Manu Bhaker: ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್ - Vistara News

ಕ್ರೀಡೆ

Manu Bhaker: ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್

Manu Bhaker: 22 ವರ್ಷದ ಮನು ಭಾಕರ್ ಈ ಬಾರಿಯ ಒಲಿಂಪಿಕ್ಸ್​ ಪದಕ ನಿರೀಕ್ಷೆಯ ಕ್ರೀಡಾಪಟುಗಳ ಪಟ್ಟಿಯಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದರು. ಇದೀಗ ಭಾರತೀಯರು ನಿರೀಕ್ಷೆ ಮಾಡಿದಂತೆ ಅವರು ಒಂದಲ್ಲ 2 ಪದಕ ಗೆದ್ದು ತಮ್ಮ ಮೇಲಿಟ್ಟ ನಿರೀಕ್ಷೆಯನ್ನು ಹುಸಿಯಾಗದಂತೆ ನೋಡಿಕೊಂಡಿದ್ದಾರೆ.

VISTARANEWS.COM


on

Manu Bhaker
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್​: ಭಾನುವಾರವಷ್ಟೇ 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ(Bronze Medalist Manu Bhaker) ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಶೂಟರ್​ ಮನು ಭಾಕರ್(Manu Bhaker)​ ಇದೀಗ ಮತ್ತೊಂದು ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆಯೊಂದನ್ನು ಮಾಡಿದ್ದಾರೆ.

ಮಂಗಳವಾರ ನಡೆದ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಜತೆಗೂಡಿ ಮನು ಭಾಕರ್​ ಕಂಚಿನ ಪದಕ ಗೆಲ್ಲುವ ಮೂಲಕ  ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎಂಬ ಐತಿಹಾಸಿಕ ಸಾಧನೆ ಮಾಡಿದರು. ಭಾರತೀಯ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ವಿರುದ್ಧ  16-10 ಅಂಕಗಳಿಂದ ಗೆದ್ದು ಕಂಚಿನ ಪದಕ ತನ್ನದಾಗಿಸಿಕೊಂಡಿತು.

22 ವರ್ಷದ ಮನು ಭಾಕರ್ ಈ ಬಾರಿಯ ಒಲಿಂಪಿಕ್ಸ್​ ಪದಕ ನಿರೀಕ್ಷೆಯ ಕ್ರೀಡಾಪಟುಗಳ ಪಟ್ಟಿಯಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದರು. ಇದೀಗ ಭಾರತೀಯರು ನಿರೀಕ್ಷೆ ಮಾಡಿದಂತೆ ಅವರು ಒಂದಲ್ಲ 2 ಪದಕ ಗೆದ್ದು ತಮ್ಮ ಮೇಲಿಟ್ಟ ನಿರೀಕ್ಷೆಯನ್ನು ಹುಸಿಯಾಗದಂತೆ ನೋಡಿಕೊಂಡಿದ್ದಾರೆ.

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಟೋಕಿಯೋಗೆ ಆಗಮಿಸಿದ್ದ ಮನು ಭಾಕರ್​ಗೆ ಅದೃಷ್ಟ ಕೈಕೊಟ್ಟಿತ್ತು. ಕೂಟದ ಮೊದಲ ಸ್ಪರ್ಧೆಯಲ್ಲೇ ಅವರ ಪಿಸ್ತೂಲ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರಿಗೆ ಫೈನಲ್​ಗೇರುವ ಅವಕಾಶ ಕೈತಪ್ಪಿತ್ತು. ಮೊದಲ ಸುತ್ತಿನಲ್ಲಿ ಎದುರಾಗ ಈ ಆಘಾತದಿಂದ ಚೇತರಿಕೊಳ್ಳದ ಮನು ಆ ಬಳಿಕ ಆಡಿದ 2 ಸ್ಪರ್ಧೆಗಳಲ್ಲಿಯೂ ಏಕಾಗ್ರತೆ ಸಾಧಿಸಲು ವಿಫಲರಾಗಿ ಸೋಲು ಕಂಡಿದ್ದರು. ಇದು ಅವರ ಪದಾರ್ಪಣ ಒಲಿಂಪಿಕ್ಸ್​ ಕೂಟವಾಗಿತ್ತು. ಅಂದಿನ ಸೋಲಿನಿಂದ ಮನನೊಂದು ಶೂಟಿಂಗ್​ಗೆ ವಿದಾಯ ಹೇಳಲು ಬಯಸಿದ್ದ ಮನು ತಂದೆಯ ಆತ್ಮವಿಶ್ವಾಸದ ಮಾತಿನಂತೆ ಶೂಟಿಂಗ್​ನಲ್ಲಿ ಮುಂದುವರಿದಿದ್ದರು. ಈ ಬಾರಿ ಪ್ಯಾರಿಸ್​ನಲ್ಲಿ 2 ಪದಕ ಗೆದ್ದು ಭಾರತೀಯ ಒಲಿಂಪಿಕ್ಸ್​ ಕ್ರೀಡಾ ಇತಿಹಾಸದಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ.

