Mohammed Siraj: ಕ್ರಿಕೆಟಿಗ ಸಿರಾಜ್‌, ಬಾಕ್ಸರ್​ ನಿಖತ್ ಜರೀನ್‌, ಶೂಟರ್​ ಇಶಾ ಸಿಂಗ್​ಗೆ ನಿವೇಶನ ಮಂಜೂರು ಮಾಡಿದ ತೆಲಂಗಾಣ ಸರ್ಕಾರ - Vistara News

ಕ್ರೀಡೆ

Mohammed Siraj: ಕ್ರಿಕೆಟಿಗ ಸಿರಾಜ್‌, ಬಾಕ್ಸರ್​ ನಿಖತ್ ಜರೀನ್‌, ಶೂಟರ್​ ಇಶಾ ಸಿಂಗ್​ಗೆ ನಿವೇಶನ ಮಂಜೂರು ಮಾಡಿದ ತೆಲಂಗಾಣ ಸರ್ಕಾರ

Mohammed Siraj: ನಿಖತ್​ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮಹಿಳೆಯರ 50 ಕೆಜಿ ಬಾಕ್ಸಿಂಗ್​(Paris Olympics boxing) ವಿಭಾಗದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಸೋಲು ಕಂಡು ತಮ್ಮ ಅಭಿಯಾನವನ್ನು ಮುಗಿಸಿದ್ದರು.

VISTARANEWS.COM


on

Mohammed Siraj
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್​: ಟೀಮ್​ ಇಂಡಿಯಾದ ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ತೆಲಂಗಾಣ ಸರಕಾರವು ನಿವೇಶನ ಮಂಜೂರು ಮಾಡಿದೆ. ಜುಬಿಲಿ ಹಿಲ್ಸ್‌ನ ರಸ್ತೆ ಸಂಖ್ಯೆ 78 ರಲ್ಲಿ 600 ಚದರ ಭೂಮಿಯನ್ನು ಮಂಜೂರು ಮಾಡುವ ಆದೇಶವನ್ನು ತೆಲಂಗಾಣ ಸರ್ಕಾರ ಬಿಡುಗಡೆ ಮಾಡಿದೆ.

ಸಿರಾಜ್ ಅವರೊಂದಿಗೆ, ಶೂಟರ್ ಇಶಾ ಸಿಂಗ್ ಮತ್ತು ಎರಡು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ನಿಖತ್ ಜರೀನ್‌(Nikhat Zareen) ಅವರಿಗೂ ಹೈದರಾಬಾದ್​ನಲ್ಲಿ ತಲಾ 600 ಚದರಗಳಷ್ಟು ಮನೆ ನಿವೇಶನಗಳನ್ನು ನೀಡುವುದಾಗಿ ಸರ್ಕಾರ ಘೋಷಿಸಿದೆ. ಜುಲೈ 31 ರಂದು ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ(Chief Minister A. Revanth Reddy) ಅವರು ಸಿರಾಜ್ ಅವರಿಗೆ ನಗರದಲ್ಲಿ ಮನೆ ನಿವೇಶನ ಮಂಜೂರು ಮಾಡುವುದಾಗಿ ಘೋಷಿಸಿದ್ದರು. ಸಿರಾಜ್ ಮತ್ತು ನಿಖತ್​ಗೆ ಕ್ರೀಡೆಗೆ ನೀಡಿದ ಕೊಡುಗೆಗಾಗಿ ಸರ್ಕಾರವು ಈಗಾಗಲೇ ಗ್ರೂಪ್-1 ಉದ್ಯೋಗಗಳನ್ನು ನೀಡಿದೆ.

ನಿಖತ್​ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮಹಿಳೆಯರ 50 ಕೆಜಿ ಬಾಕ್ಸಿಂಗ್​(Paris Olympics boxing) ವಿಭಾಗದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಸೋಲು ಕಂಡು ತಮ್ಮ ಅಭಿಯಾನವನ್ನು ಮುಗಿಸಿದ್ದರು. ಮೊಹಮ್ಮದ್ ಸಿರಾಜ್ ಟಿ20 ವಿಶ್ವಕಪ್​​ ಗೆದ್ದ ತಂಡದ ಸದಸ್ಯರಾಗಿದ್ದರು. ಒಟ್ಟು ಮೂರು ಪಂದ್ಯಗಳನ್ನು ಆಡಿದ್ದರು.

ಇದನ್ನೂ ಓದಿ Mohammed Siraj : ಲಂಕಾ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಮೊಹಮ್ಮದ್​ ಸಿರಾಜ್​

ಪಂದ್ಯ ಶ್ರೇಷ್ಠ ಪ್ರಶಸ್ತಿಯ ಚೆಕ್​ ದಾನ ಮಾಡಿದ್ದ ಸಿರಾಜ್​


ಶ್ರೀಲಂಕಾ ತಂಡದ ವಿರುದ್ಧ ಕಳೆದ ವರ್ಷ ನಡೆದ ಏಷ್ಯಾ ಕಪ್ 2023 ಫೈನಲ್ ಪಂದ್ಯದಲ್ಲಿ ಅಸಾಧಾರಣ ಬೌಲಿಂಗ್ ಸಾಧನೆ ಮಾಡಿದ್ದ ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಅರ್ಹವಾಗಿದ್ದರು. ಅವರಿಗೆ 5000 ಡಾಲರ್ (4,15,451.75 ರೂ.) ಬಹುಮಾನ ನೀಡಲಾಗಿತ್ತು. ಆದರೆ ಅವರು ಸ್ಥಳದಲ್ಲೇ ಆ ಬಹುಮಾನವನ್ನು ಮೈದಾನದ ಸಿಬ್ಬಂದಿಗೆ (ಗ್ರೌಂಡ್​ ಸ್ಟಾಪ್​) ಅರ್ಪಿಸಿ ಮನಗೆದ್ದಿದ್ದರು.

