IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು - Vistara News

ಕ್ರೀಡೆ

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

IPL 2024: ಮೊದಲು ಬ್ಯಾಟ್ ಮಾಡಿದ ಸನ್​ ರೈಸರ್ಸ್​ ತಂಡ ತನ್ನ ಪಾಲಿನ 20 ಓವರ್​ಗಳಲ್ಲಿ 8 ವಿಕೆಟ್​ಗೆ 173 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ ಆರಂಭಿಕ ಹಿನ್ನಡೆ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರ ಅದ್ಭುತ್ ಇನಿಂಗ್ಸ್​ ನೆರವಿನಿಂದ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿ ಗೆಲುವು ಸಾಧಿಸಿತು.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಸೂರ್ಯಕುಮಾರ್ ಯಾದವ್ (Suryakumar Yadav) ಬಾರಿಸಿದ ಸ್ಫೋಟಕ ಶತಕ (102,51 ಎಸೆತ, 12 ಫೋರ್, 6 ಸಿಕ್ಸರ್​) ಹಾಗೂ ಬೌಲರ್​ಗಳ ಸಂಘಟಿತ ಹೋರಾಟದಿಂದ ಮಿಂಚಿದ ಮುಂಬೈ ಇಂಡಿಯನ್ಸ್​ (Mumbai Indians) ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 55ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad)​ ವಿರುದ್ಧ 7 ವಿಕೆಟ್​ ಸುಲಭ ವಿಜಯ ದಾಖಲಿಸಿದೆ. ಈ ಮೂಲಕ ಸೂರ್ಯನ ಪ್ರತಾಪಕ್ಕೆ ಸನ್​​ ಮಂಕಾಗಿ ಹೋಯಿತು. ಇದು ಮುಂಬಯಿ ತಂಡಕ್ಕೆ ಹಾಲಿ ಆವೃತ್ತಿಯ 12 ಪಂದ್ಯಗಳಲ್ಲಿ 4ನೇ ಗೆಲುವಾಗಿದೆ. ಇದರೊಂದಿಗೆ 10ನೇ ಸ್ಥಾನದಿಂದ ಒಂದು ಸ್ಥಾನ ಮೇಲ್ಕಕೇರಿದೆ. ಇದೇ ವೇಳೆ ಕಳೆದ ಆವೃತ್ತಿಯ ರನ್ನರ್​ ಅಪ್​ ತಂಡ ಗುಜರಾತ್​ ಕೊನೇ ಸ್ಥಾನಕ್ಕೆ ಇಳಿದಿದೆ.

ಇಲ್ಲಿನ ಐತಿಹಾಸಿಕ ವಾಂಖೆಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ಮುಂಬಯಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಸನ್​ ರೈಸರ್ಸ್​ ತಂಡ ತನ್ನ ಪಾಲಿನ 20 ಓವರ್​ಗಳಲ್ಲಿ 8 ವಿಕೆಟ್​ಗೆ 173 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ ಆರಂಭಿಕ ಹಿನ್ನಡೆ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರ ಅದ್ಭುತ್ ಇನಿಂಗ್ಸ್​ ನೆರವಿನಿಂದ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿ ಗೆಲುವು ಸಾಧಿಸಿತು.

ಇದನ್ನೂ ಓದಿ: T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

ಸೂರ್ಯನ ಆಧಾರ

ಸ್ಪರ್ಧಾತ್ಮಕ ಗುರಿಯನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡ ಆಘಾತಕಾರಿ ಆರಂಭ ಪಡೆಯಿತು. ಇಶಾನ್ ಕಿಶನ್ 9 ರನ್​ಗೆ ಔಟಾದರೆ ರೋಹಿತ್ ಶರ್ಮಾ 4 ರನ್​ಗೆ ಕ್ರೀಸ್ ತೊರೆಯಬೇಕಾಯಿತು. ನಮನ್ ಧಿರ್ ಶೂನ್ಯಕ್ಕೆ ಔಟಾಗುವ ಮೂಲಕ ಮತ್ತೆ ಸೋಲಿನ ಸುಳಿಗೆ ಸಿಲುಕಿತು. 31 ರನ್​ಗೆ 3 ವಿಕೆಟ್ ಕಳೆದುಕೊಂಡ ಮುಂಬೈ ಆತಂಕಕ್ಕೆ ಬಿತ್ತು. ಈ ವೇಳೆ ಕ್ರೀಸ್​ನಲ್ಲಿ ಗಟ್ಟಿಯಾಗಿ ನಿಂತ ಸೂರ್ಯಕುಮಾರ್​ ಎಸ್​ಆರ್​ಎಚ್​ ಬೌಲರ್​ಗಳನ್ನು ದಂಡಿಸಲು ಆರಂಭಿಸಿದರು. 30 ಎಸೆತಕ್ಕೆ ಅರ್ಧ ಶತಕ ಬಾರಿಸಿದ ಸೂರ್ಯ ನಂತರದ 21 ಎಸೆತದಲ್ಲಿ ಉಳಿದ ರನ್​ಗಳನ್ನು ಪೂರೈಸಿದರು. ಇವರಿಗೆ ಜತೆಯಾದ ತಿಲಕ್​ ವರ್ಮಾ 32 ಎಸೆತಕ್ಕೆ 37 ರನ್ ಬಾರಿಸಿದರು.