ಮೋದಿ ಅಭಿನಂದನೆ 


ಪದಕ ಗೆದ್ದ ಸರಬ್ಜೋತ್‌ ಸಿಂಗ್‌ ಮತ್ತು ಮನು ಭಾಕರ್​ಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್​ ಎಕ್ಸ್​ನಲ್ಲಿ ಅಭಿನಂದನೆ ಸಲ್ಲಿದ್ದಾರೆ. ‘ಒಲಿಂಪಿಕ್ಸ್​ನಲ್ಲಿ ನಮ್ಮ ಶೂಟರ್‌ಗಳು ನಮ್ಮನ್ನು ಹೆಮ್ಮೆ ಪಡಿಸುವುದನ್ನು ಮುಂದುವರೆಸಿದ್ದಾರೆ! ಇಬ್ಬರೂ ಶೂಟರ್​ಗಳು ಉತ್ತಮ ಕೌಶಲ್ಯ ಮತ್ತು ಟೀಮ್ ವರ್ಕ್ ತೋರಿದ್ದಾರೆ. ನಿಮ್ಮ ಈ ಸಾಧನೆಯಿಂದ ಭಾರತ ಸಂತಸಗೊಂಡಿದೆ. 2ನೇ ಪದಕ ಗೆದ್ದ ಮನು ಅವರಿಗೆ ವಿಶೇಷ ಅಭಿನಂದನೆಗಳು” ಎಂದು ಮೋದಿ ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Olympics 2024: ಕಂಚು ಗೆದ್ದ ಮನು-ಸರಬ್ಜೋತ್​ ಜೋಡಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಐಒಸಿ ಸದಸ್ಯೆ ನೀತಾ ಅಂಬಾನಿ ಅಭಿನಂದನೆ

Olympics 2024: 10 ಮೀಟರ್ ಮಿಶ್ರ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಮನು ಭಾಕರ್​(Manu Bhaker) ಮತ್ತು ಸರಬ್ಜೋತ್‌ ಸಿಂಗ್‌(Sarabjot Singh) ಜೋಡಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu), ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ

VISTARANEWS.COM


on

Olympics 2024
Koo

ಪ್ಯಾರಿಸ್​: 2024ರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ(Olympics 2024) 10 ಮೀಟರ್ ಮಿಶ್ರ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಮನು ಭಾಕರ್​(Manu Bhaker) ಮತ್ತು ಸರಬ್ಜೋತ್‌ ಸಿಂಗ್‌(Sarabjot Singh) ಜೋಡಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu), ಪ್ರಧಾನಿ ನರೇಂದ್ರ ಮೋದಿ(Narendra Modi), ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯ(International Olympic Committee) ಸದಸ್ಯೆ ಹಾಗೂ ರಿಲಯನ್ಸ್ ಫೌಂಡೇಶನ್ (Reliance Foundation) ಸಂಸ್ಥಾಪಕಿಯಾಗಿರುವ ನೀತಾ ಅಂಬಾನಿ(Nita Ambani) ಸೇರಿ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಸದ್ಯ ಭಾರತ ಒಲಿಂಪಿಕ್ಸ್​ನಲ್ಲಿ 2 ಪದಕ ಗೆದ್ದು 27ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಹಲವು ಪ್ರಶಸ್ತಿ ಗೆಲ್ಲುವಂತಾಗಲಿ; ರಾಷ್ಟ್ರಪತಿ ಶುಭ ಹಾರೈಕೆ


ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ ಪೋಸ್ಟ್ ಮಾಡಿ ಅಭಿನಂದನೆ ಸಲ್ಲಿಸಿದ್ದು, ’10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಅವರಿಗೆ ಅಭಿನಂದನೆಗಳು!. ಮನು ಭಾಕರ್ ಅವರು ಒಂದೇ ಒಲಿಂಪಿಕ್ ಕ್ರೀಡಾಕೂಟದಲ್ಲಿ ಎರಡು ಪದಕಗಳನ್ನು ಗೆದ್ದ ಭಾರತದ ಮೊದಲ ಮಹಿಳಾ ಶೂಟರ್ ಎಂಬ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಅವರ ಈ ಸಾಧನೆ ನಮಗೆ ಅಪಾರ ಹೆಮ್ಮೆ ತಂದಿದೆ. ಭವಿಷ್ಯದಲ್ಲಿ ಭಾಕರ್​ ಮತ್ತು ಸರಬ್ಜೋತ್ ಸಿಂಗ್ ಇನ್ನೂ ಹಲವು ಪ್ರಶಸ್ತಿಗಳನ್ನು ಗೆಲ್ಲುವಂತಾಗಲಿ’ ಎಂದು ಹಾರೈಸಿದ್ದಾರೆ.

