Mohammed Shami: ವಿಶ್ವಕಪ್​ ಟ್ರೋಫಿಯ ಮೇಲೆ ಕಾಲಿಟ್ಟ ಮಾರ್ಷ್ ವರ್ತನೆಗೆ​ ಬೇಸರ ವ್ಯಕ್ತಪಡಿಸಿದ ಶಮಿ - Vistara News

ಕ್ರಿಕೆಟ್

Mohammed Shami: ವಿಶ್ವಕಪ್​ ಟ್ರೋಫಿಯ ಮೇಲೆ ಕಾಲಿಟ್ಟ ಮಾರ್ಷ್ ವರ್ತನೆಗೆ​ ಬೇಸರ ವ್ಯಕ್ತಪಡಿಸಿದ ಶಮಿ

ಮಿಚೆಲ್​ ಮಾರ್ಷ್(Mitchell Marsh)​ ಅವರು ವಿಶ್ವಕಪ್​ ಟ್ರೋಫಿ ಮೇಲೆ ಕಾಲಿಟ್ಟು ವಿಶ್ರಾಂತಿ ಪಡೆದಿದ್ದು ಕಂಡು ನಿಜಕ್ಕೂ ತುಂಬಾ ನೋವಾಯಿತು ಎಂದು ಮೊಹಮ್ಮದ್​ ಶಮಿ ಹೇಳಿದ್ದಾರೆ.

VISTARANEWS.COM


on

mohammed shami
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ವಿಶ್ವಕಪ್​ ಟ್ರೋಫಿ ಮೇಲೆ ಕಾಲಿಟ್ಟು ವಿಶ್ರಾಂತಿ ಪಡೆದಿದ್ದ ಆಸ್ಟ್ರೇಲಿಯಾದ ಮಿಚೆಲ್​ ಮಾರ್ಷ್(Mitchell Marsh)​ ಅವರ ವರ್ತನೆಗೆ ಎಲ್ಲಡೆ ಟೀಕೆ ವ್ಯಕ್ತವಾಗಿತ್ತು. ಇದೇ ವಿಚಾರದಲ್ಲಿ ವಿಶ್ವಕಪ್​ನಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಟೀಮ್ ಇಂಡಿಯಾದ ಬೌಲರ್​ ಮೊಹಮ್ಮದ್​ ಶಮಿ(Mohammed Shami) ಕೂಡ ಮಾರ್ಷ್ ಅವರ ಈ ಉದ್ದಟತನಕ್ಕೆ ಟೀಕೆ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ನಿಜಕ್ಕೂ ಮಾರ್ಷ್ ಅವರ ಈ ನಡೆ ತುಂಬಾ ನೋವಾಯಿತು ಎಂದಿದ್ದಾರೆ.

ವಿಶ್ವಕಪ್​ ಪ್ರದರ್ಶನದ ಕುರಿತು ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಶಮಿ ಅವರು ಮಿಚೆಲ್​ ಮಾರ್ಷ್​ ನಡೆಯನ್ನು ಕುಟುವಾಗಿ ಟೀಕಿಸಿದ್ದಾರೆ. “ನನಗೆ ತುಂಬಾ ಬೇಸರವಾಯಿತು. ವಿಶ್ವದ ಎಲ್ಲ ತಂಡಗಳು ಈ ಟ್ರೋಫಿಗಾಗಿ ಹೋರಾಡುತ್ತವೆ. ಗೆದ್ದರೆ ಟ್ರೋಫಿಯನ್ನು ತಲೆಯ ಮೇಲೆ ಹೊತ್ತು ಸಂಭ್ರಮಿಸಲು ಬಯಸುತ್ತಾರೆ. ಹೀಗಿರುವಾಗ ಈ ಪ್ರತಿಷ್ಠಿತ ಟ್ರೋಫಿ ಮೇಲೆ ಕಾಲು ಇಟ್ಟಿದ್ದು, ನನಗೆ ಸಂತೋಷ ನೀಡಲಿಲ್ಲ. ಇದು ಕ್ರಿಕೆಟ್​ಗೆ ಮಾಡಿದ ಅವಮಾನ” ಎಂದು ಶಮಿ ಹೇಳಿದ್ದಾರೆ.

ಇದನ್ನೂ ಓದಿ IND vs AUS: ಭಾರತ ತಂಡ ಗೆದ್ದದ್ದು ರಿಂಕು ಬಾರಿಸಿದ ಸಿಕ್ಸರ್​ನಿಂದಲ್ಲ; ಮತ್ತೆ ಹೇಗೆ?

