Mithali Raj praised Virat Kohli's batting rhythm IPL 2023 : ವಿರಾಟ್​ ಕೊಹ್ಲಿಯ ಬ್ಯಾಟಿಂಗ್​ ಲಯವನ್ನು ಹೊಗಳಿದ ಮಿಥಾಲಿ ರಾಜ್​ - Vistara News

ಕ್ರಿಕೆಟ್

IPL 2023 : ವಿರಾಟ್​ ಕೊಹ್ಲಿಯ ಬ್ಯಾಟಿಂಗ್​ ಲಯವನ್ನು ಹೊಗಳಿದ ಮಿಥಾಲಿ ರಾಜ್​

ವಿರಾಟ್​ ಕೊಹ್ಲಿ ವೇಗದ ಬೌಲರ್​​ಗಳಿಗೆ ಅಂಜದೇ ಆರಂಭದಲ್ಲಿ ಬ್ಯಾಟಿಂಗ್​ ಮಾಡುತ್ತಿದ್ದಾರೆ ಎಂದು ಮಿಥಾಲಿ ರಾಜ್​ ಹೊಗಳಿಸಿದ್ದಾರೆ.

VISTARANEWS.COM


on

Ravi Shastri teaches Virat Kohli a new technique to score runs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಆವೃತ್ತಿಯ ಐಪಿಎಲ್​ನಲ್ಲಿ (IPL 2023) ಇದುವರೆಗೆ ಮಿಶ್ರ ಫಲ ಕಂಡಿದೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದ ಅಷ್ಟೇ ಹಣಾಹಣಿಗಳಲ್ಲಿ ಸೋತಿದೆ. ಅದರಲ್ಲೂ ಲಕ್ನೊ ವಿರುದ್ಧ ಕೇವಲ ಒಂದು ವಿಕೆಟ್​​ಗಳ ಅಂತರದಿಂದ ಸೋಲು ಕಂಡಿತ್ತು. ಇದೇ ವೇಳೆ ತಂಡದ ಸ್ಟಾರ್ ಬ್ಯಾಟರ್​ ವಿರಾಟ್​ ಕೊಹ್ಲಿ ಮಾತ್ರ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ ನಾಲ್ಕರಲ್ಲಿ ಮೂರು ಪಂದ್ಯಗಳಲ್ಲಿ ಅರ್ಧ ಶತಕ ಬಾರಿಸಿದ್ದಾರೆ. ಹೀಗಾಗಿ ತಂಡದ ಗರಿಷ್ಠ ಸ್ಕೋರರ್​ ಎನಿಸಿಕೊಂಡಿದ್ದಾರೆ.

ವಿರಾಟ್​ ಕೊಹ್ಲಿ ಕಳೆದ ಎರಡು ಆವೃತ್ತಿಗಳಲ್ಲಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಜತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲೂ ಈ ಅವಧಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಇದೀಗ ಅವರು ಮತ್ತೆ ಫಾರ್ಮ್​ಗೆ ಮರಳಿದ್ದಾರೆ. ಅದು ಪ್ರತಿ ಪಂದ್ಯಗಳಲ್ಲಿ ಪ್ರತಿಫಲನಗೊಳ್ಳುತ್ತಿದೆ. ರನ್​ ಗಳಿಕೆಯಿಂದಾಗಿ ಅವರ ವಿಶ್ವಾಸವೂ ಹೆಚ್ಚಾಗಿದೆ.

ಐಪಿಎಲ್ 2023 ರಲ್ಲಿ, ಕೊಹ್ಲಿ ಬ್ಯಾಟ್‌ನೊಂದಿಗೆ ಅದ್ಭುತ ಕೌಶಲ್ಯಗಳನ್ನು ತೋರಿಸಿದ್ದಾರೆ ಮತ್ತು ಪಂದ್ಯಾವಳಿಯ ಪ್ರಮುಖ ರನ್ ಗಳಿಸಿದವರಲ್ಲಿ ಐದನೇ ಸ್ಥಾನದಲ್ಲಿದ್ದಾರೆ ಮತ್ತು ಇದುವರೆಗೆ ಆರ್​ಸಿಬಿ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. 34 ವರ್ಷದ ಅವರ ಫಾರ್ಮ್ ಬಗ್ಗೆ ಹಿರಿಯ ಕ್ರಿಕೆಟಿಗರು ಹಾಗೂ ಕ್ರಿಕೆಟ್​ ಪಂಡಿತರ ಹೊಗಳಿಕೆ ಸಲ್ಲಿಸುತ್ತಿದ್ದಾರೆ. ಅದೇ ವೇಳೆ ಭಾರತ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಕೂಡ ಹೊಗಳಿಕೆ ಸಲ್ಲಿಸಿದ್ದಾರೆ. ಕೊಹ್ಲಿಯು ತಮ್ಮ ಆಟದ ಮೂಲಕ ಇತರ ಆಟಗಾರರಿಗೆ ಪ್ರೇರಣೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಟಿ20 ಪಂದ್ಯಗಳಲ್ಲಿ ತಂಡಕ್ಕೆ ಆರಂಭಿಕರ ಆಟ ಮುಖ್ಯವಾಗಿರುತ್ತದೆ. ಅಂತೆಯೇ ವಿರಾಟ್​ ಕೊಹ್ಲಿ ಆರ್​ಸಿಬಿ ಪರ ಉತ್ತಮ ಆರಂಭ ತಂದುಕೊಡುತ್ತಿದ್ದಾರೆ. ಸರಾಸರಿ 140ರಿಂದ 150 ಕಿಲೋ ಮೀಟರ್​ ವೇಗದಲ್ಲಿ ಬೌಲಿಂಗ್ ಮಾಡುವವರಿಗೆ ಪ್ರತ್ಯುತ್ತರ ಕೊಡುತ್ತಿದ್ದಾರೆ. ಅವರು ಎಂದಿಗೂ ಬೌಲರ್‌ಗಳ ಬಗ್ಗೆ ಭಯ ಇಟ್ಟುಕೊಂಡಿಲ್ಲ. ಉತ್ತಮ ಸ್ಟ್ರೈಕ್​​ರೇಟ್​ನಲ್ಲಿ ರನ್​ ಗಳಿಸುತ್ತಿದ್ದಾರೆ. ಅಂತೆಯೇ ಉತ್ತಮ ರನ್​ ಗಳಿಕೆಯ ವಿಶ್ವಾಸವನ್ನು ಮೂಡಿಸುತ್ತಿದ್ದಾರೆ ಎಂದು ಸ್ಟಾರ್ ಸ್ಪೋರ್ಟ್ಸ್ ಕ್ರಿಕೆಟ್ ಲೈವ್‌ನಲ್ಲಿನ ಮಿಥಾಲಿ ಹೊಗಳಿದ್ದಾರೆ.

