Shubman Gill: ಬ್ಯಾಟಿಂಗ್​ ಸೆನ್ಷೇಷನಲ್ ಗಿಲ್​ಗೆ ಹೊಸ ನಿಕ್​ನೇಮ್​! - Vistara News

ಕ್ರಿಕೆಟ್

Shubman Gill: ಬ್ಯಾಟಿಂಗ್​ ಸೆನ್ಷೇಷನಲ್ ಗಿಲ್​ಗೆ ಹೊಸ ನಿಕ್​ನೇಮ್​!

ಟೀಮ್​ ಇಂಡಿಯಾದ ಯುವ ಆಟಗಾರ ಶುಭಮನ್​ ಗಿಲ್​ ಅವರಿಗೆ ಮಾಜಿ ಆಟಗಾರ ಸುನೀಲ್​ ಗವಾಸ್ಕರ್​ ನೂತನ ನಿಕ್​ಮೇಕ್​ ಇಟ್ಟಿದ್ದಾರೆ.

VISTARANEWS.COM


on

Shubman Gill
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯ್​ಪುರ: ಟೀಮ್​ ಇಂಡಿಯಾ ಯುವ ಆಟಗಾರ ಶುಭಮನ್​ ಗಿಲ್(Shubman Gill) ತಮ್ಮ ಸ್ಫೋಟಕ ಬ್ಯಾಟಿಂಗ್​ ಮೂಲಕ ಮಿಂಚುತ್ತಿದ್ದು ತಂಡದ ಸೆನ್ಷೇಷನಲ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಕಿವೀಸ್​ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಚೊಚ್ಚಲ ದ್ವಿಶತಕ ಬಾರಿಸಿದ ಬಳಿಕವಂತೂ ಗಿಲ್​ ಖ್ಯಾತಿ ಮತ್ತಷ್ಟು ಹೆಚ್ಚಾಗಿದೆ. ಇದೀಗ ಟೀಮ್​ ಇಂಡಿಯಾದ ಮಾಜಿ ಆಟಗಾರ ಸುನೀಲ್​ ಗವಾಸ್ಕರ್​ ಅವರು ಗಿಲ್​ಗೆ ನಿಕ್​ನೇಮ್​ ಇಟ್ಟಿದ್ದಾರೆ.

​ರಾಯ್​ಪುರದಲ್ಲಿ ಶನಿವಾರ ನಡೆದ ದ್ವಿತೀಯ ಪಂದ್ಯದ ವೇಳೆ ಸುನೀಲ್​ ಗವಾಸ್ಕರ್​ ಅವರು ಗಿಲ್​ ಜತೆ ಪಂದ್ಯದ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ಗವಾಸ್ಕರ್ “ನಾನು ನಿಮಗೆ ‘ಸ್ಮೂತ್‌ಮ್ಯಾನ್ ಗಿಲ್’ ಎಂಬ ಹೊಸ ಅಡ್ಡಹೆಸರನ್ನು ಇಟ್ಟಿದ್ದೇನೆ. ಇದು ನಿಮಗೆ ಇಷ್ಟವಾಗಬಹುದು ಎಂದು ಭಾವಿಸುತ್ತೇನೆ” ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶುಭಮನ್​ ಗಿಲ್ “ನನಗೇನೂ ಅಭ್ಯಂತರವಿಲ್ಲ ಸರ್” ಎಂದು ನಗುತ್ತಲೇ ಹೇಳಿದ್ದಾರೆ.

ಸದ್ಯ ಶುಭಮನ್​ ಗಿಲ್​ಗೆ ಸುನೀಲ್​ ಗವಾಸ್ಕರ್​ ಅವರು ಇಟ್ಟಿರುವ ಈ ನಿಕ್​ನೇಮ್​ ಗಿಲ್​ ಅವರ ಕ್ರಿಕೆಟ್​ ವೃತ್ತಿ ಜೀವನದುದ್ದಕ್ಕೂ ಕಾಣಿಸಲಿದೆಯಾ ಎಂದು ಕಾದು ನೋಡಬೇಕಿದೆ. ಗಿಲ್​ ತಮ್ಮ ಅದ್ಭುತ ಬ್ಯಾಟಿಂಗ್ ಫಾರ್ಮ್​​ ಇದೇ ರೀತಿ ಮುಂದುವರಿಸಿದರೆ ಏಕದಿನ ವಿಶ್ವಕಪ್​ನಲ್ಲಿ ಸ್ಥಾನ ಪಡೆಯುವುದು ಖಚಿತ ಎನ್ನಬಹುದು.

