Viral News: ಶುಭಮನ್​ ಗಿಲ್​ಗೆ ಪ್ರಪೋಸ್​ ಮಾಡಿದ ಯುವತಿ; ಸಾರಾ ತೆಂಡೂಲ್ಕರ್​ ರಿಯ್ಯಾಕ್ಷನ್​ ಹೇಗಿತ್ತು? - Vistara News

ಕ್ರಿಕೆಟ್

Viral News: ಶುಭಮನ್​ ಗಿಲ್​ಗೆ ಪ್ರಪೋಸ್​ ಮಾಡಿದ ಯುವತಿ; ಸಾರಾ ತೆಂಡೂಲ್ಕರ್​ ರಿಯ್ಯಾಕ್ಷನ್​ ಹೇಗಿತ್ತು?

ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​(WTC Final 2023) ಪಂದ್ಯದ ವೇಳೆ ಯುವತಿಯೊಬ್ಬಳು ತನ್ನನ್ನು ಮದುವೆಯಾಗುವಂತೆ ಗಿಲ್​ ಬಳಿ ಕೇಳಿಕೊಂಡಿದ್ದಾಳೆ

VISTARANEWS.COM


on

Shubman Gill
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್​: ಭಾರತ ಕ್ರಿಕೆಟ್​ ತಂಡದ ಯುವ ಆಟಗಾರ ಶುಭಮನ್​ ಗಿಲ್(Shubman Gill)​ ಅವರು ಸಾರಾ ತೆಂಡೂಲ್ಕರ್(Sara Tendulkar)​, ಸಾರಾ ಅಲಿ ಖಾನ್(sara ali khan)​ ಸೇರಿ ಕೆಲ ಸ್ಟಾರ್​ ನಟಿಯರೊಂದಿಗೆ ಡೇಟಿಂಗ್​ ನಡೆಸುತ್ತಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಟುತ್ತಿರುವ ಮಧ್ಯೆಯೇ ಇದೀಗ ಗಿಲ್​ ಅವರಿಗೆ ಯುವತಿಯೊಬ್ಬಳು ಬಹಿರಂಗವಾಗಿಯೇ ಮದುವೆಯಾಗುವಂತೆ ಕೇಳಿಕೊಂಡಿದ್ದಾಳೆ.

ಲಂಡನ್​ನ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​(WTC Final 2023) ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕುಳಿತಿದ್ದ ಭಾರತ ಮೂಲಕ ಯುವತಿಯೊಬ್ಬಳು ದೊಡ್ಡದಾದ ಪೋಸ್ಟರ್​ ಹಿಡಿದು ತನ್ನನ್ನು ಮದುವೆಯಾಗುವಂತೆ ಗಿಲ್​ ಬಳಿ ಕೇಳಿಕೊಂಡಿದ್ದಾಳೆ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral News)​ ಆಗಿದೆ.

ಯುವತಿಯ ಈ ಫೋಸ್ಟರ್​ ಕಂಡ ನೆಟ್ಟಿಗರು ಸಾರಾ ತೆಂಡೂಲ್ಕರ್​ ಅವರನ್ನು ಈ ವಿಷಯದಲ್ಲಿ ಎಳೆತಂದಿದ್ದು ಅವರನ್ನು ಕೂಡ ಟ್ರೋಲ್​ ಮಾಡಿದ್ದಾರೆ. ಹಿಂದಿಯ ಕಬೀರ್​ ಸಿಂಗ್​ ಚಿತ್ರದಲ್ಲಿ ಶಾಹೀದ್​ ಕಪೂರ್​ ಅವರು ಬೈಕ್​ನಲ್ಲಿ ಬರುವ ದೃಶ್ಯಕ್ಕೆ ಸಾರಾ ತೆಂಡೂಲ್ಕರ್​ ಅವರ ತಲೆಯನ್ನು ಎಡಿಟ್​ ಮಾಡಿ ಈ ಪೋಸ್ಟರ್​ ಕಂಡು ಅವರು ಸಿಟ್ಟಿನಲ್ಲಿ ಬೈಕ್​ ಮೇಲೇರಿ ಬರುವಂತೆ ಮೀಮ್ಸ್​ ಮಾಡಿದ್ದಾರೆ.

ಶುಭ​ಮನ್​ ಗಿಲ್ ಅವರು ಆಡುವ ವೇಳೆ​ ಹಲವು ಬಾರಿ ಪ್ರೇಕ್ಷಕರು ಸಾರಾ, ಸಾರಾ… ಎಂದು ಕೂಗಿದ್ದರು. ಈ ಸಾರಾ ಯಾರೆಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ನಡೆಯುತ್ತಿದ್ದರೂ ಇದಕ್ಕೆ ಯಾವುದೇ ಕ್ಲ್ಯಾರಿಟಿ ಸಿಕ್ಕಿಲ್ಲ. ಆದರೆ ಕೆಲವರು ಗಿಲ್ ಸಚಿನ್​ ತೆಂಡೂಲ್ಕರ್​ ಪುತ್ರಿ ಜತೆ ಅಂದುಕೊಂಡಿದ್ದರೆ, ಇನ್ನೂ ಕೆಲವರು ನಟಿ ಸಾರಾ ಅಲಿ ಖಾನ್​ ಎಂದುಕೊಂಡಿದ್ದಾರೆ.