ಇದನ್ನೂ ಓದಿ : IPL 2023: ಚೆನ್ನೈ-ಆರ್​ಸಿಬಿ ವಿರುದ್ಧ ಯಾರಿಗೆ ಜಯ; ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ

ಆರ್​ಸಿಬಿ ತಂಡ ಇದುವರೆಗೆ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಅವರ ತವರು ಮೈದಾನವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿದೆ ಕೊಹ್ಲಿ ತಮ್ಮ ಮೂರು ಅರ್ಧಶತಕಗಳನ್ನು ಅದೇ ತಾಣದಲ್ಲಿ ಬಾರಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅವರು ಬಾರಿಸಿದ ಅರ್ಧಶತಕವು ಆರ್​ಸಿಬಿ ತಂಡಕ್ಕೆ ಉತ್ತಮ ಮೊತ್ತ ಪೇರಿಸಲು ನೆರವಾಗಿತ್ತು. ಕನ್ನಡಿಗ ವಿಜಯ್​ಕುಮಾರ್​ ವೈಶಾಖ್ ಅವರ ಮೂರು ವಿಕೆಟ್​ಗಳ ಬೌಲಿಂಗ್ ಸಾಧನೆಯಿಂದ ಆರ್​ಸಿಬಿ ತಂಡ ಪಂದ್ಯವನ್ನು ಗೆದ್ದುಕೊಂಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

T20 World Cup: ಮೊದಲು ಬ್ಯಾಟ್ ಮಾಡಿದ ಯುಎಸ್​ಎ ಬಳಗ 18.5 ಓವರ್​ಗಳಲ್ಲಿ 115 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಇನ್ನೂ 64 ಎಸೆತಗಳು ಬಾಕಿ ಇರುವಂತೆಯೇ ವಿಕೆಟ್ ನಷ್ಟವೇ ಇಲ್ಲದೆ 117 ರನ್​ ಗಳಿಸಿ ಗೆಲುವು ಸಾಧಿಸಿತು.

VISTARANEWS.COM


on

T20 world Cup 2024
Koo

ಬಾರ್ಬಡೋಸ್​: ಟಿ20 ವಿಶ್ವ ಕಪ್​ 2024ರ (T20 world Cup 2024) ಬಿ ಗುಂಪಿನ ಸೂಪರ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಯುಎಸ್​ಎ ತಂಡ 10 ವಿಕೆಟ್​ಗಳ ಹೀನಾಯ ಸೋಲಿಗೆ ಒಳಗಾಗಿದೆ. ಈ ಮೂಲಕ ಯುಎಸ್​ಎ ತಂಡದ ಸೆಮಿಫೈನಲ್​ಗೇರುವ ಕಸನು ಕಮರಿದೆ. ಈ ಹಂತದಲ್ಲಿ ಆಡಿದ ಮೂರಕ್ಕೆ ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಆದಾಗ್ಯೂ ಮೊಟ್ಟ ಮೊದಲ ಬಾರಿಗೆ ವಿಶ್ವ ಕಪ್​ ವೇದಿಕೆ ಪ್ರವೇಶಿಸಿದ್ದ ಯುಎಸ್​ಎ ತಂಡ ಸೂಪರ್ 8 ಹಂತಕ್ಕೇರುವ ಮೂಲಕ ಮೂಲಕ ಅವಿಸ್ಮರಣೀಯ ಸಾಧನೆ ಮಾಡಿದೆ. ಅತ್ತ ಇಂಗ್ಲೆಂಡ್ ತಂಡ ಆಡಿರುವ ಮೂರರಲ್ಲಿ 2 ಪಂದ್ಯಗಳನ್ನು ಗೆದ್ದು ಸದ್ಯ ಬಿ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಇಲ್ಲಿನ ಕೆನ್ಸಿಂಗ್ಟನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್​ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಯುಎಸ್​ಎ ಬಳಗ 18.5 ಓವರ್​ಗಳಲ್ಲಿ 115 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಇನ್ನೂ 64 ಎಸೆತಗಳು ಬಾಕಿ ಇರುವಂತೆಯೇ ವಿಕೆಟ್ ನಷ್ಟವೇ ಇಲ್ಲದೆ 117 ರನ್​ ಗಳಿಸಿ ಗೆಲುವು ಸಾಧಿಸಿತು.

