ಕ್ರಿಕೆಟ್
IPL 2023 : ಮುಂಬಯಿ ಇಂಡಿಯನ್ಸ್ ಸ್ಟಾರ್ ಬೌಲರ್ಗೆ ಅವರ ಊರಲ್ಲಿ ಬ್ಯಾನ್!
ಅತಿ ವೇಗದಲ್ಲಿ ಬೌಲಿಂಗ್ ಮಾಡುತ್ತಿದ್ದ ಆಕಾಶ್ ಅವರನ್ನು ಸ್ಥಳೀಯ ತಂಡಗಳು ಬೌಲಿಂಗ್ ಮಾಡದಂತೆ ದೂರವಿಡುತ್ತಿದ್ದವು ಎಂದು ಅವರ ಸಹೋದ ಆಶೀಶ್ ತಿಳಿಸಿದ್ದಾರೆ.
ಮುಂಬಯಿ: ಮುಂಬಯಿ ಇಂಡಿಯನ್ಸ್ ತಂಡದ ವೇಗದ ಬೌಲರ್ ಆಕಾಶ್ ಮಧ್ವಾಲ್ ಕ್ರಿಕೆಟ್ ಕ್ಷೇತ್ರದ ಗಮನ ಸೆಳೆದಿದ್ದಾರೆ. ಐಪಿಎಲ್ 16ನೇ ಆವೃತ್ತಿಯ (IPL 2023) ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ (LSG) ತಂಡದ ವಿರುದ್ಧ 5 ರನ್ ನೀಡಿ 5 ವಿಕೆಟ್ ಕಬಳಿಸುವ ಮೂಲಕ ಚಾಂಪಿಯನ್ ಪ್ರದರ್ಶನ ನೀಡಿದ್ದರು. ಈ ಮೂಲಕ ಅವರು ಟಾಕ್ ಆಫ್ ದಿ ಟೌನ್ ಎನಿಸಿಕೊಂಡಿದ್ದಾರೆ. ಆದರೆ, ಈ ವೇಗದ ಬೌಲರ್ ಸ್ಥಳೀಯ ಟೂರ್ನಿಗಳಲ್ಲಿ ಬ್ಯಾನ್ ಆಗಿದ್ದರೆಂಬ ಸತ್ಯವನ್ನು ಅವರ ಸಹೋದರ ಹೇಳಿದ್ದಾರೆ. ಆದರೆ, ಅವರು ಬ್ಯಾನ್ ಆಗಿದ್ದು ಅಕ್ರಮದ ಕಾರಣಕ್ಕೆ ಅಲ್ಲ. ಬದಲಾಗಿ ಅವರ ವೇಗದ ಬೌಲಿಂಗ್ ಎದುರಿಸಲಾಗದೇ ಆಡಲು ಅವಕಾಶವೇ ಕೊಡುತ್ತಿರಲಿಲ್ಲ.
ಆಕಾಶ್ ಅವರ ಸಹೋದರ ಆಶಿಶ್ ಈ ಸತ್ಯವನ್ನು ಹೇಳಿದ್ದಾರೆ. ಜತೆಗೆ ಸಹೋದರನ ಬೆಳವಣಿಗೆಗೆ ಕಾರಣರಾದ ಮುಂಬಯಿ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನೂ ಹೊಗಳಿದ್ದಾರೆ.
ರೋಹಿತ್ ಶರ್ಮಾ ಅವರು ಆಟಗಾರರಿಗೆ ಅವಕಾಶಗಳನ್ನು ನೀಡುತ್ತಾರೆ. ಅವರು ತಮ್ಮ ತಂಡದ ಆಟಗಾರರ ಮೇಳೆ ನಂಬಿಕೆ ಇಟ್ಟುಕೊಂಡಿರುತ್ತಾರೆ ಹಾಗೂ ಅದೇ ಮಾದರಿಯಲ್ಲಿ ಬೆಂಬಲಿಸುತ್ತಾರೆ. ಹೊಸ ಆಟಗಾರನು ತಂಡದಲ್ಲಿ ತನ್ನ ಸ್ಥಾನದ ಬಗ್ಗೆ ಆತಂಕ ಹೊಂದಿರುತ್ತಾರೆ. ಆದರೆ ರೋಹಿತ್ ಹೊಸ ಆಟಗಾರರ ಆತಂಕ ದೂರ ಮಾಡುತ್ತಾರೆ. ಅದೇ ರೀತಿ ಆಕಾಶ್ಗೂ ಅವಕಾಶ ನೀಡಿದ್ದಾರೆ ಎಂದು ಇಂಡಿಯಾ ಟುಡೆ ಜತೆ ಮಾತನಾಡಿದ ಆಶಿಶ್ ಅವರ ಹೇಳಿದ್ದಾರೆ.
