MS Dhoni: 43ನೇ ವಯಸ್ಸಿನಲ್ಲಿಯೂ ಜಂಪಿಂಗ್ ಸ್ಮ್ಯಾಶ್ ಹೊಡೆದ ಧೋನಿ; ವೈರಲ್​ ವಿಡಿಯೊ ಇಲ್ಲಿದೆ - Vistara News

ಕ್ರೀಡೆ

MS Dhoni: 43ನೇ ವಯಸ್ಸಿನಲ್ಲಿಯೂ ಜಂಪಿಂಗ್ ಸ್ಮ್ಯಾಶ್ ಹೊಡೆದ ಧೋನಿ; ವೈರಲ್​ ವಿಡಿಯೊ ಇಲ್ಲಿದೆ

MS Dhoni: ಧೋನಿ ತಮ್ಮ ಸ್ನೇಹಿತರ ಜತೆ ಬ್ಯಾಡ್ಮಿಂಟನ್​ ಆಡುತ್ತಿರುವ ವಿಡಿಯೊವನ್ನು ಜಾನ್ಸ್ ಎನ್ನುವ ನೆಟ್ಟಿಗರೊಬ್ಬರು ತಮ್ಮ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ

VISTARANEWS.COM


on

MS Dhoni
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಂಚಿ: ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಆಟಗಾರ ಎಂಎಸ್‌ ಧೋನಿ(MS Dhoni) ಫುಟ್​ಬಾಲ್‌(ms dhoni football) ಅಭಿಮಾನಿ. ಭಾರತ ತಂಡದ ಪರ ಆಡುತ್ತಿದ್ದ ವೇಳೆ ಧೋನಿ ಬಿಡುವು ಸಿಕ್ಕಾಗಲೆಲ್ಲಾ ಹೆಚ್ಚಾಗಿ ಸ್ನೇಹಿತರ ಜತೆ ಫುಟ್​ಬಾಲ್‌ ಆಡುತ್ತಿದ್ದರು. ನಿವೃತ್ತಿಯಾದ ಬಳಿಕ ಅವರು ಫುಟ್​ಬಾಲ್‌ ಆಡುವುದನ್ನು ನಿಲ್ಲಿಸಿದ್ದರು. ಇದೀಗ ಧೋನಿಗೆ ಬ್ಯಾಡ್ಮಿಂಟನ್​ ಕ್ರೀಡೆಯ ಮೇಲೆ ಒಲವು ಹುಟ್ಟಿಕೊಂಡಂತಿದೆ. ಹೌದು, ಧೋನಿ ಬ್ಯಾಡ್ಮಿಂಟನ್​ ಆಡುತ್ತಿರುವ ವಿಡಿಯೊವೊಂದು ವೈರಲ್​ ಆಗಿದೆ.

ಧೋನಿ ತಮ್ಮ ಸ್ನೇಹಿತರ ಜತೆ ಬ್ಯಾಡ್ಮಿಂಟನ್​ ಆಡುತ್ತಿರುವ ವಿಡಿಯೊವನ್ನು ಜಾನ್ಸ್ ಎನ್ನುವ ನೆಟ್ಟಿಗರೊಬ್ಬರು ತಮ್ಮ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಎಲ್ಲೋ ಟಿ-ಶರ್ಟ್​ ಧರಿಸಿ ಧೋನಿ ಬ್ಯಾಡ್ಮಿಂಟನ್ ಆಡುತ್ತಿರುವುದನ್ನು ನೋಡಬಹುದಾಗಿದೆ. ಅದರಲ್ಲೂ ಧೋನಿಯ ರಾಕೆಟ್​ ವೇಗದ ಜಂಪಿಂಗ್ ಸ್ಮ್ಯಾಶ್​(jump smash) ಕಂಡು ಅಭಿಮಾನಿಗಳು ದಂಗಾಗಿದ್ದಾರೆ. ಸದ್ಯ ಈ ವಿಡಿಯೊ ವೈರಲ್​ ಆಗಿದೆ.

43 ವರ್ಷದಲ್ಲಿಯೂ ಧೋನಿಯ ಈ ಫಿಟ್​ನೆಸ್​ ನೋಡುವಾಗ ಅವರು ಮುಂದಿನ ಆವೃತ್ತಿಯ ಐಪಿಎಲ್​ನಲ್ಲಿ ಆಡುವುದು ಖಚಿತ ಎನ್ನುವಂತಿದೆ. ಇದೇ ವರ್ಷ ಐಪಿಎಲ್​ ಆರಂಭಕ್ಕೂ ಮುನ್ನ ಧೋನಿ ದುಬೈನಲ್ಲಿ ಟೆನಿಸ್​ ಆಡಿದ್ದ ವಿಡಿಯೊ ವೈರಲ್​ ಆಗಿತ್ತು. ಧೋನಿ ಜತೆ ಪಂತ್​ ಕೂಡ ಕಾಣಿಸಿಕೊಂಡಿದ್ದರು.

