Meg Lanning: ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಲ್ಯಾನಿಂಗ್; ಆರ್​ಸಿಬಿ ಆಟಗಾರ್ತಿಯ ದಾಖಲೆ ಪತನ​ - Vistara News

ಕ್ರೀಡೆ

Meg Lanning: ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಲ್ಯಾನಿಂಗ್; ಆರ್​ಸಿಬಿ ಆಟಗಾರ್ತಿಯ ದಾಖಲೆ ಪತನ​

ಟಿ20 ಮಾದರಿಯಲ್ಲಿ ಅತ್ಯಂತ ವೇಗವಾಗಿ 9000 ರನ್ ಗಳಿಸಿದ ಮಹಿಳಾ ಆಟಗಾರ್ತಿ ಎಂಬ ಹಿರಿಮೆಗೆ ಮೆಗ್ ಲ್ಯಾನಿಂಗ್ ಪಾತ್ರರಾಗಿದ್ದಾರೆ.

VISTARANEWS.COM


on

Meg Lanning
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಸ್ಟ್ರೇಲಿಯಾದ ಮಾಜಿ ಆಟಗಾರ್ತಿ, ಪ್ರಸ್ತುತ ಡೆಲ್ಲಿ ತಂಡದ ನಾಯಕಿಯಾಗಿರುವ ಮೆಗ್ ಲ್ಯಾನಿಂಗ್ (Meg Lanning) ಅವರು ಟಿ20 ಕ್ರಿಕೆಟ್​ನಲ್ಲಿ ನೂತನ ದಾಖಲೆಯೊಂದನ್ನು ಬರೆದಿದ್ದಾರೆ. ಟಿ20 ಮಾದರಿಯಲ್ಲಿ ಅತ್ಯಂತ ವೇಗವಾಗಿ 9000 ರನ್ ಗಳಿಸಿದ ಮಹಿಳಾ ಆಟಗಾರ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್​ನ(WPL 2024) ಗುಜರಾತ್ ಜೈಂಟ್ಸ್ ಅರ್ಧಶತಕ ಬಾರಿಸುವ ಮೂಲಕ ಈ ವಿಶೇಷ ಸಾಧನೆ ತಮ್ಮದಾಗಿಸಿಕೊಂಡರು.

ಗುಜರಾತ್​ ವಿರುದ್ಧ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯುಪಿಎಲ್​ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್​ ನಡೆಸಿದ ಮೆಗ್​ ಲ್ಯಾನಿಂಗ್​ 41 ಎಸೆತ ಎದುರಿಸಿ 6 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 55 ರನ್​ ಬಾರಿಸಿದರು. ಇದೇ ವೇಳೆ ಅವರು ಟಿ20ಯಲ್ಲಿ ಅತಿ ಕಡಿಮೆ ಇನಿಂಗ್ಸ್​ ಆಡಿ 9 ಸಾವಿರ ರನ್​ಗಳಿಸಿದ ಆಟಗಾರ್ತಿಯಾಗಿ ಎನಿಸಿಕೊಳ್ಳುವ ಮೂಲಕ ಆರ್​ಸಿಬಿಯ ಆಟಗಾರ್ತಿ, ನ್ಯೂಜಿಲ್ಯಾಂಡ್​ನ ಸೋಫಿ ಡಿವೈನ್​ ದಾಖಲೆಯನ್ನು ಮುರಿದರು.

ಸೋಫಿ ಡಿವೈನ್ ಅವರು 297 ಇನಿಂಗ್ಸ್​ಗಳಿಂದ 9 ಸಾವಿರ ರನ್​ ಬಾರಿಸಿ ಇದುವರೆಗೆ ಅಗ್ರಸ್ಥಾನದಲ್ಲಿದ್ದರು. ಆದರೆ, ಈಗ ಅಗ್ರಸ್ಥಾನ ಮೆಗ್​ ಲ್ಯಾನಿಂಗ್ ಪಾಲಾಗಿದೆ. ಲ್ಯಾನಿಂಗ್​ 289 ಇನಿಂಗ್ಸ್​ನಲ್ಲಿ ಈ ಮೈಲಿಗಲ್ಲು ತಲುಪಿದ್ದಾರೆ. ಈ ಸಾಧಕಿಯರ ಪಟ್ಟಿಯಲ್ಲಿ ಆಸ್ಟ್ರೇಲಿಯಾದವರೇ ಆದ ಬೆತ್​ ಮೂನಿಗೆ ಮೂರನೇ ಸ್ಥಾನ. ಮೂನಿ 299 ಇನಿಂಗ್ಸ್​ನಲ್ಲಿ ಈ ದಾಖಲೆ ಬರೆದಿದ್ದರು.

ಇದನ್ನೂ ಓದಿ T20 World Cup : ಟಿ20 ವಿಶ್ವ ಕಪ್​ನಲ್ಲಿ ಭಾರತಕ್ಕೆ ಎಷ್ಟು ಪಂದ್ಯಗಳಿವೆ?