ಮೊಹಮ್ಮದ್​ ಸಿರಾಜ್​ ಟೀಮ್​ ಇಂಡಿಯಾ ಪರ ಕೆಲ ವರ್ಷಗಳಿಂದ ಪ್ರದರ್ಶನ ನೀಡುತ್ತಲೇ ಬಂದಿದ್ದಾರೆ. ಬೌಲಿಂಗ್​ ಶ್ರೇಯಾಂಕದಲ್ಲಿಯೂ ಅಗ್ರಸ್ಥಾನ ಪಡೆದಿದ್ದಾರೆ. ಸದ್ಯ ಅವರು ತಂಡದ ಪ್ರಮುಖ ಬೌಲರ್​ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿಯೂ ಗಮನಾರ್ಹ ಪ್ರದರ್ಶನ ತೋರಿದ್ದರು. ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಾಗ ಬೇಸರಲ್ಲಿ ಸಿರಾಜ್​ ಮೈದಾನದಲ್ಲೇ ಬಿಕ್ಕಿ ಬಿಕ್ಕಿ ಅತ್ತಿದ್ದರು. ಬಳಿಕ ಅವರನ್ನು ತಂಡದ ನಾಯಕ ರೋಹಿತ್​ ಶರ್ಮ ಮತ್ತು ಸಹ ಆಟಗಾರ ಜಸ್​ಪ್ರೀತ್​ ಬುಮ್ರಾ ಸಮಾಧಾನಪಡಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Claudia Mancinelli : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಂಡ ಈ ಸುಂದರಿ ಜಿಮ್ನಾಸ್ಟಿಕ್​ ಕೋಚ್​​ ಈಗ ಇಂಟರ್ನೆಟ್​ ಸೆನ್ಷೇಷನ್​

Claudia Mancinelli : ಇಟಲಿಯಾ ಫ್ಯಾಬ್ರಿಯಾನೊದಲ್ಲಿ ಹುಟ್ಟಿ ಬೆಳೆದ ಕ್ಲೌಡಿಯಾ ಮನ್ಸಿನೆಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಜಿಮ್ನಾಸ್ಟಿಕ್​ನಲ್ಲಿ ತೊಡಗಿದ್ದರು. ಕ್ರಿಸ್ಟಿನಾ ಘಿಯುರೋವಾ ಮತ್ತು ಮಿರ್ನಾ ಬಾಲ್ಡೋನಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದರು. ಬಳಿಕ ಅವರು ಸ್ಥಳೀಯ ಕ್ಲಬ್ ಅನ್ನು ಸೆರಿದ್ದರು. ಇವೆಲ್ಲದರ ನಡುವೆ ಆಶ್ಚರ್ಯಕರ ರೀತಿಯಲ್ಲಿ ಅವರು ನಟನಾ ವೃತ್ತಿಜೀವನವನ್ನು ಮುಂದುವರಿಸಲು ಕ್ರೀಡೆಯನ್ನು ತೊರೆದರು.

VISTARANEWS.COM


on

Claudia Mancinelli
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಸ್ಪರ್ಧೆಯೊಂದರ ರೆಫರಿಗಳ ಮುಂದೆ ನಿರ್ಭೀತಿಯಿಂದ ನಿಂತಿರುವ ಮಹಿಳಾ ಕೋಚ್​ ಒಬ್ಬರ ವಿಡಿಯೊ ವೈರಲ್ ಆಗಿತ್ತು. ಅವರೇ ಮಾಜಿ ನಟಿ ಮತ್ತು ಇಟೆಲಿಯ ರಿಥಮಿಕ್ ಜಿಮ್ನಾಸ್ಟಿಕ್ಸ್ ತಂಡದ ಕೋಚ್​ ಕ್ಲಾಡಿಯಾ ಮನ್ಸಿನೆಲ್ಲಿ (Claudia Mancinelli, ಅವರೀಗ ಸಾಮಾಜಿಕ ಮಾಧ್ಯಮದ ಸೆನ್ಸೇಷನ್ ಆಗಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಜಿಮ್ನಾಸ್ಟಿಕ್ಸ್ ಸ್ಪರ್ಧೆಯ ಸಮಯದಲ್ಲಿ ಅವರ ಆತ್ಮವಿಶ್ವಾಸದ ಪ್ರತಿಕ್ರಿಯೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಮೂಲಕ ಅವರು ಇಂಟರ್ನೆಟ್​​ ಪ್ರಪಂಚದ “ರಾಣಿ” ಎಂಬ ಬಿರುದು ಪಡೆದುಕೊಂಡಿದ್ದಾರೆ. ಆ ವಿಡಿಯೋವನ್ನು 3.4 ಕೋಟಿಗೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಆಲ್ರೌಂಡ್ ವಿಭಾಗದ ಫೈನಲ್​​ನಲ್ಲಿ ತೀರ್ಪುಗಾರರ ಆರಂಭಿಕ ಸ್ಕೋರ್ ಇಟೆಲಿಯ ಜಿಮ್ನಾಸ್ಟ್ ಸೋಫಿಯಾ ರಾಫೆಲಿ ಅವರ ಗೆಲುವಿನ ಅವಕಾಶಗಳನ್ನು ಕಸಿಯವ ಅವಕಾಶ ಇತ್ತು. ಆದರೆ ಕೋಚ್​​ ಕ್ಲಾಡಿಯಾ ಮನ್ಸಿನೆಲ್ಲಿ, ಸ್ಕೋರ್​​ ಬಗ್ಗೆ ತಕರಾರು ಎತ್ತಿದರು. ರೆಫರಿಗಳ ಬಳಿಗೆ ಹೋಗಿ ಸ್ಕೋರ್ ಮರುಪರಿಶೀಲಿಸುವಂತೆ ಒತ್ತಾಯಿಸಿದರು. ಈ ವೇಳೆ ಅವರು ನಿರ್ಭೀತಿಯಿಂದ ಅವರು ಮಾತನಾಡಿದ ಶೈಲಿ ಕೋಪದಿಂದ ತಿರುಗಿ ನಡೆದದುಕೊಂಡು ಹೋಗುತ್ತಿರುವ ವಿಡಿಯೊ ವೈರಲ್ ಆಗಿದೆ. ಆ ವಿಡಿಯೊ ಅದು ಕಾಡ್ಗಿಚ್ಚಿನಂತೆ ಹರಡಿತ್ತು ಕೊನೆಗೂ ವೈಯಕ್ತಿಕ ಆಲ್ರೌಂಡ್ ಸ್ಪರ್ಧೆಯಲ್ಲಿ ಇಟೆಲಿಯ ರಾಫೆಲಿ ಕಂಚಿನ ಪದಕ ಗೆದ್ದರು.