ಇದೇ ವೇಳೆ ಆಕಾಶ್ ಅವರ ಆರಂಭಿಕ ದಿನಗಳ ಆಟದ ಬಗ್ಗೆ ಮಾತನಾಡಿದ ಆಶಿಶ್, ಆಕಾಶ್ ಬೌಲಿಂಗ್ ವೇಗಕ್ಕೆ ಎಲ್ಲರೂ ಹೆದರುತ್ತಿದ್ದರು. ಹೀಗಾಗಿ ಸ್ಥಳೀಯ ಪಂದ್ಯಾವಳಿಗೆ ಅವರನ್ನ ಸೇರಿಸಿಕೊಳ್ಳುತ್ತಿರಲಿಲ್ಲ. ಇದರಿಂದಾಗಿ ಅವರಿಗೆ ರೂರ್ಕಿಯಲ್ಲಿ ಆಡಲು ಅವಕಾಶವೇ ಸಿಗುತ್ತಿರಲಿಲ್ಲ. ಹೊರಗಿನ ಪ್ರದೇಶಗಳಿಗೆ ಹೋಗಿ ಅವರು ಕ್ರಿಕೆಟ್ ಆಡುತ್ತಿದ್ದರು ಎಂದು ಹೇಳಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಋತುವಿನ 46ನೇ ಪಂದ್ಯದಲ್ಲಿ ಆಕಾಶ್ ಐಪಿಎಲ್ಗೆ ಪದಾರ್ಪಣೆ ಮಾಡಿದರು. ಆ ಪಂದ್ಯದಲ್ಲಿ ಅವರು ತಮ್ಮ ಮೂರು ಓವರ್ಗಳ ಸ್ಪೆಲ್ನಲ್ಲಿ 37 ರನ್ ನೀಡಿದ್ದರು. ಆದರೆ, ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಡೆವೊನ್ ಕಾನ್ವೇ ಅವರನ್ನು ಔಟ್ ಮಾಡುವ ಮೂಲಕ ಟೂರ್ನಿಯ ಮೊದಲ ವಿಕೆಟ್ ತಮ್ಮದಾಗಿಸಿಕೊಂಡಿದ್ದರು/
ರೂರ್ಕೆಲಾ ಮೂಲದ ವೇಗದ ಬೌಲರ್ ಗುಜರಾತ್ ಟೈಟನ್ಸ್ ವಿರುದ್ಧ 3/31, ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 4/37 ಮತ್ತು ಎಲ್ಎಸ್ಜಿ ವಿರುದ್ಧ ದಾಖಲೆಯ 5/5 ವಿಕೆಟ್ ಪಡೆದಿದ್ದಾರೆ.
ಇದನ್ನೂ ಓದಿ: IPL 2023: ಮತ್ತೆ ಸೊನ್ನೆ ಸುತ್ತಿದ ದಿನೇಶ್ ಕಾರ್ತಿಕ್; ಡಕ್ಔಟ್ನಲ್ಲಿ ಈಗ ರೋಹಿತ್ ಶರ್ಮಾಗಿಂತ ಮುಂದು
ಈವರೆಗೆ ಆಡಿರುವ 7 ಪಂದ್ಯಗಳಲ್ಲಿ 12.84ರ ಸರಾಸರಿಯಲ್ಲಿ 13 ವಿಕೆಟ್ ಕಬಳಿಸಿದ್ದಾರೆ ಆಕಾಶ್. ಜೇಸನ್ ಬೆಹ್ರೆನ್ಡಾರ್ಫ್ (14 ವಿಕೆಟ್) ಮತ್ತು ಪಿಯೂಷ್ ಚಾವ್ಲಾ (21 ವಿಕೆಟ್) ನಂತರ ಈ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ಪರ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಆಗಿದ್ದಾರೆ.