ಅತಿ ವೇಗವಾಗಿ 9 ಸಾವಿರ ಟಿ20 ರನ್​ ಗಳಿಸಿದ ಆಟಗಾರ್ತಿಯರು


1. ಮೆಗ್​ ಲ್ಯಾನಿಂಗ್​-289 ಇನಿಂಗ್ಸ್​.

2. ಸೋಫಿ ಡಿವೈನ್​-297 ಇನಿಂಗ್ಸ್​.

3. ಬೆತ್​ ಮೂನಿ-299 ಇನಿಂಗ್ಸ್​.

4. ಸುಜಿ ಬೇಟ್ಸ್-323 ಇನಿಂಗ್ಸ್​.

5 ವಿಶ್ವಕಪ್‌ ವಿಜೇತ ಆಸ್ಟ್ರೇಲಿಯಾ ತಂಡದ ನಾಯಕಿ ಹಾಗೂ ಸ್ಟಾರ್‌ ಆಟಗಾರ್ತಿಯಾಗಿದ್ದ ಮೆಗ್‌ ಲ್ಯಾನಿಂಗ್‌ ಅವರು ಕಳೆದ ವರ್ಷ ನವೆಂಬರ್​ನಲ್ಲಿ ದಿಢೀರ್ ಆಗಿ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದರು. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್​ ವೃತ್ತಿ ಬದುಕಿಗೆ ತೆರೆ ಎಳೆದಿದ್ದರು. 31 ವರ್ಷದ ಮೆಗ್​ ಲ್ಯಾನಿಂಗ್​ ಅವರು ಬಿಡುವಿಲ್ಲದಷ್ಟು ಕ್ರಿಕೆಟ್‌ ಪಂದ್ಯಗಳನ್ನು ಆಡುತ್ತ ಬಂದಿರುವ ಕಾರಣ ಮಾನಸಿಕವಾಗಿ ಕುಸಿದಿದ್ದೇನೆ ಎಂದು ಹೇಳುವ ಮೂಲಕ ನಿವೃತ್ತಿ ಹೇಳಿಒದ್ದರು. ಸದ್ಯ ಲೀಗ್​ ಕ್ರಿಕೆಟ್​ನಲ್ಲಿ ಮಾತ್ರ ಅವರು ತಮ್ಮ ಆಡ ಮುಂದುವರಿಸಿದ್ದಾರೆ. ಲ್ಯಾನಿಂಗ್​ ಆರು ಟೆಸ್ಟ್​ ಪಂದ್ಯಗಳು, 103 ಏಕದಿನ ಪಂದ್ಯಗಳು ಹಾಗೂ 132 ಟಿ20 ಪಂದ್ಯಗಳಲ್ಲಿ ಪಾಲ್ಗೊಂಡಿದ್ದಾರೆ. 17 ಶತಕಗಳು ಸೇರಿದಂತೆ ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 8000 ರನ್​ ಬಾರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IND vs PAK T20 Match: 10 ಸೆಕೆಂಡ್‌ ಜಾಹೀರಾತಿಗೆ ಕನಿಷ್ಠ 50 ಲಕ್ಷ ನಿಗದಿ!

IND vs PAK T20 Match: ವರದಿಗಳ ಪ್ರಕಾರ ಈ ವಿಶ್ವಕಪ್‌ನ ಸಾಮಾನ್ಯ ಪಂದ್ಯಗಳ ಜಾಹೀರಾತು ಶುಲ್ಕ 10 ಸೆಕೆಂಡ್‌ಗೆ 6 ಲಕ್ಷ ಇದ್ದು, ಇನ್ನುಳಿದ ಪ್ರಮುಖ ಪಂದ್ಯಗಳಿಗೆ 12ರಿಂದ 15 ಲಕ್ಷದ ವರೆಗೆ ಶುಲ್ಕ ನಿಗದಿಪಡಿಸಲಾಗಿದೆ. ಭಾರತ ನಾಕೌಟ್‌ ಹಂತಕ್ಕೇರಿದರೆ, ಆ ಪಂದ್ಯಗಳ ಜಾಹೀರಾತಿಗೆ ಕನಿಷ್ಠ 26 ಲಕ್ಷ ನಿಗದಿಯಾಗಬಹುದು ಎನ್ನಲಾಗಿದೆ.

VISTARANEWS.COM


on

IND vs PAK T20 Match
Koo

ಮುಂಬಯಿ: ಭಾರತ-ಪಾಕ್‌(IND vs PAK T20 Match) ನಡುವೆ ಪಂದ್ಯ ನಡೆದರೆ, ಜಾಹೀರಾತು ಕಂಪನಿಗಳಿಂದ ಬಿಸಿಸಿಐ, ಪಿಸಿಬಿ ಮತ್ತು ಐಸಿಸಿಗಳಿಗೆ ಹಣ ಹೊಳೆಯೇ ಹರಿದುಹೋಗುತ್ತದೆ. ಎರಡೂ ದೇಶಗಳ ನಡುವೆ ಎಂದಿಗೂ ಮುಗಿಯದಂತೆ ಕಾಣುತ್ತಿರುವ ದ್ವೇಷಗಳ ಜತೆಗೆ ಹಣಕಾಸಿನ ಲೆಕ್ಕಾಚಾರವೂ ಅಲ್ಲಿರುತ್ತವೆ. ಇದೀಗ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಉಭಯ ತಂಡಗಳ ಪಂದ್ಯದ ವೇಳೆ ಪ್ರಸಾರಗೊಳ್ಳುವ 10 ಸೆಕೆಂಡ್‌ಗಳ ಜಾಹೀರಾತಿಗೆ ಕನಿಷ್ಠ 50 ಲಕ್ಷ ನಿಗದಿಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಭಾರತ ಮತ್ತು ಪಾಕ್​ ಪಂದ್ಯ ಜೂನ್​ 9ರಂದು ನಡೆಯಲಿದೆ.