ಪ್ರಧಾನಿ ಮೋದಿ ಕೂಡ ಎಕ್ಸ್ ಪೋಸ್ಟ್ ಮಾಡಿದ್ದು, ‘ಒಲಿಂಪಿಕ್ಸ್​ನಲ್ಲಿ ನಮ್ಮ ಶೂಟರ್‌ಗಳು ಮತ್ತೊಮ್ಮೆ ಹೆಮ್ಮೆ ಪಡಿಸುವುದನ್ನು ಮುಂದುವರೆಸಿದ್ದಾರೆ! ಇಬ್ಬರೂ ಶೂಟರ್​ಗಳು ಉತ್ತಮ ಕೌಶಲ್ಯ ಮತ್ತು ಟೀಮ್ ವರ್ಕ್ ತೋರುವ ಮೂಲಕ ಪದಕ ಗೆಲ್ಲುವಲ್ಲಿ ಯಶಸ್ಸು ಕಂಡಿದ್ದಾರೆ. ನಿಮ್ಮ ಈ ಸಾಧನೆಯಿಂದ ಕೋಟ್ಯಂತರ ದೇಶವಾಸಿಗಳು ಕೂಡ ಸಂತಸಗೊಂಡಿದ್ದಾರೆ. 2ನೇ ಪದಕ ಗೆದ್ದ ಮನು ಅವರಿಗೆ ವಿಶೇಷ ಅಭಿನಂದನೆಗಳು” ಎಂದು ಮೋದಿ ಬರೆದುಕೊಂಡಿದ್ದಾರೆ.

ಈ ದಿನ ಮರೆಯಲು ಅಸಾಧ್ಯ; ನೀತಾ ಅಂಬಾನಿ


ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ 2 ಪದಕ ಗೆದ್ದ ಭಾರತ ಶೀಘ್ರದಲ್ಲೇ ಮತ್ತೊಂದು ಪದಕ ಗೆಲ್ಲಲಿದೆ ಎಂದು ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಹಾಗೂ ಐಒಸಿ ಸದಸ್ಯೆ ನೀತಾ ಅಂಬಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜತೆಗೆ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಈವೆಂಟ್ ತಂಡದಲ್ಲಿ ಕಂಚಿನ ಪದಕ ಗೆದ್ದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ Paris Olympics 2024: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಮನು ಭಾಕರ್-ಸರಬ್ಜೋತ್‌ ಜೋಡಿ

“ಒಲಿಂಪಿಕ್ಸ್‌ನಲ್ಲಿ ಭಾರತೀಯ ಶೂಟರ್​ಗಳು ದೇಶಕ್ಕೆ 2ನೇ ಪದಕ ಗೆದ್ದು ಇತಿಹಾಸವನ್ನು ಸೃಷ್ಟಿಸಿದ್ದಾರೆ!. ಅದರಲ್ಲೂ ಒಂದೇ ಒಲಿಂಪಿಕ್ ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಎಂಬ ಐತಿಹಾಸಿಕ ಸಾಧನೆ ಮಾಡಿದ ಮನು ಅವರಿಗೆ ವಿಶೇಷವಾಗಿ ಅಭಿನಂದನೆ. ನಿಮ್ಮ ಈ ಸಾಧನೆಯಿಂದ ಇಡೀ ರಾಷ್ಟ್ರವೇ ಹೆಮ್ಮೆ ಪಡುವಂತೆ ಮಾಡಿದೆ. ‘Cheer for India’ ಭಾರತೀಯ ಕ್ರೀಡಾಪಟುಗಳು ಇನ್ನೂ ಹಲವು ಪದಕ ಗೆದ್ದು ದೇಶದ ಕೀರ್ತಿ ಪತಾಕೆಯನ್ನು ಪ್ಯಾರಿಸ್​ನಲ್ಲಿ ಹಾರಿಸುವಂತಾಗಲಿ” ಎಂದು ನೀತಾ ಅಂಬಾನಿ ಹಾರೈಸಿದ್ದಾರೆ. ಕಳೆದ ವಾರವಷ್ಟೇ ನೀತಾ ಅಂಬಾನಿ ಅವರು 2ನೇ ಬಾರಿಗೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ಮಂಗಳವಾರ ನಡೆದ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಕಂಚಿನ ಪದಕ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಜತೆಗೂಡಿ ಮನು ಭಾಕರ್ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ವಿರುದ್ಧ  16-10 ಅಂಕಗಳಿಂದ ಗೆದ್ದು ಕಂಚಿನ ಪದಕ ಗೆದ್ದ ಸಾಧನೆ ಮಾಡಿದರು.

Continue Reading

ಕ್ರೀಡೆ

Paris Olympics 2024: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಮನು ಭಾಕರ್-ಸರಬ್ಜೋತ್‌ ಜೋಡಿ

Paris Olympics 2024: ಮಂಗಳವಾರ ನಡೆದ ಕಂಚಿನ ಪದಕ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ವಿರುದ್ಧ  16-10 ಅಂಕಗಳಿಂದ ಗೆದ್ದು ಕಂಚಿನ ಪದಕ ತನ್ನದಾಗಿಸಿಕೊಂಡಿತು.

VISTARANEWS.COM


on

Paris Olympics 2024
Koo

ಪ್ಯಾರಿಸ್‌: ಪ್ಯಾರಿಸ್​ ಒಲಿಂಪಿಕ್ಸ್‌ನಲ್ಲಿ(Paris Olympics 2024) ಭಾರತಕ್ಕೆ ಮತ್ತೊಂದು ಪದಕ ಒಲಿದಿದೆ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌(Sarabjot Singh) ಮತ್ತು ಮನು ಭಾಕರ್​(Manu Bhaker) ಜೋಡಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. 2 ದಿನಗಳ ಹಿಂದಷ್ಟೇ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದ ಮನು ಇದೀಗ 2ನೇ ಪದಕ ಗೆಲ್ಲುವ ಮೂಲಕ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನಿಸಿಕೊಂಡರು.

ಮಂಗಳವಾರ ನಡೆದ ಕಂಚಿನ ಪದಕ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ವಿರುದ್ಧ  16-10 ಅಂಕಗಳಿಂದ ಗೆದ್ದು ಕಂಚಿನ ಪದಕ ತನ್ನದಾಗಿಸಿಕೊಂಡಿತು. ಸೋಮವಾರ ನಡೆದಿದ್ದ ಮಿಶ್ರ ತಂಡ ಸ್ಪರ್ಧೆಯಲ್ಲಿ ಮನು ಭಾಕರ್‌-ಸರಬ್ಜೋತ್‌ ಸಿಂಗ್‌ ಒಟ್ಟು 580 ಅಂಕ ಸಂಪಾದಿಸಿದ್ದರು. ಕೊರಿಯಾದ ಜೋಡಿ 579 ಅಂಕ ಗಳಿಸಿತ್ತು.

ಮೊದಲ ಸುತ್ತಿನಲ್ಲಿ ಕೊರಿಯಾ ಜೋಡಿ 2-0 ಮುನ್ನಡೆ ಸಾಧಿಸಿತು. ಇದಾದ ಬಳಿಕ ಭಾರತದ ಜೋಡಿ ಉತ್ತಮ ಅಂಕಗಳನ್ನು ಕಲೆಹಾಕುವ ಮೂಲಕ ಎಲ್ಲ ಸುತ್ತಿನಲ್ಲಿಯೂ ಪ್ರಾಬಲ್ಯ ಸಾಧಿಸಿತು. 12ನೇ ಸುತ್ತಿನಲ್ಲಿ ಕೊರಿಯಾ 10 ಅಂಕ ಗಳಿಸಿ ಕಮ್‌ಬ್ಯಾಕ್ ಮಾಡುವ ಪ್ರಯತ್ನ ನಡೆಸಿತಾದರೂ, ಬಳಿಕದ ಸುತ್ತಿನಲ್ಲಿ ಯಶಸ್ಸು ಕಾಣದೆ ಸೋಲು ಕಂಡಿತು.

ಇದನ್ನೂ ಓದಿ Paris Olympics 2024: ಭಾರತ-ಅರ್ಜೆಂಟೀನಾ ಹಾಕಿ ಪಂದ್ಯ ವೀಕ್ಷಿಸಿದ ರಾಹುಲ್​ ದ್ರಾವಿಡ್​

ಈ ಬಾರಿಯ ಒಲಿಂಪಿಕ್ಸ್​ ಪದಕ ನಿರೀಕ್ಷೆಯ ಕ್ರೀಡಾಪಟುಗಳಲ್ಲಿ ಮನು ಭಾಕರ್​ ಕೂಡ ಕಾಣಿಸಿಕೊಂಡಿದ್ದರು. ಭಾರತೀಯರು ನಿರೀಕ್ಷೆ ಮಾಡಿದಂತೆ ಅವರು ಒಂದಲ್ಲ 2 ಪದಕ ಗೆದ್ದು ಅವರ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.

ಸದ್ಯ ಭಾರತ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ 2 ಪದಕ ತನ್ನದಾಗಿಸಿಕೊಂಡಿದೆ. 2 ಪದಕ ಕೂಡ ಶೂಟಿಂಗ್​ ವಿಭಾಗದಲ್ಲಿ ಬಂದಿದೆ. ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಟೋಕಿಯೋಗೆ ಆಗಮಿಸಿದ್ದ ಮನು ಭಾಕರ್​ಗೆ ಅದೃಷ್ಟ ಕೈಕೊಟ್ಟಿತ್ತು. ಕೂಟದ ಮೊದಲ ಸ್ಪರ್ಧೆಯಲ್ಲೇ ಅವರ ಪಿಸ್ತೂಲ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರಿಗೆ ಫೈನಲ್​ಗೇರುವ ಅವಕಾಶ ಕೈತಪ್ಪಿತ್ತು. ಮೊದಲ ಸುತ್ತಿನಲ್ಲಿ ಎದುರಾಗ ಈ ಆಘಾತದಿಂದ ಚೇತರಿಕೊಳ್ಳದ ಮನು ಆ ಬಳಿಕ ಆಡಿದ 2 ಸ್ಪರ್ಧೆಗಳಲ್ಲಿಯೂ ಏಕಾಗ್ರತೆ ಸಾಧಿಸಲು ವಿಫಲರಾಗಿ ಸೋಲು ಕಂಡಿದ್ದರು. ಇದು ಅವರ ಪದಾರ್ಪಣ ಒಲಿಂಪಿಕ್ಸ್​ ಕೂಟವಾಗಿತ್ತು. ಆಗ ಅವರಿಗೆ ಕೇವಲ 19 ವರ್ಷ ವಯಸ್ಸಾಗಿತ್ತು. ಅಂದಿನ ನಿರಾಸೆಯನ್ನು ಈ ಬಾರಿ ಪ್ಯಾರಿಸ್​ನಲ್ಲಿ 2 ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆಯನ್ನೇ ಮಾಡಿ ತಮ್ಮ ಎಲ್ಲ ನೋವನ್ನು ಮರೆತಿದ್ದಾರೆ.

