IPL 2023: ಟೈಟನ್ಸ್​ ರನ್​ ಮಳೆಗೆ ಮುಳುಗಿದ ಮುಂಬೈ; ಫೈನಲ್​ಗೆ ಹಾರ್ದಿಕ್​ ಪಡೆ - Vistara News

ಕ್ರಿಕೆಟ್

IPL 2023: ಟೈಟನ್ಸ್​ ರನ್​ ಮಳೆಗೆ ಮುಳುಗಿದ ಮುಂಬೈ; ಫೈನಲ್​ಗೆ ಹಾರ್ದಿಕ್​ ಪಡೆ

ಹಾಲಿ ಚಾಂಪಿಯನ್​ ಗುಜರಾತ್​ ಟೈಟನ್ಸ್​ ತಂಡ ಮಾಜಿ ಚಾಂಪಿಯನ್​ ಮುಂಬೈ ವಿರುದ್ಧ ಗೆಲುವು ದಾಖಲಿಸಿ ಫೈನಲ್​ಗೆ ಪ್ರವೇಶ ಪಡೆದಿದೆ.

VISTARANEWS.COM


on

Narendra Modi Stadium, Ahmedabad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​: ಹಾಲಿ ಚಾಂಪಿಯನ್​ ಗುಜರಾತ್​ ಟೈಟನ್ಸ್​ ತನ್ನ ಖ್ಯಾತಿಗೆ ತಕ್ಕಂತೆ ಆಟವಾಡುವ ಮೂಲಕ ಮುಂಬೈ ಇಂಡಿಯನ್ಸ್​ ವಿರುದ್ಧದ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ 62 ರನ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಹಾರ್ದಿಕ್​ ಪಡೆ ಫೈನಲ್​ ಟಿಕೆಟ್​ ಪಡೆಯಿತು. ಮೇ 28 ರಂದು ನಡೆಯುವ ​ಪ್ರಶಸ್ತಿ ಸಮರದಲ್ಲಿ ಚೆನ್ನೈ ತಂಡದ ಸವಾಲು ಎದುರಿಸಲಿದೆ. ಸೋಲು ಕಂಡ ಮುಂಬೈ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಮಳೆಯಿಂದ ವಿಳಂಬಗೊಂಡ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಹಾಲಿ ಚಾಂಪಿಯನ್​ ಗುಜರಾತ್​ ಟೈಟನ್ಸ್​ ಶುಭಮನ್​ ಗಿಲ್​ ಅವರ ಅಮೋಘ ಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 233 ರನ್​ ಗಳಿಸಿತು. ಜವಾಬಿತ್ತ ಮುಂಬೈ ಇಂಡಿಯನ್ಸ್​ 18.2 ಓವರ್​ಗಳಲ್ಲಿ 171 ರನ್​ ಗಳಿಸಿ ಸರ್ವಪತನ ಕಂಡಿತು. ಗುಜರಾತ್​ ಪರ ಮೋಹಿತ್​ ಶರ್ಮ ಅವರು ಕೇವಲ 10 ರನ್​ ನೀಡಿ 5 ವಿಕೆಟ್​ ಕಿತ್ತು ಮಿಂಚಿದರು.

ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಮುಂಬೈ ಗಾಯದ ಮತ್ತು ಆರಂಭಿಕ ಆಘಾತದ ಹೊರತಾಗಿಯೂ ಉತ್ತಮ ರನ್​ ಗಳಿಸಿತು. ಇಶಾನ್​ ಕಿಶನ್​ ಅವರು ಗಾಯಗೊಂಡ ಕಾರಣ ಅವರ ಬದಲು ನೆಹಾಲ್​ ವಧೇರಾ ರೋಹಿತ್​ ಜತೆ ಇನಿಂಗ್ಸ್​ ಆರಂಭಿಸಿದರು. ಆದರೆ ಅವರು ಕೇವಲ ಒಂದು ಬೌಂಡರಿಗೆ ಮಾತ್ರ ಸೀಮಿತರಾಗಿ ಶಮಿಗೆ ವಿಕೆಟ್​ ಒಪ್ಪಿಸಿದರು. ಇದರ ಬೆನ್ನಲೇ ರೋಹಿತ್​ ಕೂಡ 8 ರನ್​ಗೆ ಆಟ ಮುಗಿಸಿದರು.

ದ್ವಿತೀಯ ವಿಕೆಟ್​ಗೆ ಕ್ರೀಸ್​ಗಿಳಿದಿದ್ದ ಕ್ಯಾಮರೂನ್​ ಗ್ರೀನ್​ ಅವರು ಗಾಯಗೊಂಡು ರಿಟೇರ್ಡ್​ ಹರ್ಟ್​ ಆಗಿ ಹೊರ ಹೋಗಿದ್ದರು. ಆದರೆ ರೋಹಿತ್​ ವಿಕೆಟ್​ ಪತನದ ಬಳಿಕ ಮತ್ತೆ ಬ್ಯಾಟಿಂಗ್​ ನಡೆಸಲು ಬಂದು ಸ್ಫೋಟಕ ಬ್ಯಾಟಿಂಗ್​ ನಡೆಸಿದರು. ಮತ್ತೊಂದು ತುದಿಯಲ್ಲಿ ಸೂರ್ಯಕುಮಾರ್​ ಕೂಡ ತಮ್ಮ ಬ್ಯಾಟಿಂಗ್​ ಪ್ರತಾಪವನ್ನು ತೋರಿಸಿದರು. ಉಭಯ ಆಟಗಾರರ ಈ ಬ್ಯಾಟಿಂಗ್​ ಆರ್ಭಟದಿಂದ ತಂಡ 10 ಓವರ್​ಗೆ ನೂರರ ಗಡಿ ದಾಡಿತು.