ಜಸ್ಪ್ರೀತ್ ಬುಮ್ರಾ, ಜೋಫ್ರಾ ಆರ್ಚರ್ ಮತ್ತು ಜೇ ರಿಚರ್ಡ್ಸನ್ ಗಾಯಗೊಂಡಿರುವ ಕಾರಣ ಮುಂಬಯಿ ಇಂಡಿಯನ್ಸ್ ತಂಡದ ಬೌಲಿಂಗ್ ದುರ್ಬಲಗೊಂಡಿತ್ತು. ಇಂಥ ಸಂದರ್ಭದಲ್ಲಿ ಆಕಾಶ್ ಅತ್ಯುತ್ತಮ ಪ್ರದರ್ಶನ ನೀಡಿ ಮಿಂಚಿದ್ದರು. 29 ವರ್ಷದ ಈ ಬೌಲರ್ ಕ್ವಾಲಿಫೈಯರ್ 2ರಲ್ಲಿ ಮತ್ತೊಂದು ಅದ್ಭುತ ಪ್ರದರ್ಶನ ನೀಡಲು ಎದುರು ನೋಡುತ್ತಿದ್ದಾರೆ.
ಕ್ರಿಕೆಟ್
WTC Final 2023: ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಆಡು; ಔಟಾದ ಬಳಿಕ ಊಟದ ಜತೆ ಬೈಗುಳ ತಿಂದ ಕೊಹ್ಲಿ
ವಿರಾಟ್ ಕೊಹ್ಲಿ ಅವರು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಔಟಾದ ತಕ್ಷಣ ಡಗೌಟ್ನಲ್ಲಿ ಆಹಾರ ಸೇವಿಸಿದ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.
ಲಂಡನ್: ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ನಿರೀಕ್ಷಿತ ಮಟ್ಟದ ಬ್ಯಾಟಿಂಗ್ ಪ್ರದರ್ಶನ ತೋರುವಲ್ಲಿ ಎಡವಿದ್ದಾರೆ. ಆದರೆ ಅವರು ಔಟ್ ಆಗಿರುವ ವಿಚಾರವನ್ನು ಹೊರತುಪಡಿಸಿ ಬೇರೆಯೇ ಕಾರಣಕ್ಕೆ ಇದೀಗ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಲಂಡನ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ದಿನದಾಟದ ವೇಳೆ ವಿರಾಟ್ ಅವರು 14 ರನ್ ಗಳಿಸಿ ವಿಕೆಟ್ ಕೈಚೆಲ್ಲಿದರು. ಪೆವಿಲಿಯನ್ಗೆ ತೆರಳಿದ ವಿರಾಟ್ ಕೊಹ್ಲಿ ಯಾವುದೇ ಚಿಂತೆ ಇಲ್ಲದವರಂತೆ ಇಶಾನ್ ಕಿಶನ್ ಮತ್ತು ಗಿಲ್ ಜತೆ ಹರಾಟೆ ಹೊಡೆಯುತ್ತಾ ಆಹಾರ ಸೇವಿಸಿದ್ದಾರೆ. ಇದರ ಫೋಟೊ ಮತ್ತು ವಿಡಿಯೊ ಎಲ್ಲಡೆ ವೈರಲ್ ಆಗಿದೆ.
ಕೊಹ್ಲಿಯ ಈ ವರ್ತನೆ ಕಂಡ ಅನೇಕ ಟೀಮ್ ಇಂಡಿಯಾದ ಅಭಿಮಾನಿಗಳು ಮತ್ತು ಕೆಲವು ಕ್ರಿಕೆಟ್ ಪಂಡಿತರು ಟೀಕೆ ವ್ಯಕ್ತಪಡಿಸಿದ್ದಾರೆ. ಜತೆಗೆ ಅವರನ್ನು ತೀಕ್ಷ್ಣ ಮಾತುಗಳಿಂದ ಟ್ರೋಲ್ ಮಾಡಿದ್ದಾರೆ. ಐಪಿಎಲ್ನಲ್ಲಿ ಪಂದ್ಯ ಸೋತಾಗ ಕಣ್ಣೀರು ಸುರಿಸುವ ನೀವು ಭಾರತ ತಂಡಕ್ಕೆ ಆಡುವಾಗ ಮಾತ್ರ ಈ ರೀತಿ ಮಾಡುತ್ತೀರಿ ಇದರ ಅರ್ಥ ನೀವು ಹಣಕ್ಕಾಗಿ ಆಡುತ್ತೀರಿ, ದೇಶಕಾಕ್ಕಾಗಿ ಅಲ್ಲ ಎಂದು ನೆಟ್ಟಿಗರೊಬ್ಬರು ಟ್ರೋಲ್ ಮಾಡಿದ್ದಾರೆ.