ವರದಿಯೊಂದರ ಪ್ರಕಾರ ಬಿಸಿಸಿಐ(BCCI) ಕನಿಷ್ಠ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಆಟಗಾರರನ್ನು ಅನ್‌ಕ್ಯಾಪ್ಡ್ ವಿಭಾಗದಲ್ಲಿ ಇರಿಸುವ ನಿಯಮವನ್ನು ಮರಳಿ ತರಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಧೋನಿ ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ MS Dhoni: ಅಭಿಮಾನಿಯ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ ಧೋನಿ; ಫೋಟೊ ವೈರಲ್​

ಅನ್‌ಕ್ಯಾಪ್ಡ್ ಆಟಗಾರನಿಗೆ ಫ್ರಾಂಚೈಸಿ ಕೇವಲ 4 ಕೋಟಿ ರೂ. ನೀಡಲಿದೆ. ಈ ನಿಯಮ ಜಾರಿಗೆ ಬಂದರೆ ಧೋನಿ ಇದೇ ಮೊತ್ತದಲ್ಲಿ ಚೆನ್ನೈಗಾಗಿ ಆಡುವುದನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಇದೇ ಮೊತ್ತಕ್ಕೆ ಚೆನ್ನೈ ತಂಡ ಧೋನಿಯನ್ನು ಮತ್ತೆ ರೀಟೈನ್​ ಮಾಡಿಕೊಳ್ಳಬಹುದು.  ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕೆ

ರಿಷಭ್​ ಪಂತ್​ ಡೆಲ್ಲಿ ತಂಡದ ಪರ ರಿಟೈನ್ ಆಸಕ್ತಿ ಹೊಂದಿಲ್ಲ ಅವರು ಚೆನ್ನೈ ತಂಡ ಸೇರಲಿದ್ದಾರೆ ಎಂದು ಈಗಾಗಲೇ ವರದಿಯಾಗಿದೆ. ಧೋನಿ ಮೊಣಕಾಲು ನೋವಿನಿಂದ ಬಳಲುತ್ತಿರುವ ಕಾರಣ ಪಂತ್​ ಅವರನ್ನು ಚೆನ್ನೈ ತಂಡಕ್ಕೆ ಸೇರಿಸಿಕೊಂಡು ಕೀಪಿಂಗ್​ ಹೊಣೆ ಅವರಿಗೆ ನೀಡುವ ಮೂಲಕ ಧೋನಿ ಇಂಪ್ಯಾಕ್ಟ್​ ಆಟಗಾರನಾಗಿ ಆಡುವುದು ಸದ್ಯ ಫ್ರಾಂಚೈಸಿ ಮತ್ತು ಧೋನಿಯ ಯೋಜನೆಯಾಗಿದೆ. ಕಳೆದ ಆವೃತ್ತಿಯಲ್ಲಿ ಧೋನಿ ತಂಡದಲ್ಲಿ ಸೂಕ್ತ ವಿಕೆಟ್​ ಕೀಪರ್​ ಇಲ್ಲದ ಕಾರಣ ತಮ್ಮ ಕಾಲು ನೋವಿನ ಮಧ್ಯೆಯೂ ಸಂಪೂರ್ಣವಾಗಿ ಕೀಪಿಂಗ್​ ನಡೆಸಿದ್ದರು. 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rahul Charity Auction: ಕ್ರಿಕೆಟಿಗ ರಾಹುಲ್ ಹರಾಜಿಗಿಟ್ಟ ವಸ್ತುಗಳಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಮಾರಾಟವಾದ ವಸ್ತು ಯಾವುದು?

Rahul Charity Auction: ರಾಹುಲ್ ಹರಾಜಿಗಿಟ್ಟ ಕ್ರಿಕೆಟ್ ಪರಿಕರಗಳಲ್ಲಿ ಕೊಹ್ಲಿಯ ಜೆರ್ಸಿ 40 ಲಕ್ಷ ರೂ.ಗಳಿಗೆ ಬಿಕರಿಯಾದರೆ, ಗ್ಲೌಸ್ 28 ಲಕ್ಷ ರೂ.ಗೆ ಮಾರಾಟವಾಗಿದೆ.

VISTARANEWS.COM


on

Rahul Charity Auction
Koo

ಮುಂಬಯಿ: ಟೀಮ್​ ಇಂಡಿಯಾ(Team India) ಕ್ರಿಕೆಟಿಗ ಕೆ.ಎಲ್​ ರಾಹುಲ್(KL Rahul) ಮತ್ತು ಅವರ ಪತ್ನಿ ಅಥಿಯಾ ಶೆಟ್ಟಿ (Athiya Shetty) ಜತೆಗೂಡಿ ವಿಶೇಷ ಮಕ್ಕಳ ಶಾಲೆಯ (Rahul Charity Auction) ನೆರವಿಗಾಗಿ ಮುಂಬೈನ BKCಯಲ್ಲಿನ ವಿಶೇಷ ಮಕ್ಕಳ ಶಾಲೆಗೆ ಅಗತ್ಯವಿರುವ ಬೆಂಬಲ ನೀಡುವ ಸಲುವಾಗಿ ವಿಪ್ಲಾ ಫೌಂಡೇಶನ್‌ಗೆ (Vipla Foundation) ನಿಧಿ ಸಂಗ್ರಹಿಸಲು ಮುಂದಾಗಿದ್ದರು. ಈ ಬಗ್ಗೆ ರಾಹುಲ್​ ಮತ್ತು ಅಥಿಯಾ ಸಾಮಾಜಿಕ ಜಾಲತಾಣದಲ್ಲಿಯೂ ಘೋಷಣೆ ಮಾಡಿದ್ದರು.