ಫಲಿತಾಂಶಕ್ಕಿಂತ ಕೋಚ್​ ಕ್ಲಾಡಿಯಾ ಅವರ ವ್ಯಕ್ತಿತ್ವ ಮತ್ತು ಆತ್ಮವಿಶ್ವಾಸ ಅವರನ್ನು ಅಂತರ್ಜಾಲದ ಸೆನ್ಷೇಷನ್ ಆಗಿ ಮಾಡಿತು. ಹಲವಾರು ಜನರು ಅವರ ಚಿತ್ರಗಳು ಮತ್ತು ವೀಡಿಯೊಗಳನ್ನು ಆನ್ ಲೈನ್ ನಲ್ಲಿ ಹಂಚಿಕೊಂಡಿದ್ದಾರೆ. ಕ್ಲಾಡಿಯಾ ಅವರ ಸೌಂದರ್ಯ ಮತ್ತು ಆತ್ಮವಿಶ್ವಾಸವನ್ನು ಶ್ಲಾಘಿಸಿದ್ದಾರೆ.

ಕ್ಲೌಡಿಯಾ ಯಾರು?

ಇಟಲಿಯಾ ಫ್ಯಾಬ್ರಿಯಾನೊದಲ್ಲಿ ಹುಟ್ಟಿ ಬೆಳೆದ ಕ್ಲಾಡಿಯಾ ಮನ್ಸಿನೆಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಜಿಮ್ನಾಸ್ಟಿಕ್​ನಲ್ಲಿ ತೊಡಗಿದ್ದರು. ಕ್ರಿಸ್ಟಿನಾ ಘಿಯುರೋವಾ ಮತ್ತು ಮಿರ್ನಾ ಬಾಲ್ಡೋನಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದರು. ಬಳಿಕ ಅವರು ಸ್ಥಳೀಯ ಕ್ಲಬ್ ಅನ್ನು ಸೆರಿದ್ದರು. ಇವೆಲ್ಲದರ ನಡುವೆ ಆಶ್ಚರ್ಯಕರ ರೀತಿಯಲ್ಲಿ ಅವರು ನಟನಾ ವೃತ್ತಿಜೀವನವನ್ನು ಮುಂದುವರಿಸಲು ಕ್ರೀಡೆಯನ್ನು ತೊರೆದರು.

ಬೆಳ್ಳಿ ಪರದೆಗೆ ಪಾದಾರ್ಪಣೆ ಮಾಡಿದ ಅವರು ‘ ಯೂನಿಕ್ ಬ್ರದರ್ಸ್​’, ‘ದಿ ಟೂರಿಸ್ಟ್’ ಮತ್ತು ‘ನೈನ್’ ನಂತಹ ಗಮನಾರ್ಹ ಚಿತ್ರಗಳಲ್ಲಿ ಪಾತ್ರ ವಹಿಸಿದ್ದರು. ಈ ನಡುವೆ ಪ್ಯಾರಿಸ್ ಒಲಿಂಪಿಕ್ಸ್​ಗೆ ಕೇವಲ ಹತ್ತು ತಿಂಗಳು ಬಾಕಿ ಇರುವಾಗ ಖ್ಯಾತ ತರಬೇತುದಾರ ಜೂಲಿಯೆಟಾ ಕ್ಯಾಂಟಲುಪ್ಪಿ ರಾಜೀನಾಮೆ ನೀಡಿದರು. ಹೀಗಾಗಿ ರಿಧಮಿಕ್​ ಜಿಮ್ನಾಸ್ಟಿಕ್ಸ್ ತಂಡವನ್ನು ಒಲಿಂಪಿಕ್ಸ್​​ನಲ್ಲಿ ಮುನ್ನಡೆಸಲು ಮನ್ಸಿನೆಲ್ಲಿ ಅವರನ್ನು ಫೆಡರೇಶನ್ ಕೇಳಿಕೊಂಡಿತು.

ಇದನ್ನೂ ಓದಿ: Sarabjot Singh : ಹರಿಯಾಣ ಸರ್ಕಾರದ ಉದ್ಯೋಗದ ಆಫರ್​ ತಿರಸ್ಕರಿಸಿದ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್​ ಸಿಂಗ್​​

ಒಲಿಂಪಿಕ್ಸ್​ಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ, ಮನ್ಸಿನೆಲ್ಲಿ ಕಠಿಣ ಸವಾಲನ್ನು ಎದುರಿಸಿದರು. ಸೋಫಿಯಾ ರಾಫೆಲಿ ಮತ್ತು ಮಿಲೆನಾ ಬಾಲ್ಡಸ್ಸಾರಿ ಅವರನ್ನು ವಿಶ್ವದರ್ಜೆಯ ಸ್ಪರ್ಧಿಗಳಾಗಿ ಪರಿವರ್ತಿಸಿದಿರು. ನಂಬಿಕೆ, ಗೌರವ ಮತ್ತು ಸಮರ್ಪಣೆಯ ಮೂಲಕ ಮನ್ಸಿನೆಲ್ಲಿ ಅವರಲ್ಲಿನ ಅತ್ಯುತ್ತಮ ಪ್ರದರ್ಶನ ಹೊರತಂದರು. ಅವರ ಮಾರ್ಗದರ್ಶನದಲ್ಲಿ, ರಾಫೆಲಿ ಅಂತಿಮವಾಗಿ ವೈಯಕ್ತಿಕ ಆಲ್ರೌಂಡ್ ಸ್ಪರ್ಧೆಯಲ್ಲಿ ಐತಿಹಾಸಿಕ ಕಂಚಿನ ಪದಕ ಗೆದ್ದಿದ್ದಾರೆ.