ಎಸ್​ಆರ್​ಎಚ್ ಬ್ಯಾಟರ್​ಗಳು ಫೇಲ್​

ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಎಚ್​ ಉತ್ತಮ ಆರಂಭ ಪಡೆದ ಬಳಿಕವೂ ಆಘಾತಕಾರಿ ಕುಸಿತ ಕಂಡಿತು. ಟ್ರಾವಿಸ್​ ಹೆಡ್​ 40 ರನ್​ ಬಾರಿಸಿದರೆ ಅಭಿಷೇಕ್ ಶರ್ಮಾ 11 ರನ್​ಗೆ ಮೀಸಲಾದರು. ಮತ್ತೆ ಅವಕಾಶ ಪಡೆದ ಮಯಾಂಕ್​ ಅಗರ್ವಾಲ್​ 5 ರನ್ ಬಾರಿಸಿದರೆ ನಿತಿಶ್​ ಕುಮಾರ್​ 20 ರನ್​ಗೆ ಔಟಾದರು. ಕೊನೆಯಲ್ಲಿ ನಾಯಕ ಪ್ಯಾಟ್​ ಕಮಿನ್ಸ್ 17 ಎಸೆತಕ್ಕೆ 35 ರನ್ ಬಾರಿಸಿ ತಂಡದ ಸ್ಪರ್ಧಾತ್ಮಕ ಮೊತ್ತಕ್ಕೆ ಕೊಡುಗೆ ಕೊಟ್ಟರು.

ಮುಂಬೈ ಪರ ಮಾರಕ ಬೌಲಿಂಗ್ ದಾಳಿ ಸಂಘಟಿಸಿದ ಪಿಯೂಶ್​ ಚಾವ್ಲಾ 33 ರನ್​ಗೆ 3 ವಿಕೆಟ್ ಪಡೆದರೆ ಹಾರ್ದಿಕ್ ಪಾಂಡ್ಯ 31 ರನ್​ಗೆ 3 ವಿಕೆಟ್ ಉರುಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma: ಐಪಿಎಲ್ ಪ್ರಸಾರಕರ ವಿರುದ್ಧ ಕಿಡಿ ಕಾರಿದ ಹಿಟ್​ಮ್ಯಾನ್​ ರೋಹಿತ್​

Rohit Sharma: ಸ್ಟಾರ್ ಸ್ಪೋರ್ಟ್ಸ್ ನಾನು ತಂಡದ ಸಹ ಆಟಗಾರರು ಮತ್ತು ಸಹೋದ್ಯೋಗಿಗಳೊಂದಿಗೆ ಆಡಿದ ವೈಯಕ್ತಿಕ ಮಾತುಕತೆಗಳ ಆಡಿಯೊ ಮತ್ತು ವಿಡಿಯೊ ತುಣುಕನ್ನು ಹಂಚಿಕೊಳ್ಳುವುದನ್ನು ಸ್ಟಾರ್ ಸ್ಪೋರ್ಟ್ಸ್ ಮುಂದುವರೆಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್​ ಹುಟ್ಟಿಸುವ ಸಲುವಾಗಿ ಪ್ರಸಾರಕರು ಈ ರೀತಿ ಕ್ರಿಕೆಟಿಗರ ಗೌಪ್ಯತೆಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ರೋಹಿತ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Rohit Sharma
Koo