ಕ್ರಿಕೆಟ್​ ಪರಿಕರಗಳನ್ನು ನೀಡುವ ಮೂಲಕ ಭಾರತ ತಂಡದ ವಿರಾಟ್​ ಕೊಹ್ಲಿ, ಎಂ.ಎಸ್​ ಧೋನಿ, ರೋಹಿತ್​ ಶರ್ಮ, ರಾಹುಲ್​ ದ್ರಾವಿಡ್​. ಆರ್​ ಅಶ್ವಿನ್​ ಸೇರಿ ಹಲವು ಮಾಜಿ ಆಟಗಾರರು ರಾಹುಲ್​ ಅವರ ಈ ಸಮಾಜಮುಖಿ ಕಾರ್ಯಕ್ಕೆ ಜೈಜೋಡಿಸಿದ್ದರು. ಇದೀಗ ರಾಹುಲ್​ ಈ ಪರಿಕರಗಳನ್ನು ಹರಾಜಿಗಿಟ್ಟು 1.96 ಕೋಟಿ ರೂ. ಸಂಗ್ರಹ ಮಾಡಿದ್ದಾರೆ. ಈ ಹಣವನ್ನು ಬಡ ಮಕ್ಕಳ ನೆರವಿಗೆ ನೀಡಿದ್ದಾರೆ. ರಾಹುಲ್​ ಹರಾಜಿಗಿಟ್ಟ ವಸ್ತುಗಳಲ್ಲಿ ಅತ್ಯಂತ ಹೆಚ್ಚಿನ ಮೊತ್ತಕ್ಕೆ ಸೇಲ್​ ಆದ ವಸ್ತು ಯಾವುದು? ಎಂಬ ಕುತೂಹಲ ಅಭಿಮಾನಿಗಳದ್ದು.

ಮೊನ್ನೆಯಷ್ಟೇ ಕೆಎಲ್ ರಾಹುಲ್ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ, ನಾನೊಂದು ಮಹತ್ವದ ಘೋಷಣೆ ಮಾಡಲಿದ್ದೇನೆ, ಕಾಯುತ್ತಿರಿ ಎಂದು ಎಲ್ಲರನ್ನೂ ಕುತೂಹಲಕ್ಕೆ ದೂಡಿದ್ದರು. ಅವರ ಈ ಪೋಸ್ಟ್ ನೋಡಿದ ಕೆಲವರು ಅವರು ನಿವೃತ್ತಿಯಾಗುತ್ತಿದ್ದಾರೆಯೇ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಅಂದು ರಾಹುಲ್​ ಪೋಸ್ಟ್ ಮಾಡಿದ್ದು ಹರಾಜಿನಲ್ಲಿ ಸಿಕ್ಕ ಮೊತ್ತವೆಷ್ಟು ಎಂದು ರಿವಿಲ್​ ಮಾಡುವುದಾಗಿತ್ತು.​

ರಾಹುಲ್ ಹರಾಜಿಗಿಟ್ಟ ಕ್ರಿಕೆಟ್ ಪರಿಕರಗಳಲ್ಲಿ ವಿರಾಟ್ ಕೊಹ್ಲಿ ಜೆರ್ಸಿ ಮತ್ತು ಗ್ಲೌಸ್, ರೋಹಿತ್ ಶರ್ಮಾ ಬ್ಯಾಟ್​, ಧೋನಿಯ ಬ್ಯಾಟ್, ದ್ರಾವಿಡ್ ಅವರ ಬ್ಯಾಟ್, ಆರ್​.ಅಶ್ವಿನ್​ ಜೆರ್ಸಿ ಸೇರಿ ಹಲವು ಕ್ರಿಕೆಟಿಗರ ಪರಿಕರಗಳು ಸೇರಿದ್ದವು. ಈ ಪೈಕಿ ಅತೀ ಹೆಚ್ಚು ಮೊತ್ತಕ್ಕೆ ಬಿಕರಿಯಾಗಿದ್ದು ಕಿಂಗ್​ ಖ್ಯಾತಿಯ ವಿರಾಟ್ ಕೊಹ್ಲಿ ಅವರ ಜೆರ್ಸಿ ಮತ್ತು ಗ್ಲೌಸ್. ಕೊಹ್ಲಿಯ ಜೆರ್ಸಿ 40 ಲಕ್ಷ ರೂ.ಗಳಿಗೆ ಬಿಕರಿಯಾದರೆ, ಗ್ಲೌಸ್ 28 ಲಕ್ಷ ರೂ.ಗೆ ಮಾರಾಟವಾಗಿದೆ. ರಾಹುಲ್​ ಕೂಡ ತಮ್ಮ ಬ್ಯಾಟ್​, ಜೆರ್ಸಿ ಮತ್ತು ಕ್ಯಾಪ್​ ಹರಾಜಿಗಿಟ್ಟಿದ್ದರು.

ಇದನ್ನೂ ಓದಿ KL Rahul Retirement: ಕ್ರಿಕೆಟ್​ಗೆ ದಿಢೀರ್​ ನಿವೃತ್ತಿ ಘೋಷಿಸಿದ ಕೆ.ಎಲ್​ ರಾಹುಲ್?; ಇನ್​ಸ್ಟಾಗ್ರಾಮ್​ ಪೋಸ್ಟ್​ ವೈರಲ್​​

ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ ಅವರ ಬ್ಯಾಟ್​ 24 ಲಕ್ಷ ರೂ., ಮಹೇಂದ್ರ ಸಿಂಗ್​ ಧೋನಿಯ ಬ್ಯಾಟ್ 13 ಲಕ್ಷ, ರಾಹುಲ್ ದ್ರಾವಿಡ್ ಅವರ ಬ್ಯಾಟ್ 11 ಲಕ್ಷ ರೂ.ಗೆ ಬಿಕರಿಯಾಗಿದೆ ಎಂದು ತಿಳಿದುಬಂದಿದೆ. ವಿರಾಟ್​ ಕೊಹ್ಲಿ ಮತ್ತು ರೋಹಿತ್​ ಶರ್ಮ ಕೂಡ ಎನ್​ಜಿಒ ಮೂಲಕ ಬಡ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ನೀಡುವ ಕಾರ್ಯ ಮಾಡುತ್ತಿದ್ದಾರೆ. ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ‘ಸೇವಾ’ ಎಂಬ ಹೆಸರಿನ ಟ್ರಸ್ಟ್​ ಮೂಲಕ ಅದೆಷ್ಟೋ ಬಡ ಜನರಿಗೆ ಆರೋಗ್ಯ ಸಂಬಂಧಿಸಿ ಹಣಕಾಸಿನ ನೆರವು ಒದಗಿಸಿದ್ದಾರೆ.