ಈ ಬಾರಿ ವಿಶ್ವಕಪ್​ ಟೂರ್ನಿಯಲ್ಲಿ ಮೊಹಮ್ಮದ್‌ ಶಮಿ ಅವರ ಬೌಲಿಂಗ್​ ಸಾಧನೆ ಮರೆಯಲು ಸಾಧ್ಯವಿಲ್ಲ. ಕೇವಲ 7 ಪಂದ್ಯಗಳಲ್ಲಿ ಆಡಿದ್ದರೂ, ಮೊನಚಾದ ದಾಳಿಯಿಂದಾಗಿ ಎದುರಾಳಿ ತಂಡದಲ್ಲಿ ನಡುಕ ಹುಟ್ಟಿಸಿದ್ದರು. ನ್ಯೂಜಿಲ್ಯಾಂಡ್​ ವಿರುದ್ಧದ ಪಂದ್ಯದಲ್ಲಿ ಆಡುವ ಅವಕಾಶ ಪಡೆದ ಶಮಿ ಆ ಬಳಿಕ ಪ್ರತಿ ಪಂದ್ಯದಲ್ಲಿಯೂ ಗೆಲುವಿನ ಹೀರೊ ಆಗಿ ಮೆರೆದಾಡಿದ್ದರು. ನ್ಯೂಜಿಲ್ಯಾಂಡ್‌ ವಿರುದ್ಧ 5 ವಿಕೆಟ್‌ ಪಡೆದರು.

ಇಂಗ್ಲೆಂಡ್‌ ವಿರುದ್ಧ ಭಾರತ ಕಡಿಮೆ ಸ್ಕೋರ್‌ ಗಳಿಸಿದ್ದರೂ ಶಮಿ ಮಾತ್ರ ತಮ್ಮ ಬೌಲಿಂಗ್​ ಸಾಹಸದಿಂದ 22 ರನ್‌ಗೆ 4 ವಿಕೆಟ್‌ ಪಡೆದು ಮಿಂಚಿದರು. ಲಂಕಾ ವಿರುದ್ಧ ಕೇವಲ 18 ರನ್‌ಗೆ 5 ವಿಕೆಟ್‌ ಪಡೆದರು. ದಕ್ಷಿಣ ಆಫ್ರಿಕಾ ವಿರುದ್ಧ 2 ವಿಕೆಟ್‌ ಪಡೆದರು. ನ್ಯೂಜಿಲ್ಯಾಂಡ್‌ ವಿರುದ್ಧ ನಡೆದ ಸೆಮಿಫೈನಲ್‌ನಲ್ಲಿ 7 ವಿಕೆಟ್‌ ಪಡೆದ ಶಮಿ ಹೊಸ ದಾಖಲೆಯನ್ನೇ ನಿರ್ಮಿಸಿದರು. ಫೈನಲ್​ ಪಂದ್ಯದಲ್ಲಿ 1 ವಿಕೆಟ್​ ಕಿತ್ತರು. ಒಟ್ಟಾರೆ 23 ವಿಕೆಟ್​ ಕಿತ್ತು ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಆಟಗಾರನಾಗಿ ಹೊರಹೊಮ್ಮಿದರು. 57ಕ್ಕೆ 7 ವಿಕೆಟ್​ ಗರಿಷ್ಠ ವೈಯಕ್ತಿಕ ಬೌಲಿಂಗ್​ ಸಾಧನೆ.

ದಾಖಲೆಗಾಗಿ ಆಡುವ ಆಟಗಾರ ನಾನಲ್ಲ

ಈ ಬಾರಿಯ ವಿಶ್ವಕಪ್​ ಟೂರ್ನಿಯಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಹಲವು ಶಮಿ ಅವರು ಹಲವು ದಾಖಲೆಗಳನ್ನು ಬರೆದಿದ್ದಾರೆ. ಇದೇ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಶಮಿ, ಎಂದೂ ಕೂಡ ದಾಖಲೆಗಾಗಿ ಆಡುವ ಆಟಗಾರ ನಾನಲ್ಲ, ತಂಡಕ್ಕಾಗಿ ಆಡುವುದೇ ನನ್ನ ಪರಮೋಚ್ಛ ಗುರಿ ಎಂದು ಹೇಳಿದ್ದರು.

“ವಿಶ್ವಕಪ್​ನಲ್ಲಿ ನಾನು ಹಲವು ದಾಖಲೆಗಳನ್ನು ಬರೆದಿರಬಹುದು. ದಿಗ್ಗಜ ಆಟಗಾರರನ್ನು ಹಿಂದಿಕ್ಕಿದ್ದೇನೆ ಎಂಬ ಸಂಗತಿಯೂ ನನಗೆ ತಿಳಿದಿರಲಿಲ್ಲ. ಆದರೆ ವಿಶ್ವಕಪ್‌ನಲ್ಲಿ 40ಕ್ಕೂ ಹೆಚ್ಚು ವಿಕೆಟ್‌ ಪಡೆದಿದ್ದೇನೆ ಎಂಬುದು ನನ ಗಮನದಲ್ಲಿತ್ತು. ವೈಯಕ್ತಿಕ ದಾಖಲೆಗಳ ಬಗ್ಗೆ ನಾನು ಎಂದಿಗೂ ಯೋಚಿಸಿದವನಲ್ಲ. ನನ್ನ ಕೆಲಸ ಏನಿದ್ದರೂ ಉತ್ತಮವಾಗಿ ಬೌಲಿಂಗ್‌ ಮಾಡುವುದಷ್ಟೇ” ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs CSK: 11 ವರ್ಷಗಳ ಹಿಂದಿನ ಇತಿಹಾಸ ಮರುಕಳಿಸಿದರೆ ಆರ್​ಸಿಬಿಗೆ ಇಂದು ಗೆಲುವು ಖಚಿತ