Continue Reading

ಕ್ರೀಡೆ

Paris Olympics 2024: ಭಾರತ-ಅರ್ಜೆಂಟೀನಾ ಹಾಕಿ ಪಂದ್ಯ ವೀಕ್ಷಿಸಿದ ರಾಹುಲ್​ ದ್ರಾವಿಡ್​

Paris Olympics 2024: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿರುವ ಇಂಡಿಯಾ ಹೌಸ್‌ನಲ್ಲಿ ಸೋಮವಾರ ‘ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌; ಹೊಸ ಯುಗದ ಉದಯ’ ವಿಷಯದ ಕುರಿತು ಏರ್ಪಡಿಸಲಾಗಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡ ಬಳಿಕ ದ್ರಾವಿಡ್​ ಹಾಕಿ ಪಂದ್ಯವನ್ನು ವೀಕ್ಷಿಸಿದ್ದಾರೆ.

VISTARANEWS.COM


on

Paris Olympics 2024
Koo

ಪ್ಯಾರಿಸ್​: ಭಾರತ ಕ್ರಿಕೆಟ್​ ತಂಡದ ಮಾಜಿ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ(Paris Olympics 2024) ಸೋಮವಾರ ನಡೆದಿದ್ದ ಭಾರತ ಮತ್ತು ಅರ್ಜೆಂಟೀನಾ ವಿರುದ್ಧ ಹಾಕಿ ಪಂದ್ಯವನ್ನು ವೀಕ್ಷಿಸಿದ್ದಾರೆ. ಈ ಪೋಟೊ ಇದೀಗ ವೈರಲ್​ ಆಗಿದೆ.

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿರುವ ಇಂಡಿಯಾ ಹೌಸ್‌ನಲ್ಲಿ ಸೋಮವಾರ ‘ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌; ಹೊಸ ಯುಗದ ಉದಯ’ ವಿಷಯದ ಕುರಿತು ಏರ್ಪಡಿಸಲಾಗಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡ ಬಳಿಕ ದ್ರಾವಿಡ್​ ಹಾಕಿ ಪಂದ್ಯವನ್ನು ವೀಕ್ಷಿಸಿದ್ದಾರೆ. ಇದೇ ವೇಳೆ ಮುಂದಿನ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್​ ಸೇರ್ಪಡೆಯಾಗದ ಬಗ್ಗೆಯೂ ಸಂತಸ ವ್ಯಕ್ತಪಡಿಸಿದರು.

“ಮುಂದಿನ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಅದ್ಭುತವಾಗಿ ನಡೆಯಬೇಕು. ಭಾರತದ ಪುರುಷ ಮತ್ತು ಮಹಿಳೆಯರ ತಂಡಗಳೆರಡು ಚಿನ್ನ ಗೆಲ್ಲಬೇಕೆಂಬುದು ನನ್ನ ಕನಸು. ನಾನು ಯಾವುದಾದರೊಂದು ಸ್ಥಾನದ ಮೂಲಕ ಒಲಿಂಪಿಕ್ಸ್‌ನಲ್ಲಿ ಹಾಜರಿರುತ್ತೇನೆ. ಕೊನೆಗೆ ಮಾಧ್ಯಮ ಪ್ರತಿನಿಧಿಯಾಗಿಯಾದರೂ ಬರುತ್ತೇನೆ’ ಎಂದು ಹೇಳಿ ದ್ರಾವಿಡ್ ನಕ್ಕರು. ಲಾಸ್ ಏಂಜಲೀಸ್‌ನಲ್ಲಿ 2028ರಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಕೂಡ ಸೇರ್ಪಡೆಗೊಂಡಿದೆ.

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ತಾವರಣವನ್ನು ಕಲ್ಪಿಸಲು ಇದರ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯನ್ನು ಮಾಡಿದೆ. ಉದ್ಘಾಟನ ಸಮಾರಂಭದ ಬಳಿಕ ಮಾತನಾಡಿದ್ದ ಈ ನೀತಾ ಅಂಬಾನಿ, ಭಾರತ ಒಲಿಂಪಿಕ್ಸ್‌ ಆತಿಥ್ಯ ವಹಿಸುವ ದಿನ ದೂರವಿಲ್ಲ ಎಂದರು.

ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್​ ಸೇರ್ಪಡೆಗೊಳ್ಳುವಲ್ಲಿ ನೀತಾ ಅಂಬಾನಿ ಅವರ ಪಾತ್ರವೂ ಪ್ರಮುಖವಾಗಿತ್ತು. ಕಳೆದ ವರ್ಷ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ(International Olympic Committee Session) ಮುಂಬೈಯಲ್ಲಿ ನಡೆದ ವೇಳೆಯೂ ನೀತಾ ಅಂಬಾನಿ ಈ ಸಭೆಯ ವಕಾಲತ್ತು ವಹಿಸಿದ್ದರು.