ಸಣ್ಣ ಮೊತ್ತವನ್ನು ಬೆನ್ನಟ್ಟಲು ಹೊರಟ ಇಂಗ್ಲೆಂಡ್ ತಂಡದ ಆರಂಭಿಕ ಬ್ಯಾಟರ್​ಗಳಾದ ಜೋಸ್​ ಬಟ್ಲರ್​ (83) ಹಾಗೂ ಫಿಲ್​ ಸಾಲ್ಟ್​ (25) ಯುಎಸ್​ಎ ಬೌಲರ್​ಗಳನ್ನು ಚೆಂಡಾಡಿದರು. ಆರಂಭದಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಆಡಿದ ಈ ಜೋಡಿ ಬಳಿಕ ಏಕಾಏಕಿ ವೇಗ ವೃದ್ಧಿಸಿತು. ಯುಎಸ್​ಎ ತಂಡದ ರೂಪಿಸಿದ ಯಾವುದೇ ರಣತಂತ್ರಕ್ಕೆ ಬಗ್ಗದ ಅವರಿಬ್ಬರೂ ನಿರಾಯಾಸವಾಗಿ ಪಂದ್ಯ ಗೆಲ್ಲಿಸಿದರು.

ಇದನ್ನೂ ಓದಿ: IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

ಯುಎಸ್​​ಎ ಬ್ಯಾಟಿಂಗ್ ವೈಫಲ್ಯ

ಮೊದಲು ಬ್ಯಾಟಿಂಗ್ ಆಹ್ವಾನ ಪಡೆದ ಯುಎಸ್​ಎ ತಂಡ ಉತ್ತಮವಾಗಿ ಆಡಲಿಲ್ಲ. ಅಂಡ್ರೀಸ್ ಗೌಸ್​ 8 ರನ್​ಗೆ ವಿಕೆಟ್ ಒಪ್ಪಿಸಿದರೆ ಸ್ಟೀವನ್ ಟೈಲರ್​ 12 ರನ್​ಗಳಿಗೆ ಸೀಮಿತಗೊಂಡರು. ನಿತೀಶ್ ಕುಮಾರ್​ 30 ರನ್ ಬಾರಿಸಿದರೆ ಆ್ಯರೋನ್ ಜೋನ್ಸ್​ 10 ರನ್​ಗೆ ಔಟಾದರು. ಕೋರಿ ಆ್ಯಂಡರ್ಸನ್​​ 29 ರನ್ ಬಾರಿಸಿದರೆ ಮಿಲಿಂದ್ ಕುಮಾರ್ 4 ರನ್​ಗೆ ವಿಕೆಟ್​ ಒಪ್ಪಿಸಿದರು. ಹರ್ಮೀತ್​ ಸಿಂಗ್​ 21 ರನ್​ಗೆ ಔಟಾದಾಗ ಯುಎಸ್​ಎ 115 ರನ್​ಗೆ 6 ವಿಕೆಟ್ ಕಳೆದುಕೊಂಡಿತ್ತು. ಆದರೆ, ಅ ಬಳಿಕ ಬಂದ ಎಲ್ಲ ಬ್ಯಾಟರ್​​ಗಳು ಶೂನ್ಯಕ್ಕೆ ಔಟಾದರು. ಕ್ರಿಸ್​ ಜೋರ್ಡಾನ್​ ಸತತ ನಾಲ್ಕು ವಿಕೆಟ್ ಪಡೆದರು. ಹೀಗಾಗಿ ಯುಎಸ್​ಎ 115 ರನ್​ಗಳಿಗೆ ಆಲ್​ಔಟ್​ ಆಯಿತು.

ಇಂಗ್ಲೆಂಡ್ ಪರ ಜೋರ್ಡಾನ್​ 4 ವಿಕೆಟ್ ಉರುಳಿಸಿದರೆ ಅದಿಲ್ ರಶೀದ್ ಹಾಗೂ ಸ್ಯಾಮ್​ ಕರ್ರನ್​ ತಲಾ 2 ವಿಕೆಟ್ ತಮ್ಮದಾಗಿಸಿಕೊಂಡರು. ರೀಸ್​ ಟೋಪ್ಲೆ ಹಾಗೂ ಲಿವಿಂಗ್​ಸ್ಟನ್​ ತಲಾ 1 ವಿಕೆಟ್ ತಮ್ಮದಾಗಿಸಿಕೊಂಡರು.