ಇದನ್ನೂ ಓದಿ | IND VS NZ: ಟೀಮ್​ ಇಂಡಿಯಾ ಆಟಗಾರರ ಫುಡ್​ ಮೆನು ಪರಿಚಯಿಸಿದ ಯಜುವೇಂದ್ರ ಚಹಲ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Champions Trophy 2025 : ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಈ ವಿಷಯವನ್ನು ಎತ್ತಲು ಯೋಜಿಸಿದೆ. ಅಲ್ಲದೆ ಭಾರತ ತಂಡ ಬರಲೇಬೇಕು ಎಂದು ಒತ್ತಾಯ ಮಾಡುವ ಸಾಧ್ಯತೆಗಳಿವೆ. ಇದು ಸಭೆಯಲ್ಲಿ ನಿರ್ಧಾರ ಮಾಡಲು ದೊಡ್ಡ ಸಮಸ್ಯೆಗಳನ್ನು ತಂದೊಡ್ಡಲಿದೆ.

VISTARANEWS.COM


on

Champions Trophy 2025:
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಬಳಿಕ ಇದೀಗ ಎಲ್ಲರ ಗಮನ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರತ್ತ (Champions Trophy 2025 ) ನೆಟ್ಟಿದೆ. ಮುಂದಿನ ವರ್ಷ ಫೆಬ್ರವರಿ-ಮಾರ್ಚ್​​ನಲ್ಲಿ ಪಾಕಿಸ್ತಾನದಲ್ಲಿ ಪಂದ್ಯಾವಳಿ ಆಯೋಜನೆಗೊಂಡಿದೆ. ಆದರೆ, ಟೂರ್ನಿಯಲ್ಲಿ ಭಾರತೀಯ ತಂಡದ ಭಾಗವಹಿಸುವಿಕೆಯೇ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಇತ್ತೀಚಿನ ವರದಿಗಳ ಪ್ರಕಾರ, ಐಸಿಸಿ ಚಾಂಪಿಯನ್ಸ್ ಟ್ರೋಫಿಯ 2025 ರ ಆವೃತ್ತಿಯಲ್ಲಿ ಭಾಗವಹಿಸಲು ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವ ಸಾಧ್ಯತೆಯಿಲ್ಲ. ಪಂದ್ಯಾವಳಿಯಲ್ಲಿ ಅವರ ಭಾಗವಹಿಸುವಿಕೆಯು ಭಾರತ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವನ್ನು ಅವಲಂಬಿಸಿರುತ್ತದೆ.

ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸದಿರಲು ಕಾರಣವೆಂದರೆ ದೇಶಗಳ ನಡುವಿನ ರಾಜಕೀಯ ಉದ್ವಿಗ್ನತೆ. ಉಭಯ ತಂಡಗಳು ದ್ವಿಪಕ್ಷೀಯ ಸರಣಿಗಳಲ್ಲಿ ಪರಸ್ಪರ ಆಡುವುದಿಲ್ಲ. ಐಸಿಸಿ ಈವೆಂಟ್ಗಳು ಮತ್ತು ಏಷ್ಯಾ ಕಪ್​ಗಳಲ್ಲಿ ಮಾತ್ರ ಪರಸ್ಪರ ಮುಖಾಮುಖಿಯಾಗುತ್ತವೆ. 2012-13ರಲ್ಲಿ ಕೊನೆಯ ಬಾರಿ ಸರಣಿ ಆಡಿತ್ತು.

ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಭಾರತ ಪ್ರಯಾಣಿಸದಿರುವ ವಿಷಯ ಸರ್ಕಾರದ ನಿರ್ಧಾರದ ಮೇಲೆ ಅವಲಂಬಿತವಾಗಿರುತ್ತದೆ/ ಅದರ ವಿವರಗಳನ್ನು ಐಸಿಸಿ ಸಭೆಯ ನಂತರ ಬಹಿರಂಗಪಡಿಸಲಾಗುವುದು ಎಂದು ಬಿಸಿಸಿಐ ಹೇಳಿದೆ.

ಇದನ್ನೂ ಓದಿ: ZIM vs IND : ಜಿಂಬಾಬ್ವೆ ವಿರುದ್ಧ 13 ರನ್​ಗಳಿಂದ ಸೋತ ವಿಶ್ವ ವಿಜೇತ ಭಾರತ ತಂಡ

ಪಂದ್ಯಾವಳಿಯ ವಿವರಗಳನ್ನು ಇನ್ನೂ ಚರ್ಚಿಸಲಾಗಿಲ್ಲವಾದರೂ, ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವ ಸಾಧ್ಯತೆಯಿಲ್ಲ. ಅಂತಿಮವಾಗಿ, ನಿರ್ಧಾರವು ಭಾರತ ಸರ್ಕಾರಕ್ಕೆ ಬಿಟ್ಟಿದ್ದು. ಆದಾಗ್ಯೂ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಈ ವಿಷಯವನ್ನು ಎತ್ತಲು ಯೋಜಿಸಿದೆ. ಅಲ್ಲದೆ ಭಾರತ ತಂಡ ಬರಲೇಬೇಕು ಎಂದು ಒತ್ತಾಯ ಮಾಡುವ ಸಾಧ್ಯತೆಗಳಿವೆ. ಇದು ಸಭೆಯಲ್ಲಿ ನಿರ್ಧಾರ ಮಾಡಲು ದೊಡ್ಡ ಸಮಸ್ಯೆಗಳನ್ನು ತಂದೊಡ್ಡಲಿದೆ.