Continue Reading

ಕ್ರೀಡೆ

Vinesh Phogat: ವಿನೇಶ್ ಫೋಗಟ್ ಕಾಂಗ್ರೆಸ್‌ ಸೇರುವುದು ಖಚಿತ; ಮಾಜಿ ಸಿಎಂ ಜತೆ ಚರ್ಚೆ

Vinesh Phogat: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಐತಿಹಾಸಿಕ ಪದಕ ನಿರೀಕ್ಷೆಯಲ್ಲಿದ್ದ ವಿನೇಶ್​ ಫೈನಲ್​ ಪಂದ್ಯಕ್ಕೆ ಕೆಲವೆ ಗಂಟೆಗಳು ಇರುವಾಗ ನಿಯಮಿತ ತೂಕಕ್ಕಿಂತ ಹೆಚ್ಚು ಇದ್ದ ಕಾರಣ ಅನರ್ಹಗೊಂಡು ಪದಕ ವಂಚಿತರಾದರು.

VISTARANEWS.COM


on

Vinesh Phogat
Koo

ನವದೆಹಲಿ: ಮಾಜಿ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಅವರು ಕಾಂಗ್ರೆಸ್​ ಪಕ್ಷ(Vinesh Phogat joining Congress) ಸೇರಿ, ಮುಂಬರುವ ಹರಿಯಾಣ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು 2 ದಿನಗಳ ಹಿಂದೆ ಭಾರೀ ಚರ್ಚೆಯಾಗಿತ್ತು. ಇದೀಗ ಅವರು ರಾಜಕೀಯಕ್ಕೆ ಎಂಟ್ರಿ ಕೊಡುವುದು ಬಹುತೇಕ ಖಚಿತವಾದಂತಿದೆ.

ವಿನೇಶ್​ ಶುಕ್ರವಾರ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ(Bhupinder Singh Hooda) ಅವರನ್ನು ನವದೆಹಲಿಯ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಇದೇ ವೇಳೆ ಹೂಡಾ ಯಾರೇ ಕಾಂಗ್ರೆಸ್‌ಗೆ ಬಂದರೂ ಅವರನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ. ಇದನೆಲ್ಲ ಗಮನಿಸುವಾಗ ವಿನೇಶ್​ ಕಾಂಗ್ರೆಸ್​ ಪಕ್ಷ ಸೇರುವುದು ನಿಶ್ಚಿತವಾದಂತಿದೆ. ಮೂಲಗಳ ಪ್ರಕಾರ ಒಲಿಂಪಿಯನ್ ಕುಸ್ತಿಪಟು ವಿನೇಶ್​ ಮುಂದಿನ ತಿಂಗಳು ಅಧಿಕೃತವಾಗಿ ಕಾಂಗ್ರೆಸ್​ಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ Vinesh Phogat: ಬ್ರಿಜ್‌ಭೂಷಣ್ ವಿರುದ್ಧ ಮತ್ತೆ ಸಮರಕ್ಕಿಳಿದ ವಿನೇಶ್​ ಫೋಗಟ್; ದೆಹಲಿ ಪೊಲೀಸರ ವಿರುದ್ಧ ಗಂಭೀರ ಆರೋಪ

“ಕ್ರೀಡಾಪಟು ಯಾವುದೇ ನಿರ್ದಿಷ್ಟ ಪಕ್ಷ ಅಥವಾ ರಾಜ್ಯಕ್ಕೆ ಸೇರಿದವರಲ್ಲ. ಒಬ್ಬ ಕ್ರೀಡಾಪಟು ಇಡೀ ರಾಷ್ಟ್ರಕ್ಕೆ ಸೇರಿದವರು. ವಿನೇಶ್​ ಇಡೀ ರಾಷ್ಟ್ರಕ್ಕೆ ಸೇರಿದವಳು. ಯಾವ ಪಕ್ಷಕ್ಕೆ ಸೇರಬೇಕು ಬೇಡ ಎಂಬುದು ಅವರ ಆಯ್ಕೆ. ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಅವರನ್ನು ಸ್ವಾಗತಿಸುತ್ತೇವೆ. ಅವಳು ಏನು ಮಾಡಬೇಕೆಂದು ಬಯಸುತ್ತಾಳೆ ಎಂಬುದು ಅವಳ ನಿರ್ಧಾರ” ಎಂದು ಹರ್ಯಾಣ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹೂಡಾ ಹೇಳಿದ್ದಾರೆ.

ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಐತಿಹಾಸಿಕ ಪದಕ ನಿರೀಕ್ಷೆಯಲ್ಲಿದ್ದ ವಿನೇಶ್​ ಫೈನಲ್​ ಪಂದ್ಯಕ್ಕೆ ಕೆಲವೆ ಗಂಟೆಗಳು ಇರುವಾಗ ನಿಯಮಿತ ತೂಕಕ್ಕಿಂತ ಹೆಚ್ಚು ಇದ್ದ ಕಾರಣ ಅನರ್ಹಗೊಂಡು ಪದಕ ವಂಚಿತರಾದರು. ಅನರ್ಹತೆಯ ವಿರುದ್ಧ ಅವರು ಸಲ್ಲಿದ್ದ ಮನವಿಯನ್ನು ಕೂಡ ಆರ್ಬಿಟ್ರೇಶನ್ ಕೋರ್ಟ್ (CAS) ತಿರಸ್ಕರಿಸಿದೆ.