Continue Reading

ಪ್ರಮುಖ ಸುದ್ದಿ

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

ದೀಪ್ತಿ ಶರ್ಮಾ ಮತ್ತು ಅರುಂಧತಿ ರೆಡ್ಡಿ ತಲಾ ಎರಡು ವಿಕೆಟ್​ ಕಬಳಿಸಿ ಎದುರಾಳಿ ತಂಡ ರನ್​ ಗಳಿಕೆಗೆ ಕಡಿವಾಣ ಹಾಕಿದರು. ಪರಿಣಾಮವಾಗಿ ದಕ್ಷಿಣ ಆಫ್ರಿಕಾ 50 ಓವರ್​​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ಇನ್ನೂ 56 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್​ ನಷ್ಟಕ್ಕೆ 220 ರನ್ ಬಾರಿಸಿ ಗೆಲುವು ಸಾಧಿಸಿತು.

VISTARANEWS.COM


on

IND vs SA
Koo

ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ (IND VS SA) ಹರ್ಮನ್​ಪ್ರೀತ್ ಕೌರ್ ನೇತೃತ್ವದ ಭಾರತದ ಮಹಿಳೆಯರ ತಂಡ 3-0 ಕ್ಲೀನ್ ಸ್ವೀಪ್​ ಸಾಧನೆ ಮಾಡಿದೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಮೂರನೇ ಹಾಗೂ ಕೊನೇ ಪಂದ್ಯದಲ್ಲಿ 6 ವಿಕೆಟ್​ ವಿಜಯ ಸಾಧಿಸಿದ ಭಾರತದ ವನಿತೆಯರು ಅವಿಸ್ಮರಣೀಯ ಸಾಧನೆ ಮಾಡಿದರು. ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ 143 ರನ್​ಗಳ ಗೆಲುವು ಸಾಧಿಸಿದ್ದ ಮಹಿಳೆಯರು ಎರಡನೇ ಪಂದ್ಯದಲ್ಲಿ 4 ರನ್​ಗಳ ವಿಜಯ ತಮ್ಮದಾಗಿಸಿಕೊಂಡಿದ್ದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೂರು ಪಂದ್ಯಗಳು ಆಯೋಜನೆಗೊಂಡಿದ್ದವು. ಮೂರನೇ ಪಂದ್ಯದಲ್ಲಿ ಆರಂಭಿಕ ಎಡಗೈ ಬ್ಯಾಟರ್​ ಸ್ಮೃತಿ ಮಂಧಾನ ಮತ್ತೊಮ್ಮೆ ಭರ್ಜರಿ ಇನ್ನಿಂಗ್ಸ್ ಕಟ್ಟುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅವರು ಈ ಹಿಂದಿನ ಎರಡೂ ಪಂದ್ಯಗಳಲ್ಲಿ ಶತಕ ಬಾರಿಸಿ ಮಿಂಚಿದ್ದರು. ಮೂರನೇ ಶತಕವನ್ನು 10 ರನ್​ಗಳ ಕೊರತೆಯಿಂದ ಕಳೆದುಕೊಂಡಿದ್ದಾರೆ.ಒಂದು ವೇಳೆ ಶತಕ ಬಾರಿಸಿದ್ದರೆ ಪುರುಷರ ತಂಡದ ವಿರಾಟ್ ಕೊಹ್ಲಿಯ ಸಾಧನೆಯನ್ನು ಸರಿಗಟ್ಟುವ ಅವಕಾಶ ಇತ್ತು. ಅದನ್ನವರು ನಷ್ಟ ಮಾಡಿಕೊಂಡರು.

ಮೊದಲೆರಡು ಪಂದ್ಯಗಳು ಗೆದ್ದ ಕಾರಣ ಸರಣಿ ಭಾರತದ ಕೈವಶವಾಗಿತ್ತು. ಹೀಗಾಗಿಔಪಚಾರಿಕ ಎನಿಸಿದ್ದ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಸೌತ್ ಆಫ್ರಿಕಾ, ಉತ್ತಮ ಪ್ರದರ್ಶನ ನೀಡುವ ಉದ್ದೇಶ ಹೊಂದಿತ್ತು. ಆದರೆ ಭಾರತೀಯ ಬೌಲರ್​ಗಳು ಅದಕ್ಕೆ ಅವಕಾಶ ನೀಡಲಿಲ್ಲ. ಮೊದಲ ವಿಕೆಟ್​ಗೆ ಶತಕದ ಜೊತೆಯಾಟ ಬಂದರೂ ಉಳಿದ ಬ್ಯಾಟರ್​​ಗಳು ವೈಫಲ್ಯ ಕಂಡರು. ದೀಪ್ತಿ ಶರ್ಮಾ ಮತ್ತು ಅರುಂಧತಿ ರೆಡ್ಡಿ ತಲಾ ಎರಡು ವಿಕೆಟ್​ ಕಬಳಿಸಿ ಎದುರಾಳಿ ತಂಡ ರನ್​ ಗಳಿಕೆಗೆ ಕಡಿವಾಣ ಹಾಕಿದರು. ಪರಿಣಾಮವಾಗಿ ದಕ್ಷಿಣ ಆಫ್ರಿಕಾ 50 ಓವರ್​​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ಇನ್ನೂ 56 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್​ ನಷ್ಟಕ್ಕೆ 220 ರನ್ ಬಾರಿಸಿ ಗೆಲುವು ಸಾಧಿಸಿತು.