ವರದಿಗಳ ಪ್ರಕಾರ ಈ ವಿಶ್ವಕಪ್‌ನ ಸಾಮಾನ್ಯ ಪಂದ್ಯಗಳ ಜಾಹೀರಾತು ಶುಲ್ಕ 10 ಸೆಕೆಂಡ್‌ಗೆ 6 ಲಕ್ಷ ಇದ್ದು, ಇನ್ನುಳಿದ ಪ್ರಮುಖ ಪಂದ್ಯಗಳಿಗೆ 12ರಿಂದ 15 ಲಕ್ಷದ ವರೆಗೆ ಶುಲ್ಕ ನಿಗದಿಪಡಿಸಲಾಗಿದೆ. ಭಾರತ ನಾಕೌಟ್‌ ಹಂತಕ್ಕೇರಿದರೆ, ಆ ಪಂದ್ಯಗಳ ಜಾಹೀರಾತಿಗೆ ಕನಿಷ್ಠ 26 ಲಕ್ಷ ನಿಗದಿಯಾಗಬಹುದು ಎನ್ನಲಾಗಿದೆ. ವೆಸ್ಟ್​ ಇಂಡೀಸ್​ ಮತ್ತು ಅಮೆರಿಕದಲ್ಲಿ ಪಂದ್ಯಗಳು ಹಗಲು ಮತ್ತು ಬೆಳಗಿನ ಜಾವ ನಡೆಯುವ ಕಾರಣ ಹೆಚ್ಚಿನ ಸಂಖ್ಯೆಯ ಪ್ರೇಕ್ಷರು ಬರುತ್ತಿಲ್ಲ. ಈ ನಷ್ಟವನ್ನೆಲ್ಲ ಆಯೋಜಕರು ಭಾರತ-ಪಾಕ್‌ ಪಂದ್ಯದ ಮೂಲಕ ಭರಿಸುವ ಯೋಜನೆಯಲ್ಲಿದ್ದಾರೆ.

ಪಂದ್ಯ ನೋಡಲು ಅಭಿಮಾನಿಗಳ ನಿರಾಸಕ್ತಿ


ಭಾರತ-ಪಾಕ್​ ಹೈವೋಲ್ಟೇಜ್ ಪಂದ್ಯಕ್ಕೆ ಈ ಬಾರಿ ಪ್ರೇಕ್ಷಕರು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ವಿಚಾರ ಕೂಡ ಹೊರಬಿದ್ದಿದೆ. ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಇನ್ನೂ ಮಾರಾಟವಾಗಿಲ್ಲ. ಈ ಪಂದ್ಯದ ಟಿಕೆಟ್‌ಗಳು ಇನ್ನೂ ಐಸಿಸಿ ವೆಬ್​ಸೈಟ್​ನಲ್ಲಿ ಲಭ್ಯವಿದೆ. ಇದು ಹಲವರಲ್ಲಿ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

ಭಾರತ ಮತ್ತು ಪಾಕ್​ ಪಂದ್ಯದ ಟಿಕೆಟ್​ ಸಿಗುವುದೇ ಒಂದು ಅದೃಷ್ಟ. ಮ್ಯಾಚ್​ನ ಟಿಕೆಟ್​ಗಳು ಘೋಷಣೆಯಾದ ಕ್ಷಣಾರ್ಧದಲ್ಲೇ ಮಾರಾಟವಾಗುತ್ತಿದ್ದವು. ಆದರೆ ಈ ಬಾರಿ ಯಾರಿಗೂ ಕೂಡ ಟಿಕೆಟ್​ ಕೊಳ್ಳಲು ಆಸಕ್ತಿಯೇ ಇಲ್ಲದಂತಾಗಿದೆ. ಇದಕ್ಕೆ ಕಾರಣ ಟಿಕೆಟ್​ ಬೆಲೆ ದುಬಾರಿಯಾಗಿರುವುದು. ಈ ಪಂದ್ಯಕ್ಕಾಗಿ ಐಸಿಸಿ ಮೂರು ಪ್ಯಾಕೇಜ್‌ಗಳಲ್ಲಿ ಟಿಕೆಟ್‌ಗಳನ್ನು ಇರಿಸಿದೆ. ಇದರಲ್ಲಿ ಡೈಮಂಡ್ ಕ್ಲಬ್, ಪ್ರೀಮಿಯಂ ಕ್ಲಬ್ ಲಾಂಜ್​​ ಮತ್ತು ಕಾರ್ನರ್ ಕ್ಲಬ್​​ಗಳನ್ನು ಒಳಗೊಂಡಿವೆ. ಡೈಮಂಡ್ ಕ್ಲಬ್ ಟಿಕೆಟ್ ಬೆಲೆ 8.34 ಲಕ್ಷ ರೂ. ಈ ಟಿಕೆಟ್​ ಖರೀದಿಸುವ ಅಭಿಮಾನಿಗಳಿಗೆ ಅತ್ಯುತ್ತಮ ಸೌಲಭ್ಯಗಳು ಸಿಗುತ್ತವೆ. ಪ್ರೀಮಿಯಂ ಕ್ಲಬ್ ಲಾಂಜ್​ ಟಿಕೆಟ್ ಬೆಲೆ 2 ಲಕ್ಷ ರೂ, ಮತ್ತು ಕಾರ್ನರ್ ಕ್ಲಬ್ ಟಿಕೆಟ್ ಬೆಲೆ 2.29 ಲಕ್ಷ ರೂ. ಆಗಿದೆ. ಇದಲ್ಲದೆ ಪಂದ್ಯಕ್ಕೆ ಉಗ್ರರು ಬಾಂಬ್​ ಬೆದರಿಕೆ ಹಾಕಿದ್ದು ಕೂಡ ಅಭಿಮಾನಿಗಳ ಹಿಂದೇಟಿಗೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. 