ಇದನ್ನೂ ಓದಿ Viral News: ಲಬುಶೇನ್​ರನ್ನು ನಿದ್ರೆಯಿಂದ ಬಡಿದೆಬ್ಬಿಸಿದ ಸಿರಾಜ್​; ಸಖತ್​ ಮಜವಾಗಿದೆ ವಿಡಿಯೊ

ಈಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ರನ್​ ಗಳಿಸಿದ ಶುಭಮನ್​ ಗಿಲ್​ ಪ್ರಸಕ್ತ ನಡೆಯುತ್ತಿರುವ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ 13 ರನ್​ ಗಳಿಸಿ ನಿರಾಸೆ ಮೂಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

KKR vs RCB: ತವರಿನ ಸೋಲಿಗೆ ಸೇಡು ತೀರಿಸೀತೇ ಆರ್​ಸಿಬಿ?

KKR vs RCB: 2017ರಲ್ಲಿ ಕೆಕೆಆರ್​ ವಿರುದ್ಧ ಇಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ಕೇವಲ 49 ರನ್​ಗಳಿಗೆ ಆಲೌಟ್​ ಆಗಿತ್ತು. ಈ ವರೆಗೆ ಆರ್​ಸಿಬಿ ಮತ್ತು ಕೆಕೆಆರ್​ ಐಪಿಎಲ್​ನಲ್ಲಿ 33 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ 14 ಗೆಲುವು ಕೆಕೆಆರ್​ 19 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಕೆಕೆಆರ್​ ಮುಂದಿದೆ. 

VISTARANEWS.COM


on

KKR vs RCB
Koo

ಕೋಲ್ಕತ್ತಾ: ಭಾನುವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಕೆಕೆಆರ್​(Kolkata Knight Riders) ಮತ್ತು ಆರ್​ಸಿಬಿ(RCB vs KKR) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಆರ್​ಸಿಬಿಗೆ ಸೇಡಿನ ಪಂದ್ಯವಾಗಿದೆ. ಏಕೆಂದರೆ ಚಿನ್ನಸ್ವಾಮಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಕೆಕೆಆರ್​ ಗೆಲುವು ಸಾಧಿಸಿತ್ತು. ಇದೀಗ ಕೆಕೆಆರ್​ಗೆ ತನ್ನ ತವರಿನಲ್ಲೇ ಸೋಲುಣಿಸಿ ಸೇಡು ತೀರಿಸಲು ಆರ್​ಸಿಬಿ(Royal Challengers Bengaluru) ಪಣ ತೊಟ್ಟಿದೆ.

ತವರಿನಲ್ಲೇ ಸತತ ಸೋಲಿನ ಅವಮಾನ ಕಂಡಿರುವ ಆರ್​ಸಿಬಿ ಹೊರಗಡೆ ಆಡಿದ ಪಂದ್ಯದಲ್ಲಿ ಗೆಲ್ಲಬಹುದೇ ಎನ್ನುವ ಪ್ರಶ್ನೆ ಮೂಡುವುದು ಕೂಡ ಸಹಜ. ತಂಡದದಲ್ಲಿ ಸ್ಟಾರ್​ ಆಟಗಾರರಿದ್ದರೂ ಕೂಡ ಯಾರು ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ವಿರಾಟ್​ ಕೊಹ್ಲಿ, ದಿನೇಶ್​ ಕಾರ್ತಿಕ್​ ಮಾತ್ರ ತಂಡದ ನಂಬಿಕಸ್ಥ ಆಟಗಾರರಾಗಿದ್ದಾರೆ. ಆರ್​ಸಿಬಿ ಬ್ಯಾಟಿಂಗ್‌ನಲ್ಲಿ ಯಶಸ್ವಿಯಾದರೆ ಬೌಲಿಂಗ್‌ನಲ್ಲಿ ಎಡವುತ್ತಿದೆ. ಬೌಲಿಂಗ್‌ನಲ್ಲಿ ಯಶಸ್ವಿಯಾದರೆ, ಬ್ಯಾಟಿಂಗ್‌ನಲ್ಲಿ ಪಲ್ಟಿ ಹೊಡೆಯುತ್ತಿದೆ. ಬೌಲಿಂಗ್‌ ಪಡೆಯಂತೂ ಸಂಪೂರ್ಣ ಮೊನಚು ಕಳೆದುಕೊಂಡಿದೆ. ಇದು, ಸಹಜವಾಗಿ ಆರ್‌ಸಿಬಿಯನ್ನು ಸೋಲಿನ ಸುಳಿಗೆ ತಳ್ಳಿದೆ. ಒಟ್ಟಿನಲ್ಲಿ ಸಂಘಟನಾತ್ಮಕ ಹೋರಾಟವೇ ಬರುತ್ತಿಲ್ಲ. 