ಇದೇ ವೇಳೆ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿದ ಜೋಶುವಾ ಲಿಟಲ್​ ಅವರು ತಾನೆಸೆದ ಮೊದಲ ಓವರ್​ನ ದ್ವಿತೀಯ ಎಸೆತದಲ್ಲಿ ಗ್ರೀನ್​ ಅವರನ್ನು ಕ್ಲೀನ್​ ಬೌಲ್ಡ್​ ಮಾಡಿದರು. ಈ ಮೂಲಕ ಮುಂಬೈ ತಂಡದ ರನ್​ ವೇಗಕ್ಕೆ ಕಡಿವಾಣ ಹಾಕಿದರು. 20 ಎಸೆತ ಎದುರಿಸಿದ ಗ್ರೀನ್​ 30 ರನ್​ ಚಚ್ಚಿದರು. ಸೂರ್ಯಕುಮಾರ್​ ಅವರ ಬ್ಯಾಟಿಂಗ್​ ಅಬ್ಬರ ಮಾತ್ರ ಮೊದಲಿನಂತೆ ಸಾಗಿತು. 33 ಎಸೆತಗಳಲ್ಲಿ ಅರ್ಧಶತಕವನ್ನು ಪೂರ್ತಿಗೊಳಿಸಿದರು. ಆದರೆ ಪ್ರಯೋಗವೊಂದನ್ನು ಮಾಡಲು ಮುಂದಾಗಿ ಮೋಹಿತ್​ ಶರ್ಮ ಅವರ ಎಸೆದಲ್ಲಿ ಸೂರ್ಯ ಕ್ಲೀನ್​ ಬೌಲ್ಡ್​ ಆದರು. ಈ ವಿಕೆಟ್​ ಪತನಗೊಂಡಂತೆ ಮುಂಬೈ ತಂಡ ಗೆಲುವಿನ ವಿಶ್ವಾಸವು ಕಳೆದುಕೊಂಡಿತು. ಸೂರ್ಯಕುಮಾರ್​ 38 ಎಸೆತಗಳಲ್ಲಿ 61 ರನ್​ ಬಾರಿಸಿದರು. 14 ಓವರ್​ ತನಕ ಸರಿಯಾಗಿ ದಂಡಿಸಿಕೊಂಡ ಗುಜರಾತ್​ ಬೌಲರ್​ಗಳು ಆ ಬಳಿಕ ಹಿಡಿದ ಸಾಧಿಸಿ ಪಂದ್ಯದಲ್ಲಿ ಮೇಲುಗೈ ಸಾಧಿಸಿದರು. ಅಂತಿಮವಾಗಿ ಮುಂಬೈ ನಾಟಕೀಯ ಕುಸಿತ ಕಂಡು ಸೋಲಿಗೆ ತುತ್ತಾಯಿತು.

ಪವರ್​ ಪ್ಲೇ ಬಳಿಕ ಬಿರುಸಿನ ಬ್ಯಾಟಿಂಗ್​ ನಡೆಸಿದ ಗಿಲ್​

ಇದಕ್ಕೂ ಮುನ್ನ ಇನಿಂಗ್ಸ್​ ಆರಂಭಿಸಿದ ಶುಭಮನ್​ ಗಿಲ್​ ಮತ್ತು ವೃದ್ಧಿಮಾನ್​ ಸಾಹಾ ಅವರು ಆರಂಭದಲ್ಲಿ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದರು. ಈ ಪರಿಣಾಮ ಪವರ್​ ಪ್ಲೇಯಲ್ಲಿ ದೊಡ್ಡ ಮೊತ್ತ ಹರಿದು ಬರಲಿಲ್ಲ. ಪವರ್​ ಪ್ಲೇ ಮುಗಿದ ತಕ್ಷಣ ಬ್ಯಾಟಿಂಗ್​ ವೇಗಕ್ಕೆ ಚುರುಕು ಮುಟ್ಟಿಸಿದ ಗಿಲ್​ ಮುಂಬೈ ಬೌಲರ್​ಗಳನ್ನು ದಂಡಿಸಿ ರನ್​ ಗಳಿಸಲು ಆರಂಭಿಸಿದರು. ಇದೇ ವೇಳೆ ಅವರು ಜೀವದಾನವೊಂದು ಪಡೆದರು. 31 ರನ್​ ಗಳಿಸಿದ್ದ ವೇಳೆ ಟಿಮ್​ ಡೇವಿಡ್​ ಅವರು ಕ್ಯಾಚ್​ ಕೈಚೆಲ್ಲಿದರು.

ಗಿಲ್​ ಅವರು ಈ ಪಂದ್ಯದಲ್ಲಿ 8 ರನ್​ ಗಳಿಸಿದ ವೇಳೆ ನೂತನ ಮೈಲುಗಲ್ಲೊಂದನ್ನು ತಲುಪಿದರು. ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರನಾಗಿ ಮೂಡಿಬಂದರು. ಈ ಮೂಲಕ ಆರ್​ಸಿಬಿಯ ನಾಯಕ ಫಾಫ್ ಡು ಪ್ಲೆಸಿಸ್​ ಅವರನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ಪಡೆದರು. ಡು ಪ್ಲೆಸಿಸ್​ 14 ಪಂದ್ಯಗಳಿಂದ 730 ರನ್​ ಗಳಿಸಿದ್ದರು. ಇದೀಗ ಗಿಲ್​ 800ರ ಗಡಿ ದಾಟಿದ್ದಾರೆ. ಈ ಸಾಧನೆ ಮಾಡಿದ ನಾಲ್ಕನೇ ಆಟಗಾರ ಎಂಬ ಹಿರಿಮೆಗೂ ಗಿಲ್​ ಪಾತ್ರರಾದರು. ವಿರಾಟ್​ ಕೊಹ್ಲಿ, ಜಾಸ್​ ಬಟ್ಲರ್​ ಮತ್ತು ಡೇವಿಡ್​ ವಾರ್ನರ್​ ಈ ಸಾಧನೆ ಮಾಡಿದ ಮೊದಲಿಗರು.

ಮತ್ತೊಂದು ತುದಿಯಲ್ಲಿ ರನ್​ ಗಳಿಸಲು ಪರದಾಡುತ್ತಿದ್ದ ವೃದ್ಧಿಮಾನ್​ ಸಾಹಾ ಅವರು ಅನುಭವಿ ಸ್ಪಿನ್ನರ್​ ಪಿಯೂಷ್​ ಚಾವ್ಲಾ ಅವರ ಎಸೆತದಲ್ಲಿ ಮುಂದೆ ಬಂದು ಸಿಕ್ಸರ್​ ಬಾರಿಸುವ ಪ್ರಯತ್ನದಲ್ಲಿ ಎಡವಿ ಇಶಾನ್​ ಕಿಶನ್​ ಅವರಿಂದ ಸ್ಡಂಪ್​ ಔಟ್​ ಆದರು. ಅವರ ಗಳಿಕೆ 16 ಎಸೆತಗಳಿಂದ 18 ರನ್​. ಸಾಹಾ​ ವಿಕೆಟ್​ ಪತನದ ಬಳಿಕ ಕ್ರೀಸ್​ಗಿಳಿದ ಸಾಯಿ ಸುದರ್ಶನ್​ ಅವರು ಗಿಲ್​ ಜತೆಗೂಡಿ ಉಪಯುಕ್ತ ಇನಿಂಗ್ಸ್​ ಕಟ್ಟಿದರು. ಪರಿಣಾಮ ಗುಜರಾತ್​ 10 ಓವರ್​ ಮುಕ್ತಾಯದ ವೇಳೆಗೆ 90 ಗಡಿ ದಾಟಿ 10ರ ಸರಾಸರಿಯಲ್ಲಿ ರನ್​ ಕಲೆಹಾಕುವ ಮೂಲಕ ಆರಂಭದಲ್ಲಿ ಕಂಡಿದ್ದ ರನ್ ಬರಗಾಲವನ್ನು ಸರಿದೂಗಿಸಿತು.