ಈ ವಿಷಯದಲ್ಲಿ ಸರ್ಕಾರದ ನಿರ್ಧಾರವು ಅಂತಿಮವಾಗಿರುತ್ತದೆ. ಏಕೆಂದರೆ ನಾವು ಅದನ್ನು ಆಂತರಿಕವಾಗಿ ಇನ್ನೂ ದೃಢಪಡಿಸಿಲ್ಲ. ಇದು ಐಸಿಸಿ ಟೂರ್ನಿಯಾಗಿರುವುದರಿಂದ ಯಾವುದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನಮಗಿಲ್ಲ. ಆದಾಗ್ಯೂ, ಮುಂದಿನ ಐಸಿಸಿ ಸಭೆಯಲ್ಲಿ ಹೆಚ್ಚಿನ ವಿವರಗಳು ಹೊರಬರಬಹುದು ಎಂದು ಮೂಲಗಳು ತಿಳಿಸಿವೆ. ಭಾರತ ತನ್ನ ನಿರ್ಧಾರ ಬದಲಿಸದು ಎಂಬ ಕಾರಣಕ್ಕೆ ಪಾಕಿಸ್ತಾನ ಹಠ ಹಿಡಿಯಲಿದೆ.

2008ರ ಬಳಿಕ ಭಾರತ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡಿಲ್ಲ. ಅವರು 2023 ರಲ್ಲಿ ಏಷ್ಯಾ ಕಪ್ ಆಡಬೇಕಿತ್ತು ಆದರೆ ಅವರು ಪ್ರಯಾಣಿಸಲಿಲ್ಲ ಮತ್ತು ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಡಲಾಯಿತು. ಭಾರತ ಶ್ರೀಲಂಕಾದಲ್ಲಿ ಪಂದ್ಯಗಳನ್ನು ಆಡಿತು. ಆದರೆ ಅದರ ನಂತರ, ಭಾರತವು ಪ್ರಯಾಣಿಸಲು ನಿರಾಕರಿಸಿದರೂ ಪಾಕಿಸ್ತಾನವು ಸಕಾರಾತ್ಮಕ ಪ್ರತಿಕ್ರಿಯೆ ನೀಡಿತು.

2023ರ ಐಸಿಸಿ ವಿಶ್ವಕಪ್ ಟೂರ್ನಿಗಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣ ಬೆಳೆಸಿತ್ತು. ಅವರು ಹೈದರಾಬಾದ್, ಅಹಮದಾಬಾದ್, ಚೆನ್ನೈ, ಬೆಂಗಳೂರು ಮತ್ತು ಕೋಲ್ಕತ್ತಾದಲ್ಲಿ ಪಂದ್ಯಗಳನ್ನು ಆಡಿದರು ಮತ್ತು ಅವರು ಭಾರತದಲ್ಲಿ ಆಡಿದ ಎಲ್ಲಾ ಸ್ಥಳಗಳಾದ್ಯಂತ ಅಭಿಮಾನಿಗಳಿಂದ ಗರಿಷ್ಠ ಸ್ವಾಗತವನ್ನು ಪಡೆದಿದ್ದರು.

ವೇಳಾಪಟ್ಟಿ ಪ್ರಕಟಿಸಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ

ಇತ್ತೀಚೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ 2025 ರ ಚಾಂಪಿಯನ್ಸ್ ಟ್ರೋಫಿಯ ಕರಡು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತು. ಲಾಹೋರ್​ನಲ್ಲಿ 7 ಪಂದ್ಯಗಳು, ರಾವಲ್ಪಿಂಡಿಯಲ್ಲಿ 5 ಪಂದ್ಯಗಳು ಮತ್ತು ಕರಾಚಿಯಲ್ಲಿ 3 ಪಂದ್ಯಗಳು ನಡೆಯಲಿವೆ. ಭಾರತವು ತನ್ನ ಎಲ್ಲಾ ಪಂದ್ಯಗಳನ್ನು ಲಾಹೋರ್​ನಲ್ಲಿ ಆಡಬೇಕಾಗಿದೆ.

ಮಾರ್ಚ್ 1 ರಂದು ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ನಡೆಯಲಿದೆ ಎಂದು ವರದಿಗಳು ಉಲ್ಲೇಖಿಸಿವೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಗಾಗಿ ಬಹುತೇಕ ಎಲ್ಲಾ ಯೋಜನೆಗಳು ಪೂರ್ಣಗೊಂಡಿದ್ದು, ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬೇಕಾಗಿದೆ.

Continue Reading

ಪ್ರಮುಖ ಸುದ್ದಿ

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Asia Cup 2024: ಆತಿಥೇಯ ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ, ಮಲೇಷ್ಯಾ, ಥೈಲ್ಯಾಂಡ್, ನೇಪಾಳ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ‘ಎ’ ಗುಂಪಿನಲ್ಲಿ ಪಾಕಿಸ್ತಾನ, ನೇಪಾಳ ಮತ್ತು ಯುಎಇ ತಂಡಗಳೊಂದಿಗೆ ಸ್ಥಾನ ಪಡೆದಿದೆ.

VISTARANEWS.COM


on

Asia Cup 2024
Koo

ನವದೆಹಲಿ: 2024ರ ಆವೃತ್ತಿಯ ಮಹಿಳೆಯರ ಏಷ್ಯಾ ಕಪ್ ಟಿ20 ಕ್ರಿಕೆಟ್​ ಟೂರ್ನಿಗೆ (Asia Cup 2024) ಭಾರತ ತಂಡವನ್ನು ಶನಿವಾರ (ಜುಲೈ 6) ಪ್ರಕಟಿಸಿದೆ. ಪಂದ್ಯಾವಳಿ ಜುಲೈ 19 ರಿಂದ 28 ರವರೆಗೆ ಶ್ರೀಲಂಕಾದಲ್ಲಿ ನಡೆಯಲಿದೆ. ಮಹಿಳಾ ಏಷ್ಯಾಕಪ್​​ನ ಒಂಬತ್ತನೇ ಆವೃತ್ತಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ. ಭಾರತ ಹಾಲಿ ಚಾಂಪಿಯನ್ ಆಗಿದ್ದು ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಎದುರು ನೋಡುತ್ತಿದೆ. ಕಳೆದ ಆವೃತ್ತಿಯ ಫೈನಲ್​​ನಲ್ಲಿ ಭಾರತ ಬಾಂಗ್ಲಾದೇಶವನ್ನು 8 ವಿಕೆಟ್​ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಭಾರತ ತಂಡ ಮುಂಬರುವ ಆವೃತ್ತಿಯಲ್ಲೂ ಗೆಲುವಿನ ನೆಚ್ಚಿನ ತಂಡವಾಗಿದೆ.

ಆತಿಥೇಯ ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ, ಮಲೇಷ್ಯಾ, ಥೈಲ್ಯಾಂಡ್, ನೇಪಾಳ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ‘ಎ’ ಗುಂಪಿನಲ್ಲಿ ಪಾಕಿಸ್ತಾನ, ನೇಪಾಳ ಮತ್ತು ಯುಎಇ ತಂಡಗಳೊಂದಿಗೆ ಸ್ಥಾನ ಪಡೆದಿದೆ.

2024ರ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಭಾರತ ತಂಡವನ್ನು ಹರ್ಮನ್​ಪ್ರೀತ್​ ಕೌರ್ ಮುನ್ನಡೆಸಲಿದ್ದಾರೆ. ಈ ವಾರದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ 20 ಪಂದ್ಯದ ಸಮಯದಲ್ಲಿ ಗಾಯಗೊಂಡ ರಿಚಾ ಘೋಷ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು ಆಡುತ್ತಿರುವ ತಂಡದಿಂದ ಇಬ್ಬರು ಆಟಗಾರ್ತಿಯರನ್ನು ಕೈಬಿಡಲಾಗಿದೆ. ಅಮನ್ಜೋತ್ ಕೌರ್ ಮತ್ತು ಶಬ್ನಮ್​ ಮೊಹಮ್ಮದ್ ಶಕೀಲ್ ಅವಕಾಶ ಪಡೆದಿದ್ದಾರೆ. ಹರ್ಮನ್ ಪ್ರೀತ್ ಸಿಂಗ್ ತಂಡವನ್ನು ಮುನ್ನಡೆಸಲಿದ್ದು, ಆರಂಭಿಕ ಬ್ಯಾಟರ್​ ಸ್ಮೃತಿ ಮಂದಾನ ಉಪನಾಯಕಿಯಾಗಿದ್ದಾರೆ.

ಇದನ್ನೂ ಓದಿ: ZIM vs IND : ಜಿಂಬಾಬ್ವೆ ವಿರುದ್ಧ 13 ರನ್​ಗಳಿಂದ ಸೋತ ವಿಶ್ವ ವಿಜೇತ ಭಾರತ ತಂಡ

ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್ ಮತ್ತು ಮೇಘನಾ ಸಿಂಗ್ ಎಂಬ ನಾಲ್ವರು ಮೀಸಲು ಆಟಗಾರರನ್ನು ಆಯ್ಕೆದಾರರು ಹೆಸರಿಸಿದ್ದಾರೆ. ಭಾರತ ತಂಡ ಜುಲೈ 19ರಂದು ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದ್ದು, ಜುಲೈ 21 ಮತ್ತು 23ರಂದು ಕ್ರಮವಾಗಿ ಯುಎಇ ಮತ್ತು ನೇಪಾಳ ವಿರುದ್ಧ ಸೆಣಸಲಿದೆ.