ನರೈನ್​ ಭಯ


ಆರ್​ಸಿಬಿ ತಂಡದ ದೊಡ್ಡ ಶತ್ರುವೆಂದರೆ ಸುನೀಲ್​ ನರೈನ್​ ಅವರ ಪ್ರಚಂಡ ಬ್ಯಾಟಿಂಗ್​. ನರೈನ್​ ಯಾವುದೇ ಪಂದ್ಯದಲ್ಲಿ ಆಡದಿದ್ದರೂ ಕೂಡ ಆರ್​ಸಿಬಿ ವಿರುದ್ಧ ಮಾತ್ರ ಸಿಡಿದು ನಿಲ್ಲುತ್ತಾರೆ. ಆರಂಭಿಕಾಗಿ ಕಣಕ್ಕಿಳಿದು ಕಡಿಮೆ ಎಸೆತಗಳಿಂದ ದೊಡ್ಡ ಮೊತ್ತ ಪೇರಿಸಿ ಆರ್​ಸಿಬಿ ಮೇಲೆ ಒತ್ತಡ ಹೇರುತ್ತಾರೆ. ಈ ಬಾರಿಯಂತು ಅವರು ಭಯಾನಕ ಬ್ಯಾಟಿಂಗ್​ ಲಯದಲ್ಲಿದ್ದಾರೆ. ಕಳೆದ ರಾಜಸ್ಥಾನ್​ ವಿರುದ್ಧ ಶತಕ ಕೂಡ ಬಾರಿಸಿದ್ದರು. ಅದು ಕೂಡ ಈಡನ್​ ಗಾರ್ಡನ್ಸ್​ನಲ್ಲೇ. ಹೀಗಾಗಿ ಈ ಪಂದ್ಯದಲ್ಲೂ ತಂಡ ಇವರ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟಿದೆ.

ಇದನ್ನೂ ಓದಿ IPL 2024 : ಬಿಸಿಸಿಐ ನಿಯಮ ಉಲ್ಲಂಘನೆ; ಋತುರಾಜ್​, ರಾಹುಲ್​ಗೆ ದಂಡ

18 ವರ್ಷದ ಆಂಗ್ಕ್ರಿಶ್ ರಘುವಂಶಿ ಕೂಡ ಬಿರುಸಿನ ಬ್ಯಾಟಿಂಗ್​ ಮೂಲಕ ಗಮನಸೆಳೆಯುತ್ತಿದ್ದಾರೆ. ಯಾವುದೇ ಭಯವಿಲ್ಲದೆ ಬ್ಯಾಟಿಂಗ್​ ನಡೆಸುವ ಚಾಕಚಕ್ಯತೆ ಇವರಲ್ಲಿದೆ. ಭವಿಷ್ಯದ ಆಟಗಾರನೆಂದೇ ಗುರುತಿಸಿಕೊಂಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ರಸೆಲ್, ರಿಂಕು ಸಿಂಗ್​ ತಂಡಕ್ಕೆ ಆಸರೆಯಾಗಬಲ್ಲರು.

ಪಿಚ್​ ರಿಪೋರ್ಟ್​

ಈಡನ್‌ ಗಾರ್ಡನ್ಸ್‌ನ(Eden Gardens) ಪಿಚ್​ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬಿನಿ ಸಮಸ್ಯೆ ಕಾಡಲಿದೆ. ಇದು ಬೌಲರ್​ಗಳಿಗೆ ಕಷ್ಟಕರವಾಗಲಿದೆ. ಕೈಯಲ್ಲಿ ಸರಿಯಾಗಿ ಚೆಂಡು ನಿಲ್ಲದೆ ನಿರ್ದಿಷ್ಟ ಗುರಿಗೆ ಬೌಲಿಂಗ್​ ಮಾಡಲು ಸಾಧ್ಯವಾಗುವುದಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡರೆ ಉತ್ತಮ. ವಿರಾಟ್​ ಕೊಹ್ಲಿ 2019ರಲ್ಲಿ ಕೆಕೆಆರ್​ ವಿರುದ್ಧ ಇದೇ ಮೈದಾನದಲ್ಲಿ ಶತಕ ಕೂಡ ಬಾರಿಸಿದ್ದರು. ಈ ಬಾರಿ ಏನು ಮಾಡಲಿದ್ದಾರೆ ಎಂದು ಕಾದು ನೋಡಬೇಕಿದೆ.

2017ರಲ್ಲಿ ಕೆಕೆಆರ್​ ವಿರುದ್ಧ ಇಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ಕೇವಲ 49 ರನ್​ಗಳಿಗೆ ಆಲೌಟ್​ ಆಗಿತ್ತು. ಈ ವರೆಗೆ ಆರ್​ಸಿಬಿ ಮತ್ತು ಕೆಕೆಆರ್​ ಐಪಿಎಲ್​ನಲ್ಲಿ 33 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ 14 ಗೆಲುವು ಕೆಕೆಆರ್​ 19 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಕೆಕೆಆರ್​ ಮುಂದಿದೆ. 

Continue Reading

ಕ್ರೀಡೆ

RCB vS KKR: ಗ್ರೀನ್​ ಜೆರ್ಸಿಯಲ್ಲಿ ಆರ್​ಸಿಬಿ ಅದೃಷ್ಟ ಹೇಗಿದೆ; ಎಷ್ಟು ಗೆಲುವು ಎಷ್ಟು ಸೋಲು?

RCB vS KKR: ಆರ್​ಸಿಬಿ ಹಸಿರು ಜೆರ್ಸಿಯಲ್ಲಿ(RCB Green Jersey) ಕಣಕ್ಕಿಳಿದ ಬಹುತೇಕ ಪಂದ್ಯದಲ್ಲಿ ಸೋಲು ಕಂಡಿದೆ. ಇದುವರೆಗೆ ಒಟ್ಟು 13 ಪಂದ್ಯಗಳನ್ನು ಆಡಿದೆ. ಗೆದ್ದಿದ್ದು ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ. ಇನ್ನುಳಿದ 8 ಪಂದ್ಯಗಳಲ್ಲಿ ಸೋಲನುಭವಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.

