Site icon Vistara News

Neeraj Chopra : ವಿನೇಶ್ ಪೋಗಟ್​​ಗೆ ಅನರ್ಹತೆ ಬಗ್ಗೆ ಮಾತನಾಡಿದ ನೀರಜ್ ಚೋಪ್ರಾ; ಏನಂದ್ರು ಅವರು?

Neeraj Chopra

ನವದೆಹಲಿ: ಭಾರತದ ಜಾವೆಲಿನ್ ತಾರೆ ಮತ್ತು ಪ್ಯಾರಿಸ್ ಒಲಿಂಪಿಕ್ ಬೆಳ್ಳಿ ಪದಕ ವಿಜೇತ ನೀರಜ್ ಚೋಪ್ರಾ (Neeraj Chopra) ಅವರು ಆಗಸ್ಟ್ 8 ರಂದು ನಡೆದ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಗೆದ್ದ ಬಳಿಕ ವಿನೇಶ್ ಫೋಗಟ್ (Vinesh Phogat) ಅನರ್ಹ ಘಟನೆ ಬಗ್ಗೆ ಮಾತನಾಡಿದ್ದಾರೆ. ಕುಸ್ತಿಪಟುವನ್ನು ಅವರನ್ನು ಅನರ್ಹಗೊಳಿಸಲಾಗಿದೆ ಎಂಬ ಸುದ್ದಿ ಕೇಳಿ ಬೇಸರವಾಯಿತು ಎಂದು ಹೇಳಿದ್ದಾರೆ. ಮಹಿಳೆಯರ 50 ಕೆ.ಜಿ ಕುಸ್ತಿ ಸ್ಪರ್ಧೆಯ ಫೈನಲ್​ಗೆ ಮುಂಚಿತವಾಗಿ ವಿನೇಶ್ 100 ಗ್ರಾಂ ಅಧಿಕ ತೂಕ ಹೊಂದಿದ್ದರಿಂದ ಅನರ್ಹಗೊಂಡಿದ್ದರು.

ಯುಯಿ ಸುಸಾಕಿಯನ್ನು ಸೋಲಿಸುವುದು ವಿನೇಶ್ ಗೆ ದೊಡ್ಡ ವಿಷಯ. ಅವಳು ಚಿನ್ನದ ಪದಕ ಪಡೆಯುವ ಹಾದಿಯಲ್ಲಿದ್ದರು. ಸುಸಾಕಿಯನ್ನು ಸೋಲಿಸುವುದು ದೊಡ್ಡ ವಿಷಯ. ಕುಸ್ತಿಯ ನಿಯಮಗಳು ನನಗೆ ಚೆನ್ನಾಗಿ ಅರ್ಥವಾಗುವುದಿಲ್ಲ. ಆದರೆ, ಅವರು ಆತ್ಮವಿಶ್ವಾಸದಿಂದ ಚಿನ್ನದ ಕಡೆಗೆ ಸಾಗುತ್ತಿದ್ದರು. ಬಳಿಕ ಅನರ್ಹತೆ) ಸಂಭವಿಸಿತು. ನನಗೆ ನಿಜವಾಗಿಯೂ ದುಃಖವಾಯಿತು, “ಎಂದು ನೀರಜ್ ಹೇಳಿದ್ದಾರೆ.

ವಿನೇಶ್ ಏನು ಮಾಡಿದರೂ ಅದು ಅದ್ಭುತ ಸಾಧನೆ

ಗಾಯಗಳು ಮತ್ತು ವೈಯಕ್ತಿಕ ಹಿನ್ನಡೆಯೊಂದಿಗೆ 2016 ರ ಒಲಿಂಪಿಕ್ಸ್ ನಂತರ ವಿನೇಶ್ ಅವರ ಕುಸ್ತಿ ಪ್ರಯಾಣ ಕಠಿಣವಾಗಿತ್ತು ಎಂಬುದನ್ನು ನೀರಜ್ ನೆನಪಿಸಿಕೊಂಡರು. ಪ್ಯಾರಿಸ್​​ನಲ್ಲಿ ಎಲ್ಲವೂ ಉತ್ತಮವಾಗಿ ನಡೆಯುತ್ತಿದೆ ಎಂದು ತಿಳಿದು ಖುಷಿಯಾಗಿತ್ತು. ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ವಿನೇಶ್ ಮಾಡಿದ ಸಾಧನೆ ಅದ್ಭುತ ಎಂದು ಜಾವೆಲಿನ್ ತಾರೆ ಅಭಿಪ್ರಾಯಪಟ್ಟರು.

2016 ರಲ್ಲಿ (ರಿಯೋ ಒಲಿಂಪಿಕ್ಸ್), ಅಂತಹ ಅಪಾಯಕಾರಿ ಗಾಯದಿಂದ ಹೊರಬರಲು ಮತ್ತು ನಂತರ 2020ರಲ್ಲಿ ಮತ್ತಷ್ಟು ಗಾಯಗಳನ್ನು ಮಾಡಿಕೊಂಡರು. ಅದೇ ರೀತಿ ಅವರು ಅನೇಕ ವೈಯಕ್ತಿಕ ಹಿನ್ನಡೆಗಳನ್ನು ಅನುಭವಿಸಿದ್ದಾರೆ” ಎಂದು ನೀರಜ್ ಚೋಪ್ರಾ ಹೇಳಿದ್ದಾರೆ.