Continue Reading

ಕ್ರಿಕೆಟ್

Urvashi Rautela: ರಿಷಭ್​ ಪಂತ್​ ಮೇಲೆ ಊರ್ವಶಿಗೆ ಮತ್ತೆ ಪ್ಯಾರ್‌ಗೆ ಆಗ್ಬಿಟ್ಟೈತೆ​; ಇನ್​ಸ್ಟಾಗ್ರಾಮ್​ ಸ್ಟೋರಿಯಿಂದ ಬಯಲು

Urvashi Rautela: ಊರ್ವಶಿ ರೌಟೆಲಾ ಅವರು ಟಿ20 ವಿಶ್ವಕಪ್​ನಲ್ಲಿ ರಿಷಭ್​ ಪಂತ್​ ಅವರು ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ರಿವರ್ಸ್​ ಸ್ವೀಪ್​ ಮೂಲಕ ಸಿಕ್ಸರ್​ ಬಾರಿಸಿದ ವಿಡಿಯೋವನ್ನು ಎಡಿಟ್​ ಮಾಡಿ ತನ್ನ ಫೋಟೊವನ್ನು ಹಾಕಿ ತಾನು ಸಿಕ್ಸರ್​ ಬಾರಿಸಿದಂತೆ ವಿಡಿಯೊ ಹಂಚಿಕೊಂಡಿದ್ದಾರೆ. ಇದನ್ನು ಕಂಡ ನಟ್ಟಿಗರು ಮತ್ತೆ ಈ ಜೋಡಿ ಒಂದಾಗಲಿದ್ದಾರೆ ಎಂದು ಕಮೆಂಟ್​ ಮಾಡಿದ್ದಾರೆ.

VISTARANEWS.COM


on

Urvashi Rautela
Koo

ಮುಂಬಯಿ: ಬಾಲಿವುಡ್‌ ನಟಿ ಊರ್ವಶಿ ರೌಟೆಲಾ (Urvashi Rautela)ಗೆ ಮತ್ತೆ ಟೀಮ್​ ಇಂಡಿಯಾ ಆಟಗಾರ ರಿಷಭ್​ ಪಂತ್(Rishabh Pant)​ ಮೇಲೆ ಪ್ರೀತಿ​ ಆದಂತಿದೆ. ಹೌದು, ಊರ್ವಶಿ ಅವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಾಕಿದ ಸ್ಟೋರಿಯನ್ನು ನೋಡುವಾಗ ಪಂತ್​ ಮೇಲೆ “ಪ್ಯಾರ್‌ಗೆ ಆಗ್ಬಿಟ್ಟೈತೆ” ಎಂಬಂತೆ ಕಾಣುತ್ತಿದೆ.

ರಿಷಭ್​ ಪಂತ್ ಮತ್ತು ಊರ್ವಶಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲ ವರ್ಷಗಳ ಹಿಂದೆ ಬಾರೀ ಸದ್ದು ಮಾಡಿತ್ತು. ಪಂತ್​ ಹೋದಲೆಲ್ಲ ಇವರು ಕೂಡ ಹೋಗುತ್ತಿದ್ದರು. ಆದರೆ, ಇದ್ದಕ್ಕಿದಂತೆ ಒಂದು ಬಾರಿ ಊರ್ವಶಿ ಅವರು ತಮ್ಮ ಸಿನೆಮಾದ ಕುರಿತ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡುವಾಗ, ಆರ್‌ಪಿ ಎಂಬುವರು ನನಗೆ ಹೋಟೆಲ್‌ ಲಾಬಿಯಲ್ಲಿ ಗಂಟೆಗಟ್ಟಲೆ ಕಾಯುತ್ತಿದ್ದರು. ನಾನು ಫೋನ್‌ ನೋಡುವಾಗ ಹಲವು ಮಿಸ್ಡ್‌ ಕಾಲ್‌ಗಳು ಇರುತ್ತಿದ್ದವು ಎಂದು ಹೇಳಿದ್ದರು.

ತಕ್ಷಣವೇ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದ ರಿಷಭ್‌, ಹೆಸರು ಗಳಿಸಲು ಬಾಯಿಗೆ ಬಂದದ್ದನ್ನೆಲ್ಲ ಮಾತನಾಡಬಾರದು ಎಂದು ಪೋಸ್ಟ್‌ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಊರ್ವಶಿ “ಬ್ಯಾಟ್‌ ಮತ್ತು ಬಾಲ್‌ನಲ್ಲಿ ಮಾತ್ರ ಆಡು ಮಗುವೆ. ನಿನ್ನಿಂದ ಕೆಟ್ಟು ಹೋಗುವುದಕ್ಕೆ ನಾನು ಮುನ್ನಿ ಅಲ್ಲ,” ಎಂದಿದ್ದರು. ಈ ಒಂದು ಘಟನೆ ಬಳಿಕ ಇವರಿಬ್ಬರ ಪ್ರೀತಿ ಬ್ರೇಕ್​ ಆಪ್​ ಆಗಿತ್ತು. ಇದೀಗ ಮತ್ತೆ ಒಂದಾಗುವಂತೆ ಕಾಣುತ್ತಿದೆ.

ಊರ್ವಶಿ ರೌಟೆಲಾ ಅವರು ಟಿ20 ವಿಶ್ವಕಪ್​ನಲ್ಲಿ ರಿಷಭ್​ ಪಂತ್​ ಅವರು ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ರಿವರ್ಸ್​ ಸ್ವೀಪ್​ ಮೂಲಕ ಸಿಕ್ಸರ್​ ಬಾರಿಸಿದ ವಿಡಿಯೋವನ್ನು ಎಡಿಟ್​ ಮಾಡಿ ತನ್ನ ಫೋಟೊವನ್ನು ಹಾಕಿ ತಾನು ಸಿಕ್ಸರ್​ ಬಾರಿಸಿದಂತೆ ವಿಡಿಯೊ ಹಂಚಿಕೊಂಡಿದ್ದಾರೆ. ಇದನ್ನು ಕಂಡ ನಟ್ಟಿಗರು ಮತ್ತೆ ಈ ಜೋಡಿ ಒಂದಾಗಲಿದ್ದಾರೆ ಎಂದು ಕಮೆಂಟ್​ ಮಾಡಿದ್ದಾರೆ.