ಮೂಲಗಳ ಪ್ರಕಾರ ಮೂಲಗಳ ವಿನೇಶ್​ ಅವರು ತಮ್ಮ ಸೋದರ ಸಂಬಂಧಿ, ಮಾಜಿ ಕಾಮನ್​ವೆಲ್ತ್​ ಗೇಮ್​ ಚಿನ್ನದ ಪದಕ ವಿಜೇತೆ, ಬಿಜೆಪಿ ಪಕ್ಷದ ಕಾರ್ಯಕರ್ತೆ ಬಬಿತಾ ಫೋಗಟ್(Babita Phogat) ವಿರುದ್ಧ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ವಿನೇಶ್​ ಮಾತ್ರವಲ್ಲದೆ ಬಜರಂಗ್​ ಪೂನಿಯಾ ಕೂಡ ಕಾಂಗ್ರೆಸ್​ ಪಕ್ಷದಿಂದ ಚುನಾವಣೆಗೆ ನಿಲ್ಲುತ್ತಾರೆ ಎನ್ನಲಾಗಿದೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಚುನಾವಣಾ ಆಯೋಗವು ಕಳೆದ ಶುಕ್ರವಾರ ಚುನಾವಣೆ ದಿನಾಂಕ ಘೋಷಣೆ ಮಾಡಿತ್ತು. ಅಕ್ಟೋಬರ್ 1ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಬ್ರಿಜ್​ ಭೂಷಣ್​ ವಿರುದ್ಧದ ಪ್ರತಿಭಟನೆ ವೇಳೆ ವಿನೇಶ್​ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು. ಅಲ್ಲದೆ ತಮಗೆ ನೀಡಿದ್ದ ಖೇಲ್​ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ದೆಹಲಿಯ ಕರ್ತವ್ಯ ಪಥದಲ್ಲಿ ತ್ಯಜಿಸುವ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಬಳಿಕ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಜತೆ ಕಾಣಿಸಿಕೊಂಡಿದ್ದರು. ಇದನೆಲ್ಲ ನೋಡುವಾಗ ಅವರು ಈ ಬಾರಿ ಕಾಂಗ್ರೆಸ್​ ಪಕ್ಷದಿಂದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

Continue Reading

ಕ್ರೀಡೆ

Virender Sehwag: ಧೋನಿಯನ್ನು ಬ್ಯಾನ್​ ಮಾಡಬೇಕಿತ್ತು ಎಂದ ಟೀಮ್​ ಇಂಡಿಯಾ ಮಾಜಿ ಆಟಗಾರ

Virender Sehwag: 2019ರಲ್ಲಿ(IPL 2019) ನಡೆದಿದ್ದ ಐಪಿಎಲ್(IPL 2024)​ ಪಂದ್ಯವೊಂದರಲ್ಲಿ ಧೋನಿ ಆ್ಯಂಗ್ರಿಮ್ಯಾನ್‌ಆಗಿ ಬದಲಾಗಿದ್ದರು. ಜತೆಗೆ ದಂಡದ ಶಿಕ್ಷೆಗೂ ಗುರಿಯಾಗಿದ್ದರು.

VISTARANEWS.COM


on

Virender Sehwag
Koo

ನವದೆಹಲಿ: ಟೀಮ್​ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಅವರನ್ನು ಐಪಿಎಲ್​ನಿಂದ ಬ್ಯಾನ್​ ಮಾಡಬೇಕಿತ್ತು ಎಂದು ಮಾಜಿ ಆಟಗಾರ ವಿರೇಂದ್ರ ಸೆಹವಾಗ್​ ಹೇಳಿದ್ದಾರೆ. ಹಿಂದೊಮ್ಮೆ ಧೋನಿ(MS Dhoni) ಐಪಿಎಲ್​ ವೇಳೆ ನೇರವಾಗಿ ಮೈದಾನಕ್ಕೆ ನುಗ್ಗಿ ಅಂಪೈರ್ ತೀರ್ಪಿನ ಬಗ್ಗೆ​ ವಾಗ್ವಾದ ನಡೆಸಿದ್ದರು. ಈ ಘಟನೆ ಭಾರೀ ಸದ್ದು ಮಾಡಿತ್ತು. ಇದೇ ವಿಚಾರವಾಗಿ ಸೆಹವಾಗ್(Virender Sehwag)​ ಧೋನಿಯನ್ನು ಅಂದು ಮೂರು ಪಂದ್ಯಗಳಿಂದ ಬ್ಯಾನ್​ ಮಾಡಬೇಕಿತ್ತು(MS Dhoni banned from IPL) ಎಂದು ಹೇಳಿದ್ದಾರೆ.

2019ರಲ್ಲಿ(IPL 2019) ನಡೆದಿದ್ದ ಐಪಿಎಲ್(IPL 2024)​ ಪಂದ್ಯವೊಂದರಲ್ಲಿ ಧೋನಿ ಆ್ಯಂಗ್ರಿಮ್ಯಾನ್‌ಆಗಿ ಬದಲಾಗಿದ್ದರು. ಜತೆಗೆ ದಂಡದ ಶಿಕ್ಷೆಗೂ ಗುರಿಯಾಗಿದ್ದರು. 12ನೇ ಆವೃತ್ತಿಯ ಐಪಿಎಲ್​ನಲ್ಲಿ ಧೋನಿ ಅವರ ಪಿತ್ತ ನೆತ್ತಿಗೇರಿದ ಘಟನೆ ಸಂಭವಿಸಿತ್ತು. ಸವಾಯ್‌ ಮಾನ್‌ಸಿಂಗ್‌ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ(RR Vs CSK) ವಿರುದ್ಧ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಕೊನೆಯ ಎಸೆತದಲ್ಲಿ ಜಯ ಸಾಧಿಸಿ ಸಂಭ್ರಮಿಸಿತು. ಇದೇ ವೇಳೆ ಕ್ಯಾಪ್ಟನ್‌ ಕೂಲ್‌ ಭಾರೀ ಚರ್ಚೆಗೆ ಗುರಿಯಾದ್ದರು.