ಇದನ್ನೂ ಓದಿ WTC Final 2023: ಇನಿಂಗ್ಸ್ ಹಿನ್ನಡೆ ಭಯದಲ್ಲಿ ಟೀಮ್ ಇಂಡಿಯಾ
Seriousness of Virat Kohli for IPL vs India#INDvAUS pic.twitter.com/4CKM9LK80K
— Ctrl C Ctrl Memes (@Ctrlmemes_) June 8, 2023
ತಂಡ ಸಂಕಷ್ಟದಲ್ಲಿದ್ದರೂ ನೀವು ಈ ರೀತಿ ಆನಂದದಲ್ಲಿರುವುದನ್ನು ಕಾಣುವಾಗ ಭಾರತ ತಂಡಕ್ಕಿಂತ ನಿಮಗೆ ಐಪಿಎಲ್ ಟೂರ್ನಿಯೇ ಹೆಚ್ಚಾದಂತೆ ಕಾಣುತ್ತಿದೆ ಎಂದು ಮತ್ತೊಬ್ಬ ನೆಟ್ಟಿಗ ಟ್ರೋಲ್ ಮಾಡಿದ್ದಾರೆ. ಇನ್ನಿ ಕೆಲವರು ಅರೇ ನೀವು ತಿನ್ನುತ್ತಿರುವ ಆಹಾರ ಯಾವುದು? ಎಂದು ಪ್ರಶ್ನೆ ಮಾಡುವ ಮೂಲಕ ಕೊಹ್ಲಿಯ ಕಾಲೆಳೆದಿದ್ದಾರೆ.
Never compare great Sachin Tendulkar with money makers like Virat Kohli#INDvAUS pic.twitter.com/ML58p3jdxc
— Ctrl C Ctrl Memes (@Ctrlmemes_) June 8, 2023
ಎಷ್ಟ್ರೇ ಸಾಧನೆ ಮಾಡಿದ್ದರೂ ಹಣಕ್ಕೆ ಆಸೆಪಡುವ ವಿರಾಟ್ ಕೊಹ್ಲಿಯನ್ನು ಸಚಿನ್ ತೆಂಡೂಲ್ಕರ್ ಜತೆ ಯಾವತ್ತೂ ಹೋಲಿ ಮಾಡಬೇಡಿ ಎಂದು ನೆಟ್ಟಿಗೊರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಕೊಹ್ಲಿಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹಲವು ಕಾರಣಕ್ಕೆ ಟ್ರೋಲ್ ಆಗುತ್ತಿದೆ.
Live News
WTC Final 2023: ಭಾರತ-ಆಸೀಸ್ ಮೂರನೇ ದಿನದಾಟದ ಹೈಲೆಟ್ಸ್
ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೂರನೇ ದಿನದಾಟದ ಹೈಲೆಟ್ಸ್ ಇಲ್ಲಿದೆ.
ಲಂಡನ್: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೂರನೇ ದಿನದಾಟದ ಹೈಲೆಟ್ಸ್ ಇಲ್ಲಿದೆ.
ಕ್ರಿಕೆಟ್
Wrestlers Protest: ಬ್ರಿಜ್ ಭೂಷಣ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಮಹತ್ವದ ತಿರುವು
ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಸುಳ್ಳು ಕೇಸು ದಾಖಲಿಸಿರುವುದಾಗಿ ಕೇಸು ನೀಡಿದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಯೂ ಟರ್ನ್ ಹೊಡೆದಿದ್ದಾರೆ.
ನವದೆಹಲಿ: ಡಬ್ಲ್ಯುಎಫ್ಐ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪ ಪ್ರಕರಣಕ್ಕೆ ಮಹತ್ವದ ತಿರುವೊಂದು ಲಭಿಸಿದೆ. ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಜೂನ್ 15ರ ತನಕ ತಮ್ಮ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ ಬೆನ್ನಲ್ಲೇ ದೂರು ನೀಡಿದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಯೂ-ಟರ್ನ್ ಹೊಡೆದಿದ್ದಾರೆ.