ಇದನ್ನೂ ಓದಿ Kerala Cyclist Reaches Paris: ನೀರಜ್​ ಚೋಪ್ರಾಗೆ ಬೆಂಬಲ ಸೂಚಿಸಲು ಬರೋಬ್ಬರಿ 22 ಸಾವಿರ ಕಿ.ಮೀ ಸೈಕಲ್​ ತುಳಿದು ಪ್ಯಾರಿಸ್​ ತಲುಪಿದ ಕೇರಳದ ಅಭಿಮಾನಿ

ಐಪಿಎಲ್​ ಕೋಚಿಂಗ್​ನತ್ತ ಮುಖ ಮಾಡಿದ ದ್ರಾವಿಡ್​


ಟಿ20 ವಿಶ್ವಕಪ್​ ಬಳಿಕ ಭಾರತ ತಂಡದ ಕೋಚಿಂಗ್​ ಹುದ್ದೆಯಿಂದ ನಿವೃತ್ತಿ ಹೊಂದಿರುವ ದ್ರಾವಿಡ್​ ಮುಂದಿನ ಐಪಿಎಲ್​ನಲ್ಲಿ ಈ ಹಿಂದೆ ಕೋಚಿಂಗ್​ ನಡೆಸಿದ್ದ ರಾಜಸ್ಥಾನ್ ರಾಯಲ್ಸ್​(Rajasthan Royals) ತಂಡದ ಪರವೇ ಮತ್ತೆ ಕೋಚಿಂಗ್​ ನಡೆಸಲಿದ್ದಾರೆ ಎನ್ನಲಾಗಿದೆ.

ರಾಜಸ್ಥಾನ್ ರಾಯಲ್ಸ್ ಪರ ನಾಯಕರಾಗಿ ದ್ರಾವಿಡ್ ಒಮ್ಮೆ ತಂಡವನ್ನು ಪ್ಲೇ ಆಪ್​ಗೆ ಕೊಂಡೊಯ್ದಿದ್ದರು. ಚಾಂಪಿಯನ್ಸ್ ಲೀಗ್​ನಲ್ಲಿ ತಂಡ ಫೈನಲ್​ಗೇರಿತ್ತು. ರಾಜಸ್ಥಾನ್ ತಂಡದ ಪರ 40 ಪಂದ್ಯಗಳಲ್ಲಿ ನಾಯಕರಾಗಿದ್ದ ದ್ರಾವಿಡ್ 23 ಗೆಲುವು ಕಂಡಿದ್ದಾರೆ. ಎರಡು ಸೀಸನ್​ಗಳಲ್ಲಿ ರಾಜಸ್ಥಾನ್ ತಂಡದ ಕೋಚ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು. ಅಂಡರ್ 19 ತಂಡದ ಕೋಚ್ ಆದ ಕಾರಣ ಐಪಿಎಲ್​ ಕೋಚಿಂಗ್​ನಿಂದ ದೂರ ಉಳಿದಿದ್ದರು. ಇದಾದ ಬಳಿಕ ಟೀಮ್​ ಇಂಡಿಯಾ ಕೋಚ್​ ಆಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎಲ್ಲ ಹುದ್ದೆಗಳಿಂದ ನಿವೃತ್ತಿ ಹೊಂದಿರುವ ಅವರು ಐಪಿಎಲ್​ ಕೋಚಿಂಗ್​ ಕಡೆ ಗಮನಹರಿಸಿದ್ದಾರೆ.

Continue Reading

ಕ್ರೀಡೆ

Kerala Cyclist Reaches Paris: ನೀರಜ್​ ಚೋಪ್ರಾಗೆ ಬೆಂಬಲ ಸೂಚಿಸಲು ಬರೋಬ್ಬರಿ 22 ಸಾವಿರ ಕಿ.ಮೀ ಸೈಕಲ್​ ತುಳಿದು ಪ್ಯಾರಿಸ್​ ತಲುಪಿದ ಕೇರಳದ ಅಭಿಮಾನಿ

Kerala Cyclist Reaches Paris: ಕೇರಳದ ಸೈಕ್ಲಿಸ್ಟ್​ ಆಗಿರುವ ಫಯಿಸ್​ ಅಶ್ರಫ್​ ಅಲಿ, 2022ರ ಆಗಸ್ಟ್​ 15ರಂದು ಕಲ್ಲಿಕೋಟೆಯಿಂದ ತಮ್ಮ ಸೈಕಲ್​ ಪ್ರಯಾಣವನ್ನು ಆರಂಭಿಸಿ 30 ದೇಶಗಳನ್ನು ಸುತ್ತಿ ಇದೀಗ ಫ್ರಾನ್ಸ್​ ತಲುಪಿದ್ದಾರೆ.

VISTARANEWS.COM


on

Kerala Cyclist Reaches Paris
Koo

ಪ್ಯಾರಿಸ್​: ಜೀವನದಲ್ಲಿ ಅಸಾಧ್ಯವಾದುದನ್ನು ಸಾಧಿಸುವ ಛಲ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆ ಹಾದಿ ಸುಲಭ ಎಂಬ ಮಾತಿನಂತೆ ಕೇರಳದ ಸೈಕ್ಲಿಸ್ಟ್(Kerala Cyclist Reaches Paris)​ ಒಬ್ಬರು ಕಲ್ಲಿಕೋಟೆಯಿಂದ ಬರೋಬ್ಬರಿ 22 ಸಾವಿರ ಕಿಲೋಮೀಟರ್​ ಸೈಕಲ್​ ತುಳಿದು ಪ್ಯಾರಿಸ್​ ತಲುಪಿ(Paris Olympics) ಎಲ್ಲರ ಗಮನ ಸೆಳೆಯುಂತೆ ಮಾಡಿದ್ದಾರೆ.