ಬೆನ್‌ ಸ್ಟೋಕ್ಸ್‌ ಎಸೆದ ಅಂತಿಮ ಓವರ್‌ನಲ್ಲಿ ಚೆನ್ನೈಗೆ 18 ರನ್‌ ಬೇಕಿತ್ತು. ಸ್ಟೋಕ್ಸ್‌ ಅವರ 4ನೇ ಎಸೆತ ನೋ ಬಾಲ್‌ ಆಗಿತ್ತು. ಪಂಪೈರ್​ ಉಲ್ಲಾಸ್‌ ಗಾಂದೆ ನೋಬಾಲ್‌ ನೀಡಿದ್ದರು. ಆದರೆ ಲೆಗ್‌ ಅಂಪಾಯರ್‌ ನೋಬಾಲ್‌ ನೀಡಿರಲಿಲ್ಲ. ಈ ಸನ್ನಿವೇಶ ಎಲ್ಲರನ್ನೂ ಗೊಂದಲಕ್ಕೀಡು ಮಾಡಿತ್ತು. ಈ ಎಸೆತದಲ್ಲಿ ಚೆನ್ನೈಆಟಗಾರರು 2 ರನ್‌ ಕಸಿದಿದ್ದರು. ಜಡೇಜ ಈ ಕುರಿತು ಅಂಪಾಯರ್‌ಗಳನ್ನು ಪ್ರಶ್ನಿಸಿದ್ದರೂ ಯಾವುದೇ ಧನಾತ್ಮಕ ಉತ್ತರ ದೊರೆಯಲಿಲ್ಲ. ಆಗ ಬೌಂಡರಿ ಗೆರೆ ಬಳಿ ನಿಂತು ಪಂದ್ಯ ವೀಕ್ಷಿಸುತ್ತಿದ್ದ ಧೋನಿ ಮೈದಾನಕ್ಕೆ ಓಡೋಡಿ ಬಂದು ಅಂಪಾಯರ್‌ಗಳ ಜತೆ ವಾಗ್ವಾದಕ್ಕಿಳಿದರು.

ಇದನ್ನೂ ಓದಿ Shakib Al Hasan: ನಿವೃತ್ತಿಯಾಗಿ ಎಂದು ಲೇವಡಿ ಮಾಡಿದ ಸೆಹವಾಗ್​ಗೆ ತಕ್ಕ ತಿರುಗೇಟು ನೀಡಿದ ಬಾಂಗ್ಲಾ ನಾಯಕ

ಆದರೆ, ಧೋನಿ ಮಾತನ್ನು ಯಾರೂ ಒಪ್ಪಲಿಲ್ಲ. ಥರ್ಡ್‌ ಅಂಪಾಯರ್‌ ಕೂಡ ಮನವಿ ನಿರಾಕರಿಸಿದ್ದರು. ಧೋನಿ ಈ ಹಿಂದೆ ಒಮ್ಮೆಯೂ ಕೂಡ ಮೈದಾನದಲ್ಲಿ ಇಷ್ಟೊಂದು ತಾಳ್ಮೆ ಕಳೆದುಕೊಂಡಿದನ್ನು ಯಾರು ಕೂಡ ನೋಡಿರಲಿಲ್ಲ. ಅಂದು ಧೋನಿಯನ್ನು ಕಂಡ ಅವರ ಅಭಿಮಾನಿಗಳು ಒಂದು ಕ್ಷಣ ದಂಗಾಗಿದ್ದರು. ಧೋನಿಯ ಈ ಅತಿರೇಕದ ವರ್ತನೆಗೆ ಪಂದ್ಯ ಶುಲ್ಕದ ಶೇಕಡಾ 50ರಷ್ಟು ದಂಡ ವಿಧಿಸಲಾಗಿತ್ತು.

ಕ್ರಿಕ್​ಬಜ್​ಗೆ ನೀಡಿರುವ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಸೆಹ್ವಾಗ್, ಅಂದು ಧೋನಿಯ ನಡೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಇದರಿಂದ ಅವರು ಸುಲಭವಾಗಿ ತಪ್ಪಿಸಿಕೊಂಡರು. ನನ್ನ ಪ್ರಕಾರ ಧೋನಿಯನ್ನು ಕನಿಷ್ಠ ಎರಡು ಮೂರು ಪಂದ್ಯಗಳಿಂದ ಬ್ಯಾನ್ ಮಾಡಬೇಕಿತ್ತು. ಏಕೆಂದರೆ ಧೋನಿ ಮಾಡಿರುವುದನ್ನು, ನಾಳೆ ಇನ್ನೊಬ್ಬ ನಾಯಕನೂ ಮಾಡಬಹುದು ಎಂದು ಸೆಹವಾಗ್​ ಹೇಳಿದ್ದಾರೆ.

Continue Reading

ಕ್ರೀಡೆ

Test Cricket: ಟೆಸ್ಟ್ ಕ್ರಿಕೆಟ್ ಉತ್ತೇಜನಕ್ಕೆ ಐಸಿಸಿ ನಿಧಿ ಯೋಜನೆ; ಭಾರತಕ್ಕೆ ನೆರವು ಸಿಗಲ್ಲ?