ಭಾರತೀಯ ಕುಸ್ತಿ ಒಕ್ಕೂಟದ ನಿರ್ಗಮಿತ ಅಧ್ಯಕ್ಷ ಬ್ರಿಜ್ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಸುಳ್ಳು ದೂರು ದಾಖಲಿಸಿರುವುದಾಗಿ ಅಪ್ರಾಪ್ತ ಬಾಲಕಿಯ ತಂದೆ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಜತೆಗೆ ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳುವುದಾಗಿ ಬಾಲಕಿಯ ತಂದೆ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಅವರ ಈ ಹೇಳಿಕೆಯಿಂದಾಗಿ ಇಷ್ಟು ದಿನ ಎಲ್ಲ ಮಹತ್ವದ ಟೂರ್ನಿಯನ್ನು ಬಹಿಷ್ಕರಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ವಿನೇಶ್ ಫೋಗಾಟ್ ಸೇರಿ ಹಲವು ಕುಸ್ತಿಪಟುಗಳ ಹೋರಾಟ ಇದೀಗ ನೀರಿನಲ್ಲಿ ಹೋಮ ಮಾಡಿದಂತಾಗಿದೆ.
ಪ್ರಕರಣ ದಾಖಲಿಸಲು ಕಾರಣವೇನು?
ಬ್ರಿಜ್ ಭೂಷಣ್ ವಿರುದ್ಧ ಈ ಸುಳ್ಳು ಪ್ರಕರಣ ದಾಖಲಿಸಲು ಪ್ರಮುಖ ಕಾರಣ ಏನೆಂಬುದನ್ನು ಕೂಡ ಬಾಲಕಿಯ ತಂದೆ ಹೇಳಿದ್ದಾರೆ. 2022ರಲ್ಲಿ ಲಕ್ನೋದಲ್ಲಿ ನಡೆದಿದ್ದ ಏಷ್ಯನ್ ಅಂಡರ್-17 ಚಾಂಪಿಯನ್ಶಿಪ್ ಟ್ರಯಲ್ಸ್ನ ಫೈನಲ್ನಲ್ಲಿ ಸೋತ ಬಳಿಕ ತನ್ನ ಮಗಳಿಗೆ ಭಾರತೀಯ ತಂಡಕ್ಕೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ರೆಫ್ರಿಯ ತಪ್ಪು ನಿರ್ಧಾರಗಳಿಂದಾಗಿ ಮಗಳು ಫೈನಲ್ನಲ್ಲಿ ಸೋಲು ಕಾಣಬೇಕಾಯಿತು. ಇದಕ್ಕೆ ಬ್ರಿಜ್ ಭೂಷಣ್ ಅವರೇ ಕಾರಣ. ಮಗಳ ಒಂದು ವರ್ಷದ ಪರಿಶ್ರಮ ನೀರುಪಾಲಾಯಿತು ಎಂಬ ಕಾರಣಕ್ಕೆ ನಾನು ಬ್ರಿಜ್ ಭೂಷಣ್ ವಿರುದ್ಧ ಸೇಡು ತೀರಿಸಿಕೊಳ್ಳಲು ಈ ನಿರ್ಧಾರ ಕೈಗೊಂಡೆ ಎಂದು ಬಾಲಕಿಯ ತಂದೆ ಪಿಟಿಐಗೆ ತಿಳಿಸಿದ್ದಾರೆ.
ಇದನ್ನೂ ಓದಿ Wrestlers Protest: ಜೂನ್ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು
ರೆಫ್ರಿ ತಪ್ಪಿಗೆ ಬ್ರಿಜ್ಭೂಷಣ್ ಮೇಲೇಕೆ ಕೋಪ?