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

Continue Reading

ಕ್ರೀಡೆ

Virat Kohli: ‘ಕೊಹ್ಲಿ ಕೊ ಬೌಲಿಂಗ್​ ದೋ’ ನ್ಯೂಯಾರ್ಕ್​ ಸ್ಟೇಡಿಯಂನಲ್ಲಿ ಮೊಳಗಿದ ಅಭಿಮಾನಿಗಳ ಕೂಗು

Virat Kohli: ಅಭಿಮಾನಿಗಳು ವಿರಾಟ್​ ಅವರಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಲು ಒಂದು ಕಾರಣವಿದೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್​ ನಡೆಸಿ ವಿಕೆಟ್​ ಕಿತ್ತು ಮಿಂಚಿದ್ದರು. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ​ನಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರನ್ನು ಔಟ್ ಮಾಡಿದ್ದರು.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ಟೀಮ್​ ಇಂಡಿಯಾದ(Team India) ಘಾತಕ ಬೌಲಿಂಗ್​ ದಾಳಿಗೆ ನೆಲಕಚ್ಚಿದ ಐರ್ಲೆಂಡ್(India vs Ireland)​, ಕೇವಲ 96 ರನ್​ಗೆ ಸರ್ವಪತನ ಕಂಡು ಹೀನಾಯ ಸೋಲು ಕಂಡಿತ್ತು. ಇದೇ ಪಂದ್ಯದಲ್ಲಿ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ(virat kohli) ಅವರಿಗೆ ಬೌಲಿಂಗ್​ ನೀಡುವಂತೆ ಪ್ರೇಕ್ಷಕರು ವಿಶೇಷವಾಗಿ ಮನವಿ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್(viral video) ಆಗಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಐರ್ಲೆಂಡ್​ ತಂಡದ ಬ್ಯಾಟರ್​ಗಳು ಭಾರತೀಯ ಬೌಲರ್​ಗಳ ಬಿಗಿ ದಾಳಿಗೆ ಸತತವಾಗಿ ವಿಕೆಟ್​ ಕಳೆದುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಭಾರತೀಯ ಅಭಿಮಾನಿಗಳು ಗ್ಯಾಲರಿಯಿಂದ ಜೋರಾಗಿ ಹಿಂದಿಯಲ್ಲಿ “ಕೊಹ್ಲಿ ಕೊ ಬೌಲಿಂಗ್​ ದೋ….ಕೊಹ್ಲಿ ಕೊ ಬೌಲಿಂಗ್​ ದೋ” ಎಂದು ಕೊಹ್ಲಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಿದ್ದಾರೆ. ಇದರ ವಿಡಿಯೊ ವೈರಲ್​ ಆಗಿದೆ.

ಅಭಿಮಾನಿಗಳು ವಿರಾಟ್​ ಅವರಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಲು ಒಂದು ಕಾರಣವಿದೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್​ ನಡೆಸಿ ವಿಕೆಟ್​ ಕಿತ್ತು ಮಿಂಚಿದ್ದರು. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ​ನಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರನ್ನು ಔಟ್ ಮಾಡಿದ್ದರು. ಇದು 9 ವರ್ಷಗಳ ನಂತರ ಕೊಹ್ಲಿಗೆ ಲಭಿಸಿದ ವಿಕೆಟ್ ಆಗಿತ್ತು.