VISTARANEWS.COM


on

RCB vs KKR
Koo

ಕೋಲ್ಕತ್ತಾ: ಸತತ ಸೋಲಿನಿಂದ ಕಂಗೆಟ್ಟಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB vS KKR) ತಂಡ ನಾಳೆ ನಡೆಯುವ ಐಪಿಎಲ್​ನ(IPL 2024) ಡಬಲ್​ ಹೆಡರ್​ನ ಹಗಲು ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಕಣಕ್ಕಿಳಿಯಲಿದೆ. ಗೋ ಗ್ರೀನ್​ ಅಭಿಯಾನದ ಭಾಗವಾಗಿ ಆರ್​ಸಿಬಿ ಈ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ(RCB Green Jersey) ಆಡಲಿದೆ. ಆರ್​ಸಿಬಿ ಈ ಜೆರ್ಸಿಯಲ್ಲಿ ಆಡಿದ ಪಂದ್ಯಗಳಲ್ಲಿ ಎಷ್ಟು ಸೋಲು ಮತ್ತು ಗೆಲುವು ಕಂಡಿದೆ ಎನ್ನುವ ಮಾಹಿತಿ ಇಂತಿದೆ.

13 ಪಂದ್ಯಗಳಲ್ಲಿ ಕಣಕ್ಕೆ


ಆರ್​ಸಿಬಿ ಈ ಜೆರ್ಸಿಯಲ್ಲಿ ಕಣಕ್ಕಿಳಿದ ಬಹುತೇಕ ಪಂದ್ಯದಲ್ಲಿ ಸೋಲು ಕಂಡಿದೆ. ಆರ್​ಸಿಬಿ ಐಪಿಎಲ್‌ನಲ್ಲಿ ಹಸಿರು ಜೆರ್ಸಿಯಲ್ಲಿ ಇದುವರೆಗೆ ಒಟ್ಟು 13 ಪಂದ್ಯಗಳನ್ನು ಆಡಿದೆ. ಗೆದ್ದಿದ್ದು ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ. ಇನ್ನುಳಿದ 8 ಪಂದ್ಯಗಳಲ್ಲಿ ಸೋಲನುಭವಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಅದರಲ್ಲೂ ಈ ಬಾರಿ ಆರ್​ಸಿಬಿ ಆಡಿದ 7 ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರ ಸಾಧಿಸಿದೆ. ಹೀಗಾಗಿ ಕೆಕೆಆರ್​ ವಿರುದ್ಧ ಗೆಲುವು ಸಾಧಿಸೀತೇ, ಈ ಉಡುಗೆ ಆರ್​ಸಿಬಿ ಪಾಲಿಗೆ ಅದೃಷ್ಟ ತಂದೀತೇ ಎಂಬುದು ಎಲ್ಲರ ನಿರೀಕ್ಷೆ.

“ಬಣ್ಣಗಳ ಬದಲಾವಣೆಯು ಅದೃಷ್ಟದಲ್ಲಿ ಬದಲಾವಣೆಯನ್ನು ತರುತ್ತದೆ ಎಂದು ಭಾವಿಸುತ್ತೇವೆ!” ಎಂದು ಬರೆದಿಕೊಂಡು ಮುಂದಿನ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ತಂಡ ಕಣಕ್ಕಿಳಿಯಲಿದೆ ಎನ್ನುವ ವಿಚಾರವನ್ನು ಫ್ರಾಂಚೈಸಿ ತನ್ನ ಟ್ವಿಟರ್ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದೆ.

ಇದನ್ನೂ ಓದಿ IPL 2024 : ಬಿಸಿಸಿಐ ನಿಯಮ ಉಲ್ಲಂಘನೆ; ಋತುರಾಜ್​, ರಾಹುಲ್​ಗೆ ದಂಡ

ಒಂದು ಬಾರಿ ನೀಲಿ ಜರ್ಸಿಯಲ್ಲಿ ಆಡಿತ್ತು


2011 ರಿಂದ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆರ್​ಸಿಬಿ ತಮ್ಮ ‘ಗೋ ಗ್ರೀನ್’ ಅಭಿಯಾನದಲ್ಲಿ ತೊಡಗಿಕೊಂಡಿತ್ತು. ಇದೇ ಕಾರಣಕ್ಕೆ ಪ್ರತಿ ಆವೃತ್ತಿಯಲ್ಲಿಯೂ ಒಂದು ಪಂದ್ಯವನ್ನು ಹಸಿರು ಜೆರ್ಸಿಯಲ್ಲಿ ಆಡುತ್ತಿದೆ. ಆದರೆ 2021ರಲ್ಲಿ, ಹಸಿರು ಜರ್ಸಿಯಲ್ಲಿ ಆಡುವ ಬದಲು ತಂಡವು ಒಂದು ಪಂದ್ಯದಲ್ಲಿ ನೀಲಿ ಜರ್ಸಿಯಲ್ಲಿ ಆಡಿತ್ತು. ಇದಕ್ಕೆ ಕಾರಣ ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಂಚೂಣಿಯಲ್ಲಿರುವ ಕಾರ್ಮಿಕರಿಗೆ ಅವರ ತ್ಯಾಗ ಮತ್ತು ಕಠಿಣ ಪರಿಶ್ರಮಕ್ಕೆ ಗೌರವ ಸಲ್ಲಿಸಲು ಈ ನೀಲಿ ಜೆರ್ಸಿ ಧರಿಸಿ ಆಡಿತ್ತು.