ರೆಫ್ರಿ ಮಾಡಿದ ತಪ್ಪಿಗೆ ಬ್ರಿಜ್ ಭೂಷಣ್ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾಣವೇನು ಎಂದು ಕೇಳಿದ ಪ್ರಶ್ನೆ ಉತ್ತರಿಸಿದ ಬಾಲಕಿಯ ತಂದೆ, ರೆಫರಿಯನ್ನು ನಿಯೋಜಿಸಿದವರು ಯಾರು? ಅದು ಫೆಡರೇಶನ್, ಫೆಡರೇಶನ್ ಮುಖ್ಯಸ್ಥರು ಯಾರು? ಬ್ರಿಜ್ ಭೂಷಣ್. ಹೀಗಾಗಿ ಅವರ ಮೇಲೆ ನಾನು ದ್ವೇಷ ಸಾಧಿಸಲು ಮುಂದಾದೆ ಎಂದರು. ಇದೇ ವೇಳೆ ಪಿಟಿಐ ಸಂದರ್ಶಕ, ನೀವು ನೀಡಿದ ದೂರಿನ ಮೇರೆಗೆ ಬ್ರಿಜ್ ಭೂಷಣ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ತನಿಖೆ ನಡೆಯುತ್ತಿದೆ. ಈಗ ಏಕೆ ನೀವು ನಿಮ್ಮ ನಿರ್ಧಾರ ಬದಲಾಯಿದ್ದೀರ ಎಂಬ ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರ ನೀಡಿದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಕೋರ್ಟ್ನಲ್ಲಿ ಸತ್ಯ ಹೇಗಾದರೂ ಹೊರಬರುತ್ತದೆ ಎಂದು ನನಗೆ ತಿಳಿದಿದೆ. ಆದರೆ ಇದೀಗ ಅಲ್ಲಿಗೆ ಹೋಗುವಾ ಮೊದಲೇ ಸತ್ಯ ಬಹಿರಂಗಗೊಂಡರೆ ಉತ್ತಮ ಎಂದು ನನಗೆ ಅನಿಸಿತು ಇದೇ ಕಾರಣಕ್ಕೆ ನಾನು ನನ್ನ ತಪ್ಪನ್ನು ಒಪ್ಪಿಕೊಂಡೆ ಎಂದರು.
ಒಂದು ಸೋಲಿಗೆ ಈ ನಿರ್ಧಾರ ಏಕೆ?
ಕೇವಲ ಒಂದು ಪಂದ್ಯದ ಸೋಲಿಗಾಗಿ ನೀವು ಇಷ್ಟು ಕೀಳು ಮಟ್ಟದ ಆರೋಪ ಹೊರಿಸಲು ಕಾರಣವೇನು ಎಂದು ಕೇಳಿದ ಪ್ರಶ್ನೆ ಉತ್ತರಿಸಿದ ಕುಸ್ತಿಪಟುವಿನ ತಂದೆ, ಇದು ನಿಮಗೆ ಕೇವಲ ಒಂದು ಸೋಲಾಗಿ ಕಾಣಬಹುದು. ಆದರೆ ಇದು ಒಂದು ವರ್ಷದ ಕಠಿಣ ಪರಿಶ್ರಮ. ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಕಷ್ಟಪಟ್ಟು ಪುನರಾಗಮನ ಮಾಡುತ್ತಿರುವ ಮಗುವಿನ ನೋವು ಒಬ್ಬ ತಂದೆಗೆ ಮಾತ್ರ ಗೊತ್ತು. ನನ್ನ ಮಗಳ ನೋವನ್ನು ನಾನು ಕಣ್ಣಾರೆ ಕಂಡಿದ್ದೇನೆ. ಆ ಒಂದು ಪಂದ್ಯದ ಸೋಲಿನಿಂದ 4 ಅಂತಾರಾಷ್ಟ್ರೀಯ ಟೂರ್ನಿ ಕೈತಪ್ಪಿತು. ಇದೆಲ್ಲವನ್ನು ಕಂಡ ನಾನು ಅಂತಿಮವಾಗಿ ಈ ನಿರ್ಧಾರವನ್ನು ಕೈಗೊಂಡೆ ಎಂದು ಹೇಳಿದರು.
ದೂರು ಹಿಂಪಡೆಯಲು ಕಾರಣವೇನು?