ಇದನ್ನೂ ಓದಿ Rohit Sharma: ಹಲವು ದಾಖಲೆಗಳ ಸರದಾರನಾದ ಹಿಟ್​ಮ್ಯಾನ್​ ರೋಹಿತ್​

ವಿರಾಟ್​ ಕೊಹ್ಲಿ ಕೂಡ ಬೌಲಿಂಗ್​ ಅನುಭವವನ್ನು ಹೊಂದಿದ್ದಾರೆ. 2015ರ ವಿಶ್ವಕಪ್​ನಲ್ಲಿ ಆಸೀಸ್​ ವಿರುದ್ಧ ಮತ್ತು ಇದಕ್ಕೂ ಮುನ್ನ 2011ರಲ್ಲಿ ನಡೆದಿದ್ದ ವಿಶ್ವಕಪ್ ಫೈನಲ್​ ಪಂದ್ಯದಲ್ಲಿ ಬೌಲಿಂಗ್​ ನಡೆಸಿದ್ದರು. ಇಲ್ಲಿ ತಲಾ ಓವರ್ ಬೌಲಿಂಗ್​ ನಡೆಸಿ ವಿಕೆಟ್​ ಪಡೆಯದಿದ್ದರೂ ಉತ್ತಮ ರನ್​ ಕಂಟ್ರೋಲ್​ ಮಾಡಿದ್ದರು. ಏಕದಿನದಲ್ಲಿ ಕೊಹ್ಲಿ 5 ವಿಕೆಟ್​, ಟಿ20 ಮತ್ತು ಐಪಿಎಲ್​ನಲ್ಲಿಯೂ ತಲಾ 4 ವಿಕಟ್​ ಪಡೆದ ಸಾಧನೆ ಮಾಡಿದ್ದಾರೆ. ಹೀಗಾಗಿ ಕೊಹ್ಲಿಗೆ ಬೌಲಿಂಗ್​ ನೀಡುವಂತೆ ಅಭಿಮಾನಿಗಳು ಆಗ್ರಹಿಸಿದ್ದಾರೆ. ಕಳೆದ ವರ್ಷ ಏಕದಿನ ವಿಶ್ವಕಪ್​ನಲ್ಲಿಯೂ ಅಭಿಮಾನಿಗಳು ಕೊಹ್ಲಿಗೆ ಬೌಲಿಂಗ್ ನೀಡುವಂತೆ ಆಗ್ರಹಿಸಿದ್ದರು.

ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಆರಂಭಿನಾಗಿ ಕಣಕ್ಕಿಳಿದ ಕೊಹ್ಲಿ ಕೇವಲ 1 ರನ್​ ಗಳಿಸಿ ವಿಫಲರಾದರು. ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ನಡೆಸಿ ಟೂರ್ನಿಯಲ್ಲೇ ಅತ್ಯಧಿಕ ರನ್​ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದರು. ಭಾರತ ಮುಂದಿನ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಕೊಹ್ಲಿಯ ಮೇಲೆ ಹೆಚ್ಚಿನ ಭರವಸೆ ಇರಿಸಲಾಗಿದೆ. ಕೊಹ್ಲಿ ಪಾಕಿಸ್ತಾನ ವಿರುದ್ಧ ಇದುವರೆಗೂ ಉತ್ತಮ ಪ್ರದರ್ಶನ ತೋರಿದ್ದಾರೆ. 2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ ಏಕಾಂಗಿಯಾಗಿ ಹೋರಾಡಿ ಪಾಕ್​ಗೆ ಸೋಲುಣಿಸಿದ್ದರು.

Continue Reading

ಕ್ರೀಡೆ

David Warner: ಕ್ರಿಸ್​ ಗೇಲ್​ ದಾಖಲೆ ಮುರಿದ ಡೇವಿಡ್​ ವಾರ್ನರ್​

David Warner: ಈಗಾಗಲೇ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ವಾರ್ನರ್​ ಟಿ20 ವಿಶ್ವಕಪ್​ ಬಳಿಕ ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಲಿದ್ದಾರೆ.

VISTARANEWS.COM


on

David Warner
Koo

ಬಾರ್ಬಡೋಸ್‌: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್​ ವಾರ್ನರ್​(David Warner) ಅವರು ಇಂದು(ಗುರವಾರ) ನಡೆದ ಒಮಾನ್​ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ(T20 World Cup 2024) ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಕ್ರಿಸ್​ ಗೇಲ್(Chris Gayle)​ ದಾಲೆಯನ್ನು ಮುರಿದಿದ್ದಾರೆ.

ಒಮಾನ್​ ವಿರುದ್ಧ ವಾರ್ನರ್​ 51 ಎಸೆತ ಎದುರಿಸಿ 6 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 56 ರನ್​ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇದೇ ವೇಳೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಆಟಗಾರನಾಗಿ ಹೊರಹೊಮ್ಮಿದರು. ಇದು ವಾರ್ನರ್​ ಅವರ 111ನೇ ಟಿ20 ಅರ್ಧಶತಕ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್​ ಇಂಡೀಸ್​ ತಂಡದ ಮಾಜಿ ಆಟಗಾರ ಕ್ರಿಸ್​ ಗೇಲ್​ ಗೆಸರಿನಲ್ಲಿತ್ತು. ಗೇಲ್​ 110 ಅರ್ಧಶತಕ ಬಾರಿಸಿದ್ದಾರೆ.