ಸ್ಮೃತಿ ಮಂಧಾನ ಭರ್ಜರಿ ಬ್ಯಾಟಿಂಗ್​

219 ರನ್​ಗಳ ಗುರಿ ಬೆನ್ನಟ್ಟಿದ ಭಾರತ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್​ಗೆ 61 ರನ್​ ಪೇರಿಸಿತು. ಶಫಾಲಿ ವರ್ಮಾ 25 ರನ್​ಗೆ ಔಟಾಗಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಬಳಿಕ ಪ್ರಿಯಾ ಪೂನಿಯಾ ಅವರು ಸ್ಮೃತಿ ಮಂಧಾನ ಜೊತೆಗೂಡಿ ಇನಿಂಗ್ಸ್​ ಕಟ್ಟಿದರು. ಈ ಜೋಡಿಯೂ 2ನೇ ವಿಕೆಟ್​​ಗೆ ಅರ್ಧ ಶತಕದ ಜತೆಯಾಟ ನೀಡಿತು.

ಇದನ್ನೂ ಓದಿ:T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

ಕಳೆದ ಎರಡು ಪಂದ್ಯಗಳಲ್ಲಿ ಶತಕ ಸಿಡಿಸಿದ್ದ ಸ್ಮೃತಿ, ಈ ಪಂದ್ಯದಲ್ಲೂ ಶತಕ ಸಿಡಿಸುವ ಭರವಸೆ ಮೂಡಿಸಿದ್ದರು. ಆದರೆ 90 ರನ್ ಗಳಿಸಿದ್ದ ಆತುರ ಮಾಡಿ ವಿಕೆಟ್ ಒಪ್ಪಿಸಿದರು. 83 ಎಸೆತಗಳಲ್ಲಿ 11 ಬೌಂಡರಿ ಸಹಿತ 90 ರನ್ ಗಳಿಸಿ ಮಿಂಚಿದರು. ಸರಣಿಯಯ ಹಿಂದಿನ 2 ಪಂದ್ಯಗಳಲ್ಲಿ ಕ್ರಮವಾಗಿ 117 ಮತ್ತು 135 ರನ್ ಗಳಿಸಿದ್ದರು. ಹರ್ಮನ್​ಪ್ರೀತ್​ ಕೌರ್ಕೂ 42 ರನ್ ಗಳಿಸಿದರು. ಜೆಮಿಮಾ ರೊಡ್ರಿಗಸ್ (19) ಮತ್ತು ರಿಚಾ ಘೋಷ್​ (6) ಗೆಲುವು ತಂದುಕೊಟ್ಟು.

ಭಾರತದ ಮಾರಕ ಬೌಲಿಂಗ್


ಮೊದಲು ಬ್ಯಾಟಿಂಗ್ ಮಾಡಿದ ಸೌತ್ ಆಫ್ರಿಕಾ ಉತ್ತಮ ಆರಂಭ ಪಡೆಯಿತು ನಾಯಕಿ ಲಾರಾ ವೊಲ್ವಾರ್ಡ್ಟ್ ಅರ್ಧಶತಕ ಸಿಡಿಸಿ ಮಿಂಚಿದರು. ತಜ್ಮಿನ್ ಬ್ರಿಟ್ಸ್ ಕೂಡ 38 ರನ್​ಗಳ ಉಪಯುಕ್ತ ಕಾಣಿಕೆ ನೀಡಿದರು. ಹೀಗಾಗಿ 100 ರನ್​ಗಳ ಆರಂಭಿಕ ಜತೆಯಾಟ ಸಿಕ್ಕಿತು. ನಂತರ ಮರಿಜಾನ್ನೆ ಕಪ್ 7, ಆನ್ನೆಕೆ ಬೋಷ್ 5, ಸುನೆ ಲೂಸ್ 13 ರನ್ ಗಳಿಸಿ ವಿಕೆಟ್​ ಒಪ್ಪಿಸಿ ನಿರಾಸೆ ಮೂಡಿಸಿದರು. ಶಂಗಾಸೆ (16) ನಾಡಿನ್ ಡಿ ಕ್ಲರ್ಕ್ (26) ಕೂಡ ಔಟಾದರು. ಭಾರತೀಯ ಬೌಲರ್​ಗಳು ಪ್ರಭಾವ ಬೀರಿದರು. ಮೈಕೆ ಡಿ ರಿಡ್ಡರ್ ಕೊನೆ ಹಂತದಲ್ಲಿ ಅಜೇಯ 26 ರನ್ ಪೇರಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ದೀಪ್ತಿ , ಅರುಂಧತಿ ಜತೆಗೆ ಶ್ರೇಯಾಂಕಾ ಪಾಟೀಲ್, ಪೂಜಾ ವಸ್ತ್ರಾಕರ್ ತಲಾ 1 ವಿಕೆಟ್ ಉರುಳಿಸಿದರು.

Continue Reading

ಪ್ರಮುಖ ಸುದ್ದಿ

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

T20 world Cup 2024: ಇತ್ತೀಚೆಗೆ ನಡೆದ ಸಂಸತ್ ಅಧಿವೇಶನದಲ್ಲಿ, ಫೆಡರಲ್ ಸಚಿವರೊಬ್ಬರು ಬಾಬರ್ ಅಜಂ ಬೇಜವಾಬ್ದಾರಿಯನ್ನು ಪ್ರಶ್ನಿಸಿದ್ದಾರೆ. ಅವರ ವಿರುದ್ಧ ತಂಡದ ಆಟಗಾರರು ಪಿತೂರಿ ನಡೆಸಿದ್ದಾರೆ ಎಂದು ಹೇಳುವ ವೀಡಿಯೊ ವೈರಲ್ ಆಗಿದೆ.