ತಮ್ಮ ತಪ್ಪನ್ನು ಮತ್ತು ದೂರು ಹಿಂಪಡೆಯುವ ಕುರಿತು ಸ್ಪಷ್ಟನೆ ನೀಡಿರುವ ಕುಸ್ತಿಪಟುವಿನ ತಂದೆ, ತನ್ನ ಮಗಳ ಸೋಲಿನ ಬಗ್ಗೆ ನ್ಯಾಯಯುತ ತನಿಖೆಗೆ ಸರ್ಕಾರ ಭರವಸೆ ನೀಡಿದೆ. ಹಾಗಾಗಿ ನಾನು ನನ್ನ ನಿರ್ಧಾರವನ್ನು ಬದಲಾಯಿಸಿದ್ದೇನೆ ಎಂದು ಹೇಳಿದರು.
ಕ್ರಿಕೆಟ್
WTC Final 2023: ಇನಿಂಗ್ಸ್ ಹಿನ್ನಡೆ ಭಯದಲ್ಲಿ ಟೀಮ್ ಇಂಡಿಯಾ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡ ಮೊದಲ ಇನಿಂಗ್ಸ್ನಲ್ಲಿ 151 ರನ್ಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ.
ಲಂಡನ್: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಭಾರತ ತಂಡ ಇನಿಂಗ್ಸ್ ಹಿನ್ನಡೆಯ ಭಯದಲ್ಲಿದೆ. ಆಸ್ಟ್ರೇಲಿಯಾ ಬಾರಿಸಿದ 469 ರನ್ಗಳ ದೊಡ್ಡ ಮೊತ್ತವನ್ನು ಬೆನ್ನಟ್ಟುತ್ತಿರುವ ಭಾರತ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸದ್ಯದ ಪರಿಸ್ಥಿತಿ ಗಮನಿಸುವಾಗ ಭಾರತ ತಂಡ 200 ರನ್ಗಳ ಗಡಿ ದಾಟುವುದೂ ಕಷ್ಟಕರ ಎಂಬಂತಿದೆ. ಭಾರತ ಇನ್ನೂ 318 ರನ್ಗಳನ್ನು ಬಾರಿಸಬೇಕಿದೆ.
ಮೊದಲ ದಿನದಾಟದ ಅಂತ್ಯಕ್ಕೆ 85 ಓವರ್ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 327 ರನ್ ಗಳಿಸಿದ್ದ ಆಸ್ಟ್ರೇಲಿಯಾ, ದ್ವಿತೀಯ ದಿನದಾಟದಲ್ಲಿ 142 ರನ್ ಕಲೆ ಹಾಕುವ ಮೂಲಕ ಮೊದಲ ಇನಿಂಗ್ಸ್ನಲ್ಲಿ 469ರನ್ಗೆ ಆಲೌಟ್ ಆಯಿತು. ಸ್ಟೀವನ್ ಸ್ಮಿತ್ ಅವರ ಶತಕದ ಆಟ ದ್ವಿತೀಯ ದಿನದ ಪ್ರಮುಖ ಹೈಲೆಟ್ ಆಗಿತ್ತು. ಭಾರತ ಪರ ಮೊಹಮ್ಮದ್ ಸಿರಾಜ್ ಅವರು ಒಟ್ಟು ನಾಲ್ಕು ವಿಕೆಟ್ ಕಿತ್ತು ಮಿಂಚಿದರು.