ಮೂರನೇ ಶತಕ ಸಿಡಿಸಿ ಸಂಭ್ರಮಿಸಿದ ಗಿಲ್​

ಟಿಮ್​ ಡೇವಿಡ್​ ಅವರಿಂದ ಸಿಕ್ಕ ಒಂದು ಜೀವದಾನದ ಸಂಪೂರ್ಣ ಲಾಭವೆತ್ತಿದ ಶುಭಮನ್​ ಗಿಲ್​ ಶತಕ ಬಾರಿಸಿ ಸಂಭ್ರಮಿಸಿದರು. ಇದು ಅವರ ಮೂರನೇ ಐಪಿಎಲ್​ ಶತಕವಾಗಿದೆ. ಈ ಮೂರು ಶತಕವೂ ಈ ಆವೃತ್ತಿಯಲ್ಲಿಯೇ ದಾಖಲಾಗಿದ್ದು ವಿಶೇಷ. ಒಂದೇ ಆವೃತ್ತಿಯಲ್ಲಿ ಅತ್ಯಧಿಕ ಶತಕ ಬಾರಿಸಿದ ಸಾಧನೆ ವಿರಾಟ್​ ಕೊಹ್ಲಿ ಮತ್ತು ಜಾಸ್​ ಬಟ್ಲರ್​ ಹೆಸರಿನಲ್ಲಿದೆ. ಉಭಯ ಆಟಗಾರರು 4 ಶತಕ ಬಾರಿಸಿದ್ದಾರೆ.

ಇದನ್ನೂ ಓದಿ IPL 2023: ಟೂರ್ನಿಯಿಂದ ಹೊರಬಿದ್ದರೂ ವಿಶೇಷ ಅವತಾರದಲ್ಲಿ ಕಾಣಿಸಿಕೊಂಡ ಆರ್​ಸಿಬಿ ನಾಯಕ

ಕೊಹ್ಲಿಯ ಶೈಲಿಯಲ್ಲೇ ಬ್ಯಾಟ್​ ಬೀಸಿದ ಗಿಲ್,​ ಮುಂಬೈ ಬೌಲರ್​ಗಳ ಮೇಲೆರಗಿ ಸಿಕ್ಸರ್​, ಬೌಂಡರಿಗಳ ಮಳೆಯನ್ನೇ ಸುರಿಸಿದರು. ಈ ಮೂಲಕ ನೆರೆದಿದ್ದ ಸ್ಥಳೀಯ ಅಭಿಮಾನಿಗಳಿಗೆ ಭರಪೂರ ಮನರಂಜನೆ ಒದಗಿಸಿದರು. ಅದರಲ್ಲೂ ಚಾವ್ಲಾ ಓವರ್​ನಲ್ಲಿ ಬ್ಯಾಕ್​ ಟು ಬ್ಯಾಕ್​ ಸಿಕ್ಸರ್​ ಬಾರಿಸುವ ಮೂಲಕ ಚಾವ್ಲಾ ಅವರಿಗೆ ಚಳಿ ಬಿಡಿಸಿದರು. ಈ ಓವರ್​ನಲ್ಲಿ 20 ರನ್​ ಸೋರಿಕೆಯಾಯಿತು. ಮತ್ತೊಂದು ತುದಿಯಲ್ಲಿ ಬ್ಯಾಟಿಂಗ್​ ನಡೆಸುತ್ತಿದ್ದ ಸಾಯಿ ಸುದರ್ಶನ್‌ ಕೂಡ ಸಿಕ್ಕ ಅವಕಾಶದಲ್ಲಿ ಸಿಕ್ಸರ್, ಬೌಂಡರಿ ಬಾರಿಸುತ್ತಾ ಸಾಗಿ ತಂಡದ ಮೊತ್ತವನ್ನು ಹಿಗ್ಗಿಸುತ್ತಿದ್ದರು. 43 ರನ್​ ಗಳಿಸಿದ ವೇಳೆ ಅವರು ರಿಟೈರ್ಡ್ ಔಟ್ ಆದರು. ಅವರ ಈ ಇನಿಂಗ್ಸ್​ನಲ್ಲಿ 5 ಬೌಂಡರಿ ಮತ್ತಿ ಒಂದು ಸಿಕ್ಸರ್​ ಸಿಡಿಯಿತು.

ಬಿರುಸಿನ ಬ್ಯಾಟಿಂಗ್​ ಮೂಲಕ 150 ರನ್​ಗಳತ್ತ ಮುನ್ನುಗ್ಗುತ್ತಿದ್ದ ಗಿಲ್​ ಅವರನ್ನು ಅಂತಿಮವಾಗಿ ಕಳೆದ ಲಕ್ನೋ ವಿರುದ್ಧದ ಪಂದ್ಯದ ಹೀರೊ ಆಕಾಶ್​ ಮಧ್ವಾಲ್​ ಕಟ್ಟಿ ಹಾಕಿದರು. 60 ಎಸೆತ ಎದುರಿಸಿದ ಗಿಲ್​ ಬರೊಬ್ಬರಿ 10 ಸಿಕ್ಸರ್​ ಮತ್ತು 7 ಬೌಂಡರಿ ನೆರವಿನಿಂದ 129 ರನ್​ ಗಳಿಸಿದರು.​ ಅಂತಿಮ ಹಂತದಲ್ಲಿ ಪಾಂಡ್ಯ ಅಜೇಯ 28 ರನ್​ ಸಿಡಿಸಿ ತಂಡದ ಬೃಹತ್​ ಮೊತ್ತಕ್ಕೆ ಕಾರಣರಾದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

LSG vs PBKS: ಗೆಲುವಿನ ಖಾತೆ ತೆರೆದೀತೇ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ತಂಡ?

LSG vs PBKS: ಉಭಯ ತಂಡಗಳು ಇದುವರೆಗೆ ಐಪಿಎಲ್​ನಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದು ಲಕ್ನೋ ತಂಡ 2 ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ. ಪಂಜಾಬ್​ ಒಂದು ಪಂದ್ಯ ಮಾತ್ರ ಗೆದ್ದಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಲಕ್ನೋ ಬಲಿಷ್ಠವಾಗಿ ಗೋಚರಿಸಿದೆ.