ಭಾರತ ತಂಡ:

ಹರ್ಮನ್​​ಪ್ರೀತ್​ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಂಕಾ ಪಾಟೀಲ್, ಸಜನಾ ಸಜೀವನ್.

ಮೀಸಲು ಆಟಗಾರರು: ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್, ಮೇಘನಾ ಸಿಂಗ್

ಮಹಿಳಾ ಏಷ್ಯಾಕಪ್ ಟಿ20 ವಿಶ್ವಕಪ್ 2024ರ ವೇಳಾಪಟ್ಟಿ

ಜುಲೈ19ರಂದು , ಭಾರತ-ಪಾಕಿಸ್ತಾನ, ರಣಗಿರಿ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣ, ಡಂಬುಲ್ಲಾ
ಜುಲೈ 21ರಂದು, ಭಾರತ-ಯುಎಇ, ರಣಗಿರಿ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣ, ಡಂಬುಲ್ಲಾ
ಜುಲೈ 23 ರಂದು , ಭಾರತ-ನೇಪಾಳ, ರಣಗಿರಿ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣ, ಡಂಬುಲ್ಲಾ

Continue Reading

ಪ್ರಮುಖ ಸುದ್ದಿ

ZIM vs IND : ಜಿಂಬಾಬ್ವೆ ವಿರುದ್ಧ 13 ರನ್​ಗಳಿಂದ ಸೋತ ವಿಶ್ವ ವಿಜೇತ ಭಾರತ ತಂಡ

ZIM vs IND :. ಮೊದಲು ಬ್ಯಾಟ್ ಮಾಡಿದ ಆತಿಥೇಯ ಜಿಂಬಾಬ್ವೆ ಬಳಗ 20 ಓವರ್​ಗಳು ಮುಕ್ತಾಯಗೊಳ್ಳುವಾಗ 9 ವಿಕೆಟ್ ನಷ್ಟಕ್ಕೆ 115 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ 19.5 ಓವರ್​ಗಳಲ್ಲಿ 102 ರನ್​ಗಳಿಗೆ ಆಲ್​ಔಟ್ ಆಯಿತು.

VISTARANEWS.COM


on

ZIM vs IND
Koo

ಹರಾರೆ: ಭಾರತ ತಂಡ ಟಿ20 ವಿಶ್ವ ಕಪ್​ ಗೆದ್ದಿರುವ ಸಂಭ್ರಮದಲ್ಲಿರುವ ನಡುವೆಯೇ ಕ್ರಿಕೆಟ್​ ಅಭಿಮಾನಿಗಳಿಗೆ ಆಘಾತ (ZIM vs IND) ಎದುರಾಗಿದೆ. ಶುಭ್​ಮನ್​ ಗಿಲ್​ ನಾಯಕತ್ವದಲ್ಲಿ ಜಿಂಬಾಬ್ವೆಗೆ ಟಿ20 ಸರಣಿ ಆಡಲು ತೆರಳಿದ್ದ ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ 13 ರನ್​ಗಳ ಹೀನಾಯ ಸೋಲಿಗೆ ಒಳಗಾಗಿದೆ. ಈ ಮೂಲಕ ಬೇಸರಕ್ಕೆ ಒಳಗಾಗಿದೆ. ಬ್ಯಾಟಿಂಗ್​ ವೈಫಲ್ಯವೇ ಭಾರತ ತಂಡದ ಸೋಲಿಗೆ ಕಾರಣವಾದರೆ, ಶುಭ್​ಮನ್​ ಗಿಲ್​ ತಮ್ಮ ಮೊದಲ ನಾಯಕತ್ವದಲ್ಲಿಯೇ ಕಳಪೆ ದಾಖಲೆ ಮಾಡಿದರು. ಟಿ20 ವಿಶ್ವ ಕಪ್​ಗೆ ಅರ್ಹತೆ ಪಡೆಯಲು ವಿಫಲಗೊಂಡಿರುವ ತಂಡದ ವಿರುದ್ಧವೇ ಸೋಲುವ ಮೂಲಕ ನಿರಾಸೆಗೆ ಒಳಗಾಗಿದ್ದಾರೆ.

ಇಲ್ಲಿನ ಹರಾರೆ ಸ್ಪೋರ್ಟ್ಸ್​ ಕ್ಲಬ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಆತಿಥೇಯ ಜಿಂಬಾಬ್ವೆ ಬಳಗ 20 ಓವರ್​ಗಳು ಮುಕ್ತಾಯಗೊಳ್ಳುವಾಗ 9 ವಿಕೆಟ್ ನಷ್ಟಕ್ಕೆ 115 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ 19.5 ಓವರ್​ಗಳಲ್ಲಿ 102 ರನ್​ಗಳಿಗೆ ಆಲ್​ಔಟ್ ಆಯಿತು.