RCB vs CSK: ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

VISTARANEWS.COM


on

RCB vs CSK
Koo

ಬೆಂಗಳೂರು: ಸಾಂಪ್ರದಾಯಿಕ ಬದ್ಧವೈರಿಗಳಾದ ಆರ್‌ಸಿಬಿ(RCB vs CSK) ಹಾಗೂ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ನಿರ್ಣಾಯಕ ಹಣಾಹಣಿ ಇನ್ನೇಮು ಕೆಲವೇ ಗಂಟೆಗಳಲ್ಲಿ ಆರಂಭಗೊಳ್ಳಲಿದೆ. ಇತ್ತಂಡಗಳ ನಡುವಣ ಈ ಕಾದಾಟಕ್ಕೆ ನಗರದ ಚಿನ್ನಸ್ವಾಮಿ(Chinnaswamy) ಕ್ರೀಡಾಂಗಣ ಸಜ್ಜಾಗಿ ನಿಂತಿದೆ. ಆದರೆ ಮತ್ತೊಂದೆಡೆ ಭಾರೀ ಮೋಡ ಕವಿದ ವಾತಾವರಣ ಕಂಡು ಬಂದಿದ್ದು ಮಳೆ ಭೀತಿಯೂ(RCB vs CSK rain prediction) ಎದುರಾಗಿದೆ. 11 ವರ್ಷಗಳ ಹಿಂದೆಯೂ ಉಭಯ ತಂಡಗಳ ನಡುವಣ ಪಂದ್ಯಕ್ಕೂ ಮಳೆ ಎದುರಾಗಿತ್ತು. ಕಾಕತಾಳೀಯವೆಂದರೆ ಆ ಪಂದ್ಯ ಕೂಡ ಮೇ 18, ಶನಿವಾರ ನಡೆದಿತ್ತು.

ಹೌದು, ಆರ್​ಸಿಬಿ ಮತ್ತು ಚೆನ್ನೈ 2013ರಲ್ಲಿ(2013 IPL) ತನ್ನ ಕೊನೆಯ ಲೀಗ್​ ಪಂದ್ಯವನ್ನು ಮೇ 18ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಆಡಿತ್ತು. ಈ ಪಂದ್ಯ ಕೂಡ ಶನಿವಾರವೇ ಆಗಿತ್ತು. ಅಲ್ಲದೆ ಪಂದ್ಯಕ್ಕೆ ಮಳೆಯ ಭೀತಿಯೂ ಎದುರಾಗಿತ್ತು. ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯಂತೆ ಪಂದ್ಯಕ್ಕೆ ಮಳೆ ಕೂಡ ಅಡ್ಡಿಪಡಿಸಿತ್ತು. ಬಳಿಕ ಡಕ್​ವರ್ತ್ ಲೂಯಿಸ್​ ನಿಯಮದ ಅನುಸಾರ ಈ ಪಂದ್ಯವನ್ನು 8 ಓವರ್​ಗೆ ಸೀಮಿತಗೊಳಿಸಿ ಆಡಿಸಲಾಗಿತ್ತು.

ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ಓವರ್​ಗೆ ಕೇವಲ 2 ವಿಕೆಟ್​ ಕಳೆದುಕೊಂಡು 106 ರನ್​ ಪೇರಿಸಿತ್ತು. ಕಿಂಗ್​ ವಿರಾಟ್​ ಕೊಹ್ಲಿ ಅಜೇಯ 56 ರನ್​ ಬಾರಿಸಿದರೆ, ಕ್ರಿಸ್​ ಗೇಲ್​ 28 ರನ್​ ಬಾರಿಸಿದ್ದರು. ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್​ ಕಿಂಗ್ಸ್​ 6 ವಿಕೆಟ್​ ಕಳೆದುಕೊಂಡು 82 ರನ್​ಗಳಿಸಲಷ್ಟೇ ಶಕ್ತವಾಗಿ 24 ರನ್​ಗಳ ಸೋಲು ಕಂಡಿತ್ತು.

ಇದೀಗ ಇಂದು ನಡೆಯುವ ಪಂದ್ಯವೂ ಕೂಡ ಮೇ 18 ಶನಿವಾರವಾಗಿದೆ. ಜತೆಗೆ ಪಂದ್ಯಕ್ಕೆ ಮಳೆಯ ಭೀತಿ ಕೂಡ ಇದೆ. ಅಂಕಿ ಸಂಖ್ಯೆಗಳ ಚಮತ್ಕಾರ ತಾಳೆಯಾಗುತ್ತಿದ್ದು ಈ ಆಧಾರದಲ್ಲಿ ಆರ್​ಸಿಬಿ ಇಂದು ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ಪಂದ್ಯಕ್ಕೂ ಮುನ್ನವೇ ಭವಿಷ್ಯ ನುಡಿಯಲಾರಂಭಿಸಿದ್ದಾರೆ.

ಇದನ್ನೂ ಓದಿ IPL 2024 : ಬೆಂಗಳೂರಿನ ಬೀದಿ ಬೀದಿಗಳಲ್ಲಿ ‘ಧೋನಿ, ಧೋನಿ’ ಘೋಷಣೆ, ಇಲ್ಲಿದೆ ವಿಡಿಯೊ

ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.

ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

Continue Reading

ಕ್ರೀಡೆ

RCB FANS BIKE RALLY: ಪಂದ್ಯಕ್ಕೂ ಮುನ್ನವೇ ಬೃಹತ್​ ಬೈಕ್​ ರ‍್ಯಾಲಿ ಮಾಡಿದ ಆರ್​ಸಿಬಿ ಅಭಿಮಾನಿಗಳು; ವಿಡಿಯೊ ವೈರಲ್​​

RCB FANS BIKE RALLY: ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ.

VISTARANEWS.COM


on

RCB FANS BIKE RALLY
Koo

ಬೆಂಗಳೂರು: ಐಪಿಎಲ್​ನ(IPL 20124) ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಚೆನ್ನೈ ಸೂಪರ್(Chennai Super Kings)​ ಕಿಂಗ್ಸ್​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡಗಳು ಇಂದು ನಡೆಯುವ ಪ್ಲೇ ಆಫ್​ ಪ್ರವೇಶದ ಮಹತ್ವದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಪಂದ್ಯಕ್ಕೂ ಮುನ್ನವೇ ಆರ್​ಸಿಬಿ(RCB) ಅಭಿಮಾನಿಗಳು(Craze RCB FANS) ಚಿನ್ನಸ್ವಾಮಿ ಮೈದಾನದ ಬಳಿ ಬೃಹತ್​ ಬೈಕ್​ ರ‍್ಯಾಲಿ(RCB FANS BIKE RALLY) ನಡೆಸಿ ತಮ್ಮ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಪಂದ್ಯಕ್ಕೆ ಮಳೆಯ ಭೀತಿಯೂ ಇದ್ದು ಸಸ್ಯ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಅಲ್ಲದೆ ರಾತ್ರಿ ಮಳೆಯಾಗುವುದು ಬಹುತೇಕ ಖಚಿತ ಎನ್ನುವಂತಿದೆ. ಒಂದೆಡೆ ಆರ್​ಸಿಬಿ ಅಭಿಮಾನಿಗಳು ಮಳೆ ಬಾರದಂತೆ ಪ್ರಾರ್ಥಿಸುತ್ತಿದ್ದರೆ, ಮತ್ತೊಂದು ಕಡೆ ಚೆನ್ನೈ ಅಭಿಮಾನಿಗಳಿ ಮಳೆ ಬಂದು ಪಂದ್ಯ ರದ್ದಾಗಲಿ ಎಂದು ಪ್ರಾರ್ಥಿಸುತ್ತಿದ್ದರೆ. ಪಂದ್ಯ ರದ್ದಾದರೆ ಚೆನ್ನೈ 4ನೇ ತಂಡವಾಗಿ ಅಧಿಕೃತ ಪ್ಲೇ ಆಫ್​ಗೆ ಎಂಟ್ರಿ ಕೊಡಲಿದೆ. ಒಟ್ಟಾರೆ ಮಳೆ ಯಾರಿಗೆ ಅನುವು ಮಾಡಿಕೊಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಸಬ್‌ ಏರ್‌ ಸಿಸ್ಟಮ್‌


ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.

ಇದನ್ನೂ ಓದಿ RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ದಾಖಲೆ


ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ. ಇಲ್ಲಿ ನಡೆದ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆಲುವು ಸಾಧಿಸಿದೆ. ಈ ಆವೃತ್ತಿಯ 6 ಪಂದ್ಯಗಳ ಪೈಕಿ ಸಮಾನಾಗಿ 3 ಬಾರಿ ಚೇಸಿಂಗ್​ ಮತ್ತು ಮೊದಲು ಬ್ಯಾಟಿಂಗ್​ ನಡೆಸಿದ ತಂಡಗಳು ಜಯಿಸಿದೆ.

ಇತ್ತಂಡಗಳ ಒಟ್ಟು ಐಪಿಎಲ್​ ಮುಖಾಮುಖಿ


ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿಯೂ ಚೆನ್ನೈ ಗೆಲುವಿನ ಫೇವರಿಟ್​ ಆಗಿದೆ. ಈ ಬಾರಿಯ ಉದ್ಘಾಟನ ಪಂದ್ಯದಲ್ಲಿಯೂ ಚೆನ್ನೈ ಆರ್​ಸಿಬಿಗೆ ಸೋಲುಣಿಸಿತ್ತು.

Continue Reading

ಪ್ರಮುಖ ಸುದ್ದಿ

Hyderabadi Biryani : ಎಸ್​ಆರ್​ಎಚ್​ ಅಭಿಮಾನಿಗಳೊಂದಿಗೆ ಹೈದ್ರಾಬಾದಿ ಬಿರಿಯಾನಿ ಸವಿದ ಹೇಡನ್ ಪುತ್ರಿ ಗ್ರೇಸ್​, ಇಲ್ಲಿದೆ ವಿಡಿಯೊ