ಈಗಾಗಲೇ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ವಾರ್ನರ್​ ಟಿ20 ವಿಶ್ವಕಪ್​ ಬಳಿಕ ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಲಿದ್ದಾರೆ. ಇದೇ ವರ್ಷ ನಡೆದಿದ್ದ ಐಪಿಎಲ್​ನಲ್ಲಿ ನಿರೀಕ್ಷಿತ ಪ್ರದರ್ಶನ ಮತ್ತು ಸರಿಯಾಗಿ ಆಡುವ ಅವಕಾಶ ಸಿಗದ ವಾರ್ನರ್​ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಅಮೋಘ ಬ್ಯಾಟಿಂಗ್​ ನಡೆಸಿ ಗಮನಸೆಳೆದರು.

ಇದನ್ನೂ ಓದಿ David Warner : ಬಾಹುಬಲಿ ರಾಜಮೌಳಿ ನಿರ್ದೇಶನದಲ್ಲಿ ಕ್ರಿಕೆಟಿಗ ಡೇವಿಡ್​ ವಾರ್ನರ್ ಆ್ಯಕ್ಟಿಂಗ್​; ಇಲ್ಲಿದೆ ವಿಡಿಯೊ

ಡ್ರೆಸ್ಸಿಂಗ್​ ರೂಮ್​ ಮರೆತ ವಾರ್ನರ್​


ಇದೇ ಪಂದ್ಯದಲ್ಲಿ ವಾರ್ನರ್​ ಅವರು ಔಟ್​ ಆಗಿ ತಮ್ಮ ತಂಡದ ಡ್ರೆಸ್ಸಿಂಗ್​ ರೋಮ್​ಗೆ ತೆರಳುವ ಬದಲು ಎದುರಾಳಿ ಒಮಾನ್ ತಂಡದ ಡ್ರೆಸ್ಸಿಂಗ್​ ರೂಮ್​ಗೆ ತೆರಳಿದ ಪ್ರಸಂಗವೂ ನಡೆಯಿತು. ಮೆಟ್ಟಿಲೇರುತ್ತಾ ಒಮಾನ್​ ಡ್ರೆಸ್ಸಿಂಗ್​ ಕೋಣೆಗೆ ತೆರಳುತ್ತಿದ್ದ ವಾರ್ನರ್​ ಅವರನ್ನು ತಮ್ಮ ತಂಡದ ಸಹ ಆಟಗಾರರು ಜೋರಾಗಿ ಕರೆದು ಅದು ನಮ್ಮ ಕೊಠಡಿಯಲ್ಲ ಎಂದು ಹೇಳಿದ್ದಾರೆ. ಬಳಿಕ ವಾರ್ನರ್​ ತಂಡದ ಡ್ರೆಸ್ಸಿಂಗ್​ ರೂಮ್​ಗೆ ತೆರಳಿದರು. ಇದರ ವಿಡಿಯೊ ವೈರಲ್​ ಆಗಿದೆ.

ಪಂದ್ಯ ಗೆದ್ದ ಆಸ್ಟ್ರೇಲಿಯಾ


ಮಾಜಿ ಚಾಂಪಿಯನ್​ ಆಸ್ಟ್ರೇಲಿಯಾ ತಂಡ ಒಮಾನ್​ ವಿರುದ್ಧ 39 ರನ್​ಗಳ ಪ್ರಯಾಸದ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 164 ರನ್​ ಬಾರಿಸಿತು. ಆಸೀಸ್​ ತಂಡದ ಸಾಮರ್ಥ್ಯಕ್ಕೆ ಇದು ಕನಿಷ್ಠ ಮೊತ್ತ. ಜವಾಬಿತ್ತ ಒಮಾನ್​ ಉತ್ತಮ ಪೈಪೋಟಿ ನೀಡಿ 9 ವಿಕೆಟ್​ಗೆ 125 ರನ್​ ಗಳಿಸಿ ಸಣ್ಣ ಅಂತರದ ಸೋಲು ಕಂಡಿತು.

ಒಮಾನ್​ ಉತ್ತಮ ಬೌಲಿಂಗ್​ ದಾಳಿ ನಡೆಸಿದರೂ ಕೂಡ ಬ್ಯಾಟಿಂಗ್​ನಲ್ಲಿ ವಿಫಲವಾಯಿತು. ಸೋಲು ಕಂಡರೂ ಕೂಡ ಬಲಿಷ್ಠ ಆಸ್ಟ್ರೇಲಿಯಾದಂತಹ ತಂಡಕ್ಕೆ ತೀವ್ರ ಪೈಪೋಟಿ ನೀಡಿದನ್ನು ಮಾತ್ರ ಮೆಚ್ಚಲೇ ಬೇಕು. ಒಮಾನ್​ ಪರ ಮೆಹ್ರಾನ್ ಖಾನ್ 2 ವಿಕೆಟ್​ ಕಿತ್ತರು. ಆಸೀಸ್​ ಪರ ಸ್ಪಿನ್ನರ್​ ಝಾಂಪ (20), ಮಾರ್ಕಸ್​ ಸ್ಟೋಯಿನಿಸ್​(3) ಮಿಚೆಲ್​ ಸ್ಟಾರ್ಕ್​(2) ಮತ್ತು ನಥಾನ್​ ಎಲ್ಲಿಸ್​(2) ವಿಕೆಟ್​ ಕಿತ್ತರು.