VISTARANEWS.COM


on

T20 world cup 2024
Koo

ನವದೆಹಲಿ: 2024 ರ ಟಿ 20 ವಿಶ್ವಕಪ್​ನಲ್ಲಿ (T20 World Cup 2024) ಪಾಕ್​ ತಂಡದ ಕಳಪೆ ಪ್ರದರ್ಶನ ಕ್ರಿಕೆಟ್​ ಕ್ಷೇತ್ರದಲ್ಲಿ ಚರ್ಚೆಯ ವಸ್ತು. ಆ ತಂಡದ ಹುಂಬತನಕ್ಕೂ ಆಟಕ್ಕೂ ತಾಳಮೇಳ ಇಲ್ಲದಿರುವ ಬಗ್ಗೆ ದೊಡ್ಡ ಚರ್ಚೆಗಳು ನಡೆಯುತ್ತಿವೆ. ಈ ವಿಷಯ ಇದೀಗ ಅಲ್ಲಿನ ಪಾರ್ಲಿಮೆಂಟ್​​ನಲ್ಲಿ ಅನುರಣಿಸಿದೆ. ಆಟದ ವೈಖರಿಗೆ ಅಲ್ಲಿನ ರಾಜಕಾರಣಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಕ್ರಿಕೆಟ್ ಶಿಶು ಅಮೆರಿಕ ವಿರುದ್ಧವೂ ಸೋತಿದ್ದು ಅವರಿಗೆ ಪ್ರಶ್ನಾಹ್ನ ಸಂಗತಿಯಾಗಿದೆ.

ಯುಎಸ್ಎ ಮತ್ತು ಭಾರತದ ವಿರುದ್ಧ ಪಾಕಿಸ್ತಾನದ ಅನಿರೀಕ್ಷಿತ ಸೋಲಿನ ನಂತರ ಈ ಟೀಕೆ ಬಂದಿದೆ/ ಇದು ಸೂಪರ್ 8 ಗೆ ಪ್ರವೇಶಿಸುವ ಅವಕಾಶಗಳಿಗೆ ಗಮನಾರ್ಹವಾಗಿ ಅಡ್ಡಿಯಾಗಿದೆ. ಇತ್ತೀಚೆಗೆ ನಡೆದ ಸಂಸತ್ ಅಧಿವೇಶನದಲ್ಲಿ, ಫೆಡರಲ್ ಸಚಿವರೊಬ್ಬರು ಬಾಬರ್ ಅಜಂ ಬೇಜವಾಬ್ದಾರಿಯನ್ನು ಪ್ರಶ್ನಿಸಿದ್ದಾರೆ. ಅವರ ವಿರುದ್ಧ ತಂಡದ ಆಟಗಾರರು ಪಿತೂರಿ ನಡೆಸಿದ್ದಾರೆ ಎಂದು ಹೇಳುವ ವೀಡಿಯೊ ವೈರಲ್ ಆಗಿದೆ.

ಪಾಕಿಸ್ತಾನದ ಸತತ ಸೋಲಿಗೆ ಪ್ರತಿಕ್ರಿಯೆಯಾಗಿ ಈ ವ್ಯಂಗ್ಯದ ಹೇಳಿಕೆ ಬಂದಿದೆ. ಇದು ಅಭಿಮಾನಿಗಳು ಮತ್ತು ಮಾಜಿ ಕ್ರಿಕೆಟಿಗರನ್ನು ಕೆರಳಿಸಿದೆ. ಈ ವಿಷಯವನ್ನು ರಾಜಕೀಯಗೊಳಿಸಲಾಗಿದೆ. ಪಿಎಂಎಲ್ (ಎನ್) ಸದಸ್ಯರೊಬ್ಬರು ರಾಜಕೀಯ ಎದುರಾಳಿ, ಮಾಜಿ ಕ್ರಿಕೆಟ್ ನಾಯಕ ಇಮ್ರಾನ್ ಖಾನ್ ಅವರನ್ನು ಟೀಕಿಸಲು ಸೋಲಿನ ಅವಕಾಶವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಬರ್ ಸೋಲಿನ ಚರ್ಚೆಯ ಸಭೆಯನ್ನು ನಡೆಸಬೇಕು. ತಂಡದ ವೈಫಲ್ಯಕ್ಕೆ ಇತರ ಆಟಗಾರರನ್ನು ದೂಷಿಸಬೇಕು ಎಂದು ಸಂಸದರು ತಮಾಷೆಯಾಗಿ ಹೇಳಿದ್ದಾರೆ. ಇದು ಹಿರಿಯ ಕ್ರಿಕೆಟಿಗರ ಇಮ್ರಾನ್ ಅವರನ್ನು ಪರೋಕ್ಷವಾಗಿ ದೂಷಿಸುವುದಾಗಿದೆ.