2022ರಲ್ಲಿ ಪಂತ್​ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ವೇಳೆ ಶೀಘ್ರ ಗುಣಮುಖರಾಗಲಿ ಎಂದು ಊರ್ವಶಿ ಅವರು ಪ್ರಾರ್ಥಿಸಿದ್ದರು. ಈ ಕುರಿತು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ ಹಾಕಿದ್ದರು. ಬಳಿಕ ಮುಂಬೈಯಲ್ಲಿ ಪತ್ರಕರ್ತರೊಂದಿಗೆ ಮಾತನಾಡುವ ವೇಳೆ ಪಂತ್​ ದೇಶದ ಆಸ್ತಿ, ಗುಣಮುಖರಾಗಿ ಮತ್ತೆ ಕ್ರಿಕೆಟ್​ ಆಡುವಂತಾಗಲಿ ಎಂದು ಹೇಳಿದ್ದರು.

ಇದನ್ನೂ ಓದಿ Rishabh Pant: ಡೆಲ್ಲಿ ತೊರೆದು ಮುಂದಿನ ಐಪಿಎಲ್​ನಲ್ಲಿ ಈ ಫ್ರಾಂಚೈಸಿ ಪರ ಆಡಲಿದ್ದಾರೆ ರಿಷಭ್​ ಪಂತ್​

ಕಳೆದ ವರ್ಷ ನಡೆದಿದ್ದ ಏಷ್ಯಾಕಪ್​(Asia cup 2023) ವೇಳೆ ಊರ್ವಶಿ ರೌಟೇಲಾ ಪಾಕಿಸ್ತಾನ ಆಟಗಾರ ನಸೀಮ್ ಶಾ ಅವರು ಸಹ ಆಟಗಾರರೊಂದಿಗಿರುವ ಫೋಟೊವನ್ನು ತಮ್ಮ ಸಾಮಾಜಿಕ ಜಾಲತಾಣವಾದ ಇನ್​ಸ್ಟಾಗ್ರಾಮ್​ನಲ್ಲಿ ಹಾಕಿದ್ದರು. ದುಬೈನಲ್ಲಿ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯಕ್ಕೆ ಹಾಜರಾಗಿದ್ದರು. ಅಲ್ಲದೆ ನಸೀಮ್ ಶಾ ಅವರ ದೊಡ್ಡ ಅಭಿಮಾನಿ ಎಂದು ಪೋಸ್ಟ್​ ಕೂಡ ಹಾಕಿದ್ದರು. ಇದು ಮಾತ್ರವಲ್ಲದೆ ನಸೀಮ್‌ ಶಾ ಅವರ ಹುಟ್ಟುಹಬ್ಬಕ್ಕೂ ಶುಭಾಶಯ ಕೋರಿದ್ದರು. ಶುಭಾಶಯದ ಜತೆಗೆ ಡಿಎಸ್‌ಪಿ ಗೌರವ ಪಡೆದಿದ್ದಕ್ಕೂ ನಸೀಮ್ ಶಾ ಅವರಿಗೆ ಊರ್ವಶಿ ಅಭಿನಂದಿಸಿದ್ದರು. ಇದಕ್ಕೆ ನಸೀಮ್ ಶಾ, ‘ಧನ್ಯವಾದಗಳು’ ಎಂದು ಪ್ರತಿಕ್ರಿಕೆ ನೀಡಿದ್ದರು. ಈ ವೇಳೆ ನೆಟ್ಟಿಗರು ಇವರಿಬ್ಬರ ಮಧ್ಯೆ ಪ್ರೇಮಾಂಕುರ ಆಗಿದೆ ಎಂದಿದ್ದರು. ಇದೀಗ ಮತ್ತೆ  ಪಂತ್​ ಜತೆ ಪ್ರೀತಿಯ ಬಲೆಯಲ್ಲಿ ಬಿದ್ದಿರುವ ಅನುಮಾನ ಹುಟ್ಟಿಕೊಂಡಿದೆ.

Continue Reading

ಕ್ರೀಡೆ

Sarabjot Singh : ಹರಿಯಾಣ ಸರ್ಕಾರದ ಉದ್ಯೋಗದ ಆಫರ್​ ತಿರಸ್ಕರಿಸಿದ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್​ ಸಿಂಗ್​​

Sarabjot Singh : ಸರಬ್ಜೋತ್ ಅವರು ಯೋಗ್ಯ ಕೆಲಸವನ್ನು ಪಡೆಯಬೇಕು ಎಂದು ಅವರ ಕುಟುಂಬ ಭಯಸಿದ್ದರೂ. ಈ ಸಮಯದಲ್ಲಿ ಶೂಟಿಂಗ್ ತನ್ನ ಮೊದಲ ಆದ್ಯತೆ ಎಂದು ಯುವ ಶೂಟರ್​ ಹೇಳಿದ್ದಾರೆ. “ಕೆಲಸ ಉತ್ತಮವಾಗಿದೆ, ಆದರೆ ನಾನು ಈಗ ಅದನ್ನು ತೆಗೆದುಕೊಳ್ಳುವುದಿಲ್ಲ. ನಾನು ಮೊದಲು ನನ್ನ ಶೂಟಿಂಗ್ ಮೇಲೆ ಗಮನ ಹರಿಸಲು ಬಯಸುತ್ತೇನೆ” ಎಂದು ಸರಬ್ಜೋತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