ಮುಂಬಯಿ: ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ (Rohit Sharma) ಅವರು ಐಪಿಎಲ್ ಬ್ರಾಡ್‌ಕಾಸ್ಟರ್(IPL Broadcaster) ಸ್ಟಾರ್ ಸ್ಪೋರ್ಟ್ಸ್(Star Sports) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ರೋಹಿತ್​ ಅವರು ಧವಳ್ ಕುಲಕರ್ಣಿ ಅವರೊಂದಿಗೆ ಸಂಭಾಷಣೆ ನಡೆಸಿದ್ದರು. ಇದನ್ನು ರೆಕಾರ್ಡ್​ ಮಾಡುತ್ತಿರುವ ಕ್ಯಾಮೆರಾಮನ್​ಗೆ ಆಡಿಯೊ ಆಫ್​ ಮಾಡಿ ಎಂದು ಕೋರಿಕೊಂಡಿದ್ದರು. ಆದರೂ ಕೂಡ ಆಡಿಯೊ ರೆಕಾರ್ಡ್​ ಮಾಡಿ ಈ ತುಣುಕನ್ನು ಹರಿ ಬಿಟ್ಟು ಖಾಸಗಿತನವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ.

ರೋಹಿತ್​ ಶರ್ಮ ಈ ಕುರಿತು ಟ್ವೀಟ್​ ಮಾಡಿದ್ದು, ‘ತನ್ನ ವಿನಂತಿಯ ಹೊರತಾಗಿಯೂ, ಸ್ಟಾರ್ ಸ್ಪೋರ್ಟ್ಸ್ ನಾನು ತಂಡದ ಸಹ ಆಟಗಾರರು ಮತ್ತು ಸಹೋದ್ಯೋಗಿಗಳೊಂದಿಗೆ ಆಡಿದ ವೈಯಕ್ತಿಕ ಮಾತುಕತೆಗಳ ಆಡಿಯೊ ಮತ್ತು ವಿಡಿಯೊ ತುಣುಕನ್ನು ಹಂಚಿಕೊಳ್ಳುವುದನ್ನು ಸ್ಟಾರ್ ಸ್ಪೋರ್ಟ್ಸ್ ಮುಂದುವರೆಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್​ ಹುಟ್ಟಿಸುವ ಸಲುವಾಗಿ ಪ್ರಸಾರಕರು ಈ ರೀತಿ ಕ್ರಿಕೆಟಿಗರ ಗೌಪ್ಯತೆಗೆ ಅಡ್ಡಿಪಡಿಸುವುದು ಸರಿಯಲ್ಲ. ಸ್ವಲ್ಪವಾದರೂ ಸಾಮಾನ್ಯ ಜ್ಞಾನ ಇರಬೇಕು” ಎಂದು ಟ್ವೀಟ್​ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕ್ರಿಕೆಟಿಗರ ಜೀವನವು ಎಷ್ಟು ಗೊಂದಲವಾಗಿದೆ ಎಂದರೆ, ಈಗ ನಾವು ನಮ್ಮ ಸ್ನೇಹಿತರು ಮತ್ತು ಸಹೋದ್ಯೋಗಿಗಳೊಂದಿಗೆ, ತರಬೇತಿ ಅಥವಾ ಪಂದ್ಯದ ದಿನಗಳಲ್ಲಿ ಗೌಪ್ಯವಾಗಿ ಮಾತನಾಡು ಕೂಡ ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಾನು ನಡೆಸುವ ಪ್ರತಿಯೊಂದು ಸಂಭಾಷಣೆಯನ್ನು ಕೂಡ ಕ್ಯಾಮೆರಾಗಳು ರೆಕಾರ್ಡ್ ಮಾಡುತ್ತಿವೆ. ಇದು ಒಳ್ಳೆಯ ವಾತಾವರಣವಲ್ಲ ಎಂದು ರೋಹಿತ್​ ಬೇಸರ ವ್ಯಕ್ತಪಡಿಸಿದ್ದಾರೆ.

ರೋಹಿತ್​ ಅವರು ಕೆಕೆಆರ್​ ತಂಡದ ಸಹಾಯಕ ಕೋಚ್ ಅಭಿಷೇಕ್ ನಾಯರ್ ಜತೆ ಮಾತನಾಡುತ್ತಿದ್ದಾಗಲೂ ಇದನ್ನು ರೆಕಾರ್ಡ್ ಮಾಡಿ ಪ್ರಸಾರ ಮಾಡಲಾಗಿತ್ತು. ಈಡನ್ ಗಾರ್ಡನ್ಸ್​​ನಲ್ಲಿ ನಡೆದಿದ್ದ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಪಂದ್ಯಕ್ಕೂ ಮೊದಲು ರೋಹಿತ್ ಅವರು ನಾಯರ್ ಅವರೊಂದಿಗೆ ಸಂವಾದ ನಡೆಸಿದ್ದರು.