VISTARANEWS.COM


on

Kaptaan KL is keeping
Koo

ಲಕ್ನೋ: ರಾಜಸ್ಥಾನ್​ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಹೀನಾಯ ಸೋಲು ಕಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಕೆ.ಎಲ್​ ರಾಹುಲ್(KL Rahul)​ ಸಾರಥ್ಯದ ಲಕ್ನೋ ಸೂಪರ್​ ಜೈಂಟ್ಸ್​ ಶನಿವಾರದ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​​(LSG vs PBKS) ವಿರುದ್ಧ ಕಣಕ್ಕಿಳಿಯಲಿದೆ. ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಬೇಕಿದ್ದರೆ ತಂಡಕ್ಕೆ ಗೆಲುವು ಅತ್ಯಗತ್ಯ.

ಲಕ್ನೋ ತಂಡಕ್ಕೆ ಇದು ತವರಿನ ಮೊದಲ ಪಂದ್ಯವಾಗಿದೆ. ತಂಡ ಬಲಿಷ್ಠವಾಗಿದ್ದರೂ ಕೂಡ ಆಟಗಾರರ ಸಂಘಟಿತ ಪ್ರದರ್ಶನ ಮಾತ್ರ ಸಾಲದು. ಬೌಲಿಂಗ್​ ವಿಭಾಗದಲ್ಲಿ ನವೀನ್​ ಉಲ್​ ಹಕ್​ ಬದಲು ಗಬಾದಲ್ಲಿ ಆಸ್ಟ್ರೇಲಿಯಾದ ಹುಟ್ಟಡಗಿಸಿದ ವಿಂಡೀಸ್​ನ ಯುವ ಆಟಗಾರ ಶಮರ್​ ಜೋಸೆಪ್​ ಅವರನ್ನು ಆಡಿಸಿದರೆ ಉತ್ತಮ. ಬ್ಯಾಟಿಂಗ್​ನಲ್ಲಿಯೂ ಮಾರ್ಕಸ್​ ಸ್ಟೋಯಿಸ್​, ಕೃಣಾಲ್​ ಪಾಂಡ್ಯ, ಬದೋನಿ, ಪಡಿಕ್ಕಲ್​ ಮತ್ತು ಕ್ವಿಂಟನ್​ ಡಿ ಕಾಕ್​ ಸಿಡಿಯುವ ಅನಿವಾರ್ಯತೆ ಇದೆ.

ಕಳೆದ ಪಂದ್ಯದಲ್ಲಿ ರಾಹುಲ್​ ಮತ್ತು ಪೂರನ್​ ಮಾತ್ರ ತಂಡಕ್ಕೆ ಆಸರೆಯಾಗಿದ್ದರು. ಲಕ್ನೋ ಪರ ಚೊಚ್ಚಲ ಪಂದ್ಯವನ್ನಾಡಿದ ಪಡಿಕ್ಕಲ್​ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿ ಈ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್​ ನಡೆಸಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಳ್ಳಬೇಕಿದೆ. ರವಿ ಬಿಷ್ಟೋಯಿ ಕೂಡ ತುರ್ತು ವೇಗದಲ್ಲಿ ಬೌಲಿಂಗ್​ ಲಯ ಕಂಡುಕೊಳ್ಳುವ ಅಗತ್ಯವಿದೆ. ರಾಜಸ್ಥಾನ್​ ವಿರುದ್ಧ ದುಬಾರಿಯಾಗಿ ಗೋಚರಿಸಿದ್ದರು.

ಪಂಜಾಬ್​ ಆಡಿದ 2 ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಸೋಲು ಕಂಡಿದೆ. ಇದು ತಂಡಕ್ಕೆ ಮೂರನೇ ಪಂದ್ಯವಾಗಿದೆ. ಶಿಖರ್​ ಧವನ್​, ಸ್ಯಾಮ್ ಕರನ್​, ಲಿಯಾಮ್​ ಲಿವಿಂಗ್ಸ್​ ಸ್ಟೋನ್​ ಬ್ಯಾಟಿಂಗ್​ ಬಲವಾದರೆ, ಬೌಲಿಂಗ್​ನಲ್ಲಿ ಅರ್ಶ್​ದೀಪ್​ ಸಿಂಗ್​, ಕಗಿಸೊ ರಬಾಡ, ರಾಹುಲ್​ ಚಹರ್​ ಮತ್ತು ಹರ್‌ಪ್ರೀತ್ ಬ್ರಾರ್ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ. ಒಟ್ಟಾರೆಯಾಗಿ ತಂಡ ಎಲ್ಲ ವಿಭಾಗದಲ್ಲಿ ಸಮರ್ಥವಾಗಿದೆ.

ಇದನ್ನೂ ಓದಿ IPL 2024: ಐಪಿಎಲ್‌ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಆರ್‌.ಅಶ್ವಿ‌ನ್‌!

ಮುಖಾಮುಖಿ


ಉಭಯ ತಂಡಗಳು ಇದುವರೆಗೆ ಐಪಿಎಲ್​ನಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದು, ಲಕ್ನೋ ತಂಡ 2 ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ. ಪಂಜಾಬ್​ ಒಂದು ಪಂದ್ಯ ಮಾತ್ರ ಗೆದ್ದಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಲಕ್ನೋ ಬಲಿಷ್ಠವಾಗಿ ಗೋಚರಿಸಿದೆ.

ಸಂಭಾವ್ಯ ತಂಡಗಳು


ಲಕ್ನೋ:
ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ದೇವದತ್ ಪಡಿಕ್ಕಲ್, ಆಯುಷ್ ಬದೋನಿ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಶಮರ್​ ಜೋಸೆಫ್​, ಯಶ್ ಠಾಕೂರ್.

ಪಂಜಾಬ್​ ಕಿಂಗ್ಸ್​: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಪ್ರಭಾಸಿಮ್ರಾನ್ ಸಿಂಗ್, ಸ್ಯಾಮ್ ಕರಾನ್​, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್.

Continue Reading

ಕ್ರೀಡೆ

RCB vs KKR: ಕೆಕೆಆರ್​ ಸವಾಲು ಸುಲಭದ್ದಲ್ಲ; ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ದಾಖಲೆ ಹೇಗಿದೆ?

RCB vs KKR: ಆರ್​ಸಿಬಿ ಮತ್ತು ಕೆಕೆಆರ್​ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಒಟ್ಟು 11 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ ಗೆದ್ದದ್ದು ಕೇವಲ 4 ಪಂದ್ಯಗಳು ಮಾತ್ರ. ಕೆಕೆಆರ್​ 7 ಪಂದ್ಯಗಳನ್ನು ಗೆದ್ದಿದೆ.