Test Cricket: ಮೂಲಗಳ ಪ್ರಕಾರ ಐಸಿಸಿಯ ಈ ನಿಧಿ ಯೋಜನೆಯ ಲಾಭ, ಭಾರತ, ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್‌ ದೇಶಗಳಿಗೆ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ

VISTARANEWS.COM


on

Koo

ದುಬೈ: ಟೆಸ್ಟ್ ಕ್ರಿಕೆಟ್‌ಗೆ(Test Cricket) ಉತ್ತೇಜನ ನೀಡುವ ಸಲುವಾಗಿ ಈಗಾಗಲೇ ಐಸಿಸಿ ಟೆಸ್ಟ್​ ವಿಶ್ವಕಪ್(WTC)​ ಕೂಟ ಆರಂಭಿಸಿದೆ. 2 ಆವೃತ್ತಿ ಕೂಡ ನಡೆದಿದೆ. ಇದೀಗ ಟೆಸ್ಟ್​ ಕ್ರಿಕೆಟ್​ನತ್ತ ಯುವ ಕ್ರಿಕೆಟಿಗರನ್ನು ಸೆಳೆಯವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. 125 ಕೋಟಿ (ಯುಎಸ್‌ಡಿ 15 ಮಿಲಿಯನ್) ಮೊತ್ತದ ನಿಧಿಯನ್ನು ಮೀಸಲಿಡಲು ಐಸಿಸಿ(ICC) ನಿರ್ಧರಿಸಿದೆ. ಕ್ರಿಕೆಟ್ ಆಸ್ಟ್ರೇಲಿಯಾ, ಈ ಪ್ರಸ್ತಾವನೆಯನ್ನು ಐಸಿಸಿಗೆ ಸಲ್ಲಿಸಿದೆ.

ಟೆಸ್ಟ್ ಕ್ರಿಕೆಟ್ ಆಡಲಿರುವ ಆಟಗಾರರ ಪಂದ್ಯದ ಕನಿಷ್ಠ ಸಂಭಾವನೆಯನ್ನು ಹೆಚ್ಚಿಸುವ ಜತೆಗೆ ವಿದೇಶಿ ಸರಣಿಗಳಿಗೆ ತಂಡಗಳನ್ನು ಕಳುಹಿಸುವ ತಂಡದ ಪ್ರವಾಸ ಶುಲ್ಕದ ಜತೆಗೆ ಟೆಸ್ಟ್ ಕ್ರಿಕೆಟ್ ಆಡಲಿರುವ ಪ್ರತಿ ಆಟಗಾರರರಿಗೆ ಕನಿಷ್ಠ 8 ಲಕ್ಷ ರೂ. ಸಂಭಾವನೆ ನೀಡಲು ಇದು ನೆರವಾಗಲಿದೆ.

ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುವ ಜತೆಗೆ ಆಟಗಾರರನ್ನು ಪ್ರೋತ್ಸಾಹಿಸಲು ಬಿಸಿಸಿಐ ಹೊಸ ಯೋಜನೆಯ ಅಡಿಯಲ್ಲಿ ಈಗಾಗಲೆ ಭಾರತದ ಟೆಸ್ಟ್ ಕ್ರಿಕೆಟಿಗರಿಗೆ ಬೋನಸ್ ರೂಪದಲ್ಲಿ ಹೆಚ್ಚಿನ ಸಂಭಾವನೆ ನೀಡುತ್ತಿದೆ. ವಾರ್ಷಿಕ ಶೇ.75 ಟೆಸ್ಟ್ ಪಂದ್ಯಗಳಲ್ಲಿ ಭಾರತದ ತಂಡವನ್ನು ಪ್ರತಿನಿಧಿಸಲಿರುವ ಆಟಗಾರರಿಗೆ ಪ್ರತಿ ಪಂದ್ಯಕ್ಕೆ ತಲಾ 45 ಲಕ್ಷ ರೂಪಾಯಿ ಜತೆಗೆ ಪಂದ್ಯದ ಶುಲ್ಕ 15 ಲಕ್ಷ ನೀಡಲಿದ್ದು, ಶೇ.50-70 ಪಂದ್ಯಗಳನ್ನು ಆಡಲಿರುವ ಆಟಗಾರರು ಪ್ರತಿ ಪಂದ್ಯಕ್ಕೆ ತಲಾ 30 ಲಕ್ಷ ಬೋನಸ್ ಪಡೆದುಕೊಳ್ಳಲಿದ್ದಾರೆ.

ಭಾರತಕ್ಕೆ ಈ ಲಾಭವಿಲ್ಲ?


ಮೂಲಗಳ ಪ್ರಕಾರ ಐಸಿಸಿಯ ಈ ನಿಧಿ ಯೋಜನೆಯ ಲಾಭ, ಭಾರತ, ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್‌ ದೇಶಗಳಿಗೆ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ. ಈ ರಾಷ್ಟ್ರಗಳು ಈಗಾಗಲೇ ತಮ್ಮ ತಂಡದ ಆಟಗಾರರಿಗೆ ಉತ್ತಮ ಸಂಭಾವನೆಯನ್ನು ನೀಡುತ್ತಿದೆ. ಪ್ರಸ್ತುತ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ವೆಸ್ಟ್ ಇಂಡೀಸ್, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಚೇತರಿಕೆ ಇದು ಸಹಕಾರಿಯಾಗಲಿದೆ.

ಇದನ್ನೂ ಓದಿ ICC Chairman Election: ಅಮಿತ್​ ಶಾ ಮಗ ಜಯ್​ ಶಾ ಐಸಿಸಿಯ ಮುಂದಿನ ಅಧ್ಯಕ್ಷ?