ಇದನ್ನೂ ಓದಿ IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

ನಾಯಕತ್ವದ ಕರ್ತವ್ಯಗಳಿಂದ ಮುಕ್ತರಾದ ನಂತರ ರೋಹಿತ್ ಈ ಬಾರಿ ದೊಡ್ಡ ಸ್ಕೋರ್ ಮಾಡುತ್ತಾರೆ ಎಂದು ಅನೇಕರು ನಿರೀಕ್ಷಿಸಿದ್ದರು. ಆದರೆ ಈ ನಿರೀಕ್ಷೆಗಳಲ್ಲೆ ಹುಸಿಯಾಗಿತ್ತು. ರೋಹಿತ್​ ಈ ಬಾರಿ 1 ಶತಕ ಬಾರಿಸಿದ್ದು ಬಿಟ್ಟರೆ ಉಳಿದ ಬಹುತೇಕ ಪಂದ್ಯಗಳಲ್ಲಿಯೂ ಕಳಪೆ ಪ್ರದರ್ಶನ ತೋರಿದ್ದರು. ಐಪಿಎಲ್​​ ವೇದಿಕೆಯಲ್ಲಿ ಮಿಂಚಲು ಸಾಧ್ಯವಾಗದಿದ್ದರೂ, ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ರೋಹಿತ್ ದೊಡ್ಡ ಮೊತ್ತವನ್ನು ಗಳಿಸಲು ಎದುರು ನೋಡುತ್ತಿದ್ದಾರೆ.

ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

Continue Reading

ಬ್ಯಾಡ್ಮಿಂಟನ್

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Thailand Open 2024: ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌(Thailand Open 2024) ಫೈನಲ್​ ಪಂದ್ಯದಲ್ಲಿ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ(Satwiksairaj Rankireddy-Chirag Shetty) ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

VISTARANEWS.COM


on

Thailand Open 2024
Koo

ಬ್ಯಾಂಕಾಕ್‌: ಭಾರತದ ಸ್ಟಾರ್‌ ಡಬಲ್ಸ್‌ ಬ್ಯಾಡ್ಮಿಂಟನ್​ ಆಟಗಾರರಾದ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ(Satwiksairaj Rankireddy-Chirag Shetty) ಪ್ಯಾರಿಸ್​ ಒಲಿಂಪಿಕ್ಸ್​ ಟೂರ್ನಿ ಆರಂಭಕ್ಕೂ ಮುನ್ನವೇ ಶ್ರೇಷ್ಠ ಪ್ರದರ್ಶನವೊಂದನ್ನು ನೀಡಿದ್ದಾರೆ. ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌(Thailand Open 2024) ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

ಏಕಪಕ್ಷೀಯವಾಗಿ ಸಾಗಿದ ಫೈನಲ್​ ಪಂದ್ಯದಲ್ಲಿ ಏಷ್ಯಾಡ್‌ ಚಾಂಪಿಯನ್‌ ಹಾಗೂ ಕೂಟದ ಅಗ್ರ ಶ್ರೇಯಾಂಕಿ ಭಾರತೀಯ ಜೋಡಿ ಚೀನದ ಚೆನ್‌ ಬೊ ಯಾಂಗ್‌-ಲಿಯು ಯಿ(Chen Bo Yang-Liu Yi) ವಿರುದ್ಧ 21-15, 21-15 ನೇರ ಗೇಮ್​ಗಳಿಂದ ಹಿಮ್ಮೆಟಿಸಿದರು. ಶನಿವಾರ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಚಿರಾಗ್‌- ಸಾತ್ವಿಕ್‌ ಜೋಡಿ ಚೈನೀಸ್‌ ತೈಪೆಯ ಲು ಮಿಂಗ್‌ ಚೆ-ಟಾಂಗ್‌ ಕೈ ವೀ ವಿರುದ್ಧವೂ 21-11, 21-12 ಅಂತರದ ಸುಲಭ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದ್ದರು. ಫೈನಲ್​ನಲ್ಲಿಯೂ ಇದೇ ಪ್ರದರ್ಶನ ತೋರಿ ಪ್ರಶಸ್ತಿಗೆ ಮುತ್ತಿಕ್ಕಿದರು.

ಕೆಲವು ವಾರಗಳ ಹಿಂದೆ ನಡೆದಿದ್ದ ಥಾಮಸ್‌ ಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫ‌ಲರಾಗಿದ್ದ ಚಿರಾಗ್​-ಸಾತ್ವಿಕ್​ ಜೋಡಿ ಇದೀಗ ಮರಳಿ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ದೊಡ್ಡ ಪದಕವೊಂದನ್ನು ಗೆಲ್ಲುವ ನೆಚ್ಚಿನ ಜೋಡಿಯಾಗಿ ಭರವಸೆ ಮೂಡಿಸಿದೆ.

ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಕರ್ನಾಟಕ ಮೂಲದ ಚಿರಾಗ್‌ ಶೆಟ್ಟಿ ಜೋಡಿಗೆ ಇದೇ ವರ್ಷ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಏಷ್ಯನ್​ ಗೇಮ್ಸ್​ನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಸಾಧನೆ ಈ ಜೋಡಿಯದ್ದಾಗಿದೆ. 1982ರಲ್ಲಿ ಲೆರೋಯ್‌ ಫ್ರಾನ್ಸಿಸ್‌-ಪ್ರದೀಪ್‌ ಗಾಂಧಿ ಕಂಚು ಗೆದ್ದಿದ್ದು ಭಾರತಕ್ಕೆ ಪುರುಷರ ಡಬಲ್ಸ್‌ನಲ್ಲಿ ಸಿಕ್ಕ ಏಕೈಕ ಪದಕವಾಗಿತ್ತು. ಆದರೆ, ಚಿರಾಗ್‌-ಸಾತ್ವಿಕ್‌ ಚಿನ್ನ ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ಬರೆದಿದ್ದರು.

ಇದನ್ನೂ ಓದಿ Thomas Cup 2024: ಉಬೆರ್‌ ಕಪ್‌ ಬಳಿಕ ಥಾಮಸ್‌ ಕಪ್​ನಲ್ಲಿಯೂ ಮುಗ್ಗರಿಸಿದ ಭಾರತ

ಬಹುನಿರೀಕ್ಷಿತ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಡಕ್ಕೆ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಪಿ.ವಿ ಸಿಂಧು(PV Sindhu) ಸೇರಿ 7 ಭಾರತೀಯ ಶಟ್ಲರ್​ಗಳು ಈಗಾಗಲೇ ಅರ್ಹತೆ ಪಡೆದಿದ್ದಾರೆ. ಮಹಿಳಾ ಡಬಲ್ಸ್​ನಲ್ಲಿ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೂ ಒಲಿಂಪಿಕ್ಸ್​ ಟಿಕೆಟ್​ ಲಭಿಸಿದೆ.

ಅರ್ಹತೆ ಪಡೆದ ಶಟ್ಲರ್​ಗಳು

ಪಿವಿ ಸಿಂಧು, ಲಕ್ಷ್ಯ ಸೇನ್, ಎಚ್ ಎಸ್ ಪ್ರಣಯ್, ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ, ಚಿರಾಗ್ ಶೆಟ್ಟಿ, ಅಶ್ವಿನಿ ಪೊನ್ನಪ್ಪ, ತನಿಶಾ ಕ್ರಾಸ್ಟೊ.

ಜುಲೈ 26ಕ್ಕೆ ಒಲಿಂಪಿಕ್ಸ್​ ಆರಂಭ

ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್‌ನ(Paris Olympics 2024) ಉದ್ಘಾಟನಾ ಸಮಾರಂಭಕ್ಕೆ(paris olympics 2024 opening ceremony) ದಿನಾಂಕ ನಿಗದಿಯಾಗಿದೆ. ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ.