Hyderabadi Biryani :: ಸ್ಟಾರ್ ಸ್ಪೋರ್ಟ್ಸ್​​ನ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. 21 ವರ್ಷದ ಅವರು ಪ್ರಸಿದ್ಧ ‘ಪ್ಯಾರಡೈಸ್ ಬಿರಿಯಾನಿ’ ಜಾಯಿಂಟ್​ಗೆ ಭೇಟಿ ನೀಡಿ ಮತ್ತು ಬಿರಿಯಾನಿ ಮತ್ತು ಖುಬಾನಿ-ಕಾ-ಮೀಠಾ (ಒಣಗಿದ ಏಪ್ರಿಕಾಟ್​​ಳನ್ನು ಬಳಸಿ ಮಾಡಿರುವ ಸಿಹಿತಿಂಡಿ) ತಿಂದರು. ಅವರು ಕೆಲವು ಎಸ್​ಆರ್​ಎಚ್ ತಂಡದ ​​ ಅಭಿಮಾನಿಗಳ ಜತೆಗೆ ಬಿರಿಯಾನಿ ಸವಿದರು. ಅವರೆಲ್ಲರೂ ವಹೈದರಾಬಾದ್​ನಲ್ಲಿ ತಿನ್ನಲೇಬೇಕಾದ ಭಕ್ಷ್ಯಗಳನ್ನು ಗ್ರೇಸ್​​ಗೆ ಪರಿಚಯಿಸಿದರು.

VISTARANEWS.COM


on

Hyderabadi Biryani
Koo

ಹೈದರಾಬಾದ್​​: ಆಸ್ಟ್ರೇಲಿಯಾ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಮ್ಯಾಥ್ಯೂ ಹೇಡನ್ ಅವರ ಮಗಳು ಗ್ರೇಸ್ ಹೈದರಾಬಾದ್​ನಲ್ಲಿ ಸ್ಥಳೀಯ ಭಕ್ಷ್ಯಗಳನ್ನು ಸವಿಯುತ್ತಾ ಮೋಜಿನ ದಿನವನ್ನು ಕಳೆಯುತ್ತಿದ್ದಾರೆ. ವೃತ್ತಿಯಲ್ಲಿ ಕಂಟೆಂಟ್ ಕ್ರಿಯೇಟರ್ ಆಗಿರುವ ಗ್ರೇಸ್ ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಅಧಿಕೃತ ಪ್ರಸಾರಕರಾದ ಸ್ಟಾರ್ ಸ್ಪೋರ್ಟ್ಸ್​​ನ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. 21 ವರ್ಷದ ಅವರು ಪ್ರಸಿದ್ಧ ‘ಪ್ಯಾರಡೈಸ್ ಬಿರಿಯಾನಿ’ ಜಾಯಿಂಟ್​ಗೆ ಭೇಟಿ ನೀಡಿ ಮತ್ತು ಬಿರಿಯಾನಿ (Hyderabadi Biryani) ಮತ್ತು ಖುಬಾನಿ-ಕಾ-ಮೀಠಾ (ಒಣಗಿದ ಏಪ್ರಿಕಾಟ್​​ಳನ್ನು ಬಳಸಿ ಮಾಡಿರುವ ಸಿಹಿತಿಂಡಿ) ತಿಂದರು. ಅವರು ಕೆಲವು ಎಸ್​ಆರ್​ಎಚ್ ತಂಡದ ​​ ಅಭಿಮಾನಿಗಳ ಜತೆಗೆ ಬಿರಿಯಾನಿ ಸವಿದರು. ಅವರೆಲ್ಲರೂ ವಹೈದರಾಬಾದ್​ನಲ್ಲಿ ತಿನ್ನಲೇಬೇಕಾದ ಭಕ್ಷ್ಯಗಳನ್ನು ಗ್ರೇಸ್​​ಗೆ ಪರಿಚಯಿಸಿದರು.

“ಹೈದರಾಬಾದ್ನಲ್ಲಿ ಬಿರಿಯಾನಿ ಒಂದು ಭಾವನೆ! @SunRisers ಅಭಿಮಾನಿಗಳೊಂದಿಗೆ ಅಪ್ರತಿಮ ಹೈದರಾಬಾದಿ ಬಿರಿಯಾನಿ ತಿನ್ನುವಾಗ ಐತಿಹಾಸಿಕ ಹೈದರಾಬಾದ್​ ನಗರದ ಸಾರವನ್ನು #GraceHayden ಅನುಭವಿಸಿದ್ದಾರೆ” ಎಂದು ಸ್ಟಾರ್ ಸ್ಪೋರ್ಟ್ಸ್ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್​ಗಳಲ್ಲಿ ವೈರಲ್ ಆಗಿರುವ ವೀಡಿಯೊಗೆ ಶೀರ್ಷಿಕೆ ನೀಡಿದೆ.

ಕೆಲವು ವಾರಗಳ ಹಿಂದೆ, ಎಸ್ಆರ್​ಎಚ್​ ತಂಡದ ನಾಯಕ ಪ್ಯಾಟ್ ಕಮಿನ್ಸ್ ತಮ್ಮ ಕುಟುಂಬದೊಂದಿಗೆ ಹೈದರಾಬಾದ್ ಬಿರಿಯಾನಿ ಸವಿದಿದ್ದರು. ಕಮಿನ್ಸ್ ಮತ್ತು ಅವರ ಕುಟುಂಬ ಹೈದರಾಬಾದ್​​ನ ಬಂಜಾರಾ ಹಿಲ್ಸ್​ನಲ್ಲಿರುವ ಸದರ್ನ್ ಮಿರ್ಚಿ ರೆಸ್ಟೋರೆಂಟ್​ಗೆ ಭೇಟಿ ನೀಡಿದ್ದರು.