VISTARANEWS.COM


on

RCB
Koo

ಬೆಂಗಳೂರು: ಶುಕ್ರವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಕೆಕೆಆರ್​ ಮತ್ತು ಆರ್​ಸಿಬಿ(RCB vs KKR) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವನ್ನು ವಿರಾಟ್​ ಕೊಹ್ಲಿ vs ಗೌತಮ್​ ಗಂಭೀರ್​ ಎಂದೇ ನಿರ್ಧರಿಸಲಾಗಿದೆ. ಇದಕ್ಕೆ ಕಾರಣ ಉಭಯ ಆಟಗಾರರ ನಡುವಣ ಹಾವು ಮುಂಗುಸಿಯಂತಹ ಕಚ್ಚಾಟ. ಹೀಗಾಗಿ ಈ ಪಂದ್ಯವನ್ನು ಹೈವೋಲ್ಟೇಜ್​ ಪಂದ್ಯ ಎಂದು ನಿರೀಕ್ಷಿಸಲಾಗಿದೆ. ಆದರೆ, ತವರಿನಲ್ಲಿ ಕೆಕೆಆರ್(RCB vs kkr chinnaswamy stadium records)​ ವಿರುದ್ಧ ಆರ್​ಸಿಬಿ ದಾಖಲೆ ಅಷ್ಟು ಉತ್ತಮವಾಗಿಲ್ಲ.

ಚಿನ್ನಸ್ವಾಮಿ ಮುಖಾಮುಖಿ ದಾಖಲೆ


ಆರ್​ಸಿಬಿ ಮತ್ತು ಕೆಕೆಆರ್​ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಒಟ್ಟು 11 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ ಗೆದ್ದದ್ದು ಕೇವಲ 4 ಪಂದ್ಯಗಳು ಮಾತ್ರ. ಕೆಕೆಆರ್​ 7 ಪಂದ್ಯಗಳನ್ನು ಗೆದ್ದಿದೆ. ಕಳೆದ 2016 ರಿಂದ ಚಿನ್ನಸ್ವಾಮಿಯಲ್ಲಿ ನಡೆದ 5 ಪಂದ್ಯಗಳಲ್ಲಿಯೂ ಕೆಕೆಆರ್​ ತಂಡವೇ ಗೆದ್ದು ಬೀಗಿದೆ. ಒಟ್ಟಾರೆಯಾಗಿ ಆರ್​ಸಿಬಿ ಈ ಸ್ಟೇಡಿಯಂನಲ್ಲಿ 94 ಪಂದ್ಯಗಳನ್ನು ಆಡಿ 45 ಗೆಲುವು ಮತ್ತು 44 ಸೋಲು ಕಂಡಿದೆ. ಕೆಕೆಆರ್​ ತಂಡ ಇಲ್ಲಿ 17 ಪಂದ್ಯಗಳನ್ನಾಡಿ 11ರಲ್ಲಿ ಜಯ ಸಾಧಿಸಿದೆ. ಆರ್​ಸಿಬಿಗೆ ಹೋಲಿಸಿದರೆ ಕೆಕೆಆರ್​ ತಂಡವೇ ಈ ಮೈದಾನದಲ್ಲಿ ಉತ್ತಮ ದಾಖಲೆ ಹೊಂದಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿಯೂ ಕೆಕೆಆರ್​ ತಂಡವೇ ಗೆಲ್ಲುವ ಫೇವರಿಟ್ ಆಗಿ ಗೋಚರಿಸಿದೆ.


ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿ ಮೈದಾನದಲ್ಲಿ ಎರಡು ಬಾರಿ ಜಗಳವಾಡಿದ್ದಾರೆ. ಎರಡೂ ಸಂದರ್ಭಗಳು ಐಪಿಎಲ್​ನಲ್ಲಾಗಿದ್ದವು. 2013 ರಲ್ಲಿ ಆಟಗಾರರಾಗಿ ಮತ್ತು ನಂತರ ಒಂದು ದಶಕದ ನಂತರ 2023 ರಲ್ಲಿ, ಆಯಾ ತಂಡಗಳ ಆಟಗಾರ ಮತ್ತು ತರಬೇತುದಾರರಾಗಿ ಅವರಿಬ್ಬರ ನಡುವೆ ವಾಗ್ವಾದ ನಡೆದಿತ್ತು. ಇದರ ಮುಂದುವರಿದ ಭಾಗ ಇಂದು ನಡೆಯುವ ಪಂದ್ಯದಲ್ಲಿ ಕಾಣಿಸಿಕೊಂಡರೂ ಅಚ್ಚರಿಯಿಲ್ಲ. ಕೊಹ್ಲಿ ಶಾಂತ ರೀತಿಯಿಂದ ವರ್ತಿಸಿದರೂ ಕೂಡ ಅವರ ಅಭಿಮಾನಿಗಳು ಗಂಭೀರ್​ ಅವರನ್ನು ಕೆಣಕುವುದಲ್ಲಿ ಅನುಮಾನವೇ ಬೇಡ. ಪಂದ್ಯಕ್ಕಾಗಿ ಕ್ರಿಕೆಟ್​ ಅಭಿಮಾನಿಗಳು ಕಾದು ಕುಳಿತಿದ್ದಾರೆ.

ಇದನ್ನೂ ಓದಿ IPL 2024: ಐಪಿಎಲ್‌ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಆರ್‌.ಅಶ್ವಿ‌ನ್‌!

ಸಂಭಾವ್ಯ ತಂಡಗಳು


ಆರ್​ಸಿಬಿ: ಫಾಫ್​ ಡು ಪ್ಲೆಸಿಸ್‌ (ನಾಯಕ), ವಿರಾಟ್​ ಕೊಹ್ಲಿ, ರಜತ್​ ಪಾಟಿದಾರ್‌, ಗ್ಲೆನ್​ ಮ್ಯಾಕ್ಸ್‌ವೆಲ್‌, ಕ್ಯಾಮರೂನ್​ ಗ್ರೀನ್‌, ದಿನೇಶ್​ ಕಾರ್ತಿಕ್‌, ಅನೂಜ್​ ರಾವತ್‌, ಮಯಾಂಕ್​ ಡಾಗರ್‌, ಅಲ್ಜಾರಿ ಜೋಸೆಫ್/ ರೀಸ್​ ಟಾಪ್ಲೆ, ಮೊಹಮ್ಮದ್​ ಸಿರಾಜ್‌, ಯಶ್​ ದಯಾಳ್‌.

ಕೆಕೆಆರ್​: ಫಿಲ್​ ಸಾಲ್ಟ್, ಸುನೀಲ್​ ನರೈನ್​, ವೆಂಕಟೇಶ್​ ಅಯ್ಯರ್‌, ಶ್ರೇಯಸ್‌ ಅಯ್ಯರ್​ (ನಾಯಕ), ನಿತೀಶ್‌ ರಾಣಾ , ರಮಣ್‌ದೀಪ್‌ ಸಿಂಗ್​, ರಿಂಕು ಸಿಂಗ್​, ಆ್ಯಂಡ್ರೆ ರಸೆಲ್‌, ಮಿಚೆಲ್​ ಸ್ಟಾರ್ಕ್‌, ಹರ್ಷಿತ್‌ ರಾಣಾ, ಮಿಥುನ್​ ಚಕ್ರವರ್ತಿ.