ಹೌದು, ಪ್ಯಾರಿಸ್​ ಒಲಿಂಪಿಕ್ಸ್​ ನೋಡಲು ಮತ್ತು ತಮ್ಮ ನೆಚ್ಚಿನ ಕ್ರೀಡಾಪಟು ನೀರಜ್​ ಚೋಪ್ರಾ(Neeraj Chopra) ಅವರಿಗೆ ಬೆಂಬಲ ಸೂಚಿಸುವ ಸಲುವಾಗಿ ಈ ಸೈಕ್ಲೀಸ್​ 2 ವರ್ಷಗಳ ಕಾಲ ಸೈಕಲ್​ ಮೂಲಕ ಪ್ರಯಾಣಿಸಿ ಕೊನೆಗೂ ತಮ್ಮ ಗುರಿ ಮುಟ್ಟಿದ್ದಾರೆ. ಈ ಸಾಧಕನ ಹೆಸರು ಫಯಿಸ್​ ಅಶ್ರಫ್​ ಅಲಿ(Fayis Asraf Ali).

ಕೇರಳದ ಸೈಕ್ಲಿಸ್ಟ್​ ಆಗಿರುವ ಫಯಿಸ್​ ಅಶ್ರಫ್​ ಅಲಿ, 2022ರ ಆಗಸ್ಟ್​ 15ರಂದು ಕಲ್ಲಿಕೋಟೆಯಿಂದ ತಮ್ಮ ಸೈಕಲ್​ ಪ್ರಯಾಣವನ್ನು ಆರಂಭಿಸಿ 30 ದೇಶಗಳನ್ನು ಸುತ್ತಿ ಇದೀಗ ಫ್ರಾನ್ಸ್​ ತಲುಪಿದ್ದಾರೆ. ಕಳೆದ ವರ್ಷ ಆಗಸ್ಟ್​ನಲ್ಲಿ ಅವರು ಬುಡಾಪೆಸ್ಟ್​ ತಲುಪಿದ್ದರು. ಈ ವೇಳೆ ಅವರು ತಮ್ಮ ನೆಚ್ಚಿನ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಷಿಪ್​ ನಡೆಯುತ್ತಿತ್ತು.

ಜರ್ನಿ ಆರಂಭಿಸಿದ್ದು ಹೇಗೆ?


ಫಯಿಸ್​ ಅಶ್ರಫ್ ಕೇರಳದಿಂದ ಸೈಕಲ್​ ಜರ್ನಿ ಆರಂಭಿಸಿದಾಗ ಬಳಿಸಿದ್ದು 13 ಸಾವಿರ ರೂ. ಮೌಲ್ಯದ ಸೈಕಲ್. ಈ ಸೈಕಲ್​ನಲ್ಲಿ ಸಿಂಗಾಪುರ ತಲುಪಿದರು. ಬಳಿಕ 1 ಲಕ್ಷ ರೂ. ಮೌಲ್ಯದ ಸೈಕಲ್​ ಖರೀದಿಸಿದ್ದರು. ಅಂತಿಮವಾಗಿ ಪ್ಯಾರಿಸ್​ಗೆ ಪ್ರಯಾಣಿಸಲು ಅಶ್ರಫ್​​ ಅಲಿ 2.5 ಲಕ್ಷ ರೂ. ಮೌಲ್ಯದ ಅತ್ಯಾಧುನಿಕ ಸೈಕಲ್​ ಖರೀದಿಸಿದ್ದರು. ಪ್ರತಿದಿನ ಸರಾಸರಿ 150 ಕಿಲೋಮೀಟರ್​ ಪ್ರಯಾಣಿಸುತ್ತಿದ್ದರು. ಸೈಕಲ್​ ಜರ್ನಿಯಲ್ಲಿ ಅವರ ಜತೆಗಿದದ್ದು ಕೇವಲ 4 ಜತೆ ಬಟ್ಟೆ, ಒಂದು ಟೆಂಟ್​, ಮಲಗುವ ಬ್ಯಾಗ್​ ಮತ್ತು ಸುಮಾರು 50 ಕೆಜಿ ಭಾರದ ವಸ್ತುಗಳು. ಅವರು ಶುಕ್ರವಾರ ಪ್ಯಾರಿಸ್​ ತಲುಪಿದ ಫೋಟೊವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನೀರಜ್​ ಅವರು ಚಿನ್ನ ಗೆಲ್ಲುವುದನ್ನು ನೋಡಲು ಕಾತರವಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ Paris Olympics: ಮನು ಭಾಕರ್​-ಸರಬ್ಜೊತ್‌ ಸಿಂಗ್​ ಕಂಚಿನ ನಿರೀಕ್ಷೆ; ಭಾರತದ ಇಂದಿನ ಸ್ಪರ್ಧೆಗಳ ವಿವರ ಹೀಗಿದೆ