Continue Reading

ಕ್ರೀಡೆ

T20 World Cup 2024: ನಸೌ ಪಿಚ್​ ಬಗ್ಗೆ ಕಳವಳ ವ್ಯಕ್ತಪಡಿಸಿದ ಟೀಮ್​ ಇಂಡಿಯಾ ಆಟಗಾರರು

T20 World Cup 2024: ಡ್ರಾಪ್​ ಇನ್​ ಪಿಚ್​ ಅಷ್ಟು ಯೋಗ್ಯವಾಗಿಲ್ಲ. ಬಿರುಕುಗಳು ಅಧಿಕವಾಗಿದೆ. ಬೌಲರ್​ಗಳಿಗೆ ಅನುಕೂಲಕರವಾಗಿದ್ದರೂ ಕೂಡ ಬ್ಯಾಟರ್​ಗಳಿಗೆ ಇದು ಸೂಕ್ತವಾಗಿಲ್ಲ. ಚೆಂಡಿನ ಚಲನೆಯನ್ನು ಸರಿಯಾಗಿ ಗ್ರಹಿಸಿಕೊಳ್ಳಲು ಆಗುತ್ತಿಲ್ಲ. ಇದೇ ಕಾರಣಕ್ಕೆ ನಾನು ಗಾಯಗೊಂಡೆ ಎಂದು ರೋಹಿತ್​ ಈ ಪಿಚ್​ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಐರ್ಲೆಂಡ್​(India vs Ireland) ವಿರುದ್ಧ ಗೆದ್ದು ಶುಭಾರಂಭ ಕಂಡಿರುವ ಭಾರತ ತಂಡ ಮುಂದಿನ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಆದರೆ, ಈ ಪಂದ್ಯಕ್ಕೂ ಮುನ್ನ ಭಾರತೀಯ ಆಟಗಾರರಿಗೆ(T20 World Cup 2024) ಅಪಾಯಕಾರಿ ನಸೌ ಪಿಚ್​ ಬಗ್ಗೆ ಭೀತಿ ಕಾಡಿದೆ. ಈಗಾಗಲೇ ಈ ಪಿಚ್​ ಬಗ್ಗೆ ಹಲವುರು ಅಸಮಾಧಾನ ಹೊರಹಾಕಿದ್ದರು. ನಿನ್ನೆ(ಬುಧವಾರ) ನಡೆದ ಪಂದ್ಯದಲ್ಲಿ ನಾಯಕ ರೋಹಿತ್(Rohit Sharma) ​ತೋಳಿನ ಮಾಂಸಖಂಡಕ್ಕೆ ಚೆಂಡು ತಗುಲಿ ಅರ್ಧದಲ್ಲೇ ಬ್ಯಾಟಿಂಗ್​ ಮೊಟಕುಗೊಳಿಸಿದ್ದರು. ಸದ್ಯ ಗಾಯದ ಪ್ರಮಾಣ ಸಣ್ಣ ಮಟ್ಟದಿಂದ ಕೂಡಿದ್ದು ಮುಂದಿನ ಪಂದ್ಯಕ್ಕೆ ಕಣಕ್ಕಿಳಿಯಲಿದ್ದಾರೆ.

ಪಂದ್ಯದ ಬಳಿಕ ಮಾತನಾಡಿದ ರೋಹಿತ್​ ಶರ್ಮ, ಇಲ್ಲಿನ ಡ್ರಾಪ್​ ಇನ್​ ಪಿಚ್​ ಅಷ್ಟು ಯೋಗ್ಯವಾಗಿಲ್ಲ. ಬಿರುಕುಗಳು ಅಧಿಕವಾಗಿದೆ. ಬೌಲರ್​ಗಳಿಗೆ ಅನುಕೂಲಕರವಾಗಿದ್ದರೂ ಕೂಡ ಬ್ಯಾಟರ್​ಗಳಿಗೆ ಇದು ಸೂಕ್ತವಾಗಿಲ್ಲ. ಚೆಂಡಿನ ಚಲನೆಯನ್ನು ಸರಿಯಾಗಿ ಗ್ರಹಿಸಿಕೊಳ್ಳಲು ಆಗುತ್ತಿಲ್ಲ. ಇದೇ ಕಾರಣಕ್ಕೆ ನಾನು ಗಾಯಗೊಂಡೆ. ಈಗ ಚೇತರಿಸಿಕೊಂಡಿದ್ದೇನೆ. ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡದ್ದು ಕೂಡ ಪಿಚ್​ ವರ್ತನೆಯನ್ನು ಅರಿಯುವ ಉದ್ದೇಶದಿಂದ. ಆದರೆ ಈ ಪಿಚ್​ ವರ್ತನೆ ಅರ್ಥೈಸುವುದು ಅಷ್ಟು ಸುಲಭವಾಗಿಲ್ಲ” ಎಂದರು.