2024 ರ ಟಿ 20 ವಿಶ್ವಕಪ್​​ಗೆ ಸ್ವಲ್ಪ ಮೊದಲು ವೈಟ್-ಬಾಲ್ ನಾಯಕನಾಗಿ ಮರು ನೇಮಕಗೊಂಡ ಬಾಬರ್ ಅಜಮ್, ತಂಡದ ಕಳಪೆ ಪ್ರದರ್ಶನಕ್ಕಾಗಿ ತೀವ್ರ ಹಿನ್ನಡೆಯನ್ನು ಎದುರಿಸಬೇಕಾಯಿತು. ಏಕದಿನ ವಿಶ್ವಕಪ್ 2023 ರಲ್ಲಿ ಪಾಕಿಸ್ತಾನದ ಕಳಪೆ ಪ್ರದರ್ಶನದ ನಂತರ ಶಾಹೀನ್ ಅಫ್ರಿದಿ ನಾಯಕನಾಗಿ ವಿಫಲಗೊಂಡ ನಂತರ, ಬಾಬರ್ ತಮ್ಮ ಪಾತ್ರವನ್ನು ಪುನರಾರಂಭಿಸಿದ್ದರು. ಆದರೆ ತಂಡದ ಅದೃಷ್ಟವನ್ನು ತಿರುಗಿಸಲು ಅವರಿಗೆ ಸಾಧ್ಯವಾಗಲಿಲ್ಲ. ತಂಡದ ಆಟಗಾರರೇ ಅವರ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

ಬಾಬರ್ ತನ್ನ ಕುಟುಂಬದೊಂದಿಗೆ ಲಂಡನ್​ನಲ್ಲಿ ರಜಾದಿನಗಳನ್ನು ಆನಂದಿಸುತ್ತಿದ್ದರೆ, ತಂಡದ ಉಳಿದವರು ಪಾಕಿಸ್ತಾನಕ್ಕೆ ಮರಳಿದ್ದಾರೆ. ಬಾಬರ್​​ಗೆ ಪಂದ್ಯಾವಳಿಯಿಂದ ತಂಡವು ಬೇಗನೆ ನಿರ್ಗಮಿಸಿರುವ ಬಗ್ಗೆ ವರದಿಯನ್ನು ನೀಡುವಂತೆ ಕೇಳಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ವರದಿಯನ್ನು ಪರಿಶೀಲಿಸಲಿದ್ದು, ಇದು ನಾಯಕನಾಗಿ ಬಾಬರ್ ಅವರ ಭವಿಷ್ಯವನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.

ಪಿಸಿಬಿ ಈಗ ಈ ಕಳವಳಗಳನ್ನು ಪರಿಹರಿಸುವ ಮತ್ತು ಪಾಕಿಸ್ತಾನ ಕ್ರಿಕೆಟ್​​ನ ಭವಿಷ್ಯವನ್ನು ರೂಪಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಸವಾಲಿನ ಕಾರ್ಯವನ್ನು ಎದುರಿಸುತ್ತಿದೆ.

Continue Reading

ಪ್ರಮುಖ ಸುದ್ದಿ

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

VISTARANEWS.COM


on

Babar Azam
Koo

ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ತಂಡ ಹಾಲಿ ನಡೆಯುತ್ತಿರುವ ಟಿ20 ವಿಶ್ವ ಕಪ್​ನಲ್ಲಿ (T20 World Cup 2024) ಹೀನಾಯ ಪ್ರದರ್ಶನ ನೀಡಿ ಲೀಗ್ ಹಂತದಿಂದಲೇ ಹೊರಕ್ಕೆ ಬಿದ್ದಿದೆ. ಇದು ಅಲ್ಲಿ ಅಭಿಮಾನಿಗಳನ್ನು ಕೆರಳಿಸಿದ್ದು ತಂಡದ ನಾಯಕ ಬಾಬರ್ ಅಜಮ್ (Babar Azam) ಹಾಗೂ ಇತರರ ಮೇಲೆ ಬಗೆಬಗೆಯ ಆರೋಪಗಳನ್ನು ಮಾಡುತ್ತಿದ್ದಾರೆ. ಪಾಕ್​ನ ಕ್ರಿಕೆಟ್ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಅಲ್ಲೋಲ ಕಲ್ಲೋಲ ಉಂಟಾಗಿದೆ. ಇದು ಆ ತಂಡದ ಆಟಗಾರರರ ಜಂಭವನ್ನು ಇಳಿಸಿದೆ. ಏತನ್ಮಧ್ಯೆ ನಾಯಕ ಬಾಬರ್ ಅಜಮ್ ತಮ್ಮ ವಿರುದ್ಧ ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದ ಪತ್ರಕರ್ತ ಮುಬಾಶರ್ ಲುಕ್ಮನ್ ವಿರುದ್ಧ 1 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಅಜಮ್ ವಿರುದ್ಧ ಮಾಡಲಾದ ಗಂಭೀರ ಮ್ಯಾಚ್ ಫಿಕ್ಸಿಂಗ್ ಆರೋಪಗಳನ್ನು ಲುಕ್ಮನ್ ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಮಾಡಿದಕ್ಕೆ ಅವರು ಕೆರಳಿದ್ದಾರೆ.