VISTARANEWS.COM


on

Sarabjot Singh
Koo

ಬೆಂಗಳೂರು : ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಶೂಟಿಂಗ್​ ಮಿಶ್ರ ತಂಡ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ಅವರೊಂದಿಗೆ ಕಂಚಿನ ಪದಕ ಗೆದ್ದ ಭಾರತದ ಶೂಟರ್ ಸರಬ್ಜೋತ್ ಸಿಂಗ್ (Sarabjot Singh) ಅವರು ದೇಶ ವ್ಯಾಪಿ ಖ್ಯಾತಿ ಪಡೆದುಕೊಂಡಿದ್ದಾರೆ. ತಮ್ಮ ರಾಜ್ಯದ ಕ್ರೀಡಾ ಸಾಧಕರಿಗೆ ಉದ್ಯೋಗಳನ್ನು ನೀಡುವ ಪರಿಪಾಠದಂತೆ ಹರಿಯಾಣ ಸರ್ಕಾರ ಅವರಿಗೆ ಉದ್ಯೋಗದ ಭರವಸೆ ಕೊಟ್ಟಿತ್ತು. ಆದರೆ ಅವರು ಅದನ್ನು ತಿರಸ್ಕರಿಸಲು ನಿರ್ಧರಿಸಿದ್ದಾರೆ. ಭಾರತವನ್ನು ಪ್ರತಿನಿಧಿಸುವ ಅನೇಕ ಕ್ರೀಡಾಪಟುಗಳು ತಮ್ಮ ಪ್ರಯಾಣದಲ್ಲಿ ಬೆಂಬಲ ಮತ್ತು ಆರ್ಥಿಕ ಸಹಾಯದ ಕೊರತೆಯ ಬಗ್ಗೆ ದೂರು ನೀಡುತ್ತಿರುವ ನಡುವೆ ಸರಬ್ಜೋತ್, ತಮ್ಮ ಗುರಿ ದೊಡ್ಡದಿದೆ ಎಂದು ಹೇಳುವ ಮೂಲಕ ಸರ್ಕಾರಿ ಉದ್ಯೋಗವನ್ನು ಬೇಡ ಎಂದಿದ್ದಾರೆ.

ಸರಬ್ಜೋತ್ ಅವರು ಯೋಗ್ಯ ಕೆಲಸವನ್ನು ಪಡೆಯಬೇಕು ಎಂದು ಅವರ ಕುಟುಂಬ ಭಯಸಿದ್ದರೂ. ಈ ಸಮಯದಲ್ಲಿ ಶೂಟಿಂಗ್ ತನ್ನ ಮೊದಲ ಆದ್ಯತೆ ಎಂದು ಯುವ ಶೂಟರ್​ ಹೇಳಿದ್ದಾರೆ. “ಕೆಲಸ ಉತ್ತಮವಾಗಿದೆ, ಆದರೆ ನಾನು ಈಗ ಅದನ್ನು ತೆಗೆದುಕೊಳ್ಳುವುದಿಲ್ಲ. ನಾನು ಮೊದಲು ನನ್ನ ಶೂಟಿಂಗ್ ಮೇಲೆ ಗಮನ ಹರಿಸಲು ಬಯಸುತ್ತೇನೆ” ಎಂದು ಸರಬ್ಜೋತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನನ್ನ ಕುಟುಂಬವು ನನ್ನಲ್ಲಿ ಯೋಗ್ಯ ಕೆಲಸವನ್ನು ಪಡೆಯುವಂತೆ ಹೇಳುತ್ತಿದೆ. ಆದರೆ ನಾನು ಶೂಟಿಂಗ್​ನಲ್ಲಿಯೇ ಮುಂದುವರಿಸಲು ಬಯಸುತ್ತೇನೆ. ನಾನು ತೆಗೆದುಕೊಂಡ ನಿರ್ಧಾರಗಳಿಗೆ ವಿರುದ್ಧವಾಗಿ ಹೋಗಲು ನಾನು ಬಯಸುವುದಿಲ್ಲ, ಆದ್ದರಿಂದ ನಾನು ಈಗ ಕೆಲಸ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಪ್ಯಾರಿಸ್ ಕ್ರೀಡಾಕೂಟದಲ್ಲಿ ಸರಬ್ಜೋತ್ ಮತ್ತು ಮನು ಒಟ್ಟಾಗಿ ಒಲಿಂಪಿಕ್ಸ್ ಮಿಶ್ರ ತಂಡ ಕಂಚಿನ ಪದಕವನ್ನು ಗೆದ್ದರು ಆದರೆ ಮೂರನೇ ಸ್ಥಾನವು ಅವರಿಗೆ ಕಡಿಮೆ ಎಂದು ಎನಿಸಿದೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧಿಗಳ ಹೋರಾಟ ಮುಕ್ತಾಯ; ಈ ಬಾರಿ ಆರು ಪದಕಗಳು ಮಾತ್ರ

“ನಾನು ಇನ್ನೂ ನನ್ನ ಮುಖ್ಯ ಗುರಿ ಸಾಧಿಸಿಲ್ಲ. ನಾನು 2028 ರಲ್ಲಿ ನನ್ನ ಮುಖ್ಯ ಗುರಿಯನ್ನು ಪೂರ್ಣಗೊಳಿಸುತ್ತೇನೆ. ಪ್ಯಾರಿಸ್ ನಲ್ಲಿ ನನ್ನ ವೈಯಕ್ತಿಕ ಅತ್ಯುತ್ತಮವಾದುದನ್ನು ನೀಡುತ್ತೇನೆ ಎಂದು ನಾನು ನನ್ನ ವೈಯಕ್ತಿಕ ಡೈರಿಯಲ್ಲಿ ಬರೆಯುತ್ತಿದ್ದೆ. ಆದಾಗ್ಯೂ, ನಾನು ಇನ್ನೂ ನನ್ನ ವೈಯಕ್ತಿಕ ಅತ್ಯುತ್ತಮವಾದದ್ದನ್ನು ನೀಡಿಲ್ಲ. 2028ರಲ್ಲಿ ಚಿನ್ನ ಗೆಲ್ಲುವ ಗುರಿ ಹೊಂದಿದ್ದೇನೆ’ ಎಂದು ಸರಬ್ಜೋತ್ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಕೇವಲ 22 ವರ್ಷದ ಸರಬ್ಜೋತ್ ಈಗಾಗಲೇ 2028ರ ಲಾಸ್ ಏಂಜಲೀಸ್ ಒಲಿಂಪಿಕ್ ಕ್ರೀಡಾಕೂಟದ ಮೇಲೆ ಕಣ್ಣಿಟ್ಟಿದ್ದಾರೆ. ಪ್ಯಾರಿಸ್​​ನಲ್ಲಿ ವೈಯಕ್ತಿಕ ಪದಕ ಗೆಲ್ಲಲು ವಿಫಲವಾದ ಯುವ ಪಿಸ್ತೂಲ್ ಶೂಟರ್ ನಾಲ್ಕು ವರ್ಷಗಳ ಅವಧಿಯಲ್ಲಿ ಚಿನ್ನದ ಪದಕಕ್ಕಿಂತ ಕಡಿಮೆಯಿಲ್ಲದ ಗುರಿಯನ್ನು ಹೊಂದಿದ್ದಾರೆ.