ಸಣ್ಣ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿತು. ಅಂತಾರಾಷ್ಟ್ರೀಯ ಅನುಭವದ ಕೊರತೆ ಹೊಂದಿರುವ ಭಾರತದ ಬ್ಯಾಟ್​ಗಳು ಸತತವಾಗಿ ವಿಕೆಟ್ ಒಪ್ಪಿಸಿದರು. ಪದಾರ್ಪಣೆ ಅವಕಾಶ ಪಡೆದ ಆರಂಭಿಕ ಬ್ಯಾಟರ್​ ಅಭಿಷೇಕ್​ ಶರ್ಮಾ ಶೂನ್ಯಕ್ಕೆ ಔಟಾದರೆ ರುತುರಾಜ್ ಗಾಯಕ್ವಾಡ್​ 7 ರನ್​ಗೆ ಸೀಮಿತಗೊಂಡರು. ಮತ್ತೊಬ್ಬ ಪದಾರ್ಪಣೆ ಆಟಗಾರ ರಿಯಾನ್ ಪರಾಗ್​ 2 ರನ್​ಗೆ ವಿಕೆಟ್​ ಒಪ್ಪಿಸಿದರು. ರಿಂಕು ಸಿಂಗ್​ ಶೂನ್ಯಕ್ಕೆ ಪೆವಿಲಿಯನ್​ಗೆ ಮರಳುವ ಮೂಲಕ ಭಾರತದ ಬ್ಯಾಟಿಂಗ್ ಬಲಕ್ಕೆ ಪೆಟ್ಟು ಬಿತ್ತು. 47 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡು ಸ್ಕೂಲ್​ ಮಕ್ಕಳ ತಂಡದಂತೆ ಆಡಿತು.

ಇದನ್ನೂ ಓದಿ: Anant Ambani-Radhika Merchant wedding : ಅನಂತ್- ರಾಧಿಕಾ ಸಂಗೀತ್ ಕಾರ್ಯಕ್ರಮದಲ್ಲಿ ವಿಶ್ವಕಪ್ ವಿಜೇತ ತಂಡದ ಸದಸ್ಯರು ಭಾಗಿ

ನಾಯಕ ಗಿಲ್​ 31 ರನ್​ ಬಾರಿಸಿದರೆ ಕೆಳ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್​ 27 ಹಾಗೂ ಆವೇಶ್​ ಖಾನ್​ 17 ರನ್ ಬಾರಿಸಿದರು. ಅದಕ್ಕಿಂತ ಮೊದಲು ಪದಾರ್ಪಣೆ ಮಾಡಿದ್ದ ಮತ್ತೊಬ್ಬ ಆಟಗಾರ ಧ್ರುವ್​ ಜುರೆಲ್​​ 6 ರನ್​ಗೆ ಔಟಾದರು. ಕೊನೆಯಲ್ಲಿ ರವಿ ಬಿಷ್ಣೋಯ್​ 9 ರನ್ ಬಾರಿಸಿದ್ದು ಬಿಟ್ಟರೆ ಭಾರತದ ಆಟಗಾರರು ಎಲ್ಲಿಯೂ ಪ್ರತಿರೋಧ ತೋರಲಿಲ್ಲ. ಜಿಂಬಾಬ್ವೆ ಪರ ಸಿಕಂದರ್​ ರಾಜಾ ಹಾಗೂ ತೆಂಡೈ ಚಟಾರ ತಲಾ 3 ವಿಕೆಟ್​ ಉರುಳಿಸಿ ಮಿಂಚಿದರು.

ಭಾರತದ ಉತ್ತಮ ಬೌಲಿಂಗ್​

ಮೊದಲು ಬ್ಯಾಟ್​ ಮಾಡಿದ ಜಿಂಬಾಬ್ವೆ ತಂಡಕ್ಕೆ ಭಾರತದ ಬೌಲರ್​ಗಳು ಕಾಡಿದರು. ರವಿ ಬಿಷ್ಣೋಯ್​ 13 ರನ್ ವೆಚ್ಚದಲ್ಲಿ 4 ವಿಕೆಟ್​ ಈ ಮಾದರಿಯಲ್ಲಿ ಜೀವನ ಶ್ರೇಷ್ಠ ಪ್ರದರ್ಶನ ನೀಡಿದರು. ವಾಷಿಂಗ್ಟನ್ ಸುಂದರ್​ 2 ವಿಕೆಟ್​ ಬುಟ್ಟಿಗೆ ಹಾಕಿಕೊಂಡರು. ವೆಸ್ಲಿ ಮಧ್ವೆರೆ 21, ಬ್ರಿಯಾನ್​ ಬೆನೆಟ್​ 21, ಸಿಕಂದರ್ ರಾಜಾ 17, ಡಿಯೋನ್​ ಮೈರ್ಸ್​ 23, ಕ್ಲಿವ್ ಮಂಡಂಡೆ 29 ರನ್​ ಬಾರಿಸಿದರು.