ಗುರುವಾರ, ಕಮಿನ್ಸ್ ನೇತೃತ್ವದ ಎಸ್ಆರ್​ಎಚ್ಗು ಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯವು ರದ್ದಾದ ನಂತರ ಐಪಿಎಲ್ 2024ರ ಪ್ಲೇಆಫ್​ನಲ್ಲಿ ಸ್ಥಾನ ಪಡೆದ ಮೂರನೇ ತಂಡ ಎನಿಸಿಕೊಂಡಿತು.

ಇದನ್ನೂ ಓದಿ: Virat kohli : ತಮ್ಮ ಜೀವನದ ಎರಡು ಆಘಾತಕಾರಿ ಸಂದರ್ಭಗಳನ್ನು ವಿವರಿಸಿದ ವಿರಾಟ್ ಕೊಹ್ಲಿ

ಎಸ್ಆರ್​ಎಚ್​​ ಈಗಾಗಲೇ ಅರ್ಹತೆ ಪಡೆದ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡದ ಜತೆ ಪ್ಲೇಆಫ್​ ಪಟ್ಟಿಯಲ್ಲಿ ಸೇರಿಕೊಂಡಿದೆ. ನಾಲ್ಕನೇ ಮತ್ತು ಅಂತಿಮ ಪ್ಲೇಆಫ್ ಸ್ಥಾನ ಶನಿವಾರ ಸಂಜೆ ನಿರ್ಧಾರಗೊಳ್ಳಲಿದೆ. ಸಿಎಸ್ಕೆ, ಆರ್​ಸಿಬಿ ತಂಡಗಳು ಪ್ರಸ್ತುತ ಸ್ಪರ್ಧೆಯಲ್ಲಿವೆ.

Continue Reading

ಕ್ರೀಡೆ

Virat kohli : ತಮ್ಮ ಜೀವನದ ಎರಡು ಆಘಾತಕಾರಿ ಸಂದರ್ಭಗಳನ್ನು ವಿವರಿಸಿದ ವಿರಾಟ್ ಕೊಹ್ಲಿ

Virat kohli: 2016ರಲ್ಲಿ ಭಾರತದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ 273 ರನ್ ಬಾರಿಸಿದ್ದರು. ಆದಾಗ್ಯೂ, ವೆಸ್ಟ್ ಇಂಡೀಸ್ ವಿರುದ್ಧದ ಸೆಮಿಫೈನಲ್​ನಲ್ಲಿ ಭಾರತದ ಭರವಸೆಗಳು ಭಗ್ನಗೊಂಡಿದ್ದರು. ಇದು ಕೊಹ್ಲಿಗೆ ಆಘಾತವನ್ನುಂಟು ಮಾಡಿದ ಎರಡನೇ ಘಟನೆ.

VISTARANEWS.COM


on

Virat kohli
Koo

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಋತು ತನ್ನ ಅಂತ್ಯ ತಲುಪುತ್ತಿದ್ದಂತೆ, ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ (Virat Kohli ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವನ್ನು ಪ್ಲೇಆಫ್​ಗೆ ಕೊಂಡೊಯ್ಯುವ ಪ್ರಮುಖ ಜವಾಬ್ದಾರಿ ಅವರ ಮೇಲಿದೆ. ಪ್ರಸ್ತುತ 13 ಪಂದ್ಯಗಳಲ್ಲಿ 661 ರನ್​ಗಳೊಂದಿಗೆ ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ಚೊಚ್ಚಲ ಐಪಿಎಲ್ ಪ್ರಶಸ್ತಿಗೆ ಮುನ್ನಡೆಸುವ ಕೊಹ್ಲಿ ಅವರ ನಿಶ್ಚಯ ದೃಢವಾಗಿದೆ.

35 ವರ್ಷದ ಆಟಗಾರ ಇತ್ತೀಚೆಗೆ ತಮ್ಮನ್ನು ಇಂದಿಗೂ ಕಾಡುತ್ತಿರುವ ಎರಡು ಕ್ರಿಕೆಟ್ ವೃತ್ತಿ ಜೀವನದ ಆಘಾತಕಾರಿ ಘಟನೆಗಳ ಬಗ್ಗೆ ವಿವರಿಸಿದ್ದಾರೆ. ಮೊದಲನೆಯದು ಐಪಿಎಲ್ 2016 ಋತುವಿನಲ್ಲಿ, ಅಲ್ಲಿ 973 ರನ್​ಗಳೊಂದಿಗೆ ಅಗ್ರ ರನ್ ಸ್ಕೋರರ್ ಆಗಿದ್ದರೂ, ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್​ಎಚ್​ ) ವಿರುದ್ಧದ ಫೈನಲ್​​ನಲ್ಲಿ ಹೃದಯ ವಿದ್ರಾವಕ ಸೋಲು ಅವರಿಗೆ ಸಾಕಷ್ಟು ಬೇಸರ ಉಂಟು ಮಾಡಿತ್ತು.