ಅವಳು ಗಾಯಗಳಿಂದ ಸುಧಾರಿಸಿಕೊಳ್ಳಲು. ಅದರಿಂದ ಚೇತರಿಸಿಕೊಳ್ಳಲು ಮತ್ತು ಸ್ಥಾನಕ್ಕೆ ಬರಲು ಮತ್ತು ಮಾನಸಿಕವಾಗಿ ಬಲಶಾಲಿಯಾಗಲು ಸಾಕಷ್ಟು ಯತ್ನಿಸಿದ್ದರು. ಎಲ್ಲವೂ ಚೆನ್ನಾಗಿ ನಡೆಯುತ್ತಿತ್ತು. ಬಹುಶಃ ದೇವರು ಅವರಿಗೆ ಬೇರೆ ಏನನ್ನಾದರೂ ಬಯಸಿರಬಹುದು. ಆದರೆ ಅವಳು ಏನು ಮಾಡಿದರೂ ಅದು ಅದ್ಭುತವಾಗಿದೆ ಎಂದು ನಮಗೆ ತಿಳಿದಿದೆ ಎಂದು ನೀರಜ್ ಹೇಳಿದ್ದಾರೆ.

ಗಾಯದ ಸಮಸ್ಯೆಯಿಂದ ಬಳಲುತ್ತಲೇ ಒಲಿಂಪಿಕ್ಸ್​ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ!

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ(Paris Olympics 2024) ಬೆಳ್ಳಿ ಪದಕ ಗೆದ್ದ ನಂತರ ನೀರಜ್ ಚೋಪ್ರಾ (Neeraj Chopra) ತಮ್ಮ ಗಾಯದ ಸಮಸ್ಯೆಗಳ ಕುರಿತು ಮಾತನಾಡಿದ್ದಾರೆ. ತಾನು ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗಬಹುದು ಎಂದು 26 ವರ್ಷದ ಆಟಗಾರ ಬಹಿರಂಗಪಡಿಸಿದ್ದಾರೆ. ಗಾಯದ ಸಮಸ್ಯೆ ಉಲ್ಬಣಗೊಳ್ಳಬಹುದು ಎಂಬ ನಿರಂತರ ಭಯದಿಂದ ಸ್ಪರ್ಧಿಸಿದೆ ಎಂಬುದಾಗಿ ಅವರು ಹೇಳಿದ್ದಾರೆ. ಬೆಳ್ಳಿ ಪದಕ ವಿಜೇತ ಜಾವೆಲಿನ್ ಎಸೆತಗಾರ ಪ್ಯಾರಿಸ್ ಕ್ರೀಡಾಕೂಟಕ್ಕೆ ಮುಂಚಿತವಾಗಿ ತೊಡೆಯ ಸ್ನಾಯುವಿಗೆ ಸಂಬಂಧಿಸಿದ ಗಾಯದಿಂದ ಬಳಲುತ್ತಿದ್ದರು. ಆದಾಗ್ಯೂ, ಅವರು ತಮ್ಮ ಋತುವಿನ ಅತ್ಯುತ್ತಮ ಎಸೆತವಾದ 89.45 ಮೀಟರ್ ಎಸೆದು ಬೆಳ್ಳಿ ಪದಕ ಗಳಿಸಿದ್ದಾರೆ.

ಸ್ಪರ್ಧೆಗೆ ಹೋದಾಗ ನನ್ನ ಮನಸ್ಸಿನಲ್ಲಿ ಬಹಳಷ್ಟು ವಿಷಯಗಳಿರುತ್ತವೆ. ನಾನು ಭರ್ಜಿ ಎಸೆಯುವಾಗ ನನ್ನ ಶೇಕಡಾ 60-70 ರಷ್ಟು ಗಮನ ಗಾಯದ ಮೇಲೆ ಇರುತ್ತಿತ್ತು. ನಾನು ಮತ್ತೆ ಗಾಯಗೊಳ್ಳಲು ಬಯಸುವುದಿಲ್ಲ. ನಾನು ಎಸೆತಕ್ಕೆ ಹೋದಾಗಲೆಲ್ಲಾ, ನನ್ನ ವೇಗ ಕಡಿಮೆ ಇತ್ತು. ಹೀಗಾಗಿ ಸ್ಪರ್ಧೆ ಕಠಿಣವಾಯಿತು ಎಂದು ನೀರಜ್ ಪಿಟಿಐಗೆ ತಿಳಿಸಿದರು. ನೀರಜ್​ ಉತ್ತಮ ಸ್ನೇಹಿತ ಅರ್ಷದ್ ನದೀಮ್ ಅವರನ್ನು ಒಲಿಂಪಿಕ್ ಚಾಂಪಿಯನ್ ಸ್ಥಾನದಿಂದ ಕೆಳಗಿಳಿಸಿ ಪಾಕಿಸ್ತಾನಕ್ಕೆ ಮೊದಲ ಚಿನ್ನ ಗೆದ್ದಾರೆ.

ಇದನ್ನೂ ಓದಿ: PR Sreejesh : ಕಂಚು ಗೆದ್ದ ತಕ್ಷಣ ಗೋಲ್​ ಕೀಪಿಂಗ್​ ಗ್ಲವ್ಸ್​ಗೆ ದೀರ್ಘದಂಡ ನಮಸ್ಕಾರ ಹಾಕಿದ ಶ್ರೀಜೇಶ್​​​

ಕಳೆದ ವರ್ಷ ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಪಾತ್ರರಾಗಿದ್ದರು. ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುವ ಅಪಾಯಕ್ಕೆ ಒಳಗಾಗಿದ್ದರು. ಆದರೆ, ಅವರು ಹೋಗಿರಲಿಲ್ಲ. ಇದು ಪ್ಯಾರಿಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅಡ್ಡಿಯಾಗುತ್ತಿತ್ತು.

Exit mobile version