Continue Reading

ಕ್ರೀಡೆ

IPL 2024: ಐಪಿಎಲ್‌ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಆರ್‌.ಅಶ್ವಿ‌ನ್‌!

IPL 2024: ಐಪಿಎಲ್​ ಟೂರ್ನಿ ಒಂದು ದೊಡ್ಡ ಹೆಮ್ಮರವಾಗಿ ಬೆಳೆದು ನಿಂತಿದೆ, ಅದೆಷ್ಟೋ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಲು ಉತ್ತಮ ವೇದಿಕೆಯಾಗಿದೆ. ಈ ಟೂರ್ನಿಯಿಂದ ಅನೇಕ ಪ್ರತಿಭಾನ್ವಿತ ಆಟಗಾರರು ಬೆಳಕಿಗೆ ಬಂದಿದ್ದಾರೆ. ಆದರೂ ಕೂಡ ಕೆಲವೊಮ್ಮೆ ನನಗೆ ಐಪಿಎಲ್‌ ಕ್ರಿಕೆಟ್‌ ಹೌದಾ ಎಂದು ಅನುಮಾನ ಮೂಡುತ್ತದೆ ಎಂದು ಅಶ್ವಿನ್​ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

VISTARANEWS.COM


on

R Ashwin
Koo

ಜೈಪುರ: ವಿಶ್ವದ ಕ್ಯಾಶ್‌ ರಿಚ್‌ ಕ್ರಿಕೆಟ್‌ ಲೀಗ್‌ ಆಗಿರುವ ಐಪಿಎಲ್(IPL 2024)​ ಬಗ್ಗೆ ಟೀಮ್​ ಇಂಡಿಯಾದ ಹಿರಿಯ ಹಾಗೂ ಅನುಭವಿ ಆಟಗಾರ ಆರ್​.ಅಶ್ವಿನ್(R Ashwin)​ ಅವರು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಐಪಿಎಲ್‌ ನಿಜಕ್ಕೂ ಕ್ರಿಕೆಟ್ಟಾ? ಎಂದು ಪ್ರಶ್ನೆ ಮಾಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​ ಪಂದ್ಯಕ್ಕೂ ಮುನ್ನ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿದ ರಾಜಸ್ಥಾನ್​ ರಾಯಲ್ಸ್​ ತಂಡದ ಆಟಗಾರನಾಗಿರುವ ಅಶ್ವಿನ್, ‘ಐಪಿಎಲ್​ ಟೂರ್ನಿ ಒಂದು ದೊಡ್ಡ ಹೆಮ್ಮರವಾಗಿ ಬೆಳೆದು ನಿಂತಿದೆ, ಅದೆಷ್ಟೋ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಲು ಉತ್ತಮ ವೇದಿಕೆಯಾಗಿದೆ. ಈ ಟೂರ್ನಿಯಿಂದ ಅನೇಕ ಪ್ರತಿಭಾನ್ವಿತ ಆಟಗಾರರು ಬೆಳಕಿಗೆ ಬಂದಿದ್ದಾರೆ. ಆದರೂ ಕೂಡ ಕೆಲವೊಮ್ಮೆ ನನಗೆ ಐಪಿಎಲ್‌ ಕ್ರಿಕೆಟ್‌ ಹೌದಾ ಎಂದು ಅನುಮಾನ ಮೂಡುತ್ತದೆ” ಎಂದು ಹೇಳಿದರು.

“ಯುವಕನಾಗಿ ಐಪಿಎಲ್​ ಟೂರ್ನಿಗೆ ಕಾಲಿಟ್ಟ ವೇಳೆ ಹಿರಿಯ ಆಟಗಾರರಿಂದ ಕಲಿಯಲು ಬಯಸುತ್ತಿದ್ದೆ. ಈಗ ನಾವು ಜಾಹೀರಾತು ಶೂಟಿಂಗ್‌ಗಾಗಿ ಅಭ್ಯಾಸ ಮಾಡುತ್ತ ನಮ್ಮ ಸಮಯವನ್ನು ಕಳೆದುಬಿಡುತ್ತೇವೆ. ಹೀಗಾಗಿ ಐಪಿಎಲ್‌ ಕ್ರಿಕೆಟ್‌ ಹೌದಾ ಎಂದು ಅಚ್ಚರಿಯಾಗುತ್ತದೆ” ಎಂದು ಆರ್‌.ಅಶ್ವಿ‌ನ್‌ ಹೇಳಿದ್ದಾರೆ. ಇತ್ತೀಚೆಗೆ ಭಾರತದಲ್ಲಿ ನಡೆದಿದ್ದ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅಶ್ವಿನ್​ ಅಮೋಘ ಬೌಲಿಂಗ್​ ಪ್ರದರ್ಶನದೊಂದಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ 500 ವಿಕೆಟ್​ ಪೂರ್ತಿಗೊಳಿಸಿದ ಸಾಧನೆ ಮಾಡಿದ್ದರು.

ಇದನ್ನೂ ಓದಿ Rishabh Pant: ಕಮ್​ಬ್ಯಾಕ್​ ಪಂದ್ಯದಲ್ಲೇ ದಾಖಲೆ ಬರೆದ ರಿಷಭ್​ ಪಂತ್​

2009ರಲ್ಲಿ ಐಪಿಎಲ್​ಗೆ ಪದಾರ್ಪಣೆ ಮಾಡಿದ ಅಶ್ವಿನ್​ ಇದುವರೆಗೆ 199 ಪಂದ್ಯಗಳಲ್ಲಿ ಆಡಿದ್ದಾರೆ. 172 ವಿಕೆಟ್​ ಮತ್ತು 743 ರನ್​ ಬಾರಿಸಿದ್ದಾರೆ. ಚೆನ್ನೈ ಸೂಪರ್​ ಕಿಂಗ್ಸ್​ ಪರ ಆರಂಭವಾದ ಇವರ ಐಪಿಎಲ್​ ಜರ್ನಿ ಬಳಿಕ ಡೆಲ್ಲಿ ಕ್ಯಾಪಿಟಲ್ಸ್​, ಪಂಜಾಬ್​ ಕಿಂಗ್ಸ್​ ತಂಡವನ್ನು ಪ್ರತಿನಿಧಿಸಿದ್ದರು. ಪ್ರಸ್ತುತ ರಾಜಸ್ಥಾನ್​ ಪರ ಆಡುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ನಿನ್ನೆ(ಗುರುವಾರ) ನಡೆದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್​ ನಡೆಸಿ ಗಮನಸೆಳೆದಿದ್ದರು. ಕೇವಲ 19 ಎಸೆತಗಳಿಂದ 3 ಸಿಕ್ಸರ್​ ಸಿಡಿಸಿ 29 ರನ್​ ಬಾರಿಸಿದ್ದರು. ಆದರೆ, ಬೌಲಿಂಗ್​ನಲ್ಲಿ ಯಶಸ್ಸು ಕಾಣಲಿಲ್ಲ. ಓವರ್​ಗೆ 10ರ ಸರಾಸರಿಯಲ್ಲಿ ರನ್​ ಬಿಟ್ಟು ಕೊಟ್ಟು ವಿಕೆಟ್​ ಲೆಸ್​ ಎನಿಸಿಕೊಂಡರು.

ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ


ಪ್ರಸಕ್ತ ಸಾಗುತ್ತಿರುವ ಐಪಿಎಲ್​ (IPL 2024) ಟೂರ್ನಿಯಲ್ಲಿ 9 ಪಂದ್ಯಗಳು ಮುಕ್ತಾಯಕಂಡಿದೆ. ಅಚ್ಚರಿ ಎಂದರೆ ಈ 9 ಪಂದ್ಯಗಳಲ್ಲಿಯೂ ತವರಿನ ತಂಡವೇ ಗೆಲುವು ಸಾಧಿಸಿದ್ದು. ಗುರುವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್​(Rajasthan Royals) ಸತತ 2 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ(IPL 2024 Points Table) ಮತ್ತೆ ಹಿಡಿತ ಸಾಧಿಸಿದೆ. ಡೆಲ್ಲಿ(Delhi Capitals) ಸತತ 2 ಸೋಲು ಕಂಡರೂ ಕೂಡ 8ನೇ ಸ್ಥಾನದಲ್ಲಿದೆ.

ನೂತನ ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
​ ಚೆನ್ನೈ ಸೂಪರ್​ ಕಿಂಗ್ಸ್​2204 (+1.979)
ರಾಜಸ್ಥಾನ್​ ರಾಯಲ್ಸ್2204 (+0.800)
ಸನ್​ರೈಸರ್ಸ್​ ಹೈದರಾಬಾದ್​2112 (+0.675)
ಕೋಲ್ಕೊತಾ ನೈಟ್‌ ರೈಡರ್ಸ್1102(+200)
ಪಂಜಾಬ್‌ ಕಿಂಗ್ಸ್2112‌ (+0.025)
ಆರ್‌ಸಿಬಿ2112 (-0.180)
ಗುಜರಾತ್‌ ಟೈಟಾನ್ಸ್2112 (-1.425)
ಡೆಲ್ಲಿ ಕ್ಯಾಪಿಟಲ್ಸ್2020 (–0.528)
ಮುಂಬೈ ಇಂಡಿಯನ್ಸ್2020 (-1000)
ಲಕ್ನೋ ಸೂಪರ್​ ಜೈಂಟ್ಸ್​1010 (-1.000)
Continue Reading

ಕ್ರೀಡೆ

Hanuma Vihari: ಹನುಮ ವಿಹಾರಿಗೆ ಶೋಕಾಸ್‌ ನೋಟಿಸ್‌ ನೀಡಿದ ಎಸಿಎ

ನಾಯಕತ್ವ ಬದಲಾವಣೆ ವಿಚಾರವಾಗಿ ಆಂಧ್ರಪ್ರದೇಶ ಕ್ರಿಕೆಟ್ ಅಸೋಸಿಯೇಶನ್(Andhra Cricket Association) ವಿರುದ್ಧ ಗಂಭೀರ ಆರೋಪ ಮಾಡಿದ್ದ ಹನುಮ ವಿಹಾರಿ(Hanuma Vihari)ಗೆ ಎಸಿಎ ಶೋಕಾಸ್‌ ನೋಟಿಸ್‌(ACA show-cause notice) ಜಾರಿ ಮಾಡಿದೆ.

VISTARANEWS.COM


on

hanuma vihari
Koo

ಆಂಧ್ರ ಪ್ರದೇಶ: ಟೀಮ್​ ಇಂಡಿಯಾದ ಆಟಗಾರ ಹನುಮ ವಿಹಾರಿ(Hanuma Vihari) ಅವರು ಇತ್ತೀಗೆಗೆ ಮುಕ್ತಾಯ ಕಂಡ ರಣಜಿ ಟ್ರೋಫಿ ಟೂರ್ನಿಯ ವೇಳೆ ನಾಯಕತ್ವ ಬದಲಾವಣೆ ವಿಚಾರವಾಗಿ ಆಂಧ್ರಪ್ರದೇಶ ಕ್ರಿಕೆಟ್ ಅಸೋಸಿಯೇಶನ್(Andhra Cricket Association) ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಎಸಿಎ ಶೋಕಾಸ್‌ ನೋಟಿಸ್‌(ACA show-cause notice) ಜಾರಿ ಮಾಡಿದೆ.

ಹನುಮ ವಿಹಾರಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಮಾಡಿ, ಬಂಗಾಳ ವಿರುದ್ಧದ ಮೊದಲ ಪಂದ್ಯದಲ್ಲಿ ನಾನು ತಂಡದ ನಾಯಕನಾಗಿದ್ದೆ. ಆಟದ ಸಮಯದಲ್ಲಿ ನಾನು 17 ನೇ ಆಟಗಾರನ ಮೇಲೆ ಕೂಗಾಡಿದ್ದೆ. ಅವನು ತನ್ನ ತಂದೆಗೆ (ರಾಜಕಾರಣಿಯಾಗಿದ್ದ) ದೂರು ನೀಡಿದ್ದ, ಪ್ರತಿಯಾಗಿ ಅವರ ತಂದೆ ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಸೋಸಿಯೇಷನ್​ಗೆ ಕೇಳಿದರು. ಬಂಗಾಳ ವಿರುದ್ದದ ಪಂದ್ಯದಲ್ಲಿ ನಾವು ಗೆದ್ದರೂ, ನನ್ನ ಯಾವುದೇ ತಪ್ಪು ಇಲ್ಲದ ಹೊರತಾಗಿಯೂ ರಾಜೀನಾಮೆ ಕೊಡಲು ನನ್ನಲ್ಲಿ ಅಸೋಸಿಯೇಶನ್​ ಕೇಳಿಕೊಂಡಿತು. ನಾನು ವೈಯಕ್ತಿಕವಾಗಿ ಆ ಆಟಗಾರನಿಗೆ ಏನೂ ಹೇಳಿರಲಿಲ್ಲ. ಆದರೆ ಕಳೆದ ಏಳು ವರ್ಷಗಳಲ್ಲಿ ಐದು ಬಾರಿ ತಂಡವನ್ನು ನಾಕೌಟ್​ಗೆ ತಲುಪಿಸಿದ, ತಂಡಕ್ಕೆ ಎಲ್ಲವನ್ನೂ ಕೊಟ್ಟ ಆಟಗಾರನಿಗಿಂತ ಆ ಆಟಗಾರನೇ ಮಂಡಳಿಗೆ ಪ್ರಿಯವಾದ. ನಾನು ಮುಜುಗರ ಅನುಭವಿಸಿದೆ. ಇನ್ನೆಂದೂ ನಾನು ಆಂಧ್ರಪ್ರದೇಶದ ಪರ ಆಡಲಾರೆ ಎಂದು ಹೇಳಿದ್ದರು. ಇದೇ ವಿಚಾರವಾಗಿ ವಿಹಾರಿ ವಿರುದ್ಧ ಎಸಿಎ ನೋಟಿಸ್‌ ಜಾರಿ ಮಾಡಿದೆ.