ಈ ಪಂದ್ಯ ನಿರ್ಣಾಯಕ


ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ತಂಡದ ಮೇಲಿದೆ. ಈಗಾಗಲೇ 7 ಪಂದ್ಯ ಆಡಿದ್ದು, 1 ಪಂದ್ಯ ಗೆದ್ದು, 6 ಪಂದ್ಯದಲ್ಲಿ ಸೋಲು ಕಂಡಿದೆ. 2 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 7 ಪಂದ್ಯಗಳ ಬಾಕಿ ಇದೆ. ಹೀಗಾಗಿ ಕೆಕೆಆರ್​ ವಿರುದ್ಧದ ಪಂದ್ಯದಿಂದಲೇ ಗೆಲುವಿನ ಅಭಿಯಾನ ಆರಂಭಿಸಬೇಕಿದೆ. ಆದರೆ ಮಾತ್ರ ಪ್ಲೇ ಆಫ್ ಅವಕಾಶ ಇದೆ. ಕೆಕೆಆರ್​ ವಿರುದ್ಧ ಸೋತರೆ ಆರ್​ಸಿಬಿ ಈ ಬಾರಿಯ ಟೂರ್ನಿಯಿಂದ ಹೊರ ಬೀಳಲಿದೆ.

Continue Reading

ಪ್ರಮುಖ ಸುದ್ದಿ

MS Dhoni : ಧೋನಿ ಮುಟ್ಟಿದ್ದೆಲ್ಲ ದಾಖಲೆ, ಲಕ್ನೊ ವಿರುದ್ಧವೂ ಮತ್ತೊಂದು ರೆಕಾರ್ಡ್​​

MS Dhoni: ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 257ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ ಮೊದಲ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ. ಒಟ್ಟಾರೆಯಾಗಿ, 42 ವರ್ಷದ ಧೋನಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಸುಮಾರು 40 ರ ಅದ್ಭುತ ಸರಾಸರಿಯಲ್ಲಿ 5,169 ರನ್ ಗಳಿಸಿದ್ದಾರೆ.

VISTARANEWS.COM


on

MS Dhoni
Koo

ಲಖನೌ: ಐಪಿಎಲ್ 2024 ರ 34 ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಸಿಎಸ್​ಕೆ ತಂಡ ಮಾಜಿ ನಾಯಕ ಎಂಎಸ್ ಧೋನಿ (MS Dhoni) ಕೇವಲ ಒಂಬತ್ತು ಎಸೆತಗಳಲ್ಲಿ ಅಜೇಯ 28 ರನ್ ಗಳಿಸಿದ್ದರು. ಮೊಹ್ಸಿನ್ ಖಾನ್ ಮತ್ತು ಯಶ್ ಠಾಕೂರ್ ಅವರ ಎರಡು ದೊಡ್ಡ ಓವರ್​ಗಳಲ್ಲಿ ಅವರು ಅಬ್ಬರಿಸಿದ್ದರು. ಹೀಗಗಿ ಸಿಎಸ್​ಕೆ 176 ರನ್​ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತ್ತು. ವಿಶೇಷವೆಂದರೆ, ಎಂಎಸ್ ಧೋನಿ ಲಕ್ನೋದ ಏಕನಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ತಮ್ಮ ಇನಿಂಗ್ಸ್​ ಫಿನಿಶ್ ಮಾಡುವ ಸಮಯದಲ್ಲಿ ಗಮನಾರ್ಹ ಐಪಿಎಲ್ ಬ್ಯಾಟಿಂಗ್ ದಾಖಲೆ ನಿರ್ಮಿಸಿದ್ದರು.

2008 ರಲ್ಲಿ ಐಪಿಎಲ್​​ಗೆ ಪಾದಾರ್ಪಣೆ ಮಾಡಿದ ಎಂಎಸ್ ಧೋನಿ, 2024 ರಲ್ಲಿ ಎಲ್ಎಸ್​ಜಿ ವಿರುದ್ಧ ಒಂಬತ್ತು ಎಸೆತಗಳಲ್ಲಿ 28* ರನ್ ಗಳಿಸುವ ಮೂಲಕ ವಿಕೆಟ್ ಕೀಪರ್-ಬ್ಯಾಟರ್​​ ಆಗಿ ತಮ್ಮ ಪಂದ್ಯಾವಳಿಯ ವೃತ್ತಿಜೀವನದ 5,000 ನೇ ರನ್ ಗಳಿಸಿದರು.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 257ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ ಮೊದಲ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ. ಒಟ್ಟಾರೆಯಾಗಿ, 42 ವರ್ಷದ ಧೋನಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಸುಮಾರು 40 ರ ಅದ್ಭುತ ಸರಾಸರಿಯಲ್ಲಿ 5,169 ರನ್ ಗಳಿಸಿದ್ದಾರೆ.