Continue Reading

ಕ್ರೀಡೆ

Shakib Al Hasan: ಸೂಪರ್‌ ಓವರ್‌ ಆಡಲು ನಿರಾಕರಿಸಿದ ಶಕಿಬ್; ಟೂನಿಯಿಂದಲೇ ಹೊರಬಿದ್ದ ತಂಡ

Shakib Al Hasan: ಹಿಂದೊಮ್ಮೆ ಜಾಹೀರಾತು ಪ್ರಚಾರದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ ಶಕಿಬ್‌ ಸಾಗುವ ಮಾರ್ಗದಲ್ಲಿ ಅನೇಕ ಕ್ರೀಡಾಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಮುಂದಾಗಿದ್ದರು. ಈ ವೇಳೆ ಅಭಿಮಾನಿಯೊಬ್ಬ ಗುಂಪಿನ ಮಧ್ಯೆಯಿಂದ ಫೋಟೊ ತೆಗೆಯಲು ಮುಂದಾಗಿದ್ದ ಇದರಿಂದ ಸಿಟ್ಟಿಗೆದ್ದ ಶಕೀಬ್​ತಲೆಯಿಂದ ಕ್ಯಾಪ್​ ಎಳೆದು ಇದೇ ಕ್ಯಾಪ್‌ನಿಂದ ಒಂದೆರಡು ಬಾರಿ ಥಳಿಸಿದ್ದರು. 

VISTARANEWS.COM


on

Shakib Al Hasan
Koo

ಢಾಕಾ: ಬಾಂಗ್ಲಾದೇಶದ ಕ್ರಿಕೆಟ್​ ತಂಡದ ಹಿರಿಯ ಆಲ್​ರೌಂಡರ್​ ಶಕಿಬ್ ಅಲ್ ಹಸನ್‌(Shakib Al Hasan) ತಾಳ್ಮೆ ಕಳೆದುಕೊಂಡು, ಅಂಪೈರ್​ಗಳ ಜತೆ ಮತ್ತು ಅಭಿಮಾನಿಗಳ ನಡುವೆ ಈಗಾಗಲೇ ಹಲವು ಬಾರಿ ಕಿರಿಕ್​ ಮಾಡಿಕೊಂಡು ಸುದ್ದಿಯಾಗಿದ್ದರು. ಇದೀಗ ಗ್ಲೋಬಲ್ ಟಿ20 ಲೀಗ್ ಟೂರ್ನಿಯಲ್ಲಿ ಸೂಪರ್ ಓವರ್(Shakib Al Hasan super over) ಆಡಲು ನಿರಾಕರಿಸಿ ಸುದ್ದಿಯಾಗಿದ್ದಾರೆ. ಇವರ ಈ ಕೆಟ್ಟ ನಿರ್ಧಾರದಿಂದ ತಂಡ ಟೂರ್ನಿಯಿಂದಲೇ ಹೊರಬಿದ್ದಿದೆ.

ಎಲಿಮಿನೇಟರ್ ಪಂದ್ಯವಾದ ಬಾಂಗ್ಲಾ ಟೈಗರ್ಸ್ ಮತ್ತು ಟೊರೊಂಟೊ ನ್ಯಾಷನಲ್ಸ್ ನಡುವಣ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಫಲಿತಾಂಶ ನಿರ್ಧರಿಸಲು ಆಯೋಜಕರು ಸೂಪರ್ ಓವರ್ ಆಡಲು ನಿರ್ಧರಿಸಿದ್ದರು. ಆದರೆ ಬಾಂಗ್ಲಾ ಟೈಗರ್ಸ್ ತಂಡದ ನಾಯಕ ಶಕಿಬ್‌ ಇದಕ್ಕೆ ಒಪ್ಪಿಗೆ ಸೂಚಿಸಲಿಲ್ಲ. ಕನಿಷ್ಟ 5 ಓವರ್‌ ಆಡಿಸಬೇಕು ಎಂದು ಹಠ ಹಿಡಿದರು. ಇದಕ್ಕೆ ಒಪ್ಪದ ಆಯೋಜಕರು ಪಂದ್ಯವನ್ನೇ ರದ್ದುಗೊಳಿಸಿದರು. ಈ ಪರಿಣಾಮ ಬಾಂಗ್ಲಾ ಟಗರ್ಸ್‌ ತಂಡ ಟೂನಿಯಿಂದಲೇ ಹೊರಬಿದ್ದಿರು. ಟೊರೊಂಟೊ ನ್ಯಾಷನಲ್ಸ್ ತಂಡ ಕ್ವಾಲಿಫೈಯರ್-2 ಗೆ ಅರ್ಹತೆ ಪಡೆದುಕೊಂಡಿತು. ಶಕೀಬ್ ಅಲ್ ಹಸನ್ ಅವರ ಈ ಕೆಟ್ಟ ನಿರ್ಧಾರ ಅನಗತ್ಯವಾಗಿ ತಂಡದ ಹಿನ್ನಡೆಗೆ ಕಾರಣವಾಯಿತು.

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಕಣ್ಣಿನ ದೃಷ್ಟಿ ಸಮಸ್ಯೆಗೆ ಒಳಗಾಗಿದ್ದ ಶಕೀಬ್​ ಶಸ್ತ್ರಚಿಕಿತ್ಸೆಗೆ ಒಳಗಾಗಿ ಬಹುದಿನಗಳ ವಿಶ್ರಾಂತಿ ಪಡೆದಿದ್ದರು. ಇದೇ ಜೂನ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಆಡುವ ಸಲುವಾಗಿ ಢಾಕಾ ಪ್ರೀಮಿಯರ್ ಲೀಗ್​ನಲ್ಲಿ ಆಡಲಿಳಿದು ವಿಶ್ವಕಪ್‌ ಆಡಿದ್ದರು.