ಇದನ್ನೂ ಓದಿ Hanuma Vihari: ಎಸಿಎ ಆರೋಪಕ್ಕೆ ತಿರುಗೇಟು ನೀಡಿದ ಹನುಮ ವಿಹಾರಿ

ವಿಹಾರಿ ಮಾಡಿದ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಎಸಿಎ, ವಿಹಾರಿ ನಾಯಕತ್ವದ ನಿರ್ಗಮನವು ವೃತ್ತಿಪರ ಪರಿಗಣನೆಯ ಪರಿಣಾಮವಾಗಿದೆಯೇ ಹೊರತು ರಾಜಕೀಯ ಹಸ್ತಕ್ಷೇಪವಲ್ಲ, ವಿಹಾರಿ ಆಟಗಾರರನ್ನು ಬೆದರಿಸಿ ಸಹಿ ಮಾಡಿಸಿದ್ದಾರೆ ಎಂದು ಆಂಧ್ರ ಕ್ರಿಕೆಟ್ ಸಂಸ್ಥೆ ಆರೋಪ ಮಾಡಿತ್ತು. 

ಬೇರೆ ತಂಡದ ಪರ ಆಡುವೆ..


ನೋಟಿಸ್‌ ಜಾರಿ ಮಾಡಿದ ಹಿನ್ನೆಲೆ ವಿಹಾರಿ ಅವರು ತಾನು ಬೇರೆ ತಂಡದ ಪರ ಆಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಹಾರಿ, ‘ನಾನು ಎಸಿಎಯಿಂದ ನಿರಾಕ್ಷೇಪಣ ಪ್ರಮಾಣಪತ್ರವನ್ನು ಕೋರಿದ್ದು, ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಎಂದಿರುವುದಾಗಿ ವರದಿ ಹೇಳಿದೆ. ಈ ಬಾರಿಯ ರಣಜಿ ಆವೃತ್ತಿಯಲ್ಲಿ ಪ.ಬಂಗಾಳ ವಿರುದ್ಧದ ಆರಂಭಿಕ ಪಂದ್ಯದಲ್ಲಿ 30 ವರ್ಷದ ವಿಹಾರಿ, ಆಂಧ್ರಪ್ರದೇಶ ತಂಡದ ನಾಯಕತ್ವ ವಹಿಸಿದ್ದರು. ಅವರನ್ನು ಇದ್ದಕ್ಕಿದ್ದಂತೆ ನಾಯಕತ್ವದಿಂದ ಕೆಳಕ್ಕಿಳಿಸಿ, ರಿಕ್ಕಿ ಭುಯಿಗೆ ಜವಾಬ್ದಾರಿ ನೀಡಲಾಗಿತ್ತು. ಈ ಬಗ್ಗೆ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದ ವಿಹಾರಿ, ಎಸಿಎ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

Continue Reading
Advertisement
Karnataka Weather
ಮಳೆ4 mins ago

Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

Sanjiv Bhatt
ದೇಶ7 mins ago

Sanjiv Bhatt: ಡ್ರಗ್ಸ್‌ ಕೇಸ್;‌ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ಗೆ 20 ವರ್ಷ ಜೈಲು!

Kaptaan KL is keeping
ಕ್ರೀಡೆ8 mins ago

LSG vs PBKS: ಗೆಲುವಿನ ಖಾತೆ ತೆರೆದೀತೇ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ತಂಡ?

Lok Sabha Election 2024 Yathindra Siddaramaiah calls Amit Shah a goonda BJP says No maturity
Lok Sabha Election 20248 mins ago

Lok Sabha Election 2024: ಅಮಿತ್‌ ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ; ಮೆಚ್ಯುರಿಟಿ, ಬುದ್ಧಿ ಇಲ್ಲವೆಂದ ಬಿಜೆಪಿ

Aadujeevitham box office
ಮಾಲಿವುಡ್31 mins ago

Aadujeevitham Box Office: ಮೊದಲ ದಿನವೇ ಒಳ್ಳೆಯ ಗಳಿಕೆ ಕಂಡ ‘ʻಆಡು ಜೀವಿತಂ’!

gold rate today
ಚಿನ್ನದ ದರ41 mins ago

Gold Rate Today: ಆಕಾಶಕ್ಕೇ ಏರಿದ ಚಿನ್ನದ ಬೆಲೆ! ಇಂದಿನ ಧಾರಣೆ ಹೀಗಿದೆ ನೋಡಿ

attempt to murder case
ಬೆಂಗಳೂರು51 mins ago

Attempt To Murder : ಹಣದಾಸೆಗೆ ವೃದ್ಧ ಚಿಕ್ಕಮ್ಮನ ಕೊಲ್ಲಲು ಮುಂದಾದ ಮಗಳು ಮತ್ತು ಅಳಿಯ

Alia Bhatt hosts Hope Gala
ಬಾಲಿವುಡ್54 mins ago

Alia Bhatt: ಲಂಡನ್‌ನಲ್ಲಿ `ಹೋಪ್ ಗಾಲಾ’ ಹೋಸ್ಟ್‌ ಮಾಡಿದ ಆಲಿಯಾ; ಏನಿದರ ಉದ್ದೇಶ?

RCB
ಕ್ರೀಡೆ58 mins ago

RCB vs KKR: ಕೆಕೆಆರ್​ ಸವಾಲು ಸುಲಭದ್ದಲ್ಲ; ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ದಾಖಲೆ ಹೇಗಿದೆ?

Thalaivar 171 Rajinikanth first look
ಕಾಲಿವುಡ್60 mins ago

Thalaivar 171: ರಜನಿಕಾಂತ್‌ 171ನೇ ಸಿನಿಮಾ ಪೋಸ್ಟರ್‌ ಔಟ್‌; ʻರೋಲೆಕ್ಸ್‌ʼ ಸೂರ್ಯ ಎಂಟ್ರಿ ಆಗ್ತಾರಾ?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202423 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