ಇದಕ್ಕೂ ಮುನ್ನ ಸಿಎಸ್​ಕೆ ಆರಂಭಿಕ ಬ್ಯಾಟರ್​ ಅಜಿಂಕ್ಯ ರಹಾನೆ 36 ರನ್ ಗಳಿಸಿದರು. ಆದರೆ ರಚಿನ್ ರವೀಂದ್ರ, ನಾಯಕ ಋತುರಾಜ್ ಗಾಯಕ್ವಾಡ್ ಮತ್ತು ಶಿವಂ ದುಬೆ ಬೇಗ ಔಟಾದರು. ರವೀಂದ್ರ ಜಡೇಜಾ ಅರ್ಧಶತಕ ಬಾರಿಸಿ ರನ್​ ಗಳಿಸುವ ಜವಾಬ್ದಾರಿ ವಹಿಸಿಕೊಂಡರು. ಸಹ ಆಲ್ರೌಂಡರ್ ಮೊಯಿನ್ ಅಲಿ ಅವರಿಂದ ಹೆಚ್ಚಿನ ಸಹಾಯ ಸಿಕ್ಕಿತು.

ಇದನ್ನೂ ಓದಿ: MS Dhoni : ಸಿಎಸ್​ಕೆ ವಾರ್ಷಿಕೋತ್ಸವದಂದೇ 101 ಮೀಟರ್ ಸಿಕ್ಸರ್ ಬಾರಿಸಿದ ಧೋನಿ!

ಇನ್ನಿಂಗ್ಸ್ ನಲ್ಲಿ ಕೇವಲ ಎರಡು ಓವರ್ ಗಳು ಬಾಕಿ ಇರುವಾಗ ಮೊಯೀನ್ ಅವರನ್ನು ಆಯುಷ್ ಬದೋನಿ ಕ್ಯಾಚ್ ಹಿಡಿದು ಔಟ್ ಮಾಡಿದರು. ಎಂಎಸ್ ಧೋನಿ ಸಿಎಸ್ ಕೆ ತಂಡವನ್ನು 141-6 ರಿಂದ 176 ರನ್ ಗಳಿಗೆ ಮುನ್ನುಗ್ಗಿಸಿದರು.

KL Rahul : ಐಪಿಎಲ್​ನಲ್ಲಿ ಧೋನಿಯ ದಾಖಲೆಯೊಂದನ್ನು ಮುರಿದ ಕೆ. ಎಲ್ ರಾಹುಲ್​

ಲಕ್ನೋ: ಇಲ್ಲಿನ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ 8 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ. 176 ರನ್​ಗಳ ಗುರಿ ಬೆನ್ನತ್ತಿದ ಕೆ. ಎಲ್​ ರಾಹುಲ್ (KL Rahul) 53 ಎಸೆತಗಳಲ್ಲಿ 82 ರನ್ ಸಿಡಿಸಿ ಔಟಾದರು. ಈ ಮೂಲಕ ಐಪಿಎಲ್​ನಲ್ಲಿ ಹೊಸ ದಾಖಲೆ ಮಾಡಿದರು. ಅವರು ಅತಿ ಹೆಚ್ಚು 50+ ರನ್ ಗಳಿಸಿದ ವಿಕೆಟ್ ಕೀಪರ್ ಆಗಿ ಎಂಎಸ್ ಧೋನಿಯ (MS Dhoni) ದಾಖಲೆಯನ್ನು ಮುರಿದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವಿನ ನಗೆ ಬೀರಿತು. ಎಲ್ಎಸ್​ಜಿ ನಾಯಕ ಆಕ್ರಮಣಕಾರಿ ಇನ್ನಿಂಗ್ಸ್ ಪ್ರಾರಂಭಿಸಿದರು. ಅವರ 82 ರನ್ ಗಳು ಎಲ್​​ಎಸ್​​ಜಿ ಗೆಲುವಿನಲ್ಲಿ ಪ್ರಮುಖ ಅಂಶವಾಗಿದೆ. ರವೀಂದ್ರ ಜಡೇಜಾ ಅವರ ಅದ್ಭುತ ಕ್ಯಾಚ್​ನಿಂದಾಗಿ ಔಟ್ ಆಗುವ ಮೊದಲು ಅವರು 9 ಬೌಂಡರಿಗಳು ಮತ್ತು 3 ಸಿಕ್ಸರ್​ಗಳನ್ನು ಬಾರಿಸಿದ್ದರು.

Continue Reading

ಕ್ರೀಡೆ

IPL 2024 : ಬಿಸಿಸಿಐ ನಿಯಮ ಉಲ್ಲಂಘನೆ; ಋತುರಾಜ್​, ರಾಹುಲ್​ಗೆ ದಂಡ

IPL 2024: ಸಿಎಸ್​ಕೆ ಗಳಿಸಿದ 176 ರನ್​ಗಳ ಗುರಿ ಬೆನ್ನಟ್ಟಿದ ಎಲ್ಎಸ್​ಜಿ 8 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿದೆ. ಆರಂಭಿಕ ಆಟಗಾರರಾದ ಕ್ವಿಂಟನ್ ಡಿ ಕಾಕ್ (54) ಮತ್ತು ಕೆಎಲ್ ರಾಹುಲ್ (82) ಉತ್ತಮ ಜೊತೆಯಾಟದೊಂದಿಗೆ ಅಡಿಪಾಯ ಹಾಕಿದ್ದರು. ನಿಕೋಲಸ್ ಪೂರನ್ ಅಜೇಯ 23* ರನ್ ಗಳಿಸಿ ಗೆಲುವಿಗೆ ಕಾರಣರಾದರು.