ಇದನ್ನೂ ಓದಿ Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

ಹಲವು ಬಾರಿ ಅವರು ಮೈದಾನದಲ್ಲಿ ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಅಂಪೈರ್‌ ಅವರೊಂದಿಗೆ ಶಕಿಬ್‌ ಹಲವು ಬಾರಿ ವಾಗ್ವಾದಕ್ಕೆ ಇಳಿದ ಹಲವು ನಿದರ್ಶನಗಳಿವೆ. ಕಳೆದ ಬಾರಿಯ ಬಾಂಗ್ಲಾ ಪ್ರೀಮಿಯರ್​ ಲೀಗ್​ನಲ್ಲಿ ಅಂಪೈರ್​ ಅವರು ಔಟ್​ ನೀಡಿಲ್ಲ ಎಂಬ ಕಾರಣಕ್ಕೆ ಶಬಿಕ್​ ವಿಕೆಟ್​ಗೆ ಕಾಲಿನಿಂದ ಒದ್ದು, ಅಭಿಮಾನಿಗೆ ಕ್ಯಾಪ್​ನಿಂದ ಹಲ್ಲೆ ಮಾಡಿದ ವಿಡಿಯೊಗಳು ವೈರಲ್‌ ಆಗಿತ್ತು.

ಹಿಂದೊಮ್ಮೆ ಜಾಹೀರಾತು ಪ್ರಚಾರದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ ಶಕಿಬ್‌ ಸಾಗುವ ಮಾರ್ಗದಲ್ಲಿ ಅನೇಕ ಕ್ರೀಡಾಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಮುಂದಾಗಿದ್ದರು. ಈ ವೇಳೆ ಅಭಿಮಾನಿಯೊಬ್ಬ ಗುಂಪಿನ ಮಧ್ಯೆಯಿಂದ ಫೋಟೊ ತೆಗೆಯಲು ಮುಂದಾಗಿದ್ದ ಇದರಿಂದ ಸಿಟ್ಟಿಗೆದ್ದ ಶಕೀಬ್​ತಲೆಯಿಂದ ಕ್ಯಾಪ್​ ಎಳೆದು ಇದೇ ಕ್ಯಾಪ್‌ನಿಂದ ಒಂದೆರಡು ಬಾರಿ ಥಳಿಸಿದ್ದರು. 

Continue Reading
Advertisement
Bomb threat
ಪ್ರಮುಖ ಸುದ್ದಿ5 mins ago

Bomb threat : ಏರ್​ಪೋರ್ಟ್​​ ಬ್ಯಾಗ್ ಚೆಕಿಂಗ್​ ವೇಳೆ ತಮಾಷೆಗೆ ‘ಬಾಂಬ್​ ಇದೆ’ ಅಂದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು!

theft Case
ಬೆಂಗಳೂರು26 mins ago

Theft Case : ಲಡ್ಡು ಬಂದು ಬಾಯಿಗೆ ಬಿತ್ತು! ಕೀ ಸಮೇತ ಸ್ಕೂಟರ್‌ ಬಿಟ್ಟು ಹೋದ ಮಹಿಳೆ, ಕ್ಷಣಾರ್ಧದಲ್ಲೇ ಎಗರಿಸಿದ ಚಾಲಾಕಿ

Tungabhadra Dam
ಪ್ರಮುಖ ಸುದ್ದಿ36 mins ago

Tungabhadra Dam: ಟಿಬಿ ಡ್ಯಾಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ; ಶೀಘ್ರ ಕ್ರಸ್ಟ್ ಗೇಟ್ ದುರಸ್ತಿಗೆ ವಿಜಯೇಂದ್ರ ಆಗ್ರಹ

veg vs non veg
ಪ್ರಮುಖ ಸುದ್ದಿ1 hour ago

veg vs non veg : ಮಕ್ಕಳ ಬಾಕ್ಸ್​​ನಲ್ಲಿ ಮಾಂಸಾಹಾರ ಕಳುಹಿಸಬಾರದು; ವಿವಾದ ಸೃಷ್ಟಿಸಿದ ಶಾಲೆಯ ನೋಟಿಸ್​​

karnataka weather Forecast
ಮಳೆ1 hour ago

Karnataka Weather : ಸೋಬಾನೆ ಹಾಡುತ್ತಾ ಭತ್ತ ನಾಟಿ ಮಾಡಿದ ರೈತರು; ನಾಳೆಯಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ

Claudia Mancinelli
ಕ್ರೀಡೆ2 hours ago

Claudia Mancinelli : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಂಡ ಈ ಸುಂದರಿ ಜಿಮ್ನಾಸ್ಟಿಕ್​ ಕೋಚ್​​ ಈಗ ಇಂಟರ್ನೆಟ್​ ಸೆನ್ಷೇಷನ್​

Fatty Liver What Causes
ಆರೋಗ್ಯ2 hours ago

Fatty Liver: ಏನೆಲ್ಲ ಕಾರಣಗಳಿಗೆ ಫ್ಯಾಟಿ ಲಿವರ್‌ ಬರುತ್ತದೆ?

Urvashi Rautela
ಕ್ರಿಕೆಟ್2 hours ago

Urvashi Rautela: ರಿಷಭ್​ ಪಂತ್​ ಮೇಲೆ ಊರ್ವಶಿಗೆ ಮತ್ತೆ ಪ್ಯಾರ್‌ಗೆ ಆಗ್ಬಿಟ್ಟೈತೆ​; ಇನ್​ಸ್ಟಾಗ್ರಾಮ್​ ಸ್ಟೋರಿಯಿಂದ ಬಯಲು

ಕರ್ನಾಟಕ2 hours ago

Actor Darshan: ಹೋಮ-ಹವನ ಮಾಡ್ತಿರೋದು ದರ್ಶನ್‌ ಬಿಡುಗಡೆಗಾಗಿ ಅಲ್ಲ: ರಾಕ್‌ಲೈನ್ ವೆಂಕಟೇಶ್

Kolkata Doctor Murder Case
ದೇಶ2 hours ago

ಕಣ್ಣು, ಬಾಯಿಯಿಂದ ರಕ್ತಸ್ರಾವ, ಕುತ್ತಿಗೆ ಮೂಳೆ ತುಂಡು: ಹತ್ಯೆಯಾದ ಟ್ರೈನಿ ವೈದ್ಯೆಯ ಮರಣೋತ್ತರ ಪರೀಕ್ಷಾ ವರದಿಯಲ್ಲಿದೆ ಬೆಚ್ಚಿ ಬೀಳಿಸುವ ಸತ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