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಕ್ರಿಕೆಟ್

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

RCB vs CSK: ಪಂದ್ಯದ ಮುಕ್ತಾಯದ ಬಳಿಕ ವಾಡಿಕೆಯಂತೆ ಉಭಯ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ಮಾಡಬೇಕು. ಅದರಂತೆ ಚೆನ್ನೈ ತಂಡದ ಆಟಗಾರರೆಲ್ಲ ಸರದಿ ಸಾಲಿನಲ್ಲಿ ನಿಂತು ಸಿದ್ಧರಾಗಿದ್ದರು. ಆದರೆ ಆರ್​ಸಿಬಿ ಆಟಗಾರರು ಮೈದಾನದಲ್ಲೇ ಗೆಲುವಿನ ಸಂಭ್ರಮಾಚರಣೆ ಮಾಡುತ್ತಿದ್ದರು. ಕೆಲ ಕಾಲ ಕಾದ ಧೋನಿ ಆರ್​ಸಿಬಿ ಆಟಗಾರರು ಬರದೇ ಇದದ್ದನ್ನು ನೋಡಿ ಪೆವಿಲಿಯನ್​ನತ್ತ ಮರಳಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಮಹೇಂದ್ರ ಸಿಂಗ್‌ ಧೋನಿ(MS Dhoni) ಕ್ರಿಕೆಟ್‌ ಮೈದಾನದಲ್ಲಿ ಶಾಂತಿಯಿಂದ ವ‌ರ್ತಿಸುತ್ತಾರೆ. ಬ್ಯಾಟಿಂಗ್‌, ವಿಕೆಟ್‌ ಕೀಪಿಂಗ್‌ ಅಥವಾ ನಾಯಕನಾಗೇ ಇರಲಿ ಶಾಂತಚಿತ್ತ ಅವರ ಮುಖ್ಯ ಗುಣ. ಎಂತಹ ಸನ್ನಿವೇಶವಿದ್ದರೂ ಧೋನಿ(MS Dhoni leaves without shaking hands) ತಾಳ್ಮೆ ಕಳೆದುಕೊಳ್ಳುವುದು ವಿರಳ. ಇದೇ ಕಾರಣಕ್ಕೆ ಅವರಿಗೆ ಕ್ಯಾಪ್ಟನ್‌ ಕೂಲ್‌ ಎಂಬ ಹೆಸರು ಕೂಡ ಇದೆ. ಆದರೆ ನಿನ್ನೆ(ಶನಿವಾರ) ನಡೆದ ಆರ್​ಸಿಬಿ(RCB vs CSK) ವಿರುದ್ಧದ ಪಂದ್ಯದಲ್ಲಿ ಧೋನಿ ತೋರಿದ ವರ್ತನೆಗೆ ಎದುರಾಳಿ ತಂಡದ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು.

ಇದನ್ನೂ ಓದಿ RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

ಪಂದ್ಯದ ಮುಕ್ತಾಯದ ಬಳಿಕ ವಾಡಿಕೆಯಂತೆ ಉಭಯ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ಮಾಡಬೇಕು. ಅದರಂತೆ ಚೆನ್ನೈ ತಂಡದ ಆಟಗಾರರೆಲ್ಲ ಸರದಿ ಸಾಲಿನಲ್ಲಿ ನಿಂತು ಸಿದ್ಧರಾಗಿದ್ದರು. ಆದರೆ ಆರ್​ಸಿಬಿ ಆಟಗಾರರು ಮೈದಾನದಲ್ಲೇ ಗೆಲುವಿನ ಸಂಭ್ರಮಾಚರಣೆ ಮಾಡುತ್ತಿದ್ದರು. ಕೆಲ ಕಾಲ ಕಾದ ಧೋನಿ ಆರ್​ಸಿಬಿ ಆಟಗಾರರು ಬರದೇ ಇದದ್ದನ್ನು ನೋಡಿ ಪೆವಿಲಿಯನ್​ನತ್ತ ಮರಳಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಆರ್​ಸಿಬಿ ಅಭಿಮಾನಿಗಳು ಚೆನ್ನೈ ವಿರೋಧಿಯಾಗಿದ್ದರೂ ಕೂಡ ನಿನ್ನೆ ಧೋನಿಗೆ ಸಂಪೂರ್ಣ ಬೆಂಬಲ ಸೂಚಿಸಿದ್ದರು. ಅಲ್ಲದೆ ಧೋನಿಯ ಜೆರ್ಸಿ ತೊಟ್ಟು, ದೊಡ್ಡ ಬ್ಯಾನರ್​ ಮೂಲಕ ನೀವು ವಿದಾಯ ಹೇಳಬೇಡಿ ಇದು ಆರ್​ಸಿಬಿ ಮತ್ತು ಕೊಹ್ಲಿ ಅಭಿಮಾನಿಗಳ ಬೇಡಿಕೆ ಎಂದು ಮನವಿ ಮಾಡಿದ್ದರು. ಈ ಮೂಲಕ ಧೋನಿಗೆ ಸಪೋರ್ಟ್​ ಮಾಡಿದ್ದರು. ಆದರೆ ಧೋನಿ ಆರ್​ಸಿಬಿ ಆಟಗಾರರಿಗೆ ಹಸ್ತಲಾಘವ ಮಾಡದೆ ತೆರಳಿದ್ದು ಮಾತ್ರ ಬೇಸರ ತಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ‘ಇಟ್‌ ಹರ್ಟ್ಸ್‌​’ ಎಂದ ಹ್ಯಾಶ್​ ಟ್ಯಾಗ್​ನೊಂದಿಗೆ ಬರೆದುಕೊಂಡಿದ್ದಾರೆ.