VISTARANEWS.COM


on

IPL 2024
Koo

ಲಖನೌ: ಬಿಸಿಸಿಐನ ಕೆಲವು ನಿಯಮಗಳು ಐಪಿಎಲ್​ ಪಂದ್ಯವನ್ನು ನಿಗದಿತ ಸಮಯದಲ್ಲಿ ಮುಗಿಸಲು ಪ್ರೇರಣೆ ನೀಡುತ್ತದೆ. ಆದರೆ, ಪಂದ್ಯದ ಪರಿಸ್ಥಿತಿಯ ಕಾರಣಕ್ಕೆ ನಾಯಕರಿಗೆ ತಮ್ಮ ಪಾಲಿನ ಓವರ್​ಗಳನ್ನು ನಿಗದಿತ ಸಮಯದಲ್ಲಿ ಮುಗಿಸಲು ಸಾಧ್ಯವಾಗುತ್ತಿಲ್ಲ. ಅಂಥವರಿಗೆ ದಂಡ ಶಿಕ್ಷೆ ನೀಡುತ್ತಿದೆ ಬಿಸಿಸಿಐ. ಅಂತೆಯೇ ಇಂಡಿಯನ್ ಪ್ರೀಮಿಯರ್ ಲೀಗ್ 2024 ರ (IPL 2024) 34 ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​ಕೆ ) ನಡುವಿನ ಮುಖಾಮುಖಿಯಲ್ಲೂ ಇದೇ ನಡೆದಿದೆ. ಕನಿಷ್ಠ ಓವರ್ ರೇಟ್​ಗೆ ಸಂಬಂಧಿಸಿದ ಐಪಿಎಲ್​​ನ ನಿಯಮ ಉಲ್ಲಂಘಿಸಿದ್ದಕ್ಕಾಗಿ ಕೆಎಲ್ ರಾಹುಲ್ (ಲಕ್ನೊ ಸೂಪರ್​ ಜೈಂಟ್ಸ್ ನಾಯಕ) ಮತ್ತು ಋತುರಾಜ್ ಗಾಯಕ್ವಾಡ್ (ಚೆನ್ನೈ ಸೂಪರ್ ಕಿಂಗ್ಸ್​ ನಾಯಕ ) ಇಬ್ಬರಿಗೂ ಬಿಸಿಸಿಐ ದಂಡ ವಿಧಿಸಿದೆ.

ಸಿಎಸ್​ಕೆ ಗಳಿಸಿದ 176 ರನ್​ಗಳ ಗುರಿ ಬೆನ್ನಟ್ಟಿದ ಎಲ್ಎಸ್​ಜಿ 8 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿದೆ. ಆರಂಭಿಕ ಆಟಗಾರರಾದ ಕ್ವಿಂಟನ್ ಡಿ ಕಾಕ್ (54) ಮತ್ತು ಕೆಎಲ್ ರಾಹುಲ್ (82) ಉತ್ತಮ ಜೊತೆಯಾಟದೊಂದಿಗೆ ಅಡಿಪಾಯ ಹಾಕಿದ್ದರು. ನಿಕೋಲಸ್ ಪೂರನ್ ಅಜೇಯ 23* ರನ್ ಗಳಿಸಿ ಗೆಲುವಿಗೆ ಕಾರಣರಾದರು.

ಎಲ್ಎಸ್​ಜಿ ಪಂದ್ಯದ ಮೇಲೆ ಪ್ರಾಬಲ್ಯ ಸಾಧಿಸಿದರೂ, ಅವರ ಓವರ್ ರೇಟ್ ಐಪಿಎಲ್​ನ ಸಮಯದ ಮಿತಿಗಿಂತ ಕಡಿಮೆಯಾಗಿತ್ತು. ಅದರ ಪರಿಣಾಮವಾಗಿ, ನಾಯಕ ಕೆಎಲ್ ರಾಹುಲ್​ಗೆ 12 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ. ಇದು ನೀತಿ ಸಂಹಿತೆಯ ಅಡಿಯಲ್ಲಿ ಹಾಲಿ ಆವೃತ್ತಿಯಲ್ಲಿ ರಾಹುಲ್​ಗೆ ಮೊದಲ ದಂಡ.

ಸಿಎಸ್​ಕೆ ಕೂಡ ತಮ್ಮ ಬ್ಯಾಟಿಂಗ್ ಇನ್ನಿಂಗ್ಸ್​ನಲ್ಲಿ ಅಗತ್ಯ ಓವರ್ ರೇಟ್ ಕಾಯ್ದುಕೊಂಡಿದೆ. ನಾಯಕ ಋತುರಾಜ್ ಗಾಯಕ್ವಾಗೂ ಅದೇ (12 ಲಕ್ಷ ರೂ.) ದಂಡ ವಿಧಿಸಲಾಗಿದೆ ಏಕೆಂದರೆ ಇದು ಸಿಎಸ್​ಕೆ ಮೊದಲ ಅಪರಾಧವಾಗಿದೆ.

