್ಲ್ಯಾಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ಸಿ & ವಿಕೆ), ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೀಡ್, ವಿಕ್ರಮ್ಜಿತ್ ಸಿಂಗ್, ತೇಜಾ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಆಕರ್ಮ್ಯಾನ್, ರೋಲೊಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಿಯಾನ್ ಕ್ಲೈನ್, ವೆಸ್ಲಿ ಬಾರೆಸಿ, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್, ಸಿಬ್ರಾಂಡ್ ಎಂಗೆಲ್ಬ್ರೆಕ್ಟ್.
-
ದೇಶ20 hours ago
Viral Video: ಫ್ರಿಡ್ಜ್ ಡೋರ್ ತೆಗೆಯಲು ಹೋದ 4 ವರ್ಷದ ಬಾಲಕಿಗೆ ಕರೆಂಟ್ ಶಾಕ್, ಸ್ಥಳದಲ್ಲೇ ಸಾವು
-
ಪ್ರಮುಖ ಸುದ್ದಿ15 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ಟಾಪ್ 10 ನ್ಯೂಸ್22 hours ago
VISTARA TOP 10 NEWS : ನಮಗೆ ರಕ್ಷಣೆ ಇಲ್ಲವೇ ಎಂದ ಹಿಂದೂಗಳು, ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಶಾಮನೂರು ಇತರ ದಿನದ ಪ್ರಮುಖ ಸುದ್ದಿಗಳು
-
ದೇಶ24 hours ago
Plane Crash: ಜಿಂಬಾಬ್ವೆಯಲ್ಲಿ ವಿಮಾನ ಪತನ, ಭಾರತದ ಉದ್ಯಮಿ ಹಾಗೂ ಅವರ ಪುತ್ರ ದುರ್ಮರಣ
-
ದೇಶ21 hours ago
K Annamalai: ಲೇಡಿ ರಿಪೋರ್ಟರ್ ಜತೆ ಅಣ್ಣಾಮಲೈ ಕಿರಿಕ್! ಆಕೆ ಕೇಳಿದ ಪ್ರಶ್ನೆಗೆ ರೇಗಿದ ಬಿಜೆಪಿ ನಾಯಕ
-
ಕ್ರಿಕೆಟ್23 hours ago
ICC World Cup 2023 : ಭಾರತದ ಮಾಜಿ ಆಟಗಾರ ಅಫಘಾನಿಸ್ತಾನ ತಂಡದ ಮೆಂಟರ್
-
ದೇಶ11 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
ಕಿರುತೆರೆ5 hours ago
BBK Season 10 : ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?