23 ವರ್ಷದ ನೀರಜ್ ಚೋಪ್ರಾ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಈ ಬಾರಿಯ ಒಲಿಂಪಿಕ್ಸ್​ನಲ್ಲಿ 90 ಮೀ. ದೂರ ಎಸೆಯುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಕಾಶಿನಾಥ್ ನಾಯ್ಕ್ ಅವರು ನೀರಜ್ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿಯೂ(neeraj chopra paris olympics) ಚಿನ್ನದ ಪದಕ ಗೆಲ್ಲಲಿದ್ದಾರೆ ಎಂದು ಆತ್ಮವಿಶ್ವಾಸದಿಂದ ಈ ಮಾತನ್ನು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿನಾಥ್, “ನಾನು 2015 ರಿಂದ ನೀರಜ್​ ಜತೆ ಕೆಲಸ ಮಾಡುತ್ತಿದ್ದೇನೆ. ಅವರ ಛಲವನ್ನು ಮೆಚ್ಚಲೇ ಬೇಕು.​ ಸಾಧಿಸುವ ಛಲವೇ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಅತ್ಯಂತ ಶಿಸ್ತಿನ ಕ್ರೀಡಾಪಟು ಕೂಡ ಆಗಿದ್ದಾರೆ. 90 ಮೀ. ದೂರ ಜಾವೆಲಿನ್​ ಎಸೆಯುವದು ಪ್ರಮುಖ ಗುರಿ ಎಂದು ನೀರಜ್​ ಈಗಾಗಲೇ ಹೇಳಿದ್ದಾರೆ. ಹೇಳಿದಂತೆ ಅವರು ಈ ದೂರವನ್ನು ಕ್ರಮಿಸುವ ವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದ್ದಾರೆ.

Continue Reading
Advertisement
Viral Video
Latest6 mins ago

Viral Video: ಹಾವನ್ನೇ ಮಣಿಸಿ ʼಸ್ನೇಹಿತʼನ ಜೀವ ಉಳಿಸಿದ ಹಲ್ಲಿ! ಅದ್ಭುತ ವಿಡಿಯೊ; ತಪ್ಪದೇ ನೋಡಿ!

Double Ismart
ಸಿನಿಮಾ10 mins ago

Double Ismart: ‘ಡಬಲ್ ಇಸ್ಮಾರ್ಟ್’ ಚಿತ್ರದ ಮೂರನೇ ಹಾಡು ರಿಲೀಸ್; ರೋಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ ರಾಮ್ ಪೋತಿನೇನಿ-ಕಾವ್ಯಾ ಥಾಪರ್

Olympics 2024
ಕ್ರೀಡೆ20 mins ago

Olympics 2024: ಕಂಚು ಗೆದ್ದ ಮನು-ಸರಬ್ಜೋತ್​ ಜೋಡಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಐಒಸಿ ಸದಸ್ಯೆ ನೀತಾ ಅಂಬಾನಿ ಅಭಿನಂದನೆ

Viral News
Latest22 mins ago

Street Girlfriends: 115 ರೂ.ಗೆ ಚುಂಬನ, 11 ರೂ.ಗೆ ಬಿಸಿ ಅಪ್ಪುಗೆಯ ಸುಖ; ಸ್ಟ್ರೀಟ್‌ ಗರ್ಲ್‌ಫ್ರೆಂಡ್ ಟ್ರೆಂಡ್‌!

Pavel Durov
ವಿದೇಶ27 mins ago

Pavel Durov: ಮದುವೆಯಾಗದೆ 100 ಮಕ್ಕಳಿಗೆ ತಂದೆಯಾದ ಟೆಲಿಗ್ರಾಂ ಸಿಇಒ ಪಾವೆಲ್‌ ದುರೋವ್! ಈತ ರಿಯಲ್‌ ಲೈಫ್‌ ‘ವಿಕ್ಕಿ ಡೋನರ್’

UGCET 2024
ಬೆಂಗಳೂರು29 mins ago

UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

Viral Video
Latest30 mins ago

Viral Video: ಪ್ರೇಮಿಯೊಂದಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ; ಗ್ರಾಮಸ್ಥರು ನೀಡಿದರು ಅಮಾನುಷ ಶಿಕ್ಷೆ

Murder Attempt
ಕ್ರೈಂ40 mins ago

Murder Attempt: ದಟ್ಟ ಅರಣ್ಯದಲ್ಲಿ ಮಹಿಳೆಯನ್ನು ಸರಪಳಿಯಿಂದ ಕಟ್ಟಿ ಪರಾರಿಯಾದ ಮಾಜಿ ಪತಿ!

Viral Video
ವೈರಲ್ ನ್ಯೂಸ್47 mins ago

Viral Video: ಯೋಗಿ ಆದಿತ್ಯನಾಥ್‌ ಕಾಲಿಗೆ ಎರಗಿದ ರಾಜಾ ಭಯ್ಯಾ; ಉತ್ತರ ಪ್ರದೇಶ ರಾಜಕೀಯದಲ್ಲಿ ಹೊಸ ಅಧ್ಯಾಯ ಎಂದ ನೆಟ್ಟಿಗರು

Viral Video
Latest50 mins ago

Viral Video: ಸಿಬ್ಬಂದಿಗೆ ಗನ್ ತೋರಿಸಿ ಆಭರಣ ಅಂಗಡಿ ದರೋಡೆ ಮಾಡಿದ ಹೆಲ್ಮೆಟ್‌ಧಾರಿಗಳು; ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ22 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ23 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