ಯೂತ್​ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಸೇರ್ಪಡೆಗೆ ಐಸಿಸಿ ಪ್ರಯತ್ನ


2028ರಲ್ಲಿ ಲಾಸ್​ ಏಂಜಲಿಸ್​ನಲ್ಲಿ(los angeles 2028 olympics) ನಡೆಯುವ​ ಒಲಿಂಪಿಕ್ಸ್​ಗೆ(olympics) ಕ್ರಿಕೆಟ್​ ಸೇರ್ಪಡೆಯಾಗಿರುವುದು ಈಗಾಗಲೇ ತಿಳಿದ ವಿಚಾರ. ಇದೀಗ 2030ರ ಯೂತ್​ ಒಲಿಂಪಿಕ್ಸ್​ಗೂ(Youth Olympic 2030) ಕ್ರಿಕೆಟ್​ ಸೇರ್ಪಡೆಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಮುಂಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸಭೆಯಲ್ಲಿ ಕ್ರಿಕೆಟ್​ ಆಟವನ್ನು ಮತ್ತೆ ಒಲಿಂಪಿಕ್ಸ್​ಗೆ ಸೇರ್ಪಡೆಗೊಳಿಸಲಾಗಿತ್ತು. ಇದೀಗ ಯೂತ್​ ಒಲಿಂಪಿಕ್ಸ್​ ಕ್ರಿಕೆಟ್(olympics cricket)​ ಸೇರ್ಪಡೆಯ ಸಂಬಂಧ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿ (ಐಒಸಿ) ಜತೆಗೆ ಚರ್ಚಿಸಲಾಗುವುದು ಎಂದು ಐಸಿಸಿ(ICC) ಹೇಳಿದೆ.

2030ರ ಯೂತ್​ ಒಲಿಂಪಿಕ್​ ಗೇಮ್ಸ್​ ಆತಿಥ್ಯಕ್ಕೆ ಭಾರತ ಬಿಡ್​ ಸಲ್ಲಿಸಲು ಮುಂದಾಗಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಯೂತ್​ ಒಲಿಂಪಿಕ್ಸ್​ಅನ್ನು ಮುಂಬೈನಲ್ಲಿ ನಡೆಸಲು ಯೋಜನೆ ರೂಪಿಸಿಕೊಂಡಿದೆ ಎನ್ನಲಾಗಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯ ಸದಸ್ಯೆಯಾಗಿರುವ ನೀತಾ ಅಂಬಾನಿ ಅವರು ಈಗಾಗಲೇ ಒಲಿಂಪಿಕ್ಸ್​ ವಿಚಾರದಲ್ಲಿ ಹಲವು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಹೀಗಾಗಿ ಯೂತ್​ ಒಲಿಂಪಿಕ್ಸ್​ಗೆ ಭಾರತ ಆತಿಥ್ಯ ವಹಿಸಿಕೊಳ್ಳುವಲ್ಲಿ ಮಹತ್ವದ ಪಾತ್ರವಹಿಸುವ ಸಾಧ್ಯತೆ ಇದೆ.

Continue Reading
Advertisement
unified pension scheme
ಪ್ರಮುಖ ಸುದ್ದಿ2 hours ago

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Sunita Williams
ದೇಶ2 hours ago

Sunita Williams: ಮುಂದಿನ ವರ್ಷ ಫೆಬ್ರುವರಿಯಲ್ಲಿ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್;‌ ನಾಸಾ ಘೋಷಣೆ

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರ ಬಹು ದಿನಗಳ ಕನಸು ನನಸು; ಕುಟುಂಬದ ಆಪ್ತರಿಂದ ಶುಭ ಸುದ್ದಿ

Rahul Gandhi
ದೇಶ8 hours ago

Rahul Gandhi: ಮಿಸ್‌ ಇಂಡಿಯಾ ಪಟ್ಟಿಯಲ್ಲಿ ದಲಿತ, ಬುಡಕಟ್ಟು, ಒಬಿಸಿ ಮಹಿಳೆಯರು ಇಲ್ಲವೇ ಇಲ್ಲ-ರಾಹುಲ್‌ ಗಾಂಧಿ ಹೊಸ ಆರೋಪ

Sudha Murthy
ಬೆಂಗಳೂರು9 hours ago

Sudha Murthy: ವೈದ್ಯಕೀಯ ಸೇವೆಯಲ್ಲಿ ಬದ್ಧತೆ, ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

Unified Pension scheme
ಪ್ರಮುಖ ಸುದ್ದಿ9 hours ago

Unified Pension scheme: ಏಕೀಕೃತ ಪಿಂಚಣಿ ಯೋಜನೆ ಸರ್ಕಾರಿ ನೌಕರರಿಗೆ ಕೇಂದ್ರ ನೀಡುತ್ತಿರುವ ಆರ್ಥಿಕ ಭದ್ರತೆ- ಪ್ರಧಾನಿ ನರೇಂದ್ರ ಮೋದಿ

Amit Shah
ದೇಶ10 hours ago

Amit Shah: 2026ರ ವೇಳೆಗೆ ನಕ್ಸಲಿಸಂ ಸಂಪೂರ್ಣ ನಿರ್ಣಾಮ; ಬಿಗ್‌ ಟಾರ್ಗೆಟ್‌ ಫಿಕ್ಸ್‌ ಮಾಡಿದ ಕೇಂದ್ರ

Vijayanagara News
ವಿಜಯನಗರ10 hours ago

Vijayanagara News: ಮೀನುಗಾರರಿಗೆ ರಾಜ್ಯ‌ ಸರ್ಕಾರದಿಂದ ನಾನಾ ಸೌಕರ್ಯ; ಸಚಿವ ಮಂಕಾಳ ವೈದ್ಯ

NPS v/s UPS
ದೇಶ11 hours ago

NPS v/s UPS: ಏಕೀಕೃತ ಪಿಂಚಣಿ ಯೋಜನೆ ಅಂದ್ರೆ ಏನು? ಇದು NPSಗಿಂತ ಹೇಗೆ ಭಿನ್ನ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ17 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