ಐಪಿಎಲ್ 2024ರಲ್ಲಿ ವೇಗ ಕಾಯ್ದುಕೊಳ್ಳುವುದು

ಬಿಸಿಸಿಐನ ನೀತಿ ಸಂಹಿತೆಯು ಪಂದ್ಯದುದ್ದಕ್ಕೂ ವೇಗ ಆಟಕ್ಕೆ ಒತ್ತು ನೀಡುತ್ತದೆ. ನಿಧಾನಗತಿಯ ಓವರ್ ರೇಟ್ ಆಟದ ಖುಷಿಗೆ ಅಡ್ಡಿಪಡಿಸುತ್ತದೆ. ಅದೇ ರೀತಿ ಎರಡನೇ ಬ್ಯಾಟಿಂಗ್ ಮಾಡುವ ತಂಡಕ್ಕೆ ಅನಾನುಕೂಲತೆಯನ್ನುಂಟು ಮಾಡುತ್ತದೆ. ಈ ದಂಡಗಳು ತಮ್ಮ ತಂಡಗಳು ನಿಗದಿತ ಓವರ್ ರೇಟ್ಗೆ ಬದ್ಧವಾಗಿರುವುದನ್ನು ಖಚಿತಪಡಿಸುತ್ತದೆ.

ಇದನ್ನೂ ಓದಿ: MS Dhoni : ಸಿಎಸ್​ಕೆ ವಾರ್ಷಿಕೋತ್ಸವದಂದೇ 101 ಮೀಟರ್ ಸಿಕ್ಸರ್ ಬಾರಿಸಿದ ಧೋನಿ!

ಐಪಿಎಲ್ ತನ್ನ ರೋಮಾಂಚಕಾರಿ ಫಲಿತಾಂಶಗಳೊಂದಿಗೆ ಮುಂದುವರಿದಿದೆ. ಎಲ್ಎಸ್​ಜಿ ಮತ್ತು ಸಿಎಸ್ಕೆ ಎರಡೂ ಈ ಹಿನ್ನಡೆಯಿಂದ ಪುಟಿದೇಳಲು ಎದುರು ನೋಡುತ್ತಿವೆ. ಆದಾಗ್ಯೂ, ಹೆಚ್ಚಿನ ದಂಡಗಳನ್ನು ತಪ್ಪಿಸಲು ಇಬ್ಬರೂ ನಾಯಕರು ಮುಂದಿನ ಪಂದ್ಯಗಳಲ್ಲಿ ವೇಗವನ್ನು ಕಾಪಾಡಿಕೊಳ್ಳುವ ಬಗ್ಗೆಯೂ ಗಮನ ಹರಿಸಬೇಕಾಗಿದೆ.

Continue Reading
Advertisement
KKR vs RCB
ಕ್ರಿಕೆಟ್10 mins ago

KKR vs RCB: ತವರಿನ ಸೋಲಿಗೆ ಸೇಡು ತೀರಿಸೀತೇ ಆರ್​ಸಿಬಿ?

Surabhi Jain
ಪ್ರಮುಖ ಸುದ್ದಿ34 mins ago

Surabhi Jain : 30 ವರ್ಷಕ್ಕೆ ಮೃತಪಟ್ಟ ಫ್ಯಾಷನ್ ಐಕಾನ್​ ಸುರಭಿ ಜೈನ್

RCB vs KKR
ಕ್ರೀಡೆ1 hour ago

RCB vS KKR: ಗ್ರೀನ್​ ಜೆರ್ಸಿಯಲ್ಲಿ ಆರ್​ಸಿಬಿ ಅದೃಷ್ಟ ಹೇಗಿದೆ; ಎಷ್ಟು ಗೆಲುವು ಎಷ್ಟು ಸೋಲು?

Modi in Karnataka Here live video of Modi rally in Chikkaballapur
Lok Sabha Election 20241 hour ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Modi in Karnataka today Cm Siddaramaiah asks 11 questions to PM Modi
Lok Sabha Election 20241 hour ago

Modi in Karnataka: ಇಂದು ಕರ್ನಾಟಕಕ್ಕೆ ಮೋದಿ; ಪ್ರಧಾನಿಗೆ 11 ಪ್ರಶ್ನೆ ಕೇಳಿದ ಸಿಎಂ ಸಿದ್ದರಾಮಯ್ಯ

Uttarakaanda Movie bande kaaka rangayana Raghu
ಸ್ಯಾಂಡಲ್ ವುಡ್2 hours ago

Uttarakaanda Movie: ‘ಬಂಡೆ ಕಾಕಾ’ ನಾಗಿ ‘ಉತ್ತರಕಾಂಡ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಂಗಾಯಣ ರಘು

India Economy
ಪ್ರಮುಖ ಸುದ್ದಿ2 hours ago

Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

ರಾಜಕೀಯ2 hours ago

Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

Road Accident in karnataka
ಕೊಡಗು2 hours ago

Road Accident : ಯಮ ರೂಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್‌ ಸವಾರ ಸಾವು, ಬಾಲಕ ಗಂಭೀರ

Gut Health
ಲೈಫ್‌ಸ್ಟೈಲ್2 hours ago

Gut Health: ನಿಮ್ಮ ಕರುಳಿನ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ಈ ಡ್ರಿಂಕ್ಸ್ ಸೇವಿಸಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Here live video of Modi rally in Chikkaballapur
Lok Sabha Election 20241 hour ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ3 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ4 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ24 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

ಟ್ರೆಂಡಿಂಗ್‌