2016ರಲ್ಲಿ ಭಾರತದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ 273 ರನ್ ಬಾರಿಸಿದ್ದರು. ಆದಾಗ್ಯೂ, ವೆಸ್ಟ್ ಇಂಡೀಸ್ ವಿರುದ್ಧದ ಸೆಮಿಫೈನಲ್​ನಲ್ಲಿ ಭಾರತದ ಭರವಸೆಗಳು ಭಗ್ನಗೊಂಡಿದ್ದರು. ಇದು ಕೊಹ್ಲಿಗೆ ಆಘಾತವನ್ನುಂಟು ಮಾಡಿದ ಎರಡನೇ ಘಟನೆ.

“2016 ರಲ್ಲಿ ನನ್ನ ಜೀವನದಲ್ಲಿ ಎರಡು ಸಂದರ್ಭಗಳು ಇದ್ದವು. ಮೊದಲನೆಯದು ವಿಶ್ವ ಟಿ 20 ಮತ್ತು ನಂತರ ಐಪಿಎಲ್ ಫೈನಲ್. ವಿಶ್ವ ಟಿ 20 ಸೋಲಿನಿಂದ ಹೊರಬರಲು ನನಗೆ ಕೆಲವು ದಿನಗಳು ಬೇಕಾಯಿತು ಏಕೆಂದರೆ ನಾನು ಭಾರತಕ್ಕಾಗಿ ಈ ಸಾಧನೆ ಮಾಡಬಹುದು ಎಂದು ಭಾವಿಸಿದ್ದೆ”ಎಂದು ಕೊಹ್ಲಿ ಜಿಯೋ ಸಿನೆಮಾಗೆ ತಿಳಿಸಿದರು.

ಗವಾಸ್ಕರ್​​ಗೆ ವಿರಾಟ್​ ಕೊಹ್ಲಿಯನ್ನು ಬೈಯುವುದೇ ಕೆಲಸ, ಇದೀಗ ಮತ್ತೊಂದು ಬಾರಿ ಟೀಕೆ

ಟಿ20 ಸ್ವರೂಪದಲ್ಲಿ (T20 Cricket) ತಮ್ಮ ಸ್ಟ್ರೈಕ್ ರೇಟ್ ಬಗ್ಗೆ ಹೇಳಿಕೆ ನೀಡಿದ್ದವರಿಗೆ ವಿರಾಟ್ ಕೊಹ್ಲಿ (Virat kohli) ಪ್ರತ್ಯುತ್ತರ ನೀಡಿದ್ದರು. ಅದರಲ್ಲಿ ಮುಖ್ಯವಾಗಿ ಮಾಜಿ ಆಟಗಾರ ಸುನೀಲ್​ ಗವಾಸ್ಕರ್​ ಅವರ ಹೇಳಿಕೆಗಳ ಬಗ್ಗೆ ವ್ಯಂಗ್ಯವಾಡಿದ್ದರು. ಇದೀಗ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ (Sunil Gavaskar) ಅವರು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪ್ರಮುಖ ಪಂದ್ಯಕ್ಕೆ ಮುಂಚಿತವಾಗಿ ಮತ್ತೊಂದು ಬಾರಿ ಕೊಹ್ಲಿಯನ್ನು ತೆಗಳಿದ್ದಾರೆ. ಕೊಹ್ಲಿಯನ್ನು ಆಧುನಿಕ ಯುಗದ ದಂತಕಥೆಯಾಗಿ ಪರಿವರ್ತಿಸುವಲ್ಲಿ ಎಂಎಸ್ ಧೋನಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಗವಾಸ್ಕರ್ ಹೇಳಿಕೆ ನೀಡಿದ್ದಾರೆ. ಇದೀಗ ನೇರ ಟೀಕೆಯ ಬದಲು ಹೋಲಿಕೆ ಮಾಡಿ ಟೀಕೆ ಮಾಡಲು ಶುರು ಮಾಡಿದ್ದಾರೆ.

ಇದನ್ನೂ ಓದಿ: IPL 2024 : ಬೆಂಗಳೂರಿನ ಬೀದಿ ಬೀದಿಗಳಲ್ಲಿ ‘ಧೋನಿ, ಧೋನಿ’ ಘೋಷಣೆ, ಇಲ್ಲಿದೆ ವಿಡಿಯೊ

ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಮುಂಬೈ ಇಂಡಿಯನ್ಸ್​ ತಂಡದ ಅಂತಿಮ ಲೀಗ್ ಪಂದ್ಯದ ನಡುವೆ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತ್ತು. ಆ ವೇಳೆ ಮಾತನಾಡಿದ ಗವಾಸ್ಕರ್, ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಪ್ರಾರಂಭಿಸಿದಾಗ “ಸ್ಟಾರ್ಟ್-ಸ್ಟಾಪ್” (ಅಡೆ ತಡೆಯಿಂದ ತುಂಬಿದ) ವೃತ್ತಿಜೀವನ ಹೊಂದಿದ್ದರು. ಧೋನಿ ಅವರ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿಯೇ ವೃತ್ತಿಜೀವನ ರೂಪುಗೊಂಡಿತು ಎಂದು ಹೇಳಿದರು.

“ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದಾಗ, ಅದು ಸ್ಟಾಪ್-ಸ್ಟಾರ್ಟ್ ವೃತ್ತಿಜೀವನವಾಗಿತ್ತು. ಎಂಎಸ್ ಧೋನಿ ಅವರಿಗೆ ಸ್ವಲ್ಪ ಹೆಚ್ಚುವರಿ ಅವಕಾಶ ನೀಡಿದ್ದು. ಅದರಿಂದಾಗಿ ಇಂದು ನಾವು ನೋಡುವ ಕೊಹ್ಲಿ ಇದ್ದಾರೆ ಎಂದು ಅವರು ಸ್ಟಾರ್ ಸ್ಪೋರ್ಟ್ಸ್​ನಲ್ಲಿ ಹೇಳಿದರು.‘ಟಿ 20 ಕ್ರಿಕೆಟ್​ನಲ್ಲಿ ತಮ್ಮ ಸ್ಟ್ರೈಕ್ ರೇಟ್ ಬಗ್ಗೆ ಟೀಕಾಕಾರರಿಗೆ ತಿರುಗೇಟು ನೀಡಲು ಆರ್​ಸಿಬಿಯ ಮಾಜಿ ಬ್ಯಾಟರ್​ ನಿರ್ಧರಿಸಿದ ನಂತರ ಅವರಿಬ್ಬರ ನಡುವೆ ವಕೆಲವು ದಿನಗಳ ಹಿಂದೆ ವಾಕ್ಸಮರ ನಡೆಸಿದ್ದರು.

Continue Reading
Advertisement
Aishwarya Rai stopping blue gown at Cannes 2024
ಬಾಲಿವುಡ್11 mins ago

Aishwarya Rai : ಐಶ್ವರ್ಯಾ ರೈ ಸ್ಟೈಲಿಶ್‌ರನ್ನು ವಜಾ ಮಾಡಿ ಎಂದ ನೆಟ್ಟಿಗರು! ಯಾಕಿಷ್ಟು ಆಕ್ರೋಶ?

Maruti Swift
ಪ್ರಮುಖ ಸುದ್ದಿ13 mins ago

Maruti Swift : ಹೊಸ ಮಾರುತಿ ಸ್ವಿಫ್ಟ್​ ಕಾರಿನಲ್ಲಿದೆ 50ಕ್ಕೂ ಹೆಚ್ಚು ಫೀಚರ್​ಗಳು

RCB vs CSK
ಕ್ರೀಡೆ14 mins ago

RCB vs CSK: 11 ವರ್ಷಗಳ ಹಿಂದಿನ ಇತಿಹಾಸ ಮರುಕಳಿಸಿದರೆ ಆರ್​ಸಿಬಿಗೆ ಇಂದು ಗೆಲುವು ಖಚಿತ

Nuclear test at Pokhran
ವಿಜ್ಞಾನ16 mins ago

Nuclear Test In Pokhran: ಭಾರತ ಮೊದಲ ಪರಮಾಣು ಪರೀಕ್ಷೆ ನಡೆಸಿ ಇಂದಿಗೆ 50 ವರ್ಷ; ಏನಿದು ಸ್ಮೈಲಿಂಗ್‌ ಬುದ್ಧ?

Namma Metro
ಬೆಂಗಳೂರು23 mins ago

Namma Metro: ಮೆಟ್ರೋಗೆ ಕನೆಕ್ಟ್‌ ಆಗಲಿದೆ ನಮ್ಮ ಯಾತ್ರಿ; ಇನ್ಮುಂದೆ ಆಟೋ ಹಿಡಿಯೋ ಟೆನ್ಷನ್‌ ಇಲ್ಲ

Police Station
ದೇಶ31 mins ago

Police Station: ಪೊಲೀಸ್‌ ಸ್ಟೇಷನ್‌ನಲ್ಲೇ ಪತಿ-ಪತ್ನಿ ಸಾವು; ಠಾಣೆಯನ್ನೇ ಸುಟ್ಟರು ಜನ

Milana Nagaraj Anarkali border gown worn
ಸ್ಯಾಂಡಲ್ ವುಡ್59 mins ago

Milana Nagaraj: ಗರ್ಭಿಣಿ ಮಿಲನಾ ನಾಗರಾಜ್‌ ಧರಿಸಿರುವ ಕ್ರಶ್ಡ್ ಅನಾರ್ಕಲಿ ಬಾರ್ಡರ್‌ ಗೌನ್‌ನ ವಿಶೇಷ ಏನು?

Boxer Parveen
ಕ್ರೀಡೆ1 hour ago

Boxer Parveen: ಒಲಿಂಪಿಕ್ಸ್‌ ಕೋಟಾ ಕಳೆದುಕೊಂಡ ಭಾರತದ ಬಾಕ್ಸರ್‌ ಪರ್ವೀನ್‌

Famous Food of bangalore
ಆಹಾರ/ಅಡುಗೆ1 hour ago

Famous Food of Bangalore: ಬೆಂಗಳೂರಿಗೆ ಬಂದಾಗ ಈ ಖಾದ್ಯಗಳ ರುಚಿ ನೋಡಲು ಮರೆಯಬೇಡಿ!

Prime Minister of India
ರಾಜಕೀಯ1 hour ago

Prime Minister Of India: ಸುದೀರ್ಘ ಕಾಲ ಪ್ರಧಾನಿಯಾಗಿದ್ದ ನೆಹರೂ, ಇಂದಿರಾ ದಾಖಲೆಯನ್ನು ಮೋದಿ ಮುರಿಯಲು ಸಾಧ್ಯವೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ20 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