ಅಜಮ್ ಮತ್ತು ಅವರ ತಂಡದ ಆಟಗಾರರ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪಗಳು ಸೇರಿದಂತೆ ಸರಣಿ ಆರೋಪಗಳಿಗೆ ಪ್ರತಿಕ್ರಿಯೆಯಾಗಿ ಬಲಗೈ ಬ್ಯಾಟರ್​ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಆಡಿ ಇ-ಟ್ರಾನ್ ಮತ್ತು ಆಸ್ಟ್ರೇಲಿಯಾ ಮತ್ತು ದುಬೈನಲ್ಲಿ ಐಷಾರಾಮಿ ಅಪಾರ್ಟ್​​ಮೆಂಟ್​ಗಳಂತಹ ದುಬಾರಿ ಉಡುಗೊರೆಗಳನ್ನು ಅಜಮ್ ಪಡೆದಿದ್ದಾರೆ ಎಂದು ಲುಕ್ಮನ್ ಆರೋಪಿಸಿದ್ದಾರೆ, ಇದು ಪಂದ್ಯಗಳ ಸಮಯದಲ್ಲಿ ಉದ್ದೇಶಪೂರ್ವಕ ಕಳಪೆ ಪ್ರದರ್ಶನಕ್ಕೆ ಕಾರಣವಾಗಿದೆ. ವಿಶೇಷವಾಗಿ ಟಿ 20 ವಿಶ್ವಕಪ್ 2024 ರ ಚೊಚ್ಚಲ ಟೂರ್ನಿ ಆಡುತ್ತಿರುವ ಯುಎಸ್ಎ ವಿರುದ್ಧ ಸೋಲಿಗೆ ಕಾರಣವಾಗಿತ್ತು.

ತಮ್ಮ ಕಾನೂನು ತಂಡದ ಮೂಲಕ ಅಜಂ ಅವರು ಪಾಕಿಸ್ತಾನದ ಪತ್ರಕರ್ತನಿಂದ ಸಾರ್ವಜನಿಕ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ, ಕ್ಷಮೆಯಾಚಿಸದಿದ್ದರೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

2024 ರ ಟಿ 20 ವಿಶ್ವಕಪ್ನಲ್ಲಿ ನಿರಾಶಾದಾಯಕ ಪ್ರದರ್ಶನದ ನಂತರ ಪಾಕಿಸ್ತಾನ ಕ್ರಿಕೆಟ್ ತಂಡ ಮತ್ತು ಅದರ ಆಡಳಿತವು ಎದುರಿಸುತ್ತಿರುವ ಹೆಚ್ಚಿನ ಟೀಕೆಗಳನ್ನು ಎದುರಿಸಿತ್ತಿದೆ. ಹೀಗಾಗಿ ಕಾನೂನು ಹೋರಾಟಕ್ಕೆ ಅವರು ಮುಂದಾಗಿದ್ದಾರೆ. ಸಹಾಯಕ ಕೋಚ್ ಅಜರ್ ಮಹಮೂದ್ ಕೂಡ ಆರೋಪಗಳ ಅಲೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಆಧಾರರಹಿತ ಆರೋಪಗಳಿಂದಾಗಿ ಅವರು ಮತ್ತು ಅವರ ಕುಟುಂಬ ಎದುರಿಸುತ್ತಿರುವ ಕಿರುಕುಳವನ್ನು ಹೇಳಿದ್ದಾರೆ. ಮಹಮೂದ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್​ನಲ್ಲಿ ತಮ್ಮ ದುಃಖ ತೋಡಿಕೊಂಡಿದ್ದಾರೆ.

ಗುಂಪು ಹಂತದ ನಿರ್ಗಮನದ ನಂತರ ಪಾಕಿಸ್ತಾನದ ತೀವ್ರ ಹಿನ್ನಡೆಯು ಆಟಗಾರರು ಮತ್ತು ತರಬೇತುದಾರರನ್ನು ಗುರಿಯಾಗಿಸಿಕೊಂಡು ಹಲವಾರು ಹೇಳಿಕೆಗಳಿಗೆ ಕಾರಣವಾಗಿದೆ.

Continue Reading
Advertisement
Surrogacy Leaves
ಪ್ರಮುಖ ಸುದ್ದಿ2 hours ago

Surrogacy Leaves: ಬಾಡಿಗೆ ತಾಯ್ತನದ ನಿಯಮ ಬದಲಿಸಿದ ಕೇಂದ್ರ; ಇನ್ನು ಸಿಗಲಿದೆ 6 ತಿಂಗಳು ರಜೆ!

T20 world Cup 2024
ಕ್ರೀಡೆ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

SBI
ದೇಶ2 hours ago

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

IND vs SA
ಪ್ರಮುಖ ಸುದ್ದಿ3 hours ago

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

T20 world cup 2024
ಪ್ರಮುಖ ಸುದ್ದಿ3 hours ago

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

Rahul Gandhi
ದೇಶ3 hours ago

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Babar Azam
ಪ್ರಮುಖ ಸುದ್ದಿ4 hours ago

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

Abbi Falls
ಕರ್ನಾಟಕ5 hours ago

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Shakib Al Hasan
ಪ್ರಮುಖ ಸುದ್ದಿ5 hours ago

Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

Vashu Bhagnani
ಸಿನಿಮಾ5 hours ago

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು7 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು7 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