ಧೋನಿ ಮೈದಾನದಲ್ಲಿದ ಆರ್​ಸಿಬಿ ಆಟಗಾರರಿಗೆ ಹಸ್ತಲಾಘವ ಮಾಡದಿದ್ದರೂ ಕೂಡ ತಾವು ಪೆವಿಲಿಯನ್​ ಕಡೆಗೆ ಹೋಗುವಾಗ ಎದುರಿಗೆ ಸಿಕ್ಕ ಆರ್​ಸಿಬಿ ಸಿಬ್ಬಂದಿಗಳಿಗೆ ಹಸ್ತಲಾಘವ ನೀಡಿದ್ದಾರೆ. ಯಶ್​ ದಯಾಳ್​ ಎಸೆತ ಅಂತಿಮ ಓವರ್​ನ ಮೊದಲ ಎಸೆತವನ್ನೇ ಧೋನಿ ಔಟ್​ ಆಫ್​ದಿ ಸ್ಟೇಡಿಯಂಗೆ ಸಿಕ್ಸರ್ ಬಾರಿಸಿದರು. ಈ ಸಿಕ್ಸರ್​ 110 ಮೀ. ದೂರ ಚಿಮ್ಮಿತು. ಮುಂದಿನ ಎಸೆತದಲ್ಲಿಯೂ ಧೋನಿ ಸಿಕ್ಸರ್​ ಬಾರಿಸುವ ಪ್ರಯತ್ನದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಧೋನಿ ವಿಕೆಟ್​ ಪತನಗೊಳ್ಳುತ್ತಿದ್ದಂತೆ ಚೆನ್ನೈ ಸೋಲು ಕೂಡ ಖಚಿತಗೊಂಡಿತು.

Continue Reading

ಕ್ರೀಡೆ

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

RCB vs CSK: ಧೋನಿ ಬಾರಿಸಿದ ಸಿಕ್ಸರ್ 110 ಮೀಟರ್ ಸಾಗಿ ಸ್ಟೇಡಿಯಂನಿಂದ ಹೊರಬಿದ್ದ ಕಾರಣ ಹೊಸ ಚೆಂಡನ್ನು ನೀಡಲಾಯಿತು. ಇದು ಒದ್ದೆಯಿಲ್ಲದ ಕಾರಣ ಬೌಲರ್ ಯಶ್ ದಯಾಳ್​ಗೆ ಚೆಂಡಿನ ಮೇಲೆ ಹಿಡಿತ ಸಾಧಿಸಲು ನೆರವಾಯಿತು.ಹೀಗಾಗಿ ನಾವು ಪಂದ್ಯ ಗೆದ್ದುವು ಎಂದು ದಿನೇಶ್ ಕಾರ್ತಿಕ್​ ಹೇಳಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ(M.Chinnaswamy Stadium) ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್(IPL 2024) 2024ರ 68ನೇ ಪಂದ್ಯದಲ್ಲಿ ಎಂಎಸ್ ಧೋನಿ ಅವರು ಬಾರಿಸಿದ 110 ಮೀಟರ್ ಸಿಕ್ಸರ್ ಸಿಎಸ್‌ಕೆ ಸೋಲಿಗೆ ಪ್ರಮುಖ ಕಾರಣವಾಯಿತು ಎಂದು ಆರ್​ಸಿಬಿ ಆಟಗಾರ ದಿನೇಶ್​ ಕಾರ್ತಿಕ್​ ಅಭಿಪ್ರಾಯಪಟ್ಟಿದ್ದಾರೆ.

ಚೆನ್ನೈಗೆ(RCB vs CSK) ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಪಂದ್ಯದಲ್ಲಿ 201ರನ್​ ಗಡಿ ದಾಟಿಬೇಕಿತ್ತು. ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಮತ್ತು ಧೋನಿ ಸೇರಿಕೊಂಡು ಪಂದ್ಯ ಗೆಲ್ಲದಿದ್ದರೂ ಕೂಡ ಪ್ಲೇ ಆಫ್​ ಲೆಕ್ಕಾಚಾರದಲ್ಲಿ 201 ರನ್​ ಬಾರಿಸಲು ಶಕ್ತಿ ಮೀರಿ ಪ್ರಯತ್ನಪಟ್ಟರು. ಈ ಗುರಿ ತಲುಪಲು ಚೆನ್ನೈಗೆ ಅಂತಿಮವಾಗಿ 6 ಎಸೆತಗಳಲ್ಲಿ 17 ರನ್ ತೆಗೆಯುವ ಸವಾಲು ಎದುರಾಯಿತು. ಈ ವೇಳೆ ಯಶ್​ ದಯಾಳ್​ ಎಸೆತ ಅಂತಿಮ ಓವರ್​ನ ಮೊದಲ ಎಸೆತವನ್ನೇ ಧೋನಿ ಔಟ್​ ಆಫ್​ದಿ ಸ್ಟೇಡಿಯಂಗೆ ಸಿಕ್ಸರ್ ಬಾರಿಸಿದರು. ಈ ಸಿಕ್ಸರ್​ 110 ಮೀ. ದೂರ ಚಿಮ್ಮಿತು. ಮುಂದಿನ ಎಸೆತದಲ್ಲಿಯೂ ಧೋನಿ ಸಿಕ್ಸರ್​ ಬಾರಿಸುವ ಪ್ರಯತ್ನದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಬಳಿಕ ಎಸೆತ ನಾಲ್ಕು ಎಸೆತಗಳಲ್ಲಿಯೂ ದಯಾಳ್​ ಹಿಡಿತ ಸಾಧಿಸಿ ಆರ್​ಸಿಬಿಗೆ ಅಭೂತಪೂರ್ವ ಗೆಲುವು ತಂದು ಕೊಟ್ಟರು.