Continue Reading

ಪ್ರಮುಖ ಸುದ್ದಿ

Anant Ambani-Radhika Merchant wedding : ಅನಂತ್- ರಾಧಿಕಾ ಸಂಗೀತ್ ಕಾರ್ಯಕ್ರಮದಲ್ಲಿ ವಿಶ್ವಕಪ್ ವಿಜೇತ ತಂಡದ ಸದಸ್ಯರು ಭಾಗಿ

Anant Ambani-Radhika Merchant wedding : ಸಂಗೀತ್ ಕಾರ್ಯಕ್ರಮದಲ್ಲಿ ಅಂಬಾನಿ- ಮರ್ಚೆಂಟ್ ಕುಟುಂಬದ ಸದಸ್ಯರು, ಸ್ನೇಹಿತರು ಹಾಗೂ ಅತಿಥಿಗಳು ಭಾರಿ ಸಂಖ್ಯೆಯಲ್ಲಿ ಭಾಗೀ ಆಗಿದ್ದರು. ಈ ಸಂದರ್ಭದಲ್ಲಿ ನೀತಾ ಅಂಬಾನಿ ಅವರು ಬಹಳ ಭಾವುಕರಾಗಿದ್ದರು. ವಿಶ್ವಕಪ್ ವಿಜೇತ ತಂಡದ ಸದಸ್ಯರನ್ನು ವೇದಿಕೆ ಮೇಲೆ ಬರಮಾಡಿಕೊಳ್ಳಲಾಯಿತು. ಈ ವೇಳೆ ಸಮಾರಂಭದಲ್ಲಿ ಭಾಗಿಯಾಗಿದ್ದವರು ಚಾಂಪಿಯನ್ನರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

VISTARANEWS.COM


on

Anant Ambani-Radhika Merchant wedding
Koo

ಮುಂಬೈ : ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ (Anant Ambani-Radhika Merchant wedding) ವಿವಾಹ ಸಮಾರಂಭ ಜುಲೈ 12ರಂದು ನಡೆಯಲಿದೆ. ಇದಕ್ಕೆ ಮುಂಚಿತವಾಗಿ ಅಂಬಾನಿ ಕುಟುಂಬವು ಸಂಗೀತ್ ಕಾರ್ಯಕ್ರಮ ಆಯೋಜಿಸಿತ್ತು.. ಇದರಲ್ಲಿ ಟಿ-ಟ್ವೆಂಟಿ ವರ್ಲ್ಡ್ ಕಪ್ ಗೆದ್ದ ಭಾರತ ತಂಡದ ಸದಸ್ಯರು ಕೆಲವು ಭಾಗಿ ಆಗಿದ್ದರು. ತಂಡದ ನಾಯಕ ರೋಹಿತ್ ಶರ್ಮಾ, ಸೂರ್ಯ ಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಪಾಲ್ಗೊಂಡಿದ್ದರು. ಇವರು ಮುಕೇಶ್ ಅಂಬಾನಿ ಒಡೆತನದ ಮುಂಬೈ ಇಂಡಿಯನ್ಸ್ ಐಪಿಎಲ್ ತಂಡದ ಸದಸ್ಯರು ಕೂಡ ಹೌದು.

ಸಂಗೀತ್ ಕಾರ್ಯಕ್ರಮದಲ್ಲಿ ಅಂಬಾನಿ- ಮರ್ಚೆಂಟ್ ಕುಟುಂಬದ ಸದಸ್ಯರು, ಸ್ನೇಹಿತರು ಹಾಗೂ ಅತಿಥಿಗಳು ಭಾರಿ ಸಂಖ್ಯೆಯಲ್ಲಿ ಭಾಗೀ ಆಗಿದ್ದರು. ಈ ಸಂದರ್ಭದಲ್ಲಿ ನೀತಾ ಅಂಬಾನಿ ಅವರು ಬಹಳ ಭಾವುಕರಾಗಿದ್ದರು. ವಿಶ್ವಕಪ್ ವಿಜೇತ ತಂಡದ ಸದಸ್ಯರನ್ನು ವೇದಿಕೆ ಮೇಲೆ ಬರಮಾಡಿಕೊಳ್ಳಲಾಯಿತು. ಈ ವೇಳೆ ಸಮಾರಂಭದಲ್ಲಿ ಭಾಗಿಯಾಗಿದ್ದವರು ಚಾಂಪಿಯನ್ನರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಚಪ್ಪಾಳೆ, ಶಿಳ್ಳೆ ಹೊಡೆದರು, ಉತ್ತೇಜನ ನೀಡುವಂಥ ಘೋಷವಾಕ್ಯಗಳನ್ನು ಹೇಳಿದರು. ಅಂದ ಹಾಗೆ ಇದೊಂದು ವಿಶೇಷ ಸಂದರ್ಭ. ಅದಕ್ಕೆ ಕಾರಣ ಕೂಡ ಆರಂಭದಲ್ಲಿಯೇ ಹೇಳಿದಂತೆ, ವಿಶ್ವ ಕಪ್ ಗೆದ್ದ ತಂಡದ ಸದಸ್ಯರಲ್ಲಿ ಮೂವರು ಮುಂಬೈ ಇಂಡಿಯನ್ ತಂಡದವರಾಗಿದ್ದು.