ನಾಟಕೀಯ ಕುಸಿತ ಕಂಡ ಭಾರತ
ದೊಡ್ಡ ಮೊತ್ತವನ್ನು ಕಂಡು ಆರಂಭದಲ್ಲೇ ಬೆದರಿದ ಭಾರತದ ಬ್ಯಾಟರ್ಗಳು ಸತತವಾಗಿ ವಿಕೆಟ್ ಕೈಚೆಲ್ಲಿದರು. ಅದರಲ್ಲೂ ಶುಭಮನ್ ಗಿಲ್ ಮತ್ತು ಚೇತೇಶ್ವರ ಪೂಜಾರ ಅವರು ಅತ್ಯಂತ ಕೆಟ್ಟ ರೀತಿಯಲ್ಲಿ ವಿಕೆಟ್ ಕೈಚೆಲ್ಲಿದರು. ವಿಕೆಟ್ಗೆ ಬರುವ ಚೆಂಡಿಗೆ ಬ್ಯಾಟ್ ಬೀಸುವ ಬದಲು ಬ್ಯಾಟ್ ಎತ್ತಿ ಈ ಚೆಂಡನ್ನು ಬಿಡುವ ಮೂಲಕ ಕ್ಲೀನ್ ಬೌಲ್ಡ್ ಆದರು. ಇದನ್ನು ಕಂಡ ಕ್ರಿಕೆಟ್ ಪಂಡಿತರು ಗಿಲ್ ಮತ್ತು ಪೂಜಾರ ವಿರುದ್ಧ ಕಿಡಿಕಾರಿದ್ದಾರೆ. ಇದು ಅತ್ಯಂತ ಕೆಟ್ಟ ರೀತಿಯ ಬ್ಯಾಟಿಂಗ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ WTC Final 2023: ಪಂತ್ ದಾಖಲೆ ಮುರಿದ ಟ್ರಾವಿಸ್ ಹೆಡ್
ರೋಹಿತ್ ಶರ್ಮ, ವಿರಾಟ್ ಕೊಹ್ಲಿಯೂ ಕೂಡ ನಿರೀಕ್ಷಿತ ಮಟ್ಟದ ಬ್ಯಾಟಿಂಗ್ ನಡೆಸುವಲ್ಲಿ ವಿಫಲರಾದರು. ರವೀಂದ್ರ ಜಡಜೇ ಅವರು ಕೆಲ ಕಾಲ ದಿಟ್ಟ ರೀತಿಯ ಬ್ಯಾಟಿಂಗ್ ಪ್ರದರ್ಶನ ತೋರಿದರೂ 48 ರನ್ ಗಳಿಸಿದ್ದ ವೇಳೆ ನಥಾನ್ ಲಿಯೋನ್ ಅವರ ಮೊದಲ ಓವರ್ನಲ್ಲಿಯೇ ಸ್ಲಿಪ್ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಸದ್ಯ ಅಜಿಂಕ್ಯ ರಹಾನೆ 29* ಮತ್ತು ಶ್ರೀಕರ್ ಭರತ್ 5* ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಮೂರನೇ ದಿನವಾದ ಶುಕ್ರವಾರ ಉಭಯ ಆಟಗಾರರು ದೊಡ್ಡ ಮೊತ್ತದ ಇನಿಂಗ್ಸ್ ಕಟ್ಟಿದರೆ ಮಾತ್ರ ಭಾರತ ಈ ಪಂದ್ಯವನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ. ಆಸೀಸ್ ಪರ ಬೌಲಿಂಗ್ ನಡೆಸಿದ ಐದೂ ಬೌಲರ್ಗಳು ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.
-
ಸುವಚನ12 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
South Cinema24 hours ago
Priya Prakash Varrier: ಕಣ್ಣು ಹೊಡೊಯೊ ಐಡಿಯಾ ಕೊಟ್ಟಿದ್ದು ನಾನೆ ಎಂದ ಪ್ರಿಯಾ; ಆಕೆಗೆ ತೈಲ ಕೊಡ್ರಪ್ಪ ಎಂದ ನಿರ್ದೇಶಕ!
-
South Cinema23 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema22 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ಪ್ರಮುಖ ಸುದ್ದಿ18 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
ಪ್ರಮುಖ ಸುದ್ದಿ23 hours ago
ವಿಧವೆ ಅನ್ನೋದಕ್ಕೆ ರಾಷ್ಟ್ರಪತಿಯನ್ನು ಸಂಸತ್ ಭವನ ಉದ್ಘಾಟನೆಗೆ ಮೋದಿ ಆಹ್ವಾನಿಸಿಲ್ಲವೆಂದ ಕುಂ. ವೀರಭದ್ರಪ್ಪ
-
ಕರ್ನಾಟಕ22 hours ago
Fraud Case: ಬೆಳದಿಂಗಳ ಬಾಲೆ ಪ್ರಕರಣಕ್ಕೆ ಟ್ವಿಸ್ಟ್; ಸ್ವಾಮೀಜಿ ವಂಚನೆ ಕೇಸಲ್ಲಿ ಎ2 ಆರೋಪಿ ಈಗ ಎ1!
-
ದೇಶ20 hours ago
ಸಹಕಾರಿ ಬ್ಯಾಂಕ್ಗಳು ಕೂಡ ಸುಸ್ತಿದಾರರ ಜತೆ ರಾಜಿ, ಸಾಲ ರೈಟ್-ಆಫ್ ಮಾಡಬಹುದು; ಆರ್ಬಿಐ ಮಹತ್ವದ ಘೋಷಣೆ