ಧೋನಿ ಸಿಕ್ಸರ್​ನಿಂದ ಆರ್​ಸಿಬಿ ಲಾಭವಾಯಿತು ಎಂದು ದಿನೇಶ್​ ಕಾರ್ತಿಕ್​ ಹೇಳಿದ್ದಾರೆ. ಇದಕ್ಕೆ ಕಾರಣವನ್ನು ಕೂಡ ಅವರು ತಿಳಿಸಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ದಿನೇಶ್​ ಕಾರ್ತಿಕ್​, ‘ಧೋನಿ ಬಾರಿಸಿದ ಸಿಕ್ಸರ್ 110 ಮೀಟರ್ ಸಾಗಿ ಸ್ಟೇಡಿಯಂನಿಂದ ಹೊರಬಿದ್ದ ಕಾರಣ ಹೊಸ ಚೆಂಡನ್ನು ನೀಡಲಾಯಿತು. ಇದು ಒದ್ದೆಯಿಲ್ಲದ ಕಾರಣ ಬೌಲರ್ ಯಶ್ ದಯಾಳ್​ಗೆ ಚೆಂಡಿನ ಮೇಲೆ ಹಿಡಿತ ಸಾಧಿಸಲು ನೆರವಾಯಿತು. ಇದಕ್ಕೂ ಮುನ್ನ ಚೆಂಡು ಒದ್ದೆಯಾಗಿದ್ದ ಕಾರಣ ಬೌಲರ್​ಗಳಿಗೆ ಸರಿಯಾಗಿ ಚೆಂಡಿನ ಮೇಲೆ ಹಿಡಿತ ಸಾಧಿಸಲು ಕಷ್ಟವಾಗಿತ್ತು. ಹೀಗಾಗಿ ನೋ ಬಾಲ್​, ಫುಲ್​ಟಾಸ್​ ಸೇರಿ ವೈಡ್​ ಎಸೆತಗಳು ಕಂಡುಬಂತು. ಹೊಸ ಚೆಂಡು ಸಿಕ್ಕಿದ್ದು ಆರ್​ಸಿಬಿ ಗೆಲುವಿಗೆ ಸಹಾಯವಾಯಿತು” ಎಂದು ಹೇಳುವ ಮೂಲಕ ಧೋನಿ ಸಿಕ್ಸರ್​ ತಮ್ಮ ತಂಡಕ್ಕೆ ವರದಾನವಾಯಿತು ಎಂದರು.

ಇದನ್ನೂ ಓದಿ RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸಿಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು.

Continue Reading
Advertisement
Rohit Sharma
ಕ್ರೀಡೆ13 mins ago

Rohit Sharma: ಐಪಿಎಲ್ ಪ್ರಸಾರಕರ ವಿರುದ್ಧ ಕಿಡಿ ಕಾರಿದ ಹಿಟ್​ಮ್ಯಾನ್​ ರೋಹಿತ್​

R Ashok
ರಾಜಕೀಯ39 mins ago

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

Thailand Open 2024
ಬ್ಯಾಡ್ಮಿಂಟನ್59 mins ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ1 hour ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Money Guide
ಮನಿ-ಗೈಡ್1 hour ago

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Road Accident
ಕ್ರೈಂ1 hour ago

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Janhvi Kapoor felt sexualised at the age of 12
ಬಾಲಿವುಡ್1 hour ago

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Kundapur News
ಕರ್ನಾಟಕ1 hour ago

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

RCB vs CSK
ಕ್ರಿಕೆಟ್2 hours ago

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

Congress Manifesto
ದೇಶ2 hours ago

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