‘ಇದು ಹೊಸ ಪಿಚ್ ಆಗಿದ್ದು, ಉತ್ತಮವಾದ ಹುಲ್ಲಿನ ಹೊದಿಕೆ ಇದೆ. ಆದರೆ, ಅದರೊಂದಿಗೆ ದೊಡ್ಡ ಬಿರುಕುಗಳೂ ಇವೆ. ಇದರಿಂದ ಚೆಂಡಿನ ಬೌನ್ಸ್ ಕುಗ್ಗುತ್ತದೆ. ಈ ರೀತಿಯ ಪಿಚ್‌ಗಳಲ್ಲಿ ಅಭ್ಯಾಸ ಪಂದ್ಯಗಳನ್ನು ನಡೆಸಿ ಇದನ್ನು ಸೆಟ್ ಮಾಡಬೇಕು​. ಬಳಿಕ, ದೊಡ್ಡ ಪಂದ್ಯಗಳನ್ನು ಆಯೋಜಿಸಬೇಕು. ಎಲ್ಲ 4 ಪಿಚ್‌ಗಳು ಇದೇ ರೀತಿ ಆಗಿದ್ದು, ಟಿ-20 ಟೂರ್ನಿಗೆ ಯೋಗ್ಯವಲ್ಲ’ ಎಂದು ಕ್ರಿಕೆಟ್​ ವಿಶ್ಲೇಷಕರೊಬ್ಬರು ಹೇಳಿದ್ದಾರೆ. ಆಸ್ಟ್ರೇಲಿಯಾದಿಂದ ತರಿಸಿದ ಡ್ರಾಪ್ ಇನ್ ಪಿಚ್‌ ಇದಾಗಿದೆ.

ಇದನ್ನೂ ಓದಿ India vs Ireland: ಪಂಜಾಬಿ ಪುಟ್ಟ ಪೋರನಿಂದ ಚಿನ್ನದ ಪದಕ ಪಡೆದ ಮೊಹಮ್ಮದ್​ ಸಿರಾಜ್

ಪಾಕಿಸ್ತಾನ ಮತ್ತು ಭಾರತ ತಂಡದ ಪರ ಘಾತಕ ಬೌಲರ್​ಗಳು ಇರುವ ಕಾರಣ ಉಭಯ ತಂಡಗಳ ಬ್ಯಾಟರ್​ಗಳಿಗೆ ಇಲ್ಲಿ ಆಡುವುದೇ ಸವಾಲಾಗಿ ಪರಿಣಮಿಸಿದೆ. ಬ್ಯಾಟರ್​ಗಳು ಗಾಯಗೊಳ್ಳುವ ಸಾಧ್ಯತೆ ಅಧಿಕವಾಗಿದೆ. ಅದರಲ್ಲೂ ಸ್ಟಾರ್​ ಬ್ಯಾಟರ್​ಗಳು ಗಾಯಗೊಂಡು ಟೂರ್ನಿಯಿಂದ ಹೊರಬಿದ್ದರೆ ತಂಡಕ್ಕೆ ದೊಡ್ಡ ನಷ್ಟವಾಗಲಿದೆ. ಹೀಗಾಗಿ ಎಲ್ಲ ತಂಡದ ಬ್ಯಾಟರ್​ಗಳು ಕೂಡ ಜಾಗರೂಕರಾಗಿ ಆಡಬೇಕಿದೆ. ಈ ಸ್ಟೇಡಿಯಂ ಅನ್ನು ಕೇವಲ ಮೂರು ತಿಂಗಳಲ್ಲಿ ನಿರ್ಮಾಣ ಮಾಡಲಾಗಿತ್ತು.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

Continue Reading
Advertisement
Gadag News
ಕರ್ನಾಟಕ27 mins ago

Gadag News : ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ

Rain News
ಕರ್ನಾಟಕ1 hour ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

Disciplinary action if cases of mother and child deaths recur DC Diwakar warns
ಆರೋಗ್ಯ1 hour ago

Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

BJP State Spokesperson Hariprakash konemane pressmeet at yallapura
ಕರ್ನಾಟಕ2 hours ago

Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

Trekking tragedy
ಬೆಂಗಳೂರು2 hours ago

Trekking Tragedy: ಉತ್ತರಾಖಂಡ ಚಾರಣ ದುರಂತದಲ್ಲಿ ಪಾರಾದ 13 ಚಾರಣಿಗರು ಬೆಂಗಳೂರಿಗೆ ವಾಪಸ್

Unemployment Rate
ಪ್ರಮುಖ ಸುದ್ದಿ2 hours ago

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

Valmiki Corporation Scam
ಕರ್ನಾಟಕ2 hours ago

Valmiki Corporation Scam: ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ನಾಗೇಂದ್ರ

Kangana Ranaut
ಪ್ರಮುಖ ಸುದ್ದಿ2 hours ago

Kangana Ranaut : ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ; ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಕಂಗನಾ ಪ್ರತಿಕ್ರಿಯೆ ಹೀಗಿತ್ತು

Kangana Ranaut
ಪ್ರಮುಖ ಸುದ್ದಿ3 hours ago

Kangana Ranaut: ಕಂಗನಾಗೆ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಏನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