ದಕ್ಷಿಣ ಆಫ್ರಿಕಾದ ವಿರುದ್ಧ ರೋಚಕವಾದ ವಿಜಯ ಸಾಧಿಸಿದ ಭಾರತ ತಂಡದ ಪ್ರದರ್ಶನವನ್ನು ಕೊನೆ ಕ್ಷಣದ ತನಕ ಭಾರತೀಯರು ಉಸಿರು ಬಿಗಿ ಹಿಡಿದು ವೀಕ್ಷಿಸಿದರು. ಇನ್ನು ಗೆಲುವು ಅಸಾಧ್ಯ ಎಂದುಕೊಂಡ ಸಂದರ್ಭದಲ್ಲಿ ಗೆದ್ದು ಬೀಗಿತು. ಇದರೊಂದಿಗೆ ಹಲವು ವರ್ಷಗಳ ನಿರೀಕ್ಷೆಯು ನಿಜವಾಯಿತು ಎಂದು ನೀತಾ ಅಂಬಾನಿ ಅವರು ವೇದಿಕೆ ಮೇಲೆ ವಿವರಿಸಿ, ಸ್ವತಃ ಭಾವುಕರಾದರು.

ಇದನ್ನೂ ಓದಿ: Team India : ಎರಡನೇ ಟಿ20 ವಿಶ್ವ ಕಪ್​ ಗೆದ್ದ ಬಳಿಕವೂ ಭಾರತ ತಂಡದ ಜೆರ್ಸಿಯಲ್ಲಿ ಒಂದೇ ಸ್ಟಾರ್​ ಯಾಕೆ? ಇಲ್ಲಿದೆ ವಿವರಣೆ

ಹಾರ್ದಿಕ್ ಪಾಂಡ್ಯ ಪ್ರದರ್ಶನದ ಬಗ್ಗೆ ಜನರ ಅಭಿಪ್ರಾಯಗಳನ್ನು ಹೇಳಿದ ನೀತಾ ಅಂಬಾನಿ, ಕಷ್ಟದ ಕಾಲ ಕೊನೆ ಆಗುವುದಿಲ್ಲ, ಆದರೆ ಗಟ್ಟಿಯಾಗಿರುವ ಜನರು ಸಾಧಿಸುತ್ತಾರೆ ಎಂದು ತಿಳಿಸಿದರು. ಇನ್ನು ಮುಕೇಶ್ ಅಂಬಾನಿ ಅವರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿ, ಭಾರತ ಹೆಮ್ಮೆ ಪಡುವುದಕ್ಕೆ ಕಾರಣರಾದ ಆಟಗಾರರಿಗೆ ಅಭಿನಂದಿಸಿದರು. ಈ ಸಂದರ್ಭವು ಹೇಗೆ 2011ರ ಏಕದಿನ ವಿಶ್ವಕಪ್ ಪಂದ್ಯಾವಳಿ ಗೆಲುವನ್ನು ನೆನಪಿಸಿತು ಎಂಬುದನ್ನು ಹೇಳಿದರು.

ಸಂಗೀತ್ ಕಾರ್ಯಕ್ರಮದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಹಲವು ಆಟಗಾರರು ಭಾಯಾಗಿದ್ದರು. ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕೃನಾಲ್ ಪಾಂಡ್ಯ, ಕೆ.ಎಲ್. ರಾಹುಲ್, ಮಹೇಂದ್ರ ಸಿಂಗ್ ಧೋನಿ ಇದ್ದರು. ಜಸ್ಪ್ರೀತ್ ಬೂಮ್ರಾ ಪ್ರವಾಸದಲ್ಲಿ ಇರುವುದರಿಂದ ಕಾರ್ಯಕ್ರಮದಲ್ಲಿ ಭಾಗೀ ಆಗಿರಲಿಲ್ಲ.

Continue Reading
Advertisement
Dina Bhavishya
ಭವಿಷ್ಯ15 mins ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Champions Trophy 2025:
ಪ್ರಮುಖ ಸುದ್ದಿ5 hours ago

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Rain News
ದೇಶ5 hours ago

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

KAS
ಕರ್ನಾಟಕ6 hours ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ7 hours ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ7 hours ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ7 hours ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ7 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest8 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ8 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ11 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ13 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ14 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು16 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ18 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ23 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ2 days ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